Central Vista | ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ - Vistara News

ದೇಶ

Central Vista | ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್‌ನಲ್ಲಿ ಅಳವಡಿಸಲಾಗಿರುವ ಸುಭಾಷ್‌ ಚಂದ್ರ ಬೋಸ್‌ (Central Vista) ಅವರ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ.

VISTARANEWS.COM


on

central subhash1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್‌ (Central Vista) ಅವರ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ. ಏಕಶಿಲೆಯ ಗ್ರಾನೈಟ್‌ನಲ್ಲಿ ನೇತಾಜಿ ಅವರ ೨೮ ಅಡಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದು, ಇದನ್ನು ಕೆತ್ತಲು ಶಿಲ್ಪಿಗಳು ೨೬ ಸಾವಿರ ಗಂಟೆ ವ್ಯಯಿಸಿದ್ದಾರೆ.

ಸೆಂಟ್ರಲ್‌ ವಿಸ್ಟಾ ಯೋಜನೆಯಡಿ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ರಾಜಪಥ (ಕರ್ತವ್ಯ ಪಥ) ವ್ಯಾಪ್ತಿಯನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲದೆ, ಇಂಡಿಯಾ ಗೇಟ್‌ನಲ್ಲಿ ೨೮ ಅಡಿ ಎತ್ತರದ, 65 ಮೆಟ್ರಿಕ್‌ ಟನ್‌ನ ಪ್ರತಿಮೆ ಅಳವಡಿಸಲಾಗಿದೆ. ಆಧುನಿಕ ಉಪಕರಣಗಳನ್ನು ಬಳಸಿ ಶಿಲ್ಪಿಗಳು ಸಾಂಪ್ರದಾಯಿಕ ಶೈಲಿಯಲ್ಲಿಯೇ ಮೂರ್ತಿಯನ್ನು ಕೆತ್ತಿದ್ದಾರೆ. ಇದಕ್ಕೆ ಮೋದಿ ಅವರು ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ೧೨೫ನೇ ಜನ್ಮದಿನದ ಹಿನ್ನೆಲೆಯಲ್ಲಿ ಜನವರಿ ೨೩ರ ಪರಾಕ್ರಮ ದಿವಸದಂದು ನೇತಾಜಿಯವರ “ಹಾಲೋಗ್ರಾಂ ಪ್ರತಿಮೆ”ಯನ್ನು ಮೋದಿ ಅನಾವರಣಗೊಳಿಸಿದ್ದರು. ಈಗ ಇದೇ ಜಾಗದಲ್ಲಿ ನೇತಾಜಿ ಅವರ ನೈಜ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ.

ಇದನ್ನೂ ಓದಿ | Rajpath | ಬ್ರಿಟಿಷರ ಕಾಲದ ಹೆಸರಿಗೆ ವಿದಾಯ, ರಾಜಪಥದ ಹೆಸರು ಬದಲಿಸಲು ತೀರ್ಮಾನ, ಏನದು ಹೊಸ ಹೆಸರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಅಯೋಧ್ಯೆಯಲ್ಲಿ ಮೋದಿ ಬೃಹತ್‌ ರೋಡ್ ಶೋ;‌ ಎಲ್ಲೆಡೆ ಜೈ ಶ್ರೀರಾಮ್‌ ಘೋಷಣೆ

Narendra Modi: ಕಳೆದ ಜನವರಿ 22ರಂದು ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೀಗ ಭಾನುವಾರ ಮತ್ತೆ ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದಾದ ಬಳಿಕ ಮೋದಿ ಅವರು ಭರ್ಜರಿ ರೋಡ್‌ ಶೋ ಕೂಡ ನಡೆಸುತ್ತಿದ್ದಾರೆ.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದಾದ ಬಳಿಕ ನರೇಂದ್ರ ಮೋದಿ ಅವರು ರಾಮನಗರಿಯಲ್ಲಿ ಭರ್ಜರಿ ರೋಡ್‌ ಶೋ (Modi Road Show) ನಡೆಸುತ್ತಿದ್ದಾರೆ. ರೋಡ್‌ ಶೋ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ.

ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ಧತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಮೋದಿ ಅವರ ರೋಡ್‌ಶೋನಲ್ಲಿ ಸಾಧು ಸಂತರು ಕೂಡ ಭಾಗಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನರೇಂದ್ರ ಮೋದಿ ಅವರ ರೋಡ್‌ ಶೋ ಪ್ರಾಮುಖ್ಯತೆ ಪಡೆದಿದೆ. ಉತ್ತರ ಪ್ರದೇಶ ಸೇರಿ ದೇಶಾದ್ಯಂತ ರಾಮಮಂದಿರ ನಿರ್ಮಾಣವು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವೂ ಆಗಿದೆ.

