Sunday read | ಹೊಸ ಪುಸ್ತಕ | ಎಲ್ಲರೂ ಕುರುಡರಾದಾಗ ಉಳಿದ ಒಬ್ಬಳೇ ಮಹಿಳೆಯ ಕಥೆ - Vistara News

ಕಲೆ/ಸಾಹಿತ್ಯ

Sunday read | ಹೊಸ ಪುಸ್ತಕ | ಎಲ್ಲರೂ ಕುರುಡರಾದಾಗ ಉಳಿದ ಒಬ್ಬಳೇ ಮಹಿಳೆಯ ಕಥೆ

ಪ್ರಖ್ಯಾತ ಪೋರ್ಚುಗೀಸ್‌ ಕಾದಂಬರಿಕಾರ ಜೋಸೆ ಸರಮಾಗೋನ Bindness ಕಾದಂಬರಿಯನ್ನು ಡಾ.ವಿಜಯಾ ಸುಬ್ಬರಾಜ್‌ ಅವರು ಕನ್ನಡಕ್ಕೆ ತಂದಿದ್ದಾರೆ. ವಿಶಿಷ್ಟವಾದ ಕತೆಯನ್ನು ಹೊಂದಿರುವ ಈ ಕಾದಂಬರಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ಅದರ ಆಯ್ದ ಭಾಗ ಇಲ್ಲಿದೆ.

VISTARANEWS.COM


on

blindness
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವ ವಿಖ್ಯಾತ ಪೋರ್ಚುಗೀಸ್ ಲೇಖಕ ಜೋಸೆ ಸರಮಾಗೋ ಒಂದು ಬಡ ಕುಟುಂಬದಲ್ಲಿ ಜನಿಸಿದ. ಬಾಲ್ಯದಲ್ಲಿ ಹಂದಿಗಳನ್ನು ಮೇಯಿಸುತ್ತಿದ್ದ. ತನ್ನ ಹಂದಿಗಳ ಹೊಟ್ಟೆ ತುಂಬಿಸಲು ಬೇರೆಯವರ ಹೊಲಗಳಿಂದ ಹುಲ್ಲನ್ನು ಕದ್ದು ತರುತ್ತಿದ್ದ. ಮನೆಯ ಹಿತ್ತಲಲ್ಲಿ ತರಕಾರಿ ಬೆಳೆಯುತ್ತಿದ್ದ. ಅಡಿಗೆಗೆ ಬೇಕಾದ ಸೌದೆಯನ್ನು ತಾನೇ ಸ್ವತಃ ಕಡಿದು ತರುತ್ತಿದ್ದ ಪಂಪ್ ಮಾಡಿ ನೀರು ತರುತ್ತಿದ್ದ, ಓದಿನಲ್ಲಿ ಬಹಳ ಚುರುಕಾಗಿದ್ದ ಬರವಣಿಗೆಯಲ್ಲಿ, ಎಲ್ಲಿಯೂ ತಪ್ಪುಗಳನ್ನು ಮಾಡುತ್ತಿರಲಿಲ್ಲ. ಮೂರನೇ ತರಗತಿಯಿಂದ, ಐದನೇ ತರಗತಿಗೆ ಬಹಳ ಬುದ್ಧಿವಂತನೆಂಬ ಕಾರಣಕ್ಕೆ ಡಬಲ್ ಪ್ರಮೋಷನ್ ಪಡೆದವನಾದರೂ ಬಡತನದ ಕಾರಣದಿಂದ, ಮುಂದೆ ಓದಲಾಗಲಿಲ್ಲ. ಚಪ್ಪಲಿಕೊಳ್ಳಲು ಬಿಡಿಗಾಸೂ ಇರುತ್ತಿರಲಿಲ್ಲ. ಅದಕ್ಕಾಗಿ ಬರಿಗಾಲಲ್ಲೇ ನಡೆಯುವ ಅಭ್ಯಾಸವನ್ನು ರೂಢಿಸಿಕೊಂಡ. ಹತ್ತೊಂಬತ್ತನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಒಂದು ಪುಸ್ತಕವನ್ನು, ಗೆಳೆಯನಿಂದ ಸಾಲ ಮಾಡಿ ಕೊಂಡುಕೊಂಡ. ಓದು ಬರಹವೆಂದರೆ ಅವನಿಗೆ ಪ್ರಾಣ. ಸದಾ ಓದಿನಲ್ಲಿಯೇ ತಲ್ಲೀನನಾಗಿರುತ್ತಿದ್ದ.

jose
ಜೋಸೆ ಸರಮಾಗೋ

ಓದಿನಲ್ಲಿದ್ದ ಉತ್ಸಾಹ, ಇಚ್ಛಾಶಕ್ತಿಗಳಿಂದಾಗಿ, ನಿರಂತರವಾಗಿ ಪುಸ್ತಕಗಳ ಜೊತೆಯಲ್ಲಿನ ಒಡನಾಟ, ಅವನನ್ನು ಸುಸಂಸ್ಕೃತನಾಗಿ, ವಿದ್ಯಾವಂತನನ್ನಾಗಿ ರೂಪಿಸಿತು. ಮನೆಯಲ್ಲಿಯೇ ಒಂದು ಪುಟ್ಟ ಗ್ರಂಥಾಲಯವನ್ನೂ ಸ್ಥಾಪಿಸಿದ. ಆರ್ಥಿಕ ಮುಗ್ಗಟ್ಟಿನಿಂದ ಬದುಕುವುದೇ ಸಮಸ್ಯೆಯಾಗಿದ್ದಾಗಲೂ ಅವನ ಪ್ರತಿಭೆ ಅದ್ಭುತವಾಗಿತ್ತು. ಅವನು ರೂಢಿಸಿಕೊಂಡಿದ್ದ ಸಾಹಿತ್ಯಾಸಕ್ತಿ, ಅವನನ್ನು ನೊಬೆಲ್ ಪುರಸ್ಕಾರ ಪಡೆಯುವ ಎತ್ತರಕ್ಕೆ ಬೆಳೆಸಿದ್ದು. ನಿಜವಾಗಿಯೂ ಒಂದು ಅದ್ಭುತ ಪವಾಡವೇ ಆಗಿತ್ತು.

