Queen Elizabeth | ದೇಶವೇ ನನ್ನುಸಿರು; ದೊರೆಯ ಪಟ್ಟ ದೊರೆತ ನಂತರ ಚಾರ್ಲ್ಸ್‌ III ಚೊಚ್ಚಲ ಭಾಷಣ - Vistara News

ರಾಣಿ ಎಲಿಜಬೆತ್​

Queen Elizabeth | ದೇಶವೇ ನನ್ನುಸಿರು; ದೊರೆಯ ಪಟ್ಟ ದೊರೆತ ನಂತರ ಚಾರ್ಲ್ಸ್‌ III ಚೊಚ್ಚಲ ಭಾಷಣ

ಬ್ರಿಟನ್‌ ರಾಜನ ಪಟ್ಟ ಅಲಂಕರಿಸಿದ ಬಳಿಕ ಚಾರ್ಲ್ಸ್‌ III ದೇಶದ ಜನತೆಯನ್ನು ಉದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ್ದಾರೆ.

VISTARANEWS.COM


on

elizabeth death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ರಾಣಿ ೨ನೇ ಎಲಿಜಬೆತ್‌ ನಿಧನದ ಬಳಿಕ ರಾಜ ಪದವಿ ಪಡೆದ ಚಾರ್ಲ್ಸ್‌ III ಶುಕ್ರವಾರ ರಾತ್ರಿ (ಭಾರತೀಯ ಕಾಲಮಾನ) ದೇಶವನ್ನ ಉದ್ದೇಶಿಸಿ ಮೊದಲ ಭಾಷಣ ಮಾಡಿದರು. ಈ ವೇಳೆ ಅವರು ದೇಶಕ್ಕಾಗಿ ಉಸಿರು ಇರುವ ತನಕವೂ ಸೇವೆ ಸಲ್ಲಿಸಲು ಬದ್ಧನಾಗಿರುತ್ತೇನೆ ಎಂದು ಘೋಷಿಸಿದ್ದಾರೆ.

ರಾಣಿ ಹೇಗೆ ದೇಶಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿಕೊಂಡಿದ್ದರೋ ನಾನು ಅದೇ ಹಾದಿಯಲ್ಲಿ ನಡೆಯುತ್ತೇನೆ. ದೇವರು ನನಗೆ ಎಷ್ಟು ಕಾಲ ಅನುಗ್ರಹ ಕೊಡುತ್ತಾನೊ ಅಷ್ಟು ಕಾಲ ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇನೆ. ನೀವು ಯನೈಟೆಡ್‌ ಕಿಂಗ್‌ಡಮ್‌ನ ಎಲ್ಲೇ ವಾಸವಿದ್ದರೂ, ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ನಿಮ್ಮ ಹಿನ್ನೆಲೆ ಏನೇ ಆಗಿದ್ದರೂ, ಪ್ರೀತಿ, ಆದರದಿಂದ ನಿಮ್ಮ ಸೇವೆಗೈಯುತ್ತೇನೆ,” ಎಂದರು.

ಭಾಷಣದ ವೇಳೆ ಅಮ್ಮ ಎರಡನೇ ಎಲಿಜಬೆತ್‌ ಅವರನ್ನು ನೆನೆದು ಭಾವುಕರಾದರು.

ಇದೇ ವೇಳೆ ತಮ್ಮ ಪ್ರೀತಿಯ ಮಡದಿ ಕ್ಯಾಮಿಲಾ ಅವರ ಹೆಸರನ್ನೂ ಪ್ರಸ್ತಾಪಿಸಲು ಚಾರ್ಲ್ಸ್‌ ಮರೆಯಲಿಲ್ಲ. ಜತೆಗೆ ತಮ್ಮ ಮುಂದಿನ ಉತ್ತರಾಧಿಕಾರಿ, ಹಿರಿಯ ಪುತ್ರ ವಿಲಿಯಮ್ಸ್‌, ಸೊಸೆ ಕೇಟ್‌ ಮಿಡಲ್‌ಟನ್‌ ಅವರನ್ನೂ ಶ್ಲಾಘಿಸಿದರು. ಕಿರಿಯ ಪುತ್ರ ಪ್ರಿನ್ಸ್ ಹ್ಯಾರಿ ಹಾಗೂ ಮೇಘನ್‌ ಮರ್ಕೆಲ್ ದಂಪತಿಯೆಡೆಗಿನ ಪ್ರೀತಿಯನ್ನೂ ವ್ಯಕ್ತಪಡಿಸಿದರು.

ಇದನ್ನೂ ಓದಿ | Queen Elizabeth | ಬಂದಷ್ಟೇ ವೇಗವಾಗಿ ಖರ್ಚಾಗಿದ್ದ ರಾಣಿ ಎಲಿಜಬೆತ್‌ ಬಾರ್ಬಿ ಡಾಲ್!‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Queen Elizabeth Death | ಅಣ್ಣ ಪ್ರಿನ್ಸ್ ಜಾರ್ಜ್‌ಗೆ ಶಿಷ್ಟಾಚಾರ ಹೇಳಿಕೊಟ್ಟ ಪ್ರಿನ್ಸೆಸ್ ಷಾರ್ಲಟ್!

ಎರಡನೇ ಕ್ವೀನ್ ಎಲಿಜಬೆತ್ (Queen Elizabeth Death) ಅಂತಿಮ ಮೆರವಣಿಗೆ ವೇಳೆ ಪ್ರಿನ್ಸೆಸ್ ಷಾರ್ಲಟ್, ಪ್ರಿನ್ಸ್ ಜಾರ್ಜ್‌ಗೆ ಸೂಚನೆ ನೀಡುವ ವಿಡಿಯೋ ವೈರಲ್ ಆಗಿದೆ.

VISTARANEWS.COM


on

Princess Charlotte
Koo

ಲಂಡನ್: ಅತಿ ದೀರ್ಘ ಅವಧಿಗೆ ಲಂಡನ್ ರಾಜ್ಯಾಡಳಿತದ ನೇತೃತ್ವವನ್ನು ವಹಿಸಿದ್ದ ಎರಡನೇ ಕ್ವೀನ್ ಎಲಿಜಬೆತ್ (Queen Elizabeth Death) ಅವರ ಅಂತಿಮ ಕ್ರಿಯೆ ನಡೆಯಿತು. ಜಗತ್ತಿನ ಪ್ರಮುಖ ನಾಯಕರೆಲ್ಲರೂ ಆಗಮಿಸಿ ತಮ್ಮ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ, ಕಿರಿಯ ಪ್ರಿನ್ಸ್ ಜಾರ್ಜ್ ಮತ್ತು ಪ್ರಿನ್ಸೆಸ್ ಷಾರ್ಲಟ್ ನಡುವಿನ ಕೆಲವು ಸ್ವೀಟ್ ಮೊಮೆಂಟ್ಸ್ ಇಂಟರ್ನೆಟ್ ಜಗತ್ತಿನಲ್ಲಿ ವೈರಲ್ ಆಗುತ್ತಿವೆ.