ಇದನ್ನೂ ಓದಿ: Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Continue Reading

ದೇಶ

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಇದಕ್ಕೂ ಮೊದಲು ಮೋದಿ ಅವರು ರಾಮಲಲ್ಲಾನ ದರ್ಶನ ಪಡೆಯಲಿದ್ದಾರೆ. ರೋಡ್‌ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇನ್ನು ಮೋದಿ ಅವರನ್ನು ಸ್ವಾಗತಿಸಲು ಜನರೂ ಸಜ್ಜಾಗಿದ್ದಾರೆ.

VISTARANEWS.COM


on

Narendra Modi
Koo

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲವೇ ಕ್ಷಣಗಳಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 7 ಗಂಟೆಗೆ ರಾಮಮಂದಿರದಲ್ಲಿ (Ram Mandir) ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ 7.30ರ ಸುಮಾರಿಗೆ 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಈ ರೋಡ್‌ ಶೋ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ (Modi Road Show) ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ. ಇಡೀ ರೋಡ್‌ ಶೋ ಕಾರ್ಯಕ್ರಮವನ್ನು ನೀವು ಇಲ್ಲಿ ಲೈವ್‌ ವೀಕ್ಷಣೆ ಮಾಡಬಹುದಾಗಿದೆ.

ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ದತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನರೇಂದ್ರ ಮೋದಿ ಅವರ ರೋಡ್‌ ಶೋ ಪ್ರಾಮುಖ್ಯತೆ ಪಡೆದಿದೆ. ಉತ್ತರ ಪ್ರದೇಶ ಸೇರಿ ದೇಶಾದ್ಯಂತ ರಾಮಮಂದಿರ ನಿರ್ಮಾಣವು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವೂ ಆಗಿದೆ.

ಇದನ್ನೂ ಓದಿ: Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Continue Reading

ದೇಶ

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ನಿಕಟ ಸಂಬಂಧ ಹೊಂದಿದ್ದ ಪೊಲೀಸ್‌ ಅಧಿಕಾರಿಯ ಗುಂಡಿನಿಂದ ಹೇಮಂತ್‌ ಕರ್ಕರೆ ಹುತಾತ್ಮರಾದರು ಎಂದು ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Vijay Namdevrao Wadettiwar
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆದಿವೆ. ಪ್ರತಿಸ್ಪರ್ಧಿಗಳ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

“2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ” ಎಂಬುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ (ಇವರು ಮುಂಬೈ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದವರು. ಅಜ್ಮಲ್‌ ಕಸಬ್‌ ಗಲ್ಲಿಗೇರಿಸುವಲ್ಲಿ ಇವರ ಪಾತ್ರವೂ ಇದೆ) ಉಜ್ವಲ್‌ ನಿಕಮ್‌ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್‌ ನಾಯಕ ಅಜ್ಮಲ್‌ ಕಸಬ್‌ ಪರವಾಗಿ ಮಾತನಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡಿದ್ದಾರೆ.

“ಅಜ್ಮಲ್‌ ಕಸಬ್‌ಗೆ ಬಿರಿಯಾನಿ ನೀಡಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ ಉಜ್ವಲ್‌ ನಿಕಮ್‌ ಅವರು ಕಾಂಗ್ರೆಸ್‌ಗೆ ಮಾನಹಾನಿ ಮಾಡಿದ್ದಾರೆ. ಯಾರಾದರೂ ಕಸಬ್‌ಗೆ ಬಿರಿಯಾನಿ ಕೊಡುತ್ತಾರಾ? ಇದಾದ ಬಳಿಕ ಕುತಂತ್ರವನ್ನು ಉಜ್ವಲ್‌ ನಿಕಮ್‌ ಒಪ್ಪಿಕೊಂಡರು. ಇವರನ್ನು ಯಾರದರೂ ವಕೀಲ ಎನ್ನುತ್ತಾರಾ? ಇವರು ಎಂತಹ ವಿಶ್ವಾಸಘಾತುಕ ಇರಬಹುದು? ಹೇಮಂತ್‌ ಕರ್ಕರೆ ಅವರಿಗೆ ತಗುಲಿದ ಗುಂಡು ಆರ್‌ಎಸ್‌ಎಸ್‌ ಜತೆ ನಂಟು ಹೊಂದಿರುವ ಪೊಲೀಸ್‌ ಅಧಿಕಾರಿಯ ಗನ್‌ನಿಂದ. ಇಂತಹ ಪ್ರಕರಣದಲ್ಲಿ ಬಿಜೆಪಿಯು ದೇಶದ್ರೋಹಿ ಉಜ್ವಲ್‌ ನಿಕಮ್‌ ಅವರಿಗೆ ಟಿಕೆಟ್‌ ನೀಡಿದೆ. ಆ ಮೂಲಕ ಬಿಜೆಪಿಯು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತದೆಯೇ” ಎಂಬುದಾಗಿ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ.