ಸರಮಾಗೋನ ಬಾಲ್ಯ, ಅಭಾವ, ಸಂಕಷ್ಟಗಳು, ತೀರಾ ಬಡತನದ ನಡುವೆ ಕಳೆಯಿತು. ೧೬ನೇ ನವೆಂಬರ್, ೧೯೨೨ರಲ್ಲಿ ಪೋರ್ಚುಗಲ್ಲಿನ ಅಲೆಮಾಂಡೋ ನದಿಯಿಂದ ನೂರು ಕಿಲೋಮೀಟರ್ ದೂರದಲ್ಲಿದ್ದ ಅಜಿನ್‌ಹಾಗಾ ಗ್ರಾಮವೊಂದರಲ್ಲಿ ಜನಿಸಿದ. ತಂದೆ ಜೋಸ್ ಡಿ ಡಿಸೋಜ ಮತ್ತು ತಾಯಿ ಮಾರಿಯಾ ಡಿ ಪಿಯದಾದೆ, ಇಬ್ಬರೂ ಹೊಲಗದ್ದೆಯಲ್ಲಿ ದುಡಿಯುತ್ತಿದ್ದರು. ೭ನೇ ವಯಸ್ಸಿನಲ್ಲಿ ಸರಮಾಗೋ ಶಾಲೆ ಸೇರಿದ ೧೯೨೪ರಲ್ಲಿ, ವ್ಯವಸಾಯವನ್ನು ಬಿಟ್ಟು ಲಿಸ್ಬೆನ್‌ನಲ್ಲಿ ನೆಲೆಸಿದ. ಕೆಲ ಸಮಯದ ನಂತರ, ಅವರ ಮೇಲೆ ಕಷ್ಟಗಳ ಪರ್ವತವೇ ಬಿತ್ತು. ಜೋಸೆ ಸರಮಾಗೋನ ಅಣ್ಣ ಫ್ರಾನ್ಸಿಸ್ಕೋ ತೀರಿಕೊಂಡ.

ಬಾಲ್ಯದಲ್ಲಿಯೇ ಅಜ್ಜಿಯ ಆಶ್ರಯದಲ್ಲಿ, ಅತ್ಯಲ್ಪ ಆದಾಯದಿಂದ ಜೀವನ ನಡೆಸಬೇಕಾಗಿ ಬಂತು. ಅಜ್ಜನ ಆಸ್ತಿಯೆಂದರೆ, ಒಂದರ್ಧ ಡಜನ್ ಹಂದಿಗಳಾಗಿದ್ದವು. ಸರಮಾಗೋ ಅವುಗಳ ಒಡನಾಟದಲ್ಲಿ ಬೆಳೆದ. ಚಳಿಗಾಲದ ಚಳಿಯನ್ನು ಹತ್ತಿಕ್ಕಿಕೊಳ್ಳಲು ಹಂದಿ ಮರಿಗಳನ್ನು ಪಕ್ಕದಲ್ಲಿ ಮಲಗಿಸಿಕೊಳ್ಳುತ್ತಿದ್ದರು. ಅಜ್ಜ-ಅಜ್ಜಿಯರ ಜೀವನ ವಿಧಾನ, ಕಷ್ಟಕಾಲದಲ್ಲಿ ಜೀವನ ಹೇಗೆ ಮಿತವಾಗಿ ನಡೆಸಬೇಕೆಂಬುದನ್ನು ಅವರಿಂದಲೇ ಕಲಿತ. ಅಜ್ಜ ವಿದ್ಯಾವಂತನಲ್ಲದಿದ್ದರೂ ಬುದ್ಧಿವಂತನಾಗಿದ್ದ. ಅಜ್ಜ-ಅಜ್ಜಿಯರು ಕೇಳಿಸುತ್ತಿದ್ದ ಕಥೆಗಳು, ಮುಂದೆ ಸರಮಾಗೋ ಸಾಹಿತ್ಯಕ್ಕೆ ಪ್ರೇರಣೆಯಾಯಿತು. ಅಜ್ಜ ತೀರಿಕೊಂಡ ಮೇಲೆ, ಅಜ್ಜಿಯೇ ಅವನಿಗೆ ಸರ್ವಸ್ವವಾಗಿದ್ದಳು. ಪ್ರಕೃತಿಯ ಪರಿಸರದಲ್ಲಿ ಜೀವಿಸುತ್ತಾ, ಅದರಿಂದ ಅನೇಕ ಮೌಲಿಕ ವಿಚಾರಗಳನ್ನು ಕಲಿತರು. ಹಾಗೆಯೇ ಅನಿವರ‍್ಯವಾದ ವಿದ್ಯಾಭ್ಯಾಸವನ್ನೂ ಸಾಧಿಸಿಕೊಂಡರು. ಕೇವಲ ಪುಸ್ತಕಗಳು ಮಾತ್ರವೇ ಅವರ ಬೌದ್ಧಿಕತೆಯ ಬೆಳವಣಿಗೆಗೆ ಕಾರಣವಾಗಲಿಲ್ಲ. ಸ್ವಚಿಂತನ ಮಂಥನಗಳು ಬೌದ್ಧಿಕ ತೀಕ್ಷ÷್ಣತೆಗೆ ಅನುವಾದವು.

