ವಿಸ್ತಾರ ಯುಗಾದಿ ಕಥಾಸ್ಪರ್ಧೆ: ತೀರ್ಪುಗಾರರ ಟಿಪ್ಪಣಿ: ಸಾಮಾಜಿಕ ಪ್ರಸ್ತುತತೆಯೇ ಜೀವಾಳವಾಗಿರುವ ಕತೆಗಳು - Vistara News

ಕಲೆ/ಸಾಹಿತ್ಯ

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ತೀರ್ಪುಗಾರರ ಟಿಪ್ಪಣಿ: ಸಾಮಾಜಿಕ ಪ್ರಸ್ತುತತೆಯೇ ಜೀವಾಳವಾಗಿರುವ ಕತೆಗಳು

ವಿಸ್ತಾರ ನ್ಯೂಸ್‌ ಯುಗಾದಿ ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಕಥೆಗಳ ಬಗ್ಗೆ ತೀರ್ಪುಗಾರರು ವಿವರವಾದ ಟಿಪ್ಪಣೆ ಬರೆದಿದ್ದಾರೆ. ತೀರ್ಪುಗಾರರಲ್ಲಿ ಒಬ್ಬರಾದ ಬಿ.ಜನಾರ್ದನ ಭಟ್‌ ಬರೆದ ವಿವರವಾದ ಟಿಪ್ಪಣಿ ಇಲ್ಲಿದೆ.

VISTARANEWS.COM


on

vistara short story contest winners
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

b-janardhana-bhat

:: ಡಾ. ಬಿ. ಜನಾರ್ದನ ಭಟ್

ಈ ಇಪ್ಪತ್ತೈದು ಕತೆಗಳನ್ನು ಕನ್ನಡದ ಈ ಕಾಲಘಟ್ಟದ ಕತೆಗಳ ಪ್ರಾತಿನಿಧಿಕ ಕತೆಗಳು ಎಂದು ಭಾವಿಸಿದರೆ ಈ ಕತೆಗಳನ್ನು ಒಟ್ಟಾರೆಯಾಗಿ ಸಮೀಕ್ಷಿಸುವ ಮೂಲಕ ಸಣ್ಣಕತೆಗಳ ಒಲವು ನಿಲುವುಗಳನ್ನು ಅರಿಯಬಹುದು ಅನಿಸುತ್ತದೆ.

ಅದಕ್ಕಿಂತ ಮೊದಲು ಸಣ್ಣಕತೆಗಳ ಪ್ರಕಾರಕ್ಕೆ ಸಂಬಂಧಿಸಿದ ಕೆಲವು ಮಾತುಗಳು: ಸಣ್ಣಕತೆಗಳಲ್ಲಿ ಒಂದು ಕಥಾಂಶ ಅಥವಾ ಟೇಲ್ ಪ್ರಾಪರ್ ಮತ್ತು ಅದರ ಮೂಲಕ ವ್ಯಕ್ತವಾಗುವ ಆಶಯ – ಕತೆಗಾರ ರೂಪಿಸುವ ಒಂದು ಪರಿಣಾಮ – ಓದುಗರಿಗೆ ಮುಖ್ಯವಾಗಿ ಗಮನಕ್ಕೆ ಬರುವ ಅಂಶಗಳು. ಸತ್ಯದ ಅನ್ವೇಷಣೆ ಬಹುಮಟ್ಟಿಗೆ ಕತೆಗಾರಿಕೆಯ ಉದ್ದೇಶ.

ಆದರೆ ಸಣ್ಣಕತೆಯು ರ್ಯಾಶಿಯಾಸಿನೇಷನ್ (ratiocination) ಅಥವಾ ತರ್ಕಪ್ರಕ್ರಿಯೆಯ ಕಥಾನಕವೂ ಹೌದು – ಎನ್ನುವುದನ್ನು ಮೊದಲನೆಯ ಆಧುನಿಕ ಕತೆಗಾರ ಎಡ್ಗರ್ ಅಲನ್ ಪೋ-ನೇ ಹೇಳಿದ್ದಾನೆ. ಈ ಕಾಲದ ಕತೆಗಳಿಗೆ ಈ ಮಾದರಿ ಹೆಚ್ಚು ಪ್ರಿಯವಾಗಿದೆ. ಬಹುತೇಕ ಕತೆಗಳು ರ್ಯಾಶಿಯಾಸಿನೇಷನ್ ಮಾದರಿಯವು. ಇದನ್ನು ಬಳಸುವುದರಲ್ಲಿ ಹೆಚ್ಚುಗಾರಿಕೆಯಾಗಲಿ, ದೋಷವಾಗಲಿ ಇಲ್ಲ. ಆದರೆ ಕಥೆಯ ಸಂವಿಧಾನವನ್ನು ಕಲ್ಪಿಸುವಾಗ ಡೆನ್ಯೂಮೋ ಅಥವಾ ಇಳಿಮುಖ ಕ್ರಿಯೆ ಮತ್ತು ಅಂತ್ಯವನ್ನು – ಅಂತ್ಯವು ಬೀರಬೇಕಾದ ಪರಿಣಾಮವನ್ನು – ಕಲ್ಪಿಸುವಲ್ಲಿ ಬಹುತೇಕ ಕತೆಗಾರರು ವಿಫಲರಾಗುತ್ತಿರುವುದನ್ನು ಈ ಕೆಲವು ಕತೆಗಳಲ್ಲಿ ನಾನು ಗಮನಿಸಿದ್ದೇನೆ.

ಸಣ್ಣಕತೆ ನೈತಿಕ ಅರಿವಿನಲ್ಲಿನ ಬದಲಾವಣೆಯನ್ನು ತೋರಿಸುತ್ತದೆ; ಕಾದಂಬರಿಯಲ್ಲಿ ಬದುಕಿನ ನೈತಿಕ ಬದಲಾವಣೆಯನ್ನು ಚಿತ್ರಿಸುತ್ತದೆ (ಸಣ್ಣ ಕತೆಯು ಇದನ್ನು ಸೂಚಿಸಬಹುದಷ್ಟೆ). ಶೋರರ್ ಪ್ರಕಾರ – ಸಣ್ಣಕತೆಯಲ್ಲಿ ‘ನೈತಿಕ ಸಾಕ್ಷಾತ್ಕಾರದ ನೆಲೆ’ (ಆರ್ಟ್ ಆಫ್ ಮೋರಲ್ ರಿವಿಲೇಶನ್) ಇರುತ್ತದೆ; ಕಾದಂಬರಿಯಲ್ಲಿ ‘ನೈತಿಕ ವಿಕಾಸದ ನೆಲೆ’ (ಆರ್ಟ್ ಆಫ್ ಮೋರಲ್ ಇವೊಲ್ಯೂಷನ್) ಇರುತ್ತದೆ. ಸಣ್ಣಕತೆಯು ವಿಕಾಸದ ಪ್ರಕ್ರಿಯೆಯನ್ನು ಪರೀಕ್ಷಿಸಲು ಅದರಲ್ಲಿ ಮನುಷ್ಯ ಸಂಬಂಧಗಳು, ಅಥವಾ ಸಮಾನಾಂತರ ಕತೆಗಳು / ವೈದೃಶ್ಯಗಳು ಬೇಕಾಗುತ್ತವೆ. ಹೀಗೆ ಪರೀಕ್ಷಿಸುವ ವೇದಿಕೆಯಾಗಿದ್ದರೂ ಕೂಡ ಸಣ್ಣ ಕತೆಯಲ್ಲಿ ಒಂದು ಅನಿಸಿಕೆಯಾಗಿ ಅಥವಾ ತೀರ್ಮಾನವಾಗಿ ಮಾತ್ರ ಈ ನೈತಿಕ ಅರಿವಿನ ಸಾಕ್ಷಾತ್ಕಾರ ಬರುತ್ತದೆ. ಈ ಪರಿಶೀಲನೆಯ ಮೂಲಕ ಒಂದು ಮೌಲ್ಯವಾಗಿ ಸ್ವೀಕರಿಸಲ್ಪಟ್ಟ ನೈತಿಕ ಸಾಕ್ಷಾತ್ಕಾರದ ನೆಲೆಯು ಅದರ ಬೆಳವಣಿಗೆ ಅಥವಾ ನಿಜವಾದ ಸಾಕ್ಷಾತ್ಕಾರವನ್ನು ಓದುಗರ ಊಹೆಗೆ ಬಿಡಬೇಕಾಗುತ್ತದೆ.

ಫ್ರಾಂಕ್ ಒಕಾನರ್ ಹೇಳುವ ಪ್ರಕಾರ ಸಣ್ಣಕತೆಗಳ ನಾಯಕರು ಮುಳುಗಿಹೋದ ಜನರ (ಸಬ್‍ಮರ್ಜ್‍ಡ್ ಪಾಪ್ಯುಲೇಶನ್ ಗ್ರೂಪ್) ಪ್ರತಿನಿಧಿಗಳಾಗಿರುತ್ತಾರೆ. ಹಾಗಾಗಿ ಪತನದ ಅನುಭವ ಕೊಡುವ ಕತೆಗಳೇ ಹೆಚ್ಚು. ಈ 25 ಕತೆಗಳ ಮಟ್ಟಿಗೂ ಅದನ್ನು ಹೇಳಬಹುದು. ಇಲ್ಲಿ ಬಹುಮಾನ ಪಡೆದ ಕತೆಗಳ ಬಗ್ಗೆ ಒಟ್ಟಿನಲ್ಲಿ ಕೆಲವು ಮಾತುಗಳನ್ನು ಹೇಳುವುದಾದರೆ ಇವು ಸಮಕಾಲೀನತೆ ಉಳ್ಳ, ಸಾಮಾಜಿಕ ಪ್ರಸ್ತುತತೆಯುಳ್ಳ ಕತೆಗಳಾಗಿರುವುದರ ಜತೆಗೆ ‘ಮುಳುಗಿಹೋದ’ ಸ್ಥಿತಿಯಿಂದ ಎದ್ದು ಬರುವ ಛಲವನ್ನು ಅಥವಾ ಮುಳುಗುತ್ತಿರುವವರಿಗೆ ಕೈನೀಡಿ ಎಬ್ಬಿಸುವ ಛಾತಿಯನ್ನು ತೋರಿಸುತ್ತವೆ. ಹಾಗಾಗಿ ಅವು ಬಹುಮಾನಕ್ಕೆ ಅರ್ಹವಾಗಿವೆ. ಈ ಮಾನದಂಡದಲ್ಲಿ ಅಥವಾ ಯಾವುದೇ ಮಾನದಂಡದಲ್ಲಿ ನೋಡಿದರೂ ಬಹುಮಾನಕ್ಕೆ ಅರ್ಹವಾಗಿರುವ ಇನ್ನಷ್ಟು ಕತೆಗಳು ಈ 25 ಕತೆಗಳಲ್ಲಿವೆ. ಕೇವಲ ಎಂಟು ಕತೆಗಳನ್ನು ಆರಿಸಿಕೊಳ್ಳಬೇಕಾದಾಗ, ಅಂತಹ ಕೆಲವು ಕತೆಗಳನ್ನು ಹೊರಗಿಡುವ ತೀರ್ಮಾನ ಕೈಗೊಳ್ಳುವುದು ಕೂಡ ಸ್ವಲ್ಪ ಕಷ್ಟವೇ ಆಗಿತ್ತು.