ತಿರುಗೇಟು ಕೊಟ್ಟ ಬಿಜೆಪಿ

ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಪ್ರತಿಕ್ರಿಯಿಸಿದ್ದಾರೆ. “ಕಾಂಗ್ರೆಸ್‌ ತನ್ನ ಮತಬ್ಯಾಂಕ್‌ ಅನ್ನು ಭದ್ರಪಡಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ಮುಂಬೈ ದಾಳಿಯ ಉಗ್ರನಿಗೆ ಕ್ಲೀನ್‌ ಚಿಟ್‌ ನೀಡುತ್ತಾರೆ ಎಂದರೆ ಇದಕ್ಕಿಂತಹ ಕೆಳ ಹಂತಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಪ್ರಕಾರ, ಹೇಮಂತ್‌ ಕರ್ಕರೆ ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ನಿಂದ ಅಲ್ಲ ಎಂಬುದು ಅವರ ಹೇಳಿಕೆಯಾಗಿದೆ. ಹಾಗಾದರೆ, ಕಾಂಗ್ರೆಸ್‌ ಉಗ್ರರನ್ನು ಬೆಂಬಲಿಸುತ್ತದೆ ಎಂದಾಯಿತಲ್ಲವೇ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

Continue Reading

ಉದ್ಯೋಗ

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Job Alert: ನವೋದಯ ವಿದ್ಯಾಲಯ ಸಮಿತಿಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು

VISTARANEWS.COM


on

Job Alert
Koo

ಬೆಂಗಳೂರು: ನವೋದಯ ವಿದ್ಯಾಲಯ ಸಮಿತಿ (Navodaya Vidyalaya Samiti)ಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Navodaya Vidyalaya Samiti Recruitment 2024). ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟಾಫ್‌ ನರ್ಸ್‌ 121 ಹುದ್ದೆ, ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್ ಅಸಿಸ್ಟಂಟ್ ಸೆಕ್ಷನ್‌ ಆಫೀಸರ್ (ಎಎಸ್‌ಒ) 5 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಆಡಿಟ್ ಅಸಿಸ್ಟಂಟ್ 12 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೊತ್ತರ ಪದವಿ
ಲೀಗಲ್ ಅಸಿಸ್ಟಂಟ್ 1 ಹುದ್ದೆ, ವಿದ್ಯಾರ್ಹತೆ: ಕಾನೂನು ಪದವಿ
ಸ್ಟೆನೋಗ್ರಾಫರ್ 23 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಕಂಪ್ಯೂಟರ್ ಆಪರೇಟರ್ 2 ಹುದ್ದೆ, ವಿದ್ಯಾರ್ಹತೆ: ಸಿಎಸ್‌, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ
ಕ್ಯಾಟರಿಂಗ್ ಸೂಪರ್‌ವೈಸರ್ 78 ಹುದ್ದೆ, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360
ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್
ಲ್ಯಾಬ್‌ ಅಟೆಂಡಂಟ್ 161 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ / ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್‌
ಮೆಸ್‌ ಹೆಲ್ಪರ್ 442 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (ಎಂಟಿಎಸ್) 19 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,500 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಒಬಿಸಿ ವಿಭಾಗದವರು 1,000 ರೂ. ಮತ್ತು ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

Navodaya Vidyalaya Samiti Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಿಸಿದ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Continue Reading
Advertisement
Narendra Modi
ದೇಶ5 mins ago

Narendra Modi: ಅಯೋಧ್ಯೆಯಲ್ಲಿ ಮೋದಿ ಬೃಹತ್‌ ರೋಡ್ ಶೋ;‌ ಎಲ್ಲೆಡೆ ಜೈ ಶ್ರೀರಾಮ್‌ ಘೋಷಣೆ

Prajwal Revanna Case
ಪ್ರಮುಖ ಸುದ್ದಿ12 mins ago

Prajwal Revanna Case: ಪ್ರಜ್ವಲ್‌ ಕೇಸ್‌ನಲ್ಲಿ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿದ ಎಸ್‌ಐಟಿ

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 mins ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Gadag News
ಕರ್ನಾಟಕ1 hour ago

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Drought Relief
ಕರ್ನಾಟಕ2 hours ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ2 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ2 hours ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ2 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ3 hours ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ3 hours ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 mins ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