ಸಾವಯವ ಜೇನುತುಪ್ಪ ಮಾರಿ ಗೆದ್ದ ಉತ್ತರ ಪ್ರದೇಶದ ಜೇನು ಕೃಷಿಕ ನಿಮಿತ್‌ ಸಿಂಗ್‌ - Vistara News

ಕೃಷಿ

ಸಾವಯವ ಜೇನುತುಪ್ಪ ಮಾರಿ ಗೆದ್ದ ಉತ್ತರ ಪ್ರದೇಶದ ಜೇನು ಕೃಷಿಕ ನಿಮಿತ್‌ ಸಿಂಗ್‌

ಜೇನು ಕೃಷಿ ಮಾಡಿಯೂ ಗೆಲ್ಲಬಹುದು ಎಂಬುದನ್ನು ಸಾಧಿಸಿ ತೊರಿಸಿದ ಮೂವರು ಸಾಧಕರನ್ನು ಇತ್ತೀಚಿನ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪರಿಚಯಿಸಿದ್ದರು. ಅವರಲ್ಲಿ ಒಬ್ಬರಾದ ಉತ್ತರ ಪ್ರದೇಶದ ನಿಮಿತ್‌ ಸಿಂಗ್‌ ಅವರ ಬಗ್ಗೆ ತಿಳಿಯೋಣ ಬನ್ನೀ.

VISTARANEWS.COM


on

National Beekeeping & Honey Mission (NBHM)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಗಸ್ಟ್‌ ತಿಂಗಳ ʻಮನ್‌ ಕಿ ಬಾತ್‌ʼ (Mann Ki Baat) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಜೇನುಸಾಕಣೆ ಮತ್ತು ಮಧು ಮಿಷನ್‌ ಬಗ್ಗೆ ಮಾತನಾಡುತ್ತಾ ಕೆಲವು ಪ್ರಗತಿಪರ ಜೇನು ಕೃಷಿಕರ ಹೆಸರು ಹೇಳಿದ್ದರು. ಆ ಪಟ್ಟಿಯಲ್ಲಿ ಇದ್ದ ಪ್ರಮುಖ ಹೆಸರೆಂದರೆ ಉತ್ತರ ಪ್ರದೇಶದ ನಿಮಿತ್‌ ಸಿಂಗ್‌ ಅವರದ್ದು. ಸಾಮಾಜಿಕ ಬದಲಾವಣೆಗಳಿಗೂ ಕಾರಣರಾಗಿರುವ ನಿಮಿತ್‌ ಸಿಂಗ್‌ ಸಾಧನೆ ಬಹಳ ದೊಡ್ಡದು. ಅವರ ಈ ಶ್ರಮವನ್ನು ಪ್ರಧಾನಿ ಮೋದಿ ಕೂಡ ಗುರುತಿಸಿದ್ದಾರೆ.

ಎಂಜಿನಿಯರಿಂಗ್‌ ಪದವೀಧರರಾಗಿರುವ ನಿಮಿತ್‌, ತಮ್ಮ ತಂದೆಯ ಸಲಹೆಯ ಮೇರೆಗೆ ಜೇನು ಕೃಷಿಯನ್ನು ಆರಂಭಿಸಿದವರು. ಇದಕ್ಕೂ ಮೊದಲು ದೇಶದ ಉದ್ದಗಲಕ್ಕೂ ಸಂಚರಿಸಿ, ಜೇನು ಕೃಷಿಯ ಹಲವಾರು ಮಗ್ಗುಲುಗಳನ್ನು ಶೋಧಿಸಿದರು. ೨೦೧೩ರಲ್ಲಿ ಸಾವಯವ ಪದ್ಧತಿಯಲ್ಲಿ ಜೇನು ಕೃಷಿಯನ್ನು ಅಳವಡಿಸಿಕೊಂಡು, ಲಖನೌದಲ್ಲಿ ʻಮಧುಮಖ್ಖಿವಾಲಾʼ ಎಂಬ ಉದ್ದಿಮೆಯನ್ನು ಸ್ಥಾಪಿಸಿದರು.

ಆದರೆ ಆರಂಭದ ದಿನಗಳು ಸುಗಮವಾಗಿ ಇರಲಿಲ್ಲ. ಜೇನು ತುಪ್ಪದ ಹೆಸರಿನಲ್ಲಿ ಕಲಬೆರಕೆಯ ಮಾಲು ಮಾರುಕಟ್ಟೆಯಲ್ಲಿ ಬೇಕಾದಷ್ಟು ಲಭ್ಯವಿರುವುದರಿಂದ, ಇವರ ಸಾವಯವ ಜೇನುತುಪ್ಪವನ್ನು ಮಾರಾಟ ಮಾಡುವುದು ಕಷ್ಟವಾಗಿತ್ತು. ಮೊದಲೆರಡು ವರ್ಷಗಳು ಹಿನ್ನಡೆ ಅನುಭವಿಸಿದ ಮೇಲೆ, ಉತ್ಪಾದನೆ ಮತ್ತು ಮಾರಾಟವನ್ನು ಒಂದಕ್ಕೊಂದು ಪ್ರತ್ಯೇಕಿಸುವ ನಿರ್ಧಾರಕ್ಕೆ ನಿಮಿತ್‌ ಬಂದರು.

ʻʻಆರಂಭಿಕ ಹಿನ್ನಡೆಯ ನಂತರ, ಬೇರೆ ಬೇರೆ ರಾಜ್ಯಗಳಿಂದ ಜೇನು ಕೃಷಿಕರನ್ನು ನಮ್ಮ ಉದ್ದಿಮೆಯತ್ತ ಸೆಳೆಯಲು ನಿರ್ಧರಿಸಿದ್ದೆವು. ಜೇನು ಪೆಟ್ಟಿಗೆ ಸೇರಿದಂತೆ, ಜೇನು ಕೃಷಿಗೆ ಬೇಕಾದಂಥ ಸಕಲ ಸಲಕರಣೆಗಳನ್ನೂ ನಾವೇ ಅವರಿಗೆ ಒದಗಿಸಿ, ಅಗತ್ಯ ತರಬೇತಿಯನ್ನೂ ನೀಡಲಾರಂಭಿಸಿದೆವು. ಆನಂತರ ಅವರಲ್ಲಿಂದ ಬಂದ ಮಧುವನ್ನು ಬಾರಾಬಂಕಿಯಲ್ಲಿರುವ ನಮ್ಮ ಉದ್ದಿಮೆಯ ಘಟಕಕ್ಕೆ ತಂದು, ಸೋಸಿ, ಬಾಟಲಿ ತುಂಬುತ್ತಿದ್ದೆವು. ಇಂದು ಬೇರೆ ಬೇರೆ ರಾಜ್ಯಗಳ ೫೦೦ಕ್ಕೂ ಹೆಚ್ಚಿನ ಜೇನು ಕೃಷಿಕರು ನಮ್ಮೊಂದಿಗೆ ಕೈಗೂಡಿಸಿದ್ದಾರೆ. ಈಗ ನಮ್ಮಲ್ಲಿ ಅತ್ಯುತ್ತಮ ಶ್ರೇಣಿಯ ಜೇನುತುಪ್ಪ ದೊರೆಯುತ್ತದೆʼʼ ಎಂದು ನಿಮಿತ್‌ ಹೇಳಿದ್ದಾರೆ.

National Beekeeping & Honey Mission (NBHM)

ʻʻಜೇನು ಕೃಷಿಯಲ್ಲಿ ಅನುಭವ ಇರುವ ರೈತರು ನಮ್ಮೊಂದಿಗೆ ಕೈಜೋಡಿಸಲು ಹಿಂದೇಟು ಹಾಕಿದ್ದರಿಂದ, ಹೊಸ ಮತ್ತು ಅನನುಭವಿ ಕೃಷಿಕರನ್ನು ಸಂಪರ್ಕಿಸಿದೆವು. ಇದಕ್ಕೆ ಅಗತ್ಯ ಸಲಕರಣೆ, ತರಬೇತಿಯನ್ನೂ ನೀಡಿದೆವು. ಮಾತ್ರವಲ್ಲ, ಅವರು ಉತ್ಪಾದಿಸಿದ ಮಧುವಿನಲ್ಲಿ ಶೇ. ೨೦ರಷ್ಟನ್ನು ಅವರೇ ಮಾರಬೇಕು. ಅಂದರೆ ೧೦೦ ಬಾಟಲಿ ಜೇನುತುಪ್ಪವನ್ನು ರೈತನೊಬ್ಬ ಉತ್ಪಾದಿಸಿದರೆ, ೨೦ ಬಾಟಲಿಯನ್ನು ಅವರೇ ಮಾರಬೇಕು ಎಂಬ ನಿಯಮ ರೂಪಿಸಿದೆವು. ಇದರಿಂದ ಜೇನುತುಪ್ಪದ ಗುಣಮಟ್ಟ ಕಾಪಾಡಿಕೊಳ್ಳುವುದು ಸಾಧ್ಯವಾಯಿತುʼʼ ಎಂದು ತಮ್ಮ ಯಶಸ್ವೀ ಕಾರ್ಯತಂತ್ರದ ಬಗ್ಗೆ ಅವರು ವಿವರಿಸಿದ್ದಾರೆ.

ಇದೆಲ್ಲದರ ಜೊತೆಗೆ ಮುಖ್ಯವಾದ ಸಾಮಾಜಿಕ ಬದಲಾವಣೆಯೊಂದಕ್ಕೂ ನಿಮಿತ್‌ ಕಾರಣರಾಗಿದ್ದಾರೆ. ಸಮೀಪದ ಚೈನ್‌ಪುರ್ವಾ ಗ್ರಾಮವೀಗ ಜೇನು ಮೇಣದಿಂದ ಹಣತೆ ತಯಾರಿಸುವ ದೊಡ್ಡ ಕೇಂದ್ರವಾಗಿ ಬೆಳೆಯುತ್ತಿದೆ. ಮೊದಲಿಗೆ ಅಕ್ರಮ ಮದ್ಯ ತಯಾರಿಕೆ ಕುಖ್ಯಾತವಾಗಿದ್ದ ಈ ಗ್ರಾಮ ಈಗ ದೊಡ್ಡಮಟ್ಟದಲ್ಲಿ ಬದಲಾವಣೆಗೆ ತೆರೆದುಕೊಂಡಿದೆ. ಇಲ್ಲಿನ ಹೆಂಗಸರು ಮತ್ತು ಯುವಕರು ಜೇನುಮೇಣದ ಹಣತೆ ತಯಾರಿಕೆಯಲ್ಲಿ ಹಣ ಕಾಣುತ್ತಿದ್ದಾರೆ. ಬಾರಾಬಂಕಿ ಜಿಲ್ಲಾಡಳಿತ ಮತ್ತು ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ʻಮಿಷನ್‌ ಕಾಯಕಲ್ಪʼ ಎಂಬ ಉಪಕ್ರಮದ ಅಡಿಯಲ್ಲಿ, ತಯಾರಿಕೆ ಆರಂಭಿಸಿದ ಮೊದಲ ವರ್ಷದಲ್ಲೇ ಸುಮಾರು ೧೨ ಲಕ್ಷ ಹಣತೆಗಳನ್ನು ಸಿದ್ಧಪಡಿಸಿ ಮಾರಾಟ ಮಾಡಲಾಗಿದೆ.

ʻʻಈ ಗ್ರಾಮದ ಸುತ್ತಲೂ ನದಿ ಹರಿಯುತ್ತದೆ. ಹಾಗಾಗಿ ಅದನ್ನು ದಾಟಿ ವ್ಯಾಪಾರ-ವಹಿವಾಟು ನಡೆಸಲು ಗ್ರಾಮಸ್ಥರು ಉತ್ಸಾಹ ತೋರಿರಲಿಲ್ಲ. ಆದರೆ ಈಗ ʻಮಧುಮಖ್ಖಿವಾಲಾʼ ಸಂಸ್ಥೆಯ ಮೂಲಕ ನಾವೇ ಅವರಿಗೆ ಕಚ್ಚಾ ವಸ್ತುಗಳನ್ನು ನೀಡಿ, ಸಿದ್ಧ ವಸ್ತುಗಳನ್ನು ಮಾರಾಟ ಮಾಡುತ್ತಿದ್ದೇವೆ. ಗ್ರಾಮದ ಯುವಕರಿಗೂ ಮಾರಾಟದಲ್ಲಿ ತರಬೇತಿ ನೀಡಿದ್ದೇವೆ. ಅವರೀಗ ಅಕ್ರಮ ಕೆಲಸಗಳನ್ನೆಲ್ಲಾ ಬಿಟ್ಟು ಪ್ರೀತಿಯಿಂದ ದುಡಿಯುತ್ತಿದ್ದಾರೆʼʼ ಎಂದು ನಿಮಿತ್‌ ಹೆಮ್ಮೆಯಿಂದ ಹೇಳುತ್ತಾರೆ.

ʻʻಜೇನ್ನೊಣಗಳ ಸಂರಕ್ಷಣೆ ನನ್ನ ಮುಖ್ಯ ಉದ್ದೇಶಗಳಲ್ಲಿ ಒಂದು. ಭೂಮಿಯ ಮೇಲಿನ ಕಡೆಯ ಜೇನ್ನೊಣ ಮರೆಯಾಯಿತೆಂದರೆ ಭೂಮಿಗೇ ಅವಸಾನ ಎಂದರ್ಥ. ಅವುಗಳಿಗೆ ಹಾನಿ ಮಾಡದಂತೆ ಮಧುವನ್ನು ಮಾತ್ರ ತೆಗೆದು ಹಾಗೆಯೇ ಬಿಟ್ಟರೆ, ಅವು ಮತ್ತೆ ಜೇನುತುಪ್ಪವನ್ನು ಉತ್ಪಾದನೆ ಮಾಡುತ್ತವೆ. ಮಾತ್ರವಲ್ಲ, ಸಾವಿರಾರು ಹೂವುಗಳಿಗೆ ಪರಾಗಸ್ಪರ್ಶ ಮಾಡಿ ಫಲವತ್ತತೆಗೆ ಕಾರಣವಾಗುತ್ತವೆʼʼ ಎಂಬುದು ನಿಮಿತ್‌ ಅವರ ತಿಳುವಳಿಕೆಯ ಮಾತು.

ಏನಿದು ಕೇಂದ್ರ ಸರ್ಕರದ ಯೋಜನೆ?
ರಾಷ್ಟ್ರೀಯ ಜೇನುಕೃಷಿ ಮತ್ತು ಮಧು ಮಿಷನ್‌  (National Beekeeping and Honey Mission- NBHM) ಕೇಂದ್ರ ಸರ್ಕಾರದ ಒಂದು ಯೋಜನೆ. ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರ 2020 ರಲ್ಲಿ ಈ ಯೋಜನೆಯನ್ನು ಘೋಷಿಸಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಡಿಯಲ್ಲಿ ರಾಷ್ಟ್ರೀಯ ಜೇನುನೊಣ ಮಂಡಳಿ (ಎನ್‌ಬಿಬಿ) ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಇದು 2023 ರವರೆಗೆ ಜಾರಿಯಲ್ಲಿರುವ ( 3 ವರ್ಷಗಳ ಕಾಲ) ಯೋಜನೆಯಾಗಿದೆ. ಕೃಷಿ ಮತ್ತು ಕೃಷಿಯೇತರ ಕುಟುಂಬಗಳಿಗೆ ಆದಾಯ ಒದಗಿಸುವುದು ಮತ್ತು ಉದ್ಯೋಗವನ್ನು ಸೃಷ್ಟಿಸುವುದು, ಜೇನುಸಾಕಣೆ ಉದ್ಯಮವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಮೂಲಕ ತೋಟಗಾರಿಕೆ/ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ದೇಶದಲ್ಲಿ ʻಸಿಹಿ ಕ್ರಾಂತಿʼ ಮಾಡುವ ಉದ್ದೇಶದಿಂದ, ʻರಾಷ್ಟ್ರೀಯ ಜೇನುಕೃಷಿ ಮತ್ತು ಮಧು ಮಿಷನ್‌ʼ ಎಂಬ ಹೊಸ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದ್ದು, ವೈಜ್ಞಾನಿಕವಾಗಿ ಜೇನು ಕೃಷಿ ನಡೆಸುವುದಕ್ಕೆ ಪ್ರೋತ್ಸಾಹ ನೀಡಿದೆ. ಈ ಬಗ್ಗೆ ವಿವರಿಸುವಾಗ ಪ್ರಧಾನಮಂತ್ರಿ ಮೋದಿ ಅವರು, ನಿಮಿತ್‌ ಹೆಸರು ಉಲ್ಲೇಖಿಸಿದ್ದರು. ಕಳೆದ ೯ ವರ್ಷಗಳಿಂದ ಸುಸ್ಥಿರವಾಗಿ ಜೇನು ಕೃಷಿಯ ಉದ್ದಿಮೆಯಲ್ಲಿ ತೊಡಗಿಸಿಕೊಂಡಿರುವ ನಿಮಿತ್‌ ಹಲವಾರು ಪ್ರಶಸ್ತಿ-ಪುರಸ್ಕಾರಗಳಿಗೆ ಪಾತ್ರರಾಗಿದ್ದಾರೆ. ಉತ್ತರ ಪ್ರದೇಶ ಸರಕಾರ ಮತ್ತು ಬಾರಾಬಂಕಿ ಜಿಲ್ಲಾಡಳಿತ ಸಹ ಇವರ ಸಾಧನೆಯನ್ನು ಪುರಸ್ಕರಿಸಿವೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಶಿರಸಿಯ ʻಮಧುʼಕೇಶ್ವರ್‌ ಹೆಗಡೆ ಅವರ ಹೆಸರನ್ನೂ ಪ್ರಸ್ತಾಪಿಸಿದ್ದರು. ಸರಕಾರದಿಂದ ಸಬ್ಸಿಡಿ ಪಡೆದು ೫೦ ಜೇನುಗೂಡುಗಳನ್ನು ತಂದಿಟ್ಟುಕೊಂಡಿದ್ದ ಇವರು ಈಗ ೮೦೦ ಜೇನು ಕುಟುಂಬಗಳನ್ನು ಸಾಕುತ್ತಿದ್ದಾರೆ. ಟನ್‌ಗಟ್ಟಲೆ ಜೇನನ್ನು ಮಾರಾಟ ಮಾಡುತ್ತಿದ್ದಾರೆ.