ಎರಡನೇ ಕ್ವೀನ್ ಎಲಿಜಬೆತ್ ಅವರ ಅಂತಿಮ ಮೆರವಣಿಗೆಯ ವೇಳೆ, ಅವರ ಮರಿಮೊಮ್ಮಕ್ಕಳಾದ ಪ್ರಿನ್ಸ್ ಜಾರ್ಜ್ ಮತ್ತು ಪ್ರಿನ್ಸೆಸ್ ಷಾರ್ಲಟ್ ಅವರು ಒಬ್ಬರಿಗೊಬ್ಬರು ಪಿಸುಗುಟ್ಟುವುದು ಕ್ಯಾಮೆರಾ ಕಣ್ಣಗಳಲ್ಲಿ ಸೆರೆಯಾಗಿದೆ. ಅವರಿಬ್ಬರ ಮಾತುಕತೆ ಏನಾಗಿರಬಹುದು ಎಂಬ ಕುತೂಹಲ ಎಲ್ಲರನ್ನೂ ಕೆರಳಿಸಿದೆ.

ಅವರಿಬ್ಬರ ನಡುವಿಮ ಮಾತುಕತೆಯ ಧಾಟಿಯನ್ನು ಗಮನಿಸಿದರೆ, 7 ವರ್ಷದ ಪ್ರಿನ್ಸೆಸ್ ಷಾರ್ಲಟ್ ಈಗಾಗಲೇ ರಾಯಲ್ ಫ್ಯಾಮಿಲಿಯ ಶಿಷ್ಟಾಚಾರಗಳ ಕುರಿತು ಎಕ್ಸ್‌ಪರ್ಟ್ ಆಗಿರುವ ಹಾಗಿದೆ. ಕ್ವೀನ್ ಅವರ ಶವಪೆಟ್ಟಿಗೆ ತಮ್ಮ ಮುಂದೆ ಹೋಗುತ್ತಿದ್ದಂತೆ ನಡು ಬಗ್ಗಿಸಬೇಕು ಎಂಬ ಸೂಚನೆಯನ್ನು ಪ್ರಿನ್ಸೆಸ್ ಷಾರ್ಲಟ್, ಪ್ರಿನ್ಸ್ ಜಾರ್ಜ್‌ಗೆ ನೀಡುತ್ತಿರುವ ದೃಶ್ಯ ಸೆರೆಯಾಗಿದೆ. ಪ್ರಿನ್ಸ್ ಜಾರ್ಜ್‌ಗೆ 9 ವರ್ಷ. ಪ್ರಿನ್ಸೆಸ್ ಷಾರ್ಲಟ್ ಮತ್ತು ಪ್ರಿನ್ಸ್ ಜಾರ್ಜ್ ಅವರು, ಪ್ರಿನ್ಸ್ ವಿಲಿಯಮ್ ಮತ್ತು ಪ್ರಿನ್ಸೆಸ್ ಕ್ಯಾಥೇರಿನ್ ಅವರ ಹಿರಿಯ ಮಕ್ಕಳು.

ಇದನ್ನೂ ಓದಿ | Queen Elizabeth | ಪ್ರಗತಿಶೀಲ, ಪ್ರಯೋಗಶೀಲ ವ್ಯಕ್ತಿತ್ವದ ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್

Continue Reading

ದೇಶ

Queen Elizabeth Funeral | ಬ್ರಿಟನ್‌ ರಾಣಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಲಂಡನ್‌ ತಲುಪಿದ ರಾಷ್ಟ್ರಪತಿ ಮುರ್ಮು

ಬ್ರಿಟನ್‌ ರಾಣಿ ಎಲಿಜಬೆತ್‌ II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಆಗಮಿಸಿದ್ದಾರೆ. ಭಾರತ ಸರ್ಕಾರದ ಪರ (Queen Elizabeth Funeral) ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

VISTARANEWS.COM


on

queen
Koo

ಲಂಡನ್:‌ ಬ್ರಿಟನ್‌ ರಾಣಿಯಾಗಿದ್ದ ಎಲಿಜಬೆತ್‌ II ಅವರ (Queen Elizabeth Funeral) ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಸಲುವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಆಗಮಿಸಿದ್ದಾರೆ.

ಲಂಡನ್‌ನ ಗೇಟ್‌ವಿಕ್‌ ಏರ್‌ಪೋರ್ಟ್‌ನಲ್ಲಿ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಸೋಮವಾರ ನಡೆಯಲಿರುವ ಎಲಿಜಬೆತ್‌ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಭಾರತ ಸರ್ಕಾರದ ಪರ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ರಾಷ್ಟ್ರಪತಿಯವರ ಜತೆಗೆ ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾತ್ರಾ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬ್ರಿಟನ್‌ಗೆ ಭಾರತೀಯ ಹೈಕಮೀಶನರ್‌ ಬರ ಮಾಡಿಕೊಂಡರು. ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿದಂತೆ ವಿಶ್ವದ ಪ್ರಮುಖ ನಾಯಕರು ಎಲಿಜಬೆತ್‌ ಅಂತ್ಯಕ್ರಿಯೆಯ ಸಂದರ್ಭ ಹಾಜರಿರಲಿದ್ದಾರೆ.

ಇದನ್ನೂ ಓದಿ: Queen Elizabeth II | ಕ್ವೀನ್‌ ಎಲಿಜಬೆತ್‌ ಅಂತ್ಯಸಂಸ್ಕಾರ ನಡೆಯುವುದು ಯಾವಾಗ, ಎಲ್ಲಿ?

Continue Reading

ದೇಶ

Queen Elizabeth Funeral | ಸೆ.19ರಂದು ಬ್ರಿಟನ್‌ ರಾಣಿ ಅಂತ್ಯಕ್ರಿಯೆಯಲ್ಲಿ ದ್ರೌಪದಿ ಮುರ್ಮು ಭಾಗಿ

ಸೆಪ್ಟೆಂಬರ್‌ 19ರಂದು ಕ್ವೀನ್‌ ಎಲಿಜಬೆತ್‌ (Queen Elizabeth Funeral) ಅವರ ಅಂತ್ಯಕ್ರಿಯೆ ನಡೆಯಲಿದ್ದು, ದ್ರೌಪದಿ ಮುರ್ಮು ಅವರು ಭಾರತ ಸರ್ಕಾರದ ಪರವಾಗಿ ಭಾಗವಹಿಸಲಿದ್ದಾರೆ.