ನನಗೆ ಸಂಪಾದಕರು ಕಳುಹಿಸಿಕೊಟ್ಟಿರುವ ಅಂತಿಮ ಸುತ್ತಿಗೆ ಆಯ್ಕೆಯಾದ 25 ಕತೆಗಳಲ್ಲಿ ಮೊದಲ ಎಂಟು ಸ್ಥಾನಗಳಿಗೆ ಆಯ್ಕೆಯಾಗಿರುವ ಕತೆಗಳ ಕುರಿತು ಟಿಪ್ಪಣಿಗಳು ಹೀಗಿವೆ:

ಪ್ರಥಮ ಬಹುಮಾನ ಪಡೆದ ಕತೆ: ಸೋಮನ ಕುಣಿತ

ಸೋಮನ ಕುಣಿತ ಎನ್ನುವುದು ಒಂದು ಗ್ರಾಮೀಣ ಆಚರಣೆ ಎನ್ನುವುದು ಕತೆಯಿಂದ ತಿಳಿದುಬರುವ ಮಾಹಿತಿ; ಈ ಆಚರಣೆಯ ಕುರಿತು ತಿಳಿಯದವರಿಗೂ ಕತೆಯನ್ನು ಓದಿ ಮೆಚ್ಚಲು ಬೇಕಾಗುವಷ್ಟು ಮಾಹಿತಿ ಕತೆಯೊಳಗೆಯೆ ಸಿಗುವುದರಿಂದ ಈ ಆಚರಣೆಯ ಬಗ್ಗೆ ತಿಳಿಯದ ಓದುಗರಿಗೆ ಸಮಸ್ಯೆಯಾಗುವುದಿಲ್ಲ. ಕೊಂಡಮ್ಮ ದೇವಿ ಎಂಬ ಗ್ರಾಮದೇವತೆಯ ಇಬ್ಬರು ಅಂಗರಕ್ಷಕರಲ್ಲಿ ರೌದ್ರ ಸೋಮ ಮತ್ತು ಸೌಮ್ಯ ಸೋಮ ಎಂಬ ಇಬ್ಬರು ಪಾತ್ರಧಾರಿಗಳಿರಬೇಕು. ರೌದ್ರ ಸೋಮನ ವೇಷಧಾರಿ ಕೆಂಪು ಬಣ್ಣ ಬಳಿದುಕೊಂಡು 15 ಕಿಲೋ ಭಾರವಾದ ರೌದ್ರ ಸೋಮನನ್ನು ಹೊತ್ತು ಕುಣಿಯಬೇಕು. ರಂಗಯ್ಯ ರೌದ್ರ ಸೋಮನನ್ನು ಹೊತ್ತು ಕುಣಿಯುತ್ತಿದ್ದ ಶಕ್ತಿವಂತ. ಅವನ ತಮ್ಮ ನರಸುಮ್ಮ ಹಳದಿ ಬಣ್ಣದ ಸೌಮ್ಯ ಸೋಮನನ್ನು ಹೊತ್ತು ಸುಮ್ಮನೆ ನಿಂತರೆ ಸಾಕಿತ್ತು. ರಂಗಯ್ಯ ಊರು ಬಿಟ್ಟು ಹೋದ ಮೇಲೆ ರೌದ್ರ ಸೋಮನನ್ನು ಹೊರುವವರು ಯಾರೂ ಸಿಕ್ಕಿರಲಿಲ್ಲ. ತನಗೆ ಬದುಕುವ ದಾರಿ ಮಾಡಿಕೊಡುತ್ತಿದ್ದ ತಮಟೆಯ ಚರ್ಮ ಹರಿದು ಬೇರೊಂದು ಚರ್ಮಕ್ಕಾಗಿ ದೊಡ್ಡಮದುರೆಯ ಜಾತ್ರೆಯ ಕೋಣಬಲಿಯ ದಿನಕ್ಕೆ ಕಾಯುತ್ತಿದ್ದ ನರಸುಮ್ಮನಿಗೆ ನಿಷೇಧ ಇತ್ಯಾದಿ ಗೊಂದಲದಿಂದ ಚರ್ಮ ಸಿಗುವುದಿಲ್ಲ. ಎರಡು ದಿನ ಕಳೆದು ಜಾತ್ರೆಯಾಗುತ್ತಿದ್ದ ಪಕ್ಕದ ಸ್ವಾಂದೇನಹಳ್ಳಿಗೆ ಹೋದರೆ ಅಲ್ಲಿ ಪೊಲೀಸರು ಎಚ್ಚರಿಕೆಯಿಂದ ಕಾದುಕೊಂಡಿದ್ದು ಬಲಿಯಾಗದಂತೆ ತಡೆಯುತ್ತಾರೆ. ಹೊಟ್ಟೆಗಿಲ್ಲದೆ ಚರ್ಮಕ್ಕಾಗಿ ಕಾದುಕೊಂಡಿದ್ದ ನರಸುಮ್ಮನ ಸಾತ್ವಿಕ ರೋಷವು ಅವನನ್ನು ರೌದ್ರ ಸೋಮನನ್ನು ಹೊತ್ತುಕೊಂಡು ಕುಣಿಯುವಂತೆ ಪ್ರಚೋದಿಸುತ್ತದೆ. ಅವನ ರೌದ್ರ ಕುಣಿತದೊಂದಿಗೆ ಕತೆ ಕೊನೆಯಾಗುತ್ತದೆ.

ದಲಿತರ ಬಡತನ ಮತ್ತು ಜೀವನದ ಹೋರಾಟಗಳ ಒಂದು ಅದ್ಭುತ ಚಿತ್ರಣ ನೀಡುವ ಈ ಕತೆಯ ಭಾಷೆ, ಬಳಸುವ ರೂಪಕಗಳು ಎಲ್ಲವೂ ಸಶಕ್ತವಾಗಿವೆ. ಇದು ತನ್ನ ಒಡಲಲ್ಲಿಟ್ಟುಕೊಂಡಿರುವ ಸಮೃದ್ಧ ಜೀವನಾನುಭವ ಮತ್ತು ಅಷ್ಟೇ ಹೃದಯಸ್ಪರ್ಶಿಯಾಗಿ ಓದುಗನ ಅನುಭವವಾಗಿ ಮಾರ್ಪಡಿಸುವ ಶಕ್ತಿಯಿರುವ ಕತೆಯಾದುದರಿಂದ ಮೊದಲನೆಯ ಬಹುಮಾನಕ್ಕೆ ಅರ್ಹವಾದ ಕತೆಯಾಗಿದೆ.

ಇಂತಹ ಕತೆಗಳ ಸಮಾಜಶಾಸ್ತ್ರೀಯ ವಿವರಗಳನ್ನು ವಾಸ್ತವದ ನೆಲೆಗಟ್ಟಿನಲ್ಲಿ ವಿಶ್ಲೇಷಿಸಲು ಹೋದಾಗ ಅವು, ವರ್ತಮಾನ ಕಾಲದ ಅನುಭವಗಳಿಂದ ಪ್ರಶ್ನಾರ್ಹವಾಗುತ್ತವೆ. ಅನಂತಮೂರ್ತಿಯವರ ‘ಸಂಸ್ಕಾರ’ದ ಶವಸಂಸ್ಕಾರದ ಪ್ರಶ್ನೆ, ಚಿನುಅ ಅಚೆಬೆಯವರ ಕತೆಗಳ ಆಚರಣೆಗಳು ಈ ರೀತಿಯವು. ಇಂತಹ ಕತೆಗಳು ಪ್ರಶ್ನೆಗಳನ್ನು ಮೀರಿ, ಕೆಲವೊಮ್ಮೆ ದೇಶ ಕಾಲಗಳನ್ನೂ ಮೀರಿ ಚಿರಂತನ ರೂಪಕಗಳಾಗುವ ಶಕ್ತಿಯನ್ನು ಪಡೆದಾಗ ಅವು ಯಶಸ್ವಿ ಸಾಹಿತ್ಯಕೃತಿಗಳಾಗುತ್ತವೆ. ‘ಸೋಮನ ಕುಣಿತ’ ಕತೆಗೆ ಆ ಬಗೆಯ ಶಕ್ತಿಯಿರುವುದರಿಂದ ಇದಕ್ಕೆ ಮೊದಲನೆಯ ಬಹುಮಾನ ಕೊಡಬಹುದೆನ್ನುವುದು ನನ್ನ ಅಭಿಪ್ರಾಯವಾಗಿದೆ.

ಎರಡನೆಯ ಬಹುಮಾನ: ಅಂತಃಕರಣದ ಟಿಪ್ಪಣಿಗಳು

ಈ ಕತೆಯು ಕುಟುಂಬದ ಕೇಂದ್ರದಲ್ಲಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಗೃಹಿಣಿಯೊಬ್ಬಳ (ಭಾಗೀರಥಿ) ಸ್ವಗತದ ಮೂಲಕ ನಿರೂಪಿಸಲ್ಪಟ್ಟಿದೆ. ಆಕೆಗೆ ಬಹುಶಃ ಡಿಪ್ರೆಶನ್ ತರಹದ ಸಮಸ್ಯೆಯಿದ್ದು ಆಕೆಯ ವೈದ್ಯೆ ಸುಮನ ಆಕೆಗೆ ತನ್ನ ಬಗೆಗೆ ಬರೆದಿಡುವಂತೆ ಹೇಳಿದ್ದರಿಂದ ಟಿಪ್ಪಣಿಯ ರೂಪದಲ್ಲಿ ಇದನ್ನು ಬರೆಯುತ್ತಿದ್ದಾಳೆ. ಅವಳ ಕನಸಿನಲ್ಲಿ ಅಥವಾ ಭ್ರಮಾಲೋಕದೊಳಗೆ ಒಬ್ಬ ಹುಡುಗ ದಂಡವನ್ನಾಡಿಸುತ್ತಾ ಪ್ರತ್ಯಕ್ಷವಾಗುತ್ತಾನೆ. ಇದು ಅಂತಃಪ್ರಜ್ಞೆಗೆ ರೂಪಕವಾಗಿರಬಹುದು. ಕಾರ್ಲ್ ಯೂಂಗ್ ಈ ರೀತಿ ಚಿತ್ರಗಳನ್ನು ಬರೆಸುವುದು, ಅಕ್ಷರಗಳಲ್ಲಿ ದಾಖಲಿಸುವುದು, ಹೇಳಿಕೊಳ್ಳುವುದು ಇತ್ಯಾದಿಗಳ ಮೂಲಕ ಮನಸ್ಸಿನ ಅಂತರಾಳದಲ್ಲಿ ಅಥವಾ ಅನ್‍ಕಾನ್ಷಸ್ ಹಂತದಲ್ಲಿರುವ ಅದುಮಿಟ್ಟ ಮನಸ್ಸಿನ ಕಲ್ಮಶಗಳನ್ನು ಹೊರತಂದು ಮನೋಚಿಕಿತ್ಸೆ ನೀಡುತ್ತಿದ್ದ. ನಿರೂಪಕಿಯ ಕನಸಿನ ಹುಡುಗ ಇಂತಹ ಒಂದು ಸಂಕೇತವಾಗಿರಬಹುದು.

ಆಕೆಯ ಗಂಡ ಪ್ರಕಾಶ ರಾಜಕಾರಣಿ – ಬೈಸೆಕ್ಸುವಲ್. ಆತನಿಗೆ ಮತ್ತೊಬ್ಬ ಪುರುಷನ ಜತೆಗೂ ಸಂಪರ್ಕವಿದೆ. ಅದರ ವಿಡಿಯೋ ಒಮ್ಮೆ ವೈರಲ್ ಆಗಿ ರಾಜಕೀಯ ಬಿರುಗಾಳಿ ಎದ್ದಾಗ ಈ ಕಥಾನಾಯಕಿ ಅದು ಸಹಜ ಎಂದು ಹೇಳಿ ಬಿರುಗಾಳಿಯನ್ನು ತಣ್ಣಗಾಗಿಸಿ ಗಂಡನನ್ನು ಕಾಪಾಡಿದ್ದಳು.

ಅವಳ ಇಬ್ಬರು ಮಕ್ಕಳೂ ಅತ್ತ ಗಂಡೂ ಅಲ್ಲದ ಹೆಣ್ಣೂ ಅಲ್ಲದ ಇಂಟರ್ ಸೆಕ್ಸ್ ಮಕ್ಕಳಾಗಿ ಹುಟ್ಟಿರುತ್ತಾರೆ. ಮೊದಲು ಹುಟ್ಟಿದ ಮಗುವನ್ನು ಹೆಣ್ಣಾಗಿ ಲಿಂಗಪರಿವರ್ತನೆ ಮಾಡಿಸಿ ಭೂಮಿ ಎಂದು ಹೆಸರಿಟ್ಟಿದ್ದರು. ಎರಡನೆಯದನ್ನು ಗಂಡಾಗಿ ಮಾಡಿ ಮುಗಿಲು ಎಂದು ಹೆಸರಿಟ್ಟಿದ್ದರು. ಬೆಳೆದ ಮಕ್ಕಳು ತಾವು ಏನಾಗಿದ್ದೇವೋ ಅದಕ್ಕಿಂತ ಭಿನ್ನವಾದ ಮನಸ್ಥಿತಿಯನ್ನು ಹೊಂದಿ ಅಪ್ಪ ಅಮ್ಮನ ಮೇಲೆ ಅಸಮಾಧಾನಗೊಂಡಿರುತ್ತಾರೆ. ಕೊನೆಗೆ ಮುಗಿಲು ಮನೆಬಿಟ್ಟು ಹೋಗಿರುತ್ತಾನೆ/ಳೆ.

