Bharat Jodo Yatra | ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್​; ಭಾರತ್ ಜೋಡೊ ಯಾತ್ರೆಗೆ ರಾಹುಲ್​ ಗಾಂಧಿ ಚಾಲನೆ - Vistara News

ದೇಶ

Bharat Jodo Yatra | ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್​; ಭಾರತ್ ಜೋಡೊ ಯಾತ್ರೆಗೆ ರಾಹುಲ್​ ಗಾಂಧಿ ಚಾಲನೆ

ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್​​ನ ಹಲವು ಗಣ್ಯರ ಸಮ್ಮುಖದಲ್ಲಿ ಇಂದು ಭಾರತ್ ಜೋಡೋ ಯಾತ್ರೆಗೆ ಚಾಲನೆ ಸಿಕ್ಕಿದೆ. ನಾಳೆ ಮುಂಜಾನೆಯಿಂದ ಪಾದಯಾತ್ರೆ ಪ್ರಾರಂಭವಾಗಲಿದೆ.

VISTARANEWS.COM


on

Congress Bharat Jodo Yatra Begins
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾಂಗ್ರೆಸ್​​ನ ಬಹು ನಿರೀಕ್ಷಿತ ಭಾರತ್ ಜೋಡೋ ಯಾತ್ರೆ (Bharat Jodo Yatra)ಗೆ ಇಂದು ರಾಹುಲ್ ಗಾಂಧಿ ಚಾಲನೆ ನೀಡಿದರು. ಕನ್ಯಾಕುಮಾರಿಯ ಗಾಂಧಿ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​, ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​, ಛತ್ತೀಸ್​ಗಢ್​ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌​ ಮತ್ತು ಇತರ ಹಲವು ಪ್ರಮುಖ ನಾಯಕರು ಇದ್ದರು. ಭಾರತ್ ಜೋಡೋ ಯಾತ್ರೆಗೆ ಚಾಲನೆ ವೇಳೆ ಇಂದು ಡಿಎಂಕೆ ಅಧ್ಯಕ್ಷ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಅವರು ರಾಷ್ಟ್ರಧ್ವಜವನ್ನು ರಾಹುಲ್​ ಗಾಂಧಿಯವರಿಗೆ ನೀಡಿದರು. ಬಳಿಕ ಇವರಿಬ್ಬರೂ ನಾಯಕರು ತ್ರಿವರ್ಣ ಧ್ವಜಕ್ಕೆ ನಮಿಸಿದರು.

ಇಂದು ಬೆಳಗ್ಗೆ ರಾಹುಲ್​ ಗಾಂಧಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ರಾಜೀವ್​ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ, ನಮಿಸಿದರು. ಅದಾದ ಬಳಿಕ ಕನ್ಯಾಕುಮಾರಿಗೆ ಹೋಗಿ ಅಲ್ಲಿನ ವಿವೇಕಾನಂದ ಮೆಮೋರಿಯಲ್​​ಗೆ ಭೇಟಿ ನೀಡಿದ್ದರು. ಇಂದು ಯಾತ್ರೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ನಾಳೆ (ಸೆಪ್ಟೆಂಬರ್​ 8) ಮುಂಜಾನೆಯಿಂದ ಕಾಂಗ್ರೆಸ್ ನಾಯಕರ ಕಾಲ್ನಡಿಗೆ ಪ್ರಾರಂಭವಾಗಲಿದೆ.

ಕನ್ಯಾಕುಮಾರಿಯಿಂದ ಹೊರಡಲಿರುವ ಭಾರತ್​ ಜೋಡೋ ಯಾತ್ರೆ 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ, 20 ಪ್ರಮುಖ ಪ್ರದೇಶಗಳಲ್ಲಿ ಹಾದು ಹೋಗಲಿದೆ. ಅದರಲ್ಲಿ ಕರ್ನಾಟಕದ ಮೈಸೂರು, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಿಗೂ ಜೋಡೋ ಯಾತ್ರೆ ಪ್ರವೇಶ ಮಾಡಲಿದೆ. ಅದರ ಹೊರತಾಗಿ ತಿರುವನಂತಪುರಂ, ಕೊಚ್ಚಿ, ನಿಲಂಬೂರ್​, ವಿಕಾರಾಬಾದ್​, ನಂದೇಡ್​, ಜಲಗಾಂವ್​, ಜಾಮೋದ್​, ಇಂಧೋರ್​, ಕೋಟಾ, ದೌಸಾ, ಅಲ್ವಾರ್, ಬುಲಂದ್‌ಶಹರ್, ದೆಹಲಿ, ಅಂಬಾಲಾ, ಪಠಾಣ್‌ಕೋಟ್, ಜಮ್ಮು, ಶ್ರೀನಗರ ಮೂಲಕ ಕಾಶ್ಮೀರ ತಲುಪಲಿದೆ. ಐದು ತಿಂಗಳಲ್ಲಿ ಈ ಎಲ್ಲ ಪ್ರದೇಶಗಳಲ್ಲಿ ಯಾತ್ರೆ ಸುತ್ತಲಿದೆ.