ಇದನ್ನೂ ಓದಿ| ಮಧುವಿನಿಂದಲೇ ಬದುಕು ಕಟ್ಟುವ ಮಧುಕೇಶ್ವರ್‌ ಹೆಗಡೆ: ಮೋದಿ ಹೇಳಿದ ಈ ಸಾಹಸಿ ʻಜೇನುʼಗಾರ ಯಾರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೃಷಿ

ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳ ನಿವಾರಣೆಗೆ ‘ಕೃಷಿ ಸುಣ್ಣ’ ರಾಮಬಾಣ!

ಅಡಿಕೆ ಬೆಳೆ ಹಲವು ರೋಗಗಳಿಗೆ ತುತ್ತಾಗುತ್ತಿದೆ. ಒಂದೇ ದಾರಿ ಅಂದರೆ ಕ್ಯಾಲ್ಸಿಯಂ ಕೃಷಿ ಸುಣ್ಣವನ್ನು pH ಮಟ್ಟಕ್ಕೆ ಅನುಗುಣವಾಗಿ ಸರಿಯಾದ ಪ್ರಮಾಣದಲ್ಲಿ ಬಳಸುವುದು. ಇದಿಷ್ಟು ಅನೇಕ ನುರಿತ ಪ್ರಗತಿಪರ ಕೃಷಿಕರ ಅನುಭವದಿಂದ, ಒಂದಿಷ್ಟು ಜನ ವಿಜ್ಞಾನಿಗಳಿಂದ ಮತ್ತು ಅಂತರ್ಜಾಲದಲ್ಲಿ ದೊರೆತ ಮಾಹಿತಿಗಳ ಸಾರ. ಅಡಿಕೆ ಬೆಳೆಗಾರರಿಗೆ ಉಪಯುಕ್ತವಾಗುವ ಮಾಹಿತಿ ಇಲ್ಲಿದೆ.

VISTARANEWS.COM


on

soil
Koo

| ಅರವಿಂದ ಸಿಗದಾಳ್, ಮೇಲುಕೊಪ್ಪ
ಬಿಸಿಲಿನ ಕಾವಿಗೆ ಲಿಂಬೆ ರಸ, ಬೆಲ್ಲ ಬೆರೆಸಿದ ಪಾನಕ ಕುಡಿದರೆ ಕುಡಿಯುತ್ತಾ ಇರೋಣ ಅನಿಸುತ್ತೆ. ಲಿಂಬೆ-ಬೆಲ್ಲದ ಪಾನಕವನ್ನು ಎಷ್ಟು ಕುಡಿದರೂ ಏನೂ ಆಗುವುದಿಲ್ಲ. ಮತ್ತೆರಡು ಬಾರಿ ನೇಚರ್ ಕಾಲ್‌ಗೆ ಹೋಗಬೇಕಾಗಬಹುದು ಅಷ್ಟೆ! ಅಷ್ಟು ಪಾನಕ ಕುಡಿದರೂ ಏನೂ ಆಗದೇ ಇರುವುದಕ್ಕೆ ಒಂದು ಮುಖ್ಯ ಕಾರಣ ಪಾನಕದಲ್ಲಿ ಬಳಸಿದ ಬೆಲ್ಲದಲ್ಲಿರುವ ಸುಣ್ಣದ ಅಂಶ! ಯಾವಾಗಲೂ ಗ್ಯಾಸ್ಟ್ರಿಕ್‌ ಸಮಸ್ಯೆ ಇದ್ರೆ, ಜೆಲುಸಿಲ್ MPS ಅನ್ನುವ (ಅಥವಾ ಅದೇ ತರಹದ ಡೈಜಿನ್ ಮಾತ್ರೆ) ಒಂದು ಲೈಟ್ ಪಿಂಕ್ ಬಣ್ಣದ, ದಪ್ಪ ಸಿರಪ್ ಕೊಡ್ತಾ ಇದ್ರು. ಶುಂಠಿ ಪೆಪ್ಪರ್‌ಮೆಂಟಿನ ಪರಿಮಳದ ಅದರಲ್ಲಿ ಅಲ್ಯುಮಿನಿಯಂ ಹೈಡ್ರಾಕ್ಸೈಡ್ ಮತ್ತು ಮೆಗ್ನೀಶಿಯಂ ಹೈಡ್ರಾಕ್ಸೈಡ್ ಮೆಯಿನ್ ಇಂಗ್ರೀಡಿಯಂಟ್ಸ್. ಈ ಅಲ್ಯುಮಿನಿಯಂ ಮತ್ತು ಮೆಗ್ನೀಶಿಯಂ ಹೈಡ್ರಾಕ್ಸೈಡ್‌ಗಳು ಹೊಟ್ಟೆಯ ಮತ್ತು ದೇಹದ ಆ್ಯಸಿಡಿಟಿ pH ಮಟ್ಟವನ್ನು ಅಗತ್ಯದ 7.35ಗೆ ಬರುವಂತೆ ಮಾಡುತ್ತದೆ.

ಗ್ಯಾಸ್ಟಿಕ್ ಸಮಸ್ಯೆ ನಿಧಾನವಾಗಿ ನಾರ್ಮಲ್‌ಗೆ ಬರುತ್ತದೆ. (ಈಗ ಹೆಚ್ಚಾಗಿ ಈ ಸಿರಪ್ ಕೊಡುವುದು ಕಡಿಮೆ, ಪೆಂಟಾಪ್ರಸೋಲ್, ರ‌ನ್ಯಾನಿಟಡಿನ್ ಮಾತ್ರೆಗಳನ್ನು ಕೊಡುತ್ತಾರೆ. ಹೋಟೆಲ್ ಅಥವಾ ಊಟದ ಮನೆಗೆ ಹೋಗುವವರೂ ATM ಸ್ಮಾರ್ಟ್ ಕಾರ್ಡ್ ಜತೆ ಪಾಕೇಟ್‌ನಲ್ಲಿ ಒಂದು ಪೆಂಟಾಪ್ರೆಸೋಲ್ ಮಾತ್ರೆ ಇಟ್ಕೊಂಡು ಹೋಗುವವರೂ ಇದ್ದಾರೆ!

ಮನುಷ್ಯನ ರಕ್ತದಲ್ಲಿ pH ಮಟ್ಟ 7.35 to 7.45 ಇರಬೇಕು. 7.35ಗಿಂತ ಕಡಿಮೆ ಇದ್ದರೆ ಅದು ಅಸಿಡಿಕ್. ಅಸಿಡಿಕ್‌ಗೆ ಕಾರಣ ಹೆಚ್ಚಾಗಿ ಸೇವಿಸುವ ಕಾಫಿ, ಸ್ವೀಟು, ಕೆಲವು ಜ್ಯೂಸ್‌ಗಳು, ಕರಿದ ತಿಂಡಿಗಳು, ಕೆಮಿಕಲ್ ಮಿಶ್ರಿತ ಆಹಾರ, ಸೋಡಾ ಬೆರೆಸಿದ ವಡೆ/ಮೆಣಸಿನ ಕಾಯಿ ಬಜ್ಜಿ, ಜೆಂಕ್ ಫುಡ್‌ಗಳು, ಪ್ರಿಸರ್ವೆಟಿವ್, ಟೇಸ್ಟಿಂಗ್, ಪೌಡರ್, ವಿನೇಗರ್, ಕಲ್ಮಶ ವಾತಾವರಣ, ಹೈಪರ್‌ಟೆನ್ಷನ್ ಇತ್ಯಾದಿ. ಇದೆಲ್ಲದರ ಪರಿಣಾಮ ಗ್ಯಾಸ್ಟ್ರಿಕ್ ಎಂಬ ರೋಗವಲ್ಲದ ರೋಗದ ನಿತ್ಯ ಬಾಧೆ! ಗ್ಯಾಸ್ಟ್ರಿಕ್ ಅಂದ್ರೆ ವ್ಯತ್ಯಾಸ ಆದ pH ಮಟ್ಟ. ಗ್ಯಾಸ್ಟ್ರಿಕ್ ಆದಾಗ ದೇಹದ ಚಟುವಟಿಕೆ ಕ್ಷೀಣಿಸುತ್ತದೆ. ಬೇರೆ ಕಾಯಿಲೆಗಳಿಗೆ ಆಹ್ವಾನ ಆಗುತ್ತದೆ.

ಮನುಷ್ಯರಂತೆ ಮಣ್ಣು, ನೀರು, ವಾತಾವರಣ ಮತ್ತು ಸಸ್ಯಗಳ pH ವ್ಯತ್ಯಾಸ ಆದಾಗ ಅವುಗಳೂ ಅನಾರೋಗ್ಯದಿಂದ ಬಳಲುತ್ತವೆ. ಪ್ರಕೃತಿಯಲ್ಲಿ ಚೇತನ-ಚಟುವಟಿಕೆಗಳು ಕಮ್ಮಿಯಾಗುತ್ತವೆ. ಅನೇಕ ಗಿಡ ಮರಗಳ ಬೆಳವಣಿಗೆ ಕುಂಠಿತವಾಗುತ್ತವೆ.

ಮಣ್ಣಿನ pH ತುಂಬಾ ಕಮ್ಮಿಯಾದರೆ ಏನಾಗುತ್ತದೆ?

ಯಾವಾಗ ಮಣ್ಣಿನ pH ತುಂಬ ಕಮ್ಮಿಯಾಗುತ್ತದೆ (ಅಂದರೆ ಆ್ಯಸಿಡಿಕ್ ಆಗುತ್ತದೆ) ಆಗ ಗಿಡ ಮರಗಳು ತಮ್ಮ ಬೇರುಗಳಿಂದ ಪೋಷಕಾಂಶಗಳನ್ನು ಹೀರಿಕೊಳ್ಳುವುದು ಕಷ್ಟವಾಗುತ್ತದೆ. ಯಾವಾಗ ಗಿಡ ಮರಗಳಿಗೆ ಪೋಷಕಾಂಶಗಳು ಕಡಿಮೆಯಾಗುತ್ತವೆ ಪರಿಣಾಮ ಗಿಡ ಮರಗಳ ಬೆಳವಣಿಗೆ ಕಮ್ಮಿಯಾಗುತ್ತವೆ, ಸೊರಗುತ್ತವೆ ಮತ್ತು ರೋಗ ಬರುವ ಪರಿಸ್ಥಿತಿ ನಿರ್ಮಾಣವಾಗಬಹುದು. ಅದರ ಪರಿಣಾಮ ಹೂ ಬಿಡುವುವುದು ಕಡಿಮೆಯಾಗುತ್ತದೆ. ಮಳೆಗಾಲದಲ್ಲಿ ಮೇಲ್ಮೈ ಮಣ್ಣು ಹೆಚ್ಚು ಅ್ಯಸಿಡಿಕ್ ಆಗುವುದರಿಂದ ಗಿಡಗಳು ಹೂ ಬಿಡುವುದು ಕಡಿಮೆ. (‘ಮಳೆ ಜಾಸ್ತಿಯಾಗಿ ಮಳೆಗಾಲದಲ್ಲಿ ದೇವರಿಗೂ ಹೂವಿಲ್ಲ’ ಅನ್ನುವ ಮಾತು ನೆನಪಿಸಿಕೊಳ್ಳಿ). pH ಮಟ್ಟ ಕಡಿಮೆಯಾದಾಗ (ಅ್ಯಸಿಡಿಕ್ ಆದಾಗ) ಫಲ ಬಿಡುವ, ಬಿಟ್ಟ ಫಲ ಪಕ್ವವಾಗುವ (ಬೆಳೆಯುವ) ಗತಿಯೂ ನಿಧಾನವಾಗುತ್ತದೆ. ಮಣ್ಣಿನ pH ಮಟ್ಟ ಕಡಿಮೆಯಾದ ಕಾರಣ ಹಿಂಬೆಳಸು ಅಥವಾ ಅಡಿಕೆ ಕೊನೆ ತೆಗೆಯುವ ದಿನಗಳು ಮುಂದಕ್ಕೆ ಹೋಗುತ್ತವೆ. ಗಮನಿಸಿ ನವರಾತ್ರಿಗೆ ಅಡಿಕೆ ಕೊನೆ ತೆಗೆಯುತ್ತಿದ್ದವರು ದೀಪಾವಳಿ ಮುಗಿದು ಪಕ್ಷ ಕಳೆದರೂ ‘ಕೊನೆ ಬಂದಿಲ್ಲ ಅಂತಿರುತ್ತಾರೆ. ಇದಕ್ಕೆ ಬೇರೆ ಕಾರಣಗಳೂ (ಉಷ್ಣತೆ, ಚಳಿ, ಹ್ಯುಮಿಡಿಟಿ ಇತ್ಯಾದಿ) ಇರಬಹುದು. ಅದರ ಜತೆಗೆ ಮಣ್ಣಿನ pH ಕಡಿಮೆಯಾದ ಕಾರಣವೂ ಇರಬಹುದು ಎನ್ನುವ ಅಭಿಪ್ರಾಯ ಇದೆ.

ಎಲೆ ಚುಕ್ಕಿ ರೋಗ

ನಿರಂತರ ಸರಿ ಸುಮಾರು ಏಳು ತಿಂಗಳಿಗೂ ಹೆಚ್ಚು ಸುರಿದ ಮಳೆ ನೀರಿನಿಂದ ಮಣ್ಣಿನ pH ಮಟ್ಟ ತೀವ್ರವಾಗಿ ಕಡಿಮೆಯಾಗಿ ಅಡಿಕೆ ಮರಗಳು ಶಕ್ತಿಗುಂದಿ ಎಲೆ ಚುಕ್ಕಿ ರೋಗ, ಅಡಿಕೆ ಅಂಡೊಡಕು, ಅಡಿಕೆ ಬೆಳವಣಿಗೆ ಕಮ್ಮಿಯಾಗಿರುವುದು, ಅಡಿಕೆ ಹಡ್ಳು ಹಳದಿಯಾಗುವುದು, ಎಳೆ ಅಡಿಕೆಗಳು ಉದುರುವುದು, ಉದುರುವಾಗಲೂ ಚಿಗುರು ಅಡಿಕೆ ಹಳದಿ ಬಣ್ಣಕ್ಕೆ ತಿರುಗಿ ಉದುರುವುದು, ಕೊಳೆ ರೋಗ ಎಲ್ಲ ಕಾಣಿಸಬಹುದು.

ಸರ್ವೇಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಕ್ಯಾಲ್ಸಿಯಂ ಸುಣ್ಣ, ಡೋಲೋಮೇಟ್ ಸುಣ್ಣ ಬಳಕೆಗೆ ವಿಜ್ಞಾನಿಗಳು ಶಿಫಾರಸು ಮಾಡುತ್ತಾರೆ. (ಮನುಷ್ಯರ ದೇಹದ pH ವ್ಯತ್ಯಾಸದ ಗ್ಯಾಸ್ಟ್ರಿಕ್‌ ಸರಿಪಡಿಸಲು ಕೊಡುವ ಔಷಧಿಯಂತೆ)
ಅನೇಕರು ಏಪ್ರಿಲ್-ಮೇ ತಿಂಗಳಲ್ಲಿ ತೋಟಕ್ಕೆ ಸುಣ್ಣ ಕೊಟ್ಟಿದ್ದರೂ, ಮಳೆಯ ತೀವ್ರತೆ ಮತ್ತು ಮಳೆ ದೀರ್ಘಕಾಲ ಬಿದ್ದ ಪರಿಣಾಮವಾಗಿ ಮಣ್ಣಿನ pH ಕಮ್ಮಿಯಾಗಿರಬಹುದು.

