the-mother-of-theater-actingWorld Theatre Day: ರಂಗಭೂಮಿ ಅಭಿನಯದ ತಾಯಿಬೇರು - Vistara News

ಕಲೆ/ಸಾಹಿತ್ಯ

World Theatre Day: ರಂಗಭೂಮಿ ಅಭಿನಯದ ತಾಯಿಬೇರು

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವ ದೃಷ್ಟಿಯಿಂದ ರಂಗಭೂಮಿ ಉತ್ತಮ ಆಯ್ಕೆ. ಸಣ್ಣ ವಯಸ್ಸಿನಲ್ಲಿಯೇ ರಂಗಭೂಮಿಯ ಸಂಪರ್ಕಕ್ಕೆ ಬರುವ ಮಕ್ಕಳು ಇತರ ಮಕ್ಕಳಿಗಿಂತ ವಿಭಿನ್ನರಾಗಿ ಬೆಳೆಯುತ್ತಾರೆ.

VISTARANEWS.COM


on

Theater is the mother of acting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರು ಮಂಡ್ಯ, ಅದಮ್ಯ ರಂಗಶಾಲೆ, ಮೈಸೂರು

ಸಿನಿಮಾ ರಂಗಕ್ಕೂ ರಂಗಭೂಮಿಗೂ ಸಾಕಷ್ಟು ವ್ಯತ್ಯಾಸಗಳಿವೆ. ಎಲ್ಲಾ ದೃಷ್ಟಿ ಕೋನದಿಂದಲೂ ಸಿನಿಮಾನೇ ಬಹಳ ಜನರ ಆಯ್ಕೆಯಾಗಿರುತ್ತದೆ. ಆದರೆ ಕೆಲವೊಂದಿಷ್ಟು ಜನರ ಆಯ್ಕೆ ಮಾತ್ರ ರಂಗಭೂಮಿಯಾಗಿರುತ್ತದೆ. ಆದಾಯ, ಪ್ರಸಿದ್ಧಿ ಪ್ರಚಾರ ಯಾವ ವಿಷಯದಲ್ಲೂ ಸಿನಿಮಾ ಕ್ಷೇತ್ರವನ್ನು ರಂಗಭೂಮಿ ಸರಿಗಟ್ಟಲಾಗುವುದಿಲ್ಲ. ಸತ್ಯ… ಆದರೂ ರಂಗಭೂಮಿ ಅಭಿನಯದ ತಾಯಿಬೇರು ನನ್ನ ದೃಷ್ಟಿಯಲ್ಲಿ ಹೇಳುವುದಾದರೆ ಇದೊಂದು ಆತ್ಮ ತೃಪ್ತಿಯ ಕೆಲಸ. ಯಾವ ವರಮಾನವು ನೀಡಲಾರದಷ್ಟು ಸಂತೃಪ್ತಿ ನೀಡುವ ಕೆಲಸ ರಂಗಭೂಮಿ.

ಸಿನಿಮಾ ರಂಗವನ್ನು ಆಳಿದ ಅನೇಕ ದಿಗ್ಗಜರು ರಂಗಭೂಮಿಯ ಕೊಡುಗೆಗಳೇ ಆಗಿದ್ದಾರೆ. ಸಿನಿಮಾದಲ್ಲಿ ಎಷ್ಟೇ ತಪ್ಪುಗಳಾದರೂ ಅದನ್ನು ಸರಿಪಡಿಸುವ ಮತ್ತೆ ಚಿತ್ರೀಕರಿಸುವ ಸಂಭಾಷಣೆಯನ್ನು ಡಬ್ಬಿಂಗ್ ಮಾಡುವ ವ್ಯವಸ್ಥೆ ಇರುತ್ತದೆ ಆದರೆ ರಂಗಭೂಮಿಯಲ್ಲಿ ಅದ್ಯಾವ ಅವಕಾಶ ಇರುವುದಿಲ್ಲ ಕೇವಲ ನಟನ ತಯಾರಿಯೊಂದೇ ಇಲ್ಲಿ ಮುಖ್ಯ. ಬೇರೆ ಯಾವ ತಂತ್ರಗಳಿಗೂ ಅವಕಾಶವಿರುವುದಿಲ್ಲ. ನಟನ ತಯಾರಿ ಮತ್ತು ಅವನ ಪರಿಶ್ರಮಗಳಷ್ಟೇ ಮಾನದಂಡವಾಗಿರುತ್ತದೆ.

