ಡಾ. ಗುರುಲಿಂಗ ಕಾಪಸೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ - Vistara News

ಕಲೆ/ಸಾಹಿತ್ಯ

ಡಾ. ಗುರುಲಿಂಗ ಕಾಪಸೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ

ಡಾ.ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ ದೊರೆತಿದೆ. ಖಾಂಡೇರ್‌ ಅವರ ಆತ್ಮಕತೆಯ ಅನುವಾದಕ್ಕಾಗಿ ಈ ಪುರಸ್ಕಾರ ದೊರೆತಿದೆ.

VISTARANEWS.COM


on

gurulinga kapse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿ ಹಿರಿಯ ಲೇಖಕರಾದ ಡಾ. ಗುರುಲಿಂಗ ಕಾಪಸೆ ಅವರಿಗೆ ದೊರೆತಿದೆ.

ಡಾ. ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ. ಸ. ಖಾಂಡೇಕರ್ ಅವರ ʼಒಂದು ಪುಟದ ಕಥೆ’ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಆಯ್ಕೆಯಾಗಿದೆ. ʼಒಂದು ಪುಟದ ಕಥೆ’ (ಮೂಲ- ʼಏಕಾ ಪಾನಾಚಿ ಗೋಷ್ಠʼ) ಖಾಂಡೇಕರ್ ಅವರ ಆತ್ಮಕಥೆ. ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ ʼಯಯಾತಿ’ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಬಂದಿತ್ತು.

ಕಾಪಸೆಯವರು ಅನುವಾದಿಸಿದ ಖಾಂಡೇಕರ್ ಅವರ ಆತ್ಮಕಥೆಯು ಕಳೆದ ಶತಮಾನದ ಭಾರತದ ಅದರಲ್ಲಿಯೂ ಮಹಾರಾಷ್ಟದ ಕೊಂಕಣ ಭಾಗದ ಸಾಮಾಜಿಕ, ಆರ್ಥಿಕ, ರಾಜಕೀಯ ಸ್ಥಿತಿಗತಿಗಳ ಸಮಗ್ರವಾದ ವಿವರಣೆ ನೀಡುತ್ತದೆ. ಖಾಂಡೇಕರ್ ಅವರು ಕರ್ನಾಟಕದ ಬೆಳಗಾವಿ ಜಿಲ್ಲೆಯ ಅಳಿಯ. ಖಾನಾಪುರ ತಾಲೂಕಿನ ಅಸೋಗಾ ಗ್ರಾಮದ ಮಣೇರಿಕರ್ ಕುಟುಂಬದ ಉಷಾ ಅವರು ಖಾಂಡೇಕರ್‌ ಅವರ ಹೆಂಡತಿ. ಮದುವೆಗಾಗಿ ಅವರು ಮಹಾರಾಷ್ಟ್ರದ ರತ್ನಾಗಿರಿಯಿಂದ ಅಸೋಗಾ ಗ್ರಾಮದ ವರೆಗೆ ಚಕ್ಕಡಿ ಕಟ್ಟಿಕೊಂಡು ಬಂದ ವಿವರಗಳನ್ನು ಕೃತಿಯಲ್ಲಿ ನೀಡಿದ್ದಾರೆ.

ಇದನ್ನೂ ಓದಿ: ಕವಿ ಎಚ್ಚೆಸ್ವಿ ಜನ್ಮದಿನ: ತೂಗುಮಂಚದ ಕವಿಯ ಓದಬೇಕಾದ 7 ಕವನಗಳು

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆದ ಅನುವಾದ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯು ಕಾಪಸೆಯವರು ಅನುವಾದಿಸಿದ ಈ ಕೃತಿಯನ್ನು ಪ್ರಶಸ್ತಿಗೆ ಆಯ್ಕೆಮಾಡಿತು. ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಹಿರಿಯ ಲೇಖಕರಾದ ಡಾ. ಬಸವರಾಜ ಕಲ್ಗುಡಿ, ಕವಿಗಳಾದ ಬಿ. ಆರ್. ಲಕ್ಷ್ಮಣರಾವ್, ಡಾ. ಸುಬ್ಬು ಹೊಲೆಯಾರ್ ಇದ್ದರು. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್‌ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ದಿಲ್ಲಿಯಲ್ಲಿ ನೆರವೇರಲಿದೆ. ಪ್ರಶಸ್ತಿಯು 50,000 ರೂಪಾಯಿ ನಗದು, ಸ್ಮೃತಿ ಫಲಕ, ಶಾಲು ಸನ್ಮಾನ ಒಳಗೊಂಡಿರುತ್ತದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಭಾಜನರಾದ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ್‌ಗೆ ಸೇಡಿಯಾಪು ಪ್ರಶಸ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Bengaluru News: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Nari Samman 2024 award ceremony on June 15 in Bengaluru
Koo

ಬೆಂಗಳೂರು: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ, ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಂಬೆ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾ. ಮಂಜುಳಾ ಚೆಲ್ಲೂರು, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್‌, ಖ್ಯಾತ ಚಲನಚಿತ್ರ ನಟ ಶ್ರೀನಾಥ್‌, ಬೆಂಗಳೂರಿನ ಬಸವ ಪರಿಷತ್‌ ಅಧ್ಯಕ್ಷೆ ಎಂ.ಪಿ. ಉಮಾದೇವಿ, ಮಾಜಿ ಸಚಿವೆ ರಾಣಿ ಸತೀಶ್‌, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಇಸ್ರೋ ಸಂಸ್ಥೆ ವಿಜ್ಞಾನಿ ಬಿ.ಎಚ್‌.ಎಂ. ದಾರುಕೇಶ್‌, ಡಾ. ಎಚ್‌.ಆರ್‌. ಶಾಂತರಾಜಣ್ಣ, ಚಲನಚಿತ್ರ ನಟ ಸುಚೇಂದ್ರ ಪ್ರಸಾದ್‌, ಚಲನಚಿತ್ರ ನಟಿ ಭಾವನಾ, ಡಾ. ಮಂಜುಳಾ ಎ. ಪಾಟೀಲ್‌ ಪಾಲ್ಗೊಳ್ಳುವರು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಕಿರುತೆರೆ ನಿರೂಪಕಿ ಅನುಶ್ರೀ, ಚಲನಚಿತ್ರ ನಟಿ ಸೋನಾಲ್‌ ಮಂಥೇರೋ, ಉದ್ಯಮಿ ಪಲ್ಲವಿ ರವಿ, ಡಾ. ಮಮತಾ ಎಸ್‌.ಎಚ್‌., ಉಮಾಬಾಯಿ ಖರೆ, ಜ್ಯೋತಿ ಟೋಸೂರ, ಡಾ. ರತ್ನಮ್ಮ ಆರ್‌., ಹಿರಿಯ ನಿರೂಪಕಿ ನವಿತ ಜೈನ್‌, ಸುಜಾತ ಬಯ್ಯಾಪುರ, ಮಧುರ ಅಶೋಕ್‌ ಕುಮಾರ, ಡಾ. ಸುಮಾ ಬಿರಾದಾರ, ಸುಮಿತ್ರಾ ಎಂ.ಪಿ.ರೇಣುಖಾಚಾರ್ಯ, ಡಾ. ಸಂದರ್ಶಿನಿ ನರೇಂದ್ರಕುಮಾರ್‌, ಡಾ. ಪುಲಿಗೆರೆ ಸಂಪದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ನಾಟ್ಯ ಸಂಪದ ನೃತ್ಯ ಶಾಲೆ ಸಂಸ್ಥಾಪಕಿ ಡಾ. ಮಾನಸ ಕಂಠಿ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

Continue Reading

Latest

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

Veeraloka Books: ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ ಅವರು ಹಾರೈಸಿದರು.

VISTARANEWS.COM


on

Veeraloka
Koo

ಬೆಂಗಳೂರು: ಇವತ್ತು ದಾಲ್ ತಡ್ಕ ರೇಟ್ ಜಾಸ್ತಿಯಾದರೆ (Veeraloka Books) ನಾವು ಯಾರನ್ನೂ ಕೇಳುವುದಿಲ್ಲ. ಸುಮ್ಮನೆ ಹೋಗಿ ಹಣ ಕೊಟ್ಟು ತಿಂದು ಬರುತ್ತೇವೆ. ಆದರೆ ಕನ್ನಡ ಪುಸ್ತಕಗಳಿಗೆ ದಾಲ್‌ ತಡ್ಕಾಗಿರುವಷ್ಟು ಬೇಡಿಕೆಯೂ ಇಲ್ಲ. ಮುಖಬೆಲೆ ಐದು ರೂಪಾಯಿ ಜಾಸ್ತಿಯಾದರೂ ಓದುಗ ಪುಸ್ತಕ ಖರೀದಿಸಲು ಹಿಂದೆ ಮುಂದೆ ನೋಡುವಂಥ ಪರಿಸ್ಥಿತಿ ಇದೆ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ (jayant kaikini) ವಿಷಾದಿಸಿದರು. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ವೀರಲೋಕ ಬುಕ್ಸ್ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಕಾಯ್ಕಿಣಿ ಅವರು ಹಾರೈಸಿದರು.

