Cyrus Mistry Death | ಮುಂಬಯಿನಲ್ಲಿ ನಾಳೆ ಬೆಳಗ್ಗೆ ಸೈರಸ್‌ ಮಿಸ್ತ್ರಿ ಅಂತ್ಯಕ್ರಿಯೆ - Vistara News

ಪ್ರಮುಖ ಸುದ್ದಿ

Cyrus Mistry Death | ಮುಂಬಯಿನಲ್ಲಿ ನಾಳೆ ಬೆಳಗ್ಗೆ ಸೈರಸ್‌ ಮಿಸ್ತ್ರಿ ಅಂತ್ಯಕ್ರಿಯೆ

ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ತ್ರಿ ಅವರ ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ ಮುಂಬಯಿನ ವರ್ಲಿ (Cyrus Mistry Death) ಚಿತಾಗಾರದಲ್ಲಿ ನಡೆಯಲಿದೆ.

VISTARANEWS.COM


on

cyrus mistry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ತ್ರಿ ಅವರ ಅಂತ್ಯಕ್ರಿಯೆ ಮುಂಬಯಿನಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ (Cyrus Mistry Death) ನಡೆಯಲಿದೆ.

ಭಾನುವಾರ ಮುಂಬಯಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸೈರಸ್‌ ಮಿಸ್ತ್ರಿ ಅವರ ಅಂತ್ಯಕ್ರಿಯೆ ಮುಂಬಯಿನ ವರ್ಲಿ ಚಿತಾಗಾರದಲ್ಲಿ ನಡೆಯಲಿದೆ.‌ ಗುಜರಾತ್‌ನ ಅಹಮದಾಬಾದ್‌ನಿಂದ ಮುಂಬಯಿಗೆ ಮರ್ಸಿಡಿಸ್ ಕಾರ್‌ನಲ್ಲಿ ತೆರಳುತ್ತಿದ್ದಾಗ ಪಾಲ್ಘರ್‌ನಲ್ಲಿ ಅಪಘಾತ ಸಂಭವಿಸಿದೆ.

ಸೈರಸ್‌ ಅವರ ತಂದೆ ಪಲ್ಲೋನ್‌ಜಿ ಮಿಸ್ತ್ರಿ (೯೩) ಈ ವರ್ಷ ಜೂನ್‌ನಲ್ಲಿ ಮೃತಪಟ್ಟಿದ್ದರು. ಅವರು ಶಾಪೋರ್ಜಿ ಪಲ್ಲೋನ್‌ಜಿ ಗ್ರೂಪ್‌ ಅನ್ನು ಸ್ಥಾಪಿಸಿದ್ದರು.

ಇದನ್ನೂ ಓದಿ:Cyrus Mistry Death | ಸೈರಸ್‌ ಮಿಸ್ತ್ರಿಯವರ ತಲೆಗೆ ಗಾಯ: ವೈದ್ಯರ ಹೇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Weather: ಇಂದು ಬಾಗಲಕೋಟೆ, ಬೀದರ್, ಕರಾವಳಿ ಜಿಲ್ಲೆಗಳು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather) ಇದೆ. ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Rain Fall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 ° C ಆಗಿರಬಹುದು.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ

ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಸಿಡಿಲು ಬಡಿದು ಕುರಿಗಾಹಿ, 15ಕ್ಕೂ ಅಧಿಕ ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 15ಕ್ಕೂ ಅಧಿಕ ಕುರಿಗಳು ಹಾಗೂ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಹೊರಭಾಗದಲ್ಲಿ ಬುಧವಾರ ನಡೆದಿದೆ.

ಅಮೋಘಿ ಸೋಮನಿಂಗ ಕಣಮುಚನಾಳ (35) ಮೃತ ದುರ್ದೈವಿ. ಮಳೆ ಬರುತ್ತಿದ್ದ ಕಾರಣ ಕುರಿಗಳೊಂದಿಗೆ ಮರದ ಕೆಳಗೆ ಕುರಿಗಾಹಿ ಅಮೋಘಿ ನಿಂತಿದ್ದ. ಈ ವೇಳೆ ಮರಕ್ಕೆ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಜತೆಗೆ 15ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.

