Sunday Read: ಹೊಸ ಪುಸ್ತಕ: ಬರಗೂರು ರಾಮಚಂದ್ರಪ್ಪ ಅನುಭವ ಕಥನ: ಕಾಗೆ ಕಾರುಣ್ಯದ ಕಣ್ಣು - Vistara News

ಕಲೆ/ಸಾಹಿತ್ಯ

Sunday Read: ಹೊಸ ಪುಸ್ತಕ: ಬರಗೂರು ರಾಮಚಂದ್ರಪ್ಪ ಅನುಭವ ಕಥನ: ಕಾಗೆ ಕಾರುಣ್ಯದ ಕಣ್ಣು

ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಆಯ್ದ ಅನುಭವಗಳ ಕಥನ ʼಕಾಗೆ ಕಾರುಣ್ಯದ ಕಣ್ಣುʼ ಪ್ರಕಟವಾಗಿದೆ. ಅದರಿಂದ ಆಯ್ದ ಭಾಗ ಇಲ್ಲಿದೆ.

VISTARANEWS.COM


on

baraguru book
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅದೊಂದು ಹೊಲ; ನೀರಾವರಿ ಜಮೀನಲ್ಲ. ಖುಷ್ಕಿ ಬೇಸಾಯದ ಹೊಲ. ಅದರ ಬೇಲಿಯಲ್ಲಿ ಕತ್ತಾಳೆ ಗಿಡಗಳೇ ಜಾಸ್ತಿ; ಜೊತೆಗೆ ಮುಳ್ಳಿನ ಗಿಡಗಳು. ಹೊಲದೊಳಗೆ ಮೂರ್ನಾಲ್ಕು ಜಾಲಿಯ ಮರಗಳು; ಒಂದು ಬೇವಿನ ಮರ. ತೊಗರಿ, ಕಡ್ಲೇಕಾಯಿ ಗಿಡಗಳು ತುಂಬಿದ ಹೊಲದ ಒಂದು ಮರದ ಕೆಳಗೆ – ಬೇವಿನಮರ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ – ಮಗುವೊಂದು ಅಳುತ್ತಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿ ಎದ್ದು ಬಂದು ಮಗುವನ್ನು ಸಂತೈಸಿ ಮತ್ತೆ ಕೆಲಸದಲ್ಲಿ ತೊಡಗುತ್ತಾರೆ.

ಆ ಬೇವಿನ ಮರದ ಕೆಳಗೆ ಅಳುತ್ತಿದ್ದ ಮಗು ಬೇರಾರೂ ಅಲ್ಲ; ನಾನೇ. ಆ ತಾಯಿ ನನ್ನಮ್ಮ ಕೆಂಚಮ್ಮ. ನನ್ನಮ್ಮನೇ ಈ ವಿಷಯವನ್ನು ನಾನು ಬೆಳೆದ ಮೇಲೆ ಹೇಳಿದ್ದುಂಟು. ಬೇವಿನ ಮರದ ಕೆಳಗೆ ಅಳುತ್ತಿದ್ದ ಮಗುವಿಗೆ ಮುಂದೆಯೂ ಅಳು ಅಂಟಿಕೊಂಡು ಬಂದಿತ್ತು. ನನ್ನ ಕೆಲವು ಗೆಳೆಯರು ನನ್ನನ್ನು ಕಿಚಾಯಿಸಿ ಅಳಿಸುತ್ತಿದ್ದರು. ‘ಈಗ ಅಳ್ತೀಯ ನೋಡು ಅಳ್ತೀಯ’ ಎಂದು ಛೇಡಿಸಿ ಕಣ್ಣಲ್ಲಿ ನೀರು ಬರುವವರೆಗೂ ಬಿಡುತ್ತಿರಲಿಲ್ಲ. ಆದರೆ ಆನಂತರ ಅಳುವನ್ನು ಗೆಲ್ಲುವ ಗುರಿಯನ್ನು ಬದುಕು ಕಲಿಸಿತ್ತು. ಚಿಕ್ಕಂದಿನಲ್ಲೇ ಎದಿರೇಟು ನೀಡಿ ಎದೆಯುಬ್ಬಿಸಿ ನಿಲ್ಲುವ ಆತ್ಮವಿಶ್ವಾಸವನ್ನು ಬೆಳೆಸಿಕೊಂಡೆ. ಇಂಥದೊಂದು ಆತ್ಮವಿಶ್ವಾಸವನ್ನು ಬೆಳೆಸಿದವರಲ್ಲಿ ನನ್ನ ಮಾಧ್ಯಮಿಕ ಶಾಲೆಯ (ಈಗಿನ ಹಿರಿಯ ಪ್ರಾಥಮಿಕ ಶಾಲೆ) ಗುರುಗಳಾಗಿದ್ದ ಶ್ರೀ ಟಿ.ವೈ. ನಾಗಭೂಷಣರಾವ್ ಅವರ ಪಾತ್ರ ದೊಡ್ಡದು. ಜೊತೆಗೆ ನನ್ನ ಸಂಕಲ್ಪ ಸಿದ್ಧ ಶಿಕ್ಷಣದ ಬದ್ಧತೆಯೂ ಪ್ರೇರಣೆ ನೀಡಿತ್ತು. ನಾನು ಸಾಮಾಜಿಕ ಹಾಗೂ ಆರ್ಥಿಕವಾಗಿ ಬಲಿಷ್ಠವಲ್ಲದ ಕುಟುಂಬದ ಕೂಸು. ಚೆನ್ನಾಗಿ ಓದುವ ಮೂಲಕವೇ ನಾನು ಗುರುತಿಸಿಕೊಳ್ಳಬೇಕಿತ್ತು. ಚೆನ್ನಾಗಿ ಓದುತ್ತ ತರಗತಿಗೇ ಮೊದಲನೆಯವನಾದಾಗ ಮೂಡಿದ ಹೆಮ್ಮೆ ಮತ್ತು ಆತ್ಮವಿಶ್ವಾಸ ಒಂದು ಕಡೆಯಾದರೆ, ಗುರುಗಳು ನನ್ನ ಶೈಕ್ಷಣಿಕ ಬದ್ಧತೆಯನ್ನು ಗುರುತಿಸಿ, ಮುಂದಡಿ ಯಿಡಲು ನೀಡಿದ ಪೆÇ್ರೀತ್ಸಾಹ, ತುಂಬಿದ ಧೈರ್ಯ ಇನ್ನೊಂದು ಕಡೆ. ಗುರುಗಳು ಹೇಳಿದರು: ‘‘ನೀನು ತರಗತಿಗೇ ಫಸ್ಟ್. ಇನ್ನು ಯಾರೂ ನಿನ್ನನ್ನು ಕಿಚಾಯಿಸೊಲ್ಲ. ನಿನ್ನನ್ನೇ ಕ್ಲಾಸ್ ಮಾನಿಟರ್ ಮಾಡ್ತೇನೆ’’. ಹೌದು, ಅದರಂತೆ ನಾನು ಕ್ಲಾಸ್ ಮಾನಿಟರ್ ಆದೆ.

