Leaf Spot Disease | ಅಡಿಕೆ ಎಲೆ ಚುಕ್ಕಿ ರೋಗದ ಕುರಿತು ಇಸ್ರೇಲ್‌ ವಿಜ್ಞಾನಿಗಳ ಜತೆ ಚರ್ಚಿಸಲಿರುವ ಸಚಿವ ಮುನಿರತ್ನ - Vistara News

ಕೃಷಿ

Leaf Spot Disease | ಅಡಿಕೆ ಎಲೆ ಚುಕ್ಕಿ ರೋಗದ ಕುರಿತು ಇಸ್ರೇಲ್‌ ವಿಜ್ಞಾನಿಗಳ ಜತೆ ಚರ್ಚಿಸಲಿರುವ ಸಚಿವ ಮುನಿರತ್ನ

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಎಲೆ ಚುಕ್ಕಿ ರೋಗ (Leaf Spot Disease) ಪೀಡಿತ ವಿವಿಧ ಅಡಿಕೆ ತೋಟಗಳಿಗೆ ಭೇಟಿ ನೀಡಿದ ಸಚಿವರು ರೋಗ ಪೀಡಿತವಾಗಿರುವ ಅಡಿಕೆ ಸೋಗೆ ಮತ್ತು ಮರದ ಮಾದರಿಗಳನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

VISTARANEWS.COM


on

Leaf Spot Disease ಅಡಿಕೆ ತೋಟ ರೋಗ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಳ್ಯ : ಅಡಿಕೆ ತೋಟವನ್ನು ಕಾಡುತ್ತಿರುವ ಎಲೆ ಚುಕ್ಕಿ ರೋಗದ (Leaf Spot Disease) ಬಗ್ಗೆ ಕೇಂದ್ರ ಸರ್ಕಾರ ನೇಮಿಸಿದ ತಜ್ಞರ ತಂಡ ಅಧ್ಯಯನ ನಡೆಸುತ್ತಿರುವಾಗಲೇ ಈ ರೋಗದ ಕುರಿತು ಇಸ್ರೇಲಿನ ವಿಜ್ಞಾನಿಗಳೊಂದಿಗೆ ಚರ್ಚಿಸಲು ರಾಜ್ಯ ತೋಟಗಾರಿಕಾ ಸಚಿವ ಮುನಿರತ್ನ ನಿರ್ಧರಿಸಿದ್ದಾರೆ.

ಮುಂದಿನ ತಿಂಗಳು ಇಸ್ರೇಲ್ ಪ್ರವಾಸ ಕೈಗೊಳ್ಳಲಿರುವ ಅವರು ಅಲ್ಲಿನ ವಿಜ್ಞಾನಿಗಳೊಂದಿಗೆ ಈ ರೋಗದ ಬಗ್ಗೆ ಚರ್ಚಿಸುತ್ತೇನೆ. ಇದಕ್ಕಾಗಿ ರೋಗ ಪೀಡಿತ ಅಡಿಕೆ ಸೋಗೆ, ಮರದ ಮಾದರಿಗಳನ್ನು ಸಂಗ್ರಹಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾನುವಾರ ಎಲೆಚುಕ್ಕಿ ರೋಗ ಬಾಧೆಯಿಂದ ಅಡಿಕೆ ತೋಟ ಸಂಪೂರ್ಣ ನಾಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ವಿವಿಧ ಅಡಿಕೆ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ನಂತರ ಸಚಿವರು ಈ ಸೂಚನೆ ನೀಡಿದ್ದಾರೆ.

ಬಂದರು, ಮೀನುಗಾರಿಕೆ ಹಾಗು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅವರ ಜೊತೆಯಲ್ಲಿ ಸಚಿವ ಮುನಿರತ್ನ ಅವರು ವಿವಿಧ ತೋಟಗಳಿಗೆ ಭೇಟಿ ನೀಡಿ ರೈತರ ಜೊತೆ ಸಮಾಲೋಚನೆ ನಡೆಸಿದರು. ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗ ವ್ಯಾಪಕವಾಗಿ ಹರಡಿ ತೋಟ ನಾಶವಾಗಿರುವ ಕೃಷ್ಣ ಕಿಶೋರ್ ಅಡಿಕೆಹಿತ್ಲು, ವೆಂಕಟ್ರಮಣ‌ ಅಂಗಡಿಮಜಲು, ವಿಶ್ವಾಸ್ ಹಾಗು ವಶಿಷ್ಠ ಮಾಪಲತೋಟ ಅವರ ತೋಟಗಳನ್ನು ಸಚಿವರಿಬ್ಬರು ವೀಕ್ಷಿಸಿದರು.
ಹಳದಿ ರೋಗ, ಚುಕ್ಕಿ ಎಲೆ ಬಾದಿಸಿದ ಅಡಿಕೆ ಮರದ‌ ಸೋಗೆ, ಅಡಿಕೆಗಳನ್ನು ಪರಿಶೀಲಿಸಿ ಕೃಷಿಕರಿಂದ‌ ಮಾಹಿತಿ ಪಡೆದರು.

