Diabetes Diet | ಮಧುಮೇಹದ ನಿಯಂತ್ರಣ ಹೇಗೆ? ಇಲ್ಲಿದೆ ಸರಳ ಸೂತ್ರ - Vistara News

ಆರೋಗ್ಯ

Diabetes Diet | ಮಧುಮೇಹದ ನಿಯಂತ್ರಣ ಹೇಗೆ? ಇಲ್ಲಿದೆ ಸರಳ ಸೂತ್ರ

ಮಧುಮೇಹದ ಪ್ರಮಾಣದಲ್ಲಿ ಭಾರತದಲ್ಲಿ ತೀವ್ರ ಏರುಗತಿಯಲ್ಲಿದೆ. ೭.೪ ಕೋಟಿ ಜನ ಮಧುಮೇಹಿಗಳಿದ್ದು, ಸುಮಾರು ೮ ಕೋಟಿ ಜನ ಮಧುಮೇಹ-ಪೂರ್ವ ಸ್ಥಿತಿಯಲ್ಲಿದ್ದಾರೆ. ಆದರೆ ಆತಂಕವಿಲ್ಲದೇ ಆಹಾರದಲ್ಲಿ ಮರೆಯದೇ ಈ ಒಂದು ಸೂತ್ರವನ್ನು ಅನುಸರಿಸಿದರೆ ಸಾಕು ಅಂತಾರೆ ತಜ್ಞರು.

VISTARANEWS.COM


on

Diabetes control
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒತ್ತಡದ ಜೀವನಶೈಲಿಯ ಪರಿಣಾಮಗಳು ನಾನಾ ರೀತಿಯಲ್ಲಿ ದೇಹದ ಮೇಲಾಗುತ್ತವೆ. ಅದರಲ್ಲೂ ಕೆಲವು ಆರೋಗ್ಯ ಸಮಸ್ಯೆಗಳು ಬೆನ್ನು ಬಿದ್ದವೆಂದರೆ ಬೇತಾಳದಂತೆಯೇ. ಮಧುಮೇಹ ಅಂಥದ್ದೇ ಕಾಯಿಲೆ. ಆರಂಭದಲ್ಲಿ ಅಷ್ಟೇನು ಸಮಸ್ಯೆ ಅನಿಸದಿದ್ದರೂ, ಕ್ರಮೇಣ ವಿಪರೀತ ಉಪದ್ರವಕಾರಿ ಎನಿಸುತ್ತದೆ ಈ ಸಮಸ್ಯೆ. ಆದರೆ ನಮ್ಮ ಆಹಾರದಲ್ಲಿ ಸ್ವಲ್ಪ ಬದಲಾವಣೆ ಮಾಡುವುದರಿಂದ (Diabetes Diet) ಮಧುಮೇಹವನ್ನು ಔಷಧಿಯಿಲ್ಲದೆಯೇ ದೀರ್ಘಕಾಲದವರೆಗೆ ಹತೋಟಿಯಲ್ಲಿ ಇಡಬಹುದು ಎನ್ನುತ್ತದೆ ಇತ್ತೀಚಿನ ಒಂದು ಅಧ್ಯಯನ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಆಶ್ರಯದಲ್ಲಿ ನಡೆಸಲಾದ ಈ ಮಧುಮೇಹ ಅಧ್ಯಯನದಲ್ಲಿ, ಹೊಸದಾಗಿ ಮಧುಮೇಹಕ್ಕೆ ತುತ್ತಾಗಿರುವವರ ದೈನಂದಿನ ಆಹಾರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬಿಳಿ ಅಕ್ಕಿ ಮತ್ತು ಗೋಧಿಯನ್ನು ಕಡಿಮೆ ಮಾಡಿ, ಪ್ರೊಟೀನ್‌ ಪ್ರಮಾಣವನ್ನು ಹೆಚ್ಚಿಸಲಾಗಿತ್ತು. ಮಧುಮೇಹ-ಪೂರ್ವ ಸ್ಥಿತಿಯಲ್ಲಿರುವವರನ್ನೂ ಸೇರಿ ಒಟ್ಟು ೧೮,೦೯೦ ಜನರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಶೇ. ೬.೫ಕ್ಕೆ ಮೀರದಂತೆ ಮಾಡುವುದಕ್ಕಾಗಿ ಪಿಷ್ಟ ಪದಾರ್ಥಗಳನ್ನು ಶೇ. ೫೪ಕ್ಕೆ ಮೀರದಂತೆ ಇರಿಸಲಾಗಿತ್ತು.

ಉದಾ, ದಿನದ ಆಹಾರದಲ್ಲಿ ಬೆಳಗಿನ ತಿಂಡಿಗೆ ೨ ದೋಸೆ ಅಥವಾ ಇಡ್ಲಿ ಮತ್ತು ಒಂದು ಮಲ್ಟಿಗ್ರೇನ್‌ ಬ್ರೆಡ್‌ಗೆ ಕಾರ್ಬ್‌ ಪ್ರಮಾಣವನ್ನು ಸೀಮಿತಗೊಳಿಸಿದರೆ, ಪ್ರೊಟೀನ್‌ ಪ್ರಮಾಣವನ್ನು ಸೋಯಾ ಸಾಂಬಾರ್‌ ಮತ್ತು ಮೂರು ಮೊಟ್ಟೆಯ ಬಿಳಿ ಭಾಗಗಳು ಎಂದು ನಿರ್ಧರಿಸಲಾಗಿತ್ತು. ಅಂದರೆ, ಕಾರ್ಬ್‌ ಕಡಿತದಿಂದ ಉಂಟಾಗುವ ಕೊರತೆಯನ್ನು ಪ್ರೊಟೀನ್‌ನಿಂದ ತುಂಬಿಸಲು ಯೋಜಿಸಲಾಗಿತ್ತು. ಇದೇ ಮಾದರಿಯನ್ನು ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೂ ಯೋಜಿಸಲಾಗಿತ್ತು. ಊಟ-ತಿಂಡಿಗಳ ನಡುವೆ ಲಘುವಾಗಿ ಬಾಯಾಡುವುದಕ್ಕೆ ಹಣ್ಣು-ತರಕಾರಿಗಳನ್ನು ಸೂಚಿಸಲಾಗಿತ್ತು.

ಇದನ್ನೂ ಓದಿ | Sleep secret | ಇಷ್ಟಿದ್ದರೆ ದೇಹಕ್ಕೊಂದು ನೆಮ್ಮದಿಯ ಗುಡ್‌ ನೈಟ್‌!