ಅಪ್ರಜ್ಞೆಗೆ ಸಂಕೇತವಾಗಿರಬಹುದಾದ ಹುಡುಗ ಕೊನೆಯ ಭಾಗದಲ್ಲಿ ಅವಳನ್ನು ನುಂಗಲು ಬರುವಂತಹ ಅನುಭವ ನಿರೂಪಕಿಗೆ ಆಗುತ್ತದೆ. ಆಮೇಲೆ ಸ್ವಲ್ಪ ದಿನ ಚಿಕಿತ್ಸೆ ಪಡೆದು ಬರುತ್ತಾಳೆ. ಈ ಕತೆಯ ವೈಶಿಷ್ಟ್ಯ ಎಂದರೆ ಕತೆಯ ಹುಡುಗನನ್ನು ಬಿಟ್ಟರೆ ಉಳಿದ ವಿವರಗಳು ವಾಸ್ತವವೂ ಆಗಿವೆ, ಸಾಂಕೇತಿಕವೂ ಆಗಿವೆ. ಭಾಗೀರಥಿ ಅಥವಾ ಗಂಗೆ ಎನ್ನುವ ಹೆಸರು, ಭೀಷ್ಮಪ್ರತಿಜ್ಞೆಯ ಚಿತ್ರ ಇತ್ಯಾದಿ ಹಲವು ಸಂಕೇತಗಳು ಕತೆಯಲ್ಲಿವೆ.

ಕತೆಯಲ್ಲಿ ಟಿಪ್ಪಣಿಗಳನ್ನುಬರೆಯುವವಳು ಮತ್ತು ಕೇಂದ್ರಪ್ರಜ್ಞೆಯಾಗಿರುವವಳು ಒಬ್ಬಳು ‘ತಾಯಿ’. ಇದೊಂದು ತನ್ನದೇ ಸಮಸ್ಯೆಗಳನ್ನುಳ್ಳ ಆಧುನಿಕ ಮಹತ್ವಾಕಾಂಕ್ಷೀ ಸಂಸಾರ. ಇದರಲ್ಲಿ ಸಂಸಾರದ ಪೂರ್ವಪ್ರಜ್ಞೆಗೆ ಸಂಕೇತವಾಗಿ ಚಿಕ್ಕಿ ಇದ್ದಾರೆ; ಪತ್ನಿಗೆ ಪೂರ್ತಿ ನಿಷ್ಠನಾಗಿಲ್ಲದ ಮಹತ್ವಾಕಾಂಕ್ಷೀ ಗಂಡನಿದ್ದಾನೆ. ಮಕ್ಕಳು ಅವರದೇ ಸಮಸ್ಯೆಗಳ ಜತೆಗೆ ಹೆತ್ತವರನ್ನು ಧಿಕ್ಕರಿಸುತ್ತ ತಮ್ಮ ಅಸ್ತಿತ್ವದ ಅರ್ಥವನ್ನು ಅನ್ವೇಷಿಸುವ ಕಷ್ಟಗಳನ್ನು ಎದುರಿಸುತ್ತಿವೆ. ಇಲ್ಲಿ ಯುವಜನಾಂಗ ಬೇಜವಾಬ್ದಾರಿಯದು ಎನ್ನುವ ನಿಲುವಿಲ್ಲ. ಹೆತ್ತವರ ಆಯ್ಕೆಯಿಂದಾಗಿ ಅವರಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಕಷ್ಟವಾಗುತ್ತಾ ಇದೆ. ರ್ಯಾಶಿಯೋಸಿನೇಶನ್ ಮಾದರಿಯ ಕತೆಯಾಗಿ, ಕನ್ನಡ ಕಥನಪರಂಪರೆಗೆ ಹೊಸದೇ ಆದ ಸಮಸ್ಯೆಯೊಂದರ ಮೂಲಕ ಬದುಕಿನ ಅರ್ಥಶೋಧನೆ ನಡೆಸುವ ಕಾರಣ ಈ ಕತೆ ಬಹುಮಾನಕ್ಕೆ ಅರ್ಹವಾಗುತ್ತದೆ.

ಮೂರನೆಯ ಬಹುಮಾನ: ಅದು ಅವರ ಪ್ರಾಬ್ಲಮ್

ಈ ಕತೆ ಬೆಂಗಳೂರು ನಗರ ಕೇಂದ್ರಿತ ಆಧುನಿಕ ಚಟುವಟಿಕೆಗಳಲ್ಲಿ ಒಂದಾದ (ಬಹುಶ ಅನಿವಾಸಿ ಭಾರತೀಯರಿಂದ ನಡೆಸಲ್ಪಡುತ್ತಿರುವ) ಸಮಾಜಸೇವಾ ಚಟುವಟಿಕೆಯ ಸಂಘಟನೆಯೊಂದರ ಕೆಲವು ವ್ಯಕ್ತಿಗಳ ಕತೆ. ವಿಷಯ ವೈಯಕ್ತಿತವಾದರೂ ಸಂಘಟನೆಯ ಚಟುವಟಿಕೆ ಮತ್ತು ಸಾಮಾಜಿಕ ಪ್ರಸ್ತುತತೆಯಿರುವ ಕಾರಣ ಗಮನ ಸೆಳೆಯುತ್ತದೆ. ವಾರಾಂತ್ಯದಲ್ಲಿ ಯುವಜನಾಂಗದ ಸಾಮಾಜಿಕ ಕಾಳಜಿ ಇರುವ ಯುವಕ ಯುವತಿಯರು ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಹೋಗಿ ಅವರಿಗೆ ಆಪ್ತ ಸಲಹೆ, ಮುಂದಿನ ಜೀವನದ ಮಾರ್ಗದರ್ಶನ, ಆರೋಗ್ಯ ಸಲಹೆ, ಸಾಮಾಜಿಕ ಜಾಗೃತಿಗಾಗಿ ಬೀದಿ ನಾಟಕ ಇತ್ಯಾದಿಗಳನ್ನು ಹಮ್ಮಿಕೊಳ್ಳುತ್ತಾರೆ. ಮಕ್ಕಳಿಗೆ ಚಾಕಲೇಟ್, ಗಿಫ್ಟ್ ಇತ್ಯಾದಿಗಳ ಆಮಿಷದಿಂದಾಗಿ ಅವರು ರಜಾದಿನವೂ ಬರುತ್ತಾರೆ. ಈ ಕತೆಯ ನಾಯಕಿಗೆ ಇದೇ ಸಂಘಟನೆಯ ಆಕರ್ಷಕ ಯುವಕ ಮ್ಯಾಡಿಯ ಬಗ್ಗೆ ಆಕರ್ಷಣೆ ಇದೆ. ಅವನನ್ನು ಒಲಿಸಿಕೊಳ್ಳಲು, ಅವನ ಬೈಕಿನಲ್ಲಿ ಹೋಗಲು ಆಸೆಪಡುತ್ತಾಳೆ.

ಇಂತಹ ಒಂದು ವಾರಾಂತ್ಯದ ಕಾರ್ಯಕ್ರಮದಲ್ಲಿ ಅವಳಿಗೆ ಮ್ಯಾಡಿಯು ಬಡ ಬಾಲಕನೊಬ್ಬನನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡದ್ದು ಗಮನಕ್ಕೆ ಬರುತ್ತದೆ. ಅವನ ಬಗ್ಗೆ ದೂರು ನೀಡಲು ಹುಡುಗನ ಹೆತ್ತವರು, ಅಧ್ಯಾಪಕರು, ಸಂಘಟನೆಯವರು ಯಾರೂ ಮುಂದೆ ಬರುವುದಿಲ್ಲ. ‘ಅದು ಅವರ ಪ್ರಾಬ್ಲೆಮ್’ ಎನ್ನುವ ಮನೋಭಾವ ಎಲ್ಲರದೂ. ಮ್ಯಾಡಿ ಬೇರೆ ಹುಡುಗರನ್ನು ಬಳಸಿಕೊಂಡಿರುವುದೂ ಕತೆಯಲ್ಲಿ ದಾಖಲಾಗುತ್ತದೆ. ಕಥಾನಾಯಕಿ ಮ್ಯಾಡಿಯ ಬಿಳಿ ಟೀಶರ್ಟ್ ಬೆನ್ನಿಗೆ ‘ಐ ಆಮ್ ಅ ಪೀಡೋಫೈಲ್’ (ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ವಿಕೃತಕಾಮಿ) ಎಂದು ಪೋಸ್ಟರ್ ಪೆನ್ನಿನಿಂದ ಬರೆದು ತನ್ನ ಪ್ರತಿಭಟನೆಯನ್ನು ದಾಖಲಿಸುತ್ತಾಳೆ. ಮುಂದೆಯೂ ಆಕೆ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬಹುದಾದ ನಿರ್ಧಾರದಲ್ಲಿರುವಂತೆ ಅನಿಸುತ್ತದೆ. ವಿಕೃತ ಮನಸ್ಥಿತಿಯ ಚಿತ್ರಣ ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರತಿಪಾದನೆ ಇದರ ಆಶಯ. ಸಮಾಜದಲ್ಲಿ ಮುಖ್ಯ ನೆಲೆಯ ಚರ್ಚೆಗೆ ಬಾರದೆ ಉಳಿಯುವ ಬಹುದೊಡ್ಡ ಸಮಸ್ಯೆಯೊಂದನ್ನು ಈ ಕತೆ ಪರಿಶೀಲನೆಗೆ ಎತ್ತಿಕೊಂಡಿರುವುದು ಶ್ಲಾಘನೀಯವಾಗಿದೆ.

ಮೆಚ್ಚುಗೆ ಪಡೆದ 5 ಕತೆಗಳು:

1. ಹುಣಸೇ ಹೂವು

ಗ್ರಾಮೀಣ ಬದುಕಿನ ಬಡತನದ ಬದುಕು ಮತ್ತು ಜಮೀನುದಾರೀ ಶೋಷಣೆ ಬಹಳ ಸಶಕ್ತವಾಗಿ ಕತೆಯ ರೂಪವನ್ನು ತಾಳಿದೆ. ಬಡತನದ ದಾರುಣ ಚಿತ್ರಣ ಮತ್ತು ಭೀಭತ್ಸ ನಿರೂಪಣೆಯಿಂದಾಗಿ ಹೊಟ್ಟೆ ತೊಳಸುವಂತಾಗುವ ಸನ್ನಿವೇಶಗಳಿವೆ. ಬಡವರನ್ನು ಗೌಡರ ಮನೆಯವರು ಲೈಂಗಿಕವಾಗಿ ಶೋಷಿಸುವುದು ಮತ್ತು ದುಡಿಯುವವರ ಆರ್ಥಿಕ ಸಂಕಷ್ಟಗಳು ಹಿನ್ನೆಲೆಯಲ್ಲಿ ಬಂದು ಬಡ ಕುಟುಂಬದ ಗಂಡಸಿನ ದೈನೇಸಿ ಬದುಕು, ಅಸಹಾಯಕತೆ ಮತ್ತು ಮಗಳ ಮೇಲಿನ ಸಿಟ್ಟಿನ ಮೂಲಕವೇ ಕತೆಯಲ್ಲಿ ಬದುಕಿನ ಕ್ರೌರ್ಯವನ್ನು ಚಿತ್ರಿಸಿರುವುದು ವಿಶೇಷವಾಗಿದೆ. ಲೈಂಗಿಕ ಶೋಷಣೆ ಮತ್ತು ಆರ್ಥಿಕ ದುಸ್ಥಿತಿಯಿಂದಾಗಿ ಒಂದು ಕುಟುಂಬದ ಸರ್ವನಾಶ ಆಗುವುದು ಹೃದಯಸ್ಪರ್ಶಿಯಾಗಿದೆ. ಗ್ರಾಮ್ಯಭಾಷೆಯ ಬಳಕೆ ಇಲ್ಲಿ ಸಹಜವಾಗಿ ಬಂದಿದೆ.