vijaya
ಡಾ.ವಿಜಯಾ ಸುಬ್ಬರಾಜ್

೧೯೬೯ರಲ್ಲಿ, ನಿಷೇಧಿಸಲಾಗಿದ್ದ ಕಮ್ಯುನಿಸ್ಟ್ ಪಾರ್ಟಿಯ ಸದಸ್ಯತ್ವವನ್ನು ಸ್ವೀಕರಿಸಿದ ಮತ್ತು ಕಟ್ಟಕಡೆಯ ತನಕ ಅದರ ಪ್ರಮುಖ ಸಲಹಾಕಾರನೂ, ಆಲೋಚಕನೂ ಆಗಿದ್ದ. ಪಾರ್ಟಿಯ ನಿಷ್ಠಾವಂತ ಸದಸ್ಯನಾಗಿದ್ದು, ಜನಪರಧ್ವನಿಯಾಗಿ ಕೆಲಸ ಮಾಡಿದ. ಕಮ್ಯುನಿಸ್ಟ್ ಸಿದ್ಧಾಂತಗಳು, ಅವನ ಆಲೋಚನೆಗಳಿಗೆ ಸಮಾನವಾಗಿತ್ತಾಗಿ, ಅದರ ಬಗ್ಗೆ ಅತ್ಯಂತ ವಿಶ್ವಾಸ ಮತ್ತು ಬದ್ಧತೆಗಳನ್ನು ಇರಿಸಿಕೊಂಡಿದ್ದ. ಹಸಿವು, ಯುದ್ಧ, ಶೋಷಣೆಗಳ ವಿರುದ್ಧ, ಪ್ರತಿಭಟನಾತ್ಮಕ ನಿಲುವನ್ನು ತಳೆದಿದ್ದ. ಆದ್ದರಿಂದ ಅವನನ್ನು ನಿಷ್ಠುರ ಕಮ್ಯುನಿಸ್ಟ್‌ ವಾದಿಯೆಂದು, ಧರ್ಮ ವಿರೋಧಿಯೆಂದೂ ಜನ ಗುರುತಿಸಿದ್ದರು.

೧೯೪೪ರಲ್ಲಿ ಮದುವೆಯಾದಾಗ, ಸರಮಾಗೋ ಅಡ್ಮಿನಿಸ್ಟ್ರೇಟಿವ್ ಸರ್ವೀಸ್‌ನಲ್ಲಿದ್ದರೆ. ಹೆಂಡತಿ ರೈಲ್ವೆ ಕಂಪನಿಯೊAದರಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ ಮುಂದೆ ಅತ್ಯಂತ ಖ್ಯಾತಿವೆತ್ತಿ ಶಿಲ್ಪಕಾರಳೆಂದು ಗುರುತಿಸಿಕೊಂಡಳು. ಆದರೆ ಅತ್ಯಂತ ದುರಂತದ ಸಂಗತಿಯೆAದರೆ, ಮದುವೆಯಾದ ಮೂರು ವರ್ಷಗಳಲ್ಲೇ, ಹೆರಿಗೆಯಾದ ಸಮಯದಲ್ಲಿಯೇ ತೀರಿಕೊಂಡಳು. ೧೯೮೬ರಲ್ಲಿ ಸ್ಪಾನಿಷ್ ಪತ್ರಕರ್ತೆಯಾದ ಪಿಲಾರ್ ಡೆಲ್‌ರಿಯೋ ಎಂಬಾಕೆಯನ್ನು ಮದುವೆಯಾದ. ಮುಂದೆ ಇವಳು, ಗಂಡನ ಸಾಹಿತ್ಯ ಕೃತಿಗಳ ಅನುವಾದಕಿಯೂ ಆದಳು. ಸಾಹಿತ್ಯದ ಕಡೆಗೆ ಹೊರಳುವುದಕ್ಕೆ ಮೊದಲು ಸಣ್ಣ ಸಣ್ಣ ಕೆಲಸಗಳನ್ನು ಮಾಡಿ ಹಣ ಸಂಪಾದಿಸುತ್ತಿದ್ದ. ಅಕಾಡೆಮಿಕ್ ವಿದ್ಯಾಭ್ಯಾಸವನ್ನು ಪೂರೈಸಲಾಗದೆ, ಮೆಕ್ಯಾನಿಕ್ ತರಬೇತಿಯನ್ನು ಪಡೆದು, ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ. ತನ್ನ ಐವತ್ತನೆ ವಯಸ್ಸಿನಲ್ಲಿ ಸಾಹಿತ್ಯದ ಕಡೆ ಮುಖ ಮಾಡಿದ. ಮತ್ತು ಅವನಲ್ಲಿದ್ದ ಹುಟ್ಟು ಪ್ರತಿಭೆಯಿಂದಾಗಿ, ಸಾಕಷ್ಟು ಸಾಧನೆ ಮತ್ತು ಸಫಲತೆಗಳನ್ನು ಗಳಿಸಿದ. ಅರವತ್ತನೆ ವಯಸ್ಸಿನಲ್ಲಿ ಎರಡು ಕಾದಂಬರಿಗಳನ್ನು ಬರೆದನಾದರೂ ಅವನಿಗೆ ಯಶಸ್ಸು ಸಿಗಲಿಲ್ಲ.