Leaf Spot Disease
ಎಲೆ ಚುಕ್ಕಿ ರೋಗ

ಕಳೆದ ಹಲವು ವರ್ಷಗಳಿಂದ ಮರ್ಕಂಜ ಭಾಗದಲ್ಲಿ ಹಳದಿ ರೋಗ ಬಾದೆ, ಬೇರು ಹುಳ ಬಾದೆ ಇದೆ‌ ಕಾಣಿಸಿಕೊಂಡಿದೆ. ಇದೀಗ ಎಲೆ ಚುಕ್ಕಿ ರೋಗವು ವ್ಯಾಪಕವಾಗಿ‌ ಹಬ್ಬಿದೆ. ಹಳದಿ ಪೀಡಿತ ತೋಟಗಳಲ್ಲಿ ಎಲೆಚುಕ್ಕಿ ವೇಗವಾಗಿ ಹರಡುತ್ತಿದೆ. ಹಳದಿ ಎಲೆ ಪೀಡಿತ ತೋಟಗಳು ಕೆಲವು ವರ್ಷ ಫಸಲು ನೀಡುತ್ತವೆ. ಆದರೆ ಎಲೆ ಚುಕ್ಕಿ ಬಾದಿಸಿದ‌ ತೋಟಗಳು ಬಹಳ ಬೇಗ ನಾಶವಾಗುತ್ತಿದೆ ಎಂದು ಬೆಳೆಗಾರರು ಸಚಿವರಿಗೆ ವಿವರಿಸಿದರು.

ನಿರಂತರ ಸಂಶೋಧನೆ ನಡೆಸಿ‌ ಇದಕ್ಕೆ ಶಾಶ್ವತ ಪರಿಹಾರ ಹುಡುಕುವ ಕೆಲಸ ಸರಕಾರ‌ ಮಾಡುತ್ತದೆ ಎಂದು ಸಚಿವರು ಕೃಷಿಕರಿಗೆ‌ ಭರವಸೆ ನೀಡಿದರು. ಕೃಷಿಕರಿಗೆ ಹಳದಿ ರೋಗ ಹಾಗು ಎಲೆಚುಕ್ಕಿ ರೋಗದಿಂದ‌ ಬಹು ದೊಡ್ಡ ನಷ್ಟ ಆಗಿದೆ ಎಂದು ಸರಕಾರಕ್ಕೆ‌ ಮನವರಿಕೆ ಆಗಿದೆ. ಇದಕ್ಕೆ ಶಾಶ್ವತ ಪರಿಹಾರ ಹುಡುಕುತ್ತೇವೆ ಎಂದು ಅವರು ಹೇಳಿದರು.
ಬಿಜೆಪಿ ಮಂಡಲ‌ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರಾ ಗುಂಡಿ ಹಾಗು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಕದಿರೇ ಗೌಡ, ಮೈಸೂರು ವಿಭಾಗ ಜಂಟಿ ನಿರ್ದೇಶಕ ನಾಗರಾಜ್ ಎಂ, ಜಿಲ್ಲಾ ಉಪನಿರ್ದೇಶಕ ಹೆಚ್.ಆರ್.ನಾಯಕ್, ಮಂಗಳೂರು ತಾಲೂಕು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್.ಕೆ, ಸುಳ್ಯ ತಾಲೂಕು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ಸುಹಾನ ಮತ್ತಿತರರು ಪಿ.ಕೆ.ಉಪಸ್ಥಿತರಿದ್ದರು.

ಇದನ್ನೂ ಓದಿ | ಅಡಿಕೆ ಎಲೆ ಚುಕ್ಕಿ ರೋಗ | ಮಲೆನಾಡ ರೋಗ ಪೀಡಿತ ತೋಟಗಳಿಗೆ ಕೇಂದ್ರದ ತಜ್ಞರ ತಂಡ ಭೇಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

Good News For Farmers: ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಖಾರಿಫ್ ಬೆಳೆಗಳ ಬಿತ್ತನೆಗೆ ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ.

VISTARANEWS.COM


on

Good News For Farmers
Koo

ನವದೆಹಲಿ: ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ.

ಖಾರಿಫ್ ಬೆಳೆಗಳ ಬಿತ್ತನೆಗೆ (ವಿಶೇಷವಾಗಿ ಭತ್ತದಂತಹ ಹೆಚ್ಚಿನ ನೀರಿನ ಆವಶ್ಯಕತೆಯಿರುವ ಬೆಳೆ) ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಮಳೆಯ ಕೊರತೆಯು ಜೂನ್‌ನಲ್ಲಿ ಸುಮಾರು ಶೇ. 32.6ಕ್ಕೆ ತಲುಪಿದ್ದರಿಂದ ವಾಯುವ್ಯ ಭಾರತದಲ್ಲಿ ಕಳೆದ ತಿಂಗಳು ಶುಷ್ಕ ವಾತಾವರಣ ಕಂಡು ಬಂದಿತ್ತು. ಹೀಗಾಗಿ ಈ ಪ್ರದೇಶವು ತೀವ್ರವಾದ ಶಾಖದ ಅಲೆಗಳಿಂದ ಸುಟ್ಟು ಹೋಗಿತ್ತು. ಅಲ್ಲದೆ 123 ವರ್ಷಗಳಲ್ಲಿ ಅತ್ಯಂತ ಬೆಚ್ಚಗಿನ ಜೂನ್ ಎನಿಸಿಕೊಂಡಿತ್ತು. ಸರಾಸರಿ ಮಾಸಿಕ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 1.65 ಡಿಗ್ರಿ ಹೆಚ್ಚು ದಾಖಲಾಗಿತ್ತು.

ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಜತೆಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಬಹುದಾದಷ್ಟು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಹರಿಯಾಣ, ಉತ್ತರಾಖಂಡಕ್ಕೆ ಎಚ್ಚರಿಕೆ

ಐಎಂಡಿ ಡಿಜಿ ಡಾ.ಎಂ.ಮೊಹಾಪಾತ್ರ ಅವರ ಪ್ರಕಾರ ಜುಲೈನಲ್ಲಿ ಸುರಿಯುವ ಧಾರಾಕಾರ ಮಳೆಯು ಪಶ್ಚಿಮ ಹಿಮಾಲಯದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಬೆಟ್ಟದ ತಪ್ಪಲಿನ ರಾಜ್ಯಗಳಲ್ಲಿ ನದಿ ಪ್ರವಾಹಕ್ಕೆ ಕಾರಣವಾಗಬಹುದು.

“ಮುನ್ಸೂಚನೆಯ ಪ್ರಕಾರ ಭಾರೀ ಮಳೆಯಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಮಳೆಯಿಂದ ಭೂಕುಸಿತದಂತಹ ಅಪಾಯ ಎದುರಾಗುವ ಸಾಧ್ಯತೆ ಇದೆ. ಮಧ್ಯ ಭಾರತದ ಕೆಲವು ಭಾಗಗಳಲ್ಲಿ, ಗೋದಾವರಿ, ಮಹಾನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರು ಎಚ್ಚರಿಕೆ ವಹಿಸಬೇಕುʼʼ ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ಇದರ ಹೊರತಾಗಿ ಉತ್ತರ ಪ್ರದೇಶದ ಕೆಲವು ಭಾಗಗಳಾದ ಗೋರಖ್ಪುರ, ಬಿಹಾರದ ಪಶ್ಚಿಮ ಜಿಲ್ಲೆಗಳು, ಜಾರ್ಖಂಡ್, ಮುಂತಾದ ಕೆಲವು ಭಾಗಗಳು ಮತ್ತು ಲಡಾಖ್‌ನಲ್ಲಿಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಊಹಿಸಿದೆ.

ಜೂನ್‌ನಲ್ಲಿ ಮಳೆ ಕೊರತೆ

ಭಾರತವು ಜೂನ್‌ನಲ್ಲಿ ಸುಮಾರು ಶೇ. 10.9ರಷ್ಟು ಮಳೆ ಕೊರತೆಯನ್ನು ದಾಖಲಿಸಿದೆ. ವಾಯುವ್ಯ ಭಾರತದಲ್ಲಿ ಇದರ ಪ್ರಮಾಣ ಹೆಚ್ಚು (ಶೇ. 32.6). ಮಧ್ಯ ಭಾರತ, ಪೂರ್ವ ಮತ್ತು ಈಶಾನ್ಯ ಭಾರತ (ಸುಮಾರು ಶೇ. 13)ದಲ್ಲಿಯೂ ಮಳೆ ಕೊರತೆ ಕಂಡು ಬಂದಿದೆ. ಸದ್ಯ ನೈಋತ್ಯ ಮಾನ್ಸೂನ್ ವೇಗ ಪಡೆದುಕೊಂಡಿದ್ದು, ಮತ್ತು ಮುಂದಿನ ಎರಡು-ಮೂರು ದಿನಗಳಲ್ಲಿ ಭಾರತವನ್ನು ಆವರಿಸಲಿದೆ ಎಂದು ಐಎಂಡಿ ತಿಳಿಸಿದೆ.

ಮಳೆಯ ಕೊರತೆಯು ಕಳೆದ ಕೆಲವು ದಿನಗಳಲ್ಲಿ ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳಕ್ಕೆ ಮತ್ತು ತೀವ್ರವಾದ ಶಾಖದ ಅಲೆಗಳಿಗೆ ಕಾರಣವಾಗಿತ್ತು. ಹವಾಮಾನ ಇಲಾಖೆಯ ಪ್ರಕಾರ ಈ ಬೇಸಿಗೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಸುಮಾರು 20ರಿಂದ 38 ದಿನಗಳವರೆಗೆ ಉಷ್ಣಗಾಳಿ ಬೀಸಿದೆ.

