Mikhail Gorbachev | ಆಧುನಿಕ ರಷ್ಯದ ನಿರ್ಮಾತೃ ಮಿಖಾಯಿಲ್‌ ಗೊರ್ಬಚೆವ್ ನಿಧನ - Vistara News

ಪ್ರಮುಖ ಸುದ್ದಿ

Mikhail Gorbachev | ಆಧುನಿಕ ರಷ್ಯದ ನಿರ್ಮಾತೃ ಮಿಖಾಯಿಲ್‌ ಗೊರ್ಬಚೆವ್ ನಿಧನ

ರಷ್ಯಾದ ಮಹಾ ನಾಯಕ, ಆಧುನಿಕ ರಷ್ಯದ ನಿರ್ಮಾತೃ, ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮಿಖಾಯಿಲ್‌ ಗೊರ್ಬಚೆವ್ (Mikhail Gorbachev) ಅವರು ನಿಧನರಾಗಿದ್ದಾರೆ.

VISTARANEWS.COM


on

Mikhail Gorbachev
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಸ್ಕೋ: ಆಧುನಿಕ ರಷ್ಯದ ರೂವಾರಿ, ದೇಶದ ಆರ್ಥಿಕ ಮುನ್ನಡೆಯ ಸ್ಫೂರ್ತಿಶಕ್ತಿಯಾಗಿದ್ದ ಮಾಜಿ ಅಧ್ಯಕ್ಷ ಮಿಖಾಯಿಲ್‌ ಗೊರ್ಬಚೆವ್ ಅವರು ತೀರಿಕೊಂಡಿದ್ದಾರೆ.

ಮಿಖಾಯಿಲ್‌ ಗೊರ್ಬಚೆವ್ ಅವರಿಗೆ 91 ವರ್ಷ ವಯಸ್ಸಾಗಿತ್ತು. ಮಾಸ್ಕೋದ ಆಸ್ಪತ್ರೆಯಲ್ಲಿ ಸುದೀರ್ಘಕಾಲದ ಗಂಭೀರ ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

1985- 1991ರ ನಡುವೆ ಅಧಿಕಾರದಲ್ಲಿದ್ದ ಗೊರ್ಬಚೆವ್, 20ನೇ ಶತಮಾನದ ಪ್ರಭಾವಿ ಜಾಗತಿಕ ಮಹಾ ನಾಯಕರಲ್ಲಿ ಒಬ್ಬರೆನಿಸಿದ್ದಾರೆ. ಸೋವಿಯತ್‌ ರಷ್ಯಾ ಒಕ್ಕೂಟ ಪತನಗೊಂಡು, ಹಲವಾರು ಸ್ವಾಯತ್ತ ದೇಶಗಳು ರೂಪುಗೊಳ್ಳಲು ಅವರು ಕಾರಣರಾಗಿದ್ದರು. ಅಮೆರಿಕ ಜೊತೆಗಿನ ದಶಕಗಳ ಶೀತಲ ಸಮರಕ್ಕೆ ಅಂತ್ಯ ಹಾಡಿದ್ದು, ಗ್ಲಾಸನೋಸ್ತ್-‌ ಪೆರೆಸ್ತ್ರೋಯ್ಕಾ ಹೆಸರಿನ ನೂತನ ಆರ್ಥಿಕ ನೀತಿಗಳ ಆಗಮನ- ಮುಂತಾದ ಕ್ರಾಂತಿಕಾರಿ ಘಟನೆಗಳ ರೂವಾರಿ ಎನಿಸಿದ್ದಾರೆ. ಅವರಿಗೆ 1990ರ ನೊಬೆಲ್‌ ಶಾಂತಿ ಪುರಸ್ಕಾರ ಸಹ ಸಂದಿದೆ.

