Happy Birthday | ಕಿಚ್ಚನ ಹುಟ್ಟುಹಬ್ಬ ಸಂಭ್ರಮ, ಎಲ್ಲೆಲ್ಲೂ ಸೆಲೆಬ್ರೇಷನ್..! - Vistara News

ಒಟಿಟಿ

Happy Birthday | ಕಿಚ್ಚನ ಹುಟ್ಟುಹಬ್ಬ ಸಂಭ್ರಮ, ಎಲ್ಲೆಲ್ಲೂ ಸೆಲೆಬ್ರೇಷನ್..!

ಕನ್ನಡ ಚಿತ್ರರಂಗವಷ್ಟೇ ಅಲ್ಲದೆ ಹಿಂದಿ, ತೆಲುಗು ಮತ್ತು ತಮಿಳಿನಲ್ಲೂ ತಮ್ಮ ಛಾಪನ್ನು ಮೂಡಿಸಿದ ಕಿಚ್ಚ ಸುದೀಪ್‌ 49ನೇ ಜನುಮದಿನದ ಸಂಭ್ರಮದಲ್ಲಿದ್ದಾರೆ.

VISTARANEWS.COM


on

ಕಿಚ್ಚನ ಹುಟ್ಟುಹಬ್ಬ ಸಂಭ್ರಮ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕಿಚ್ಚನ ಹುಟ್ಟುಹಬ್ಬ ಸಂಭ್ರಮ

1973ರ ಸೆಪ್ಟೆಂಬರ್‌ 2ರಂದು ಜನನ. ಮೂಲ ಹೆಸರು ಸುದೀಪ್‌ ಸಂಜೀವ್‌.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

ತಾಯವ್ವ ಚಿತ್ರದ ಮೂಲಕ ರಾಮು ಪಾತ್ರದಲ್ಲಿ ಬೆಳ್ಳಿ ತೆರೆಗೆ ಪದಾರ್ಪಣೆ

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

2001ರ ವಾಲಿ ಚಿತ್ರದಲ್ಲಿ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡರು.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

2001ರ ಹುಚ್ಚ ಚಿತ್ರದಲ್ಲಿ ನಟ ಸುದೀಪ್ ಕಿಚ್ಚನ ಪಾತ್ರ ನಿರ್ವಹಿಸಿದ್ದರು. ಹೀಗಾಗಿ ಅಭಿಮಾನಿಗಳಿಂದ ʼಕಿಚ್ಚʼ ಎಂಬ ಬಿರುದು ಬಂತು.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

2001ರಲ್ಲಿ ಪ್ರಿಯಾ ರಾಧಾಕೃಷ್ಣ ಜತೆ ಸುದೀಪ್‌ ವಿವಾಹವಾಗಿದ್ದು, ಒಬ್ಬರು ಪುತ್ರಿಯನ್ನು ಹೊಂದಿದ್ದಾರೆ.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

ಸತತ 3 ವರ್ಷಗಳ ಸುದೀಪ್‌ ಅವರಿಗೆ ಪ್ರತಿಷ್ಠಿತ ʼಫಿಲ್ಮ್‌ಫೇರ್‌ ಅವಾರ್ಡ್ʼ ಒಲಿದು ಬಂದಿತ್ತು. 2001ರಲ್ಲಿ ʼಹುಚ್ಚʼ ಸಿನಿಮಾಗಾಗಿ, 2002ರಲ್ಲಿ ʼನಂದಿʼ ಚಿತ್ರಕ್ಕಾಗಿ & 2003ರಲ್ಲಿ ʼಸ್ವಾತಿ ಮುತ್ತುʼ ಚಿತ್ರಕ್ಕೋಸ್ಕರ ಸುದೀಪ್‌ ಫಿಲ್ಮ್‌ಫೇರ್‌ ಅವಾರ್ಡ್‌ಗೆ ಭಾಜನರಾಗಿದ್ದರು.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

2008ರಲ್ಲಿ ಹಾರರ್‌ ಚಿತ್ರ Phoonk ಮೂಲಕ ಬಾಲಿವುಡ್‌ಗೆ ಎಂಟ್ರಿ ನೀಡಿದರು. ಉತ್ತಮ ನಟ ಎಂಬ ಮೆಚ್ಚುಗೆ ಪಡೆದ ಕಿಚ್ಚ.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

