ಬಿಜೆಪಿಯಲ್ಲೇ ಇದ್ದುಕೊಂಡು ಆಪ್​​ಗಾಗಿ ಕೆಲಸ ಮಾಡಿ; ಕಾರ್ಯಕರ್ತರಿಗೆ ಕರೆ ನೀಡಿದ ಅರವಿಂದ್ ಕೇಜ್ರಿವಾಲ್​ - Vistara News

ದೇಶ

ಬಿಜೆಪಿಯಲ್ಲೇ ಇದ್ದುಕೊಂಡು ಆಪ್​​ಗಾಗಿ ಕೆಲಸ ಮಾಡಿ; ಕಾರ್ಯಕರ್ತರಿಗೆ ಕರೆ ನೀಡಿದ ಅರವಿಂದ್ ಕೇಜ್ರಿವಾಲ್​

Arvind Kejriwal : ಗುಜರಾತ್​​ನಲ್ಲಿ ಡಿಸೆಂಬರ್​ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲಿ ಹೇಗಾದರೂ ಬಿಜೆಪಿ ಕೈಯಲ್ಲಿರುವ ಆಡಳಿತವನ್ನು ಪಡೆದುಕೊಳ್ಳಬೇಕು ಎಂಬುದು ಆಮ್​ ಆದ್ಮಿ ಪಕ್ಷದ ಪ್ರಯತ್ನ.

VISTARANEWS.COM


on

AAP MLAs to hold door-to-door campaign against arrest of Sisodia, Jain
ಅರವಿಂದ್ ಕೇಜ್ರಿವಾಲ್​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್​ಕೋಟ್​: ಗುಜರಾತ್​​ನಲ್ಲಿ ಇದೇ ವರ್ಷ ಡಿಸೆಂಬರ್​​ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮೇಲೆ ಆಮ್​ ಆದ್ಮಿ ಪಕ್ಷ ಕಣ್ಣಿಟ್ಟಿದೆ. ಆಪ್​​ನ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal)​, ಗುಜರಾತ್​ನಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿದ್ದಾರೆ. 10 ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್​ ಮುಷ್ಟಿಯಲ್ಲಿದ್ದ ಪಂಜಾಬ್​​ನ್ನು ಗೆದ್ದ ಬಳಿಕ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿಕೊಂಡ ಆಮ್​ ಆದ್ಮಿ ಪಕ್ಷ ಇದೀಗ ಪ್ರಧಾನಿ ಮೋದಿ ತವರು ರಾಜ್ಯವಾದ ಗುಜರಾತ್​ನಲ್ಲಿ ಹೇಗಾದರೂ ಗೆಲ್ಲಬೇಕು ಎಂಬ ಹಠ ತೊಟ್ಟಿದೆ.

ಇಂದು ಮತ್ತೆ ಗುಜರಾತ್​​ನಲ್ಲಿ ಚುನಾವಣಾ ಪ್ರಚಾರ ನಡೆಸಿರುವ ಅರವಿಂದ್ ಕೇಜ್ರಿವಾಲ್​ ಅಲ್ಲಿನ ಬಿಜೆಪಿ ಕಾರ್ಯಕರ್ತರಿಗೆ ಕರೆಯೊಂದನ್ನು ಕೊಟ್ಟಿದ್ದಾರೆ. ‘ನೀವೆಲ್ಲ ಬಿಜೆಪಿಯಲ್ಲೇ ಇರಿ. ಪಕ್ಷ ಬಿಟ್ಟು ಬರುವುದೇನೂ ಬೇಡ. ಆದರೆ ಅಲ್ಲಿಯೇ ಇದ್ದುಕೊಂಡು ಆಮ್​ ಆದ್ಮಿ ಪಕ್ಷಕ್ಕಾಗಿ ಕೆಲಸ ಮಾಡಿ. ನಿಮ್ಮ ಸಂಬಳವನ್ನೂ ಬಿಜೆಪಿಯಿಂದಲೇ ಪಡೆಯಿರಿ’ ಎಂದು ಗುಜರಾತ್​ ಬಿಜೆಪಿ ಕಾರ್ಯಕರ್ತರಿಗೆ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ‘ನಮಗೆ ಬಿಜೆಪಿ ನಾಯಕರು ಬೇಡ. ಆ ಪಕ್ಷದ ನಾಯಕರು ಅಲ್ಲಿಯೇ ಇರಲಿ. ಇತ್ತೀಚೆಗೆ ಹಳ್ಳಿಹಳ್ಳಿಗಳಲ್ಲಿ ಬಿಜೆಪಿ ನಾಯಕರು, ಬೂತ್​ ಮಟ್ಟದ, ತಾಲೂಕು ಮಟ್ಟದ ನಾಯಕರು ನಮ್ಮೊಂದಿಗೆ ಸೇರುತ್ತಿದ್ದಾರೆ. ಇಷ್ಟೆಲ್ಲ ವರ್ಷಗಳ ಕಾಲ ಆ ಪಕ್ಷಕ್ಕಾಗಿ ದುಡಿದರೂ, ಬಿಜೆಪಿ ಅವರಿಗೆ ಕೊಟ್ಟಿದ್ದೇನು’ ಎಂದು ಅರವಿಂದ್ ಕೇಜ್ರಿವಾಲ್​ ಪ್ರಶ್ನಿಸಿದ್ದಾರೆ.

