Sensex | ಷೇರುಪೇಟೆಯಲ್ಲಿ ಅಬ್ಬರಿಸಿದ ಗೂಳಿ, ಸೆನ್ಸೆಕ್ಸ್‌ 1,564 ಅಂಕ ಜಿಗಿತ - Vistara News

ಪ್ರಮುಖ ಸುದ್ದಿ

Sensex | ಷೇರುಪೇಟೆಯಲ್ಲಿ ಅಬ್ಬರಿಸಿದ ಗೂಳಿ, ಸೆನ್ಸೆಕ್ಸ್‌ 1,564 ಅಂಕ ಜಿಗಿತ

ಷೇರು ಪೇಟೆಯಲ್ಲಿ ಮಂಗಳವಾರ ಸೆನ್ಸೆಕ್ಸ್‌ 1,564 ಅಂಕಗಳ ಭಾರಿ ಏರಿಕೆ ದಾಖಲಿಸಿತು. ಸೋಮವಾರ (Sensex) ಸೂಚ್ಯಂಕ 861 ಅಂಕ ಪತನವಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

VISTARANEWS.COM


on

bse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ (Sensex) ಮಂಗಳವಾರ ಮಧ್ಯಂತರ ವಹಿವಾಟಿನಲ್ಲಿ ೧,564 ಅಂಕಗಳ ಭಾರಿ ಜಿಗಿತ ದಾಖಲಿಸಿದೆ. ಸೋಮವಾರ ೮೬೧ ಅಂಕ ಕುಸಿದಿದ್ದ ಸೆನ್ಸೆಕ್ಸ್‌, ಮರುದಿನ ಈ ಎತ್ತರಕ್ಕೇರಿದೆ.

ಸೆನ್ಸೆಕ್ಸ್‌ ೫೯,೫೩೭ ಅಂಕಗಳಿಗೆ ದಿನದ ವಹಿವಾಟು ಮುಕ್ತಾಯಗೊಳಿಸಿದರೆ, ನಿಫ್ಟಿ ೪೪೬ ಅಂಕ ಏರಿಕೊಂಡು ೧೭,೭೫೯ಕ್ಕೆ ಸ್ಥಿರವಾಯಿತು.

ಬಿಎಸ್‌ಇನಲ್ಲಿ ನೋಂದಾಯಿತ ಎಲ್ಲ ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ೫.೭೩ ಲಕ್ಷ ಕೋಟಿ ರೂ. ಏರಿಕೆಯಾಗಿದ್ದು, ೨೭೪ ಲಕ್ಷ ಕೋಟಿ ರೂ.ಗಳಿಂದ ೨೮೦ ಲಕ್ಷ ಕೋಟಿ ರೂ.ಗೆ ವೃದ್ಧಿಸಿದೆ. ಸೆನ್ಸೆಕ್ಸ್‌ ೫೯,೫೩೭ಕ್ಕೆ ವೃದ್ಧಿಸಿದೆ. ನಿಫ್ಟಿ ೪೩೧ ಅಂಕ ಜಿಗಿದಿದ್ದು, ೧೭,೭೪೪ ಅಂಕಗಳಿಗೆ ಏರಿಕೆ ದಾಖಲಿಸಿತು.

ಬ್ಯಾಂಕಿಂಗ್‌, ಹಣಕಾಸು ಷೇರುಗಳ ದರಗಳು ಜಿಗಿಯಿತು. ರಿಲಯನ್ಸ್‌ ಇಂಡಸ್ಟ್ರೀಸ್‌, ಐಟಿಸಿ ಷೇರುಗಳ ದರ ಲಾಭ ಗಳಿಸಿತು. ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌, ಎಚ್‌ಡಿಎಫ್‌ಸಿ ಮತ್ತು ಎಸ್‌ಬಿಐ ಷೇರುಗಳು ಲಾಭ ಗಳಿಸಿದ್ದರಿಂದ ಸೆನ್ಸೆಕ್ಸ್‌ ಏರಿಕೆಗೆ ೨೫೦ಕ್ಕೂ ಹೆಚ್ಚು ಅಂಕಗಳು ಲಭಿಸಿತು.

ಸೆನ್ಸೆಕ್ಸ್‌ ಜಿಗಿತಕ್ಕೆ ಕಾರಣವೇನು?

