Fake ACP | ಲಕ್ಷಾಂತರ ರೂಪಾಯಿ ವಂಚಿಸಿದ ಪೊಲೀಸ್‌ ಇನ್ಸ್‌ಪೆಕ್ಟರ್‌ ಮಗ : ನಕಲಿ ಎಸಿಪಿ ಇದ್ದಾನೆ ಎಚ್ಚರಿಕೆ! - Vistara News

ಕ್ರೈಂ

Fake ACP | ಲಕ್ಷಾಂತರ ರೂಪಾಯಿ ವಂಚಿಸಿದ ಪೊಲೀಸ್‌ ಇನ್ಸ್‌ಪೆಕ್ಟರ್‌ ಮಗ : ನಕಲಿ ಎಸಿಪಿ ಇದ್ದಾನೆ ಎಚ್ಚರಿಕೆ!

ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರ ಮಗನೇ ಬೆಂಗಳೂರಿನ ಬಡ ವ್ಯಕ್ತಿಯೊಬ್ಬರಿಗೆ ವಂಚಿಸಿದ್ದಾನೆ. (Fake ACP) ಇದೀಗ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

VISTARANEWS.COM


on

Fake ACP
ಆರೋಪಿ ನವೀನ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಎಸಿಪಿ ಎಂದುಕೊಂಡೇ ಬೆಂಗಳೂರಿನ ಬಡ ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನವೀನ್‌ ಅಲಿಯಾಸ್‌ ಎಸಿಪಿ ಆರೋಪಿಯು ಬೆಂಗಳೂರಿನ ಶಂಕರಪ್ಪ ಎಂಬವರಿಗೆ ಲಕ್ಷಾಂತರ ರೂ. ವಂಚಿಸಿದ್ದಾನೆ. ಅಷ್ಟೇ ಅಲ್ಲದೇ ಆತ ಪೊಲೀಸ್ ಇನ್ಸ್‌ಪೆಕ್ಟರ್‌ ಮಗ (Fake ACP) ಎಂಬ ಭಯಾನಕ ಸತ್ಯ ಕೂಡ ಹೊರಗೆ ಬಿದ್ದಿದೆ.

ಕಾರು ಸರ್ವಿಸ್‌ಗಾಗಿ ಕೆಂಗೇರಿ ಹುಂಡೈ ಶೋ ರೂಂಗೆ ಆರೋಪಿ ಬಂದಿದ್ದ. ಹುಂಡೈ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ ಶಂಕರಪ್ಪ ಎಂಬವರನ್ನು ಪರಿಚಯ ಮಾಡಿಕೊಂಡಿದ್ದ. ಹೀಗೆ ಪರಿಚಯ ಮಾಡಿಕೊಂಡ ನವೀನ್‌, ತಾನು ಎಸಿಪಿ ಎಂದು ಶಂಕರಪ್ಪ ಅವರ ಬಳಿ ಪುಂಗಿದ್ದ. ಸಿಕ್ಕ ಸಿಕ್ಕ ಎಸಿಪಿಗಳ ಹೆಸರನ್ನು ಹೇಳಿ ಮೊದಲು ಬಿಲ್ಡಪ್‌ ಕೊಟ್ಟಿದ್ದ. ಕಡಿಮೆ ಹಣಕ್ಕೆ ಪ್ರಾಪರ್ಟಿ ಕೊಡಿಸುವುದಾಗಿ ಶಂಕರಪ್ಪನನ್ನು ನಂಬಿಸಿದ್ದ.

