Sonu Sood | ರಕ್ತದಲ್ಲಿ ಅರಳಿದ ಸೋನು ಸೂದ್: ಅಭಿಮಾನಿಗೆ ನಟನ ಸಂದೇಶವೇನು? - Vistara News

ಬಾಲಿವುಡ್

Sonu Sood | ರಕ್ತದಲ್ಲಿ ಅರಳಿದ ಸೋನು ಸೂದ್: ಅಭಿಮಾನಿಗೆ ನಟನ ಸಂದೇಶವೇನು?

ಬಾಲಿವುಡ್‌ ನಟ ಸೋನು ಸೂದ್‌ ಅವರಿಗೆ ಅವರ ಅಭಿಮಾನಿಯೊಬ್ಬ (Sonu Sood) ರಕ್ತದಿಂದ ಭಾವಚಿತ್ರ ಬಿಡಿಸಿ ನಟನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ವಿಡಿಯೋ ಸಖತ್‌ ವೈರಲ್‌ ಆಗಿದೆ.

VISTARANEWS.COM


on

Sonu Sood
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ನಟ ಸೋನು ಸೂದ್‌ (Sonu Sood) ಸಮಾಜಮುಖಿ ಕಾರ್ಯದಿಂದಲೂ ಗುರುತಿಸಿಕೊಂಡು ಸಾವಿರಾರು ಮಂದಿಗೆ ಸಹಾಯ ಮಾಡುತ್ತಲೇ ಬಂದಿದ್ದು, ಈಗ ಅವರ ಅಭಿಮಾನಿಯೊಬ್ಬ ನೆಚ್ಚಿನ ನಟನ ಭಾವಚಿತ್ರವನ್ನು ರಕ್ತದಿಂದ ಬಿಡಿಸಿ ಉಡುಗೊರೆಯಾಗಿ ನೀಡಿದ್ದಾರೆ. ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

2022ರಲ್ಲಿ ಕೊರೊನಾ ಸಂದರ್ಭದಲ್ಲಿ ಸೋನು ಸೂದ್ ಅನೇಕರಿಗೆ ಸಹಾಯ ಮಾಡಿದ್ದರು. ಇದೇ ಕಾರಣಕ್ಕೆ ಅನೇಕರು ಸೋನು ಸೂದ್‌ ಪೋಟೋವನ್ನು ದೇವರ ಕೋಣೆಯಲ್ಲಿ ಇಟ್ಟು ಪೂಜಿಸುತ್ತಿದ್ದಾರೆ. ಅಭಿಮಾನಿ ಮಧು ಗುರ್ಜರ್ ಎಂಬಾತ ಸೋನು ಸೂದ್‌ ಭಾವಚಿತ್ರವನ್ನು ರಕ್ತದಿಂದ ಬಿಡಿಸಿದ್ದಾರೆ. ಈ ಬಗ್ಗೆ ಸೋನು ಸೂದ್‌ಗೆ ಖುಷಿ ಜತೆ ಬೇಸರವೂ ಆಗಿದೆ.

ಇದನ್ನೂ ಓದಿ | Sonu Sood ನೆರವಿನಿಂದ 4 ಕೈ‌, 4 ಕಾಲಿನ ಪುಟಾಣಿಗೆ ಆಯ್ತು ಯಶಸ್ವಿ ಶಸ್ತ್ರಚಿಕಿತ್ಸೆ

ಸೋನು ಸೂದ್‌ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ʻʻರಕ್ತದಿಂದ ಚಿತ್ರವನ್ನು ಬಿಡಿಸಬಾರದು. ರಕ್ತ ದಾನ ಮಾಡಬೇಕು. ರಕ್ತ ಅನೇಕರಿಗೆ ಸಹಾಯವಾಗುತ್ತದೆʼʼ ಎಂದು ಅಭಿಮಾನಿಗಳಿಗೆ ತಿಳಿ ಹೇಳಿದ್ದಾರೆ. ʻʻರಕ್ತವನ್ನು ದಾನ ಮಾಡಿ. ಈ ರೀತಿ ಚಿತ್ರ ಮಾಡುವುದರಲ್ಲಿ ವ್ಯರ್ಥ ಮಾಡಬೇಡಿʼʼ ಎಂದು ಸಂದೇಶ ನೀಡಿದ್ದಾರೆ. ಸೋನು ಹಾಗೂ ಅಭಿಮಾನಿಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸೋನು ಸೂದ್ ಅವರು, ಇತ್ತೀಚೆಗೆ, ಅಕ್ಷಯ್ ಕುಮಾರ್ ಅಭಿನಯದ ʻಪೃಥ್ವಿರಾಜ್ʼ ಚಿತ್ರದಲ್ಲಿ ನಟಿಸಿದ್ದರು. ಸದ್ಯಕ್ಕೆ ಅವರು ತಮಿಳು ಚಿತ್ರವಾದ ʻತಮಿಳರಸನ್ʼನಲ್ಲಿ ಅಭಿನಯಿಸುತ್ತಿದ್ದು, ಅದಾದ ನಂತರ ಬಾಲಿವುಡ್‌ನ ʻಫತೇʼ ಎಂಬ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