VISTARANEWS.COM


on

Queen
Koo

ನವದೆಹಲಿ: ಸುದೀರ್ಘ ಅವಧಿಗೆ ಬ್ರಿಟನ್‌ ರಾಣಿಯಾಗಿದ್ದ ಎಲಿಜಬೆತ್‌ II ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಸೆಪ್ಟೆಂಬರ್‌ ೧೯ರಂದು ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿ ಜಗತ್ತಿನ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅದೇ ರೀತಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕ್ವೀನ್‌ ಎಲಿಜಬೆತ್‌ II (Queen Elizabeth Funeral) ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ ಸರ್ಕಾರದ ಪರವಾಗಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್‌ ೧೭ರಿಂದ ೧೯ರವರೆಗೆ ದ್ರೌಪದಿ ಮುರ್ಮು ಅವರು ಲಂಡನ್‌ನಲ್ಲಿ ನಡೆಯುವ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಸುಮಾರು ೭೦ ವರ್ಷಗಳ ಕಾಲ ಬ್ರಿಟನ್‌ ರಾಣಿಯಾಗಿದ್ದ ಕ್ವೀನ್‌ ಎಲಿಜಬೆತ್‌ II ಅವರು ಸೆಪ್ಟೆಂಬರ್‌ ೮ರಂದು ನಿಧನರಾಗಿದ್ದಾರೆ. ಈಗ ಅವರ ಉತ್ತರಾಧಿಕಾರಿಯನ್ನಾಗಿ ಚಾರ್ಲ್ಸ್‌ III ಅವರನ್ನು ನೇಮಿಸಲಾಗಿದೆ. ಬ್ರಿಟನ್‌ ರಾಣಿಯ ನಿಧನಕ್ಕೆ ಜಗತ್ತೇ ಕಂಬನಿ ಮಿಡಿದಿದೆ.

ಇದನ್ನೂ ಓದಿ | Queens Royal Fashion | ಹೀಗಿತ್ತು ಕ್ವೀನ್‌ ಎಲಿಜಬೆತ್‌ ಯೂನಿಕ್‌ ಸಿಗ್ನೇಚರ್‌ ಸ್ಟೈಲ್‌

Continue Reading

EXPLAINER

Britain Royal Family | ಬ್ರಿಟನ್ ರಾಯಲ್ ಫ್ಯಾಮಿಲಿಯ ಸ್ಟೋರಿಗಳು ಸಖತ್ ಇಂಟರೆಸ್ಟಿಂಗ್‌!

ಬ್ರಿಟನ್ ರಾಯಲ್ ಫ್ಯಾಮಿಲಿ (Britain Royal Family) ಬಗ್ಗೆ ತಿಳಿದುಕೊಂಡಷ್ಟು ಕುತೂಹಲ ಕತೆಗಳು ತೆರೆದುಕೊಳ್ಳುತ್ತವೆ. ಫ್ಯಾಮಿಲಿಯದ್ದೇ ಒಂದು ಇತಿಹಾಸವಾದರೆ, ಸದಸ್ಯರ ಬಗೆಗಿನ ಮಾಹಿತಿಗಳು ರಣರೋಚಕ….

VISTARANEWS.COM


on

Britain Family
Koo

ಕ್ವೀನ್ ಎಲಿಜಬೆತ್ ನಿಧನದ ಬಳಿಕ ಬ್ರಿಟನ್ ರಾಜಮನೆತನ(Britain Royal Family)ವು ಮತ್ತೆ ಸುದ್ದಿಯಲ್ಲಿದೆ. ಪ್ರಾಚೀನ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಬ್ರಿಟನ್‌ನಲ್ಲಿ ಈಗಲೂ ರಾಯಲ್ ಫ್ಯಾಮಿಲಿಗೇ ಅಗ್ರ ಗೌರವ. ಆಧುನಿಕ ರಾಷ್ಟ್ರಗಳಲ್ಲಿ ಜನರೇ ಪ್ರಭುಗಳು. ಬ್ರಿಟನ್‌ ಕೂಡ ಇದಕ್ಕೆ ಹೊರತಾಗಿಲ್ಲ. ಆದರೂ, ಅವರು ತಮ್ಮ ಕಿಂಗ್/ಕ್ವೀನ್, ರಾಯಲ್ ಫ್ಯಾಮಿಲಿ, ಸಂಪ್ರದಾಯಗಳು, ಪದ್ಧತಿಗಳು, ಆಚಾರ-ವಿಚಾರಗಳಿಗೆ ಬಹಳ ಮಹತ್ವ ನೀಡುತ್ತಾರೆ. ಸಕಾರಾತ್ಮಕ ನೆಲೆಯಲ್ಲಿ ರಾಯಲ್ ಫ್ಯಾಮಿಲಿ ಹೇಗೆ ಆದರ್ಶವಾಗಿದೆಯೋ, ರಾಯಲ್ ಫ್ಯಾಮಿಲಿಯ ಸದಸ್ಯರ ಹರಾಕಿರಿಗಳಿಂದ ಅಗೌರವವೂ ಬಂದಿದೆ. ರಾಜ ಮನೆತನದೊಳಗಿನ ಜಗಳಗಳು, ಸಣ್ಣತನ, ಈರ್ಷೆ, ಹೊಟ್ಟೆಕಿಚ್ಚು, ಕೊಲೆ, ಲೈಂಗಿಕ ಸಂಬಂಧಗಳು ಇತ್ಯಾದಿ ವಿಷಯಗಳು ರಾಯಲ್ ಫ್ಯಾಮಿಲಿಯನ್ನು ಸದಾ ಸ್ಪಾಟ್‌ಲೈಟ್‌ನಲ್ಲಿ ಇಟ್ಟಿರುತ್ತವೆ.

ಬ್ರಿಟನ್‌ನಲ್ಲಿ ಜನರೇ ನೇರ ಅಧಿಕಾರದಲ್ಲಿದ್ದರೂ ಬ್ರಿಟನ್ ಕ್ವೀನ್ ಅಥವಾ ಕಿಂಗ್‌ ಕೆಲಸವಾದರೂ ಏನು, ಜವಾಬ್ದಾರಿಗಳೇನು, ರಾಯಲ್ ಫ್ಯಾಮಿಲಿ ಇತಿಹಾಸ, ರಾಜ/ರಾಣಿಯರ ಸಂಬಂಧಗಳು, ಅಫೇರ್ಸ್, ಒಳ ಜಗಳ, ದಾಯಾದಿ ಕಲಹ ಇತ್ಯಾದಿ ಮಾಹಿತಿ ಇಲ್ಲಿದೆ….

