Monsoon Raaga | ಮೇಘರಾಜನ ಮೆಲೋಡಿ ಹಾಡಿಗೆ ಮನಸೋತ ಫ್ಯಾನ್ಸ್: ಲಿರಿಕಲ್‌ ವಿಡಿಯೊ ಔಟ್‌! - Vistara News

ಸಿನಿಮಾ

Monsoon Raaga | ಮೇಘರಾಜನ ಮೆಲೋಡಿ ಹಾಡಿಗೆ ಮನಸೋತ ಫ್ಯಾನ್ಸ್: ಲಿರಿಕಲ್‌ ವಿಡಿಯೊ ಔಟ್‌!

ಡಾಲಿ ಧನಂಜಯ ಹಾಗೂ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ (Monsoon Raaga) ಸಿನಿಮಾದ ಮೇಘರಾಜನ ರಾಗ ಹಾಡಿಗೆ ಪ್ರೇಕ್ಷಕರು ಮನಸೋತಿದ್ದಾರೆ. ಇದೇ ಸೆಪ್ಟೆಂಬರ್‌ 16ರಂದು ಸಿನಿಮಾ ಬಿಡುಗಡೆಗೊಳ್ಳುತ್ತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಾಲಿ ಧನಂಜಯ ಹಾಗೂ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ (Monsoon Raaga) ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿರುವ ಬೆನ್ನಲ್ಲೇ ‘ಮೇಘರಾಜನ ರಾಗ’ ಹಾಡಿನ ಲಿರಿಕಲ್‌ ವಿಡಿಯೊ ಬಿಡುಗಡೆ ಮಾಡಿದೆ. ʻʻಮೇಘರಾಜನ ರಾಗ ಹನಿಗಳಾದಂತೆ, ಧಮನಿ ಧಮನಿಯೂ ಸೇರಿ ದನಿಗಳಾದಂತೆʼʼ ಹಾಡು ಪ್ರೇಕ್ಷಕರ ಮನ ಗೆದ್ದಿದೆ.

ಈ ಗೀತೆಯನ್ನು ಕೆ. ಕಲ್ಯಾಣ್‌ ಬರೆದಿದ್ದು, ಅನೂಪ್‌ ಸಿಳೀನ್‌ ಸಂಗೀತ ನಿರ್ದೇಶನ ಹಾಗೂ ಅರವಿಂದ್‌ ವೇಣುಗೋಪಾಲ್‌ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಇಡೀ ಗೀತೆಯಲ್ಲಿ ಹೊಸ ಭಾವ ತುಂಬಿಕೊಂಡಿದೆ ಎಂದು ಹೇಳಲಾಗಿದೆ. ಈ ಹಾಡಿನಲ್ಲಿ ಅನೂಪ್‌ ಸಿಳೀನ್‌ ರೆಟ್ರೋ ಸ್ಟೈಲ್‌ ಟಚ್‌ ನೀಡಿದ್ದು, ಇಡೀ ಹಾಡಿನಲ್ಲಿ ಲೈವ್‌ ಇನ್ಸ್ಟ್ರುಮೆಂಟ್‌ ಅನ್ನು ಬಳಸಿಕೊಂಡಿದ್ದಾರೆ.

ಸಿನಿಮಾ (Monsoon Raaga) ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಇದರ ಬೆನ್ನಲ್ಲೆ ಸಿನಿಮಾ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಸೆಪ್ಟೆಂಬರ್ 16ಕ್ಕೆ ಸಿನಿಮಾ ರಿಲೀಸ್‌ ಆಗಲಿದೆ.

ಈ ಹಿಂದೆ ಚಿತ್ರದ ಟ್ರೈಲರ್‌ ಸಖತ್‌ ಸೌಂಡ್‌ ಮಾಡಿತ್ತು. ಟ್ರೈಲರ್‌ ನೋಡುವಾಗ ಚಿತ್ರ ಮಳೆಯ ಹಿನ್ನೆಲೆಯಲ್ಲಿ ಸಾಗುವ ಕಥೆಯನ್ನು ಹೊಂದಿರುವಂತೆ ಕಂಡುಬರುತ್ತಿದೆ. ಕೆಟ್ಟ ಜಗತ್ತಿನಲ್ಲಿ ಪ್ರೀತಿ ಅರಳುವ ಕಥಾ ಹಂದರವಿದೆ. ಒಂದು ಕಡೆ ಡಾಲಿ ಧನಂಜಯ್‌ ಹಾಗೂ ರಚಿತಾರಾಮ್‌ ಕಾಣಿಸಿಕೊಂಡರೆ ಇನ್ನೊಂದೆಡೆ ಅಚ್ಯುತ್‌ ಕುಮಾರ್‌ ಹಾಗೂ ಸುಹಾಸಿನಿ ಅವರ ಪಾತ್ರ ಕಾಡುತ್ತದೆ. ವಿಖ್ಯಾತ್‌ ನಿರ್ಮಿಸಿರುವ ಈ ಚಿತ್ರವನ್ನು ರವೀಂದ್ರನಾಥ್‌ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ | Monsoon Raaga | ಸೆನ್ಸಾರ್ ಪಡೆದ ಡಾಲಿ-ರಚಿತಾ ಅಭಿನಯದ ಮಾನ್ಸೂನ್ ರಾಗ, ಬಿಡುಗಡೆಗೆ ರೆಡಿ!