ಇದನ್ನೂ ಓದಿ: Sunday Read | ಹೊಸ ಪುಸ್ತಕ | ಚಲಂನ ಪ್ರಣಯ ಚರಿತ್ರೆ ಗಿಡಗಳ ಕೆಳಗೆ

ಆದರೆ ನಾಲ್ಕನೇ ಕಾದಂಬರಿಯಾದ ‘ಮೆಮೋರಿಯಲ್ ಆಫ್ ದಿ ಕನ್ರ‍್ಟರ್’ಗೆ ಸಾಕಷ್ಟು ಮಾನ್ಯತೆ ದೊರೆಯಿತು. ಇದರ ವಸ್ತು ೧೮ನೇ ಶತಮಾನದಲ್ಲಿ ನಡೆದ ‘ಇನ್ಕ್ವಿಸಿಷನ್’ ಕುರಿತಾಗಿದೆ. ಅತೀಂದ್ರಿಯ ದೃಷ್ಟಿಯಿಳ್ಳ ಅಂಗವಿಕಲ ದಂಪತಿಗಳನ್ನು ಕುರಿತ ಕಥೆಯಾಗಿದೆ. ನಂತರ ೧೯೯೦ರಲ್ಲಿ ‘ಬಾಲ್ಟಸಾರ್ ಮತ್ತು ಬ್ಲಿಮುಂಡಾ’ ಎಂಬ ಕಾದಂಬರಿ ರಚಿಸಿದ. ಈ ಕಾದಂಬರಿ ‘ಅಪೆರಾ’ ಆಗಿ ರೂಪಾಂತರಗೊಂಡು ಬಹಳ ಮೆಚ್ಚಿಗೆ ಪಡೆಯಿತು. ಇದರ ನಂತರ ಈ ಲೇಖಕ ಬೇರೆಲ್ಲ ಚಟುವಟಿಕೆಗಳನ್ನು ಬದಿಗಿಟ್ಟು ಪೂರ್ತಿಯಾಗಿ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡು, ಕಾದಂಬರಿಗಳು, ನಾಟಕಗಳು, ಲೇಖನಗಳು, ಸ್ಮೃತಿ ಚಿತ್ರಗಳು ಜೀವನ ಚರಿತ್ರೆಗಳು ಇತ್ಯಾದಿಯಾಗಿ ವೈವಿಧ್ಯಮಯ ಸಾಹಿತ್ಯ ಕೃತಿಗಳನ್ನು ರಚಿಸಿ ವಿಶ್ವಖ್ಯಾತಿಯ ಎತ್ತರಕ್ಕೆ ಬೆಳೆದ. ಇವನ ಕೃತಿಗಳಲ್ಲಿನ ವಿಶಿಷ್ಟ ಶೈಲಿ, ಇಡೀ ಯೂರೋಪಿನಲ್ಲಿ ಮಹತ್ವಪೂರ್ಣ ಲೇಖಕನಾಗಿ ಗುರುತಿಸಿಕೊಳ್ಳುವಂತೆ ಮಾಡಿತು.

ಎಂದೂ ಎಲ್ಲಿಯೂ ಕಂಡೂ ಕೇಳಿಯೂ ಅರಿಯದ ಬಿಳಿ ಕುರುಡು ಸೋಂಕಿನ ಕಥೆಯನ್ನು ಕಲ್ಪನೆಯ ಹಿನ್ನೆಲೆಯೊಂದಿಗೆ ಹೆಣೆದು ಅದನ್ನೊಂದು ರೂಪಕವಾಗಿಸಿ, ಅದ್ಭುತವಾದ, ಭೀಭತ್ಸನಾದ, ಭಯಾನಕವಾದ ಸನ್ನಿವೇಶಗಳೊಂದಿಗೆ, ವಿಶಿಷ್ಟವಾಗಿಯೂ ವಿಭಿನ್ನವಾಗಿಯೂ ಕಾಣಿಸುವುದರ ಜೊತೆಗೆ, ಅದನ್ನೊಂದು ದಾರ್ಶನಿಕ ನೆಲೆಗೆ ಕೊಂಡೊಯ್ದಿದ್ದಾನೆ. ಮೊದಲೇ ಪ್ರಸ್ತಾಪಿಸಿದಂತೆ, ಕಥೆ ಕಲ್ಪನೆಯಿಂದ ಹುಟ್ಟುವುದಾದರೂ, ವಾಸ್ತವಿಕತೆಯ ಸನ್ನಿವೇಶಗಳು, ಸಂವೇದನೆಗಳು, ಭಾವನೆಗಳು ವಿಸ್ತೃತವಾದ ಹರವಿನಲ್ಲಿ ಕಾಣಿಸಿಕೊಳ್ಳುತ್ತವೆ. ಇಲ್ಲಿ ಬರುವ ಪಾತ್ರಗಳಿಗೆ, ಪ್ರದೇಶಗಳಿಗೆ ಹೆಸರಿಲ್ಲ. ಇಲ್ಲಿನ ಕಥೆಯಲ್ಲಿ, ಒಂದು ಅನಾಮಧೇಯ ನಗರದಲ್ಲಿ ದಿಢೀರನೆ ಬಿಳಿ ಕುರುಡಿನ ಸೋಂಕು ಹರಡಿ, ಇಡೀ ನಗರದ ಪ್ರಜೆಗಳ ಬದುಕು. ಸಮಾಜ, ಸರಕಾರ, ಆರ್ಥಿಕತೆ – ಹೀಗೆ ಎಲ್ಲ ರಂಗಗಳಲ್ಲಿ ಅವ್ಯವಸ್ಥೆ, ಅರಾಜಕತೆ ತಾಂಡವವಾಡಿ, ಎಲ್ಲರ ಬದುಕಿನಲ್ಲಿ ಸಂಭವಿಸುವ ದುರಂತ, ಸಾವು ನೋವುಗಳು, ಅನ್ನಕ್ಕಾಗಿ, ವಸತಿಗಾಗಿ, ಸೃಷ್ಟಿಯಾಗುವ ಹಾಹಾಕಾರ, ಬಡಪಾಯಿ ಕುರುಡರ ಮೇಲೆ ನಡೆಯುವ ದೌರ್ಜನ್ಯ. ದಬ್ಬಾಳಿಕೆ, ಸುಲಿಗೆ, ಅತ್ಯಾಚಾರ, ಹಿಂಸೆ ಮುಂತಾದವುಗಳ ಚಿತ್ರಣ ಕರುಳು ಹಿಂಡುತ್ತದೆ. ರಕ್ತ ಹೆಪ್ಪುಗಟ್ಟುತ್ತದೆ.