2. ಪಿಂಕ್ ಟ್ರಂಪೆಟ್

ಈ ಕತೆಯಲ್ಲಿ ಮಧ್ಯವಯಸ್ಸಿನ ಹಳ್ಳಿಯ ವಿಧವೆ ಹೆಂಗಸು ಶರಾವತಿ ನಗರಕ್ಕೆ ಬಂದಾಗ ಇಲ್ಲಿನ ಜೀವನಶೈಲಿಗೆ ಹೊಂದಿಕೊಳ್ಳುತ್ತಾ ಮಾನಸಿಕವಾಗಿ ಅರಳುವುದನ್ನು ಪಿಂಕ್ ಟ್ರಂಪೆಟ್ ಎಂಬ ಹೂವಿನ ಸಂಕೇತದ ಮೂಲಕ ಹೇಳಿರುವ ಸೂಕ್ಷ್ಮ ಚೆನ್ನಾಗಿದೆ. ಊರಲ್ಲಿ ಅಡಿಕೆ ಕೃಷಿಕ ಕುಟುಂಬದಲ್ಲಿದ್ದು ಸಹಕರಿಸಬೇಕಾದ ಆಕೆಗೆ ಈ ಕೆಲಸಗಳು ಇರದ ಫೆಬ್ರವರಿ, ಮಾರ್ಚ್, ಎಪ್ರಿಲ್ – ಹೀಗೆ ಬೇಸಗೆಯ ತಿಂಗಳುಗಳಲ್ಲಿ ಮಾತ್ರ ಮಗನ ಜತೆಗೆ ಬಂದಿರಲು ಸಾಧ್ಯ. ಆಗ ವಾಕಿಂಗ್ ಹೋಗುತ್ತ ಮಧ್ಯವಯಸ್ಕ ಕಲಾವಿದ, ಆಧುನಿಕ ಜೀವನಶೈಲಿಯ ರತ್ನಾಕರನ ಜತೆಗೆ ವಾಕಿಂಗ್ ಹೋಗುತ್ತ ಅವನತ್ತ ಆಕರ್ಷಿತಳಾಗುತ್ತಾಳೆ. ವೈಧವ್ಯದ ಬದುಕು ಅನಿವಾರ್ಯವೆಂಬಂತಿದ್ದ ಆಕೆಯ ಮನಸ್ಸು ಆತನನ್ನು ಮದುವೆಯಾದರೆ ಆದೀತು ಎನ್ನುವಂತೆ ಅರಳುತ್ತದೆ. ಅದೇ ವೇಳೆಗೆ ಆತನ ಪತ್ನಿ ಗಾಯತ್ರಿಯೂ ಮುನಿಸಿಕೊಂಡು ಆತನನ್ನು ಬಿಟ್ಟುಹೋಗಿರುತ್ತಾಳೆ. ‌

ಮುಂದಿನ ವರ್ಷ ಬೆಂಗಳೂರಿಗೆ ಹೋದಾಗ ಶರಾವತಿಗೆ ತಾನು ರತ್ನಾಕರನ ಜತೆಗೆ ಹೊಸಬದುಕನ್ನು ಪ್ರಾರಂಭಿಸಬೇಕೆನ್ನುವ ನಿರ್ಧಾರ ಗಟ್ಟಿಯಾಗಿರುತ್ತದೆ. ಅವಳ ಮಾವನ ಮನೆಯವರಿಗೆ ಕೆಲಸಕ್ಕೆ ಒಂದಾಳು ಕಡಿಮೆಯಾಗುವುದೆಂದು ಆತಂಕದಿಂದ ಅವಳು ಬೆಂಗಳೂರಿನಲ್ಲಿ ಹೆಚ್ಚು ದಿನ ಇರಬಾರದು ಎಂದು ಒತ್ತಾಯಿಸುತ್ತಾರೆ. ಗಾಯತ್ರಿ ರತ್ನಾಕರನ ಬದುಕಿಗೆ ಹಿಂದಿರುಗಿರುವುದಿಲ್ಲ. ಇದರಿಂದ ಶರಾವತಿಗೆ ತಾನೇ ಮುಂದುವರಿದು ತಾವಿಬ್ಬರು ಜತೆಗೂಡಿದರೆ ಹೇಗೆ ಎಂದು ಪತ್ರಬರೆಯಲು ಧೈರ್ಯವಾಗುತ್ತದೆ. ಆದರೆ ರಮಾನಂದ ಅದಕ್ಕೆ ಸ್ಪಂದಿಸುವುದಿಲ್ಲ. ಅವನು ಮಾನಸಿಕವಾಗಿ ತನ್ನ ಪತ್ನಿಯನ್ನು ಹಚ್ಚಿಕೊಂಡಿರಬಹುದು; ಅಥವಾ ಪತ್ರವನ್ನು ನೋಡದೆಯೆ ಇರಬಹುದು, ಅಥವಾ ಅವನು ಗಾಯತ್ರಿಯನ್ನು ಜೀವನಸಂಗಾತಿಯನ್ನಾಗಿ ಕಲ್ಪಿಸಿಕೊಳ್ಳದೆ ಇರಬಹುದು.

ರ್ಯಾಶಿಯೋಸಿನೇಶನ್ ಮಾರ್ಗದ ಒಂದು ಕತೆಯಾದ ಇದರಲ್ಲಿ ನಾಯಕಿ ಶರಾವತಿ ತಾನೇ ಪ್ರೌಢ ಮರುಮದುವೆಗೆ ಪ್ರಸ್ತಾಪ ಮಾಡುವಷ್ಟು ದಿಟ್ಟತನ ತೋರಿಸುವಷ್ಟಕ್ಕೆ ಮನೋವ್ಯಾಪಾರದ ಬೆಳವಣಿಗೆ ನಿಂತುಬಿಡುತ್ತದೆ. ಅದು ಆ ಗಂಡಸಿನ ಗಮನಕ್ಕೆ ಬಂದಿದೆಯೋ ಬಂದಿಲ್ಲವೋ ಎನ್ನುವುದು ಅಸ್ಪಷ್ಟವಾದ ಕಾರಣ ಅವಳ ಮುಂದಿನ ನಡೆ ಮತ್ತೆ ತನ್ನ ಹಳೆಯ ಬದುಕಿಗೆ ವಾಪಸಾಗುವುದೇ ಆಗಬಹುದು ಎನ್ನುವ ದಟ್ಟವಾದ ಸೂಚನೆ ಕತೆಯಲ್ಲಿದೆ. ಹಾಗಾಗಿ ಹೊಸ ಅರಿವು ‘ನೈತಿಕ ವಿಕಾಸದ ನೆಲೆ’ಯನ್ನು ತಲುಪುವುದನ್ನು ಕೂಡ ಓದುಗರು ಊಹಿಸಲು ಅವಕಾಶ ಇರುವುದಿಲ್ಲ. ಹಿಂದೆ ಇಪ್ಪತ್ತನೆಯ ಶತಮಾನದ ನವೋದಯ ಸಾಹಿತ್ಯದಲ್ಲಿ ವಿಧವಾ ವಿವಾಹವನ್ನು ಪ್ರತಿಪಾದಿಸುವ ಕತೆ ಕಾದಂಬರಿಗಳಲ್ಲಿ ಸಮಾಜದ ಒಟ್ಟಭಿಪ್ರಾಯವನ್ನು ಒಲಿಸಿಕೊಳ್ಳಬೇಕಾದ ಅಗತ್ಯ ಎಷ್ಟಿತ್ತೆಂದರೆ ಆಕೆ ಅಕ್ಷತ ಕನ್ಯೆ ಎನ್ನುವುದನ್ನು ಸೂಚಿಸುವ ಕೃತಿಗಳನ್ನು ಕಾಣಬಹುದಾಗಿತ್ತು. ಇಲ್ಲಿ, ನಾಯಕಿಯ ತರ್ಕ ಪ್ರಕ್ರಿಯೆ ಗಟ್ಟಿಯಾದುದೇ ಆಗಿದ್ದರೆ ಆಕೆ ನೇರವಾಗಿ, “ನಾನು ನಿಮಗೊಂದು ಸಂದೇಶ ಇರಿಸಿದ್ದೆ. ನೀವದನ್ನು ಗಮನಿಸಿದಿರಾ?” ಎಂದು ಕೇಳಿ ಸಂಶಯ ಪರಿಹರಿಸಿಕೊಳ್ಳಬಹುದಿತ್ತು. ಅವಳು ಮತ್ತೆ ತನ್ನ ಹಳೆಯ ಬದುಕಿಗೆ ಮರಳುತ್ತಾಳೆ ಎನ್ನುವ ಸೂಚನೆಯೇ ಕತೆಯಲ್ಲಿದೆ.

3. ಪರವೇಶ್ಮಸ್ಥನ ಫಿಕ್ಖ್ ಪ್ರಸಂಗ

ಇಲ್ಲಿ ಒಬ್ಬ ಮುಸಲ್ಮಾನ ಸಂಸಾರಸ್ಥ ಒಂದು ಕುಗ್ರಾಮದ ಮಸೀದಿಯಲ್ಲಿ ಇಮಾಮ್ ಆಗಿ ಕಾರ್ಯನಿರ್ವಹಿಸುತ್ತಾ ಇದ್ದಾನೆ. ಅವನ ಏಕೈಕ ಪುತ್ರ ತಾಂತ್ರಿಕ ಶಿಕ್ಷಣ ಪಡೆದು ಮುಂಬಯಿಯಲ್ಲಿ ಸಂಸಾರ ಹೂಡಿದ್ದಾನೆ. ಅಪ್ಪ ಅಮ್ಮ ತನ್ನ ಜತೆಗೆ ಬಂದಿರುವಂತೆ ಕರೆಯುತ್ತಿದ್ದಾನೆ. ಅಪ್ಪ ಇಮಾಮ್, ಊರಿನ ಮುಖಂಡನೊಬ್ಬನ ಜತೆಗೆ ಮಸೀದಿಯ ಡೆಪೆÇೀಸಿಟ್‍ಗೆ ಬರುವ ಬಡ್ಡಿ ಹಣದ ವಿಚಾರದಲ್ಲಿ ತಾಕಲಾಟಕ್ಕೆ ಬಿದ್ದಿದ್ದಾನೆ. ಮುಖಂಡ ಆ ಹಣವನ್ನು ತಿಂದುಹಾಕಬಾರದೆಂಬ ನ್ಯಾಯಪ್ರಜ್ಞೆಯೇ ಅದು. ಆದರೆ ಇಮಾಮ್ ಕೆಲವೊಮ್ಮೆ ಇಕ್ಕಟ್ಟಿಗೆ ಸಿಲುಕುವಾಗ ಮುಖಂಡನ ಇನ್‍ಫ್ಲೂಯೆನ್ಸ್ ಇವನನ್ನು ಉಳಿಸಲು ಬೇಕಾಗುತ್ತದೆ. ಅಲ್ಲದೆ ಈತ ಪರವೇಶ್ಮಸ್ಥ (ಬೇರೆಯವರ ಮನೆಯಲ್ಲಿ ವಾಸಿಸುವವನು). ಕೊನೆಗೂ ಊರಿನ ಉಸಾಬರಿಯನ್ನು ಬಿಟ್ಟು ಮುಂಬಯಿಗೆ ತೆರಳುತ್ತ್ತಾನೆ. ಮಗ ಅವನಿಂದ ಕೆಲವು ವಿಚಾರಗಳ ಬಗ್ಗೆ ಮಾಹಿತಿ ಕೇಳಿ ಪಡೆಯುತ್ತಾನೆ. ಮುಖ್ಯವಾದುದು, ಇಮಾಮನ ಪತ್ನಿ ನಫೀಸಾ ಹಿಂದೂ ಆಗಿದ್ದವಳು ಎನ್ನುವುದು.

