ಸಮುದಾಯ ಮತಕ್ಕೆ ಹಗ್ಗಜಗ್ಗಾಟ: ತುಮಕೂರಿನಲ್ಲಿ ಬಿಜೆಪಿ-ಕಾಂಗ್ರೆಸ್‌ ನಾಯಕರ ಹರಸಾಹಸ - Vistara News

ರಾಜಕೀಯ

ಸಮುದಾಯ ಮತಕ್ಕೆ ಹಗ್ಗಜಗ್ಗಾಟ: ತುಮಕೂರಿನಲ್ಲಿ ಬಿಜೆಪಿ-ಕಾಂಗ್ರೆಸ್‌ ನಾಯಕರ ಹರಸಾಹಸ

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ, ವಿವಿಧ ಜಾತಿ ಸಮುದಾಯಗಳನ್ನು ಓಲೈಸುವ ರಾಜಕಾರಣಕ್ಕೆ ಸಣ್ಣದಾಗಿ ಚಾಲನೆ ಸಿಕ್ಕಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ, ವಿವಿಧ ಜಾತಿ ಸಮುದಾಯಗಳನ್ನು ಓಲೈಸುವ ರಾಜಕಾರಣಕ್ಕೆ ಸಣ್ಣದಾಗಿ ಚಾಲನೆ ಸಿಕ್ಕಿದೆ. ರಾಜ್ಯದಲ್ಲಿ ಪ್ರಬಲವಾಗಿರುವ ಹಾಗೂ ರಾಜಕೀಯವಾಗಿಯ ಸಾಕಷ್ಟು ಸಕ್ರಿಯರಾಗಿರುವ ವೀರಶೈವ ಲಿಂಗಾಯತ ಸಮುದಾಯವನ್ನು ತಮ್ಮಲ್ಲೆ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ ಅತ್ತ ಸಮುದಾಯ ತನ್ನಿಂದ ಸಂಪೂರ್ಣ ತೊರೆಯದಂತೆ ಕಾಪಾಡಿಕೊಳ್ಳಲು ಹರಸಾಹಸ ಮಾಡುತ್ತಿದೆ.

ಅಮಿತ್‌ ಷಾ ಪ್ರವಾಸ

ಏಪ್ರಿಲ್‌ ಒಂದರಂದು ತುಮಕೂರಿನಲ್ಲಿ ಡಾ. ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಕಾರ್ಯಕ್ರಮಗಳು ನಡೆಯಲಿವೆ. ಅತ್ಯಂತ ವೈಭವಯುತವಾಗಿ ಆಯೋಜಿಸಲಾಗುತ್ತಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಷಾ ಆಗಮಿಸಲಿದ್ದಾರೆ. (ಅಮಿತ್‌ ಷಾ ಆಗಮನದ ಕುರಿತ ಸುದ್ದಿಗಾಗಿ ಕ್ಲಿಕ್‌ ಮಾಡಿ). ಸುಮಾರು ಎರಡು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಿರುವ ಈ ಕಾರ್ಯಕ್ರಮದ ಹೊಣೆಯನ್ನು ಮಾಜಿ ಮುಖ್ಯಮಂತ್ರಿ, ವೀರಶೈವ ಲಿಂಗಾಯತ ಸಮುದಾಯದಲ್ಲಿ ಸದ್ಯಕ್ಕಂತೂ ಪ್ರಶ್ನಾತೀತ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. 2018ರ ಚುನಾವಣೆ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಬೆಂಬಲ ನೀಡಿದಾಗ ಸಿದ್ಧಗಂಗಾ ಮಠಾಧೀಶರು ಸೇರಿ ನಾಡಿನ ಪ್ರಮುಖ ವೀರಶೈವ ಲಿಂಗಾಯತ ಮಠಗಳು ವಿರೋಧ ವ್ಯಕ್ತಪಡಿಸಿದ್ದವು. ಆ ಸಂದರ್ಭದಲ್ಲಿ ಡಾ. ಶಿವಕುಮಾರ ಸ್ವಾಮೀಜಿಯವರ ನಿಲುವು ಬಹಳ ಮುಖ್ಯವಾಗಿತ್ತು. ಮಠದ ಕುರಿತು ತನ್ನ ಬದ್ಧತೆಯನ್ನು ಪುನಃ ಖಾತ್ರಿಗೊಳಿಸುವುದರ ಜತೆಗೆ ಬಿಎಸ್‌ವೈ ಅವರನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನೂ ನೀಡುವ ಮೂಲಕ ಸಮುದಾಯದಲ್ಲಿ ತನ್ನ ನೆಲೆಯನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನ ನಡೆಸಲಾಗಿದೆ.