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವ ದೃಷ್ಟಿಯಿಂದ ರಂಗಭೂಮಿ ಉತ್ತಮ ಆಯ್ಕೆ. ‌ ಮಕ್ಕಳು ಹತ್ತು- ಹನ್ನೆರಡು ವರ್ಷಗಳವರೆಗೂ ವಿಶ್ವಮಾನವರಾಗಿಯೇ ಇರುತ್ತಾರೆ. ಆನಂತರವಷ್ಟೇ ಸಾಮಾಜಿಕ ವ್ಯವಸ್ಥೆಯ ಕೈಗೆ ಸಿಕ್ಕು ವಾತಾವರಣದ ಕೈ ಗೊಂಬೆಗಳಾಗಿ ಬಿಡುತ್ತಾರೆ. ಸಣ್ಣ ವಯಸ್ಸಿನಲ್ಲಿಯೇ ರಂಗಭೂಮಿಯ ಸಂಪರ್ಕಕ್ಕೆ ಬರುವ ಮಕ್ಕಳು ಇತರ ಮಕ್ಕಳಿಗಿಂತ ವಿಭಿನ್ನರಾಗಿ ಬೆಳೆಯುತ್ತಾರೆ. ಈಗಿನ ಕಾಲದಲ್ಲಿ ತಂದೆ ತಾಯಿಯರಿಗೆ ಒಂದೊ ಎರಡೊ ಮಕ್ಕಳಷ್ಟೇ ಇರುವ ಇಂದಿನ ವಿಭಕ್ತ ಕುಟುಂಬ ವ್ಯವಸ್ಥೆಯಲ್ಲಿ ಮಕ್ಕಳ ಮನಸ್ಸುಗಳನ್ನು ಓದು ಮತ್ತು ಹೆಚ್ಚು ಅಂಕಗಳನ್ನು ತೆಗೆಯುವುದಕಷ್ಟೇ ಸೀಮಿತಗೊಳಿಸಿ ಸಂಕುಚಿಸಿ ಬಿಟ್ಟಿದ್ದೇವೆ. ರಂಗಭೂಮಿಯಲ್ಲಿ ಮಕ್ಕಳಿಗೆ ಶಿಸ್ತನ್ನು ಮೂಲದಿಂದಲೇ ಕಲಿಸಿ ಕೊಡಲಾಗುತ್ತದೆ. ಎಲ್ಲಾ ಮಕ್ಕಳೊಂದಿಗೆ ಸೇರಿ ಆಟ ಪಾಠಗಳಂತೆ ಬದುಕಿನ ಶಿಸ್ತನ್ನು ಕರೆಯುತ್ತಾರೆ.

ಉದಾರಣೆಗೆ ಸ್ನೇಹಿತರೊಟ್ಟಿಗೆ ನಡೆಯುವಾಗ ಜೊತೆಯಲ್ಲೊಬ್ಬ ಕಾಲು ನೋವಿರುವ ಸ್ನೇಹಿತನಿದ್ದರೆ ಯಾರು ಹೇಳದಿದ್ದರೂ ಅವರು ಅವರ ನಡಿಕೆಯ ವೇಗವನ್ನು ಅವನ ವೇಗಕ್ಕೆ ಹೊಂದಿಸಿಕೊಳ್ಳುತ್ತಾರೆ. ಇಂತಹ ಅನೇಕ ಸೂಕ್ಷ್ಮಗಳು ರಂಗಭೂಮಿಯಲ್ಲಿ ಅನುಭವಕ್ಕೆ ಬರುತ್ತವೆ. ಸಹಕಲಾವಿದನೊಬ್ಬ ನಾಟಕದ ಡೈಲಾಗು ಮರೆತಾಗ ಅಥವಾ ತಪ್ಪು ಹೇಳಿದಾಗ ಅದನ್ನು ಪ್ರೇಕ್ಷಕರ ಗಮನಕ್ಕೆ ತರದೆ ಹೊಂದಿಸಿಕೊಂಡು ಹೋಗುವುದು, ತಪ್ಪನ್ನು ದೊಡ್ಡದು ಮಾಡದೆ ನಾಟಕಕ್ಕೆ ಕುಂದು ಬಾರದಂತೆ ತೂಗಿಸಿಕೊಂಡು ಹೋಗುವ ಜವಾಬ್ದಾರಿ ಏಕಕಾಲಕ್ಕೆ ಬರುತ್ತದೆ. ಇದನ್ನು ಯಾವ ಶಾಲೆಗಳಲ್ಲೂ ಕಲಿಸುವುದು ಅಸಾಧ್ಯ.

