ಗುಜರಾತ್​​ನಲ್ಲಿ ಗಣೇಶ ವಿಗ್ರಹ ಮೆರವಣಿಗೆ ವೇಳೆ ಕೋಮು ಸಂಘರ್ಷ; 13 ಮಂದಿಯನ್ನು ವಶಕ್ಕೆ ಪಡೆದ ಪೊಲೀಸ್​ - Vistara News

ದೇಶ

ಗುಜರಾತ್​​ನಲ್ಲಿ ಗಣೇಶ ವಿಗ್ರಹ ಮೆರವಣಿಗೆ ವೇಳೆ ಕೋಮು ಸಂಘರ್ಷ; 13 ಮಂದಿಯನ್ನು ವಶಕ್ಕೆ ಪಡೆದ ಪೊಲೀಸ್​

ಗುಜರಾತ್​​ ಭುಜ್​​ನಲ್ಲಿ ಇತ್ತೀಚೆಗಷ್ಟೇ ಕೋಮು ಸಂಘರ್ಷ ಉಂಟಾಗಿತ್ತು. ಅದರ ಬೆನ್ನಲ್ಲೇ ಸೋಮವಾರ ರಾತ್ರಿ ವಡೋದರಾದಲ್ಲಿ ಗಣೇಶ ವಿಗ್ರಹ ಮೆರವಣಿಗೆ ವೇಳೆ ಗಲಾಟೆಯಾಗಿದೆ.

VISTARANEWS.COM


on

Gujarat Ganesha Festival
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಡೋದರಾ: ಗುಜರಾತ್​​ನ ವಡೋದರಾದಲ್ಲಿ ಗಣಪತಿ ವಿಗ್ರಹವನ್ನು ಮೆರವಣಿಗೆ ಮೂಲಕ ಪೆಂಡಾಲ್​​​ಗೆ ಕರೆದೊಯ್ಯುತ್ತಿದ್ದಾಗ, ಎರಡು ಕೋಮುಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಎರಡೂ ಸಮುದಾಯಗಳವರು ಪರಸ್ಪರರ ಮೇಲೆ ಕಲ್ಲು ಎಸೆದುಕೊಂಡಿದ್ದಾರೆ (Stone pelting in Vadodara). ಸೋಮವಾರ ಮಧ್ಯರಾತ್ರಿ ವಡೋದರಾದ ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಈ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ನಂತರ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ನಂತರ ಗಣಪತಿ ವಿಗ್ರಹವನ್ನು ಪೆಂಡಾಲ್​ಗೆ ಕರೆದೊಯ್ದು ಕೂರಿಸಲಾಗಿದೆ.

ಕೋಮು ಸಂಘರ್ಷ ಕೇಸ್​ ಸಂಬಂಧ ಹಿಂದು-ಮುಸ್ಲಿಂ ಎರಡೂ ಸಮುದಾಯಗಳ ಹಲವರ ವಿರುದ್ಧ ವಡೋದರಾ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಅಷ್ಟೇ ಅಲ್ಲ, ಈಗಾಗಲೇ 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ, ದೊಡ್ಡಮಟ್ಟದ ಹಾನಿಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಗಣೇಶ ಹಬ್ಬದ ನಿಮಿತ್ತ ಸೋಮವಾರ ರಾತ್ರಿ ಹೊತ್ತಿಗೆ ಒಂದು ಗುಂಪು ಗಣೇಶನ ವಿಗ್ರಹವನ್ನು ಮೆರವಣಿಗೆಯಲ್ಲಿ ಪೆಂಡಾಲ್​ಗೆ ಕರೆದೊಯ್ಯುತ್ತಿತ್ತು. ಕೋಮು ಸೂಕ್ಷ್ಮತೆ ಇರುವ ಮಾಂಡವಿ ಪ್ರದೇಶದಲ್ಲಿರುವ ಪಾಣಿಗೇಟ್​ ದರ್ವಾಜಾ ಬಳಿ ರಾತ್ರಿ 11.15ರ ಹೊತ್ತಿಗೆ ಮೆರವಣಿಗೆ ಹೋದಾಗ ಮತ್ತೊಂದು ಸಮುದಾಯದವರು ತಕರಾರು ತೆಗೆದರು. ಆಗ ಎರಡೂ ಸಮುದಾಯದವರು ಮಾತಿನ ಚಕಮಕಿ ನಡೆಸಿಕೊಂಡರು. ಬಳಿಕ ಕಲ್ಲು ತೂರಾಟವೂ ನಡೆದು, ಸಂಘರ್ಷ ರೂಪ ಪಡೆಯಿತು. ಅಲ್ಲಿಯೇ ಗಸ್ತಿನಲ್ಲಿದ್ದ ಪೊಲೀಸರು ಗಲಾಟೆಯನ್ನು ನಿಯಂತ್ರಿಸಿದರು. ಹಾಗೇ, ಶಾಂತಿಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಲಾಗಿದೆ’ ಎಂದೂ ಪೊಲೀಸರು ವಿವರಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಮುನ್ನ ಭುಜ್‌ನಲ್ಲಿ ಕೋಮು ಗಲಭೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಪ್ಯಾರಿಸ್ ಒಲಿಂಪಿಕ್ಸ್ – ಭಾರತದ ಸಾಧನೆ ಕಳಪೆಯೇ?

ರಾಜಮಾರ್ಗ ಅಂಕಣ: ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಭಾರತದ ಸಾಧನೆಯು ಕಳಪೆ ಎಂದು ಹಲವರು ವಿಶ್ಲೇಷಣೆ ಮಾಡುತ್ತಾ ಇದ್ದಾರೆ. ಆದರೆ ಇದು ಕಳಪೆ ಒಲಿಂಪಿಕ್ಸ್ ಅನ್ನೋದಕ್ಕಿಂತ ಭಾರತಕ್ಕಿದು ದುರದೃಷ್ಟದ ಒಲಿಂಪಿಕ್ಸ್ ಎಂದೇ ಹೇಳಬಹುದು.

VISTARANEWS.COM


on

ರಾಜಮಾರ್ಗ ಅಂಕಣ Paris Olympics
Koo

ಭಾರತದಲ್ಲಿ ಯಾಕೆ ಶ್ರೇಷ್ಠ ಕ್ರೀಡಾ ಪ್ರತಿಭೆಗಳು ಅರಳುತ್ತಿಲ್ಲ?

Rajendra-Bhat-Raja-Marga-Main-logo

:: ರಾಜೇಂದ್ರ ಭಟ್‌ ಕೆ.

ರಾಜಮಾರ್ಗ ಅಂಕಣ: ಬಹಳ ನಿರೀಕ್ಷೆಯ ಪ್ಯಾರಿಸ್ ಒಲಿಂಪಿಕ್ಸ್ (Paris Olympics 2024) ಕೂಟಕ್ಕೆ ತೆರೆಬಿದ್ದಾಗಿದೆ. ಭಾರತಕ್ಕೆ (India) ದೊರಕಿದ್ದು 5 ಕಂಚಿನ ಪದಕಗಳು (Bronze medal) ಮತ್ತು ಒಂದು ಬೆಳ್ಳಿಯ ಪದಕ (Silver Meadl). ಒಲಿಂಪಿಕ್ ಗ್ರಾಮದಲ್ಲಿ ಒಮ್ಮೆ ಕೂಡ ಭಾರತದ ರಾಷ್ಟ್ರಗೀತೆ ಮೊಳಗಲೇ ಇಲ್ಲ ಎಂಬ ದುಃಖ ನಮಗೆ. ಭಾರತಕ್ಕೆ ದೊರಕಿದ್ದು 71ನೇ ಸ್ಥಾನ. ಈ ಒಲಿಂಪಿಕ್ ಕೂಟದಲ್ಲಿ ಭಾರತದ ಸಾಧನೆಯು ಕಳಪೆ ಎಂದು ಹಲವರು ವಿಶ್ಲೇಷಣೆ ಮಾಡುತ್ತಾ ಇದ್ದಾರೆ. ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಂದು ಚಿನ್ನದ ಪದಕ (Gold Medal) ಸೇರಿ ಏಳು ಪದಕಗಳು ದೊರೆತಿದ್ದವು. ಅದಕ್ಕೆ ಹೋಲಿಸಿದರೆ ಈ ಬಾರಿ ಭಾರತ ಸ್ವಲ್ಪ ಹಿಂದೆ ಬಿದ್ದಿದೆ.

ನಮಗೆ ಈ ಬಾರಿ 7-8 ಪದಕಗಳು ಕೂದಲೆಳೆಯ ಅಂತರದಲ್ಲಿ ಮಿಸ್ ಆದವು!

