Asia Cup | ಇಂದಿನಿಂದ ಸೂಪರ್‌- 4, ಮೊದಲ ಪಂದ್ಯದಲ್ಲಿ ಅಫಘಾನಿಸ್ತಾನ vs ಶ್ರೀಲಂಕಾ ಹಣಾಹಣಿ - Vistara News

ಕ್ರಿಕೆಟ್

Asia Cup | ಇಂದಿನಿಂದ ಸೂಪರ್‌- 4, ಮೊದಲ ಪಂದ್ಯದಲ್ಲಿ ಅಫಘಾನಿಸ್ತಾನ vs ಶ್ರೀಲಂಕಾ ಹಣಾಹಣಿ

ಏಷ್ಯಾ ಕಪ್‌ (Asia Cup) ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಶ್ರೀಲಂಕಾ ಮತ್ತು ಅಫಘಾನಿಸ್ತಾನ ತಂಡಗಳ ನಡುವೆ ಸೂಪರ್‌-4 ಹಣಾಹಣಿ ನಡೆಯಲಿದೆ.

VISTARANEWS.COM


on

asia cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಾರ್ಜಾ : ಏಷ್ಯಾ ಕಪ್‌ (Asia Cup-2022) ಟೂರ್ನಿಯ ಗುಂಪು ಹಂತದ ಪಂದ್ಯಗಳು ಪಾಕಿಸ್ತಾನ ಹಾಗೂ ಹಾಂಕಾಂಗ್‌ ತಂಡಗಳ ನಡುವಿನ ಪಂದ್ಯದೊಂದಿಗೆ ಮುಕ್ತಾಯಗೊಂಡಿದ್ದು, ಶನಿವಾರ ಸೂಪರ್‌-೪ ಹಂತದ ಹಣಾಹಣಿಗಳು ನಡೆಯಲಿವೆ. ಗುಂಪು ಹಂತದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಸೂಪರ್-೪ ಹಂತದಲ್ಲಿ ಸ್ಪರ್ಧಿಸಲಿವೆ. ಎ ಗುಂಪಿನಿಂದ ಭಾರತ ಹಾಗೂ ಪಾಕಿಸ್ತಾನ ಹಾಗೂ ಬಿ ಗುಂಪಿನಿಂದ ಅಫಘಾನಿಸ್ತಾನ ಹಾಗೂ ಶ್ರೀಲಂಕಾ ತಂಡ ಸೂಪರ್‌-೪ ಹಂತಕ್ಕೆ ಪ್ರವೇಶ ಪಡೆದುಕೊಂಡಿದೆ.

ಶನಿವಾರ ಬಿ ಗುಂಪಿನ ತಂಡಗಳಾದ ಅಫಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗುಂಪು ಹಂತದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡವನ್ನು ಸೋಲಿಸಿದ ಅಫಘಾನಿಸ್ತಾನ ತಂಡ ನೇರವಾಗಿ ಸೂಪರ್‌-೪ ಹಂತಕ್ಕೇರಿದ್ದರೆ, ಬಾಂಗ್ಲಾದೇಶ ತಂಡದ ವಿರುದ್ಧ ವೀರೋಚಿತ ೨ ವಿಕೆಟ್‌ಗಳ ಜಯ ಸಾಧಿಸಿದ ಶ್ರೀಲಂಕಾ ತಂಡ ಎರಡನೇ ತಂಡವಾಗಿ ಪ್ರವೇಶ ಪಡೆದುಕೊಂಡಿದೆ. ಎ ಗುಂಪಿನಲ್ಲಿ ಪಾಕಿಸ್ತಾನ ಹಾಗೂ ಹಾಂಕಾಂಗ್‌ ತಂಡವನ್ನು ಮಣಿಸಿದ ಭಾರತ ನೇರ ಪ್ರವೇಶ ಪಡೆದುಕೊಂಡಿದ್ದರೆ, ಪಾಕಿಸ್ತಾನ ತಂಡ ತನ್ನ ಎರಡನೇ ಪಂದ್ಯದಲ್ಲಿ ಹಾಂಕಾಂಗ್‌ ವಿರುದ್ಧ ೧೫೫ ರನ್‌ಗಳ ಭರ್ಜರಿ ಜಯ ದಾಖಲಿಸಿ ಎರಡನೇ ತಂಡವಾಗಿ ಸೂಪರ್‌-೪ ಹಂತಕ್ಕೇರಿದೆ

