PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ? - Vistara News

ಕೃಷಿ

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM Kisan Samman) ನಿಧಿ ಯೋಜನೆಯ ೧೭ನೇ ಕಂತಿನ ಹಣ ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಅನಂತರ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಿಸಾನ್ ಸಮ್ಮಾನ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಸ್ಥಿತಿಗತಿಯನ್ನು ಒಮ್ಮೆ ಪರಿಶೀಲಿಸಿ. ಜನಸಾಮಾನ್ಯರಿಗೆ ಈ ಕುರಿತ ಸರಳ ಮಾಹಿತಿ ಇಲ್ಲಿದೆ.

VISTARANEWS.COM


on

PM Kisan Samman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman) ಯೋಜನೆಯ 17ನೇ ಕಂತಿಗಾಗಿ (17th installment) ಫಲಾನುಭವಿ ರೈತರು (beneficiary farmers) ಕಾಯುತ್ತಿದ್ದು ಶೀಘ್ರದಲ್ಲೇ ಇದು ಬಿಡುಗಡೆಯಾಗಲಿದೆ. ಜೂನ್ 4ರಂದು (june) ನಡೆಯುವ ಲೋಕಸಭೆ ಚುನಾವಣೆಯ (loksabha election) ಫಲಿತಾಂಶ ಪ್ರಕಟವಾದ ಅನಂತರ ಇದು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನು 2024ರ ಫೆಬ್ರವರಿ 28ರಂದು ಮಹಾರಾಷ್ಟ್ರದ ಯವತ್ಮಾಲ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿಗೂ ಹೆಚ್ಚು ರೈತರಿಗೆ 21,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದರು. 15 ನೇ ಕಂತಿನ ಹಣ ಕಳೆದ ನವೆಂಬರ್ ನಲ್ಲಿ ಬಿಡುಗಡೆಯಾಗಿತ್ತು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ಏಪ್ರಿಲ್- ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್- ಮಾರ್ಚ್ ನಲ್ಲಿ ನೀಡಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ಯೋಜನೆಯನ್ನು 2019 ರ ಮಧ್ಯಂತರ ಬಜೆಟ್‌ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಿಸಿದರು. ಕಂತುಗಳನ್ನು ಸ್ವೀಕರಿಸಲು ರೈತರು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕು. ಯೋಜನೆಯ ಅಧಿಕೃತ ವೆಬ್‌ಸೈಟ್ ಪ್ರಕಾರ,ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಒಟಿಪಿ -ಆಧಾರಿತಇ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಗಾಗಿ ಹತ್ತಿರದ ಸಿಎಸ್ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು.


ಪರಿಶೀಲನೆ ಹೇಗೆ?

ನೋಂದಾಯಿಸಿರುವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲು ಅಧಿಕೃತ ವೆಬ್‌ಸೈಟ್‌ pmkisan.gov.in ಗೆ ಭೇಟಿ ನೀಡಿ. ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ‘ಡೇಟಾ ಪಡೆಯಿರಿ’ ಎಂಬ ಆಯ್ಕೆಯನ್ನು ಆರಿಸಿ. ಬಳಿಕ ಫಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಬರುತ್ತದೆ.

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಪರಿಶೀಲನೆ

ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ ‘ಫಲಾನುಭವಿಗಳ ಪಟ್ಟಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್‌ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ.ದ ಮೇಲೆ ‘ಗೆಟ್ ರಿಪೋರ್ಟ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಇದರ ಅನಂತರ, ಫಲಾನುಭವಿಗಳ ಪಟ್ಟಿಯ ವಿವರವನ್ನು ಪ್ರದರ್ಶಿಸಲಾಗುತ್ತದೆ.

ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು. ಸಹಾಯವಾಣಿ ಸಂಖ್ಯೆ- 155261 ಮತ್ತು 011-24300606.

