Sunday Read | ಇವು ಬದುಕು ಬದಲಿಸುವ ಕೃತಿಗಳು, ಒಮ್ಮೆಯಾದರೂ ಓದಿ! - Vistara News

ಕಲೆ/ಸಾಹಿತ್ಯ

Sunday Read | ಇವು ಬದುಕು ಬದಲಿಸುವ ಕೃತಿಗಳು, ಒಮ್ಮೆಯಾದರೂ ಓದಿ!

ಕೆಲವು ಪುಸ್ತಕಗಳು ನಮ್ಮ ಜೀವನವನ್ನು ಇನ್ನಷ್ಟು ಚೆನ್ನಾಗಿ ಅರ್ಥ ಮಾಡಕೊಳ್ಳಲು, ಮತ್ತಷ್ಟು ಅರ್ಥಪೂರ್ಣವಾಗಿ ಬದುಕುವಂತೆ ಮಾಡಲು ಸಹಾಯ ಮಾಡುತ್ತದೆ. ಅಂಥ ಕೆಲವು ಪುಸ್ತಕಗಳ ಪರಿಚಯ ಇಲ್ಲಿದೆ.

VISTARANEWS.COM


on

books
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ದೀಕ್ಷಾ ರವಿಕುಮಾರ್

ಜೀವನದಲ್ಲಿ ಸೋತೆವು ಎಂದೆನಿಸಿದಾಗ, ಏಕತಾನತೆ ಮೂಡಿದಾಗ ನಮ್ಮನ್ನು ಮುಂದುವರೆಯುವಂತೆ ಮಾಡಲು ಒಂದು ಸಣ್ಣ ಭರವಸೆಯ ಮಾತೇ ಸಾಕು. ಆದರೆ ಎಲ್ಲ ಸಂದರ್ಭದಲ್ಲೂ ನಮ್ಮಲ್ಲಿ ಸ್ಪೂರ್ತಿ ತುಂಬುವ ಮಾತನಾಡಲು ನಮ್ಮ ಸುತ್ತಲು ಯಾರಾದರೊಬ್ಬರು ಇರುತ್ತಾರೆಂದು ನಂಬುವುದು ಸರಿಯಲ್ಲ. ಹೀಗೆ ಸ್ಪೂರ್ತಿ ತುಂಬಿ, ಮುನ್ನಡೆಯಲು ಯಾರೂ ಇಲ್ಲದ ಸಂದರ್ಭದಲ್ಲಿ ಪುಸ್ತಕಗಳು ನಮ್ಮ ನೆರವಿಗೆ ಬರುತ್ತವೆ.

ಒಬ್ಬ ಜ್ಞಾನಿಯ ಹಾಗೆ ಪುಸ್ತಕವೂ ಕೂಡ ನಿಮ್ಮಲ್ಲಿನ ಕುಂದು-ಕೊರತೆಗಳನ್ನು ಒಪ್ಪಿಕೊಂಡು, ನಿಮ್ಮನ್ನು ನೀವು ಪ್ರೀತಿಸಿ, ಜೀವನದಲ್ಲಿ ಬರುವ ಅಡೆತಡೆಗಳನ್ನು ಎದುರಿಸಲು ಹೇಳಿಕೊಡುತ್ತದೆ. ಮಾನವನ ಸ್ನೇಹಿತ ಎನ್ನುವ ಮಾತಿಗೆ ತಕ್ಕಂತೆ ಪುಸ್ತಕಗಳು ನಮಗೆ ಸಹಾಯ ಮಾಡುತ್ತವೆ. ಸಂದರ್ಭಕ್ಕೆ ಸರಿಯಾಗಿ ಪುಸ್ತಕವನ್ನು ಆರಿಸಿಕೊಳ್ಳುವುದು ನಮ್ಮ ಜವಾಬ್ದಾರಿ. ಯಾವುದೇ ಸಮಯದಲ್ಲಿ ಸ್ವಯಂ ಸಹಾಯ ಪುಸ್ತಕಗಳು ಹಾಗು ಸ್ಪೂರ್ತಿದಾಯಕ ಪುಸ್ತಕಗಳನ್ನು ಓದುವುದರಿಂದ ಮಾನಸಿಕ ಶಾಂತಿ ಪಡೆಯಬಹುದು. ನಿಮ್ಮ ಬಳಿ ಇರಬೇಕಾದ ಸ್ಪೂರ್ತಿದಾಯಕ ಪುಸ್ತಕಗಳ ಪಟ್ಟಿ ಇಲ್ಲಿದೆ.

೧. ʼದ ಆಲ್ಕೆಮಿಸ್ಟ್‌ʼ – ಪೌಲೋ ಕೋಯೆಲೋ

alcemist

80ಕ್ಕೂ ಹೆಚ್ಚು ಭಾಷೆಗಳಲ್ಲಿ ಅನುವಾದಗೊಂಡಿರುವ ʼದ ಆಲ್ಕೆಮಿಸ್ಟ್‌ʼ ಜಗತ್ತಿನಾದ್ಯಂತ ಮಿಲಿಯನ್‌ಗೂ ಹೆಚ್ಚು ಪ್ರತಿಗಳ ಮಾರಾಟ ಕಂಡಿದೆ.