ಭೌತಿಕವಾಗಿ ಮಾನಸಿಕವಾಗಿ ಯಾತನೆ ಅನುಭವಿಸುವುದು, ಮನುಷ್ಯನಲ್ಲಿನ ಎರಡು ಪ್ರವೃತ್ತಿಗಳಲ್ಲಿ, ಮಾನವ ಪ್ರವೃತ್ತಿ ಅಥವಾ ಮಾನವತ್ವ ಹಿಂದೆ ಸರಿದು ರಾಕ್ಷಸ ಪ್ರವೃತ್ತಿಯ ಲಕ್ಷಣವಾದ ಕ್ರೌರ್ಯ ವಿಜೃಂಭಿಸುತ್ತದೆ. ಇಲ್ಲಿನ ಒಂದು ವ್ಯಂಗ್ಯವೆನ್ನುವಂತೆ, ನಗರದ ಪ್ರಜೆಗಳೆಲ್ಲ ಸೋಂಕಿಗೆ ಒಳಗಾಗಿ, ಕೇವಲ ಒಬ್ಬ ಮಹಿಳೆ ಮಾತ್ರವೇ ಸೋಂಕಿನಿಂದ ಪಾರಾಗುತ್ತಾಳೆ. ಇಡೀ ಕಾದಂಬರಿಯ ನಿರೂಪಕಿ ಇವಳೇ. ಅಲ್ಲದೆ, ಇಂತಹ ವಿಪತ್ತಿನಿಂದಾಗಿ ಉಂಟಾದ ಪರಿಣಾಮಗಳು, ಪ್ರಜೆಗಳ ಬದುಕುಗಳಲ್ಲಿ ಉಂಟಾದ ಸ್ಥಿತ್ಯಂತರಗಳು, ಕುರುಡು ಸೋಂಕಿಗೆ ಒಳಗಾದವರು, ಸೋಂಕಿತರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿ ಇದ್ದವರು ಅನುಭವಿಸುವ, ನರಕಯಾತನೆ ಇತ್ಯಾದಿಗಳಿಗೆಲ್ಲ ಇವಳೇ ಸಾಕ್ಷೀ ಪ್ರಜ್ಞೆಯಾಗಿಯೂ ನಿಲ್ಲುತ್ತಾಳೆ. ಅಂಧತ್ವವೆನ್ನುವುದು, ಕುರುಡು ಸೋಂಕಿನ ರೋಗಿಗಳಿಗೆ ಮಹಾವಿನಾಶಕಾರಿ ಪ್ರಳಯವಾಗಿಯೂ, ಚಂಡಮಾರುತವಾಗಿಯೂ ಪರಿಣಮಿಸಿ, ನಗರಗಳಲ್ಲಿ, ತಮ್ಮ ತಮ್ಮ ಸ್ವಂತ ಮನೆಗಳಲ್ಲಿ ಬದುಕುವುದೂ ಸಾಧ್ಯವಾಗುವುದಿಲ್ಲ. ಮನೆ, ಮಠ ಆಸ್ತಿಪಾಸ್ತಿ, ಆಹಾರ, ತನ್ನದು, ಅವರದು ಎನ್ನುವುದಿಲ್ಲ. ತಡವರಿಸುತ್ತಲೇ ಕುರುಡರು ಗುಂಪು ಗುಂಪುಗಳಾಗಿ ಓಡಾಡುತ್ತಾರೆ. ಖಾಲಿ ಬಿದ್ದ ಮಾಲ್‌ಗಳಲ್ಲಿ, ಅಂಗಡಿಗಳಲ್ಲಿ, ಕೇಳುವವರಿಲ್ಲದೆ ಇದ್ದುದರಿಂದ, ಅಲ್ಲಿ ಧಾಳಿ ಮಾಡಿ, ಅಲ್ಲಿನ ಆಹಾರ ಪದಾರ್ಥಗಳನ್ನು ಲೂಟಿ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಎಲ್ಲೆಂದರಲ್ಲಿ, ಹೇಗೆಂದರೆ ಹಾಗೆ, ಕಂಡ ಕಂಡ ಕಡೆ ಮಲಗುತ್ತಾರೆ.