ಇದನ್ನೂ ಓದಿ: Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Continue Reading

ಉತ್ತರ ಕನ್ನಡ

Uttara Kannada News: ಜಿಲ್ಲೆಯ ರೈತ ಕುಟುಂಬಗಳಿಗೆ 13.93 ಕೋಟಿ ರೂ. ಜೀವನೋಪಾಯ ಪರಿಹಾರ: ಡಿಸಿ

Uttara Kannada News: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ನೈಋತ್ಯ ಮುಂಗಾರಿನ ಹಂಗಾಮಿನಲ್ಲಿ ಮಳೆ ಕೊರತೆಯಿಂದ ತಲೆದೋರಿದ ಬರದಿಂದ, ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿರುವ ಹಾಗೂ ಮುಂಗಾರು ಬರದಿಂದ ಈಗಾಗಲೇ ಬೆಳೆಹಾನಿ ಪರಿಹಾರ ಪಡೆದಿರುವ ರೈತ ಕುಟುಂಬಗಳ ಪೈಕಿ ಮಳೆಯಾಶ್ರಿತ/ಒಣಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳೆಂದು ಗುರುತಿಸಲಾಗಿರುವ 48,487 ರೈತ ಕುಟುಂಬಗಳಿಗೆ ತಲಾ ಗರಿಷ್ಠ ರೂ.2874 ರಂತೆ ಜಿಲ್ಲೆಗೆ ಒಟ್ಟು 13.93 ಕೋಟಿ ರೂ ಜೀವನೋಪಾಯ ಪರಿಹಾರದ ನೆರವು ದೊರೆಯಲಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

A total of Rs 13.93 crore livelihood relief for the farmer families of the district says DC Gangubai Manakar
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ನೈಋತ್ಯ ಮುಂಗಾರಿನ ಹಂಗಾಮಿನಲ್ಲಿ ಮಳೆ ಕೊರತೆಯಿಂದ ತಲೆದೋರಿದ ಬರದಿಂದ, ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿರುವ ಹಾಗೂ ಮುಂಗಾರು ಬರದಿಂದ ಈಗಾಗಲೇ ಬೆಳೆ ಹಾನಿ ಪರಿಹಾರ ಪಡೆದಿರುವ ರೈತ ಕುಟುಂಬಗಳ ಪೈಕಿ ಮಳೆಯಾಶ್ರಿತ/ಒಣಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳೆಂದು ಗುರುತಿಸಲಾಗಿರುವ 48,487 ರೈತ ಕುಟುಂಬಗಳಿಗೆ ತಲಾ ಗರಿಷ್ಠ ರೂ.2874 ರಂತೆ ಜಿಲ್ಲೆಗೆ (Uttara Kannada News) ಒಟ್ಟು 13.93 ಕೋಟಿ ರೂ ಜೀವನೋಪಾಯ ಪರಿಹಾರದ ನೆರವು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಂಡಿರುವ ರೈತ ಕುಟುಂಬಗಳ ಪೈಕಿ, ಮಳೆಯಾಶ್ರಿತ/ಒಣಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳೆಂದು ಗುರುತಿಸಲಾಗಿರುವ ರೈತರಿಗೆ ಈ ಜೀವನೋಪಾಯ ಪರಿಹಾರದ ನೆರವು ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ, ಈ ಎಲ್ಲಾ ಅರ್ಹ ರೈತರ ಪಟ್ಟಿಯನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಸಲ್ಲಿಕೆಯಾಗಿರುವ ಈ ಎಲ್ಲಾ ರೈತರಿಗೆ ಶೀಘ್ರದಲ್ಲಿಯೇ ಪರಿಹಾರದ ಮೊತ್ತವು ಕೈ ಸೇರಲಿದ್ದು, ಮೊತ್ತವು ರೈತರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಆಗಲಿದೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ರಾಜ್ಯದಲ್ಲಿ ಬರದಿಂದಾಗಿ ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿದ್ದ ರಾಜ್ಯಾದ್ಯಂತ ಒಟ್ಟು 17,84,398 ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 280.52 ಕೋಟಿ ರೂ ಹಾಗೂ ರಾಷ್ಟ್ರೀಯ ವಿಪತ್ತು ನಿಧಿಯಿಂದ 234.40 ಕೋಟಿ ರೂ ಸೇರಿದಂತೆ ಒಟ್ಟು 512.92 ಕೋಟಿಗಳನ್ನು ಬಿಡುಗಡೆ ಮಾಡಲು ಈಗಾಗಲೇ ಆದೇಶಿಸಲಾಗಿದೆ.