ಸಾಂಪ್ರದಾಯಿಕ ಬೇಸಾಯ ಪದ್ಧತಿ ಮಾಯ

ಸಾಂಪ್ರದಾಯಿಕ ಬೇಸಾಯ ಪದ್ಧತಿ ಕಡಿಮೆ ಮಾಡಿ, ರಾಸಾಯನಿಕ ಗೊಬ್ಬರ ಬಳಸುವಿಕೆಯಿಂದಲೂ ಮಣ್ಣಿನ pH ಕಡಿಮೆಯಾಗಿರಬಹುದು. (ನಮಗೂ ಯಾವುದೇ ಔಷಧಿ ಕೊಟ್ಟರೂ ಅವುಗಳ ಜೊತೆ ದಿನಕ್ಕೆ ಒಂದರಂತಾದರೂ ಗ್ಯಾಸ್ಟ್ರಿಕ್‌ ಅಥವಾ ಆ್ಯಸಿಡಿಕ್ ಆಗದಂತೆ ಮಾತ್ರೆ ಕೊಡುವುದು ಸರ್ವೇಸಾಮಾನ್ಯ). ಅದೇ ರೀತಿ ಮೇಲೆ NPK ಕೆಮಿಕಲ್ ರಸಗೊಬ್ಬರಗಳೂ ಮಣ್ಣಿನ pH ಮಟ್ಟ ಇಳಿಸಿ, ಅಸಿಡಿಕ್ ಮಾಡುತ್ತವೆ ಎಂದಾಯ್ತು.

ಅಂತರ್ಜಾಲದಲ್ಲಿ ಏನಿದೆ ಉತ್ತರ?

ಅಂತರ್ಜಾಲದಲ್ಲಿ ಮಣ್ಣಿನ pH ಸಮಸ್ಯೆಗಳನ್ನು ಕೇಳಿದರೆ ಅದು ಕೊಡುವ ಉತ್ತರ: “Early identification of soil pH problems is important as it can be both costly and difficult to correct long-term nutrient deficiencies” ಎಂದು.

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ, ಮಣ್ಣಿನ ನಿರಂತರ pH ಸಮತೋಲನ(6 ರಿಂದ 7.5) ವನ್ನು ಕಾಪಾಡಿಕೊಳ್ಳುವಲ್ಲಿ ನಾವು ಹೆಚ್ಚಿನ ಶ್ರಮ ವಹಿಸುವುದು ಈಗ ಇನ್ನೂ ಹೆಚ್ಚು ಅಗತ್ಯ ಅನಿಸುತ್ತದೆ. ಮೊದಲೇ ಹೇಳಿದಂತೆ, ಆರೊಗ್ಯವಂತ ಮನುಷ್ಯರಿಗೆ ರಕ್ತದ pH 7.35 to 7.45 ಇರಬೇಕು. 7.35 ಗಿಂತ ಕಡಿಮೆ ಇದ್ದರೆ ಅದು ಅ್ಯಸಿಡಿಕ್. ಅದೇ ರೀತಿ ಮಣ್ಣಿನ pH ಸಮತೋಲನ 6 ರಿಂದ 7.5 ಕಾಪಾಡಿಕೊಳ್ಳುವುದು, ಆ ಮೂಲಕ ಮಣ್ಣು ಅ್ಯಸಿಡಿಕ್ ಆಗದಂತೆ ನೋಡಿಕೊಳ್ಳುವುದು ಅನಿವಾರ್ಯ.

ಮಣ್ಣಿನ pH ಸಮತೋಲನ (6 ರಿಂದ 7.5) ಮಾಡುವುದು ಹೇಗೆ?

ಇದಕ್ಕಿರುವುದು ಒಂದೇ ದಾರಿ ಅಂದರೆ ಕ್ಯಾಲ್ಸಿಯಂ ಕೃಷಿ ಸುಣ್ಣವನ್ನು pH ಮಟ್ಟಕ್ಕೆ ಅನುಗುಣವಾಗಿ ಸರಿಯಾದ ಪ್ರಮಾಣದಲ್ಲಿ ಬಳಸುವುದು. ಇದಿಷ್ಟು ಅನೇಕ ನುರಿತ ಪ್ರಗತಿಪರ ಕೃಷಿಕರ ಅನುಭವದಿಂದ, ಒಂದಿಷ್ಟು ಜನ ವಿಜ್ಞಾನಿಗಳಿಂದ ಮತ್ತು ಅಂತರ್ಜಾಲದಲ್ಲಿ ದೊರೆತ ಮಾಹಿತಿಗಳ ಸಂಕ್ಷಿಪ್ತ ರೂಪ.

ಅತಿಯಾದ ಮಳೆಯಿಂದ, ತೇವಾಂಶದ ಆರ್ದ್ರತೆಯಿಂದ ಮಣ್ಣು ಮಾತ್ರ ಅಲ್ಲ, ತೋಟದ ವಾತಾವರಣ, ಗಿಡ ಮರಗಳ ಒಳ ಭಾಗದ pH ಮಟ್ಟವೂ ಅ್ಯಸಿಡಿಕ್ ಆಗಬಹುದು ಎನ್ನುವುದು ಕೆಲವರ ಅಭಿಪ್ರಾಯ. ನೈಟ್ರೋಜನ್ ರಸಗೊಬ್ಬರ ಬಳಕೆಯೂ ಮಣ್ಣಿನ pH ಮಟ್ಟವನ್ನು ಕಡಿಮೆ ಮಾಡುತ್ತದೆಯಂತೆ. ಈ ಬಗ್ಗೆಯೂ ಹೆಚ್ಚಿನ ಗಮನ ಅಗತ್ಯ. ಇದು ಹೌದಾದರೆ ಮುಂಗಾರು ಮುನ್ನ ರಸಗೊಬ್ಬರ ಬೇಸಾಯವೂ ಮರು ಚಿಂತನೆ ಮಾಡಬೇಕು. ಈ ಎಲ್ಲಾ ಕಾರಣಗಳಿಂದ ಮಾಹಿತಿಗಳಿಂದ ಒಂದಂತು ಸ್ಪಷ್ಟ, ಎಲೆ ಚುಕ್ಕಿ ರೋಗ (ಮತ್ತಿತರ ರೋಗಗಳಾದ, ಅಡಿಕೆ ಅಂಡೊಡಕು, ಅಡಿಕೆ ಉದುರುವಿಕೆ, ಹಳದಿ ಎಲೆ ಇತ್ಯಾದಿಗಳು ಕೂಡ) ಹೆಚ್ಚುತ್ತಿರುವುದಕ್ಕೆ ಮಣ್ಣಿನ pH ಮಟ್ಟ ಇಳಿದು ಮಣ್ಣು ಅ್ಯಸಿಡಿಕ್ ಆಗುತ್ತಿರುವುದೂ ಒಂದು ಕಾರಣ. pH ಮಾತ್ರ ಕಾರಣ ಅಲ್ಲದಿರಬಹುದು, ಆದರೆ ಅದೂ ಒಂದು ಪ್ರಬಲವಾದ ಕಾರಣ. ಜತೆಗೆ ಫಂಗಸ್ ಬೆಳವಣಿಗೆ, ಪೌಷ್ಟಿಕಾಂಶ ಕೊರತೆಗೂ pH ಕಾರಣವಂತೂ ನಿಜ. ಇದಿಷ್ಟು ಮಣ್ಣಿನ pH ವಿಚಾರದ ಬೇಸಿಕ್ ವಿಚಾರಗಳು.

ಮಣ್ಣಿನ pH ವಿಚಾರದಲ್ಲಿ ಸರಕಾರ, ಇಲಾಖೆಗಳು, ಕೃಷಿ ವಿಜ್ಞಾನಿಗಳು ಏನು ಮಾಡಬೇಕು?

pH ನಿಯಂತ್ರಣದ ಸುಣ್ಣ ಬಳಕೆಯ ಮತ್ತು ಇತರ ಅಗತ್ಯ ವಿಚಾರದಲ್ಲಿ ಸರಕಾರ, ಅದರ ಇಲಾಖೆಗಳು ಮತ್ತು ಕೃಷಿ ವಿಜ್ಞಾನಿಗಳು ಹೆಚ್ಚಿನ ಗಮನ ಕೊಡಬೇಕಾಗಿದೆ:

  • ಸಾಮಾನ್ಯವಾಗಿ ಸಣ್ಣ ರೈತರು, ಅತಿ ಸಣ್ಣ ರೈತರು ಮಣ್ಣು ಪರೀಕ್ಷೆ ಮಾಡಿಸಿ ಮಣ್ಣಿನ pH ತಿಳಿಯುವ ಕ್ರಮಕ್ಕೆ ಮುಂದಾಗುವುದಿಲ್ಲ.
    ಇಲಾಖೆಗಳು ರೈತರರಿಗೆ ಈ ಬಗ್ಗೆ ಮಾರ್ಗದರ್ಶನ ಮಾಡಬೇಕಿದೆ. (ಹಿಂದೆ ಆಕಾಶವಾಣಿಯ ಮೂಲಕ, ಹಳ್ಳಿಗಳಲ್ಲಿ ಕೃಷಿ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ, ಗೋಡೆ ಬರಹಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿತ್ತು. ಈಗ ಅವೆಲ್ಲ ನಿಂತು ಹೋಗಿವೆ.)
  • ತೋಟಗಾರಿಕೆ ಅಥವಾ ಕೃಷಿ ಇಲಾಖೆಗಳು ಮಣ್ಣಿನ ಯಾವ pH ಮಟ್ಟಕ್ಕೆ ಎಷ್ಟು ಸುಣ್ಣ ಬಳಸಬೇಕು ಎಂದು ನೇರವಾಗಿ ರೈತರಿಗೆ ತಿಳಿಸುವ ಪ್ರಯತ್ನ ಮಾಡುವುದಿಲ್ಲ. ಕೆಲವು ಕಡೆ, ಜನರಲ್ ಆಗಿ ಎಕರೆಗೆ ಪ್ರತಿ ಎರಡು ವರ್ಷಗಳಿಗೊಮ್ಮೆ 5 ಕ್ವಿಂಟಾಲ್ ಸುಣ್ಣ ಬಳಸಿ ಎಂದು ಶಿಫಾರಸ್ ಮಾಡುತ್ತಾರೆ. ಇದು ವೈಜ್ಞಾನಿಕ ಕ್ರಮ ಅಲ್ಲ.
  • ಸಬ್ಸಿಡಿ ದರದಲ್ಲಿ (ಒಂದು ಕೆ.ಜಿ. ಸುಣ್ಣಕ್ಕೆ 70 ಪೈಸೆ ದರದಲ್ಲಿ) ಕೃಷಿ ಇಲಾಖೆಯಿಂದ ಅಗ್ರಿ ಲೈಮ್ ಕೊಡಲಾಗುತ್ತಿತ್ತು. ಈಗ ಮೂರು ವರ್ಷಗಳಿಂದ ಹಾಗೆ ರಿಯಾಯ್ತಿಯಲ್ಲಿ ಸುಣ್ಣ ಕೊಡುವ ಕ್ರಮ ನಿಂತು ಹೋಗಿದೆ.
  • ಸುಣ್ಣ ಬಳಸುವ ಸಮಯವಾಗಿ ಸಾಮಾನ್ಯ ಏಪ್ರಿಲ್-ಮೇ‌ನಲ್ಲಿ ಬಳಸಲು ಶಿಫಾರಸ್ಸು ಮಾಡಲಾಗುತ್ತದೆ. ವಿಪರೀತ ಮಳೆ, ದೀರ್ಘಕಾಲದ ಮಳೆಯ ಕಾರಣ ಅಗತ್ಯ ಬಿದ್ದರೆ ಹೆಚ್ಚುವರಿಯಾಗಿ ಸುಣ್ಣ ಬಳಸಬಹುದಾ? ಹೌದಾದರೆ ಎಷ್ಟು ಪ್ರಮಾಣ? ಎಷ್ಟು ಸಮಯದ ಅಂತರದಲ್ಲಿ ಬಳಸಬೇಕು? ಈ ಬಗ್ಗೆ ಮಾಹಿತಿಗಳು ಇರುವುದಿಲ್ಲ.
  • ಅಗ್ರಿ ಲೈಮ್ ಮತ್ತು ಹರಳು ರೂಪದ ಡೋಲೋಮೇಟ್ (ಕ್ಯಾಲ್ಸಿಯಂ+ ಮೆಗ್ನೀಸಿಯಂ ಇರುವಂತಹದು) ಯಾವುದನ್ನು ಯಾವಾಗ ಬಳಸಬೇಕು ಎಂದು ಕ್ಲಿಯರ್ ಮಾಹಿತಿ ರೈತರಿಗೆ ತಿಳಿಸುವ ಪ್ರಯತ್ನ ಇಲ್ಲ. ಮಣ್ಣಿನ ಪರೀಕ್ಷೆಯ ವರದಿ ಮತ್ತು ಕಾಲಮಾನ, ಹವಾಮಾನಕ್ಕೆ ಅನುಗುಣವಾಗಿ ಇವುಗಳಲ್ಲಿ ಒಂದನ್ನು ಬಳಸಬೇಕಾಗುತ್ತದೆ.
  • ಸುಣ್ಣ ಬಳಸುವಾಗ ಅಡಿಕೆ ಮರದ ಬುಡ, ಪಟದ ಮಧ್ಯ, ಕಪ್ಪು ಎಲ್ಲಾ ಕಡೆ ಬಳಸಬೇಕಾ? ಈ ಬಗ್ಗೆ ಕೇಸ್ ಟು ಕೇಸ್ ಬೇಸಿಸ್ ಮಾಹಿತಿ ಕೊಡಬೇಕಾದ ಅಗತ್ಯ ಇಲಾಖೆಗಳದ್ದಾಗಬೇಕು.
  • ಸುಣ್ಣ ಎಷ್ಟು ಸಮಯದವರೆಗೆ ಮಣ್ಣಿನ pH ನಿಯಂತ್ರಣ ಮಾಡುತ್ತದೆ? ಅಗತ್ಯಕ್ಕಿಂತ ಹೆಚ್ಚು ಸುಣ್ಣದಿಂದ ಯಾವ ಯಾವ ಬೆಳೆಗೆ ಹೇಗೆ ತೊಂದರೆ ಆಗಬಹುದು? ಸುಣ್ಣ ಬಳಸುವಾಗಣ್ಣಿನಲ್ಲಿ ತೇವಾಂಶ ಹೇಗಿರಬೇಕು? ಬೇಸಿಗೆಯಲ್ಲಿ ಸುಣ್ಣ ಬಳಸಿದ ಮೇಲೆ ಯಾವಾಗ ನೀರು ಕೊಡಬೇಕು?….. ಹೀಗೆ ಉದ್ಭವಿಸುವ ಪ್ರಶ್ನೆಗಳಿಗೆ ವಿಜ್ಞಾನಿಗಳು, ಇಲಾಖೆಗಳು ಸುಲಭವಾಗಿ ಆಯಾಯ ಪ್ರದೇಶಗಳಲ್ಲಿ ರೈತರಿಗೆ ಮಾಹಿತಿ ಸಿಗುವಂತೆ ಮಾಡಬೇಕು.
  • ಸುಣ್ಣದ ಜೊತೆ ರಸಗೊಬ್ಬರ/ಸಾವಯವ ಗೊಬ್ಬರ ಒಟ್ಟಾಗಿ ಬಳಸಬಹುದಾ? ಮನುಷ್ಯನಿಗೆ ‘ರಾಸಾಯನಿಕ’ ಔಷಧಿ ಜೊತೆ ಅ್ಯಸಿಡಿಕ್ ಕಮ್ಮಿಯಾಗುವ ಮಾತ್ರೆ ಕೊಡುವಂತೆ, ಮಣ್ಣಿಗೂ ರಾಸಾಯನಿಕಗಳ ಜೊತೆ ಸುಣ್ಣ ಕೊಡಬೇಕಾಗಬಹುದಾ?
  • ಮಣ್ಣಿಗೆ ಸುಣ್ಣ ಬಳಸಿದಾಗ ಸೊಳ್ಳೆ, ನುಸಿ ತರಹದ ಕೀಟಗಳು ಕಮ್ಮಿಯಾಗುತ್ತವೆ. ಅದೇ ರೀತಿ ಕೆಲವು ಫಂಗಸ್‌ಗಳು ನಾಶವಾಗುತ್ತವೆ (ಮನೆಯ ಅಂಗಳದಲ್ಲಿ ಪಾಚಿ ಕಟ್ಟಿದಾಗ ಸುಣ್ಣ ಬಳಸಿ ಸರಿಪಡಿಸಲಾಗುತ್ತದೆ. ಪಾಚಿಯೂ ಒಂದು ರೀತಿ ಫಂಗಸ್ಸೇ ಅಲ್ವಾ?) ಇದರ ಬಗ್ಗೆ ಹೆಚ್ಚಿನ ಅಧ್ಯಯನ ಮಾಹಿತಿ ಸಿಗುವಂತಾಗಬೇಕು. ಸುಣ್ಣದಿಂದ ಉಪಯೋಗಕರ ಶಿಲೀಂಧ್ರಗಳು ನಾಶವಾಗುತ್ತವಾ? ಎರೆಹುಳುಗಳಿಗೆ ಸುಣ್ಣ ಅಪಾಯಕಾರಿಯಾ? ಉಪಯೋಗಕಾರಿಯಾ? ಎಂಬಂತಹ ಪ್ರಶ್ನೆಗಳಿಗೆ ಉತ್ತರದ ಮಾಹಿತಿಗಳು ಇಲಾಖೆಯ ಸಂಶೋಧನಾ ಪುಸ್ತಕಗಳಲ್ಲಿ ಇರಬಹುದು. ಆದರೆ, ಅವುಗಳು ರೈತರಿಗೆ ತಲುಪುತ್ತಿಲ್ಲ, ಅದಾಗಬೇಕು.
  • ಅಡಿಕೆ ಕೊಳೆ ರೋಗಕ್ಕೆ ಕಾಪರ್ ಸಲ್ಫೇಟ್ ಬಳಸುವಾಗ 1% ಸುಣ್ಣ ಬಳಸಬೇಕು ಅಥವಾ ಬೋರ್ಡೋ ದ್ರಾವಣದ pH ಮಟ್ಟ +7 ಆಗಲು ಅಗತ್ಯ ಸುಣ್ಣ ಬಳಸಬೇಕು ಎಂದು ಶಿಫಾರಸ್‌ನಲ್ಲಿ ಹೇಳಲಾಗುತ್ತದೆ. ಆದರೆ ಬೇರೆ ಯಾವ ಔಷಧಿಗಳ ಸ್ಪ್ರೇಗೆ ಸುಣ್ಣದ ಬಳಕೆ ಶಿಫಾರಸ್ ಮಾಡುವುದಿಲ್ಲ. ಅದರರ್ಥ ಬೇರೆ ಎಲ್ಲ ಔಷಧಿಗಳ pH ಮಟ್ಟ ಸಮಸ್ಥಿತಿಯಲ್ಲಿದೆ ಎಂದಾಗುವುದೆ? ಅಥವಾ pH ಸಮಸ್ಥಿತಿಗೆ ತರಲಾಗಿದೆ ಎಂದು ಅರ್ಥವೆ?
  • pH ತಕ್ಷಣ ನಿಯಂತ್ರಣಕ್ಕೆ ಬರೀ ಸುಣ್ಣವನ್ನು ದ್ರವ ರೂಪದಲ್ಲಿ ಮಣ್ಣಿಗೆ ಸ್ಪ್ರೇ ಮಾಡಬಹುದಾ?
  • ಬೋರ್ಡೋ ದ್ರಾವಣದಲ್ಲಿ ಶಿಫಾರಸ್ ಮಾಡಿದ್ದಕ್ಕಿಂತ ಹೆಚ್ಚು ಸುಣ್ಣ ಬಳಸುವ ಪದ್ದತಿ ಮಲೆನಾಡಿನ ಅನೇಕ ರೈತರಲ್ಲಿದೆ. ಹೆಚ್ಚು ಸುಣ್ಣ ಬಳಸಿದ ಪರಿಣಾಮವೇ, ಸುಣ್ಣದ ಪಾರ್ಟಿಕಲ್‌‌ಗಳೇ ನಿರ್ಧಿಷ್ಟ ಸಮಯದ ನಂತರ ಅಡಿಕೆ ಮತ್ತು ಎಲೆಗಳ ಮೇಲೆ ಶೇಕರಣೆಯಾಗಿ, ಪಾಚಿ ಕಟ್ಟಿ, ಫಂಗಸ್ ಬೆಳೆಯುವುದಕ್ಕೆ ಆ ಮೂಲಕ ಕೊಳೆ ರೋಗ ಹೆಚ್ಚುವುದಕ್ಕೆ ಕಾರಣವಾಗಬಹುದು ಎಂದು ಕೆಲವರ ಅಭಿಪ್ರಾಯ ಇದೆ. ಈ ಬಗ್ಗೆ ಸಂಶೋಧನಾ ಮಾಹಿತಿಗಳು ಇಲಾಖೆಗಳಲ್ಲಿ ವಿಜ್ಞಾನಗಳಲ್ಲಿ ಇರಬಹುದಾ?
  • ಮನುಷ್ಯರಿಗೆ ಆಪರೇಷನ್ ಆಗಬೇಕಾದರೆ BP, ಶುಗರ್ ಮತ್ತು ರಕ್ತದ pH ನಾರ್ಮಲ್ ಇರಬೇಕು. ಅದೇರೀತಿ ಅಡಿಕೆ ಗಿಡ ನೆಡುವಾಗ, ಬೇಸಾಯ ಮಾಡುವಾಗ, ಬೇಸಾಯದ ಉಳುಮೆ ಮಾಡುವಾಗ, ಬಹುಶಃ ಮರದಿಂದ ಫಸಲು ಕಿತ್ತು ತೆಗೆಯುವಾಗ(?), ರೋಗ ನಿಯಂತ್ರಣದ ಸಂಧರ್ಭಗಳಲ್ಲಿ, ಮರ ಮತ್ತು ಮಣ್ಣಿನ pH ಸಮತೋಲನ ಕಾಪಾಡುವುದು ಒಂದು ಅಗತ್ಯ ಪ್ರಕ್ರಿಯೆ ಅಲ್ವಾ? ಈ ಬಗ್ಗೆ ಕೃಷಿ ವಿಜ್ಞಾನಿಗಳು ಮಾಹಿತಿ ಕೊಡುವಂತಾಗಬೇಕು.
  • ಮಣ್ಣಿನ pH ಬಗ್ಗೆ ಒಂದಿಷ್ಟು ಮಾಹಿತಿಗಳಿವೆ ಆದರೆ, ಅಡಿಕೆ ಮರದಲ್ಲಿ ರೋಗ ಲಕ್ಷಣಗಳು ಕಂಡು ಬಂದಾಗ, ಅಡಿಕೆ ಮರದ pH ಕಡೆಗೆ ಒಂದಿಷ್ಟು ಗಮನ ಕೊಟ್ಟು, ಅಧ್ಯಯನ ಮಾಡಲಾಗಿದೆಯಾ? ಇಲಾಖೆಗಳಲ್ಲಿ ವರದಿ ಇರಬಹುದಾ?