ಇದನ್ನೂ ಓದಿ: PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

ಅರ್ಜಿ ಸಲ್ಲಿಸುವುದು ಹೇಗೆ?

pmkisan.gov.in ವೆಬ್ ಸೈಟ್ ಗೆ ಭೇಟಿ ನೀಡಿ, ‘ಹೊಸ ರೈತ ನೋಂದಣಿ’ ಮೇಲೆ ಕ್ಲಿಕ್ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾವನ್ನು ಭರ್ತಿ ಮಾಡಿ. ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ‘ಹೌದು’ ಎಂದು ಕ್ಲಿಕ್ ಮಾಡಿ. ಪಿಎಂ ಕಿಸಾನ್ ಅರ್ಜಿ ನಮೂನೆ 2024 ರಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ. ಅದನ್ನು ಉಳಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Arecanut Insurance: ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಯಾವಾಗ ಕಟ್ಟಬೇಕು?

Arecanut Insurance: ಮಲೆನಾಡು, ಕರಾವಳಿಯ ಬೆಳಗಾರರಿಗೆ ಅಡಿಕೆ ಮತ್ತು ಮೆಣಸು ಬೆಳೆಗಳಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಕಟ್ಟಲು ಇನ್ನು ಮೂರು ದಿನ ಮಾತ್ರ ಬಾಕಿ ಇವೆ ಎಂಬ ಸುಳ್ಳು ಮಾಹಿತಿಗಳು ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಾಗಾದರೆ ಪ್ರೀಮಿಯಂ ಕಟ್ಟಲು ಅಂತಿಮ ಗಡುವು ಯಾವಾಗ? ಅಡಿಕೆ ಮತ್ತು ಕಾಳು ಮೆಣಸು ಬೆಳೆಗಾರರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Arecanut Insurance
ಸಾಂದರ್ಭಿಕ ಚಿತ್ರ
Koo
  • ಅರವಿಂದ ಸಿಗದಾಳ್, ಮೇಲುಕೊಪ್ಪ

ಪ್ರಾರಂಭದಲ್ಲಿ ಕೇಂದ್ರ ವಲಯ (Arecanut Insurance) ಯೋಜನೆಯಾದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ಬಹುತೇಕ ಎಲ್ಲಾ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ತರಲಾಗಿತ್ತು. ತದನಂತರ ಬೆಳೆ ವಿಮೆ PMFBYಯನ್ನು ಮರು ವಿನ್ಯಾಸಗೊಳಿಸಿ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಮತ್ತು ನಿರ್ಬಂಧಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಎಂದು ಎರಡು ವಿಭಾಗಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಈಗ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು (PMFBY) ಕೃಷಿ ಇಲಾಖೆಯೂ, ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ತೋಟಗಾರಿಕೆ ಇಲಾಖೆಯೂ ಅನುಷ್ಠಾನಗೊಳಿಸುತ್ತಿದೆ. PMFBY ಇಳುವರಿಯನ್ನು ಆಧರಿಸಿದ್ದರೆ, RWBCIS ಹವಾಮಾನದ (ಮಳೆ, ತಾಪಮಾನ, ಆರ್ದ್ರತೆ) ವನ್ನು ಆಧರಿಸಿದೆ. RWBCISನಲ್ಲಿ ರೈತರಿಗೆ ಹೆಚ್ಚಿನ ಮಳೆ, ತಾಪಮಾನ ಮತ್ತು ಆರ್ದ್ರತೆಯಂತಹ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ವಿರುದ್ಧ ವಿಮೆ ರಕ್ಷಣೆಯನ್ನು ಒದಗಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯ ಪ್ರಮುಖ ಬೆಳೆಯಾದ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (RWBCIS) ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೆ ಬರುತ್ತದೆ.

ಅಡಿಕೆ ಮತ್ತು ಕಾಳು ಮೆಣಸಿಗೆ ಪ್ರೀಮಿಯಮ್ ಕಟ್ಟುವ ಅವಧಿ ಮುಗಿಯಿತೆ?