ಮಾನಿಟರ್ ಎಂದರೆ ಗುರುಗಳ ಗೈರು ಹಾಜರಿಯಲ್ಲಿ ತರಗತಿಯನ್ನು ನಿಯಂತ್ರಿಸ ಬೇಕು. ಯಾರಾದರೂ ಗಲಾಟೆ ಮಾಡುತ್ತಿದ್ದರೆ ಹೆಸರು ಬರೆದು ಗುರುಗಳಿಗೆ ಕೊಡಬೇಕು. ನಾನಂತೂ ಈ ಕೆಲಸವನ್ನು ಚೆನ್ನಾಗಿ ನಿಭಾಯಿಸುತ್ತ ಬಂದೆ. ಒಂದೆರಡು ತಕರಾರನ್ನು ಎದುರಿಸಿದೆ. ಊರಿನ ಒಂದಿಬ್ಬರು ಶ್ರೀಮಂತರ ಮನೆಯವರು ಅವರ ಮಕ್ಕಳ ಹೆಸರು ಬರೆದು ಗುರುಗಳಿಗೆ ಕೊಟ್ಟಿದ್ದಕ್ಕೆ ಆಕ್ಷೇಪಿಸಿದರು. ಆಕ್ಷೇಪದಲ್ಲಿ ಎಚ್ಚರಿಕೆಯ ಧಾಟಿಯೂ ಇತ್ತು. ಆದರೆ ‘ಅದು ನನ್ನ ಡ್ಯೂಟಿ’ ಎಂದು ಧೈರ್ಯವಾಗಿ ಉತ್ತರಿಸಿದ್ದೆ. ನಮ್ಮಮ್ಮನಿಗೆ ಇದು ಗೊತ್ತಾಗಿ ‘‘ಅಂತೋರ್ ವಿರೋಧ ಕಟ್ಕೋಬಾರ್ದು’’ ಎಂದು ಕಿವಿಮಾತು ಹೇಳಿದ್ದುಂಟು. ನಾನು ಮಾತ್ರ ತರಗತಿಯಲ್ಲಿ ನನ್ನ ‘ಡ್ಯೂಟಿ’ ನಿರ್ವಹಿಸುತ್ತ ಬಂದೆ. ಹಾಗೆಂದು ಯಾರಿಗೂ ವೃಥಾ ತೊಂದರೆ ಆಗೋ ಹಾಗೆ ನಡೆದುಕೊಳ್ಳಲಿಲ್ಲ. ಆ ವೇಳೆಗಾಗಲೇ ಗಾಂಧೀಜಿ ಪಾಠದಿಂದ ‘ಸುಳ್ಳು ಹೇಳಬಾರದು’ ಎಂಬುದನ್ನು ರೂಢಿಸಿ ಕೊಂಡಿದ್ದೆ. ತರಗತಿಯ ಸಹಪಾಠಿಗಳ ಸ್ನೇಹವನ್ನು ಕೆಡಿಸಿಕೊಳ್ಳದೆ ‘ಮಾನಿಟರ್’ ಆಗಿದ್ದೆ. ‘‘ನಾನು ಮಾನಿಟರ್’’ ಅನ್ನೋ ಅಹಮ್ಮು ಬರದಂತೆ ನೋಡಿಕೊಂಡಿದ್ದೆ.

ನಮ್ಮ ಬರಗೂರಿನ ಮಾಧ್ಯಮಿಕ ಶಾಲೆಯಲ್ಲಿ ಗುರುಗಳು ಪ್ರತಿ ಶನಿವಾರ ಚರ್ಚಾಕೂಟ, ಭಾಷಣ ಏರ್ಪಡಿಸುತ್ತಿದ್ದರು. ನನಗೋ ಎದ್ದು ನಿಂತು ಮಾತಾಡಲು ಭಯ, ಕಾಲುಗಳು ಗಡಗಡ ನಡುಗುತ್ತಿದ್ದವು. ಅಧ್ಯಾಪಕರ ಒತ್ತಾಯಕ್ಕೆ ಮಣಿದು ಒಂದೆರಡು ಬಾರಿ ಮಾತಾಡಲು ಹೋಗಿ ಅರ್ಧಕ್ಕೇ ನಿಲ್ಲಿಸಿದ್ದೆ. ತರಗತಿಯ ಮಾನಿಟರ್‍ಗೆ ಮಾತು ಹೊರಡದಿದ್ದರೆ ಹೇಗೆ? ಅವಮಾನ ಎನ್ನಿಸಿತು. ಗುರುಗಳಾದ ಟಿ.ವೈ. ನಾಗ ಭೂಷಣರಾವ್ ಅವರು ಪ್ರತ್ಯೇಕ ಕರೆದು ಧೈರ್ಯ ತುಂಬಿದರು. ಮುಂದೊಮ್ಮೆ ಮಾತಾಡುವಾಗ ಮೊದಲೇ ತಾಲೀಮು ಮಾಡಿಕೊಂಡು ಕಣ್ಣುಮುಚ್ಚಿ ಭಾಷಣ ಮಾಡಿದೆ. ಬರಬರುತ್ತ ಮೂರ್ನಾಲ್ಕು ನಿಮಿಷ ಧೈರ್ಯವಾಗಿ ಭಾಷಣ ಮಾಡುತ್ತ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸತೊಡಗಿದೆ.

ಒಮ್ಮೆ ನಮ್ಮ ಮನೆಯಲ್ಲಿ ಹಳೇ ಪೆಟ್ಟಿಗೆಯೊಂದರಲ್ಲಿ ಒಂದು ದೊಡ್ಡ ಪುಸ್ತಕ ಸಿಕ್ಕಿತು. ಅದು ‘ಜೈಮಿನಿ ಭಾರತ’. ಬಹುಶಃ ನನ್ನ ಅಪ್ಪ ತಂದಿಟ್ಟಿರಬೇಕು. ನನ್ನ ಅಪ್ಪ ರಂಗದಾಸಪ್ಪ 8ನೆಯ ತರಗತಿಯವರೆಗೆ ಓದಿದ್ದರು. 8ನೆಯ ತರಗತಿಯನ್ನು ಪೂರೈಸಿದರೆ ‘ಲೋಯರ್ ಸೆಕೆಂಡರಿ ಪಾಸ್’ ಎಂಬ ಹೆಗ್ಗಳಿಕೆ ಇತ್ತು. ಆಗ ಅದು ಪಬ್ಲಿಕ್ ಪರೀಕ್ಷೆಯಂತೆ. ನನ್ನ ಅಪ್ಪನ ಅಣ್ಣಂದಿರು ಅನಕ್ಷರಸ್ಥರು. ಕಿರಿಯ ತಮ್ಮನನ್ನು ಅಕ್ಕರೆಯಿಂದ ಓದಿಸಿದ್ದರು. ನನ್ನ ಅಪ್ಪ ಆನಂತರ ‘ಕೂಲಿ ಮಠದ ಮೇಷ್ಟ್ರು’ ಆಗಿದ್ದರಂತೆ. ‘ಕೂಲಿಮಠ’ ಎಂದರೆ ಕ್ರಮಬದ್ಧ ಶಿಕ್ಷಣದ ಶಾಲೆಯಲ್ಲ. ನಮ್ಮಲ್ಲಿ ಶಾಲೆಯನ್ನೂ ‘ಇಸ್ಕೂಲ್ ಮಠ’ ಎನ್ನುತ್ತಿದ್ದರು. ಆದರೆ ‘ಕೂಲಿ ಮಠ’ ಅನ್ನೋದು ಸರ್ಕಾರದ ಮನ್ನಣೆಯಿಲ್ಲದ ಖಾಸಗಿ ಕಲಿಕೆ. ಕಲಿಯಲು ಆಸಕ್ತಿ ಇದ್ದವರಿಗೆ ಅಕ್ಷರಾಭ್ಯಾಸ ಮಾಡಿಸುವುದು; ಕೆಲವು ಕನ್ನಡ ಪದಗಳನ್ನು ಕಲಿಸುವುದು; ಇತ್ಯಾದಿ. ಮರಳು ಗುಡ್ಡೆ ಮೇಲೆ ಅಕ್ಷರ ಬರೆದು ಹೇಳಿಕೊಡುತ್ತಿದ್ದುದೂ ಉಂಟಂತೆ. ಹೀಗೆ ಕಲಿಸಿದವರಿಗೆ ಮಕ್ಕಳ ಪೆÇೀಷಕರು ಒಂದಷ್ಟು ಹಣ ಕೊಡುತ್ತಿದ್ದರು. ಈ ಹಣವೇ ಕಲಿಸಿದ ಮೇಷ್ಟ್ರಿಗೆ ‘ಕೂಲಿ’. ಕಲಿಸುವ ತಾಣವೇ ಕೂಲಿಮಠ! ಕಲಿಸಿದವರು ಕೂಲಿಮಠದ ಮೇಷ್ಟ್ರು!