ಇದು ನೂತನ ಮಧುಮೇಹಿಗಳಿಗಾದರೆ, ಇನ್ನೂ ಮಧುಮೇಹ-ಪೂರ್ವ ಸ್ಥಿತಿಯಲ್ಲಿರುವವರಿಗೆ ಎಚ್‌ಬಿಎ೧ಸಿ ಪ್ರಮಾಣವನ್ನು ಶೇ. ೫.೬ ಕ್ಕೆ ನಿಲ್ಲಿಸುವುದು ಸಂಶೋಧಕರ ಉದ್ದೇಶವಾಗಿತ್ತು. ಇವರಲ್ಲಿ ಪ್ರೊಟೀನ್‌ ಮತ್ತು ನಾರಿನ ಪ್ರಮಾಣವನ್ನು ಇನ್ನೂ ಕಡಿಮೆ ಪ್ರಮಾಣದಲ್ಲಿ ಹೆಚ್ಚಿಸಲಾಗಿತ್ತು. ಈ ಎರಡೂ ಗುಂಪಿನಲ್ಲಿ ಶೇ. ೮೦ರಷ್ಟು ಮಂದಿಯಲ್ಲಿ ರಕ್ತದಲ್ಲಿನ ಸಕ್ಕರೆಯ ಅಂಶ ನಿರ್ದೇಶಿತ ರೀತಿಯಲ್ಲೇ ಹತೋಟಿಗೆ ಬಂದಿರುವುದನ್ನು ದಾಖಲಿಸಲಾಗಿದೆ. ಸ್ಥೂಲವಾಗಿ ಹೇಳುವುದಾದರೆ, ಮಧುಮೇಹಿಗಳಿಗೆ ಶೇ. ೪೯-೫೪ ಕಾರ್ಬ್‌, ಶೇ. ೧೯-೨೦ ಪ್ರೊಟೀನ್‌, ಶೇ. ೨೧-೨೬ ಕೊಬ್ಬಿನ ಅಂಶ ಮತ್ತು ಶೇ. ೫-೬ ನಾರಿನ ಅಂಶಗಳನ್ನು ಆಹಾರದಲ್ಲಿ ನಿರ್ವಹಿಸಲು ಸೂಚಿಸಲಾಗಿತ್ತು. ಮಧುಮೇಹ-ಪೂರ್ವದಲ್ಲಿರುವವರಿಗೆ ಈ ಪ್ರಮಾಣಗಳನ್ನು ಕ್ರಮವಾಗಿ ಶೇ. ೫೦-೫೬, ಶೇ. ೧೮-೨೦, ಶೇ. ೨೧-೨೭ ಮತ್ತು ಶೇ. ೩-೫ರಷ್ಟು ಇರಿಸಲು ತಿಳಿಸಲಾಗಿತ್ತು. ಯಾವುದೇ ಔಷಧವಿಲ್ಲದೆ ಆಹಾರಕ್ರಮದಲ್ಲಿಯೇ ಇದನ್ನು ಸಾಧಿಸಿರುವುದರಿಂದ, ಒಟ್ಟಾರೆಯಾಗಿ ಅಧ್ಯಯನ ಫಲಿತಾಂಶ ಆಶಾದಾಯಕವಾಗಿದೆ ಎನ್ನಲಾಗಿದೆ.

ಮಧುಮೇಹದ ಪ್ರಮಾಣದಲ್ಲಿ ಭಾರತದಲ್ಲಿ ತೀವ್ರ ಏರುಗತಿಯಲ್ಲಿದೆ. ೭.೪ ಕೋಟಿ ಜನ ಮಧುಮೇಹಿಗಳಿದ್ದು, ಸುಮಾರು ೮ ಕೋಟಿ ಜನ ಮಧುಮೇಹ-ಪೂರ್ವ ಸ್ಥಿತಿಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ICMR ನಡೆಸಿದ ಅಧ್ಯಯನಕ್ಕೆ ಮಹತ್ವ ಒದಗಿದೆ. ಇದಕ್ಕಾಗಿ ೨೯ ರಾಜ್ಯಗಳು ಮತ್ತು ೨ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ಅಧ್ಯಯನ ನಡೆಸಲಾಗಿದ್ದು, ಬೇರೆ ಬೇರೆ ಸಂಸ್ಕೃತಿ ಮತ್ತು ಆಹಾರ ಪದ್ಧತಿಗಳ ಜನರು ಇದರಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ ಭಾರತದ ಹೆಚ್ಚಿನ ಜನಸಂಖ್ಯೆಗೆ ಈ ಅಧ್ಯಯನದಲ್ಲಿ ಸೂಚಿತ ಆಹಾರಪದ್ಧತಿಯನ್ನು ಅನುಸರಿಸಲು ಸಾಧ್ಯವಿದೆ ಎಂಬುದು ಸಂಶೋಧಕರ ಅಭಿಮತ.

ಇದನ್ನೂ ಓದಿ | Snapping footwear: ಮಧುಮೇಹಿಗಳಿಗೆ IIScಯಿಂದ ಸ್ಪೆಷಲ್‌ ಪಾದರಕ್ಷೆ, ನೋವಾಗಲ್ಲ, ಕೀವಾಗಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಸೇರಿದಂತೆ ಎಲ್ಲೆಡೆ ಕೊರೊನಾ ವೈರಸ್‌ (Corona Virus) ಎದುರಿಸಲು ಪಡೆದಿದ್ದ ಕೋವಿಶೀಲ್ಡ್‌ ಲಸಿಕೆ (Covishield vaccine) ಕುರಿತು ಚರ್ಚೆಗಳು ನಡೆಯುತ್ತಿವೆ. ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮ ಕುರಿತು ಆತಂಕ ಹೆಚ್ಚಿದೆ. ಈ ಮಧ್ಯೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೋವಿಶೀಲ್ಡ್‌ನಿಂದ ಸ್ವಲ್ಪ ಪ್ರಮಾಣದ ಎಫೆಕ್ಟ್ ಆಗಿದೆ ಎಂದಿದ್ದಾರೆ.

VISTARANEWS.COM


on

By

Covishield Vaccine
ಸಾಂದರ್ಭಿಕ ಚಿತ್ರ
Koo

ಹುಬ್ಬಳ್ಳಿ: ಕೋವಿಡ್‌ ವಿರುದ್ಧ ಹೋರಾಡಲು ಭಾರತದಲ್ಲಿ ವ್ಯಾಪಕವಾಗಿ ಕೋವಿಶೀಲ್ಡ್ ಲಸಿಕೆ (Covishield vaccine) ಬಳಸಲಾಗಿತ್ತು. ಇದೀಗ ಇದರ ಸೈಡ್‌ ಎಫೆಕ್ಟ್‌ (Side Effect) ಕುರಿತು ಆತಂಕ ಹೆಚ್ಚಾಗುತ್ತಿದೆ. ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ರಾಜ್ಯದಲ್ಲಿ ಕೋವಿಶೀಲ್ಡ್ ಲಸಿಕೆಯ ಸೈಡ್‌ ಎಫೆಕ್ಟ್ ಆತಂಕ ಹೆಚ್ಚು ಮಾಡಿದ್ದು, ಈ ಬಗ್ಗೆ ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಸ್ತಾರ ನ್ಯೂಸ್‌ ಜತೆಗೆ ಮಾತನಾಡಿದ್ದಾರೆ.