ಮಲೆನಾಡು, ಕರಾವಳಿಯ ಜಿಲ್ಲೆಗಳಿಗೆ ಅಡಿಕೆ ಮತ್ತು ಮೆಣಸು ಬೆಳೆಗಳಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಕಟ್ಟಲು ಇನ್ನು ಮೂರು ದಿನ ಮಾತ್ರ ಬಾಕಿ ಇವೆ ಎಂಬ ತಪ್ಪು ಮಾಹಿತಿಗಳು ಹರಿದಾಡುತ್ತಿವೆ. ಅಡಿಕೆ ಮತ್ತು ಮೆಣಸು ಬೆಳೆಗಳಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಕಟ್ಟಿಸಿಕೊಳ್ಳುವ ಬಗ್ಗೆ ಇಲಾಖೆಗಳಿಗೆ, ಬ್ಯಾಂಕ್‌ಗಳಿಗೆ, ಸಹಕಾರಿ ಸಂಘಗಳಿಗೆ ಇನ್ನೂ ಅಧಿಕೃತ ನೋಟಿಫಿಕೇಷನ್/ಆದೇಶಗಳ ಇನ್ನೂ ಬಂದಿಲ್ಲ, ಸದ್ಯದಲ್ಲೇ ಬರಲಿದೆ. ವಿಮಾ ಕಂತನ್ನು ಆದೇಶ ಬಂದ ಮೇಲೆ ಕಟ್ಟಿಸಿಕೊಳ್ಳವ ಪ್ರಕ್ರಿಯೆ ಆರಂಭವಾಗುತ್ತದೆ.

ಅದಲ್ಲದೆ, ಕಳೆದ ವರ್ಷ ಜುಲೈ 20ರಂದು (ಎಂಟು ಜಿಲ್ಲೆಗಳಿಗೆ ಕೊನೆಯಲ್ಲಿರುವ ಪಟ್ಟಿ ಗಮನಿಸಿ) ಆದೇಶ ಪ್ರಕಟವಾಗಿ, ಆಗಸ್ಟ್‌ ಮೊದಲ ವಾರದವರೆಗೂ ಪ್ರೀಮಿಯಮ್ ಕಟ್ಟಿಸಿಕೊಳ್ಳಲಾಗಿತ್ತು. ಆ ಪ್ರೀಮಿಯಮ್ ಕಟ್ಟಿದ ಇನ್ಶೂರೆನ್ಸ್ ಪಾಲಿಸಿ ಆಗಸ್ಟ್‌ 1, 2023 ರಿಂದ ಜುಲೈ 31 2024ರವರೆಗೂ ಅಸ್ತಿತ್ವದಲ್ಲಿರುತ್ತದೆ. ಅಂದರೆ, ಈಗಾಗಲೆ ಅಡಿಕೆ ಮತ್ತು ಕಾಳು ಮೆಣಸು ಬೆಳೆಗೆ ಕಟ್ಟಿರುವ ಪಾಲಿಸಿ ಅವಧಿ 1 ಆಗಸ್ಟ್‌ 2023 ರಿಂದ 31 ಜುಲೈ 2024ರವರೆಗೆ ಚಾಲ್ತಿಯಲ್ಲಿರುತ್ತದೆ. ಹೊಸ ಪಾಲಿಸಿ 1 ಆಗಸ್ಟ್‌ 2024ಕ್ಕೆ ಪ್ರಾರಂಭವಾಗಬೇಕು ಮತ್ತು ಈ ದಿನಾಂಕದೊಳಗೆ ಪ್ರೀಮಿಯಮ್ ಕಟ್ಟುವ ಅವಕಾಶ ಆಗಬೇಕು. ಹಾಗಾಗಿ, ಪ್ರೀಮಿಯಮ್ ಕಟ್ಟಿಸಿ ಕೊಳ್ಳುವ ದಿನಾಂಕ ಜುಲೈ‌ನಲ್ಲೇ ಪ್ರಾರಂಭವಾಗಬಹುದು ಮತ್ತು ಜುಲೈ ಕೊನೆಯವರೆಗೂ ಪ್ರೀಮಿಯಮ್ ಕಟ್ಟಲು ಅವಕಾಶ ಇರಬಹುದು.
ಈಗ ಹರಿದಾಡುತ್ತಿರುವ, ಪ್ರೀಮಿಯಮ್ ಕಟ್ಟಲು ಕೇವಲ ಮೂರ್ನಾಲ್ಕು ದಿನಗಳು ಮಾತ್ರ ಇವೆ ಎಂಬ ಮಾಹಿತಿಯು ಸತ್ಯಕ್ಕೆ ದೂರವಾಗಿದೆ.