ಇದು ಕಳಪೆ ಒಲಿಂಪಿಕ್ಸ್ ಅನ್ನೋದಕ್ಕಿಂತ ಭಾರತಕ್ಕಿದು ದುರದೃಷ್ಟದ ಒಲಿಂಪಿಕ್ಸ್ ಎಂದೇ ಹೇಳಬಹುದು. ದೇಶದ 6 ಮಂದಿ ಕ್ರೀಡಾಪಟುಗಳು ಕೂಟದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದು ಪದಕವಂಚಿತರಾದರು. ಅರ್ಜುನ್ ಬಬುತಾ, ಅಂಕಿತ ಧೀರಜ್, ಮನು ಭಾಕರ್ (Manu Bhaker – ಮೂರನೇ ಪದಕ), ಅನಂತ್ ಜೀತ್, ಮಹೇಶ್ವರಿ, ಲಕ್ಷ್ಯ ಸೇನ್, ಮೀರಾಬಾಯಿ ಚಾನು ಇವರು ನಾಲ್ಕನೇ ಸ್ಥಾನಿಗಳಾಗಿ ಸ್ಪರ್ಧೆಯನ್ನು ಮುಗಿಸಿದವರು. ಹಾಗೆಯೇ ವಿನೇಶ್ ಫೊಗಟ್ (Vinesh Phogat), ನಿಶಾ ದಹಿಯ, ರಿತಿಕ ಹೂಡ ಮೊದಲಾದ ಕುಸ್ತಿ ಪಟುಗಳು ಒಲಿಂಪಿಕ್‌ನ ಕರಾಳ ನಿಯಮಕ್ಕೆ ಬಲಿಯಾಗಿ ಪದಕ ಮಿಸ್ ಮಾಡಿಕೊಂಡರು ಅನ್ನೋದು ನಮ್ಮ ನೋವು. ಇವರೆಲ್ಲರೂ ಪದಕ ಪಡೆದಿದ್ದರೆ ಭಾರತದ ಟೋಟಲ್ ಪದಕಗಳ ಸಂಖ್ಯೆ 15 ದಾಟುತ್ತಿತ್ತು ಅಲ್ಲವೇ? ಕೆಲವೊಮ್ಮೆ ಪ್ರತಿಭೆ, ಸಾಮರ್ಥ್ಯಗಳು ಇದ್ದರೆ ಸಾಕಾಗುವುದಿಲ್ಲ, ಅದೃಷ್ಟವೂ ಜೊತೆಗೆ ಇರಬೇಕು ಎಂಬ ಸಿದ್ಧಾಂತವನ್ನು ನಾವು ಈ ಬಾರಿ ಒಪ್ಪಿಕೊಳ್ಳಲೇಬೇಕಾಯಿತು.

130 ಕೋಟಿ ಜನಸಂಖ್ಯೆ ಇರುವ, ಅದರಲ್ಲಿ 60%ಕ್ಕಿಂತ ಅಧಿಕ ಯುವಜನತೆ (Below 40) ಇರುವ ದೇಶವಾದ ಭಾರತದಲ್ಲಿ ಶ್ರೇಷ್ಠ ಕ್ರೀಡಾಪ್ರತಿಭೆಗಳು ಯಾಕೆ ಅರಳುತ್ತಿಲ್ಲ ಅನ್ನುವುದು ಹಲವರು ಕೇಳುವ ಪ್ರಶ್ನೆ. ಭಾರತಕ್ಕೆ ಈಗ ಅದರದ್ದೇ ಆದ ಕ್ರೀಡಾನೀತಿ ಇದೆ. ಒಳ್ಳೆಯ ಬಜೆಟ್ ಇದೆ. ವಿದೇಶದ ಕೋಚುಗಳ ನೇಮಕ ಆಗಿದೆ. ಸ್ವತಃ ಕ್ರೀಡಾಪಟು ಆಗಿದ್ದ ಪಿಟಿ ಉಷಾ ಅಧ್ಯಕ್ಷೆಯಾಗಿರುವ ಬಲಿಷ್ಠವಾದ ಒಲಿಂಪಿಕ್ ಸಮಿತಿ ಇದೆ. ಆದರೂ ಅದಕ್ಕೆ ಅನುಗುಣವಾದ ಫಲಿತಾಂಶ ಈ ಬಾರಿ ದೊರೆತಿಲ್ಲ. ಯಾಕೆ?

ಎಲ್ಲರೂ ಉತ್ತರಿಸಲೇ ಬೇಕಾದ ಪ್ರಶ್ನೆಗಳು

1) ಅಮೇರಿಕಾ, ಚೀನಾದಂತಹ ದೇಶಗಳಲ್ಲಿ ಬಾಲ್ಯದಲ್ಲಿಯೇ ಮಗುವಿನ ಕ್ರೀಡಾಪ್ರತಿಭೆಗಳನ್ನು ಹುಡುಕಿ ತರಬೇತು ಆರಂಭ ಮಾಡುತ್ತಾರೆ. ಆದರೆ ನಮ್ಮಲ್ಲಿ ಬಾಲ್ಯದಲ್ಲಿ ಮಗು ಮೈದಾನಕ್ಕೆ ಇಳಿಯುವುದನ್ನು ಹೆತ್ತವರು ಇಷ್ಟ ಪಡುವುದಿಲ್ಲ. ಕ್ರೀಡೆಯ ಮೂಲಕ ಮಗುವಿನ ಭವಿಷ್ಯ ಕಟ್ಟುವ ಭರವಸೆ ಭಾರತದ ಹೆಚ್ಚಿನ ಪೋಷಕರಿಗೆ ಇಲ್ಲ.

2) ಒಳ್ಳೆಯ ಕ್ರೀಡಾಪಟು ರೂಪುಗೊಳ್ಳಬೇಕು ಅಂತಾದರೆ ಪರಿಣತ ಕೋಚ್, ತರಬೇತುದಾರ ಬೇಕು. ಭಾರತವು ಇನ್ನೂ ಉತ್ತಮ ಕೋಚುಗಳನ್ನು ಬೆಳೆಸಿಲ್ಲ. ಕ್ರೀಡಾ ಸಲಕರಣೆಗಳು, ಜಿಮ್ ಗಳು ಮಕ್ಕಳಿಗೆ ಹತ್ತಿರದಲ್ಲಿ ದೊರೆಯುತ್ತಿಲ್ಲ. ವಿದೇಶದ ಕೋಚಗಳನ್ನು ನೇಮಕ ಮಾಡುವಷ್ಟು ಭಾರತದ ಗ್ರಾಮಾಂತರ, ಮಧ್ಯಮವರ್ಗದ ಪೋಷಕರು ಶ್ರೀಮಂತರಾಗಿಲ್ಲ.

Neeraj Chopra
Paris Olympics

3) ಒಬ್ಬ ಒಳ್ಳೆಯ ಕ್ರೀಡಾಪಟುವು ಅರಳಬೇಕಾದರೆ ದೈಹಿಕ ಕ್ಷಮತೆ (ಫಿಸಿಕಲ್ ಫಿಟ್ನೆಸ್)ಯು ತುಂಬಾನೆ ಪ್ರಾಮುಖ್ಯ. ಅಂದರೆ ಸಣ್ಣ ಪ್ರಾಯದಲ್ಲಿ ಪೌಷ್ಟಿಕ ಆಹಾರ, ವಿಟಮಿನಗಳು ದೊರೆಯಬೇಕು. ಆ ಮಗು ಬೆವರು ಬಸಿದು ಕೆಲಸ ಮಾಡಬೇಕು. ಜಿಮ್, ಟೆನಿಸ್ ಕೋರ್ಟ್, ಬ್ಯಾಡ್ಮಿಂಟನ್ ಕೋರ್ಟು ಹತ್ತಿರದಲ್ಲಿ ಇರಬೇಕು. ಇದೆಲ್ಲ ಸಾಧ್ಯ ಆಗ್ತಾ ಇದೆಯಾ?

4) ಯಾವುದೇ ರಾಜ್ಯದಲ್ಲಿ ಕ್ರೀಡೆಗೆ ಪ್ರತ್ಯೇಕ ಸಚಿವಾಲಯ ಬೇಕು. ಒಳ್ಳೆಯ ಬಜೆಟ್ ಬೇಕು. ಆದರೆ ನಮ್ಮಲ್ಲಿ ಕ್ರೀಡಾ ಇಲಾಖೆಯು ಯುವಜನ ಸೇವಾ ಇಲಾಖೆಯ ಜೊತೆಗೆ ಇದೆ. ಬಜೆಟ್ ಕೇಳಿದರೆ ನೀವು ಖಂಡಿತವಾಗಿ ನಗುತ್ತೀರಿ. ಇನ್ನು ಪದಕ ನಿರೀಕ್ಷೆ ಮಾಡುವುದು ಹೇಗೆ?

5) ನಮ್ಮ ಶೈಕ್ಷಣಿಕ ವರ್ಷವು ಆರಂಭವಾಗುವುದೇ ಮಳೆಗಾಲದಲ್ಲಿ. ಮೊದಲ ನಾಲ್ಕು ತಿಂಗಳ ಒಳಗೆ ಎಲ್ಲ ಪಂದ್ಯಾಟಗಳು, ಕ್ರೀಡಾಕೂಟಗಳು ಮುಗಿಯಬೇಕು. ಅಂದರೆ ನಮ್ಮ ಪುಟ್ಟ ಮಕ್ಕಳು ಮಳೆಗೆ ತಲೆಕೊಟ್ಟು, ಜಾರುವ ಮೈದಾನದಲ್ಲಿ ಓಡಬೇಕು. ಮಳೆಗಾಲದ ಹೊತ್ತಲ್ಲಿ ತರಬೇತಿ ಪಡೆಯುವುದು ಯಾವಾಗ? ಒಳಾಂಗಣ ಕ್ರೀಡಾಂಗಣಗಳು ಎಷ್ಟು ಕಡೆ ಇವೆ? ಇದು ಕ್ರೀಡೆಗೆ ಪೂರಕವೇ?

6) ಕೆಲವು ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲು ಕೋಟಾ ಇದೆ. ಕೃಪಾಂಕದ ವ್ಯವಸ್ಥೆ ಇದೆ. ಉದ್ಯೋಗದಲ್ಲಿ ಮೀಸಲಾತಿ ವ್ಯವಸ್ಥೆ ಇದೆ. ಆದರೆ ನಮ್ಮಲ್ಲಿ?

