Site icon Vistara News

Rama Mandir: ರಾಮ ಮಂದಿರ ಆಂದೋಲನದ ಕಥನ ʻಮಂದಿರವಲ್ಲೇ ಕಟ್ಟಿದೆವು!ʼ ದಾವಣಗೆರೆಯಲ್ಲಿ ಇಂದು ಬಿಡುಗಡೆ

mandiravalle kattidevu book

ಬೆಂಗಳೂರು: ಅಯೋಧ್ಯೆಯ ರಾಮ ಜನ್ಮಭೂಮಿ ಆಂದೋಲನದ (Rama Mandir Movement) 496 ವರ್ಷಗಳ ರೋಚಕ ಕಥನವನ್ನು ಒಳಗೊಂಡ ʻಮಂದಿರವಲ್ಲೇ ಕಟ್ಟಿದೆವು!ʼ (Mandiravalle Kattidevu!) ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಗುರುವಾರ (ಜ. 18) ದಾವಣಗೆರೆಯಲ್ಲಿ ಆಯೋಜಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.

ದಾವಣಗೆರೆಯ ಗ್ರಾಮಾಂತರ ಪೊಲೀಸ್‌ ಠಾಣೆ ಸಮೀಪದ ಸೋಮೇಶ್ವರ ಶಾಲೆಯ ನೇತ್ರಾವತಿ ಕನ್ವೆನ್ಶನ್‌ ಹಾಲ್‌ನಲ್ಲಿ ಸೋಮೇಶ್ವರ ಪ್ರತಿಷ್ಠಾನದ ವತಿಯಿಂದ ಗುರುವಾರ ಬೆಳಗ್ಗೆ 11 ಗಂಟೆಗೆ ʻಮಂದಿರವಲ್ಲೇ ಕಟ್ಟಿದೆವು!ʼ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್‌ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದಾರೆ. ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.‌ ರಾಜಶೇಖರ್‌, ಸೋಮೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ.ಎಂ. ಸುರೇಶ್‌, ಆರ್‌ಎಸ್‌ಎಸ್‌ನ ದಾವಣಗೆರೆ ಜಿಲ್ಲಾ ಸಂಘಚಾಲಕರಾದ ಜಯರುದ್ರೇಶ್‌ ಮುಖ್ಯ ಅತಿಥಿಗಳಾಗಿದ್ದಾರೆ. ಜತೆಗೆ ಕೃತಿಯ ಲೇಖಕರು, ವಿಸ್ತಾರ ನ್ಯೂಸ್‌ ಡಿಜಿಟಲ್‌ ಸಂಪಾದಕರಾದ ರಮೇಶ್‌ ಕುಮಾರ್‌ ನಾಯಕ್‌ ಅವರು ಉಪಸ್ಥಿತರಿರಲಿದ್ದಾರೆ.

mandiravalle kattidevu book

ಸಮಾರಂಭದ ಆರಂಭದಲ್ಲಿ ಅನುಶ್ರೀ ಬಳಗದ ವೀಣಾ ಹೆಗಡೆ ತಂಡದಿಂದ ರಾಮನ ಹಾಡುಗಳ ಗಾಯನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

3ನೇ ಮುದ್ರಣದತ್ತ ಕೃತಿ!

ಈ ಕೃತಿ ಸಾರ್ವಜನಿಕ ಸಮಾರಂಭದಲ್ಲಿ ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಆದರೆ, ಪ್ರಿ ರಿಲೀಸ್‌ ಆರ್ಡರ್‌ನಲ್ಲಿಯೇ ಭಾರಿ ಬೇಡಿಕೆಯನ್ನು ಪಡೆದುಕೊಂಡಿದೆ. ಪ್ರತಿಗಳನ್ನು ಮುಂಗಡ ಕಾಯ್ದಿರಿಸಲು ನೀಡಿದ ಅವಕಾಶದಲ್ಲೇ ಈಗಾಗಲೇ ಎರಡು ಮುದ್ರಣದ ಪ್ರತಿಗಳು ಖಾಲಿಯಾಗಿದ್ದು, ಮೂರನೇ ಮುದ್ರಣಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ಬೇರೆ ಬೇರೆ ರಾಜ್ಯಗಳಿಂದ, ವಿದೇಶದಿಂದ ಪುಸ್ತಕಕ್ಕೆ ಬೇಡಿಕೆ ಬರುತ್ತಿದೆ. ಅನೇಕ ಸಂಘಟನೆಗಳು ಈ ಕೃತಿಯನ್ನು ಬಿಡುಗಡೆ ಮಾಡಲು ತಾವಾಗಿಯೇ ಮುಂದಾಗಿವೆ ಎಂದು ಪರಶಿವಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ನೀವೂ ಆರ್ಡರ್‌ ಮಾಡಬಹುದು