Arecanut Insurance

ಈ ಜಿಲ್ಲೆಗಳ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಾರರಿಗೆ ಅನ್ವಯ: (ಕಳೆದ ವರ್ಷದ ಅನುಬಂಧ 1 ಆಧಾರದಲ್ಲಿ):

೧) ಉತ್ತರ ಕನ್ನಡ (ಅಡಿಕೆ, ಕಾಳುಮೆಣಸು)
೨) ವಿಜಯನಗರ (ಅಡಿಕೆ)
೩) ದಕ್ಷಿಣ ಕನ್ನಡ (ಅಡಿಕೆ, ಕಾಳುಮೆಣಸು)
೪) ಚಿಕ್ಕಮಗಳೂರು (ಅಡಿಕೆ, ಕಾಳುಮೆಣಸು)
೫) ಬೆಳಗಾವಿ (ಅಡಿಕೆ)
೬) ಕೊಡಗು (ಅಡಿಕೆ, ಕಾಳುಮೆಣಸು)
೭) ಹಾವೇರಿ (ಅಡಿಕೆ)
೮) ಶಿವಮೊಗ್ಗ (ಅಡಿಕೆ, ಕಾಳುಮೆಣಸು)
ಕಳೆದ 2022-23 ನೇ ಸಾಲಿನಲ್ಲಿ ಅಧಿಕ ಮಳೆಯಾಗಿ, ಅತೀವ ಸಂಕಷ್ಟಕ್ಕೆ ಒಳಗಾಗಿದ್ದ ಮಲೆನಾಡು ಮತ್ತು ಕರಾವಳಿಯ ಬಹುತೇಕ ರೈತರಿಗೆ ಉತ್ತಮ ರೀತಿಯಲ್ಲಿ ಬೆಳೆ ವಿಮೆ ಪರಿಹಾರ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.
2023-24ರ ಪರಿಹಾರ 2024ರ ಅಕ್ಟೋಬರ್/ನವಂಬರ್‌ನಲ್ಲಿ ಪ್ರತಿ ಹೋಬಳಿ ಮತ್ತು ಗ್ರಾಮ ಪಂಚಾಯತಿಗಳಲ್ಲಿನ ದಾಖಲಿತ ಮಳೆ, ತಾಪಮಾನ ಮತ್ತು ಆರ್ದ್ರತೆಯ ಆಧಾರದ ಮೇಲೆ ಬರಬಹುದು.

ಆದೇಶ ಬಂದ ಮೇಲೆ ಪ್ರಕ್ರಿಯೆ ಆರಂಭ:

2024-25ರ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ RWBCISನ ಪ್ರೀಮಿಯಮ್‌ನ್ನು ಆದೇಶ ಬಂದ ಮೇಲೆ ಕಟ್ಟಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ. ಮಲೆನಾಡು ಮತ್ತು ಕರಾವಳಿಯ ವ್ಯಾಪ್ತಿಯಲ್ಲಿ ಅನಿಶ್ಚಿತತೆಯ ಹವಾಮಾನ ಇರುವುದರಿಂದ ಅಡಿಕೆ ಬೆಳೆಗಾರರು RWBCIS ನಲ್ಲಿ ವಿಮೆ ಮಾಡಿಸಿಕೊಳ್ಳುವುದು ಕ್ಷೇಮ.
ಅಡಿಕೆ ತೋಟದಲ್ಲೇ ಕಾಳು ಮೆಣಸು ಇದ್ದವರು, ಎರಡಕ್ಕೂ ಬೇರೆ ಬೇರೆಯಾಗಿ ಪ್ರೀಮಿಯಮ್ ಕಟ್ಟಬೇಕಾಗುತ್ತದೆ. ತೋಟಗಾರಿಕೆ, ಇನ್ಶೂರೆನ್ಸ್ ಕಂಪನಿ ಮತ್ತು ರೈತರ ಸಹಯೋಗದಲ್ಲಿ ರಚಿಸಿದ ಟರ್ಮ್‌ಶೀಟ್ ಪ್ರಕಾರ ಹವಾಮಾನ ವೈಪರೀತ್ಯ ಉಂಟಾದಲ್ಲಿ ಎರಡೂ ಬೆಳೆಗಳಿಗೆ ಬೇರೆ ಬೇರೆಯಾಗಿ ವಿಮಾ ಪರಿಹಾರ ಸಿಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Kalaburagi News: ರಸಗೊಬ್ಬರ, ಬೀಜ ಕೊರತೆಯಾಗದಂತೆ ಎಚ್ಚರ ವಹಿಸಲು ಪ್ರಿಯಾಂಕ್ ಖರ್ಗೆ ಸೂಚನೆ

Kalaburagi News: ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

VISTARANEWS.COM


on

Minister Priyank Kharge held a meeting on Monsoon Sowing Preparation and Precautionary Measures for Flood Control
Koo

ಕಲಬುರಗಿ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದ ಕಾರಣ ಎಲ್ಲೆಡೆ ಒಮ್ಮೆಲೆ ಬಿತ್ತನೆ ಶುರುವಾಗಿದ್ದು, ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಳೆದ ವರ್ಷ ಕಲಬುರಗಿ, ಚಿತ್ತಾಪುರ, ಕಾಳಗಿ ತಾಲೂಕಿನಲ್ಲಿ ಕಳಪೆ ಬೀಜ ವಿತರಣೆಯಾಗಿದ್ದರಿಂದ ರೈತರು ತಮ್ಮ ಬೆಳೆ ಹಾನಿ ಮಾಡಿಕೊಂಡಿದ್ದಾರೆ ಇದು ಪುನರಾವರ್ತನೆಯಾಗಬಾರದು ಎಂದು ತಿಳಿಸಿದರು.

ಈ ಸಲ ಅತಿವೃಷ್ಠಿಯಿಂದ ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಹಾನಿ ತಡೆಗೆ ಈ ಕೂಡಲೇ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ, ಹೆಚ್ಚು ಮಳೆಗೆ ಆಗಬಹುದಾದ ಹಾನಿ ತಪ್ಪಿಸಲು ಬಸಿಗಾಲುವೆ ನಿರ್ಮಾಣ ಹಾಗೂ ಬೆಳೆ ವಿಮೆ ಮಾಡಿಸಲು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಳೆದ ವರ್ಷ ಬೆಳೆ‌ ವಿಮೆ ಮಾಡಿಸಿದ್ದರಿಂದ ಹೆಚ್ಚಿನ ಪರಿಹಾರ ಸಿಗಲು ಕಾರಣವಾಗಿದೆ. ಈ ಬಾರಿಯೂ ನೊಂದಣಿ ಹೆಚ್ಚಿಸಿ, ಮೈ ಮರೆಯದಿರಿ ಎಂದು ಕೃಷಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