7) ಬಾಲ್ಯದಿಂದ ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ್ ಆಗಬೇಕು ಎಂದು ಕನಸು ಕಾಣುವ, ಅದೇ ಕನಸುಗಳನ್ನು ಮಗುವಿನ ತಲೆಗೆ ತುಂಬುವ ಹೆತ್ತವರು ಮಕ್ಕಳು ಮೈದಾನಕ್ಕೆ ಇಳಿಯುವುದನ್ನು ಇಷ್ಟ ಪಡುವುದೇ ಇಲ್ಲ. ಕ್ರೀಡೆಗಳಲ್ಲಿ ಸಾಧನೆ ಮಾಡಬೇಕಾದರೆ ಮಗು ತರಗತಿ ಪಾಠ, ಪರೀಕ್ಷೆಗಳು ಇತ್ಯಾದಿಗಳಲ್ಲಿ ರಿಯಾಯಿತಿ ಪಡೆಯಬೇಕು. ಆಗ್ತಾ ಇದೆಯಾ?

8) ಎಷ್ಟೋ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇನ್ನು ಪದವಿಪೂರ್ವ ಕಾಲೇಜುಗಳ ಹಂತಕ್ಕೆ ಬಂದರೆ 50% ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ದೊಡ್ಡ ದೊಡ್ಡ ಶಾಲೆಗಳ ಕಟ್ಟಡಗಳನ್ನು ಕಟ್ಟುವ ಕಾಲೇಜುಗಳು ಗ್ರೌಂಡ್ ಇಲ್ಲದೆ ಕೂಡ ಕ್ಲಾಸ್ ನಡೆಸುತ್ತವೆ ಎಂದರೆ ನೀವು ನಂಬಲೇಬೇಕು.

9) ಶೂಟಿಂಗ್, ಗಾಲ್ಫ್, ಜಿಮ್ನಾಸ್ಟಿಕ್ ಉಪಕರಣಗಳು ತುಂಬಾ ದುಬಾರಿ. ಸರಕಾರಿ ಬ್ಯಾಡ್ಮಿಂಟನ್ ಕೋರ್ಟು, ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಇರುವುದು ತಾಲೂಕಿಗೆ ಒಂದೇ! ಎಷ್ಟೋ ಕಡೆಗಳಲ್ಲಿ ಅದೂ ಇಲ್ಲ. ಖಾಸಗಿಯವರು ಹೆಚ್ಚು ಫೀಸ್ ತೆಗೆದುಕೊಳ್ಳುತ್ತಾರೆ. ಹಾಗಿರುವಾಗ ಕ್ರೀಡಾಪ್ರತಿಭೆಗಳು ತರಬೇತು ಪಡೆಯಲು ತುಂಬಾ ದೂರಕ್ಕೆ ಹೋಗಬೇಕು. ಹಾಗಿರುವಾಗ ಪ್ರತಿಭೆಗಳು ಅರಳುವುದು ಹೇಗೆ?

10) ಸ್ಥಳೀಯ, ತಾಲೂಕು, ಜಿಲ್ಲಾಮಟ್ಟದ ಕ್ರೀಡಾಕೂಟಗಳಿಗೆ ಅದರಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಅನುದಾನದ ಬೆಂಬಲ ತುಂಬ ಕಡಿಮೆ. ಹೆತ್ತವರು ಅಥವಾ ಶಿಕ್ಷಕರೇ ಖರ್ಚು ಮಾಡಬೇಕು ಅಂತಾದಾಗ ಸಹಜವಾಗಿ ಎಲ್ಲರ ಆಸಕ್ತಿ ಕಡಿಮೆ ಆಗುತ್ತದೆ.

Paris Olympics
Paris Olympics

11) ಏಷಿಯಾಡ್, ಕಾಮನ್ ವೆಲ್ತ್ ಅಥವಾ ಒಲಿಂಪಿಕ್ಸ್ ಮೊದಲಾದ ಕೂಟಗಳಲ್ಲಿ ಅರ್ಹತೆಯನ್ನು ಪಡೆಯಬೇಕಾದರೆ ಒಬ್ಬ ಕ್ರೀಡಾಪಟು ದಿನಕ್ಕೆ ಕನಿಷ್ಟ 10-12 ಘಂಟೆ ಮೈದಾನದಲ್ಲಿ ಕಠಿಣ ಪರಿಶ್ರಮಪಡಬೇಕು. ಬೆವರು ಸುರಿಸಬೇಕು. ಒಳ್ಳೆಯ ತರಬೇತುದಾರರು ಸಿಗಬೇಕು. ಸರಕಾರಗಳು ಅಂತಹ ಕ್ರೀಡಾ ಪ್ರತಿಭೆಗಳನ್ನು ದತ್ತುಸ್ವೀಕಾರ ಮಾಡಬೇಕು. ಒಳ್ಳೆಯ ಸೌಲಭ್ಯಗಳನ್ನು ಖಾತರಿ ಪಡಿಸಬೇಕು. ಪೌಷ್ಟಿಕವಾದ ಆಹಾರದ ವ್ಯವಸ್ಥೆ ಮಾಡಬೇಕು. ನೀನು ಕ್ರೀಡೆಯಲ್ಲಿ ಗಮನ ಕೊಡು, ನಾನಿದ್ದೇನೆ ಎಂದು ಭರವಸೆಯನ್ನು ತುಂಬಬೇಕು. ಇದು ಆಗ್ತಾ ಇದೆಯಾ?

12) ಎಲ್ಲಕ್ಕಿಂತ ಹೆಚ್ಚಾಗಿ ರಾಷ್ಟ್ರಮಟ್ಟದ ಕ್ರೀಡಾತಾರೆಗಳನ್ನು ನ್ಯಾಶನಲ್ ಹೀರೋಗಳಾಗಿ ಘೋಷಣೆ ಮಾಡಬೇಕು. ಅವರ ಬದುಕಿನ ಕಥೆಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯಪುಸ್ತಕದಲ್ಲಿ ಇರಬೇಕು. ಕ್ರಿಕೆಟ್ ನಮ್ಮ ಧರ್ಮ ಆಗಿರುವ, ಕ್ರಿಕೆಟರಗಳು ನಮಗೆ ದೇವರಾಗಿರುವ ಈ ದೇಶದಲ್ಲಿ ಕ್ರೀಡಾಪಟುಗಳಿಗೆ ಸ್ಟಾರ್ ವ್ಯಾಲ್ಯೂ ತರುವುದು ಸಾಧ್ಯ ಆಗಿದೆಯಾ?

ಎಲ್ಲಕ್ಕಿಂತ ಹೆಚ್ಚಾಗಿ ಹೆತ್ತವರ ಮೈಂಡ್ ಸೆಟ್ ಬದಲಾಗಬೇಕು. ಇಲ್ಲಾಂದರೆ ನಾವು ಭಾರತದ ಕ್ರೀಡಾ ಸಾಧನೆಯನ್ನು ಕಳಪೆ ಎಂದು ದೂರುವುದನ್ನು ಬಿಡಬೇಕು.

ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೃಷ್ಟಿ ವಿಕಲತೆಯನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್!

Continue Reading

ದೇಶ

Kamikaze Drones : ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಸ್ವದೇಶಿ ನಿರ್ಮಿತ ಬಾಂಬರ್​​ ಡ್ರೋನ್​ ಸಿದ್ಧಪಡಿಸಿದ ಭಾರತ

Kamikaze Drones :

VISTARANEWS.COM


on

Kamikaze Drones
Koo

ನವದೆಹಲಿ: ಭಾರತ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಸಿದ್ಧಗೊಳ್ಳುತ್ತಿದೆ. ಇದೇ ವೇಳೆ ಭಾರತ ತನ್ನ ರಕ್ಷಣಾ ವಲಯದಲ್ಲಿ ಅತ್ಯುತ್ತಮ ಸಾಧನೆಯೊಂದನ್ನು ಮಾಡಿದೆ. ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೊರೇಟರೀಸ್ (ಎನ್ಎಎಲ್) ಸ್ವದೇಶಿ ನಿರ್ಮಿತ ಕಮಿಕಾಜೆ ಡ್ರೋನ್​ಗಳನ್ನು (ಸ್ಫೋಟಗೊಳ್ಳುವ ಡ್ರೋನ್​ಗಳು) ನಿರ್ಮಿಸಿದೆ (Kamikaze Drones). ಇದು ಅತ್ಯಂತ ಅಪಾಯಕಾರಿ ಡ್ರೋನ್ ಆಗಿದ್ದು ಎದುರಾಳಿಯನ್ನು ಸ್ಪಷ್ಟವಾಗಿ ಗುರಿಯಾಗಿಸಿಕೊಂಡು ಸ್ಫೋಟಗೊಳ್ಳುವ ಆತ್ಮಾಹುತಿ ಬಾಂಬರ್ ಆಗಿದೆ. ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಝಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಇಂಥ ಡ್ರೋನ್​ಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಇಂಥ ಡ್ರೋನ್​ಗಳು ಇನ್ನು ಭಾರತದ ಸೇನೆಯನ್ನೂ ಸೇರಲಿದೆ. ಹೆಚ್ಚು ಶಕ್ತಿಯುತವಾದ ಈ ಯುದ್ದ ಉಪಕರಣದ ಸೇರ್ಪಡೆಯುವ ಭಾರತದ ಶಕ್ತಿಯನ್ನು ಹೆಚ್ಚಿಸಲಿದೆ.