ಇದನ್ನೂ ಓದಿ | Viral Video: ಒಂದೇ ಕಾಲಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿ ನೆರವಿಗೆ ಬಂದ ನಟ ಸೋನು ಸೂದ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

Sushant Singh: ನಟ ಸುಶಾಂತ್‌ ಸಿಂಗ್‌ (Sushant Singh Rajput) ಅವರು 2020ರ ಜೂನ್‌ 14ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

VISTARANEWS.COM


on

Sushant Singh Rajput's sister cries as she visits Kedarnath
Koo

ಬೆಂಗಳೂರು: ದಿವಂಗತ ನಟ ಸುಶಾಂತ್ ಸಿಂಗ್ (Sushant Singh) ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ಕೇದಾರನಾಥಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಜತೆಗೆ ಸಹೋದರ ಸುಶಾಂತ್ ಸಿಂಗ್ ಅವರನ್ನು ನೆನೆಸಿ ಭಾವುಕ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಈ ಮುಂಚೆ ಸುಶಾಂತ್‌ ಅವರು ಕೇದಾರನಾಥಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಹಳೆಯ ಫೋಟೊದಲ್ಲಿ ಸುಶಾಂತ್‌ ದೇಗುಲದ ಮುಂದೆ ‘ಸಾಧು ಜತೆ ಪೋಸ್ ನೀಡಿದ್ದಾರೆ.

ನಟ ಸುಶಾಂತ್‌ ಸಿಂಗ್‌ (Sushant Singh Rajput) ಅವರು 2020ರ ಜೂನ್‌ 14ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸುಶಾಂತ್‌ ಸಿಂಗ್‌ ಅವರ ಪರವಾಗಿ ನಿಲ್ಲುತ್ತಾರೆ. ನಾಲ್ಕನೇ ವರ್ಷದ ಪುಣ್ಯತಿಥಿಯಂದು ಸಹೋದರನನ್ನು ನೆನಪಿಸಿಕೊಂಡು ಶ್ವೇತಾ ಹೀಗೆ ಬರೆದಿದ್ದಾರೆ.

“ಇದು ಜೂನ್ 1, ಮತ್ತು ನಾಲ್ಕು ವರ್ಷಗಳ ಹಿಂದೆ ಈ ತಿಂಗಳ 14 ರಂದು ಸುಶಾಂತ್ ಬಾರದ ಲೋಕಕ್ಕೆ ಹೋದ. ಆ ದುರಂತದ ದಿನ ಏನಾಯಿತು ಎಂಬುದರ ಕುರಿತು ನಾವು ಇನ್ನೂ ಉತ್ತರಗಳನ್ನು ಹುಡುಕುತ್ತಲೇ ಇದ್ದೇವೆ. ಇತ್ತೀಚೆಗೆ ಕೇದಾರನಾಥಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದೆ. ಸಹೋದರ ಸುಶಾಂತ್‌ ನೆನಪಾದ. ನಾನು ಕೇದಾರನಾಥಕ್ಕೆ ಇಳಿದ ತಕ್ಷಣ ಕಣ್ಣೀರಿಟ್ಟೆ. ಆ ಕ್ಷಣ ನನ್ನೊಂದಿಗೆ ಅವನು ಇದ್ದಿದ್ದರೆ ಚೆಂದ ಎನಿಸಿತು. .ಅವನು ಧ್ಯಾನಿಸಿದ ಸ್ಥಳದಲ್ಲಿ ನಾನು ಕುಳಿತು ಧ್ಯಾನಿಸಿದೆ, ಮತ್ತು ಆ ಕ್ಷಣಗಳಲ್ಲಿ, ಅವನು ಇನ್ನೂ ನನ್ನೊಂದಿಗೆ, ನನ್ನೊಳಗೆ, ನನ್ನ ಮೂಲಕ ವಾಸಿಸುತ್ತಿದ್ದಾನೆ ಎಂದು ನಾನು ಭಾವಿಸಿದೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Adah Sharma: ಸುಶಾಂತ್ ಸಿಂಗ್ ರಜಪೂತ್  ಆತ್ಮಹತ್ಯೆ ಮಾಡಿಕೊಂಡ ಮನೆ ಖರೀದಿಸಿದ್ರಾ `ದಿ ಕೇರಳ ಸ್ಟೋರಿ’ ನಟಿ?