ಚಿತ್ರದಲ್ಲಿ ರಚಿತಾ ರಾಮ್‌ ಲೈಂಗಿಕ ಕಾರ್ಯಕರ್ತೆಯಾಗಿ ಕಾಣಿಸಿಕೊಂಡಿದ್ದಾರೆ. ಮಾನ್ಸೂನ್‌ ರಾಗ ಸಿನಿಮಾ ಶೇ. 80ರಷ್ಟು ಮಳೆಯಲ್ಲಿಯೇ ಚಿತ್ರೀಕರಣವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ | Monsoon Raaga | ಡಾಲಿ-ರಚಿತಾ ಅಭಿನಯದ ಮಾನ್ಸೂನ್ ರಾಗ ಸಿನಿಮಾ ಟ್ರೈಲರ್‌ಗೆ ಭಾರಿ ಮೆಚ್ಚುಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Chandan Shetty: ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

VISTARANEWS.COM


on

Chandan Shetty Students Party Video Song Vidyarthi Vidyarthiniyare Movie
Koo

ಬೆಂಗಳೂರು: ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ (Vidyarthi Vidyarthiniyare Movie) ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ (Chandan Shetty) ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ.

ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ.

ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

ಇನ್ನುಳಿದಂತೆ ಸಾಹಿತ್ಯ ಬರೆದಿರುವ ಚೇತನ್ ಕುಮಾರ್ ಅವರಿಗೆ ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಇಷ್ಟವಂತೆ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆಂದಿರುವ ಚೇತನ್, ಇದೂ ಜನಮನ ಗೆಲ್ಲಲೆಂದು ಹಾರೈಸಿದ್ದಾರೆ. ಈ ವೇದಿಕೆಯಲ್ಲಿ ಸದರಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಹಾಜರಿದ್ದರು.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

ಚಂದನ್ ಶೆಟ್ಟಿ , ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಸಿನಿಮಾ

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Actor Darshan: ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ ಎಂದರು.

VISTARANEWS.COM


on

Actor Darshan teacher Addanda Cariappa sad on arrested darshan
Koo

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಬಗ್ಗೆ ಮೈಸೂರಿನ ರಂಗಾಯಣದ ಅಡ್ಡಂಡ ಕಾರ್ಯಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ʻʻದರ್ಶನ್‌ಗೆ ಶನಿಯಾಗಿ ಬಂದಿದ್ದು ಪವಿತ್ರಾ ಗೌಡ. ರೇಣುಕಾಸ್ವಾಮಿ ಪತ್ನಿ ಅನಾಥವಾಗಿದ್ದಾಳೆʼʼಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮವೊಂದರಲ್ಲಿ ಅಡ್ಡಂಡ ಕಾರ್ಯಪ್ಪ ಮಾತನಾಡಿ ʻʻದರ್ಶನ್‌ ಮೆಜಿಸ್ಟಿಕ್‌ ಸಿನಿಮಾ ಹಿಟ್‌ ಆದ ಬಳಿಕ ನನ್ನ ಹತ್ರ ಬಂದಿದ್ದ. ನನ್ನ ಮನೆಗೆ ಬಂದು ನನ್ನ ಕಾಲಿಗೆ ಬಿದ್ದು ನಿಮ್ಮ ಆಶೀರ್ವಾದ ಎಂದ. ಅಲ್ಲಿಂದ ಅವನು ಬೆಳೆಯುತ್ತ ಹೋದ. ಹಲವು ವಿಡಿಯೊಗಳಲ್ಲಿ ಅವನ ಬಾಡಿ ಲಾಂಗ್ವೇಜ್‌ ನೋಡಿದ್ದೆ. ಅಕ್ಕನ್‌…ಅಮ್ಮನ್‌.. ಈ ರೀತಿ ಹೊಲಸು ಮಾತುಗಳು. ಅದನ್ನು ನೋಡಿ ನನಗೆ ಊಹಿಸಲು ಆಗಿಲ್ಲ. ಇವನ ನಡವಳಿಕೆ ಬರಬರುತ್ತ ತುಂಬ ಚೇಂಜ್‌ ಆಯ್ತು. ಎಜುಕೇಶನ್‌ ಕೊರತೆ ಅವನಿಗೆ ಇದೆʼʼಎಂದರು.