ಇಲ್ಲಿನ ಮುಖ್ಯ ಧರ್ಮ ಜಿಜ್ಞಾಸೆ ಶೀರ್ಷಿಕೆಯಲ್ಲಿರುವ ಹಾಗೆ ಫಿಕ್ಖ್ ಎಂಬ ಬಡ್ಡಿ ಹಣದ ನಿಯಮದ ಕುರಿತಾಗಿದೆ; ಜತೆಗೆ ಈ ಜಿಜ್ಞಾಸೆಗೆ ತಾನು ಅಧಿಕಾರಸ್ಥ ಎಂದು ಮುಂದೆ ಕಾಲಿಟ್ಟು ಹಿಂದೆ ಸರಿದ ಕಥಾನಾಯಕನ ‘ಪರವೇಶ್ಮಸ್ಥ’ ಸ್ಥಿತಿಯ ಜತೆಗೆ ಅವನ ಧಾರ್ಮಿಕ ನಿಲುವಿನ ಮುಖಾಮುಖಿಯನ್ನು ಅದು ಸೂಚಿಸುತ್ತದೆ. ಕತೆಯ ಕೊನೆ ಇನ್ನಷ್ಟು ಪರಿಣಾಮಕಾರಿಯಾಗಿರಬಹುದಿತ್ತು.

4. ಕಿತ್ತಳೆ ಚಿಟ್ಟೆ

ಮನಸ್ಸಿನ ಮತ್ತು ಸಂಬಂಧಗಳ ಸೂಕ್ಷ್ಮಗಳನ್ನು ಚಿತ್ರಿಸಿರುವ ಸಣ್ಣಕತೆ. ಕಥಾನಾಯಕಿ ತಾನೊಂದು ಕಿತ್ತಳೆಯಾಗಿರುವಂತೆ, ಅದನ್ನು ಯಾರೋ ಸಿಪ್ಪೆ ಸುಲಿದು ತಿಂದಂತೆ, ಮತ್ತೆ ತಾನೊಂದು ಕಿತ್ತಳೆ ಚಿಟ್ಟೆಯಾದಂತೆ ಕನಸುಕಾಣುತ್ತಾಳೆ. ಅವಳ ಮನಸ್ಸು ಅತಿಯಾಗಿ ಸೂಕ್ಷ್ಮವಾಗಿದೆ. ಅವಳ ಪ್ರಿಯತಮ ಒಮ್ಮೆ ಅವಸರಿಸಿ ಅವಳ ಮೇಲೆ ದಾಳಿಮಾಡಿದನೆಂದು ದೂರಸರಿಯುತ್ತಾಳೆ. ಮತ್ತೆ ಅವರು ಜತೆಯಾದರೂ ಮೊದಲಿನ ವಿಶ್ವಾಸ ಉಳಿಯುವುದಿಲ್ಲ ಇತ್ಯಾದಿ ಮನಸ್ಸಿನ ಸೂಕ್ಷ್ಮಗಳು, ಪ್ರೇಮ-ಕಾಮವನ್ನು ಹೆಸರಿಸದೆ ಅವುಗಳ ವ್ಯತ್ಯಾಸವನ್ನು ಕ್ರಿಯೆಯಲ್ಲಿ ಅನುಭವಿಸುವ ಮಾದರಿಯ ಕತೆ.

‘ಪಿಂಕ್ ಟ್ರಂಪೆಟ್’ ಎಂಮ ಕತೆಯ ಶೀರ್ಷಿಕೆಯನ್ನು ಇದರ ಶೀರ್ಷಿಕೆಯ ಜತೆಗೆ ಹೋಲಿಸಿದಾಗ ಒಂದು ವಿಶಿಷ್ಟ ವಿದ್ಯಮಾನವು ನಮ್ಮ ಗಮನಕ್ಕೆ ಬರುತ್ತದೆ. ಹೆಣ್ಣನ್ನು ಹೂವಿಗೆ, ಚಿಟ್ಟೆಗೆ, ಹಣ್ಣಿಗೆ ಹೋಲಿಸುವ ಒಂದು ಸಂಪ್ರದಾಯ ಆಧುನಿಕ ಸಾಹಿತ್ಯದಲ್ಲಿಯೂ ಬೇರೆಬೇರೆ ರೀತಿಗಳಲ್ಲಿ ಪರಂಪರೆಯ ಮುಂದುವರಿಕೆಯಾಗಿ ಕಾಣಿಸುತ್ತಿದೆ. ಈ ಎರಡೂ ಕತೆಗಳಲ್ಲಿ ಈ ರೂಪಕಗಳು ಸೃಜನಶೀಲವಾಗಿ ಬಂದಿವೆ; ಸಿದ್ಧಕಲ್ಪನೆಯಾಗಿ ಬಂದಿಲ್ಲ.

ಹಾಗೆ ನೋಡಿದರೆ ‘ಹುಣಸೇ ಹೂವು’ ಕೂಡ ಗ್ರಾಮೀಣ ಶೋಷಿತ ಮಹಿಳೆಗೆ ರೂಪಕವಾಗಿಯೇ ಬಂದಿದೆ. ಇದು ಕೂಡ ಸೃಜನಶೀಲವಾಗಿಯೇ ಇದೆ. ಅಲ್ಲಿ ಅದು ಹೋಲಿಕೆಯಾಗಿ ಬಂದಿಲ್ಲ; ಹೆಚ್ಚು ಸಾಂಕೇತಿಕವಾಗಿದೆ.

5. ನೆಲೆ

ಪ್ರತಿಭಾ ಎನ್ನುವ ಪ್ರತಿಭಾವಂತ ಸುಂದರಿ ಯುವತಿಯನ್ನು ಬಡತನದ ಕಾರಣದಿಂದಾಗಿ ಮುಂಬಯಿಯ ಕಿವುಡ, ಮೂಗನಿಗೆ ಮದುವೆ ಮಾಡಿಕೊಟ್ಟಿರುತ್ತಾರೆ. ಆಕೆ ಸ್ವಂತ ಪರಿಶ್ರಮದಿಂದ ಉದ್ಯೋಗ ಸಂಪಾದಿಸಿಕೊಂಡು ಸ್ವಂತ ಕಾಲಿನ ಮೇಲೆ ನಿಲ್ಲುವಂತಾಗುತ್ತಾಳೆ. ಚಿತ್ರಲೇಖಾ ಎಂಬ ಹೆಣ್ಣೂಮಗುವಾದ ಮೇಲೆ ಗಂಡನನ್ನೂ ಮಗಳನ್ನೂ ಬಿಟ್ಟು ದೆಹಲಿಗೆ ಹೋಗಿ ಮಧು ಎಂದು ಹೆಸರು ಬದಲಾಯಿಸಿಕೊಳ್ಳುತ್ತಾಳೆ. ಅಲ್ಲಿಯೇ ಒಬ್ಬ ಸಹೋದ್ಯೋಗಿಯನ್ನು ಮದುವೆಯಾಗಿ ಸ್ಟಾರ್ಟ್ ಅಪ್ ಕಂಪೆನಿ ಮಾಡುತ್ತಾಳೆ. ಗಂಡ ತೀರಿಹೋಗುತ್ತಾನೆ. ಅವಳಿಗೆ ಅವನಲ್ಲಿ 19 ವರ್ಷದ ಮಗ ಇರುತ್ತಾನೆ. ಈಗ ಅವಳಿಗೆ ಅವಳ ಹಿರಿಯ ಮಗಳನ್ನು ಸಂಪರ್ಕಿಸಲು ಆಸೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕ ಸಾಧಿಸುತ್ತಾಳೆ. ಅವಳ ಮಗಳು ಮೊದಲು ತನ್ನನ್ನು ತೊರೆದು ಹೋದವಳು ಎಂದು ಅವಳನ್ನು ತಿರಸ್ಕರಿಸಿದರೂ ನಂತರ ಅವಳ ‘ನೆಲೆ’ಯಿಂದ ಅವಳ ಬದುಕನ್ನು ಅರ್ಥಮಾಡಿಕೊಂಡು ಅವಳನ್ನು ಭೇಟಿಯಾಗಲು ಮಾನಸಿಕವಾಗಿ ಸಿದ್ಧಳಾಗುತ್ತಾಳೆ.

ವ್ಯಕ್ತಿಗಳ ಆಯ್ಕೆಯನ್ನು ಭಿನ್ನಭಿನ್ನವಾದ ನೆಲೆಗಳ ಮೂಲಕ ನೋಡಲು ಪ್ರೇರಣೆ ಕೊಡುವ, ಯಾರನ್ನೂ ಟೀಕಿಸದೆ; ಆಯ್ಕೆಗಳನ್ನು ಮಾಡುವ ಮೂಲಕ ವ್ಯಕ್ತಿ ತನ್ನ ಬದುಕಿಗೆ ತಾನು ಜವಾಬ್ದಾರನಾಗುವುದನ್ನು ಅರಿತುಕೊಂಡು ಅವನನ್ನು ಸ್ವೀಕರಿಸುವ ಧನಾತ್ಮಕ ಚಿಂತನೆಯನ್ನು ಆಶಯವಾಗಿ ಪರಿವರ್ತಿಸಿರುವ ಉತ್ತಮ ಕತೆ ಇದು.

ಬಹುಮಾನ ವಿಜೇತರಿಗೂ, ಉತ್ತಮ ಕತೆಗಳನ್ನು ಬರೆದಿರುವ ಇತರರಿಗೂ ಅಭಿನಂದನೆಗಳು. ಈ ಕಥಾಸ್ಪರ್ಧೆಯನ್ನು ಏರ್ಪಡಿಸಿ, ಕನ್ನಡದ ಸಣ್ಣಕಥಾ ಕ್ಷೇತ್ರದಲ್ಲಿ ಹೊಸ ಸ್ಪಂದನೆಗಳಿಗೆ ಕಾರಣವಾಗಿರುವ ವಿಸ್ತಾರ ನ್ಯೂಸ್ ಬಳಗಕ್ಕೆ ಧನ್ಯವಾದಗಳು ಹಾಗೂ ಅಭಿನಂದನೆಗಳು.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್‌ ಡಿ.ಆರ್‌ ಪ್ರಥಮ, ದಾದಾಪೀರ್‌ ಜೈಮನ್‌ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಮೈಸೂರು

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Book Release: ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Ithichanda Ramesh Uthappaʼs Four books to be released in Mysore on May 9
Koo

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನ ಹಾಗೂ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ (Ithichanda Ramesh Uthappa) ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು (Book Release) ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಉದ್ಘಾಟಿಸಲಿದ್ದು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಹಾಗೂ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಭಾಗವಹಿಸಲಿದ್ದಾರೆ.

ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್. ಸಪ್ನ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಹಾಜರಿರಲಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಸಹ ಪ್ರಾಧ್ಯಾಪಕರಾದ ಪ್ರೊ. ಎನ್. ಮಮತ, ಪುಸ್ತಕಗಳ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪ್ರಕಾಶಕ ಚೇತನ್ ಕಣಬೂರು, ಮೈಸೂರು ಕಲ್ಬರಲ್ ಅಸೋಸಿಯೇಷನ್‌ನ ಎ.ಪಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.

ಬಿಡುಗಡೆಯಾಗಲಿರುವ ಕೃತಿಗಳು

  • ಕಾಡು ಹೇಳಿದ ಕಥೆ: ವೈಲ್ಡ್‌ ಲೈಫ್ ರಿಪೋರ್ಟಿಂಗ್
  • ಹಾವು: ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ
  • ಆನೆ: ಬದಲಾದ ವರ್ತನೆ
  • ಅರ್ಜುನ ನಿನ್ನ ಮರೆಯಲೆಂತು ನಾ..!
Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಧವಳ ಧಾರಿಣಿ ಅಂಕಣ: ಕಾಮವೆನ್ನುವುದು ಎಂತಹವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುತ್ತಾನೆ.

VISTARANEWS.COM


on

king dasharatha kaikeyi dhavala dharini column
Koo

ಪ್ರಾಣಕ್ಕಿಂತ ಪ್ರಿಯಳಾದ ಸತಿಯಿಂದ ಪ್ರಾಪ್ತವಾದ ಪುತ್ರ ವಿಯೋಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸ ಕೈಕೇಯ್ಯಾ ಗೃಹಂ ಶ್ರೇಷ್ಠಂ ಪ್ರವಿವೇಶ ಮಹಾಯಶಾಃ
ಪಾಣ್ಡುರಾಭ್ರಮಿವಾಕಾಶಂ ರಾಹುಯುಕ್ತಂ ನಿಶಾಕರಃ ৷৷ಅ.ಯೋ.10.11৷৷

ಬಿಳಿಯದಾದ ಮೋಡಗಳಿಂದ ಕೂಡಿದ ಆಕಾಶದಲ್ಲಿ ರಾಹುವಿಗೆ ಗ್ರಾಸವಾಗುವ ಸಲುವಾಗಿ ಚಂದ್ರನು ಪ್ರವೇಶಿಸುವಂತೆ ಮಹಾಯಶೋವಂತನಾದ ರಾಜನು ಭವ್ಯವಾದ ಕೈಕೇಯಿಯ ಅಂತಃಪುರವನ್ನು ಪ್ರವೇಶಿಸಿದನು.