ಕೊಟ್ಟೂರಿನಲ್ಲಿ ಸಿಡಿಲಿಗೆ ಯುವಕ ಬಲಿ

ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಸುರಿದ ಮಳೆಗೆ ಸಿಡಿಲು ಬಡಿದು ಅವಘಡ ನಡೆದಿದೆ. ಮದ್ದಾನಿ (20) ಸಿಡಿಲಿಗೆ ಬಲಿಯಾದ ಯುವಕ.

Continue Reading

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಬುಧವಾರ ಬೆಳಗ್ಗೆ 04:36ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹರಾಶಿಯವರ ಕಾರ್ಯಗಳಿಗೆ ಇತರರು ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ಇವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಇನ್ನು ಕುಂಭ ರಾಶಿಯವರಿಗೆ ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಅಮಾವಾಸ್ಯೆ 18:06 ವಾರ: ಗುರುವಾರ
ನಕ್ಷತ್ರ: ರೋಹಿಣಿ 20:15 ಯೋಗ: ಧೃತಿ 22:07
ಕರಣ: ಚತುಷ್ಪಾದ 06:57 ಅಮೃತ ಕಾಲ: ಸಂಜೆ 5:12 ರಿಂದ 06:44 ರವರಗೆ
ದಿನದ ವಿಶೇಷ: ಸಿಂಧಗಿ ಸಿದ್ದೇಶ್ವರ ಜಾತ್ರೆ

ಸೂರ್ಯೋದಯ : 05:53   ಸೂರ್ಯಾಸ್ತ : 06:44

ರಾಹುಕಾಲ : ಮಧ್ಯಾಹ್ನ 1:30 ರಿಂದ 3:00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿಯಾಗುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡಲಿದ್ದೀರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಬಹುದು. ಉದ್ಯೋಗಿಗಳಿಗೆ ಶುಭ ಫಲ. ಕುಟಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದ್ದು, ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಇರಲಿದ್ದು, ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದ್ದು, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ನಿಮ್ಮನ್ನು ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲವಿರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣ ಫಲವಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಇರಲಿದೆ. ಕೈಗೊಂಡ ಕಾರ್ಯದಲ್ಲಿ ನಿಧಾನಗತಿಯ ಪ್ರಗತಿ ಇರಲಿದ್ದು, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದ್ದು, ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದ್ದು, ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಬಾಧೆ ಸಾಧ್ಯತೆ ಇದ್ದು, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ. ಆಧ್ಯಾತ್ಮಿಕತೆಯಿಂದ ಮನಸ್ಸಿನ ಒತ್ತಡದಿಂದ ಹೊರಬರಲು ಸಾಧ್ಯ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Odisha: ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಈಗ ಬಿಜೆಪಿಯ ಪ್ರಮುಖ ಐವರು ನಾಯಕರಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಪ್ರಶ್ನೆ, ಕುತೂಹಲ ಮೂಡಿದೆ.

VISTARANEWS.COM


on

Odisha
Koo

ಭುವನೇಶ್ವರ: ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ (Odisha Assembly Election 2024) ಬಿಜೆಪಿಯು ಸ್ಪಷ್ಟ ಬಹುಮತ ಸಾಧಿಸಿದ್ದು, ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ (Naveen Patnaik) ಅವರ 24 ವರ್ಷಗಳ ಸುದೀರ್ಘ ಆಡಳಿತ ಕೊನೆಗೊಂಡಿದೆ. ಇನ್ನು, ಒಡಿಶಾದಲ್ಲಿ (Odisha) ಬಿಜೆಪಿಯು ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಅಷ್ಟೇ ಅಲ್ಲ, ಒಡಿಶಾ ಮುಖ್ಯಮಂತ್ರಿ ಗಾದಿ ಮೇಲೆ ಬಿಜೆಪಿಯ ಐವರು ನಾಯಕರು ಕಣ್ಣಿಟ್ಟಿದ್ದು, ಯಾರಿಗೆ ಹುದ್ದೆ ಒಲಿಯಲಿದೆ ಎಂಬ ಕುತೂಹಲವೂ ಮೂಡಿದೆ.

ಐವರು ಆಕಾಂಕ್ಷಿಗಳು ಯಾರ‍್ಯಾರು?