ಬದುಕು ಮತ್ತು ಸಿನಿಮಾ ಬೇರೆ ಬೇರೆ

ʻʻಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ. ದರ್ಶನ್‌ಗೆ ಒಂದು ಪಾಠ ಇದು. ಅವನ ಜೀವನ ಇಲ್ಲಿಗೆ ಮುಗಿದಿಲ್ಲ. ರೇಣುಕಾಸ್ವಾಮಿ ಏನೋ ಸತ್ತ. ಆದರೆ ಅವನ ಹೆಂಡತಿ ಕಥೆ ಏನು? ದರ್ಶನ್‌ ಅಭಿಮಾನಿಗಳಿಗೆ ನಾನು ಹೇಳುವುದು ಇಷ್ಟೇ. ನಿಮಗೆ ದರ್ಶನ್‌ ಎಷ್ಟು ಮುಖ್ಯವೋ. ಅದೇ ರೀತಿ ರೇಣುಕಾ ಸ್ವಾಮಿ ಹೆಂಡತಿ ಕೂಡ ಅಷ್ಟೇ ಮುಖ್ಯ. ರೇಣುಕಾಸ್ವಾಮಿ ತಪ್ಪು ಮಾಡಿದ್ದಾರೆ. ಆತನ ಹೆಂಡತಿಗೆ ಸಾಂತ್ವನ ಹೇಳಿʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ!

ʻʻಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಸುದೀಪ್‌ಗೆ ಹಾಗೆ ಫ್ರೆಂಡ್ಸ್ ಮಾಡಿಕೊಳ್ಳೋಕೆ ಆಗಲ್ಲ. ಯಾಕಂದ್ರೆ, ಸುದೀಪ್ ವಿದ್ಯಾವಂತ. ಸಹವಾಸ ದೋಷ, ಹೆಂಡ, ಮೊದಲ ಹೆಂಡತಿಗೆ ಚಿತ್ರಹಿಂಸೆ ಕೊಟ್ಟಿದ್ದು, ಹಾಗೇ ಮೀಡಿಯಾದವರು ಅವನನ್ನ 2 ವರ್ಷ ಬ್ಯಾನ್ ಮಾಡಿದರು. ರಾಜ್‌ಕುಮಾರ್ ಅವರ ವಿನೀತತೆಯನ್ನ ನೋಡಿ ದರ್ಶನ್ ಕಲಿತುಕೊಳ್ಳಲಿಲ್ಲ’’ ಎಂದು ಅಡ್ಡಂಡ ಕಾರ್ಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಮಾಹಿತಿ ಕಲೆ

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Actor Darshan: ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Actor Darshan case pavithra Gowda manager Arrest
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 16ಜನ (Actor Darshan) ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ರೇಣುಕಾ ಸ್ವಾಮಿ ಮೇಲೆ ಮೊದಲು ಹಲ್ಲೆ ನಡೆಸಿದ್ದೇ ಪವಿತ್ರಾ ಗೌಡ ಎನ್ನಲಾಗಿದೆ. ಪವಿತ್ರಾಗೌಡ ನೋಡುತ್ತಿದ್ದಂತೆ ರೇಣುಕಾಸ್ವಾಮಿ ಪವಿತ್ರಾ ಕಾಲಿಗೆ ಬಿದ್ದು ತಪ್ಪಾಯ್ತು ಅಂತ ಕ್ಷಮೆ ಕೇಳಿದ್ದನಂತೆ. ಸದ್ಯ ಪವಿತ್ರಾ ಮನೆಯಲ್ಲಿ ಪೊಲೀಸರು ಆ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದ ಚಪ್ಪಲಿಯನ್ನ ಸೀಜ್ ಮಾಡಲಿದ್ದಾರೆ. ಪ್ರಕರಣದಲ್ಲಿ ಪವಿತ್ರಾ ಚಪ್ಪಲಿ ಕೂಡ ಮಹತ್ವದ ಸಾಕ್ಷ್ಯವಾಗಲಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಕರ್ನಾಟಕ

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Bahaddur Movie: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ, ಈಗ 10 ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.

VISTARANEWS.COM


on

Bahaddur movie is re released on June 21
Koo

ಬೆಂಗಳೂರು: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ. ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ (Bahaddur Movie) ಮರು ಬಿಡುಗಡೆಯಾಗುತ್ತಿದ್ದು, ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ.

“ಬಹದ್ದೂರ್” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಧ್ವನಿ ನೀಡಿದ್ದರು.‌ ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ “ಬಹದ್ದೂರ್”. ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಹಾರೈಸಿದ್ದರು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಪುನೀತ್ ರಾಜಕುಮಾರ್ ಅವರೇ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು. ವಿ.ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಇಂದಿಗೂ‌ ಜನಪ್ರಿಯ. “ಬಹದ್ದೂರ್ ” ಬಿಡುಗಡೆಯಾದ ಹತ್ತು ವರ್ಷಗಳಲ್ಲಿ ನೂರಾರೂ ಸಲ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದೆ.

ಇದನ್ನೂ ಓದಿ: T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಈ ಚಿತ್ರ ಪ್ರಸಾರವಾದಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.

Continue Reading
Advertisement
Team India Coach
ಕ್ರೀಡೆ5 mins ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ11 mins ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ16 mins ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್34 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್48 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್1 hour ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ1 hour ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ1 hour ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್1 hour ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ1 hour ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