1988ರಲ್ಲಿ ಮೊದಲು ಪ್ರಕಟಗೊಂಡ ಈ ಪುಸ್ತಕವನ್ನು ಮೊದಲಿಗೆ ಜನರು ಅಷ್ಟಾಗಿ ಮೆಚ್ಚಲಿಲ್ಲ. “ನಿಮಗೆ ಏನಾದರು ಬೇಕೆಂದಿದ್ದರೆ ಸಂಪೂರ್ಣ ಬ್ರಹ್ಮಾಂಡವೇ ಅದನ್ನು ಸಾಧಿಸಲು ನಿಮಗೆ ಸಹಾಯ ಮಾಡುತ್ತದೆ” ಎಂದು ಬರೆದುಕೊಂಡಿರುವ ಬರಹಗಾರ ಆ ಮಾತನ್ನು ಅನುಸರಿಸಿ, ಎದೆಗುಂದಲಿಲ್ಲ. ಅವನ ನಂಬಿಕೆಯಂತೆಯೇ ಈ ಪುಸ್ತಕವು ಬೆಸ್ಟ್‌ಸೆಲ್ಲರ್‌ ಎನಿಸಿಕೊಂಡಿತು. ಸದ್ಯ ಜೀವಂತ ಲೇಖಕರ ಪುಸ್ತಕಗಳಲ್ಲಿ ಅತಿ ಹೆಚ್ಚು ಭಾಷೆಗಳಿಗೆ ಅನುವಾದಗೊಂಡ ಪುಸ್ತಕ ಎನ್ನುವ ಗಿನ್ನೆಸ್‌ ದಾಖಲೆ ಈ ಪುಸ್ತಕದ ಪಾಲಾಗಿದೆ.

ಸ್ಯಾಂಟಿಯಾಗೋ ಎನ್ನುವ ಕುರಿಗಾಹಿ ಹುಡುಗನ ಕಥೆಯನ್ನು ಈ ಪುಸ್ತಕ ಹೇಳುತ್ತದೆ. ಆತ ಭೌತಿಕ ಖಜಾನೆಯನ್ನು ಅರಸಿ ಜಗತ್ತನ್ನು ಸುತ್ತುವಾಗ ವಿವಿಧ ರೀತಿಯ ಜನರನ್ನು ಭೇಟಿ ಮಾಡುತ್ತಾನೆ. ಈ ಅನುಭವಗಳು ಆತನ ಹೃದಯವನ್ನು ಸ್ಪರ್ಷಿಸಿ, ಆತ ದುಡ್ಡಿಗಿಂತಲೂ ಮುಖ್ಯವಾದುದ್ದನ್ನು ಪಡೆದುಕೊಳ್ಳಲು ಸಹಾಯ ಮಾಡುತ್ತವೆ.

ವಿಧಿ ಮತ್ತು ಸ್ವಯಂ ಹುಡುಕಾಟದ ಈ ಪುಸ್ತಕದಲ್ಲಿ ಕಷ್ಟವನ್ನು ಎದುರಿಸುವುದು, ಆತ್ಮವಿಶ್ವಾಸ ಹೊಂದುವುದು ಮತ್ತು ನಮ್ಮ ಕನಸನ್ನು ಹಿಂಬಾಲಿಸುವುದರ ಕುರಿತು ಬಹಳಷ್ಟು ಜೀವನ ಪಾಠಗಳಿವೆ.

೨. ʼಮ್ಯಾನ್ಸ್‌ ಸರ್ಚ್‌ ಫಾರ್‌ ಮೀನಿಂಗ್‌ʼ – ವಿಕ್ಟರ್‌ ಇ. ಫ್ರಾಂಕ್ಲ್‌

meaning

ಮನೋವಿಜ್ಞಾನಿ ವಿಕ್ಟರ್‌ ಇ. ಫ್ರಾಂಕ್ಲ್‌ ಅವರ ಸ್ಪೂರ್ತಿದಾಯಕ ಪುಸ್ತಕಗಳಲ್ಲಿ ಒಂದಾದ ಈ ಪುಸ್ತಕ, ನಾಜ಼ಿ ಸಾವಿನ ಶಿಬಿರಗಳಲ್ಲಿನ ಅನುಭವ ಮತ್ತು ಆತನ ಬಳಿ ಬರುವವರ ಕಥೆಗಳಿಂದ ಕೂಡಿದೆ. ಸರಳ ಭಾಷೆಯಲ್ಲಿರುವ ಈ ಪುಸ್ತಕದಲ್ಲಿ ಕಷ್ಟಗಳಿಂದ ತಪ್ಪಿಸಿಕೊಳ್ಳಲು ಮತ್ತು ಅದನ್ನು ಮರೆಯಲು ಸಾಧ್ಯವಿಲ್ಲ, ಆದರೆ ಅವುಗಳನ್ನು ಆರೋಗ್ಯಕರ ರೀತಿಯಲ್ಲಿ ಹೇಗೆ ಸಂಭಾಳಿಸಬೇಕು ಎಂದು ಹೇಳಿದ್ದಾರೆ.

ಈ ಪುಸ್ತಕವು ಹಿಂದೆ ನಡೆದಿರುವುದರ ಬಗ್ಗೆ ತಿಳುವಳಿಕೆಯನ್ನು ನೀಡಿ ಉತ್ಸುಕತೆಯಿಂದ ಭವಿಷ್ಯದೆಡೆಗೆ ನಡೆಯುವುದು ಹೇಗೆ ಎಂಬುದನ್ನು ಆಧ್ಯಾತ್ಮಿಕ ಜಾಗೃತಿಯನ್ನು ಮೂಡಿಸುವುದರ ಮೂಲಕ ಹೇಳುತ್ತದೆ. ಮನುಷ್ಯನು ಜೀವನದಲ್ಲಿ ಅರ್ಥವನ್ನು ಹುಡುಕುತ್ತಾನೆ ಎನ್ನುವುದನ್ನು ಲೋಗೋಥೆರಪಿ ಎನ್ನುವ ವಿಷಯದ ಮೂಲಕ ಬರಹಗಾರ ಪರಿಚಯಿಸುತ್ತಾನೆ.

badass

೩. ʼಯೂ ಆರ್‌ ಅ ಬ್ಯಾಡಾಸ್‌ : ಹೌ ಟು ಸ್ಟಾಪ್‌ ಡೌಟಿಂಗ್‌ ಯುವರ್‌ ಗ್ರೇಟ್‌ನೆಸ್‌ ಆಂಡ್‌ ಸ್ಟಾರ್ಟ್‌ ಲಿವಿಂಗ್‌ ಎನ್ ಆವ್‌ಸಮ್‌ ಲೈಫ್‌ʼ – ಜೆನ್‌ ಸಿನ್‌ಸೆರೊ

ಲೆಕ್ಕವಿಲ್ಲದಷ್ಟು ಜನರಿಗೆ ಜೀವನ ಪಾಠವನ್ನು ನೀಡಿ ಅವರ ಜೀವನದ ದಿಕ್ಕನ್ನೇ ಬದಲಿಸಲು ಸಹಾಯ ಮಾಡಿರುವ #1 ನ್ಯೂ ಯಾರ್ಕ್‌ ಟೈಮ್ಸ್‌ ಬೆಸ್ಟ್‌ಸೆಲ್ಲಿಂಗ್‌ ಬರಹಗಾರ್ತಿ ಜೆನ್‌ ಸಿನ್‌ಸೆರೊ ಅವರು ಈ ಪುಸ್ತಕವನ್ನು ಬರೆದಿದ್ದಾರೆ.

