ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಹೆಂಡತಿಯನ್ನು ಬೆನ್ನಟ್ಟಿ ಹೋಗಿ ಕೊಚ್ಚಿ ಕೊಂದ ಪತಿ - Vistara News

ಕರ್ನಾಟಕ

ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಹೆಂಡತಿಯನ್ನು ಬೆನ್ನಟ್ಟಿ ಹೋಗಿ ಕೊಚ್ಚಿ ಕೊಂದ ಪತಿ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿಯಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನೇ ಕೊಂದು ಹಾಕಿದ್ದಾನೆ. ದುರುಳನ ಮಚ್ಚಿನೇಟಿಗೆ ಹೆಂಡತಿ ಬಲಿಯಾಗಿದ್ದಾಳೆ.

VISTARANEWS.COM


on

Hasana murder
ಕಾಫಿ ತೋಟದಲ್ಲಿ ನಡೆದ ಇಂದ್ರಮ್ಮ ಅವರ ಕೊಲೆಗೆ ಮಹಿಳೆಯರು ಕಣ್ಣೀರು ಹಾಕುತ್ತಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಆ ದಂಪತಿಗಳು ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸ್ತಾ ಇದ್ದರು.‌ ಅವರ ಮಗನಿಗೂ ಮದುವೆಯಾಗಿ, ಮಗ-ಸೊಸೆ ಜೊತೆ ಒಟ್ಟಿಗೆ ಸಂಸಾರ ಮಾಡಿಕೊಂಡು ಹೋಗುತ್ತಿದ್ದರು. ಆದರೆ, ಅವನು ಮಾತ್ರ ಸಣ್ಣಪುಟ್ಟ ವಿಷಯಕ್ಕೆಲ್ಲಾ ನಿತ್ಯವೂ ಗಂಡ ಕುಡಿದುಬಂದು ಗಲಾಟೆ ಮಾಡ್ತಾ ಇದ್ದ. ಹೀಗಾಗಿಯೇ ಒಂದೂವರೆ ತಿಂಗಳಿನಿಂದ ಇಬ್ಬರೂ ಮಾತಾಡುತ್ತಾ ಇರಲಿಲ್ಲ. ಇದರಿಮದದ ರೊಚ್ಚಿಗೆದ್ದ ಗಂಡ, ಹೆಂಡತಿ ಕೆಲಸಕ್ಕೆಂದು ಹೋಗುವಾಗ ಅಟ್ಟಿಸಿಕೊಂಡು ಬಂದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಚ್ಚಿನಿಂದ ಮನಸೋ‌ ಇಚ್ಛೆ ಕಡಿದು ಎಸ್ಕೇಪ್ ಆಗಿದ್ದಾನೆ.

ಕೊಲೆಗಾರ ಚಂದ್ರಯ್ಯ ಮತ್ತು ಕೊಲೆಯಾದ ಇಂದ್ರಮ್ಮ

ಈ ಘಟನೆ ನಡೆದಿರುವುದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದ ಸಮೀಪ. 48 ವರ್ಷದ ಇಂದ್ರಮ್ಮ ಎಂಬಾಕೆಯ ಭೀಕರ ಕೊಲೆಯಾಗಿದೆ. ತನ್ನ ಪತಿ ಚಂದ್ರಯ್ಯನೇ ಕೊಲೆಗಾರ. ಇಂದ್ರಮ್ಮ ಮಂಗಳವಾರ ಬೆಳಗ್ಗೆ ಕೇಶವಮೂರ್ತಿ ಎಂಬುವವರ ಕಾಫಿ ತೋಟದ ಕೆಲಸಕ್ಕೆಂದು ಹೋಗುತ್ತಿದ್ದಾಗ, ಬೆನ್ನಟ್ಟಿ ಬಂದ ದುರುಳ ಪತಿ ಏಕಾಏಕಿ ದಾಳಿ ನಡೆಸಿದ್ದಾನೆ. ಮಚ್ಚಿನಿಂದ ದಾಳಿಮಾಡಿ, ಮನಸೋ ಇಚ್ಛೆ ದಾಳಿ ಮಾಡಿ ಕೊಂದುಹಾಕಿದ್ದಾನೆ. ಇಂದ್ರಮ್ಮನನ್ನು ಕಾಪಾಡಲು ಬಂದ ಮಹಿಳೆಯೊಬ್ಬರ ಮೇಲೂ ಹಲ್ಲೆಗೆ ಮುಂದಾಗಿದ್ದನಂತೆ ಚಂದ್ರಯ್ಯ. ಆದರೆ, ಅವರು ನಮ್ಮನ್ನೂ ಕೊಂದು ಬಿಡ್ತಾನೆ ಎಂದು ಮೂವರು ಮಹಿಳೆಯರು ಅಲ್ಲಿಂದ ಓಡಿಹೋಗಿದ್ದಾರೆ. ಪತ್ನಿಯನ್ನು ಕೊಂದ ಬಳಿಕ ಚಂದ್ರಯ್ಯ ಎಸ್ಕೇಪ್ ಆಗಿದ್ದು, ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿರೋ ಆರೋಪಿ ಚಂದ್ರಯ್ಯಗಾಗಿ ಪೊಲೀಸರು ಬಲೆ ಬೀಸಿದ್ದಾರೆ.‌