  • ಬ್ಯಾಂಕಿಂಗ್‌ ಮತ್ತು ಹಣಕಾಸು ಸಂಸ್ಥೆಗಳ ಷೇರುಗಳ ದರ ಏರಿಕೆ
  • ಅಮೆರಿಕದ ಷೇರು ಮಾರುಕಟ್ಟೆಗಳಲ್ಲಿ ಸೂಚ್ಯಂಕಗಳ ಚೇತರಿಕೆ
  • ಕಚ್ಚಾ ತೈಲ ದರ ೧೦೨ ಡಾಲರ್‌ಗೆ ಇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

2024 Maruti Swift : ಹಲವಾರು ಆ್ಯಕ್ಸೆಸರಿ ಪ್ಯಾಕ್​ನೊಂದಿಗೆ ಬಂದಿದೆ ಮಾರುತಿ ಸ್ವಿಫ್ಟ್​​ ಎಪಿಕ್​

2024 Maruti Swift: ಹೊಸ ಸ್ವಿಫ್ಟ್‌ಗಾಗಿ ಎಪಿಕ್ ರೂಫ್ ಮತ್ತು ಬಾನೆಟ್ ಮೇಲೆ ರೇಸಿಂಗ್ ಸ್ಟ್ರೈಪ್‌ಗಳನ್ನು ಪಡೆಯುತ್ತದೆ. ಇಲ್ಲಿ ಕಾಣುವ ಬಿಳಿ ಸ್ವಿಫ್ಟ್ ಕಪ್ಪು ಪಟ್ಟಿಗಳನ್ನು ಪಡೆಯುತ್ತದೆ. ಈ ಪಟ್ಟೆಗಳು ಮುಂಭಾಗದ ಫೆಂಡರ್‌ಗಳಿಗೂ ವಿಸ್ತರಿಸುತ್ತವೆ. ಕಾರ್ ಮುಂಭಾಗದ ಗ್ರಿಲ್ ಮತ್ತು ಫಾಗ್ ಲ್ಯಾಂಪ್‌ಗಳಿಗೆ ಗ್ಲಾಸ್ ಕಪ್ಪು ಬಾಹ್ಯರೇಖೆಯನ್ನು ಪಡೆಯುತ್ತದೆ. ಫಾಗ್ ಲ್ಯಾಂಪ್‌ಗಳ ಪಕ್ಕದಲ್ಲಿ ಕ್ರೋಮ್ ಆಕ್ಸೆಂಟ್‌ಗಳಿವೆ.

VISTARANEWS.COM


on

2024 Maruti Swift
Koo

ಬೆಂಗಳೂರು: ಮಾರುತಿ ಸುಜುಕಿ ಕೆಲವು ವಾರಗಳ ಹಿಂದೆ ಭಾರತೀಯ ಮಾರುಕಟ್ಟೆ 2024ರ ಆವೃತ್ತಿಯ ಸ್ವಿಫ್ಟ್ ಕಾರನ್ನು (2024 Maruti Swift) ಬಿಡುಗಡೆ ಮಾಡಿತ್ತು. ಕಾರು ಈಗಾಗಲೇ ಡೀಲರ್‌ಶಿಪ್‌ಗಳನ್ನು ತಲುಪಿದೆ ಮತ್ತು ಡೆಲಿವರಿ ಸಹ ಪ್ರಾರಂಭವಾಗಿದೆ. ರಸ್ತೆಗೆ ಬಂದ ಕಾರುಗಳು ಆಫ್ಟರ್ ಮಾರ್ಕೆಟ್​ ಮಾಡಿಫಿಕೇಷನ್​ನೊಂದಿಗೆ ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತಿವೆ. ಮಾರುತಿ 2024 ಸ್ವಿಫ್ಟ್‌ ಲಾಂಚ್ ಮಾಡುವ ವೇಳೆ ಹಲವಾರು ಆ್ಯಕ್ಸೆಸರೀಸ್​ ಪ್ಯಾಕ್‌ಗಳನ್ನು ಬಿಡುಗಡೆ ಮಾಡಿದೆ. ಮಾರುತಿಯು ಬೇಸ್​ ವರ್ಷನ್ ಆಗಿರುವ ಎಲ್​ಎಕ್ಸ್​ಐಗೆ ಈ ಆ್ಯಕ್ಸೆಸರಿ ಪ್ಯಾಕ್ ಗಳನ್ನು ನೀಡಲಾಗಿದೆ. ಈ ಮಾದರಿನ್ನು ಎಪಿಕ್ ಎಡಿಷನ್ ಎಂದು ಕರೆಯಲಾಗಿದೆ.