ಸಿನಿಮಾ ಒಂದು ಹೇಗೆ ಮೂಡಿ ಬಂದಿದೆ ಎಂದು ತಿಳಿದುಕೊಳ್ಳುವುದು ಸಿನಿಮಾ ಬಿಡುಗಡೆಯಾಗಿ ಜನರು ಅದನ್ನು ನೋಡಿ ಅಭಿಪ್ರಾಯ ಹೇಳುವವರೆಗೂ ಕಾಯಬೇಕಾಗುತ್ತದೆ. ಅಥವಾ ಸರ್ಕಾರವೊ ಸಂಘ ಸಂಸ್ಥೆಗಳೊ ಪ್ರಶಸ್ತಿ ಘೋಷಿಸುವವರೆಗೂ ಕಾಯಬೇಕಾಗುತ್ತದೆ. ಆದರೆ ರಂಗದಲ್ಲಿ ಹಾಗಾಗುವುದಿಲ್ಲ ನಟ ಅಭಿನಯಿಸುತ್ತಿರುವಾಗಲೇ ಅದು ಪ್ರೇಕ್ಷಕನಿಗೆ ಹಿಡಿಸಿದಯೋ ಇಲ್ಲವೋ ಎಂದು ಕಲಾವಿದನಿಗೆ ಅರ್ಥವಾಗಿ ಬಿಡುತ್ತದೆ. ಪ್ರೇಕ್ಷಕನ ಮೆಚ್ಚುಗೆಯ ಮುಖಭಾವ ನೀಡಬಲ್ಲ ತೃಪ್ತಿಯನ್ನು ಪ್ರಾಯಶಃ ಯಾವ ಮಾಧ್ಯಮವೂ ನೀಡಲಾರದು.

ಬಹಳಷ್ಟು ಸಲ ಯಾರನ್ನಾದರೂ ಭೇಟಿಯಾದಾಗ ನಮಗೆ ಇಷ್ಟವಿಲ್ಲದಿದ್ದರೂ ಅನಿವಾರ್ಯವಾಗಿ ಮಾತನಾಡುತ್ತಿರುತ್ತೇವೆ, ಒಳಗಿನ ಭಾವವೇ ಬೇರೆ ಮುಖಭಾವವೇ ಬೇರೆ. ಆದರೆ ಆ ಕ್ಷಣಕ್ಕೆ ಮುಖದ ಮೇಲೆ ತೋರ್ಪಡಿಸುವ ಭಾವ ಕೃತಕವಾಗಿರುತ್ತದೆ. ಆದರೆ ಇದ್ಯಾವುದರ ಮುಲಾಜಿಲ್ಲದೆ ಇದ್ದದ್ದನ್ನು ಇದ್ದ ಹಾಗೆಯೇ ಕಾಣುವುದು ರಂಗದ ಮೇಲೆ ಮಾತ್ರ. ಅದೊಂದು ಆತ್ಮತೃಪ್ತಿ ರಂಗದಲ್ಲಿ ಮಾತ್ರ ಸಿಗಲು ಸಾಧ್ಯ. ನಿಜ ಜೀವನದಲ್ಲಿ ಎಲ್ಲರೂ ತರಹೇವಾರಿ ನಟಿಸುತ್ತೇವೆ, ಆದರೆ ರಂಗದಲ್ಲಿ ಮಾತ್ರ ನಟ ಮತ್ತು ಪ್ರೇಕ್ಷಕ ಪ್ರಾಮಾಣಿಕವಾಗಿ ತಮ್ಮ ಭಾವವನ್ನು ವ್ಯಕ್ತಪಡಿಸುತ್ತಾನೆ.

ಒಂದು ನಾಟಕ ಕಟ್ಟುವ ಕನಸು ಮನಸ್ಸಿನಲ್ಲಿ ಮೂಡಿದ ದಿನದಿಂದ ಅದೊಂದು ಸಂಭ್ರಮ. ಕಲಾವಿದರ ಹುಡುಕಾಟ ಅವರಿಗನುಗುಣವಾದ ಕಥೆಯ ಹುಡುಕಾಟ, ಎಲ್ಲವೂ ಸಿದ್ಧವಾದ ಮೇಲೆ ನಾಟಕದ ತಯಾರಿ. ಮೊದಮೊದಲು ತಮಾಷೆ ನಗುಗಳೊಂದಿಗೆ ಆರಂಭವಾಗುವ ತಯಾರಿ ನಂತರ ಬಿಗಿಯಾಗುತ್ತಾ ಹೋಗುತ್ತದೆ. ಕಲಿಕೆ ಪರಿಶ್ರಮಗಳು ನಾಟಕ ಪ್ರದರ್ಶನ ಹತ್ತಿರ ಬಂದಂತೆಲ್ಲ ಕಾವೇರುತ್ತಾ ಹೋಗುತ್ತದೆ. ನಾಟಕವೆಂದರೆ ಕೇವಲ ಅಭಿನಯವಷ್ಟೇ ಅಲ್ಲ ರಂಗದಲ್ಲಿ ರಂಗ ಪರಿಕರಗಳ ನಿರ್ಮಿಸುವ ಕೆಲಸದಿಂದ ಹಿಡಿದು, ಕಸಗುಡಿಸುವ ತನಕ ಎಲ್ಲವನ್ನು ನಟರು ಮಾಡಬೇಕಾಗಿರುತ್ತದೆ. ವಿವಿಧ ಸ್ತರದ ಬದುಕನ್ನು ಅಲ್ಲಿಯೇ ಕಲಿಯುತ್ತೇವೆ.