ʻʻಇಬ್ಬರೂ ನನ್ನ ತೋಟಕ್ಕೆ ಕೆಲಸಕ್ಕೆಂದು ಬರ್ತಾ ಇದ್ರು, ಗಂಡ ಬೆನ್ನು ನೋವು ಅಂತಾ ಮೂರು ವರ್ಷದಿಂದ ಕೆಲಸಕ್ಕೆ ಬರ್ತಾ ಇರಲಿಲ್ಲ. ಕಳೆದ ಒಂದೂವರೆ ತಿಂಗಳಿನಿಂದ ಮನೆಯಲ್ಲಿ ಗಲಾಟೆ ಆಗುತ್ತಿತ್ತಂತೆ. ಹಿಂದೆಯೂ ಮಚ್ಚಿನಿಂದ ಹಲ್ಲೆ ಮಾಡೋದಕ್ಕೆ ಹೋಗಿದ್ದನಂತೆ. ಆದರೆ ಈಕೆ ಯಾರ ಬಳಿಯೂ ಹೇಳಿಕೊಂಡಿಲ್ಲ. ಆದ್ರೆ ಇವತ್ತು ಬೆಳಗ್ಗೆ ಕೆಲಸಕ್ಕೆಂದು ಬರೋ ವೇಳೆ ಹೊಂಚುಹಾಕಿ ಕೊಂದು ಎಸ್ಕೇಪ್ ಆಗಿದ್ದಾನೆʼʼ ಎಂದು ತೋಟದ ಮಾಲೀಕರಾದ ಕೇಶವಮೂರ್ತಿ ಹೇಳಿದ್ದಾರೆ.

ಕೊಲೆ ನಡೆದ ಜಾಗದಲ್ಲಿ ಪೊಲೀಸರಿಂದ ಮಹಜರು

ಚಂದ್ರಯ್ಯ ಹಾಗೂ ಇಂದ್ರಮ್ಮ ಗೆ ನಾಲ್ವರು ಮಕ್ಕಳಿದ್ದು, ಮೂರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ. ಮೂವರು ಹೆಣ್ಣುಮಕ್ಕಳಿಗೆ ಮದುವೆ ಮಾಡಿ, ಮಗನಿಗೂ ಮದುವೆ ಮಾಡಿ ಮಗ ಹಾಗೂ ಸೊಸೆ ಜೊತೆ ಸಂತೋಷದಿಂದಲೇ ಸಂಸಾರ ಮಾಡುತ್ತಿದ್ದರು. ಮಗ ಚೀಕನಹಳ್ಳಿ ಗ್ರಾಮಪಂಚಾಯಿತಿ ಸದಸ್ಯನೂ ಕೂಡಾ ಹೌದು.. ಆದರೆ ಗಂಡ ಹೆಂಡತಿಯ ನಡುವೆ ಸಣ್ಣ ಪುಟ್ಟ ಕಾರಣಗಳಿಗೆ ನಿತ್ಯವೂ ಜಗಳವಾಡುತ್ತಿದ್ದರಂತೆ. ಚಂದ್ರಯ್ಯ ಕುಡಿದು ಬಂದು ನಿತ್ಯವೂ ಗಲಾಟೆ ಮಾಡಿ, ಪತ್ನಿಗೆ ಹೊಡೆಯುತ್ತಿದ್ದನಂತೆ.‌