ಪ್ರತಿ ತಾಲೂಕಿನಲ್ಲಿ ಪರವಾನಿಗೆ ಇಲ್ಲದೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿದಲ್ಲಿ, ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಅಂತಹ ಕೃಷಿ ಮಳಿಗೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರನ್ನೇ ಇದಕ್ಕೆ ಹೊಣೆಗಾರರನ್ನಾಗಿಸಬೇಕು. ಈ ಸಂಬಂಧ ತಾಲೂಕಾ ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿ ಎಂದು ಡಿ.ಸಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 8.65 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ವರ್ಷ ಉತ್ತಮ ಮಳೆಯಾದ ಕಾರಣ ಜಿಲ್ಲೆಯ ಎಲ್ಲೆಡೆ ಇದೂವರೆಗೆ ಶೇ.30 ಬಿತ್ತನೆಯಾಗಿದೆ. ಉಳಿದೆಡೆ ಬಿತ್ತನೆ ಚಟುವಟಿಕೆ ಗರಿಗೆದರಿವೆ. ಕಳೆದ ವರ್ಷದಲ್ಲಿ ಬೆಳೆ‌ ವಿಮೆ, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ತೊಗರಿ ನೆಟೆ ರೋಗ ಪ್ರಕರಣದಲ್ಲಿ ಒಟ್ಟಾರೆ 697.34 ಕೋಟಿ ರೂ. ಪರಿಹಾರ ರೈತರಿಗೆ ಸಿಕ್ಕಿದೆ. ಕಳೆದ‌ ಬಾರಿ 1.62 ಲಕ್ಷ ರೈತರು ಬೆಳೆ ವಿಮೆ‌ ಮಾಡಿಸಿದ್ದರು, ಈ ಸಲ 2.50 ಲಕ್ಷಕ್ಕೆ ಹೆಚ್ಚಿಸಲು ಗುರಿ ಹೊಂದಿದ್ದು, ಇದೂವರೆಗೆ 15 ಸಾವಿರಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ರೈತರಿಗೆ ಸಬ್ಸಿಡಿ ಹಾಗೂ ಪರಿಹಾರ ಕೊಡಿಸುವಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಶ್ರಮವಹಿಸಿದ್ದೀರಿ. ಸರ್ಕಾರದ‌ ಮಟ್ಟದಲ್ಲಿ ಈ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ನಿಮಗೆ ಅಭಿನಂದನೆಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಮುಂದುವರೆದು, ಎಫ್.ಐ.ಡಿ. ನೊಂದಣಿ ತೀವ್ರಗೊಳಿಸಬೇಕು. ಇದರಿಂದ ಡಿ.ಬಿ.ಟಿ. ಪರಿಹಾರ ಪಡೆಯಲು ಸಹಕಾರಿಯಾಗಲಿದೆ. ಇದು ಸ್ಪಂದಿಸುವ ಸರ್ಕಾರ ಎಂಬುದನ್ನು ಅರಿತಿರುವ ರೈತರು ನಮ್ಮಿಂದ ಹೆಚ್ಚಿನ ಅಪೇಕ್ಷೆ ಹೊಂದಿದ್ದಾರೆ. ಇದನ್ನರಿತು ನೀವು ಕೆಲಸ ಮಾಡಿ ಎಂದು ತಿಳಿಸಿದರು‌.

ಇದನ್ನೂ ಓದಿ: DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ವಿಶೇಷವಾಗಿ ಡಿ.ಎ.ಪಿ.ರಸಗೊಬ್ಬರ ಕೊರತೆ ಎದ್ದು ಕಾಣುತ್ತಿದೆ. ಇದು ಹೀಗೆ ಮುಂದುವರೆದರೆ ರೈತರು ಪಕ್ಕದ ರಾಜ್ಯ ಅಥವಾ ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಹಣ ನೀಡಿ ಖರೀದಿಸಬೇಕಾಗುತ್ತದೆ. ರೈತರನ್ನು ಇದರಿಂದ ತಪ್ಪಿಸಲು ಸಾಕಷ್ಟು ಪ್ರಮಾಣದಲ್ಲಿ ಆರ್.ಎಸ್.ಕೆ. ಕೇಂದ್ರದಲ್ಲಿ ಡಿ.ಎ.ಪಿ. ದಾಸ್ತಾನಿಕರಿಸಬೇಕು. ಕಳಪೆ, ನಕಲಿ ಬೀಜ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.

