ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಮೆಚ್ಚುಗೆ ಬಹುಮಾನ ಪಡೆದ ಕಥೆ: ಪರವೇಶ್ಮಸ್ಥನ ಫಿಕ್ಹ್‌ ಪ್ರಸಂಗವು... - Vistara News

ಕಲೆ/ಸಾಹಿತ್ಯ

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಮೆಚ್ಚುಗೆ ಬಹುಮಾನ ಪಡೆದ ಕಥೆ: ಪರವೇಶ್ಮಸ್ಥನ ಫಿಕ್ಹ್‌ ಪ್ರಸಂಗವು…

ಬಡ್ಡಿಹಣವನ್ನು ಸುಟ್ಟು ಹಾಕಬೇಕು ಎಂದು ಒತ್ತಾಯಿಸಿದ ಮುಸ್ಲಿಯಾರರ ಮುಂದೆ ಹಲವು ಸವಾಲುಗಳು ಎದ್ದು ನಿಂತವು. ಅವರ ಮನದಲ್ಲಿ ಜಿನುಗುವ ದುಃಖವೊಂದು ಒಸರುತ್ತಿತ್ತು.

VISTARANEWS.COM


on

bm haneef story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
bm haneef

:: ಬಿ.ಎಂ ಹನೀಫ್

‘ಅಬ್ಬಾ.. ಇಲ್ಲಿ ಕೇಳಿ. 30 ವರ್ಷಗಳಿಂದ ಆ ಮಸೀದಿಯಲ್ಲಿ ಇಮಾಮ್‌ ಆಗಿ ಕೆಲಸ ಮಾಡಿದ್ರೀ.. ಏನ್‌ ನಿಮ್ಮನೆಗೆ ಬಂದು ಜುಜುಬಿ ಶಾಲು ಹಾಕಿಯಾದ್ರೂ ಸನ್ಮಾನ ಮಾಡಿದ್ರಾ? 30 ವರ್ಷ ದುಡಿದದ್ದಕ್ಕೆ ಸರ್ವಿಸ್‌, ಗ್ರಾಚ್ಯುಟಿ ಕೊಡ್ತಾರಾ? ಇದ್ಯಾವುದೂ ಇಲ್ಲ. ಈಗಲೂ ಜುಜುಬಿ ಸಂಬಳ. ಅದೂ ಕುಗ್ರಾಮದಲ್ಲಿ ಕಾಡಿನ ನಡುವೆ ಬದುಕಬೇಕು. ಒಂದು ಸರಿಯಾದ ಆಸ್ಪತ್ರೆ ಇಲ್ಲ. ಇರೋದೊಂದು ಉರ್ದು ಶಾಲೆ. ಜಮಾತ್‌ನ ಒಳರಾಜಕೀಯದ ಸುಳಿಯಲ್ಲಿ ನೀವ್ಯಾಕೆ ಸಿಕ್ಕಿ ಬೀಳ್ತೀರಿ? ಸಾಕು ಜಮಾತನ್ನು ಉದ್ಧಾರ ಮಾಡಿದ್ದು. ಮುಂಬೈಗೆ ಬಂದು ಇಲ್ಲೇ ನಮ್ಜೊತೆಗೆ ಇದ್ದುಬಿಡಿ. ಉಮ್ಮನಿಗೆ ಹೇಳಿದ್ದೇನೆ, ಅವರು ಬರೋದಕ್ಕೆ ರೆಡಿ. ನಿಮ್ದೇ ಪ್ರಾಬ್ಲಮ್ಮು…!’

– ರಾತ್ರಿ ಫೋನ್‌ ಮಾಡಿದ ಮಗ ಸಿದ್ದೀಕ್‌ ಸಿಟ್ಟಿಗೆದ್ದು ಹೇಳಿದ ಮಾತುಗಳು ಅಬ್ದುಲ್‌ ಖಾದರ್‌ ಮುಸ್ಲಿಯಾರರ ಕಿವಿಯಲ್ಲಿ ಬೆಳಿಗ್ಗೆಯಿಂದಲೂ ಗುಂಯ್‌ಗುಡುತ್ತಿವೆ. ಒಂದು ವರ್ಷದಿಂದ ಇದನ್ನೇ ಸೌಮ್ಯವಾಗಿ ಹೇಳುತ್ತಿದ್ದ. ಈಗ ಅವನಿಗೂ ಹತಾಶೆ ಉಕ್ಕೇರಿದ್ದಕ್ಕೆ ಕಾರಣಗಳಿವೆ. ಜಮಾತಿನ ಪ್ರೆಸಿಡೆಂಟ್‌ ಕಂಟ್ರಾಕ್ಟರ್‌ ಅಬ್ದುಲ್ಲಾ ಹಾಜಿ ಮತ್ತು ತನ್ನ ನಡುವೆ ಕಳೆದ ಶುಕ್ರವಾರ ಜುಮಾ ನಮಾಜಿನ ಬಳಿಕ ಮಸೀದಿಯಲ್ಲಿ ನಡೆದ ಖಡಾಖಡಿ ಜಗಳದ ಸುದ್ದಿ ಅವನಿಗೂ ಮುಟ್ಟಿದೆ.

‘ಯಾವ ಸಬೂಬನ್ನೂ ಈ ಸಲ ನಾನು ಕೇಳಿಸಿಕೊಳ್ಳುವುದಿಲ್ಲ ಅಬ್ಬಾ. ಅಲ್ಲಿರೋದು ಮಸೀದಿಯವರ ಬಾಡಿಗೆ ಮನೆ, ಸ್ವಂತದ್ದಲ್ಲ. ಬಿಟ್ಟು ಬರಲು ಸಂಬಂಧಿಕರೂ ಇಲ್ಲವಲ್ಲ! ಇಲ್ಲಿ ಸಣ್ಣದಾದರೂ ಸ್ವಂತ ಫ್ಲ್ಯಾಟ್‌ ಇದೆ. ಮುಂದಿನ ತಿಂಗಳು ಬರುತ್ತೇನೆ. ಊರು ಬಿಡಲು ರೆಡಿಯಾಗಿ. 20 ವರ್ಷಗಳಿಂದ ಅಲ್ಲಿದ್ದೀನಿ ಅಂತೆಲ್ಲಾ ಎಮೋಷನಲ್‌ ಆಗಬೇಡಿ. ಮಸೀದಿ ಅಧ್ಯಕ್ಷರಿಗೆ ಈಗಲೇ ಹೇಳಿ. ಅವರು ಬೇಕಿದ್ರೆ ಬೇರೆ ಮುಸ್ಲಿಯಾರರ ವ್ಯವಸ್ಥೆ ಮಾಡಿಕೊಳ್ತಾರೆ.. ಅಷ್ಟೇ..’– ನಿರ್ಧಾರದ ಧ್ವನಿಯಲ್ಲಿ ಹೇಳಿ ಮರುಮಾತಿಗೂ ಅವಕಾಶವಿಲ್ಲದಂತೆ ಫೋನ್‌ ಕಟ್‌ ಮಾಡಿದ್ದ.