My autograph ಮೂಲಕ ಚೊಚ್ಚಲ ಬಾರಿಗೆ ನಿರ್ದೇಶನ. 175 ದಿನ ಪೂರೈಸಿ ದೊಡ್ಡ ಯಶಸ್ಸು ಕಂಡಿದ್ದ ಸಿನಿಮಾ.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

2012ರಲ್ಲಿ ಕಿಚ್ಚ ಸುದೀಪ್‌ಗೆ ಒಲಿದ ಅಭಿನಯ ಚಕ್ರವರ್ತಿ ಎಂಬ ಬಿರುದು.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ ಕರ್ನಾಟಕ ಬುಲ್ಡೋಜರ್ಸ್ ಕ್ರಿಕೆಟ್ ತಂಡದ ನಾಯಕರಾಗಿ ಮುಂದಾಳತ್ವ ವಹಿಸಿರುವ ಸುದೀಪ್‌.

ಕಿಚ್ಚನ ಹುಟ್ಟುಹಬ್ಬ ಸಂಭ್ರಮ

ಸದ್ಯ ವಿಕ್ರಾಂತ ರೋಣ ಚಿತ್ರದಲ್ಲಿ ಮಿಂಚಿರುವ ಸುದೀಪ್‌, Kabza ಚಿತ್ರದ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ| Happy Birthday@ಚಿರಂಜೀವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

ಮಾರ್ಚ್ 29 ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಈಗ ಒಟಿಟಿಯಲ್ಲಿ (Crew on OTT) ಬಿಡುಗಡೆಯಾಗಿದೆ. ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರ ಪರಿಪೂರ್ಣ ಮನರಂಜನೆಯನ್ನು ಪ್ರೇಕ್ಷಕರಿಗೆ ಒದಗಿಸಲು ಸಫಲವಾಗಿದೆ.

VISTARANEWS.COM


on

By

Crew on OTT
Koo

ಟಬು (Tabu), ಕರೀನಾ ಕಪೂರ್ ಖಾನ್ (Kareena Kapoor Khan) ಮತ್ತು ಕೃತಿ ಸನೋನ್ (Kriti Sanon) ನಟಿಸಿರುವ ‘ಕ್ರ್ಯೂ’ ಚಿತ್ರ ಒಟಿಟಿಯಲ್ಲಿ (Crew on OTT) ಮೇ 24ರಂದು ಬಿಡುಗಡೆಯಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡ ಬಳಿಕ ಅತ್ಯುತ್ತಮ ಕಾಮಿಡಿ ಚಲನಚಿತ್ರವಾದ ಕ್ರ್ಯೂ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾಗಿದೆ. ರಾಜೇಶ್ ಎ. ಕೃಷ್ಣನ್ ನಿರ್ದೇಶನದ ‘ಕ್ರ್ಯೂ’ ಈಗ ವಿಶ್ವದ 190 ದೇಶಗಳಲ್ಲಿ ಪ್ರದರ್ಶನ ಕಾಣಲಿದೆ.

ನೆಟ್‌ಫ್ಲಿಕ್ಸ್‌ನಲ್ಲಿ ಚಿತ್ರದ ಪ್ರಥಮ ಪ್ರದರ್ಶನದ ಕುರಿತು ಮಾತನಾಡಿದ ನಿರ್ಮಾಪಕರಾದ ರಿಯಾ ಕಪೂರ್ ಮತ್ತು ಏಕ್ತಾ ಆರ್ ಕಪೂರ್ , ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಕ್ರ್ಯೂ ಅನ್ನು ನೆಟ್‌ಫ್ಲಿಕ್ಸ್‌ ಗೆ ತರಲು ನಾವು ರೋಮಾಂಚನಗೊಂಡಿದ್ದೇವೆ. ಈ ಚಿತ್ರವು ಸ್ನೇಹ, ವಂಚನೆ ಮತ್ತು ದೃಢತೆಯನ್ನು ಹಾಸ್ಯದ ಮೂಲಕ ಹೇಳಲು ಪ್ರಯತ್ನಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಪ್ರೇಕ್ಷಕರು ನೆಟ್‌ಫ್ಲಿಕ್ಸ್‌ನಲ್ಲಿ ಪ್ರತ್ಯೇಕವಾಗಿ ಸಸ್ಪೆನ್ಸ್, ಹಾಸ್ಯ ಮತ್ತು ನಾಟಕದ ಅನುಭವವನ್ನು ಪಡೆಯಲು ಕಾಯುವುದು ಸಾಧ್ಯವಿಲ್ಲ. ಇದು ಪ್ರೇಕ್ಷಕರನ್ನು ಆಸನದ ತುದಿಯಲ್ಲಿ ಕುರಿಸುವಂತೆ ಮಾಡುವ ಕಥೆಯಾಗಿದೆ ಎಂದು ಹೇಳಿದ್ದಾರೆ.