ಯಾವುದೇ ಔಷಧವನ್ನು ತೆಗೆದುಕೊಂಡಾಗ ಅಲ್ಪ ಪ್ರಮಾಣದ ಸೈಡ್‌ ಎಫೆಕ್ಟ್‌ ಇದ್ದೆ ಇರುತ್ತದೆ. ಆದರೆ ಈ ಕೋವಿಶೀಲ್ಡ್‌ನಿಂದ ಸ್ವಲ್ಪ ಪ್ರಮಾಣದ ಎಫೆಕ್ಟ್ ಆಗಿದೆ. ಹಾಗಂತ ಭಯ, ಆತಂಕಪಡುವ ಅವಶ್ಯಕತೆಯಿಲ್ಲ. ಏನೋ ಆಗಿ ಬಿಡುತ್ತೆ ಎಂಬ ಗಾಬರಿ ಪಡುವಂತಿಲ್ಲ. ಕೋವಿಶೀಲ್ಡ್ ತಯಾರಿಸುವ ಸಿರಮ್ ಇನ್ಸ್‌ಟಿಟ್ಯೂಟ್ ಬಗ್ಗೆ ಸಾಕಷ್ಟು‌ ಆರೋಪಗಳಿವೆ. ಕೇಂದ್ರ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಎಲೆಕ್ಟೋರಲ್ ಬಾಂಡ್ ಕೊಟ್ಟಿದ್ದಾರೆ. ಸಿರಮ್ ಬಗ್ಗೆ ಸಾಕಷ್ಟು ಕಾಂಟ್ರವರ್ಸಿಗಳಿವೆ, ಆದರೆ ಕೋವಿಶಿಲ್ಡ್‌ ಲಸಿಕೆ ಬಗ್ಗೆ ಆತಂಕ ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇನ್ನೂ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದ ಎಫೆಕ್ಟ್ ಏನೂ ಆಗಿಲ್ಲ. ವ್ಯಾಕ್ಸಿನ್ ಕೊಟ್ಟು ಎರಡು ವರ್ಷ ಅಯಿತು. ಕೋಟ್ಯಂತರ ಜನರಿಗೆ ಲಸಿಕೆ ಕೊಡಲಾಗಿದೆ, ನಾಲ್ಕೈದು ಪ್ರಕರಣಗಳಲ್ಲಿ ಸೈಡ್ ಎಫೆಕ್ಟ್ ಆಗಿದೆ. ವ್ಯಾಕ್ಸಿನ್‌ನಿಂದಲೇ ಆಗಿದೆಯಾ ಎನ್ನುವುದು ಕೂಡ ಇನ್ನೂ ಗೊತ್ತಾಗಬೇಕಿದೆ. ಕೇಂದ್ರ ಆರೋಗ್ಯ ಇಲಾಖೆಯಿಂದ ಏನೆಲ್ಲ ಮಾರ್ಗಸೂಚಿ ಬರುತ್ತದೆಯೋ ಅದನ್ನು ಪಾಲಿಸುತ್ತೇವೆ ಎಂದರು.

ಇದನ್ನೂ ಓದಿ: Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆ!

ಕೊರೊನಾ ಸೋಂಕು (coronavirus, Covid 19) ಎದುರಿಸಲು ನಾವು ನೀವೆಲ್ಲ ತೆಗೆದುಕೊಂಡ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿಯೇ ಇದೀಗ ಒಪ್ಪಿಕೊಂಡಿತ್ತು. ಇದರೊಂದಿಗೆ, ಕೊರೊನಾ ನಂತರದ ದಿನಗಳ ಅಸ್ವಸ್ಥತೆ, ಹೃದಯಾಘಾತಗಳ ಬಗ್ಗೆ ಮೂಡಿದ್ದ ಆತಂಕಕ್ಕೆ ಇನ್ನಷ್ಟು ಆಧಾರ ದೊರೆತಿತ್ತು. ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿತ್ತು. ರಕ್ತ ಹೆಪ್ಪುಗಟ್ಟುವಿಕೆ ಮತ್ತು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವ ಪರಿಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ಹೇಳಿದ್ದರು. ಆದರೆ ಇದು ಅಪರೂಪದ ಸಂದರ್ಭಗಳಲ್ಲಿ ಆಗಬಹುದು ಎಂದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಲೈಫ್‌ಸ್ಟೈಲ್

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

ಮಾರುಕಟ್ಟೆಯಿಂದ ತರುವ ಹಣ್ಣು, ತರಕಾರಿಗಳು ಕೀಟನಾಶಕ ಮುಕ್ತವಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಾಧ್ಯವಿಲ್ಲ. ಆದರೆ ಮನೆಗೆ ತಂದು ಅವುಗಳನ್ನು ಸ್ವಚ್ಛಗೊಳಿಸುವ ಮೂಲಕ (Food Cleaning Tips Kannada) ಅವುಗಳಿಂದ ಕೀಟನಾಶಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಿ ತಿನ್ನಲು ಯೋಗ್ಯವನ್ನಾಗಿ ಮಾಡಬಹುದು. ಈ ಕುರಿತ (Food Cleaning Tips) ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Food Cleaning Tips Kannada
Koo

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಿಂದ ತರುವ ಪ್ರತಿಯೊಂದು ಸಾಮಗ್ರಿಯೂ ಆತಂಕ ಹುಟ್ಟಿಸುತ್ತದೆ. ಅದು ತರಕಾರಿ (vegetables) ಆಗಿರಬಹುದು, ಹಣ್ಣು ಹಂಪಲು (fruits), ಧಾನ್ಯಗಳಾಗಿರಬಹುದು (grain). ಕೃಷಿಯಲ್ಲಿ ಕೀಟನಾಶಕಗಳ ಬಳಕೆಯು ವ್ಯಾಪಕವಾಗಿರುವುದರಿಂದ ನಾವು ಸೇವಿಸುವ ಆಹಾರದ ಸುರಕ್ಷತೆಯನ್ನು (Food Cleaning Tips Kannada) ಖಚಿತಪಡಿಸಿಕೊಳ್ಳುವುದು ಹೆಚ್ಚು ಅಗತ್ಯವಾಗಿದೆ. ಕೀಟಗಳು ಮತ್ತು ರೋಗಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕಗಳು ಅಗತ್ಯವಾದಾಗ, ಹಣ್ಣು ಮತ್ತು ತರಕಾರಿಗಳ ಮೇಲೆ ಅದರ ಅವಶೇಷಗಳನ್ನು ಬೀಳುತ್ತವೆ. ಇದನ್ನು ಕಾಲಾನಂತರದಲ್ಲಿ ನಾವು ಸೇವಿಸಿದರೆ ಆರೋಗ್ಯದ ಅಪಾಯವನ್ನು ಉಂಟು ಮಾಡುತ್ತದೆ. ಆದರೆ ಈ ಕೀಟನಾಶಕಗಳ ತೆಗೆದು ಹಾಕಲು ಮನೆಯಲ್ಲೇ ಇರುವ ಕೆಲವು ಸಾಮಗ್ರಿಗಳು ನಮಗೆ ಸಹಾಯ ಮಾಡುತ್ತದೆ. ತರಕಾರಿ, ಹಣ್ಣುಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಮನೆಯಲ್ಲಿ ಬಳಸಬಹುದಾದ (Food Cleaning Tips) ಐದು ಪ್ರಮುಖ ವಿಧಾನಗಳಿವೆ.

