Kuchipudi Dance: ಅ.28ಕ್ಕೆ ನಾಟ್ಯ ಪರಂಪರಾ ದಶಮಾನೋತ್ಸವ, ಕುಚಿಪುಡಿ ನೃತ್ಯರೂಪಕ ಪ್ರದರ್ಶನ - Vistara News

ಕರ್ನಾಟಕ

Kuchipudi Dance: ಅ.28ಕ್ಕೆ ನಾಟ್ಯ ಪರಂಪರಾ ದಶಮಾನೋತ್ಸವ, ಕುಚಿಪುಡಿ ನೃತ್ಯರೂಪಕ ಪ್ರದರ್ಶನ

Kuchipudi Dance: ವಾರ್ಷಿಕೋತ್ಸವ ಕಾರ್ಯಕ್ರಮದ ವಿಶೇಷ ಆಕರ್ಷಣೆ – 17 ನೇ ಶತಮಾನದ ಖ್ಯಾತ ಕವಿ ಶ್ರೀ ಮುನೆಪಲ್ಲಿ ಸುಬ್ರಮಣ್ಯ ಕವಿ ವಿರಚಿತ ‘ಭವ ನುತ’ – ಸಂಪೂರ್ಣ ಆಧ್ಯಾತ್ಮ ರಾಮಾಯಣದ ಕಥೆಯ ಸುತ್ತ ಹೆಣೆಯಲಾದ ಕುಚಿಪುಡಿ ನಾಟ್ಯದ ಅದ್ಭುತ ನೃತ್ಯರೂಪಕ ಪ್ರದರ್ಶನವಿದೆ.

VISTARANEWS.COM


on

Natya parampara dashamanotsava on october 23, 2023 and Kuchipudi Dance
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ನೃತ್ಯೋತ್ಸವದ ಪ್ರತೀಕವಾದ ‘ನಾಟ್ಯ ಪರಂಪರ ಉತ್ಸವ’ವು (Natya parampara utsav) ಭಾರತ ಮಾತ್ರವಲ್ಲದೆ, ಅಮೆರಿಕ, ರಷ್ಯಾ, ತೈವಾನ್, ಕೆನಡಾ ಮುಂತಾದೆಡೆಗಳ ಕುಚಿಪುಡಿ (Kuchipudi Dance) ಮತ್ತು ಇನ್ನಿತರ ನೃತ್ಯಶೈಲಿಗಳ ಖ್ಯಾತ ಕಲಾವಿದರ ನೃತ್ಯ ಪ್ರದರ್ಶನಗಳನ್ನು ಅರ್ಪಿಸುತ್ತ ಬಂದಿರುವುದು ಹೆಗ್ಗಳಿಕೆಯ ಸಂಗತಿ. ಕೋವಿಡ್ ನಂಥ ದುಸ್ತರ ಪರಿಸ್ಥಿತಿಯಲ್ಲೂ ಅಂತರ್ಜಾಲದ ಮೂಲಕ ಕಲೆಯನ್ನು ಜೀವಂತವಾಗಿಡಲು ಸಂಸ್ಥೆ ಪರಿಶ್ರಮಿಸಿದೆ ಎಂದರೆ ಅತಿಶಯೋಕ್ತಿಯಲ್ಲ. ಈ ನೃತ್ಯೋತ್ಸವವು, ಕಲಾರಸಿಕರ ಬೆಂಬಲ-ಸಹಾಯದ ಜೊತೆಗೆ, ನವದೆಹಲಿಯ ಸಂಗೀತ ನಾಟಕ ಅಕಾಡೆಮಿ ಮತ್ತು ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂತಾದ ಸರ್ಕಾರಿ ಸಂಸ್ಥೆಗಳ ಆಶ್ರಯ-ಪ್ರೋತ್ಸಾಹಗಳನ್ನು ಪಡೆದುಕೊಂಡಿರುವುದು ನಿಜಕ್ಕೂ ಹೆಮ್ಮೆಯ ವಿಷಯ.