ಬೆಳೆ ವಿಮೆ‌ ಮಾಡಿದ ರೈತರಿಗೆ ಬೆಳೆ ಹಾನಿ‌ ಸಂದರ್ಭದಲ್ಲಿ ಸಮರ್ಪಕ ಪರಿಹಾರ ಪಡೆಯುವ ನಿಟ್ಟಿನಲ್ಲಿ ಕ್ರಾಪ್ ಕಟ್ಟಿಂಗ್ ಎಕ್ಸ್ ಪೆರಿಮೆಂಟ್ ನಡೆಯುವ ಸಮಯದಲ್ಲಿ ಕಡ್ಡಾಯವಾಗಿ ಇರಬೇಕಾದ ಅಧಿಕಾರಿಗಳು ಇರಲೇಬೇಕು ಹಾಗೂ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋಗ್ರಾಫಿ ಮಾಡಲೇಬೇಕು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಕಟ್ಟುನಿಟ್ಟಾಗಿ ಸೂಚಿಸಿದರು.

ತೋಟಗಾರಿಕೆ ಇಲಾಖೆ ಚರ್ಚೆ ವೇಳೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ತೋಟಗಾರಿಕೆ ಬೆಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ವಿಸ್ತರಣೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ತೋಟಗಾರಿಕೆ ಬೆಳೆ ವಿಸ್ತಿರ್ಣ ಹೆಚ್ಚಿಸಬೇಕು. ಇಲ್ಲಿನ ಕೆಂಬಾಳೆ, ಕಲ್ಲಂಗಡಿ ಅಂತಹ ಹಣ್ಣುಗಳನ್ನು ಸೂಪರ್ ಫುಡ್ ಬ್ರ್ಯಾಂಡ್ ನಡಿ ಮಾರಾಟ ಮಾಡಬೇಕು. ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂದ ಅವರು, ಅತಿವೃಷ್ಠಿ ಹಾನಿಯಾದಲ್ಲಿ ಮೇವು ದಾಸ್ತಾನು, ಜಾನುವಾರುಗಳಿಗೆ ಲಸಿಕಾಕರಣ ಮಾಡಬೇಕು ಎಂದು ಪಶುಸಂಗೋಪನಾ ಉಪನಿರ್ದೇಶಕ ಡಾ.ಎಸ್.ಡಿ. ಆವಂಟಿ ಅವರಿಗೆ ಸೂಚಿಸಿದರು.

ರೈತರ ಆತ್ಮಹತ್ಯೆಗೆ ಕಳವಳ, ಪರಿಹಾರ ವಿಳಂಬ ಸಲ್ಲದು

ಸಭೆಯಲ್ಲಿ ರೈತರ ಆತ್ಮಹತ್ಯೆ ಚರ್ಚೆ ಸಂದರ್ಭದಲ್ಲಿ ಇನ್ನು 5 ಪ್ರಕರಣ ಪರಿಹಾರ ನೀಡಲು ಬಾಕಿ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್‌ ಹೇಳಿದಾಗ, ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮಹತ್ಯೆಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಾ, ಇಂತಹ ಪ್ರಕರಣದಲ್ಲಿ ಪರಿಹಾರ ವಿಳಂಬ ಸಲ್ಲದು. ಇತ್ತೀಚೆಗೆ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪ್ರಕರಣ ಉಲ್ಲೇಖಿಸಿ ಪಿ.ಎಚ್.ಸಿ ಯಲ್ಲಿ ಎಂಟಿ ಸ್ನೇಕ್ ವೆನೋಮ್ ಇಲ್ಲದಕ್ಕೆ ಯಾದಗಿರಿ ಆಸ್ಪತ್ರೆಗೆ ಹೋಗಬೇಕಾಯಿತು. ಪ್ರತಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಎಂಟಿ ಸ್ನೇಕ್ ವೆನೋಮ್ ಶೇಖರಿಸಿಡುವಂತೆ ಸೂಚಿಸಿದರು. ಇದಕ್ಕೆ ದನಿಗೂಡಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಹಾವು ಕಚ್ಚಿದ ಪ್ರಕರಣದಲ್ಲಿ ಜನರು ತಪ್ಪು ನಂಬಿಕೆಯಲ್ಲಿ ಮಂತ್ರ-ತಂತ್ರ ಎಂದು ಆ ಕಡೆ ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಲು ಅಭಿಯಾನ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಸಭೆಯಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಇದ್ದರು.