ಒಂದು ದಿನ ಮೊದಲೇ ರಾಹುಲ್‌ ಗಾಂಧಿ

ಏಪ್ರಿಲ್‌ ಒಂದರಂದು ಬೃಹತ್‌ ಕಾರ್ಯಕ್ರಮದಲ್ಲಿ ಅಮಿತ್‌ ಷಾ ಆಗಮಿಸುತ್ತಿದ್ದರೆ ಇತ್ತ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಒಂದು ದಿನ ಮೊದಲೇ ಅಂದರೆ ಮಾರ್ಚ್‌ 31ಕ್ಕೇ ಸಿದ್ಧಗಂಗಾ ಮಠಕ್ಕೆ ತೆರಳಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.(ಈ ಕುರಿತ ವಿಸ್ತೃತ ವರದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ) ಅಮಿತ್‌ ಷಾ ಅವರು ಬೃಹತ್‌ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಅದರಲ್ಲಿ ರಾಹುಲ್‌ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಕಾರ್ಯಕ್ರಮದ ನಂತರ ಮಠಕ್ಕೆ ತೆರಳಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಒಂದು ದಿನ ಮೊದಲೇ ಭೇಟಿ ನೀಡಿದರೆ ಉತ್ತಮ ಎಂದು ಕೆಪಿಸಿಸಿ ಅಧ್ಯಕ್‌ ಡಿ.ಕೆ. ಶಿವಕುಮಾರ್‌ ಹಾಗೂ ಇನ್ನಿತರೆ ಕಾಂಗ್ರೆಸ್‌ ನಾಯಕರ ಒತ್ತಾಸೆ ಮೇರೆಗೆ ಈ ಪ್ರವಾಸ ನಿಗದಿಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಎಂದಿಗೂ ಹಿಂದುತ್ವಕ್ಕೆ ವಿರುದ್ಧವಾಗಿಲ್ಲ. ಇಂದಿರಾಗಾಂಧಿ, ರಾಜೀವ್‌ ಗಾಂಧಿಯವರು ಶೃಂಗೇರಿ ಮಠದ ಭಕ್ತರಾಗಿದ್ದರು, ಸ್ವಾಮೀಜಿಯವರ ಮಾರ್ಗದರ್ಶನ ಪಡೆಯುತ್ತಿದ್ದರು. ಸೋನಿಯಾಗಾಂಧಿಯವರು 2012ರಲ್ಲಿ ಸಿದ್ಧಗಂಗಾ ಸ್ವಾಮೀಜಿಯವರ 105ನೇ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅದೇ ಸಂಪ್ರದಾಯವನ್ನು ರಾಹುಲ್‌ ಗಾಂಧಿಯವರೂ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ರಾಜ್ಯದ ಪ್ರಬಲ ಸಮುದಾಯವಾದ ವೀರಶೈವ ಲಿಂಗಾಯತರನ್ನು ತಮ್ಮಿಂದ ದೂರಾಗದಂತೆ ತಡೆಯಲು ಎರಡೂ ರಾಷ್ಟ್ರೀಯ ಪಕ್ಷಗಳು ಎಲ್ಲ ಕಸರತ್ತನ್ನು ನಡೆಸುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

Prajwal Revanna Case: ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (ಟ್ವಿಟರ್‌) ಖಾತೆಗೆ ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಈಗಾಗಲೇ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ? ಯಾವ ಕಾರಣಕ್ಕೆ ಅವರ ಖಾತೆಯಿಂದ ಬ್ಲ್ಯೂ ಟಿಕ್‌ಗೆ ಗೇಟ್‌ಪಾಸ್‌ ಸಿಕ್ಕಿದೆ ಎಂಬುದು ಸದ್ಯದ ಕುತೂಹಲವಾಗಿದೆ.