Apple cider vinegar for Fungal Infection Home Remedies

ವಿನೆಗರ್ ದ್ರಾವಣ

ಹಣ್ಣುಗಳು ಮತ್ತು ತರಕಾರಿಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಸರಳ ಮತ್ತು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅವುಗಳನ್ನು ವಿನೆಗರ್ ದ್ರಾವಣದಿಂದ ತೊಳೆಯುವುದು. ಒಂದು ಬೌಲ್ ಅಥವಾ ಸಿಂಕ್‌ನಲ್ಲಿ ಮೂರು ಭಾಗಗಳ ನೀರಿನೊಂದಿಗೆ ಒಂದು ಭಾಗ ಬಿಳಿ ವಿನೆಗರ್ ಮಿಶ್ರಣ ಮಾಡಿ. ಉತ್ಪನ್ನವನ್ನು ಈ ದ್ರಾವಣದಲ್ಲಿ 5- 10 ನಿಮಿಷಗಳ ಕಾಲ ನೆನೆಸಿ, ಅನಂತರ ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ. ವಿನೆಗರ್ ಕೀಟನಾಶಕಗಳ ಅವಶೇಷಗಳನ್ನು ಸಂಪೂರ್ಣವಾಗಿ ತೆಗೆದು ಹಾಕುತ್ತದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸಲು ಮತ್ತು ತಿನ್ನಲು ಹೆಚ್ಚು ಸುರಕ್ಷಿತ ಮಾಡುತ್ತದೆ.

peeling

ಸಿಪ್ಪೆ ಸುಲಿಯುವುದು

ಹಣ್ಣು ಮತ್ತು ತರಕಾರಿಗಳ ಸಿಪ್ಪೆ ಸುಲಿದು ಸೇವಿಸುವುದು ಕೀಟನಾಶಕಗಳನ್ನು ತೆಗೆದು ಹಾಕುತ್ತದೆ. ಅನೇಕ ಕೀಟನಾಶಕಗಳು ಉತ್ಪನ್ನದ ಮೇಲ್ಮೈಯಲ್ಲಿ ಕೇಂದ್ರೀಕೃತವಾಗಿರುತ್ತವೆ. ಆದ್ದರಿಂದ ಹೊರ ಪದರವನ್ನು ತೆಗೆದುಹಾಕುವುದರಿಂದ ಈ ಅವಶೇಷಗಳ ಹೆಚ್ಚಿನ ಭಾಗವನ್ನು ತೆಗೆದುಹಾಕಬಹುದು. ಆದಾಗ್ಯೂ ಸಿಪ್ಪೆಸುಲಿಯುವಿಕೆಯು ಹಣ್ಣು, ತರಕಾರಿಯಲ್ಲಿರುವ ಕೆಲವು ಪೋಷಕಾಂಶಗಳು ಮತ್ತು ಫೈಬರ್ ಅನ್ನು ತೆಗೆದುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ, ಆದ್ದರಿಂದ ಪೋಷಕಾಂಶಗಳ ನಷ್ಟದೊಂದಿಗೆ ಪ್ರಯೋಜನಗಳನ್ನು ಸಮತೋಲನಗೊಳಿಸುವುದು ಅತ್ಯಗತ್ಯ.

Baking soda for Fungal Infection Home Remedies

ಅಡುಗೆ ಸೋಡಾ

ಸೋಡಿಯಂ ಬೈಕಾರ್ಬನೇಟ್ ಎಂದೂ ಕರೆಯಲ್ಪಡುವ ಅಡುಗೆ ಸೋಡಾ, ಕೀಟನಾಶಕಗಳ ಅವಶೇಷಗಳನ್ನು ತೆಗೆದುಹಾಕಲು ಮತ್ತೊಂದು ಪರಿಣಾಮಕಾರಿ ವಸ್ತು. ಒಂದು ಚಮಚ ಅಡುಗೆ ಸೋಡಾವನ್ನು ಒಂದು ಕಪ್ ನೀರಿನಲ್ಲಿ ಬೆರೆಸಿ, ಹಣ್ಣು ಮತ್ತು ತರಕಾರಿಗಳನ್ನು 15-20 ನಿಮಿಷಗಳ ಕಾಲ ನೆನೆಸಿಡಿ. ಅನಂತರ ಅವುಗಳನ್ನು ಹರಿಯುವ ನೀರಿನ ಅಡಿಯಲ್ಲಿ ಚೆನ್ನಾಗಿ ತೊಳೆಯಿರಿ. ಬೇಕಿಂಗ್ ಸೋಡಾ ಕೀಟನಾಶಕ ಅಣುಗಳನ್ನು ಇದು ತೆಗೆದು ಹಾಕುತ್ತದೆ.

ಇದನ್ನೂ ಓದಿ: Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

ಬ್ರಷ್‌ನಿಂದ ಸ್ಕ್ರಬ್ಬಿಂಗ್

ಆಲೂಗಡ್ಡೆ, ಕ್ಯಾರೆಟ್ ಅಥವಾ ಸೌತೆಕಾಯಿಗಳಂತಹ ದಪ್ಪವಾದ ಚರ್ಮ ಅಥವಾ ಮೇಲ್ಮೈ ಹೊಂದಿರುವ ಹಣ್ಣು ಮತ್ತು ತರಕಾರಿಗಳಿಗೆ ಹರಿಯುವ ನೀರಿನ ಅಡಿಯಲ್ಲಿ ಅವುಗಳನ್ನು ಸ್ಕ್ರಬ್ ಮಾಡಲು ಬ್ರಷ್ ಅನ್ನು ಬಳಸುವುದು ಹೆಚ್ಚು ಪರಿಣಾಮಕಾರಿ. ಮೃದುವಾದ ಸ್ಕ್ರಬ್ಬಿಂಗ್ ಕ್ರಿಯೆಯು ಮೇಲ್ಮೈಗೆ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಕ್ಕಾಗಿ ಕ್ಲೀನ್ ಬ್ರಷ್ ಅನ್ನು ಬಳಸಲು ಮರೆಯದಿರಿ.

Vegetables and Fruits

ಉಪ್ಪು ನೀರಿನಲ್ಲಿ ನೆನೆಸುವುದು

ಹಣ್ಣು, ತರಕಾರಿಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಉಪ್ಪುನೀರನ್ನು ಸಹ ಬಳಸಬಹುದು. ಎರಡು ಚಮಚ ಉಪ್ಪನ್ನು ನಾಲ್ಕು ಕಪ್ ನೀರಿನಲ್ಲಿ ಕರಗಿಸಿ ಹಣ್ಣು ಮತ್ತು ತರಕಾರಿಗಳನ್ನು 10- 15 ನಿಮಿಷಗಳ ಕಾಲ ಅದರಲ್ಲಿ ನೆನೆಸಿಡಿ. ಅನಂತರ ಅವುಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ.

Continue Reading

ಆರೋಗ್ಯ

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

ಚುಟುಕು ಡಯೆಟ್‌ಗಳಿಂದ ಕೆಲವೇ ದಿನಗಳಲ್ಲಿ ಕರಗುವ ತೂಕ ಮತ್ತೆ ಕೆಲವೇ ದಿನಗಳಲ್ಲಿ ಮರಳಿ ಬರುತ್ತದೆ. ಬದಲಿಗೆ, ಹಲವಾರು ತಿಂಗಳುಗಳ ಪ್ರಯತ್ನದಿಂದ ಕೊಬ್ಬು ಕರಗಿಸಿದರೆ, ಅದರಿಂದ ಸ್ನಾಯುಗಳನ್ನು ಹುರಿಗಟ್ಟಿಸಲು, ದೇಹವನ್ನು ಸಶಕ್ತವಾಗಿಸಲು ಸಾಧ್ಯವಿದೆ. ಹೇಗೆ, ಏನು ಎಂಬಿತ್ಯಾದಿ (Weight Loss Tips) ಮಾಹಿತಿ ಇಲ್ಲಿದೆ.