ಇದನ್ನೂ ಓದಿ: Sunday Read | ಹೊಸ ಪುಸ್ತಕ: ದೇವರಿಲ್ಲದ ವಾಡೆಯಲ್ಲಿ ಭೂತಮಾತೆಯ ಸ್ವಗತ

ಈ ಸ್ಥಿತಿಯಲ್ಲಿ ಜಾತಿ, ಮತ, ಧರ್ಮ ಅಧಿಕಾರ, ಅಂತಸ್ತು ಇತ್ಯಾದಿ ಯಾವುದೇ ರೀತಿಯ ತಾರತಮ್ಯಗಳಿಲ್ಲ. ಬದುಕುವುದು. ಅಸ್ತಿತ್ವವನ್ನು ಉಳಿಸಿಕೊಳ್ಳುವುದು, ಅಷ್ಟೇ ಮುಖ್ಯ. ಮನುಷ್ಯ ಸಂಬಂಧಗಳ ಚಹರೆಗಳೇ ಬದಲಾಗಿ ಬಿಡುತ್ತವೆ. ಕೇವಲ ಪಂಚೇಂದ್ರಿಯಗಳಲ್ಲಿ ಒಂದಾದ ಕಣ್ಣು ಮಾತ್ರವೇ ಊನವಾದಾಗ, ಮನುಷ್ಯಜಾತಿಗಳ ಅಸ್ತಿತ್ವವೇ ಒಂದು ಸವಾಲಾಗಿ ಬಿಡುತ್ತದೆ. ಪರಸ್ಪರರ ನಡುವೆ ದಯೆ, ದಾಕ್ಷಿಣ್ಯ, ಸೌಹಾರ್ದತೆಗಳೇ ಸತ್ತು ಹೋಗುತ್ತವೆ. ಕ್ವಾರಂಟೈನ್‌ನಲ್ಲಿನ ಕುರುಡು ರೋಗಿಗಳ ಮೇಲ್ವಿಚಾರಣೆಗೆಂದು ನೇಮಕಗೊಂಡ ಮಿಲ್ಟ್ರೀ ಸಿಬ್ಬಂದಿಯವರೂ ಕುರುಡಾಗಿದ್ದರೂ, ಒಂದಿಷ್ಟೂ ಪಾಪ ಪ್ರಜ್ಞೆಯಿಲ್ಲದ ಆ ಗಂಡಸರು ಮಹಿಳೆಯರ ಮೇಲೆ ನಡೆಸುವ ಲೈಂಗಿಕ ದೌರ್ಜನ್ಯ ಅತ್ಯಂತ ಭಯಾನಕವೂ ಭೀಭತ್ಸವೂ ಆಗಿರುವುದು ಒಂದು ನೆಲೆಯಾದರೆ, ಊಟದ ವ್ಯವಸ್ಥೆ ಮುಫತ್ತಾಗಿ ಮಾಡಬೇಕಾಗಿದ್ದರೂ, ವಾರ್ಡುಗಳಲ್ಲಿ, ಒಳರೋಗಿಗಳಾಗಿ ಇರುವವರಿಂದ, ಅವರು ಉಳಿಸಿಕೊಂಡಿರುವ ಹಣವನ್ನು, ವಸ್ತುಗಳನ್ನೂ, ದೋಚಿಕೊಂಡು, ಊಟದ ಲೆಕ್ಕಕ್ಕೆ ಹೊಂದಿಸಿಕೊಳ್ಳುವ ಅವರು ರಾಕ್ಷಸರಿಗಿಂತಲೂ ಕೀಳಾಗಿ ವರ್ತಿಸುವುದನ್ನು ನೋಡಿದಾಗ, ಮಾನವ ವಿಕಾಸದ ಅವಧಿಯಲ್ಲಿನ ಆದಿಮಾನವರ ಬದುಕನ್ನು ನೆನಪಿಸುತ್ತದೆ. ನಾಗರಿಕತೆ, ಸಭ್ಯತೆ, ಸೌಜನ್ಯಗಳೆಲ್ಲವೂ ಈ ಕುರುಡುತನದ ವಿಪತ್ತಿನ ಸಂದರ್ಭದಲ್ಲಿ ಕಾಣಿಸಿಕೊಂಡು, ಮಾನವೀಯತೆ, ಮನುಷ್ಯತ್ವಗಳನ್ನು ಮರುವಿವೇಚನೆಗೆ ಒಳಪಡಿಸಬೇಕಾಗುತ್ತದೆ. ಇಂಥ ಭಯಾನಕ ಪರಿಸರದಲ್ಲಿ, ಅವರನ್ನು ಮನುಷ್ಯವರ್ಗದಿಂದ ದೂರವಿರಿಸಲೇಬೇಕೆನಿಸುತ್ತದೆ. ಕರುಳ ಸಂಬಂಧಗಳೂ ಕತ್ತರಿಸಿ ಹೋಗುತ್ತವೆ. ಕ್ವಾರಂಟೈನ್‌ಗಾಗಿ ಬಂದ ಮೊದಲ ವಾರ್ಡಿನ ಕುರುಡರ ಜೊತೆಗಿನ ಹುಡುಗ, ತನ್ನ ಅಮ್ಮನಿಂದಲೇ ದೂರವಾಗಿ ಬಿಡುತ್ತಾನೆ. ಮೊದ ಮೊದಲು, ಅಮ್ಮನಿಗಾಗಿ ಅತ್ತವನು, ಕಡೆ ಕಡೆಗೆ ಅಮ್ಮನ ನೆನಪೂ ಇಲ್ಲದಂತಿರುತ್ತಾನೆ.

ಮಾನವೀಯತೆಯೆನ್ನುವುದೇ ಅಳಿಸಿ ಹೋಗುತ್ತದೆ. ಕುರುಡರನ್ನು ಕ್ವಾರಂಟೈನ್ ಮಾಡಿ ನೋಡಿಕೊಳ್ಳಬೇಕಾದ ಸರಕಾರವೂ ಅಸಹಾಯಕ ವಾಗುತ್ತದೆ. ಕೇವಲ ತನ್ನ ಘೋಷಣೆಗಳನ್ನು ಕೇಳಿಸುವುದಕ್ಕಷ್ಟೇ ಸೀಮಿತ ವಾಗುತ್ತದೆ. ಹುಚ್ಚರ ಆಸ್ಪತ್ರೆಯನ್ನೇ ಕುರುಡರ ಆಶ್ರಯಧಾಮವನ್ನಾಗಿ ರೂಪಾಂತರಿಸಲಾಗುತ್ತದೆಯೇ ಹೊರತಾಗಿ, ನೀರಿನ, ಆಹಾರದ ವ್ಯವಸ್ಥೆಯಾಗಲೀ, ನೈರ್ಮಲ್ಯದ ವ್ಯವಸ್ಥೆಯಾಗಲೀ ಇಲ್ಲದೆ ಕೇವಲ ಕೊಳಕು, ಹೇಸಿಗೆಗಳಿಂದ ತುಂಬಿದ ನರಕ ಸದೃಶ ಪ್ರದೇಶದಲ್ಲಿ, ಪ್ರಾಣಿಗಳಂತೆ ಇರುವ ಪರಿಸರ ನಿರ್ಮಿಸುತ್ತದೆ. ಸರಕಾರ ತನ್ನ ನಿಲುವುಗಳನ್ನು ಪ್ರತಿಬಾರಿಯೂ ಬದಲಾಯಿಸುತ್ತಾ, ಸುಳ್ಳು ಭರವಸೆಗಳನ್ನು ನೀಡುತ್ತಾ, ಮೋಸ ಮಾಡುತ್ತದೆ. ಬ್ಯಾಂಕುಗಳೆಲ್ಲ ಲೂಟಿಯಾಗಿ, ದಿವಾಳಿತನವೇ ಎದ್ದೆದ್ದು ಕಾಣಿಸುತ್ತದೆ.