ಹೀಗೆ ಕೂಲಿಮಠದ ಮೇಷ್ಟ್ರಾಗಿದ್ದ ನನ್ನಪ್ಪನನ್ನು ಮುಂದೆ ಸರ್ಕಾರಿ ಪ್ರಾಥಮಿಕ ಶಾಲೆಗೆ ಅಧ್ಯಾಪಕನಾಗಿ ನೇಮಿಸಿಕೊಂಡರು. ಸರ್ಕಾರಿ ಸಂಬಳ ಬರಲಾರಂಭಿಸಿತು. ಹೇಗಿದ್ದರೂ ಸಂಬಳ ಬರುತ್ತೆ ಅಂತ ಅಪ್ಪನ ಅಣ್ಣಂದಿರು ಭಾಗವಾಗುವಾಗ-ಅಂದರೆ- ಪ್ರತ್ಯೇಕವಾಗುವಾಗ, ನೀರಾವರಿ ಜಮೀನನ್ನು ಅವರು ಇಟ್ಟುಕೊಂಡು ಖುಷ್ಕಿ ಜಮೀನನ್ನು (ನೀರಿನ ಆಸರೆಯಿಲ್ಲದ ಹೊಲ) ಅಪ್ಪನಿಗೆ ಕೊಟ್ಟರೆಂದು ಮನೆಯಲ್ಲಿ ಮಾತಾಡಿ ಕೊಂಡದ್ದನ್ನು ಕೇಳಿಸಿಕೊಂಡಿದ್ದೆ. ಇದಕ್ಕೆ ಅಪ್ಪನ ಸಂಪೂರ್ಣ ಸಮ್ಮತಿ ಇತ್ತಂತೆ. ಮುಂದೊಂದು ದಿನ ನಾವೆಲ್ಲ ದೊಡ್ಡವರಾದಾಗ ನಮ್ಮಪ್ಪ ಜಮೀನು, ಮನೆ, ಸಾಲ- ಎಲ್ಲಾ ಭಾಗ ಮಾಡಿದರು. ನನಗೆ ಬಂದ ಆರು ಎಕರೆ ಜಮೀನನ್ನು ಹಿರಿಯ ಅಣ್ಣನಿಗೆ ಬರೆದುಕೊಟ್ಟುಬಿಟ್ಟೆ! ನಾನು ಹೇಗಿದ್ದರೂ ತಿಂಗಳ ಸಂಬಳ ಪಡೀತಿದ್ದೇನೆ. ಅಣ್ಣನಿಗೆ ಮಕ್ಕಳು ಜಾಸ್ತಿ. ಅವರಿಗೇ ಇರಲಿ ಎಂಬ ಭಾವನೆ ನನ್ನದಾಗಿತ್ತು. ನನ್ನ ಇಬ್ಬರು ಅಣ್ಣಂದಿರೂ ಪ್ರಾಥಮಿಕ ಶಾಲೆ ಅಧ್ಯಾಪಕರು. ಹಿರಿಯಣ್ಣನ ಹೆಸರು-ಚಿಕ್ಕರಂಗಪ್ಪ, ಎರಡನೇ ಅಣ್ಣನ ಹೆಸರು- ಜಯರಾಮಯ್ಯ. ಜಯರಾಮಯ್ಯನವರು ಈಗ ನನ್ನ ಹೆಸರಿನ ಪ್ರತಿಷ್ಠಾನಕ್ಕೆ ಕಲಾಭವನ ಕಟ್ಟಿಸಲು ತಮ್ಮ ಜಮೀನಿನಲ್ಲೇ ಅಗತ್ಯವಾದಷ್ಟು ಜಾಗವನ್ನು ಉಚಿತವಾಗಿ ಕೊಟ್ಟಿದ್ದಾರೆ. ಅವರ ದೊಡ್ಡ ಮನಸ್ಸಿಗೆ ಇದೋ ನಮಸ್ಕರಿಸುವೆ. ಹಿರಿಯಣ್ಣ ಈಗಿಲ್ಲ. ಅವರ ಮಕ್ಕಳು ನನ್ನ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವು ದನ್ನೂ ಇಲ್ಲಿಯೇ ನೆನೆಯುವೆ. ಹಾಗೆಯೇ ನನ್ನ ಹೆಸರಿನ ಪ್ರತಿಷ್ಠಾನದ ಗೆಳೆಯರ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿರುವೆ.

ಇಲ್ಲಿಯೇ ಇನ್ನೊಂದು ವಿಷಯ ಹೇಳಬೇಕು. ಶಾಲೆಗೆ ಸೇರುವುದಕ್ಕೆ ಮುಂಚೆ ಮಕ್ಕಳಿಗೆ ಅಕ್ಷರಗಳು, ಪದಗಳು ಗೊತ್ತಿದ್ದು ಓದಲು ಸಾಧ್ಯವಾಗಿದ್ದರೆ ‘ಡಬಲ್ ಪ್ರಮೋಷನ್’ ಎಂಬ ಹೆಸರಿನಲ್ಲಿ ಏಕ್‍ದಂ ಎರಡನೇ ತರಗತಿಗೋ ಮೂರನೇ ತರಗತಿಗೋ ಸೇರಿಸಿ ಕೊಳ್ಳುತ್ತಿದ್ದರು. ನನ್ನನ್ನು ‘ಡಬಲ್ ಪ್ರಮೋಷನ್’ ಅನ್ವಯ ಆರಂಭದಲ್ಲೇ ಮೂರನೇ ತರಗತಿಗೆ ಸೇರಿಸಿಕೊಂಡಿದ್ದರಂತೆ. ಅದಕ್ಕನುಗುಣವಾಗಿ ಜನ್ಮ ದಿನವನ್ನೂ ಕೊಟ್ಟಿದ್ದರಂತೆ!