ಬಹುತೇಕ ದಿವಾಳಿಯಾದ ಏರ್‌ಲೈನ್‌ನ ಹಿನ್ನೆಲೆ ಕಥೆಯನ್ನು ಒಳಗೊಂಡಿರುವ ‘ಕ್ರ್ಯೂ’, ತಮ್ಮ ಜೀವನ ನಿರ್ವಹಣೆಗೆ ಪ್ರಯತ್ನಿಸುತ್ತಿರುವ ಮೂವರು ಮಹಿಳೆಯರು ಸುಳ್ಳಿನ ಜಾಲದಲ್ಲಿ ಸಿಕ್ಕಿಹಾಕಿಕೊಳ್ಳುವ ಕಥೆಯ ಸುತ್ತ ಸುತ್ತುತ್ತದೆ.

ಮಾರ್ಚ್ 29ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಬಿಡುಗಡೆಯಾದ ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿದೆ. ಇದರಲ್ಲಿ ದಿಲ್ಜಿತ್ ದೋಸಾಂಜ್, ಕಪಿಲ್ ಶರ್ಮಾ, ಶಾಶ್ವತ ಚಟರ್ಜಿ, ರಾಜೇಶ್ ಶರ್ಮಾ, ಕುಲಭೂಷಣ್ ಖರ್ಬಂದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಾಲಿವುಡ್ ನ ಹಾಸ್ಯ ಚಿತ್ರವಾದ ಕ್ರ್ಯೂ ಪರಿಪೂರ್ಣ ಮನರಂಜನೆಯನ್ನು ಒದಗಿಸುವುದರಲ್ಲಿ ಸಂದೇಹವಿಲ್ಲ ಎಂದು ಅವರು ವಿವರಿಸಿದ್ದಾರೆ.

ಈ ಐದು ಕಾರಣಕ್ಕಾಗಿ ಈ ಚಿತ್ರವನ್ನು ಪ್ರತಿಯೊಬ್ಬರೂ ವೀಕ್ಷಿಸಬಹುದು.

ಇದನ್ನೂ ಓದಿ: Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

1. ಎಲ್ಲರನ್ನೂ ಮೋಡಿ ಮಾಡಲಿದೆ

‘ಕ್ರ್ಯೂ’ ಚಿತ್ರ ವೀಕ್ಷಿಸುತ್ತಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಾಸ್ಯದ ಸಂಪೂರ್ಣ ಮನೋರಂಜನೆಯನ್ನು ಸವಿಯಬಹುದು. ಖಂಡಿತ ಈ ಚಿತ್ರ ಯಾರನ್ನೂ ನಿರಾಶೆಗೊಳಿಸುವುದಿಲ್ಲ. ಆರ್ಥಿಕ ಬಿಕ್ಕಟ್ಟಿನ ನಡುವೆ ತಮ್ಮ ಜೀವನವನ್ನು ಸುಗಮವಾಗಿ ಸಾಗುವಂತೆ ಮಾಡಲು ಪ್ರಯತ್ನಿಸುತ್ತಿರುವ ಮೂವರು ಗಗನಸಖಿಯರ ಮೇಲೆ ಚಲನಚಿತ್ರವು ಕೇಂದ್ರೀಕೃತವಾಗಿದೆ. ‘ಕ್ರ್ಯೂ’ ವಾಸ್ತವವಾಗಿ ಸಿನಿ ಪ್ರಿಯರನನ್ನು ನಗೆಗಡಲಿನಲ್ಲಿ ತೇಲಿಸಿ ಮೋಡಿ ಮಾಡುತ್ತದೆ.