VISTARANEWS.COM


on

Weight Loss Tips
Koo

ಇಡೀ ಲೋಕವೆಲ್ಲ ಒಂದೇ ಮಂತ್ರವನ್ನು ಜಪಿಸಬೇಕು ಎಂದಾದರೆ, ಎಲ್ಲರೂ ಜಪಿಸುವುದೇನು? ʻತೂಕ ಇಳಿಸುವುದು (Weight Loss Tips) ಹೇಗೆ?ʼ ಎನ್ನುವ ಮಂತ್ರವೇ ಎಲ್ಲೆಡೆಯಿಂದ ಕೇಳಿಬರಬಹುದು. ಹಾಗೆ ತೂಕ ಇಳಿಸುವ ಪ್ರಯತ್ನದಲ್ಲಿರುವವರು ಸುತ್ತೆಲ್ಲ ಕಾಣುತ್ತಿದ್ದರೂ, ಫಲಿತಾಂಶ ಕಾಣದೆ ನಿರಾಶರಾದವರೇ ಹೆಚ್ಚು. ಹೊಸವರ್ಷಕ್ಕೆ, ಹುಟ್ಟಿದ ದಿನಕ್ಕೆ ಎಂದೆಲ್ಲ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳುವವರಲ್ಲಿ ತೂಕ ಇಳಿಸುವ ಶಪಥಗಳೇ ಹೆಚ್ಚಾಗಿರುತ್ತವೆ. ಮುಂದಿನ ವರ್ಷಕ್ಕೆ ಮತ್ತದೇ ಶಪಥ ಹೊಸದಾಗಿ ಸ್ವೀಕಾರವಾಗುತ್ತದೆ. ಹಾಗಾದರೆ ಏರಿದ್ದು ಇಳಿಯಲೇ ಬೇಕು ಎಂಬ ನಿರ್ಣಯ ತೂಕದ ವಿಷಯದಲ್ಲಿ ಇಲ್ಲ; ಬಂದಿದ್ದು ಹೋಗಲೇಬೇಕು ಎನ್ನುವ ನಿಯಮ ಹೊಟ್ಟೆಯ ವಿಷಯದಲ್ಲೂ ಇಲ್ಲ ಎಂದರ್ಥವೇ? ಹಾಗೇನಿಲ್ಲ. ಸಮಾಧಾನವೇ ಇಲ್ಲದಂಥ ಸಮಸ್ಯೆಗಳೇನಲ್ಲ ಇದು. ಆದರೆ ತೂಕ ಇಳಿಸುವುದು ಅಂದುಕೊಂಡಷ್ಟು ಸುಲಭವಲ್ಲ ಎನ್ನುವುದು ನಿಜ. ಕಾರಣ, ಹೆಚ್ಚು ಬಾರಿ ತೂಕ ಕರಗಿಸುವ ಬಗ್ಗೆ ಗಮನ ನೀಡುವು ಭರದಲ್ಲಿ ಚುಟುಕು ಡಯೆಟ್‌ಗಳ ಮೊರೆ ಹೋಗುತ್ತೇವೆ. ಆಗದಿರುವಂಥ ಸರ್ಕಸ್‌ಗಳಲ್ಲಿ ತೊಡಗಿಸಿಕೊಳ್ಳುತ್ತೇವೆ. ಇದರ ಪರಿಣಾಮವೇನೆಂದರೆ ದೇಹದಲ್ಲಿ ಕೊಬ್ಬು ಕರಗುವ ಬದಲು, ನೀರಿನಿಂದ ಇರುವಂಥ ತೂಕ ಮಾತ್ರವೇ ಕ್ಷಿಪ್ರವಾಗಿ ಕರಗುತ್ತದೆ. ಅದೂ ಇಲ್ಲದಿದ್ದರೆ ಸ್ನಾಯುಗಳು ಮಾಯವಾಗಿ ದೇಹ ತೊಂದರೆಗೆ ಸಿಲುಕುತ್ತದೆ. ಇದರ ಜೊತೆಗೆ ತಪ್ಪಾಗಿ ವ್ಯಾಯಾಮಗಳನ್ನೂ ಮಾಡಿದರೆ, ಗಾಯಗಳ ಸಮಸ್ಯೆ ತಲೆದೋರುತ್ತದೆ. ಹಾಗಾಗಿ ತೂಕ ಕರಗಿಸುವ ಗುರಿಯನ್ನು ಕೊಬ್ಬು ಕರಗಿಸುವ ಗುರಿಯನ್ನಾಗಿ ಮಾರ್ಪಾಡು ಮಾಡಿಕೊಂಡರೆ, ಫಲಿತಾಂಶ ದೊರೆಯುತ್ತದೆ. ಇದರಲ್ಲೂ ಸೂಕ್ಷ್ಮವಿದೆ. ಕೆಲವೇ ದಿನಗಳಲ್ಲಿ ಕರಗುವ ತೂಕ ಮತ್ತೆ ಕೆಲವೇ ದಿನಗಳಲ್ಲಿ ಮರಳಿ ಬರುತ್ತದೆ. ಬದಲಿಗೆ, ಹಲವಾರು ತಿಂಗಳುಗಳ ಪ್ರಯತ್ನದಿಂದ ಕೊಬ್ಬು ಕರಗಿಸಿದರೆ, ಅದರಿಂದ ಸ್ನಾಯುಗಳನ್ನು ಹುರಿಗಟ್ಟಿಸಲು, ದೇಹವನ್ನು ಸಶಕ್ತವಾಗಿಸಲು ಸಾಧ್ಯವಿದೆ. ಡಯೆಟ್‌ ಮಾಡುವ ಭರದಲ್ಲಿ, ಅಗತ್ಯ ಪೋಷಕಾಂಶಗಳಿಂದ ಶರೀರವನ್ನು ವಂಚಿಸಬಾರದು. ಆದರೆ ಕ್ಯಾಲರಿಗಳ ಕೊರತೆಯನ್ನು ಸೃಷ್ಟಿಸಬೇಕಷ್ಟೆ. ದೇಹಕ್ಕೆ ಒದಗಿಸುವ ಕ್ಯಾಲರಿಗಳನ್ನು ಪಿಷ್ಟ, ಪ್ರೊಟೀನ್‌, ನಾರು, ಖನಿಜಗಳು ಸಾಂದ್ರವಾಗಿರಬೇಕು. ಜೊತೆಗೆ ಸರಿಯಾದ ವ್ಯಾಯಾಮ. ಆಗ ದೇಹದ ಕೊಬ್ಬು ಕರಗಿಸಿ, ಆ ಮೂಲಕ ತೂಕ ಇಳಿಸಬಹುದು. ಶರೀರ ಕೃಶವಾಗಿ ಕಾಣುವ ಬದಲು ಆರೋಗ್ಯಪೂರ್ಣ ಕಳೆಯನ್ನು ಹೊಂದಿರುತ್ತದೆ.

Weight Loss

ಏನು ಮಾಡಬೇಕು?

