ನಕಲಿ ಭೂ ದಾಖಲೆ ಸೃಷ್ಟಿಸಿ ವಂಚಿಸುತ್ತಿದ್ದ ಆರೋಪಿಗಳ ಬಂಧನ! - Vistara News

ಕ್ರೈಂ

ನಕಲಿ ಭೂ ದಾಖಲೆ ಸೃಷ್ಟಿಸಿ ವಂಚಿಸುತ್ತಿದ್ದ ಆರೋಪಿಗಳ ಬಂಧನ!

ನಕಲಿ ಭೂ ದಾಖಲೆ ಸೃಷ್ಟಿಸಿ ಜಾಗವನ್ನು ಕಬಳಿಸಿ, ಬೇರೆಯವರಿಗೆ ಮಾರಲಾಗುತ್ತಿತ್ತು. ಒಂದು ಪ್ರಕರಣದ ವಿಚಾರಣೆ ವೇಳೆ ಇಂತಹದ್ದೇ ಮತ್ತೊಂದು ಪ್ರಕರಣವೂ ಬೆಳಕಿಗೆ ಬಂದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಕಲಿ ಭೂ ದಾಖಲೆ ಸೃಷ್ಟಿಸಿಕೊಂಡು ನಿವೇಶನಗಳನ್ನು ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದ ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಎಚ್ಎಂಟಿ ಬಡಾವಣೆಯಲ್ಲಿ ನಕಲಿ ದಾಖಲಾತಿಯನ್ನು ಸೃಷ್ಟಿಸಿ ವಂಚನೆ ಮಾಡುತ್ತಿದ್ದ ಇವರ ವಿರುದ್ಧ ತನಿಖೆ ಮುಂದುವರಿದಿದೆ.

ಡಿ. ಸುವರ್ಣಮ್ಮ ಎಂಬವರ ಹೆಸರಿನಲ್ಲಿ ಇದ್ದ ಸ್ವತ್ತಿನ ಸಂಬಂಧ ನಕಲಿ ಭೂ ದಾಖಲೆ ಸೃಷ್ಟಿಸಲಾಗಿತ್ತು. ನಂತರ ಆ ಜಾಗವನ್ನು ಮಾರಾಟ ಮಾಡಲಾಗಿತ್ತು ಎಂದು ಸುವರ್ಣಮ್ಮ ವಿದ್ಯಾರಣ್ಯಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದರು.

ಫೈಜ್‌ ಸುಲ್ತಾನ, ಕಬೀರ್‌ ಅಲಿ, ಜಯಮ್ಮ, ಜಗದೀಶ್‌ ಹಾಗೂ ಪೂಜ ಎಂಬ ಆರೋಪಿಗಳು ನಕಲಿ ಹೆಸರುಗಳಲ್ಲಿ ದಾಖಲಾತಿಗಳನ್ನು ಸೃಷ್ಟಿಸಿದ್ದರು. ಡಿ. ಸುವರ್ಣಮ್ಮ ಅವರ ಹೆಸರಿನಲ್ಲಿದ್ದ ಜಾಗವನ್ನು ನಕಲಿ ಭೂ ದಾಖಲೆ ಮೂಲಕ ಮಾರಾಟ ಮಾಡಿ ₹65 ಲಕ್ಷ ವಂಚನೆ ಮಾಡಿದ್ದರು.

ಪ್ರಮುಖ ಆರೋಪಿಗಳಾದ ಫೈಜ್‌ ಸುಲ್ತಾನ ಮತ್ತು ಕಬೀರ್‌ ಅಲಿ ಸಂಜಯ್, ಬಾಬು ಎಂಬುವರನ್ನು ಇದೇ ರೀತಿಯಾಗಿ ನಕಲಿ ಭೂ ದಾಖಲೆ ಸೃಷ್ಟಿಸಿ ವಂಚಿಸಿದ್ದರು ಎಂಭ ವಿಚಾರವೂ ತನಿಖೆ ವೇಳೆ ತಿಳೀದುಬಂದಿದೆ. ಎರಡೂ ಪ್ರಕರಣವನ್ನು ಆಧರಿಸಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Explainer: ರಾಜೀವ್‌ ಗಾಂಧಿ ಹತ್ಯೆ ಆರೋಪಿ ಪೆರಾರಿವೇಲನ್‌ ಜೈಲಿನಿಂದ ಬಿಡುಗಡೆ ಆಗಿದ್ದು ಯಾಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