2. ಸಸ್ಪೆನ್ಸ್‌

ಹಾಸ್ಯಮಯ ಚಿತ್ರವಾದರೂ ಸಸ್ಪೆನ್ಸ್‌ಗೆ ಬಂದಾಗ ಚಿತ್ರ ಸೂಪರ್ ಎನ್ನುವಂತೆ ಮಾಡುತ್ತದೆ. ಚಿತ್ರದಲ್ಲಿ ಯಾವುದೇ ಕ್ಷಣವೂ ಬೇಸರ ತರಿಸುವುದಿಲ್ಲ. ಕರೀನಾ ಮತ್ತು ಟಬು ತಮ್ಮ ಅಭಿನಯದಿಂದ ಎಲ್ಲರ ಮನಗೆದ್ದಿದ್ದಾರೆ.

3. ಅಪರೂಪದ ಕಥೆ

ಮೂವರು ನಟಿಯರನ್ನೇ ಮುಖ್ಯ ಭೂಮಿಕೆಯಲ್ಲಿ ಇರಿಸಿರುವ ಈ ಚಿತ್ರ ಬಾಲಿವುಡ್ ಚಲನಚಿತ್ರಗಳಲ್ಲಿ ಅಪರೂಪದ ಚಿತ್ರವಾಗಿದೆ. ಚಲನಚಿತ್ರವು ಸ್ತ್ರೀ ಸ್ನೇಹದ ವಿವಿಧ ಪದರಗಳನ್ನು ಪರಿಶೋಧಿಸುತ್ತದೆ.


4. ಹೃದಯ ಗೆಲ್ಲುವ ಅಭಿನಯ

ಚಿತ್ರದಲ್ಲಿ ಎದ್ದುಕಾಣುವ ಒಂದು ವಿಷಯವೆಂದರೆ ಮುಖ್ಯ ಪಾತ್ರ ಮತ್ತು ಪೋಷಕ ಪಾತ್ರಗಳ ಪ್ರಭಾವಶಾಲಿ ಅಭಿನಯ. ಟಬು, ಕೃತಿ ಸನೋನ್ ಮತ್ತು ಕರೀನಾ ಕಪೂರ್ ಖಾನ್ ಅವರು ತೆರೆಯ ಮೇಲೆ ಅದ್ಭುತವಾದ ಒಡನಾಟವನ್ನು ಹಂಚಿಕೊಂಡಿದ್ದಾರೆ. ಏತನ್ಮಧ್ಯೆ, ಕಪಿಲ್ ಶರ್ಮಾ ಮತ್ತು ದಿಲ್ಜಿತ್ ದೋಸಾಂಜ್ ಅವರು ಸಣ್ಣ ಅವಧಿಗೆ ಬಂದುಹೋದರೂ ಪ್ರೇಕ್ಷಕರ ಹೃದಯ ಗೆಲ್ಲುತ್ತಾರೆ.

5. ಹಾಸ್ಯ ಚಿತ್ರ

ಮಹಿಳೆಯರು ಹಾಸ್ಯ ಚಿತ್ರಗಳನ್ನು ಚೆನ್ನಾಗಿ ಮಾಡಬಲ್ಲರು ಎಂಬುದನ್ನು ಈ ಚಿತ್ರ ಪ್ರತಿಪಾದಿಸುತ್ತದೆ. ಹಾಸ್ಯ ಚಿತ್ರಗಳನ್ನು ಮಹಿಳಾ ನಟಿಯರು ಉತ್ತಮವಾಗಿ ಮಾಡಬಹುದು ಎಂಬುದನ್ನು ‘ಕ್ರ್ಯೂ’ ಸಾಬೀತುಪಡಿಸುತ್ತದೆ.

Continue Reading

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Sharad Kelkar
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

Continue Reading

ಸಿನಿಮಾ

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Mother Teresa Series: ಮದರ್ ಥೆರೆಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು. ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳ ಹೊರಟಿದ್ದಾರೆ. ಮೂರು ಸೀಜನ್‌ನಲ್ಲಿ ಒಟ್ಟು 30 ಎಪಿಸೋಡ್ ಗಳಲ್ಲಿ ಮದರ್ ಥೆರೆಸಾ ಅವರ  ಕಥೆ ಮೂಡಿಬರಲಿದೆ.