ಇದಕ್ಕಾಗಿ ಪೋಷಕಾಂಶ ತಜ್ಞರು ಕೆಲವು ನಿಯಮಗಳನ್ನು ಒಪ್ಪುತ್ತಾರೆ. ಮೊದಲನೆಯದಾಗಿ, ಬೆಳಗಿನ ಉಪಹಾರದಲ್ಲಿ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್‌ ಒದಗಿಸುವುದು. ಆದರೆ ನಿಮಗೆ ಬೆಳಗ್ಗೆ 1200 ಕ್ಯಾಲರಿಯ ಆಹಾರ ಬೇಕು ಎಂದಿದ್ದರೆ, ಅದನ್ನು ಅಂದಾಜು 900 ಕ್ಯಾಲರಿಗಳಿಗೆ ಇಳಿಸುವುದು. ಈ ಆಹಾರದಲ್ಲಿ ಪ್ರೊಟೀನ್‌ ಮತ್ತು ಸಂಕೀರ್ಣ ಪಿಷ್ಟಗಳು ಭರಿತವಾಗಿ ಇರಬೇಕು. ಇದರಿಂದ ಶರೀರ ಸೊರಗುವುದಿಲ್ಲ ಮತ್ತು ಹಸಿವೂ ಆಗುವುದಿಲ್ಲ. ದೇಹಕ್ಕೆ ಬೇಕಾದ ಉಳಿದ 300 ಕ್ಯಾಲರಿಯನ್ನು ಶರೀರ ತನ್ನ ಕೊಬ್ಬಿನ ದಾಸ್ತಾನಿನಿಂದ ತೆಗೆದುಕೊಳ್ಳುತ್ತದೆ. ಇದನ್ನು ಎಲ್ಲಾ ಹೊತ್ತಿನ ಆಹಾರಗಳಲ್ಲೂ ಕ್ರಮೇಣ ಅಳವಡಿಸಿಕೊಳ್ಳಬಹುದು.

30-30-30

ಇದೊಂದು ಸುಸ್ಥಿರವಾದ ತೂಕ ಇಳಿಕೆಯ ಕ್ರಮ. ಬೆಳಗಿನ ಉಪಾಹಾರಕ್ಕೆ, ದೊಡ್ಡ ಮಟ್ಟದಲ್ಲಿ ಅಂದರೆ, 30 ಗ್ರಾಂನಷ್ಟು ಪ್ರೊಟೀನ್‌ ತಿನ್ನುವುದು. ದಿನಕ್ಕೆ 30 ನಿಮಿಷಗಳ ಕಡಿಮೆ ತೀವ್ರತೆಯ ವ್ಯಾಯಾಮವನ್ನು ತಪ್ಪದೆ ಮಾಡುವುದು, ತಿಂಗಳಿನ 30 ದಿನಗಳು ಏನು-ಎಷ್ಟು ಎಂಬ ಲಕ್ಷ್ಯ ಇರಿಸಿಕೊಂಡೇ ತಿನ್ನುವುದು. ೩೧ನೇ ದಿನವೆಂಬುದು ಇದ್ದರೆ ಬೇಕಾದ್ದು ತಿನ್ನಿ! ಇದರಿಂದ ದೇಹಸ್ವಾಸ್ಥ್ಯ ಸುಧಾರಿಸಲು ಸಾಕಷ್ಟು ಅವಕಾಶ ದೊರೆಯುತ್ತದೆ.

ಪ್ರೊಟೀನ್‌ ಲೆಕ್ಕ ಎಂದರೆ?

ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್‌ ತಿನ್ನಬೇಕು ಎನ್ನುವುದು ನಿಜ. ಆದರೆ 30 ಗ್ರಾಂ ಲೆಕ್ಕ ಮಾಡುವುದು ಹೇಗೆ? ಒಂದು ದೊಡ್ಡ ಮೊಟ್ಟೆಯ ಬಿಳಿ ಭಾಗದಲ್ಲಿ ಅಂದಾಜು 6 ಗ್ರಾಂ ಪ್ರೊಟೀನ್‌ ದೊರೆಯುತ್ತದೆ. ಒಂದು ಹಾಳೆ ಚೀಸ್‌ನಿಂದ ೪-೫ ಗ್ರಾಂ ಪ್ರೊಟೀನ್‌ ದೊರೆಯಬಹುದು. ಇಂಥ ಲೆಕ್ಕಗಳ ಆಧಾರದ ಮೇಲೆ ಹಾಲು, ಮೊಸರು, ಕಾಯಿ-ಬೀಜಗಳು, ಮೊಟ್ಟೆ, ಚಿಕನ್‌, ಸೋಯಾಬೀನ್‌, ಮೊಳಕೆ ಕಾಳುಗಳು- ಇಂಥವೆಲ್ಲ ಅಗತ್ಯವಾದ ಪ್ರೊಟೀನನ್ನು ದೇಹಕ್ಕೆ ಒದಗಿಸುವ ಹಲವಾರು ದಾರಿಗಳು. ಅದೇ ರೀತಿಯಲ್ಲಿ ತೌಡು, ಸಿಪ್ಪೆಗಳಿರುವ ಧಾನ್ಯಗಳು, ಸಿರಿ ಧಾನ್ಯಗಳನ್ನು ತಿನ್ನುವ ಮೂಲಕ ಸಂಕೀರ್ಣ ಪಿಷ್ಟಗಳನ್ನು ದೊರಕಿಸಿಕೊಡಬಹುದು.

Have enough fiber in the diet Eat plenty of whole grains fruits and raw vegetables Simple Steps to Preventing Diabetes

ನಾರು ಬೇಕಲ್ಲವೇ?

ಇದಕ್ಕಾಗಿ ಋತುಮಾನದ ಸೊಪ್ಪು-ಹಣ್ಣು-ತರಕಾರಿಗಳು ಊಟದಲ್ಲಿ ಸಾಕಷ್ಟಿರಲಿ. ಖನಿಜಗಳು ಕೊರತೆಯಾಗದಂತೆ ನೋಡಿಕೊಳ್ಳಲು ಇದಿಷ್ಟು ಆಹಾರಗಳು ಸಾಕಾಗುತ್ತವೆ. ಜೊತೆಗೆ ಚೆನ್ನಾಗಿ ನೀರು ಕುಡಿಯಿರಿ. ಇನ್ನೊಂದು ನೆನಪಿನಿಂದ ಮಾಡಬೇಕಾದ ಕೆಲಸವೆಂದರೆ ಗುಣಮಟ್ಟದ ನಿದ್ದೆ. ಉಳಿದೆಲ್ಲ ಮಾಡಿ, ಸರಿಯಾಗಿ ನಿದ್ದೆ ಮಾಡದಿದ್ದರೆ ಸರ್ವಬಣ್ಣ ಮಸಿ ನುಂಗಿತು ಎಂಬಂತಾಗುತ್ತದೆ. ಇಷ್ಟಾದ ಮೇಲೆ ದೇಹದ ಕೊಬ್ಬು ಕರಗದೆ ಎಲ್ಲಿ ಹೋಗುತ್ತದೆ!

ಇದನ್ನೂ ಓದಿ: Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

Continue Reading

ಆರೋಗ್ಯ

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

ಯಾವುದೇ ರಾಸಾಯನಿಕಗಳಿಲ್ಲ, ಮನೆಯಲ್ಲಿ ತ್ವರಿತವಾಗಿ ಮಾಡಿಕೊಳ್ಳಬಹುದಾದ ಕಡಲೆಹಿಟ್ಟೆಂಬ ಸೌಂದರ್ಯವರ್ಧಕಕ್ಕೆ ಸಮನಾಗಿ ಬೇರೊಂದಿಲ್ಲ. ಎಷ್ಟೊ ತಲೆಮಾರುಗಳಿಂದ ಈ ಅಭ್ಯಾಸ ಚಾಲ್ತಿಯಲ್ಲಿದೆ, ಮುಂದೆಯೂ ಇರಲಿದೆ. ಏನಿದೆ ಅಂಥದ್ದು ಕಡಲೆಹಿಟ್ಟಿನಲ್ಲಿ? ಇಲ್ಲಿದೆ (Tips For Healthy Skin) ಉಪಯುಕ್ತ ಮಾಹಿತಿ.

