Gerbera Flower's | 1 ಎಕರೆಯಿಂದ ಪ್ರತಿ ವರ್ಷಕ್ಕೆ 12 ಲಕ್ಷ ಲಾಭ! - Vistara News

ಕೃಷಿ

Gerbera Flower’s | 1 ಎಕರೆಯಿಂದ ಪ್ರತಿ ವರ್ಷಕ್ಕೆ 12 ಲಕ್ಷ ಲಾಭ!

VISTARANEWS.COM


on

Gerbera Flowers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೃಷಿ

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

Arecanut Price: ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ!!ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹.55,000 ಗಡಿ ಸಮೀಪ ಬಂದಿದೆ.
ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

VISTARANEWS.COM


on

Arecanut Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಬೆಂಗಳೂರು: ಜುಲೈ ಕೊನೆಯಲ್ಲಿ ಬಯಲು ಸೀಮೆಯ ಅಡಿಕೆ ಬರಲು ಪ್ರಾರಂಭವಾಗುವ ಕಾಲ. ಆಗಸ್ಟ್‌ನಿಂದ ಸಹಜವಾಗಿ ಅಡಿಕೆ ಪ್ರಮಾಣ ಮಾರುಕಟ್ಟೆಗೆ ಬರುವುದು ಹೆಚ್ಚುವುದರಿಂದ ಅಡಿಕೆ ಧಾರಣೆ ಇಳಿಯಲು ಪ್ರಾರಂಭವಾಗುತ್ತದೆ. ಕಳೆದ ವರ್ಷ ಜುಲೈ‌ನಲ್ಲಿ ₹ 55,000 ದಾಟಿದ ಅಡಿಕೆ ದರ, ಸೆಪ್ಟೆಂಬರ್‌ನಲ್ಲಿ ₹.50,000 ಕ್ಕಿಂತ ಕೆಳಕ್ಕೆ ಬರಲು ಪ್ರಾರಂಭವಾಯಿತು. ಇಳಿದ ಅಡಿಕೆ ಧಾರಣೆ ₹ 47,000 ದಲ್ಲಿ ಕೆಲಕಾಲ ಸ್ಥಿರತೆಯಲ್ಲಿ ಉಳಿದಿತ್ತು. ಈ ವರ್ಷ ಮೇ ತಿಂಗಳ ಪ್ರಾರಂಭದಲ್ಲಿ ₹ 55,000 ದ ಸಮೀಪಕ್ಕೆ ಏರಿ ಬಂದ ರಾಶಿ ಇಡಿ ಅಡಿಕೆ ಧಾರಣೆ ಮತ್ತೆ ಇಳಿಯುವುದಕ್ಕೆ ಶುರವಾಗಿತ್ತು (Arecanut Price).

ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ! ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹ 55,000 ಗಡಿ ಸಮೀಪ ಬಂದಿದೆ.

ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

ಅಡಿಕೆ ಧಾರಣೆಯ ವಿಚಾರದಲ್ಲಿ ಇರುವ ‘ನಂಬಿಕೆ’ಗಳು

ಅಡಿಕೆ ಧಾರಣೆಯ ಏರಿಕೆಯ ವಿಚಾರದಲ್ಲಿ ಮಲೆನಾಡಿನಲ್ಲಿ ಕೆಲವು ನಂಬಿಕೆಗಳು ಇವೆ. ವೈಜ್ಞಾನಿಕ ವಿಶ್ಲೇಷಣೆಗೆ ಹೊರತಾಗಿದ್ದರೂ, ನಂಬಿಕೆಗಳನ್ನು ಇಟ್ಟುಕೊಂಡೇ ಅನೇಕ ಅಡಿಕೆ ಬೆಳೆಗಾರರು ಇಂದಿಗೂ ವ್ಯವಹಾರ ನೆಡೆಸುತ್ತಾರೆ.
‘ವರ್ಷದ ಯಾವುದೇ ತಿಂಗಳಲ್ಲಿ ಮಂಗಳವಾರ ಅಮವಾಸ್ಯೆ ಬಂದರೆ ಆ ವರ್ಷ ಅಡಿಕೆಗೆ ಅತ್ಯಧಿಕ ಬೆಲೆ’, ‘ಶ್ರಾವಣ ಮಾಸದಲ್ಲಿ ಅಡಿಕೆಗೆ ರೇಟಾಗುವುದು’, ‘ಮುತ್ತುಗದ ಮರದ ನೆತ್ತಿಯಲ್ಲಿ ಮಾತ್ರ ಹೂವಾದರೆ ಅಡಿಕೆ ದರ ಎತ್ತರಕ್ಕೇರುತ್ತದೆ’ ಕಾಡು ಕೋಳಿ ಕಾಡಂಚಿಗೆ ಬಂದು ಕೂಗಿದರೆ. ಅದು ಅಡಿಕ ದರ ಏರುವಿಕೆಯ ಸೂಚನೆಯಂತೆ! ಪಂಚಾಂಗದ ಪ್ರಕಾರ ‘ಕುಜ’ ರಾಜನಾದಾಗ ಅಡಿಕೆ ದರ ನಿರೀಕ್ಷೆ ಮಟ್ಟವನ್ನು ಮೀರಿ ಏರುತ್ತದೆ… ಇತ್ಯಾದಿ ಹತ್ತಾರು ನಂಬಿಕೆಗಳು ಮಲೆನಾಡಿನ ಅಡಿಕೆ ಬೆಳೆಗಾರರಲ್ಲಿವೆ. ಅಡಿಕೆ ಧಾರಣೆಯ ವಿಷಯ ಚರ್ಚೆಗೆ ಬಂದಾಗ ಇಂತಹ ನಂಬಿಕೆಗಳು ಗಾದೆ ಮಾತಿನಂತೆ ಹೊರಗೆ ಬರುತ್ತವೆ.

ಈ ನಂಬಿಕೆಗಳಿಗೆ ಪೂರಕವಾಗಿ ಎಂಬಂತೆ ಹತ್ತು ವರ್ಷಗಳ ಹಿಂದೆ ಅಡಿಕೆ ಧಾರಣೆ ಲಕ್ಷ ರೂ. ದಾಟಿದಾಗ ಪಂಚಾಂಗದ ಪ್ರಕಾರ ಕುಜ ರಾಜನಾಗಿದ್ದನಂತೆ! ಈ ವರ್ಷವೂ ಕುಜನೇ ಅಧಿಪತಿಯಂತೆ. ಅನಿರೀಕ್ಷಿತ ಅಡಿಕೆ ಧಾರಣೆ ಈ ವರ್ಷವೂ ಏರಲಿದೆ ಅನ್ನುವುದು ಜ್ಯೋತಿಷ್ಯ ನಂಬಿಕೆಯ ಅಭಿಪ್ರಾಯ. ಈ ನಂಬಿಕೆಗೆ ಬೇಷರತ್ ಬೆಂಬಲದಂತೆ ಈ ವರ್ಷ ಅನೇಕ ಕಡೆ ಮುತ್ತುಗದ ಮರದ ನೆತ್ತಿಯಲ್ಲಿ ಹೋವು ಅರಳಿತ್ತಂತೆ.