ಇದನ್ನೂ ಓದಿ : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

ಕಮಿಕಾಜೆ ಮಾನವರಹಿತ ವೈಮಾನಿಕ ಡ್ರೊನ್​​ಗಳನ್ನು ರಷ್ಯಾದ ಸೈನಿಕರು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ಗುರಿಯಾಗಿಸಿ ಉಕ್ರೇನಿಯನ್ನರು ಈಗ ಬಳಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಉಕ್ರೇನ್​ ಪಡೆ ಈ ರೀತಿಯ ದಾಳಿಯನ್ನು ಮಾಡಿರುವುದು ವರದಿಯಾಗಿದೆ. ಈ ಡ್ರೋನ್​ ಗುರಿಯನ್ನು ಹುಡುಕಿಕೊಂಡು ಹೆಚ್ಚು ಹೊತ್ತು ಅಲೆದಾಡುತ್ತದೆ. ಸ್ಫೋಟಕಗಳನ್ನು ಒತ್ತೊಯ್ಯುವ ಈ ಡ್ರೋನ್​ ದೂರದಲ್ಲಿ ಕುಳಿತಿರುವ ನಿಯಂತ್ರಕರಿಂದ ಆದೇಶ ಪಡೆದು ಆತ್ಮಾಹುತಿ ದಾಳಿಕೋರನಾಗುತ್ತದೆ. ಇಂಥ ಡ್ರೋನ್​​ಗಳನ್ನು ಹಿಂಡುಗಳಂತೆಯೂ ಕಳುಹಿಸಬಹುದು. ಇದರ ಲಾಭವೇನೆಂದರೆ ಅನೇಕ ಡ್ರೋನ್​ಗಳು ಏಕಾಕಾಲಕ್ಕೆ ದಾಳಿ ಮಾಡುವಾಗ ಶತ್ರು ಪಡೆಯ ರಾಡಾರ್​ಗಳ ಕಣ್ತಪ್ಪಿಸಬಹುದು. ಇಂಥ ಡ್ರೋನ್​ಗಳಿಗೂ ಪ್ರತ್ಯಸ್ತ್ರವನ್ನೂ ಇಸ್ರೇಲ್​ನಂಥ ದೇಶಗಳು ಹೊಂದಿವೆ. ಆದಾಗ್ಯೂ ತಪ್ಪಿಸಿಕೊಂಡ ಕೆಲವು ಶತ್ರುಗಳ ಸಾಮರ್ಥ್ಯ ಕುಗ್ಗಿಸಬಹುದು.

ಕಮಿಕಾಜೆ ಆತ್ಮಹತ್ಯಾ ಕಾರ್ಯಾಚರಣೆಗಳನ್ನು ಮೊದಲ ಬಾರಿಗೆ ಎರಡನೇ ಮಹಾಯುದ್ಧದ ಕೊನೆಯಲ್ಲಿ ಪ್ರಯೋಗಗೊಂಡಿತು. ಜಪಾನಿನ ವಾಯುಪಡೆಯು ಪೈಲಟ್​ಗಳ ಸಂಖ್ಯೆ ಕಡಿಮೆಯಾದ ಬಳಿಕ ತಮ್ಮ ಯುದ್ಧ ವಿಮಾನಗಳನ್ನು ಶತ್ರು ರಾಷ್ಟ್ರಗಳ ವಿಮಾನಗಳು ಮತ್ತು ಹಡಗುಗಳ ಮೇಲೆ ಬೀಳಿಸಿ ಸ್ಫೋಟಿಸುವಂತೆ ಮಾಡುತ್ತಿದ್ದರು.

ಸ್ವದೇಶಿ ಕಮಿಕಾಜೆ ಡ್ರೋನ್​ ಸಂಶೋಧನೆಯ ನೇತೃತ್ವ ವಹಿಸಿರುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್​​ನ ನಿರ್ದೇಶಕ ಡಾ.ಅಭಯ್ ಪಾಶಿಲ್ಕರ್ ಮಾಹಿತಿ ನೀಡಿ “ಭಾರತವು ಈ ಸಂಪೂರ್ಣ ದೇಶೀಯ ಕಮಿಕಾಜೆ ಡ್ರೋನ್​​ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು 21 ನೇ ಶತಮಾನದ ಹೊಸ ಯುಗದ ಯುದ್ಧ ತಂತ್ರಕ್ಕೆ ಅಗತ್ಯವಾಗಿದೆ ” ಎಂದು ಹೇಳುತ್ತಾರೆ.

ಭಾರತದ ಡ್ರೋನ್ ಸಾಮರ್ಥ್ಯವೇನು?

ಭಾರತೀಯ ಕಮಿಕಾಜೆ ಡ್ರೋನ್ ಸುಮಾರು 2.8 ಮೀಟರ್ ಉದ್ದವಿರುತ್ತದೆ. 3.5 ಮೀಟರ್ ಅಗಲದ ರೆಕ್ಕೆಗಳನ್ನು ಹೊಂದಿದೆ. ಒಟ್ಟಾರೆ ಸುಮಾರು 120 ಕೆಜಿ ತೂಕ ಹೊಂದಿರುವ ಈ ಡ್ರೋನ್​ 25 ಕೆ.ಜಿ ಸ್ಫೋಟಕಗಳನ್ನು ಹೊತ್ತೊಯ್ಯುತ್ತಿದೆ.

ಸಂಶೋಧನಾ ತಂಡದ ಡಾ.ಪಾಶಿಲ್ಕರ್ ಮಾತನಾಡಿ, ಭಾರತದ ಈ ಅಲೆಮಾರಿ ಶಸ್ತ್ರಾಸ್ತ್ರಗಳು ಸುಮಾರು ಒಂಬತ್ತು ಗಂಟೆಗಳ ಹಾರಾಟ ಸಾಮರ್ಥ್ಯ ಹೊಂದಿರುತ್ತವೆ, ಅಂದರೆ ಒಮ್ಮೆ ಉಡಾವಣೆಯಾದ ನಂತರ ಅದು ಅಗತ್ಯವಾಗಿರು ಕ್ಷೇತ್ರದಲ್ಲಿ ನಿರಂತರವಾಗಿ ಹಾರಬಹುದು. ಗುರಿಯನ್ನು ಗುರುತಿಸಿದ ನಂತರ ನಿಯಂತ್ರಕ ಅನುಮತಿಯ ನಂತರ ‘ಡು ಆರ್​ ಡೈ ಡ್ರೋನ್ ಅನ್ನು ತನ್ನ ಆತ್ಮಹತ್ಯೆ ಕಾರ್ಯಾಚರಣೆ ಆರಂಭಿಸುತ್ತದೆ.

ಸಿಎಸ್ಐಆರ್-ಎನ್ಎಎಲ್ ಅನ್ನು ನೋಡಲ್ ಪ್ರಯೋಗಾಲಯವಾಗಿ ಮತ್ತು ಸಿಎಸ್ಐಆರ್​​ನ ಎಲ್ಲಾ ಪ್ರಮುಖ ಎಂಜಿನಿಯರಿಂಗ್ ಪ್ರಯೋಗಾಲಯಗಳಲ್ಲಿ ಕಮಿಕಾಜೆ ಡ್ರೋನ್​​ಗಳ ಯೋಜನೆ ಪ್ರಾರಂಭಿಸಲು ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ತಾತ್ವಿಕ ಅನುಮೋದನೆ ನೀಡಿದೆ. ಈ ಸಾಮರ್ಥ್ಯವು ನಮ್ಮ ರಾಷ್ಟ್ರೀಯ ಭದ್ರತಾ ಅಗತ್ಯಗಳನ್ನು ಪೂರೈಸಲಿದೆ.

ಭಾರತೀಯ ಕಮಿಕಾಜೆ ಡ್ರೋನ್ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ 30-ಅಶ್ವಶಕ್ತಿಯ ವಾಂಕೆಲ್ ಎಂಜಿನ್ ಅನ್ನು ಬಳಸುತ್ತದೆ. ಇದು ಗಂಟೆಗೆ 180 ಕಿಲೋಮೀಟರ್ ಗರಿಷ್ಠ ವೇಗದಲ್ಲಿ ಸಾಗುತ್ತದೆ. 1,000 ಕಿಲೋಮೀಟರ್ ನಿರಂತರವಾಗಿ ಹಾರುವ ಸಾಮರ್ಥ್ಯ ಹೊಂದಿದೆ.

ಭಾರತೀಯ ಆವೃತ್ತಿಯು ಜಿಪಿಎಸ್ ಇಲ್ಲದ ಸನ್ನಿವೇಶಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಗುರಿಯನ್ನು ನ್ಯಾವಿಗೇಟ್ ಮಾಡಲು ಮತ್ತು ಹೋಮಿಂಗ್ ಮಾಡಲು ಭಾರತೀಯ ಎನ್ಎವಿಐಸಿಯನ್ನು (NAViC) ಬಳಸಬಹುದಾಗಿದೆ. “ಇತರ ದೇಶಗಳು ನಿಯೋಜಿಸಿದ ಇಂತಹ ಡ್ರೋನ್​​ಗಳು ಬೇರೆಡೆ ನಡೆಯುತ್ತಿರುವ ಆಧುನಿಕ ಯುದ್ಧಗಳಲ್ಲಿ ಹೆಚ್ಚಿನ ಸಾಮರ್ಥ್ಯ ಪ್ರದರ್ಶಿಸಿವೆ ” ಎಂದು ಡಾ.ಪಾಶಿಲ್ಕರ್ ಹೇಳಿದ್ದಾರೆ.