ಕವಿಸಮಯವೆನ್ನುವದು ರಾಮಾಯಣ ಕಾವ್ಯದ ವಿಶೇಷ. ವಾಲ್ಮೀಕಿ ಕಾವ್ಯವನ್ನು ಕೇವಲ ಉಅಪದೇಶಕ್ಕಾಗಿಯಲ್ಲ, ಅದನ್ನು ತಾಳವಾದ್ಯಗಳೊಂದಿಗೆ ರಾಗವಾಗಿ ಹಾಡಲು ಅನುಕೂಲವಾಗುವಂತೆ ಬರೆದಿದ್ದಾನೆ. ಹಾಡುಗಾರಿಕೆಯಲ್ಲಿ ವರ್ಣನೆಗೆ ಮಹತ್ವ ಬರುತ್ತದೆ. ಕಾವ್ಯದ ಮುಂಗಾಣ್ಕೆ ಅಲ್ಲಲ್ಲಿ ವ್ಯಕ್ತವಾಗುತ್ತಾ ಹೋಗುತ್ತದೆ. ಕೈಕೇಯಿಯ ಅರಮನೆಗೆ ಹೋಗುವ ರಾಜನ ಕುರಿತು ವರ್ಣಿಸುವಾಗ ಬಿಳಿಯದಾದ ಮೋಡ, ರಾಹು, ಆಕಾಶ, ಚಂದ್ರ ಎನ್ನುವ ಉಪಮೆಗಳ ಮೂಲಕ ಹೇಳಿದ್ದಾನೆ. ಆಕಾಶ ಎನ್ನುವುದು ಮನಸ್ಸಿನಲ್ಲಿ ಆಸೆಗಳ ವಿಸ್ತಾರದವನ್ನು ಸೂಚಿಸಿದೆ. ಬಿಳಿಯದಾದ ಮೋಡವೆನ್ನುವದು ಅರ್ಥಪೂರ್ಣವಾದ ಉಪಮೆ. ನೀರಿನಿಂದ ಯುಕ್ತವಾದ ಮೋಡ ಕಪ್ಪಾಗಿರುತ್ತದೆ. ಮನಸ್ಸಿನಲ್ಲಿ ತನ್ನ ಮಗನ ಪಟ್ಟಾಭಿಷೇಕದ ಕುರಿತು ಯಾವ ಆಸೆಯನ್ನೇ ಇರಿಸಿಕೊಳ್ಳಲಿ, ಅದೆಲ್ಲವೂ ನೀರಿಲ್ಲದ ಮೋಡದಂತೆ ವ್ಯರ್ಥವಾಗಿ ಹಾರಿಹೋಗುತ್ತದೆ ಎನ್ನುವುದನ್ನು ಹೇಳುತ್ತಾನೆ. ರಾಹು ಮತ್ತು ಕೇತುಗಳು ಭಾರತೀಯ ಖಗೋಳಶಸ್ತ್ರದ ಪ್ರಕಾರ ಎರಡು ವಿರುದ್ಧದಿಕ್ಕುಗಳಲ್ಲಿರುವ ಬಿಂದುಗಳು. ಈ ಬಿಂದುವಿಗೆ ಸೂರ್ಯಚಂದರು ಬಂದಾಗ ಗ್ರಹಣವಾಗುತ್ತದೆ. ಚಂದ್ರ ಮನಸ್ಸಿನ ಕಾರಕ. ಸಂತೊಷ ಮತ್ತು ಕಾಮವಿಕಾರಗಳು ಮನಸ್ಸಿನಲ್ಲಿ ಉತ್ಪನ್ನವಾಗುವಂತವು. ಚಂದ್ರ ತನ್ನ ಪರಿಭ್ರಮಣದಲ್ಲಿ ರಾಹುವಿನ ಬಿಂದುವಿಗೆ ಬಂದಾಗ ಗ್ರಹಣವಾಗಿ ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತಾನೋ ಅದೇರಿತಿ ರಾಜ ತನ್ನೆಲ್ಲ ಕನಸನ್ನು ಕಳೆದುಕೊಂಡು ನಿಶ್ಚಿತವಾಗಿ ಮರಣದತ್ತ ಸಾಗಲು ಬಂದಿದ್ದಾನೆ ಎನ್ನುವುದನ್ನು ಉಪಮಾಮಲಂಕಾರದಲ್ಲಿ ಕವಿ ವರ್ಣಿಸಿದ್ದಾನೆ.

ದಶರಥನ ಪಾತ್ರವನ್ನು ವಿವೇಚಿಸುವಾಗ ಮೊದಲಿನಿಂದಲೂ ಕಂಡುಬಂದ ಅಂಶವೆಂದರೆ ಮಹಾನ್ ರಾಜರ್ಶಿಯಾಗಿದ್ದ ದೊರೆ ರಾಮನ ಕುರಿತು ಕಡುಲೋಭಿಯಾಗಿ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ದಶರಥನ ವ್ಯಕ್ತಿತ್ವವೆನ್ನುವುದು ಸಂಕೀರ್ಣವೇನೂ ಅಲ್ಲ. ಶೂರನಾಗಿದ್ದ; ಸೂರ್ಯವಂಶದ ಧ್ಯೇಯೋದ್ಧಶವಾದ ಧರ್ಮಸ್ಥಾಪನೆಯ ವಿಷಯದಲ್ಲಿ ಸದಾ ನಿರತನಾಗಿದ್ದ. ಅದೇ ಕಾಲಕ್ಕೆ ಅಯೋಧ್ಯೆಯ ಸಿಂಹಾಸನವೆನ್ನುವುದು ಗಣತಂತ್ರವ್ಯವಸ್ಥೆಯಲ್ಲಿ ಇತ್ತು. ರಾಜರಾಗುವವರು ಯಾರೇ ಆದರೂ ಅದಕ್ಕೆ ಪ್ರಜೆಗಳ ಒಪ್ಪಿಗೆ ಪಡೆಯಬೇಕಾಗಿತ್ತು. ಪ್ರಾಚೀನ ಗ್ರೀಸಿನಲ್ಲಿದ್ದ ರೀತಿಯ ಗಣತಂತ್ರವ್ಯವಸ್ಥೆ ಅಯೋಧ್ಯೆಯಲ್ಲಿ ಇತ್ತು ಎನ್ನುವುದಕ್ಕೆ ವಾಲ್ಮೀಕಿಯ ರಾಮಾಯಣವನ್ನು ಮತ್ತು ಮತ್ತು ಪ್ಲೇಟೋವಿನ “The Republic” ಕೃತಿಯನ್ನು ತುಲನೆ ಮಾಡಿದಾಗ ಅನಿಸುತ್ತದೆ. ಅದನ್ನು ಕೇವಲ ತೋರಿಕೆಗಾಗಿ ಆಚರಣೆಯಲ್ಲಿ ಇಟ್ಟು ತನಗೆ ಬೇಕಾದಂತೆ ಉತ್ತರಾಧಿಕಾರಿಯನ್ನು ಆರಿಸುವ ತಂತ್ರವನ್ನು ದಶರಥ ಅನುಸರಿಸಿರುವುದು ರಾಮನಿಗೆ ಪಟ್ಟಗಟ್ಟಬೇಕೆನ್ನುವ ಸಂದರ್ಭದಲ್ಲಿ ಕಾಣಬಹುದು. ಆತನ ಚಾಣಾಕ್ಷನಡೆಯ ಒಳಗಿರುವದು ತನ್ನದು ಎನ್ನುವ ಮೋಹದ ಅರಿವು ಎನ್ನುವುದು ಯಾರ ಗಮನಕ್ಕೂ, ಹೆಚ್ಚೇನು ರಾಮನ ಅರಿವಿಗೂ ಬಾರದ ಹಾಗೆ ನಡೆದುಕೊಂಡಿದ್ದಾನೆ. ಪರಿಪೂರ್ಣ ವ್ಯಕ್ತಿತ್ವದ ರಾಮನಂತಹ ದೊರೆ ತಮಗೆ ಸಿಗುತ್ತಾನೆ ಎನ್ನುವ ಕಾರಣಕ್ಕೆ ಪ್ರಜೆಗಳು ಸಂಭ್ರಮಿಸುವುದು ಸಹಜವೇ ಆಗಿದೆ. ತಾನು ಅಶ್ವಪತಿಗೆ ಕೊಟ್ಟ ಮಾತುಗಳು ಹೀಗೆ ಮರೆಯಾದ ಕಾರಣ ಅದು ದೊರೆಗೆ ಅಪರಿಮಿತ ಸಂತೋಷವನ್ನು ಕೊಟ್ಟಿದೆ. ಇಳಿವಯಸ್ಸಿನಲ್ಲಿ ಕಿರಿಯ ಚಲುವೆಯಾದ ಕೈಕೇಯಿಯ ಹಿಂದೆ ಬಿದ್ದಿದ್ದ ದೊರೆಗೆ ವೃದ್ದಾಪ್ಯದಲ್ಲಿ ಮಕ್ಕಳಾದ ಮೇಲೆ ರಾಮ ಎನ್ನುವ ಕುರುಡು ಮೋಹ ಆವರಿಸಿಕೊಂಡಿತ್ತು. ಆತನ ಕುರಿತು ಮಂಥರೆ ಹೇಳುವ ಮಾತು

ಧರ್ಮವಾದೀ ಶಠೋ ಭರ್ತಾ ಶ್ಲಕ್ಷ್ಣವಾದೀ ಚ ದಾರುಣಃ
ಶುದ್ಧಭಾವೇ ನ ಜಾನೀಷೇ ತೇನೈವ ಮತಿಸಂಧಿತಾ৷৷ಬಾ.ಕಾಂ.7.24৷৷

ನಿನ್ನ ಗಂಡನು ಮೇಲೆಮೇಲೆ ಧರ್ಮಸಮ್ಮತವಾದ ಮಾತುಗಳನ್ನು ಆಡುತ್ತಿದ್ದರೂ ಅಂತರಂಗದಲ್ಲಿ ಬಹಳ ಕಪಟಸ್ವಭಾವದವನು. ಬಾಯಲ್ಲಿ ಮೃದುವಾದ ಮಾತುಗಳನ್ನು ಆಡುತ್ತಿದ್ದರೂ ನಂಬಿಸಿ ಮೋಸಮಾಡುವುದು ಹೇಗೆಂದು ಯೋಚಿಸುತ್ತಿರುತ್ತಾನೆ. ಕರುಣೆಯೆನ್ನುವುದೇ ಇಲ್ಲ, ಬಹಳ ಋಜುಸ್ವಭಾವದವಳಾದ ನೀನು ಆತನ ಕಪಟವನ್ನು ಅರಿಯದೇ ಹೋದೆಯಲ್ಲವೇ.