ಇತ್ತೀಚೆಗೆ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರಿಗೆ ಅಪ್ರಿಯವೆನಿಸುವ ರೀತಿಯಲ್ಲಿ ಅವರು ಮಾತನಾಡುತ್ತಿದ್ದರೂ, ಗೊರ್ಬಚೆವ್ ನಿಧನಕ್ಕೆ ಪುಟಿನ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಫ್ಯಾನ್ಸ್‌ ಅಧ್ಯಕ್ಷ ಇಮಾನ್ಯುಯೆಲ್‌ ಮ್ಯಾಕ್ರಾನ್‌, ವಿಶ್ವಸಂಸ್ಥೆ ಕಾರ್ಯದರ್ಶಿ ಗುಟೆರ್ರಸ್‌, ಬ್ರಿಟನ್‌ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | ಹೆಚ್ಚೆಂದರೆ 3 ವರ್ಷ ಬದುಕಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್‌, ದೃಷ್ಟಿಯೂ ಹೋಗಿದೆ: ಗುಪ್ತಚರ ದಳದ ವರದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Prajwal Revanna Case: ಪ್ರಜ್ವಲ್‌ ರೇವಣ್ಣಗೆ 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ (Prajwal Revanna Case) ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ, ಹೀಗಾಗಿ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ.

ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದೆ ನ್ಯಾಯಾಧೀಶರು ಆರೋಪಿಗೆ 14 ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ವಿಚಾರಣೆ ವೇಳೆ ಪೊಲೀಸರಿಂದ ತೊಂದರೆ ಆಯ್ತಾ ಎಂದು ಪ್ರಜ್ವಲ್‌ಗೆ ಜಡ್ಜ್ ಪ್ರಶ್ನೆ ಕೇಳಿದ್ದು, ಇದಕ್ಕೆ ಏನೂ ತೊಂದರೆ ಆಗಿಲ್ಲ ಸ್ವಾಮಿ ಎಂದು ಉತ್ತರಿಸಿದ್ದಾರೆ. ನಂತರ ಎಸ್ಐಟಿಯಿಂದ ಮೆಡಿಕಲ್‌ ಟೆಸ್ಟ್ ಹಾಗೂ ಇನ್ನಿತರ ಮಾಹಿತಿ ಪಡೆದು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಇದನ್ನೂ ಓದಿ | ಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣು

ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ!

bhavani revanna prajwal revanna case

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಎಸ್‌ಐಟಿಯಿಂದ (SIT) ತನಿಖೆಗೆ ಒಳಗಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಮನೆಯನ್ನು ಇಂದು ಮತ್ತೊಮ್ಮೆ ಮಹಜರು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ತಾಯಿ ಭವಾನಿ ರೇವಣ್ಣ (Bhavani Revanna) ಅದೇ ಮನೆಯಲ್ಲೇ ಇದ್ದರೂ ಮಗನಿಗೆ ಮುಖಾಮುಖಿ ಆಗಲಿಲ್ಲ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ಇಂದು ಮಹಜರ್‌ಗೆ ಕರೆದೊಯ್ದರು. ಇಂದು ಪ್ರಜ್ವಲ್‌ನನ್ನು ನ್ಯಾಯಾಲಯಕ್ಕೆ ಹಾಜರು ಮಾಡುವ ಮುನ್ನ ಬೆಂಗಳೂರಿನ ಬಸವನಗುಡಿಯ ನಿವಾಸದಲ್ಲಿ ಮಹಜರ್ ಪ್ರಕ್ರಿಯೆ ನಡೆಸಿದರು. ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅಸೌಖ್ಯದ ಕಾರಣ ಹೇಳಿ ಮನೆಯಲ್ಲೇ ಇದ್ದರು. ಆದರೆ ಪ್ರಜ್ವಲ್‌ಗೆ ಮುಖಾಮುಖಿಯಾಗಲಿಲ್ಲ.

ಈ ಮುನ್ನವೇ ಸ್ಥಳ ಮಹಜರು ಮಾಡುವ ವೇಳೆ ಅಡ್ಡಿಪಡಿಸದಂತೆ ಭವಾನಿ ಅವರಿಗೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಭವಾನಿ ಅವರು ಕೂಡ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಕೇಸ್‌ನಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗುತ್ತಿದ್ದಾರೆ. ಕೋರ್ಟ್‌ ಭವಾನಿಗೆ ಮಧ್ಯಂತರ ಜಾಮೀನು ನೀಡಿದ್ದು, ಸಂಜೆಯ ಒಳಗೆ ತನಿಖೆ ಮುಗಿಸಿ ಕಳಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದೆ.