ಹಾಗೇ, ಗುಜರಾತ್​ನಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದರೆ ಉಚಿತವಾಗಿ, ದಿನದ 24ಗಂಟೆ ವಿದ್ಯುತ್​ ನೀಡುತ್ತೇವೆ. ಉತ್ತಮ ವ್ಯವಸ್ಥೆಗಳುಳ್ಳ ಶಾಲೆಗಳನ್ನು ನಿರ್ಮಿಸುತ್ತೇವೆ. ಉಚಿತವಾಗಿ-ಅತ್ಯುತ್ತಮ ಶಿಕ್ಷಣ ನೀಡುತ್ತೇವೆ. ದೆಹಲಿ ಮಾದರಿಯ ಶಿಕ್ಷಣ ವ್ಯವಸ್ಥೆಯನ್ನೇ ಗುಜರಾತ್​​ನಲ್ಲೂ ಜಾರಿಗೊಳಿಸುತ್ತೇವೆ. ಹಾಗೇ, ಅತ್ಯುತ್ತಮ ಗುಣಮಟ್ಟದ ಉಚಿತ ಮತ್ತು ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡುತ್ತೇವೆ. ಪ್ರತಿ ಕುಟುಂಬದ ಮಹಿಳೆಯರಿಗೆ 1000 ರೂಪಾಯಿಯನ್ನು ಭತ್ಯೆ ರೂಪದಲ್ಲಿ ನೀಡುತ್ತೇವೆ ಎಂದೂ ಭರವಸೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಹುಮತ ಸಾಬೀತು ಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​; 62 ಶಾಸಕರಲ್ಲಿ ಮತ ಹಾಕಿದ್ದು 58 ಮಂದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮತ್ತು ಸುದರ್ಶನ್ ಟೆಲಿವಿಷನ್ ಚಾನೆಲ್‌ನ ಮುಖ್ಯ ಸಂಪಾದಕ, ಬಿಜೆಪಿಯ ತೆಲಂಗಾಣ ಶಾಸಕ ರಾಜಾ ಸಿಂಗ್ ಹಾಗೂ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಪಾಕಿಸ್ತಾನ ಮತ್ತು ನೇಪಾಳದ ಸಹಚರರೊಂದಿಗೆ ಸೇರಿಕೊಂಡು ಬೆದರಿಕೆ ಹಾಕಿದ ಆರೋಪದ ಮೇಲೆ ಮೌಲ್ವಿಯನ್ನು ಗುಜರಾತ್‌ನ ಸೂರತ್‌ನಲ್ಲಿ ಶನಿವಾರ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಮೌಲ್ವಿ ಸೊಹೆಲ್ ಅಬೂಬಕರ್ ತಿಮೋಲ್ (27) ಎಂದು ಗುರುತಿಸಲಾಗಿದೆ.