ಹುಮ್ಮಸ್ಸಿನಲ್ಲಿದೆ ಆಫ್ಘಾನ್‌

ಎರಡು ಗೆಲುವಿನ ಆತ್ಮ ವಿಶ್ವಾಸದಲ್ಲಿರುವ ಅಫಫಾನಿಸ್ತಾನ ತಂಡ ಶನಿವಾರ ನಡೆಯುವ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಎದುರಾಗಲಿದೆ. ಟಿ೨೦ ಮಾದರಿಯಲ್ಲಿ ದಿನದಿಂದ ದಿನಕ್ಕೆ ಪ್ರಬಲವಾಗುತ್ತಿರುವ ಮೊಹಮ್ಮದ್‌ ನಬಿ ನಾಯಕತ್ವದ ಅಫಘಾನಿಸ್ತಾನ ತಂಡ, ಉತ್ತಮ ಪ್ರದರ್ಶನ ತೋರಲು ಹೆಣಗಾಡುತ್ತಿರುವ ಶ್ರೀಲಂಕಾ ತಂಡಕ್ಕೆ ಎದುರಾಗಲಿದೆ. ಲೀಗ್​ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯ ಕಂಡಿರುವ ಮೊಹಮ್ಮದ್ ನಬಿ ಬಳಗ ಗೆಲ್ಲುವ ನೆಚ್ಚಿನ ತಂಡವಾಗಿದೆ. ಬಾಂಗ್ಲಾದೇಶ ವಿರುದ್ಧ ರೋಚಕ ಗೆಲುವು ಸಾಧಿಸಿ ಸೂಪರ್- 4 ಹಂತಕ್ಕೆ ಗೆ ಲಗ್ಗೆಯಿಟ್ಟಿರುವ ಸಿಂಹಳೀಯರು ಯಾವುದೇ ಕ್ಷಣದಲ್ಲಿ ಪುಟಿದೇಳುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭರ್ಜರಿ ಪೈಪೋಟಿ ನಡೆಯುವ ಸಾಧ್ಯತೆಗಳಿವೆ.

ಸಂಭಾವ್ಯ ತಂಡಗಳು

ಅಫ್ಘಾನಿಸ್ತಾನ: ಮೊಹಮ್ಮದ್ ನಬಿ (ನಾಯಕ) ರಹಮಾನುಲ್ಲಾ ಗುರ್ಬಜ್‌ (ವಿಕೆಟ್‌ಕೀಪರ್), ಇಬ್ರಾಹಿಂ ಜದ್ರಾನ್, ನಜೀಬುಲ್ಲಾ ಝದ್ರಾನ್, ಹಜರತುಲ್ಲಾ ಜಜೈ, ಕರೀಮ್ ಜಾನತ್‌, ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜೈ, ನವೀನ್–ಉಲ್–ಹಕ್, ಮುಜೀಬ್ ಉರ್ ರಹಮಾನ್, ಫಜಲ್‌ ಹಕ್ ಫಾರೂಕಿ.

ಶ್ರೀಲಂಕಾ:  ದಸುನ್‌ ಶನಕ (ನಾಯಕ), ದನುಷ್ಕ ಗುಣತಿಲಕ, ಪಾಥುಮ್‌ ನಿಸ್ಸಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭಾನುಕ ರಾಜಪಕ್ಷ, ವಾನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ್‌ ತೀಕ್ಷಣ, ದಿಲ್ಶನ್ ಮಧುಶಂಕ, ಮತೀಶ ಪತಿರಾಣ.

ಪಂದ್ಯದ ವಿವರ

ಸ್ಥಳ : ಶಾರ್ಜಾ ಕ್ರಿಕೆಟ್‌ ಸ್ಟೇಡಿಯಮ್‌

ಸಮಯ: ರಾತ್ರಿ ೭.೩೦ರಿಂದ

ನೇರ ಪ್ರಸಾರ : ಸ್ಟಾರ್‌ ಸ್ಪೋಟ್ಸ್‌ ನೆಟ್ವರ್ಕ್‌, ಡಿಸ್ನಿ ಹಾಟ್‌ ಸ್ಟಾರ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