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಎಲೆಚುಕ್ಕಿ ರೋಗ; ಸರಕಾರ, ಜನಪ್ರತಿನಿಧಿಗಳು, ಅಧಿಕಾರಿಗಳ ಹೇಳಿಕೆಗಳೇ ಬೋಗಸ್‌! ಇಲ್ಲಿದೆ ಪುರಾವೆ

ಡಿವಿಜಿಯವರ ಒಂದು ಕಗ್ಗದ ಮುಕ್ತಕ ಹೀಗಿದೆ

ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ?। ದಿನಪನದೆ? ಚಂದ್ರನದೆ? ನೀರಿನದೆ? ನಿನದೆ? ॥ ತಣಿತಣಿವ ನಿನ್ನ ಕಣ್ಣಿನ ಪುಣ್ಯವೋ? ನೋಡು। ಗುಣಕೆ ಕಾರಣವೊಂದೆ? – ಮಂಕುತಿಮ್ಮ ॥
ಅಂದರೆ, ಭೂಮಿಯಲ್ಲಿ ಚಿಗುರುವ ಹುಲ್ಲಿಗೆ ಆ ಹಸಿರುಬಣ್ಣ ಎಲ್ಲಿದ ಬಂತು? ಬೇರಿನದೋ ? ಭೂಮಿಯದೋ? ಬೆಳಕ ನೀಡುವ ಸೂರ್ಯನದೋ? ಚಂದ್ರನದೋ? ಪೂರಕವಾದ ನೀರಿನದೋ? ಅದನ್ನು ಬೆಳೆಸಿದ ನಿನ್ನದೋ? ಅಥವಾ ತಂಪ ಕಾಣುವ ನಿನ್ನ ಕಣ್ಣಿನ ಪುಣ್ಯದ್ದೋ? ಆ ಹುಲ್ಲಿನ ಹಸಿರಿನ ಗುಣಕ್ಕೆ ಕಾರಣ ಒಂದೇ ಅಲ್ಲ. ಅನೇಕ ಕಾರಣಗಳಿವೆ ಎಂದು ಮುಕ್ತಕದ ಅರ್ಥ. ಆ ಅನೇಕದಲ್ಲಿ pH ಕೂಡ ಒಂದು ಪ್ರಮುಖವಾದುದು. ಗೊಬ್ಬರ, ಪೋಶಕಾಂಶಗಳಿಗಿಂತ ಹೆಚ್ಚಿನ ಮಹತ್ವವನ್ನು ಮಣ್ಣಿನ pH (ರಸಸಾರ) ಬಗ್ಗೆ ಕೊಡಬೇಕು.
ಗ್ಯಾಸ್ಟ್ರಿಕ್ ಆ್ಯಸಿಡಿಟಿ ಇದ್ದಾಗ ಯಾವ ಒಳ್ಳೆಯ ಊಟವೂ ಸೇರುವುದಿಲ್ಲ. ತಿಂದರೆ ಜೀರ್ಣವೂ ಆಗುವುದಿಲ್ಲ. ಇದು ಕೃಷಿಗೂ ಅನ್ವಯ. ಮಣ್ಣಿನ ಆ್ಯಸಿಡಿಟಿ ಸರಿ ಮಾಡಿಕೊಂಡು, ಬೇಸಾಯದ ಊಟ ಬಡಿಸಬೇಕು.

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳಿಗೆ, ಇಳುವರಿ ಕ್ಷೀಣಿಸುವುದಕ್ಕೆ ಕಾರಣವೇ ಇದು! ಬೆಳೆಗಾರರೇ ಗಮನಿಸಿ…

Continue Reading

ಕರ್ನಾಟಕ

ವಿಸ್ತಾರ ಗ್ರಾಮ ದನಿ: ಅಡಿಕೆ ತೋಟಗಳಲ್ಲಿ ಈಗ ಪ್ರೆಸ್‌ಮಡ್ ಗೊಬ್ಬರಗಳದ್ದೇ ದಾಂಗುಡಿ!

ಸರಳವಾಗಿ ಹೇಳುವುದಾದರೆ, ಸಕ್ಕರೆ ಕಾರ್ಖಾನೆಯಿಂದ ಹೊರ ಬೀಳುವ ಅರೆದ ಕಬ್ಬಿನ ಘನತ್ಯಾಜ್ಯ ವಸ್ತುವೇ ಪ್ರೆಸ್‌ಮಡ್. ಸಕ್ಕರೆ ಕಾರ್ಖಾನೆಯಿಂದ ಹೊರಬೀಳುವ ಪ್ರೆಸ್‌ಮಡ್‌ನ್ನು ಸಂಸ್ಕರಿಸಿ, ಕಾಂಪೋಸ್ಟ್ ಮಾಡಿ, ಸಾವಯವ ಗೊಬ್ಬರ ತಯಾರಿಸಲಾಗುತ್ತದೆ. ಇನ್ನು ಕೆಲವು ಕಡೆ ಸೂಕ್ಷ್ಮ ಜೀವಾಣುಗಳನ್ನು ಬಳಸಿ ಬೇಗನೆ ಪ್ರೆಸ್‌ಮಡ್ ಗೊಬ್ಬರ ತಯಾರಿಸಲಾಗುತ್ತದೆಯಂತೆ.

VISTARANEWS.COM


on

vistara grama dani ವಿಸ್ತಾರ ಗ್ರಾಮ ದನಿ
ಮ್ಯಾಮ್‌ಕೋಸ್‌ ಸಂಸ್ಥೆಯ ಗೊಬ್ಬರದ ಚೀಲ
Koo
Aravind Sigadal

| ಅರವಿಂದ ಸಿಗದಾಳ್, ಮೇಲುಕೊಪ್ಪ
ಒಂದು ಕಾಲದಲ್ಲಿ ಮಲೆನಾಡು ಮತ್ತು ಕರಾವಳಿ ಪ್ರದೇಶಗಳ ಅಡಿಕೆ ತೋಟಗಳ ಬೇಸಾಯಕ್ಕೆ ಕೊಟ್ಟಿಗೆ ಗೊಬ್ಬರವೇ ಪ್ರಮುಖವಾಗಿತ್ತು. ಸಣ್ಣ ಮಧ್ಯಮ ರೈತರ ಮನೆಗಳಲ್ಲಿ ಹಾಲು, ಗೊಬ್ಬರಕ್ಕೆ ಅಂತ ಕನಿಷ್ಠ ಒಂದೆರಡು ದನಗಳನ್ನಾದರೂ ಸಾಕುತ್ತಿದ್ದರು. ಕಾಲ ಬದಲಾದಂತೆ, ಹಿಂಡಿ, ಮೇವುಗಳ ಬೆಲೆ ದುಬಾರಿಯಾಗಿ ಒಂದೆರಡು ದನ ಸಾಕುವುದು ನಷ್ಟದಾಯಕ ಅಂತಾಯ್ತು. ಗೋಮಾಳದ ಜಾಗಗಳೆಲ್ಲ ಕೃಷಿ ಭೂಮಿಯಾಗಿ ವಿಸ್ತರಿಸಿತು ಅಥವಾ ಮನೆದಳ ಜಾಗವಾಯಿತು. ಕುಟುಂಬ ಚಿಕ್ಕದಾಗಿದ್ದು, ಹೊಸ ತಲೆಮಾರು ಕೊಟ್ಟಿಗೆ ಕೆಲಸಗಳಿಂದ ದೂರವಾದರು. ಉಳುಮೆ ಮಾಡುವುದಕ್ಕೆ ಯಂತ್ರಗಳು ಬಂದವು. ಕೊಟ್ಟಿಗೆಗೆ ಬೇಕಿದ್ದ ಸೊಪ್ಪು, ದರಗು ತರುವುದಕ್ಕೆ ಆಳುಗಳು ಸಿಗದ ಪರಿಸ್ಥಿತಿ ಬಂತು. ಹೀಗೆ ಹಲವಾರು ಕಾರಣಗಳಿಂದ ಹಳ್ಳಿಯ ಪ್ರತೀ ಮನೆಗಳಲ್ಲಿದ್ದ ದನ, ಎತ್ತು, ಎಮ್ಮೆಗಳು ಕ್ರಮೇಣ ಮಾಯವಾದವು. ಪರಿಣಾಮ ತೋಟಕ್ಕೆ ಕೊಟ್ಟಿಗೆ ಗೊಬ್ಬರ ಇಲ್ಲ ಅನ್ನುವ ಪರಿಸ್ಥಿತಿ ನಿರ್ಮಾಣವಾಗಿ ಹೋಯ್ತು.
ಆಗ ಬಂದಿದ್ದು ಕುರಿ ಗೊಬ್ಬರ, ಕೋಳಿ ಗೊಬ್ಬರ ಮತ್ತು ದೊಡ್ಡ ಮಟ್ಟದಲ್ಲಿ 30kg, 40kg, 50kg ಚೀಲಗಳಲ್ಲಿ ಪ್ಯಾಕ್ ಆಗಿ ಬಂದ ‘ಪ್ರಸ್‌ಮಡ್ ಗೊಬ್ಬರ’.

ಏನಿದು ‘ಪ್ರೆಸ್‌ಮಡ್ ಗೊಬ್ಬರ?

ಸರಳವಾಗಿ ಹೇಳುವುದಾದರೆ, ಸಕ್ಕರೆ ಕಾರ್ಖಾನೆಯಿಂದ ಹೊರ ಬೀಳುವ ಅರೆದ ಕಬ್ಬಿನ ಘನತ್ಯಾಜ್ಯ ವಸ್ತುವೇ ಪ್ರೆಸ್‌ಮಡ್. ಸಕ್ಕರೆ ಕಾರ್ಖಾನೆಯಿಂದ ಹೊರಬೀಳುವ ಪ್ರೆಸ್‌ಮಡ್‌ನ್ನು ಸಂಸ್ಕರಿಸಿ, ಕಾಂಪೋಸ್ಟ್ ಮಾಡಿ, ಸಾವಯವ ಗೊಬ್ಬರ ತಯಾರಿಸಲಾಗುತ್ತದೆ. ಸಕ್ಕರೆ ಕಾರ್ಖಾನೆಯ ಹೊರಹೊಮ್ಮುವ ಇನ್ನೊಂದು ಘನತ್ಯಾಜ್ಯ ವಸ್ತು ಮೊಲ್ಯಾಸೆಸ್‌. ಈ ಮೊಲ್ಯಾಸೆಸ್‌ನ್ನು ಬಳಸಿಕೊಂಡು ಸಾರಾಯಿ ತಯಾರಿಸಲಾಗುತ್ತದೆ. ಹಾಗೆ ಸರಾಯಿ ತಯಾರಿಸುವಾಗ ಹೊರಬೀಳುವ ಸ್ಪೆಂಟ್‌ವಾಶ್ ಎಂಬ ನಿರುಪಯುಕ್ತ ನೀರನ್ನು, ಅದೇ ಕಬ್ಬಿನ ತ್ಯಾಜ್ಯದಿಂದ ಉತ್ಪನ್ನವಾದ ಪ್ರೆಸ್‌ಮಡ್ ಸಾವಯವ ಗೊಬ್ಬರ ತಯಾರಿಕೆಯಲ್ಲಿ ಬಳಸಲಾಗುತ್ತದೆ.