ಸುಶಾಂತ್‌ ಅವರು ಕೇದಾರನಾಥ್ (2018) ಸಿನಿಮಾದಲ್ಲಿ ಸಾರಾ ಅಲಿ ಖಾನ್ ಅವರೊಂದಿಗೆ ನಟಿಸಿದ್ದರು. ಸುಶಾಂತ್‌ ಕೇದಾರನಾಥ್‌ಗೆ ಆಗಗ ಶೂಟಿಂಗ್‌ಗಾಗಿ ಹೋಗುತ್ತಲೇ ಇರುತ್ತಿದ್ದರು.

ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಪುಸ್ತಕಲ್ಲಿ ಸುಶಾಂತ್‌ ಅವರ ವೃತ್ತಿ ಜೀವನ, ವೈಯಕ್ತಿಕ ಜೀವನ ಬಗ್ಗೆ ಬರೆದುಕೊಂಡಿದ್ದಾರೆ. ʻಸುಶಾಂತ್ ಬಾಲಿವುಡ್‌ನಲ್ಲಿ ಬ್ಯುಸಿಯಾಗಿಬಿಟ್ಟಿದ್ದ. ನನಗೆ ಅವನನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲ್ಲಿಲ್ಲ. 2014 ರಿಂದ 2017 ರವರೆಗೆ ನಾನು ಪ್ರತಿ ವರ್ಷ ಭಾರತಕ್ಕೆ ತೆರಳಿ ಅವನನ್ನು ಭೇಟಿಯಾಗುತ್ತಿದ್ದೆ. ದುರದೃಷ್ಟವಶಾತ್, 2018 ಮತ್ತು 2019ರಲ್ಲಿ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಜನವರಿ 2020ರಲ್ಲಿ ಪ್ಲ್ಯಾನ್‌ ಕೂಡ ಮಾಡಿಕೊಂಡಿದ್ದೆ. ಕೊನೆಗೂ ಅವನನ್ನು ಮೀಟ್‌ ಆಗಲು ಆಗಲೇ ಇಲ್ಲ. 2020 ರ ಜೂನ್‌ 14ರಂದು ಅವನು ಬಾರದ ಲೋಕಕ್ಕೆ ಹೋಗೆ ಬಿಟ್ಟಿದ್ದ. ಸಾವಿಗೂ ಮುಂಚೆ ನಾಲ್ಕು ದಿನಗಳ ಮೊದಲು ನಾನು ಕಾಲ್‌ ಮಾಡಿದ್ದೆ, ಅಮೆರಿಕಾಗೆ ಬರುವಂತೆ ಹೇಳಿದ್ದೆ. ಜೂನ್‌ 13ರ ರಾತ್ರಿ ನನಗೆ ಸುಶಾಂತ್‌ ಮೃತಪಟ್ಟ ಸುದ್ದಿ ತಿಳಿಯಿತು. ನಾನು ಕೂಗಾಡಲಿಲ್ಲ. ಅಳಲಿಲ್ಲ. ಅಲ್ಲಿಯೇ ಆಘಾತದಲ್ಲಿ ಕುಸಿದು ಬಿದ್ದೆʼʼ ಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಸುಶಾಂತ್‌ ಸಿಂಗ್‌ ಅವರು ʻಕಾಯ್‌ ಪೋ ಚೆʼ, ʻಎಂಎಸ್ ಧೋನಿʼ, ʻದಿ ಅನ್‌ ಟೋಲ್ಡ್ ಟೇಲ್ʼ, ʻಕೇದಾರನಾಥ್ʼ ಮತ್ತು ʻಚಿಚೋರೆʼಯಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು. ಸುಶಾಂತ್ ಅವರ ವೈವಿಧ್ಯಮಯ ಸಿನಿಮಾ ಜೀವನ 2020 ರಲ್ಲಿ ಕೊನೆಗೊಂಡಿತು. 2020ರ ಜೂನ್ 14ರಂದು ಬಾಂದ್ರಾದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಅವರ ವಯಸ್ಸು 34 ಅಷ್ಟೇ. ಈ ಸಾವು ದೇಶಾದ್ಯಂತ ಭಾರಿ ಆಘಾತವನ್ನುಂಟು ಮಾಡಿತ್ತು.

ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಬಗ್ಗೆ ಹಲವಾರು ಅನುಮಾನಗಳು ಇದ್ದವು. ಚಿತ್ರರಂಗದಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತದಿಂದ ಅವರಿಗೆ ಅನ್ಯಾಯವಾಗುತ್ತಿದೆ. ಆ ಕಾರಣಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಎನ್ನುವುದು ಒಂದು ಅನುಮಾನವಾದರೆ, ಯಾರೋ ಆತ್ಮೀಯರೇ ಕೊಲೆ ಮಾಡಿದ್ದಾರೆ ಎಂಬ ವಾದವೂ ಇತ್ತು. ಸಾವಿನ ಸುತ್ತ ಮಾದಕ ವ್ಯಸನ, ಡ್ರಗ್ಸ್‌ ಜಾಲ ಮತ್ತು ಅಕ್ರಮ ಹಣ ವರ್ಗಾವಣೆ ಹೀಗೆ ಹಲವು ಸಂಶಯದ ಹುತ್ತಗಳು ಬೆಳೆದಿದ್ದವು. ಸಿಬಿಐ, ಇ.ಡಿ, ಎನ್‌ಸಿಬಿ ಸೇರಿದಂತೆ ಹಲವು ತನಿಖಾ ತಂಡಗಳು ನಾನಾ ಆಯಾಮಗಳಲ್ಲಿ ತನಿಖೆಯನ್ನು ನಡೆಸುತ್ತಿವೆ. ಪೋಸ್ಟ್‌ ಮಾರ್ಟಂ ವರದಿಗಳ ಪ್ರಕಾರ ಸುಶಾಂತ್‌ ಆತ್ಮಹತ್ಯೆಯೇ ಹೌದಾಗಿದ್ದರೂ ಅದರ ಹಿಂದಿನ ಶಕ್ತಿಗಳು, ಸಿನಿಮಾ ರಾಜಕಾರಣ ಹೊರಬರಬೇಕು ಎನ್ನುವುದು ಅಭಿಮಾನಿಗಳ ಆಗ್ರಹವಾಗಿತ್ತು.

Continue Reading

ಬಾಲಿವುಡ್

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

Raveena Tandon: ಆರಂಭಿಕ ಮಾಹಿತಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿರುವುದನ್ನು ಕಾಣಬಹುದು.

VISTARANEWS.COM


on

Raveena Tandon attacked In Mumbai After Being Accused Of Rash Driving
Koo

ಮುಂಬೈ: ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ರವೀನಾ ಮದ್ಯ ಕುಡಿದಿದ್ದರು ಎನ್ನಲಾಗಿದೆ. ಸಾರ್ವಜನಿಕರು ರವೀನಾ ಮೇಲೆ ಹಲ್ಲೆ ನಡೆಸಿರುವುದಾಗಿ (Raveena Tandon) ವರದಿಯಾಗಿದೆ. ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರಂಭಿಕ ಮಾಹಿತಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿರುವುದನ್ನು ಕಾಣಬಹುದು. “ನೀವು ಈ ರಾತ್ರಿ ಜೈಲಿನಲ್ಲಿ ಕಳೆಯಬೇಕಾಗುತ್ತದೆ. ನನ್ನ ಮೂಗಿನಿಂದ ರಕ್ತ ಸುರಿಯುತ್ತಿದೆ” ಎಂದು ಸಂತ್ರಸ್ತರಲ್ಲಿ ಒಬ್ಬರು ಹೇಳುವುದನ್ನು ಕೇಳಬಹುದು.