ಪ್ರಜ್ವಲ್‌ ಮನೆಯಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳಕ್ಕೆ ಒಳಪಡಿಸಲಾಗಿದೆ ಎಂದು ಸಂತ್ರಸ್ತೆ ತೋರಿಸಿದ ಕೊಠಡಿ ಮಹಜರು ಮಾಡಲಾಗಿದೆ. ಈ ಸಂದರ್ಭದಲ್ಲಿ ಭವಾನಿ ಅವರು ತುಳಸಿ ಕಟ್ಟೆಗೆ ಪೂಜೆ ಮಾಡುತ್ತಿರುವುದು ಕಂಡುಬಂತು. ಕೈಯಲ್ಲಿ ಊರುಗೋಲು ಹಿಡಿದುಕೊಂಡು ಬಂದ ಭವಾನಿ ರೇವಣ್ಣ, ಮೊದಲ ಮಹಡಿಯಲ್ಲಿರುವ ತುಳಸಿ‌ಕಟ್ಟೆಗೆ ಪೂಜೆ ಸಲ್ಲಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ವಾಕಿಂಗ್ ಸ್ಟಿಕ್ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೋದಲ್ಲಿ ತಾನಿರುವುದನ್ನು ಪ್ರಜ್ವಲ್‌ ಒಪ್ಪಿಕೊಂಡಿಲ್ಲ. ಹೀಗಾಗಿ, ಅಶ್ಲೀಲ ವಿಡಿಯೋದಲ್ಲಿ ಕಾಣಿಸುವ ಜಾಗಕ್ಕೂ ಬಸವನಗುಡಿ ಮನೆಯ ಕೋಣೆಗೂ ತಾಳೆ ಆಗ್ತಿದೆಯಾ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಎಲ್ಲೂ ಪ್ರಜ್ವಲ್ ಮುಖ ಕಾಣಿಸುತ್ತಿಲ್ಲ. ಹಾಗಾಗಿ ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಆಗಿ ಅಧಿಕಾರಿಗಳು ಪರಿಗಣಿಸಲಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ ಮಾಡಿರುವ ಜಾಗ ಹಾಗೂ ಅಶ್ಲೀಲ ವಿಡಿಯೋದಲ್ಲಿರುವ ಜಾಗಗಳು ಮ್ಯಾಚ್‌ ಆದರೆ ಪ್ರಜ್ವಲ್‌ ಲಾಕ್‌ ಆದಂತೆಯೇ.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

Continue Reading

ಸಿನಿಮಾ

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Noor Malabika Das: ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲೂ ಅವರು ಸಕ್ರಿಯರಾಗಿದ್ದರು. ಆದರೆ, ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

VISTARANEWS.COM


on

Noor Malabika Das
Koo

ಮುಂಬೈ: ಬಾಲಿವುಡ್‌ ನಟಿ ಕಾಜೋಲ್‌ ಅಭಿನಯದ ದಿ ಟ್ರಯಲ್‌ (The Trial) ವೆಬ್‌ ಸಿರೀಸ್‌ ಖ್ಯಾತಿ ನಟಿ ನೂರ್‌ ಮಾಳವಿಕಾ ದಾಸ್‌ (Noor Malabika Das) ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಲೋಖಂಡ್‌ವಾಲಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 32 ವರ್ಷದ ಬಾಲಿವುಡ್‌ ನಟಿಯು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್‌ 6ರಂದೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜೂನ್‌ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ ಹಾಗೂ ಅಕ್ಕಪಕ್ಕದ ಮನೆಯವರಿಗೂ ವಿಷಯ ಗೊತ್ತಾಗಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡುಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಫ್ಲ್ಯಾಟ್‌ ಬಾಗಿಲು ತೆಗೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಅಂಧೇರಿಯ ಓಶ್ವಿವಾರ ಪ್ರದೇಶದಲ್ಲಿರುವ ಫ್ಲ್ಯಾಟ್‌ನಲ್ಲಿ ನಟಿಯು ವಾಸವಿದ್ದರು.

ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅದರಲ್ಲೂ, ದಿ ಟ್ರಯಲ್‌ ವೆಬ್‌ಸಿರೀಸ್‌ ಅವರಿಗೆ ಹೆಚ್ಚು ಹೆಸರು ತಂದುಕೊಂಡಿತ್ತು. ಕಾಜೋಲ್‌ ಜತೆ ಅವರು ತೆರೆ ಹಂಚಿಕೊಂಡಿದ್ದರು. ಅವರು ನಟಿಸಿದ ಕೆಲ ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ ಎಂದು ತಿಳಿದುಬಂದಿದೆ.