VISTARANEWS.COM


on

arrest
Koo

ಗಾಂಧಿನಗರ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮತ್ತು ಸುದರ್ಶನ್ ಟೆಲಿವಿಷನ್ ಚಾನೆಲ್‌ನ ಮುಖ್ಯ ಸಂಪಾದಕ, ಬಿಜೆಪಿಯ ತೆಲಂಗಾಣ ಶಾಸಕ ರಾಜಾ ಸಿಂಗ್ ಹಾಗೂ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಪಾಕಿಸ್ತಾನ ಮತ್ತು ನೇಪಾಳದ ಸಹಚರರೊಂದಿಗೆ ಸೇರಿಕೊಂಡು ಬೆದರಿಕೆ ಹಾಕಿದ ಆರೋಪದ ಮೇಲೆ ಮೌಲ್ವಿ (Maulvi)ಯನ್ನು ಗುಜರಾತ್‌ನ ಸೂರತ್‌ನಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ʼʼಬಂಧಿತ ಆರೋಪಿಯನ್ನು ಮೌಲ್ವಿ ಸೊಹೆಲ್ ಅಬೂಬಕರ್ ತಿಮೋಲ್ (27) ಎಂದು ಗುರುತಿಸಲಾಗಿದೆ. ಈತ ಕಾರ್ಖಾನೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಜತೆಗೆ ಮುಸ್ಲಿಂ ಮಕ್ಕಳಿಗೆ ಇಸ್ಲಾಂ ಬಗ್ಗೆ ಬೋಧನೆ ಮಾಡುತ್ತಿದ್ದʼʼ ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹ್ಲೋಟ್ ವಿವರಿಸಿದ್ದಾರೆ.

ʼʼಹಿಂದೂ ಸನಾತನ ಸಂಘದ ರಾಷ್ಟ್ರೀಯ ಅಧ್ಯಕ್ಷ ಉಪದೇಶ್ ರಾಣಾ ಅವರನ್ನು ಹತ್ಯೆ ಮಾಡಲು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಮತ್ತು 1 ಕೋಟಿ ರೂ.ಗಳ ‘ಸುಪಾರಿ’ ನೀಡಲು ಸೊಹೆಲ್ ಅಬೂಬಕರ್ ತಿಮೋಲ್ ಪಾಕಿಸ್ತಾನ ಮತ್ತು ನೇಪಾಳದ ಸಹಚರರೊಂದಿಗೆ ಸೇರಿ ಪಿತೂರಿ ನಡೆಸಿರುವುದು ತನಿಖೆ ವೇಳೆ ಕಂಡುಬಂದಿದೆʼʼ ಎಂದು ಗೆಹ್ಲೋಟ್ ಹೇಳಿದ್ದಾರೆ.

“ಬಂಧಿತ ಸೊಹೆಲ್ ಅಬೂಬಕರ್ ತಿಮೋಲ್ ಬಳಿಯಿಂದ ಉಪದೇಶ್‌ ರಾಣಾ ಅವರ ಹತ್ಯೆಗೆ 1 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿರುವುದು ಸೇರಿದಂತೆ ಹಲವು ಪ್ರಮುಖ ಸಾಕ್ಷಿಗಳನ್ನು ಗುರುತಿಸಲಾಗಿದೆ. ಜತೆಗೆ ಮೊಬೈಲ್ ಫೋನ್‌ನಲ್ಲಿ ಹಲವು ಪ್ರಮುಖ ದಾಖಲೆಗಳು ದೊರೆತಿವೆ. ಹತ್ಯೆ ನಡೆಸುವ ಉದ್ದೇಶದಿಂದ ಆತ ಪಾಕಿಸ್ತಾನ ಮತ್ತು ನೇಪಾಳದ ವ್ಯಕ್ತಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ” ಎಂದು ಗೆಹ್ಲೋಟ್ ತಿಳಿಸಿದ್ದಾರೆ.