***   

60 ದಾಟಿದ ಅಜಾನುಬಾಹು ಖಾದರ್‌ ಮುಸ್ಲಿಯಾರ್‌ ಕಣ್ಣು ಮುಚ್ಚಿಕೊಂಡು ಯೋಚನೆಯ ಮಡುವಿಗೆ ಬಿದ್ದರು. ಅರ್ಧ ಕಾಡು, ಅರ್ಧ ಊರು ಎನ್ನುವಂತಿದ್ದ ಈ ಪುಟ್ಟ ಗ್ರಾಮಕ್ಕೆ 30 ವರ್ಷಗಳ ಹಿಂದೆ ಅವರು ಬಂದಿಳಿದದ್ದು ಒಂದು ಅನಿರೀಕ್ಷಿತ ಸನ್ನಿವೇಶದಲ್ಲಿ. ಈ ಊರಿಗೇ ಬರಬೇಕೆಂದು ಬಂದವರಲ್ಲ. ಹೆದ್ದಾರಿಯಲ್ಲಿ ಬಸ್ಸಿಳಿದಾಗ ಕಂಡ ತಿರುವಿನಲ್ಲಿ ಊರಿನ ಬೋರ್ಡ್‌ ಕಾಣಿಸಿತು. ಇಲ್ಲೊಂದು ಪುರಾತನ ಮಸೀದಿ ಇದೆಯೆಂದೂ ಶೇಕಡಾ 90ರಷ್ಟು ಮುಸ್ಲಿಮರೇ ಇದ್ದಾರೆಂದೂ ಕೇಳಿದ್ದು ನೆನಪಿತ್ತು. ಅಷ್ಟೇ.. ಬೆಳ್ಳಂಬೆಳಿಗ್ಗೆಯ ಹೊತ್ತು ಪರಮ ದಯಾಮಯನು ದಾರಿ ತೋರಿಸಿದಂತೆ ಜಮಾತ್‌ ಪ್ರೆಸಿಡೆಂಟರ ಮನೆಯ ಮುಂದೆ ಬ್ಯಾಗು ಹಿಡಿದು ನಿಂತಿದ್ದರು.

ತೀಕ್ಷ್ಣ ಕಣ್ಣು. ಸಹೃದಯಿ. ಸದಾ ಉದ್ದನೆಯ ಬಿಳಿಜುಬ್ಬಾ, ಬಿಳೀ ಮುಂಡು ಮತ್ತು ತಲೆಗೊಂದು ಬಿಳಿ ಮುಂಡಾಸು. ಕಾಲಲ್ಲಿ ಚರ್‌ ಎನ್ನುವ ಚರ್ಮದ ಚಡಾವು. ಸ್ವಲ್ಪ ದೊಡ್ಡದೇ ಎನ್ನಬಹುದಾದ ಹೊಟ್ಟೆಯಿದ್ದರೂ, ಪ್ರತಿದಿನ ಐದು ಹೊತ್ತು ನಮಾಜಿನ ಸಾಷ್ಟಾಂಗದಲ್ಲಿ ನೆತ್ತಿ ನೆಲಕ್ಕೆ ಚುಂಬಿಸಿ ಮೇಲೇಳುವಾಗ ಎಂದೂ ಏದುಸಿರು ಬಿಟ್ಟಿಲ್ಲ ಎನ್ನುವಷ್ಟು ಕಳಕಳೆಯ ಗಟ್ಟಿ ಆರೋಗ್ಯ. ಸ್ವಚ್ಛಂದ ಗಾಳಿಗೆ ಅಲ್ಲಾಡಿ ನಿಲುವಂಗಿಯ ಮೊದಲ ಬಟನನ್ನು ಸದಾ ಬ್ರಶ್ಶು ಮಾಡುವ  ನೀಳಗಡ್ಡ. ಅವರ ಜೊತೆಗೇ ಬಂದವರು ಬೆಳ್ಳಾನೆ ಬೆಳದಿಂಗಳ ಮೈಬಣ್ಣದ ತುಂಬು ಸುಂದರಿ ಧರ್ಮಪತ್ನಿ ನಫೀಸಮ್ಮ. ಎಲ್ಲಿಂದ ಬಂದರೆಂದು ಕೇಳಿದಾಗ, ಚಂದ್ರಗಿರಿ ನದಿಯಾಚೆಗಿನ ಕಾಡುಗುಡ್ಡದ ಕೊನೆಯ ಕೇರಳದ ಕುಗ್ರಾಮವೊಂದರ ಹೆಸರು ಹೇಳಿದ್ದರೂ, ಆ ಹೆಸರನ್ನು ಆವರೆಗೆ ಈ ಊರಿನ ಒಬ್ಬರೂ ಕೇಳಿರಲಿಲ್ಲ.