ಹೊಸ ಸ್ವಿಫ್ಟ್‌ಗಾಗಿ ಎಪಿಕ್ ರೂಫ್ ಮತ್ತು ಬಾನೆಟ್ ಮೇಲೆ ರೇಸಿಂಗ್ ಸ್ಟ್ರೈಪ್‌ಗಳನ್ನು ಪಡೆಯುತ್ತದೆ. ಇಲ್ಲಿ ಕಾಣುವ ಬಿಳಿ ಸ್ವಿಫ್ಟ್ ಕಪ್ಪು ಪಟ್ಟಿಗಳನ್ನು ಪಡೆಯುತ್ತದೆ. ಈ ಪಟ್ಟೆಗಳು ಮುಂಭಾಗದ ಫೆಂಡರ್‌ಗಳಿಗೂ ವಿಸ್ತರಿಸುತ್ತವೆ. ಕಾರ್ ಮುಂಭಾಗದ ಗ್ರಿಲ್ ಮತ್ತು ಫಾಗ್ ಲ್ಯಾಂಪ್‌ಗಳಿಗೆ ಗ್ಲಾಸ್ ಕಪ್ಪು ಬಾಹ್ಯರೇಖೆಯನ್ನು ಪಡೆಯುತ್ತದೆ. ಫಾಗ್ ಲ್ಯಾಂಪ್‌ಗಳ ಪಕ್ಕದಲ್ಲಿ ಕ್ರೋಮ್ ಆಕ್ಸೆಂಟ್‌ಗಳಿವೆ. ಮುಂಭಾಗದ ಫಾಕ್ಸ್ ಸ್ಕಿಡ್ ಪ್ಲೇಟ್ ಅಥವಾ ಬಂಪರ್‌ನ ಕೆಳಗಿನ ಭಾಗದಲ್ಲಿ ನಾವು ಕ್ರೋಮ್ ಸ್ಟ್ರಿಪ್ ನೀಡಲಾಗಿದೆ.

ಸೈಡ್ ಪ್ರೊಫೈಲ್‌ನಲ್ಲಿ, 14-ಇಂಚಿನ ಸ್ಟೀಲ್ ರಿಮ್‌ಗಳಿಗಾಗಿ ಕಾರು ಬ್ಲ್ಯಾಕ್ಡ್-ಔಟ್ ವೀಲ್ ಕ್ಯಾಪ್‌ಗಳನ್ನು ಪಡೆಯುತ್ತದೆ. ಇಂಡಿಕೇಟರ್​ಗಳು ಲೋ ವೇರಿಯೆಂಟ್​ಗಳಿಗೆ ಫೆಂಡರ್‌ನಲ್ಲಿವೆ. ORVM ಗಳು ಗ್ರಾಫಿಕ್ಸ್‌ನೊಂದಿಗೆ ಮಿಂಚುವ ಕಪ್ಪು ಕವರ್‌ಗಳನ್ನು ಪಡೆಯುತ್ತವೆ. ವಿಂಡೋ ಕ್ರೋಮ್ ಅಲಂಕರಿಸಲು ಮತ್ತು ಡೋರ್ ವಿಸರ್ ಕೂಡ ನೀಡಲಾಗಿದೆ. ಕಾರು ಗ್ಲಾಸ್ ಬ್ಲ್ಯಾಕ್ ಡೋರ್ ಬೀಡಿಂಗ್ ಮತ್ತು ಕ್ರೋಮ್ ಡೋರ್ ಹ್ಯಾಂಡಲ್ ಕವರ್‌ಗಳನ್ನು ಪಡೆಯುತ್ತದೆ.

ಹಿಂಬದಿ ಹೇಗಿದೆ?

ಹಿಂಭಾಗದಲ್ಲಿ, ಫಾಗ್​​ LED ಟೈಲ್ ಲ್ಯಾಂಪ್‌ಗಳು ಯಾವುದೇ ಇತರ ಆವೃತ್ತಿಗಳಂತೆಯೇ ಇರುತ್ತವೆ. ಆದಾಗ್ಯೂ, ಕಾರು ಟೈಲ್‌ಗೇಟ್‌ನಲ್ಲಿ ಕ್ರೋಮ್ ಅಪ್ಲಿಕ್ ಅನ್ನು ಮತ್ತು ಹಿಂಭಾಗದ ಬಂಪರ್‌ನಲ್ಲಿ ಕ್ರೋಮ್ ಪಡೆಯುತ್ತದೆ. ಹಿಂಬದಿಯ ವಿಂಡ್‌ಸ್ಕ್ರೀನ್‌ನ ಕೆಳಗಿನ ಭಾಗದಲ್ಲಿ ಕ್ರೋಮ್ ನೀಡಿದ್ದಅರೆ. ಹೊಳಪುಳ್ಳ ಕಪ್ಪು ರೂರ್ಫರ್ -ಮೌಂಟೆಡ್ ಸ್ಪಾಯ್ಲರ್ ಅನ್ನು ಸಹ ಇಲ್ಲಿ ಕಾರಿನ ಮೇಲೆ ಕಾಣಬಹುದು.