ʻʻಕಳೆದ ಒಂದೂವರೆ ತಿಂಗಳ ಹಿಂದೆ ಗಲಾಟೆ ಮಾಡಿ, ಮಚ್ಚಿನಿಂದ ಹಲ್ಲೆ ಮಾಡೋದಕ್ಕೆ ಮುಂದಾಗಿದ್ದರು, ಅವತ್ತಿನಿಂದ ಇಬ್ಬರೂ ಮಾತಾಡ್ತಾ ಇರಲಿಲ್ಲ. ನಮ್ಮ ಜೊತೆ ಇಬ್ಬರೂ ಚೆನ್ನಾಗಿದ್ದರು. ಆದರೆ ಇವತ್ತು ಹೀಗೆ ಮಾಡಿದ್ದಾರೆ. ಮೂರು ವರ್ಷದಿಂದ ಬೆನ್ನುನೋವು ಅಂತಾ ಕೆಲಸಕ್ಕೆ ಹೋಗ್ತಾ ಇರಲಿಲ್ಲ, ಲಕ್ಷಾಂತರ ಖರ್ಚು ಮಾಡಿ ನಾವೇ ಚಿಕಿತ್ಸೆ ಕೊಡುತ್ತಿದ್ದೋ.. ನಿತ್ಯವೂ ಊಟವನ್ನೂ ನಾವೇ ಹಾಕ್ತಿದ್ದೋ ಆದ್ರೆ ತಿಂದ ಮನೆಗೆ ದ್ರೋಹ ಮಾಡಿಬಿಟ್ಟ ನಮ್ಮ ಅಪ್ಪʼʼ ಎಂದು ಗ್ರಾಪ ಪಂಚಾಯಿತಿ ಸದಸ್ಯರೂ ಆಗಿರುವ ಮಗ ಪ್ರದೀಪ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದನ್ನೂ ಓದಿ | Murder | ಯುವಕನ ಕೊಲೆಯಲ್ಲಿ ಅಂತ್ಯವಾದ ಅನೈತಿಕ ಸಂಬಂಧ; ಬಡಿಗೆಯಿಂದ ಬಡಿದು ಕೊಂದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Road Accident : ಚಲಿಸುತ್ತಿರುವಾಗಲೇ ಬಸ್‌ನಿಂದ ಕಳಚಿಕೊಂಡ ಚಕ್ರಗಳು; ಗಲಿಬಿಲಿಗೊಂಡ ಪ್ರಯಾಣಿಕರು

Road Accident : ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಚಲಿಸುತ್ತಿರುವಾಗಲೇ ಅದರ ಹಿಂಬದಿ ಚಕ್ರ ಕಳಚಿ ಬಿದ್ದಿದೆ. ಇದರಿಂದಾಗಿ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಕೆಲ ಸಮಯದವರೆಗೆ ಆತಂಕಕ್ಕೀಡಾಗಿದ್ದರು.

VISTARANEWS.COM


on

By

Road Accident in anekal
Koo

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ (Anekal News) ತಾಲೂಕಿನ ಸಮಂದೂರು ಬಳಿ ಚಲಿಸುತ್ತಿದ್ದ ಸಾರಿಗೆ ಬಸ್‌ನ (KSRTC Bus) ಚಕ್ರ ಕಳಚಿಕೊಂಡು (road Accident) ಬಿದ್ದಿದೆ. ಇದರಿಂದಾಗಿ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