ನನ್ನದೊಂದು ಅನುಭವದ ಪ್ರಕಾರ ರಂಗದಲ್ಲಿ ಇದ್ದಷ್ಟು ಹೊತ್ತು ವೈಯಕ್ತಿಕ ಬದುಕಿನ ಪಾತ್ರ ಮರೆತು ಹೋಗುತ್ತದೆ. ವೈಯಕ್ತಿಕ ಜೀವನದಲ್ಲಿ ಬಡವನಾಗಿರುವವನು ಕೂಡ, ರಂಗದಲ್ಲಿ ಆಗರ್ಭ ಶ್ರೀಮಂತನಾಗುತ್ತಾನೆ. ಅದೇ ರಂಗದ ಶಕ್ತಿ. ಬಣ್ಣ ಕಳಚಿದ ಮೇಲಷ್ಟೇ ಆತನ ವೈಯಕ್ತಿಕ ಬದುಕು ಅದರೊಳಗಿನ ಸಮಸ್ಯೆಗಳ ನೆನಪಾಗುತ್ತದೆ. ಇಲ್ಲಿ ಸಿಗುವ ಆತ್ಮತೃಪ್ತಿ ಮತ್ತೆಲ್ಲೂ ಸಿಗಲಾರದು…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading

ಅಂಕಣ

ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ರಾಜಮಾರ್ಗ ಅಂಕಣ: ಪುಸ್ತಕಗಳು ಜ್ಞಾನವನ್ನು ಉದ್ದೀಪನ ಮಾಡುವ ದೀಪಸ್ತಂಭಗಳು ಮಾತ್ರವಲ್ಲ, ಸ್ಫೂರ್ತಿ ನೀಡುವ ಮಾಧ್ಯಮಗಳು. ಗಾಂಧೀಜಿಯವರು ಬಾಲ್ಯದಲ್ಲಿ ಓದಿದ ಜಾನ್ ರಸ್ಕಿನ್ ಬರೆದ ‘ಆನ್ ಟು ದ ಲಾಸ್ಟ್ ‘ ಪುಸ್ತಕವು ತನ್ನ ಬದುಕಿನ ಗತಿಯನ್ನೇ ಬದಲಾವಣೆ ಮಾಡಿತು ಎಂದು ಹೇಳಿದ್ದಾರೆ.

VISTARANEWS.COM


on

reading rajamarga column
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಏಪ್ರಿಲ್ 23 – ಇಂದು ವಿಶ್ವ ಪುಸ್ತಕ ದಿನ (World book day). ಓದುವ (Reading) ಸುಖಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಹಾಗೆಯೇ ಇಂದು ಖ್ಯಾತ ನಾಟಕಕಾರ ಶೇಕ್ಸ್‌ಪಿಯರ್ (Shakespeare) ಹುಟ್ಟಿದ ದಿನ ಕೂಡ. ಹಾಗೆಯೇ ಆತ ಮೃತಪಟ್ಟ ದಿನ ಕೂಡ ಇದೇ ಏಪ್ರಿಲ್ 23!

ಓದುವ ಸುಖಕ್ಕೆ ಬೆಲೆ ಕಟ್ಟಲು ಸಾಧ್ಯವೇ?

ಪುಸ್ತಕಗಳು ಜ್ಞಾನವನ್ನು ಉದ್ದೀಪನ ಮಾಡುವ ದೀಪಸ್ತಂಭಗಳು ಮಾತ್ರವಲ್ಲ, ಸ್ಫೂರ್ತಿ ನೀಡುವ ಮಾಧ್ಯಮಗಳು. ಗಾಂಧೀಜಿಯವರು ಬಾಲ್ಯದಲ್ಲಿ ಓದಿದ ಜಾನ್ ರಸ್ಕಿನ್ ಬರೆದ ‘ಆನ್ ಟು ದ ಲಾಸ್ಟ್ ‘ ಪುಸ್ತಕವು ತನ್ನ ಬದುಕಿನ ಗತಿಯನ್ನೇ ಬದಲಾವಣೆ ಮಾಡಿತು ಎಂದು ಹೇಳಿದ್ದಾರೆ. ಹಾಗೆಯೇ ಅವರು ರಷ್ಯನ್ ಲೇಖನ ಲಿಯೋ ಟಾಲ್ಸ್ಟಾಯ್ ಅವರ ಪುಸ್ತಕಗಳನ್ನು ಓದಿ ಪ್ರಭಾವಿತರಾದರು.

ಭಗತ್ ಸಿಂಗ್ ಅವರು ಲೆನಿನ್ ಬರೆದ ‘ಸ್ಟೇಟ್ ಆಂಡ್ ರಿವೊಲ್ಯುಶನ್’ ಪುಸ್ತಕವನ್ನು ಓದಿ ಸ್ಫೂರ್ತಿ ಪಡೆದೆ ಎಂದು ಹೇಳಿದ್ದಾರೆ. ಹೀಗೆ ಮಹಾಪುರುಷರು ಒಂದಲ್ಲ ಒಂದು ಪುಸ್ತಕಗಳಿಂದ ಪ್ರಭಾವಿತರಾದವರು .ಯಾವುದೇ ವ್ಯಕ್ತಿಯ ಬದುಕಿನ ಗತಿಯಲ್ಲಿ ಪ್ರಮುಖವಾದ ತಿರುವನ್ನು ತರುವ ಶಕ್ತಿಯು ಪುಸ್ತಕಗಳಿಗೆ ಇವೆ ಎಂದು ನೂರಾರು ಬಾರಿ ಸಾಬೀತು ಆಗಿದೆ.