ಕಬ್ಬಿನಿಂದ ಬಂದ ತ್ಯಾಜ್ಯ ಪ್ರೆಸ್‌ಮಡ್ ಅನ್ನು ಮೊದಲು ಬಯಲಿನಲ್ಲಿ ರಾಶಿ ಹಾಕಿ, ಒಣಗಿಸಲಾಗುತ್ತದೆ. ಅನೇಕ ಬಾರಿ ಯಂತ್ರಗಳನ್ನು ಬಳಸಿ, ಚನ್ನಾಗಿ ಮಿಶ್ರಣಗೊಳಿಸಲಾಗುತ್ತದೆ. ಸಹಜವಾಗಿ ಪ್ರೆಸ್‌ಮಡ್ ಕಾಂಪೋಸ್ಟ್ ಆಗಿ ಬದಲಾಗಲು 3-4 ತಿಂಗಳುಗಳೇಬೇಕು. ಆದರೆ, 3-4 ತಿಂಗಳುಗಳ ಕಾಲದ, ಪ್ರತಿ ದಿನದ ಕಬ್ಬಿನ ತ್ಯಾಜ್ಯ ಪ್ರೆಸ್‌ಮಡ್‌ನ್ನು ಶೇಖರಿಸುವಷ್ಟು ಸ್ಥಳ ಇಲ್ಲದ ಸಕ್ಕರೆ ಕಾರ್ಖಾನೆಗಳಲ್ಲಿ ಅಥವಾ ಮದ್ಯ ತಯಾರಿಕಾ ಡಿಸ್ಟಿಲರಿಗಳಲ್ಲಿ, ಕೆಲವು ಕೆಮಿಕಲ್‌ಗಳನ್ನೂ, ಇನ್ನು ಕೆಲವು ಕಡೆ ಸೂಕ್ಷ್ಮ ಜೀವಾಣುಗಳನ್ನು ಬಳಸಿ ಬೇಗನೆ ಪ್ರೆಸ್‌ಮಡ್ ಗೊಬ್ಬರ ತಯಾರಿಸಲಾಗುತ್ತದೆಯಂತೆ.

ಬ್ಯಾಕ್ಟೀರಿಯಾ ಮತ್ತು ಆ್ಯಕ್ಟಿನೋ ಮೈಸಿಟಸ್‌ಗಳಂತಹ ಜೀವಾಣು ಕೋಶಗಳನ್ನು ಪ್ರೆಸ್‌ಮಡ್‌ಗೆ ಸೇರಿಸಲಾಗುತ್ತದೆ. ಡಿಸ್ಟಿಲರೀಸ್‌ನಿಂದ ಹೊರಬರುವ ಸ್ಪೆಂಟ್‌ವಾಶ್ ನಿರುಪಯುಕ್ತ ನೀರನ್ನು ಲಾರಿಯ ಸಹಾಯದಿಂದ ಪ್ರೆಸ್‌ಮಡ್‌ಗೆ ಸಿಂಪಡಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಗಳು ಸುಮಾರು 3-4 ತಿಂಗಳುಗಳು ನಿರಂತರವಾಗಿ ನಡೆಯುತ್ತದೆ. (ಬೈ ಪಾಸ್ ಸಿಸ್ಟಮ್‌ನಲ್ಲಿ ಕೆಮಿಕಲ್ ಬಳಸಿ, 40-45 ದಿನಗಳಲ್ಲೂ ಪ್ರೆಸ್‌ಮಡ್ ಗೊಬ್ಬರ ತಯಾರಿಸುವ ಸಿಸ್ಟಮ್ ಕೂಡ ಇದೆಯಂತೆ! ನಂತರ ಯಂತ್ರಗಳ ಮೂಲಕ ಈ ಪ್ರೆಸ್‌ಮಡ್ ಗೊಬ್ಬರವನ್ನು ಪುಡಿಮಾಡಿ, ಟ್ರಕೋಡರ್ಮಾ, ಸ್ಯುಡೋಮಾನಸ್‌ನಂತಹ ಕೆಲವು ಅಗತ್ಯ ಸೂಕ್ಷ್ಮ ಜೀವಾಣುಗಳನ್ನು ಬೆರೆಸಿ, ಪ್ಯಾಕ್ ಮಾಡಲಾಗುತ್ತದೆ.

ಸಾವಯವ ಗೊಬ್ಬರ ಮಾರಾಟ ಮಾಡುವ ಕಂಪೆನಿಗಳು ಇದನ್ನು ಖರೀದಿಸಿ ತಮ್ಮ ಕಂಪೆನಿ ಹೆಸರಿನಲ್ಲಿ ರೈತರಿಗೆ ಮಾರಾಟ ಮಾಡುತ್ತವೆ. ಅಡಿಕೆ ಮಾರುಕಟ್ಟೆಯಲ್ಲಿ ದೊಡ್ಡ ಹೆಸರಿರುವ ಮ್ಯಾಮ್‌ಕೋಸ್, TSS ನಂತಹ ಸಹಕಾರಿ ಸಂಸ್ಥೆಗಳಲ್ಲದೆ ಹತ್ತಾರು ಖಾಸಗಿ ಸಂಸ್ಥೆಗಳು ಸ್ಪರ್ಧಾತ್ಮಕವಾಗಿ ಈ ಪ್ರೆಸ್‌ಮಡ್ ಗೊಬ್ಬರದ ವ್ಯವಹಾರದಲ್ಲಿ ತೊಡಗಿಸಿಕೊಂಡಿವೆ.

ಒಂದು ಕಾಲದಲ್ಲಿ, ಸಕ್ಕರೆ ಕಾರ್ಖಾನೆಗಳಲ್ಲಿನ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಹೇಗೆ ಅನ್ನುವ ಸಮಸ್ಯೆ ಇತ್ತು.
ಅಡಿಕೆ ತೋಟಗಳಿಗೆ ಕೊಟ್ಟಿಗೆ ಗೊಬ್ಬರ ಅಭಾವ ಸೃಷ್ಟಿಯಾದಾಗ, ಕಬ್ಬಿನ ತ್ಯಾಜ್ಯ ಪ್ರೆಸ್‌ಮಡ್ ಗೊಬ್ಬರವಾಗಿ ಅಡಿಕೆ ತೋಟಗಳಿಗೆ ಬಂದಿಳಿಯುವಂತಾಯ್ತು. ಈಗ ಮಲೆನಾಡು, ಕರಾವಳಿಯ ಅಡಿಕೆ ತೋಟಗಳಲ್ಲಿ ಪ್ರೆಸ್‌ಮಡ್‌ನದೇ ಬೇಸಾಯದ ಮೂಲವಸ್ತು. ಯಾವಾಗ ಪ್ರೆಸ್‌ಮಡ್ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿ, ವ್ಯಾಪಾರ, ಹಣ, ಲಾಭ ದೊಡ್ಡ ಮಟ್ಟದಲ್ಲಿ ಹರಿಯುವುದಕ್ಕೆ ಪ್ರಾರಂಭವಾಯಿತು, ಆಗ ಅನೇಕ ಕಡೆ, ತ್ವರಿತವಾಗಿ ಅವೈಜ್ಞಾನಿಕವಾಗಿ ಪ್ರೆಸ್‌ಮಡ್ ಗೊಬ್ಬರ ತಯಾರಿಕೆಯೂ ಪ್ರಾರಂಭವಾಯಿತು.

ಇದರ ಸಮಸ್ಯೆ ಏನು?

ಪ್ರೆಸ್‌ಮಡ್ ಗೊಬ್ಬರ ತಯಾರಾಗಬೇಕಾದರೆ, ಪ್ರೆಸ್‌ಮಡ್ ಕಾಂಪೋಸ್ಟ್ ಆಗಿ ಬದಲಾಗಬೇಕಾದರೆ ಬೇಕಾಗುವ ಸಾಮಾನ್ಯ ಸಹಜ ಲೀಡ್ ಟೈಮ್‌ನ್ನು ಕೆಲವು ಮಧ್ಯವರ್ತಿ ಏಜೆಂಟರು, ಸಂಸ್ಥೆಗಳು ಪರಿಗಣಿಸುತ್ತಿಲ್ಲ ಎಂಬುದು ಪ್ರೆಸ್‌ಮಡ್ ಗೊಬ್ಬರದ ಚೀಲ ತೋಟಕ್ಕೆ ಬಂದು ಬಿದ್ದಾಗ ರೈತರ ಅರಿವಿಗೆ ಬರುತ್ತಿದೆ. ಬರಿಗೈಯಲ್ಲಿ ಮುಟ್ಟಲಾರದಷ್ಟು ಬಿಸಿಯಲ್ಲಿ ಆ ಚೀಲಗಳಿರುತ್ತವೆ. ಕಂಪ್ಲೀಟ್ ಕಾಂಪೋಸ್ಟ್ ಆಗುವ ಮುನ್ನವೇ, ಅದನ್ನು ಚೀಲಕ್ಕೆ ತುಂಬಿ ರೈತರಿಗೆ ಮಾರಲಾಗಿರುತ್ತದೆ!

ಪ್ರೆಸ್‌ಮಡ್ ಗೊಬ್ಬರದ ವಿಚಾರದಲ್ಲಿ ರೈತರು ಕೇಳುವ ಪ್ರಶ್ನೆಗಳಿಗೆ ಅದರ ವರ್ತಕರಲ್ಲಿ, ವ್ಯಾಪಾರಿ ಸಂಸ್ಥೆಗಳಲ್ಲಿ, ವ್ಯಾಪಾರ ಮಾಡುವ ಸಹಕಾರಿ ಸಂಘಗಳಲ್ಲಿ ಸ್ಪಷ್ಟವಾದ ನಿಖರವಾದ ಅಧಿಕೃತ ಉತ್ತರಗಳು ದೊರೆಯುತ್ತಿಲ್ಲ. (ಅತಿ ಹೆಚ್ಚು ಪ್ರೆಸ್ ಮಡ್ ಗೊಬ್ಬರ ಮಾರಾಟ ಮಾಡುವ ಸಹಕಾರಿ ಸಂಸ್ಥೆ ಮ್ಯಾಮ್‌ಕೋಸ್‌ಗೆ, ಈ ಬರಹದ ಲೇಖಕ ಸ್ಪಷ್ಟವಾದ, ನಿಖರವಾದ, ಅಧಿಕೃತ ಮಾಹಿತಿ ಕೇಳಿ ಡಿಸೆಂಬರ್ 2023 ರಲ್ಲಿ ಕೋರಿಕೆ ಸಲ್ಲಿಸಿದ್ದು, ಉತ್ತರ ನಿರೀಕ್ಷಿಸಲಾಗುತ್ತಿದೆ.)

ಪ್ರೆಸ್‌ಮಡ್ ಗೊಬ್ಬರದ ವಿಚಾರದಲ್ಲಿ ರೈತರಲ್ಲಿ ಪ್ರಸ್ತುತ ಇರುವ ಅನುಮಾನಗಳು ಹತ್ತಾರು:

  1. ಸಕ್ಕರೆ ಕಾರ್ಖಾನೆಗಳು ಮೂರ್ನಾಲ್ಕು ತಿಂಗಳುಗಳು ಕಬ್ಬಿನ ವೇಸ್ಟನ್ನು ಸಹಜ ಕಾಂಪೋಸ್ಟ್ ಆಗುವ ಹಾಗೆ ಸಂಗ್ರಹಿಸಿ ಇಡುತ್ತಾರಾ?
  2. ಪ್ರೆಸ್‌ಮಡ್ ಗೊಬ್ಬರ ತಯಾರಿಕೆಯಲ್ಲಿ, ತಕ್ಷಣ ಕಾಂಪೋಸ್ಟ್ ಆಗುವ ಹಾಗೆ ಕೆಮಿಕಲ್ ಬಳಸುವುದು ನಿಜವಾ?
  3. ಕಾಂಪೋಸ್ಟ್ ತಯಾರಿಸುವಾಗ ಜೀವಾಣುಗಳನ್ನು (ಟ್ರೈಕೋಡರ್ಮಾ, ಸ್ಯುಡೋಮಾನಸ್… ಇತ್ಯಾದಿ) ಯಾವಾಗ ಸೇರಿಸುತ್ತಾರೆ?
  4. ಕೆಲವೊಮ್ಮೆ ಪ್ರೆಸ್‌ಮಡ್ ಗೊಬ್ಬರದ ಚೀಲಗಳನ್ನು ಬರೀ ಕೈಯಿಂದ ಮುಟ್ಟಲಾರದಷ್ಟು ಬಿಸಿ ಇರುತ್ತವೆ. ಇದರರ್ಥ, ಬಹುಶಃ ಆರೇಳು ತಿಂಗಳುಗಳು ಕಾದು, ಕಬ್ಬಿನ ವೇಸ್ಟ್ ಸಹಜ ಕಾಂಪೋಸ್ಟ್ ಆದ ಮೇಲೆ, ಗೊಬ್ಬರ ತಯಾರಿಸಿದಂತೆ ಕಾಣುವುದಿಲ್ಲ. ತಯಾರಿಕೆಯಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬ ಲಿಖಿತ ಮಾಹಿತಿಗಳು ಪ್ರಾಡಕ್ಟ್‌ನ ಬ್ಯಾಚ್‌ವೈಸ್ ಡೀಟೈಲ್ಸ್ (ಬ್ಯಾಚ್ ಮಾನುಫ್ಯಾಕ್ಚರಿಂಗ್ ರಿಕಾರ್ಡ್ ಜೊತೆಗೆ ಸರ್ಟಿಫಿಕೇಟ್ ಆಫ್ ಅನಾಲಿಸಿಸ್) ಎಲ್ಲಿ ಸಿಗುತ್ತದೆ?
  5. ಪ್ರೆಸ್‌ಮಡ್ ಗೊಬ್ಬರ ತಯಾರಿಕೆಯಲ್ಲಿ ವೇಗಗತಿಯಲ್ಲಿ ಕಾಂಪೋಸ್ಟ್ ಆಗುವುದಕ್ಕೆ ಅನೇಕ ಕೆಮಿಕಲ್‌ಗಳನ್ನು ಬಳಸಲಾಗುತ್ತಿದೆ ಮತ್ತು ಅದರ ಪರಿಣಾಮದಿಂದ ಮಲೆನಾಡು-ಕರಾವಳಿಗಳಲ್ಲಿ ಅಡಿಕೆ ರೋಗಗಳು ವಿಸ್ತರಿಸುತ್ತಿರುವುದಕ್ಕೆ ಕಾರಣ ಆಗಿರಬಹುದು ಎಂದು ಕೆಲವು ರೈತರ ಅನುಮಾನ
  6. ಡಿಸ್ಟಿಲರಿ ಸ್ಪೆಂಟ್ ವಾಶ್‌ನ್ನು* (DSW) ಕಬ್ಬಿನ ಕಾಂಪೋಸ್ಟ್ ತಯಾರಿಕೆಯಲ್ಲಿ (ಅಥವಾ ಕಬ್ಬನ್ನು ಅರೆಯುವಿಕೆಯಲ್ಲಿ) ಯಾವ ಪ್ರಮಾಣದಲ್ಲಿ ಬಳಸಲಾಗುತ್ತದೆ? DSWನ್ನು ಸರಿಯಾದ ಪ್ರಮಾಣದ ಬಳಸುವಿಕೆಯಿಂದ ಮಣ್ಣಿನ ಫಲವತ್ತತೆಗೆ ಮತ್ತು ಸಸ್ಯಗಳ ಬೆಳವಣಿಗೆಗೆ ಅನುಕೂಲ ಮತ್ತು ಅಸಮರ್ಪಕ DSW ಬಳಕೆಯಿಂದ ಮಣ್ಣು, ನೀರು, ಸಸ್ಯ, ಜೀವ ಸಂಕುಲಕ್ಕೆ ತೀವ್ರ ಅಪಾಯ ಎಂದು ಜಾಲತಾಣದ ಅಧಿಕೃತ ದಾಖಲೆಗಳಲ್ಲಿ ನಮೂದಾಗಿದೆ. ಸಸ್ಯಗಳ DNA ಗಳನ್ನೂ ಬದಲಿಸಿ, ಶಾಶ್ವತವಾಗಿ ಅದರ ವಂಶವನ್ನೇ ಕುಂಠಿತಗೊಳಿಸುವಷ್ಟು ಅಪಾಯಕಾರಿ ಎಂದು ವರದಿಯಲ್ಲಿ ತಜ್ಞರ ಅಭಿಪ್ರಾಯ ಇದೆ. ಪ್ರಸ್ ಮಡ್ ಗೊಬ್ಬರಗಳ ಬಳಕೆಯ ಬಗ್ಗೆ ಎಲ್ಲ ರೈತರು ಮರು ಚಿಂತನೆ ಮಾಡಬೇಕಾದಷ್ಟು ಭಯಂಕರ ವಿಚಾರಗಳು ಜಾಲತಾಣಗಳಲ್ಲಿ ಈ ಕಬ್ಬಿನ ತ್ಯಾಜ್ಯವನ್ನು ಗೊಬ್ಬರವಾಗಿಸುವಾಗ ಬಳಸುವ DSW ಗಳಲ್ಲಿದೆ ಎಂದು ವ್ಯಾಖ್ಯಾನಿಸಲಾಗಿದೆ. ಪ್ರೆಸ್‌ಮಡ್ ಗೊಬ್ಬರಗಳ ತಯಾರಿಕೆಯಲ್ಲಿ ಯಾವ ಪ್ರಮಾಣದ DSW ಬಳಸಲಾಗಿದೆ ಎಂಬ ಸ್ಪಷ್ಟವಾದ ಮತ್ತು ಅಧಿಕೃತ ಮಾಹಿತಿಗಳನ್ನು ಗೊಬ್ಬರ ತಯಾರಿಕಾ ಸಂಸ್ಥೆಗಳು, ಮಾರಾಟ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳು ಗೊಬ್ಬರ ಬಳಸುವ ರೈತರಿಗೆ ನೀಡುತ್ತಿಲ್ಲ ಏಕೆ?
  7. ಕೆಲವು ರೈತರ ಅನುಮಾನ ಇನ್ನೂ ಒಂದು ಹೆಜ್ಜೆ ಮುಂದು ಹೋಗಿ, ಗೊಬ್ಬರಗಳಲ್ಲಿ ಪ್ರೆಸ್‌ಮಡ್ ಮಾತ್ರ ಬಳಸಲಾಗುತ್ತದೆಯಾ? ಜೊತೆಗೆ ಸಿಟಿ ವೇಸ್ಟ್ (ಹಸಿ ಕಸ), ಬೇರೆ ಸಸ್ಯ ಜನ್ಯ (ತೆಂಗು ಇತ್ಯಾದಿ) ವೇಸ್ಟ್‌ಗಳನ್ನು ಬಳಸಲಾಗುತ್ತದೆಯಾ? ಎಂದು ಕೇಳುತ್ತಿದ್ದಾರೆ.
  8. ಮೇಲಿನ ವಿಚಾರಗಳಿಗಲ್ಲದೆ, ಸಾವಯವ ಪ್ರೆಸ್ ಮಡ್ ಗೊಬ್ಬರದ ಬಗ್ಗೆ ರೈತರಿಗೆ ಕೊಡಬಹುದಾದ ಇತರ ಮಾಹಿತಿಗಳನ್ನೂ ಸೇರಿಸಿ ಸತ್ಯವಾದ, ಸ್ಪಷ್ಟವಾದ, ನಿಖರವಾದ ಮಾಹಿತಿಗಳನ್ನು, ಬಳಕೆಯ ವಿಧಾನಗಳನ್ನು ಅಧಿಕೃತ ದಾಖಲೆಗಳೊಂದಿಗೆ ಬ್ರೋಷರ್ ರೂಪದಲ್ಲಿ ಕೊಡಬಹುದಲ್ಲ? ಎಂಬುದು. ಆದರೆ, ಪ್ರೆಸ್‌ಮಡ್ ಗೊಬ್ಬರದ ವಿಚಾರದಲ್ಲಿ ಯಾವ ಪ್ರಶ್ನೆಗಳಿಗೂ ಉತ್ತರ ದೊರೆಯುತ್ತಿಲ್ಲ.