VISTARANEWS.COM


on

Prajwal Revanna Case Prajwal Revanna loses X recognition in Obscene Video case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ಕ್ರೈಂ

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Prajwal Revanna Case: ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ. ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ? ಏನು ಮಾಡಬಹುದು ಎಂಬ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Prajwal Revanna Case Will SIT team go abroad for arrest Prajwal
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ಕೇಸ್‌ ಜಟಿಲವಾಗುತ್ತಲೇ ಇದೆ. ಒಂದು ಕಡೆ ಎಸ್‌ಐಟಿ ತನಿಖೆ ಬಗ್ಗೆ ವಿಪಕ್ಷಗಳ ಅಸಮಾಧಾನ ಹಾಗೂ ಆರೋಪ. ಇನ್ನೊಂದು ಕಡೆ ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ರಾಜಕೀಯ

MLC Election: ಪರಿಷತ್ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮನವಿ ಮಾಡಿದ್ದಾರೆ. ಯಾದಗಿರಿ ನಗರದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

VISTARANEWS.COM


on

North East Graduate Constituency Election Congress party leaders and workers Meeting in Yadgiri
Koo

ಯಾದಗಿರಿ: ಈಗಾಗಲೇ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಎದುರಾಗಿದ್ದು ಈ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದಾಗಿದೆ, ಚುನಾವಣೆಯಲ್ಲಿ (MLC Election) ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಲು ಜಿಲ್ಲೆಯ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಕರೆ ನೀಡಿದರು.

ನಗರದ ಎಸ್.ಡಿ.ಎನ್ ಹೋಟಲ್ ಸಭಾಂಗಣದಲ್ಲಿ ಈಶಾನ್ಯ ಪದವಿಧರರ ಕ್ಷೇತ್ರ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಪಜೀತಿಗೆ ಸಿಲುಕಿದ ಬಿಸಿಸಿಐ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದ ಜನರಿಗೆ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ, ಅದರಲ್ಲೂ ವಿಶೇಷವಾಗಿ ಪದವಿಧರರಿಗೆ ಅನುಕೂಲವಾಗುವ ಯೋಜನೆಗಳನ್ನು ಅನುಷ್ಟಾನಗೊಳಿಸಿದೆ, ಇನ್ನೂ ಹೆಚ್ಚು ಯೋಜನೆಗಳನ್ನು ಹಮ್ಮಿಕೊಂಡಿದೆ, ವಾಸ್ತವಿಕತೆ ಅರಿತು ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ, ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

2014ರ ಲೋಕಸಭಾ ಚುನಾವಣೆ ಸಮಯದಲ್ಲಿ ಬಿಜೆಪಿ ನಾಯಕರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದು ಆರೋಪಿಸಿ, ಸುಳ್ಳು ಭರವಸೆಗಳನ್ನು ನೀಡಿ, ಯುವಕರನ್ನು ಆಕರ್ಷಿಸಿ, ಮತ ಪಡೆದು ಅಧಿಕಾರಕ್ಕೆ ಬಂದ ನಂತರ ಉದ್ಯೋಗ ಸೃಷ್ಟಿ ಮಾಡಲಿಲ್ಲ, ಬದಲಾಗಿ ಭಾರತ ಸರ್ಕಾರದ ಪ್ರಮುಖ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ, ಉದ್ಯೋಗ ಖಡಿತಗೊಳಿಸಿದ್ದಾರೆ, ಇದರಿಂದ ಯುವಕರು ನಿರಾಶೆಗೊಂಡಿದ್ದಾರೆ, ಈ ಚುನಾವಣೆಯಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ನಮ್ಮ ಅಭ್ಯರ್ಥಿ ಪರ ಒಲವು ವ್ಯಕ್ತಪಡಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ಕಾಗ್ರೆಸ್ ಅಭ್ಯರ್ಥಿ ಡಾ, ಚಂದ್ರಶೇಖರ ಬಿ. ಪಾಟೀಲ್ ಮಾತನಾಡಿ, ಈಶಾನ್ಯ ಪದವಿಧರರ ಕ್ಷೇತ್ರದ ವಿಸ್ತಾರ ದೊಡ್ಡದಾಗಿದೆ, ಕಳೆದ 6 ವರ್ಷಗಳಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಮತದಾರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ, ಚುನಾವಣೆಯಲ್ಲಿ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕು, ಈ ಭಾಗದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳ ಸಂಕಲ್ಪ ನಾನು ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 371ನೇ ಜೆ. ಅಡಿಯಲ್ಲಿ ಸಂವಿಧಾನಬದ್ದವಾಗಿ ಸಿಗಬೇಕಾದ ಔದ್ಯೋಗಿಕ ಹಾಗೂ ಶೈಕ್ಷಣಿಕ ಮೀಸಲಾತಿಯ ಸೌಲಭ್ಯವನ್ನು ಸಮರ್ಪಕವಾಗಿ ಜಾರಿಗೊಳಿಸಲು ಹಾಗೂ ಈ ಭಾಗದ ಪದವೀಧರರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಪರಿಷತ್‌ನಲ್ಲಿ ಕಲ್ಯಾಣ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