ಇರಲಿ, ಈಗ ‘ಜೈಮಿನಿ ಭಾರತ’ದ ವಿಷಯಕ್ಕೆ ಬರುತ್ತೇನೆ. ಆ ದೊಡ್ಡ ಪುಸ್ತಕವನ್ನು ಮುಟ್ಟಿಯೇ ನನಗೆ ರೋಮಾಂಚನವಾಯಿತು. ಅದು ಕಾವ್ಯ. ಕಷ್ಟಪಟ್ಟರೂ ಒಂದು ಪುಟ ಓದಲು ಅದೆಷ್ಟೋ ಸಮಯ ಹಿಡಿಸುವ ಪದ್ಯಗಳು. ಅಷ್ಟಿಷ್ಟು ಓದಿದರೂ ಅರ್ಥ ವಾಗದ ಸ್ಥಿತಿ. ಅರ್ಥವಾಗದಿದ್ದರೇನಂತೆ, ಸಿಕ್ಕಿದ ಕೃತಿಯನ್ನು ವ್ಯರ್ಥ ಮಾಡಬಾರದು! ಕೈಗೆತ್ತಿಕೊಂಡೆ. ಮಾನಿಟರ್ ಆಗಿ ತಮ್ಮ ಮಕ್ಕಳನ್ನು ಗಲಾಟೆ ಮಾಡುವವರೆಂದು ಬೋರ್ಡ್ ಮೇಲೆ ಹೆಸರನ್ನು ಬರೆದದ್ದು ಯಾಕೆ ಎಂದು ಗದರಿಸಿದ್ದವರನ್ನು ಜ್ಞಾಪಿಸಿ ಕೊಂಡೆ. ಜೈಮಿನಿ ಭಾರತದ ಬೃಹತ್ ಕೃತಿಯನ್ನು ಭದ್ರವಾಗಿ ಹಿಡಿದುಕೊಂಡೆ. ಹಾಗೆ ಗದರಿಸಿದ ಶ್ರೀಮಂತರ ಮನೆಯ ಮುಂದೆ ಅತ್ತಿತ್ತ ಓಡಾಡಿದೆ. ಅವರು ನನ್ನನ್ನೂ, ನಾನು ಕಂಕುಳಲ್ಲಿಟ್ಟುಕೊಂಡಿದ್ದ ಬೃಹತ್ ಕೃತಿಯನ್ನೂ ನೋಡುವವರೆಗೂ ಓಡಾಡಿದೆ. ಒಬ್ಬರ ಮನೆಯಾದ ಮೇಲೆ ಇನ್ನೊಬ್ಬರ ಮನೆ. ಕಡೆಗೆ ಅವರು ‘ಯಾವ್ದೊ ಚಂದ್ರ ಆ ಪುಸ್ತಕ?’ ಎಂದು ಕೇಳುವವರೆಗೂ ಕದಲಲಿಲ್ಲ (ನನ್ನನ್ನು ನಮ್ಮ ಮನೆಯಲ್ಲಿ ‘ಚಂದ್ರಣ್ಣ’ ಎನ್ನುತ್ತಿದ್ದರು. ಊರಿನ ಬಹುಪಾಲು ಜನರ ಬಾಯಲ್ಲಿ ನಾನು ಪ್ರೀತಿಯ ಚಂದ್ರಣ್ಣನೇ ಆಗಿದ್ದೆ). ಇವರು ‘ಚಂದ್ರ’ ಎಂದರೆಂದು ಬೇಸರವನ್ನೇನೂ ಪಡದೆ ಈ ಬೃಹತ್ ಕೃತಿ ಬಗ್ಗೆ ಪುಟ್ಟ ಭಾಷಣ ಬಿಗಿದೆ.

ಇದನ್ನೂ ಓದಿ: Sunday Read: ಹೊಸ ಪುಸ್ತಕ: ಪುನರ್ನವ: ಅಳಿದುಳಿದ ಕುರುಕ್ಷೇತ್ರದಲ್ಲಿ

ಏನೋ ಓದಿಯೇ ಬಿಟ್ಟಿದ್ದೇನೇನೊ ಎಂಬಂತೆ ಮಾತಾಡಿದ ನನ್ನ ವೈಖರಿಗೆ ಅವರು ‘ಹೌದೇನಪ್ಪ ಚಂದ್ರಣ್ಣ. ನೀನ್ ಬಿಡು ಬಲೇ ಬುದ್ಧಿವಂತ’ ಎಂದರು. ನಾನು ಮುಖವರಳಿಸಿ ಅದೇ ಹೆಮ್ಮೆಯಲ್ಲಿ ಊರಿನ ಸಂದಿಗೊಂದಿಗಳಲ್ಲೆಲ್ಲ ಓಡಾಡಿ ಸಿಕ್ಕಿದವರಿಗೆಲ್ಲ ಈ ಕೃತಿಯ ಬಗ್ಗೆ ಹೇಳಿದ್ದೆ! ನನಗೆ ಸರಿಯಾಗಿ ಗೊತ್ತಿದ್ದದ್ದು ಕೃತಿ ಮತ್ತು ಕವಿಯ ಹೆಸರು ಲಕ್ಷ್ಮೀಶ ಎಂಬುದು ಮಾತ್ರ. ಅದಷ್ಟನ್ನೇ ಇಟ್ಟುಕೊಂಡು ಹಳೆಯ ಕೃತಿಗಳ ಮಹತ್ವ ಹೇಳಿ ಅವರಲ್ಲೆಲ್ಲ ಬೆರಗು ಮೂಡಿಸಿದ್ದೆ. ನಾನು ‘ಬಲು ಬುದ್ಧಿವಂತ’ ಎಂಬ ಪ್ರಶಂಸೆಗೆ ಪಾತ್ರವಾಗಿದ್ದೆ! ಅಂದಿನಿಂದ ಯಾರೊಬ್ಬರೂ ನನ್ನ ‘ಮಾನಿಟರ್‌ಗಿರಿ’ ಬಗ್ಗೆ ಆಕ್ಷೇಪದ ಮಾತು ಆಡಲಿಲ್ಲ! ಏನಾದರೂ ತಮ್ಮ ಮಕ್ಕಳಿಗೆ ಅರ್ಥವಾಗದಿದ್ದರೆ ‘ಚಂದ್ರಣ್ಣನ್ ಕೇಳ್ರಿ’ ಎನ್ನುವಷ್ಟರ ಮಟ್ಟಿಗೆ ‘ಖ್ಯಾತಿ’ ಪಡೆದುಬಿಟ್ಟಿದ್ದೆ. ಇದಕ್ಕೆ ಲಕ್ಷ್ಮೀಶ ಕವಿಯ ಕಾವ್ಯವೂ ಸೇರಿದಂತೆ ನಾನು ಅಂಕ ಗಳಿಕೆಯಲ್ಲಿ ಮೊದಲನೇ ಸ್ಥಾನದಲ್ಲೇ ಸದಾ ಇದ್ದದ್ದೂ ಕಾರಣವಾಗಿತ್ತೆಂದು ಕಾಣುತ್ತದೆ.