“ಈ ವರ್ಷದ ಮಾರ್ಚ್‌ನಲ್ಲಿ ಉಪದೇಶ್‌ ರಾಣಾ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಿಮೋಲ್ ಭಾಗಿಯಾಗಿರುವುದು ಕಂಡು ಬಂದಿದೆ. ಸುದರ್ಶನ್ ಟಿವಿಯ ಪ್ರಧಾನ ಸಂಪಾದಕ ಸುರೇಶ್ ಚವ್ಹಾಂಕೆ, ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತು ಹೈದರಾಬಾದ್ ಶಾಸಕ ರಾಜಾ ಸಿಂಗ್ ಅವರಿಗೆ ಜೀವ ಬೆದರಿಕೆ ಹಾಕುವ ಬಗ್ಗೆ ಆರೋಪಿ ಮತ್ತು ಸಹಚರರು ಚರ್ಚಿಸುತ್ತಿದ್ದರು. ಆತನ ಮೊಬೈಲ್‌ನಲ್ಲಿ ದೊರೆತ ಫೋಟೊ ಮತ್ತು ಇತರ ವಿವರಗಳು ಇದನ್ನು ದೃಢಪಡಿಸುತ್ತದೆ. ಈ ಉದ್ದೇಶಕ್ಕಾಗಿ ಅವರು ಹಣ ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಯೋಜನೆ ರೂಪಿಸುತ್ತಿದ್ದರುʼʼ ಎಂದು ಹೇಳಿದ್ದಾರೆ.

ʼʼಆರೋಪಿಗಳು ಹಿಂದುತ್ವ ನಾಯಕರನ್ನು ಹತ್ಯೆ ಮಾಡುವ ಬಗ್ಗೆ ಮಾತನಾಡಿದ್ದಾರೆ ಮತ್ತು ಕಮಲೇಶ್ ತಿವಾರಿ (2019ರಲ್ಲಿ ಕೊಲೆಗೀಡಾದ ಉತ್ತರ ಪ್ರದೇಶ ಮೂಲದ ಹಿಂದೂ ಸಮಾಜ ಪಾರ್ಟಿಯ ಅಧ್ಯಕ್ಷ) ಅವರ ಹತ್ಯೆಯ ಬಗ್ಗೆ ಚರ್ಚಿಸಿದ್ದಾರೆʼʼ ಎಂದು ಗೆಹ್ಲೋಟ್ ತಿಳಿಸಿದ್ದಾರೆ. ʼʼಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಸಲುವಾಗಿ ತಿಮೋಲ್ ಶೀಘ್ರದಲ್ಲೇ ರಾಣಾ ಅವರನ್ನು ಕೊಲ್ಲಲು ಬಯಸಿದ್ದ ಎನ್ನುವ ಅಂಶ ಆತನ ಮೆಸೇಜ್‌ ಮೂಲಕ ಬಹಿರಂಗಗೊಂಡಿದೆʼʼ ಎಂದು ಅವರು ವಿವರಿಸಿದ್ದಾರೆ.

ಅಂತಾರಾಷ್ಟ್ರೀಯ ಸಿಮ್

ಪಾಕಿಸ್ತಾನ ಮತ್ತು ನೇಪಾಳಕ್ಕೆ ಸೇರಿದ ಫೋನ್ ಸಂಖ್ಯೆಗಳನ್ನು ಹೊಂದಿರುವ ದೋಗರ್ ಮತ್ತು ಶೆಹನಾಜ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ತಿಮೋಲ್‌ನನ್ನು ಸಂಪರ್ಕಿಸಿದ್ದಾರೆ ಎನ್ನುವ ವಿಚಾರ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಅಪರಾಧ ವಿಭಾಗದ ಪ್ರಕಟಣೆ ತಿಳಿಸಿದೆ. ಪೊಲೀಸರ ಪ್ರಕಾರ, ತಿಮೋಲ್‌ ತನ್ನ ಗುರುತನ್ನು ರಹಸ್ಯವಾಗಿಡಲು ಲಾವೋಸ್‌ನಿಂದ ಅಂತಾರಾಷ್ಟ್ರೀಯ ಸಿಮ್ ಖರೀದಿಸಿದ್ದ. ಚಾಟ್ ಅಪ್ಲಿಕೇಶನ್‌ನಲ್ಲಿ ಹಿಂದೂ ಧರ್ಮದ ವಿರುದ್ಧ ಭಾಷಣಗಳನ್ನು ಬರೆದಿದ್ದ ಮತ್ತು ಕಮಲೇಶ್ ತಿವಾರಿಯಂತೆ ರಾಣಾ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) (ಧರ್ಮ, ಜನಾಂಗದ ಮೇಲೆ ಉದ್ದೇಶಪೂರ್ವಕ ನಿಂದನೆ ಅಥವಾ ದಾಳಿಯಲ್ಲಿ ತೊಡಗುವುದು), 467, 468 ಮತ್ತು 471 (ದಾಖಲೆಗಳು ಅಥವಾ ಎಲೆಕ್ಟ್ರಾನಿಕ್ ದಾಖಲೆಗಳನ್ನು ನಕಲು ಮಾಡುವುದು) ಮತ್ತು ಸೆಕ್ಷನ್ 120 (ಬಿ) ಕ್ರಿಮಿನಲ್ ಪಿತೂರಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ತಿಮೋಲ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Continue Reading