ಅಸ್ಸಾಂ ಮೂಲದವರಾದ ನೂರ್‌ ಮಾಳವಿಕಾ ದಾಸ್‌ ಅವರು ನಟನೆಗೆ ಕಾಲಿಡುವ ಮೊದಲು ಕತಾರ್‌ ಏರ್‌ವೇಸ್‌ನಲ್ಲಿ ಗಗನಸಖಿಯಾಗಿದ್ದರು. ಇನ್‌ಸ್ಟಾಗ್ರಾಂನಲ್ಲಿ 1.63 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ನಟಿಯು ಆಗಾಗ ಫೋಟೊ ಹಾಗೂ ವಿಡಿಯೊಗಳನ್ನು ಪೋಸ್ಟ್‌ ಮಾಡುತ್ತ ಸಕ್ರಿಯರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಟಿಯು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಕೂಡ ಮಾಡಿದ್ದರು. ಇಷ್ಟೆಲ್ಲ ಸಕ್ರಿಯರಾಗಿದ್ದ ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಇದನ್ನೂ ಓದಿ: ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Continue Reading

ಪ್ರಮುಖ ಸುದ್ದಿ

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Narendra Modi 3.0 : ಚುನಾವಣೆಯಲ್ಲಿ ಅವರು ಮತ್ತೊಂದು ಬಾರಿ ಆರಿಸಿ ಬರದಿರಲಿ ಎಂದು ಆಶಿಸಿದ್ದರು. ಅದರೆ, ಪಾಕ್​ನ ಲೆಕ್ಕಾಚಾರ ಉಲ್ಟಾ ಆಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೀಗ ಶುಭಾಶಯ ಹೇಳದೆ ವಿಧಿಯಿಲ್ಲ. ಹೀಗಾಗಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಭಿನಂದನೆ ಸಲ್ಲಿಸಿದ್ದಾರೆ

VISTARANEWS.COM


on

Narendra Modi 3.20
Koo

ಬೆಂಗಳೂರು: ನರೇಂದ್ರ ಮೋದಿ ಮತ್ತೊಂದು ಅವಧಿಗೆ ಭಾರತದ ಪ್ರಧಾನಿಯಾಗುವುದು (Narendra Modi 3.0) ಪಾಕಿಸ್ತಾನದ ಸರ್ಕಾರಕ್ಕೆ ಇಷ್ಟವಿರಲಿಲ್ಲ. ಹಿಂದೂಸ್ತಾನದಲ್ಲೀಗ ಮೋದಿ ಯುಗ, ‘ಮೋದಿಯ ಭಾರತ’ ಎಂದು ಆಗಾಗ ಕರೆಯುತ್ತಿದ್ದರು. ಚುನಾವಣೆಯಲ್ಲಿ ಅವರು ಮತ್ತೊಂದು ಬಾರಿ ಆರಿಸಿ ಬರದಿರಲಿ ಎಂದು ಆಶಿಸಿದ್ದರು. ಅದರೆ, ಪಾಕ್​ನ ಲೆಕ್ಕಾಚಾರ ಉಲ್ಟಾ ಆಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೀಗ ಶುಭಾಶಯ ಹೇಳದೆ ವಿಧಿಯಿಲ್ಲ. ಹೀಗಾಗಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಭಿನಂದನೆ ಸಲ್ಲಿಸಿದ್ದಾರೆ. “ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ @narendramodi ಅವರಿಗೆ ಅಭಿನಂದನೆಗಳು” ಎಂದು ಷರೀಫ್ ಎಕ್ಸ್​ ಪೋಸ್ಟ್​ ಮಾಡಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಅವರು ಶನಿವಾರ ಪ್ರಧಾನಿ ಮೋದಿಯವರನ್ನು ಅಭಿನಂದಿಸುವ ಬಗ್ಗೆ ಕೇಳಿದಾಗ, “ಅವರ ಚುನಾವಣಾ ಪ್ರಕ್ರಿಯೆಯ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಗಳನ್ನು ಹೊಂದಿಲ್ಲ” ಎಂದು ಹೇಳಿದ್ದರು. ಹೊಸ ಭಾರತ ಸರ್ಕಾರ ಅಧಿಕೃತವಾಗಿ ಪ್ರಮಾಣವಚನದ ಪ್ರಕಟಣೆ ಹೊರಡಿಸದ ಕಾರಣ, ಅಭಿನಂದನಾ ಸಂದೇಶಗಳನ್ನು ಚರ್ಚಿಸಲು ಕಾಲ ಪಕ್ವವಾಗಿಲ್ಲ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ, ಲೋಕಸಭೆ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆಲ್ಲುವ ಮೂಲಕ ನಿರ್ಣಾಯಕ ಗೆಲುವು ಸಾಧಿಸಿದೆ.