ಇದನ್ನೂ ಓದಿ | Sexual assault | ತಾನೇ ಶ್ರೀಕೃಷ್ಣ ಎಂದ ನಕಲಿ ಸ್ವಾಮಿ; 7 ವರ್ಷದಿಂದ ಯುವತಿಗೆ ಲೈಂಗಿಕ ದೌರ್ಜನ್ಯ ಆರೋಪ

Fake ACP
ಪೊಲೀಸ್ ಇನ್ಸ್‌ಪೆಕ್ಟರ್‌ ಆಂಜನೇಯ

ಹೀಗೆ ನಾನಾ ವಿಚಾರಗಳನ್ನು ಶಂಕರಪ್ಪ ಅವರ ತಲೆಗೆ ಹಾಕಿ ಬಲೆ ಬೀಸಿ ಲಕ್ಷ ಲಕ್ಷ ಹಣವನ್ನು ಜೇಬಿಗಿಳಿಸಿಕೊಂಡಿದ್ದ. ಇದೀಗ ಫೇಕ್ ಎಸಿಪಿಯ ಹಣೆಬರಹ ಬಟಾಬಯಲಾಗಿದೆ. ಆರೋಪಿ ನವೀನ್‌ ಹಾವೇರಿ ಜಿಲ್ಲೆಯ ಆಂಜನೇಯ ಎಂಬ ಪೊಲೀಸ್ ಇನ್ಸ್‌ಪೆಕ್ಟರ್‌ ಮಗ ಎಂಬ ಸತ್ಯ ಹೊರಗೆ ಬಿದ್ದಿದೆ. ಆ ಇನ್ಸ್‌ಪೆಕ್ಟರ್‌ ನೆರವಿನಿಂದಲೇ ಮಗ ನವೀನ ನೂರಾರು ಜನರಿಗೆ ವಂಚಿಸುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೀನ ಅಲಿಯಾಸ್‌ ಎಸಿಪಿ ನವೀನನಿಗಾಗಿ ಕೆಂಗೇರಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | ಅಪಘಾತದಲ್ಲಿ ಬಾಲಕಿ ಸತ್ತ ಬಳಿಕ ಪತ್ತೆಯಾಯ್ತು ನಕಲಿ ನಂಬರ್ ಪ್ಲೇಟ್ ವಂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

Assault case: ಕರ್ತವ್ಯ ನಿರತ ಸಂಚಾರಿ ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ಕಾರು ಚಾಲಕನನ್ನು ಕೊಡಗು ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.

VISTARANEWS.COM


on

By

assault Case
Koo

ಕೊಡಗು: ಮಡಿಕೇರಿ ಸಮೀಪ ಎರಡು ಶಿಫ್ಟ್‌ ಕಾರುಗಳ ನಡುವೆ ಅಪಘಾತ (Road Accident) ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಅವರು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಶಿಫ್ಟ್‌ ಕಾರನ್ನು ಬದಿಗೆ ಸರಿಸುವಂತೆ ಸೂಚಿಸುವ ಸಂದರ್ಭದಲ್ಲಿ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮೇಲೆ ವಾಹನ ಹರಿಸಿ (Assault case) ತಪ್ಪಿಸಿಕೊಂಡಿದ್ದ.

ಸಂಚಾರಿ ಪೊಲೀಸ್ ಸಿಬ್ಬಂದಿ ಸಂಜು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ‌ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಆತನ ಬೆನ್ನಟ್ಟಿದಾಗ ಪೊಲೀಸರ ಕಣ್ಣು ತಪ್ಪಿಸಿ ಕಾರು ಚಾಲಕ ಪರಾರಿ ಆಗಿದ್ದ.

ಪೊಲೀಸ್ ಸಿಬ್ಬಂದಿ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿ, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್ ಎಂಬಾತನನ್ನು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನಿರ್ದೇಶನದ ಮೇರೆಗೆ, ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಕೊಡಗು ಎಸ್ಪಿ ಕೂಡ ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ‌.