ದೇಶ

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Nijjar Killing:ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂಬ ಕೆನಡಾ ಆರೋಪಕ್ಕೆ ಭಾರತ ತಿರುಗೇಟು ನೀಡಿದೆ. ಕೆನಡಾ ಆರೋಪಕ್ಕೆ ತಿರುಗೇಟು ಕೊಟ್ಟಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈ ಶಂಕರ್‌ , ಜಸ್ಟಿನ್‌ ಟ್ರೂಡೋ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಭಾರತದ ವಿರುದ್ಧ ಆರೋಪ ಮಾಡುವ ಮೂಲಕ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Nijjar Killing
Koo

ನವದೆಹಲಿ: ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ(Nijjar Killing) ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂಬ ಕೆನಡಾ(Canada) ಆರೋಪಕ್ಕೆ ಭಾರತ ತಿರುಗೇಟು ನೀಡಿದೆ. ಕೆನಡಾ ಆರೋಪಕ್ಕೆ ತಿರುಗೇಟು ಕೊಟ್ಟಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈ ಶಂಕರ್‌(Jai Shankar), ಜಸ್ಟಿನ್‌ ಟ್ರೂಡೋ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಭಾರತದ ವಿರುದ್ಧ ಆರೋಪ ಮಾಡುವ ಮೂಲಕ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆನಡಾ ಆರೋಪಕ್ಕೆ ತಿರುಗೇಟು ನೀಡಿದ ಜೈಶಂಕರ್‌, ನಿಜ್ಜರ್‌ ಕೊಲೆಗೂ ಭಾರತಕ್ಕೂ ಯಾವುದೇ ಸಂಬಂಧ ಇಲ್ಲ. ಕೆನಡಾದಲ್ಲಿ ಆಂತರಿಕ ಅಲ್ಪ ಸಂಖ್ಯಾತರ ವೋಟ್‌ ಪಡೆಯಲು ನಿಜ್ಜರ್‌ ಕೊಲೆ ಪ್ರಕರಣವನ್ನು ಬಳಸಿಕೊಳ್ಳುತ್ತಿದೆ. ಖಲಿಸ್ತಾನದ ಜೊತೆ ಲಿಂಕ್‌ ಇರುವ ಡೆಮಾಕ್ರಟಿಕ್‌ ಪಕ್ಷದ ಸಹಾಯದೊಂದಿಎಗೆ ಟ್ರೂಡೋ ಸರ್ಕಾರ ನಡೆಸುತ್ತಿದ್ದಾರೆ. ಹೀಗಾಗಿ ಸಿಖ್‌ ಅಲ್ಪ ಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಕೆನಡಾ ಸರ್ಕಾರ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಭಾರತ ಈ ಹಿಂದೆಯೇ ಉಗ್ರ ಚಟುಟಿಕೆಯಲ್ಲಿ ಭಾಗಿಯಾಗಿರುವ 25 ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಕೆನಡಾ ಸರ್ಕಾರಕ್ಕೆ ಭಾರತ ಮನವಿ ಮಾಡಿತ್ತು. ಆದರೆ ಟ್ರೂಡೋ ಸರ್ಕಾರ ಯಾವುದೇ ರೀತಿಯ ಸ್ಪಂದನೆ ನೀಡಿರಲಿಲ್ಲ. ಈಗ ಈ ವಿಚಾರದಲ್ಲಿ ಡ್ರಾಮಾ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಕಳೆದ ವರ್ಷ ಕೆನಡಾದ ಬ್ರಿಟೀಷ್‌ ಕೊಲಂಬಿಯಾದಲ್ಲಿ ಹರ್ದೀಪ್‌ ಸಿಂಗ್‌ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಮೂವರು ಹಂತಕರನ್ನುಕೆನಡಾ ಪೊಲೀಸರು ಅರೆಸ್ಟ್‌ ಮಾಡಿದ್ದರು. ಬಂಧಿತರನ್ನು ಕರಣ್‌ ಪ್ರಿತ್‌ ಸಿಂಗ್(28) ಕಮಲ್‌ ಪ್ರಿತ್‌ ಸಿಂಗ್‌(22) ಮತ್ತು ಕರಣ್‌ ಬ್ರಾರ್‌(22) ಎಂದು ಗುರುತಿಸಲಾಗಿದೆ. ಅಲ್ಲದೇ ಪೊಲೀಸರು ಮೂವರು ಹಂತಕರ ಫೊಟೋವನ್ನೂ ಕೂಡ ರಿಲೀಸ್‌ ಮಾಡಿದ್ದರು. ಆರೋಪಿಗಳ ವಿರುದ್ಧ ಕೊಲೆಗೆ ಸಂಚು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಕೋರ್ಟ್‌ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ.