ನನ್ನ ಬಾಲ್ಯದ ವಿಳಾಸ ಹೀಗೆ ಇತ್ತು – c/o ಲೈಬ್ರೆರಿ!

ನನಗೆ ಬಾಲ್ಯದಿಂದಲೂ ಓದುವ ಅನಿವಾರ್ಯ ವ್ಯಸನವನ್ನು ಅಂಟಿಸಿದವರು ನನ್ನ ಕನ್ನಡ ಶಾಲೆಯ ಅಧ್ಯಾಪಕರು. ಅವರು ತರಗತಿಯಲ್ಲಿ ಪಾಠವನ್ನು ಮಾಡುವಾಗ ಒಂದಲ್ಲ ಒಂದು ಪುಸ್ತಕದ ರೆಫರೆನ್ಸ್ ಕೊಡುತ್ತಿದ್ದರು. ಮತ್ತು ಸ್ಟಾಫ್ ರೂಮಿಗೆ ನಾವು ಹೋದಾಗ ಅದೇ ಪುಸ್ತಕವು ಅವರ ಟೇಬಲ್ ಮೇಲೆ ಸಿಂಗಾರಗೊಂಡು ಕೂತಿರುತಿತ್ತು. ನಾವು ಕೈಗೆ ಎತ್ತಿಕೊಂಡರೆ ‘ ಓದಿ ಹಿಂದೆ ಕೊಡು ಪುಟ್ಟ ‘ಎಂಬ ಮಾತು ತುಂಬ ಖುಷಿ ಕೊಡುತ್ತಿತ್ತು. ಹಾಗೆ ನಮ್ಮ ಕನ್ನಡ ಶಾಲೆಯ ಅಧ್ಯಾಪಕರಿಂದ ಆರಂಭವಾದ ನನ್ನ ಓದಿನ ವ್ಯಸನ ಇಂದಿನವರೆಗೂ ಮುಂದುವರೆದಿದೆ! ಈವರೆಗೆ ಸಾವಿರಾರು ಪುಸ್ತಕಗಳನ್ನು ಓದಿ ಮುಗಿಸಿದ್ದೇನೆ ಎನ್ನುವುದು ಅಭಿಮಾನದ ಮಾತು. ಈ ಓದು ನನ್ನ ಭಾಷೆ ಮತ್ತು ಚಿಂತನೆಯನ್ನು ಶ್ರೀಮಂತವಾಗಿ ಮಾಡಿತು.

ನನ್ನ ಬಾಲ್ಯ ಮತ್ತು ಯೌವ್ವನದ ಎಲ್ಲ ರಜೆಗಳು, ಸಂಜೆಗಳು ಕಳೆದದ್ದು ಕಾರ್ಕಳದ ವಿಸ್ತಾರವಾದ ಗ್ರಂಥಾಲಯದಲ್ಲಿ. ಹಾಗೆ ನನ್ನ ಗೆಳೆಯರು ನನ್ನನ್ನು C/O ಲೈಬ್ರೆರಿ ಎಂದು ತಮಾಷೆ ಮಾಡುತ್ತಿದ್ದರು.

ವಯಸ್ಸಿಗೆ ಸರಿಯಾದ ಪುಸ್ತಕಗಳ ಆಯ್ಕೆ

ನಮ್ಮ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಬಾಲ್ಯದಲ್ಲಿ ಮೂಡಿಸುವುದು ಹೆತ್ತವರ ಮತ್ತು ಶಿಕ್ಷಕರ ಹೊಣೆ. ನಮ್ಮ ಕೈಯ್ಯಲ್ಲಿ ಪುಸ್ತಕಗಳು ಇದ್ದರೆ ಮಕ್ಕಳಿಗೆ ಓದು ಓದು ಎಂದು ಹೇಳುವ ಅಗತ್ಯ ಬೀಳುವುದಿಲ್ಲ. ಆದರೆ ಮಕ್ಕಳ ವಯಸ್ಸಿಗೆ ಅನುಗುಣವಾದ ಪುಸ್ತಕಗಳನ್ನು ನೀಡಿ ಓದಿಸುವುದು ಅಗತ್ಯ. ಅದರ ಬಗ್ಗೆ ಒಂದಿಷ್ಟು ಸೂತ್ರಗಳು ಇಲ್ಲಿವೆ.