ಇದನ್ನೂ ಓದಿ: Bharat Jodo Yatra | ಪೋಸ್ಟರ್​​ನಲ್ಲಿ ಕಂಡುಬಂತು ರಾಬರ್ಟ್​ ವಾದ್ರಾ ಫೋಟೋ; ಬಿಜೆಪಿಯಿಂದ ಟೀಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

Rahul Gandhi: 10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವು ಕಾಂಗ್ರೆಸ್‌ಗೆ ಲಭಿಸಿದ್ದು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯಲು ರಾಹುಲ್‌ ಗಾಂಧಿ ಅವರು ಸಜ್ಜಾಗಿದ್ದಾರೆ. ಇನ್ನು ಪ್ರತಿಪಕ್ಷ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಇರುವ ವಿಶೇಷ ಅಧಿಕಾರಗಳು ಯಾವವು? ಸವಲತ್ತುಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ (Leader Of The Opposition) ಆಯ್ಕೆಯಾಗಿದ್ದಾರೆ. ಕಳೆದ ಎರಡು (2014, 2019) ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಪ್ರತಿಪಕ್ಷವಾಗುವಷ್ಟು ಸೀಟುಗಳನ್ನು ಗೆದ್ದಿರದ ಕಾರಣ ಪ್ರತಿಪಕ್ಷ ನಾಯಕರೇ ಇರಲಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳನ್ನು ಗೆದ್ದಿದ್ದು, ಈಗ ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇವರು ಆಡಳಿತಾರೂಢ ಪಕ್ಷಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಲವು ಅಧಿಕಾರಗಳು ಹಾಗೂ ಸವಲತ್ತುಗಳನ್ನು ಪಡೆಯಲಿದ್ದಾರೆ. ಅವುಗಳ ಕುರಿತ ಮಾಹಿತಿ ಹೀಗಿದೆ…

ರಾಹುಲ್‌ ಗಾಂಧಿ ಸಂಬಳ ಎಷ್ಟು?

ರಾಹುಲ್‌ ಗಾಂಧಿ ಅವರು ಸಂಸದನಾಗಿ ಪಡೆಯುವ ಸಂಬಳದ ಜತೆಗೆ ಪ್ರತಿಪಕ್ಷ ನಾಯಕರೂ ಆಗಿರುವ ಕಾರಣ ಅವರಿಗೆ ಮಾಸಿಕ 3.3 ಲಕ್ಷ ರೂ. ಸಂಬಳ ಸಿಗಲಿದೆ. ಅಲ್ಲದೆ, ಕ್ಯಾಬಿನೆಟ್‌ ದರ್ಜೆಯ ಸಚಿವರಿಗೆ ಸಿಗುವ ಸವಲತ್ತುಗಳು, ಭದ್ರತೆ (ಝಡ್‌ ಪ್ಲಸ್‌) ಸಿಗಲಿದೆ. ಕ್ಯಾಬಿನೆಟ್‌ ಸಚಿವರೊಬ್ಬರಿಗೆ ಸಿಗುವ ಬಂಗಲೆಯೇ ರಾಹುಲ್‌ ಗಾಂಧಿ ಅವರಿಗೂ ನೀಡಲಾಗುತ್ತದೆ. ಇದರ ಜತೆಗೆ ಹಲವು ಭತ್ಯೆಗಳು ಕೂಡ ರಾಹುಲ್‌ ಗಾಂಧಿ ಅವರಿಗೆ ಸಿಗಲಿವೆ.