ನಾಲ್ಕುದಶಕಗಳಿಂದ ಅಚ್ಚ ಶಾಸ್ತ್ರೀಯ ಕೂಚಿಪುಡಿಯ ನೃತ್ಯಶೈಲಿಯಲ್ಲಿ ಪರಿಶ್ರಮಿಸುತ್ತಿರುವ ಆಚಾರ್ಯ ದೀಪಾ ನಾರಾಯಣನ್ ಶಶೀಂದ್ರನ್ ಸುಮಾರು ಐದುನೂರು ವರ್ಷಗಳ ಇತಿಹಾಸವುಳ್ಳ ಕೂಚಿಪುಡಿ ನೃತ್ಯಶೈಲಿಯ ಖ್ಯಾತ ಗುರು ಪದ್ಮಭೂಷಣ ಡಾ. ವೆಂಪಟಿ ಚಿನ್ನಸತ್ಯಂ ಅವರ ಎರಡನೆಯ ಪರಂಪರೆಗೆ ಸೇರಿದವರು. ತಮ್ಮ ಅಸಂಖ್ಯ ನೃತ್ಯಪ್ರದರ್ಶನಗಳಿಂದ ಖ್ಯಾತರಾದವರು. ತಮ್ಮ `ಕೂಚಿಪುಡಿ ಪರಂಪರಾ ಫೌಂಡೆಶನ್ ‘ ಮೂಲಕ ನೃತ್ಯಾಭಿವೃದ್ಧಿಯ ಸಾಧನೆಯಲ್ಲಿ ನಿರತರಾದ ದೀಪಾ, ಪರಿಣಿತ ಅಭಿನಯ- ಮನೋಜ್ಞ ನೃತ್ಯಪ್ರಸ್ತುತಿಗಳಿಂದ ಕಲಾರಸಿಕರ ಗಮನ ಸೆಳೆದಿದ್ದಾರೆ. ಶಂಕರಾಭರಣ ಚಲನಚಿತ್ರ ಖ್ಯಾತಿಯ ಮಂಜುಭಾರ್ಗವಿ ಅವರ ಪ್ರಧಾನಶಿಷ್ಯರಾಗಿ ಅವರಲ್ಲಿ ಸತತ ಇಪ್ಪತ್ತೈದು ವರುಷಗಳು ನಾಟ್ಯಶಿಕ್ಷಣ ಪಡೆದು ಗುರುಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಅಗ್ಗಳಿಕೆ ಇವರದು.

ಖ್ಯಾತ ಕೂಚಿಪುಡಿ ನಾಟ್ಯಗುರು-ನೃತ್ಯ ಕಲಾವಿದೆ, ಸಂಯೋಜಕಿಯಾದ ಇವರು, ‘ಕೂಚಿಪುಡಿ ಪರಂಪರ ಫೌಂಡೆಶನ್ ಟ್ರಸ್ಟ್’ನ ಲೈಫ್ ಟ್ರಸ್ಟಿಯಾಗಿ ವರ್ಷಪೂರ್ತಿ ನಿರಂತರ ಒಂದಲ್ಲ ಒಂದು ನೃತ್ಯ ಚಟುವಟಿಕೆಗಳಲ್ಲಿ ಕಾರ್ಯನಿರತರು.

ಈ ಸುದ್ದಿಯನ್ನೂ ಓದಿ: World Culture Festival: ಸಂಗೀತ, ನೃತ್ಯಗಳ ಮೂಲಕ ‘ವಸುದೈವ ಕುಟುಂಬಕಂ’ ಸಂದೇಶ ಸಾರಿದ ವಿಶ್ವ ಸಾಂಸ್ಕೃತಿಕ ಉತ್ಸವ