ವಿಡಿಯೊಗಳನ್ನು ರೆಕಾರ್ಡ್ ಮಾಡಬೇಡಿ ಎಂದು ರವೀನಾ ನೆರದವರಲ್ಲಿ ವಿನಂತಿಸಿದ್ದಾರೆ. “ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ” ಎಂದು ರವೀನಾ ಮೊರೆ ಇಡುತ್ತಿರುವುದು ವಿಡಿಯೊದಲ್ಲಿ ಕೇಳಬಹುದು.

ನಂತರ ಮಹಮ್ಮದ್ ಎನ್ನುವ ವ್ಯಕ್ತಿ ಈ ಘಟನೆಯನ್ನು ವಿವರಿಸಿದ್ದಾರೆ. ಇಡೀ ಘಟನೆಯನ್ನು ವಿಡಿಯೊ ಮೂಲಕ ತಿಳಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿದ ವ್ಯಕ್ತಿ ʻʻತನ್ನ ತಾಯಿ, ತಂಗಿ ಹಾಗೂ ಸೊಸೆ ರಿಜ್ವಿ ಕಾಲೆಜು ಬಳಿಯಲ್ಲಿ ಹೋಗುತ್ತಿರುವಾಗ ರವೀನಾ ಅವರ ಡ್ರೈವರ್ ತನ್ನ ತಾಯಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದಿದ್ದಾರೆ.

ಇದನ್ನೂ ಓದಿ: Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

ʻʻಚಾಲಕ ನನ್ನ ಸೊಸೆ ಮತ್ತು ನನ್ನ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ನಂತರ ರವೀನಾ ಕೂಡ ಮದ್ಯದ ಅಮಲಿನಲ್ಲಿ ಹೊರಬಂದು ನನ್ನ ತಾಯಿಗೆ ಹೊಡೆದಿದ್ದರಿಂದ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ನಾಲ್ಕು ಗಂಟೆಗಳ ಕಾಲ ಖಾರ್ ಪೊಲೀಸ್ ಠಾಣೆಯಲ್ಲಿ ಕಾಯುತ್ತಿದ್ದರೂ ಅವರ ದೂರನ್ನು ಸ್ವೀಕರಿಸುತ್ತಿಲ್ಲ . ರವೀನಾ ಪೊಲೀಸ್ ಠಾಣೆಯಲ್ಲಿ ಕೇಸ್‌ವನ್ನು ಇತ್ಯರ್ಥಪಡಿಸುವಂತೆ ನಮ್ಮಲ್ಲಿ ಮನವಿ ಮಾಡಿದರು. ಆದರೆ ನಾವು ಏಕೆ ಇತ್ಯರ್ಥಗೊಳಿಸಬೇಕು? ನನ್ನ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ. ಘಟನೆ ಕುರಿತು ರವೀನಾ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

Continue Reading

ಬಾಲಿವುಡ್

Deepika Padukone: ಫ್ಯಾಮಿಲಿ ಜತೆ ಜಾಲಿ ಮಾಡುತ್ತಿರುವ ಪ್ರೆಗ್ನೆಂಟ್‌ ದೀಪಿಕಾ ಪಡುಕೋಣೆ

Deepika Padukone: ಶುಕ್ರವಾರವೂ ದೀಪಿಕಾ ಕುಟುಂಬದ ಜತೆ ಡಿನ್ನರ್‌ ಪಾರ್ಟಿಯಲ್ಲಿ ಕಂಡಿದ್ದರು. ತನ್ನ ತಾಯಿಯೊಂದಿಗೆ ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿರುವುದು ಕಂಡುಬಂದಿತ್ತು ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.

VISTARANEWS.COM


on

Deepika Padukone clicks selfies with fans dinner outing with family
Koo

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ದೀಪಿಕಾ ಪಡುಕೋಣೆ (Deepika Padukone) ಮಗುವಿಗೆ ಜನ್ಮ ನೀಡಲಿದ್ದಾರೆ. ಸದ್ಯ ನಟಿ ಆಗಾಗ ಕುಟುಂಬದ ಜತೆ ಡಿನ್ನರ್‌ ಪಾರ್ಟಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ತಾಯಿ ಉಜ್ಜಲಾ ಪಡುಕೋಣೆ ಮತ್ತು ಮುಂಬೈನಲ್ಲಿರುವ ಅವರ ಸಂಬಂಧಿಕರೊಂದಿಗೆ ಸತತ ಎರಡನೇ ಬಾರಿಗೆ ಡಿನ್ನರ್ ಡೇಟ್‌ನಲ್ಲಿ ಭಾಗಿಯಾಗಿದ್ದಾರೆ. ಇದಕ್ಕೂ ಮುಂಚೆ ನಟಿ ಕುಟುಂಬದ ಜತೆ ಕಾಣಿಸಿಕೊಂಡಿದ್ದರು.