Continue Reading

ಬೆಂಗಳೂರು

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

By

Bengaluru News
Koo

ಬೆಂಗಳೂರು: ಡಿನ್ನರ್‌ ಮುಗಿಸಿ ಬರುತ್ತಿದ್ದ ಪ್ರೇಮಿಗಳಿಗೆ ಕಿರಾತಕರು ಅಡ್ಡ ಹಾಕಿ, ಬಳಿಕ ಯುವಕನ ಕುತ್ತಿಗೆ ಚಾಕು ಇಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರು. ಇದೀಗ ಆ ಆರೋಪಿಗಳಿಗೆ 10 ವರ್ಷಗಳ ನಂತರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2014ರ ಏಪ್ರಿಲ್ 11ರಂದು ಪ್ರೇಮಿಗಳಿಬ್ಬರು ಎಂ.ಜಿ ರೋಡ್‌ನಲ್ಲಿ ಡಿನ್ನರ್ ಮುಗಿಸಿ ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ (Bengaluru News) ನೇತಾಜಿ ರಸ್ತೆಯಲ್ಲಿ ಮಧ್ಯರಾತ್ರಿ 12:30ರ ಸಮಯಲ್ಲಿ ಕಾರಿನಲ್ಲಿ ಕುಳಿತಿದ್ದರು. ಈ ವೇಳೆ ಕಾಮುಕರ ದಂಡು ಅವರನ್ನು ಸುತ್ತುವರಿದು ಕಾರು ಏರಿಕೊಂಡಿದ್ದರು.

ಶೇಕ್ ಹೈದರ್, ಸೈಯದ್ ಶಫಿಕ್, ಮಹಮ್ಮಸ್ ಹಫೀಜ್, ಶೋಯಬ್ @ ಶೇಖ್ ಕಲ್ವಾನ ಕಾರಿನಲ್ಲಿ ಪ್ರೇಮಿಗಳು ಇದ್ದರೆ, ಮಹಮ್ಮದ್ ಇಸಾಕ್ ಎಂಬಾತ ಕಾಮುಕರ ಕಾರನ್ನು ಫಾಲೋ ಮಾಡಿದ್ದ. ಬಳಿಕ ರಾತ್ರಿಯಿಡಿ ಸಂತ್ರಸ್ತೆ ಕಾರಿನಲ್ಲೇ ಪುಲಕೇಶಿ ನಗರ ಸುತ್ತಾಡಿದ್ದರು. ಕಾರಿನಲ್ಲಿ ಆ ಯುವತಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡಿದ್ದರು. ಕೊನೆಗೆ ಕಾಮುಕರ ಗುಂಪಿನ ನಾಯಕ ಶೇಕ್ ಹೈದರ್ ಆಜ್ಞೆಯಂತೆ ಸಂತ್ರಸ್ತೆಯ ಸ್ನೇಹಿತನನ್ನು ಕಾರಿನಿಂದ ಇಳಿಸಿದ್ದರು.

ಸೈಯದ್ ಶಫಿಕ್, ಹಫಿಜ್, ಶೋಯಬ್ ಆ ಯುವಕನ ಕುತ್ತಿಗೆಗೆ ಚಾಕು ಹಿಡಿದು ಕೊಂಡಿದ್ದರು. ಕಾರಿನಲ್ಲಿದ್ದ ಶೇಕ್ ಹೈದರ್ ನಾನು ಹೇಳಿದ ಹಾಗೆ ಕೇಳದಿದ್ದರೆ ನಿನ್ನ ಹುಡುಗನನ್ನು ಕೊಲೆ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದ. ನಂತರ ಯುವತಿ ಮೇಲೆ ಮೃಘೀಯ ರೀತಿ ವರ್ತಿಸಿದ್ದ. ತನ್ನ ಕಣ್ಣ ಮುಂದೆಯೇ ತನ್ನ ನಂಬಿ ಬಂದ ಪ್ರೇಯಸಿ ಮೇಲೆ ಕಾಮುಕರು ಪಿಶಾಚಿಗಳಂತೆ ಎಗರಿದ್ದರೂ ಏನು ಮಾಡಲು ಆಗದೆ ಅಸಯಾಕನಾಗಿದ್ದ.

ಯುವತಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ 50 ಸಾವಿರ ರೂ. ಗೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡದಿದ್ದಾಗ ಹುಡುಗನ ಕೈಯಲ್ಲಿದ್ದ ವಾಚ್‌ನ ಕಿತ್ತುಕೊಂಡು ಹೋಗಿದ್ದರು. ಈ ಘಟನೆ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲಿಗೆ ಅಂದಿನ ಇನ್‌ಸ್ಪೆಕ್ಟರ್‌ ಸರಿಯಾದ ಸೆಕ್ಷನ್ ಹಾಕಿಲ್ಲ ಎಂದು ಸಸ್ಪೆಂಡ್ ಕೂಡ ಆಗಿದ್ದರು. ಇದಾದ ನಂತರ ಅಂದಿನ ಪುಲಕೇಶಿ ನಗರ ಉಪವಿಭಾಗ ಎಸಿಪಿ ನೂರುಲ್ಲ ಶರೀಫ್ ತನಿಖೆ ನಡೆಸಿ ನ್ಯಾಯಲಯಕ್ಕೆ ಐವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಕಾರಿನಲ್ಲಿ ಸಿಕ್ಕ ಆರೋಪಿಯ ತಲೆಕೂದಲು ಮತ್ತು ವೀರ್ಯದ ಕರುಹುಗಳು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿತ್ತು. ಆರೋಪಿಗಳು ರಾಜಕೀಯ ಪ್ರಭಾವ ಹೊಂದಿದ್ದರು. ಆದರೆ ಇದ್ಯಾವುದಕ್ಕೂ ಮಣಿಯದ ಪೊಲೀಸರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದರು. ಸದ್ಯ ಆರೋಪಿಗಳ ಪೈಕಿ ಎ1 ಆರೋಪಿ ಶೇಕ್ ಹೈದರ್‌ಗೆ ಜೀವಾವಧಿ ಶಿಕ್ಷೆ 31 ಸಾವಿರ ದಂಡ ಹಾಗೂ ಎ2 ಸೈಯದ್ ಶಫಿಕ್ 10 ವರ್ಷ ಸಜೆ 23 ಸಾವಿರ ದಂಡ, ಎ3 ಮೊಹಮ್ಮದ್ ಹಫೀಜ್‌ಗೆ 3500 ದಂಡ, ಎ4 ಶೋಯಬ್ ಗೆ 1 ವರ್ಷ ಸಜೆ ಹಾಗೂ 3500 ದಂಡ ಹಾಗೂ ಎ5 ಮಹಮ್ಮದ್ ಇಸಾಕ್‌ಗೆ 6 ತಿಂಗಳ ಸಜೆ ಹಾಗೂ 3000 ದಂಡ ವಿಧಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

Continue Reading

ಬೆಂಗಳೂರು ಗ್ರಾಮಾಂತರ

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Murder Case : ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ದೊಣ್ಣೆಯಿಂದ ಹೊಡೆದು ಕೊಂದು ಹಾಕಿದ್ದಾನೆ. ಸರ್ಜಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Murder Case
Koo

ಆನೇಕಲ್: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ (Murder Case) ನಡೆದಿದೆ. ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಪಂಡಿತನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಆನಂದ (27) ಕೊಲೆಯಾದವರು.

ಮಣಿಕಂಠ(32) ಕೊಲೆ ಮಾಡಿದ ಆರೋಪಿ ಆಗಿದ್ದಾನೆ. ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.

ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್‌ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್‌ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

Murder case
Murder case

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಗದಗ

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Missing Case : ಬಸ್‌ ನಿಲ್ದಾಣದಲ್ಲಿ ತಾಯಿಯಿಂದ ದೂರಾಗಿದ್ದ ಮಗುವೊಂದು ಪೊಲೀಸರ ಸಹಾಯದಿಂದ ವಾಪಸ್‌ ತಾಯಿಯ ಮಡಿಲು ಸೇರಿದೆ.