Road Accident : ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಮಗನ ಜತೆ ಬರುತ್ತಿದ್ದ ತಾಯಿ ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಸವಾರರು ಗಂಭೀರ ಗಾಯಗೊಂಡಿದ್ದು,ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

By

road Accident
Koo

ತುಮಕೂರು: ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ (Road Accident) ಮೃತಪಟ್ಟಿದ್ದಾರೆ. ತುಮಕೂರಿನ ಮಧುಗಿರಿ ತಾಲೂಕಿನ ಪುರವರ ಗ್ರಾಮದ ಹೊರವಲಯದ ಜಯಮಂಗಲಿ ನದಿ ಸೇತುವೆ ಬಳಿ ಘಟನೆ ನಡೆದಿದೆ. ಜೋಗೆನಹಳ್ಳಿ ಗ್ರಾಮದ ಹನುಮಕ್ಕ (45) ಮೃತ ದುರ್ದೈವಿ.

ಪುರವರದಿಂದ ಜೋಗೆನಹಳ್ಳಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಹನುಮಕ್ಕಳ ಮಗನಿಗೂ (25) ಗಂಭೀರ ಗಾಯವಾಗಿದೆ. ಮತ್ತೊಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಉಪ್ಪಾರಹಳ್ಳಿ ಗ್ರಾಮದ ಹನುಮಂತ ರೆಡ್ಡಿ (65), ಗಂಗಾಧರಪ್ಪ (67) ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕೊಡಿಗೇನಹಳ್ಳಿ ಪೊಲೀಸರು ಮೃತದೇಹವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಬೆಂಗಳೂರು: ಗಂಡ – ಹೆಂಡತಿ ಜಗಳ (Couples Fight) ಉಂಡು ಮಲಗುವ ತನಕ ಎಂಬುದು ಹಳೇ ಗಾಧೆ. ಈಗ ಲೇಟೆಸ್ಟ್‌ ಗಾಧೆಯೊಂದು ಬಂದಿದೆ. “ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ (Police Station) ಗ್ಲಾಸ್ ಪೀಸ್ ಪೀಸ್ ಆಗುವ ತನಕ!” ಎಂದು ಮಾರ್ಪಾಟು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ನಾಲ್ಕು ಗೋಡೆಗಳ ಮಧ್ಯೆ ಇರಬೇಕಿದ್ದ ಜಗಳ ಬೀದಿಗೆ ಬಂದಿದ್ದಲ್ಲದೆ, ಪೊಲೀಸ್‌ ಠಾಣೆ ಮೆಟ್ಟಿಲನ್ನೂ ಏರಿತ್ತು. ಪತ್ನಿ ಮನೆಯವರನ್ನು ಠಾಣೆಗೆ ಕರೆಸಿದ್ದ ಆರೋಪಿ ಅಲ್ಲಿಯೂ ಜಗಳ ತೆಗೆದಿದ್ದ, ಕೊನೆಗೆ ಸಿಟ್ಟು ನೆತ್ತಿಗೇರಿ ಠಾಣೆಯ ಮುಂಭಾಗದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದ ಗುದ್ದಿ ಒಡೆದು ಹಾಕಿದ್ದಾನೆ.

ಜಯನಗರದ ಶ್ರೀಧರ್ ಎಂಬಾತನೇ ಪೊಲೀಸ್‌ ಠಾಣೆಯ ಗಾಜಿನ ಬಾಗಿಲನ್ನು ಒಡೆದು ಹಾಕಿದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ಜಗಳದಿಂದ ಈಗ ಸಾರ್ವಜನಿಕ ಆಸ್ತಿ ನಷ್ಟವಾಗುವಂತೆ ಆಗಿದೆ. ಅಲ್ಲದೆ, ಪತ್ನಿ ಹಾಗೂ ಆಕೆಯ ಮನೆಯವರ ಮೇಲೆ ಕಂಪ್ಲೇಂಟ್‌ ಕೊಡಲು ಬಂದಾತ ಸಿಟ್ಟಿನಿಂದ ಮಾಡಿಕೊಂಡ ಅವಾಂತರದಿಂದ ತನ್ನ ಮೇಲೆಯೇ ಕೇಸ್‌ ಹಾಕಿಸಿಕೊಂಡಂತೆ ಆಗಿದೆ.