Continue Reading

ವಿಜಯನಗರ

Vijayanagara News: ವಿಜಯನಗರ ಜಿಲ್ಲೆಗೆ 85.76 ಕೋಟಿ ರೂ. ಬೆಳೆವಿಮೆ ಬಿಡುಗಡೆ

Vijayanagara News: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವಿಜಯನಗರ ಜಿಲ್ಲೆಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆಯಾಗಿದೆ.

VISTARANEWS.COM


on

85.76 crore rupees crop insurance released for Vijayanagara district says Vijayanagara District Joint Agriculture Director Sharanappa Mudgal
ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್.
Koo

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ (Vijayanagara News) ಬಿಡುಗಡೆಯಾಗಿದೆ.

ಹಡಗಲಿ ತಾಲೂಕಿಗೆ 1071.72 ಲಕ್ಷ ರೂ., ಹಗರಿಬೊಮ್ಮನಹಳ್ಳಿ ತಾಲೂಕಿಗೆ 256.62 ಲಕ್ಷ ರೂ., ಹರಪನಹಳ್ಳಿ ತಾಲೂಕಿಗೆ 6101.63 ಲಕ್ಷ ರೂ., ಹೊಸಪೇಟೆ ತಾಲೂಕಿಗೆ 38.05 ಲಕ್ಷ ರೂ., ಕೊಟ್ಟೂರು ತಾಲೂಕಿಗೆ 491.81 ಲಕ್ಷ ರೂ., ಕೂಡ್ಲಿಗಿ ತಾಲೂಕಿಗೆ 616.85 ಲಕ್ಷ ರೂ. ಬಿಡುಗಡೆಯಾಗಿದೆ.

ಇದನ್ನೂ ಓದಿ: Job News: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಆಯ್ಕೆ ಹೇಗಿರುತ್ತದೆ? ಪರೀಕ್ಷೆ ಸ್ವರೂಪವೇನು? Complete Details

ಹಡಗಲಿ ತಾಲೂಕಿನಲ್ಲಿ 3382, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 708, ಹರಪನಹಳ್ಳಿ ತಾಲೂಕಿನಲ್ಲಿ 20394, ಹೊಸಪೇಟೆ ತಾಲೂಕಿನಲ್ಲಿ 212, ಕೊಟ್ಟೂರು ತಾಲೂಕಿನಲ್ಲಿ 2402, ಕೂಡ್ಲಿಗಿ ತಾಲೂಕಿನಲ್ಲಿ 2412 ರೈತರು ಈ ಬೆಳೆ ವಿಮೆ ಪಡೆಯುತ್ತಿದ್ದಾರೆ.

ಬೆಳೆ ವಿಮೆಗೆ ನೋಂದಾಯಿಸಿದ ರೈತರು ಬೆಳೆ ವಿಮಾ ಕಂತು ತುಂಬಿದ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿಕೊಳ್ಳಲು ಕೋರಿದೆ. ಬೆಳೆ ವಿಮಾ ಜಮೆ ಆಗದಿದ್ದಲ್ಲಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಇದನ್ನೂ ಓದಿ:Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

ಪ್ರಸಕ್ತ ಸಾಲಿನಲ್ಲಿಯೂ ಸಹ ಉತ್ತಮ ಮಳೆ ಆಗುವುದೆಂಬ ಅಂದಾಜಿರುವುದರಿಂದ ಎಲ್ಲಾ ರೈತ ಬಾಂಧವರು ಕಡ್ಡಾಯವಾಗಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದೇಶ

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು.

VISTARANEWS.COM


on

Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Kisan Samman Nidhi).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Continue Reading
Advertisement
Dina Bhavishya
ಭವಿಷ್ಯ35 mins ago

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

IND vs ENG Semi Final
ಕ್ರೀಡೆ4 hours ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ6 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ6 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ7 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ7 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ7 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ8 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ8 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ8 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ10 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ12 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು14 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ17 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