“ಪಾಕಿಸ್ತಾನವು ಯಾವಾಗಲೂ ಭಾರತ ಸೇರಿದಂತೆ ತನ್ನ ಎಲ್ಲಾ ನೆರೆಹೊರೆಯವರೊಂದಿಗೆ ಸಹಕಾರ ಸಂಬಂಧವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪ್ರಮುಖ ವಿವಾದ ಸೇರಿದಂತೆ ಬಾಕಿ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ರಚನಾತ್ಮಕ ಮಾತುಕತೆ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ನಾವು ನಿರಂತರವಾಗಿ ಪ್ರತಿಪಾದಿಸಿದ್ದೇವೆ” ಎಂದು ಬಲೂಚ್ ಹೇಳಿದ್ದರು.

ಇದನ್ನೂ ಓದಿ: Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಬಯಸುವುದಾಗಿ ಭಾರತ ಸಮರ್ಥಿಸಿಕೊಂಡಿದೆ, ಇಸ್ಲಾಮಾಬಾದ್ ಮೊದಲು ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣವನ್ನು ಸೃಷ್ಟಿಸಬೇಕು ಎಂದು ಒತ್ತಿಹೇಳಿದೆ.

Continue Reading

ಕರ್ನಾಟಕ

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Election Results 2024: ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಕಾರಣಗಳನ್ನು ತಿಳಿಯಲು ಎಐಸಿಸಿಯಿಂದ ಪರಾಮರ್ಶೆ ಸಮಿತಿ ರಚನೆ‌ ಮಾಡಲಾಗಿದೆ. ಇದರಿಂದ ಲೀಡ್ ಕಡಿಮೆ ಆಗಿರುವ ಕ್ಷೇತ್ರಗಳ ಸಚಿವರಿಗೆ ಢವ ಢವ ಶುರುವಾಗಿದೆ. ಪರಾಮರ್ಶೆ ಬಳಿಕ ಹಲವರ ಸಚಿವ ಸ್ಥಾನಕ್ಕೆ ಕುತ್ತು ಬರುವ ಆತಂಕ ಎದುರಾಗಿದೆ.

VISTARANEWS.COM


on

Election Results 2024
Koo

ಬೆಂಗಳೂರು: ರಾಜ್ಯದ ಲೋಕಸಭಾ ಚುನಾವಣೆಯಲ್ಲಿ (Lok sabha Election 2024) ಟಾರ್ಗೆಟ್ 20 ರೀಚ್ ಆಗದೆ ಪಕ್ಷಕ್ಕೆ ಹಿನ್ನಡೆ ಆಗಿರುವುದನ್ನು ಕಾಂಗ್ರೆಸ್‌ ಹೈಕಮಾಂಡ್ ಗಂಭೀರವಾಗಿ ತೆಗೆದುಕೊಂಡಿದೆ. ಗ್ಯಾರಂಟಿ ಕೊಟ್ಟರೂ ನಿರೀಕ್ಷಿತ ಗುರಿ ಮುಟ್ಟಲು ವಿಫಲವಾದ ಹಿನ್ನೆಲೆಯಲ್ಲಿ ಪರಾಮರ್ಶೆ ಸಮಿತಿ ರಚನೆಗೆ ಎಐಸಿಸಿ ನಿರ್ಧಾರ ಮಾಡಿದೆ. ಸಮಿತಿಯು ಎಐಸಿಸಿ ಹಾಗೂ ರಾಜ್ಯದ ಹಿರಿಯ ನಾಯಕರನ್ನು ಒಳಗೊಳ್ಳಲಿದ್ದು, ಪ್ರತಿ ವಿಧಾನಸಭಾವಾರು ಮತ ಪ್ರಮಾಣ ಕಲೆ ಹಾಕಲು ಪ್ಲ್ಯಾನ್ ಮಾಡಲಾಗಿದೆ. ಚುನಾವಣೆಯಲ್ಲಿ (Election Results 2024) ಯಾಕೆ ಲೀಡ್ ಕಡಿಮೆ ಆಯಿತು ಎಂಬ ಮಾಹಿತಿ ಸಂಗ್ರಹಿಸಿ ಎಐಸಿಸಿಗೆ ಸಮಿತಿಯು ವರದಿ ಸಲ್ಲಿಕೆ ಮಾಡಲಿದೆ.