IND vs ENG Semi Final: ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಅಕ್ಷರ್​ ಪಟೇಲ್​(23ಕ್ಕೆ 3), ಕುಲ್​ದೀಪ್​ ಯಾದವ್​(19ಕ್ಕೆ 3) ಜೋಡಿಯ ಸ್ಪಿನ್​ ದಾಳಿ ಹಾಗೂ ರೋಹಿತ್​ ಶರ್ಮ(57) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್​ ಟೂರ್ನಿಯ(IND vs ENG Semi Final) ಇಂಗ್ಲೆಂಡ್​ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ 68 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಸಾಧನೆ ಮಾಡಿದೆ. ಜತೆಗೆ 2022ರ ಸೆಮಿಫೈನಲ್​ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿದೆ. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು. ಈ ಸೋಲಿನಿಂದಿಗೆ ಹಾಲಿ ಚಾಂಪಿಯನ್​ ಆಗಿದ್ದ ಇಂಗ್ಲೆಂಡ್​ ಈಗ ಮಾಜಿ ಆಯಿತು.

ಅಕ್ಷರ್​-ಕುಲ್​ದೀಪ್​ ಸ್ಪಿನ್​ ಮೋಡಿ

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್​ಗೆ ನಾಯಕ ಜಾಸ್​ ಬಟ್ಲರ್​ ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸಿದರು. ಒಂದು ಹಂತದಲ್ಲಿ ಅವರ ಬ್ಯಾಟಿಂಗ್ ನೋಡುವಾಗ 2022ರ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯವೊಮ್ಮೆ ಕಣ್ಣ ಮುಂದೆ ಬಂದಿತು. ಅಬ್ಬರದ ಬ್ಯಾಟಿಂಗ್​ ಮೂಲಕ ಮುನ್ನುಗ್ಗುತ್ತಿದ್ದ ಇವರನ್ನು ಕೊನೆಗೂ ಎಡಗೈ ಸ್ಪಿನ್ನರ್​ ಅಕ್ಷರ್​ ಪಟೇಲ್​ ಕಟ್ಟಿಹಾಕಿದರು. ತಾನೆಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಎಗರಿಸಿ ಭಾರತಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ರಿವರ್ಸ್​ ಸ್ವೀಪ್​ ಮಾಡುವ ಯತ್ನದಲ್ಲಿ ಕೀಪರ್​ ರಿಷಭ್​ ಪಂತ್​ಗೆ ಕ್ಯಾಚ್​ ನೀಡಿ ವಿಕೆಟ್​ ಒಪ್ಪಿಸಿದರು. ಬಟ್ಲರ್​ 4 ಬೌಂಡರಿ ನೆರವಿನಿಂದ 23 ರನ್​ ಬಾರಿಸಿದರು.

2ನೇ ಓವರ್​ನಲ್ಲಿ ಅಕ್ಷರ್ ಮತ್ತೊಂದು ದೊಡ್ಡ ವಿಕೆಟ್​ ಬೇಟೆಯಾಡಿದರು.​ ಅಪಾಯಕಾರಿ ಬ್ಯಾಟರ್​ ಜಾನಿ ಬೇರ್​ಸ್ಟೋ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್​ಗೆ ಅಟ್ಟಿದರು. ಈ ವಿಕೆಟ್​ ಪತನಕ್ಕೂ ಮುನ್ನ ಜಸ್​ಪ್ರೀತ್​ ಬುಮ್ರಾ ತಮ್ಮ ಯಾರ್ಕರ್​ ದಾಳಿಯಿಂದ ಫಿಲ್​ ಸಾಲ್ಟ್ ಅವರನ್ನು ಕ್ಲೀನ್​ ಬೌಲ್ಟ್​ ಮಾಡಿದ್ದರು.​