ಸಾಮಾನ್ಯ ಸ್ವಯಂ ಸಹಾಯ ಪುಸ್ತಕಗಳ ಬರವಣಿಗೆ ಶೈಲಿಗಿಂತ ವಿಭಿನ್ನವಾದ ಮನೋರಂಜಕ ದೃಷ್ಟಿಕೋನದಲ್ಲಿ ಈ ಪುಸ್ತಕವನ್ನು ಬರೆಯಲಾಗಿದೆ. ಇದರಲ್ಲಿರುವ ಪುಟ್ಟ ಅಧ್ಯಾಯಗಳು, ಸರಳ ಚಟುವಟಿಕೆಗಳು ಹಾಗು ಸಲಹೆಗಳು ಈ ಪುಸ್ತಕವನ್ನು ಎಲ್ಲರೂ ಮೆಚ್ಚುವಂತೆ ಮಾಡಿದೆ.

habits
positive

೪. ‘ದ 7 ಹ್ಯಾಬಿಟ್ಸ್‌ ಆಫ್‌ ಹೈಲಿ ಎಫೆಕ್ಟೀವ್‌ ಪೀಪಲ್:‌ ಪವರ್‌ಫುಲ್‌ ಲೆಸನ್ಸ್‌ ಇನ್‌ ಪರ್ಸನಲ್‌ ಚೇಂಜ್‌ʼ – ಸ್ಟೀವನ್‌ ಆರ್‌. ಕೋವಿ

40 ಮಿಲಿಯನ್‌ಗೂ ಹೆಚ್ಚು ಪ್ರತಿಗಳು ಮಾರಾಟವಾಗಿರುವ ಈ ಪುಸ್ತಕವು ಮೂರು ದಶಕಗಳಿಂದ ಜನರಲ್ಲಿ ಸ್ಪೂರ್ತಿ ತುಂಬುತ್ತಿದೆ. ಇದರಲ್ಲಿ ನೀಡಲಾಗಿರುವ ಏಳು ಅಭ್ಯಾಸಗಳು ಸರಳವಾಗಿದ್ದು, ವೈಯಕ್ತಿಕ ಅಭಿವೃದ್ಧಿಯಲ್ಲಿ ಸಹಾಯ ಮಾಡುತ್ತವೆ.

ಪ್ರಾಕ್ಟಿಕಲ್‌ ರೀತಿಯಲ್ಲಿ ಕಷ್ಟಗಳನ್ನು ಎದುರಿಸುವ ಬಗ್ಗೆ ಮಾತನಾಡುವ ಈ ಪುಸ್ತಕವು, ನ್ಯಾಯಯುತವಾಗಿ ಬದುಕುವುದು ಹೇಗೆ ಎನ್ನುವುದನ್ನು ಹೇಳಿಕೊಡುತ್ತದೆ.

೫. ʼದ ಪವರ್‌ ಆಫ್‌ ಪಾಸಿಟಿವ್‌ ಥಿಂಕಿಂಗ್‌ʼ – ಡಾ. ನಾರ್ಮನ್‌ ವಿನ್ಸೆಂಟ್‌ ಪೀಲೆ

“ಓದುಗರಿಗೆ ಸಂತೋಷದ, ಸಂತೃಪ್ತಿಯ ಜೀವನವನ್ನು ನಡೆಸಲು ಸಹಾಯ ಮಾಡುವ ಏಕೈಕ ಉದ್ದೇಶದಿಂದ ಈ ಪುಸ್ತಕವನ್ನು ಬರೆಯಲಾಗಿದೆ,” ಎಂದು ಬೋಧಕ ನಾರ್ಮನ್‌ ವಿನ್ಸೆಂಟ್‌ ಪೀಲೆ ಹೇಳಿದ್ದಾರೆ. ಜಗತ್ತಿನಾದ್ಯಂತ ಮಿಲಯನ್‌ಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಸ್ಪೂರ್ತಿ ನೀಡಿರುವ ಈ ಪುಸ್ತಕ ಅದರ ಕಾರ್ಯದಲ್ಲಿ ಸಫಲವಾಗಿದೆ ಎಂದು ಹೇಳಬಹುದು.

ಓದುಗರಲ್ಲಿ ಕನಸು ಮತ್ತು ಆಕಾಂಕ್ಷೆಗಳನ್ನು ಪೂರೈಸುವ ಹುಮ್ಮಸ್ಸನ್ನು ಈ ಪುಸ್ತಕ ನೀಡಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ.