Rahul Gandhi

ಅವರ ಅಧಿಕಾರ ವ್ಯಾಪ್ತಿ ಹೇಗಿರಲಿದೆ?

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಹಲವು ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ. ಜಂಟಿ ಸಂಸದೀಯ ಸಮಿತಿಗಳು, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. ಹಾಗೆಯೇ, ಸಿಬಿಐ ನಿರ್ದೇಶಕ, ಮುಖ್ಯ ಚುನಾವಣಾ ಆಯುಕ್ತರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಚೀಫ್‌ ವಿಜಿಲನ್ಸ್‌ ಕಮಿಷನರ್‌, ಕೇಂದ್ರೀಯ ಮಾಹಿತಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವಾಗ ರಾಹುಲ್‌ ಗಾಂಧಿ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಸದನದ ಮುಂದಿನ ಸಾಲಿನಲ್ಲಿರುವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ. ಹಾಗೆಯೇ, ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾತನಾಡುವಾಗ ಕೂಡ ಅವರಿಗೆ ಮುಂದಿನ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಲೋಕಸಭೆಯ ಒಟ್ಟು ಕ್ಷೇತ್ರಗಳ ಶೇ.10ರಷ್ಟು ಅಂದರೆ 55 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಪಕ್ಷವು ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುತ್ತದೆ. ಆ ಪಕ್ಷದ ನಾಯಕ ಪ್ರತಿಪಕ್ಷ ನಾಯಕರಾಗುತ್ತಾರೆ. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಈ ಬಾರಿ 99 ಕ್ಷೇತ್ರಗಳನ್ನು ಗೆದ್ದಿರುವ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Continue Reading

ದೇಶ

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Bridge Collapse: ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ (Bihar) ಕಳಪೆ ಕಾಮಗಾರಿಗಳು, ಸರ್ಕಾರದ ಕಾಮಗಾರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಲೇ ಇವೆ. ಅದರಲ್ಲೂ, ಕಳೆದ ಕೆಲ ದಿನಗಳಲ್ಲಿ ಸಾಲು ಸಾಲು ನಿರ್ಮಾಣ ಹಂತದ ಸೇತುವೆಗಳು ಕುಸಿಯುತ್ತಿರುವುದು (Bridge Collapse) ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ. ಇದರ ಬೆನ್ನಲ್ಲೇ, ಶುಕ್ರವಾರ (ಜೂನ್‌ 28) ಬಿಹಾರದ ಮಧುಬನಿ (Madhubani Region) ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಆ ಮೂಲಕ ಕಳೆದ 9 ದಿನದಲ್ಲಿ ಬಿಹಾರದಲ್ಲಿಯೇ 5 ಸೇತುವೆಗಳು ಕುಸಿದಂತಾಗಿದೆ.

ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ. ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಇದಕ್ಕಾಗಿಯೇ ವಿಳಂಬವಾಗುತ್ತಿದೆ ಎಂಬುದಾಗಿ ಸ್ಥಳೀಯರು ಆರೋಪಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ. ಈಗ ಸೇತುವೆಯು ನಿರ್ಮಾಣ ಹಂತದಲ್ಲಿಯೇ ಕುಸಿದಿರುವುದು ಜನರ ಆಕ್ರೋಶವನ್ನು ಕೆರಳಿಸಿದೆ.

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ.

ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಸೇತುವೆ ಕುಸಿತದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಗುರುವಾರವಷ್ಟೇ (ಜೂನ್‌ 27) ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆಯೊಂದು ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.  

ಇದನ್ನೂ ಓದಿ: ಬಾಲ್ಟಿಮೋರ್‌ ಸೇತುವೆ ಕುಸಿತ ಪ್ರಕರಣ; ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಸಮಯಪ್ರಜ್ಞೆಗೆ ಅಮೆರಿಕ ಅಧ್ಯಕ್ಷ ಬೈಡನ್ ಮೆಚ್ಚುಗೆ

Continue Reading

ದೇಶ

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

UGC NET Exam: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ ಸುಮಾರು 11 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೆಟ್‌ ಬರೆದಿದ್ದರು. ಇದನ್ನು ಬಳಿಕ ರದ್ದುಗೊಳಿಸಲಾಗಿತ್ತು. ಈಗ ಹೊಸ ದಿನಾಂಕ ಘೋಷಣೆ ಮಾಡಲಾಗಿದೆ.