ನೂರು ವರುಷಗಳ ಹಿಂದೆ ಕಟ್ಟಿಸಿದ ಚಂದದ ಮರದ ಕೆತ್ತನೆಯ, ಆರುಮೂಲೆಗಳ, ಸಾವಿರದ ಆರುನೂರು ಹೆಂಚುಗಳ, ನೋಡಿದರೆ ಶೈವ ದೇವಸ್ಥಾನವೋ ಎಂಬಂತೆ ಕಾಣಿಸುವ ಪುರಾತನ ಮಸೀದಿಯಲ್ಲಿ ಇಮಾಮರಾಗಿ ಕೆಲಸ ಕೇಳಿ ಅಬ್ದುಲ್‌ ಖಾದರ್‌ ಮುಸ್ಲಿಯಾರರು ಬರುವುದಕ್ಕೂ, ಈ ಹಿಂದೆ ಇದ್ದ ಮುಸ್ಲಿಯಾರರು ಹೇಳದೆ ಕೇಳದೆ ಕೆಲಸ ಬಿಟ್ಟು ಹೋಗುವುದಕ್ಕೂ ಸರಿ ಹೋಗಿತ್ತು. ಪ್ರೆಸಿಡೆಂಟರೂ ಹೂಂ ಎಂದು ಮಾರು ದೂರದಲ್ಲಿದ್ದ ಮಸೀದಿಯ ಬಾಡಿಗೆ ಮನೆಯ ಕೀಲಿಕೈ ಕೊಟ್ಟರು. ಸುಲಭವಾಗಿ ಕೆಲಸವೊಂದು ಸಿಕ್ಕಿ ಹೊಟ್ಟೆ ಬಟ್ಟೆಗೆ ತಾಪತ್ರಯವಿಲ್ಲ ಎನ್ನುವಂತಾಯಿತು. ಬೆಳಿಗ್ಗೆ ಮತ್ತು ರಾತ್ರಿ ಮಕ್ಕಳಿಗೆ ಮಸೀದಿಯಲ್ಲೇ ಮುಸಾಬು, ಕಿತಾಬು ಓದಿಸುತ್ತಾ ಐದು ಹೊತ್ತಿನ ನಮಾಜಿಗೆ ಮುಂಚೂಣಿಯಲ್ಲಿ ಇಮಾಮರಾಗಿ ನಿಲ್ಲುತ್ತಾ ಕೆಲವೇ ತಿಂಗಳಲ್ಲಿ ಮುಸ್ಲಿಯಾರರು ಊರಿನವರೇ ಆಗಿಬಿಟ್ಟಿದ್ದರು. ವರ್ಷಗಳು ಉರುಳಿದರೂ, ಅವರ ಸಂಬಂಧಿಕರೆಂಬ ಒಂದು ನರಪಿಳ್ಳೆಯೂ ಈ ಊರಿಗೆ ಬಂದದ್ದಿಲ್ಲ. ಮುಸ್ಲಿಯಾರರೂ ಸಂಬಂಧಿಕರ ಮನೆಗೆಂದು ಒಂದು ದಿನವೂ ಹೋಗಿ ಬಂದವರಲ್ಲ. ಹೀಗೆ ಅಚಾನಕ್ಕಾಗಿ ಬಂದವರನ್ನು ನೋಡಿ ಕೆಲವರು ಊಹೆಗಳನ್ನು ಹರಿಯಬಿಟ್ಟದ್ದೂ ಸುಳ್ಳಲ್ಲ. ಅದರಲ್ಲೊಂದು – ‘ಯಾರೋ ನಂಬೂದಿರಿಯ ಮನೆಯ ಹೆಣ್ಣುಮಗಳನ್ನು ಪ್ರೀತಿಸಿ ನಿಖಾಹ್‌ ಮಾಡಿಕೊಂಡು ಊರು ಬಿಟ್ಟು ಓಡಿಬಂದಂತಿದೆ’ ಎಂಬ ಗುಸುಗುಸು. ನಫೀಸಾಳ ದಂತದ ಮೈಬಣ್ಣ ಮತ್ತು ಅಪರೂಪದ ನಿಲುವು ಕೂಡಾ ಅದಕ್ಕೆ ತಕ್ಕಂತೆಯೇ ಇತ್ತು. ಆದರೆ ಒಂದು ಮಾತು ಹೆಚ್ಚಿಲ್ಲ, ಒಂದು ಮಾತು ಕಡಿಮೆಯಿಲ್ಲ ಎಂಬಂತೆ ತಾನಾಯಿತು, ತನ್ನ ಕೆಲಸವಾಯಿತು ಎನ್ನುವ ಸ್ವಭಾವ ಆಕೆಯದ್ದು. ಆಡುವ ಬಾಯಿಗಳಿಗೆ ಯಾವತ್ತೂ ಮೇವು ಒದಗಿಸಲಿಲ್ಲ.

ಸದಾ ಸಮಾಧಾನದಿಂದ ಇರುತ್ತಿದ್ದ ಮುಸ್ಲಿಯಾರರು ಕೆಲವೊಮ್ಮೆ ಸಿಟ್ಟಿಗೆದ್ದಾಗ ಮಾತ್ರ ಇಸ್ಲಾಮಿನ ಎರಡನೇ ಖಲೀಫಾ ಉಮರ್‌ ಬಿನ್‌ ಖತ್ತಾಬರಂತೆ ರೌದ್ರಾವತಾರಿ ಆಗುತ್ತಿದ್ದುದುಂಟು. ಒಮ್ಮೆ ಮದ್ರಸಾದಲ್ಲಿ ಕುರಾನಿನ ಫಾತಿಹಾ ಎಂಬ ಪುಟ್ಟ ಅಧ್ಯಾಯವನ್ನು ಕಂಠಪಾಠ ಮಾಡದೆ ಕುಂಟುತ್ತಿದ್ದ ಒಂಭತ್ತು ವರ್ಷದ ಹುಡುಗನೊಬ್ಬನಿಗೆ ಹುಣಿಸೆ ಮರದ ಬಡಿಯಿಂದ ಹೇಗೆ ಬಡಿದರೆಂದರೆ, ಆತ ಮನೆಗೆ ಹೋಗುವಾಗ ಕುಂಟಲಾಗದೆ ಕುಂಟುತ್ತಾ ಹೋಗಿ, ಕ್ರುದ್ಧನಾದ ಅವನಪ್ಪ ಅದ್ದುರ್ರಹ್ಮಾನ್‌ ಮನೆಯಲ್ಲಿದ್ದ ಪಿಕಾಸಿಯ ಬಡಿಗೆಯನ್ನೇ ಕಿತ್ತು ಕೈಯಲ್ಲಿ ಹಿಡಿದು ಮಸೀದಿಗೆ ಬಂದು ಉಸ್ತಾದರ ತಲೆ ಒಡೆಯುತ್ತೇನೆಂದು ಶರಂಪರ ಜಗಳವಾಡಿದ್ದ. ಇನ್ನೊಮ್ಮೆ ಮಾರ್ನಮಿಯ ವೇಷದ ಸಮಯದಲ್ಲಿ ಮನೆ ಬಾಗಿಲಿಗೆ ಬಂದ ಪರವೂರಿನ ಸ್ತ್ರೀವೇಷಧಾರಿಯೊಬ್ಬ ‘ಎಲ್ಲಿದ್ದೀರಿ ಉಸ್ತಾದರೇ, ಅಲ್ಲಿ ನಮ್ಮ ಮಗು ಅಪ್ಪ ಬೇಕೂ ಅಂತ ನಿಮ್ಮನ್ನೇ ನೆನೆಸಿ ಅಳುತ್ತಿದೆಯಲ್ಲ…’ ಎಂದು ಕುಶಾಲು ಮಾತನಾಡಿ ಕುಣಿಯುತ್ತಾ ಕಾಸು ಕೇಳತೊಡಗಿದಾಗ ಸಿಟ್ಟಿಗೆದ್ದ ಉಸ್ತಾದರು ಕೈಗೆ ಸಿಕ್ಕಿದ ಹಿಡಿಸೂಡಿಯಲ್ಲಿ ಆ ವೇಷಧಾರಿಗೆ ರಪರಪನೆ ಬಾರಿಸಿ, ಆತ ಕಂಯ್‌ ಕುಂಯ್‌ ಎನ್ನುತ್ತಾ ನೆಲದಲ್ಲುರುಳಿ, ಎದ್ದು ಬಿದ್ದು ಹಿಂತಿರುಗಿ ನೋಡದೇ ಓಟಕಿತ್ತಿದ್ದ.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ತೃತೀಯ ಬಹುಮಾನ ಪಡೆದ ಕಥೆ: ಅದು ಅವರ ಪ್ರಾಬ್ಲಮ್