ನಟಿಯ ಹಲವು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಶನಿವಾರ ರಾತ್ರಿಯೂ ಸಹ ದೀಪಿಕಾ ತನ್ನ ಕುಟುಂಬದೊಂದಿಗೆ ರೆಸ್ಟೋರೆಂಟ್‌ನಿಂದ ಹೊರಬರುತ್ತಿರುವುದು ಕಂಡುಬಂದಿತ್ತು. ಹೂವಿನ ಪ್ರಿಂಟೆಡ್‌ ಟಾಪ್, ಡೆನಿಮ್ಸ್ ಮತ್ತು ಬಿಳಿ ಸ್ನೀಕರ್ಸ್‌ನಲ್ಲಿ ನಟಿ ಕಾಣಿಸಿಕೊಂಡರು.

ದೀಪಿಕಾ ತನ್ನ ಕಾರಿನೊಳಗೆ ಹಗುವ ಮೊದಲು ಕ್ಯೂಟ್‌ ಸ್ಲೈಲ್‌ ಕೊಟ್ಟಿದ್ದಾರೆ. ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನಟಿ ಸುಂದರವಾಗಿ ಕಾಣುತ್ತಿದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು, “ನೀವು ಪ್ರತಿ ದಿನವೂ ಹೆಚ್ಚು ಗ್ಲೋ ಆಗಿ ಕಾಣುತ್ತೀರಿʼʼಎಂದು ಕಮೆಂಟ್‌ ಮಾಡಿದ್ದಾರೆ. ಶುಕ್ರವಾರವೂ ದೀಪಿಕಾ ಕುಟುಂಬದ ಜತೆ ಡಿನ್ನರ್‌ ಪಾರ್ಟಿಯಲ್ಲಿ ಕಂಡಿದ್ದರು. ತನ್ನ ತಾಯಿಯೊಂದಿಗೆ ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿರುವುದು ಕಂಡುಬಂದಿತ್ತು ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.

ಇದನ್ನೂ ಓದಿ: Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

ಸಿನಿಮಾ ವಿಚಾರಕ್ಕೆ ಬಂದರೆ ದೀಪಿಕಾ ಅವರು ರೋಹಿತ್ ಶೆಟ್ಟಿ ಅವರ ʻಸಿಂಗಮ್ ಅಗೇನ್‌ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಜಯ್ ದೇವಗನ್, ಕರೀನಾ ಕಪೂರ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಅರ್ಜುನ್ ಕಪೂರ್ ಜೊತೆಗೆ ಲೇಡಿ ಸಿಂಗಮ್ ಪಾತ್ರಕ್ಕೆ ದೀಪಿಕಾ ಹೆಜ್ಜೆ ಹಾಕಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್ ಮತ್ತು ದಿಶಾ ಪಟಾನಿ ಅಭಿನಯದ ಕಲ್ಕಿ 2898 AD ಸಿನಿಮಾದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ಅಮಿತಾಭ್‌ ಬಚ್ಚನ್ ಅವರೊಂದಿಗೆ ʻದಿ ಇಂಟರ್ನ್ʼ ಸಿನಿಮಾ ಕೂಡ ಹೊಂದಿದ್ದಾರೆ.