ಈ ಸಂದರ್ಭದಲ್ಲಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು, ಕೆಪಿಸಿಸಿ ಉಪಾಧ್ಯಕ್ಷ ಶರಣಪ್ಪ ಮಟ್ಟೂರ, ಮುಖಂಡರಾದ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ಎ.ಸಿ ಕಾಡ್ಲೂರ, ಚಿದಾನಂದಪ್ಪ ಕಾಳೆಬೆಳಗುಂದಿ, ಡಾ. ಭೀಮಣ್ಣ ಮೇಟಿ, ಚಂದ್ರಶೇಖರ ದಂಡೀನ್, ನಿಂಗರಾಜ ಬಾಚಿಮಟ್ಟಿ, ಸಿದ್ಲಿಂಗರಡ್ಡಿ ಉಳ್ಳೆಸೂಗೂರ, ರಾಜಶೇಖರ ಪಾಟೀಲ್ ವಜ್ಜಲ್, ಸುದರ್ಶನ ನಾಯಕ, ಕೃಷ್ಣಾ ಚಪಟ್ಲಾ, ನಿರಂಜನ್‌ರಡ್ಡಿ ಶೆಟ್ಟಿಹಳ್ಳಿ, ಮರೇಪ್ಪ ಬಿಳ್ಹಾರ, ಮಲ್ಲಣ್ಣ ಸಾಹುಕಾರ, ಮಂಜುಳಾ ಗೂಳಿ, ರಾಜಾ ಕುಮಾರ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಶ್ಯಾಮಸನ್ ಮಾಳಿಕೇರಿ ಸ್ವಾಗತಿಸಿದರು.

Continue Reading

ಬೆಂಗಳೂರು

V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

V. Sunil Kumar: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಒಂದು ವರ್ಷದ ಅವಧಿ ಮುಗಿಯುತ್ತಿದೆ. ಗೊತ್ತು-ಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ 1 ವರ್ಷದಲ್ಲಿ ನೋಡಿದ್ದಾರೆ. ಇದು ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಟೀಕಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ಈ ಅಸಮರ್ಥ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

V. Sunil Kumar latest statemetn
Koo

ಬೆಂಗಳೂರು: ಕಾಂಗ್ರೆಸ್ ಪಕ್ಷದ (Congress Party) ರಾಜ್ಯ ಸರ್ಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ (V. Sunil Kumar) ತಿಳಿಸಿದರು.

ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತಿದೆ. ಗೊತ್ತು-ಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ. ಅಭಿವೃದ್ಧಿ ಶೂನ್ಯ ಸರ್ಕಾರ ಇದು ಎಂದು ಟೀಕಿಸಿದರು.

ಇದನ್ನೂ ಓದಿ: Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಈ ಒಂದು ವರ್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರ್ಕಾರ ಬಹಿರಂಗಪಡಿಸಿದರೆ ಸಾಕು ಎಂದು ವ್ಯಂಗ್ಯವಾಗಿ ನುಡಿದರು.