ಈ ಪರಿಹಾರದ ಮೊತ್ತವನ್ನು ಅರ್ಹ ಮಳೆಯಾಶ್ರಿತ ಒಣಭೂಮಿ ಹೊಂದಿರುವ ಸಣ್ಣ ಹಾಗೂ ಅತೀ ಸಣ್ಣ ಹಾಗೂ ಕುಟುಂಬ ಐಡಿ ಹೊಂದಿರುವ ರೈತ ಕುಟುಂಬಗಳಿಗೆ ಮಾತ್ರ ಪಾವತಿಸಲಾಗುತ್ತಿದ್ದು, ಒಂದು ಕುಟುಂಬಕ್ಕೆ ಒಂದು ಬಾರಿ ಮಾತ್ರ ಪಾವತಿ ಮಾಡಲಾಗುವುದು. ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಅರ್ಹ ರೈತರಿದ್ದಲ್ಲಿ ಪರಿಹಾರದ ಮೊತ್ತವನ್ನು PRORATA ಆಧಾರದ ಮೇಲೆ ಪ್ರತಿಯೊಬ್ಬ ಅರ್ಹ ರೈತರಿಗೆ ನಿಯಮಾನುಸಾರ ಪಾವತಿಸಲಾಗುವುದು ಮತ್ತು ಜೀವನೋಪಾಯ ಪರಿಹಾರ ಭತ್ಯೆ ಪಾವತಿ ಕುರಿತ ಎಲ್ಲಾ ಫಲಾನುಭವಿಗಳ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು.

ಇದೇ ಸಂದರ್ಭದಲ್ಲಿ ಜಿಲ್ಲೆಗೆ ಬೆಳೆ ಹಾನಿ ಪರಿಹಾರದ ಮೊತ್ತದ 11ನೇ ಕಂತಿನಲ್ಲಿ 8554 ರೈತರಿಗೆ ಒಟ್ಟು 2.20 ಕೋಟಿ ರೂ ಗಳು ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಇದುವರಗೆ ಒಟ್ಟು 1,27,801 ಫಲಾನುಭವಿಗಳಿಗೆ 38.27 ಕೋಟಿ ರೂ ಬೆಳೆ ಹಾನಿ ಪರಿಹಾರದ ಮೊತ್ತ ಬಿಡುಗಡೆಯಾಗಿದೆ.

ಇದನ್ನೂ ಓದಿ: Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

ಜಿಲ್ಲೆಯಲ್ಲಿ ಕಳೆದ ಸಾಲಿನ ನೈಋತ್ಯ ಮುಂಗಾರಿನ ಹಂಗಾಮಿನಲ್ಲಿ, ಮಳೆ ಕೊರತೆಯಿಂದ ತಲೆದೋರಿದ ಬರದಿಂದ, ಜೀವನೋಪಾಯಕ್ಕೆ ತೀವ್ರವಾಗಿ ತೊಂದರೆಯಾಗಿರುವ ಜಿಲ್ಲೆಯ 48,487 ಅರ್ಹ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರ ವಿತರಣೆ ಮಾಡುವ ಕುರಿತಂತೆ ಅರ್ಹ ರೈತರ ವಿವರಗಳನ್ನು ಜಿಲ್ಲಾಡಳಿತದಿಂದ ಆನ್‌ಲೈನ್ ಮೂಲಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಾಧಿಕಾರದಿಂದಲೇ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮೆ ಆಗಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಕೃಷಿ

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Arecanut Insurance : ವಿಮಾ ನೋಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳ ವಿಮಾ ಕಂತು ವಿಮಾ ಮೊತ್ತದ ಶೇ. 5ರಷ್ಟಿರುತ್ತದೆ. ಉಳಿದ ಬಾಕಿ ಪ್ರೀಮಿಯಮ್‌ನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭರಿಸಲಿವೆ. ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಜಿಲ್ಲೆಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಮಾ ನೋಂದಣಿಗೆ ಅವಕಾಶ ಕಲ್ಪಿಸಿದೆ.

VISTARANEWS.COM


on

By

Arecanut Insurance Karnataka last date
Koo

ಅರವಿಂದ ಸಿಗದಾಳ್, ಮೇಲುಕೊಪ್ಪ
ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಯೂರೆನ್ಸ್‌ ಪ್ರೀಮಿಯಮ್‌ (Arecanut Insurance) ಕಟ್ಟಲು ದಿನಾಂಕವನ್ನು ನಿಗದಿ ಮಾಡಲಾಗಿದೆ. ಸರ್ಕಾರವು 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ (WBCIS) ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಮಾ ನೋಂದಣಿಗೆ ಅವಕಾಶ ಕಲ್ಪಿಸಿದೆ.

ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕುಗಳಲ್ಲಿ ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನವಾಗಿದೆ. ವಿಮಾ ನೊಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳ ವಿಮಾ ಕಂತು ವಿಮಾ ಮೊತ್ತದ ಶೇಕಡ 5ರಷ್ಟಿರುತ್ತದೆ. ಉಳಿದ ಬಾಕಿ ಪ್ರೀಮಿಯಮ್‌ನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭರಿಸಲಿವೆ.

ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಜಿಲ್ಲೆಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಮಾ ನೊಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ ಅಡಿಕೆಗೆ ಹೆಕ್ಟೇರ್‌ಗೆ 6,400 ರೂ. ಮತ್ತು ಕರಿಮೆಣಸಿಗೆ 2,350 ರೂ. ಹೆಕ್ಟೇರ್ ಆಗಿರುತ್ತದೆ.