ಆದರೆ, ಮಲೆನಾಡು, ಕರಾವಳಿ, ಬಯಲು ಸೀಮೆಗಳ ತೋಟಗಳಿಗೆ ಪ್ರೆಸ್‌ಮಡ್ ಗೊಬ್ಬರ ಮಸಾಲೆ ದೋಸೆಯಂತೆ ಬಿಕರಿಯಾಗುತ್ತಿದೆ. ಹಸುಗಳ ಕೊಟ್ಟಿಗೆ ಗೊಬ್ಬರ ಕ್ಷೀಣಿಸುತ್ತಿರುವುದರಿಂದ, ಬೇರೆ ದಾರಿ ಇಲ್ಲದೆ ಅಡಿಕೆ ಬೆಳೆಗಾರರು ಪ್ರೆಸ್‌ಮಡ್ ಗೊಬ್ಬರವನ್ನು, ಉತ್ತರ ಸಿಗದ ಪ್ರೆಶ್ನೆಗಳನ್ನೂ ಅಡಿಕೆ ಮರದ ಬುಡಕ್ಕೆ ಹಾಕಿ ಮಣ್ಣು ಮುಚ್ಚಿ ಬೇಸಾಯ ಮಾಡುತ್ತಿದ್ದಾರೆ! ಮಾರ್ಗದರ್ಶನ ನೀಡಬೇಕಾದ ಸರಕಾರದ ತೋಟಗಾರಿಕಾ ಇಲಾಖೆಯೂ ‘ಮೌನ ಬಂಗಾರ’ ಎಂಬಂತಿದೆ!

Continue Reading

ಕೃಷಿ

Plastic Mulching: ವಿಸ್ತಾರ ಗ್ರಾಮ ದನಿ: ಕೃಷಿ ಭೂಮಿಯಲ್ಲಿ ಪ್ಲಾಸ್ಟಿಕ್ ಮಲ್ಚಿಂಗ್‌ ಬಳಕೆಯ ಸೈಡ್‌ ಎಫೆಕ್ಟ್‌ ಎಷ್ಟೊಂದು!

ಕೃಷಿ ಭೂಮಿಯಲ್ಲಿ ಇತ್ತೀಚೆಗೆ (plastic mulching) ಪ್ಲಾಸ್ಟಿಕ್ ಮಲ್ಚಿಂಗ್ (ಪ್ಲಾಸ್ಟಿಕ್‌ ಹೊದಿಕೆ) ಬಳಕೆ ಹೆಚ್ಚುತ್ತಿದೆ. ಇದರ ಸಾಧಕ ಬಾಧಕಗಳೇನು ಎಂಬ ಬಗ್ಗೆ ಪ್ರಗತಿಪರ ಕೃಷಿಕ, ಲೇಖಕ ಅರವಿಂದ ಸಿಗದಾಳ್ ಅವರು ಇಲ್ಲಿ ಅವಲೋಕನ ನಡೆಸಿದ್ದಾರೆ.

VISTARANEWS.COM


on

Plastic Mulching
Koo
-ಅರವಿಂದ ಸಿಗದಾಳ್, ಮೇಲುಕೊಪ್ಪ

ಕೃಷಿ ಭೂಮಿಯಲ್ಲಿ ಪ್ಲಾಸ್ಟಿಕ್ ಮಲ್ಚಿಂಗ್ (ಪ್ಲಾಸ್ಟಿಕ್ ಹೊದಿಕೆ) ಬಗ್ಗೆ ಚರ್ಚೆ (plastic mulching) ನಡೆಯುತ್ತಿದೆ. ಪ್ಲಾಸ್ಟಿಕ್ ಮಲ್ಚಿಂಗ್ ಬಳಕೆಯೂ ಹೆಚ್ಚುತ್ತಿದೆ. ಪ್ಲಾಸ್ಟಿಕ್ ಮಲ್ಚಿಂಗ್‌ನಿಂದ ಅನುಕೂಲ ಮತ್ತು ತೊಂದರೆ ಎರಡೂ ಇವೆ. ಈ ಹಿನ್ನೆಲೆಯಲ್ಲಿ ಚರ್ಚೆಗೆ ಪೂರಕವಾಗಿ ಒಂದಿಷ್ಟು ಸಂಗ್ರಹಿತ ವಿಷಯಗಳು ಇಲ್ಲಿ ಕೊಟ್ಟಿದ್ದೇನೆ.

ಪ್ಲಾಸ್ಟಿಕ್ ಮಲ್ಚಿಂಗ್ ಅನುಕೂಲಗಳು

  1. ಮಣ್ಣಿನ ರಚನೆಯನ್ನು ಸುಧಾರಿಸುತ್ತದೆ ಮತ್ತು ಅದನ್ನು ಹೆಚ್ಚು ಕಾಲ ಕಾಯ್ದುಕೊಳ್ಳುತ್ತದೆ.
  2. ತೇವಾಂಶ ಮತ್ತು ಶಾಖವನ್ನು ಹಿಡಿದಿಟ್ಟುಕೊಳ್ಳುತ್ತದೆ.
  3. ಸಸ್ಯ ಪೋಷಕಾಂಶಗಳ ನಷ್ಟವನ್ನು ಮಿತಿಗೊಳಿಸುತ್ತದೆ, ಇಳುವರಿ ಹೆಚ್ಚಾಗುತ್ತದೆ.
  4. ಮಣ್ಣಿನ ಸವೆತವನ್ನು ಕಡಿಮೆ ಮಾಡಲು ಅನುಕೂಲ.
  5. ಕಳೆಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ. ಕಳೆಗಳು ದ್ಯುತಿಸಂಶ್ಲೇಷಣೆಗೆ ಅಗತ್ಯವಾದ ಸೂರ್ಯನ ಬೆಳಕನ್ನು ಪಡೆಯುವುದನ್ನು ಪ್ಲಾಸ್ಟಿಕ್ ಮಲ್ಚಿಂಗ್ ತಡೆಯುತ್ತದೆ.

ತೊಂದರೆಗಳು ಸಾಕಷ್ಟಿವೆ

ಕೃಷಿ ಭೂಮಿಯಲ್ಲಿ ಪ್ಲಾಸ್ಟಿಕ್ ಹೊದಿಕೆಯಿಂದ ಎಷ್ಟು ಅನುಕೂಲಗಳಿವೆಯೋ ಅದಕ್ಕಿಂತ ಹತ್ತು ಪಟ್ಟು, ನೂರು ಪಟ್ಟು ತೊಂದರೆಗಳಿವೆ. ಅನುಕೂಲಗಳು ತಕ್ಷಣಕ್ಕೆ ಸಿಗುವಂತವುಗಳಾದರೆ, ತೊಂದರೆಗಳು ದೀರ್ಘಕಾಲಿಕ.
ಪ್ಲಾಸ್ಟಿಕ್ ಸವಕಳಿಯಾಗುವುದಕ್ಕೆ, ನಾಶವಾಗುವುದಕ್ಕೆ ಶತಮಾನಗಳೇಬೇಕು. ಆದರೆ, ಭೂಮಿಗೆ ತಾಗಿಸಿದ ದಿನದಿಂದಲೇ ನಿಧಾನವಾಗಿ ಸವಕಳಿಯ ಕ್ರಿಯೆ ಆರಂಭವಾಗುತ್ತದೆ. ವಿಭಜನೆಗೊಂಡ ಪ್ಲಾಸ್ಟಿಕ್‌ನ ಕಣಗಳು ಮಣ್ಣಿನ ಫಲವತ್ತತೆಗೆ ಭಯಾನಕ ವಿಷವೇ ಸರಿ. ಸ್ನಾನದ ಮನೆಯಲ್ಲಿ ಸೋಪಿನ ಒಂದು ಸಣ್ಣ ಹನಿ ತೇವವಿದ್ದ ಜಾಗದಲ್ಲಿ ಬಿದ್ದಾಗ ಹೇಗೆ ವಿಸ್ತರಿಸುತ್ತದೋ, ಅದೇ ರೀತಿ ಪ್ಲಾಸ್ಟಿಕ್‌ನ ಕಣಗಳು ಭೂಮಿಯಲ್ಲಿ ಬಿದ್ದಾಗ ಮಣ್ಣಿನಲ್ಲಿ ಅದು ವಿಸ್ತರಿಸುತ್ತಾ… ಮಣ್ಣು ವಿಷವಾಗುತ್ತಾ ಹೋಗುತ್ತದೆ. ಹೌದು, ಈ ಕ್ರಿಯೆ ತುಂಬ ನಿಧಾನವಾದ ಗತಿಯಲ್ಲಿ ನೆಡೆಯುವುದು. ಒಂದು ರೀತಿಯಲ್ಲಿ ಸ್ಲೋ ಪಾಯಿಸನ್. ಕೆಲವು ಸಮಯದವರೆಗೆ ಇರುವೆ, ಏಡಿ, ಎರೆಹುಳುಗಳು ಮತ್ತು ಅನೇಕ ಸೂಕ್ಷ್ಮ ಜೀವಿಗಳು ಈ ಪ್ಲಾಸ್ಟಿಕ್‌ನ್ನು ಆಶ್ರಯವಾಗಿಸಿಕೊಂಡು ಬದುಕಬಹುದು. ಆದರೆ ಯಾವಾಗ ಪ್ಲಾಸ್ಟಿಕ್‌ನ ಸವಕಳಿ ನಿಧಾನವಾಗಿ ಹೆಚ್ಚಾಗುತ್ತದೋ… ಆಗ ಯಾವ ಜೀವ ಜಂತುಗಳೂ, ಸೂಕ್ಷ್ಮ ಜೀವಿಗಳೂ ಅಲ್ಲಿ ಬದುಕಲಾರವು. ಪೆಟ್ರೋಲಿಯಂ ಪ್ರಾಡಕ್ಟ್‌ನ ಉತ್ಪನ್ನವಾದ ಪ್ಲಾಸ್ಟಿಕ್ ರಾಸಾಯನಿಕ ಕಣಗಳು ಮಣ್ಣಿನ ಫಲವತ್ತತೆಯನ್ನು ಶಾಶ್ವತವಾಗಿ ನಾಶಮಾಡುತ್ತದೆ. ಮಣ್ಣನ್ನು ಬರಡಾಗಿಸುತ್ತದೆ. ಇದಲ್ಲದೆ, ಪ್ಲಾಸ್ಟಿಕ್ ಮಲ್ಚಿಂಗ್ ತೊಂದರೆಗಳು ಹಲವಾರಿವೆ.

Disadvantages of plastic mulching

ಪ್ಲಾಸ್ಟಿಕ್ ಮಲ್ಚಿಂಗ್ ಅನಾನುಕೂಲಗಳು

ಪ್ಲಾಸ್ಟಿಕ್ ಮಲ್ಚ್ ಮಣ್ಣನ್ನು ಪರಿಣಾಮಕಾರಿಯಾಗಿ ಬೆಚ್ಚಗಾಗಿಸುತ್ತದೆ, ಮಣ್ಣಿನ ತಾಪಮಾನವನ್ನು ಬದಲಾಯಿಸುವುದು ಎಲ್ಲಾ ಬೆಳೆಗಳಿಗೆ ಸೂಕ್ತವಲ್ಲ. ಕೆಲವು ಬೆಳೆಗಳು ಮಣ್ಣಿನ ತಾಪಮಾನಕ್ಕೆ ಸಾಕಷ್ಟು ಸಂವೇದನಾಶೀಲವಾಗಿರುತ್ತವೆ ಆದ್ದರಿಂದ ಮಣ್ಣಿನ ಬೆಚ್ಚಗಾಗುವಿಕೆಯೂ ಅನೈಸರ್ಗಿಕವಾದಾಗ ಅದೂ ಅಪಾಯಕಾರಿಯೆ. ಪ್ಲಾಸ್ಟಿಕ್ ಉತ್ಪನ್ನಗಳನ್ನು ಪೆಟ್ರೋಲಿಯಂ-ಆಧಾರಿತ ವಸ್ತುಗಳಿಂದ ಪಡೆಯಲಾಗಿದೆ, ಇದು ಉತ್ಪಾದನೆಗೆ ದುಬಾರಿ ಮಾತ್ರವಲ್ಲದೆ ಪರಿಸರಕ್ಕೆ ಹಾನಿಕಾರಕವಾಗಿದೆ.

ಸೂರ್ಯನ ಬೆಳಕು-ಶಾಖ, ಗಾಳಿ, ನೀರು ಅಥವಾ ಇನ್ಯಾವುದೋ ಕಾಸ್ಮಿಕ್ ಎನರ್ಜಿಗಳಿಂದ ಮಣ್ಣಿನಲ್ಲಿ ಸಹಜವಾಗಿ ನೆಡೆಯುವ “ವಿಧಿ’ವತ್ತಾದ ರಾಸಾಯನಿಕ ಕ್ರಿಯೆಗಳು ಪ್ಲಾಸ್ಟಿಕ್ ಮಲ್ಚಿನಿಂದ ಕಡಿಮೆ ಆಗಬಹುದು ಅಥವಾ ತಟಸ್ಥವಾಗಬಹುದು ಮತ್ತು ಪರಿಣಾಮವಾಗಿ ಮಣ್ಣಿನ ಮೇಲೆ ದೀರ್ಘಕಾಲದ ಅಪಾಯ ಉಂಟಾಗಬಹುದು. ಮಣ್ಣಿನ ಸಹಜ ಸಂವೇದನಾಶೀಲತೆ ಅಥವಾ ನೈಸರ್ಗಿಕವಾಗಿ ಮಣ್ಣಿನಲ್ಲಿ ನೆಡೆಯುವ ಸಹಜವಾದ ರಾಸಾಯನಿಕ ಪ್ರಕ್ರಿಯೆಗಳು ಪ್ಲಾಸ್ಟಿಕ್ ಮಲ್ಚಿನಿಂದಾಗಿ ಅತಿ ವೇಗವನ್ನು ಪಡೆದು ವಿಪರೀತವಾಗಿ ಋಣಾತ್ಮಕ ಪರಿಣಾಮ ಉಂಟಾಗಬಹುದು.

Crops with Plastic Mulch

ಮಲ್ಷಿಂಗ್ ಮಾಡುವ ಪ್ಲಾಸ್ಟಿಕ್ ವೇಸ್ಟ್‌ಗಳು ಮರು ಬಳಕೆ ಮಾಡಲು ಸೂಕ್ತವಲ್ಲದ ಗುಣಮಟ್ಟದ್ದಾಗಿರುತ್ತದೆ. ಹಾಗಾಗಿ 3-4 ವರ್ಷಗಳ ನಂತರ ಮರುಬಳಕೆಯಾಗದ ಒಂದು ಬೃಹತ್ ತ್ಯಾಜ್ಯವಾಗುವ ಈ ಪ್ಲಾಸ್ಟಿಕ್ ಭೂಮಿಗೆ ಒಂದು ಶಾಶ್ವತ ಅಪಾಯಕಾರಿ ವಸ್ತು. ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್‌ನ್ನು ಕೃಷಿಯಲ್ಲಿ ಬಳಸುವುದು ಪ್ರಪಂಚದ-ಪರಿಸರದ ದೃಷ್ಟಿಯಿಂದ ಒಳ್ಳೆಯದಲ್ಲ. ಬಳಸಿ, ತ್ಯಾಜ್ಯವಾದ ಪ್ಲಾಸ್ಟಿಕ್‌ನ್ನು ವಿಲೇವಾರಿ ಮಾಡುವುದು ಕಷ್ಟ.