ಕೇವಲ ಕುರುಡತನ ಮಾತ್ರದಿಂದಲೇ, ಜಗತ್ತೇ ನರಕವಾಗಿ ರೂಪಾಂತರವಾಗಿ, ಕುರುಡರು, ಸಮಾಜದಲ್ಲಿ, ಪ್ರಾಣಿಗಳಿಗಿಂತ ಹೀನ ಬದುಕನ್ನು ಬದುಕಬೇಕಾಗುತ್ತದೆ. ಕಾಲ್ಪನಿಕ ಕುರುಡತನ ಸೃಷ್ಟಿಸಿದ ಈ ಅವಾಂತರಗಳು, ಮನುಷ್ಯ ಸಮಾಜದ ವಿಕೃತತೆ, ಮನುಷ್ಯನ ಕ್ರೌರ್ಯ, ಬದುಕಿನಲ್ಲಿನ ಹೇಸಿಗೆತನಗಳನ್ನು ನೋಡಿದವರಿಗೆ, ಒಂದು ವೇಳೆ ಈ ಸೋಂಕು ನಿಜವೇ ಆದರೆ, ಪರಿಸ್ಥಿತಿಯನ್ನು ಊಹಿಸಿಕೊಳ್ಳಲೂ ಧೈರ್ಯ ಸಾಲುವುದಿಲ್ಲ.

ಇಂತಹ ನಿರಾಶಾದಾಯಕವಾದ ಮತ್ತು ಮನುಷ್ಯನ ಘನತೆ, ಗೌರವಗಳಿಗೆ ಕಾಸಿನ ಬೆಲೆಯೂ ಇಲ್ಲದಂತಾಗಿಸಿದ ಈ ಕಾದಂಬರಿಯ ವಸ್ತು, ಕ್ರಿಯೆ, ದುರಂತ ಸನ್ನಿವೇಶಗಳು – ಇವುಗಳ ನಡುವೆಯೂ ಒಂದು ಭರವಸೆಯ ಆಶಾಕಿರಣ, ಒಂದು ಗುಂಪಿನ ಕುರುಡು ವ್ಯಕ್ತಿಗಳ, ನಡೆ, ನುಡಿ, ಆತ್ಮೀಯತೆ, ಸ್ನೇಹ, ಪರೋಪಕಾರಿ ಮನೋಭಾವ, ಸಂಘಟಿತವಾಗಿ ಬದುಕುವ ಪ್ರಯತ್ನಗಳು, ಡಾಕ್ಟರನ ಹೆಂಡತಿ, ಕಪ್ಪು ಕನ್ನಡಕದ ಹುಡುಗಿ, ಇವರ ವರ್ತನೆಯಲ್ಲಿ, ಎದ್ದು ಕಾಣುತ್ತದೆ. ಡಾಕ್ಟರನ ಹೆಂಡತಿ, ಗುಂಪಿನ ಸಂಘಟಿತ ಬದುಕನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಾಳೆ. ಕಪ್ಪು ಕನ್ನಡಕದ ಹುಡುಗಿ, ತನ್ನ ಪಾಲಿನ ಆಹಾರವನ್ನೂ ಹುಡುಗನಿಗೆ ನೀಡುತ್ತಾಳೆ. ಅಲ್ಲದೆ, ಪ್ರೀತಿಗಾಗಿ, ಗುಂಪನ್ನು ತೊರೆಯಲು ಮುಂದಾಗುತ್ತಾಳೆ. ಡಾಕ್ಟರನ ಹೆಂಡತಿಯಂತೂ ತನ್ನ ಗುಂಪಿನ ಪ್ರತಿಯೊಬ್ಬರ ಅಗತ್ಯಗಳನ್ನೂ ಪೂರೈಸುತ್ತಾಳೆ. ತನ್ನ ಮನೆಯಲ್ಲಿಯೇ ಇರಿಸಿಕೊಂಡು, ತಾನೇ ಸ್ವತಃ ಆಹಾರವನ್ನು ಹುಡುಕಿಕೊಂಡು ಹೋಗಿ ಎಷ್ಟೋ ಅಪಾಯಗಳನ್ನು ಎದುರಿಸುತ್ತಾ, ಆಹಾರ ತಂದು ಗುಂಪಿನ ಸದಸ್ಯರೆಲ್ಲರ ಹೊಟ್ಟೆ ತುಂಬಿಸುತ್ತಾಳೆ. ಅವರಿಗೆ ಬಟ್ಟೆ ಬರೆ ಒದಗಿಸುತ್ತಾಳೆ. ಇನ್ನೂ ಅವಳಲ್ಲಿ ಮನುಷ್ಯತ್ವ ಬದುಕಿದೆ ಎನ್ನುವುದು ಸತ್ಯವೇ ಆದರೂ, ಅವಳಿಗೆ ಕಣ್ಣಿದೆ, ದೃಷ್ಟಿ ಇದೆ. ಆದರೆ ದೃಷ್ಟಿ ಮಾತ್ರದಿಂದಲೇ ಮಾನವೀಯ ಸಂವೇದನೆಗಳು, ಭಾವನೆಗಳು ಸಾಧ್ಯವಾಗುವುದಿಲ್ಲ ಎನ್ನುವ ಮಾತೂ ಸತ್ಯ. ಈ ಕಾದಂಬರಿಯ ವಸ್ತು, ಸ್ವರೂಪ, ರಚನೆ, ಸಂವಿಧಾನ ಆಶಯ ಇತ್ಯಾದಿಗಳನ್ನು ಅರ್ಥಮಾಡಿಕೊಂಡು ಅನುವಾದಿಸುವುದೂ ಓದುವುದೂ – ಎರಡೂ ಬಹುದೊಡ್ಡ ಸವಾಲು. ಇಲ್ಲಿಯ ವರೆಗಿನ ನನ್ನ ಅನುವಾದಗಳು ಸಾಕಷ್ಟು ಇದ್ದು, ಒಳ್ಳೆಯ ಪ್ರತಿಕ್ರಿಯೆಗಳಿಸಿದೆಯಾದರೂ. ಈ ಕಾದಂಬರಿಯ ಸವಾಲು, ಯಾವ ರೀತಿಯ ಪ್ರತಿಕ್ರಿಯೆಗೆ ಒಳಗಾಗುವುದೋ ಕಾದು ನೋಡಬೇಕು, ಎನಿಸುತ್ತಿದೆ.