ಬ್ರಿಟನ್ ಕಿಂಗ್ ಮಾಡುವುದಾದರೂ ಏನು?
ನಾವು ಆಧುನಿಕ ಜಗತ್ತಿನಲ್ಲಿದ್ದೇವೆ; ಜನರೇ ಆಡಳಿತಗಾರರು; ಅವರೇ ರಾಜರು. ಎಲ್ಲ ದೇಶಗಳಲ್ಲೂ ಇದೇ ನೀತಿ ಇದೆ. ಹಾಗಿದ್ದೂ, ಬ್ರಿಟನ್‌ನಲ್ಲಿ ರಾಜಮನೆತನ ಇನ್ನೂ ಅಧಿಕೃತವಾಗಿದೆ. ರಾಯಲ್ ಫ್ಯಾಮಿಲಿಗೆ ಎಲ್ಲಿಲ್ಲದ ಮರ್ಯಾದೆ. ಅಲ್ಲೂ ಪ್ರಜಾಪ್ರಭುತ್ವವಿದೆ. ಹಾಗಿದ್ದೂ, ರಾಜನಿಗೆ ಏನು ಕೆಲಸ, ರಾಯಲ್ ಫ್ಯಾಮಿಲಿಯಿಂದ ಏನು ಲಾಭ?
ಉತ್ತರ ತುಂಬ ಸಿಂಪಲ್- ರಾಜ ಹೆಸರಿಗಷ್ಟೇ. ರಾಜನಿಗಿರುವ ಎಲ್ಲ ಅಧಿಕಾರ ಸಾಂಕೇತಿಕ. ರಾಜಕೀಯವಾಗಿ ರಾಜ ತಟಸ್ಥ. ಒಂದಿಷ್ಟು ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ. ಅರ್ಥಾತ್, ಬ್ರಿಟನ್‌ನಲ್ಲಿ ರಿಯಲ್‌ ಪವರ್ಸ್ ಪ್ರಧಾನಿ ಹಾಗೂ ಆತನ ಮಂತ್ರಿ ಮಂಡಳದಲ್ಲಿದೆ! ಮತ್ತೊಂದು ಅರ್ಥದಲ್ಲಿ ಜನರೇ ರಾಜರು!

ಬ್ರಿಟನ್ ರಾಜಮನೆತನದ ಇತಿಹಾಸ
ಬ್ರಿಟನ್ ರಾಜಮನೆತನಕ್ಕೆ ಸುದೀರ್ಘ ಇತಿಹಾಸವಿದೆ. 9ನೇ ಶತಮಾನದಲ್ಲಿ ಬ್ರಿಟನ್ ರಾಜಮನೆತನ ಇತಿಹಾಸದ ಬೇರುಗಳಿವೆ. ವೆಸ್ಸೆಕ್ಸ್‌ನ ಆಂಗ್ಲೋ-ಸ್ಯಾಕ್ಸೋನ್ ರಾಜ್ಯವೇ ಮುಂದೆ ಇಂಗ್ಲಿಷ್ ರಾಜ್ಯವಾಗಿ ಉದಯವಾಯಿತು. ಈಗಿರುವ ಬ್ರಿಟನ್ ರಾಜಮನೆತನದ ಇತಿಹಾಸವು 1707ರಿಂದ ಆರಂಭವಾಗುತ್ತದೆ. ಈ ರಾಯಲ್ ಫ್ಯಾಮಿಲಿಗೂ ಮೊದಲು ಇಂಗ್ಲೆಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಪ್ರತ್ಯೇಕ ರಾಜ್ಯಗಳಾಗಿದ್ದವು. ಆ ಬಳಿಕ ಮೂರು ರಾಜ್ಯಗಳು ಜತೆಯಾಗಿ ಬ್ರಿಟನ್ ರಾಜ್ಯವು ಸೃಷ್ಟಿಯಾಯಿತು. ಜತೆಗೇ ರಾಯಲ್ ಫ್ಯಾಮಿಲಿ ಕೂಡ.

ಐದನೇ ರಾಜ ಜಾರ್ಜ್ (1865-1936) ಮತ್ತು ಮೇರಿ ಆಪ್ ಟೆಕ್ ಅವರು ಎರಡನೇ ಎಲಿಜಬೆತ್ ಅವರ ಅಜ್ಜ ಮತ್ತು ಅಜ್ಜಿ. ಇವರಿಗೆ ಆರು ಮಕ್ಕಳು. ಈ ಪೈಕಿ ನಾಲ್ವರಿಗೆ ಮಕ್ಕಳಿದ್ದರೆ, ಇಬ್ಬರಿಗೆ ಇರಲಿಲ್ಲ. ಹಿರಿಯ ಮಗ 8ನೇ ಕಿಂಗ್ ಎಡ್ವರ್ಡ್ 1936ರಲ್ಲಿ ತಂದೆಯ ನಂತರ, ಬ್ರಿಟನ್ ರಾಜನಾದ. ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ, ಮೊನ್ನೆ ನಿಧನರಾದ ಎರಡನೇ ಎಲಿಜಬೆತ್ ಅವರ ದೊಡ್ಡಪ್ಪ. ರಾಣಿ ಎಲಿಜಬೆತ್ ಅವರ ಅಪ್ಪ ಆರನೇ ಕಿಂಗ್ ಜಾರ್ಜ್ ಅವರು ಕಿಂಗ್ ಎಡ್ವರ್ಡ್ ಸಹೋದರ.

ವಿಚ್ಛೇದಿತಳಿಗಾಗಿ ಸಿಂಸಾಹನ ತೊರೆದ ಎಡ್ವರ್ಡ್!
ಎಂಟನೇ ಕಿಂಗ್ ಎಡ್ವರ್ಡ್ ಅಮೆರಿಕದ ವಿಚ್ಛೇದಿತ ವಾಲಿಸ್ ಸಿಂಪ್ಸನ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ಹಾಗಾಗಿ, ಅವರು ರಾಯಲ್ ಫ್ಯಾಮಿಲಿ ಕರ್ತವ್ಯಗಳಿಂದ ಮುಕ್ತರಾಗಬೇಕ್ದಾದರಿಂದ, ತಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವುದ್ಕಕಾಗಿ ಸಿಂಹಾಸನವನ್ನು ತೊರೆದರು.

ಎಲಿಜಬೆತ್ ಅಪ್ಪ ರಾಜನಾದ!
ರಾಜನಾಗಿದ್ದ ತನ್ನ ಪ್ರೀತಿಗಾಗಿ 8ನೇ ಎಡ್ವರ್ಡ್ ಕಿಂಗ್ ಸಿಂಹಾಸನ ತೊರೆದ ಬಳಿಕ, ಅವರ ಸಹೋದರ ಪ್ರಿನ್ಸ್‌ 6ನೇ ಜಾರ್ಜ್ ಬ್ರಿಟನ್ ರಾಜನಾದ. ಮುಂದೆ 15 ವರ್ಷಗಳ ಕಾಲ ಬ್ರಿಟನ್ ರಾಜಮನೆತನದ ಜವಾಬ್ದಾರಿಗಳನ್ನು ನಿರ್ವಹಿಸಿದ. 6ನೇ ಕಿಂಗ್ ಜಾರ್ಜ್ ಮತ್ತು ಪತ್ನಿ ಎಲಿಜಬೆತ್‌ ಅವರಿಗೆ ಇಬ್ಬರು ಹೆಣ್ಣುಮಕ್ಕಳು ಜನಿಸಿದರು. ಆ ಪೈಕಿ ಮೊದಲನೆಯವಳೇ ಎರಡನೇ ಎಲಿಜಬೆತ್(ಮೊನ್ನೆಯಷ್ಟೇ ನಿಧನರಾದರು) ಹಾಗೂ ಅವರ ಸಹೋದರಿ ಮಾರ್ಗರೇಟ್.