ವೀರಲೋಕ ಬುಕ್ಸ್ ಆಯೋಜಿಸಿದ್ದ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐದು ಕೃತಿಗಳ ಬಿಡುಗಡೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಅವುಗಳಲ್ಲಿ ರಾಧಾಕೃಷ್ಣ ಕಲ್ಚಾರ್‌ ಅವರ ‘ಕವಚ’ ಕಾದಂಬರಿ ವೀರಲೋಕದ ನೂರನೇ ಕೃತಿಯಾಗಿತ್ತು. ಡಾ. ಎಂ ವೆಂಕಟಸ್ವಾಮಿಯವರ ‘ಜಗತ್ತಿನ ಭೀಕರ ಯುದ್ಧಗಳು’, ನೌಶಾದ್ ಜನ್ನತ್ತ್ ಅವರ ‘ಬೇವಾಚ್’, ಸಂದ್ಯಾರಾಣಿಯವರ ‘ನಾತಿಚರಾಮಿ’, ಡಾ. ಶೈಲೇಶ್ ಕುಮಾರ್ ಅವರ ‘ಸುಪ್ತ ಸಾಗರದಾಚೆ’ ಇನ್ನಿತರ ಕೃತಿಗಳಾಗಿದ್ದವು.
ವೀರಲೋಕ ಬುಕ್ಸ್ ಸಂಸ್ಥಾಪಕರಾದ ವೀರಕಪುತ್ರ ಶ್ರೀನಿವಾಸ್ ಅವರು ಆಶಯ ನುಡಿಗಳನ್ನಾಡಿದರು. ಎರಡು ವರ್ಷಗಳಲ್ಲಿನ ಏಳುಬೀಳುಗಳು, ಮೈಲುಗಲ್ಲುಗಳು, ಮುಂದಿನ ತಯಾರಿಗಳ ಬಗ್ಗೆ ವಿವರಿಸಿದರು.

ಇದೇ ವೇದಿಕೆಯಲ್ಲಿ ಅನಂತ ಕುಣಿಗಲ್ ಅವರು ಸಂಪಾದಿಸಿರುವ ವೀರಕಪುತ್ರ ಶ್ರೀನಿವಾಸ್ ಅವರ ಲಲಿತ ಪ್ರಬಂಧಗಳ ಸಂಕಲನ ‘ಬದುಕೇ ಥ್ಯಾಂಕ್ಯೂ’ ಕೃತಿಯೂ ಬಿಡುಗಡೆಯಾಯಿತು. ಕನ್ನಡ ಮಾಣಿಕ್ಯ ಮಾಸ ಪತ್ರಿಕೆಯ ದಶಮಾನೋತ್ಸವವನ್ನೂ ಆಚರಿಸಲಾಯಿತು. ವೀರಲೋಕದ ಐದು ಕೃತಿಗಳ ಮರುಮುದ್ರಣದ ಆವೃತ್ತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್, ನಿರ್ದೇಶಕ ಮಂಸೋರೆ, ಸಂಭಾಷಣೆಕಾರ ಮಾಸ್ತಿ, ಮಹೇಶ ಅರಬಳ್ಳಿ, ಭಾರತಿ ಬಿ.ವಿ, ಪೂರ್ಣಿಮಾ ಮಾಳಗಿಮನಿ, ಶೋಭಾ ರಾವ್, ನವೀನ್ ಸಾಗರ್, ಮಂಡ್ಯ ರಮೇಶ್, ಜೋಗಿ, ಸಂತೋಷ್ ಹಾನಗಲ್, ದಿವ್ಯಾ ಆಲೂರು, ಹರಿವು ರತೀಶ್, ಕಾನ್ಕೇವ್ ನಂದೀಶ್, ಪ್ರಕಾಶ್ ಕಂಬತ್ತಳ್ಳಿ, ಷಡಕ್ಷರಿ, ವಿ ನಾಗೇಂದ್ರ ಪ್ರಸಾದ್ ಮತ್ತಿತರು ಉಪಸ್ಥಿತರಿದ್ದರು.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಸಾಕೇತದ ಅಮಾತ್ಯ ಸುಮಂತ್ರ, ರಾಮಾಯಣದ ರಹಸ್ಯನಿಧಿ

ಧವಳ ಧಾರಿಣಿ ಅಂಕಣ: ರಾಮಾಯಣದಲ್ಲಿ ಮಂತ್ರಿ ಸುಮಂತ್ರನ ಪಾತ್ರ ಸಣ್ಣದಾದರೂ ಮಹತ್ವದ್ದು. ದಶರಥ ಮಹಾರಾಜನ ಬಾಲ್ಯದ ಒಡನಾಡಿ ಇವನಾಗಿದ್ದ. ಬಹುಶಃ ದಶರಥನದೇ ವಯಸ್ಸು ಈತನಿಗೆ. ಈ ಕಾರಣದಿಂದಲೇ ದಶರಥನಿಗೆ ಆತ ನಂಬಿಗಸ್ಥ ಮಂತ್ರಿಯಾಗಿದ್ದನು. ಆತನ ಅಂತರಂಗದ ಆಪ್ತನೂ ಆಗಿದ್ದನು.

VISTARANEWS.COM


on

ಧವಳ ಧಾರಿಣಿ ಅಂಕಣ dasharatha sumantra
Koo

ಸುಮಂತ್ರ ಭಾಗ 1; ರಾಜ್ಯದ ರಹಸ್ಯಗಳನ್ನು ನಿಗೂಢವಾಗಿರಿಸಿದ ಮುತ್ಸದ್ಧಿ

dhavala dharini by Narayana yaji

ಧವಳ ಧಾರಿಣಿ ಅಂಕಣ: ತಸ್ಯಾಮಾತ್ಯಾ ಗುಣೈರಾಸನ್ನಿಕ್ಷ್ವಾಕೋಸ್ತು ಮಹಾತ್ಮನಃ
ಮನ್ತ್ರಜ್ಞಾಶ್ಚೇಙ್ಗಿತಜ್ಞಾಶ್ಚ ನಿತ್ಯಂ ಪ್ರಿಯಹಿತೇ ರತಾ: ৷৷ಬಾ.7.1৷৷

ಇಕ್ಷ್ವಾಕು ವಂಶದಲ್ಲಿ ಹುಟ್ಟಿದ ಮಹಾತ್ಮನಾದ ದಶರಥನಿಗೆ (king Dasharatha) ಮಂತ್ರಾಲೋಚನೆಯಲ್ಲಿ ಸಮರ್ಥರಾದ, ಕಾರ್ಯವಿಚಾರತತ್ಪರರಾದ ಮತ್ತು ಪರರಮನಸಿನಲ್ಲಿರುವುದನ್ನು ಮುಖಭಾವದಿಂದಲೇ ತಿಳಿಯುಬಲ್ಲ, ಯಾವಾಗಲೂ ರಾಜನ ಹಿತರಕ್ಷಣೆಯಲ್ಲಿಯೇ ನಿರತರಾಗಿರುವ ಮಂತ್ರಿಗಳಿದ್ದರು.

ಮಂತ್ರಿಗಳ ವಿಚಾರಕ್ಕೆ ಬರುವಾಗ ರಾಮಾಯಣದ (Ramayana) ಪ್ರಾರಂಭದ ಬಾಲಕಾಂಡಗಳಿಂದ ಹಿಡಿದು ಕೊನೆಯ ಉತ್ತರಕಾಂಡದ ಸೀತಾವಿಯೋಗದ ವರೆಗಿನ ಭಾಗಗಳಲ್ಲಿ ಕಂಡುಬರುವ ಪ್ರಮುಖ ಹೆಸರು ಸುಮಂತ್ರ (Sumantra) ಎನ್ನುವ ಮಹಾ ಅಮಾತ್ಯನದ್ದು. ಅಯೋಧ್ಯೆಯ ಹಿತವನ್ನು ಕಾಪಾಡಲು ಅಷ್ಟ ಮಂತ್ರಿಗಳಾದ ಧೃಷ್ಟಿ, ಜಯಂತ, ವಿಜಯ, ಸಿದ್ಧಾರ್ಥ, ಅರ್ಥಸಾಧಕ, ಅಶೋಕ, ಮಂತ್ರಪಾಲ ಮತ್ತು ಸುಮಂತ್ರ ಎನ್ನುವ ಎಂಟು ಮಂತ್ರಿಗಳಿದ್ದರು. ಅವರಲ್ಲಿ ಸುಮಂತ್ರನೆನ್ನುವ ಕೇವಲ ಮಂತ್ರಿ ಎನ್ನುವುದಕ್ಕಿಂತ ರಾಜನ ಅಂತರಂಗದ ಆಪ್ತನೂ ಆಗಿದ್ದ. ಅರ್ಥಶಾಸ್ತ್ರದಲ್ಲಿ ಸುಬಧ್ರವಾದ ರಾಜ್ಯಕ್ಕೆ “ರಾಜ, ಅಮಾತ್ಯ, ಜನಪದ, ದುರ್ಗ, ಕೋಶ, ಸೈನ್ಯ ಅಥವಾ ದಂಡ ಮತ್ತು ಮಿತ್ರ” ಎನ್ನುವ ಸಪ್ತಾಂಗ ಬಹಳ ಮಹತ್ವದ್ದು. ಅಮಾತ್ಯರಲ್ಲಿ ಮಂತ್ರಿಗಳು ಮತ್ತು ಪುರೋಹಿತ ವರ್ಗ ಎನ್ನುವ ಎರಡು ವಿಧಗಳಿವೆ. ದಕ್ಷ ಆಡಳಿತಕ್ಕೆ ಯೋಗ್ಯರಾದ ಸಚಿವರು ಮತ್ತು ಧರ್ಮಮಾರ್ಗದಲ್ಲಿ ರಾಜ ಸದಾ ಇರುವಂತೆ ನೋಡಿಕೊಳ್ಳುವ ಪುರೋಹಿತರು ಬಹು ಮುಖ್ಯ. ರಾಜನಿಗೆ ಕೆಟ್ಟ ಹೆಸರಾಗಲಿ, ಒಳ್ಳೆಯ ಹೆಸರಾಗಲಿ ಬರುವುದರಲ್ಲಿ ಅಮಾತ್ಯ ಮತ್ತು ಪುರೋಹಿತರ ಪಾತ್ರ ದೊಡ್ಡದು.