ಇದನ್ನೂ ಓದಿ: 2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

ಇಂಟೀರಿಯರ್​

ಬೇಸ್​ ವೇರಿಯೆಂಟ್​ ಪಾರ್ಸೆಲ್ ಟ್ರೇನೊಂದಿಗೆ ಬರುವುದಿಲ್ಲ, ಆದರೆ ಅಗತ್ಯವಿದ್ದರೆ ಅದನ್ನು ಆ್ಯಕ್ಸೆಸರಿಯಾಗಿ ಖರೀದಿಸಬಹುದು. ಬಾಗಿಲಿನ ಮೇಲೆ ಯಾವುದೇ ವರ್ಣರಂಜಿತ ಟ್ರಿಮ್‌ಗಳು ಲಭ್ಯವಿಲ್ಲ. ಎಪಿಕ್ ಆವೃತ್ತಿಯು ವಿಂಡೋ ಶೇರ್​ ಪಡೆಯುತ್ತದೆ. ಇದನ್ನು ಹೊರತುಪಡಿಸಿ, ಕಾರು ಸ್ವಿಫ್ಟ್‌ಗೆ ಹೊಂದಿಕೆಯಾಗುವ ಸೀಟ್ ಕವರ್‌ಗಳನ್ನು ಪಡೆಯುತ್ತದೆ. ಇದಕ್ಕೆ ಆಫ್ಟರ್​ ಮಾರ್ಕೇಟ್​​ ಸೀಟ್ ಕವರ್‌ಗಳು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಏಕೆಂದರೆ ಹ್ಯಾಚ್‌ಬ್ಯಾಕ್ ಈಗ ಫ್ಯಾಕ್ಟರಿಯಿಂದಲೇ 6 ಏರ್‌ಬ್ಯಾಗ್‌ಗಳೊಂದಿಗೆ ಬರುತ್ತದೆ.

ಎಪಿಕ್ ಎಡಿಷನ್​ನಲ್ಲಿ ಸ್ಟೀರಿಂಗ್ ಕವರ್ ಇದೆ. ಮತ್ತು ಇದು 7-ಇಂಚಿನ ಬೇಸಿಕ್​ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ 4-ಸ್ಪೀಕರ್ ಸಿಸ್ಟಮ್ ಅನ್ನು ಸಹ ನೀಡುತ್ತದೆ. ಬೇಸ್​​ ವೇರಿಯೆಂಟ್​ ಯಾವುದೇ ರೀತಿಯ ಇನ್ಫೋಟೈನ್‌ಮೆಂಟ್ ಸಿಸ್ಟಮ್ ನೀಡುವುದಿಲ್ಲ. ಇದು ಪ್ಯಾಕೇಜ್‌ನ ಭಾಗವಾಗಿದೆ.

67 ಸಾವಿರ ರೂಪಾಯಿ ಹೆಚ್ಚು

ಮೇಲಿನ ಎಲ್ಲಾ ಬಿಡಿಭಾಗಗಳೊಂದಿಗೆ ಸ್ವಿಫ್ಟ್‌ನ ಬೇಸ್ ವರ್ಷನ್​ ಕಾರನ್ನು ಟಾಪ್ ವರ್ಷನ್​ ರೀತಿ ಕಾಣುವಂತೆ ಪರಿವರ್ತಿಸಬಹುದು. ಈ ಎಪಿಕ್ ಆವೃತ್ತಿಯ ಆಕ್ಸೆಸರಿ ಪ್ಯಾಕ್ ಅನ್ನು ಖರೀದಿಸಲು ಆಸಕ್ತಿ ಹೊಂದಿದ್ದರೆ, 67,000 ರೂಪಾಯಿ ಸ್ವಲ್ಪ ಹೆಚ್ಚು ಖರ್ಚು ಮಾಡಬೇಕಾಗುತ್ತದೆ.