ಕೆಲವೊಮ್ಮೆ ಐದಾರು ದಿನ ಯಾರ ಜೊತೆಗೂ ಮಾತನಾಡದೆ ಮುಸ್ಲಿಯಾರರು ಮೌನವಾಗಿರುವುದುಂಟು. ರಾತ್ರಿ ಅಂಗಳದಲ್ಲಿ ಕುರ್ಚಿಯೊಂದನ್ನು ಹಾಕಿ ಆಕಾಶದ ನಕ್ಷತ್ರಗಳನ್ನು ನೋಡುತ್ತಾ ಕೈಬೆರಳುಗಳಲ್ಲಿ ಏನನ್ನೋ ಲೆಕ್ಕ ಹಾಕುವುದುಂಟು. ಹೀಗೆ ಆಕಾಶ ನೋಡುತ್ತಾ ಕುಳಿತಿರುತ್ತಿದ್ದ ಉಸ್ತಾದರನ್ನು ಊರವನೊಬ್ಬ ಹೊಗಳುತ್ತಾ ‘ಇವರು ಖಗೋಳಶಾಸ್ತ್ರದ ಮಹಾಜ್ಞಾನಿಯೆಂದೂ, ಲಕ್ಷದ್ವೀಪದಿಂದ ಬಂದಿರುವ ಸೂಫಿಸಂತರೇ ಇರಬೇಕೆಂದೂ, ಸುಲೇಮಾನ್‌ ಎಂಬ ಕ್ರಿಸ್ತಪೂರ್ವ ನೆಬಿಯ ಕಾಲದ ವೃದ್ಧ ಜಿನ್ನೊಂದು ಇವರಿಗೆ ಹಸ್ತಗತವಾಗಿದೆಯೆಂದೂ’ ಊರೆಲ್ಲಾ ಪ್ರಚಾರ ಮಾಡತೊಡಗಿದ್ದ. ಇದ್ದರೂ ಇರಬಹುದೆಂದು ಅನೇಕರು ನಂಬತೊಡಗಿದ್ದ ಒಂದು ದಿನ, ಆ ಹೊಗಳುಭಟನನ್ನು ಮಸೀದಿಯ ಅಂಗಳದಲ್ಲೇ ಮುಸ್ಲಿಯಾರರು ಅಟ್ಟಾಡಿಸಿಕೊಂಡು ಎಲ್ಲೆಂದರಲ್ಲಿ ಗುದ್ದಿ, ‘ಇನ್ನೊಮ್ಮೆ ಇಂತಹ ಸುಳ್ಳು ಪ್ರಚಾರ ಮಾಡಿದರೆ, ಶುಕ್ರವಾರ ಜುಮಾ ನಮಾಜಿನ ದಿನ ಉಪನ್ಯಾಸಕ್ಕೆಂದು ಕೈಯಲ್ಲಿ ಹಿಡಿದುಕೊಳ್ಳುವ ಬಡ್ಡು ತಲವಾರಿನಿಂದಲೇ ಕೊರಳು ಕತ್ತರಿಸಿಬಿಡುತ್ತೇನೆಂದು’ ಅಬ್ಬರಿಸಿದ್ದರು. ಹೊಡೆತಕ್ಕೆ ನಡುಗಿಹೋಗಿದ್ದ ಆತ ಗೋಗರೆದು ಕ್ಷಮೆ ಕೇಳಿ ಬಚಾವಾಗಿದ್ದ. ಆದರೆ ಬಿಗಿಮುಷ್ಠಿಯ ಹೊಡೆತ ತಿಂದ ಬಳಿಕ ನಿಜಕ್ಕೂ ಅವರ ದೇಹದಲ್ಲಿ ಯಾವುದೋ ಒಂದು ಜಿನ್ನ್‌ ನೆಲೆಸಿದೆಯೆಂದು ಆತನಿಗೆ ಖಾತ್ರಿಯಾಗಿತ್ತು. ಅದನ್ನು ಊರಲ್ಲಿ ಯಾರ ಬಳಿಯೂ ಬಾಯಿಬಿಟ್ಟು ಹೇಳಲಾಗದೆ, ಒಳಗೂ ಇರಿಸಿಕೊಳ್ಳಲಾಗದೆ ಆತ ವೇದನೆ ಅನುಭವಿಸುತ್ತಿದ್ದ.