ಇದನ್ನೂ ಓದಿ: Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ಜಯನಗರದ ಶ್ರೀಧರ್ ಎಂಬಾತ ಕಳೆದ ಎರಡು ವರ್ಷಗಳ ಹಿಂದೆ ಅರ್ಚನಾ ಎಂಬಾಕೆ ಮದುವೆಯಾಗಿದ್ದ. ಮಗುವಾದ ನಂತರ ಪತ್ನಿ ಅರ್ಚನಾ ಅವರು ಪತಿ ಶ್ರೀಧರ್ ಮನೆಗೆ ಬಾರದೇ ತಂದೆ ಮನೆಯಾದ ಮಾರೇನಹಳ್ಳಿಯಲ್ಲಿಯೇ ಉಳಿದುಕೊಂಡಿದ್ದರು. ಶ್ರೀಧರ್‌ ಎಷ್ಟೇ ಕರೆದರೂ ಮನೆಗೆ ಬರಲು ಒಪ್ಪಲಿಲ್ಲ. ಈ ಬಗ್ಗೆ ಠಾಣೆಗೆ ದೂರು ನೀಡಲು ಜಯನಗರ ಪೊಲೀಸ್‌ ಠಾಣೆಗೆ ಶ್ರೀಧರ್ ಬಂದಿದ್ದ.

ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಬೇಕು. ಮಗುವಾದ ಮೇಲೆ ಪತ್ನಿಯು ತವರು ಮನೆಯಿಂದ ವಾಪಸ್‌ ಬರುತ್ತಿಲ್ಲ. ನೀವೇ ನನಗೆ ನ್ಯಾಯ ಕೊಡಿ ಎಂದು ಪೊಲೀಸರಿಗೆ ಕೇಳಿಕೊಂಡಿದ್ದ. ಹೀಗಾಗಿ ನಾನು ದೂರು ಕೊಡುತ್ತೇನೆ ಎಂದು ಹೇಳಿದ್ದ. ಆಗ ಪೊಲೀಸರು ಸಹ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿದರಾಯಿತು ಎಂದು ಶ್ರೀಧರ ಪತ್ನಿಯ ಕುಟುಂಬಸ್ಥರನ್ನು ಠಾಣೆಗೆ ಕರೆಸಿದ್ದರು. ಮೊದಲು ಮಾತನಾಡಿಕೊಂಡು ಎಲ್ಲವನ್ನೂ ಬಗೆಹರಿಸಿಕೊಳ್ಳಿ. ಕುಟುಂಬ ಎಂದ ಮೇಲೆ ಮಾತುಗಳು ಬರುತ್ತವೆ, ಹೋಗುತ್ತವೆ. ಎಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂಬ ಕಿವಿ ಮಾತನ್ನೂ ಪೊಲೀಸರು ನೀಡಿದ್ದಾರೆ.

ಶ್ರೀಧರ್‌ ಮೇಲೆ ಎಫ್‌ಐಆರ್‌

ಈ ವೇಳೆ ಮಾತುಕತೆ ಮಾಡುತ್ತಿದ್ದ ವೇಳೆ ಶ್ರೀಧರ್‌ಗೂ ಹಾಗೂ ಆತನ ಪತ್ನಿಯ ಮನೆಯವರಿಗೂ ಜಗಳ ಶುರುವಾಗಿದೆ. ಶ್ರೀಧರ್‌ಗೆ ತನ್ನ ಕೋಪವನ್ನು ನಿಯಂತ್ರಣ ಮಾಡಿಕೊಳ್ಳಲು ಆಗಿಲ್ಲ. ಹಾಗಾಗಿ ಗಲಾಟೆ ಭರದಲ್ಲಿ ಅಲ್ಲಿಯೇ ಇದ್ದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದಲೇ ಬಲವಾಗಿ ಗುದ್ದಿದ್ದಾನೆ. ಆಗ ಗ್ಲಾಸ್‌ಗಳು ಪೀಸ್‌ ಪೀಸ್‌ ಆಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಕೇಸ್‌ ಅಡಿ ಶ್ರೀಧರ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

Bank fraud: ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ತಿಳಿದುಬಂದಿದೆ.