ಚಾಲಕ ಸಮಯಪ್ರಜ್ಞೆ ಮೆರೆದು ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಬಸ್‌ ತುಂಬಾ ವೇಗವಾಗಿಯೇನೂ ಹೋಗುತ್ತಿರಲಿಲ್ಲ. ಒಂದೊಮ್ಮೆ ವೇಗವಾಗಿ ಸಾಗುತ್ತಿದ್ದರೆ ಕಳಚಿಕೊಂಡ ಚಕ್ರ, ವೇಗವಾಗಿ ಹೋಗಿ ಯಾವುದೋ ವಾಹನಕ್ಕೆ ಅಥವಾ ಪಾದಚಾರಿಗಳಿಗೆ ಬಡಿದು ದೊಡ್ಡ ಅನಾಹುತ ಸಂಭವಿಸುವ ಅಪಾಯವಿತ್ತು. ಅದೃಷ್ಟವಶಾತ್‌ ಅಂತ ಅವಘಡ ಸಂಭವಿಸಿಲ್ಲ. ಬಸ್ಸಿನ ಹಿಂಬದಿ ಒಮ್ಮೆಗೇ ನೆಲಕ್ಕೆ ಬಡಿದಿದ್ದರಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು.

ಆನೇಕಲ್ ಘಟಕಕ್ಕೆ ಸೇರಿದ ಕೆಎಸ್ಆರ್‌ಟಿಸಿ ಬಸ್ ಆನೇಕಲ್ ಕಡೆಯಿಂದ ಸಮಂದೂರು ಮಾರ್ಗವಾಗಿ ಹೊರಟಿತ್ತು. ಸಮಂದೂರು ಸಮೀಪ ಬರುತ್ತಿದ್ದಾಗ ಏಕಾಏಕಿ ಟೈರ್‌ಗಳು ಕಳಚಿಕೊಂಡಿವೆ. ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾರೆ. ಚಾಲಕನು ಏಕಾಏಕಿ ಬ್ರೇಕ್‌ ಹಾಕಿದ ಕಾರಣ ಜನ ಗಲಿಬಿಲಿಗೊಂಡರು. ಕೂಡಲೇ ಕೆಳಗಿಳಿದು ನೋಡಿದಾಗ ಬಸ್‌ ಚಕ್ರ ಬಿದ್ದಿದ್ದನ್ನು ಕಂಡು ಮತ್ತಷ್ಟು ಗಾಬರಿಗೊಂಡರು. ಅಬ್ಬಾ ಯಾವುದೇ ಅಪಾಯ ಎದುರಾಗಲಿಲ್ಲ ಎಂದು ನಿಟ್ಟುಸಿರುಬಿಟ್ಟರು. ‌

ಕಂಡಿಷನ್‌ ಇಲ್ಲದ ಬಸ್‌ಗಳನ್ನು ರಸ್ತೆಗಿಳಿಸುವ ಡಿಪೋ ಅಧಿಕಾರಿಗಳ ಬೇಜವಬ್ದಾರಿತನಕ್ಕೆ ಕಿಡಿಕಾರಿದರು. ಪ್ರಯಾಣಿಕರ ಜೀವದ ಜತೆ ಚೆಲ್ಲಾಟವಾಡುವ, ಬಸ್ ಚಾಲಕ ಹಾಗೂ ನಿರ್ವಾಹಕರ ಜೀವಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

ಹೈದರಾಬಾದ್‌: ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್‌ ಓವೈಸಿ(Asaduddin Owaisi) ಭರ್ಜರಿಯಾಗಿ ಬೈಕ್‌ ರೈಡಿಂಗ್‌(Bike ride) ಮಾಡುತ್ತಾ ಪ್ರಚಾರ ನಡೆಸಿದ್ದಾರೆ. ಹೈದರಾಬಾದ್‌(Hyderabad) ಕ್ಷೇತ್ರದಲ್ಲಿ ನೀಲಿ ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮಾ ಧರಿಸಿ ತಮ್ಮ ಟ್ರಿಯಂಫ್‌ ಬೊನ್ನೆವಿಲ್ಲೆ(Triumph Bonneville) ಬೈಕ್‌ನಲ್ಲಿ ಸಾರ್ವಜನಿಕ ಸಭೆಗೆ ಆಗಮಿಸುವ ಮೂಲಕ ಓವೈಸಿ ಎಲ್ಲರ ಗಮನ ಸೆಳೆದಿದ್ದಾರೆ. ಓವೈಸಿ ಅವರು ತಮ್ಮ ಬೆಂಬಲಿಗರೊಂದಿಗೆ ಬೈಕ್‌ ರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಬರೋಬ್ಬರಿ ನಾಲ್ಕು ಬಾರಿ ಹೈದರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸಿರುವ ಓವೈಸಿ, ಮೇ 13ರಂದು ನಡೆಯಲಿರುವ ನಡೆಯಲಿರುವ ನಾಲ್ಕನೇ ಹಂತದ ಚುನಾವಣೆಗೆ ಮನೆ ಮನೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ನಾಲ್ಕನೇ ಹಂತದಲ್ಲಿ ತೆಲಂಗಾಣದ ಎಲ್ಲಾ 17ಲೋಕಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ. ಇನ್ನು ಓವೈಸಿ ಎದುರು ಬಿಜೆಪಿಯ ಮಾಧವಿ ಲತಾ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಓವೈಸಿ ಬಿಜೆಪಿಯ ಭಗವಂತ್‌ ರಾವ್‌ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಹೈದರಾಬಾದ್‌ ಲೋಕಭಾ ಕ್ಷೇತ್ರ ಬಹದ್ದೂರ್‌ಪುರ, ಚಂದ್ರಯಾನ್‌ಗುಟ್ಟಾ. ಚಾರ್‌ಮಿನಾರ್‌, ಘೋಷಮಹಲ್‌, ಕಾರ್ವಾನ್‌, ಮಲಕಪೇಟೆ ಮತ್ತು ಯಾಕತ್‌ಪುರ ಸೇರಿದ್ದಂತೆ ಒಟ್ಟು 7ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿದೆ.