ಕೃತಿ: ಕಾಗೆ ಕಾರುಣ್ಯದ ಕಣ್ಣು
ಲೇಖಕ: ಬರಗೂರು ರಾಮಚಂದ್ರಪ್ಪ (ಆಯ್ದ ಅನುಭವಗಳ ಕಥನ)
ಪ್ರಕಾಶನ: ಅಂಕಿತ ಪುಸ್ತಕ
ಬೆಲೆ: 395 ರೂ.

ಇದನ್ನೂ ಓದಿ: Sunday Read: ಹೊಸ ಪುಸ್ತಕ: ಯಾಬ್ಲಿ: ಯಥಾಪ್ರಕಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಕನ್ನಡ-ಮಲೆಯಾಳಿ ಸಾಹಿತ್ಯ ಸಮ್ಮೇಳನ ಆಯೋಜಿಸಿ: ಸ್ಪೀಕರ್‌ ಯು.ಟಿ.ಖಾದರ್‌ ಸೂಚನೆ

Bengaluru News: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

VISTARANEWS.COM


on

Inauguration of Kannada learning classes for Malayali speakers
Koo

ಬೆಂಗಳೂರು: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ (Bengaluru News) ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಕಾ ತರಗತಿಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚು ಭಾಷೆಯನ್ನು ಕಲಿಯುವವರು ಹೆಚ್ಚು ಸಾಧನೆ, ಯಶಸ್ಸು ಪಡೆಯುತ್ತಾರೆ. ನಾವು ಬೇರೆ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆಗೆ ಗೌರವ ಕೊಟ್ಟು ಭಾಷೆ ಕಲಿಯಲು ಮುಂದಾಗಬೇಕು. ಕರ್ನಾಟಕ ರಾಜ್ಯದಲ್ಲಿರುವ ಮಲೆಯಾಳಿ ಭಾಷಿಕರು ಕನ್ನಡ ಭಾಷೆ ಕಲಿಯುತ್ತಿರುವುದು ನಿಮ್ಮ ವ್ಯಕ್ತಿತ್ವ, ಆತ್ಮ ವಿಶ್ವಾಸ ಹೆಚ್ಚಿಸುವ ಜತೆಗೆ ಕರ್ನಾಟಕ ರಾಜ್ಯಕ್ಕೆ ಕೊಡುಗೆ ನೀಡಲು ಮುಂದಾಗಿರುವುದು ಸಂತೋಷದ ವಿಷಯ ಎಂದು ಹೇಳಿದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಇಲ್ಲಿಗೆ ನಿಲ್ಲಬಾರದು. ಈ ಯೋಜನೆ ಹೆಚ್ಚು ವಿಸ್ತೃತವಾಗಿ ಪ್ರತಿ ಜಿಲ್ಲೆಗಳಲ್ಲಿರುವ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಪ್ರಾಧಿಕಾರದಿಂದ ಆಗಬೇಕು. ಪ್ರಾಧಿಕಾರದಿಂದ ಆಯೋಜಿಸಿದ್ದ ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಮಾತನಾಡಿ, ಜೀವನ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಭಾಷೆ ತುಂಬಾ ಪ್ರಮುಖವಾದುದು. ಹೆಚ್ಚು ಭಾಷೆ ಕಲಿತಷ್ಟು ವ್ಯಕ್ತಿತ್ವ ವಿಕಾಸನ ಆಗುವುದರೊಂದಿಗೆ ನಮ್ಮಲ್ಲಿನ ಜ್ಞಾನವೂ ಹೆಚ್ಚಾಗುತ್ತದೆ.

ಬೇರೆ ಬೇರೆ ಭಾಷೆಗಳಲ್ಲಿರುವ ಒಳ್ಳೆಯ ವಿಚಾರಗಳು ಕನ್ನಡಿಗರಿಗೆ ಪರಿಚಯವಾಗಬೇಕೆಂಬ ಉದ್ದೇಶದಿಂದ ಹಲವು ಪುಸ್ತಕಗಳನ್ನು ಅನುವಾದ ಮಾಡಿಸಲಾಗಿದೆ. ಕನ್ನಡ ಭಾಷೆಯಿಂದ ಮಲೆಯಾಳಿ ಭಾಷೆಗೆ ಮಲೆಯಾಳಿ ಭಾಷೆಯಿಂದ ಕನ್ನಡ ಭಾಷೆಗೆ ಹೆಚ್ಚೆಚ್ಚು ಕೃತಿಗಳು ಅನುವಾದವಾಗಬೇಕು. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕರಾದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಭಾರತದ ಒಕ್ಕೂಟ ವ್ಯವಸ್ಥೆ ಬಹಳ ಬಲಿಷ್ಠವಾಗಿ ಉಳಿಯಲು ರಾಜ್ಯಗಳ ಭಾಷೆಗಳು ಪ್ರಮುಖವಾದುದು. ಭಾಷೆ ದುರ್ಬಲವಾದರೆ ದೇಶದ ಒಕ್ಕೂಟ ವ್ಯವಸ್ಥೆ ದುರ್ಬಲವಾಗುತ್ತದೆ. 2011ರ ಜನಗಣತಿ ಪ್ರಕಾರ ಭಾರತದಲ್ಲಿ 19,509 ತಾಯ್ನುಡಿಗಳಿವೆ. ರಾಜ್ಯದಲ್ಲಿ 230ಕ್ಕೂ ಹೆಚ್ಚು ಭಾಷೆಗಳಿವೆ. ನಾವು ಎಲ್ಲರೂ ಸೇರಿ ರಾಜ್ಯ ಭಾಷೆಯನ್ನು ಬೆಳೆಸಬೇಕು ಅದರ ಜತೆಗೆ ಸಣ್ಣ ಭಾಷೆಗಳನ್ನು ಬೆಳೆಸಬೇಕು ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಧಾಕರನ್ ರಾಮಂತಳ್ಳಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಮತ್ತು ಮಲೆಯಾಳಂ ಮಿಷನ್ ಕೇರಳ ಸರ್ಕಾರ ಮತ್ತು ಕನ್ನಡ ಕಲಿಕಾ ಯೋಜನೆ ಸಂಚಾಲಕ ಟಾಮಿ ಜೆ. ಅಲುಂಕಲ್ ಉಪಸ್ಥಿತರಿದ್ದರು.