ಏರುಮುಖ ನಿರೀಕ್ಷೆ

ಎಲೆಕ್ಷನ್ ಮುಗಿದ ಮೇಲೆ ಅಡಿಕೆ ವ್ಯವಹಾರದಲ್ಲಿ ದರ ಏರುಮುಖ ಕಾಣಲಿದೆ ಎನ್ನುವುದಕ್ಕೆ ಪೂರಕವಾಗಿ, ಚುನಾವಣೆಯ ಪಲಿತಾಂಶದ ಹಿಂದಿನೆರಡು ದಿನಗಳಲ್ಲಿ ಅಡಿಕೆ ಏರಿಕೆಯ ಗ್ರಾಫ್‌ನ ಬಾಣ! ಕುಜ ಅಡಿಕೆಯ ದರ ಎತ್ತಲಿದ್ದಾನಾ? ಮುತ್ತುಗದ ಹೂವಿನ ಸೂಚನೆ ನಿಜವಾ? ನಂಬಿಕೆಗಳು ಕೆಲಸ ಮಾಡುತ್ತವಾ? ಚುನಾವಣೆಯ ನಂತರ ಅಡಿಕೆಗೆ ಬೇಡಿಕೆ ಹೆಚ್ಚಲಿದೆಯಾ? ಅಡಿಕೆ ಧಾರಣೆಯಲ್ಲಿ ರೈತರ ನಂಬಿಕೆಗಳ ಮತ್ತು ಅಭಿಪ್ರಾಯಗಳ ಎಕ್ಸಿಟ್ ಪೋಲ್ ನಿಜ ಆಗಲಿದೆಯಾ? ಕಾದು ನೋಡೋಣ.

ಇದನ್ನೂ ಓದಿ: Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Continue Reading

ವಿಜಯನಗರ

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Vijayanagara News: ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದು, ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ವ್ಯಾಪಾರಸ್ಥರು ಮಾರಾಟ ಮಾಡಬೇಕು. ಲಾಭದ ಆಸೆಗಾಗಿ ಕಳಪೆ ಗುಣಮಟ್ಟದ ಬೀಜ-ಗೊಬ್ಬರ ಮಾರಾಟ ಮಾಡಿದರೆ ಅಥವಾ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್‌ ಅಮರೇಶ್ ಜಿ.ಕೆ. ತಿಳಿಸಿದ್ದಾರೆ.

VISTARANEWS.COM


on

Vijayanagara News Distribute good quality sowing seeds and fertilizers says Tehsildar Amaresh G K
Koo

ಕೊಟ್ಟೂರು: ಈ ಬಾರಿ ಪೂರ್ವ ಮುಂಗಾರು ಉತ್ತಮ ಮಳೆಯಾಗುತ್ತಿದ್ದು, ಕಳೆದ ಬಾರಿಯ ರೈತರ ನೋವನ್ನು ಮರೆಸಿ ಸ್ವಲ್ಪ ಸಂತಸವನ್ನು ತಂದಿದೆ. ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದು, ಅವರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ವ್ಯಾಪಾರಸ್ಥರು ಮಾರಾಟ ಮಾಡಬೇಕು ಎಂದು ತಹಸೀಲ್ದಾರ್‌ ಅಮರೇಶ್ ಜಿ.ಕೆ. (Vijayanagara News) ಸೂಚಿಸಿದರು.

ಪಟ್ಟಣದ ತಾಲೂಕ ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಬುಧವಾರ ನಡೆದ ಬೀಜ/ಗೊಬ್ಬರ ಮಾರಾಟಗಾರರ ಮತ್ತು ರೈತರ ಸಭೆಯಲ್ಲಿ ಅವರು ಮಾತನಾಡಿದರು.

ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದು, ಅವರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ವ್ಯಾಪಾರಸ್ಥರು ಮಾರಾಟ ಮಾಡಬೇಕು. ಲಾಭದ ಆಸೆಗಾಗಿ ಕಳಪೆ ಗುಣಮಟ್ಟದ ಬೀಜ-ಗೊಬ್ಬರ ಮಾರಾಟ ಮಾಡಿದರೆ ಅಥವಾ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ

ವ್ಯಾಪಾರಸ್ಥರು ತಾವು ಸಂಗ್ರಹ ಮಾಡಿರುವ ಗೋದಾಮಿನ ಮುಂದೆ ತಮ್ಮ ಅಂಗಡಿಯ ಮಾಹಿತಿ ಫಲಕವನ್ನು ಹಾಕಬೇಕು. ಅಂಗಡಿಯಲ್ಲಿ ಪ್ರತಿದಿನ ಬೀಜ ಗೊಬ್ಬರದ ದಾಸ್ತಾನು ಹಾಗೂ ಧರಪಟ್ಟಿಯನ್ನು ಕಡ್ಡಾಯವಾಗಿ ಹಾಕಿರಬೇಕು. ಯಾರಾದರೂ ಗೊಬ್ಬರ ಬೀಜಗಳನ್ನು ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಪ್ರಯತ್ನ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು. ನಿಗದಿತ ಬೆಲೆಯಲ್ಲಿ ಬೀಜ/ರಸಗೊಬ್ಬರಗಳನ್ನು ಪೂರೈಸಿ ತಾಲೂಕಿನಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ವ್ಯಾಪಾರವನ್ನು ಮಾಡುವಂತೆ ಸಲಹೆ ನೀಡಿದರು.

ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸುನಿಲ್ ಕುಮಾರ್ ಎಂ.ಟಿ. ಮಾತನಾಡಿ, ಡಿಎಪಿ ಮತ್ತು ಯೂರಿಯಾ ಸಹಿತ ಎಲ್ಲ ರಸಗೊಬ್ಬರಗಳು ಸಾಕಷ್ಟು ಪೂರೈಕೆ ಇದ್ದು, ಯಾವುದೇ ಒಂದು ಕಂಪನಿ/ವಿಧದ ಬೀಜ/ರಸಗೊಬ್ಬರಗಳ ಮೇಲೆ ಅವಲಂಬನೆಯಾಗದೇ ಪರ್ಯಾಯ ಬೀಜ/ರಸಗೊಬ್ಬರಗಳನ್ನು ಬಳಸುವಂತೆ ಸಲಹೆ ನೀಡಿದರು.

ಸಿಪಿಐ ವೆಂಕಟಸ್ವಾಮಿ ಮಾತನಾಡಿದರು.

ಇದನ್ನೂ ಒದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಎಎಚ್ಒ ಅಶ್ವಿನಿ ಡಿ., ಕೃಷಿ ಅಧಿಕಾರಿ (ತಾಂತ್ರಿಕ) ನೀಲಾನಾಯ್ಕ, ಕುಮಾರಸ್ವಾಮಿ ಕೆ., ಬೀಜ ಗೊಬ್ಬರ ವ್ಯಾಪಾರಿಗಳ ಸಂಘದ ತಾಲೂಕು ಅಧ್ಯಕ್ಷ ಶ್ರೀಧರಶೆಟ್ಟಿ, ರೈತ ಮುಖಂಡರಾದ ರಾಮಪ್ಪ, ಶ್ರೀಧರ, ಜಯಪ್ರಕಾಶನಾಯ್ಕ, ಸುರೇಶನಾಯ್ಕ ಹಾಗೂ ಇತರರು ಉಪಸ್ಥಿತರಿದ್ದರು. ಸಿ.ಮ. ಗುರುಬಸವರಾಜ ನಿರ್ವಹಿಸಿದರು.

Continue Reading

ಪ್ರಮುಖ ಸುದ್ದಿ

Raitha Siri Yojana: ಸಿರಿ ಧಾನ್ಯ ಬೆಳೆಯುವವರಿಗೆ ಸಿಹಿ ಸುದ್ದಿ; ನಿಮ್ಮ ಖಾತೆಗೇ ಬರುತ್ತೆ 10 ಸಾವಿರ ರೂ.

ರೈತ ಸಿರಿ ಯೋಜನೆ (Raitha Siri Yojana) ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ.