೬. ‘ಮೇಕ್‌ ಯುವರ್‌ ಬೆಡ್:‌ ಸ್ಮಾಲ್‌ ಥಿಂಗ್ಸ್‌ ದಾಟ್‌ ಕ್ಯಾನ್‌ ಚೇಂಜ್‌ ಯುವರ್‌ ಲೈಫ್…‌ ಆಂಡ್‌ ಮೇಬಿ ದ ವರ್ಲ್ಡ್‌ʼ – ವಿಲಿಯಂ ಎಚ್.‌ ಮೆಕ್‌ರೇವನ್‌

bed

ಅಮೆರಿಕದ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿರುವ ಅಡ್ಮಿರಲ್‌ ವಿಲಿಯಂ ಎಚ್.‌ ಮೆಕ್‌ರೇವನ್‌, 2014ರಲ್ಲಿ ಟೆಕ್ಸಸ್‌ ವಿಶ್ವವಿದ್ಯಾಲಯದ ಆರಂಭಿಕ ದಿನದಲ್ಲಿ ಭಾಗವಹಿಸಿದಾಗ ಅಲ್ಲಿನ, “ಇಲ್ಲಿ ಆರಂಭವಾಗುವುದು ಜಗತ್ತನ್ನೇ ಬದಲಾಯಿಸುತ್ತದೇ” (ವಾಟ್‌ ಸ್ಟಾರ್ಟ್ಸ್‌ ಹಿಯರ್‌ ಚೇಂಜಸ್‌ ದ ವರ್ಲ್ಡ್) ಎಂಬ ಅಡಿಬರಹದಿಂದ ಸ್ಪೂರ್ತಿ ಪಡೆದು, “ನೀವು ಜಗತ್ತನ್ನು ಬದಲಾಯಿಸಬೇಕಾದರೆ ನಿಮ್ಮ ಹಾಸಿಗೆಯನ್ನು ಸರಿ ಮಾಡುವುದರಿಂದ ಆರಂಭಿಸಿ,” ಎಂದು ಹೇಳಿದರು. ಅವರು ನೇವಿ ಸೀಲ್‌ ತರಬೇತಿಯಲ್ಲಿ ಕಲಿತ ಕೆಲವೊಂದು ವಿಷಯಗಳನ್ನೂ ಹಂಚಿಕೊಂಡರು.

ಈ ವಿಡಿಯೋ ವೈರಲ್‌ ಆಗಲು ಆರಂಭಿಸಿದಾಗ, ಮೆಕ್‌ರೇವನ್‌ ಅವರ ಜೀವನ ಮತ್ತು ಸೇನಾ ಸೇವೆಯ ದಿನಗಳನ್ನು ನೆನೆಸಿಕೊಳ್ಳುತ್ತಾ ಪುಸ್ತಕವನ್ನು ಬರೆದರು. ಅವರು ಎದುರಿಸಿದ ಕಷ್ಟಗಳು ಮತ್ತು ಅವರು ಕಲಿತ ಪಾಠಗಳನ್ನು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ. ಅವರ ಸರಳ ಸಲಹೆ ಕತ್ತಲೆಯಲ್ಲಿ ಬೆಳಕಿನಂತೆ ಭಾಸವಾಗುತ್ತವೆ.

೭. ʼದ ಸಟಲ್‌ ಆರ್ಟ್‌ ಆಫ್‌ ನಾಟ್‌ ಗಿವಿಂಗ್‌ ಫ*: ಅ ಕೌಂಟರ್‌ಇಂಟ್ಯೂಟೀವ್‌ ಅಪ್ರೋಚ್‌ ಟು ಲಿವಿಂಗ್‌ ಅ ಗುಡ್‌ ಲೈಫ್‌ʼ – ಮಾರ್ಕ್‌ ಮಾನ್ಸನ್‌

subtle

ಮಾನ್ಸನ್‌ ಅವರು ಈ ಪುಸ್ತಕದಲ್ಲಿ ಅಮೇರಿಕದ ಸಮಾಜ ಅನುಸರಿಸುವ ʼಧನಾತ್ಮಕ ಯೋಚನೆʼ ಮತ್ತು ʼಫೀಲ್‌-ಗುಡ್‌ʼ ಮಾದರಿಯನ್ನು ಟೀಕಿಸುತ್ತಾರೆ.

ಜೀವನ ಆಟ ಆಡಿದಷ್ಟು ಸುಲಭವಲ್ಲ. ನಾವು ಜೀವಿಸುತ್ತಿರುವುದಕ್ಕಾಗಿ ನಮ್ಮನ್ನು ಗುರುತಿಸಬೇಕು ಎನ್ನುವುದು ತಪ್ಪು ಎಂದು ಈ ಪುಸ್ತಕ ಹೇಳುತ್ತದೆ. ಹೊಸ ಪೀಳಿಗೆಯನ್ನು ಕಲ್ಪನಾಲೋಕದಿಂದ ಹೊರ ತರಲು ಬೇಕಾದ ಕಟು ಸತ್ಯಗಳನ್ನು ಇದು ಒದಗಿಸುತ್ತದೆ.

ಸಮಾಜದಲ್ಲಿ ಗೆಲ್ಲುವವರೊಂದಿಗೆ ಸೋಲುವವರೂ ಇರುತ್ತಾರೆ. ಎಲ್ಲರೂ ಅಸಮಾನ್ಯರಾಗಲು ಸಾಧ್ಯವಿಲ್ಲ. ಇದು ಅನ್ಯಾಯವೆನಿಸಿದರೂ ಸತ್ಯವಾಗಿರುವುದರಿಂದ ನಾವು ಇದನ್ನು ಒಪ್ಪಿಕೊಂಡು ನಡೆಯುವುದು ಒಳ್ಳೆಯದು. ಎಲ್ಲ ಸಂದರ್ಭದಲ್ಲಿ ಖುಷಿಯಾಗಿರಲು ಸಾಧ್ಯವಿಲ್ಲ ಎಂಬುದನ್ನು ಬರಹಗಾರ ಪ್ರತಿಪಾದಿಸುತ್ತಾನೆ. ನಮ್ಮ ಸ್ವಂತಿಕೆಯಲ್ಲಿ ನೆಲೆ ಕಾಣುವುದರಿಂದ ನಮ್ಮ ಪ್ರೀತಿಯನ್ನು ಪಡೆಯಲು ಅರ್ಹರಿರುವವರನ್ನು ನಾವು ಹುಡುಕಿಕೊಳ್ಳಬಹುದು ಎಂದೂ ಹೇಳಲಾಗಿದೆ.‌

೮. ‘ದ ಫೋರ್‌ ಅಗ್ರಿಮೆಂಟ್ಸ್‌ʼ – ಡಾನ್‌ ಮಿಗೆಲ್‌ ರೂಯಿಜ್‌

four

ಸಂತೋಷದ ಜೀವನವನ್ನು ನಡೆಸುವುದು ಹೇಗೆ ಎಂಬುದನ್ನು ಸುಲಭವಾದ ಮಾರ್ಗಗಳ ಮೂಲಕ ಡಾನ್‌ ಮಿಗೆಲ್‌ ರೂಯಿಜ್‌ ಅವರು ʼದ ಫೋರ್‌ ಅಗ್ರಿಮೆಂಟ್ಸ್‌ʼ ಎಂಬ ಪುಸ್ತಕದಲ್ಲಿ ಹೇಳಿದ್ದಾರೆ.