2ನೇ ಎಲಿಜಬೆತ್ ರಾಜ್ಯಭಾರ ಶುರು
ರಾಜರಾಗಿದ್ದ 6ನೇ ಕಿಂಗ್ ಜಾರ್ಜ್ ಅವರು 1952ರಲ್ಲಿ ನಿಧನರಾದರು. ಗಂಡುಮಕ್ಕಳು ಇಲ್ಲದ್ದರಿಂದ ಸಹಜವಾಗಿಯೇ ಎರಡನೇ ಎಲಿಜಬೆತ್ ಉತ್ತರಾಧಿಕಾರಿಯಾದರು. ಹೀಗಿದ್ದೂ ಉತ್ತರಾಧಿಕಾರಿಯಾಗುವ ಅನುಮಾನಗಳಿದ್ದವು. ಆದರೆ, ಬ್ರಿಟನ್ ಇತಿಹಾಸದಲ್ಲಿ ಸಹಜ ಉತ್ತರಾಧಿಕಾರಿಯೇ ರಾಜ ಅಥವಾ ರಾಣಿಯಾಗುವುದು ನಡೆದುಕೊಂಡು ಬಂದಿದ್ದರಿಂದ, ಅಂತಿಮವಾಗಿ 2ನೇ ಕ್ವೀನ್ ಎಲಿಜಬೆತ್ 1952 ಫೆಬ್ರವರಿ 6ರಂದು ಬ್ರಿಟನ್ ಸಿಂಹಾಸನವೇರಿದರು. ಎಡಿನ್‌ಬರ್ಗ್ ಡ್ಯೂಕ್ ಪ್ರಿನ್ಸ್ ಫಿಲಿಪ್ ಅವರನ್ನು ವಿವಾಹವಾದರು. ಇವರಿಗೆ ನಾಲ್ವರು ಮಕ್ಕಳು. ಮೂರನೇ ಪ್ರಿನ್ಸ್ ಚಾರ್ಲ್ಸ್(ಹಾಲಿ ಬ್ರಿಟನ್ ರಾಜ), ಪ್ರಿನ್ಸೆಸ್ ರಾಯಲ್ ಆ್ಯನಿ, ಪ್ರಿನ್ಸ್ ಆಂಡ್ರೋ ಮತ್ತು ಪ್ರಿನ್ಸ್ ಎಡ್ವರ್ಡ್.

ಈಗ ಮೂರನೇ ಚಾರ್ಲ್ಸ್ ರಾಜ
ತಮ್ಮ 73ನೇ ವಯಸ್ಸಿನಲ್ಲಿ ರಾಜನಾಗಿದ್ದಾರೆ ಮೂರನೇ ಚಾರ್ಲ್ಸ್. ಅಲ್ಲಿ ತನಕ ಅವರು ಬ್ರಿಟನ್‌ನ ಪ್ರಿನ್ಸ್ ಆಗಿದ್ದರು! ತಾಯಿ ಎರಡನೇ ಎಲಿಜಬೆತ್ ಅವರು ಬ್ರಿಟನ್ ರಾಜಮನೆತನದಲ್ಲಿ ಅತಿ ದೀರ್ಘಕಾಲದ ಆಡಳಿತ ನಡೆಸಿದ ಕೀರ್ತಿ ಪಾತ್ರರಾಗಿದ್ದಾರೆ. ಹಾಗಾಗಿ, ಚಾರ್ಲ್ಸ್ ತಮ್ಮ ಸರದಿಗಾಗಿ ದೀರ್ಘಸಮಯದವರೆಗೆ ಕಾಯಬೇಕಾಯಿತು!

ಮದ್ವೆ ಮುಂಚೆ ಚಾರ್ಲ್ಸ್‌ಗೆ ಅಫೇರ್
ಈಗ ರಾಜನಾಗಿರುವ ಮೂರನೇ ಕಿಂಗ್ ಚಾರ್ಲ್ಸ್ ಬಗ್ಗೆ ನಾನಾ ಕತೆಗಳಿವೆ. ಈ ಯಾರು ಚಾರ್ಲ್ಸ್ ಯಾರು ಎಂದರೆ, ಸುರಸುಂದರಿ ಡಯಾನಾಳ ಗಂಡ. ಮದುವೆ ಮುಂಚೆಯೇ ಚಾರ್ಲ್ಸ್‌, ವಿವಾಹಿತೆ ಕ್ಯಾಮಿಲ್ಲಾ ಪಾರ್ಕರ್ ಜತೆ ಅಫೇರ್ ಇಟ್ಟುಕೊಂಡಿದ್ದರು. ಈ ಬಗ್ಗೆ ತಾಯಿ ಎರಡನೇ ಎಲಿಜಬೆತ್ ಬುದ್ಧಿ ಹೇಳಿದ್ದಳು. ರಾಜಮನೆತನದಲ್ಲಿ ಈ ಬಗ್ಗೆ ಸಾಕಷ್ಟು ಕಿರಿಕಿರಿಯಾಗಿತ್ತು. ಆದರೆ, ಅವರೇನೂ ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. 1981ರಲ್ಲಿ ಡಯಾನಾ ಅವರನ್ನು ಮದುವೆಯಾದರು. ಅಂತಿಮವಾಗಿ ಚಾರ್ಲ್ಸ್ ಮತ್ತು ಡಯಾನಾ 1996ರ ಡೈವೋರ್ಸ್ ಪಡೆದುಕೊಂಡರು. ಇದಾದ ವರ್ಷದಲ್ಲೇ 1997ರಲ್ಲಿ ಪ್ಯಾರಿಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಯಾನಾ ನಿಧನರಾದರು. ಕಾರಿನಲ್ಲಿ ಆಕೆಯ ಗೆಳೆಯ ದೋದಿ ಅಲ್ ಫಯಾದ್ ಕೂಡ ಇದ್ದ. 2005ರಲ್ಲಿ ಚಾರ್ಲ್ಸ್, ಕ್ಯಾಮಿಲ್ಲಾ ಪಾರ್ಕರ್ ಅವರನ್ನು ವಿವಾಹವಾದರು.