VISTARANEWS.COM


on

Tips For Healthy Skin
Koo

ಕೆಲವು ಹಳೆಯ ಕಾಲದ ಅಭ್ಯಾಸಗಳು ಎಂದಿಗೂ ಬದಲಾಗುವುದಿಲ್ಲ. ಹೊಸತು ಎಂಥದ್ದೇ ಬಂದರೂ, ಹಳೆಯದ ತೂಕ ಕಡಿಮೆಯಾಗುವುದಿಲ್ಲ. ಉದಾಹರಣೆಗೆ ಹೇಳುವುದಾದರೆ, ಮುಖದ ಕಾಂತಿಗಾಗಿ ಕಡಲೆಹಿಟ್ಟನ್ನು ಬಳಸುವ ಅಭ್ಯಾಸ. ಎಷ್ಟೊ ತಲೆಮಾರುಗಳಿಂದ ಈ ಅಭ್ಯಾಸ ಚಾಲ್ತಿಯಲ್ಲಿದೆ, ಮುಂದೆಯೂ ಇರಲಿದೆ. ಕಾರಣ, ಕಡಲೆಹಿಟ್ಟಿನ ಸಾಮರ್ಥ್ಯವೇ ಅಂಥದ್ದು. ಯಾವುದೇ ರಾಸಾಯನಿಕಗಳಿಲ್ಲ, ಮನೆಯಲ್ಲಿ ತ್ವರಿತವಾಗಿ ಮಾಡಿಕೊಳ್ಳಬಹುದಾದ ಈ ಸೌಂದರ್ಯವರ್ಧಕಕ್ಕೆ ಸಮನಾಗಿ ಬೇರೊಂದಿಲ್ಲ. ಏನಿದೆ ಅಂಥದ್ದು (Tips For Healthy Skin) ಕಡಲೆಹಿಟ್ಟಿನಲ್ಲಿ?
ಕಡಲೆಹಿಟ್ಟು ಉತ್ಕರ್ಷಣ ನಿರೋಧಕಗಳಿಂದ ಭರಿತವಾಗಿದೆ. ಚರ್ಮದ ಮೇಲಿನ ಮೃತ ಕೋಶಗಳನ್ನು ತೆಗೆದುಹಾಕಿ, ಹೆಚ್ಚಿನ ಎಣ್ಣೆಯಂಶವನ್ನು ತೆಗೆದು, ಹೊಸ ಕೋಶಗಳ ಬೆವಳಣಿಗೆಗೆ ಅಗತ್ಯವಾದ ಕೆಲಸ ಮಾಡುತ್ತದೆ. ಹಾಗಾಗಿ ಕಡಲೆ ಹಿಟ್ಟನ್ನು ನಿಯಮಿತವಾಗಿ ಬಳಸಿದಾಗ ಚರ್ಮ ನಯವಾದಂತಾಗಿ, ಕಾಂತಿ ಹೆಚ್ಚುತ್ತದೆ. ಇದಿಷ್ಟನ್ನೂ ಯಾವುದೇ ರಾಸಾಯನಿಕಗಳಿಲ್ಲದಂತೆ, ನೈಸರ್ಗಿಕವಾದ, ಆರೋಗ್ಯಕರ ವಸ್ತುವಿನಿಂದ ನಾವು ಪಡೆಯಬಹುದಾದ್ದು. ಕ್ಲೆನ್ಸರ್‌, ಎಕ್ಸ್‌ಫಾಲಿಯೇಟರ್‌ ಮತ್ತು ಬ್ರೈಟ್ನರ್‌- ಎಲ್ಲವೂ ಕಡಲೆಹಿಟ್ಟೊಂದರಿಂದಲೇ ಸಾಧಿಸಬಹುದು ನಾವು.
ಇದು ಭಾರತದಲ್ಲಿ ಮಾತ್ರವೇ ಅಲ್ಲ, ದಕ್ಷಿಣ ಏಷ್ಯಾ ದೇಶಗಳಲ್ಲಿ ಶತಮಾನಗಳಿಂದ ಬಳಕೆಯಲ್ಲಿ ಇರುವಂಥದ್ದು. ಇದರ ಉರಿಯೂತ ಶಾಮಕ ಗುಣದಿಂದಾಗಿಯೇ ಇದು ಮೊಡವೆಯನ್ನೂ ನಿಯಂತ್ರಿಸಬಲ್ಲದು. ವಾತಾವರಣದ ಧೂಳು, ಹೊಗೆ, ಮಾಲಿನ್ಯಗಳಿಂದ ಮಂಕಾಗುವ ಚರ್ಮಕ್ಕೆ ಕಾಂತಿ ನೀಡುವುದಕ್ಕೆ ಇದು ಒಳ್ಳೆಯ ಮತ್ತು ಸರಳ ಉಪಾಯ. ಇದರಿಂದ ಮಾಡುವ ಫೇಸ್‌ಮಾಸ್ಕ್‌ಗಳು ಸಾಮಾನ್ಯವಾಗಿ ಎಲ್ಲರಿಗೂ ಒಗ್ಗುವಂಥವು. ಹಾಲು, ಮೊಸರು, ಹಣ್ಣಿನ ಪೇಸ್ಟ್‌ಗಳು, ತರಕಾರಿ ರಸಗಳು ಮುಂತಾದ ಯಾವುದನ್ನೇ ಆದರೂ ಕಡಲೆಹಿಟ್ಟಿನೊಂದಿಗೆ ಬಳಸಬಹುದು. ವಾರಕ್ಕೆ 2-3 ದಿನ ಇದನ್ನು ಬಳಸಿದರೆ ಸಾಕಾಗುತ್ತದೆ. ಇದನ್ನು ಅತಿಯಾಗಿ ಬಳಕೆ ಮಾಡಿದರೆ ಚರ್ಮದ ಶುಷ್ಕತೆ ಹೆಚ್ಚಬಹುದು; ಸೂಕ್ಷ್ಮ ಚರ್ಮದವರಿಗೆ ತೊಂದರೆ ಆಗಬಹುದು.

Facemask

ಫೇಸ್‌ಮಾಸ್ಕ್‌

ಮೊದಲಿಗೆ ಕಡಲೆಹಿಟ್ಟನ್ನು ಸರಿಯಾದ ವಸ್ತುಗಳೊಂದಿಗೆ ಮಿಶ್ರ ಮಾಡಿ ಪೇಸ್ಟ್‌ ಸಿದ್ಧ ಮಾಡಿ. ಹಾಲು, ಮೊಸರು, ಗುಲಾಬಿ ಜಲ ಮುಂತಾದ ಯಾವುದೂ ಆಗಬಹುದು. ಇದರಿಂದ ಹದವಾದ ಪೇಸ್ಟ್‌ ಸಿದ್ಧವಾದ ಮೇಲೆ, ಮುಖಕ್ಕೆ ವೃತ್ತಾಕಾರದಲ್ಲಿ ಹಚ್ಚಿ. ಆದರೆ ತೀರಾ ಉಜ್ಜಬೇಡಿ; ಇದರಿಂದ ಕೆಂಪಾಗಿ ಚರ್ಮಕ್ಕೆ ಕಿರಿಕಿರಿ ಉಂಟಾಗಬಹುದು. ೨೦ ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ಮುಖ ತೊಳೆಯಿರಿ. ನಂತರ ಮುಖ ಒರೆಸದೆ ಗಾಳಿಗೆ ಆರುವುದಕ್ಕೆ ಬಿಡಿ. ನಂತರ ಹಗುರವಾದ ಮಾಯಿಶ್ಚರೈಸರ್‌ ಹಚ್ಚಿ. ಇದನ್ನು ವಾರದಲ್ಲಿ 2-3 ದಿನ ಮಾಡಿದರೆ ಸಾಕಾಗುತ್ತದೆ.