ಹೊಸ ಪೀಳಿಗೆಯ ಸ್ವಿಫ್ಟ್ ಹೊಚ್ಚ ಹೊಸ 1.2-ಲೀಟರ್, 3-ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್​​ ಪೆಟ್ರೋಲ್ ಎಂಜಿನ್‌ನಿಂದ ಬರುತ್ತದೆ. ಅದು 82 Ps ಮತ್ತು 112 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹ್ಯಾಚ್‌ಬ್ಯಾಕ್ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ AMT ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ.

Continue Reading

ದೇಶ

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Narendra Modi: “ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂಬುದಾಗಿ ಮಣಿಶಂಕರ್‌ ಅಯ್ಯರ್‌ ನೀಡಿದ ಹೇಳಿಕೆಗೆ ನರೇಂದ್ರ ಮೋದಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪಾಕಿಸ್ತಾನ, ಜಮ್ಮು-ಕಾಶ್ಮೀರ, ಅಣುಬಾಂಬ್‌ ಸೇರಿ ಹಲವು ವಿಷಯಗಳು ಮುನ್ನೆಲೆಗೆ ಬರುತ್ತಿವೆ. ಅದರಲ್ಲೂ, “ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ. ಭಾರತವು ಪಾಕಿಸ್ತಾನಕ್ಕೆ ಗೌರವ ಕೊಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿದ ಹೇಳಿಕೆಗೆ ಖುದ್ದು ಕಾಂಗ್ರೆಸ್‌ ಅಂತರ ಕಾಯ್ದುಕೊಂಡಿದೆ. ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ನಾಯಕರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿದ್ದು, “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದಾರೆ.

ಕೆಲ ದಿನಗಳ ಹಿಂದೆಯೂ ಮಣಿಶಂಕರ್‌ ಅಯ್ಯರ್‌ ಹೇಳಿಕೆ ವಿರುದ್ಧ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂಬುದಾಗಿ ಚುನಾವಣೆ ರ‍್ಯಾಲಿಯಲ್ಲಿ ಹೇಳಿದ್ದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Continue Reading

ಪ್ರಮುಖ ಸುದ್ದಿ

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Ayodhya Ram Mandir: ಶೃಂಗೇರಿ ಹಿರಿಯ ಶ್ರೀಗಳಾದ ಜಗದ್ಗುರು ಶ್ರೀ ಭಾರತೀ ತೀರ್ಥರು ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥರು (sri vidhushekhara bharati Teertha) ಈ ಸಂದರ್ಭದಲ್ಲಿ ಹಾಜರಿದ್ದು, ಬೆಳ್ಳಿಯ ಬಿಲ್ಲು- ಬಾಣದ ಅಂದಚಂದವನ್ನು ಸವಿದರು. ನಂತರ ಅದನ್ನು ಅಯೋಧ್ಯೆಗೆ ಕೊಂಡೊಯ್ಯಲಾಯಿತು.

VISTARANEWS.COM


on

ayodhya ram mandir 1
Koo

ಚಿಕ್ಕಮಗಳೂರು: ಅಯೋಧ್ಯೆ ಶ್ರೀರಾಮ ಮಂದಿರದ (Ayodhya Ram Mandir) ಆರಾಧ್ಯ ಮೂರ್ತಿ ಬಾಲಕ ರಾಮ (Balak Ram) ನಿಗೆ ಬೆಳ್ಳಿಯ ಬಿಲ್ಲು-ಬಾಣ (Silver bow, silver Arrow) ಸಮರ್ಪಿಸಲಾಗುತ್ತಿದೆ. ಬೆಂಗಳೂರು ಮೂಲದ ಭಕ್ತರೊಬ್ಬರು ಬೆಳ್ಳಿಯ ಬಿಲ್ಲು-ಬಾಣ ಸಮರ್ಪಣೆ ಮಾಡುತ್ತಿದ್ದು, ಅದಕ್ಕೂ ಮೊದಲು ಶೃಂಗೇರಿಯ ಶಾರದಾ ಪೀಠದಲ್ಲಿ (Sringeri Sharada Peetham) ಶ್ರೀ ಗುರುಗಳ ಮುಂದೆ ಅದನ್ನು ಪ್ರದರ್ಶಿಸಿದರು.