VISTARANEWS.COM


on

By

missing case
Koo

ಗದಗ: ಇತ್ತೀಗಷ್ಟೇ ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿನ ಎಮರ್ಜೆನ್ಸಿ ಕಿಟಕಿಯಿಂದ ಪುಟ್ಟ ಮಗುವೊಂದು ಹೊರ ಬಿದ್ದಿತ್ತು. ತಕ್ಷಣ ಚೈನ್ ಮೂಲಕ ರೈಲು ನಿಲ್ಲಿಸಿದ ಪುಟ್ಟ ಬಾಲಕಿಯ ತಂದೆ, ಸುಮಾರು 16 ಕಿಮೀ ಹಿಂದೆ ಓಡಿ, ತನ್ನ ಮಗಳು ಬಿದ್ದ ಜಾಗವನ್ನು ಪತ್ತೆ ಮಾಡಿದ್ದ. ಕಗ್ಗತ್ತಲಿನ ನಿರ್ಜನ ಪ್ರದೇಶದಲ್ಲಿ ತನ್ನ ಮಗುವಿನ ಆರ್ತನಾದ ಕೇಳಿ, ತನ್ನ ಕರುಳ ಬಳ್ಳಿಯನ್ನು ತಾಯಿ ಒಡಲಲ್ಲಿ ಸೇರಿಸಿದ್ದ. ಕರುಳಕುಡಿಯ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ ಅಂದರೂ, ಇಡೀ ಭಾರತವೇ ಈ ತಂದೆ ಮಗಳ ಕಥೆಗೆ ಕಂಬನಿ ಮಿಡಿದಿತ್ತು. ಇದೀಗ ಆ ಘಟನೆ ಮಾಸುವ ಮುನ್ನವೇ, ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ತಾಯಿಯಿಂದ ದೂರವಾಗಿದ್ದ ಐದು ವರ್ಷದ ಪುಟ್ಟ ಕಂದಮ್ಮ (missing case) ಮತ್ತೆ ತಾಯಿಯ ಮಡಿಲು ಸೇರಿದ್ದಾಳೆ.

ಹೌದು, ಚಿತ್ರದುರ್ಗ ಮೂಲದ ತಾಯಿ ಶಶಿಕಲಾ,(ಊರು ಹಾಗೂ ತಾಯಿಯ ಹೆಸರು ಬದಲಾಯಿಸಲಾಗಿದೆ) ತನ್ನ ನಾಲ್ಕು ಹೆಣ್ಣು ಮಕ್ಕಳು ಹಾಗೂ ಓರ್ವ ಸಂಬಂಧಿ ಜತೆಗೂಡಿ, ಕಳೆದ ಎರಡು ದಿನಗಳ ಹಿಂದೆ, ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಆಗಮಿಸಿದ್ದರು. ದೇವರ ದರ್ಶನ ಮುಗಿಸಿ ಮರಳಿ ಮಧ್ಯಾಹ್ನದ ವೇಳೆಗೆ ನರಗುಂದ ಪಟ್ಟಣದ ಮೂಲಕ ಹೊಸಪೇಟೆಯ ಹುಲಿಗೆಮ್ಮ ದೇವಿ ದರ್ಶನಕ್ಕೆ ತೆರಳುವವರಿದ್ದರು. ನರಗುಂದ ಪಟ್ಟಣಕ್ಕೆ ಆಗಮಿಸಿದ್ದ, ತಾಯಿ ಶಶಿಕಲಾ ಹಾಗೂ ಮಕ್ಕಳು, ಗದಗ ಬಸ್ ಹತ್ತಿದ್ದರು. ಹುಣ್ಣಿಮೆ ಹತ್ತಿರವಿದ್ದ ಕಾರಣ, ಬಹುತೇಕ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಬಸ್ಸುಗಳು ಸಾಕಷ್ಟು ಗಿಜಿಗುಡುತ್ತಿದ್ದವು.