Continue Reading

ದೇಶ

Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

Independence Day 2024: ಪ್ರಸ್ತುತ ನಾವು ಬಳಸುವ ರೂಪಾಯಿಗೂ (Indian Currency) ಕ್ರಿಸ್ತಪೂರ್ವ 6ನೇ ಶತಮಾನದ ನಾಣ್ಯಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಇದರ ಹಿನ್ನಲೆ ಸಾಕಷ್ಟು ಆಸಕ್ತಿದಾಯಕವಾಗಿದೆ. ಭಾರತೀಯ ಕರೆನ್ಸಿ ನೋಟುಗಳು ಬ್ರಿಟಿಷರ ಆಡಳಿತದ ಬಳಿಕ ಹೇಗೆ ವಿಕಸನಗೊಂಡಿವೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿಗಳು ಇಲ್ಲಿವೆ.

VISTARANEWS.COM


on

By

Independence Day 2024
Koo

ಭಾರತದಲ್ಲಿ ನಾಣ್ಯ, ನೋಟುಗಳು (Indian Currency) ಚಲಾವಣೆಗೆ ಬಂದು ಹಲವು ಶತಮಾನಗಳೇ ಕಳೆದಿವೆ. ಇದರ ಬಹುದೊಡ್ಡ ಇತಿಹಾಸವೇ ಇದೆ. “ರೂಪಾಯಿ” (Rupee) ಪದದ ಮೂಲ ಸಂಸ್ಕೃತ ಪದ ‘ರೂಪ್ಯ’ದಿಂದ (Rupya) ಬಂದಿದೆ. ಇದರರ್ಥ ಆಕಾರ, ಮುದ್ರೆಯೊತ್ತಲ್ಪಟ್ಟ, ಪ್ರಭಾವಿತ ಅಥವಾ ನಾಣ್ಯ ಎಂಬುದಾಗಿದೆ. ಸಂಸ್ಕೃತ ಪದ “ರೌಪ್ಯ” ಅಂದರೆ ಬೆಳ್ಳಿಯಿಂದ ಮುದ್ರಿಸಲ್ಪಟ್ಟದ್ದು ಎಂಬ ಅರ್ಥವನ್ನು ಹೊಂದಿದೆ.

ನಾವು ಪ್ರಸ್ತುತ ಬಳಸುವ ರೂಪಾಯಿಗೂ ಕ್ರಿಸ್ತಪೂರ್ವ 6ನೇ ಶತಮಾನದ ನಾಣ್ಯಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಇದರ ಹಿನ್ನೆಲೆ ಸಾಕಷ್ಟು ಆಸಕ್ತಿದಾಯಕವಾಗಿದೆ. 19ನೇ ಶತಮಾನದಲ್ಲಿ ಬ್ರಿಟಿಷರು (British govt) ಮೊದಲ ಬಾರಿಗೆ ಕಾಗದದ ಕರೆನ್ಸಿಯನ್ನು ಪರಿಚಯಿಸಿದರು. 1861ರ ಕಾಗದದ ಕರೆನ್ಸಿ ಕಾಯಿದೆಯು ಬ್ರಿಟಿಷ್ ಭಾರತದ ವಿಶಾಲವಾದ ವಿಸ್ತಾರದ ಉದ್ದಕ್ಕೂ ನೀಡಲಾದ ನೋಟಿನ ಏಕಸ್ವಾಮ್ಯವನ್ನು ಸರ್ಕಾರಕ್ಕೆ ನೀಡಿತು.

ಭಾರತೀಯ ಕರೆನ್ಸಿ ನೋಟುಗಳು ಬ್ರಿಟಿಷರ ಆಡಳಿತದ ಬಳಿಕ ಹೇಗೆ ವಿಕಸನಗೊಂಡಿವೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿಗಳು ಇಲ್ಲಿವೆ:

ಭಾರತದಲ್ಲಿ ನಾಣ್ಯಗಳನ್ನು ಕ್ರಿಸ್ತಪೂರ್ವ 6ನೇ ಶತಮಾನದಲ್ಲಿ ಮುದ್ರಿಸಲಾಯಿತು. ಆಗ ಇದನ್ನು ಕರ್ಷಪಣಗಳು ಅಥವಾ ಪಣಗಳು ಎಂದು ಕರೆಯಲಾಗುತ್ತಿತ್ತು. ಈ ನಾಣ್ಯಗಳು ಅನಿಯಮಿತ ಆಕಾರ, ಪ್ರಮಾಣಿತ ತೂಕವನ್ನು ಹೊಂದಿತ್ತು.

ಬ್ರಿಟಿಷರ ಕಾಲದ ನಾಣ್ಯಗಳು

ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಆಡಳಿತದ ಸಮಯದಲ್ಲಿ ಅಂದರೆ 1600ರಲ್ಲಿ ಮೊಘಲ್ ಕರೆನ್ಸಿಯು ಜನಪ್ರಿಯವಾಗಿತ್ತು. ಆದರೆ 1717ಎ.ಡಿನಲ್ಲಿ ಮೊಘಲ್ ಚಕ್ರವರ್ತಿ ಫರೂಖ್ ಸಿಯಾರ್ ಅವರು ಬ್ರಿಟಿಷರಿಗೆ ಬಾಂಬೆ ಟಂಕಸಾಲೆಯಲ್ಲಿ ಮೊಘಲ್ ಹಣವನ್ನು ನಾಣ್ಯ ಮಾಡಲು ಅನುಮತಿ ನೀಡಿದರು. ಅನಂತರ ಬ್ರಿಟಿಷರು ಚಿನ್ನದ ನಾಣ್ಯಗಳನ್ನು ಕ್ಯಾರೊಲಿನಾ ಎಂಬ ಹೆಸರಿನಲ್ಲಿ ತಂದರು. ಬೆಳ್ಳಿಯ ನಾಣ್ಯಗಳನ್ನು ಏಂಜಲೀನಾ ಎಂದು, ತಾಮ್ರದ ನಾಣ್ಯಗಳನ್ನು ಕಪ್ಪೆರೂನ್ ಮತ್ತು ತವರ ನಾಣ್ಯಗಳನ್ನು ಟಿನ್ನಿ ಎಂದು ಕರೆಯಲಾಯಿತು.


ಮೊದಲ ನೋಟು

18ನೇ ಶತಮಾನದಲ್ಲಿ ಬಂಗಾಳದಲ್ಲಿರುವ ಬ್ಯಾಂಕ್ ಆಫ್ ಹಿಂದೂಸ್ತಾನ್ ಜನರಲ್ ಬ್ಯಾಂಕ್ ಮತ್ತು ಬಂಗಾಳ ಬ್ಯಾಂಕ್ ಪೇಪರ್ ಕರೆನ್ಸಿಯನ್ನು ವಿತರಿಸಿದ ಭಾರತದ ಮೊದಲ ಬ್ಯಾಂಕುಗಳಾಗಿವೆ. 1812ರ ಸೆಪ್ಟೆಂಬರ್ 3ರಂದು ಬ್ಯಾಂಕ್ ಆಫ್ ಬೆಂಗಾಲ್ ಮೂಲಕ ಬ್ರಿಟಿಷರು ಇವುಗಳನ್ನು ಹೊರತಂದರು. ಇದು ಎರಡು ನೂರ ಐವತ್ತು ಸಿಕ್ಕಾ ರೂಪಾಯಿ ನೋಟಾಗಿತ್ತು.

ನಾಣ್ಯಗಳ ಕಾಯಿದೆ

1835ರ ನಾಣ್ಯಗಳ ಕಾಯಿದೆಯೊಂದಿಗೆ ದೇಶಾದ್ಯಂತ ಏಕರೂಪದ ನಾಣ್ಯವು ಚಲಾವಣೆಗೆ ಬಂದಿತ್ತು. 1858ರಲ್ಲಿ ಮೊಘಲ್ ಸಾಮ್ರಾಜ್ಯವು ಕೊನೆಗೊಂಡಿತು ಮತ್ತು ಬ್ರಿಟಿಷರು ನೂರು ರಾಜಪ್ರಭುತ್ವದ ರಾಜ್ಯಗಳ ಮೇಲೆ ಹಿಡಿತ ಸಾಧಿಸಿದರು. ಹೀಗಾಗಿ ಬಳಿಕ ನಾಣ್ಯಗಳ ಮೇಲೆ ಗ್ರೇಟ್ ಬ್ರಿಟನ್ ಪ್ರಭುತ್ವದ ರಾಜನ ಚಿತ್ರವನ್ನು ಮುದ್ರಿಸಲಾಯಿತು.

Indian Currency
Indian Currency


6ನೇ ಕಿಂಗ್ ಜಾರ್ಜ್ ಬ್ಯಾಂಕ್ ನೋಟುಗಳು ಮತ್ತು ನಾಣ್ಯಗಳ ಮೇಲಿನ ವಿನ್ಯಾಸಗಳನ್ನು ಬದಲಿಸಿದರು. ಆದರೆ 1857ರ ದಂಗೆಯ ನಂತರ, ಅವರು ವಸಾಹತುಶಾಹಿ ಭಾರತದ ಅಧಿಕೃತ ಕರೆನ್ಸಿಯಾಗಿ ರೂಪಾಯಿಯನ್ನು ಮಾಡಿದರು.
1862ರಲ್ಲಿ ರಾಣಿ ವಿಕ್ಟೋರಿಯಾ ಗೌರವಾರ್ಥವಾಗಿ, ವಿಕ್ಟೋರಿಯಾ ಭಾವಚಿತ್ರದೊಂದಿಗೆ ಬ್ಯಾಂಕ್ ನೋಟುಗಳು ಮತ್ತು ನಾಣ್ಯಗಳ ಸರಣಿಯನ್ನು ಬಿಡುಗಡೆ ಮಾಡಲಾಯಿತು.

ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆ

ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು 1935ರಲ್ಲಿ ಸ್ಥಾಪಿಸಲಾಯಿತು. ಭಾರತ ಸರ್ಕಾರದ ನೋಟುಗಳನ್ನು ವಿತರಿಸಲು ಅಧಿಕಾರ ನೀಡಲಾಯಿತು. ಇದು ಮೊದಲಿಗೆ 10,000 ರೂಪಾಯಿ ಮೌಲ್ಯದ ನೋಟುಗಳನ್ನು ಮುದ್ರಿಸಿತ್ತು. ಆದರೆ ಸ್ವಾತಂತ್ರ್ಯದ ಅನಂತರ ಇದನ್ನು ಅಮಾನ್ಯಗೊಳಿಸಲಾಯಿತು.


ಆರ್‌ಬಿಐ ಬಿಡುಗಡೆ ಮಾಡಿದ ಮೊದಲ ನೋಟು

ಆರ್‌ಬಿಐ ಬಿಡುಗಡೆ ಮಾಡಿದ ಮೊದಲ ಕಾಗದದ ಕರೆನ್ಸಿ 1938ರ ಜನವರಿಯಲ್ಲಿ 6ನೇ ಕಿಂಗ್ ಜಾರ್ಜ್ ಆವರ ಭಾವಚಿತ್ರವನ್ನು ಹೊಂದಿರುವ 5 ರೂಪಾಯಿ ನೋಟಾಗಿತ್ತು.


ಸ್ವಾತಂತ್ರ್ಯ ಅನಂತರದ ನೋಟು

1947ರಲ್ಲಿ ಸ್ವಾತಂತ್ರ್ಯ ಪಡೆದ ಅನಂತರ ಮತ್ತು 1950ರ ದಶಕದಲ್ಲಿ ಭಾರತ ಗಣರಾಜ್ಯವಾದಾಗ ಭಾರತದ ಆಧುನಿಕ ರೂಪಾಯಿಯ ವಿನ್ಯಾಸ ಪಡೆಯಿತು. ಪೇಪರ್ ಕರೆನ್ಸಿಗೆ ಆಯ್ಕೆ ಮಾಡಲಾದ ಚಿಹ್ನೆಯು ಸಾರಾನಾಥದಲ್ಲಿರುವ ಸಿಂಹದ ಚಿಹ್ನೆಯನ್ನು ಒಳಗೊಂಡಿತ್ತು. ಇದು 6ನೇ ಜಾರ್ಜ್ ನ ಬ್ಯಾಂಕ್ ನೋಟುಗಳನ್ನು ಬದಲಾಯಿಸಿತು. ಆದ್ದರಿಂದ, ಸ್ವತಂತ್ರ ಭಾರತವು ಮುದ್ರಿಸಿದ ಮೊದಲ ನೋಟು 1 ರೂಪಾಯಿ ನೋಟು.

1 ರೂಪಾಯಿ ನೋಟಿನ ಇತಿಹಾಸ ಹೀಗಿದೆ

ಬ್ರಿಟಿಷ್ ಆಡಳಿತದ ಅವಧಿಯಲ್ಲಿ 1917ರ ನವೆಂಬರ್ 30ರಂದು ಒಂದು ರೂಪಾಯಿ ನೋಟನ್ನು ಬಿಡುಗಡೆ ಮಾಡಲಾಯಿತು. ಅದೂ ಮೊದಲನೇ ಮಹಾಯುದ್ಧದ ಸಮಯದಲ್ಲಿ.


ಆ ಕಾಲದಲ್ಲಿ ಒಂದು ರೂಪಾಯಿ ನಾಣ್ಯ ಬೆಳ್ಳಿಯದ್ದಾಗಿತ್ತು. ಆದರೆ ಯುದ್ಧದ ಕಾರಣ ಪರಿಸ್ಥಿತಿ ಹದಗೆಟ್ಟಿತು ಮತ್ತು ಒಂದು ರೂಪಾಯಿ ಬೆಳ್ಳಿಯ ನಾಣ್ಯವನ್ನು ಉತ್ಪಾದಿಸಲು ಸಾಧ್ಯವಾಗಲಿಲ್ಲ. ಈ ಕಾರಣದಿಂದಾಗಿ ಮೊದಲ ಬಾರಿಗೆ ಜನರ ಮುಂದೆ ಒಂದು ರೂಪಾಯಿ ನೋಟು ಬಿಡುಗಡೆಯಾಯಿತು. ಇದರಲ್ಲಿ 5ನೇ ಜಾರ್ಜ್ ನ ಚಿತ್ರವನ್ನು ನೋಟಿನಲ್ಲಿ ಅಳವಡಿಸಲಾಗಿತ್ತು. ಇಂಗ್ಲೆಂಡಿನಲ್ಲಿ ಮುದ್ರಿತವಾಗಿರುವ ಈ ಒಂದು ರೂಪಾಯಿ ನೋಟಿನ ಮೌಲ್ಯ ಇತರ ನೋಟುಗಳಿಗೆ ಹೋಲಿಸಿದರೆ ತುಂಬಾ ಕಡಿಮೆ ಇತ್ತು.

ನೋಟುಗಳ ಮೈಲುಗಲ್ಲು

1917-1918ರಲ್ಲಿಯೂ ಹೈದರಾಬಾದ್ ನಿಜಾಮರು ತಮ್ಮ ಸ್ವಂತ ಕರೆನ್ಸಿಯನ್ನು ಮುದ್ರಿಸಿ ಬಿಡುಗಡೆ ಮಾಡುವ ಸೌಲಭ್ಯ ಹೊಂದಿದ್ದರು. ಮೊದಲನೆಯ ಮಹಾಯುದ್ಧದಲ್ಲಿ ಲೋಹದ ಕೊರತೆಯಿಂದಾಗಿ ಮೊರ್ವಿ ರಾಜಪ್ರಭುತ್ವದ ರಾಜ್ಯಗಳು ಹರ್ವಾಲಾ ಎಂದು ಕರೆಯಲ್ಪಡುವ ಸೀಮಿತ ಹೊಣೆಗಾರಿಕೆಯ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡಿದ್ದವು.


1959ರಲ್ಲಿ ಭಾರತೀಯ ಹಜ್ ಯಾತ್ರಿಕರಿಗೆ ಹತ್ತು ರೂಪಾಯಿ ಮತ್ತು ನೂರು ರೂಪಾಯಿಗಳ ನೋಟನ್ನು ಬಿಡುಗಡೆ ಮಾಡಲಾಯಿತು. ಇದನ್ನು ಅವರು ಸೌದಿ ಅರೇಬಿಯಾದಲ್ಲಿ ಸ್ಥಳೀಯ ಕರೆನ್ಸಿಯೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿತ್ತು.

1969ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ 5 ಮತ್ತು 10 ರೂ. ನೋಟುಗಳ ಮೇಲೆ ಮಹಾತ್ಮ ಗಾಂಧಿ ಜನ್ಮ ಶತಮಾನೋತ್ಸವದ ಸ್ಮರಣಾರ್ಥದ ವಿನ್ಯಾಸವನ್ನು ಮಾಡಿ ಬಿಡುಗಡೆ ಮಾಡಿತ್ತು.


ನಾಣ್ಯಗಳ ಬದಲಿಗೆ ಟೋಕನ್

ಎರಡನೇ ಮಹಾಯುದ್ಧದ ಸಮಯದಲ್ಲಿ ಲೋಹದ ಕೊರತೆಯಿಂದಾಗಿ 36 ರಾಜಪ್ರಭುತ್ವದ ರಾಜ್ಯಗಳು ಮುಖ್ಯವಾಗಿ ಗುಜರಾತ್, ರಾಜಸ್ಥಾನ, ಸಿಂಧ್, ಬಲೂಚಿಸ್ತಾನ್ ಮತ್ತು ಕೇಂದ್ರ ಪ್ರಾಂತ್ಯಗಳು ನಾಣ್ಯಗಳ ಬದಲಿಗೆ ಕಾಗದದ ಟೋಕನ್‌ಗಳನ್ನು ನೀಡಿದವು!


ನೋಟುಗಳಲ್ಲಿ ಮಹಾತ್ಮಾ ಗಾಂಧಿ ಚಿತ್ರ

ಅಂತಿಮವಾಗಿ 1996ರಲ್ಲಿ ಮಹಾತ್ಮಾ ಗಾಂಧಿ ಚಿತ್ರವನ್ನು ಹೊಂದಿರುವ ಕಾಗದದ ನೋಟುಗಳನ್ನು ಪರಿಚಯಿಸಲಾಯಿತು.

ಛಾಯಾಗ್ರಾಹಕನೊಬ್ಬ ತೆಗೆದ ಗಾಂಧಿಯ ಚಿತ್ರ

ಪ್ರಸ್ತುತ ನೋಟಿನಲ್ಲಿರುವ ಮಹಾತ್ಮ ಗಾಂಧಿಯವರ ನಗುಮುಖದ ಚಿತ್ರ ವ್ಯಂಗ್ಯಚಿತ್ರವೆಂದು ಕೆಲವರು ಹೇಳುತ್ತಾರೆ. ಆದರೆ ಇದು ನಿಜವಲ್ಲ. ಈ ಚಿತ್ರವನ್ನು 1946ರಲ್ಲಿ ಅಜ್ಞಾತ ಛಾಯಾಗ್ರಾಹಕರೊಬ್ಬರು ತೆಗೆದಿದ್ದು, ಅದನ್ನು ಕತ್ತರಿಸಿ ಮುದ್ರಿಸಲಾಗಿದೆ.