ಮಂಥರೆ ಇಲ್ಲಿ ಕೈಕೇಯಿಯ ಮನಸ್ಸನ್ನು ತಿರುಗಿಸಲು ಹೇಳಿರುವಳಾದರೂ ಪಾಯಸವನ್ನು ತನ್ನ ರಾಣಿಯರಿಗೆ ಹಂಚುವಲ್ಲಿಂದ ಹಿಡಿದು ರಾಮಪಟ್ಟಾಭಿಷೇಕದ ವರೆಗೆ ದಶರಥ ಏಕಪಕ್ಷೀಯವಾಗಿ ತೆಗೆದುಕೊಂಡ ತೀರ್ಮಾನವನ್ನು ಗಮನಿಸಿದಾಗ ನಮ್ಮ ದೌರ್ಬಲ್ಯ ಶತ್ರುಗಳಿಗೆ ಆಯುಧ ಎನ್ನುವ ನೀತಿಶಾಸ್ತ್ರದ ಮಾತನ್ನು ನೆನಪಿಸುತ್ತದೆ. ಅಂತೂ ತನ್ನ ಕಾರ್ಯವಾದ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಯಾವ ತೊಂದರೆಯಿಲ್ಲದೇ ಸಾಂಗವಾಗಿ ನಡೆಯುವುದು ಎನ್ನುವ ನಂಬಿಕೆಯೊಂದಿಗೆ ಸಂತೊಷವೆನ್ನುವುದು ಅತಿರೇಕಕ್ಕೆ ಹೋಗಿತ್ತು. ಸಂತೋಷ ಅತಿರೇಕಕ್ಕೆ ಹೋದಾಗ ಅದು ಮದಕ್ಕೆ ತಿರುಗುತ್ತದೆ. ಮದವೆನ್ನುವುದು ಕಾಮಕ್ಕೆ ಮೂಲ. ಅದನ್ನು ಇಳಿಸಿಕೊಳ್ಳಲು ಸಂಗಾತಿಯನ್ನು ಹುಡಿಕಿಕೊಳ್ಳುವುದು ಜೀವಿಗಳ ಸಹಜ ಕ್ರಿಯೆ. ಅರಸನಿಗೆ ತನ್ನ ಆಲೋಚನೆಯನ್ನು ಹಂಚಿಕೊಳ್ಳುವ ಸಂಗಾತಿಯ ಅಗತ್ಯ ತುರ್ತಾಗಿ ಎದುರಾಯಿತು. ವಶಿಷ್ಠರಲ್ಲಿಯಾಗಲಿ, ವಾಮದೇವರಲ್ಲಿಯಾಗಲಿ ಇದನ್ನೆಲ್ಲವನ್ನು ಹಂಚಿಕೊಳ್ಳಲು ಅವರೇನು ಸಾಮಾನ್ಯದವರಾಗಿರಲಿಲ್ಲ.

ರಾಮ ಯುವರಾಜ ಪಟ್ಟಕ್ಕೆ ಅರ್ಹನಾಗಿದ್ದರೂ, ಅಯೋಧ್ಯೆಯಲ್ಲಿ ಆ ಸಾಯಂಕಾಲ ನಡೆದ ಸಿದ್ಧತೆ ದಶರಥನ ವೈಯಕ್ತಿಕ ಕಾಮನೆಯ ಫಲವಾಗಿತ್ತು. ಪ್ರಜೆಗಳು ರಾಮನನ್ನು ರಾಜನ್ನಾಗಿ ನೋಡಲು ಬಯಸಿದ್ದರೆನ್ನುವುದು ನಿಜವಾದರೂ ಇಲ್ಲಿಮೊದಲ ಸಾರಿ ರಾಮನ ಪಟ್ಟಾಭಿಷೇಕಕ್ಕಾಗಿ ದಶರಥ ಹೇಗೆಲ್ಲಾ ಮಂಡಿಗೆಯನ್ನು ಹಾಕಿದ್ದ ಎನುವುದನ್ನು ಹಿಂದಿನ ಭಾಗಗಳಲ್ಲಿ ನೋಡಿದ್ದೇವೆ. ರಾಮನನ್ನು ಕೇವಲ ಮಗನಾಗಿ ಮಾತ್ರ ನೋಡಿದ್ದಾನೆಯೇ ಹೊರತು ವಿಶ್ವಾಮಿತ್ರ, ವಶಿಷ್ಠರು, ಪರಶುರಾಮ ಮೊದಲಾದವರಿಗೆ ರಾಮನ ಅವತಾರದ ಹಿಂದಿರುವ ದೈವತ್ವದ ದರ್ಶನ ಅರಸನಿಗೆ ಸಾಯುವವರೆಗೂ ಆಗಲೇ ಇಲ್ಲ. ರಾಮನಿಗೆ ಪಟ್ಟಗಟ್ಟುವ ತನ್ನ ಮನಸ್ಸಿನ ಮಂಡಿಗೆ ಯಶಸ್ವಿಯಾದ ವಿಷಯವನ್ನು ವಿವರವಾಗಿ ವರ್ಣಿಸಿ ಹೇಳಲು ಕಿರಿಯ ರಾಣಿಯಷ್ಟು ಆಪ್ತರು ಬೇರೆ ಯಾರೂ ಇಲ್ಲ. ಕೌಸಲ್ಯೆಗೆ ಹೇಳಿದರೆ ಆಕೆಗೆ ಸಂತೋಷವೇನೋ ಆಗಬಹುದಾದರೂ ಆಕೆಯಲ್ಲಿ ಕಾಮದ ಆಕರ್ಷಣೆ ದೊರೆಗೆ ಬತ್ತಿಹೋಗಿತ್ತು. ಸುಮಿತ್ರೆಯೂ ಅಷ್ಟೇ. ಚಿಕ್ಕವಯಸ್ಸಿನ ಕೈಕೆಯಿಯನ್ನು ಚೆನ್ನಾಗಿ ಮರಳುಮಾಡಿ ಇಟ್ಟುಕೊಂಡಿದ್ದ. ತನಗೆ ಬೇಕಾದ ಹಾಗೆ ಸುಖವನ್ನು ಅವಳಿಂದ ಪಡೆಯುತ್ತಿದ್ದ. ಆಕೆ ರಾಜನಿಗೋಸ್ಕರ ಅಲಂಕರಿಸಿಕೊಂಡು ನಗುಮುಖದಿಂದ ಯಾವತ್ತಿಗೂ ಸ್ವಾಗತಿಸಲು ಸಿದ್ಧಳಾಗಿರುತ್ತಿದ್ದಳು. ಕೈಕೇಯಿ ಮಂಥರೆಯ ಮಾತಿನಿಂದ ಪ್ರಭಾವಿತಳಾಗಿ ರಾಜನನ್ನು ಮಣಿಸಲೇ ಬೇಕೆಂದು ಕೋಪಾಗಾರವನ್ನು ಸೇರಿದರೆ ಇಳಿವಯಸ್ಸಿನ ರಾಜ “ರಾಮಾಭಿಷೇಕದ ಸಂತೋಷದ ವಾರ್ತೆಯನ್ನು ಕೈಕೇಯಿಗೆ ತಿಳಿಸಿ ರತಿಸುಖವನ್ನು ಪಡೆಯಬೇಕೆಂದು ಬಯಸಿ ಅತ್ಯಾಸೆಯಿಂದ ಕೈಕೇಯಿಯ ಅಂತಃಪುರಕ್ಕೆ ಧಾವಿಸಿ ಬರುತ್ತಾನೆ”.

ಕೈಕೇಯಿ ಅಂತಃಪುರದಲ್ಲಿ ಇಲ್ಲವಾಗಿರುವುದನ್ನು ಕಂಡವನಿಗೆ ವ್ಯಾಕುಲವಾಯಿತು. ಪ್ರತಿಹಾರಿ ಹೇಳಿದ “ದೇವ ದೇವಿ ಬೃಶಂ ಕ್ರುದ್ಧಾ ಕ್ರೋಧಾಗಾರಮಭಿದ್ರುತಾ-ಪರಮ ಕ್ರುದ್ಧೆಯಾಗಿ ದೇವಿ ಕೋಪಾಗಾರವನ್ನು ಸೇರಿದ್ದಾಳೆ” ಎನ್ನುವ ಮಾತನ್ನು ಕೇಳಿ ಕಂಗಾಲಾದ. ಕೋಪಾಗಾರಕ್ಕೆ ಧಾವಿಸಿ ನೋಡಿದರೆ ತನ್ನ ಪ್ರೇಯಸಿ ಅಸ್ತವ್ಯಸ್ತವಾಗಿ ನೆಲದ ಮೇಲೆ ಮಲಗಿದ್ದಾಳೆ. ಪ್ರಿಯತಮೆಯನ್ನು ಆಕಾಶದಿಂದ ಚ್ಯುತಳಾದ ಅಪ್ಸರೆಯಂತೆ ಕಂಡವನಿಗೆ ಎದೆಯೊಡೆದು ಹೋಯಿತು. “ನಿಷ್ಕಳಂಕನಾದ ದಶರಥ ಪಾಪಸಂಕಲ್ಪವನ್ನು ಹೊತ್ತ ಕೈಕೇಯಿಯನ್ನು ಕಂಡ” ಎನ್ನುವ ಮಾತು ಇಲ್ಲಿ ಬರುತ್ತದೆ. ಸಂಕಲ್ಪವೆನ್ನುವುದು ಹೊಸ ಕಾರ್ಯಕ್ಕೆ ಹೇತು. ಮುಂದಿನ ಘಟನೆಗೆ ಇಲ್ಲಿ ನಾಂದಿಯಾಗುತ್ತಿದೆ. ಧರ್ಮಮಾರ್ಗದಲ್ಲಿ ಸದಾ ನಡೆಯುತ್ತಿದ್ದ ಅರಸ ಕಾಮಮೋಹಿತನಾಗಿ ಕೈಕೇಯಿಯನ್ನು ಸಮಾಧಾನ ಮಾಡಲು ಹೇಳುವ ಮಾತುಗಳು ಸೂರ್ಯವಂಶಕ್ಕೆ ಹೇಳಿಸಿದ್ದಲ್ಲ.

ಅವಧ್ಯೋ ವಧ್ಯತಾಂ ಕೋ ವಾ ವಧ್ಯಃ ಕೋವಾ ವಿಮುಚ್ಯತಾಮ್.
ದರಿದ್ರಃ ಕೋ ಭವದಾಢ್ಯೋ ದ್ರವ್ಯವಾನ್ಕೋSಪ್ಯಕಿಂಚನಃ৷৷ಅ. ಕಾಂ.10.33৷৷

ಕಾಮವೆನ್ನುವುದು ಎಂತವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುವ ಮಾತುಗಳು ದೊರೆತನಕ್ಕೆ ತಕ್ಕುದಲ್ಲ. ಆತ ಅವಳನ್ನು ಸಮಾಧಾನಿಸುತ್ತಾ “ಪ್ರಿಯತಮೆಯಲ್ಲಿ ನನಗೆ ನಿನಗಿಂತ- ಮನುಜರಲ್ಲಿ ರಾಮನಿಗಿಂತ ಹೆಚ್ಚಿನವರು ಯಾರೂ ಇಲ್ಲ” ಎನ್ನುವಲ್ಲಿ ರಾಮನ ಹೆಸರನ್ನು ಕೇಳಿದ ಆಕೆಗೆ ಮತ್ತುಷ್ಟು ಉರಿ ಹತ್ತಿತು. ದೊರೆ ಮನ್ಮಥನ ಬಾಣಕ್ಕೆ ಈಡಾಗಿರುವುದನ್ನು ಪಕ್ಕಾ ಮಾಡಿಕೊಂಡಳು. ಸ್ವಲ್ಪ ಹೊತ್ತು ಕಾಡಿಸಬೇಕು ಎಂದು ಸುಮ್ಮನಾದವಳು. ದಶರಥನಿಗೆ ಸಹಿಸಲಾಗಿಲ್ಲ. ಆಕೆಯ ರೂಪಲಾವಣ್ಯಕ್ಕೆ ಸೋತಿದ್ದ. ಅವಳ ನೋವನ್ನು ಬಗೆಹರಿಸುವುದು ತನ್ನ ಆದ್ಯ ಕರ್ತವ್ಯವೆಂದು ಬಗೆದ.. ಅದು ತನಕ ತಾನು ಗಳಿಸಿದ ಸುಕೃತದ ಮೇಲೆ ಆಣೆಯಿಟ್ಟು ಅವಳ ಬಯಕೆಯನ್ನು ಈಡೇರಿಸುವೆ ಎಂದು ಅಂಗಲಾಚಿದ.