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಮೂವರನ್ನು ಅರೆಸ್ಟ್‌ ಮಾಡಿರುವ ಬೆನ್ನಲ್ಲೇ ಕೆನಡಾ ಮತ್ತೆ ಭಾರತದತ್ತ ಬೊಟ್ಟು ಮಾಡಿ ತೋರಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೆನಡಾ ಸಂಸದ ಜಗ್ಮಿತ್‌ ಸಿಂಗ್‌, ಪ್ರಕರಣದಲ್ಲಿ ಭಾರತದ ಕೈವಾಡವಿರುವುದು ಸಾಬೀತಾಗಿದೆ. ಕೆನಡಾದಂತಹ ಪೂಜ್ಯನೀಯ ಸ್ಥಳದಲ್ಲಿ ಕೆನಡಾ ಪ್ರಜೆಯನ್ನು ಕೊಲ್ಲಲು ಭಾರತ ಹಂತಕರನ್ನು ನೇಮಿಸಿದೆ ಎಂದು ಆರೋಪಿಸಿದ್ದರು.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದರು. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

ಇದನ್ನೂ ಓದಿ:HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

Continue Reading

ರಾಜಕೀಯ

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Kangana Ranaut: ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ಹಿಮಾಚಲ ಪ್ರದೇಶ: ಲೋಕಸಭೆ ಚುನಾವಣೆ(Kangana Ranaut) ದೇಶದಲ್ಲಿ ದಿನೇ ದಿನೇ ರಂಗೇರಿದೆ. ಅಬ್ಬರದ ಪ್ರಚಾರ, ಪರ ವಿರೋಧ ವಾಗ್ದಾಳಿ ನಡೆಸಿದ್ದಾರೆ. ಎದುರಾಳಿ ನಾಯಕರನ್ನು ಟೀಕಿಸುವ ಭರದಲ್ಲಿ ಕೆಲವೊಮ್ಮೆ ತಮ್ಮದೇ ಪಕ್ಷಕ್ಕೆ ಮುಜುಗರ ತಂದಿರುವ ಘಟನೆಗಳೂ ನಡೆಯುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಹೇಳಿಕೆ ಮೂಲಕ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಅಭ್ಯರ್ಥಿ ಕಂಗನಾ ರಾಣಾವತ್‌ ಆಭಾಸಕ್ಕೀಡಾಗಿದ್ದಾರೆ. ಪ್ರಚಾರ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಬಿಹಾರದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌(Tejaswi Yadav) ಅವರನ್ನು ಟೀಕಿಸುವ ಭರದಲ್ಲಿ ತಮ್ಮದೇ ಪಕ್ಷ ಬಿಜೆಪಿ ಮುಖಂಡ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿತೇಜಸ್ವಿ ಸೂರ್ಯ(Tejaswi Surya) ಹೆಸರು ಪ್ರಸ್ತಾಪಿಸಿ ಮುಜುಗರಕ್ಕೀಡಾಗಿದ್ದಾರೆ. ಇದೀಗ ಈ ವಿಡಿಯೋ ವೈರಲ್‌(Viral Video) ಆಗಿದ್ದು, ಖುದ್ದು, ತೇಜಸ್ವಿ ಯಾದವ್‌ ಅವರೇ ಈ ವಿಡಿಯೋಗೆ ರಿಯಾಕ್ಟ್‌ ಮಾಡಿದ್ದಾರೆ.