ಡಯಾನಳದ್ದೇ ಬೇರೆಯ ಕತೆ
ಈಗ ಬ್ರಿಟನ್‌ ರಾಜನಾಗಿರುವ ಕಿಂಗ್ ಚಾರ್ಲ್ಸ್ ಅವರ ಮೊದಲ ಪತ್ನಿ ಡಯಾನಾ. ಬಹುಶಃ ಬ್ರಿಟನ್ ಕಂಡ ಅತ್ಯಂತ ವರ್ಣ ರಂಜಿತ ಪ್ರಿನ್ಸೆಸ್. ಮದುವೆ, ಅಫೇರ್, ಮಕ್ಕಳು, ಆಕ್ಟಿವಿಸಮ್, ನೇರ ನಿಷ್ಠುರ ನಡೆ ಮತ್ತಿತರ ಕಾರಣಗಳಿಂದಾಗಿ ಡಯಾನ ಜಗತ್ತಿನಾದ್ಯಂತ ಸದಾ ಸುದ್ದಿಯಲ್ಲಿರುತ್ತಿದ್ದರು. ರಾಜಮನೆತನದ ಹೊರಗಿನವರಾದ ಡಯಾನಾ, 1981ರಲ್ಲಿ ಪ್ರಿನ್ಸ್ ಚಾರ್ಲ್ಸ್ ಅವರನ್ನು ವಿವಾಹವಾದರು. ಕ್ವೀನ್ ಎಲೆಜಬೆತ್ ಪರವಾಗಿ ರಾಯಲ್ ಕರ್ತವ್ಯಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊತ್ತರು. ಸಾಮಾಜಿಕ ಕೆಲಸಗಳಿಂದಾಗಿ ಬಹಳ ಬೇಗ ಸುದ್ದಿಯಾಗತೊಡಗಿದರು. ರಾಜಮನೆತನ ಪಾಲಿಸಿಕೊಂಡ ಬಂದ ಅನೇಕ ಪದ್ಧತಿಗಳನ್ನು ಮುರಿದು ತಮ್ಮದೇ ಆದ ರೀತಿಯಲ್ಲಿ ಮುನ್ನುಗ್ಗುತ್ತಿದ್ದರು. ಆ ಕಾರಣಕ್ಕಾಗಿಯೇ ಅವರು ಎಲ್ಲರ ಅಚ್ಚುಮೆಚ್ಚಿನವರಾದರು. ಆದರೆ, ಡಯಾನಾ ಅವರು ಅನುಸರಿಸುತ್ತಿರುವ ರೀತಿ ನೀತಿ, ರಾಜಮನೆತನಕ್ಕೆ ಹೊಂದಾಣಿಕೆಯಾಗುತ್ತಿರಲಿಲ್ಲ. ದಿನಗಳೆದಂತೆ ಡಯಾನಾ ಮತ್ತು ರಾಯಲ್ ಫ್ಯಾಮಿಲಿಯ ನಡುವಿನ ಕಂದಕ ಹೆಚ್ಚುತ್ತಲೇ ಹೋಯಿತು.

ಚಾರ್ಲ್ಸ್ ಮತ್ತು ಡಯಾನಾ ದಂಪತಿಗೆ ಪ್ರಿನ್ಸ್ ವಿಲಿಯಂ ಮತ್ತು ಹ್ಯಾರಿ ಮಕ್ಕಳು. ಮೂರನೇ ಕಿಂಗ್ ಚಾರ್ಲ್ಸ್ ನಂತರ ಉತ್ತರಾಧಿಕಾರಿಯಾಗಿ ಪ್ರಿನ್ಸ್ ವಿಲಿಯಂ ಅವರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಸಹೋದರ ಪ್ರಿನ್ಸ್ ಹ್ಯಾರಿ, ಹಾಲಿವುಡ್ ನಟಿ ಮೇಘನ್ ಮಾರ್ಕೆಲ್ ಅವರನ್ನು ವಿವಾಹವಾಗಿ ರಾಯಲ್ ಫ್ಯಾಮಿಲಿಯಿಂದ ಹೊರ ಬಂದಿದ್ದಾರೆ.

ರಾಯಲ್ ಫ್ಯಾಮಿಲಿಯ ಮೇಲೆ ಡಯಾನಾ ಅವರ ಪ್ರಭಾವ ಗಾಢವಾಗಿತ್ತು. ಪ್ಯಾರಿಸ್‌ನಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದರು. ಇಡೀ ಜಗತ್ತೇ ಡಯಾನಾ ಸಾವಿಗೆ ಕಂಬನಿಗರೆಯಿತು. ಆಕೆಯ ನಿಧನದ ಬಳಿಕ, ಅಫೇರ್ಸ್ ಮತ್ತಿತರ ವಿಷಯಗಳು ಟ್ಯಾಬ್ಲಾಯ್ಡ್‌ಗಳಿಗೆ ಆಹಾರವಾಯಿತಾದರೂ, ಸಾಮಾಜಿಕ ಕಾರ್ಯಗಳು ತಮ್ಮ ಸ್ನಿಗ್ಧ ಸೌಂದರ್ಯದಿಂದಾಗಿ ಡಯಾನಾ ಇಂದಿಗೂ ಜಗತ್ತಿನ ಕಣ್ಮಣಿ.

ರಾಯಲ್ ಫ್ಯಾಮಿಲಿ ಕ್ರಿಟಿಕ್ ಡಯಾನಾಳ ಮಗ
ಪ್ರಿನ್ಸ್ ವಿಲಿಯಂ ಮತ್ತು ಪ್ರಿನ್ಸ್ ಹ್ಯಾರಿ ಡಯಾನಾಳ ಇಬ್ಬರು ಮಕ್ಕಳು. ಪ್ರಿನ್ಸ್ ವಿಲಿಯಂ, ಮೂರನೇ ಕಿಂಗ್ಸ್ ಚಾರ್ಲ್ಸ್ ನಂತರ ಬ್ರಿಟನ್ ರಾಜನಾಗಲಿದ್ದಾರೆ. ಆದರೆ, ಅವರ ಸಹೋದರ ಪ್ರಿನ್ಸ್ ಹ್ಯಾರಿ ಮಾತ್ರ ಥೇಟ್ ಅವರ ಅಮ್ಮನ ಹಾಗೆ. ಹ್ಯಾರಿ ಮದುವೆಯಾಗಿದ್ದು ರಾಜಮನೆತನದ ಹೊರಗಿನ ಹುಡುಗಿಯನ್ನು. ಹಾಲಿವುಡ್ ನಟಿ ಮೇಘನ್ ಮಾರ್ಕೆಲ್. ಇಬ್ಬರು ಲವ್ ಮಾಡಿ, ಪ್ರೀತಿಸಿ ಮದುವೆಯಾದರು. ಸಹಜವಾಗಿಯೇ ಮೇಘನ್ ರಾಜಮನೆತನದ ರೀತಿ ರಿವಾಜುಗಳಿಗೆ ಹೊಂದಿಕೊಳ್ಳುವುದು ಕಷ್ಟವಾಯಿತು. ರಾಯಲ್ ಫ್ಯಾಮಿಲಿಯೂ ಅಷ್ಟು ಸಲೀಸಾಗಿ ಮೇಘನ್ ಅವರನ್ನು ಬಿಟ್ಟುಕೊಳ್ಳಲಿಲ್ಲ. ಡಯಾನಾ ಎದುರಿಸಿದ ಸ್ಥಿತಿಯನ್ನೇ ಮೇಘನ್ ಕೂಡ ಎದುರಿಸಿದರು. ಮೊದಲೇ ರಾಯಲ್ ಫ್ಯಾಮಿಲಿಯ ಕಾರ್ಯವೈಖರಿ ಬಗ್ಗೆ ತುಸು ಕ್ರಿಟಿಕಲ್ ಆಗಿದ್ದ ಪ್ರಿನ್ಸ್ ಹ್ಯಾರಿ, ಹೆಂಡತಿ ಜತೆಗೂಡಿ ಅಮೆರಿಕದ ಕ್ಯಾಲಿಫೋರ್ನಿಯಾಗೆ ವಲಸೆ ಹೋದರು, ರಾಯಲ್ ಫ್ಯಾಮಿಲಿಯ ಎಲ್ಲ ಕರ್ತವ್ಯ, ಜವಾಬ್ದಾರಿಗಳಿಂದ ಕಳಚಿಕೊಂಡರು.