VISTARANEWS.COM


on

Mother Teresa Series life in the works
Koo

ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ದೊಡ್ಡ  ಹೆಸರು  ಮಾಡಿರುವ  ಪಿ ಚಂದ್ರಕುಮಾರ್ ಅವರು ʻಮದರ್ ಥೆರೆಸಾʼ ಸಿರೀಸ್‌ (Mother Teresa Series) ಮಾಡಲು ಮುಂದಾಗಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ತಯಾರಾಗಲಿರುವ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಸುಮಾರು 30 ಕೋಟಿ ರೂ.ಗಳ‌ ಬಿಗ್ ಬಜೆಟ್‌ನಲ್ಲಿ ಚಿತ್ರತಂಡ ನಿರ್ಮಾಣ ಮಾಡುತ್ತಿದೆ ಎಂದು ವರದಿಯಾಗಿದೆ. ವಿಶೇಷವಾಗಿ ಈ ವೆಬ್ ಸರಣಿಯಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮದರ್‌ ಥೆರೆಸಾ ಬಗ್ಗೆ ಮೂರು ವರ್ಷಗಳಿಂದ ಪಿ. ಚಂದ್ರಕುಮಾರ್‌ ಮಾಹಿತಿ ಹಲೆ ಹಾಕಿದ್ದರು.

ಮದರ್ ಥೆರೆಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು. ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳ ಹೊರಟಿದ್ದಾರೆ. ರೋಮ್‌, ಜೆರುಸಲೆನಿಯಂ, ಟೆಥ್‌ಲೆಹೆಮ್, ಮ್ಯಾಸಿಡೋನಿಯಾ, ಇಟಲಿಯಂತಹ ಸ್ಥಳಗಳ ಜತೆಗೆ ಮದರ್ ಥೆರೆಸಾ ಅವರ ಜೀವನದ ಮೇಲೆ ಪ್ರಭಾವ ಬೀರಿದ ಪಶ್ಚಿಮ ಬಾಂಗಾಳ, ಬಾಂಗ್ಲಾದೇಶ, ಮುಂಬೈ, ಕೇರಳ. ಬಿಹಾರ. ಕರ್ನಾಟಕ ಮುಂತಾದ ಪ್ರಮುಖ ಸ್ಥಳಗಳಲ್ಲೆ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ನಿರ್ಮಾಪಕ ಚಂದ್ರಶೇಖರ್ ಈ ಬಗ್ಗೆ ಮಾತನಾಡಿ ʻʻಮಲಯಾಳಂ, ತಮಿಳು, ತೆಲುಗು, ಹಿಂದಿಯಲ್ಲಿ ಹಲವಾರು  ಸಿನಿಮಾ‌ಗಳನ್ನು ನಿರ್ಮಿಸಿದ್ದೆ. ಈ ಸಿರೀಸ್‌ ಕನ್ನಡದಲ್ಲಿಯೂ ಬರುತ್ತಿದೆ. ಯಂಗ್ ಥೆರೆಸಾ ಪಾತ್ರಕ್ಕಾಗಿ ಹುಡಕಾಟ ನಡೆದಿದೆ. ನಾಲ್ಕು ವರ್ಷದ ಹಿಂದೆಯೇ ಇದರ  ಪ್ಲ್ಯಾನ್ ಮಾಡಿದ್ದೆವು. ಮೂರು ಸೀಜನ್‌ನಲ್ಲಿ ಒಟ್ಟು 30 ಎಪಿಸೋಡ್ ಗಳಲ್ಲಿ ಮದರ್ ಥೆರೆಸಾ ಅವರ  ಕಥೆ ಮೂಡಿಬರಲಿದೆ. ಮುಂದಿನ ತಿಂಗಳು ಚಿತ್ರೀಕರಣ ಪ್ರಾರಂಭಿಸುತ್ತಿದ್ದೇವೆ. ಒಟಿಟಿ ಪ್ಲಾಟ್ ಫಾರ್ಮ್‌ನಲ್ಲಿ ಈ ಸೀರೀಸ್  ರಿಲೀಸಾಗಲಿದ್ದು, ಈ ಬಗ್ಗೆ ಮಾತುಕತೆ ಕೂಡ  ನಡೆಯುತ್ತಿದೆʼʼಎಂದರು.