ಮುಸ್ಲಿಯಾರರ ಕಂಠಸಿರಿ ಅದ್ಭುತವಾಗಿತ್ತು. ಉಪನ್ಯಾಸಕ್ಕೆಂದು ನಿಂತರೆ ಮಲಾಮೆ ಮಿಶ್ರಿತ ಮಲಯಾಳಂನಲ್ಲಿ ಸುಶ್ರಾವ್ಯವಾಗಿ ಪ್ರವಾದಿ ನೂಹ್‌, ಈಸಾ, ಮೂಸಾ, ಹಾರೂನ್‌, ದಾವೂದ್‌, ಸುಲೈಮಾನ್‌ ಮುಂತಾದವರ ಕಿಸ್ಸಾಗಳಿಗೆ ನವರಸಗಳನ್ನು ತುಂಬಿ, ನಡುನಡುವೆ ನಫೀಸತ್‌ ಮಾಲಾ, ಮಂಕೂಸ್‌ ಮೌಲೂದುಗಳ ಹಾಡುಗಳನ್ನು ರಾಗವಾಗಿ ಹಾಡುತ್ತಾ ಇತಿಹಾಸದ ಪಾತ್ರಗಳಿಗೆ ಜೀವ ತುಂಬುತ್ತಿದ್ದುದನ್ನು ಕೇಳಿ ಜನರು ತನ್ಮಯರಾಗುತ್ತಿದ್ದರು. ಅವರ ಕುರಾನ್‌ ಪಾರಾಯಣವೂ ಮೃದುಮಧುರ. ಎರಡೂ ಅಂಗೈಗಳನ್ನು ಆಕಾಶಕ್ಕೆ ಎತ್ತಿ ಅವರು ಗದ್ಗದ ಕಂಠದಿಂದ ಕಣ್ಣಂಚಿನಲ್ಲಿ ನೀರು ಜಿನುಗಿಸುತ್ತಾ ದುವಾ ಮಾಡಿದರೆ ಅಲ್ಲಾಹು ಆ ಪ್ರಾರ್ಥನೆಗೆ ತಕ್ಷಣವೇ ಉತ್ತರ ಕೊಡುತ್ತಾನೆಂದು ಬಹುತೇಕರು ನಂಬಿದ್ದರು. ನಂಬಿಕೆಗೆ ಅನುಗುಣವಾಗಿಯೇ ಮುಸ್ಲಿಯಾರರ ದುವಾದ ಬಳಿಕ ಹಲವರ ವ್ಯಾಪಾರ ಕುದುರಿತ್ತು, ಕೈಯಲ್ಲಿ ಕಾಸು ಓಡಾಡುತ್ತಿತ್ತು. ಕೆಲವು ಮಹಿಳೆಯರು ತಮಗೆ ಮಕ್ಕಳಾದದ್ದೂ ಉಸ್ತಾದರ ವಿಶೇಷ ದುವಾದ ಫಲ ಎಂದು ನಂಬಿಕೊಂಡದ್ದುಂಟು. ಜಮಾತ್‌ ಕಮಿಟಿಯ ಪದಾಧಿಕಾರಿಗಳು ಮುಸ್ಲಿಯಾರರ ಫ್ಯಾನ್‌ಗಳೇ ಆಗಿದ್ದ ಹಿನ್ನೆಲೆಯಲ್ಲಿ ಅವರ ರೌದ್ರಾವತಾರದ ಘಟನೆಗಳಿಗೂ ಊರವರಿಂದ ಮಾಫಿ ದೊರಕುತ್ತಿತ್ತು. ಊರಲ್ಲಿರುವ ಕೆಲವು ಕೆಳಜಾತಿಯ ಅಮ್ಮಂದಿರು ಅಳುವ ಪುಟ್ಟ ಕಂದಮ್ಮಗಳನ್ನು ಎತ್ತಿಕೊಂಡು ಮಸೀದಿಯ ಅಂಗಳಕ್ಕೆ ಬರುತ್ತಿದ್ದರು. ಈ ಗುರುಗಳು ಅರಬೀಯಲ್ಲಿ ಮಣಮಣ ಮಂತ್ರ ಹೇಳಿ, ಕಂದಮ್ಮಗಳ ತಲೆಯ ಮೇಲೆ ಕೈಬೆರಳಾಡಿಸಿ ಇಸುಫ್… ಎಂದೊಮ್ಮೆ ಊದಿದರೆ ಮಕ್ಕಳು ಚಂಡಿ ಹಿಡಿದ ಅಳು ನಿಲ್ಲಿಸುತ್ತಿದ್ದುದನ್ನು ಕಣ್ಣಾರೆ ಕಂಡ ಅಮ್ಮಂದಿರೂ ಗೌರವದಿಂದ ನಡೆದುಕೊಳ್ಳುತ್ತಿದ್ದರು. ಹೀಗೆ ಊರವರಿಗೆಲ್ಲ ಪ್ರಿಯವಾಗಿದ್ದ ಮುಸ್ಲಿಯಾರರ ಮನಸ್ಸಿನಲ್ಲಿ ಮಾತ್ರ, ಆಮೆಯೊಂದು ಮರಳತೀರಕ್ಕೆ ಬಂದು ಗುಂಡಿ ತೋಡಿ ಮೊಟ್ಟೆಯಿಟ್ಟು ಮರಳಿ ಸಮುದ್ರಕ್ಕೆ ಓಡಿಹೋಗುವಂತೆ, ಜಿನುಗುವ ದುಃಖವೊಂದು ಒಸರುತ್ತಿತ್ತು. ಇಲ್ಲಿಗೆ ಬಂದು ನೆಲೆಸಿ ಐದು ವರ್ಷಗಳಾದರೂ ತನ್ನ ಪ್ರೀತಿಯ ನಫೀಸಾ ಒಂದು ಕರುಳಕುಡಿಯನ್ನು ಹೆತ್ತು ಕೊಡಲಿಲ್ಲವೇ ಎಂಬ ವೇದನೆಯು ಮುಸ್ಲಿಯಾರರ ಮನಸೊಳಗೇ ಮರಕುಟುಕದಂತೆ ಕುಟುಕುತ್ತಿತ್ತು.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ದ್ವಿತೀಯ ಬಹುಮಾನ ಪಡೆದ ಕಥೆ: ಅಂತಃಕರಣದ ಟಿಪ್ಪಣಿಗಳು