ಎರಡು ದಿನಗಳ ಹಿಂದೆ ಉತ್ತರಪ್ರದೇಶದ ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಸ್ಕೂಟರ್‌ನಲ್ಲಿ ತೆರಳಿ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಸ್ಕೂಟರ್‌ ರೈಡ್‌ ಮಾಡಿಕೊಂಡು ತಮ್ಮ ಕ್ಷೇತ್ರಕ್ಕೆ ಬಂದಿದ್ದ ತಮ್ಮ ನೆಚ್ಚಿನ ನಾಯಕಿಯನ್ನು ಕಂಡು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದರು. ಅವರ ಜೊತೆ ಸೆಲ್ಫಿ, ಫೊಟೋಗೆ ಪೋಸ್‌ ಕೊಟ್ಟರು. ಅಲ್ಲದೇ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಪ್ರಸ್ತು ಸ್ಥಿತಿಗತಿ ಬಗ್ಗೆ ಚರ್ಚಿಸಿದ್ದರು.

ಕಾಂಡೋಮ್‌ಗಳನ್ನು ಮುಸ್ಲಿಮರೇ ಹೆಚ್ಚು ಬಳಸ್ತಾರೆ

ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಓವೈಸಿ,ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.
ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Rahul Gandhi: ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಗಳಲ್ಲಿ ಈಗ ಪ್ರಜ್ವಲ್ ಲೈಂಗಿಕ ಹಗರಣ ಹಾಟ್ ಟಾಪಿಕ್ ಆಗಿದೆ. ಪ್ರಜ್ವಲ್ ವಿಚಾರವನ್ನೆ ಬಹುದೊಡ್ಡ ಅಸ್ತ್ರವಾಗಿ ಎಐಸಿಸಿ ಪ್ರಯೋಗಿಸುತ್ತಿದೆ. ರಾಹುಲ್ ಗಾಂಧಿ ಇಂದಿನ ಭಾಷಣದಲ್ಲಿಯೂ ಪ್ರಜ್ವಲ್ ದೌರ್ಜನ್ಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಕಳೆದ ಸೋಮವಾರವಷ್ಟೇ ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಿಯಾಂಕಾ ಗಾಂಧಿ ಪ್ರಸ್ತಾಪ ಮಾಡಿದ್ದರು.

VISTARANEWS.COM


on

Rahul Gandhi
Koo

ಶಿವಮೊಗ್ಗ: ಶಿವಮೊಗ್ಗ (Shivamogga) ನಗರಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿ ನೀಡಿ ಲೋಕಸಭೆ ಚುನಾವಣೆ (Lok sabha Election 2024) ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ (Prajwal revanna case) ಹಗರಣದ ವಿಚಾರವನ್ನು ನಿನ್ನೆ ಸೋಶಿಯಲ್‌ ಮೀಡಿಯಾದಲ್ಲಿ ಎತ್ತಿರುವ ರಾಹುಲ್‌ ಗಾಂಧಿ, ಇಂದು ಸಾರ್ವಜನಿಕ ಭಾಷಣದಲ್ಲಿಯೂ ಪ್ರಸ್ತಾಪಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ (congress candidate) ಗೀತಾ ಶಿವರಾಜ್ ಕುಮಾರ್ (Geetha Shiv rajkumar) ಪರ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಅವರ ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಭಾಗವಹಿಸಲಿದ್ದಾರೆ.