ಇದನ್ನೂ ಓದಿ: Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

Arecanut nsurance Karnataka

ಬೆಳೆ ವಿಮೆ ಮಾಡಿಸುವಾಗ ಈ ಮಾಹಿತಿ ನೆನಪಿರಲಿ

-ರೈತರ ಜಮೀನು FRUIT (Farmer Registration & Unified Beneficiary InformaTion System) ತಂತ್ರಾಂಶದಲ್ಲಿ ನೋಂದಣಿ ಆಗಿರಬೇಕು. (ಕಳೆದ ವರ್ಷ 95% ರೈತರ FRUIT ನೊಂದಣಿ ಆಗಿದೆ ಎಂದು ಮಾಹಿತಿ ಇತ್ತು)

-ಬೆಳೆ ಸರ್ವೆ ಆಗಿರಬೇಕು (ಕಳೆದ ವರ್ಷ ಬೆಳೆ ಸರ್ವೆಯಲ್ಲಿ ಲೋಪ ದೋಷಗಳು ಉಂಟಾಗಿದ್ದು, ನಂತರ ಅದನ್ನು ಸರಿ ಪಡಿಸುವ ಪ್ರಕ್ರಿಯೆಯೂ ಆಗಿತ್ತು. ಆದರೆ, ಕೆಲವು ಅಡಿಕೆ ಬೆಳೆಗಾರ RTC (ಪಹಣಿ) ಯಲ್ಲಿ, ಈಗಲೂ ಅಡಿಕೆ ತೋಟದ ವಿಸ್ತೀರ್ಣದಲ್ಲಿ ದೋಷ ಇರುವ ಬಗ್ಗೆ ದೂರುಗಳಿದ್ದು, ವಿಮೆ ಮಾಡಿಸಿಕೊಳ್ಳ ಬಯಸುವ ರೈತರು ಹತ್ತಿರದ ಕಂದಾಯ ಇಲಾಖೆ ಮತ್ತು ತಹಸೀಲ್ದಾರ್ ಕಛೇರಿಗಳನ್ನು ಸಂಪರ್ಕಿಸಿ. ವಿಸ್ತೀರ್ಣ ದೋಷಗಳನ್ನು ಸರಿಪಡಿಸಿಕೊಳ್ಳಬೇಕು.

    ಹಿಂದಿನ ವರ್ಷಗಳಲ್ಲಿ, ವಿಸ್ತೀರ್ಣ ದೋಷ, ಬೆಳೆ ಕಾಲಮ್‌ನಲ್ಲಿ ಬೆಳೆ ನಮೂದಾಗಿಲ್ಲದಿರುವ ಸಮಸ್ಯೆ ಇದ್ದಾಗ, ಬೆಳೆ ದೃಡೀಕರಣ ಪತ್ರವನ್ನು ಮಾನಿಸಿ, ವಿಮೆ ನೊಂದಣಿ ಮಾಡಿ ಕೊಳ್ಳಲಾಗುತ್ತಿತ್ತು. ಆದರೆ, ಈಗ ಆ ಸಾಧ್ಯತೆ ಇರುವುದಿಲ್ಲ ಮತ್ತು ರೈತರು ವಿಮೆ ನೊಂದಣಿ ಮಾಡಿಸಿಕೊಳ್ಳುವ ಮೊದಲೇ RTC ಯಲ್ಲಿ ಇರಬಹುದಾದ ದೋಷಗಳನ್ನು ಸರಿ ಪಡಿಸಿಕೊಳ್ಳಬೇಕೆಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

    -ಆಧಾರ್ ಕಾರ್ಡ್ ಆ್ಯಕ್ಟಿವ್/ಮ್ಯಾಪಿಂಗ್ ಆಗಿರಬೇಕು. ಆಧಾರ್ ಮ್ಯಾಪಿಂಗ್ ಎನ್ನುವುದು ಬ್ಯಾಂಕ್ ಅನ್ನು ಆಧಾರ್ ಸಂಖ್ಯೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಾಗಿದ್ದು, ಇದನ್ನು NCPI (National Payments Corporation of India) ಸುಗಮಗೊಳಿಸುತ್ತದೆ. ನಿರ್ದಿಷ್ಟ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿ, ಆಯಾ ಬ್ಯಾಂಕ್‌ಗೆ ಪರಿಹಾರ ಹಣ ನೇರ ವರ್ಗಾವಣೆಗಾಗಿ ಮತ್ತು ಗ್ರಾಹಕರು ಒಪ್ಪಿಗೆ ನೀಡಿದ ಇತರ ನೇರ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಈ ಸಿಸ್ಟಮ್ ಮಾಡಲಾಗಿರುತ್ತದೆ. ಕಳೆದ ವರ್ಷ NPCI ಆ್ಯಪ್‌ಡೇಟ್ ಆಗದೆ, ಅನೇಕ ರೈತರಿಗೆ ಪರಿಹಾರ ಬರುವಲ್ಲಿ ತಡವಾಗಿತ್ತು.