ಮಣ್ಣಿಗೆ ಹೆಚ್ಚಿನ ಆರ್ದ್ರತೆಯು ಯಾವಾಗಲೂ ಉತ್ತಮವಲ್ಲ, ಮತ್ತು ಅತಿಯಾದ ಆರ್ದ್ರತೆಯು ಭಯಾನಕ ಪರಿಣಾಮಗಳನ್ನು ಬೀರುತ್ತದೆ. ಅತಿಯಾದ ತೇವಾಂಶವು ನೀರು ಮತ್ತು ಬೆಳೆಗಳನ್ನು ಮುಳುಗಿಸಬಹುದು.
ಆರ್ದ್ರ ಬೆಳವಣಿಗೆಯ ಪರಿಸ್ಥಿತಿಗಳು ಮಾಲಿನ್ಯ ಮತ್ತು ರೋಗಕ್ಕೆ ಕಾರಣವಾಗಬಹುದು. ಅಡಿಕೆ ತೋಟದಲ್ಲಿನ ಕೊಳೆ, ಎಲೆಚುಕ್ಕಿ ಇತ್ಯಾದಿಗಳ ಫಂಗಸ್‌ಗಳ ಉತ್ಪತ್ತಿಗೂ ಪ್ಲಾಸ್ಟಿಕ್ ಮಲ್ಚಿಂಗ್ ಕಾರಣವಾಗಬಹುದು.

Plastic mulching cropland

ಮಲ್ಚಿಂಗ್ ಪ್ಲಾಸ್ಟಿಕ್ ತಯಾರಿಕೆಯಲ್ಲಿ ಅನೇಕ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಬಣ್ಣ, ದೀರ್ಘಬಾಳಿಕೆಗಳಿಗಾಗಿ ಬಳಸುವ ಕೆಮಿಕಲ್‌ಗಳು ಮಣ್ಣಿಗೆ ವಿಷಕಾರಿಗಳಾಗಿರಬಹುದು. ಜತೆಗೆ ಗೊಬ್ಬರವಾಗಿ ಬಳಸುತ್ತಿರುವ, ಪೆಸ್ಟಿಸೈಡ್, ಇನ್ಸೆಕ್ಟಿಸೈಡ್, ಫಂಗಿಸೈಡ್ ಕೆಮಿಕಲ್‌ಗಳೊಂದಿಗೆ ಮಲ್ಚಿಂಗ್ ಪ್ಲಾಸ್ಟಿಕ್ ಕೆಮಿಕಲ್‌ಗಳು ಸೇರಿ ಗದ್ದೆ ತೋಟಗಳು ಮತ್ತಷ್ಟು ಮಾಲಿನ್ಯವಾಗಬಹುದು. ಪರೋಕ್ಷವಾಗಿ ತಿನ್ನುವ ಆಹಾರ ಪದಾರ್ಥಗಳು ಮತ್ತಷ್ಟು ವಿಷವಾಗಬಹುದು.

ಪ್ಲಾಸ್ಟಿಕ್ ಮಲ್ಚಿಂಗ್ ಸಾವಯವ ಪದ್ದತಿಗೆ ವಿರುದ್ದವಾದ ಕ್ರಮ. ಪ್ಲಾಸ್ಟಿಕ್ ಮಲ್ಚಿಂಗ್‌ನಿಂದ ಇರುವೆ, ಚಿಕ್ಳಿಯಿರುವೆ, ಏಡಿ, ಎರೆಹುಳುಗಳಿಗೆ ದೀರ್ಘಾವದಿಯಲ್ಲಿ ಅಪಾಯಕಾರಿ ಆಗಬಹುದು. ಮಣ್ಣಿನ ಅಗತ್ಯ ಸೂಕ್ಷ್ಮ ಜೀವಿಗಳೂ ನಾಶವಾಗಬಹುದು.

ಸಾವಯವ ತ್ಯಾಜ್ಯಗಳು ಮಣ್ಣಿನ ಜೊತೆ ಬೆರೆಯುವುದಕ್ಕೆ, ಗೊಬ್ಬರವಾಗಿ ಮಣ್ಣಿನ ಜೊತೆ ಸಂಯೋಜನೆಗೊಳ್ಳುವುದಕ್ಕೆ, ಸಾವಯವ ತ್ಯಾಜ್ಯಗಳಲ್ಲಿನ ಕಾರ್ಬನ್, ಪೋಶಕಾಂಶಗಳು ಮಣ್ಣಿನಲ್ಲಿ ಮಿಳಿತವಾಗುವುದಕ್ಕೆ ಪ್ಲಾಸ್ಟಿಕ್ ಮಲ್ಚಿಂಗ್‌ನಲ್ಲಿರುವ ಕೆಮಿಕಲ್ ಮತ್ತು ನೀರು, ಗಾಳಿ ಮತ್ತು ಉಷ್ಣತೆಗಳನ್ನು ವ್ಯತ್ಯಾಸಗೊಳಿಸುವ ಶಕ್ತಿ ತಡೆ ಒಡ್ಡಬಹುದು.

Plastic Mulching - Using Plastic Mulches and Drip Irrigation for Vegetable Production

ಪ್ಲಾಸ್ಟಿಕ್‌ ಕಡಿಮೆ ಮಾಡಲೇಬೇಕಿದೆ

ಹಾಗಾಗಿ ಪ್ಲಾಸ್ಟಿಕ್ ಬಗ್ಗೆ ನಾವು ಅಂತರ ಕಾಪಾಡಿಕೊಳ್ಳಬೇಕಾದ, ಜಾಗೃತಿಗೊಳ್ಳಬೇಕಾದ ಒಂದು ವಿಷಮ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಪರಿಸರ, ಹವಾಮಾನ ವೈಪರೀತ್ಯ, ಪ್ರತೀ ಮನೆಯಲ್ಲೂ ಷೋಕೇಸ್‌ನ ಒಂದು ಭಾಗ ಪುಟ್ಟ ಮೆಡಿಕಲ್ ಶಾಪ್ ಆಗುತ್ತಿರುವ ಅನಿವಾರ್ಯತೆಯ ನಮ್ಮ ಅನಾರೋಗ್ಯಗಳನ್ನು ಗಮನಿಸುತ್ತ ಪ್ಲಾಸ್ಟಿಕ್ ಬಗ್ಗೆ, ಅದನ್ನು ನಮ್ಮ ಜೀವನದಲ್ಲಿ ಗ್ರಾಮ್ ಗಳಷ್ಟಾದರೂ ಕಮ್ಮಿ ಮಾಡುವ ಬಗ್ಗೆ ಯೋಚಿಸಬೇಕಾಗಿದೆ.:
ಪ್ಲಾಸ್ಟಿಕ್ ಅತಿ ಬಳಕೆಯಿಂದಾಗಿ ಹವಾಮಾನ ಬಿಕ್ಕಟ್ಟನ್ನು ಹೆಚ್ಚು ತೀವ್ರಗೊಳಿಸುತ್ತಿದ್ದೇವೆ. ಅಲ್ಲದೆ, ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಮತ್ತು ಅವುಗಳ ತ್ಯಾಜ್ಯದಿಂದ ನಮ್ಮ ವಾತಾವರಣದಲ್ಲಿ ವಿಷದ ಸಾಂದ್ರತೆಯನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದೇವೆ. ಪರಿಣಾಮ ನಿತ್ಯ ಅನಾರೋಗ್ಯರಾಗುತ್ತಿದ್ದೇವೆ, ಬೇಗನೆ ಸಾವಿನ ಕಡೆಗೆ ವಾಲುತ್ತಿದ್ದೇವೆ.
ಪ್ಲಾಸ್ಟಿಕ್ ಎಂಬ ‘ಭಸ್ಮಾಸುರ”ನ ಸುಡುವ ಕರವನ್ನು ನಮ್ಮ ತಲೆ ಮೇಲೆ ನಾವೇ ಇಟ್ಟುಕೊಳ್ಳುತ್ತಿದ್ದೇವೆ. ಆ ಭಸ್ಮಾಸುರ ಕರಗಳು ಪರಿಸರವನ್ನು, ನಮ್ಮನ್ನೂ ಸೇರಿದಂತೆ ಜೀವ ಸಂಕುಲಗಳ ಆರೋಗ್ಯವನ್ನು, ಆಯಸ್ಸನ್ನು ಸುಡುತ್ತಿವೆ. ಸುಡುವುದನ್ನು ತಡೆಯುವ ಯಾವ ಮಲ್ಚಿಂಗ್ ಹೊದಿಕೆಗಳೂ ನಮ್ಮ ತಲೆ ಮೇಲೆ ಇಲ್ಲ!

Continue Reading

ಕರ್ನಾಟಕ

ವಿಸ್ತಾರ ಗ್ರಾಮ ದನಿ: ಅಡಿಕೆ ವಿಚಾರ ಬಂದಾಗ ಜನಪ್ರತಿನಿಧಿಗಳು ಕೈಕಟ್ಟಿಕೊಂಡು ಮೌನವಾಗುವುದೇಕೆ?

ಅನೇಕ ಕಳ್ಳ ಮಾರ್ಗದಲ್ಲಿ ಅಡಿಕೆ ದೇಶದೊಳಗೆ ನುಗ್ಗಿ ಇಲ್ಲಿ ಬೆಳೆದ ರೈತರಿಗೆ ಸಮಸ್ಯೆ ಆಗುತ್ತಿದ್ದರೂ, ಅಡಿಕೆ ಸಹಕಾರಿ ಸಂಘಗಳು ನೇರ ಸಂಬಂಧಿತ ಮಂತ್ರಿಗಳಿಗೆ ಅಡಿಕೆ ಕಳ್ಳ ಆಮದನ್ನು ತಡೆಯುವಂತೆ ಮನವಿ ಕೊಡುತ್ತಿದ್ದರೂ… ಅಡಿಕೆ ಬೆಳೆಯುವ 17 ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ತುಟಿ ಪಿಟಿಕ್ ಅನ್ನುವುದಿಲ್ಲ ಏಕೆ?

VISTARANEWS.COM


on

Areca Nut
Koo

| ಅರವಿಂದ ಸಿಗದಾಳ್, ಮೇಲುಕೊಪ್ಪ
ಕಳಪೆ ಅಡಿಕೆಯ ಕಳ್ಳ ಆಮದು ವಿರುದ್ಧ ಇತ್ತೀಚೆಗೆ ಕ್ಯಾಂಪ್ಕೋ, ಮ್ಯಾಮ್‌ಕೋಸ್ ಸಹಾಕಾರಿ ಸಂಸ್ಥೆಗಳವರೆಲ್ಲ ಒಟ್ಟಿಗೆ ದಿಲ್ಲಿಗೆ ಹೋಗಿ ಮನವಿ ಸಲ್ಲಿಸಿ ಭರವಸೆ ಪಡೆದು ಬಂದರು.
“ಇರಿ, ನಾವು ಬರ್ತೀವಿ. ಒಟ್ಟಿಗೆ ಹೋಗೋಣ” ಅಂತ ಎಲ್ಲ 17 ಅಡಿಕೆ ಜಿಲ್ಲೆಗಳ ಸಂಸದರು ಜೊತೆಗೂಡಬಹುದಿತ್ತು. “ತಡಿರಿ, ನಾವೂ ಬರ್ತೀವಿ ‘ನಮ್ಮ ಅಡಿಕೆ ನಮ್ಮ ಹಕ್ಕು'” ಅಂತ ಹೇಳಿ ಅದೇ 17 ಅಡಿಕೆ ಬೆಳೆಯುವ ಜಿಲ್ಲೆಯ ಎಲ್ಲ ಶಾಸಕರೂ ಕೈ ಸೇರಿಸಬಹುದಿತ್ತು.
ಉಹೂಂ, ಅದ್ಯಾವದನ್ನೂ ಮಾಡುವ ಮನಸ್ಸನ್ನು ಶಾಸಕರು, ಸಂಸದರು, ಮಂತ್ರಿಗಳು ಮಾಡುತ್ತಿಲ್ಲ. ಅನೇಕ ತಿಂಗಳುಗಳಿಂದ ಈ ಅಡಿಕೆ ಕಳ್ಳ ಆಮದು (Areca Nuts Smuggling) ಆಗುತ್ತಿರುವ ಸುದ್ದಿ ಪ್ರಕಟವಾಗುತ್ತಿದೆ. ಯಾಕೆ ಅಡಿಕೆ ಸಮಸ್ಯೆಗಳ ವಿಚಾರದಲ್ಲಿ ಎಲ್ಲಾ ಜನಪ್ರತಿನಿಧಿಗಳು ನಿಷ್ಕ್ರಿಯರಾಗುತ್ತಿದ್ದಾರೆ? ನಿರ್ಲಕ್ಷ್ಯ ತೋರಿಸುತ್ತಿದ್ದಾರೆ? ಬೇರೆ ವಿಚಾರಗಳಲ್ಲಿ ಗಂಟಲು ಹರಿಯುವಷ್ಟು ಕೂಗಾಡುವ, ಕಿರುಚಾಡುವ ಅನೇಕ ಜನ ಪ್ರತಿನಿಧಿಗಳು ಅಡಿಕೆ ಸಮಸ್ಯೆ ವಿಚಾರ ಬಂದಾಗ ಸತ್ತವರ ಮನೆಯಲ್ಲಿ ಕೈಕಟ್ಟಿಕೊಂಡು ನಿಂತವರ ರೀತಿ ಮೌನವಾಗುವುದೇಕೆ!!?

ಒಂದೋ ಎರಡೋ ಪ್ರಕರಣ ಅಲ್ಲ

ಕಳ್ಳ ದಾರಿಯಲ್ಲಿ ಅಡಿಕೆ ಆಮದು ಆಗಿದ್ದು ಒಂದೋ ಎರಡೋ ಪ್ರಕರಣ ಅಲ್ಲ. ಕೆಲವು ತಿಂಗಳುಗಳಿಂದ ಅನೇಕ ಪ್ರಕರಣಗಳು ಸುದ್ದಿ ಆಗುತ್ತಲೇ ಇದೆ. ಡ್ರೈ ಫ್ರೂಟ್ಸ್ ಹೆಸರಲ್ಲಿ ಕಡಿಮೆ ದರ, ಕಡಿಮೆ ಕಸ್ಟಮ್ಸ್ ಡ್ಯೂಟಿಯಲ್ಲಿ ಅಡಿಕೆ ಭಾರತದ ಒಳಗೆ ಬರ್ತಾ ಇದೆ ಎಂದು ಸುದ್ದಿಗಳು ಆಗುತ್ತಿವೆ. ನೇರ ಬಂದರಿಗೆ ಕಳ್ಳ ದಾಖಲಾತಿಗಳೊಂದಿಗೆ ಅಡಿಕೆ ಆಮದಾಗುತ್ತಿದೆ ಅಂತಲೂ ವರ್ತಮಾನ ಪ್ರಕಟವಾಗುತ್ತ ಇದೆ. ಆಮದು ಆದ ಅಡಿಕೆ ಸೀಜ್ ಆಗುತ್ತೆ. ಅದನ್ನು ಕಡಿಮೆ ಬೆಲೆಯಲ್ಲಿ ಹರಾಜು ಹಾಕಲಾಗುತ್ತಂತೆ!! ಇಲ್ಲಿಯ ವರ್ತಕರು ಅದನ್ನು ಕಡಿಮೆ ಬೆಲೆಗೆ ಹರಾಜು ಹಿಡಿಯುತ್ತಾರಂತೆ. ಇದಲ್ಲದೆ ಈಶಾನ್ಯ ರಾಜ್ಯಗಳ ಗಡಿಯಿಂದಲೂ ರಾಜಾರೋಷವಾಗಿ ಅಡಿಕೆ ಕಳ್ಳಸಾಗಾಣಿಯಾಗಿ ಬರುತ್ತಿದೆ ಅಂತ ಅಲ್ಲಿನ ಮುಖ್ಯ ಮಂತ್ರಿಗಳೇ ಕೇಂದ್ರಕ್ಕೆ ಮಾಹಿತಿ ಕೊಡುತ್ತಿದ್ದಾರೆ.

ಇದನ್ನೂ ಓದಿ | Women’s Day 2024: ಮನೆಯ ಕಸದಿಂದ ಗೊಬ್ಬರ ತಯಾರಿಸುವ ಯಂತ್ರ; ಇದು ಮಹಿಳೆಯೊಬ್ಬರ ಆವಿಷ್ಕಾರ!

ಜನಪ್ರತಿನಿಧಿಗಳ ಮೌನ ಏಕೆ?