ಸುಮಂತ್ರ ಎನ್ನುವ ಮಂತ್ರಿ ಅಯೋಧ್ಯೆಯ ಆಧಾರ ಸ್ತಂಭಗಳಲ್ಲಿ ಒಂದಾಗಿದ್ದ. ಆಯೋಧ್ಯೆಯಲ್ಲಿ ಸಚಿವ ಪದವಿಯೆನ್ನುವುದು ವಂಶಪರಂಪರೆಯ ಕಾರಣ ಮಾತ್ರದಿಂದಲೇ ಬರುತ್ತಿರಲಿಲ್ಲ. ಅವರಲ್ಲಿ ಯೋಗ್ಯತೆಯೂ ಇರಬೇಕಾಗಿತ್ತು. ಯಾರನ್ನಾದರೂ ಹುದ್ದೆಗೆ ನಿಯಕ್ತಿಗೊಳಿಸುವ ಮುನ್ನ ಅವರನ್ನು ಚನ್ನಾಗಿ ಪರೀಕ್ಷಿಸಲಾಗುತ್ತಿತ್ತು. ಅರ್ಥಶಾಸ್ತ್ರದಲ್ಲಿ ರಾಜನ ಆಸ್ಥಾನದಲ್ಲಿರುವವರನ್ನು ಪರೀಕ್ಷಿಸುವ ವಿಧಾನವನ್ನು ಹೇಳುವಾಗ ಧರ್ಮಾದಿ, ಉಪಧಾ, ಅರ್ಥೋಪಧಾ, ಕಾಮೋಪಧಾ, ಭಯೋಪಧಾಗಳ ಮೂಲಕ ಪರೀಕ್ಷಿಸಬೇಕು ಎಂದು ಹೇಳುತ್ತದೆ. ಅಂದರೆ ರಾಜನಲ್ಲಿ ಅಧರ್ಮವನ್ನು ಕಲ್ಪಿಸಿ ಅವನನ್ನು ಪಟ್ಟದಿಂದ ಇಳಿಸೋಣವೇ ಎನ್ನುವ ಆಮಿಷಕ್ಕೆ ಒಡ್ಡಿದಾಗಲೂ ಅದನ್ನು ಯಾವಾತ ತಿರಸ್ಕರಿಸುತ್ತಾನೋ, ಹಣದ ಆಮಿಷದ ಮೂಲಕ ರಾಜನಿಂದ ಬೇರ್ಪಡಿಸಲು ಸಾಧ್ಯವೋ ಎನ್ನುವುದನ್ನು ಪರೀಕ್ಷಿಸುವುದು, ರಾಣಿ ನಿನ್ನನ್ನು ಬಯಸಿದ್ದಾಳೆ, ಅವಳನ್ನು ಸೇರಿದರೆ ನಿನಗೆ ಕೈತುಂಬಾ ಹಣಸಿಗುವುದು ಎನ್ನುವ ಆಮಿಷವನ್ನು ಒಡ್ಡಿದಾಗಲೂ ಅದನ್ನು ತಿರಸ್ಕರಿಸುವಂಥವರು, ರಾಜನಿಂದ ಅವಮಾನಿತರಾದ (ಹಾಗೇ ನಟಿಸಿ) ಅಮಾತ್ಯನಾದವ ಇತರರನ್ನು ನಾವೆಯಲ್ಲಿ ಕರೆದುಕೊಂಡು ಹೋಗಿ ರಾಜನ ವಿರುದ್ಧ ಅವರನ್ನು ಎತ್ತಿಕಟ್ಟಿದಾಗ ಯಾರು ತಿರಸ್ಕರಿಸಿ ರಾಜನಿಗೆ ನಿಷ್ಠೆಯುಳ್ಳವರಾಗಿರುತ್ತಾರೆಯೋ ಅಂಥವರು ಮಾತ್ರ ಅಮಾತ್ಯರಾಗಲು ಯೋಗ್ಯರು ಎನ್ನುತ್ತದೆ.

ರಾಜನ ಆಪ್ತಸಲಹೆಗಾರ

ದಶರಥ ಮಹಾರಾಜನ ಬಾಲ್ಯದ ಒಡನಾಡಿ ಇವನಾಗಿದ್ದ. ಬಹುಶಃ ದಶರಥನದೇ ವಯಸ್ಸು ಈತನಿಗೆ. ಈ ಕಾರಣದಿಂದಲೇ ದಶರಥನಿಗೆ ಆತ ನಂಬಿಗಸ್ಥ ಮಂತ್ರಿಯಾಗಿದ್ದನು. ಆತನ ಅಂತರಂಗದ ಆಪ್ತನೂ ಆಗಿದ್ದನು. ದಶರಥ ಕೌಸಲ್ಯೆ ಮತ್ತು ಸುಮಿತ್ರೆ ಇಬ್ಬರನ್ನೂ ಮದುವೆಯಾಗಿ ಹಲವುಕಾಲ ಕಳೆದಿದ್ದರೂ ಅವರಿಬ್ಬರಲ್ಲಿ ಮಕ್ಕಳಾಗಿರಲಿಲ್ಲ. ಅಯೋಧ್ಯೆಯ ಸಿಂಹಾಸನಕ್ಕೆ ವಾರಸುದಾರರು ಇಲ್ಲದೆ ಇರುವ ಕಾರಣದಿಂದ ಮತ್ತೊಂದು ಮದುವೆಯಾಗಲು ಕನ್ಯಾನ್ವೇಷಣೆಗೆ ದೊರೆ ತೊಡಗಿದ. ಆಗ ಆತನಿಗೆ ಕೇಕೇಯದ ದೊರೆ ಅಶ್ವಪತಿಗೆ ಕೈಕೇಯಿ ಎನ್ನುವ ಸುಂದರಿಯಾದ ಮಗಳು ಇರುವ ವರ್ತಮಾನ ಬಂತು. ಆಕೆಯನ್ನು ಮದುವೆಯಾಗುವ ಉದ್ಧೇಶದಿಂದ ಅಶ್ವಪತಿರಾಜನಲ್ಲಿ ಕೇಳಿದಾಗ ಆ ದೊರೆ “ತನ್ನ ಮಗಳಲ್ಲಿ ಜನಿಸುವ ಪುತ್ರನಿಗೆ ರಾಜ್ಯದ ಉತ್ತರಾಧಿಕಾರ ಸಿಗಬೇಕೆಂದು” ನಿಯಮ ಹಾಕಿ ಅದಕ್ಕೆ ಒಪ್ಪುವುದಾದರೆ ಮಗಳನ್ನು ಕೊಡುವೆ ಎಂದ. ದಶರಥನಿಗೆ ಮದುವೆ ಆಗಬೇಕಾಗಿತ್ತು. ಅದಾಗಲೇ ಆತನಿಗೆ ಇಬ್ಬರು ಹೆಂಡತಿಯರ ಜೊತೆ ಇನ್ನು ಮುನ್ನೂರೈವತ್ತು ಉಪಪತ್ನಿಯರೂ ಇದ್ದರು. ಪಟ್ಟಮಹಿಷಿಯರಲ್ಲಿ ಜನಿಸಿದವರಿಗೆ ಮಾತ್ರ ರಾಜ್ಯದ ಅಧಿಕಾರಕ್ಕೆ ಏರುವ ಅರ್ಹತೆ ಇರುತ್ತಿತ್ತು. ಹೇಗಿದ್ದರೂ ಮೊದಲ ಇಬ್ಬರು ಪತ್ನಿಯರಿಗೆ ಮಕ್ಕಳಿಲ್ಲ, ಹಾಗಾಗಿ ಕೈಕೇಯಿಯಲ್ಲಿ ಜನಿಸಿದ ಮಕ್ಕಳಿಗೆ ಸಹಜವಾಗಿ ಅಧಿಕಾರ ಸಿಗುತ್ತದೆ ಎನ್ನುವ ಕಾರಣಕ್ಕೆ ದೊರೆ ಮರುಮಾತಿಲ್ಲದೇ ಒಪ್ಪಿಕೊಂಡ.