ಎಐಸಿಸಿಯಿಂದ ಪರಾಮರ್ಶೆ ಸಮಿತಿ ರಚನೆ‌ ಬೆನ್ನಲ್ಲೇ ಲೀಡ್ ಕಡಿಮೆ ಆಗಿರುವ ಕ್ಷೇತ್ರಗಳ ಸಚಿವರಿಗೆ ಢವ ಢವ ಶುರುವಾಗಿದೆ. ಪರಾಮರ್ಶೆ ಬಳಿಕ ಸಚಿವ ಸ್ಥಾನಕ್ಕೆ ಕುತ್ತು ಬರುವ ಆತಂಕ ಎದುರಾಗಿದೆ. ಹೀಗಾಗಿ ಆತಂಕದಿಂದ ಕೆಲ ಸಚಿವರು ಒಂದಷ್ಟು ಸೇಫ್ ಗೇಮ್ ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ | Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

ಸಚಿವರ ಸೇಫ್ ಗೇಮ್ ಪ್ಲ್ಯಾನ್ ಏನು?

ಚುನಾವಣೆಯಲ್ಲಿ ಪಕ್ಷ ಯಾಕೆ ಸೋತಿದೆ ಎಂಬ ಬಗ್ಗೆ ವಿವರಣೆ ನೀಡಲು ಸಚಿವರು ಕೆಲ ಅಂಶಗಳನ್ನು ಹೈಕಮಾಂಡ್‌ ಮುಂದಿಡಲು ಚಿಂತನೆ ನಡೆಸಿದ್ದಾರೆ. ಈ ಮೂಲಕ ಹೈ ಕಮಾಂಡ್‌ ಕೋಪಕ್ಕೆ ಗುರಿಯಾಗದೇ ಸೇಫ್‌ ಆಗಲು ಪ್ಲ್ಯಾನ್‌ ಮಾಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ…

  • ಸಮುದಾಯವಾರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿಲ್ಲ
  • ಎಸ್ಸಿ, ಎಸ್ಟಿ, ಲಿಂಗಾಯತ, ಮುಸ್ಲಿಂ ಸಮುದಾಯಕ್ಕೆ ಡಿಸಿಎಂ ಹುದ್ದೆಗೆ ಬೇಡಿಕೆ
  • ಡಿಸಿಎಂ ಹುದ್ದೆ ನೀಡಿದ್ದರೆ ಪಕ್ಷಕ್ಕೆ ಅನುಕೂಲ ಆಗುತ್ತಿತ್ತು
  • ಈ ಚುನಾವಣೆಯಲ್ಲಿ ಅಹಿಂದ ಮತ ಬ್ಯಾಂಕ್ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದೆ
  • ಒಕ್ಕಲಿಗ- ಲಿಂಗಾಯತ ಸಮುದಾಯ ಮೈತ್ರಿಕೂಟ ಜೊತೆ ಹೋಗಿದೆ
  • ಸಮುದಾಯವಾರು ಡಿಸಿಎಂ ಹುದ್ದೆ ಕೊಟ್ಟಿದ್ದರೆ ಲಾಭ ಆಗುತ್ತಿತ್ತು
  • ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ ಬೆಂಬಲ ಸಿಕ್ಕಿಲ್ಲ
  • ಗ್ಯಾರಂಟಿಗಳ ಪ್ರಚಾರ ಎಫೆಕ್ಟಿವ್ ಆಗಿ ಆಗಿಲ್ಲ
  • ಜೆಡಿಎಸ್- ಬಿಜೆಪಿ ಮೈತ್ರಿಕೂಟ ಸರಿ ಸುಮಾರು 10 ಕ್ಷೇತ್ರಗಳಲ್ಲಿ ಆಗಿದೆ