ಅತ್ಯಂತ ಸುಂದರ ಹಾಗೂ ಮನಮೋಹಕವಾದ, ಬೆಳ್ಳಿಯಿಂದ ಮಾಡಲಾದ ಈ ಬಿಲ್ಲು-ಬಾಣವನ್ನು ಶೃಂಗೇರಿ ಹಿರಿಯ ಹಾಗೂ ಕಿರಿಯ ಶ್ರೀಗಳು ಪೂಜಿಸಿ ಕಳಿಸಿಕೊಟ್ಟರು. ಶೃಂಗೇರಿ ಹಿರಿಯ ಶ್ರೀಗಳಾದ ಜಗದ್ಗುರು ಶ್ರೀ ಭಾರತೀ ತೀರ್ಥರು ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥರು (sri vidhushekhara bharati Teertha) ಈ ಸಂದರ್ಭದಲ್ಲಿ ಹಾಜರಿದ್ದು, ಬೆಳ್ಳಿಯ ಬಿಲ್ಲು- ಬಾಣದ ಅಂದಚಂದವನ್ನು ಸವಿದರು. ನಂತರ ಅದನ್ನು ಅಯೋಧ್ಯೆಗೆ ಕೊಂಡೊಯ್ಯಲಾಯಿತು.

ರಾಮ ಮಂದಿರದ ಪ್ರತಿಷ್ಠಾಪನೆಗೆ ಶೃಂಗೇರಿ ಶ್ರೀಗಳನ್ನು ಆಹ್ವಾನಿಸಲಾಗಿತ್ತು. ಶ್ರೀಗಳು ಶುಭಹಾರೈಕೆಯ ಸಂದೇಶವನ್ನು ಕಳಿಸಿಕೊಟ್ಟಿದ್ದರಲ್ಲದೆ, ಆ ದಿನ ಮಠದಲ್ಲಿ ಹಾಗೂ ಶಾಖಾಮಠಗಳಲ್ಲಿ ಶ್ರೀರಾಮನ ಆರಾಧನೆಗೆ ನಿರ್ದೇಶನ ನೀಡಿದ್ದರು.

ಚಿನ್ನದ ಬಿಲ್ಲು ಬಾಣ

ಪ್ರಸ್ತುತ ಅಯೋಧ್ಯಾ ರಾಮನ ಕೈಯಲ್ಲಿ ಚಿನ್ನದ ಬಿಲ್ಲು ಬಾಣ ಇವೆ. ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೂ ಮುನ್ನವೇ ಹಲವು ಅಮೂಲ್ಯ ಉಡುಗೊರೆಗಳು ಅಯೋಧ್ಯೆಯನ್ನು ತಲುಪಿದ್ದವು. ದೇಶಾದ್ಯಂತ ಹಲವು ಭಕ್ತರು ಅನೇಕ ಉಡುಗೊರೆಗಳನ್ನು ಶ್ರೀರಾಮನಿಗಾಗಿ ಅಯೋಧ್ಯೆಗೆ ಕಳಿಸಿದ್ದರು. ಅತ್ತ ನೇಪಾಳದಿಂದಲೂ ಅತ್ಯಮೂಲ್ಯ ವಸ್ತುಗಳು ಅಯೋಧ್ಯೆ ಸೇರಿದ್ದವು. ಶ್ರೀರಾಮನಿಗಾಗಿ ಚಿನ್ನದ ಬಿಲ್ಲು (golden bow), ಚಿನ್ನದ ಬಾಣ (golden arrow), ಚಿನ್ನದ ಘಂಟೆ (golden bell) ಸೇರಿದಂತೆ ಹಲವು ಅಮೂಲ್ಯ ವಸ್ತುಗಳು ಬಂದಿದ್ದವು.