ಈ ವಿಷಯಕ್ಕೆ ಸಾಕ್ಷಿಯಾಗಿ ಸುಮಂತ್ರ ಮಾತ್ರವೇ ಇದ್ದ. ಆದರೆ ಬುದ್ಧಿವಂತನಾದ ದಶರಥ ಮತ್ತು ಸುಮಂತ್ರ ಇಬ್ಬರೂ ಈ ವಿಷಯವನ್ನು ಗೌಪ್ಯವಾಗಿಟ್ಟಿದ್ದರು. ಅಶ್ವಪತಿ ತನ್ನ ಮಗಳಾದ ಕೈಕೇಯಿಗೂ ಈ ಮಾತನ್ನು ಹೇಳಿರಲಿಲ್ಲ. ನಂತರ ಅದು ಹೇಗೋ ರಾಮನಿಗೆ ತಿಳಿದಿತ್ತು. ರಾಜನಾಗುವಿಕೆ ಎಂದರೆ ಅದಕ್ಕೆ ಇನ್ನಿತರ ಯೋಗ್ಯತೆಯೂ ಬೇಕಿತ್ತು. ಭರತ ವನವಾಸಕ್ಕೆ ಬಂದಾಗ ಆತನಲ್ಲಿ ರಾಮ, ದಶರಥ ಕನ್ಯಾಶುಲ್ಕವಾಗಿ ಕೋಸಲ ರಾಜ್ಯವನ್ನು ಕೊಟ್ಟಿರುವ ವಿಷಯ ಹೇಳುತ್ತಾನೆ. ಮದುವೆಯಾಗುವಾಗ ಸುಳ್ಳು ಹೇಳಬಹುದು ಎನ್ನುವ ಕಾರಣಕ್ಕೆ ರಾಜ್ಯದ ಹಿತರಕ್ಷಣೆಯಿಂದ ಸುಮಂತ್ರ ಈ ವಿಷಯನ್ನು ಮುಚ್ಚಿಟ್ಟಿದ್ದ. ಮಹಾಭಾರತದಲ್ಲಿ “ಮನ್ತ್ರಗೂಢಾ ಹಿ ರಾಜಸ್ಯ ಮನ್ತ್ರಿಣೋ ಯೇ ಮನೀಷಿಣಃ – ಬುದ್ಧಿವಂತರಾದ ಮಂತ್ರಿಗಳೇ ರಾಜ್ಯದ ರಾಜ ರಹಸ್ಯಗಳನ್ನು ನಿಗೂಢವಾಗಿರಿಸುತ್ತಾರೆ” ಎನ್ನುವ ವಾಕ್ಯವಿದೆ. ಅದಕ್ಕೆ ತಕ್ಕಂತೆ ಇದ್ದವ ಸುಮಂತ್ರ.

ರಾಜ ಮತ್ತು ಅಮಾತ್ಯ ಈ ಇಬ್ಬರ ನಡುವೆ ಇರುವ ಸಂಬಂಧ ಪತಿ ಮತ್ತು ಧಾರಾ ಭಾವದಲ್ಲಿರಬೇಕು. ರಾಜನ ನಿರ್ಣಯದಲ್ಲಿ ದೋಷಕಂಡು ಅದರಲ್ಲಿ ಬದಲಾವಣೆ ಆಗಬೇಕಾದಾಗ ಬಹಿರಂಗವಾಗಿ ಆ ಕುರಿತು ಚರ್ಚಿಸಕೂಡದು. ಸಭಾಸದರ ಎದುರು ಸತ್ಯವೇ ಆದರೂ ಅದನ್ನು ಪ್ರಕಟಿಸಿದರೆ ರಾಜನ ಮಹತ್ವ ಕಡಿಮೆಯಾಗಿಬಿಡುತ್ತದೆ. ಸಚಿವನಾದವ ಹೆಂಡತಿ ತನ್ನ ಗಂಡನಿಗೆ ಏಕಾಂತದಲ್ಲಿ ಹೇಗೆ ಎಲ್ಲವನ್ನು ತಿಳಿಸಿ ಹೇಳುತ್ತಾಳೆಯೋ ಅದೇ ರೀತಿ ರಾಜ ಏಕಾಂತದಲ್ಲಿರುವಾಗ ಆತ ತೆಗೆದುಕೊಂಡ ನಿರ್ಣಯಗಳ ಕುರಿತು ವಿಮರ್ಶಿಸಿ ಮಾಡಬೇಕಾದ ಬದಲಾವಣೆಗಳನ್ನು ತಿಳಿಸಿ ಕಾರ್ಯರೂಪಕ್ಕೆ ತರುವಂತೆ ನೋಡಿಕೊಳ್ಳಬೇಕು. ದಶರಥನಿಗೆ ಬಹುಕಾಲದವರೆಗೂ ಮಕ್ಕಾಳಾಗಿಲ್ಲದ ಕಾರಣದಿಂದ ಆತ ತನ್ನ ಮಂತ್ರಿಗಳನ್ನು ಪುರೋಹಿತರಾದ ವಶಿಷ್ಠ, ವಾಮದೇವರನ್ನೂ ಕರೆಯಿಸಿ ಅವರಲ್ಲಿ ಪರಿಹಾರ ಕೇಳಿದಾಗ, ಅವರು ರಾಜನಿಗೆ ಅಶ್ವಮೇಧ ಯಾಗವನ್ನು ಮಾಡಲು ಸಲಹೆನೀಡುತ್ತಾರೆ. ಅದಕ್ಕೆ ದೊರೆ ಒಪ್ಪಿಗೆ ಸೂಚಿಸಿಯೂ ಆಗುತ್ತದೆ. ಆದರೆ ಅಲ್ಲೇ ಇದ್ದ ಸುಮಂತ್ರನಿಗೆ ಈ ಸಲಹೆ ಪೂರ್ತಿ ಮನಸ್ಸಿಗೆ ಬರಲಿಲ್ಲ. ಆತ ರಾಜನ ಅಂತಃಪುರಕ್ಕೆ ಸಾಯಂಕಾಲ ಬಂದು ರಾಜನಿಗೆ ಮಹತ್ವದ ವಿಷಗಳ ಕುರಿತು ಹೇಳುತ್ತಾನೆ.

ಸುಮಂತ್ರನ ಪಾತ್ರ ಮಹಾಭಾರತದ ವಿದುರನ ಪಾತ್ರವನ್ನು ಹೋಲುತ್ತದೆ. ಆತನಿಗೂ ವಿದುರನಂತೆ ಮಹಾನ್ ಋಷಿಗಳ ಸಂಪರ್ಕವಿತ್ತು. ಅವರಲ್ಲಿ ತನ್ನ ವಯಕ್ತಿಕವಾದ ವಿಷಯಗಳನ್ನು ಕೇಳುವುದಕ್ಕಿಂತ ಆತ ರಾಜ್ಯದ ಕಲ್ಯಾಣದ ವಿಷಯಗಳನ್ನು ಕೇಳುತ್ತಿದ್ದ. ಅಯೋಧ್ಯೆಯ ಅರಸನಿಗೆ ಮಕ್ಕಳಾಗಿಲ್ಲದ ವಿಷಯಗಳ ಕುರಿತು ಸುಮಂತ್ರನಿಗೂ ಚಿಂತೆ ಆಗಿತ್ತು. ಆ ಕುರಿತು ಆತ ಪರಿಹಾರಕ್ಕಾಗಿ ಅನೇಕ ಋಷಿಗಳನ್ನು ಬೇಡಿಕೊಳ್ಳುತ್ತಿದ್ದ. ಒಂದುಸಲ ಸುಮಂತ್ರ ಮಹಾತ್ಮರಾದ ಸನತ್ಕುಮಾರ ಋಷಿಗಳನ್ನು ಇನ್ನಿತರ ಮುನಿಗಳ ಸಮ್ಮುಖದಲ್ಲಿ ಭೇಟಿಯಾಗಿ ರಾಜನಿಗೆ ಮಕ್ಕಳಾಗುವಂತೆ ಬೇಡಿಕೊಂಡ. ಅದಕ್ಕೆ ಅವರು ವಿಭಾಂಡಕ ಮುನಿಯ ಮಗನಾದ ಋಷ್ಯಶೃಂಗನ ವಿಚಾರವನ್ನು ಹೇಳಿ, ಆತನ ಚರಿತ್ರೆಯನ್ನು ಅಮಾತ್ಯನಿಗೆ ವಿವರಿಸುತ್ತಾರೆ. ಋಷ್ಯಶೃಂಗನನ್ನು ಹೆಣ್ಣುಗಳ ಮೋಹದಲ್ಲಿ ಕೆಡಹಿ ತನ್ನ ರಾಜ್ಯಕ್ಕೆ ಕರೆಯಿಸಿಕೊಂಡ ರೋಮಪಾದ ರಾಜ ತನ್ನ ಮಗಳಾದ ಶಾಂತಾದೇವಿಯನ್ನು ಕೊಟ್ಟು ಮದುವೆಮಾಡಿದ್ದಾನೆ. ಸುಮಂತ್ರನ ನಿಸ್ಪ್ರಹ ಪ್ರಾರ್ಥನೆಗೆ ಮೆಚ್ಚಿದ ಸನತ್ಕುಮಾರರು ಧಶರಥನಿಗೆ ಮಕ್ಕಳಾಗಬೇಕೆಂದಿದ್ದರೆ ಆತ ಅಂಗರಾಜ್ಯಕ್ಕೆ ಹೋಗಿ ರೋಮಪಾದನನ್ನು ಒಲಿಸಿ ಋಷ್ಯಶೃಂಗನನ್ನು ಅಯೋಧ್ಯೆಗೆ ಕರೆಯಿಸಿ ಆತನಿಂದ ಪುತ್ರಕಾಮೇಷ್ಥಿ ಯಾಗವನ್ನು ಮಾಡಿಸಿದರೆ ನಾಲ್ವರು ಮಕ್ಕಳಾಗುವರು ಎಂದು ಉಪಾಯವನ್ನೂ ಸಹ ಹೇಳಿದ್ದ. ಈ ವಿಷಯವನ್ನು ಸೂಕ್ತ ಸಮಯದಲ್ಲಿ ದಶರಥನಿಗೆ ಹೇಳಬೇಕೆಂದುಕೊಂಡು ಅದು ತನಕ ಹೇಳಿರಲಿಲ್ಲ.