VISTARANEWS.COM


on

Raitha Siri Yojana
Koo

ಬೆಂಗಳೂರು: ಸಿರಿಧಾನ್ಯ (millet, Siridhanya) ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು (small land) ಹೊಂದಿರುವ ರೈತರಿಗೆ (farmers) ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ (Raitha Siri Yojana) ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು (seeds) ಮತ್ತು ರಸಗೊಬ್ಬರ (manure) ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ.

ಈ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ:

  • ಅರ್ಜಿದಾರರು ಕರ್ನಾಟಕದ ಕಾಯಂ ನಾಗರಿಕರಾಗಿರಬೇಕು
  • ಅರ್ಜಿದಾರರು ವೃತ್ತಿಯಲ್ಲಿ ರೈತರಾಗಿರಬೇಕು
  • ರೈತ ಪ್ರಾಥಮಿಕವಾಗಿ ರಾಗಿ ಉತ್ಪಾದಕನಾಗಿರಬೇಕು
  • ಈ ಯೋಜನೆಗೆ ಅರ್ಹತೆ ಪಡೆಯಲು ಕನಿಷ್ಠ ಒಂದು ಹೆಕ್ಟೇರ್ ಕೃಷಿ ಆಸ್ತಿ ಅಗತ್ಯವಿದೆ

ಕರ್ನಾಟಕ ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ:

  • ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
  • ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆಗಳು
  • ಶಾಶ್ವತ ನಿವಾಸಿ ಪ್ರಮಾಣಪತ್ರ
  • ವಿಳಾಸ ಪುರಾವೆ
  • ಪಡಿತರ ಚೀಟಿ
  • ಬ್ಯಾಂಕ್ ಖಾತೆ ವಿವರಗಳು
  • ಮೊಬೈಲ್ ನಂಬರ್
  • ಭೂ ದಾಖಲೆ ವಿವರಗಳು
  • ಪಾಸ್‌ಪೋರ್ಟ್ ಗಾತ್ರದ ಫೋಟೋಗಳು

ರೈತ ಸಿರಿ ಯೋಜನೆಯ ಉದ್ದೇಶ:

  • ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವುದು
  • ಕೃಷಿ ಕ್ಷೇತ್ರವನ್ನು ಉತ್ತೇಜಿಸುವುದು
  • ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುವುದು
  • ರಾಗಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂ ನೆರವು
  • ರಾಜ್ಯದ ಒಣಭೂಮಿಯಲ್ಲಿ ನೀರನ್ನು ಪುನಃಸ್ಥಾಪಿಸಲು ಕೃಷಿ ಹೊಂಡಗಳನ್ನು ನಿರ್ಮಿಸುವುದು

ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ

ಇದನ್ನೂ ಓದಿ: Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Continue Reading

ಕೃಷಿ

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM Kisan Samman) ನಿಧಿ ಯೋಜನೆಯ ೧೭ನೇ ಕಂತಿನ ಹಣ ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಅನಂತರ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಿಸಾನ್ ಸಮ್ಮಾನ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಸ್ಥಿತಿಗತಿಯನ್ನು ಒಮ್ಮೆ ಪರಿಶೀಲಿಸಿ. ಜನಸಾಮಾನ್ಯರಿಗೆ ಈ ಕುರಿತ ಸರಳ ಮಾಹಿತಿ ಇಲ್ಲಿದೆ.