Tumeric Rhizome with Green Leaf and Turmeric Powder

ಅರಿಶಿನದೊಂದಿಗೆ

ಹರಿದ್ರಾ ಸಹ ಸೌಂದರ್ಯವರ್ಧನೆಗಾಗಿ ಬಳಕೆಯಲ್ಲಿದೆ. 1 ಚಮಚ ಕಡಲೆ ಹಿಟ್ಟಿಗೆ ಚಿಟಿಕೆ ಅರಿಶಿನ, ಅರ್ಧ ಚಮಚ ಜೇನುತುಪ್ಪ ಮತ್ತು ಪೇಸ್ಟ್‌ ಮಾಡುವುದಕ್ಕೆ ಸಾಕಾಗುವಷ್ಟು ಗುಲಾಬಿ ಜಲ ಹಾಕಿ. ಇದನ್ನು ಮುಖಕ್ಕೆ ಸಮನಾಗಿ ಹಚ್ಚಿ. 20 ನಿಮಿಷಗಳ ನಂತರ ಉಗುರುಬೆಚ್ಚಗಿನ ನೀರಲ್ಲಿ ಮುಖ ತೊಳೆಯಿರಿ. ಮುಖ ಆರಿದ ನಂತರ ನಿತ್ಯ ಬಳಸುವ ಮಾಯಿಶ್ಚರೈಸರ್‌ ಹಚ್ಚಿ.

Lemon Anti Infective Foods

ನಿಂಬೆಯ ಸ್ಕ್ರಬ್‌

ಒಂದು ಚಮಚ ಕಡಲೆಹಿಟ್ಟನ್ನು 1 ಚಮಚ ಮೊಸರಿನೊಂದಿಗೆ ಮಿಶ್ರ ಮಾಡಿ. ಇದಕ್ಕೆ ಅರ್ಧ ಚಮಚ ಜೇನುತುಪ್ಪ ಮತ್ತು ಆರೆಂಟು ಹನಿ ನಿಂಬೆ ರಸ ಹಾಕಿ. ಇದನ್ನು ಒದ್ದೆ ಮುಖಕ್ಕೆ ಹಾಕಿ, ಲಘುವಾಗಿ ಉಜ್ಜಿ. ಇದನ್ನು ಅತಿಯಾಗಿ ಮಾಡಿದರೆ ಚರ್ಮ ಕೆಂಪಾಗುತ್ತದೆ, ಜಾಗ್ರತೆ. ಒಂದೆರಡು ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ಮುಖ ತೊಳೆಯಿರಿ. ಇದನ್ನು ವಾರಕ್ಕೊಮ್ಮೆ ಮಾಡಿದರೆ ಸಾಕು.

ಕ್ಲೆನ್ಸರ್‌

ಒಂದು ಚಮಚ ಕಡಲೆ ಹಿಟ್ಟಿಗೆ ಅರ್ಧ ಚಮಚ ಹಾಲು, ಅರ್ಧ ಚಮಚ ಗುಲಾಬಿಜಲ ಬೆರೆಸಿ ಪೇಸ್ಟ್‌ ಮಾಡಿ. ಇದನ್ನು ವೃತ್ತಾಕಾರದಲ್ಲಿ ಮುಖಕ್ಕೆ ಹಾಕಿ. ಆದರೆ ಜೋರಾಗಿ ಉಜ್ಜಬಾರದು. ಒಂದೆರಡು ನಿಮಿಷಗಳ ನಂತರ ತೊಳೆಯಿರಿ. ಇದನ್ನು ವಾರದಲ್ಲಿ 2-3 ಬಾರಿ ಮಾಡಬಹುದು.

fruit Facemask

ತರಕಾರಿ-ಹಣ್ಣುಗಳ ಮಾಸ್ಕ್‌

ಪಪ್ಪಾಯ, ಬಾಳೆಯಣ್ಣು, ಮೆಲನ್‌ಗಳು ಮುಂತಾದ ಯಾವುದೇ ಹಣ್ಣುಗಳನ್ನು ಕಡಲೆಹಿಟ್ಟಿನೊಂದಿಗೆ ಬೆರೆಸಿ ಫೇಸ್‌ಮಾಸ್ಕ್‌ ತಯಾರಿಸಬಹುದು. ಸೌತೇಕಾಯಿ, ಕ್ಯಾರೆಟ್‌ ಮುಂತಾದ ತರಕಾರಿಗಳ ರಸವನ್ನು ಕಡಲೆಹಿಟ್ಟಿನೊಂದಿಗೆ ಸೇರಿಸಿ ಮುಖಕ್ಕೆ ಮಾಸ್ಕ್‌ ಮಾಡಿದರೆ ಉತ್ತಮ ಪರಿಣಾಮ ದೊರೆಯುತ್ತದೆ. ಇಂಥ ಯಾವುದನ್ನು ಬಳಸುವಾಗಲೂ ನಿಮ್ಮ ಚರ್ಮಕ್ಕೆ ಒಗ್ಗುತ್ತದೆಯೋ ಇಲ್ಲವೊ ಎಂಬ ಅನುಮಾನವಿದ್ದರೆ, ಕೈಮೇಲೆ ಪ್ಯಾಚ್‌ ಟೆಸ್ಟ್‌ ಮಾಡಿಕೊಳ್ಳಿ.

ಇದನ್ನೂ ಓದಿ: Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

Continue Reading
Advertisement
prajwal revanna case cm siddaramaiah rahul gandhi
ಪ್ರಮುಖ ಸುದ್ದಿ6 mins ago

Prajwal Revanna Case: ಸಿಎಂಗೆ ಪತ್ರ ಬರೆದು ಚುರುಕು ಮುಟ್ಟಿಸಿದ ರಾಗಾ; ಎಸ್‌ಐಟಿ ಜೊತೆ ಸಭೆ ನಡೆಸಿ ಸಿಎಂ ಖಡಕ್‌ ಸೂಚನೆ

Rahul Gandhi
ದೇಶ25 mins ago

Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

Job Alert
ಉದ್ಯೋಗ28 mins ago

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

prajwal revanna case blue corner notice
ಪ್ರಮುಖ ಸುದ್ದಿ31 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

Covishield Vaccine
ಬೆಂಗಳೂರು55 mins ago

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

A Devendra Gowda passed away in Ballari
ಬಳ್ಳಾರಿ1 hour ago

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

MI vs KKR
ಕ್ರೀಡೆ1 hour ago

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

Amrutha Ramamoorthi has been rejected fifteen times
ಕಿರುತೆರೆ1 hour ago

Amrutha Ramamoorthi: ಆಡಿಷನ್‌ನಲ್ಲಿ ಬರೋಬ್ಬರಿ 15 ಬಾರಿ ರಿಜೆಕ್ಟ್ ಆಗಿದ್ದರಂತೆ ಈ ಖ್ಯಾತ ನಟಿ!

Viral Video
ವೈರಲ್ ನ್ಯೂಸ್1 hour ago

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

IPL 2024
ಬೆಂಗಳೂರು2 hours ago

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ22 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