ಇದೇ ವೇಳೆ, ತಾಯಿ ಶಶಿಕಲಾ ಹಾಗೂ ಮಕ್ಕಳು ಗದಗ ನಗರಕ್ಕೆ ತೆರಳುವ ಬಸ್ಸನ್ನ ಹತ್ತಿದ್ದಾರೆ. ಬಸ್ಸಿನೊಳಗೆ ಸಾಕಷ್ಟು ಪ್ರಯಾಣಿಕರಿದ್ದ ಹಿನ್ನೆಲೆ, ನಾಲ್ಕು ಹೆಣ್ಣುಮಕ್ಕಳಲ್ಲಿ ಒಂದಿಬ್ಬರು ಮುಂದಿನ ಸೀಟ್‌ನಲ್ಲಿ ತಾಯಿ ಶಶಿಕಲಾ ಕಣ್ಣಿಗೆ ಕಂಡಿದ್ದಾರೆ. ಹೀಗಾಗಿ ತನ್ನ ನಾಲ್ಕೂ ಮಕ್ಕಳು ನನ್ನ ಜತೆಗೆ ಬಸ್ಸಿನಲ್ಲಿದ್ದಾರೆ ಎಂದು ಭಾವಿಸಿದ ತಾಯಿ ಶಶಿಕಲಾ, ನರಗುಂದದಿಂದ ಗದಗ ಬಸ್ ನಿಲ್ದಾಣದವರೆಗೂ ಪ್ರಯಾಣ ಮುಂದುವರೆಸಿದ್ದಳು. ಇನ್ನೇನು ಗದಗ ಬಸ್ ನಿಲ್ದಾಣದಲ್ಲಿ ತನ್ನ ಮಕ್ಕಳನ್ನ ಬಸ್ಸಿನಿಂದ ಇಳಿಸಿಕೊಳ್ಳುವಾಗ, ನಾಲ್ಕು ಮಕ್ಕಳಲ್ಲಿ ಮೂವರಷ್ಟೇ ಬಸ್ಸಿನಲ್ಲಿ ತನ್ನ ಜತೆಗೆ ಬಂದಿರುವುದು ಎಂದು ಗೊತ್ತಾಗಿದೆ. ತಕ್ಷಣ ಅಳುತ್ತಾ, ಗೋಗರೆಯುತ್ತಾ ಗದಗ ನಗರದ ಶಹರ ಪೊಲೀಸ್ ಠಾಣೆಗೆ ಆಗಮಿಸಿ, ತನ್ನ ಮೂವರು ಮಕ್ಕಳಲ್ಲಿ, ಕೊನೆಯ ಐದು ವರ್ಷದ ಮಗಳು ಸ್ನೇಹ (ಮಗುವಿನ ಹೆಸರು ಬದಲಾಯಿಸಲಾಗಿದೆ) ಕಾಣ್ತಿಲ್ಲ ಎಂದು ಪೊಲೀಸರೆದುರು ತನ್ನ ಕರುಳಬಳ್ಳಿಯ ಕಥೆ ವಿವರಿಸಿದ್ದಳು.