ಕೊನೆಗೊಂದು ದಿನ ಅಲ್ಲಾಹು ಅವರ ವೇದನೆಗೂ ಪರಿಹಾರವೊಂದನ್ನು ಒದಗಿಸಿಕೊಟ್ಟಂತೆ ನಫೀಸಾ, ಶಾಬಾನ್‌ ತಿಂಗಳ 21ರಂದು ಬೆಳದಿಂಗಳ ತುಂಡಿನಂತಹ ಗಂಡು ಮಗುವೊಂದಕ್ಕೆ ಜನ್ಮ ನೀಡಿದಳು. ಮಗುವನ್ನು ಇಸ್ಲಾಮಿನ ಪ್ರಕಾಂಡ ಪಂಡಿತನಾಗಿ ಬೆಳೆಸಬೇಕೆಂದು ಅಂದೇ ನಿರ್ಧರಿಸಿದ್ದ ಉಸ್ತಾದರು ಮಗುವಿಗೆ ಮೊದಲ ಖಲೀಫಾ ಅಬೂಬಕರ್‌ ಸಿದ್ದೀಕರ ಹೆಸರನ್ನೇ ಇಟ್ಟಿದ್ದರು. ಅಂಗಳಕ್ಕೆ ಒಯ್ದರೆ ಕಾಗೆ ಎತ್ತೊಯ್ಯಬಹುದು, ಮನೆಯೊಳಗೆ ಮಲಗಿಸಿದರೆ ಇರುವೆ ಕಚ್ಚಬಹುದು ಎಂಬಂಥ ಮುಚ್ಚಟೆಯಲ್ಲಿ ಮಗುವನ್ನು ಸದಾ ಹೆಗಲಲ್ಲಿ ಹೊತ್ತುಕೊಂಡು ಇಬ್ಬರೂ ಓಡಾಡಿದರು. ಮದ್ರಸಾ ಶಿಕ್ಷಣದ ಜೊತೆಜೊತೆಗೇ ಉರ್ದು ಶಾಲೆಯಲ್ಲಿ ಏಳನೇವರೆಗೆ ಓದಿದ ಸಿದ್ದೀಕನನ್ನು  ಕಲ್ಲಿಕೋಟೆಯ ಅರೆಬಿಕ್‌ ಕಾಲೇಜಿಗೆ ಸೇರಿಸಬೇಕೆಂದು ಮುಸ್ಲಿಯಾರ್‌ ನಿರ್ಧರಿಸಿದ್ದರು. ನಫೀಸಾ ಬಿಲ್‌ಕುಲ್‌ ಒಪ್ಪಲಿಲ್ಲ. ತಿಂಗಳ ಕಾಲ ಗಂಡನ ಜೊತೆಗೆ ಮುನಿದು ಮನವೊಲಿಸಿದ ನಫೀಸಾ ಮಗನನ್ನು ಕೊನೆಗೂ 120 ಮೈಲಿ ದೂರದಲ್ಲಿದ್ದ ಮಂಗಳೂರಿನ ಖಾಸಗಿ ಹೈಸ್ಕೂಲಿಗೆ ಸೇರಿಸುವಲ್ಲಿ ಯಶಸ್ವಿಯಾದಳು. ಮಂಗಳೂರಿನಲ್ಲಿ ಯಾರು ಯಾರದೋ ಕೈಕಾಲು ಹಿಡಿದು ಮುಸ್ಲಿಂ ಹಾಸ್ಟೆಲ್‌ನಲ್ಲಿ ಕೂರಿಸಿದರು. ಹೊಟ್ಟೆಬಟ್ಟೆ ಕಟ್ಟಿ ಮಗನ ಓದಿಗೆ ದುಡ್ಡು ಹೊಂದಿಸಿದರು. ಎಸೆಸೆಲ್ಸಿ ಮುಗಿದ ಬಳಿಕ ಸಿದ್ದೀಕ್‌ ಅಲ್ಲೇ ಐಟಿಐ ಮಾಡುತ್ತೇನೆಂದ. ಕೋರ್ಸ್‌ ಮುಗಿಸಿದ ತಕ್ಷಣವೇ ಕೆಲಸ ಸಿಗುತ್ತದಂತೆ ಎಂದ. ಮುಸ್ಲಿಯಾರರು ತಾನು ದುಡಿದ ಅಲ್ಪಹಣವನ್ನು ಅಲ್ಲಲ್ಲಿಗೇ ಹೊಂದಿಸಿಕೊಂಡರು. ಹಾಗೆ ಮಂಗಳೂರಿನಲ್ಲಿ ಐಟಿಐ ಮುಗಿಸಿದ ಸಿದ್ದೀಕನನ್ನು ಮುಷ್ತಾಕ್‌ ಸಾಹೇಬ್‌ ಎಂಬವರೊಬ್ಬರು ಮುಂಬೈಗೆ ಕರೆದೊಯ್ದು ಫ್ಯಾಕ್ಟರಿಯೊಂದರಲ್ಲಿ ಕೆಲಸವನ್ನೂ ಕೊಡಿಸಿದರು. ಕರೆದೊಯ್ದವರು ಕೆಲಸ ಮಾತ್ರ ಕೊಡಿಸಲಿಲ್ಲ, ಮದುವೆಗೆಂದು ತನಗಿದ್ದ ಒಬ್ಬಳೇ ಮಗಳನ್ನೂ ಕೊಟ್ಟುಬಿಟ್ಟರು!