ಇಷ್ಟೆಲ್ಲ ಆಗುತ್ತಿದ್ದರೂ ಅಡಿಕೆ ಬೆಳೆಯುವ ಕರ್ನಾಟಕದ 17 ಜಿಲ್ಲೆಗಳ ಶಾಸಕರು, ಸಂಸದರು ಘನ ಮೌನವಹಿಸುವುದೇಕೆ!!? ಸ್ಪರ್ಧಾತ್ಮಕವಾಗಿ ಅಥವಾ ಎಲೆಕ್ಷನ್ ಸಮಯವಾದ ದಿನ ಮನದಲ್ಲಿ ರಾಜಕೀಯವಾಗಿ ಪಕ್ಷಗಳ ಗೆಲುವಿನ ಹಿತಾಸಕ್ತಿ ಇಟ್ಕೊಂಡಾದರೂ ಸರಿ, ಎಲ್ಲ 17 ಅಡಿಕೆ ಜಿಲ್ಲೆಗಳ ಕೇಂದ್ರ ಸಂಸದರು, ರಾಜ್ಯ ಶಾಸಕರು ಒಟ್ಟಾಗಿ ಧ್ವನಿ ಎತ್ತಬಾರದಾ?

ಮಾಧ್ಯಮಗಳೇ ದನಿ ಎತ್ತಬೇಕಾ?

ಹೋಟೆಲ್‌ನಲ್ಲಿ ಬಾಂಬ್‌ ಚೀಲ ಇಟ್ಟು ಹೋಗುವ ರೀತಿಯಲ್ಲಿ ದೇಶದ ಪೋರ್ಟ್‌ಗೆ ಅಕ್ರಮ ಅಡಿಕೆ ಮೂಟೆಗಳು ಬಂದು ಬೀಳುತ್ತಿವೆ ಅಂತಾದರೆ, ಅದಕ್ಕೂ ಮೀಡಿಯಾದವರೇ ಡಿಬೇಟ್ ಮಾಡಬೇಕಾ? ಪತ್ರಿಕೆಗಳೇ ದಪ್ಪಕ್ಷರದ ಸುದ್ದಿ ಮಾಡಿ ಸರಕಾರಗಳ ಗಮನ ಸೆಳೆಯಬೇಕಾ? ಇಂಪೋರ್ಟ್ ವ್ಯವಸ್ಥೆಯಲ್ಲಿ ಸಿಸಿ ಕ್ಯಾಮೆರಾ, ಫುಟೇಜು, FSL, ಎಕ್ಸಿಮ್ ಪಾಲಿಸಿ, ಕಾನೂನುಗಳು ಇರೋದಿಲ್ವಾ? ಜನಪ್ರತಿನಿಧಿಗಳಿಗೆ, ಶಾಸಕ ಸಚಿವರುಗಳಿಗೆ ಅವುಗಳ ಬಗ್ಗೆ ಗಮನವಿರುವುದಿಲ್ವಾ? ಅರಿವಿರುವುದಿಲ್ಲವಾ? ಇರಬೇಕಾಗಿಲ್ವಾ!!?

ಕ್ರಿಯಾ ಯೋಜನೆಯನ್ನು ರೂಪಿಸಬಾರದಾ?

ಅನೇಕ ಕಳ್ಳ ಮಾರ್ಗದಲ್ಲಿ ಅಡಿಕೆ ದೇಶದೊಳಗೆ ನುಗ್ಗಿ ಇಲ್ಲಿ ಬೆಳೆದ ರೈತರಿಗೆ ಸಮಸ್ಯೆ ಆಗುತ್ತಿದ್ದರೂ, ಆ ವಿಚಾರಗಳು ಮೀಡಿಯಾದಲ್ಲಿ ಬ್ರೇಕಿಂಗ್ ನ್ಯೂಸ್ ಆಗುತ್ತಿದ್ದರೂ, ಅಡಿಕೆ ಸಹಕಾರಿ ಸಂಘಗಳು ನೇರ ಸಂಬಂಧಿತ ಮಂತ್ರಿಗಳಿಗೆ ಅಡಿಕೆ ಕಳ್ಳ ಆಮದನ್ನು ತಡೆಯುವಂತೆ ಮನವಿ ಕೊಡುತ್ತಿದ್ದರೂ… ಅದೇ ಅಡಿಕೆ ಬೆಳೆಯುವ 17 ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ತುಟಿ ಪಿಟಿಕ್ ಅನ್ನುವುದಿಲ್ಲ ಏಕೆ? ಕಳ್ಳ ದಾರಿಯಲ್ಲಿನ ಅಡಿಕೆ ಆಮದನ್ನು ತಡೆಯುವ ಒಂದು ಕ್ರಿಯಾ ಯೋಜನೆಯನ್ನು ರೂಪಿಸಬಾರದಾ? ಪಕ್ಷಾತೀತವಾಗಿ ಅಡಿಕೆ ಬೆಳೆಯುವ 17 ಜಿಲ್ಲೆಗಳ ಸಂಸದರು, ಶಾಸಕರು, ಮಂತ್ರಿಗಳು ಒಟ್ಟಾಗಿ ಅಕ್ರಮ ಅಡಿಕೆ ಆಮದನ್ನು ತಡೆಯುವುದಕ್ಕೆ ಏನಾದರು ಮಾಡಬಾರದಾ?

ಜನಪ್ರತಿನಿಧಿಗಳಿಗೆ ಜವಾಬ್ದಾರಿ ಇಲ್ವಾ? ಆಸಕ್ತಿ ಇಲ್ವಾ? ತಡೆಯುವ ಅಧಿಕಾರ ಇಲ್ವಾ? ರೈತರ ಸಮಸ್ಯೆ ಅರ್ಥವೇ ಆಗ್ತಾ ಇಲ್ವಾ? ಅಥವಾ ಮೀಡಿಯಾಗಳು, ಜಾಲತಾಣಗಳು, ಅಡಿಕೆ ಸಹಕಾರಿ ಸಂಘಗಳು ಸುಳ್ಳು ಹೇಳುತ್ತಿವೆ ಅಂತ ಜನ ಪ್ರತಿನಿಧಿಗಳು ಭಾವಿಸಿದ್ದಾರಾ? ಇಲ್ಲಾ, “ಮೀಡಿಯಾಗಳು, ಜಾಲತಾಣಗಳು, ಅಡಿಕೆ ಸಹಕಾರಿ ಸಂಘಗಳು ಮತ್ತು ಅಡಿಕೆ ಬೆಳೆಗಾರರೇ ಹೋರಾಟ ಮಾಡಿ ಸರಿ ಮಾಡಿಕೊಳ್ಳುತ್ತಾರೆ, ನಮಗ್ಯಾಕೆ?” ಅಂತ ಅಡಿಕೆ ನಾಡಿನ ಜನಪ್ರತಿನಿಧಿಗಳ ಅಂತರಂಗದ ಭಾವನೆಯಾ? ಇದು ಅಡಿಕೆ ಕಳ್ಳ ಆಮದಿನ ವಿಷಯದಲ್ಲಿ ಮಾತ್ರ ಅಲ್ಲ, ಅಡಿಕೆಯ ಎಲ್ಲ ಸಮಸ್ಯೆಗಳ ವಿಚಾರದಲ್ಲೂ ರಾಜಕಾರಣಿಗಳ ಮನಸ್ಥಿತಿ ಹೀಗೆ ಇದೆ ಎಂಬಂತೆ ಕಾಣಿಸುತ್ತಿದೆ!

ಜನಪ್ರತಿನಿಧಿಗಳೇ ಕೇಳಿ

ಆತ್ಮೀಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳೇ, ಅಡಿಕೆ ಬೆಳೆಗಾರರು ಹೆದರುತ್ತಲೇ (ಅಡಿಕೆ ಸಮಸ್ಯೆಗಳಿಂದ ಜರ್ಜರಿತರಾಗಿ ಹೆದರಿ) ಕೇಳುವ ಇದೊಂದು ಧೈರ್ಯದ ಪ್ರಶ್ನೆಗೆ ನಾಡಿದ್ದು ಪ್ರಿಂಟೆಡ್ ಪ್ರಣಾಳಿಕೆ ಹಿಡ್ಕೊಂಡು, ಕೈ ಮುಗಿದು, ಗುಂಪುಗೂಡಿಕೊಂಡು ಬರುವಾಗ ಈ ಅಡಿಕೆ ಸಮಸ್ಯೆಗಳಿಗೆ ಪರಿಹಾರದ ಉತ್ತರಗಳನ್ನು ಅದೇ ಪ್ರಣಾಳಿಕೆಯ ಜೊತೆ ಸೇರಿಸಿ ತನ್ನಿ. ಅದನ್ನು ಮನೆಯಲ್ಲಿ ಕೊಟ್ಟಿರಿ. ಮನೆಯಲ್ಲಿ ಯಾರೂ ಇಲ್ಲದಿದ್ದರೆ… ಬಾಗಿಲು ಚಿಲಕದಲ್ಲಿ ಸಿಕ್ಕಿಸಿಡಿ!
ಬಹುತೇಕ ರೈತರು ಆ ಸಮಯದಲ್ಲಿ ಮನೆಯಲ್ಲಿ ಇಲ್ಲದಿರಬಹುದು! ಗುಮ್ಮೆಯ ತಳದಲ್ಲಿರುವ ಚೊಂಬು ನೀರನ್ನು ನಾಲ್ಕು ಅಡಿಕೆ ಮರಕ್ಕೆ ಹಂಚಿ ಹಾಕಲು ತೋಟಕ್ಕೆ ಹೋಗಿರಬಹುದು! ಅಥವಾ ಫ್ರೂಟ್ ಐಡಿ, ಬೆಳೆಸರ್ವೆ, ಆಧಾರ್-ಪಹಣಿ ಸೀಡಿಂಗ್, NPCI, KYC ಅಪ್‌ಡೇಷನ್, HSRP, ಪದೇಪದೆ ತಿರುಗಬೇಕಾದ ಪೋಡಿ, ಕಾಂಪ್ಲಿಕೇಟೆಡ್ ವಂಶವೃಕ್ಷ, ಇದ್ದಕ್ಕಿದ್ದಂತೆ ಪಹಣಿಯಲ್ಲಿ ಬೆಳೆ ಕಾಲಮ್‌‌ನಲ್ಲಿದ್ದ ಮಾಯವಾದ ಅಡಿಕೆ, ಸಿಗದ ಇಂಟರ್‌ನೆಟ್, ಸತಾಯಿಸುವ ನೆಟ್ವರ್ಕ್….. ನಂತಹ ನಿತ್ಯ ಜಂಜಾಟ ಹಿಡ್ಕೊಂಡು ಪ್ಯಾಟಿಗೆ ಹೋಗಿರಬಹುದು!

ಒಂದಿಷ್ಟು ಪರಿಹಾರಗಳನ್ನು ತನ್ನಿ

ಮತಭಿಕ್ಷೆಗೆ ಬರುವಾಗ, ರೈತರ ಸಮಸ್ಯೆಗಳಿಗೆ ಒಂದಿಷ್ಟು ಪರಿಹಾರಗಳನ್ನು ತನ್ನಿ. ತೀರ ಬಿಸಿಲು ಹೊತ್ತಲ್ಲಿ ಬರಬೇಡಿ!! ಅನೇಕ ರೈತರ ಮನೆಗಳಲ್ಲಿ ತೋಟಕ್ಕೆ ಬಿಡಿ, ಕುಡಿಯೋದಕ್ಕೂ ನೀರಿನ ಅಭಾವ ಅನ್ನುವ ಪರಿಸ್ಥಿತಿ ನಿರ್ಮಾಣ ಆಗ್ತಾ ಇದೆ. ನೀವು ರೈತರ ಸಮಸ್ಯೆಗಳಿಗೆ ಪರಿಹಾರಗಳನ್ನು ಹೊತ್ತು ತುಂಬ ಜನ ಒಟ್ಟಿಗೆ ಬಂದಾಗ ಬಾಯಾರಿದ ನಿಮಗೆ ನೀರು ಕೊಡೋದಕ್ಕೂ ಆಗ್ತಾ ಇಲ್ವಲ್ಲ ಅನ್ನುವ ಭಾವ ರೈತರಿಗೆ ಬರೋದು ಬೇಡ! ಇನ್ಮುಂದೆ ಭರವಸೆ, ಗ್ಯಾರಂಟಿ, ಆಶ್ವಾಸನೆ, ಕುಕ್ಕರ್, ನೋಟು, ಪ್ಯಾಕೇಟು ಯಾವುದೂ ಬೇಡ.

ಇದನ್ನೂ ಓದಿ | Raja Marga Column : ಈ ಹೆಣ್ಮಕ್ಕಳು ಜಗತ್ತಿನ ಮಹಾನ್ ಪವರ್‌ ಹೌಸ್‌ಗಳು

ಅಡಿಕೆ ಎಲೆ ಚುಕ್ಕಿ ರೋಗ, ಅಡಿಕೆ YLD, ಅಡಿಕೆ ಕಳ್ಳ ಆಮದು, ಅಡಿಕೆ ಹಾನಿಕಾರಕ, ಅಡಿಕೆ ದರ ಇಳಿತ, ಅಡಿಕೆಗೆ ಮಂಗನ ಕಾಟ, ಅಡಿಕೆ ಮರ ಕಡಿಯುವ ಕಾಡುಕೋಣ, ಅಡಿಕೆ ಮೋಟರ್‌ಗೆ ಕರೆಂಟು, ಸಬ್ಸಿಡಿ ಮೋಸ, ಅಡಿಕೆ ತೋಟಕ್ಕೆ ಬಂದ ಬರ… ಇತ್ಯಾದಿಗಳ ಭೀಕರತೆಯ ಸಮಸ್ಯೆಗಳಿಗೆ ನೀವು ಅಧಿಕೃತ ಪರಿಹಾರದ ಉತ್ತರದೊಂದಿಗೆ ಬರ್ತೀರಿ ಎಂಬ ನಂಬಿಕೆಯ ಮನಸ್ಥಿತಿ ಈಗಲೂ ರೈತರಲ್ಲಿ ಸಾಸಿವೆ ಕಾಳಷ್ಟಾದರೂ ಇದೆ!!

ಅಡಿಕೆ ಅಕ್ರಮ ಆಮದು ತಡೆಯಲು ಕೇಂದ್ರ ಸಚಿವರಿಗೆ ಮನವಿ

ಭಾರತಕ್ಕೆ ಅಕ್ರಮವಾಗಿ ಅಡಿಕೆ ಆಮದಾಗುತ್ತಿರುವುದರಿಂದ ಅಡಿಕೆ ಬೆಲೆ ಮತ್ತು ಬೆಳಗಾರರ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ನವದೆಹಲಿಯಲ್ಲಿ ಇತ್ತೀಚೆಗೆ ಕೇಂದ್ರ ಗೃಹಖಾತೆ ರಾಜ್ಯ ಸಚಿವರಾದ ನಿತ್ಯಾನಂದ ರೈ ಅವರನ್ನು ಅಡಿಕೆ ಸಹಕಾರ ಸಂಘಗಳ ಮಹಾಮಂಡಲದ ನೇತೃತ್ವದಲ್ಲಿ ಭೇಟಿ ಮಾಡಿ ಅಕ್ರಮ ಆಮದನ್ನು ತಡೆಗಟ್ಟಲು ವಿನಂತಿಸಲಾಯಿತು. ನಿಯೋಗದಲ್ಲಿ ಎಚ್.ಎಸ್.ಮಂಜಪ್ಪ, ಹೊಸಬಾಳೆ, ಅಧ್ಯಕ್ಷರು ಕ್ರ್ಯಾಮ್, ಸುಬ್ರಹ್ಮಣ್ಯ ಯಡಗೆರೆ, ನಿರ್ದೇಶಕರು, ಮಾಮ್ ಕೋಸ್/ಅಧ್ಯಕ್ಷರು, ಮಹಾಮಂಡಲ, ಇಂಧೂದರಗೌಡ, ಅಧ್ಯಕ್ಷರು, ಆಪ್ಕೋಸ್, ಸಾಗರ, ಶ್ರೀಕಾಂತ್ ಬರುವೆ, ವ್ಯವಸ್ಥಾಪಕ ನಿರ್ದೇಶಕರು, ಮಾಮ್ ಕೋಸ್, ವಿಜಯಾನಂದ ಭಟ್, ಪ್ರಧಾನ ವ್ಯವಸ್ಥಾಪಕರು , ಟಿಎಸ್ಎಸ್, ಶಿರಸಿ ಇವರು ಉಪಸ್ಥಿತರಿದ್ದರು.

Continue Reading
Advertisement
Dina bhavishya
ಭವಿಷ್ಯ4 mins ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Lok sabha Election
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

food
ಕರ್ನಾಟಕ5 hours ago

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

PM Narendra Modi will visit Sirsi on April 28
ಉತ್ತರ ಕನ್ನಡ5 hours ago

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Bus Driver attacked
ಕರ್ನಾಟಕ5 hours ago

Bus driver Attacked : ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಠಾಣೆ ಮುಂಭಾಗ ಧರಣಿ

IPL 2024
ಪ್ರಮುಖ ಸುದ್ದಿ6 hours ago

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

Viral News
ವೈರಲ್ ನ್ಯೂಸ್6 hours ago

Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

lok sabha Election
ಪ್ರಮುಖ ಸುದ್ದಿ6 hours ago

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Car Accident
ಪ್ರಮುಖ ಸುದ್ದಿ6 hours ago

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Narendra Modi
ದೇಶ6 hours ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 mins ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ13 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ13 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ16 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202418 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