ಒಡಿಶಾ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲು ಐವರು ನಾಯಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಕೇಂದ್ರದ ಮಾಜಿ ಸಚಿವ ಜುವಲ್‌ ಓರಮ್‌, ಹಾಲಿ ಸಚಿವ ಧರ್ಮೇಂದ್ರ ಪ್ರಧಾನ್‌, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರಾ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೈಜಯಂತ್‌ ಪಾಂಡಾ ಅವರು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆ. ಇನ್ನು ಪಕ್ಷದ ರಾಜ್ಯಾಧ್ಯಕ್ಷ ಮನಮೋಹನ್‌ ಸಮಾಲ್‌ ಅವರು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಜೂನ್‌ 10ರಂದು ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Sambita Patra

ಮುಖ್ಯಮಂತ್ರಿ ಆಯ್ಕೆ ಕುರಿತು ಒಡಿಶಾ ಬಿಜೆಪಿ ರಾಜ್ಯಾಧ್ಯಕ್ಷ ಮನಮೋಹನ್‌ ಸಮಾಲ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ಬಿಜೆಪಿಯ ಸಂಸದೀಯ ಮಂಡಳಿಯು ರಾಜ್ಯದಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ತೀರ್ಮಾನಿಸುತ್ತದೆ. ಒಡಿಶಾದ ಮಣ್ಣಿನ ಸಂಸ್ಕೃತಿ, ಗುಣಗಳು ಇರುವ ನಾಯಕನನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗುವುದು ಎಂಬುದಾಗಿ ಇದಕ್ಕೂ ಮೊದಲು ನರೇಂದ್ರ ಮೋದಿ ಅವರು ಹೇಳಿದ್ದರು. ಅದರಂತೆ, ಪಕ್ಷವು ಸಿಎಂ ಹುದ್ದೆಯನ್ನು ಯಾರಿಗೆ ನೀಡಬೇಕು ಎಂಬುದರ ಕುರಿತು ತೀರ್ಮಾನ ತೆಗೆದುಕೊಳ್ಳಲಿದೆ” ಎಂದು ಹೇಳಿದರು.

ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ.

ಇನ್ನು ಒಡಿಶಾದಲ್ಲಿ ಈ ಬಾರಿ ಚುನಾವಣಾ ಫಲಿತಾಂಶವು ಬಹುತೇಕ 2019ರ ರೀತಿಯಲ್ಲೇ ಇರಲಿದೆ ಎಂದೂ ಅಂದಾಜಿಸಲಾಗಿತ್ತು. ಎಕ್ಸಿಟ್‌ ಪೋಲ್‌ ರಿಸಲ್ಟ್‌ ಪ್ರಕಾರ ಬಿಜೆಡಿ ಈ ಬಾರಿ 62-80 ಸ್ಥಾನಗಳನ್ನು ಗಳಿಸಿದರೆ ಕಾಂಗ್ರೆಸ್‌ 5 ರಿಂದ 8 ಸ್ಥಾನಗಳನ್ನು ಗಿಟ್ಟಿಸಿಕೊಳ್ಳಲಿದೆ. ಇನ್ನು ಲೋಕಸಭಾ ಎಲೆಕ್ಷನ್‌ ರಿಸಲ್ಟ್‌ಗೆ ಬಂದರೆ ಬಿಜೆಪಿ ಒಡಿಶಾದಲ್ಲಿ 18-20 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಬಿಜೆಡಿ ಕೇವಲ 0-2 ಸ್ಥಾನ ಪಡೆದುಕೊಳ್ಳಲಿದೆ. ಇಲ್ಲಿ ಕಾಂಗ್ರೆಸ್‌ 0-1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ ಎಂದು ಅಂದಾಜಿಸಿತ್ತು ಇಂದಿನ ಈ ಫಲಿತಾಂಶ ಎಲ್ಲಾ ಎಕ್ಸಿಟ್‌ ಪೋಲ್‌ ಫಲಿತಾಂಶವನ್ನು ತಲೆಕೆಳಗಾಗಿಸಿವೆ.

ಇದನ್ನೂ ಓದಿ: HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Continue Reading

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಗೆದ್ದಿರುವುದರಿಂದ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರದೀಪ್‌ ಈಶ್ವರ್‌ ಅವರು ಸಲ್ಲಿಸಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಅದು ನಕಲಿ ಎಂಬುದು ಗೊತ್ತಾಗಿದೆ.