ಟಾಪ್‌ಲೆಸ್ ಆಗಿದ್ದ ವಿಲಿಯಂ ಪತ್ನಿ
ಪ್ರಿನ್ಸ್ ವಿಲಿಯಂ. ಡಯಾನಾ-ಚಾರ್ಲ್ಸ್ ಅವರ ಹಿರಿಯ ಪುತ್ರ. ಮುಂದಿನ ಉತ್ತರಾಧಿಕಾರಿಯೂ ಹೌದು. 2012ರಲ್ಲಿ ವಿಚಿತ್ರ ಕಾರಣಕ್ಕೆ ವಿಲಿಯಂ ಮತ್ತು ಪತ್ನಿ ಕೇಟ್ ಮಿಡ್ಲಟನ್ ಸುದ್ದಿಯಲ್ಲಿದ್ದರು. ಕೇಟ್ ಮಿಡ್ಲಟನ್ ಅವರ ಟಾಪ್‌ಲೆಸ್ ಫೋಟೊ ಫ್ರೆಂಚ್ ಮ್ಯಾಗ್‌ಜಿನ್‌ನಲ್ಲಿ ಪ್ರಕಟವಾಗಿತ್ತು. ರಾಯಲ್ ಫ್ಯಾಮಿಲಿಗೆ ಇದು ಇರಿಸುಮುರಿಸು ತಂದಿತು. ಪ್ರಿನ್ಸ್ ವಿಲಿಯಂ ಕೆಂಡಾಮಂಡಲವಾದರು. ಮ್ಯಾಗ್‌ಜಿನ್ ವಿರುದ್ಧ ದೂರು ಕೂಡ ದಾಖಲಿಸಲಾಯಿತು.

ಮೈದುನ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಜತೆ ಕೇಟ್ ಮಿಡ್ಲಟನ್ ಅವರ ಸಂಬಂಧಗಳು ಚೆನ್ನಾಗಿಲ್ಲ ಎಂಬ ಗುಸು ಗುಸುಗಳಿದ್ದವು. ಆದರೆ, ಈ ಬಗ್ಗೆ ರಾಯಲ್ ಫ್ಯಾಮಿಲಿಯೇನೂ ಸ್ಪಷ್ಟನೆ ಕೊಡಲು ಹೋಗಲಿಲ್ಲ. ಕೇಟ್ ಮಿಡ್ಲಟನ್ ಚೊಚ್ಚಲು ಬಸುರಿಯಾಗಿದ್ದಾಗ ಅವರನ್ನು ನೋಡಿಕೊಳ್ಳಲು ನರ್ಸ್ ಒಬ್ಬರನ್ನು ನೇಮಿಸಲಾಗಿತ್ತು. ಆಕೆ ಆತ್ಮಹತ್ಯೆ ಮಾಡಿಕೊಂಡಳು. ಆ ಬಗ್ಗೆ ಸಾಕಷ್ಟು ಪುಕಾರುಗಳೆದ್ದವು.

ಬಾಲಕಿ ಮೇಲೆ ಪ್ರಿನ್ಸ್ ಆ್ಯಂಡ್ರೋ ರೇಪ್?
ಕ್ವೀನ್ ಎಲಿಜಬೆತ್ ಅವರ ಎರಡನೇ ಪುತ್ರ ಆ್ಯಂಡ್ರೋ ಅವರಿಂದಾಗಿ ಇಡೀ ರಾಜಮನೆತನವು ತಲೆ ತಗ್ಗಿಸುವಂತಾಯಿತು. ಪ್ರಿನ್ಸ್ ಆ್ಯಂಡ್ರೋ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವು 2019ರಲ್ಲಿ ಕೇಳಿ ಬಂತು. ಇದರಿಂದಾಗಿ ಅವರಿಗೆ ನೀಡಲಾಗಿದ್ದ ಡ್ಯೂಕ್ ಆಫ್ ಯಾರ್ಕ್ ಪದವಿಯನ್ನು ಕಿತ್ತುಕೊಳ್ಳಲಾಯಿತು, ಜತೆಗೇ ರಾಯಲ್ ಹೈನೆಸ್ ಬಳಸುವುದನ್ನು ನಿರ್ಬಂಧಿಸಲಾಯಿತು. ಈ ಆರೋಪದಿಂದಾಗಿ ಅವರು ಸಿಂಹಾಸನಕ್ಕೇರುವ ಹಕ್ಕನ್ನು ಕಳೆದುಕೊಂಡರು.

ರಾಜ ಶುದ್ಧಾನುಶುದ್ಧನಾಗರಿಬೇಕು!
ಬ್ರಿಟನ್ ಮಾತ್ರವಲ್ಲ, ಬಹುತೇಕ ಪಶ್ಚಿಮ ರಾಷ್ಟ್ರಗಳು ಮುಕ್ತ ಸಮಾಜ, ಸಂಸ್ಕೃತಿಯನ್ನು ಹೊಂದಿವೆ. ಮದುವೆ, ಸೆಕ್ಸ್‌ಗೆ ಸಂಬಂಧಿಸಿದಂತೆ ಜನರು ಮುಕ್ತ ಮನಸ್ಸು ಹೊಂದಿರುತ್ತಾರೆ. ಆದರೆ, ಅದೇ ತಮ್ಮನ್ನಾಳುವ ರಾಜ ಅಥವಾ ಸರ್ಕಾರದ ಮುಖ್ಯಸ್ಥರು ಮಾತ್ರ ಈ ವಿಷಯದಲ್ಲಿ ಶುದ್ಧ ಚಾರಿತ್ರ್ಯವನ್ನು ಹೊಂದಿರಬೇಕು ಎಂದು ಬಯಸುತ್ತಾರೆ. ಇದಕ್ಕೆ ಬ್ರಿಟನ್ ರಾಜಮನೆತನವೂ ಹೊರತಲ್ಲ. ಸಂಪ್ರದಾಯಗಳು, ಪದ್ಧತಿಗಳ ಅಡಿಯಲ್ಲಿ ರಾಯಲ್ ಫ್ಯಾಮಿಲಿಯ ಸದಸ್ಯರು ಇರಬೇಕಾಗುತ್ತದೆ.