ಅದಾದದ್ದೂ ಸ್ವಲ್ಪ ವಿಚಿತ್ರವಾಗಿಯೇ. ಮುಂಬೈಯಿಂದ ಆಗಾಗ್ಗೆ ವ್ಯಾಪಾರಕ್ಕೆ ಮಂಗಳೂರಿಗೆ ಬರುತ್ತಿದ್ದ ಮುಷ್ತಾಕ್‌ ಸಾಹೇಬರು ಸಿದ್ದೀಕನ ಮುಸ್ಲಿಂ ಹಾಸ್ಟೆಲ್‌ ಪಕ್ಕದ ಹೋಟೆಲಲ್ಲಿ ಉಳಿದುಕೊಳ್ಳುತ್ತಿದ್ದರಂತೆ. ಸಹಜವಾಗಿ ಪರಿಚಯವಾಯಿತು. ಆಮೇಲಾಮೇಲೆ ಬರುವಾಗ ಅವರು ಸಿದ್ದೀಕನಿಗೆಂದು ಬಟ್ಟೆ ಬರೆ, ಸೆಂಟುಗಳನ್ನು ತರುವುದು ವಾಡಿಕೆಯಾಯಿತು. ಮೈಯದ್ದಿ ಬ್ಯಾರಿಯ ಮೂನ್‌ಲೈಟ್‌ ಹೋಟೆಲ್ಲಿಗೆ ಕರೆದೊಯ್ದು ಪರೋಟ ಮತ್ತು ಬೀಫ್‌ ಸುಕ್ಕ ತಿನ್ನಿಸುವುದೂ ಅಭ್ಯಾಸವಾಯಿತು. ನಿಕಟವಾದ ಮುಷ್ತಾಕ್ ಸಾಹೇಬರು ಐಟಿಐ ಮುಗಿಸಿದ ತಕ್ಷಣ ಮುಂಬೈಗೆ ಜೊತೆಯಲ್ಲಿ ಬರಬೇಕೆಂದೂ ಒಳ್ಳೆಯ ಕೆಲಸ ಕೊಡಿಸುವುದಾಗಿಯೂ ಭರವಸೆ ನೀಡಿದರು. ಅವರ ಪೂರ್ವಜರೂ ಮಂಗಳೂರಿನವರಂತೆ. ಉರ್ದು ಮನೆಮಾತು. ಇವರು ಬಾಲ್ಯದಲ್ಲೇ ಮನೆಬಿಟ್ಟು ಮುಂಬೈಗೆ ಹೋಗಿ ಅಲ್ಲೇ ಬದುಕು ಕಟ್ಟಿಕೊಂಡರಂತೆ. ಮುಂಬೈಯಲ್ಲಿ ಕೆಲಸಕ್ಕೆ ಸೇರಿದ ಬಳಿಕ ಮುಷ್ತಾಕ್‌ ಸಾಹೇಬರ ಏಕೈಕ ಪುತ್ರಿಯನ್ನು ಕಂಡು ಸಿದ್ದೀಕನಿಗೆ ಅಲ್ಲೇ ಸೆಟ್ಲ್‌ ಆಗುವುದರಲ್ಲಿ ಅರ್ಥವಿದೆ ಅನ್ನಿಸಿದ್ದೂ, ಅದನ್ನು ಊರಿಗೆ ಬಂದಾಗ ಹೆತ್ತವರಲ್ಲಿ ಯಾವ ಹಿಂಜರಿಕೆಯಿಲ್ಲದೇ ಹೇಳಿದ್ದನ್ನೂ ಬರೆಯಲು ಹೋದರೆ ಅದೇ ಇನ್ನೊಂದು ದೊಡ್ಡ ಕತೆಯಾಗುತ್ತದೆ. ಸೊಸೆಯ ಮುದ್ದುಮುಖದ ಫೋಟೊ ಮತ್ತು ಮಗನ ಪ್ರೇಮಮಯಿ ಮುಖವನ್ನು ನೋಡಿದ ಬಳಿಕ ನಫೀಸಾಗೂ ಮಗನ ಮಾತು ಸರಿಯೆನ್ನಿಸಿತ್ತು. ಆದರೆ ಮುಚ್ಚಟೆಯಿಂದ ಬೆಳೆಸಿದ ಮಗನನ್ನು ಹೀಗೆ ಯಾರೋ ಅಚಾನಕ್ಕಾಗಿ, ಕೋಳಿಮರಿಯನ್ನು ಹದ್ದು ಎಗರಿಸಿದಂತೆ ಕೊಂಡೊಯ್ದದ್ದು ಹೇಗೆಂದು ಆಕೆಗೆ ಅರ್ಥವಾಗಲಿಲ್ಲ. ಮಗನಿಲ್ಲದೇ ತಾವು ಊರಿನಲ್ಲೇ ಉಳಿಯುವುದೇ? ‘ಮುಂಬೈಗೆ ಬಂದು ಜೊತೆಗೇ ಇದ್ದುಬಿಡಿ’ ಎಂದು ಸಿದ್ದೀಕ ಒತ್ತಾಯಿಸಿದ. ಆದರೆ ಮುಸ್ಲಿಯಾರರು ಒಪ್ಪಲಿಲ್ಲ. ಎಲ್ಲಿಂದಲೋ ವಲಸೆ ಬಂದವನಿಗೆ ಗೌರವದ ಬದುಕು ಕೊಟ್ಟ ಊರಿದು, ಇದನ್ನು ಬಿಟ್ಟು ಇನ್ನೆಲ್ಲಿಗೂ ಬರುವುದಿಲ್ಲ ಎಂದು ಕಲ್ಲುಮನಸ್ಸು ಮಾಡಿಕೊಂಡರು. ಹಾಗೆ ಅವಸರವಸರವಾಗಿ ಊರ ಮಸೀದಿಯಲ್ಲೇ ನಿಖಾಹ್‌ ನಡೆಯಿತು. ಸಿದ್ದೀಕನಿಗೂ ಫ್ಯಾಕ್ಟರಿಯಲ್ಲಿ ಹೆಚ್ಚು ರಜೆ ಇರಲಿಲ್ಲ.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾ ಸ್ಪರ್ಧೆ: ಪ್ರಥಮ ಬಹುಮಾನ 55,000 ರೂ. ಪಡೆದ ಕಥೆ: ಸೋಮನ ಕುಣಿತ

ವಯಸ್ಸಿಗೆ ಬಂದ ಮುದ್ದಿನ ಮಗ ತಮ್ಮನ್ನೊಂದು ಮಾತೂ ಕೇಳದೆ ಬದುಕಿನ ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಮುಂಬೈಗೆ ಹಾರಿಹೋದದ್ದು ಮುಸ್ಲಿಯಾರರಲ್ಲಿ ಉಂಟು ಮಾಡಿದ ತಳಮಳ ಅಷ್ಟಿಷ್ಟಲ್ಲ. ಯಾರೊಂದಿಗೂ ಹೇಳುವ ಸ್ವಭಾವವೂ ಅವರದ್ದಲ್ಲ. ಅಂಗಳದಲ್ಲಿ ಕುರ್ಚಿ ಹಾಕಿಕೊಂಡು ತಡರಾತ್ರಿಯವರೆಗೆ ಆಕಾಶದ ನಕ್ಷತ್ರಗಳನ್ನು ನೋಡುವುದು ಅವರಿಗೆ ಇನ್ನಷ್ಟು ಪ್ರಿಯವಾಯಿತು. ಮನುಷ್ಯನ ವಲಸೆ ಎನ್ನುವುದು ಎಷ್ಟು ವಿಚಿತ್ರ! ಹುಟ್ಟಿದೂರನ್ನು ಬಿಟ್ಟು ನಫೀಸಾಳನ್ನು ಕಟ್ಟಿಕೊಂಡು ಇಲ್ಲಿಗೆ ಬಂದೆ. ಬಳಿಕ ಹುಟ್ಟಿದೂರಿಗೆ ಒಮ್ಮೆಯೂ ಹೋಗಲಿಲ್ಲ. ಈಗ ಮಗ ಈ ಊರನ್ನು ಬಿಟ್ಟು ಮುಂಬೈಗೆ ವಲಸೆ ಹೋಗಿದ್ದಾನೆ. ಅಲ್ಲೇ ಬದುಕು ಕಟ್ಟಿಕೊಂಡಿದ್ದಾನೆ. ಮರಳಿ ಬರುವ ಸಾಧ್ಯತೆಯೇ ಇಲ್ಲ! ಮುಂಬೈಗೆ ಬನ್ನಿ ಎಂದೀಗ ಒತ್ತಾಯಿಸುತ್ತಿದ್ದಾನೆ. ಹಾಗೆ ಒತ್ತಾಯಿಸಲು ಬಲವಾದ ಕಾರಣವೂ ಕೂಡಿಬಂದಿದೆ.