ರಾಜಕಾರಣಿ ಮತ್ತು ಗ್ರೇಟ್ ಬ್ರಿಟನ್‌ನಲ್ಲಿ ಮಹಿಳಾ ಮತದಾರರ ಚಳವಳಿಯ ನಾಯಕರಾಗಿದ್ದ ಲಾರ್ಡ್ ಫ್ರೆಡ್ರಿಕ್ ವಿಲಿಯಂ ಪೆಥಿಕ್-ಲಾರೆನ್ಸ್ ಅವರ ಪಕ್ಕದಲ್ಲಿ ನಿಂತಿದ್ದ ಮಹಾತ್ಮಾ ಗಾಂಧಿಯವರ ಚಿತ್ರವನ್ನು ಪ್ರಸ್ತುತ ರಾಷ್ಟ್ರಪತಿ ಭವನ ಎಂದು ಕರೆಯಲ್ಪಡುವ ಹಿಂದಿನ ವೈಸರಾಯ್ ಹೌಸ್‌ನಲ್ಲಿ ತೆಗೆಯಲಾಗಿತ್ತು. ಈ ಚಿತ್ರವನ್ನು 1996ರಲ್ಲಿ ಆರ್‌ಬಿಐ ಪರಿಚಯಿಸಿದ ಮಹಾತ್ಮ ಗಾಂಧಿ ಸರಣಿಯ ಬ್ಯಾಂಕ್ ನೋಟುಗಳಲ್ಲಿ ಬಳಸಲಾಗಿದೆ.


ವಿಭಿನ್ನ ಚಿತ್ರ ಬಳಕೆ

1981ರಲ್ಲಿ 10 ರೂ. ನೋಟು ಸಿಂಹದ ಲಾಂಛನ ಮತ್ತು ರಾಷ್ಟ್ರೀಯ ಪಕ್ಷಿಯಾದ ನವಿಲಿನ ಚಿತ್ರವನ್ನು ಹೊಂದಿತ್ತು.

1983- 84ರಲ್ಲಿ ಮುದ್ರಿಸಿರುವ 20 ರೂಪಾಯಿಯ ಬ್ಯಾಂಕ್ ನೋಟಿನ ಹಿಂಭಾಗದಲ್ಲಿ ಬೌದ್ಧರ ಚಕ್ರವನ್ನು ಒಳಗೊಂಡಿತ್ತು.

1996 ಜೂನ್‌ನಲ್ಲಿ ಮುದ್ರಿಸಲಾದ 100 ರೂ.ನ ನೋಟಿನಲ್ಲಿ ಮಹಾತ್ಮಾ ಗಾಂಧಿಯವರ ಮುಂಭಾಗದ ಚಿತ್ರದೊಂದಿಗೆ ಹಿಂಭಾಗದಲ್ಲಿ ಹಿಮಾಲಯ ಪರ್ವತಗಳನ್ನು ಚಿತ್ರಿಸಲಾಗಿದೆ.


1996ರ ಜೂನ್‌ನಲ್ಲಿ 10 ರೂ. ನೋಟಿನ ಮುಂಭಾಗದಲ್ಲಿ ಗಾಂಧಿ ಮತ್ತು ಹಿಂಭಾಗದಲ್ಲಿ ಜೀವವೈವಿಧ್ಯವನ್ನು ಸಂಕೇತಿಸುವ ಭಾರತದ ಪ್ರಾಣಿಗಳನ್ನು ಪ್ರತಿನಿಧಿಸುವ ಚಿತ್ರವನ್ನು ಚಿತ್ರಿಸಲಾಯಿತು.

1997ರ ಮಾರ್ಚ್‌ನಲ್ಲಿ ಮುದ್ರಿಸಲಾದ 50 ರೂ.ಗಳ ನೋಟಿನ ಹಿಂಭಾಗ ಮತ್ತು ಮುಂಭಾಗದಲ್ಲಿ ಭಾರತೀಯ ಸಂಸತ್ತು ಮತ್ತು ಮಹಾತ್ಮ ಗಾಂಧಿಯವರ ಚಿತ್ರವನ್ನು ನೀಡಲಾಗಿದೆ.


1997ರ ಅಕ್ಟೋಬರ್‌ನಲ್ಲಿ ಮಹಾತ್ಮಾ ಗಾಂಧಿಯವರ ಮುಂಭಾಗದ ಚಿತ್ರವಿರುವ 500 ರೂ.ಗಳನ್ನು ನೀಡಲಾಯಿತು ಮತ್ತು ಅದರ ಹಿಂಭಾಗದಲ್ಲಿ ದಂಡಿ ಮೆರವಣಿಗೆಯನ್ನು ಪ್ರತಿನಿಧಿಸುವ ಚಿತ್ರವನ್ನು ಹೊಂದಿತ್ತು.


ಇದು 1930ರ ಮಾರ್ಚ್ 12ರಂದು ಪ್ರಾರಂಭಿಸಿದ ಉಪ್ಪಿನ ಸತ್ಯಾಗ್ರಹವನ್ನು ಪ್ರತಿಬಿಂಬಿಸುತ್ತದೆ. ಗಾಂಧೀಜಿ ಅವರು ಆರಂಭಿಸಿದ ವ್ಯಾಪಕ ನಾಗರಿಕ ಅಸಹಕಾರ ಚಳವಳಿ ಇದು ಎಂದು ಪರಿಗಣಿಸಲಾಗಿದೆ. ಭಾರತದಲ್ಲಿ ಉಪ್ಪಿನ ಮೇಲೆ ಬ್ರಿಟಿಷ್‌ ಪ್ರಾಬಲ್ಯದ ವಿರುದ್ಧ ಗಾಂಧೀಜಿ ತಮ್ಮ ಅನುಯಾಯಿಗಳೊಂದಿಗೆ ಅಹಮದಾಬಾದ್ ಬಳಿಯ ಅವರ ಸಬರಮತಿ ಆಶ್ರಮದಿಂದ ನವಸಾರಿ ಜಿಲ್ಲೆ ಗುಜರಾತ್‌ನ ಕರಾವಳಿ ಗ್ರಾಮವಾದ ದಂಡಿಗೆ ಮೆರವಣಿಗೆ ನಡೆಸಿದರು. ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ಪಾವತಿಸದೆ ಉಪ್ಪನ್ನು ತಯಾರಿಸಿದರು. ಈ ರೀತಿಯಲ್ಲಿ 1930ರ ಏಪ್ರಿಲ್ 5ರಂದು ಗಾಂಧಿಯವರು ಉಪ್ಪಿನ ಕಾನೂನನ್ನು ಮುರಿದರು.


2000ರ ನವೆಂಬರ್‌ನಲ್ಲಿ ಗಾಂಧಿಯವರ ಮುಂಭಾಗದ ಚಿತ್ರದೊಂದಿಗೆ 1000 ರೂ.ಯನ್ನು ನೀಡಲಾಯಿತು. ಅದರ ಹಿಂಭಾಗದಲ್ಲಿ ಧಾನ್ಯ ಕೊಯ್ಲು ಅಂದರೆ ಕೃಷಿ ವಲಯ, ತೈಲ ಸಂಸ್ಕರಣೆ ಇತ್ಯಾದಿ ಹೊಂದಿರುವ ಭಾರತದ ಆರ್ಥಿಕತೆಯನ್ನು ಪ್ರತಿನಿಧಿಸುವ ಚಿತ್ರವನ್ನು ಹೊಂದಿದೆ.

2001ರ ಆಗಸ್ಟ್‌ನಲ್ಲಿ ಗಾಂಧಿಯವರ ಚಿತ್ರದೊಂದಿಗೆ 20 ರೂ. ನೀಡಲಾಯಿತು. ಇದರಲ್ಲಿ ತಾಳೆ ಮರಗಳ ಚಿತ್ರವನ್ನು ಹಿಂಭಾಗದಲ್ಲಿ ಮುದ್ರಿಸಲಾಯಿತು.

ಇದನ್ನೂ ಓದಿ: Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

2001ರ ನವೆಂಬರ್ ನಲ್ಲಿ 5 ರೂ. ಮುಖಬೆಲೆಯ ನೋಟಿನ ಮುಂಭಾಗದಲ್ಲಿ ಮಹಾತ್ಮ ಗಾಂಧಿ ಮತ್ತು ಹಿಂಭಾಗದಲ್ಲಿ ಕೃಷಿ ಯಾಂತ್ರೀಕರಣದ ಚಿತ್ರವನ್ನು ಚಿತ್ರಿಸಲಾಯಿತು.

2016ರ ನವೆಂಬರ್‌ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣದ ವಿರುದ್ಧ ಸಮರ ಸಾರುವ ಸಲುವಾಗಿ ಹಿಂದಿನ 500 ಮತ್ತು 1000 ರೂ. ನೋಟುಗಳನ್ನು ಇದ್ದಕ್ಕಿದ್ದಂತೆ ರದ್ದು ಮಾಡಿ ದೇಶಾದ್ಯಂತ ಸಂಚಲನ ಮೂಡಿಸಿದರು. 2000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದರು. ಮುಂದೆ 500 ರೂ.ಯ ಹೊಸ ಮಾದರಿ ನೋಟುಗಳೂ ಬಂದವು. ಬಳಿಕ ಇದೀಗ 2000 ರೂ. ಮೌಲ್ಯದ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿದ್ದು, ಚಲಾವಣೆಯಲ್ಲಿರುವ ಅದನ್ನು ಆರ್‌ಬಿಐ ಹಿಂಪಡೆದಿದೆ. 2024ರ ಅಕ್ಟೋಬರ್ ಬಳಿಕ ಈ 2000 ರೂ. ನೋಟುಗಳು ಅಧಿಕೃತವಾಗಿ ಇತಿಹಾಸದ ಪುಟವನ್ನು ಸೇರಲಿದೆ!