ಪ್ರತಿಗಳನ್ನು ಮುಂಗಡ ಕಾಯ್ದಿರಿಸಿದವರಿಗೆ ವಿಶೇಷ ರಿಯಾಯಿತಿಯಲ್ಲಿ ಪುಸ್ತಕವನ್ನು ಒದಗಿಸಲಾಗುತ್ತಿದ್ದು, ಅಂಚೆ ವೆಚ್ಚವು ಉಚಿತವಾಗಿದೆ. ಜ.22ರಂದು ನಡೆಯಲಿರುವ ರಾಮೋತ್ಸವದಂದು ಹಂಚಲು, ಸ್ನೇಹಿತರಿಗೆ ನೀಡಿ ಶುಭ ಕೋರಲು ಮತ್ತು ಅಂದಿನ ಕಾರ್ಯಕ್ರಮದ ಅತಿಥಿಗಳಿಗೆ ನೀಡಲು ಇದು ಅತ್ಯಂತ ಉಪಯುಕ್ತ ಕೃತಿಯಾಗಿದೆ. ಆಸಕ್ತರು ಮೊಬೈಲ್‌ ನಂ. 98450 31335ಗೆ ಸಂಪರ್ಕಿಸಿ, ಪ್ರತಿಯನ್ನು ತರಿಸಿಕೊಳ್ಳಬಹುದಾಗಿದೆ.

ಇದು ಸ್ನೇಹ ಬುಕ್‌ ಹೌಸ್‌ನ 500ನೇ ಕೃತಿ

ʻಮಂದಿರವಲ್ಲೇ ಕಟ್ಟುವೆವು!ʼ ಇದು ಸ್ನೇಹ ಬುಕ್‌ ಹೌಸ್‌ನ 500ನೇ ಪ್ರಕಟಣೆಯಾಗಿರುವುದು ವಿಶೇಷ. ಸಂಸ್ಥೆಯ 500ನೇ ಕೃತಿಯಾಗಿ ಇಂಥಹುದೊಂದು ಚಾರಿತ್ರಿಕ ಪುಸ್ತಕವನ್ನು ಪ್ರಕಟಿಸುತ್ತಿರುವುದು ಹೆಮ್ಮೆಯ ಕ್ಷಣ ಎಂದು ಸ್ನೇಹ ಬುಕ್ ಹೌಸ್‌ನ ಕೆ.ಬಿ. ಪರಶಿವಪ್ಪ ಹೇಳಿದ್ದಾರೆ. ಈ ಪುಸ್ತಕ ಬಿಡುಗಡೆ ಪೂರ್ವದಲ್ಲೇ ಭಾರಿ ಬೇಡಿಕೆಯನ್ನು ಪಡೆದುಕೊಂಡಿರುವುದು ಅವರಿಗೆ ಖುಷಿ ನೀಡಿದೆ. ರಾಜ್ಯಾದ್ಯಂತ ಮಾತ್ರವಲ್ಲ ವಿದೇಶದಿಂದಲೂ ಪುಸ್ತಕಕ್ಕೆ ಬೇಡಿಕೆ ಬರುತ್ತಿದ್ದು, ಅವುಗಳನ್ನು ಪೂರೈಸಲು ಅವರ ಟೀಮ್‌ ಟೊಂಕ ಕಟ್ಟಿ ನಿಂತಿದೆ.

ಇದನ್ನೂ ಓದಿ: Rama Mandir: ರಾಮ ಮಂದಿರ ಆಂದೋಲನದ ಕಥನ ʻಮಂದಿರವಲ್ಲೇ ಕಟ್ಟಿದೆವು!ʼ ಕೃತಿ ಮೂರನೇ ಮುದ್ರಣದತ್ತ!

ಈ ಕೃತಿಯಲ್ಲಿ ಏನೇನಿವೆ?

Exit mobile version