Missing case
Missing case

ತನ್ನ ನಾಲ್ಕು ಮಕ್ಕಳಲ್ಲಿ ಓರ್ವ ಮಗಳು ಸ್ನೇಹಾ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳೆದುಹೋಗಿದ್ದಳು. ಹೌದು, ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ, ಬಸ್ ಅನ್ನು ಹತ್ತುವಾಗ, ಐದು ವರ್ಷದ ಪುಟ್ಟ ಬಾಲಕಿ ಸ್ನೇಹ ಗದ್ದಲದ ನಡುವೆ ಬಸ್ ಹತ್ತಲು ಆಗದೇ, ನಿಲ್ದಾಣದಲ್ಲಿಯೇ ಉಳಿದುಕೊಂಡುಬಿಟ್ಟಿದ್ದಳು. ತನ್ನ ನಾಲ್ಕೂ ಮಕ್ಕಳು ತನ್ನ ಜತೆಯೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆಂದು ತಿಳಿದಿದ್ದ ತಾಯಿ ಶಶಿಕಲಾಗೆ, ಕೊನೆಯ ಪುಟ್ಟ ಮಗಳು ಸ್ನೇಹ, ತನ್ನ ಜೊತೆಗೆ ಪ್ರಯಾಣಿಸುತ್ತಿಲ್ಲ ಅನ್ನೋದು ಗೊತ್ತಾಗಲೇ ಇಲ್ಲ. ಹೀಗೆ, ತನ್ನ ತಾಯಿ ಹಾಗೂ ತನ್ನ ಅಕ್ಕಂದಿರನ್ನು ಕಳೆದುಕೊಂಡಿದ್ದ, ಪುಟ್ಟ ಬಾಲಕಿ ಸ್ನೇಹ, ಸುಮಾರು ಎರಡು ಗಂಟೆಗಳ ಕಾಲ ನರಗುಂದದ ಬಸ್ ನಿಲ್ದಾಣದಲ್ಲಿ ಅಳುತ್ತಾ ಕುಳಿತಿದ್ದಳು.

ಇದನ್ನು ಗಮನಿಸಿದ ಸ್ಥಳೀಯ ಕಾಲೇಜು ವಿದ್ಯಾರ್ಥಿಯೋರ್ವ, ಪುಟ್ಟ ಮಗುವಿನ ಆಕ್ರಂದನ ನೋಡಲಾರದೇ, ಸ್ಥಳೀಯ ಪೊಲೀಸ್ ಠಾಣೆಗೆ ಬಾಲಕಿಯನ್ನು ಕರೆತಂದು ಪೊಲೀಸರಿಗೆ ಒಪ್ಪಿಸಿದ್ದ. ತಡಮಾಡದ ಪೊಲೀಸ್ ಪಡೆ, ತಮ್ಮ ವಾಟ್ಸಪ್ ಗ್ರೂಪ್‌ಗಳಲ್ಲಿ ಮಗು ಮಿಸ್ಸಿಂಗ್ ಆಗಿರುವ ಮಾಹಿತಿಯನ್ನ, ಜಿಲ್ಲೆಯ ಎಲ್ಲ ಸ್ಟೇಷನ್‌ಗಳಿಗೂ ರವಾನಿಸಿತ್ತು. ಇದೇ ಸಮಯಕ್ಕೆ ಗದಗ ನಗರದ ಶಹರ ಪೊಲೀಸ್ ಠಾಣೆಗೂ, ತಾಯಿ, ಮಗು ಕಳೆದುಕೊಂಡ ಬಗ್ಗೆ, ಇತ್ತ, ಮಗು ತನ್ನವರನ್ನ ಕಳೆದುಕೊಂಡ ಬಗ್ಗೆ ಎರೆಡೂ ಕಡೆಯಿಂದಲೂ ಕರುಳ ಬಳ್ಳಿಯ ದೂರುಗಳು ಬಂದು ಮುಟ್ಟಿದ್ದವು.