ಪಿ.ಸುಕುಮಾರ್ ಅವರ  ಛಾಯಾಗ್ರಹಣ, ಜರೀ ಅಮರದೇವ ಅವರ ಸಂಗೀತ ಇದ್ದು, ಅನಿತಾ ಮೆನ್ನನ್, ತನಿಮಾ ಮೆನ್ನನ್,  ಸಾಪಿಕೌರ್, ಜೋಷಿ ಜೋಸೆಫ್ ಪ್ರಮುಖ ತಾರಾಗಣದಲ್ಲಿದ್ದಾರೆ.

Continue Reading

ಒಟಿಟಿ

OTT Release: ಒಟಿಟಿಯಲ್ಲಿ ಈ ವಾರ ಬ್ರಿಡ್ಜರ್‌ಟನ್‌, ಬಾಹುಬಲಿ ಸರಣಿ; ಇನ್ನೂ ಏನೇನಿವೆ?

ಥ್ರಿಲರ್, ರೊಮ್ಯಾಂಟಿಕ್, ಆಕ್ಷನ್ ಅನ್ನು ಒಳಗೊಂಡಿರುವ ವೀಕ್ಷಕರು ಬಹು ನಿರೀಕ್ಷೆಯ ಬ್ರಿಡ್ಜರ್ಟನ್, ಬಾಹುಬಲಿ ಸೇರಿದಂತೆ ಹಲವು ಸರಣಿಗಳು ಈ ವಾರದಲ್ಲಿ ಒಟಿಟಿ ಗೆ (OTT Release) ಬರಲಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

OTT Release
Koo

ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡಿರುವ ಹಲವು ಸರಣಿ ಚಿತ್ರಗಳು ಈ ವಾರ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ (OTT Release) ತೆರೆ ಕಾಣುತ್ತಿದೆ. ನೆಟ್‌ಫ್ಲಿಕ್ಸ್ (Netflix), ಡಿಸ್ನಿ+ ಹಾಟ್‌ಸ್ಟಾರ್ (Disney+ Hotstar), ಜಿಯೋ ಸಿನಿಮಾ (Jio Cinema) ಮತ್ತು ಇತರ ವೇದಿಕೆಯಲ್ಲಿ ಈ ಬಾರಿ ಪ್ರೇಕ್ಷರನ್ನು ರಂಜಿಸಲು ಹಲವು ಚಲನಚಿತ್ರಗಳು ಬಿಡುಗಡೆಯಾಗಲಿದೆ.

ಬ್ರಿಡ್ಜರ್ಟನ್ ಮತ್ತು ಬಾಹುಬಲಿ ಸರಣಿಯು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಪೆನೆಲೋಪ್ ಫೆದರಿಂಗ್‌ಟನ್ ಮತ್ತು ಕಾಲಿನ್ ಬ್ರಿಡ್ಜರ್‌ಟನ್‌ರ ಪ್ರೇಮಕಥೆಯನ್ನು ಹೇಳುವ ನೆಟ್‌ಫ್ಲಿಕ್ಸ್‌ನ ಬ್ರಿಡ್ಜರ್‌ಟನ್‌ನ ಸೀಸನ್ 3 ಸಾಕಷ್ಟು ಕುತೂಹಲ ಮೂಡಿಸಿದೆ. ಇದರೊಂದಿಗೆ ಎಸ್‌.ಎಸ್. ರಾಜಮೌಳಿ ಅವರ ಪೂರ್ವಭಾವಿ ಸರಣಿಯಾದ ಬಾಹುಬಲಿ: ಕ್ರೌನ್ ಆಫ್ ಬ್ಲಡ್‌ ಕೂಡ ಎಲ್ಲರೂ ಕಾತರದಿಂದ ಕಾಯುವಂತೆ ಮಾಡಿದೆ.

ಬ್ರಿಡ್ಜರ್ಟನ್ ಸೀಸನ್ 3 ಭಾಗ 1

ಬ್ರಿಡ್ಜರ್ಟನ್ ಭಾಗ 2 ಕಳೆದ ಜೂನ್ 13ರಂದು ಬಿಡುಗಡೆಯಾಗಿತ್ತು. ಇದೀಗ ಇದರ ಮುಂದುವರಿದ ಸರಣಿ ಬಿಡುಗಡೆಯಾಗಿದೆ.