ಸಂಪ್ರದಾಯಬದ್ಧವಾಗಿ ನಡೆದುಕೊಳ್ಳದೇ ಹೋದರೆ ಜನರ ಬಾಯಿಗೆ ಆಹಾರವಾಗಬೇಕಾಗುತ್ತದೆ. ಬಹುಶಃ ಇದಕ್ಕೆ ಡಯಾನಾಗಿಂತಲೂ ದೊಡ್ಡ ಉದಾಹರಣೆ ಮತ್ತೊಬ್ಬರಿಲ್ಲ. ಚೆಂದುಳ್ಳ ಚೆಲುವೆ ಡಯನಾ ತಾನೆಷ್ಟು ಸುಂದರಿಯೋ ಅಷ್ಟೇ ಹೃದಯವಂತಳು ಹೌದು. ರಾಯಲ್ ಫ್ಯಾಮಿಲಿಯ ಪದ್ಧತಿಗಳನ್ನು ಮೀರಿ ಆಕೆ, ಜನರನ್ನು ತಲುಪಲು ಪ್ರಯತ್ನಿಸಿದಳು. ಅದೇ ಅವಳಿಗೆ ಮುಳುವಾಯಿತು. ಆಕೆಯ ಇಷ್ಟ, ಕಷ್ಟಗಳಿಗೆ ಬೆಲೆ ಇರಲಿಲ್ಲ. ಅಂತಿಮವಾಗಿ ಟ್ಯಾಬ್ಲಾಯ್ಡ್ ಪತ್ರಿಕೆಗಳಿಗೆ ಆಕೆಯ ಪ್ರತಿಯೊಂದು ಚಲನ ವಲನವು ಆಹಾರವಾಯಿತು.

ಅದೇ ರೀತಿಯ ಸ್ಥಿತಿಯು ಪ್ರಿನ್ಸ್ ಹ್ಯಾರಿ ಅವರ ಪತ್ನಿ ಮತ್ತು ನಟಿ ಮೇಘನ್ ಕೂಡ ಎದುರಿಸುವಂತಾಯಿತು. ಇವರೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ರಾಯಲ್ ಫ್ಯಾಮಿಲಿಗೆ ಎಂಟ್ರಿ ಕೊಟ್ಟ ಮೇಲೆ ಅಲ್ಲಿನ ರೀತಿ ರಿವಾಜುಗಳಂತೆಯೇ ಎಲ್ಲವನ್ನು ಮಾಡಬೇಕಿತ್ತು. ಅಂತಿಮವಾಗಿ ತನ್ನ ತಾಯಿಗೆ ಬಂದ ಸ್ಥಿತಿ ತನ್ನ ಹೆಂಡತಿಗೂ ಬರಬಾರದು ಎಂದು ನಿರ್ಧರಿಸಿದ ಪ್ರಿನ್ಸ್ ಹ್ಯಾರಿ ಹೆಂಡತಿಯೊಂದಿಗೆ ಲಂಡನ್ ತೊರೆದು ಅಮೆರಿಕಕ್ಕೆ ಹೋಗಿ ನೆಲೆಸಿದರು.

ನೆಕ್ಸ್ಟ್ ಕಿಂಗ್/ಕ್ವೀನ್ ಆಗುವ ಸಾಲಿನಲ್ಲಿ ಯಾರು?
73 ವರ್ಷದ ಮೂರನೇ ಕಿಂಗ್ ಚಾರ್ಲ್ಸ್ ರಾಜನಾಗಿದ್ದಾರೆ. ಅವರ ನಂತರ ಅವರ ಹಿರಿಯ ಪುತ್ರ ಪ್ರಿನ್ಸ್ ವಿಲಿಯಂ ರಾಜನಾಗುತ್ತಾರೆ. ಒಂದೊಮ್ಮೆ ಅವರು ಸಿಂಹಾಸನ ಏರದಿದ್ದರೆ ಅವರ ಮೂವರ ಮಕ್ಕಳ ಪೈಕಿ ಹಿರಿಯ ಮಗ ಪ್ರಿನ್ಸ್ ಜಾರ್ಜ್(9 ವರ್ಷ) ಆಗಬಹುದು. ಮುಂದಿನ ತಲೆಮಾರಿನ ಪಟ್ಟಿಯಲ್ಲಿ ಪ್ರಿನ್ಸೆಸ್ ಷಾರ್ಲೆಟ್(7 ವರ್ಷ), ಪ್ರಿನ್ಸ್ ಲೂಯಿಸ್(4 ವರ್ಷ) ಹಾಗೂ ಪ್ರಿನ್ಸ್ ಹ್ಯಾರಿ ಮತ್ತು ಪ್ರಿನ್ಸೆಸ್ ಮೇಘನ್ ಅವರ ಮಕ್ಕಳಾದ ಆರ್ಚಿ ಹ್ಯಾರಿಸನ್ ಮೌಂಟ್‌ಬ್ಯಾಟನ್ (3 ವರ್ಷ) ಮತ್ತು ಲಿಲೆಬೆಟ್ ‘ಲಿಲ್’ ಡಯಾನಾ(1 ವರ್ಷ) ಇದ್ದಾರೆ.

ಇದನ್ನೂ ಓದಿ | Queen Elizabeth Death | ಬ್ರಿಟನ್ ರಾಣಿ ಎಲಿಜಬೆತ್ ಬಗ್ಗೆ ತೆರೆಕಂಡ ಸಿನಿಮಾಗಳಿವು!

Continue Reading
Advertisement
Karnataka Weather Forecast
ಮಳೆ1 ಗಂಟೆ ago

Karnataka Weather : ವಾರಾಂತ್ಯದಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ದಿನದ ಮಟ್ಟಿಗೆ ಖರ್ಚು ಹೆಚ್ಚು; ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Use nandini ghee compulsorily in temple prasadam Order of the Department of Religious Endowments
ಕರ್ನಾಟಕ13 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು14 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು14 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು17 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು18 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ18 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್19 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ19 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