ನ್ಯೂ ಯಾರ್ಕ್‌ ಟೈಮ್ಸ್‌ ಬೆಸ್ಟ್‌ಸೆಲ್ಲರ್‌ ಆದ ಈ ಪುಸ್ತಕದಲ್ಲಿ ಆಂತರಿಕ ಸಂತೋಷವನ್ನು ಕಾಣಲು ಬೇಕಾದ ಪಾಠಗಳನ್ನು ಹೇಳಲಾಗಿದೆ. ಮಕ್ಕಳನ್ನು ʼಪಳಗಿಸುವುದಕ್ಕೆʼ ಪ್ರಾಮುಖ್ಯತೆ ನೀಡುವ ಸಮಾಜದಲ್ಲಿ ನಾವು ಬದುಕುತ್ತೇವೆ. ಬಹುಮಾನ ಮತ್ತು ಶಿಕ್ಷೆಗಳ ಪದ್ಧತಿಯ ಮೂಲಕ ಜೀವಿಸುವುದನ್ನು ಕಲಿಯುತ್ತೇವೆ. ನಾವು ಬೆಳೆದು ದೊಡ್ಡವರಾಗುವಷ್ಟರಲ್ಲಿ ನಮ್ಮಲ್ಲಿ ಒಂದು ʼಪರ್ಫೆಕ್ಟ್‌ʼ ಎನಿಸಿಕೊಳ್ಳುವ ಚಿತ್ರವು ಮೂಡಿರುತ್ತದೆ. ಇದು ನಮ್ಮನ್ನು ನಾವು ಶಿಕ್ಷಿಸಿಕೊಳ್ಳುವಂತೆ ಮಾಡುತ್ತದೆ.

ಪುರಾತನ ಟೋಲ್ಟೆಕ್‌ ಜ್ಞಾನವನ್ನು ಆಧಾರವನ್ನಾಗಿಸಿಕೊಂಡು ಬರಹಗಾರ, ಈ ಸಮಾಜ ಹಾಕುವ ಕಟ್ಟಲೆಗಳಿಂದ ಹೊರಬಂದು ನಿಜವಾದ ಸ್ವಾತಂತ್ರ್ಯ, ಖುಷಿ ಹಾಗು ಪ್ರೀತಿ ಪಡೆಯುವುದು ಹೇಗೆ ಎಂದು ಈ ಪುಸ್ತಕದ ಮೂಲಕ ತಿಳಿಸಿದ್ದಾರೆ.

೯. ʼಥಿಂಕ್‌ ಆಂಡ್‌ ಗ್ರೋ ರಿಚ್‌ʼ – ನಪೋಲಿಯನ್‌ ಹಿಲ್

rich

ಅಮೇರಿಕದಲ್ಲಿ ʼದ ಗ್ರೇಟ್‌ ಡಿಪ್ರೆಶನ್‌ʼ ಇಂದ ಆದ ತೊಂದರೆಗಳು ಜನರ ಮನಸ್ಸಿನಲ್ಲಿ ಇನ್ನೂ ಹಸಿಯಾಗಿರುವಾಗಲೇ ಈ ಪುಸ್ತಕವನ್ನು ಪ್ರಕಟಿಸಲಾಯಿತು. ಇದು ಇದರ ಯಶಸ್ಸಿಗೆ ಕಾರಣವಾಯಿತು.

ಆಂಡ್ರೂ ಕಾರ್ನೇಜಿ, ಹೆನ್ರಿ ಫೋರ್ಡ್‌, ಥಾಮಸ್‌ ಎಡಿಸನ್‌ರಂತಹ ಮಿಲಿಯನೇರ್‌ಗಳ ಕಥೆಗಳನ್ನು ಹಿಲ್‌ ಈ ಪುಸ್ತಕದಲ್ಲಿ ಹೇಳುತ್ತಾರೆ. ಈ ಕಥೆಗಳ ಮೂಲಕ ತಮ್ಮ ತತ್ವಗಳನ್ನು ಪ್ರತಿಪಾದಿಸುತ್ತಾರೆ. ಸಮಕಾಲೀನ ಮಿಲಿಯನೇರ್‌ ಹಾಗು ಬಿಲಿಯನೇರ್‌ಗಳಾದ ಬಿಲ್‌ ಗೇಟ್ಸ್‌, ಡೇವ್‌ ಥಾಮಸ್‌ರಂತಹವರ ಕಥೆಗಳನ್ನು ಸೇರಿಸಿ, ಪ್ರಖ್ಯಾತ ಬರಹಗಾರ ಆರ್ಥರ್‌ ಆರ್.‌ ಪೆಲ್‌ ಈ ಪುಸ್ತಕವನ್ನು ಮರುಪ್ರಕಟಿಸಿದರು. ಈ ಕಥೆಗಳು ಇದರಲ್ಲಿ ಹೇಳುವ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಾಯ ಮಾಡಿ, ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತವೆ.