ದೇವಗುಟ್ಟು, ಋಷಿ ಗುಟ್ಟುಗಳನ್ನು ಏಕಾಏಕೀ ಬಹಿರಂಗಪಡಿಸಬಾರದೆಂದು ಶಾಸ್ತ್ರ ಹೇಳುತ್ತದೆ. ಕಾಲವಲ್ಲದ ಕಾಲದಲ್ಲಿ ಅದನ್ನು ಹೇಳಿದರೆ ಅದು ಫಲ ನೀಡದೇ ಹೋಗಬಹುದು. ಅದೂ ಅಲ್ಲದೇ ಮನುಷ್ಯ ಪ್ರಯತ್ನ ಮೀರಿದಾಗ ಮಾತ್ರವೇ, ದೇವತೆಗಳಲ್ಲಿ ಅನುಗ್ರಹಕ್ಕಾಗಿ ಕೋರಬೇಕು. ಮಕ್ಕಳಾಗಲು ಅಶ್ವಮೇಧ ಯಾಗವನ್ನು ಮಾಡುವಂತೆ ವಶಿಷ್ಠರು ಸಲಹೆ ನೀಡಿದಾಗ ಸಭೆಯ ಮರ್ಯಾದೆಯ ದೃಷ್ಟಿಯಿಂದ ಅಲ್ಲಿ ಸುಮಂತ್ರ ಏನೂ ಹೇಳಲಿಲ್ಲ. ಮಂತ್ರಾಲೋಚನೆಯ ನೆಪದಲ್ಲಿ ಅಂತಃಪುರಕ್ಕೆ ಬಂದು ಅರಸನಿಗೆ ತಾನು ರಾಜನ ಸಲುವಾಗಿ ಸನತ್ಕುಮಾರರಲ್ಲಿ ಮಕ್ಕಳಾಗುವಂತೆ ವರಬೇಡಿದುದರ ವಿಷಯವನ್ನು ಬಹಿರಂಗಪಡಿಸುತ್ತಾನೆ. ಸನತ್ಕುಮಾರರೇ ಸಲಹೆ ನೀಡಿದಂತೆ ಪುತ್ರಕಾಮೇಷ್ಟಿಯಾಗವನ್ನು ಮಾಡಲು ಪ್ರೇರೇಪಿಸುತ್ತಾನೆ. ಪುತ್ರಕಾಮೇಷ್ಟಿಯಾಗ ಅಥರ್ವ ಮಂತ್ರಕ್ಕೆ ಸಂಬಂಧಿಸಿದುದರಿಂದ ಸಭೆಯಲ್ಲಿ ನೇರವಾಗಿ ಹೇಳಕೂಡದು ಎನ್ನುವ ಪ್ರಜ್ಞೆ ಸುಮಂತ್ರನಲ್ಲಿತ್ತು. ಪುರೋಹಿತರಾದ ವಶಿಷ್ಠರು ಆಸ್ಥಾನದಲ್ಲಿ ಇರುವಾಗ ಇನ್ನೊಬ್ಬ ಪುರೋಹಿತರನ್ನು ಕರೆಯಿಸಿ ಯಾಗ ಮಾಡುವ ಸಲಹೆ ನೀಡಿದರೆ ಅದರಿಂದ ವಶಿಷ್ಠರಿಗೆ ಅವಮಾನ ಆಗಿ ಕೋಪಿಸಿಕೊಳ್ಳಬಹುದೆನ್ನುವ ಆತಂಕವೂ ಮನೆಮಾಡಿತ್ತು.

ಈ ಹಿಂದೆ ವಶಿಷ್ಠ ಪರಂಪರೆಯ ಹಿರಿಯರು ಹರಿಶ್ಚಂದ್ರನ ತಂದೆ ಸತ್ಯವ್ರತ(ತ್ರಿಶಂಕು)ನಿಗೆ ಇನ್ನೊಬ್ಬ ಪುರೋಹಿತರನ್ನು ಕರೆದು ಯಾಗ ಮಾಡಿಸುವೆ ಎಂದಾಗ ಶಾಪ ಕೊಟ್ಟಿದ್ದ. ಈ ಕಾರಣದಿಂದ ಮಹಾರಾಜನೇ ಋಷ್ಯಶೃಂಗನನ್ನು ಕರೆತರುವ ವಿಚಾರದಲ್ಲಿ ವಶಿಷ್ಠರನ್ನು ಒಲಿಸಲಿ ಎನ್ನುವ ವಿವೇಕದ ನಡತೆ ಅವನಲ್ಲಿತ್ತು. ವಿದ್ವಾಂಸನೂ ಎಲ್ಲಾ ಕಾರ್ಯಗಳಲ್ಲಿ ಶುದ್ಧನಾಗಿರುವವನು, ದೇಶಿಯನು (ಜಾನಪದಃ), ತೀಕ್ಷ್ಣವಾದ ಬುದ್ಧಿಯುಳ್ಳವ (ಕೃತಪ್ರಜ್ಞಶ್ಚ) ಆದ ಮಂತ್ರಿಯನ್ನು ಅರಸ ಹೊಂದಿರಬೇಕೆನ್ನುವ ಶೃತಿವಾಕ್ಯಕ್ಕೆ ನಿದರ್ಶನನಾಗಿ ಸುಮಂತ್ರ ಇದ್ದ. ಸುಮಂತ್ರನ ಸಲಹೆಯನ್ನು ಸ್ವೀಕರಿಸಿದ ರಾಜ ವಶಿಷ್ಠರ ನೇತ್ರತ್ವದಲ್ಲಿ ಅಶ್ವಮೇಧ ಯಾಗವನ್ನೂ ಆ ನಂತರ ಋಷ್ಯಶೃಂಗರ ಅದ್ವರ್ಯದಲ್ಲಿ ಪುತ್ರಕಾಮೇಷ್ಟಿ ಯಾಗವನ್ನೂ ನಡೆಸಲು ವಶಿಷ್ಥರಿಂದ ಅನುಮತಿ ಪಡೆಯುತ್ತಾನೆ. ನಂತರ ದಶರಥನ ಪರಿವಾರದೊಡನೆ ಅಂಗದೇಶಕ್ಕೆ ಹೋಗಿ ರೋಮಪಾದನೊಡನೆ ಋಷ್ಯಶೃಂಗನನ್ನು ಯಾಗಕ್ಕಾಗಿ ಕರೆತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವ ಸುಮಂತ್ರನೇ.

ಮಂತ್ರಾಲೋಚನಾ ಪ್ರವೀಣ

ಸುಮಂತ್ರನಲ್ಲಿ ಮದ ಮತ್ಸರ ಕ್ರೋಧಗಳು ಮನೆಮಾಡಿರಲಿಲ್ಲ. ಅಯೋಧ್ಯೆಯಲ್ಲಿ ಮಂತ್ರಿಗಳಾಗುವವರನ್ನು ಕಾಯಕ, ವಾಚಕ, ಮಾನಸಿಕ, ಕರ್ಮಕೃತ ಮತ್ತು ಸಂಕೇತಜನಿತ ಎನ್ನುವ ಐದು ಅಂಗಗಳಿಂದ ಪರೀಕ್ಷಿಸಿ ತೇರ್ಗಡೆಯಾದವರನ್ನು ಮಂತ್ರಿಗಳಾಗಿ ತೆಗೆದುಕೊಳ್ಳಲಾಗುತ್ತಿತ್ತು. ಸುಮಂತ್ರ ಈ ಎಲ್ಲಾ ವಿಷಯಗಳಲ್ಲಿ ರಾಜನ ಮೊದಲ ಆಯ್ಕೆಯಾಗಿದ್ದ. ಸುಮಂತ್ರನೆನ್ನುವುದು ಈತನಿಗೆ ಅನ್ವರ್ಥನಾಮವಾಗಿದ್ದಿರಬೇಕು. ಮಂತ್ರಕ್ಕೆ ಸಚಿವ ಎನ್ನುವ ಅರ್ಥವಿದೆ. “ಸುಮಂತ್ರ” ಎಂದರೆ ಒಳ್ಳೆಯ ಸಲಹೆಯನ್ನು ಕೊಡುವವ ಎಂದು ಆಗುತ್ತದೆ. ಸುಮಂತ್ರ ಮಂತ್ರಾಲೋಚನೆಯಲ್ಲಿ ನಿಪುಣನಾಗಿದ್ದ. ಕುಮಾರವ್ಯಾಸನ ಭಾರತದಲ್ಲಿ ರಾಜನಿಗೆ ನೆರವಾಗಲು ಮಂತ್ರಾಲೋಚನೆಯಲ್ಲಿ ಸಮರ್ಥರಾದ ಸಚಿವರಿರಬೇಕು ಎನ್ನುತ್ತಾನೆ.