VISTARANEWS.COM


on

Bank fraud Scam in Urban Co operative Bank of Karwar
Koo

ಕಾರವಾರ: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಸೇರಿದಂತೆ ಹಲವಾರು ಕಡೆ ಸಹಕಾರಿ ಬ್ಯಾಂಕ್‌ಗಳ ಹಗರಣ (Bank fraud) ನಡೆದು ಗ್ರಾಹಕರು ಪರದಾಡುತ್ತಿರುವ ಹೊತ್ತಿನಲ್ಲಿಯೇ ಈಗ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ (Karwar Urban Co operative Bank) ಅವ್ಯವಹಾರ ನಡೆದಿದೆ ಎಂಬ ಸಂಗತಿ ಗೊತ್ತಾಗಿದೆ. ಆದರೆ, ಗ್ರಾಹಕರು ಯಾವುದೇ ರೀತಿಯಲ್ಲಿ ಭಯ ಪಡುವುದು ಬೇಡ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ.

ಬ್ಯಾಂಕ್ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ಗೊತ್ತಾಗಿದೆ.

54 ಕೋಟಿ ರೂಪಾಯಿ ಅವ್ಯವಹಾರ

ಸುಮಾರು 54 ಕೋಟಿ ರೂಪಾಯಿ ಅವ್ಯವಹಾರವನ್ನು ಈ ಮ್ಯಾನೇಜರ್ ಗುರುದಾಸ್ ಬಾಂದೇಕರ್ ಮಾಡಿದ್ದಾರೆನ್ನಲಾಗಿದೆ. ವರ್ಷದ ಹಿಂದೆ ಇವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮ್ಮ ಸಂಬಂಧಿ ಹಾಗೂ ಪರಿಚಯಸ್ಥರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ ಎಂದು ಈಗ ತಿಳಿದುಬಂದಿದೆ.

ಪ್ರತಿ ವರ್ಷ ‌ಆಡಿಟ್‌ನಲ್ಲೂ ಗುರುದಾಸ್ ವ‌ಂಚನೆ ಮಾಡಿದ್ದರು. ಈಗ ಮ್ಯಾನೇಜರ್ ಮೃತಪಟ್ಟಿದ್ದರಿಂದ ಆಡಳಿತ ಮಂಡಳಿಗೆ ದೊಡ್ಡ ತಲೆನೋವಾಗಿದೆ. ಆಡಿಟ್ ಮಾಡಿಸುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕಾರವಾರ ನಗರ ಠಾಣೆಯಲ್ಲಿ ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿ ದೂರು ನೀಡಿದೆ.

ಬ್ಯಾಂಕ್‌ ದಿವಾಳಿ ಆಗಿಲ್ಲವೆಂದ ಆಡಳಿತ ಮಂಡಳಿ

ಈ ನಡುವೆ ಅವ್ಯವಹಾರದ ಸುದ್ದಿ ಎಲ್ಲೆಡೆ ಹರಡಿದ್ದರಿಂದ ಗ್ರಾಹಕರು ಆತಂಕಗೊಂಡಿದ್ದಾರೆ. ಬ್ಯಾಂಕ್ ದಿವಾಳಿಯಾಗಿದೆ ಎಂದು ತಮ್ಮ ಖಾತೆಯಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆಯಬೇಕು ಎಂದು ಗ್ರಾಹಕರು ಮುಗಿಬಿದ್ದಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಆಡಳಿತ ಮಂಡಳಿಯು, ಗ್ರಾಹಕರ ಹಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.

ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಕಳೆದ ಏಪ್ರಿಲ್‌ 25ರಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದರು. ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದ್ದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದರು.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading

ಬೆಂಗಳೂರು

Murder Case : ಪ್ರಬುದ್ಧಳ ಕೊಲೆ ಮಾಡಿದ್ದು ತಮ್ಮನ ಸ್ನೇಹಿತನೇ; ಕನ್ನಡಕದ ಹಿಂದಿನ ರಹಸ್ಯ ರಿವೀಲ್‌

Suspicious Case : ಬೆಂಗಳೂರಿನಲ್ಲಿ ಕಾಲೇಜು ಹುಡುಗಿಯೊಬ್ಬಳ ಮೃತದೇಹವು ಕುತ್ತಿಗೆ ಹಾಗೂ ಎಡಗೈ ಕೊಯ್ದ ಸ್ಥಿತಿಯಲ್ಲಿ ಮನೆಯ ಬಾತ್‌ ರೂಮಿನಲ್ಲಿ ಪತ್ತೆಯಾಗಿತ್ತು. ಮೊದಮೊದಲು ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿತ್ತು. ಇದೀಗ ತನಿಖೆ ವೇಳೆ ಯುವತಿಯ ಸಾವಿನ ಸೀಕ್ರೇಟ್‌ ರಿವೇಲ್‌ ಆಗಿದ್ದು, ತಮ್ಮನ ಸ್ನೇಹಿತ ಕೊಲೆಗಾರ (Murder case) ಎಂದು ತಿಳಿದು ಬಂದಿದೆ.

VISTARANEWS.COM


on

By

Murder Case in Bengaluru
Koo

ಬೆಂಗಳೂರು: ಬೆಂಗಳೂರಿನ (Bengaluru News) ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ (Suspicious Case) ಪ್ರಬುದ್ಧ (21) ಎಂಬಾಕೆ (prabuddha murder case) ಮೃತಪಟ್ಟಿದ್ದಳು. ತನಿಖೆಗಿಳಿದ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು (Murder Case) ಸಾಬೀತಾಗಿತ್ತು. ಆದರೆ ಕೊಲೆಗಾರರು ಯಾರು? ಯಾಕಾಗಿ ಕೊಲೆ ನಡೆಯಿತು ಎಂಬುದು ತಿಳಿದಿರಲಿಲ್ಲ. ಇದೀಗ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಅಪ್ರಾಪ್ತನೊಬ್ಬ ಸ್ನೇಹಿತನ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ ಕೊಲೆ ನಡೆದು ಹೋಗಿದೆ.

ಪ್ರಬುದ್ಧಳ ತಮ್ಮ ಹಾಗೂ ಹತ್ಯೆ ಮಾಡಿದ ಆರೋಪಿ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ತನ್ನ ಸ್ನೇಹಿತನ ಕನ್ನಡಕವನ್ನು ಡ್ಯಾಮೇಜ್ ಮಾಡಿದ್ದ. ಇದನ್ನು ರಿಪೇರಿ‌ ಮಾಡಿಸಿ ಕೊಡು ಎಂದು ಸ್ನೇಹಿತ ಪಟ್ಟು ಹಿಡಿದಿದ್ದ. ಆದರೆ ರಿಪೇರಿಗೆ ಕಾಸಿಲ್ಲದೇ ಅಪ್ರಾಪ್ತ ಆರೋಪಿ ಸುಮ್ಮನಾಗಿದ್ದ.

ಕೊಲೆಯಾದ ದಿನ ಪ್ರಬುದ್ಧ ಮನೆಗೆ ಬಂದಿದ್ದ ಆರೋಪಿ, ಪರ್ಸ್‌ನಲ್ಲಿದ್ದ ಎರಡು ಸಾವಿರ ರೂಪಾಯಿ ಕದ್ದಿದ್ದ. ಆರೋಪಿ ಕದಿಯುವುದನ್ನು ಕಂಡ ಪ್ರಬುದ್ಧ ಪ್ರಶ್ನೆ ಮಾಡಿದ್ದಳು. ಇದರಿಂದ ಗಾಬರಿಗೊಂಡ ಆರೋಪಿ ಕ್ಷಮಿಸಿಬಿಡು ಎಂದು ಕಾಲು ಹಿಡಿದುಕೊಂಡಿದ್ದ.