ಇಂಥ ಅಭಿವೃದ್ಧಿ ಶೂನ್ಯ ಆಡಳಿತ, ಸರ್ಕಾರವನ್ನು ಕರ್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ. ವಿಧಾನಸಭಾ ಕ್ಷೇತ್ರಗಳು, ಇಲಾಖೆಗಳಿಗೆ ಒಂದು ರೂಪಾಯಿ ಅನುದಾನವನ್ನೂ ಕೊಡದೆ ಒಂದು ವರ್ಷ ಕಾಲವನ್ನು ಈ ಸರ್ಕಾರ ಕಳೆದಿದೆ. ನಾವೆಲ್ಲ ಶಾಸಕರು ಒಂದು ವರ್ಷದಿಂದ ಒಂದು ಗುದ್ದಲಿ ಪೂಜೆ ಮಾಡಲಾಗಿಲ್ಲ. ಒಂದು ಅನುದಾನ ಬಂದಿದೆ ಎಂದು ಜನರ ಹತ್ತಿರ ಹೋಗಲೂ ಆಗಿಲ್ಲ ಎಂದು ಟೀಕಿಸಿದರು.

ಸರ್ಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ

ಜನರು ಕೂಡ ಈ ಸರ್ಕಾರದಿಂದ ಅನುದಾನ ಬರುವುದಿಲ್ಲ ಎಂಬಷ್ಟರ ಮಟ್ಟಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಪುಟವನ್ನು ಗಮನಿಸಿದರೆ ಇಡೀ ಸಂಪುಟವೇ ಅಸಮರ್ಥವಾಗಿದೆ. ಸಚಿವರ ಮೇಲೆ ಹಿಡಿತವಿಲ್ಲದೆ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಯೋಜನೆ ರೂಪಿಸುವುದರಲ್ಲಿ ಸಿಎಂ ಅಸಮರ್ಥವಾಗಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸಮರ್ಥ ಮುಖ್ಯಮಂತ್ರಿಯ ಆಡಳಿತವನ್ನು ಕರ್ನಾಟಕದಲ್ಲಿ ನೋಡುತ್ತಿದ್ದೇವೆ ಎಂದು ವಿ. ಸುನೀಲ್ ಕುಮಾರ್ ತಿಳಿಸಿದರು.

ಕಾನೂನು, ಸುವ್ಯವಸ್ಥೆ ನಿಭಾಯಿಸುವುದರಲ್ಲಿ ಗೃಹ ಸಚಿವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಬರ ಪರಿಹಾರದಲ್ಲಿ ಕಂದಾಯ ಸಚಿವರು ಎಷ್ಟು ದೊಡ್ಡ ಪ್ರಮಾಣದಲ್ಲಿ ವೈಫಲ್ಯ ಕಂಡಿದ್ದಾರೆಂದರೆ ಮಂತ್ರಿಮಂಡಲದ ಒಬ್ಬ ಸದಸ್ಯರೂ ಬರ ಪರಿಹಾರದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಅವರು ಆರೋಪಿಸಿದರು. ಹಣ ಬಿಡುಗಡೆ ಮಾಡಿಲ್ಲ. ಕಂದಾಯ ಸಚಿವರಿಂದ ಗ್ರಾಮೀಣಾಭಿವೃದ್ಧಿ ಸಚಿವರವರೆಗೆ ಎಲ್ಲ ಸಂಪುಟವು ಬರ ಪರಿಹಾರದ ನಿರ್ವಹಣೆಯಲ್ಲಿ ಅಸಮರ್ಥವಾಗಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ರೈತರಿಗೆ ಈಗ ಹೊಸ ಸಾಲ ಸಿಗುತ್ತಿಲ್ಲ. ರೈತರ ಸಾಲದ ಬಡ್ಡಿ ಮನ್ನಾ ಮಾಡಿದ್ದಾಗಿ ಘೋಷಣೆ ಮಾಡಿ, 496 ಕೋಟಿ ಅನುದಾನವನ್ನು ಬಿಡುಗಡೆ ಮಾಡದ ಕಾರಣ ಪಿಎಲ್‍ಡಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಮರುಸಾಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಕೃಷಿ- ಸಹಕಾರಿ ಸಚಿವರು ಇವತ್ತು ಅಸಮರ್ಥವಾಗಿರುವುದೇ ಕಾರಣ ಎಂದರು.