Continue Reading

ಬಾಲಿವುಡ್

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Shah Rukh Khan : ಆರ್ಯನ್ ಮತ್ತು ಸುಹಾನಾ ವಿಮಾನ ನಿಲ್ದಾಣದಲ್ಲಿ ಒಂದೇ ಕಾರಿನಲ್ಲಿ ಬಂದಿರುವುದು ಕಂಡುಬಂದಿತ್ತು. ಅವರೊಂದಿಗೆ ಗೌರಿ ಖಾನ್, ಪೂಜಾ ಮತ್ತು ಅವರ ಇಡೀ ತಂಡವಿತ್ತು. ನಟ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕ್ರೂಸ್ ಪಾರ್ಟಿಗೆ ಹೋಗುತ್ತಿದ್ದಾರೆ ಎನ್ನಲಾಗಿತ್ತು. ಆದರೀಗ ಸಿನಿಮಾ ಶೂಟಿಂಗ್‌ಗೆ ಹೋಗಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Shah Rukh Khan shooting for King in Spain
Koo

ಬೆಂಗಳೂರು: ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ಶಾರುಖ್‌ (Shah Rukh Khan) ಹಾಗೂ ಮಗಳು ಸುಹಾನಾ ಖಾನ್ ಅಭಿನಯಿಸುತ್ತಿದ್ದಾರೆ. 2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ. ಇದೀಗ ಶಾರುಖ್‌ ಸ್ಪೇನ್‌ನಲ್ಲಿ ಚಿತ್ರದ ಚಿತ್ರೀಕರಣದಲ್ಲಿದ್ದಾರೆ ಎಂದು ವರದಿಯಾಗಿದೆ. ಜತೆಗೆ ಶೂಟ್‌ ಮಾಡುತ್ತಿರುವ ದೃಶ್ಯವೊಂದು ಲೀಕ್‌ ಕೂಡ ಆಗಿದೆ. ಈ ಪೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಚಿತ್ರದಲ್ಲಿ, ಶಾರುಖ್ ಗುಂಪಿನಲ್ಲಿ ಸಂಭಾಷಣೆಯಲ್ಲಿ ಮುಳುಗಿರುವುದನ್ನು ಕಾಣಬಹುದು. ಲೀಕ್‌ ಆದ ಫೋಟೊದಲ್ಲಿ ನೀಲಿ ಸೂಟ್ ಧರಿಸಿ ಕಾಣಿಸಿಕೊಂಡಿದ್ದಾರೆ. ಆದರೆ ಚಿತ್ರತಂಡ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಕಳೆದ ವಾರ ಸುಹಾನಾ ಜತೆ ಶಾರುಖ್ ಮುಂಬೈನಿಂದ ತೆರಳಿದ್ದು ಕುತೂಹಲ ಮೂಡಿಸಿತ್ತು. ಮೇ 30 ರಂದು, ಶಾರುಖ್ ಐಪಿಎಲ್ ಟ್ರೋಫಿಯನ್ನು ಗೆದ್ದ ನಂತರ ಮಗಳ ಜತೆ ಮುಂಬೈನ ಕಲಿನಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು.

ಆರ್ಯನ್ ಮತ್ತು ಸುಹಾನಾ ವಿಮಾನ ನಿಲ್ದಾಣದಲ್ಲಿ ಒಂದೇ ಕಾರಿನಲ್ಲಿ ಬಂದಿರುವುದು ಕಂಡುಬಂದಿತ್ತು. ಅವರೊಂದಿಗೆ ಗೌರಿ ಖಾನ್, ಪೂಜಾ ಮತ್ತು ಅವರ ಇಡೀ ತಂಡವಿತ್ತು. ನಟ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕ್ರೂಸ್ ಪಾರ್ಟಿಗೆ ಹೋಗುತ್ತಿದ್ದಾರೆ ಎನ್ನಲಾಗಿತ್ತು. ಆದರೀಗ ಸಿನಿಮಾ ಶೂಟಿಂಗ್‌ಗೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.

ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading
Advertisement
Assembly election 2024
ದೇಶ11 mins ago

Assembly Election Results 2024: ಅಸ್ಸಾಂ ಬಿಜೆಪಿಗೆ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

MLC Election
ಕರ್ನಾಟಕ35 mins ago

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Actor Dhanush unveils new poster from Ilaiyaraaja biopic
ಕಾಲಿವುಡ್56 mins ago

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Murder Case
ಚಾಮರಾಜನಗರ57 mins ago

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Venkatesh Iyer Marriage
ಕ್ರೀಡೆ1 hour ago

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

West Bengal
ದೇಶ1 hour ago

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Electric shock Electronic City
ಬೆಂಗಳೂರು ಗ್ರಾಮಾಂತರ1 hour ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ2 hours ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್2 hours ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್2 hours ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು22 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