ಈ ಗಲಿಬಿಲಿಯಲ್ಲಿ ಆರೋಪಿ ಕಾಲು ಹಿಡಿದಾಗ ಪ್ರಬುದ್ಧ ಆಯ ತಪ್ಪಿ ಬಿದ್ದಿದ್ದಳು. ಈ ವೇಳೆ ತಲೆಗೆ ಪೆಟ್ಟು ಬಿದ್ದಾಗ, ಪ್ರಜ್ಞೆ ತಪ್ಪಿದ್ದಳು. ಇದರಿಂದ ಆತಂಕಗೊಂಡ ಆರೋಪಿ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಕೈ ಹಾಗೂ ಕುತ್ತಿಗೆಯನ್ನು ಕೊಯ್ದು ಅಲ್ಲಿಂದ ಪರಾರಿ ಆಗಿದ್ದ. ಪ್ರಜ್ಞೆ ತಪ್ಪಿದ್ದ ಪ್ರಬುದ್ಧ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಳು.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಏನಿದು ಘಟನೆ?

ಮೇ 15ರ ಮಧ್ಯಾಹ್ನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಬುದ್ಧ ಎಂಬಾಕೆ ಮನೆಯ ಬಾತ್‌ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಕುತ್ತಿಗೆ ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.

ಆ ದಿನ ಪ್ರಬುದ್ಧ ತಾಯಿ ಸೌಮ್ಯಗೆ ಕರೆ ಮಾಡಿ ಫ್ರೆಂಡ್ಸ್‌ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತಿನಿ ಅಂದಿದ್ದಳು. ನಂತರ ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮನೆಯ ಮುಂದಿನ ಡೋರ್‌ ಲಾಕ್‌ ಆಗಿತ್ತು. ಆದರೆ ಹಿಂದಿನ ಡೋರ್‌ ಓಪನ್‌ ಆಗಿತ್ತು ಎಂದು ಸೌಮ್ಯ ಘಟನೆ ವಿವರ ನೀಡಿದ್ದರು. ಮಗಳ ಫೋನ್‌ ಸೋಫ್‌ ಮೇಲೆ ಇತ್ತು. ಆಕೆಯನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿ ಬರುವಷ್ಟರಲ್ಲಿ ಫೋನ್‌ ಕೂಡ ಕಳ್ಳತನ ಆಗಿತ್ತು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವವಳು ಅಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಕಾರಣವನ್ನು ಭೇದಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

Couples Fight: ನಾಲ್ಕು ಗೋಡೆಗಳ ಮಧ್ಯೆ ಇರಬೇಕಿದ್ದ ಜಗಳ ಬೀದಿಗೆ ಬಂದಿದ್ದಲ್ಲದೆ, ಪೊಲೀಸ್‌ ಠಾಣೆ ಮೆಟ್ಟಿಲನ್ನೂ ಏರಿತ್ತು. ಪತ್ನಿ ಮನೆಯವರನ್ನು ಠಾಣೆಗೆ ಕರೆಸಿದ್ದ ಆರೋಪಿ ಅಲ್ಲಿಯೂ ಜಗಳ ತೆಗೆದಿದ್ದ, ಕೊನೆಗೆ ಸಿಟ್ಟು ನೆತ್ತಿಗೇರಿ ಠಾಣೆಯ ಮುಂಭಾಗದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದ ಗುದ್ದಿ ಒಡೆದು ಹಾಕಿದ್ದಾನೆ. ಪತಿ – ಪತ್ನಿಯ ಜಗಳದಿಂದ ಈಗ ಸಾರ್ವಜನಿಕ ಆಸ್ತಿ ನಷ್ಟವಾಗುವಂತೆ ಆಗಿದೆ. ಅಲ್ಲದೆ, ಪತ್ನಿ ಹಾಗೂ ಆಕೆಯ ಮನೆಯವರ ಮೇಲೆ ಕಂಪ್ಲೇಂಟ್‌ ಕೊಡಲು ಬಂದಾತ ಸಿಟ್ಟಿನಿಂದ ಮಾಡಿಕೊಂಡ ಅವಾಂತರದಿಂದ ತನ್ನ ಮೇಲೆಯೇ ಕೇಸ್‌ ಹಾಕಿಸಿಕೊಂಡಂತೆ ಆಗಿದೆ.