ಕಂಗನಾ ಹೇಳಿದ್ದೇನು?

ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಏ.9ರಂದು ನವರಾತ್ರಿಯ ದಿನ ತೇಜಸ್ವಿ ಯಾದವ್‌ ಮೀನು ತಿನ್ನುವ ಫೋಟೋವನ್ನು ಶೇರ್‌ ಮಾಡಿಕೊಂಡು ಭಾರೀ ಟೀಕೆಗೆ ಗುರಿಯಾಗಿದ್ದರು. ಇದೇ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಕಂಗನಾ, ರಾಹುಲ್‌, ಅಖಿಲೇಶ್‌ ಯಾದವ್‌ ಮತ್ತು ತೇಜಸ್ವಿ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದರು. ಸಂಪೂರ್ಣವಾಗಿ ಹಾಳಾದ ರಾಜಕುಮಾರರನ್ನು ಹೊಂದಿರುವ ಪಕ್ಷಗಳಿವೆ. ಅಲ್ಲಿ ಚಂದ್ರನ ಮೇಲೆ ಆಲೂಗೆಡ್ಡೆ ಬೆಳೆಯುವ ರಾಹುಲ್‌ ಗಾಂಧಿ, ಗೂಂಡಾಗಿರಿ ಮಾಡುವ ಮತ್ತು ಮೀನು ತಿನ್ನುವ ತೇಜಸ್ವಿ ಸೂರ್ಯ ಮತ್ತು ಅಸಂಬದ್ದ ಹೇಳಿಕೆ ನೀಡುವ ಅಖಿಲೇಶ್‌ ಯಾದವ್‌ ಇದ್ದಾರೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ಭಾಷೆಯನ್ನು ಅರ್ಥ ಮಾಡಿಕೊಳ್ಳದಿರುವ ಇಂತಹ ನಾಯಕರು ಹೇಗೆ ತಾನೇ ದೇಶವನ್ನು ನಡೆಸಬಲ್ಲರು ಎಂದು ಅವರು ವ್ಯಂಗ್ಯವಾಡಿರುವ ವಿಡಿಯೋ ವೈರಲ್‌ ಆಗಿದೆ.

ಇದನ್ನೂ ಓದಿ:Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

ಟಾಂಗ್‌ ಕೊಟ್ಟ ತೇಜಸ್ವಿ ಯಾದವ್‌

ಕಂಗನಾ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿದ್ದು, ರಾರು ಈ ಮಹಿಳೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಅವರು ಈ ವಿಡಿಯೋವನ್ನು ತನ್ನ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿ ಯಾರು ಈ ಮಹಿಳೆ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಜೂ.1ರಂದು ಹಿಮಾಚಲಪ್ರದೇಶದಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಕಂಗನಾ ವಿರುದ್ಧ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಾರೆ.

Continue Reading

ದೇಶ

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

Terrorist Attack:ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡಿರು ಯೋಧರು ಜೀವಣ್ಮರಣ ಹೋರಾಟ ನಡೆಸುತ್ತಿದ್ದು, ಅವರನ್ನು ಉದಾಮ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ

VISTARANEWS.COM


on

Terrorist attack
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರ(Jammu-Kashmir)ದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ (Terrorist Attack) ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡಿರು ಯೋಧರು ಜೀವಣ್ಮರಣ ಹೋರಾಟ ನಡೆಸುತ್ತಿದ್ದು, ಅವರನ್ನು ಉದಾಮ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಿನ್ನೆ ಸಂಜೆ 6ಗಂಟೆ ಹೊತ್ತಿಗೆ ಜರಾನ್ವಲಿಯಿಂದ ವಾಯುನೆಲೆಗೆ ವಾಪಾಸಾಗುತ್ತಿದ್ದ ವೇಳೆ ಈ ದಾಳಿ ನಡೆದಿದ್ದು, ಈ ಬಗ್ಗೆ ಭಾರತೀಯ ವಾಯುಪಡೆ Xನಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇನ್ನು AK ರೈಫಲ್ಸ್‌ ಹೊಂದಿದ್ದ ಉಗ್ರರು ಪಕ್ಕದಲ್ಲಿದ್ದ ಕಾಡಿಗೆ ಓಡಿ ಹೋಗಿರುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಈ ಬಗ್ಗೆ ಮತ್ತಷ್ಟು ತನಿಖೆ ಮುಂದುವರೆದಿದೆ ಎಂದು ಟ್ವೀಟ್‌ ಮಾಡಿದೆ.