ನಿಕೋಲಾ ಕೋಗ್ಲಾನ್, ಲ್ಯೂಕ್ ನ್ಯೂಟನ್, ಕ್ಲೌಡಿಯಾ ಜೆಸ್ಸಿ, ಲ್ಯೂಕ್ ಥಾಂಪ್ಸನ್, ಜೊನಾಥನ್ ಬೈಲಿ, ಸಿಮೋನ್ ಆಶ್ಲೇ ಮುಖ್ಯ ಭೂಮಿಕೆಯಲ್ಲಿರುವ ಈ ಸರಣಿ ಮೇ 16ರಿಂದ ನೆಟ್ ಫ್ಲಿಕ್ಸ್ ನಲ್ಲಿ ತೆರೆ ಕಾಣುತ್ತಿದೆ. ಇದು ಜೂಲಿಯಾ ಕ್ವಿನ್‌ನ ಹೆಚ್ಚು ಮಾರಾಟವಾದ ಕಾದಂಬರಿಗಳನ್ನು ಆಧರಿಸಿದ ಪ್ರೇಮಕಥೆಯಾಗಿದೆ. ಲೇಡಿ ವಿಸ್ಲ್‌ಡೌನ್ ಮೇಲೆ ಚಿತ್ರ ಕೇಂದ್ರೀಕೃತವಾಗಿದೆ. ಕುಟುಂಬದ ಒತ್ತಡದಿಂದ ಪೆನೆಲೋಪ್ ಫೆದರಿಂಗ್‌ಟನ್ (ನಿಕೋಲಾ ಕಾಗ್ಲಾನ್) ತನಗಾಗಿ ಗಂಡನನ್ನು ಹುಡುಕಲು ಪ್ರಾರಂಭಿಸುತ್ತಾಳೆ. ಆಗ ಕಾಲಿನ್ ಬ್ರಿಡ್ಜರ್ಟನ್ (ಲ್ಯೂಕ್ ನ್ಯೂಟನ್) ಅವಳ ಬದುಕಿನಲ್ಲಿ ಆಗಮಿಸುತ್ತಾನೆ. ಅವರಿಬ್ಬರು ಉತ್ತಮ ಸ್ನೇಹಿತರಾಗಿ ಜೀವನವನ್ನು ಕಾಣಲು ಬಯಸುತ್ತಾರೆ.


ಬಾಹುಬಲಿಕೆ ಕ್ರೌನ್ ಆಫ್ ಬ್ಲಡ್

ಶರದ್ ಕೇಳ್ಕರ್, ಸಮಯ್ ಠಕ್ಕರ್, ರಾಜೇಶ್ ಖಟ್ಟರ್ ಅವರು ಧ್ವನಿ ನೀಡಿರುವ ಸರಣಿ ಮೇ 17ರಂದು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದೆ. ಇದು ಮಾಹಿಷ್ಮತಿ ರಾಜ್ಯದ ಕಥೆಯನ್ನು ಆಧರಿಸಿದೆ. ಎಸ್.ಎಸ್. ರಾಜಮೌಳಿ ಅವರ ಇತ್ತೀಚಿನ ಚಿತ್ರದ ಅನಿಮೇಟೆಡ್ ಸರಣಿ ಇದಾಗಿದೆ. 2D ಅನಿಮೇಟೆಡ್ ಸರಣಿಯು ಒಂದು ಮಹಾಕಾವ್ಯದ ಕಥೆಯನ್ನು ಹೊಂದಿದೆ. ಭವ್ಯವಾದ ಯುದ್ಧದ ಸರಣಿಗಳು ಮತ್ತು ಕೆಲವು ಸಾಂಪ್ರದಾಯಿಕ ಪಾತ್ರಗಳು ಇದರಲ್ಲಿ ಗಮನ ಸೆಳೆಯಲಿದೆ.