ಈ ಸರ್ಕಾರ ಬಂದ ಬಳಿಕ ಕರ್ನಾಟಕದ ಒಬ್ಬನೇ ಒಬ್ಬ ರೈತನಿಗೆ ಹೊಸ ಪಂಪ್‍ಸೆಟ್ ಸಂಪರ್ಕ ಸಿಗಲಿಲ್ಲ. ರೈತರು ಹಣ ಕಟ್ಟಿದರೂ ಹೊಸ ಸಂಪರ್ಕ ಸಿಕ್ಕಿಲ್ಲ 24 ಗಂಟೆ ವಿದ್ಯುತ್ ನಿರಂತರ ಬಿಡಿ, ಗ್ರಾಮೀಣ ಪ್ರದೇಶದಲ್ಲಿ 10- 12 ಗಂಟೆ ವಿದ್ಯುತ್ ಕೊಡಲಾಗದ ಅಸಮರ್ಥ ಇಂಧನ ಸಚಿವರು ನಮ್ಮ ನಡುವೆ ಇದ್ದಾರೆ ಎಂದು ಟೀಕಿಸಿದರು.

ಶಿಕ್ಷಣದ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ

ಶಿಕ್ಷಣದ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗ್ರೇಸ್ ಮಾರ್ಕ್ ಕೊಟ್ಟಿದ್ದನ್ನು ಗಮನಿಸಿದರೆ ಶಿಕ್ಷಣ ಇಲಾಖೆ ಎಷ್ಟು ಅಸಮರ್ಥ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಂಗನವಾಡಿಯವರಿಗೆ ಗೌರವಧನ ಹೆಚ್ಚಿಸಿಲ್ಲ; ಅಂಗನವಾಡಿಗಳ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಾಸವಾಗಿದೆ. ಅಲ್ಲೂ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಸಮರ್ಥರಾಗಿದ್ದಾರೆ ಎಂದು ದೂರಿದರು.

ಬ್ರ್ಯಾಂಡ್ ಬೆಂಗಳೂರು ಇವತ್ತು ದಿಕ್ಕೆಟ್ಟ ಬೆಂಗಳೂರಾಗಿದೆ. ಬೆಂಗಳೂರಿಗೆ ಯಾವ ರೀತಿಯ ಯೋಜನೆ ರೂಪಿಸುವುದರಲ್ಲಿ ನಗರಾಭಿವೃದ್ಧಿ ಸಚಿವರು ಅಸಮರ್ಥರಾಗಿದ್ದಾರೆ. ಇದೊಂದು ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಆರೋಪಿಸಿದರು.

ಬೆಲೆ ಹೆಚ್ಚಳ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಪಿಕ್ ಪಾಕೆಟ್ ಕಾಂಗ್ರೆಸ್ ಎಂದು ನಾವು ಈ ಹಿಂದೆ ಹೇಳಿದ್ದೆವು. ಅದನ್ನು ಸರ್ಕಾರ ಸರಿ ಮಾಡಿಕೊಂಡಿಲ್ಲ. ಕರ್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಇವೆಂಟ್ ಮ್ಯಾನೇಜ್‍ಮೆಂಟಿನ ಸದಸ್ಯರು ಸರ್ಕಾರ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಈ ಸರ್ಕಾರ ನಡೆಯುತ್ತಿದೆ ಎಂದು ಅವರು ದೂರಿದರು.

ಈ ಅಸಮರ್ಥ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದರು.

ಇದನ್ನೂ ಓದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ಈ ವೇಳೆ ರಾಜ್ಯ ಮುಖ್ಯ ವಕ್ತಾರ ಅಶ್ವಥ ನಾರಾಯಣ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಪ್ರಕಾಶ್ ಶೇಷರಾಘವಾಚಾರ್, ಮೋಹನ್ ವಿಶ್ವ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಉಪಸ್ಥಿತರಿದ್ದರು.

Continue Reading
Advertisement
DP Manu
ಕ್ರೀಡೆ5 mins ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ45 mins ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ53 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ1 hour ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ1 hour ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ1 hour ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest2 hours ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ2 hours ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ2 hours ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ2 hours ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ16 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