ಒನವಿಲ್ಲು ಸಮರ್ಪಣೆ

ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನವು (Padmanabhaswamy Temple) ಕೂಡ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ (Ayodhya Ram Mandir) ಪ್ರತಿಷ್ಠಾಪನೆ ಸಮಾರಂಭದ ಸಂದರ್ಭದಲ್ಲಿ ಸಾಂಪ್ರದಾಯಿಕ ಬಿಲ್ಲು ‘ಒನವಿಲ್ಲು’ (Onavillu) ಸಮರ್ಪಿಸಿತ್ತು. ‘ಒನವಿಲ್ಲು’ ಮೂರು ಶತಮಾನಗಳ ಹಳೆಯ ಸಂಪ್ರದಾಯದ ಭಾಗವಾಗಿ ಭಗವಾನ್ ಶ್ರೀ ಪದ್ಮನಾಭನಿಗೆ ಸಮರ್ಪಿತವಾದ ವಿಧ್ಯುಕ್ತ ಅರ್ಪಣೆಯಾಗಿದೆ. ಇಲ್ಲಿನ ಸ್ಥಳೀಯರು ಇದನ್ನು ಪ್ರತಿ ವರ್ಷ ‘ತಿರು ಓಣಂ’ ಹಬ್ಬದಂದು ಪದ್ಮನಾಭ ದೇವಸ್ಥಾನಕ್ಕೆ ಅರ್ಪಿಸುತ್ತಾರೆ. ಭಕ್ತರಿಂದ ಪವಿತ್ರವೆಂದು ಪರಿಗಣಿಸಲ್ಪಟ್ಟಿರುವ ‘ವಿಲ್ಲು’ ಸಾಮಾನ್ಯವಾಗಿ ಬಿಲ್ಲಿನ ಆಕಾರದ ಮರದ ಫಲಕವಾಗಿದ್ದು, ಅನಂತಶಯನಂ ಪೌರಾಣಿಕ ಸರ್ಪ ಅನಂತ, ದಶಾವತಾರಂ ವಿಷ್ಣುವಿನ ಅವತಾರಗಳು, ಶ್ರೀರಾಮ ಪಟ್ಟಾಭಿಷೇಕ ಮುಂತಾದ ವರ್ಣಚಿತ್ರಗಳನ್ನು ಹೊಂದಿದೆ.

ಈವರೆಗೆ ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿದವರ ಸಂಖ್ಯೆ 1.5 ಕೋಟಿ!

ಭಗವಾನ್ ಶ್ರೀರಾಮನ (sriram) ಜನ್ಮ ಸ್ಥಳವಾದ ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram mandir) ರಾಮಲಲ್ಲಾನ (ram lalla) ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಪ್ರತಿನಿತ್ಯ ಸುಮಾರು ಒಂದು ಲಕ್ಷ ಮಂದಿ ಭೇಟಿ ನೀಡುತ್ತಿದ್ದಾರೆ. ದೇವಾಲಯ ಉದ್ಘಾಟನೆಯಾದ ಬಳಿಕ ಈವರೆಗೆ ಸುಮಾರು 1.5 ಕೋಟಿ ಮಂದಿ ದೇವಸ್ಥಾನಕ್ಕೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಟ್ರಸ್ಟ್‌ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Theertha Kshetra Trust) ಪ್ರಧಾನ ಕಾರ್ಯದರ್ಶಿ (Principal Secretary) ಚಂಪತ್ ರಾಯ್‌ (Champat Rai), ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಸರಿಸುಮಾರು 1.5 ಕೋಟಿ ಜನರು ರಾಮ್ ಲಲ್ಲಾನ ದರ್ಶನ ಪಡೆದಿದ್ದಾರೆ. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಹೊಸದಾಗಿ ನಿರ್ಮಿಸಲಾದ ಭವ್ಯವಾದ ರಾಮಜನ್ಮಭೂಮಿ ದೇವಾಲಯದಲ್ಲಿ ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಚಿಸಿರುವ 51 ಇಂಚು ಎತ್ತರದ ಭಗವಾನ್ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಜನವರಿ 22ರಂದು ಎಲ್ಲಾ ಪಂಗಡಗಳಿಗೆ ಸೇರಿದ ಸುಮಾರು 8,000 ಗಣ್ಯರ ಸಮ್ಮುಖದಲ್ಲಿ ನಡುವೆ ನಡೆಯಿತು. ಪ್ರಾಣ ಪ್ರತಿಷ್ಠಾ ಸಮಾರಂಭದ ವಿಧಿವಿಧಾನಗಳ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.

ಇದನ್ನೂ ಓದಿ: Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Continue Reading

ದೇಶ

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Share Market: ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