ಯಾವ ಸಚಿವರ ಮೇಲೆ ಪರಾಮರ್ಶೆ ತೂಗುಗತ್ತಿ

ಬೆಂಗಳೂರು ಸೆಂಟ್ರಲ್ ಕ್ಷೇತ್ರ

ಸಚಿವ ದಿನೇಶ್ ಗುಂಡೂರಾವ್ – ಗಾಂಧಿನಗರ ಕ್ಷೇತ್ರ
ಪಿ.ಸಿ ಮೋಹನ್, ಬಿಜೆಪಿ – 74,447
ಮನ್ಸೂರ್ ಖಾನ್, ಕಾಂಗ್ರೆಸ್ – 51,123
ಬಿಜೆಪಿ ಲೀಡ್ – 23,324

ಕೋಲಾರ ಲೋಕಸಭಾ ಕ್ಷೇತ್ರ

ಸಚಿವ ಎಂಸಿ ಸುಧಾಕರ್ – ಚಿಂತಾಮಣಿ ಕ್ಷೇತ್ರ
ಕೆ.ವಿ. ಗೌತಮ್, ಕಾಂಗ್ರೆಸ್ – 82,206
ಮಲ್ಲೇಶ್ ಬಾಬು, ಜೆಡಿಎಸ್ – 89,456
ಜೆಡಿಎಸ್ ಲೀಡ್ – 7,250

ಶಿವಮೊಗ್ಗ ಲೋಕಸಭಾ ಕ್ಷೇತ್ರ

ಸಚಿವ ಮಧು ಬಂಗಾರಪ್ಪ – ಸೊರಬ ಕ್ಷೇತ್ರ
ಗೀತಾ ಶಿವರಾಜ್ ಕುಮಾರ್ – 70233
ಬಿವೈ ರಾಘವೇಂದ್ರ – 88170
ಬಿಜೆಪಿ ಲೀಡ್ – 17937

ಬೆಂಗಳೂರು ದಕ್ಷಿ‌ಣ ಲೋಕಸಭಾ ಕ್ಷೇತ್ರ

ಸಚಿವ ರಾಮಲಿಂಗಾರೆಡ್ಡಿ – ಬಿಟಿಎಂ ಲೇಔಟ್ ಕ್ಷೇತ್ರ
ತೇಜಸ್ವಿ ಸೂರ್ಯ, ಬಿಜೆಪಿ – 72,541
ಸೌಮ್ಯ ರೆಡ್ಡಿ, ಕಾಂಗ್ರೆಸ್ – 63,192
ಬಿಜೆಪಿ ಲೀಡ್ -‌ 9,349

ಧಾರವಾಡ ಲೋಕಸಭಾ ಕ್ಷೇತ್ರ

ಸಚಿವ ಸಂತೋಷ್ ಲಾಡ್ – ಕಲಘಟಗಿ ಕ್ಷೇತ್ರ
ಪ್ರಹ್ಲಾದ್ ಜೋಶಿ, ಬಿಜೆಪಿ – 96,402
ವಿನೋದ್ ಅಸೂಟಿ, ಕಾಂಗ್ರೆಸ್ – 63,665
ಬಿಜೆಪಿ ಲೀಡ್ – 32,737

ತುಮಕೂರು ಲೋಕಸಭಾ ಕ್ಷೇತ್ರ

ಸಚಿವ ಡಾ.‌ಜಿ ಪರಮೇಶ್ವರ್ – ಕೊರಟಗೆರೆ ಕ್ಷೇತ್ರ
ವಿ. ಸೋಮಣ್ಣ, ಬಿಜೆಪಿ – 93,446
ಮುದ್ದಹನುಮೇಗೌಡ – 67,905
ಬಿಜೆಪಿ ಲೀಡ್ – 25,541

ಸಚಿವ ಕೆ.ಎನ್ ರಾಜಣ್ಣ – ಮಧುಗಿರಿ ಕ್ಷೇತ್ರ

ವಿ. ಸೋಮಣ್ಣ, ಬಿಜೆಪಿ -77,494
ಮುದ್ದಹನುಮೇಗೌಡ – 66,692
ಬಿಜೆಪಿ ಲೀಡ್ – 12,802

ಮಂಡ್ಯ ಲೋಕಸಭಾ ಕ್ಷೇತ್ರ

ಸಚಿವ ಚೆಲುವರಾಯಸ್ವಾಮಿ – ನಾಗಮಂಗಲ ಕ್ಷೇತ್ರ
ಕುಮಾರಸ್ವಾಮಿ, ಜೆಡಿಎಸ್ -1,13,087
ಸ್ಟಾರ್ ಚಂದ್ರು, ಕಾಂಗ್ರೆಸ್ – 66,576
ಜೆಡಿಎಸ್ ಲೀಡ್ – 46,511