ಶಿವಮೊಗ್ಗ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕುಟುಂಬದ ಮಗಳನ್ನು ಕಣಕ್ಕಿಳಿಸಿದ್ದು, ಪ್ರಚಾರಕ್ಕೆ ಜನಪ್ರಿಯ ಸ್ಟಾರ್‌ ಶಿವರಾಜ್‌ಕುಮಾರ್‌ ಕೂಡ ಆಗಮಿಸಿ ಪತ್ನಿಯ ಪರ ಬಿರುಗಾಳಿಯಂತೆ ಪ್ರಚಾರ ನಡೆಸುತ್ತಿದ್ದಾರೆ. ಸ್ವತಃ ಸಚಿವ ಮಧು ಬಂಗಾರಪ್ಪ, ತಮ್ಮ ಸೋದರಿಯ ಗೆಲುವಿಗಾಗಿ ಟೊಂಕ ಕಟ್ಟಿ ನಿಂತುಬಿಟ್ಟಿದ್ದಾರೆ. ಇನ್ನೊಂದು ಕಡೆ ಬಿಜೆಪಿಯ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಈಶ್ವರಪ್ಪನವರ ಬಂಡಾಯದಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಮತ್ತೊಂದು ಕಡೆ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಿಂದಾಗಿ ಬಿಜೆಪಿ ಹಾಗೂ ಜೆಡಿಎಸ್‌ ಮುಜುಗರ ಅನುಭವಿಸುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೋದಲ್ಲಿ ಬಂದಲ್ಲಿ ಈ ವಿಚಾರ ಎತ್ತಿ ಅಣಕಿಸುತ್ತಿದ್ದಾರೆ. ರಾಹುಲ್ ರಾಜ್ಯಕ್ಕೆ ಬಂದಾಗ ಪ್ರಚಾರದ ಕಣದಲ್ಲಿ ಈ ವಿಚಾರವನ್ನು ಎತ್ತಿ ಟೀಕಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಗಳಲ್ಲಿ ಈಗ ಪ್ರಜ್ವಲ್ ಲೈಂಗಿಕ ಹಗರಣ ಹಾಟ್ ಟಾಪಿಕ್ ಆಗಿದೆ. ಪ್ರಜ್ವಲ್ ವಿಚಾರವನ್ನೆ ಬಹುದೊಡ್ಡ ಅಸ್ತ್ರವಾಗಿ ಎಐಸಿಸಿ ಪ್ರಯೋಗಿಸುತ್ತಿದೆ. ರಾಹುಲ್ ಗಾಂಧಿ ಇಂದಿನ ಭಾಷಣದಲ್ಲಿಯೂ ಪ್ರಜ್ವಲ್ ದೌರ್ಜನ್ಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಕಳೆದ ಸೋಮವಾರವಷ್ಟೇ ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಿಯಾಂಕಾ ಗಾಂಧಿ ಪ್ರಸ್ತಾಪ ಮಾಡಿದ್ದರು. ಪ್ರಜ್ವಲ್ ಪ್ರಕರಣ ಪ್ರಸ್ತಾಪ ‌ಮಾಡುವ ಮೂಲಕ ಪಿಎಂ ಮೋದಿಗೆ ಕುಟುಕಿದ್ದರು.