dhavala dharini king dasharatha

ಆದರೂ ಸುಮ್ಮನಿದ್ದ ಕೈಕೇಯಿಗೆ ಕೊನೆಯದಾಗಿ “ನನ್ನ ರಾಮನಾಣೆಗೂ ನೀನು ಹೇಳುವ ಕಾರ್ಯವನ್ನು ಮಾಡುತ್ತೇನೆ” ಎಂದು ಪ್ರತಿಜ್ಞೆ ಮಾಡಿಬಿಟ್ಟ. ಗಾಳದಲ್ಲಿ ಚಿಕ್ಕಮೀನನ್ನು ಚುಚ್ಚಿ ದೊಡ್ಡಮೀನನ್ನು ಸೆಳೆಯುವಂತೆ ಚಕ್ರವರ್ತಿಯನ್ನು ಮಟ್ಟುಹಾಕಿ ತನ್ನ ಕಾರ್ಯಸಾಧಿಸಲು ಇದೇ ಸಮಯವೆಂದು ತಿಳಿದ ಕೈಕೇಯಿ ಬಯಕೆಯನ್ನು ಹೇಳುವ ಮುನ್ನ ರಾಜನಲ್ಲಿನ ಧರ್ಮಪ್ರಜ್ಞೆಯನ್ನು ಜಾಗ್ರತಗೊಳಿಸಲು “ನೀನು ಮಾಡಿದ ಈ ಪ್ರತಿಜ್ಞೆಯನ್ನು ಮೂವತ್ತುಮೂರು ಕೋಟಿ ದೇವತೆಗಳು ಕೇಳಲಿ, ಚಂದ್ರಸೂರ್ಯರೂ ಕೇಳಲಿ, ಆಕಾಶವೂ ಇದಕ್ಕೆ ಸಾಕ್ಷಿಯಾಗಲಿ, ನವಗ್ರಹಗಳು, ಹಗಲು-ರಾತ್ರಿಗಳು, ಎಂಟುದಿಕ್ಕುಗಳು,ಗಂಧರ್ವರಾಕ್ಷಸರನ್ನೊಳಗೊಂಡಿರುವ ಸ್ವರ್ಗ-ಮರ್ತ್ಯ-ಪಾತಾಳ, ನಿಶಾಚರರೂ, ಪಿಶಾಚಗಳೂ, ಭೂತಗಣಗಳೂ, ಗೃಹದೇವತೆಗಳೂ ಸಹಿತ ಎಲ್ಲರೂ ನೀನು ಹೇಳಿದ ಈ ಪ್ರತಿಜ್ಞಾವಾಕ್ಯಕ್ಕೆ ಸಾಕ್ಷಿಗಳಾಗಲಿ” ಎಂದವಳೇ ಆತನನ್ನು ಸಂಪೂರ್ಣವಾಗಿ ಖೆಡ್ಡಾಕ್ಕೆ ತೋಡುವ ಈ ಮಾತನ್ನು ಆಡುತ್ತಾಳೆ.

ಸತ್ಯಸಂಧೋ ಮಹಾತೇಜಾಃ ಧರ್ಮಜ್ಞಃ ಸುಸಮಾಹಿತಾಃ.
ವರಂ ಮಮ ದದಾತ್ಯೇಷಃ ತನ್ಮೇ ಶ್ರೃಣ್ವನ್ತು ದೈವತಾಃ৷৷ಅಯೋ.11.16৷৷

ಎಲೈ ದೇವತೆಗಳಿರಾ! ನೀವೆಲ್ಲರೂ ಕೇಳಿರಿ. ಸತ್ಯಸಂಧನಾದ ಮಹಾತೇಜಸ್ವಿಯಾದ, ಧರ್ಮಜ್ಞನಾದ ಧಶರಥನು ಸಮಾಧಾನಚಿತ್ತನಾಗಿ ತಾನು ಪ್ರತಿಜ್ಞೆ ಮಾಡಿರುವಂತೆ ನನಗೆ ವರವನ್ನು ದಯಪಾಲಿಸಲಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ವ್ಯಾಧನ ಧ್ವನಿಯಿಂದ ಆಕರ್ಷಿತಳಾಗಿ ಬಲೆಗೆ ಬೀಳುವ ಜಿಂಕೆಯಂತೆ ರಾಜನು ತನ್ನ ವಿನಾಶಕ್ಕಾಗಿ ಧರ್ಮಪಾಶವನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು ಹೀಗೆ. ಅವನಿಗೆ ಮುಂದೆ ಮಾತಾಡಲು ಅವಕಾಶಕೊಡದಂತೆ ಆತನನ್ನು ಬಿಗಿದಪ್ಪಿ ತನಗೆ ಹಿಂದೆ ಕೊಟ್ಟಿದ್ದ ವರಗಳನ್ನು ಅಪೇಕ್ಷಿಸಿ ಅದಕ್ಕೆ ರಾಜ ಬೇರೆ ಏನನ್ನಾದರೂ ಹೇಳಬಾರದೆಂದು, “ರಾಮನಿಗೆ ಪಟ್ಟಾಭಿಷೇಕಕ್ಕೆ ಯಾವೆಲ್ಲಾ ಸಿದ್ಧತೆಗಳಾಗಿವೆಯೋ ಅದೇ ಸಾಂಬಾರಪದಾರ್ಥಗಳಿಂದ ಭರತನಿಗೆ ಪಟ್ಟಾಭಿಷೇಕವಾಗಬೇಕು. ಎರಡನೇಯ ವರವನ್ನೂ ಹೇಳಿಯೇಬಿಡುವೆ.

ನವ ಪಞ್ಚ ಚ ವರ್ಷಾಣಿ ದಣ್ಡಕಾರಣ್ಯಮಾಶ್ರಿತಃ
ಚೀರಾಜಿನಜಟಾಧಾರೀ ರಾಮೋ ಭವತು ತಾಪಸಃ.

ಹದಿನಾಲ್ಕು ವರುಷಗಳ ಕಾಲ ರಾಮನು ದಂಡಕಾರಣ್ಯಕ್ಕೆ ಹೋಗಿ ಅಲ್ಲಿ ಅವನು ಜಟಾಧಾರಿಯಾಗಿ ನಾರಮುಡಿಯನ್ನುಟ್ಟು ಕೃಷ್ಣಾಜಿನವನ್ನು ಧರಿಸಿ ತಾಪಸನಂತೆ ಇರಬೇಕು.

ಕೈಕೇಯಿ ಇಷ್ಟಕ್ಕೇ ನಿಲ್ಲಿಸುವುದಿಲ್ಲ. “ಆದ್ಯ ಚೈವ ಹಿ ಪಶ್ಯೇಯಂ ಪ್ರಯಾನ್ತಂ ರಾಘವಂ ವನಮ್- ರಾಘವನು ಚೀರಾಜಿನ-ಜಟಾಧಾರಿಯಾಗಿ ಕಾಡಿಗೆ ಹೋಗುವುದನ್ನು ಈಗಲೇ ನಾನು ನೋಡಬೇಕು, ಸತ್ಯವಚನನಾದ ನೀನು ಈಗಲೇ ನಡೆಸಿಕೊಡು” ತನ್ನ ಇಬ್ಬರು ಪ್ರಿಯರಲ್ಲಿ ಒಬ್ಬನಾದ ರಾಮನಿಗೆ ಆಘಾತಕಾರಿಯಾದ ವಿಷಯಗಳನ್ನು ಹೇಳುವ ಮಾತುಗಳು ದಶರಥನ ಕಾಮದ ಪಿತ್ಥವನ್ನು ಜರ್ರನೆ ಇಳಿಸಿಯೇಬಿಟ್ಟಿತು; ಜೊತೆಗೆ ಆತನ ಮನೋಧೈರ್ಯವನ್ನೂ ಸಹ! ಲೋಕದ ಎಲ್ಲಾ ರಾಜರನ್ನು, ಪ್ರಜೆಗಳನ್ನು ಮತ್ತು ವಶಿಷ್ಠರಾದಿಯಾಗಿರುವ ಎಲ್ಲಾ ಋಷಿಗಳನ್ನು ತನ್ನ ಇಷ್ಟಕ್ಕೆ ಒಗ್ಗಿಕೊಳ್ಳುವಂತೆ ತಂತ್ರವನ್ನು ಹೂಡಿದ ಅರಸನ ಇಚ್ಛೆ ಇಲ್ಲಿ ತರಗೆಲೆಗಳಂತೆ ಗಾಳಿಗೆ ಹಾರಿಹೋಯಿತು. ಯಾವ ಉದ್ಧೇಶಕ್ಕಾಗಿ ಕೈಕೇಯಿಯ ಅರಮನೆಗೆ ಬಂದಿದ್ದನೋ ಅವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಕದಡಿಹೋಯಿತು. ಅವನ ಜೀವನದಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿವದೊಂದೇ ಗುರಿ ಇದ್ದಿದ್ದು. ತನ್ನ ಪ್ರೀತಿಯ ರಾಣಿಯಿಂದಲೇ ಹೀಗೆ ವಿಘ್ನಬರಬಹುದೆಂದು ರಾಜ ಎಣಿಸಿರಲಿಲ್ಲ. ಅಂಥ ಸ್ವಲ್ಪ ಅನುಮಾನ ಬಂದಿದ್ದರೂ ಆತ ಕೈಕೇಯಿಯ ಅರಮನೆಗೆ ಬರುತ್ತಲೇ ಇರಲಿಲ್ಲ. ಒಮ್ಮೆಲೇ ಎಚ್ಚರತಪ್ಪಿ ಬಿದ್ದ. ತನ್ನ ರಾಜತ್ವಕ್ಕೆ ಧಿಕ್ಕಾರ ಹಾಕಿಕೊಂಡ. ಕೊನೆಗೆ ಅನಿವಾರ್ಯವಾಗಿ ಕೈಕೇಯಿಗೆ ನಮಸ್ಕರಿಸಿಕೊಂಡು “ನಿನ್ನ ಕಾಲನ್ನು ಬೇಕಾದರೂ ಹಿಡಿಯುತ್ತೇನೆ, ರಾಮನನ್ನು ರಕ್ಷಿಸು. ವರದಾನವೆನ್ನುವ ಒಂದು ಪ್ರತಿಜ್ಞೆಯಲ್ಲಿ ನನ್ನನ್ನು ಸಿಕ್ಕಿಹಾಕಿಸಿ ನಿರಪರಾಧಿಯನ್ನು ಕಾಡಿಗಟ್ಟಿದ ದೋಷ ನನಗೆ ಬಾರದಿರಲಿ” ಎಂದು ನೆಲದಲ್ಲಿ ಹೊರಳಾಡತೊಡಗಿದ.

ಮೂಂದಿನ ಭಾಗದಲ್ಲಿ ತನ್ನ ಕರ್ಮಫಲವನ್ನು ತಾನು ಉಂಡ ಮಹಾರಾಜ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

Continue Reading
Advertisement
chikkaballapur woman murder case
ಕ್ರೈಂ31 mins ago

Murder Case: ಪ್ರಿಯತಮೆ ಎದುರೇ ಮಹಿಳೆಯ ಅತ್ಯಾಚಾರ ಮಾಡಿ ಕೊಂದ ಪಾಪಿ!

Covishield Vaccine
ದೇಶ32 mins ago

Covishield Vaccine: ಕೋವಿಶೀಲ್ಡ್‌ ಲಸಿಕೆ ಹಿಂಪಡೆಯುವುದಾಗಿ ಅಸ್ಟ್ರಾಜೆನೆಕಾ ಘೋಷಣೆ

Aishwarya Arjun Umapathy Ramaiah Wedding Date Venue Revealed
ಸ್ಯಾಂಡಲ್ ವುಡ್38 mins ago

Aishwarya Arjun: ಅರ್ಜುನ್ ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

toilet video shooting in mangalore
ಕ್ರೈಂ1 hour ago

Toilet Video: ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

Ranveer Singh Wedding Pics With Deepika Padukone
ಸ್ಯಾಂಡಲ್ ವುಡ್1 hour ago

Ranveer Singh: ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌! ದೀಪಿಕಾ ಜತೆ ರಣವೀರ್ ಕಿರಿಕ್‌?

EVMs damage
ದೇಶ1 hour ago

EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

Manali Tour
ಪ್ರವಾಸ2 hours ago

Manali Tour: ಭೂಲೋಕದ ಸ್ವರ್ಗ ಮನಾಲಿಗೆ ಪ್ರವಾಸ ಮಾಡಲು ಯಾವ ಸಮಯ ಸೂಕ್ತ?

Akshaya Tritiya 2024
ಧಾರ್ಮಿಕ2 hours ago

Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Prajwal Revanna Case HD Revanna bail plea to be heard tomorrow Jail or Bela
ಕ್ರೈಂ2 hours ago

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

woman murder case divya
ಕ್ರೈಂ2 hours ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ13 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ16 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ17 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