Continue Reading

ಬೆಂಗಳೂರು

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Book Release: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಜು.28 ಮತ್ತು 29ರಂದು ಎರಡು ದಿನಗಳ ಕಾಲ 14 ಸಂಪುಟಗಳ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಮಗ್ರ ಕೃತಿ ಜಗತ್ತು ಮತ್ತು ʼತೇಜಸ್ವಿ ಎಂಬ ವಿಸ್ಮಯʼ ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ, ʼಪೂರ್ಣಚಂದ್ರʼ ಚಿತ್ರ ಸಂಪುಟ ಬಿಡುಗಡೆ ಹಾಗೂ ತೇಜಸ್ವಿ ಸಾಹಿತ್ಯ: ಸಾಂಸ್ಕೃತಿಕ ಹಬ್ಬ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

VISTARANEWS.COM


on

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
Koo

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಜು.28 ಮತ್ತು 29ರಂದು ಎರಡು ದಿನಗಳ ಕಾಲ 14 ಸಂಪುಟಗಳ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಮಗ್ರ ಕೃತಿ ಜಗತ್ತು (Book Release) ಮತ್ತು ʼತೇಜಸ್ವಿ ಎಂಬ ವಿಸ್ಮಯʼ ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ, ʼಪೂರ್ಣಚಂದ್ರʼ ಚಿತ್ರ ಸಂಪುಟ ಬಿಡುಗಡೆ ಹಾಗೂ ತೇಜಸ್ವಿ ಸಾಹಿತ್ಯ: ಸಾಂಸ್ಕೃತಿಕ ಹಬ್ಬ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

ಮೆ.ಮುನಿಸ್ವಾಮಿ ಅಂಡ್‌ ಸನ್ಸ್‌, ಎಂ. ಚಂದ್ರಶೇಖರ್‌ ಪ್ರತಿಷ್ಠಾನ ಬೆಂಗಳೂರು, ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಬೆಂಗಳೂರು ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಜು.28ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಸಾಹಿತಿ ಪ್ರೊ. ಬಿ.ಎನ್‌.ಶ್ರೀರಾಮ್‌ ಉದ್ಘಾಟಿಸುವರು. ಶಾಸಕ ಸಿ.ಎನ್‌. ಅಶ್ವತ್ಥ್‌ ನಾರಾಯಣ ಅವರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹಗಳ ಕುರಿತ ಬೃಹತ್‌ ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ ಮಾಡುವರು.

ಇದನ್ನೂ ಓದಿ: Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಎಂ.ಚಂದ್ರಶೇಖರ್‌ ಪ್ರತಿಷ್ಠಾನದ ಸದಸ್ಯೆ ಸರೋಜ ಎಂ.ಚಂದ್ರಶೇಖರ್‌, ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಡಾ.ಕೆ. ಚಿದಾನಂದಗೌಡ, ನಾಡೋಜ ಡಾ. ವೂಡೇ ಪಿ. ಕೃಷ್ಣ, ಪ್ರೊ.ಎಸ್‌.ಜಿ. ಸಿದ್ಧರಾಮಯ್ಯ, ಹಂಪಿ ಕನ್ನಡ ವಿವಿಯ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಂ. ಚಂದ್ರಶೇಖರ್‌ ಪ್ರತಿಷ್ಠಾನದ ಅಧ್ಯಕ್ಷ ನ್ಯಾಯಮೂರ್ತಿ ಎ.ಜೆ. ಸದಾಶಿವ ಅಧ್ಯಕ್ಷತೆ ವಹಿಸುವರು.

ಜು.29ರಂದು ಸೋಮವಾರ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 14 ಸಂಪುಟಗಳ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಮಗ್ರ ಕೃತಿ ಜಗತ್ತು ಲೋಕಾರ್ಪಣೆ ಮಾಡುವರು. ಬೆಂಗಳೂರಿನ ಎಂ. ಚಂದ್ರಶೇಖರ್‌ ಪ್ರತಿಷ್ಠಾನದ ಸದಸ್ಯೆ ಸರೋಜ ಎಂ.ಚಂದ್ರಶೇಖರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಇದನ್ನೂ ಓದಿ: Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ, ಮಾಜಿ ಸಂಸದ ಸಿ. ನಾರಾಯಣಸ್ವಾಮಿ, ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್‌. ಶಂಕರ್‌, ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಡಾ.ಕೆ. ಚಿದಾನಂದಗೌಡ, ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ, ಲೇಖಕಿ ತಾರಿಣಿ ಚಿದಾನಂದ, ಜಯರಾಮ್‌ ರಾಯ್‌ಪುರ ಅವರು ಪಾಲ್ಗೊಳ್ಳುವರು. ಎರಡು ದಿನಗಳ ಕಾಲ ವಿಶೇಷ ಉಪನ್ಯಾಸ, ಸಂವಾದ ಹಾಗೂ ನಾಲ್ಕು ಗೋಷ್ಠಿಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

ರಾಜಮಾರ್ಗ ಅಂಕಣ: ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಈ ವರ್ಷ ಅವರ ಜನ್ಮ ಶತಮಾನೋತ್ಸವ.

VISTARANEWS.COM


on

ರಾಜಮಾರ್ಗ ಅಂಕಣ
Koo

ಈ ವರ್ಷ (2024) ಲೇಖಕ ನಿರಂಜನರ ಜನ್ಮ ಶತಮಾನೋತ್ಸವ

Rajendra-Bhat-Raja-Marga-Main-logo

ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ (Niranjana) ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಅವರು 71 ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು. ಕನ್ನಡದ ಮೊದಲ ಮತ್ತು ಜನಪ್ರಿಯ ಅಂಕಣ ಲೇಖಕರು ಅಂದರೆ ಅದು ನಿರಂಜನ! (ರಾಜಮಾರ್ಗ ಅಂಕಣ)

ಬಾಲ್ಯದಿಂದಲೂ ಬರವಣಿಗೆ

1924 ಜೂನ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಳಕುಂದ ಎಂಬ ಗ್ರಾಮದಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿ ಪತ್ರಿಕೆಗಳಿಗೆ ಬರೆಯಲು ತೊಡಗಿದರು. ಮೊದಲು ಕಂಠೀರವ ಪತ್ರಿಕೆ ಅವರಿಗೆ ಬರೆಯಲು ಅವಕಾಶ ಕೊಟ್ಟಿತು. ಮುಂದೆ ಕನ್ನಡದ ಎಲ್ಲ ಪ್ರಸಿದ್ಧ ಪತ್ರಿಕೆಗಳಿಗೆ ಅವರು ಅಂಕಣಗಳನ್ನು ಬರೆಯುತ್ತಾ ಹೋದರು. ರಾಷ್ಟ್ರಬಂಧು ಎಂಬ ಪತ್ರಿಕೆಯ ಪ್ರಮುಖ ಲೇಖಕರಾಗಿ ಅವರು ಸಾವಿರಾರು ಅಂಕಣಗಳನ್ನು ಬರೆದರು. ಅವರ ಅಂಕಣ ಲೇಖನಗಳು ಎಂಟು ಕೃತಿಗಳಾಗಿ ಹೊರಬಂದು ಅವರಿಗೆ ಅಪಾರ ಜನಪ್ರಿಯತೆ ಕೊಟ್ಟವು. ಅವರು ಕನ್ನಡದ ಮೊದಲ ಅಂಕಣಕಾರ ಎಂಬ ದಾಖಲೆಯೂ ನಿರ್ಮಾಣವಾಯಿತು.