Continue Reading

ಪ್ರಮುಖ ಸುದ್ದಿ

Sheikh Hasina : ಬಾಂಗ್ಲಾದಿಂದ ಪಲಾಯನ ಮಾಡಿದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ಶೇಖ್​ ಹಸೀನಾ

Sheikh Hasina : ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ನಾಯಕತ್ವದಲ್ಲಿ ನಾವು ಸ್ವತಂತ್ರ ರಾಷ್ಟ್ರವಾಗಿ ಸ್ವಾಭಿಮಾನವನ್ನು ಗಳಿಸಿದ್ದೆವು. ಸ್ವಯಂ ಗುರುತನ್ನು ಪಡೆದುಕೊಂಡಿದ್ದೆವು. ಸ್ವತಂತ್ರ ದೇಶವನ್ನು ಪಡೆದಿದ್ದೇವೆ. ಈಗ ಅವರನ್ನು ತೀವ್ರವಾಗಿ ಅವಮಾನಿಸಲಾಗಿದೆ” ಎಂದು ಹಸೀನಾ ತಮ್ಮ ಮಗ ಸಜೀಬ್ ವಾಜೀದ್ ಮೂಲಕ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

VISTARANEWS.COM


on

Sheikh Hasina
Koo

ಬೆಂಗಳೂರು ; ಬಾಂಗ್ಲಾದೇಶ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡು ಬಳಿಕ ಅಲ್ಲಿಂದ ಪರಾರಿಯಾಗಿ ಭಾರತಕ್ಕೆ ಬಂದಿರುವ ಪ್ರಧಾನಿ ಶೇಖ್ ಹಸೀನಾ (Sheikh Hasina) ಮಂಗಳವಾರ ತಮ್ಮ ಮೊದಲ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅವಾಮಿ ಲೀಗ್ ವಿರುದ್ಧದ ದಂಗೆಯನ್ನು ತನ್ನ ತಂದೆ, ಬಾಂಗ್ಲಾದೇಶದ ಸ್ಥಾಪಕ ಅಧ್ಯಕ್ಷ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಮತ್ತು ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅನೇಕ ಹುತಾತ್ಮರಿಗೆ ಮಾಡಿದ ಗಂಭೀರ ಅವಮಾನ ಎಂದು ಹೇಳಿಕೆ ನೀಡಿದ್ದಾರೆ.

ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ನಾಯಕತ್ವದಲ್ಲಿ ನಾವು ಸ್ವತಂತ್ರ ರಾಷ್ಟ್ರವಾಗಿ ಸ್ವಾಭಿಮಾನವನ್ನು ಗಳಿಸಿದ್ದೆವು. ಸ್ವಯಂ ಗುರುತನ್ನು ಪಡೆದುಕೊಂಡಿದ್ದೆವು. ಸ್ವತಂತ್ರ ದೇಶವನ್ನು ಪಡೆದಿದ್ದೇವೆ. ಈಗ ಅವರನ್ನು ತೀವ್ರವಾಗಿ ಅವಮಾನಿಸಲಾಗಿದೆ” ಎಂದು ಹಸೀನಾ ತಮ್ಮ ಮಗ ಸಜೀಬ್ ವಾಜೀದ್ ಮೂಲಕ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅವರು ಲಕ್ಷಾಂತರ ಹುತಾತ್ಮರ ತ್ಯಾಗವನ್ನು ಅವಮಾನಿಸಿದ್ದಾರೆ. ನಾನು ದೇಶವಾಸಿಗಳಿಂದ ನ್ಯಾಯವನ್ನು ಬಯಸುತ್ತೇನೆ” ಎಂದು ಹಸೀನಾ ಬಾಂಗ್ಲಾದೇಶದ ಪ್ರಧಾನಿ ಹುದ್ದೆಯಿಂದ ಹೊರಹಾಕಿದ ಹಿಂದಿನ ಶಕ್ತಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಶೇಖ್ ಮುಜಿಬುರ್ ರಹಮಾನ್ ಅವರ ಹತ್ಯೆಯಾದ ದಿನದ ವಾರ್ಷಿಕೋತ್ಸವದ ನೆನಪಿಗಾಗಿ ಆಗಸ್ಟ್ 15 ರಂದು ರಾಷ್ಟ್ರೀಯ ಶೋಕಾಚರಣೆ ದಿನ ಆಚರಿಸುವಂತೆ ಅವಾಮಿ ಲೀಗ್ ಮುಖ್ಯಸ್ಥರು ಬಾಂಗ್ಲಾದೇಶದ ಪ್ರಜೆಗಳನ್ನು ಒತ್ತಾಯಿಸಿದ್ದಾರೆ.

ಆಗಸ್ಟ್ 15 ರಂದು ರಾಷ್ಟ್ರೀಯ ಶೋಕ ದಿನವನ್ನು ಸೂಕ್ತ ಘನತೆ ಮತ್ತು ಗಂಭೀರತೆಯಿಂದ ಆಚರಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ. ಬಂಗಬಂಧು ಭವನದಲ್ಲಿ ಹೂವಿನ ಹಾರಗಳನ್ನು ಅರ್ಪಿಸುವ ಮೂಲಕ ಮತ್ತು ಪ್ರಾರ್ಥಿಸುವ ಮೂಲಕ ಎಲ್ಲರಿಗೂ ಪ್ರಾರ್ಥಿಸಿ” ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಅವರು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

“ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಪೊಲೀಸರು, ಪತ್ರಕರ್ತರು, ಸಾಂಸ್ಕೃತಿಕ ಕಾರ್ಯಕರ್ತರು ಮತ್ತು ಮುಗ್ಧ ಪ್ರೇಕ್ಷಕರು ಭಯೋತ್ಪಾದನೆ ಮತ್ತು ಹಿಂಸಾಚಾರದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ನನ್ನಂತೆ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವಿನೊಂದಿಗೆ ಬದುಕುತ್ತಿರುವವರಿಗೆ ನನ್ನ ಆಳ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಹಸೀನಾ ಹೇಳಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಹತ್ಯೆಗಳು ಮತ್ತು ವಿಧ್ವಂಸಕ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಸೀನಾ ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಅವರ 15 ವರ್ಷಗಳ ಅಧಿಕಾರಾವಧಿ ಆಗಸ್ಟ್ 5 ರಂದು ಹಠಾತ್ತನೆ ಕೊನೆಗೊಂಡಿತು. ಪ್ರಸ್ತುತ, ಹಸೀನಾ ಭಾರತದಲ್ಲಿ ಸುರಕ್ಷಿತ ಸ್ಥಳದಲ್ಲಿದ್ದಾರೆ ಎಂದು ವರದಿಯಾಗಿದೆ.

Continue Reading
Advertisement
ರಾಜಮಾರ್ಗ ಅಂಕಣ Paris Olympics
ಅಂಕಣ6 mins ago

ರಾಜಮಾರ್ಗ ಅಂಕಣ: ಪ್ಯಾರಿಸ್ ಒಲಿಂಪಿಕ್ಸ್ – ಭಾರತದ ಸಾಧನೆ ಕಳಪೆಯೇ?

Kamikaze Drones
ದೇಶ1 hour ago

Kamikaze Drones : ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಸ್ವದೇಶಿ ನಿರ್ಮಿತ ಬಾಂಬರ್​​ ಡ್ರೋನ್​ ಸಿದ್ಧಪಡಿಸಿದ ಭಾರತ

Karnataka Weather Forecast
ಮಳೆ1 hour ago

Karnataka Weather : ರಾಜ್ಯದ ಹಲವೆಡೆ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Dina Bhavishya
ಭವಿಷ್ಯ2 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರಿಂದ ಹುಷಾರಾಗಿರಿ

Ashwini Ponnappa
ಪ್ರಮುಖ ಸುದ್ದಿ8 hours ago

Ashwini Ponnappa : ಷಟ್ಲರ್​ಗಳನ್ನೇ ಗುರಿಯಾಗಿಸಿದ ಕ್ರೀಡಾ ಇಲಾಖೆ ವಿರುದ್ಧವೇ ತಿರುಗಿ ಬಿದ್ದ ಅಶ್ವಿನಿ ಪೊನ್ನಪ್ಪ

Sowmya Reddy
ರಾಜಕೀಯ8 hours ago

Sowmya Reddy: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

Cricket News
ಪ್ರಮುಖ ಸುದ್ದಿ8 hours ago

Cricket News : ಬಾಂಗ್ಲಾದೇಶ ವಿರುದ್ಧದ ಸರಣಿಯ ವೇಳಾಪಟ್ಟಿ ಬದಲಾಯಿಸಿದ ಬಿಸಿಸಿಐ

Koppala News
ಕೊಪ್ಪಳ8 hours ago

Koppala News: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ನಿರ್ಮಾಣದಲ್ಲೂ ಕಮಿಷನ್ ರಾಜಕೀಯ; ಕಾಂಗ್ರೆಸ್ ಮುಖಂಡನಿಂದಲೇ ಆರೋಪ

Koppala News
ಕರ್ನಾಟಕ9 hours ago

Koppala News: ಮಕ್ಕಳ ತಟ್ಟೆಯಲ್ಲಿನ ಮೊಟ್ಟೆ ಕಸಿದುಕೊಂಡ ಅಂಗನವಾಡಿಗೆ ನ್ಯಾಯಾಧೀಶರ ದಿಢೀರ್ ಭೇಟಿ!

Kannada New Movie
ಬೆಂಗಳೂರು9 hours ago

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