ಅಲ್ಲದೆ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮೋದಿಯವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದರು. “ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ನರೇಂದ್ರ ಮೋದಿ ಮೌನ ವಹಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಪ್ರಧಾನಿ ಉತ್ತರಿಸಬೇಕು. ಎಲ್ಲ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣು ಮಕ್ಕಳನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ಹೇಗೆ ತಪ್ಪಿಸಿಕೊಂಡ? ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ, ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣು ಮಕ್ಕಳ ಪೀಡಕರಿಗೆ ಬೆಂಬಲ ನೀಡಲಾಗುತ್ತಿದೆ. ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬಿದಂತಾಗುತ್ತಿದೆ. ಮೋದಿಯವರ ʼರಾಜಕೀಯ ಕುಟುಂಬದ’ ಭಾಗವಾಗುವುದು ಅಪರಾಧಿಗಳಿಗೆ ʼಭದ್ರತೆಯ ಖಾತರಿ’ ಆಗಿದೆಯೇ?” ಎಂದು ರಾಗಾ ಪ್ರಶ್ನಿಸಿದ್ದರು.

ಇಂದು ನಗರದ ಪ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್‌ನ ಬೃಹತ್ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಸಚಿವ ಮಧು ಬಂಗಾರಪ್ಪ ಉಸ್ತುವಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಶಿವಮೊಗ್ಗ ನಗರದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಗೀತಾರನ್ನು ಗೆಲ್ಲಿಸಲು ಪಣ ತೊಟ್ಟಿರುವ ನಟ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಕ್ಷೇತ್ರದ ತುಂಬಾ ಓಡಾಡಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಇಂದು ರಾಹುಲ್‌ ಗಾಂಧಿ ಭಾಗವಹಿಸಲಿರುವ ಪ್ರಜಾ ಧ್ವನಿ ಯಾತ್ರೆ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಬೆಳಿಗ್ಗೆ 11:30ರಿಂದ ಶುರುವಾಗಲಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಾಣ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Continue Reading

ಉದ್ಯೋಗ

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

Job Alert: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ನಾಳೆ (ಮೇ 3) ಕೊನೆಯ ದಿನ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ (Hutti Gold Mines Company Limited)ಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (HGML Recruitment 2024). ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ನಾಳೆ (ಮೇ 3). ಹೀಗಾಗಿ ಬೇಗ ಅಪ್ಲೈ ಮಾಡಿ (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಉಳಿಕೆ ಮೂಲ / ಸ್ಥಳೀಯೇತರ ವೃಂದ).

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ).

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

SSLC Result 2024: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

VISTARANEWS.COM


on

karnataka SSLC result 2024
Koo

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್‌ (SSLC result) ಪ್ರಕಟಿಸುವ ಸಾಧ್ಯತೆಗಳಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

2023 & 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಸೇರಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ರಿಸಲ್ಟ್ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್/ ರೋಲ್‌ ನಂಬರ್ ಹೊಂದಿರಬೇಕು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ, ಕಾತರ ಹೆಚ್ಚಿದೆ. ಫಲಿತಾಂಶ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದ್ದು, ಪರೀಕ್ಷಾ ಮಂಡಳಿ ಅಧಿಕಾರಿಗಳು ಕೂಡ ರಿಸಲ್ಟ್ ರಿವೀಲ್ ಮಾಡಲು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ.

ಮೂರು ಅವಕಾಶ

ಈ ಬಾರಿ ಮೂರು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆ ಮೂರೂ ಪರೀಕ್ಷೆ ಬರೆದವರು ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಆ ಫಲಿತಾಂಶವನ್ನು ಉಳಿಸಿಕೊಳ್ಳುವ ಅವಕಾಶ ದೊರೆಯಲಿದೆ. ಪ್ರತಿ ವಿದ್ಯಾರ್ಥಿಗಳು ಮೂರೂ ಪರೀಕ್ಷೆ ಬರೆಯುವುದು ಕಡ್ಡಾಯವಲ್ಲ. ಮೊದಲ ಅಥವಾ ವಾರ್ಷಿಕ ಪರೀಕ್ಷೆಯಲ್ಲಿ ಬಂದ ಫಲಿತಾಂಶದಲ್ಲಿ ಸಮಾಧಾನವಿದ್ದರೆ ಎರಡನೇ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಸಮಾಧಾನ ಇಲ್ಲದಿದ್ದರೆ ಅಥವಾ ಕಡಿಮೆ ಅಂಕಗಳು ಬಂದಿದ್ದರೆ ಎರಡನೇ ಪರೀಕ್ಷೆ ಬರೆಯಬಹುದು. ಎರಡನೇ ಪರೀಕ್ಷೆಯ ಫಲಿತಾಂಶದಲ್ಲೂ ಸಮಾಧಾನ ಇಲ್ಲದಿದ್ದರೆ ಮೂರನೇ ಪರೀಕ್ಷೆ ಬರೆಯಬಹುದು. ಈ ರೀತಿ ಮೂರೂ ಪರೀಕ್ಷೆ ಬರೆದರೂ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಅಥವಾ ಮೂರೂ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದಿರುವ ಬೇರೆ ಬೇರೆ ವಿಷಯಗಳ ಫಲಿತಾಂಶಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಪರಿಗಣಿಸಬಹುದಾಗಿದೆ.