ಮಂತ್ರವುಳ್ಳವನವನೆ ಹಿರಿಯನು
ಮಂತ್ರವುಳ್ಳವನವನೆ ರಾಯನು
ಮಂತ್ರವುಳ್ಳವನವನೆ ಸಚಿವ ನಿಯೋಗಿಯೆನಿಸುವನು |
ಮಂತ್ರವಿಲ್ಲದ ಬರಿಯ ಬಲು ತಳ
ತಂತ್ರದಲಿ ಫಲವಿಲ್ಲವೈ ಸ್ವಾ
ತಂತ್ರವೆನಿಸಲ್ಕರಿವುದೇ ಭೂಪಾಲ ಕೇಳೆಂದ || ಸ. ಸಂ.1-49 ||

ರಾಜನಾದವ ಇಂಥ ಗುಣಲಕ್ಷಣಗಳನ್ನು ಹೊಂದಿರಬೇಕು, ಅಥವಾ ಅಂತವರನ್ನು ತನ್ನ ಆಪ್ತರನ್ನಾಗಿ ಆಯಾ ಹುದ್ಧೆಗಳಲ್ಲಿ ನಿಯುಕ್ತರನ್ನಾಗಿಸಿಕೊಳ್ಳಬೇಕು ಎನ್ನುವ ತಾತ್ಪರ್ಯ ಇದರಲ್ಲಿದೆ. ಸುಮಂತ್ರ ಈ ಎಲ್ಲಾ ಗುಣಗಳ ಸಾಕಾರ ಮೂರ್ತಿಯಾಗಿದ್ದ. ಅಯೋಧ್ಯೆಯಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ನಡೆಸಲು ದಶರಥ ಹೂಡಿದ್ದ ಮಂತ್ರಾಲೋಚನೆ ಬಲು ಪ್ರಸಿದ್ಧ. ಅಲ್ಲಿ ಆತ ವಶಿಷ್ಠ, ವಾಮದೇವ ಮತ್ತು ಸುಮಂತ್ರನನ್ನು ಸೇರಿಸಿ ರಾಮನಿಗೆ ಯುವರಾಜ ಪಟ್ಟಾಭಿಷೇಕವನ್ನುಮಾಡುವ ತನ್ನ ಮನಸ್ಸಿನ ಆಶಯವನ್ನು ವ್ಯಕ್ತಪಡಿಸುತ್ತಾನೆ. ರಾಜನಿಗೆ ಅಶ್ವಪತಿಗೆ ಕೊಟ್ಟ ಮಾತು ತಪ್ಪಿಸಬೇಕಾಗಿದೆ. ಅದಕ್ಕೆ ಮಂತ್ರಿಗಳ ಒಪ್ಪಿಗೆ ಪಡೆದು ನಿಧಾನಕ್ಕೆ ಸಾಮಂತರ ಮತ್ತು ಪ್ರಜೆಗಳ ಒಪ್ಪಿಗೆಯನ್ನು ಪಡೆಯುವ ಹಂತದಲ್ಲಿ ಕರೆದ ಮಂತ್ರಾಲೋಚನೆ ಅದು. ಮಂತ್ರಾಲೋಚನೆಯ ವಿಷಯದಲ್ಲಿ ರಾಜ ಕೊಡಬೇಕಾದ ಮಹತ್ವವನ್ನು ಮಹಾಭಾರತದ ಶಾಂತಿಪರ್ವಲ್ಲಿ ವಿವರವಾಗಿ ಬಂದಿದೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

“ಮನ್ತ್ರಸಂಹನನೋ ರಾಜಾ ಮನ್ತ್ರಾಙ್ಗಾನೀತರೇ ಜನಾಃ – ಮಂತ್ರಾಲೋಚನೆಯೇ ರಾಜನ ದೇಹವಾಗಿರುತ್ತದೆ. ಮಂತ್ರಿಗಳು ರಾಜರಹಸ್ಯಕ್ಕೆ ಅಂಗಭೂತರಾಗಿರುತ್ತಾರೆ” ಮಂತ್ರಾಲೋಚನೆಯ ನಡೆಯುತ್ತಿರುವಾಗ ಆ ಸ್ಥಳದ ಸುತ್ತಮುತ್ತಲೂ ವಾಮನರೂ, ಕುಬ್ಜರೂ, ಸ್ತ್ರೀಯರೂ, ನಪುಂಸಕರೂ ಸುಳಿಯದಂತೆ ಎಚ್ಚರಿಕೆ ವಶಿಸಬೇಕೆಂದಿದೆ. ರಾಜ ಅಶ್ವಪತಿಗೆ ನೀಡಿದ ವರದ ಗುಟ್ಟು ತಿಳಿದಿರುವುದು ಅಲ್ಲಿ ಸೇರಿದ್ದ ಸುಮಂತ್ರನಿಗೆ ಮಾತ್ರ. ಹಾಗಾಗಿ ಅದನ್ನು ಮರೆಮಾಚಿ ರಾಮನಿಗೆ ಪಟ್ಟಕಟ್ಟುವ ವಿಷಯವನ್ನು ರಾಜನೇ ಪ್ರಸ್ತಾಪ ಮಾಡುವಾಗ ಅದನ್ನು ಮೌನವಾಗಿ ಅನುಮೋದಿಸುವವನು ಸುಮಂತ್ರ. ಇದರ ವಿವರವನ್ನು ದಶರಥನ ಭಾಗದಲ್ಲಿ ನೀಡಲಾಗಿದೆ. ಆನಂತರದಲ್ಲಿ ರಾಮನಿಗೆ ಅಯೋಧ್ಯೆಯ ಅಧಿಪತಿಯಾಗಿ ಪಟ್ಟಗಟ್ಟುವ ನಿರ್ಣಯವನ್ನು ತಿಳಿಸಲು ಕರೆತರಲು ಹೋಗುವುದೂ ಸಹ ಸುಮಂತ್ರನೇ. ರಾಜ ಸಭೆಯ ನಂತರ ಕೂಡಲೇ ದಶರಥ ಸುಮಂತ್ರನನ್ನು ಕರೆದು ಮಂತ್ರಾಲೋಚನೆ ಮಾಡುತ್ತಾನೆ. ರಾಜನಿಗೆ ಎಲ್ಲಿ ವಿಘ್ನಗಳು ಬಂದುಬಿಡುವವೋ ಎನ್ನುವ ಹೆದರಿಕೆ ಇದ್ದಿರಬೇಕು. ಆ ಕಾರಣಕ್ಕಾಗಿ ಇಬ್ಬರೂ ಸಮಾಲೋಚಿಸಿ ಮತ್ತೊಮ್ಮೆ ರಾಮನನ್ನು ದಶರಥನ ಅಂತಃಪುರಕ್ಕೆ ಕರೆತರಲು ಸುಮಂತ್ರನೇ ಹೋಗುತ್ತಾನೆ. ದಶರಥ ರಾಮನಲ್ಲಿ “ಭವನ್ತಿ ಬಹುವಿಘ್ನಾನಿ ಕಾರ್ಯಾಣ್ಯೇವಂವಿಧಾನಿ ಹಿ” ಎನ್ನುವ ಮೂಲಕ ಆತನ ಪಟ್ಟಾಭಿಷೇಕದ ವಿಷಯದಲ್ಲಿ ತನಗಿರುವ ಆತಂಕವನ್ನು ತೋಡಿಕೊಳ್ಳುತ್ತಾನೆ. ಈ ಸಂದರ್ಭದಲ್ಲಿ ರಾಜನ ಸನಿಹದಲ್ಲಿದ್ದವ ಸುಮಂತ್ರ ಮಾತ್ರ. ರಾಮಾಯಣ ಮಹಾಕಾವ್ಯದಲ್ಲಿ ಸುಮಂತ್ರ ಮಾತನಾಡುವುದು ಬಲು ಕಡಿಮೆ. ಆದರೆ ಆತನ ಕಾರ್ಯದಕ್ಷತೆ ಪ್ರತಿಯೊಂದು ಸಂದರ್ಭಗಳಲ್ಲಿಯೂ ಎದ್ದು ಕಾಣುತ್ತದೆ.

ಸುಮಂತ್ರನ ರಾಜನಿಷ್ಠೆ ಮತ್ತು ಭಾವಪರವಶತೆಯ ಕುರಿತು ಮುಂದಿನ ಭಾಗದಲ್ಲಿ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

Continue Reading

ಬೆಂಗಳೂರು

Art Exhibition : ಜುಲೈ 10ರವರೆಗೆ ಬೆಂಗಳೂರಿನಲ್ಲಿ ಯೂಸುಫ್, ಶಿಬು ಅರಕ್ಕಲ್ ಚಿತ್ರಗಳ ಪ್ರದರ್ಶನ

ಯೂಸುಫ್ ಅರಕ್ಕಲ್ ಮತ್ತು ಅವರ ಮಗ ಶಿಬು Art Exhibition: ಅವರು ಗಂಗಾ ಸರಣಿಯಲ್ಲಿ ಹಲವಾರು ಅಪರೂಪದ ಚಿತ್ರಕಲೆಗಳು ಹಾಗೂ ಛಾಯಾಚಿತ್ರಗಳ ಸಂಗ್ರಹವನ್ನು ಹೊಂದಿದ್ದಾರೆ. ಭಾರತದ ಜನಸಮುದಾಯದ ಆಧ್ಯಾತ್ಮಿಕ ಮೂಲವಾಗಿರುವ ಗಂಗಾನದಿಯ ಉದ್ದಕ್ಕೂ ಸಂಚರಿಸಿರುವ ಅವರು ಅಲ್ಲಿನ ತಾತ್ವಿಕ ಅನ್ವೇಷಣೆಗಳು ಮತ್ತು ವೈಯಕ್ತಿಕ ಸತ್ಯಗಳನ್ನು ತಮ್ಮ ಫೋಟೊಗ್ರಫಿಗಳು ಹಾಗೂ ಚಿತ್ರಕಲೆಗಳ ಮೂಲಕ ಸಂಗ್ರಹಿಸಿದ್ದಾರೆ.