VISTARANEWS.COM


on

Pradeep Eshwar
Koo

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ (Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಸುಧಾಕರ್‌ ಅವರಿಗೆ ಈ ಗೆಲುವು ರಾಜಕೀಯದಲ್ಲಿ ಪುನರ್ಜನ್ಮ ಸಿಕ್ಕಂತಾಗಿದೆ. ಇದರ ಬೆನ್ನಲ್ಲೇ, ಸುಧಾಕರ್‌ ಅವರು ಒಂದೇ ಒಂದು ಮತದಿಂದ ಗೆದ್ದರೂ ರಾಜೀನಾಮೆ ನೀಡುತ್ತೇನೆ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ವಿರುದ್ಧ ಆಕ್ರೋಶ, ಟ್ರೋಲ್‌, ಮೀಮ್‌ಗಳು ಹರಿದಾಡುತ್ತಿವೆ. ಇದರ ಮಧ್ಯೆಯೇ, ಪ್ರದೀಪ್‌ ಈಶ್ವರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಇದು ನಕಲಿ ಪೋಸ್ಟ್‌ ಎಂಬುದು ಬಳಿಕ ಗೊತ್ತಾಗಿದೆ.

ಪತ್ರದಲ್ಲಿ ಏನಿದೆ?

“ಬಾಲ್ಯದಿಂದಲೇ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, “ಕೊಟ್ಟ ಮಾತು, ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ಕೆಲ ದಿನಗಳ ಹಿಂದೆ ಮಾಜಿ ಸಚಿವರಾದ ಡಾ.ಕೆ.ಸುಧಾಕರ್‌ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್‌ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ಸುಧಾಕರ್‌ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ, ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ” ಎಂಬ ಪತ್ರವು ವೈರಲ್‌ ಆಗಿದೆ.

ವೈರಲ್‌ ಆಗಿರುವ ರಾಜೀನಾಮೆ ಪತ್ರ

ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಿರುವ ಕುರಿತು ವೈರಲ್‌ ಆದ ಪತ್ರವನ್ನು ಪರಿಶೀಲನೆ ನಡೆಸಲಾಗಿದ್ದು, ಅದು ನಕಲಿ ರಾಜೀನಾಮೆ ಪತ್ರ ಎಂಬುದಾಗಿ ತಿಳಿದುಬಂದಿದೆ. ಆದಾಗ್ಯೂ, ಪ್ರದೀಪ್‌ ಈಶ್ವರ್‌ ಅವರು ಸುಧಾಕರ್‌ ಕುರಿತು ಹೇಳಿದ್ದ ಹಳೆಯ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿದ ಮಾತಿನಂತೆ ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಬೇಕು ಎಂದು ಜನರು, ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಸುಧಾಕರ್‌ ಗೆಲುವಿನ ಕುರಿತು ಪ್ರದೀಪ್‌ ಈಶ್ವರ್‌ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ. ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Continue Reading
Advertisement
Karnataka Weather
ಪ್ರಮುಖ ಸುದ್ದಿ20 mins ago

Karnataka Weather: ಇಂದು ಬಾಗಲಕೋಟೆ, ಬೀದರ್, ಕರಾವಳಿ ಜಿಲ್ಲೆಗಳು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Whitening Toothpaste
ಆರೋಗ್ಯ35 mins ago

Whitening Toothpaste: ವೈಟ್ನಿಂಗ್‌ ಪೇಸ್ಟ್‌ಗಳಿಂದ ಹಲ್ಲುಗಳಿಗೆ ಹಾನಿ ಆಗುತ್ತಾ?

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ!

Odisha
ದೇಶ7 hours ago

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Pradeep Eshwar
ಕರ್ನಾಟಕ7 hours ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ8 hours ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sunita Williams
ಪ್ರಮುಖ ಸುದ್ದಿ8 hours ago

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Dr C N Manjunath
ಕರ್ನಾಟಕ9 hours ago

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

New Cancer Drug
ಆರೋಗ್ಯ9 hours ago

New Cancer Drug: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಕ್ರಾಂತಿ; ಹೊಸ ಔಷಧ ಪ್ರಯೋಗ ಶೇ. 100 ಯಶಸ್ವಿ!

World Environment Day celebration in karatagi
ಕೊಪ್ಪಳ9 hours ago

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