ಹಾಲಿ ಇರುವ ಪರೀಕ್ಷಾ ಪದ್ಧತಿಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಈ ಸುಧಾರಣಾ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದಲ್ಲಿ ಸಮಾಧಾನವಾಗದಿದ್ದರೆ ವಿದ್ಯಾರ್ಥಿ ಅದನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಬಹುದಿತ್ತು. ಆದರೆ, ಪೂರಕ ಪರೀಕ್ಷೆಯಲ್ಲೇನಾದರೂ ಇನ್ನೂ ಕಳಪೆ ಫಲಿತಾಂಶ ಬಂದರೆ ಅಥವಾ ಫೇಲಾದರೆ ವಾರ್ಷಿಕ ಪರೀಕ್ಷೆಯ ಫಲಿತಾಂಶ ಉಳಿಸಿಕೊಳ್ಳಲು ಅವಕಾಶವಿರಲಿಲ್ಲ. ಈಗ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಉಳಿಸಿಕೊಳ್ಳಬಹುದು.

ಇದನ್ನೂ ಓದಿ: Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ

Continue Reading
Advertisement
Road Accident in anekal
ಬೆಂಗಳೂರು ಗ್ರಾಮಾಂತರ2 mins ago

Road Accident : ಚಲಿಸುತ್ತಿರುವಾಗಲೇ ಬಸ್‌ನಿಂದ ಕಳಚಿಕೊಂಡ ಚಕ್ರಗಳು; ಗಲಿಬಿಲಿಗೊಂಡ ಪ್ರಯಾಣಿಕರು

Puttakkana Makkalu Serial puttakka daughter Sahana left home
ಕಿರುತೆರೆ26 mins ago

Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

Mosquito controle
ಲೈಫ್‌ಸ್ಟೈಲ್35 mins ago

Mosquito control: ಸೊಳ್ಳೆ ಕಾಟಕ್ಕೆ ಬೇಸತ್ತಿದ್ದೀರಾ? ಹಾಗಿದ್ರೆ ಈ ಮನೆಮದ್ದನ್ನು ಟ್ರೈ ಮಾಡಿ ನೋಡಿ!

Health Plan
ಮನಿ-ಗೈಡ್36 mins ago

Money Guide: ಕಾರ್ಪೊರೇಟ್- ವೈಯಕ್ತಿಕ ಆರೋಗ್ಯ ವಿಮೆಯ ನಡುವಿನ ವ್ಯತ್ಯಾಸ ತಿಳಿದಿರಲಿ

New Food Rules
ಪ್ರಮುಖ ಸುದ್ದಿ44 mins ago

New Food Rules: ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಪಾಕ್‌ ಹೈರಾಣ-ಹೊಸ ಭಕ್ಷ್ಯ ನೀತಿ ಜಾರಿ

MS Dhoni
ಕ್ರೀಡೆ48 mins ago

MS Dhoni: ರನ್​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

Google Layoff
ವಿದೇಶ50 mins ago

Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Tobacco use
ಆರೋಗ್ಯ51 mins ago

Tobacco Use: ತಂಬಾಕು ಸೇವನೆ; ವಿಶ್ವದಲ್ಲೇ ಭಾರತಕ್ಕೆ ಎರಡನೇ ಸ್ಥಾನ

Jammu Tour
ಪ್ರವಾಸ59 mins ago

Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

Uma Ramanan dies in Chennai
ಕಾಲಿವುಡ್1 hour ago

Uma Ramanan: ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ ಇನ್ನಿಲ್ಲ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