Book Reading Habit in Children

ಬಾಲ್ಯದ 5-8 ವರ್ಷ – ಕಲ್ಪನಾ ಲೋಕ

ಈ ವಯಸ್ಸು ಮಕ್ಕಳಲ್ಲಿ ರಚನಾತ್ಮಕ ಯೋಚನೆಗಳು ಮತ್ತು ಕಲ್ಪನೆಗಳು ಮೂಡುವ ಅವಧಿ. ಆ ವಯಸ್ಸಿನ ಮಕ್ಕಳಿಗೆ ಕಾಲ್ಪನಿಕವಾದ ಪ್ರಾಣಿ, ಪಕ್ಷಿಗಳ ಕಥೆ ಹೊಂದಿರುವ ಚಿತ್ರ ಪುಸ್ತಕಗಳು ( ಕಾಮಿಕ್ಸ್) ಹೆಚ್ಚು ಉಪಯುಕ್ತ. ಪಂಚತಂತ್ರದ ಕಥೆಗಳು, ಕಾಕೋಲುಕೀಯ, ಈಸೋಪನ ಕಥೆಗಳು ಈ ವಯಸ್ಸಿನ ಮಕ್ಕಳಿಗೆ ಸೂಕ್ತ. ರಾಷ್ಟ್ರೋತ್ಥಾನ ಪರಿಷತ್ ಹೊರತಂದಿರುವ ‘ಭಾರತ ಭಾರತೀ ‘ ಸರಣಿಯ ಸಾವಿರಾರು ಕಿರು ಪುಸ್ತಕಗಳು ಈ ವಯಸ್ಸಿನ ಮಕ್ಕಳಿಗೆ ಓದಲು ಚಂದ.

ಬಾಲ್ಯದ 9-12 ವರ್ಷ – ಕುತೂಹಲದ ಪರ್ವಕಾಲ

ಈ ವಯಸ್ಸಿನ ವಿದ್ಯಾರ್ಥಿಗಳು ಸೃಜನಶೀಲವಾಗಿ ಯೋಚನೆ ಮಾಡುತ್ತಾರೆ ಮತ್ತು ನೈತಿಕ ಮೌಲ್ಯಗಳನ್ನು ನಿಧಾನವಾಗಿ ಜೀರ್ಣ ಮಾಡಿಕೊಳ್ಳುತ್ತಾರೆ. ಅವರಿಗೆ ವಿಜ್ಞಾನಿಗಳ ಕಥೆಗಳು, ಸಿಂದಬಾದನ ಸಾಹಸದ ಕಥೆಗಳು, ರಾಮಾಯಣ, ಮಹಾಭಾರತದ ಕಿರು ಪುಸ್ತಕಗಳು ಹೆಚ್ಚು ಇಷ್ಟವಾಗುತ್ತವೆ. ಆ ಪುಸ್ತಕಗಳಲ್ಲಿ ಹೆಚ್ಚು ಚಿತ್ರಗಳು ಇದ್ದರೆ ಮಕ್ಕಳು ಖುಷಿಪಟ್ಟು ಓದುತ್ತಾರೆ.

ಹದಿಹರೆಯದ 12-15 ವರ್ಷ – ಸಣ್ಣ ಸಣ್ಣ ಕನಸು ಮೊಳೆಯುವ ವಯಸ್ಸು

ಸಣ್ಣ ಕತೆಗಳು ಹೆಚ್ಚು ಇಷ್ಟ ಆಗುವ ವಯಸ್ಸದು. ಸ್ಫೂರ್ತಿ ನೀಡುವ ವಿಕಸನದ ಲೇಖನಗಳು ಅವರಿಗೆ ಹೆಚ್ಚು ಇಷ್ಟವಾಗುತ್ತವೆ. ಎಡಿಸನ್ ತನ್ನ ಬಾಲ್ಯದ ಸಮಸ್ಯೆಗಳನ್ನು ಹೇಗೆ ಗೆದ್ದನು? ಅಬ್ರಹಾಂ ಲಿಂಕನ್ ಕಡುಬಡತನವನ್ನು ಮೆಟ್ಟಿ ಅಮೇರಿಕಾದ ಅಧ್ಯಕ್ಷ ಆದದ್ದು ಹೇಗೆ? ಮೊದಲಾದ ಸ್ಫೂರ್ತಿ ಆಧಾರಿತ ಕಥೆಗಳನ್ನು ಆ ವಯಸ್ಸಿನ ವಿದ್ಯಾರ್ಥಿಗಳು ಖುಶಿ ಪಟ್ಟು ಓದುತ್ತಾರೆ. ಹಾಗೆಯೇ ರಾಷ್ಟ್ರ ಪ್ರೇಮದ ಪುಸ್ತಕಗಳನ್ನು ಓದಲು ಆರಂಭ ಮಾಡಬೇಕಾದ ವಯಸ್ಸು ಇದು. ನಾನು ಒಂಬತ್ತನೇ ತರಗತಿಯಲ್ಲಿ ಓದಿದ ಬಾಬು ಕೃಷ್ಣಮೂರ್ತಿ ಅವರ ‘ ಅಜೇಯ ‘ ಪುಸ್ತಕವು ನನ್ನ ಬದುಕಿನಲ್ಲಿ ಭಾರೀ ಬದಲಾವಣೆ ತಂದಿತ್ತು. ಅದು ಖ್ಯಾತ ಕ್ರಾಂತಿಕಾರಿ ಚಂದ್ರಶೇಖರ್ ಆಝಾದ್ ಅವರ ಬದುಕಿನ ಪುಸ್ತಕ ಆಗಿದೆ.