ಇದೀಗ ‘ನಾಟ್ಯ ಪರಂಪರ ದಶಮಾನೋತ್ಸವ -2023’ ರ ಸಂಭ್ರಮಾಚರಣೆ ಇದೇ ತಿಂಗಳ 28 ಶನಿವಾರ ಸಂಜೆ 6 ಗಂಟೆಗೆ ಸಂಜಯನಗರದ ರಮಣ ಮಹರ್ಷಿ ಹೆರಿಟೇಜ್ ಆಡಿಟೋರಿಯಂನಲ್ಲಿ ವೈವಿಧ್ಯಪೂರ್ಣ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸಮಾರಂಭದಲ್ಲಿ ರಾಜಮುಂಡ್ರಿಯ ಉತ್ತಮ ನಾಟ್ಯಾಚಾರ್ಯರಾದ ಹಿರಿಯ ಗುರು ಶ್ರೀ ಭಗವತುಲ ಮೋಹನ ರಾವ್ ಅವರ ಕಲಾಸೇವೆಯನ್ನು ಗುರುತಿಸಿ ಗೌರವಾರ್ಪಣೆ ಮತ್ತು ಕಥಕ್ ನೃತ್ಯ ದಂಪತಿಗಳಾದ ಖ್ಯಾತ ಕಲಾವಿದರಾದ ಹರಿ ಮತ್ತು ಚೇತನ ಅವರನ್ನು ಸನ್ಮಾನಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಾರ್ಷಿಕೋತ್ಸವ ಕಾರ್ಯಕ್ರಮದ ವಿಶೇಷ ಆಕರ್ಷಣೆ – 17 ನೇ ಶತಮಾನದ ಖ್ಯಾತ ಕವಿ ಶ್ರೀ ಮುನೆಪಲ್ಲಿ ಸುಬ್ರಮಣ್ಯ ಕವಿ ವಿರಚಿತ ‘ಭವ ನುತ’ – ಸಂಪೂರ್ಣ ಆಧ್ಯಾತ್ಮ ರಾಮಾಯಣದ ಕಥೆಯ ಸುತ್ತ ಹೆಣೆಯಲಾದ ಕುಚಿಪುಡಿ ನಾಟ್ಯದ ಅದ್ಭುತ ನೃತ್ಯರೂಪಕ ಪ್ರದರ್ಶನ. ಈ ವಿಶಿಷ್ಟ ನೃತ್ಯರೂಪಕದ ಪರಿಕಲ್ಪನೆ-ನಿರ್ಮಾಣ ಮತ್ತು ನೃತ್ಯ ಸಂಯೋಜನೆ ಆಚಾರ್ಯ ದೀಪಾ ನಾರಾಯಣನ್ ಸಶೀಂದ್ರನ್ ಅವರದು. ಸಂಗೀತ ಸಂಯೋಜನೆ- ಗುರುಮೂರ್ತಿ. ಪ್ರಸ್ತುತಪಡಿಸುವವರು `ಕೂಚಿಪುಡಿ ಪರಂಪರಾ ಫೌಂಡೆಶನ್ ‘ ಸಂಸ್ಥೆಯ ನೃತ್ಯ ವಿದ್ಯಾರ್ಥಿಗಳು. ಈ ನಯನ ಮನೋಹರವಾದ ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳಲು ಎಲ್ಲ ಕಲಾರಸಿಕರಿಗೂ ಆದರದ ಸ್ವಾಗತವಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ.

VISTARANEWS.COM


on

By

Belekeri Port Scam Congress MLA Satish sentenced to 7 years in jail
Koo

ಬೆಂಗಳೂರು: ಬೇಲೆಕೇರಿ ಬಂದರು ಮೂಲಕ ಅಕ್ರಮ ಅದಿರು ನಾಪತ್ತೆ (Belekeri Port Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ. ಶಾಸಕ ಸತೀಶ್ ಸೈಲ್‌ಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿ ಕೋರ್ಟ್‌ ಆದೇಶಿಸಿದೆ. ವಂಚನೆ ಪ್ರಕರಣದಲ್ಲಿ 7 ವರ್ಷ, ಕಳ್ಳತನ ಪ್ರಕರಣದಲ್ಲಿ ಮೂರು ವರ್ಷ ಹಾಗೂ ಒಂಬತ್ತು ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೊದಲ ಕೇಸ್‌ನಲ್ಲಿ 6 ಕೋಟಿ ರೂ. ದಂಡ, 2ನೇ ಕೇಸ್‌ನಲ್ಲಿ 9.6 ಕೋಟಿ ರೂ., 3ನೇ ಕೇಸ್‌ನಲ್ಲಿ 9.36 ಕೋಟಿ ರೂ. 4 ಕೇಸ್‌ನಲ್ಲಿ 9.54 ಕೋಟಿ, 5ನೇ ಕೇಸ್‌ನಲ್ಲಿ 9.25 ಕೋಟಿ, 6ನೇ ಕೇಸ್‌ನಲ್ಲಿ 90 ಲಕ್ಷ ರೂ. ದಂಡವನ್ನು ಕೋರ್ಟ್‌ ವಿಧಿಸಿದೆ.