೧೦. ʼಹೌ ಟು ವಿನ್‌ ಫ್ರೆಂಡ್ಸ್‌ ಆಂಡ್‌ ಇನ್ಫ್ಲೂಯೆನ್ಸ್‌ ಪೀಪಲ್‌ʼ – ಡೇಲ್‌ ಕಾರ್ನೇಜಿ

influence

1936ರಲ್ಲಿ ಪ್ರಕಟವಾದ ಈ ಪುಸ್ತಕವು 15 ಮಿಲಿಯನ್‌ಗೂ ಹೆಚ್ಚು ಪ್ರತಿಗಳ ಮಾರಾಟವನ್ನು ಕಂಡಿದೆ. ವೈಯಕ್ತಿಕ ಹಾಗು ವೃತ್ತಿ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಮಾರ್ಗಗಳನ್ನು ಈ ಪುಸ್ತಕ ನೀಡುತ್ತದೆ.

ಅಬ್ರಾಹಂ ಲಿಂಕನ್‌ರ ಜೀವನಗಾಥೆಯನ್ನು ಬರೆದಿರುವ ಡೇಲ್‌ ಕಾರ್ನೇಜಿ ಅವರ ಕುರಿತ ಉಲ್ಲೇಖಗಳನ್ನು ಈ ಪುಸ್ತಕದಲ್ಲೂ ನೀಡಿದ್ದಾರೆ. ತಮ್ಮ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಯೋಚಿಸುತ್ತಿರುವವರಿಗೆ ಈ ಪುಸ್ತಕ ಒಳ್ಳೆಯ ಮಾರ್ಗದರ್ಶನವನ್ನು ನೀಡುತ್ತದೆ.

೧೧. ʼರಿಚ್‌ ಡ್ಯಾಡ್‌ ಪೂರ್‌ ಡ್ಯಾಡ್‌ʼ – ರಾಬರ್ಟ್‌ ಟಿ. ಕಿಯೋಸಾಕಿ

ಕೈ ತುಂಬ ದುಡ್ಡಿಟ್ಟುಕೊಂಡು ʼಮನಿ ಕಾಂಟ್‌ ಬೈ ಹ್ಯಾಪಿನೆಸ್‌ʼ ಎನ್ನುವುದು ಸುಲಭ. ಆದರೆ, ನಿಜ ಏನೆಂದು ದುಡ್ಡಿಲ್ಲದವರು ಅರಿತಿರುತ್ತಾರೆ. ಬಿಡುಗಡೆಗೊಂಡ 25 ವರ್ಷಗಳ ನಂತರವೂ ʼರಿಚ್‌ ಡ್ಯಾಡ್‌ ಪೂರ್‌ ಡ್ಯಾಡ್‌ʼ ವೈಯಕ್ತಿಕ ಹಣಕಾಸಿನ ಕುರಿತ ಪುಸ್ತಕಗಳಲ್ಲಿ ಮೊದಲನೇ ಸ್ಥಾನದಲ್ಲಿದೆ.

rich

ಪುಸ್ತಕದಲ್ಲಿ ಎರಡು ಭಿನ್ನ ಮನಸ್ಥಿತಿಯುಳ್ಳ ಎರಡು ಅಪ್ಪಂದಿರ ಕಥೆಗಳನ್ನು ಹೇಳಲಾಗಿದೆ. ಈ ಪುಸ್ತಕವನ್ನು ಕಿಯೋಸಾಕಿ ಅವರ ನಿಜ ಜೀವನವನ್ನು ಆಧಾರವನ್ನಾಗಿರಿಸಿಕೊಂಡು ಬರೆಯಲಾಗಿದೆ. ಪೂರ್‌ ಡ್ಯಾಡ್‌ (ಬಡವ ತಂದೆ) — ಕಿಯೋಸಾಕಿಯವರ ನಿಜವಾದ ತಂದೆ, ಹಾಗು ರಿಚ್‌ ಡ್ಯಾಡ್‌ (ಶ್ರೀಮಂತ ತಂದೆ) — ಕಿಯೋಸಾಕಿಯವರ ಸ್ನೇಹಿತನ ತಂದೆ, ನೀಡುವ ಸಲಹೆಗಳು ಹಾಗು ಅವರು ಜೀವನವನ್ನು ಗ್ರಹಿಸುವ ರೀತಿ ಕಿಯೋಸಾಕಿ ಅವರು ಹಣಕಾಸಿನ ಪ್ರಪಂಚದ ಬಗೆಗಿನ ಸತ್ಯವನ್ನು ಅರಿಯಲು ಸಹಾಯ ಮಾಡುತ್ತದೆ.

ಶ್ರೀಮಂತರಾಗಲು ಹೆಚ್ಚು ದುಡಿಯಬೇಕು, ಹಣಕಾಸಿನ ಜ್ಞಾನವನ್ನು ಪಡೆಯಲು ಶಾಲೆಗಿಂತ ಸೂಕ್ತ ಜಾಗವಿಲ್ಲ ಹಾಗು ಮನೆಗಿಂತ ದೊಡ್ಡದಾದ ಆಸ್ತಿಯಿಲ್ಲ ಎಂಬ ಹಳೆ ತಲೆಮಾರಿನ ಯೋಚನೆಗಳು ಸುಳ್ಳು ಎಂದು ಈ ಪುಸ್ತಕ ಪ್ರತಿಪಾದಿಸುತ್ತದೆ. ವ್ಯಾವಹಾರಿಕ ಜ್ಞಾನವನ್ನು ಹೆಚ್ಚಿಸಿಕೊಂಡು, ಆರ್ಥಿಕ ಪರಿಸ್ಥಿತಿಯನ್ನು ವೃದ್ಧಿಸಿಕೊಳ್ಳಲು ಈ ಪುಸ್ತಕ ಸಹಾಯ ಮಾಡುತ್ತದೆ.