15-18 ವಯಸ್ಸು – ಹುಚ್ಚು ಖೋಡಿ ಮನಸ್ಸು

ಈ ವಯಸ್ಸಿನ ವಿದ್ಯಾರ್ಥಿಗಳು ಸ್ವಲ್ಪ ಕುತೂಹಲ ಮತ್ತು ಹೆಚ್ಚು ಉಡಾಫೆ ಹೊಂದಿರುತ್ತಾರೆ. ಈ ವಯಸ್ಸಿನವರಿಗೆ ಹೆಚ್ಚು ಆಪ್ತವಾಗುವುದು ವಿಕಸನದ ಸ್ಫೂರ್ತಿ ನೀಡುವ ಲೇಖನಗಳೇ ಆಗಿವೆ. ಸಾಹಸ, ಪ್ರವಾಸ, ಸಂಶೋಧನೆ, ಸ್ವಲ್ಪ ರೋಮಾನ್ಸ್ ಇರುವ ಕತೆಗಳನ್ನು ಹೊಂದಿರುವ ಪುಸ್ತಕಗಳು ಅವರಿಗೆ ಹೆಚ್ಚು ಇಷ್ಟವಾಗುತ್ತವೆ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಣ್ಣ ಕತೆಗಳು, ಪೂರ್ಣಚಂದ್ರ ತೇಜಸ್ವಿ ಅವರ ರಂಜನೆ ಕಡಿಮೆ ಇರುವ ಕಥೆಗಳ ಪುಸ್ತಕಗಳನ್ನು ಅವರಿಗೆ ಕೊಟ್ಟು ನೋಡಿ. ಡುಂಡಿರಾಜರ ಹನಿಗವನಗಳು ಈ ವಯಸ್ಸಿನ ಓದುಗರಿಗೆ ತುಂಬ ಇಷ್ಟ ಆಗುತ್ತವೆ.

20-24 ವಯಸ್ಸು – ಯೌವ್ವನದ ಕಚಗುಳಿ

ಕಾಲೇಜು ಹಂತದ ವಿದ್ಯಾರ್ಥಿಗಳು ಭ್ರಮೆಯಿಂದ ಹೊರಬಂದು ವಾಸ್ತವದ ನೆಲೆಗಟ್ಟಿನ ಚಿಂತನೆಗಳನ್ನು ಹೊಂದಿರುತ್ತಾರೆ. ಕುವೆಂಪು, ಕಾರಂತ, ಭೈರಪ್ಪ, ರವೀ ಬೆಳಗೆರೆ…….ಮೊದಲಾದವರ ಗಂಭೀರ ಚಿಂತನೆ ಹೊಂದಿರುವ ಮತ್ತು ವಾಸ್ತವದ ನೆಲೆಗಟ್ಟಿನ ಕಾದಂಬರಿಗಳನ್ನು ಈ ವಯಸ್ಸಿನಲ್ಲಿ ಓದಲು ಆರಂಭ ಮಾಡಬೇಕು. ಹಾಗೆಯೇ ಆತ್ಮಚರಿತ್ರೆಯ ಪುಸ್ತಕಗಳನ್ನು ಓದಲು ಆರಂಭಿಸಬೇಕಾದ ವಯಸ್ಸು ಇದು. ಅಬ್ದುಲ್ ಕಲಾಂ ಅವರ ಅಗ್ನಿಯ ರೆಕ್ಕೆಗಳು ಮತ್ತು ಪ್ರಜ್ವಲಿಸುವ ಮನಸುಗಳು ಇವೆರಡು ಪುಸ್ತಕಗಳನ್ನು ಈ ವಯಸ್ಸಿನ ವಿದ್ಯಾರ್ಥಿಗಳಿಗೆ ಉಡುಗೊರೆಯಾಗಿ ಕೊಟ್ಟರೆ ಅವರು ತುಂಬಾ ಖುಷಿ ಪಡುತ್ತಾರೆ. ಷಡಕ್ಷರಿ ಅವರ ‘ ಕ್ಷಣ ಹೊತ್ತು ಆಣಿ ಮುತ್ತು ‘ ಅಂಕಣಗಳು ಮತ್ತು ಪ್ರತಾಪ ಸಿಂಹ ಅವರ ‘ಬೆತ್ತಲೆ ಜಗತ್ತು ‘ ಅಂಕಣಗಳು ಹೆಚ್ಚು ಖುಷಿ ಕೊಡುವ ವಯಸ್ಸು ಅದು.