ಸಿಬಿಐ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ವಾದ ಮಂಡಿಸಿದ್ದರು. 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಆರೋಪಿಗಳಿಗೆ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸುವಂತೆ ಮನವಿ ಮಾಡಿದ್ದರು. ಶಾಸಕ ಸತೀಶ್ ಸೈಲ್ ಪರವಾಗಿ ಹಿರಿಯ ವಕೀಲ ಡಿ ಮೂರ್ತಿ ವಾದಿಸಿದ್ದರು. ಮೆಡಿಕಲ್ ರೆಕಾರ್ಡ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿ, ಕನಿಷ್ಠ ಶಿಕ್ಷೆ ನೀಡುವಂತೆ ವಿನಂತಿಸಿದ್ದರು. ಸುದೀರ್ಘ ವಾದ-ವಿವಾದ ಆಲಿಸಿದ್ದ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಬಂಧಿತ ಆರೋಪಿಗಳು

1) ಸತೀಶ್ ಸೈಲ್‌ ಕಾರವಾರ ಕಾಂಗ್ರೆಸ್‌ ಶಾಸಕ
2) ಮಹೇಶ್ ಬಿಳಿಯ ಡೆಪ್ಯೂಟಿ ಪೋರ್ಟ್ ಕನ್ಸರ್ವೇಟರ್ ಅಧಿಕಾರಿ
3) ಪ್ರೇಮಚಂದ್ ಗರ್ಗ್ ಲಾಲ್ವುಹಲ್ ಕಂಪೆನಿಯ ಮಾಲೀಕ
4) ಖಾರದಪುಡಿ ಮಹೇಶ್ ಶ್ರೀಲಕ್ಷ್ಮಿ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ
5) ಕೆ ವಿ ನಾಗರಾಜ್ ಮತ್ತು ಗೋವಿಂದರಾಜು – ಸ್ವಸ್ತಿಕ್ ಕಂಪೆನಿಯ ಮಾಲೀಕ
6) ಚೇತನ್ ಆಶಾಪುರ ಕಂಪೆನಿಯ ಮಾಲೀಕ

Continue Reading

ಕೊಡಗು

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Murder case : ಮಹಿಳೆಯೊಬ್ಬಳು ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ತನ್ನ ಪತಿಯನ್ನೇ ಕೊಂದು ಸುಟ್ಟುಹಾಕಿದ್ದಳು. ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

VISTARANEWS.COM


on

By

Murder Case
ಕೊಲೆಯಾದ ರಮೇಶ್
Koo

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ.

Murder Case
Murder Case

ನಿಹಾರಿಕ ತಾನು10ನೇ ತರಗತಿಯಲ್ಲಿಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು.ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಬೆಂಗಳೂರು

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

Rajakaluve Encroachment: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಬಿಬಿಎಂಪಿ ಡೆಮಾಲಿಷನ್ ಡ್ರೈವ್ ಮತ್ತೆ ಶುರು ಮಾಡಲು ಮುಂದಾಗಿದೆ. ಹಿಂದೊಮ್ಮೆ ಸ್ಟೇ ಆರ್ಡರ್‌ ಬರುತ್ತಿದ್ದಂತೆ, ಅಧಿಕಾರಿಗಳು ಠುಸ್‌ ಪಟಾಕಿ ಆಗಿದ್ದರು. ಇದೀಗ ಮತ್ತೆ ಡೆಮಾಲಿಷನ್‌ ಕೆಲಸಕ್ಕೆ ಕೈಹಾಕಿದೆ.