35 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್​ಗೆ ಆ ಬಳಿಕ ಬಂದ ಬ್ಯಾಟರ್​ಗಳು ಕೂಡ ಆಸರೆಯಾಗುವಲ್ಲಿ ವಿಫಲರಾದರು. ಮೊಯಿನ್​ ಅಲಿ(8) ಕ್ರೀಸ್​ ಬಿಟ್ಟು ಸಿಕ್ಸರ್​ ಬಾರಿಸುವ ಯತ್ನದಲ್ಲಿ ರಿಷಭ್​ ಪಂತ್​ ಅವರ ಮಿಂಚಿನ ವೇಗದ ಸ್ಟಂಪ್​ ಬಲೆಗೆ ಬಿದ್ದರು. ಈ ವಿಕೆಟ್​ ಕೂಡ ಅಕ್ಷರ್​ ಪಾಲಾಯಿತು. ಆ ಬಳಿಕ ಆಡಲಿಳಿದ ಆಲ್​ರೌಂಡರ್​ ಸ್ಯಾಮ್​ ಕರನ್(2)​ ಅವರನ್ನು ಕುಲ್​ದೀಪ್​ ಯಾದವ್​ ತಮ್ಮ ಮೊದಲ ಓವರ್​ನಲ್ಲಿಯೇ ಎಲ್​ಬಿಡಬ್ಲ್ಯು ಬಲೆಗೆ ಬೀಳಿಸಿದರು. 5ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ಹ್ಯಾರಿ ಬ್ರೂಕ್​ ಸಣ್ಣ ಮಟ್ಟದ ಬ್ಯಾಟಿಂಗ್​ ಹೋರಾಟವನ್ನು ಸಂಘಟಿಸಿದರೂ ಕೂಡ 25 ರನ್​ಗೆ ಇವರ ವಿಕೆಟ್​ ಕೂಡ ಪತನಗೊಂಡಿತು. ಇಲ್ಲಿಗೆ ಇಂಗ್ಲೆಂಡ್​ ಸೋಲು ಕೂಡ ಖಚಿತಗೊಂಡಿತು. ಅಂತಿಮ ಹಂತದಲ್ಲಿ ವೇಗಿ ಜೋಫ್ರಾ ಆರ್ಚರ್​ 1 ಬೌಂಡರಿ ಮತ್ತು 2 ಸಿಕ್ಸರ್​ ಸಿಡಿಸಿ 21 ರನ್​ ಗಳಿಸುವ ಮೂಲಕ ತಂಡದ ಮೊತ್ತವನ್ನು 100 ಗಡಿ ದಾಟಿಸಿದರು. ಭಾರತ ಪರ ಕುಲ್​ದೀಪ್​ ಯಾದವ್​ ಮತ್ತು ಅಕ್ಷರ್​ ಪಟೇಲ್ ತಲಾ ಮೂರು ವಿಕೆಟ್​ ಕಿತ್ತರೆ, ಜಸ್​ಪ್ರೀತ್​ ಬುಮ್ರಾ 2 ವಿಕೆಟ್​ ಉರುಳಿಸಿದರು.

ಸೇಡು ತೀರಿಸಿಕೊಂಡ ಭಾರತ


ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು.

ಇದನ್ನೂ ಓದಿ Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

ಮಳೆಯಿಂದ ಟಾಸ್​ ಪ್ರಕ್ರಿಯೆ ಕೂಡ ವಿಳಂಬಗೊಂಡಿತು. ಪಂದ್ಯ ಆರಂಭವಾಗಿ ಭಾರತ 8 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 65 ರನ್​ ಗಳಿಸಿದ್ದ ವೇಳೆ ಮತ್ತೆ ಮಳೆ ಸುರಿದು ಕೆಲ ಕಾಲ ಪಂದ್ಯ ಸ್ಥಗಿತಗೊಂಡಿತು. ಆದರೆ, ಈ ಪಂದ್ಯಕ್ಕೆ ಮೀಸಲು ದಿನ ಇರದ ಕಾರಣ ಹೆಚ್ಚುವರಿ 250 ನಿಮಿಷ ನೀಡಲಾಗಿತ್ತು. ಹೀಗಾಗಿ ಮಳೆ ನಿಂತ ಬಳಿಕ ಓವರ್​ ಕಡಿತವಿಲ್ಲದೇ ಪಂದ್ಯವನ್ನು ಮುಂದುವರಿಸಲಾಯಿತು.