VISTARANEWS.COM


on

Art exhibition
Koo

ಬೆಂಗಳೂರು: ಖ್ಯಾತ ಚಿತ್ರಕಲಾವಿದ ಯೂಸುಫ್​ ಆರಕ್ಕಲ್​ ಚಿತ್ರ ಕಲಾಕೃತಿಗಳು ಹಾಗೂ ಅವರ ಪುತ್ರ ಶಿಬು ಆರಕ್ಕಲ್ ಅವರ ವಿಶೇಷ ಛಾಯಾಚಿತ್ರಗಳ ಸರಣಿಯ ಪ್ರದರ್ಶನವನ್ನು (Art Exhibition) ಸಂದೀಪ್ -ಗೀತಾಂಜಲಿ ಮೈನಿ ಫೌಂಡಶನ್ ಆಯೋಜಿಸಿದೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ 7ನೇ ಅಡ್ಡರಸ್ತೆಯಲ್ಲಿರುವ ಫೌಂಡೇಶನ್ ಆವರಣದ ಮೆಜ್ಜಾನೈನ್ ಲೆವೆಲ್​ನ 38 ಮೈನಿ ಸದನ್ ನಲ್ಲಿ ಕಲಾಕೃತಿಗಳು ಹಾಗೂ ಛಾಯಾಚಿತ್ರಗಳು ಪ್ರದರ್ಶನಗೊಳ್ಳಲಿವೆ. ಜೂನ್​ 5ರಂದು ಆರಂಭಗೊಂಡಿರುವ ಈ ಪ್ರದರ್ಶನ ಜುಲೈ 10, 2024ರವರೆಗೆ ನಡೆಯಲಿದೆ.

ಯೂಸುಫ್ ಅರಕ್ಕಲ್ ಮತ್ತು ಅವರ ಮಗ ಶಿಬು ಅವರು ಗಂಗಾ ಸರಣಿಯಲ್ಲಿ ಹಲವಾರು ಅಪರೂಪದ ಚಿತ್ರಕಲೆಗಳು ಹಾಗೂ ಛಾಯಾಚಿತ್ರಗಳ ಸಂಗ್ರಹವನ್ನು ಹೊಂದಿದ್ದಾರೆ. ಭಾರತದ ಜನಸಮುದಾಯದ ಆಧ್ಯಾತ್ಮಿಕ ಮೂಲವಾಗಿರುವ ಗಂಗಾನದಿಯ ಉದ್ದಕ್ಕೂ ಸಂಚರಿಸಿರುವ ಅವರು ಅಲ್ಲಿನ ತಾತ್ವಿಕ ಅನ್ವೇಷಣೆಗಳು ಮತ್ತು ವೈಯಕ್ತಿಕ ಸತ್ಯಗಳನ್ನು ತಮ್ಮ ಫೋಟೊಗ್ರಫಿಗಳು ಹಾಗೂ ಚಿತ್ರಕಲೆಗಳ ಮೂಲಕ ಸಂಗ್ರಹಿಸಿದ್ದಾರೆ. ತಾವು ಸ್ವತಃ ಗಂಗಾ ನದಿಯ ಕುರಿತು ಅಕರ್ಷಿತರಾಗುವ ಜತೆಗೆ ನದಿಗಾಗಿಯೇ ಜೀವನ ಸಮರ್ಪಿಸಿದವರ ಬದುಕನ್ನೂ ಚಿತ್ರಿಸಿದ್ದಾರೆ. ಪ್ರಮುಖವಾಗಿ ನದಿಯಲ್ಲಿ ದೋಣಿ ಹಾಯಿಸುವ ಮಲ್ಲಾ ಎಂಬ ಅಂಬಿಗರ ಜೀವಕ್ಕೆ ಕಲಾತ್ಮಕ ಸ್ಪರ್ಶ ನೀಡಿದ್ದಾರೆ.ಈ ಚಿತ್ರಗಳು ಹಾಗೂ ಕಲಾಕೃತಿಗಳು ಗಂಗಾ ಸರಣಿಯಲ್ಲಿ ಪ್ರದರ್ಶನಗೊಳ್ಳುತ್ತಿವೆ.

ಮಲ್ಲಾ ಎಂದು ಕರೆಯಲ್ಪಡುವ ಗಂಗಾನದಿಯ ಅಂಬಿಗರು, ಈ ಕಲಾ ಪ್ರದರ್ಶನದ ನಿರೂಪಣೆಯ ಅವಿಭಾಜ್ಯ ಭಾಗವಾಗಿದ್ದಾರೆ, ಇದನ್ನು ಶಿಬು ಅರಕ್ಕಲ್ ತನ್ನ ಕ್ಯಾಮೆರಾ ಲೆನ್ಸ್​ ಮೂಲಕ ಅದ್ಭುತವಾಗಿ ಸೆರೆಹಿಡಿದಿದ್ದಾರೆ. ನೂರಾರು ವರ್ಷಗಳಿಂದ ಈ ಸಮುದಾಯವು ತಮ್ಮ ಕಾಯಕವನ್ನು ಪರಂಪರಾಗತವಾಗಿ ವರ್ಗಾಯಿಸಿಕೊಂಡು ಬಂದಿದ್ದಾರೆ. ತಂದೆಯಿದ ಮಗನಿಗೆ ಈ ಕಾಯಕವು ಸಾಗಿದೆ. ಪವಿತ್ರ ನದಿಯುದ್ದಕ್ಕೂ ಜನರನ್ನು ಒಂದು ದಡದಿಂದ ಮತ್ತೊಂಡು ದಡಕ್ಕೆ ಸಾಗಿಸಲು ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ. ಈ ಜನರು ತಮ್ಮ ದೋಣಿಗಳಿಗೆ ಬಹುತೇಕ ಸಖ್ಯ ಹೊಂದಿರುತ್ತಾರೆ ಮತ್ತು ಮರದ ದೋಣಿಗಳ ನಡುವೆಯೇ ತಮ್ಮ ಜೀವನವನ್ನು ಕಳೆಯುತ್ತಾರೆ, ತಮ್ಮೆಲ್ಲ ಲೌಕಿಕ ಅಗತ್ಯಗಳನ್ನು ದೋಣಿಯಲ್ಲಿಯೇ ನಿರ್ವಹಿಸುತ್ತಾರೆ. ಈ ನಿಗೂಢ ನದಿಯ ನಿಜವಾದ ಉಸ್ತುವಾರಿ ತಾವು ಎಂದು ಹೆಮ್ಮೆಪಡುತ್ತಾರೆ. ಮಲ್ಲಾ ಪುರುಷರು ತಮ್ಮ ಕುಟುಂಬಗಳಿಂದ ಪ್ರತ್ಯೇಕಗೊಂಡಿರುತ್ತಾರೆ ಮತ್ತು ತಾವು ಸೇವೆ ಸಲ್ಲಿಸುವ ನದಿಯೊಂದಿಗೆ ಬಲವಾದ ಬಾಂಧವ್ಯ ಹೊಂದಿರುತ್ತಾರೆ. ಎಷ್ಟೆಂದರೇ ಅವರ ಹುಟ್ಟು ದೋಣಿಯಲ್ಲಿ ಮತ್ತು ಅಲ್ಲೇ ಅವರು ಕೊನೆಯುಸಿರೆಳೆಯುತ್ತಾರೆ.

ಇದನ್ನೂ ಓದಿ : Kannada New Movie: ಹೊಸ ಸಿನಿಮಾಗೆ ಕಥೆ ಬರೆಯಿರಿ: 1 ಲಕ್ಷ ರೂ. ಬಹುಮಾನ ಗೆಲ್ಲಿರಿ!

‘ಮಲ್ಲಾ’ ಶೀರ್ಷಿಕೆಯ ಛಾಯಾಚಿತ್ರ ಕಲಾಕೃತಿಗಳ ಸರಣಿಯು ಈ ದೋಣಿಯವರು ಗಂಗಾ ನದಿಯೊಂದಿ ಗೆ ಹೊಂದಿರುವ ನಂಟಿನಿಂದ ಸ್ಫೂರ್ತಿ ಪಡೆದಿದೆ. ಈ ಸರಣಿಯು ಅವರ ಜೀವನದ ಕಟು ವಾಸ್ತವ ಮತ್ತು ಅವರ ಜೀವನದ ತಿಳುವಳಿಕೆಗೆ ಕನ್ನಡಿಯಾಗಿದೆ. ಇದು ಎಂದಿಗೂ ಸಂಪೂರ್ಣವಾಗಿ ಗ್ರಹಿಸಲು ಸಾಧ್ಯವಾಗದ ಸಂಗತಿಗಳನ್ನು ವ್ಯಾಖ್ಯಾನಿಸಲು ಪ್ರಯತ್ನಿಸುವುದಿಲ್ಲ. ಆದರೆ ಅವರ ಸ್ವಯಂ ಅನುಭವಗಳ ರಚನೆಯಾಗಿದೆ. ಈ ಸರಣಿಯ ಮೂಲಕ ಋಷಿಮುನಿಗಳು ಮತ್ತು ಪ್ರಾಚೀನ ನಂಬಿಕೆಯನ್ನೇ ಹೋಲುವ ಭೂಮಿ ಮತ್ತು ನೀರಿನೊಂದಿಗೆ ಈ ಸಮುದಾಯ ಹೊಂದಿರುವ ಆಳ ಸಂಬಂಧವನ್ನು ಸೆರೆಹಿಡಿಯಲಾಗಿದೆ.