VISTARANEWS.COM


on

Couples Fight Man breaks glass of police station in anger against wife
Koo

ಬೆಂಗಳೂರು: ಗಂಡ – ಹೆಂಡತಿ ಜಗಳ (Couples Fight) ಉಂಡು ಮಲಗುವ ತನಕ ಎಂಬುದು ಹಳೇ ಗಾಧೆ. ಈಗ ಲೇಟೆಸ್ಟ್‌ ಗಾಧೆಯೊಂದು ಬಂದಿದೆ. “ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ (Police Station) ಗ್ಲಾಸ್ ಪೀಸ್ ಪೀಸ್ ಆಗುವ ತನಕ!” ಎಂದು ಮಾರ್ಪಾಟು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ನಾಲ್ಕು ಗೋಡೆಗಳ ಮಧ್ಯೆ ಇರಬೇಕಿದ್ದ ಜಗಳ ಬೀದಿಗೆ ಬಂದಿದ್ದಲ್ಲದೆ, ಪೊಲೀಸ್‌ ಠಾಣೆ ಮೆಟ್ಟಿಲನ್ನೂ ಏರಿತ್ತು. ಪತ್ನಿ ಮನೆಯವರನ್ನು ಠಾಣೆಗೆ ಕರೆಸಿದ್ದ ಆರೋಪಿ ಅಲ್ಲಿಯೂ ಜಗಳ ತೆಗೆದಿದ್ದ, ಕೊನೆಗೆ ಸಿಟ್ಟು ನೆತ್ತಿಗೇರಿ ಠಾಣೆಯ ಮುಂಭಾಗದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದ ಗುದ್ದಿ ಒಡೆದು ಹಾಕಿದ್ದಾನೆ.

ಜಯನಗರದ ಶ್ರೀಧರ್ ಎಂಬಾತನೇ ಪೊಲೀಸ್‌ ಠಾಣೆಯ ಗಾಜಿನ ಬಾಗಿಲನ್ನು ಒಡೆದು ಹಾಕಿದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ಜಗಳದಿಂದ ಈಗ ಸಾರ್ವಜನಿಕ ಆಸ್ತಿ ನಷ್ಟವಾಗುವಂತೆ ಆಗಿದೆ. ಅಲ್ಲದೆ, ಪತ್ನಿ ಹಾಗೂ ಆಕೆಯ ಮನೆಯವರ ಮೇಲೆ ಕಂಪ್ಲೇಂಟ್‌ ಕೊಡಲು ಬಂದಾತ ಸಿಟ್ಟಿನಿಂದ ಮಾಡಿಕೊಂಡ ಅವಾಂತರದಿಂದ ತನ್ನ ಮೇಲೆಯೇ ಕೇಸ್‌ ಹಾಕಿಸಿಕೊಂಡಂತೆ ಆಗಿದೆ.

ಜಯನಗರದ ಶ್ರೀಧರ್ ಎಂಬಾತ ಕಳೆದ ಎರಡು ವರ್ಷಗಳ ಹಿಂದೆ ಅರ್ಚನಾ ಎಂಬಾಕೆ ಮದುವೆಯಾಗಿದ್ದ. ಮಗುವಾದ ನಂತರ ಪತ್ನಿ ಅರ್ಚನಾ ಅವರು ಪತಿ ಶ್ರೀಧರ್ ಮನೆಗೆ ಬಾರದೇ ತಂದೆ ಮನೆಯಾದ ಮಾರೇನಹಳ್ಳಿಯಲ್ಲಿಯೇ ಉಳಿದುಕೊಂಡಿದ್ದರು. ಶ್ರೀಧರ್‌ ಎಷ್ಟೇ ಕರೆದರೂ ಮನೆಗೆ ಬರಲು ಒಪ್ಪಲಿಲ್ಲ. ಈ ಬಗ್ಗೆ ಠಾಣೆಗೆ ದೂರು ನೀಡಲು ಜಯನಗರ ಪೊಲೀಸ್‌ ಠಾಣೆಗೆ ಶ್ರೀಧರ್ ಬಂದಿದ್ದ.

ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಬೇಕು. ಮಗುವಾದ ಮೇಲೆ ಪತ್ನಿಯು ತವರು ಮನೆಯಿಂದ ವಾಪಸ್‌ ಬರುತ್ತಿಲ್ಲ. ನೀವೇ ನನಗೆ ನ್ಯಾಯ ಕೊಡಿ ಎಂದು ಪೊಲೀಸರಿಗೆ ಕೇಳಿಕೊಂಡಿದ್ದ. ಹೀಗಾಗಿ ನಾನು ದೂರು ಕೊಡುತ್ತೇನೆ ಎಂದು ಹೇಳಿದ್ದ. ಆಗ ಪೊಲೀಸರು ಸಹ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿದರಾಯಿತು ಎಂದು ಶ್ರೀಧರ ಪತ್ನಿಯ ಕುಟುಂಬಸ್ಥರನ್ನು ಠಾಣೆಗೆ ಕರೆಸಿದ್ದರು. ಮೊದಲು ಮಾತನಾಡಿಕೊಂಡು ಎಲ್ಲವನ್ನೂ ಬಗೆಹರಿಸಿಕೊಳ್ಳಿ. ಕುಟುಂಬ ಎಂದ ಮೇಲೆ ಮಾತುಗಳು ಬರುತ್ತವೆ, ಹೋಗುತ್ತವೆ. ಎಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂಬ ಕಿವಿ ಮಾತನ್ನೂ ಪೊಲೀಸರು ನೀಡಿದ್ದಾರೆ.

ಇದನ್ನೂ ಓದಿ: Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ಶ್ರೀಧರ್‌ ಮೇಲೆ ಎಫ್‌ಐಆರ್‌

ಈ ವೇಳೆ ಮಾತುಕತೆ ಮಾಡುತ್ತಿದ್ದ ವೇಳೆ ಶ್ರೀಧರ್‌ಗೂ ಹಾಗೂ ಆತನ ಪತ್ನಿಯ ಮನೆಯವರಿಗೂ ಜಗಳ ಶುರುವಾಗಿದೆ. ಶ್ರೀಧರ್‌ಗೆ ತನ್ನ ಕೋಪವನ್ನು ನಿಯಂತ್ರಣ ಮಾಡಿಕೊಳ್ಳಲು ಆಗಿಲ್ಲ. ಹಾಗಾಗಿ ಗಲಾಟೆ ಭರದಲ್ಲಿ ಅಲ್ಲಿಯೇ ಇದ್ದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದಲೇ ಬಲವಾಗಿ ಗುದ್ದಿದ್ದಾನೆ. ಆಗ ಗ್ಲಾಸ್‌ಗಳು ಪೀಸ್‌ ಪೀಸ್‌ ಆಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಕೇಸ್‌ ಅಡಿ ಶ್ರೀಧರ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ.

Continue Reading
Advertisement
We are ready for taluk and zilla panchayat and BBMP elections Says CM Siddaramaiah
ರಾಜಕೀಯ2 mins ago

CM Siddaramaiah: ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

road Accident
ತುಮಕೂರು5 mins ago

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

lok sabha election 2024 supreme court
ಪ್ರಮುಖ ಸುದ್ದಿ8 mins ago

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

meghana Goankar
ಸಿನಿಮಾ14 mins ago

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Hardik Pandya & Natasa Stankovic
ಕ್ರೀಡೆ26 mins ago

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Sandalwood Movie
ಪ್ರಮುಖ ಸುದ್ದಿ33 mins ago

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Bank fraud Scam in Urban Co operative Bank of Karwar
ಕರ್ನಾಟಕ1 hour ago

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

RR vs SRH
ಕ್ರೀಡೆ1 hour ago

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

COMEDK UGET Result 2024 Out
ಶಿಕ್ಷಣ1 hour ago

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Rotary June Run
ಪ್ರಮುಖ ಸುದ್ದಿ2 hours ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