ರೋಹಿತ್​-ಸೂರ್ಯ ಉತ್ತಮ ಜತೆಯಾಟ

ಮಳೆ ನಿಂತ ಬಳಿಕ ರೋಹಿತ್ ಶರ್ಮ ಜತೆ ಸೂರ್ಯಕುಮಾರ್​ ಕೂಡ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟರು. ಉಭಯ ಆಟಗಾರರು ಸೇರಿಕೊಂಡು ಮೂರನೇ ವಿಕೆಟ್ 73​ ಜತೆಯಾಟ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. 5 ರನ್​ ಗಳಿಸಿದ್ದ ವೇಳೆ ಫಿಲ್ ಸಾಲ್ಟ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ರೋಹಿತ್, ಇದರ ಸಂಪೂರ್ಣ ಲಾಭವೆತ್ತಿದರು. 33 ಎಸೆತಗಳಿಂದ ಅರ್ಧಶತಕ ಬಾರಿಸಿ ಮಿಂಚಿದರು. ಇದು ರೋಹಿತ್​ ಅವರ 32ನೇ ಅಂತಾರಾಷ್ಟ್ರೀಯ ಟಿ20 ಅರ್ಧಶತಕ. ಅಂತಿಮವಾಗಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 57 ರನ್​ ಗಳಿಸಿ ಆದೀಲ್​ ರಶೀದ್​ ಓವರ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ವಿಕೆಟ್​ ಪತನಗೊಂಡು 11 ರನ್​ ಅಂತರದಲ್ಲಿ ಸೂರ್ಯಕುಮಾರ್​ ವಿಕೆಟ್​ ಕೂಡ ಬಿತ್ತು. ಸೂರ್ಯಕುಮಾರ್​ 47(4 ಬೌಂಡರಿ, 2ಸಿಕ್ಸರ್​) ರನ್​ ಬಾರಿಸಿದರು.

ಉತ್ತಮ ಸ್ಥಿತಿಯಲ್ಲಿದ್ದ ಭಾರತ, ಸೂರ್ಯಕುಮಾರ್​ ಮತ್ತು ರೋಹಿತ್​ ವಿಕೆಟ್​ ಪತನದ ಬಳಿಕ ನಾಟಕೀಯ ಕುಸಿತ ಕಂಡಿತು. ಶಿವಂ ದುಬೆ(0) ಗೋಲ್ಡನ್​ ಡಕ್​ ಸಂಕಷ್ಟಕ್ಕೆ ಸಿಲುಕಿದರೆ, ಅಕ್ಷರ್​ ಪಟೇಲ್​ 10 ರನ್​ಗೆ ಆಟ ಮುಗಿಸಿದರು. ಅಂತಿಮವಾಗಿ ಜಡೇಜಾ ಅಜೇಯ 17(9 ಎಸೆತ, 2 ಬೌಂಡರಿ) ಮತ್ತು ಹಾರ್ದಿಕ್​ ಪಾಂಡ್ಯ 23(13 ಎಸೆತ, 2 ಸಿಕ್ಸರ್​, 1 ಬೌಂಡರಿ) ರನ್ ಬಾರಿಸಿದ ಪರಿಣಾಮ ತಂಡ 150ರ ಗಡಿ ದಾಟಿತು. ಇಂಗ್ಲೆಂಡ್​ ಪರ ಕ್ರಿಸ್​ ಜೋರ್ಡನ್​ 37 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಉರುಳಿಸಿದರು.

ದಾಖಲೆ ಬರೆದ ರೋಹಿತ್​


ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಈ ಪಂದ್ಯದಲ್ಲಿ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ದಾಖಲೆ ನಿರ್ಮಿಸಿಸಿದರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲ ಜಯವರ್ಧನೆ(111 ಬೌಂಡರಿ) ಹೆಸರಿನಲ್ಲಿತ್ತು. 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಕ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.  

ಕೊಹ್ಲಿ ಮತ್ತೆ ವಿಫಲ


ವಿರಾಟ್​ ಕೊಹ್ಲಿ(Virat Kohli) ಅವರ ಬ್ಯಾಟಿಂಗ್​ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. 9 ಎಸೆತಕ್ಕೆ 9 ರನ್​ಗಳಿಸಿ ರೀಸ್‌ ಟೋಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಟ್​ ಆದರು. ಈ ಮೂಲಕ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಒಂದಂಕಿಗೆ ಸೀಮಿತರಾದರು. ಇದಕ್ಕೂ ಮುನ್ನ ಕೊಹ್ಲಿ ಆಡಿದ ಎಲ್ಲ ಸೆಮಿಫೈನಲ್​ ಪಂದ್ಯದಲ್ಲಿಯೂ ಅರ್ಧಶತಕ ಬಾರಿಸಿದ್ದರು. ರಿಷಭ್​ ಪಂತ್​ ಕೂಡ ಅವಸರದ ಆಟವಾಡಲು ಮುಂದಾಗಿ ಕೇವಲ 4 ರನ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading

ಕ್ರೀಡೆ

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

Rohit Sharma:ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು.