ತಮ್ಮ ಪುತ್ರನ ಛಾಯಾಚಿತ್ರಗಳ ಜೊತೆಗೆ ಯೂಸುಫ್ ಅರಕ್ಕಲ್ ಅವರ ಅಪರೂಪದ ಕ್ಯಾನ್ವಾಸ್ ರಚನೆಗಳೂ ಪ್ರದರ್ಶನಗೊಳ್ಳಲಿವೆ. ಇದು ಅವರಿಬ್ಬರ ಕಲಾತ್ಮಕ ಪರಂಪರೆಯ ಸಂಯೋಗವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.
ಮಾನವನ ಸ್ಥಿತಿಯನ್ನು ಪರಿಶೀಲಿಸುವ ಉತ್ಸಾಹದ ಮತ್ತು ವಿನ್ಯಾಸದ ವರ್ಣಚಿತ್ರಗಳಿಗೆ ಹೆಸರುವಾಸಿಯಾದ ಯೂಸುಫ್ ಅರಕ್ಕಲ್, ತಮ್ಮ ಮಗನ ಮನಸ್ಸಿನಲ್ಲಿ ಸೃಜನಶೀಲತೆಯನ್ನು ಬಿತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು . ಛಾಯಾಗ್ರಹಣ ವಾಸ್ತವ ಮತ್ತು ಅಮೂರ್ತ ಕಲ್ಪನೆಯ ಶಿಬು ಅರಕ್ಕಲ್ ಅವರ ತೊಡಗಿಸಿಕೊಳ್ಳುವಿಕೆಯು ಅವರ ತಂದೆಯ ಅಭಿವ್ಯಕ್ತಿ ಕೃತಿಗೆ ಸಂಪೂರ್ಣ ವಿರುದ್ಧವಾಗಿದೆ, ಆದರೂ ಅವರ ಕಾವ್ಯಾತ್ಮಕ ಚಿತ್ರಣದಲ್ಲಿ ಹೋಲಿಕೆ ಇದೆ. .
ಯೂಸುಫ್ ಅರಕ್ಕಲ್ ಅವರ ಪ್ರಭಾವ ಮತ್ತು ಶಿಬು ಅರಕ್ಕಲ್ ಅವರ ಸ್ವಂತ ಕಲಾತ್ಮಕ ವಿಕಸನವನ್ನು ಪ್ರತಿಬಿಂಬಿಸುವುದಕ್ಕಾಗಿ ‘ಗಂಗಾ’ದಂತಹ ಪ್ರದರ್ಶನ ಆಯೋಜಿಸಲಾಗಿದೆ.

ಕಲಾವಿದರ ಕುರಿತು
ಯೂಸುಫ್ ಅರಕ್ಕಲ್ (1945-2016) ಒಬ್ಬ ಭಾರತೀಯ ಪ್ರಖ್ಯಾತ ಕಲಾವಿದ, ಅಭಿವ್ಯಕ್ತಿವಾದದ ಚಳವಳಿಗೆ ನೀಡಿದ ಅಮೋಘ ಕೊಡುಗೆಗಳಿಗಾಗಿಯೇ ಸ್ಮರಣೀಯರು. ಅವರ ಪ್ರೇರಣಾದಾಯ ಮತ್ತು ಶಕ್ತಿಯುತ ಕಲಾಕೃತಿಗಳು ಮಾನವ ಭಾವನೆಗಳ ಆಳವನ್ನು ಬಿಂಬಿಸುತ್ತದೆ. ಮಾನವ ಸ್ಥಿತಿಯ ಸಂಕೀರ್ಣತೆಗಳನ್ನು ತೀವ್ರತೆಯೊಂದಿಗೆ ಚಿತ್ರಿಸಿದ ಕಲಾವಿದರಾಗಿದ್ದಾರೆ.

ಶಿಬು ಅರಕ್ಕಲ್ ಪ್ರಪಂಚದಾದ್ಯಂತದ ಶ್ರೇಷ್ಠ ವಾಸ್ತುಶಿಲ್ಪದೊಂದಿಗೆ ವ್ಯವಹರಿಸುವಾಗ ಶಕ್ತಿಯಿಂದ ಬಲಕ್ಕೆ ಹೋಗಿದ್ದಾರೆ ಮತ್ತು ನಮ್ಮ ದೈನಂದಿನ ಜೀವನದಲ್ಲಿ ಗಮನಕ್ಕೆ ಬಾರದ ಸಣ್ಣ ವಿಷಯಗಳಿಗೆ ಹೋಗಿದ್ದಾರೆ ಮತ್ತು ಈ ಪ್ರಕ್ರಿಯೆಯಲ್ಲಿ ಉದ್ದೇಶಪೂರ್ವಕವಾಗಿ ಬಹಳ ವಿಭಿನ್ನ ಮತ್ತು ಮೂಲ ಶೈಲಿಯನ್ನು ರಚಿಸಿದ್ದಾರೆ. ದಾರಿಯುದ್ದಕ್ಕೂ ತಮ್ಮ ಕಲೆಗೆ ನಿಷ್ಠರಾಗಿದ್ದ ಅವರು ಹಲವಾರು ನಿಷ್ಠಾವಂತ ಸಂಗ್ರಾಹಕರನ್ನು ಗಳಿಸಿದ್ದಲ್ಲದೆ, ಭಾರತ ಮತ್ತು ವಿದೇಶಗಳಲ್ಲಿ ಮನ್ನಣೆಯನ್ನೂ ಗಳಿಸಿದ್ದಾರೆ. ರೊಮೇನಿಯಾದ ಅರಾದ್ ಬಿನಾಲೆ 2005 ಮತ್ತು ಇಟಲಿಯ ‘ವೆಂಟಿಪೆರ್ಟ್ರೆಂಟಾ ’04’ನಲ್ಲಿ 2007 ರಲ್ಲಿ ಲಂಡನ್ನ ರಾಯಲ್ ಕಾಲೇಜ್ ಆಫ್ ಆರ್ಟ್ ಮತ್ತು 2004 ರಲ್ಲಿ ಲಕ್ನೋದ ನ್ಯಾಷನಲ್ ಎಕ್ಸಿಬಿಷನ್ ಆಫ್ ಆರ್ಟ್ನಲ್ಲಿ ಪ್ರದರ್ಶನ ನೀಡಿದ್ದಾರೆ.

Continue Reading
Advertisement
T20 World Cup 2024 Super 8
ಕ್ರಿಕೆಟ್23 mins ago

T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

Indresh Kumar
Lok Sabha Election 202425 mins ago

Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

Actor darshan
ಉತ್ತರ ಕನ್ನಡ27 mins ago

Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

Gold Rate Today
ಚಿನ್ನದ ದರ32 mins ago

Gold Rate Today: ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ; ಆಭರಣ ಖರೀದಿಯ ಮುನ್ನ ಇಂದಿನ ದರ ಗಮನಿಸಿ

Actor Darshan new statement to police
ಸ್ಯಾಂಡಲ್ ವುಡ್34 mins ago

Actor Darshan: ಎರಡೇ ಎರಡೇಟು ಬಿಟ್ಟಿದ್ದೆ, ಹಿಂಗಾಗೋಯ್ತು ಸಾರ್‌! ಪೊಲೀಸರ ಮುಂದೆ ದರ್ಶನ್‌ ಹೇಳಿಕೆ!

snake bite
ಚಿಕ್ಕಬಳ್ಳಾಪುರ50 mins ago

Snake Bite : ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

Actor Darshan case Film chamber visit to the renukaswamy house
ಸ್ಯಾಂಡಲ್ ವುಡ್1 hour ago

Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

India Coach
ಕ್ರೀಡೆ1 hour ago

India Coach: ಕೋಚ್​ ಆಗುವ ಮುನ್ನವೇ ಗಂಭೀರ್​ಗೆ ಕಿವಿಮಾತು ಹೇಳಿದ ಅನಿಲ್ ಕುಂಬ್ಳೆ

tumkur Murder
ತುಮಕೂರು1 hour ago

Tumkur Murder : ಬೈಕ್ ಆ್ಯಕ್ಸಿಡೆಂಟ್ ಕೇಸ್‌ಗೆ ಬಿಗ್ ಟ್ವಿಸ್ಟ್; ಎದುರಾಳಿಯನ್ನು ಕೊಂದ ಹಂತಕರು ಅರೆಸ್ಟ್‌

Sapthami Gowda breakup story in stage
ಸ್ಯಾಂಡಲ್ ವುಡ್2 hours ago

Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ18 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು19 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು20 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ20 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