ಜರಾ ಹಟ್ಕೆ ಜರಾ ಬಚ್ಕೆ

ವಿಕ್ಕಿ ಕೌಶಲ್, ಸಾರಾ ಅಲಿ ಖಾನ್, ಇನಾಮುಲ್ಹಾಕ್, ಸುಶ್ಮಿತಾ ಮುಖರ್ಜಿ ಅಭಿನಯದ ಈ ಚಿತ್ರ ಜಿಯೋ ಸಿನಿಮಾದಲ್ಲಿ ಮೇ 17ರಂದು ಬಿಡುಗಡೆಯಾಗಲಿದೆ. ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹಿಂದಿ ಚಿತ್ರ. ಇದರಲ್ಲಿ ವಿಕ್ಕಿ ಕೌಶಲ್ ಮತ್ತು ಸಾರಾ ಅಲಿ ಖಾನ್ ವಿವಾಹಿತ ದಂಪತಿಯಾಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಂತ ಮನೆಯನ್ನು ಮಾಡಿಕೊಳ್ಳಲು ಅವರು ಮಾಡುವ ಪರಿಶ್ರಮ ಚಿತ್ರದಲ್ಲಿದೆ. ಚಿತ್ರ ಕಳೆದ ವರ್ಷ ಜೂನ್ 2 ರಂದು ಬಿಡುಗಡೆಯಾಗಿದ್ದು, ಇದೀಗ ಒಟಿಟಿಗೆ ಪಾದಾರ್ಪಣೆ ಮಾಡುತ್ತಿದೆ.

ಇದನ್ನೂ ಓದಿ: Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಗ್ರೇಟ್ ಇಂಡಿಯನ್ ಕಪಿಲ್ ಶೋ

ಕಪಿಲ್ ಶರ್ಮಾ, ಅರ್ಚನಾ ಪುರಾಣ್ ಸಿಂಗ್, ಕೃಷ್ಣಾ ಅಭಿಷೇಕ್ ಅವರ ಈ ಸರಣಿ ಮೇ 18ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಕಪಿಲ್ ಶರ್ಮಾ ತನ್ನ ಹೊಸ ನೆಟ್‌ಫ್ಲಿಕ್ಸ್ ಸರಣಿಗೆ ಅಂತಾರಾಷ್ಟ್ರೀಯ ಅತಿಥಿ ಬ್ರಿಟಿಷ್ ಪಾಪ್ ಐಕಾನ್ ಎಡ್ ಶೀರಾನ್ ಅವರನ್ನು ವೇದಿಕೆಗೆ ಆಹ್ವಾನಿಸಿದ್ದಾರೆ. ಎಡ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಹಲವಾರು ಬಾರಿ ಹಾಸ್ಯನಟರನ್ನು ಭೇಟಿ ಮಾಡಿದ್ದಾರೆ ಮತ್ತು ಈ ಬಾರಿ ಅವರು ಶರ್ಮಾ ಅವರ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೂರ್ವಸಿದ್ಧತೆಯಿಲ್ಲದ ಸಂಗೀತ ಕಛೇರಿಯನ್ನು ಅವರು ಇಲ್ಲಿ ನಡೆಸಿಕೊಡಲಿದ್ದಾರೆ.

Continue Reading
Advertisement
ರಾಜಮಾರ್ಗ ಅಂಕಣ euthanasia zoraya ter beek
ಅಂಕಣ4 mins ago

ರಾಜಮಾರ್ಗ ಅಂಕಣ: ಸಾವನ್ನೇ ಆಹ್ವಾನಿಸಿದ ಸುಂದರಿ ಝೋರಯಾ ಟರ್ ಬ್ರೀಕ್

lockup death channagiri
ಕ್ರೈಂ38 mins ago

Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

Lok Sabha Election
ದೇಶ57 mins ago

Lok Sabha Election: ಇಂದು 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತದಾನ; ಖಟ್ಟರ್‌, ಕನ್ಹಯ್ಯ ಸೇರಿ ಹಲವರ ಭವಿಷ್ಯ ನಿರ್ಧಾರ

Egg Benefits
ಆರೋಗ್ಯ1 hour ago

Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

karnataka Weather Forecast
ಮಳೆ1 hour ago

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

World Thyroid Day
ಆರೋಗ್ಯ2 hours ago

World Thyroid Day: ಇಂದು ವಿಶ್ವ ಥೈರಾಯ್ಡ್‌ ದಿನ; ‘ಗಂಟಲ ಚಿಟ್ಟೆ’ಯ ಬಗ್ಗೆ ಈ ಸಂಗತಿ ನಿಮಗೆ ಗೊತ್ತೆ?

Dina bhavishya
ಭವಿಷ್ಯ3 hours ago

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Narendra Modi
ದೇಶ8 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ8 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು8 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