VISTARANEWS.COM


on

By

PM Kisan Samman
Koo

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman) ಯೋಜನೆಯ 17ನೇ ಕಂತಿಗಾಗಿ (17th installment) ಫಲಾನುಭವಿ ರೈತರು (beneficiary farmers) ಕಾಯುತ್ತಿದ್ದು ಶೀಘ್ರದಲ್ಲೇ ಇದು ಬಿಡುಗಡೆಯಾಗಲಿದೆ. ಜೂನ್ 4ರಂದು (june) ನಡೆಯುವ ಲೋಕಸಭೆ ಚುನಾವಣೆಯ (loksabha election) ಫಲಿತಾಂಶ ಪ್ರಕಟವಾದ ಅನಂತರ ಇದು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನು 2024ರ ಫೆಬ್ರವರಿ 28ರಂದು ಮಹಾರಾಷ್ಟ್ರದ ಯವತ್ಮಾಲ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿಗೂ ಹೆಚ್ಚು ರೈತರಿಗೆ 21,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದರು. 15 ನೇ ಕಂತಿನ ಹಣ ಕಳೆದ ನವೆಂಬರ್ ನಲ್ಲಿ ಬಿಡುಗಡೆಯಾಗಿತ್ತು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ಏಪ್ರಿಲ್- ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್- ಮಾರ್ಚ್ ನಲ್ಲಿ ನೀಡಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ಯೋಜನೆಯನ್ನು 2019 ರ ಮಧ್ಯಂತರ ಬಜೆಟ್‌ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಿಸಿದರು. ಕಂತುಗಳನ್ನು ಸ್ವೀಕರಿಸಲು ರೈತರು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕು. ಯೋಜನೆಯ ಅಧಿಕೃತ ವೆಬ್‌ಸೈಟ್ ಪ್ರಕಾರ,ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಒಟಿಪಿ -ಆಧಾರಿತಇ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಗಾಗಿ ಹತ್ತಿರದ ಸಿಎಸ್ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು.


ಪರಿಶೀಲನೆ ಹೇಗೆ?

ನೋಂದಾಯಿಸಿರುವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲು ಅಧಿಕೃತ ವೆಬ್‌ಸೈಟ್‌ pmkisan.gov.in ಗೆ ಭೇಟಿ ನೀಡಿ. ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ‘ಡೇಟಾ ಪಡೆಯಿರಿ’ ಎಂಬ ಆಯ್ಕೆಯನ್ನು ಆರಿಸಿ. ಬಳಿಕ ಫಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಬರುತ್ತದೆ.

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಪರಿಶೀಲನೆ

ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ ‘ಫಲಾನುಭವಿಗಳ ಪಟ್ಟಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್‌ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ.ದ ಮೇಲೆ ‘ಗೆಟ್ ರಿಪೋರ್ಟ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಇದರ ಅನಂತರ, ಫಲಾನುಭವಿಗಳ ಪಟ್ಟಿಯ ವಿವರವನ್ನು ಪ್ರದರ್ಶಿಸಲಾಗುತ್ತದೆ.

ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು. ಸಹಾಯವಾಣಿ ಸಂಖ್ಯೆ- 155261 ಮತ್ತು 011-24300606.

ಇದನ್ನೂ ಓದಿ: PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

ಅರ್ಜಿ ಸಲ್ಲಿಸುವುದು ಹೇಗೆ?

pmkisan.gov.in ವೆಬ್ ಸೈಟ್ ಗೆ ಭೇಟಿ ನೀಡಿ, ‘ಹೊಸ ರೈತ ನೋಂದಣಿ’ ಮೇಲೆ ಕ್ಲಿಕ್ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾವನ್ನು ಭರ್ತಿ ಮಾಡಿ. ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ‘ಹೌದು’ ಎಂದು ಕ್ಲಿಕ್ ಮಾಡಿ. ಪಿಎಂ ಕಿಸಾನ್ ಅರ್ಜಿ ನಮೂನೆ 2024 ರಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ. ಅದನ್ನು ಉಳಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

Continue Reading
Advertisement
murder case
ಮೈಸೂರು3 mins ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ4 mins ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ಚಿರತೆ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್9 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ18 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ19 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Physical Abuse
ಮೈಸೂರು38 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ43 mins ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ45 mins ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Niveditha Gowda Chandan Shetty Joint Pressmeet For The First Time
ಕಿರುತೆರೆ1 hour ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Narendra Modi 3.0
ಪ್ರಮುಖ ಸುದ್ದಿ1 hour ago

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