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

ಸಚಿವ ಮಂಕಾಳ ವೈದ್ಯ – ಭಟ್ಕಳ ಕ್ಷೇತ್ರ
ವಿಶ್ವೇಶ್ವರ ಹೆಗಡೆ ಕಾಗೇರಿ – 1,00,288
ಅಂಜಲಿ ನಿಂಬಾಳ್ಕರ್, ಕಾಂಗ್ರೆಸ್ – 67,885
ಬಿಜೆಪಿ ಲೀಡ್ – 32,343

ಬೆಳಗಾವಿ ಲೋಕಸಭಾ ಕ್ಷೇತ್ರ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – ಬೆಳಗಾವಿ ಗ್ರಾಮೀಣ ಕ್ಷೇತ್ರ
ಜಗದೀಶ ಶೆಟ್ಟರ್ – 1,24,970
ಮೃಣಾಲ್ ಹೆಬ್ಬಾಳ್ಕರ್‌ – 74,441
ಬಿಜೆಪಿ ಲೀಡ್ – 50,529

ವಿಜಯಪುರ ಲೋಕಸಭಾ ಕ್ಷೇತ್ರ

ಸಚಿವ ಶಿವಾನಂದ ಪಾಟೀಲ್‌ – ಬಸವನ ಬಾಗೇವಾಡಿ ಕ್ಷೇತ್ರ
ರಮೇಶ ಜಿಗಜಿಣಗಿ,ಬಿಜೆಪಿ – 83916
ರಾಜು ಆಲಗೂರ, ಕಾಂಗ್ರೆಸ್ – 66363
ಬಿಜೆಪಿ ಲೀಡ್ – 17553

ಸಚಿವ ಎಂ.ಬಿ. ಪಾಟೀಲ್ – ಬಬಲೇಶ್ವರ ಕ್ಷೇತ್ರ

ರಮೇಶ ಜಿಗಜಿಣಗಿ ಬಿಜೆಪಿ – 79002
ರಾಜು ಆಲಗೂರ್ ಕಾಂಗ್ರೆಸ್ – 75651
ಬಿಜೆಪಿ ಲೀಡ್ – 3351

ಬೆಂಗಳೂರು ಉತ್ತರ ಕ್ಷೇತ್ರ

ಸಚಿವ ಕೃಷ್ಣಬೈರೇಗೌಡ – ಬ್ಯಾಟರಾಯನಪುರ ಕ್ಷೇತ್ರ
ಶೋಭ ಕರಂದ್ಲಾಜೆ, ಬಿಜೆಪಿ – 1,64,574
ರಾಜೀವ್ ಗೌಡ, ಕಾಂಗ್ರೆಸ್ – 1,29,523
ಬಿಜೆಪಿ ಲೀಡ್ – 35,051

ಚಿತ್ರದುರ್ಗ ಲೋಕಸಭಾ ಕ್ಷೇತ್ರ

ಸಚಿವ ಡಿ. ಸುಧಾಕರ್ – ಹಿರಿಯೂರು‌ ಕ್ಷೇತ್ರ
ಗೋವಿಂದ ಕಾರಜೋಳ, ಬಿಜೆಪಿ – 88,794
ಬಿಎನ್ ಚಂದ್ರಪ್ಪ, ಕಾಂಗ್ರೆಸ್- 82,597
ಬಿಜೆಪಿ ಲೀಡ್ – 6197

Continue Reading
Advertisement
Prajwal Revanna Case
ಪ್ರಮುಖ ಸುದ್ದಿ8 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Noor Malabika Das
ಸಿನಿಮಾ15 mins ago

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Yuva Rajkumar divorce reaction by shiva Rajkumar
ಸ್ಯಾಂಡಲ್ ವುಡ್24 mins ago

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Self Harming
ರಾಯಚೂರು29 mins ago

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Narendra Modi 3.20
ಪ್ರಮುಖ ಸುದ್ದಿ1 hour ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ1 hour ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Yuva Rajkumar Allegation of cruelty against wife
ಸ್ಯಾಂಡಲ್ ವುಡ್1 hour ago

Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

UGCET 2024
ಬೆಂಗಳೂರು1 hour ago

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

Reasi Terror Attack
ಪ್ರಮುಖ ಸುದ್ದಿ2 hours ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು2 hours ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