ಇನ್ನು ಪೂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಶುಕ್ರವಾರವೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಈ ಆಪರೇಶನ್‌ನಲ್ಲಿ ಇದುವರೆಗೆ ಯಾರೂ ಅರೆಸ್ಟ್‌ ಆಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು‌ ಪೂಂಚ್‌ ಪ್ರದೇಶ ಅನಂತ್‌ನಾಗ್‌ – ರಜೌರಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಇಲ್ಲಿ ಮೇ 25ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಭದ್ರತೆ ಮತ್ತಷ್ಟು ಹೆಚ್ಚಿಸಲಾಗಿದೆ.

ಎರಡು ವಾರದ ಹಿಂದೆ ಜಮ್ಮು-ಕಾಶ್ಮೀರ (Jammu and Kashmir)ದಲ್ಲಿ ಗುಂಡಿನ ಸದ್ದು ಮೊಳಗಿತ್ತು . ಭಯೋತ್ಪಾದಕನ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. (Terrorist Attack). ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಗೆ ಸರ್ಕಾರಿ ನೌಕರ ಮೊಹಮ್ಮದ್ ರಜಾಕ್ ಬಲಿಯಾಗಿದ್ದರು. ರಾಜೌರಿಯ ಶದ್ರಾ ಶರೀಫ್ ಪ್ರದೇಶದ ಮಸೀದಿಯಿಂದ ಹೊರಬಂದ ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

40 ವರ್ಷದ ಮೊಹಮ್ಮದ್ ರಜಾಕ್ ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಮೃತ ರಝಾಕ್ ಅವರ ಸಹೋದರ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
ICC Women's T20 World Cup
ಕ್ರೀಡೆ54 seconds ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

Pakistan
ವಿದೇಶ21 mins ago

Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ; ಅಧಿಕೃತವಾಗಿ ತರಗತಿ ಆರಂಭ

Prajwal Revanna Case HD Revanna arrest is correct says R Ashok
ರಾಜಕೀಯ1 hour ago

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Vicky Pedia New reels about heat in Karnataka
ವೈರಲ್ ನ್ಯೂಸ್1 hour ago

Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

Lok Sabha Election 2024
Lok Sabha Election 20241 hour ago

Lok Sabha Election 2024: ಬಿಜೆಪಿಯ ʼಮೊಟ್ಟೆʼ ವಿಡಿಯೊ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲ; ಅಂತಹದ್ದೇನಿದೆ?

Prajwal Revanna Case Siddaramaiah tweets vote for Prajwal Full class from BJP!
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

bajrang punia Suspended
ಕ್ರೀಡೆ2 hours ago

Bajrang Punia: ಬಜರಂಗ್​ಗೆ ಅಮಾನತು ಶಿಕ್ಷೆ ವಿಧಿಸಿದ ರಾಷ್ಟ್ರೀಯ ಉದ್ದೀಪನ ನಿಗ್ರಹ ಸಂಸ್ಥೆ; ಪ್ಯಾರಿಸ್ ಒಲಿಂಪಿಕ್ಸ್​ಗೆ ಹಿನ್ನಡೆ

Kannada New Movie Adhipatra audio rights
ಸಿನಿಮಾ2 hours ago

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

assault case
Lok Sabha Election 20242 hours ago

Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

Viral News
ವೈರಲ್ ನ್ಯೂಸ್2 hours ago

Viral News: ಅಣ್ಣನ ಕತ್ತು ಸೀಳಿದ ತಂಗಿ; ಮೊಬೈಲ್‌ಗಾಗಿ ನಡೀತು ಘೋರ ಕೃತ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