VISTARANEWS.COM


on

Rohit Sharma
Koo

ಪ್ರೊವಿಡೆನ್ಸ್‌: ಟೀಮ್​ ಇಂಡಿಯಾದ ನಾಯಕ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಶ್ರೀಲಂಕಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಲ ಜಯವರ್ಧನೆ(Mahela Jayawardene) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್​ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 91 ಇತ್ತು. ಸದ್ಯ ರೋಹಿತ್​ 26 ಎಸೆತಗಳಿಂದ 37 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ಮಳೆಯಿಂದಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ.

ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ರೋಹಿತ್​ ಶರ್ಮಭಾರತ46113*
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್​​ ಕೊಹ್ಲಿಭಾರತ33105
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ41101
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಜಾಸ್​ ಬಟ್ಲರ್​ಇಂಗ್ಲೆಂಡ್3487*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಶಕೀಬ್​ ಅಲ್​ ಹಸನ್​ಬಾಂಗ್ಲಾದೇಶ​4374*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್2971*
ಬ್ರೆಂಡನ್​ ಮೆಕಲಮ್​ನ್ಯೂಜಿಲ್ಯಾಂಡ್2567

ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಭಾರತ ಸದ್ಯ 8 ಓವರ್​ಗೆ 2 ವಿಕೆಟ್​ ಕಳೆದುಕೊಂಡು 65 ರನ್​ ಗಳಿಸಿದೆ. ರೋಹಿತ್​ ಮತ್ತು ಸೂರ್ಯಕುಮಾರ್​ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ವಿರಾಟ್​ ಕೊಹ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಪಂದ್ಯದಲ್ಲಿಯೂ ಘೋರ ಬ್ಯಾಟಿಂಗ್​ ವೈಫಲ್ಯ ಎದುರಿಸಿದರು. ಪಂತ್​ ಆಟ 4 ರನ್​ಗೆ ಕೊನೆಗೊಂಡಿತು.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

Continue Reading

ಕ್ರೀಡೆ

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

Virat Kohli:2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು.

VISTARANEWS.COM


on

virat kohli
Koo

ಪ್ರೊವಿಡೆನ್ಸ್‌: ವಿರಾಟ್​ ಕೊಹ್ಲಿ(Virat Kohli) ಅವರು ಮೊಟ್ಟ ಮೊದಲ ಬಾರಿಗೆ ಟಿ20 ವಿಶ್ವಕಪ್(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಸಿಂಗಲ್​ ಡಿಜಿಟ್​ಗೆ ವಿಕೆಟ್​ ಒಪ್ಪಿಸಿದ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಅನಗತ್ಯ ದಾಖಲೆ ಬರೆದರು.

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು.

ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​.

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ Virat kohli : ನಿವೃತ್ತಿಯಾಗುವುದು ಉತ್ತಮ; ಕೊಹ್ಲಿ, ರೋಹಿತ್​ಗೆ ಸಲಹೆ ನೀಡಿದ ವೀರೇಂದ್ರ ಸೆಹ್ವಾಗ್​

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು.

Continue Reading

ಕ್ರೀಡೆ

IND vs ENG: ಟಾಸ್​ ಗೆದ್ದ ಇಂಗ್ಲೆಂಡ್​; ಭಾರತಕ್ಕೆ ಬ್ಯಾಟಿಂಗ್ ಆಹ್ವಾನ

IND vs ENG: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

VISTARANEWS.COM


on

IND vs ENG
Koo

ಪ್ರೊವಿಡೆನ್ಸ್‌: .ಮಳೆಯಿಂದ ವಿಳಂಬವಾದ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್​ ತಂಡದ ನಾಯಕ ಜಾಸ್​ ಬಟ್ಲರ್​ ಬೌಲಿಂಗ್​ ಆಯ್ದುಕೊಂಡಿದ್ದಾರೆ. ಭಾರತ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಭಾರತ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಆಸೀಸ್​ ವಿರುದ್ಧ ಕಣಕ್ಕಿಳಿಸಿದ ತಂಡವನ್ನೇ ಈ ಪಂದ್ಯದಲ್ಲಿಯೂ ಮುಂದುವರಿಸಿದೆ.

ಈ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಪಡಿಸಿದರೆ ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದೆ. ಆದರೆ ಮೀಸಲು ದಿನ ಇಲ್ಲ. ಹೆಚ್ಚುವರಿ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ, ಸೂಪರ್​-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್​ ಪ್ರವೇಶಿಸಲಿದೆ.

ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್(T20 World Cup 2024)​ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

ಪಿಚ್​ ರಿಪೋರ್ಟ್​


ಪ್ರಾವಿಡೆನ್ಸ್ ಸ್ಟೇಡಿಯಂನ ಪಿಚ್​ ಬೌಲಿಂಗ್​ಗೆ ಹೆಚ್ಚಿನ ನೆರವು ನೀಡುತ್ತದೆ. ಪಂದ್ಯ ಸಾಗಿದಂತೆ ಇಲ್ಲಿ ಹೆಚ್ಚಾಗಿ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಲಿದ್ದಾರೆ. ದೊಡ್ಡ ಮೊತ್ತ ಬಾರಿಸುವುದು ಇಲ್ಲಿ ಅಷ್ಟು ಸುಲಭವಲ್ಲ. 2010ರಲ್ಲಿ 191 ರನ್ ದಾಖಲಾದದ್ದೆ ಇಲ್ಲಿನ ಗರಿಷ್ಠ ಸ್ಕೋರ್​. 

ಸೇಡಿನ ಪಂದ್ಯ

​2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

ಭಾರತ: ರೋಹಿತ್​ ಶರ್ಮ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್​(ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

ಇಂಗ್ಲೆಂಡ್​: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Continue Reading
Advertisement
Kalki 2898 AD Nag Ashwin Torn Slippers Dedication Behind
South Cinema10 mins ago

Kalki 2898 AD: ‘ಕಲ್ಕಿ 2898 ಎಡಿ’ಗೆ ವೀಕ್ಷಕರಿಂದ ಬಹುಪರಾಕ್ ; ಹರಿದ ಚಪ್ಪಲಿ ಫೋಟೊ ಹಂಚಿಕೊಂಡ ನಿರ್ದೇಶಕ !

Asaduddin Owaisi
ದೇಶ13 mins ago

Asaduddin Owaisi: ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

Kalki 2898 AD Box Office Day Prabhas Film Indian Opener Earns 180 Crore
ಟಾಲಿವುಡ್26 mins ago

Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

mp meet cm siddaramaiah
ಪ್ರಮುಖ ಸುದ್ದಿ38 mins ago

CM Siddaramaiah: ವಿನಾಕಾರಣ ಕೇಂದ್ರವನ್ನು ದೂರಬೇಡಿ: ರಾಜ್ಯ ಸಂಸದರ ಸಭೆಯಲ್ಲಿ ಸಿಎಂಗೆ ಎನ್‌ಡಿಎ ಪಾಠ

Seeds For Weight Loss
ಆರೋಗ್ಯ43 mins ago

Seeds For Weight Loss: ತೂಕ ಇಳಿಸಿಕೊಳ್ಳಬೇಕೆ? ಈ 7 ಬೀಜಗಳನ್ನು ನಿಯಮಿತವಾಗಿ ಸೇವಿಸಿ

Top 5 Engineering Courses
ಶಿಕ್ಷಣ43 mins ago

Top 5 Engineering Courses: ಇವು ಬಹು ಬೇಡಿಕೆಯ ಟಾಪ್ 5 ಎಂಜಿನಿಯರಿಂಗ್ ಕೋರ್ಸ್‌ಗಳು

Vastu Tips
ಧಾರ್ಮಿಕ1 hour ago

Vastu Tips: ಈ ವಾಸ್ತು ನಿಯಮ ಪಾಲಿಸಿದರೆ ವ್ಯವಹಾರದಲ್ಲಿ ವೃದ್ಧಿ

haveri Accident
ಕರ್ನಾಟಕ2 hours ago

Haveri Accident: ಹಾವೇರಿಯಲ್ಲಿ ಭಯಾನಕ ಅಪಘಾತ: ಲಾರಿಗೆ ಟಿಟಿ ಡಿಕ್ಕಿ, 13 ಜನರ ಸಾವು

Weight Loss Tips
ಆರೋಗ್ಯ2 hours ago

Weight Loss Tips: ದಕ್ಷಿಣ ಭಾರತೀಯ ಶೈಲಿಯ ಬೆಳಗಿನ ತಿಂಡಿಯಲ್ಲೂ ನೀವು ತೂಕ ಇಳಿಸಬಹುದು!

Indian Origin Crow
ವಿದೇಶ2 hours ago

Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು17 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ20 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