grit

೧೨. ʼಗ್ರಿಟ್‌ʼ – ಎಂಜೆಲಾ ಡಕ್‌ವರ್ಥ್‌
ಯಶಸ್ಸಿಗಾಗಿ ಹಪಹಪಿಸುತ್ತಿರುವವರಿಗೆ ಇದು ಸರಿಯಾದ ಪುಸ್ತಕ. ಯಶಸ್ಸನ್ನು ಪಡೆಯಲು ಪ್ರತಿಭೆಗಿಂತಲೂ ಸಾಧಿಸಬೇಕು ಎನ್ನುವ ಮನೋಭಾವ ಮುಖ್ಯವೆಂದು ಮನಃಶಾಸ್ತ್ರಜ್ಞೆ ಎಂಜೆಲಾ ಡಕ್‌ವರ್ಥ್‌ ಹೇಳುತ್ತಾರೆ. ಸ್ವಂತ ಅನುಭವ ಹಾಗು ಸಾಧಕರೊಂದಿಗಿನ ಸಂವಾದದಿಂದ ಅವರು ತಮ್ಮ ಹೈಪೋಥಿಸಿಸ್‌ ಅನ್ನು ಪರೀಕ್ಷಿಸಿದ್ದಾರೆ. ಯಶಸ್ಸು, ನೀವು ಎಷ್ಟು ಬದ್ಧರಾಗಿದ್ದೀರಿ ಎನ್ನುವುದರಿಂದ ದೊರೆಯುತ್ತದೆಯೇ ಹೊರತು, ನೀವು ಎಷ್ಟು ಬುದ್ಧಿವಂತರು ಎಂಬುದರಿಂದಲ್ಲ ಎಂದು ಬರಹಗಾರ್ತಿ ಪುಸ್ತಕದ ಕೊನೆಯಲ್ಲಿ ಹೇಳುತ್ತಾರೆ.

೧೩. ʼಮೈಂಡ್‌ಸೆಟ್:‌ ದ ನ್ಯೂ ಸೈಕಾಲಜಿ ಆಫ್‌ ಸಕ್ಸೆಸ್‌ʼ – ಕ್ಯಾರೋಲ್‌ ಎಸ್.‌ ಡ್ವೆಕ್‌

mindset

ಸ್ಟಾನ್‌ಫೋರ್ಡ್‌ ವಿಶ್ವವಿದ್ಯಾಲಯದ ಪ್ರಖ್ಯಾತ ಮನಃಶಾಸ್ತ್ರಜ್ಞೆ ಕ್ಯಾರೋಲ್‌ ಡ್ವೆಕ್‌ ಅವರು ನಮಗೆ ʼಬೆಳವಣಿಗೆ ಮನೋಭಾವʼಕ್ಕೆ ಪರಿಚಯಿಸಿ, ಅದು ಹೇಗೆ ಯಶಸ್ಸನ್ನು ಮರುವ್ಯಾಖ್ಯಾನಿಸಿ ನಮ್ಮ ಸ್ವಯಂ ವೃದ್ಧಿಯಲ್ಲಿ ಸಹಾಯ ಮಾಡುತ್ತದೆ ಎಂದು ಈ ಪುಸ್ತಕದ ಮೂಲಕ ಹೇಳಿದ್ದಾರೆ.

ಈ ಪುಸ್ತಕದ ಬಗ್ಗೆ ಮಾತನಾಡಿದ ಬಿಲ್‌ ಗೇಟ್ಸ್‌, “ಚತುರವಾದ ಅಧ್ಯಯನಗಳು ಹಾಗು ನಮ್ಮನ್ನು ಪುಸ್ತಕದಲ್ಲಿ ತೊಡಗಿಸುವಂತಹ ಬರವಣಿಗೆಯ ಮೂಲಕ ನಮ್ಮ ಸಾಮರ್ಥ್ಯದ ಬಗ್ಗೆ ನಮಗಿರುವ ನಂಬಿಕೆಗಳು ನಮ್ಮ ಕಲಿಕೆ ಹಾಗು ನಾವು ತೆಗೆದುಕೊಳ್ಳುವ ನಿರ್ಧಾರಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎನ್ನುವುದರ ಮೇಲೆ ಡ್ವೆಕ್‌ ಬೆಳಕು ಚೆಲ್ಲಿದ್ದಾರೆ,” ಎಂದು ಹೇಳಿದ್ದಾರೆ.

ವರ್ಷಗಳ ಅಧ್ಯಯನದ ನಂತರ ಬರಹಗಾರ್ತಿ ಯಶಸ್ಸಿಗೆ ಬೇಕಾದ ಸರಳ ಮಾರ್ಗ, ಸರಿಯಾದ ಮನಸ್ಥಿತಿ ಎಂದು ಕಂಡುಕೊಂಡಿದ್ದಾರೆ. ನೀವು ನಿಮ್ಮ ಸಾಮರ್ಥ್ಯ ಹಾಗು ಪ್ರತಿಭೆಯನ್ನು ಹೇಗೆ ಗುರುತಿಸುತ್ತೀರಿ ಎನ್ನುವುದರ ಮೇಲೆ ಶಾಲೆ, ಕಾಲೇಜು, ಕ್ರೀಡೆ ಅಥವಾ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತೀರ್ಣರಾಗುವುದು ಅವಲಂಬಿಸುತ್ತದೆ. ಈ ಪುಸ್ತಕವು ನಿಮ್ಮನ್ನು ನೀವು ಅಪ್‌ಗ್ರೇಡ್‌ ಮಾಡಿಕೊಂಡು, ನಿತ್ಯವೂ ಸ್ಪೂರ್ತಿದಾಯಕ ಮನಸ್ಥಿತಿಯಿಂದಿದ್ದು ಜೀವನದಲ್ಲಿ ಸಾಧನೆ ಮಾಡಲು ಸಹಾಯ ಮಾಡುತ್ತದೆ.