VISTARANEWS.COM


on

Share Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Share Market) ಗುರುವಾರ (ಮೇ 23) ಹೂಡಿಕೆದಾರರಿಗೆ ಭಾರಿ ಲಾಭವಾಗಿದೆ. ನಿಫ್ಟಿ (Nifty) 303 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 22,900 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿ 986 ಅಂಕಗಳ ಏರಿಕೆಯೊಂದಿಗೆ 75,206 ಪಾಯಿಂಟ್ಸ್‌ ತಲುಪುವ ಮೂಲಕ ದಾಖಲೆ ಸೃಷ್ಟಿಸಿತು. ಸೆನ್ಸೆಕ್ಸ್‌ (Sensex) ಶೇ.1.33ರಷ್ಟು ಏರಿಕೆಯಾದರೆ, ನಿಫ್ಟಿ ಕೂಡ ಶೇ.1.33ರಷ್ಟು ಏರಿಕೆಯಾಯಿತು. ನಿಫ್ಟಿ ಮಿಡ್‌ಕ್ಯಾಪ್‌ ಇಂಡೆಕ್ಸ್‌ ಕೂಡ 238 ಪಾಯಿಂಟ್‌ಗಳ ಏರಿಕೆಯೊಂದಿಗೆ 52,405 ಪಾಯಿಂಟ್ಸ್‌ ತಲುಪಿದರೆ, ನಿಫ್ಟಿಯ ಸ್ಮಾಲ್‌ಕ್ಯಾಪ್‌ ಕೂಡ 27 ಅಂಕಗಳ ಏರಿಕೆಯೊಂದಿಗೆ 16,909 ಪಾಯಿಂಟ್ಸ್‌ ತಲುಪಿತು.

ಆಟೋಮೊಬೈಲ್‌, ಐಟಿ, ಪಿಎಸ್‌ಯು (ಸಾರ್ವಜನಿಕ ವಲಯದ ಬ್ಯಾಂಕ್‌ಗಳು), ಖಾಸಗಿ ಬ್ಯಾಂಕ್‌ಗಳು ಹಾಗೂ ಮೂಲ ಸೌಕರ್ಯ ಕ್ಷೇತ್ರದ ಕಂಪನಿಗಳು ಲಾಭ ಗಳಿಸಿದವು. ಫಾರ್ಮಾ, ಎಫ್‌ಎಂಸಿಜಿ, ಇಂಧನ ಕ್ಷೇತ್ರದ ಕಂಪನಿಗಳು ನಷ್ಟ ಅನುಭವಿಸಿವೆ. ಆಕ್ಸಿಸ್‌ ಬ್ಯಾಂಕ್‌, ಎಲ್‌&ಟಿ, ಮಾರುತಿ ಸುಜುಕಿ, ಇಂಡಸ್‌ಐಎನ್‌ಡಿ ಬ್ಯಾಂಕ್‌, ಇನ್ಫೋಸಿಸ್‌, ಬಜಾಜ್‌, ಎಸ್‌ಬಿಐ, ಟೈಟಾನ್‌, ಐಸಿಐಸಿಐ ಬ್ಯಾಂಕ್‌ಗಳು ಲಾಭ ಗಳಿಸಿದ ಪ್ರಮುಖ ಕಂಪನಿಗಳಾಗಿವೆ.

ಇನ್ನು ಸನ್‌ ಫಾರ್ಮಾ, ಪವರ್‌ ಗ್ರಿಡ್‌, ಎನ್‌ಟಿಪಿಸಿ, ಜೆಎಸ್‌ಡಬ್ಲ್ಯೂ ಸ್ಟೀಲ್‌, ಐಟಿಸಿ, ಟಾಟಾ ಸ್ಟೀಲ್‌ ನಷ್ಟ ಹೊಂದಿದವು. ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading
Advertisement
2024 Maruti Swift
ಆಟೋಮೊಬೈಲ್1 second ago

2024 Maruti Swift : ಹಲವಾರು ಆ್ಯಕ್ಸೆಸರಿ ಪ್ಯಾಕ್​ನೊಂದಿಗೆ ಬಂದಿದೆ ಮಾರುತಿ ಸ್ವಿಫ್ಟ್​​ ಎಪಿಕ್​

West Bengal Violence
ದೇಶ18 mins ago

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

Narendra Modi
ದೇಶ32 mins ago

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Money Guide
ಮನಿ-ಗೈಡ್35 mins ago

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

T20 World Cup 2024
ಕ್ರೀಡೆ49 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

ayodhya ram mandir 1
ಪ್ರಮುಖ ಸುದ್ದಿ51 mins ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ53 mins ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Share Market
ದೇಶ1 hour ago

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Viral Video
ವೈರಲ್ ನ್ಯೂಸ್1 hour ago

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Crime News
ದೇಶ2 hours ago

ಕುಡಿದು ಕಾರು ಓಡಿಸಿ ಇಬ್ಬರ ಕೊಂದ ಬಾಲಕನಿಗೆ ರಿಮಾಂಡ್ ಹೋಮ್‌ನಲ್ಲಿ ಏನೆಲ್ಲ ಸವಲತ್ತಿದೆ ನೋಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ12 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