ಪ್ರಭಾವಶಾಲಿ ಸಣ್ಣ ಕಥೆಗಳು

ಸಣ್ಣ ಕಥೆಗಳು ಅವರಿಗೆ ಇಷ್ಟವಾದ ಇನ್ನೊಂದು ಪ್ರಕಾರ. ಅವರ 156 ಸಣ್ಣ ಕಥೆಗಳ ಸಂಗ್ರಹವಾದ ‘ಧ್ವನಿ’ ಕನ್ನಡದ ಶ್ರೇಷ್ಠ ಕೃತಿ ಆಗಿದೆ. ಕಾರಂತರ ಸಂಪರ್ಕ, ಲೆನಿನ್ ಬಗ್ಗೆ ಓದು ಅವರನ್ನು ಬೆಳೆಸುತ್ತಾ ಹೋದವು.

ಬಾಪೂಜಿ ಬಾಪು ಅವರ ಅತ್ಯಂತ ಶ್ರೇಷ್ಟವಾದ ಸಣ್ಣ ಕಥೆ. ಗಾಂಧೀಜಿ ಬದುಕಿದ್ದಾಗಲೇ ಅವರು ಸತ್ತಂತೆ ಕಲ್ಪಿಸಿಕೊಂಡು ಬರೆದ ಕಥೆ ಇದು! ರಕ್ತ ಸರೋವರ ಕಾಶ್ಮೀರದ ದಾಲ್ ಸರೋವರದ ಹಿನ್ನೆಲೆಯಲ್ಲಿ ಅರಳಿದ ಅದ್ಭುತವಾದ ಕಥೆ.
ತಿರುಕಣ್ಣನ ಮತದಾನ ರಾಜಕೀಯ ವಿಡಂಬನೆಯ ಕಥೆ. ಅವರ ಸಣ್ಣ ಕಥೆಗಳು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ, ಬೇರೆ ಬೇರೆ ಸಂಸ್ಕೃತಿಯಲ್ಲಿ ಅರಳಿದ ಕಥೆಗಳು. ಕನ್ನಡದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ನಂತರ ಇಷ್ಟೊಂದು ವೈವಿಧ್ಯಮಯವಾದ ಸಣ್ಣ ಕಥೆಗಳನ್ನು ಬರೆದವರು ನಿರಂಜನ ಮಾತ್ರ ಅಂದರೆ ಅದು ಅತಿಶಯೋಕ್ತಿ ಅಲ್ಲ!

ಕಾದಂಬರಿಕಾರರಾಗಿ ನಿರಂಜನರು

ಅವರು ಬರೆದದ್ದು ಒಟ್ಟು 21 ಕಾದಂಬರಿಗಳು. ವರ್ಗ ಸಂಘರ್ಷ ಮತ್ತು ಸಾಮಾಜಿಕ ಸಮಾನತೆ ಅವರ ಹೆಚ್ಚಿನ ಕಾದಂಬರಿಗಳ ಹೂರಣ. 700 ಪುಟಗಳ ಬೃಹತ್ ಕಾದಂಬರಿ ಮೃತ್ಯುಂಜಯ ಅದೊಂದು ಮಾಸ್ಟರಪೀಸ್ ಕಲಾಕೃತಿ. ವಿಮೋಚನೆ, ಬನಶಂಕರಿ, ಅಭಯ, ಚಿರಸ್ಮರಣೆ, ರಂಗಮ್ಮನ ವಟಾರ ಮೊದಲಾದ ಕಾದಂಬರಿಗಳು ಒಮ್ಮೆ ಓದಿದರೆ ಮರೆತುಹೋಗೋದಿಲ್ಲ. ಸುಳ್ಯ ಮತ್ತು ಮಡಿಕೇರಿ ಪ್ರದೇಶದಲ್ಲಿ ಕಲ್ಯಾಣಸ್ವಾಮಿ ಎಂಬಾತ ನಡೆಸಿದ ರಕ್ತಕ್ರಾಂತಿಯ ಹಸಿಹಸಿ ಕಥೆಯನ್ನು ಹೊಂದಿರುವ ಒಂದು ಶ್ರೇಷ್ಟವಾದ ಕಾದಂಬರಿ ಅವರು ಬರೆದಿದ್ದಾರೆ. ನಿರಂಜನರು ಬರೆದ ನಾಟಕಗಳೂ ಜನಪ್ರಿಯವಾಗಿವೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

ನಿರಂಜನ ಅವರ ಸಂಪಾದನಾ ಗ್ರಂಥಗಳು

ಇಂದು ಕನ್ನಡ ನಾಡು ನಿರಂಜನರನ್ನು ನೆನಪಿಟ್ಟುಕೊಳ್ಳಲೇ ಬೇಕಾದ ಮುಖ್ಯ ಕಾರಣ ಎಂದರೆ ಅವರ ಸಂಪಾದನೆಯ ಗ್ರಂಥಗಳು. 25 ಸಂಪುಟಗಳ ವಿಶ್ವ ಕಥಾಕೋಶ, ಜ್ಞಾನಗಂಗೋತ್ರಿ ಹೆಸರಿನ ಎಳೆಯರ ಏಳು ಸಂಪುಟಗಳ ವಿಶ್ವ
ಜ್ಞಾನಕೋಶ, ಪುರೋಗಾಮಿ ಪ್ರಕಾಶನದ ಎಂಟು ಪುಸ್ತಕಗಳು, ಜನತಾ ಸಾಹಿತ್ಯಮಾಲೆಯ 25 ಪುಸ್ತಕಗಳು….ಹೀಗೆ ಲೆಕ್ಕ ಮಾಡುತ್ತಾ ಹೋದರೆ ಸಾವಿರಾರು ಪುಟಗಳ ಅದ್ಭುತ ಜ್ಞಾನಕೋಶಗಳು ಅರಳಿದ್ದು ನಿರಂಜನರ ಸಂಪಾದಕತ್ವದಲ್ಲಿ! ಅವರ ಇಡೀ ಜೀವನವನ್ನು ನಿರಂಜನರು ಅಧ್ಯಯನ ಮತ್ತು ಬರವಣಿಗೆಯಲ್ಲಿಯೇ ಕಳೆದರು.

ಇಡೀ ಕುಟುಂಬವು ಸಾಹಿತ್ಯಕ್ಕೆ ಮೀಸಲು

ನಿರಂಜನರ ಪತ್ನಿ ಅನುಪಮಾ ನಿರಂಜನ ಕನ್ನಡದ ಸ್ಟಾರ್ ಕಾದಂಬರಿಕಾರರು. ಹೆಣ್ಣು ಮಕ್ಕಳಾದ ತೇಜಸ್ವಿನಿ ಮತ್ತು ಸೀಮಂತಿನಿ ಇಬ್ಬರೂ ಕನ್ನಡದ ಪ್ರಭಾವೀ ಲೇಖಕರಾಗಿ ಗುರುತಿಸಿಕೊಂಡವರು. ಹಾಗೆ ನಿರಂಜನರ ಇಡೀ ಕುಟುಂಬವು ಕನ್ನಡದ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿತು.

ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ದೊರೆತವು. 1995ರಲ್ಲಿ ಅವರು ನಮ್ಮನ್ನು ಅಗಲಿದರು. ಕನ್ನಡ ಸಾಹಿತ್ಯಲೋಕವನ್ನು ಚಂದವಾಗಿ ಬೆಳೆಸಿದ ನಿರಂಜನರ ಜನ್ಮ ಶತಮಾನೋತ್ಸವದ ಈ ವರ್ಷ ಕನ್ನಡ ಸಾರಸ್ವತ ಲೋಕ ಒಂದು ಸ್ಮರಣೀಯ ಕಾರ್ಯಕ್ರಮವನ್ನು ಅವರ ನೆನಪಿನಲ್ಲಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಆಗ್ರಹ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

Continue Reading

ಕರ್ನಾಟಕ

Alur Nagappa: ‘ಸಾವಿರ ಹಾಡುಗಳ ಸರದಾರ’ ಖ್ಯಾತಿಯ ಜಾನಪದ ಹಾಡುಗಾರ, ಸಾಹಿತಿ ಆಲೂರು ನಾಗಪ್ಪ ಇನ್ನಿಲ್ಲ

Alur Nagappa: ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ (74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು (ಜುಲೈ 23) ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ ಅವರು ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ.

VISTARANEWS.COM


on

Alur Nagappa
Koo

ಬೆಂಗಳೂರು: ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ (Alur Nagappa) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು (ಜುಲೈ 23) ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ ಅವರು ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಹುಟ್ಟೂರು ಬಿಡದಿಯಲ್ಲಿ ಆಲೂರು ನಾಗಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ.

ಮೂಲತಃ ರಾಮನಗರ ಬಿಡದಿ ಮೂಲದವರಾಗಿದ್ದ ಆಲೂರು ನಾಗಪ್ಪ ಅವರು ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ಗವಿಪುರಂನಲ್ಲಿ ವಾಸವಾಗಿದ್ದರು. 80 ದಶಕದಲ್ಲಿ ಜನಪ್ರಿಯರಾಗಿದ್ದ ಅವರು ಸದ್ಯ ಕ್ಯಾಸೆಟ್ ಸಂಘದ ಅಧ್ಯಕ್ಷರೂ ಆಗಿದ್ದರು.

ಆಲೂರು ನಾಗಪ್ಪ ಅವರು ಸಾವಿರಾರು ಲಾವಣಿ, ತತ್ವಪದಗಳ ಹರಿಕಾರಕರರು. ಇವರು ರಚಿಸಿ, ಹಾಡಿರುವ ಹಾಡುಗಳನ್ನು ಇಂದಿಗೂ ಅಭಿಮಾನಿಗಳು ಗುನುಗುತ್ತಿರುತ್ತಾರೆ. ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ನಾಗಪ್ಪ ಅವರ ಕಾಲಿನ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ 15 ದಿನಗಳ ಹಿಂದೆ ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿತ್ತು. ಸೋಂಕು ತೀವ್ರವಾಗಿ ಚಿಕಿತ್ಸೆ ಫಲಕಾರಿ ಆಗದೆ ಅವರು ನಿಧನ ಹೊಂದಿದ್ದಾರೆ. ಇವರ ಮಗಳು ದಿವ್ಯ ಆಲೂರು ಕೂಡ ನಿರೂಪಕಿ, ಗಾಯಕಿ.

ಕನ್ನಿಕೇರಿ ಹುಡುಗಿಯೊಬ್ಬಳು, ನೀನು ಮದುಕಿಯಂಗೆ ಮುಸುಕಾಕೊಂಡು, ಬೆಂಗಳೂರ್‌ ಹುಡ್ಗ ಬಂದವನಂತ ಬಗ್ಗಿ ಬಗ್ಗಿ ನೋಡ್ತೀಯಲ್ಲೇ, ತವರಿಂದ ಕಳಿಸಿ ನನ್ನ ಮರಿಬೇಡ ಅಣ್ಣಯ್ಯ, ಅಳಬ್ಯಾಡ ತಂಗಿ ಅಳಬ್ಯಾಡ, ಹೆತ್ತ ತಾಯಿ ಋಣವ ತೀರಿಸೋ, ಎಚ್ಚರಾಗು ಕನ್ನಡಿಗ ಇವು ಆಲೂರು ನಾಗಪ್ಪ ಅವರ ಪ್ರಸಿದ್ಧ ಹಾಡುಗಳು.

ವಿಶೇಷ ಎಂದರೆ ಆಲೂರು ನಾಗಪ್ಪ ಅವರು ‘ಸಾವಿರ ಹಾಡುಗಳ ಸರದಾರ’ ಎಂದು ಹೆಸರಾಗಿದ್ದಾರೆ. ಯುವಜನತೆ, ಮಹಿಳೆಯರಿಗೆ ಇಷ್ಟವಾಗುವ ಹಾಡುಗಳು, ನಾಡುನುಡಿಗೆ ಸಂಬಂಧಿಸಿದ ಎಲ್ಲ ರೀತಿಯ ಹಾಡುಗಳನ್ನೂ ಬರೆದಿದ್ದಾರೆ. ಭಕ್ತಿ ಗೀತೆಗಳನ್ನೂ ರಚಿಸಿದ್ದಾರೆ. ಆದರೆ ಅವರು ತಾವು ರಚಿಸಿದ, ಹಾಡಿದ ಯಾವ ಹಾಡುಗಳ ಹಕ್ಕನ್ನೂ ಬೇರೆಯವರಿಗೆ ಕೊಟ್ಟಿಲ್ಲ. ದೊಡ್ಡ ಕಂಪನಿಗಳು ಬಂದು ಮನವಿ ಮಾಡಿದರೂ ನನ್ನ ಶಾರದೆಯನ್ನು ಯಾರಿಗೂ ಕೊಡುವುದಿಲ್ಲ ಎಂದು ಕಡ್ಡಿ ತುಂಡಾದಂತೆ ಹೇಳುತ್ತಿದ್ದರು. ಆದರೆ ಒಂದೆರಡು ಸಿನಿಮಾಗಳಲ್ಲಿ ಅಪ್ಪನ ಹಾಡುಗಳನ್ನು ಅನುಮತಿ ಪಡೆಯದೆ ಬಳಸಿಕೊಳ್ಳಲಾಗಿದೆ ಎಂದು ಸಂದರ್ಸನವೊಂದರಲ್ಲಿ ಈ ಹಿಂದೆ ದಿವ್ಯ ಆಲೂರು ತಿಳಿಸಿದ್ದರು.

ಇದನ್ನೂ ಓದಿ: Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Continue Reading
Advertisement
shiradi ghat train karnataka rian news
ಪ್ರಮುಖ ಸುದ್ದಿ21 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು25 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ40 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ44 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ54 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ54 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ1 hour ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ2 hours ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Champions Trophy 2025
ಕ್ರೀಡೆ2 hours ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ2 hours ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