25-28 ವಯಸ್ಸು – ಬದುಕಿನ ಸೌಂದರ್ಯದ ವಸಂತ ಕಾಲ

ಮನಸ್ಸು ಮಾಗಿ ಪ್ರಬುದ್ಧತೆಯು ಮೂಡುವ ಈ ವಯಸ್ಸಲ್ಲಿ ಬದುಕಿನ ಸೌಂದರ್ಯದ ಅನುಭೂತಿ ಮೂಡಿಸುವ ತ್ರಿವೇಣಿ, ಸಾಯಿಸುತೆ, ಅನಕೃ, ದೇವುಡು, ತರಾಸು, ನಾ ಡಿಸೋಜಾ ಅವರ ಕಾದಂಬರಿಗಳು ಹೆಚ್ಚು ಆಪ್ತವಾಗುತ್ತವೆ. ಭಾವಗೀತೆಗಳ ಓದು ಖುಷಿ ಕೊಡುತ್ತದೆ. ಸೋತವರ ಕಥೆಗಳು ಹೆಚ್ಚು ಆಪ್ತವಾಗುತ್ತವೆ. ಕಾದಂಬರಿಯ ಓದು ಹೆಚ್ಚು ತಾಳ್ಮೆಯನ್ನು ಬೇಡುತ್ತದೆ. ಆದರೂ ಒಮ್ಮೆ ಅವರು ಓದುವ ಅಭಿರುಚಿ ರೂಢಿಸಿಕೊಂಡರೆ ಅವರು ಅಂತಹ ಪುಸ್ತಕಗಳನ್ನು ಪ್ರೀತಿ ಮಾಡಲು ತೊಡಗುತ್ತಾರೆ.

ಭರತ ವಾಕ್ಯ

ನನ್ನಂತಹ ಭಾಷಣಕಾರ ಮತ್ತು ತರಬೇತಿದಾರನನ್ನು ಜೀವಂತ ಆಗಿಡುವುದೇ ಪುಸ್ತಕಗಳು ಮತ್ತು ಪುಸ್ತಕಗಳು! ಸಾಮಾಜಿಕ ಜಾಲತಾಣಗಳ ಕಾರಣಕ್ಕೆ ಓದುಗರ ಸಂಖ್ಯೆ ಕಡಿಮೆ ಆಗಿದೆ ಎಂದು ಮೇಲ್ನೋಟಕ್ಕೆ ಅನ್ನಿಸಿದರೂ ಅದು ಪೂರ್ತಿ ನಿಜವಲ್ಲ.

ವಿಶ್ವ ಪುಸ್ತಕ ದಿನವಾದ ಇಂದು ನೀವು ನಿಮ್ಮ ಮಕ್ಕಳಲ್ಲಿ ಓದುವ ಸಂಕಲ್ಪ ಹುಟ್ಟಿಸಿದಿರಿ ಅಂತಾದರೆ ಅದು ಸಾರ್ಥಕ ಹೆಜ್ಜೆ ಆಗುತ್ತದೆ. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Continue Reading
Advertisement
Viral Video
ವೈರಲ್ ನ್ಯೂಸ್2 mins ago

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

deadly murder
Latest25 mins ago

Deadly Murder: ಬರ್ಗರ್‌ ತಿಂದನೆಂದು ಸ್ನೇಹಿತನನ್ನೇ ಗುಂಡಿಟ್ಟು ಕೊಂದ!

Chemistry paper leak case
ಕೋರ್ಟ್27 mins ago

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Ranji Trophy
ಪ್ರಮುಖ ಸುದ್ದಿ48 mins ago

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

Fire Tragedy
ದೇಶ1 hour ago

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

World Malaria Day April 25
ಆರೋಗ್ಯ1 hour ago

World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

Bismah Maroof
ಕ್ರೀಡೆ1 hour ago

Bismah Maroof : ಹೆಣ್ಣು ಮಗುವಿನ ಸಮೇತ ಆಡಲು ಹೋಗುತ್ತಿದ್ದ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ ನಿವೃತ್ತಿ

Modi in Karnataka Pm Modi to visit Karnataka on April 28 and 29 Raichur conference maybe cancelled
Lok Sabha Election 20241 hour ago

Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

Lok Sabha Election
ಕರ್ನಾಟಕ1 hour ago

Lok Sabha Election: ನಾಳೆ ಮೊದಲ ಹಂತದ ಮತದಾನ; ಬೆಂಗಳೂರಿನಲ್ಲಿ ಏನಿರತ್ತೆ? ಏನಿರಲ್ಲ?

KKR vs PBKS
ಕ್ರೀಡೆ2 hours ago

KKR vs PBKS: ಪಂಜಾಬ್​ಗೆ ಮಸ್ಟ್​ ವಿನ್​ ಗೇಮ್; ಕೆಕೆಆರ್​ ಎದುರಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ2 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ5 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20247 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