VISTARANEWS.COM


on

UGC NET Exam
Koo

ನವದೆಹಲಿ: ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್‌ (ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಹೊಸ ದಿನಾಂಕವನ್ನು ಘೋಷಣೆ ಮಾಡಿದೆ. ಯುಜಿಸಿ ನೆಟ್‌ ಪರೀಕ್ಷೆಯು ಆಗಸ್ಟ್‌ 21 ಹಾಗೂ ಸೆಪ್ಟೆಂಬರ್‌ 4ರಂದು ನಡೆಸಲಿದೆ. ಅದರಲ್ಲೂ, ಪರೀಕ್ಷೆಯಲ್ಲಿ ಅಕ್ರಮ ತಡೆಯುವ ದಿಸೆಯಲ್ಲಿ ಪೆನ್‌ ಹಾಗೂ ಪೇಪರ್‌ ಪದ್ಧತಿ ಬದಲಾಗಿ, ಕಂಪ್ಯೂಟರ್‌ ಆಧಾರಿತವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೇ, ಆಲ್‌ ಇಂಡಿಯಾ ಆಉಷ್‌ ಪೋಸ್ಟ್‌ ಗ್ರ್ಯಾಜುಯೇಟ್‌ ಪ್ರವೇಶ ಪರೀಕ್ಷೆಯು (AIAPGET) ಜುಲೈ 6ರಂದು ನಡೆಸಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ನ್ಯಾಷನಲ್ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್‌ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿತ್ತು. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಗೂ ದಿನಾಂಕ ಘೋಷಣೆ

ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಪರೀಕ್ಷೆಯನ್ನು ಜುಲೈ 25-27ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Joint CSIR UGC NET: ನೆಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಮುಂದೂಡಿಕೆ!

Continue Reading

ದೇಶ

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Vodafone Idea: ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಲು ತೀರ್ಮಾನಿಸಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ.

VISTARANEWS.COM


on

Vodafone Idea
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕಳೆದ ಕೆಲ ದಿನಗಳಿಂದ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸುತ್ತಿವೆ. ರಿಲಯನ್ಸ್‌ ಜಿಯೋ (Reliance Jio) ಹಾಗೂ ಏರ್‌ಟೆಲ್‌ (Airtel) ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿದ ಬೆನ್ನಲ್ಲೇ ವೋಡಾಫೋನ್‌ ಐಡಿಯಾ (Vodafone Idea) ಸಂಸ್ಥೆಯೂ ಬೆಲೆಯೇರಿಕೆಗೆ ಮುಂದಾಗಿದೆ. ಇದು ಕೂಡ ಕೋಟ್ಯಂತರ ಗ್ರಾಹಕರಿಗೆ ಮೊಬೈಲ್‌ ರಿಚಾರ್ಜ್‌ ಮಾಡಿಸಿಕೊಳ್ಳುವಲ್ಲಿ ಹೊರೆ ಎನಿಸಲಿದೆ.

ಹೌದು, ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಲು ತೀರ್ಮಾನಿಸಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ವಾರ್ಷಿಕ ಯೋಜನೆಯ ಮೊತ್ತವನ್ನು 2,899 ರೂ.ನಿಂದ 3,499 ರೂ.ಗೆ ಏರಿಕೆ ಮಾಡಿದೆ. ಆದರೆ, 365 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು ಹಾಗೂ 24 ಜಿಬಿ (ಪ್ರತಿದಿನ ಅಲ್ಲ) ಇಂಟರ್‌ನೆಟ್‌ ಪ್ಲಾನ್‌ ಬೆಲೆಯೇರಿಕೆ ಮಾಡಿಲ್ಲ. ಅದು ಮೊದಲಿನಂತೆ ಶೇ.1,799 ರೂ. ಇರಲಿದೆ.

ಜಿಯೋ ಪ್ಲಾನ್‌ ಬೆಲೆಯೇರಿಕೆ ಎಷ್ಟು?

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಇದನ್ನೂ ಓದಿ: 5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Continue Reading
Advertisement
Ashada Month
ಧಾರ್ಮಿಕ19 mins ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ19 mins ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Rahul Gandhi
ದೇಶ22 mins ago

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

karnataka weather Forecast
ಮಳೆ49 mins ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ52 mins ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ2 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ7 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ8 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