choose

೧೪. ʼಚೂಸ್‌ ಯುವರ್‌ಸೆಲ್ಫ್‌ʼ – ಜೇಮ್ಸ್‌ ಆಲ್ಟುಕರ್‌

ಈ ಪುಸ್ತಕವು ನಿಜ ಜಗತ್ತಿನ ಹಲವು ವಿಷಯಗಳ ಕುರಿತು ಮಾತನಾಡುತ್ತದೆ. ಜೀವನವು ಊಹಿಸಲು ಅಸಾಧ್ಯವಾಗಿದ್ದು, ವಿದ್ಯಾಭ್ಯಾಸ, ಕೆಲಸ, ಸರ್ಕಾರ ಅಥವಾ ನಿವೃತ್ತಿ, ಯಾವುದೂ ನಾವೆಂದುಕೊಂಡತೆ ಆಗಲು ಸಾಧ್ಯವಿಲ್ಲ. ಹೊಸ ಆರ್ಥಿಕ ವ್ಯವಸ್ಥೆ ಹಾಗು ತಂತ್ರಜ್ಞಾನಗಳ ಪರಿಚಯವು ಮಧ್ಯವರ್ತಿಗಳನ್ನು ಕಡಿಮೆಯಾಗಿಸುತ್ತಿದೆ. ಇದರೊಂದಿಗೆ ಇದೇ ತಂತ್ರಜ್ಞಾನ ಹಾಗು ಆರ್ಥಿಕ ವ್ಯವಸ್ಥೆ ಯಾರ ಸಹಾಯವೂ ಇಲ್ಲದೇ ಶ್ರೀಮಂತರಾಗಲು ಹೊಸ ಅವಕಾಶಗಳನ್ನು ಹುಟ್ಟುಹಾಕುತ್ತಿವೆ.

ನೀವು ಯಶಸ್ಸನ್ನು ಸಾಧಿಸಬಹುದಾದ ಒಂದು ಹೊಸ ಪ್ರಪಂಚವನ್ನು ಕಟ್ಟಿಕೊಳ್ಳುವುದು ಹೇಗೆ ಎಂದು ಈ ಪುಸ್ತಕವು ಹೇಳುತ್ತದೆ. ಯಶಸ್ವಿ ಉದ್ಯಮಿ, ಚೆಸ್‌ ಆಟಗಾರ, ಹೂಡಿಕೆದಾರ ಹಾಗು ಬರಹಗಾರ ಜೇಮ್ಸ್‌ ಆಲ್ಟುಕರ್‌ ಅವರು ಸ್ವಂತ ಅನುಭವಗಳ ಮೂಲಕ ಸಲಹೆ ಮತ್ತು ಜೀವನ ಪಾಠಗಳನ್ನು ಹೇಳಿದ್ದಾರೆ.

girl

೧೫. ʼಗರ್ಲ್‌ ಸ್ಟಾಪ್‌ ಅಪೋಲೊಜೈಸಿಂಗ್‌ʼ – ರೆಚೆಲ್‌ ಹಾಲ್ಲಿಸ್‌

ಆಕಾಂಕ್ಷೆಗಳಿಟ್ಟುಕೊಂಡಿರುವುದಕ್ಕೆ ಕ್ಷಮೆಯಾಚಿಸುವುದನ್ನು ಬಿಡಿ ಎಂದು ಮಹಿಳೆಯರಿಗೆ ಮನವರಿಕೆ ಮಾಡಲು ರೆಚೆಲ್‌ ಹಾಲ್ಲಿಸ್‌ ಅವರು ಈ ಪುಸ್ತಕವನ್ನು ಬರೆದಿದ್ದಾರೆ.

ಸಮಾಜದ ಟೀಕೆಗೆ ಗುರಿಯಾಗುವ ಭಯ, ತಮ್ಮಲ್ಲೆನೋ ಕೊರತೆಯಿದೆ ಎನ್ನುವ ಭಾವನೆ ಹಾಗು ತಾಯಿಯಾಗಿ ಮತ್ತು ಮಡದಿಯಾಗಿ ತಾವು ತಮ್ಮ ಕರ್ತವ್ಯವನ್ನು ಪೂರೈಸುತ್ತಿಲ್ಲ ಎಂಬ ಗೊಂದಲಗಳು ಮಹಿಳೆಯರು ಅವರ ಸಂಪೂರ್ಣ ಸಾಮರ್ಥ್ಯವನ್ನು ಅರಿಯುವುದರಿಂದ ತಡೆಯುತ್ತದೆ.

ಈ ಪುಸ್ತಕದ ಮೂಲಕ ಹಾಲ್ಲಿಸ್‌ ಮಹಿಳೆಯರಲ್ಲಿ ಅವರ ಕನಸುಗಳನ್ನು ಆತ್ಮವಿಶ್ವಾಸದಿಂದ ಹಿಂಬಾಲಿಸಬೇಕು ಎಂದು ಕೇಳಿಕೊಳ್ಳುತ್ತಾರೆ. ಅವರ ಸ್ಪೂರ್ತಿದಾಯಕ ಶಬ್ದಗಳು ಹೆಣ್ಣುಮಕ್ಕಳಿಗೆ ಅವರ ಆಸೆ-ಆಕಾಂಕ್ಷೆಗಳನ್ನು ಗುರುತಿಸಿ ಅವುಗಳನ್ನು ಹಿಂಬಾಲಿಸುವಂತೆ ಕರೆ ನೀಡುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Gangadhar Puttur : ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ (Yakshagana Artist) ಗಂಗಾಧರ ಪುತ್ತೂರು ಇಹಲೋಕ ತ್ಯಜಿಸಿದ್ದಾರೆ. ಮುಖದ ಬಣ್ಣವನ್ನು ಅಳಿಸುತ್ತಿರುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

By

Yakshagana Artist No more
Koo

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ (Heart attack) ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ (Yakshagana Artist) ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಬುಧವಾರ (ಮೇ 1) ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading
Advertisement
Rashmika Mandanna's younger sister Shiman
ಟಾಲಿವುಡ್13 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Prajwal Revanna Case Wherever Prajwal escapes we will pick him up says CM Siddaramaiah
ಕ್ರೈಂ15 mins ago

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Devon Thomas
ಕ್ರೀಡೆ22 mins ago

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ38 mins ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

gold rate today
ಚಿನ್ನದ ದರ53 mins ago

Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

Gurucharan Singh Taarak Mehta Ka Ooltah Chashmah actor planned disappearance
ಕಿರುತೆರೆ54 mins ago

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Ram Mandir
ದೇಶ1 hour ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ1 hour ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ1 hour ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ2 hours ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ18 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