    -ರೈತರು ಆಧಾರ್ ಪಹಣಿ ಸೀಡಿಂಗ್‌ನ್ನು ಗ್ರಾಮ ಲೆಕ್ಕಿಗರ (ವಿಲೇಜ್ ಅಕೌಂಟೆಂಟ್) ಮೂಲಕ ಮಾಡಿಸಿಕೊಳ್ಳಬೇಕು ಎಂದು ಈಗಾಗಲೆ ಸರಕಾರ ಐದಾರು ತಿಂಗಳ ಮುಂಚೆ ಸೂಚನೆ ಕೊಟ್ಟಿತ್ತು. ಸರ್ಕಾರದ ಮುಂದಿನ ಯಾವುದೇ ಸವಲತ್ತು, ಸಬ್ಸಿಡಿ, ಲೋನ್, ವಿಮಾ ಪರಿಹಾರ ಪಡೆಯಲು ತಮ್ಮ ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿರುತ್ತದೆ ಎಂದು ಸರಕಾರ ಪ್ರಕಟಣೆ ನೀಡಿತ್ತು. ಪ್ರಸಕ್ತ 2024-25ರ ಮುಂಗಾರು ಹಂಗಾಮಿನಲ್ಲಿ ಯೋಜನೆಯ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್‌ಲೈನ್ ಪೋರ್ಟಲ್ (samrakshane.karnataka.gov.in) ಮೂಲಕ ನೊಂದಾಯಿಸಲು ಆದೇಶಿಸಲಾಗಿರುತ್ತದೆ.

      ಈ ಯೋಜನೆಯಲ್ಲಿ ಒಳಪಡಿಸಲಾಗಿರುವ ಅಡಿಕೆ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ಸಾಲ ಪಡೆದ ರೈತರನ್ನು ಒಳಪಡಿಸಬೇಕಾಗಿರುತ್ತದೆ. ಆದರೆ, ಬೆಳೆ ಸಾಲ ಪಡೆದ ರೈತರು ವಿಮೆ ಮಾಡಿಸುವುದನ್ನು ಇಚ್ಛಿಸದಿದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬ್ಯಾಂಕುಗಳಲ್ಲಿ ಸಾಲ ಪಡೆಯದ ರೈತರೂ ವಿಮೆಯನ್ನು ಹತ್ತಿರದ ಬ್ಯಾಂಕಿನಲ್ಲಿ, ಗ್ರಾಮೀಣ ಸಹಕಾರಿ ಸಂಘಗಳಲ್ಲಿ, CSC (ಕಾಮನ್ ಸರ್ವಿಸ್ ಸೆಂಟರ್) ಅಥವಾ ಗ್ರಾಮ ಒನ್‌ಗಳಲ್ಲಿ ನಿಗದಿತ ಪ್ರೀಮಿಯಮ್ ಕಟ್ಟಿ ನೊಂದಾಯಿಸಬಹುದಾಗಿರುತ್ತದೆ. ಹವಾಮಾನ ವೈಪರೀತ್ಯಕ್ಕೆ ಬೆಳೆ ವಿಮೆ ಮಾಡಿಸುವುದು ಭದ್ರತೆಯ ದೃಷ್ಟಿಯಿಂದ ಅಡಿಕೆ/ಮೆಣಸು ಬೆಳೆಗಾರರಿಗೆ ಒಂದು ವರದಾನವೇ ಸರಿ.

      ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

      Continue Reading

      ವಿಜಯನಗರ

      Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

      Vijayanagara News: ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಕೃಷಿ ಇಲಾಖೆಯ ಪ್ರಸಕ್ತ ಸಾಲಿನ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಚಾಲನೆ ನೀಡಿದರು. ರೈತರಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಈಗಾಗಲೇ ವಿವಿಧ ಬೆಳೆಗಳಿಗೆ ದಿನಾಂಕ ನಿಗದಿ ಮಾಡಿದ್ದು, ಜೋಳ ಹಾಗೂ ಮೆಕ್ಕೆಜೋಳ ಬೆಳೆಗೆ ಇದೇ 31 ಕೊನೆಯ ದಿನವಾಗಿದೆ. ಅದರಂತೆ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೂ ವಿಮೆ ಮಾಡಿಸಿದಲ್ಲಿ ರೈತರಿಗೆ ಬೆಳೆ ನಷ್ಟದಿಂದ ವಿಮೆ ಪರಿಹಾರ ಬರುತ್ತದೆ. ಇದರಿಂದ ಆರ್ಥಿಕ ನಷ್ಟ ಎದುರಾಗುವುದಿಲ್ಲ.

      VISTARANEWS.COM


      on

      MLA Dr N T Srinivas drives for crop insurance Awareness jatha in Kudligi
      Koo

      ಕೂಡ್ಲಿಗಿ: ಕೃಷಿ ಇಲಾಖೆಯ ಪ್ರಸಕ್ತ ಸಾಲಿನ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಚಾಲನೆ (Vijayanagara News) ನೀಡಿದರು.

      ಈ ವೇಳೆ ಜಿಲ್ಲಾ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಮಾತನಾಡಿ, ಕೃಷಿ ಇಲಾಖೆಯಿಂದ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ರೈತರು ಬೆಳೆ ವಿಮೆ ನೋಂದಣಿ ಮಾಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ, ಆದ್ದರಿಂದ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸುವಂತೆ ತಿಳಿಸಿದರು.

      ರೈತರಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಈಗಾಗಲೇ ವಿವಿಧ ಬೆಳೆಗಳಿಗೆ ದಿನಾಂಕ ನಿಗದಿ ಮಾಡಿದ್ದು, ಜೋಳ ಹಾಗೂ ಮೆಕ್ಕೆಜೋಳ ಬೆಳೆಗೆ ಇದೇ 31 ಕೊನೆಯ ದಿನವಾಗಿದೆ. ಅದರಂತೆ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೂ ವಿಮೆ ಮಾಡಿಸಿದಲ್ಲಿ ರೈತರಿಗೆ ಬೆಳೆ ನಷ್ಟದಿಂದ ವಿಮೆ ಪರಿಹಾರ ಬರುತ್ತದೆ. ಇದರಿಂದ ಆರ್ಥಿಕ ನಷ್ಟ ಎದುರಾಗುವುದಿಲ್ಲ.

      ಇದನ್ನೂ ಓದಿ: CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

      ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ, ಬಿತ್ತನೆಯಾದ ನಂತರ ಕಟಾವಿಗೆ ಮೊದಲು ಸಕಾಲಕ್ಕೆ ಮಳೆ ಬಾರದೇ ನಿರೀಕ್ಷಿತ ಇಳುವರಿಗಿಂತ ಶೇ 50 ಕ್ಕಿಂತ ಹೆಚ್ಚು ಇಳುವರಿ ನಷ್ಟವಾದಲ್ಲಿ ಅಥವಾ ಅಕಾಲಿಕ ಮಳೆಯಾಗಿ ಬೆಳೆ ಮುಳುಗಡೆ ಅಥವಾ ಕಟಾವಿನ ನಂತರ 14 ದಿನದೊಳಗೆ ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವಿಮಾ ಸಂಸ್ಥೆ ವೈಯಕ್ತಿಕವಾಗಿ ನಷ್ಟವನ್ನು ನಿರ್ಧರಿಸಿ ಪರಿಹಾರ ನೀಡಲು ಅವಕಾಶವಿರುತ್ತದೆ. ಆದ್ದರಿಂದ ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಬೆಳೆವಿಮೆ ಮಾಡಿಸಲು ಅವರು ಮನವಿ ಮಾಡಿದರು.

      ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

      ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಸಿಇಒ ಸದಾಶಿವ ಪ್ರಭು, ತಾಪಂ ಇಒ ವೈ. ರವಿಕುಮಾರ್, ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್, ಬಣವಿಕಲ್ಲು ಯರಿಸ್ವಾಮಿ, ನರೇಂದ್ರ ಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

      Continue Reading
      Advertisement
      Satsang programme on 5th July in Bengaluru
      ಬೆಂಗಳೂರು1 min ago

      Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

      Hassan News Distribution of free notebook bag to government primary schools in Alur
      ಹಾಸನ3 mins ago

      Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

      To complete pending railway projects in the state former MP DK Suresh appeals central government
      ಬೆಂಗಳೂರು5 mins ago

      DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

      ದೇಶ14 mins ago

      Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

      drivers protest
      ಪ್ರಮುಖ ಸುದ್ದಿ23 mins ago

      Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

      Viral News
      ವೈರಲ್ ನ್ಯೂಸ್46 mins ago

      Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

      Chikkaballapura News
      ಚಿಕ್ಕಬಳ್ಳಾಪುರ55 mins ago

      Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

      Team India
      ಕ್ರೀಡೆ1 hour ago

      Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

      Bhole Baba
      Latest1 hour ago

      Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

      Team India victory parade
      ಪ್ರಮುಖ ಸುದ್ದಿ1 hour ago

      Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

      Sharmitha Gowda in bikini
      ಕಿರುತೆರೆ9 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ9 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ9 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      galipata neetu
      ಕಿರುತೆರೆ7 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ9 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      Kannada Serials
      ಕಿರುತೆರೆ9 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ8 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ7 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      varun
      ಕಿರುತೆರೆ8 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      Kannada Serials
      ಕಿರುತೆರೆ10 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      Chikkaballapura News
      ಚಿಕ್ಕಬಳ್ಳಾಪುರ55 mins ago

      Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

      karnataka Rain
      ಮಳೆ1 hour ago

      Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

      Karnataka Rain
      ಮಳೆ3 hours ago

      Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

      Tornado Effect in Udupi
      ಉಡುಪಿ4 hours ago

      Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

      karnataka weather Forecast
      ಮಳೆ2 days ago

      Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

      karnataka Weather Forecast
      ಮಳೆ3 days ago

      Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

      karnataka Weather Forecast
      ಮಳೆ4 days ago

      Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

      Actor Darshan
      ಬೆಂಗಳೂರು4 days ago

      Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

      karnataka weather Forecast
      ಮಳೆ5 days ago

      Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

      karnataka Rain
      ಮಳೆ5 days ago

      Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

      ಟ್ರೆಂಡಿಂಗ್‌