ವಾಟ್ಸಪ್ ಮೂಲಕ ಬಂದ ಮಗುವಿನ ಫೋಟೋವನ್ನ ಪೊಲೀಸರು, ತಾಯಿ ಶಶಿಕಲಾಗೆ ತೋರಿಸಿ, ಇವಳೇನಾ ನೋಡು ನಿನ್ನ ಮಗಳು ಎಂದಾಗ, ತಾಯಿಗೆ ಮತ್ತೇ ಪುನರ್ಜನ್ಮ ಬಂದಂತಾಗಿತ್ತು. ಇತ್ತ ನರಗುಂದ ಪೊಲೀಸ್ ಠಾಣೆಯಲ್ಲಿದ್ದ ಪುಟ್ಟ ಮಗು ಸ್ನೇಹಳಿಗೂ ನಿನ್ನ ತಾಯಿ, ನಿನ್ನ ಅಕ್ಕಂದಿರು ನಿನ್ನ ಕರೆದುಕೊಂಡು ಹೋಗೋಕೆ ಇಲ್ಲಿಗೆ ಬರುತ್ತಿದ್ದಾರೆ ಅಂದಾಗ, ಅಕ್ಷರಶಃ ಮಗು ಕಣ್ಣೀರಿನಲ್ಲೇ, ಸಂಭ್ರಮಿಸಿ, ಮುಗಿಲೆತ್ತರದ ತನ್ನ ದುಃಖಕ್ಕೆ ಧಣಿವರಿಸಿದ್ದಳು. ಇತ್ತ 60 ಕಿಲೋ. ಮೀಟರ್ ದೂರದಷ್ಟು ತನ್ನ ಮಗುವನ್ನ ಬಿಟ್ಟು ಹೋಗಿದ್ದ, ತಾಯಿ ಶಶಿಕಲಾಗೆ, ಮತ್ತೇ ಮರಳಿ ತನ್ನ ಮಗಳ ಅಪ್ಪುಗೆ ಪಡೆಯೋಕೆ, ನರಗುಂದ ಪೊಲೀಸ್ ಠಾಣೆ ಆರು ಸಾವಿರ ಕೀಲೋಮೀಟರ್ ನಷ್ಟು ದೂರವಾದಂತೆ ಭಾಸವಾಗಿತ್ತು.

ಅದೇನೆ‌ ಇರಲಿ. ಕೊನೆಗೂ ಪೊಲೀಸರ ಸುರಕ್ಷತೆಯಲ್ಲಿದ್ದ ಮಗು ಸ್ನೇಹಾಳನ್ನು ತಾಯಿ ಶಶಿಕಲಾಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಗಿದೆ. ಅದೇನೆ ಇರಲಿ, ಪಾಲಕರೇ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇರಲಿ ಎಂದು ಹೇಳುತ್ತಾ, ಬಾಲಕಿಯನ್ನ ಠಾಣೆಗೆ ಒಪ್ಪಿಸಿದ ಕಾಲೇಜು ವಿದ್ಯಾರ್ಥಿ ಹಾಗೂ ಇದೆಲ್ಲದರ ಜವಾಬ್ದಾರಿ ಹೊತ್ತಿದ್ದ ಖಾಕಿ ಪಡೆಗೆ ತಾಯಿ ಶಶಿಕಲಾ, ಪುಟ್ಟ ಮಗು ಸ್ನೇಹಾ ಮತ್ತು ಆಕೆಯ ಅಕ್ಕಂದಿರು ಕೃತಜ್ಞನತೆ ಸಲ್ಲಿಸಿದರು.

Continue Reading
Advertisement
kea
ಬೆಂಗಳೂರು7 ಗಂಟೆಗಳು ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು9 ಗಂಟೆಗಳು ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ10 ಗಂಟೆಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು10 ಗಂಟೆಗಳು ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Dina Bhavishya
ಭವಿಷ್ಯ12 ಗಂಟೆಗಳು ago

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ3 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

namma Metro
ಬೆಂಗಳೂರು3 ದಿನಗಳು ago

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Murder Case
ಬೆಂಗಳೂರು ಗ್ರಾಮಾಂತರ3 ದಿನಗಳು ago

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Dina bhavishya
ಭವಿಷ್ಯ4 ದಿನಗಳು ago

Dina Bhavishya: ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ; ಮಾತಿನಲ್ಲಿ ಹಿಡಿತವಿರಲಿ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