VISTARANEWS.COM


on

By

Rajakaluve Encroachment
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೃಹತ್‌ ಬೆಂಗಳೂರು ಪಾಲಿಕೆ ವ್ಯಾಪ್ತಿಯ ರಾಜಕಾಲುವೆ, ಕೆರೆಗಳನ್ನು ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ (Rajakaluve Encroachment) ಅಧಿಕಾರಿಗಳು ಶಾಕ್ ಕೊಡಲಿದ್ದಾರೆ. ಕಳೆದ ವಾರ ಸುರಿದ ಭಾರಿ ಮಳೆಗೆ ರಾಜಕಾಲುವೆಗಳ ನೀರು ರಸ್ತೆಗೆ ಹರಿದಿತ್ತು. ಇದರಿಂದ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಜನ ಇಡಿ ಶಾಪ ಹಾಕಿದ್ದರು, ಇದು ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಇತ್ತ ಖುದ್ದು ಡಿಸಿಎಂ ಶಿವಕುಮಾರ್‌ ಕೂಡ ಒತ್ತುವರಿ ತೆರವಿಗೆ ಆದೇಶ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜಕಾಲುವೆ, ಕೆರೆ ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಮುಂದಾಗಿದೆ. ಈಗಾಗಲೇ 1,712 ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿರುವ ವರದಿ ಸಿದ್ದವಾಗಿದೆ. ಅದರಲ್ಲಿ 196 ಕಟ್ಟಡಗಳ ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇದೆ. ಉಳಿದಂತೆ 167 ಕಟ್ಟಡಗಳ ಸರ್ವೆ ಕಾರ್ಯ ಮುಗಿದಿದೆ. ತಹಸೀಲ್ದಾರರು ಆದೇಶ ನೀಡಿದ್ರೆ ಒತ್ತುವರಿ ತೆರವಿಗೆ ಬಿಬಿಎಂಪಿ ಮುಂದಾಗಲಿದೆ.

ಸದ್ಯ 1712 ಒತ್ತುವರಿ ಪ್ರಕರಣಗಳಲ್ಲಿ 300 ಕಡೆ ಖಾಲಿ ನಿವೇಶನ ಇದ್ದು, ಈಗಾಗಲೇ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 800 ಕಡೆ ಒತ್ತುವರಿ ತೆರವು ಬಾಕಿ ಇದೆ. ಯಾವ್ಯಾವ ವಲಯಗಳಲ್ಲಿ ಒತ್ತುವರಿ ಆಗಿದೆ ಎಂದು ನೋಡುವುದಾದರೆ, ಪೂರ್ವ ವಲಯದಲ್ಲಿ 123, ಪಶ್ಚಿಮ 46, ದಕ್ಷಿಣ 46, ಕೋರಮಂಗಲ ಕಣೆವೆ 104, ಹಾಗೂ ಯಲಹಂಕ 359, ಮಹಾದೇವಪುರ 492, ಬೊಮ್ಮನಹಳ್ಳಿ 201, ಆರ್ ಆರ್ ನಗರ 104 ಸೇರಿದಂತೆ ದಾಸರಹಳ್ಳಿ 207

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading
Advertisement
Belekeri Port Scam Congress MLA Satish sentenced to 7 years in jail
ಬೆಂಗಳೂರು7 ಗಂಟೆಗಳು ago

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Murder Case
ಕೊಡಗು11 ಗಂಟೆಗಳು ago

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Rajakaluve Encroachment
ಬೆಂಗಳೂರು16 ಗಂಟೆಗಳು ago

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

karnataka Weather Forecast
ಮಳೆ21 ಗಂಟೆಗಳು ago

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

dina bhavishya
ಭವಿಷ್ಯ22 ಗಂಟೆಗಳು ago

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

kea
ಬೆಂಗಳೂರು1 ದಿನ ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು2 ದಿನಗಳು ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ2 ದಿನಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು2 ದಿನಗಳು ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