ಕೃತಿ: ಕುರುಡು
ಮೂಲ: ಜೋಸೆ ಸೆರಮಾಗೋ
ಅನುವಾದ: ಡಾ.ವಿಜಯಾ ಸುಬ್ಬರಾಜ್‌
ಪ್ರಕಾಶನ: ಸೃಷ್ಟಿ ಪಬ್ಲಿಕೇಶನ್ಸ್‌
ಪುಟ: 326, ಬೆಲೆ: 325

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Kaladarpana-Art Reflects: ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.

VISTARANEWS.COM


on

Kaladarpana-Art Reflects
Koo

ಬೆಂಗಳೂರು: ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ (Kaladarpana-Art Reflects) ವತಿಯಿಂದ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ನಗರದ ನಾಗರಬಾವಿ 2ನೇ ಹಂತದ ಎನ್‌ಜಿಇಎಫ್‌ ಲೇಔಟ್‌ನ ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಭಾನುವಾರ (ಮೇ 5ರಂದು) ಬೆಳಗ್ಗೆ 8.30ಕ್ಕೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 9ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಅಂತರಾಷ್ಟ್ರೀಯ ಖ್ಯಾತಿಯ ತಬಲ ವಾದಕ ಪಂಡಿತ್ ಡಾ. ಸತೀಶ್ ಹಂಪಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮತ್ತು ಮಾರುತಿ ಮೆಡಿಕಲ್ಸ್ ಮಾಲೀಕರು ಮಹೇಂದ್ರ ಮುಣೋತ್ ಜೈನ್ ಅವರು ಭಾಗವಹಿಸಲಿದ್ದಾರೆ. ಈ ಮೂವರು ಗಣ್ಯರು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಲಾದರ್ಪಣ ಪ್ರಶಸ್ತಿ ಪುರಸ್ಕೃತರು

  • ಗೋ.ನಾ. ಸ್ವಾಮಿ, ಅಂತಾರಾಷ್ಟ್ರೀಯ ಖ್ಯಾತಿಯ ಜನಪದ ಗಾಯಕರು
  • ವಿದುಷಿ ಅನಸೂಯ ದ್ವಾರಕನಾಥ, ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು

ಇದನ್ನೂ ಓದಿ | Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್‌ನ ಪ್ರಾಧ್ಯಾಪಕ ಪ್ರೊ. ವಿ.ಎಸ್. ನಾಯಕ ಬಳಕೂರು, ಎಸ್.ಎಸ್.ವಿ.ಎಸ್.ಪಿ.ಎಸ್. ಶಾಲೆ ಪ್ರಾಂಶುಪಾಲೆ ಲತಾ ಎಸ್. ಅವರು ಆಗಮಿಸಲಿದ್ದಾರೆ. ಕಲಾ ದರ್ಪಣ- ಆರ್ಟ್‌ ರಿಫ್ಲೆಕ್ಟ್ಸ್‌ ಸಂಸ್ಥೆಯ ಹೇಮಾ ವಿನಾಯಕ್‌ ಪಾಟೀಲ್‌ ಹಾಗೂ ವಿನಾಯಕ್‌ ಪಾಟೀಲ್‌ ಅವರು ಉಪಸ್ಥಿತರಿರಲಿದ್ದಾರೆ. ಖ್ಯಾತ ನಿರೂಪಕಿ ಭವಾನಿ ಲೋಕೇಶ್‌ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading
Advertisement
E-Pass Mandatory
ಪ್ರವಾಸ17 mins ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Davanagere lok sabha constituency bjp candidate gayatri siddeshwar election campaign in mayakonda
ದಾವಣಗೆರೆ21 mins ago

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Hassan Pen Drive case Prajwal and Revanna arrested if they fail to appear before SIT
ಕ್ರೈಂ30 mins ago

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Medical Negligence
ಕೊಪ್ಪಳ32 mins ago

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Maria alam Khan
ರಾಜಕೀಯ37 mins ago

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

GST Collection
ದೇಶ38 mins ago

GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

Covishield vaccine india
ಪ್ರಮುಖ ಸುದ್ದಿ42 mins ago

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Rupali Ganguly Of Anupamaa Fame Joins BJP
ಕಿರುತೆರೆ50 mins ago

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Movie Release
ಒಟಿಟಿ54 mins ago

Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

Hassan Pen Drive Case POCSO case registered against Prajwal Revanna
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