****

ಮಸೀದಿಯಲ್ಲಿ ಅವತ್ತು ಪ್ರೆಸಿಡೆಂಟ್‌ ಅಬ್ದುಲ್ಲಾ ಹಾಜಿ ಮತ್ತು ಖಾದರ್ ಮುಸ್ಲಿಯಾರ್‌ ನಡುವಣ ಖಡಾಖಡಿ ಜಗಳಕ್ಕೆ ಮುಖ್ಯ ಕಾರಣ ಜಮಾತಿಗೆ ಬಂದ ಬ್ಯಾಂಕಿನ ಪತ್ರದಲ್ಲಿ ನಮೂದಿಸಿದ್ದ ಬಡ್ಡಿಯ ಹಣ ಐವತ್ತು ಸಾವಿರ ರೂಪಾಯಿ!

ಬೇರೆ ಮುಸ್ಲಿಂ ಜಮಾತ್‌ಗಳಲ್ಲಿ ಮುಸ್ಲಿಯಾರರೆಂದರೆ ಸಂಬಳಕ್ಕಿರುವವರೇ ಹೊರತು, ಜಮಾತ್‌ ಕಮಿಟಿಯಲ್ಲಿ ಸ್ಥಾನವಿರುವುದಿಲ್ಲ. ಆದರೆ ಊರಿನ ವಿಶೇಷವೆಂದರೆ ಮುಸ್ಲಿಯಾರರು ಜಮಾತ್‌ ಕಮಿಟಿಯ ಪರ್ಮನೆಂಟ್‌ ಉಪಾಧ್ಯಕ್ಷರು. ಅಧ್ಯಕ್ಷರು ಮತ್ತು ಕಮಿಟಿ ಎರಡು ವರ್ಷಕ್ಕೊಮ್ಮೆ ಬದಲಾಗುತ್ತಿದ್ದರೂ ಮುಸ್ಲಿಯಾರರು ಶಾಶ್ವತ ಉಪಾಧ್ಯಕ್ಷರೆಂದು ಜನರಲ್‌ ಬಾಡಿಯಲ್ಲಿ ಇಪ್ಪತ್ತು ವರ್ಷಗಳ ಹಿಂದೆಯೇ ನಿರ್ಧರಿಸಲಾಗಿತ್ತು.

ಪಕ್ಕದೂರಿನ ಬ್ಯಾಂಕಿನಲ್ಲಿ ಎಷ್ಟೋ ವರ್ಷಗಳ ಹಿಂದೆ ಇಟ್ಟಿದ್ದ ಫಿಕ್ಸೆಡ್‌ ಡೆಪಾಸಿಟ್‌ನ ಹಣವೊಂದು ಮರಿ ಹಾಕುತ್ತಾ ಹೋಗಿದ್ದುದನ್ನು ಜಮಾತಿನವರು ಗಮನಿಸಿರಲಿಲ್ಲ. ಹೊಸದಾಗಿ ಬ್ಯಾಂಕಿಗೆ ಬಂದ ಮುಸ್ಲಿಂ ಮ್ಯಾನೇಜರ್‌ ಗಮನಿಸಿ, ವಿವರವಾದ ಪತ್ರವೊಂದನ್ನು ಜಮಾತ್‌ಗೆ ಬರೆದಿದ್ದರು. ‘ಸಾಮಾನ್ಯವಾಗಿ ಮಸೀದಿಯವರು ಬಡ್ಡಿಯ ಹಣವನ್ನು ಪಡೆಯುವುದಿಲ್ಲ. ನಿಮ್ಮ ಬಡ್ಡಿ ಹಣವನ್ನು ಏನು ಮಾಡಬೇಕೆಂದು ಸೂಚಿಸಿ’ ಎಂದಿದ್ದ ಪತ್ರ, ಜಮಾತಿನಲ್ಲಿ ಹೊಸ ಚರ್ಚೆ ಹುಟ್ಟುಹಾಕಿತ್ತು. ಜೊತೆಗೆ ಅಬ್ದುಲ್ಲಾ ಮತ್ತು ಮುಸ್ಲಿಯಾರರ ಮಧ್ಯೆ ಜಗಳವನ್ನೂ.

ಮೀಟಿಂಗಿನಲ್ಲಿ ಮುಸ್ಲಿಯಾರರು ಖಡಾಖಂಡಿತವಾಗಿ ಹೇಳಿದ್ದು– ‘ಇಸ್ಲಾಮಿನಲ್ಲಿ ಬಡ್ಡಿಯ ಹಣ ಹರಾಮ್‌. ಅದನ್ನು ಕೈಯಿಂದ ಮುಟ್ಟುವುದಲ್ಲ, ಕಣ್ಣೆತ್ತಿಯೂ ನೋಡುವಂತಿಲ್ಲ. ಬಡ್ಡಿಯ ಹಣ ತಿಂದವನು ಯಾವ ಕಾರಣಕ್ಕೂ ಉದ್ಧಾರ ಆಗುವುದಿಲ್ಲ. ಆ ಹಣದಲ್ಲಿ ಊಟ ಮಾಡಿದ ಅವನ ಸಂತಾನಕ್ಕೂ ಕಷ್ಟಗಳು ತಪ್ಪಿದ್ದಲ್ಲ. ಮರಣದ ಬಳಿಕ ಜಹನ್ನಮಾ ಎಂಬ ರೌರವ ನರಕದ ಬೆಂಕಿಯಲ್ಲಿ ಧಗಧಗನೆ ಆತ ಉರಿದು ನರಳುತ್ತಾನೆ..!’

ಮುಸ್ಲಿಯಾರರ ಮಾತು ಅಲ್ಲಿದ್ದ ಹಲವರ ಮುಖದಲ್ಲಿ ರಕ್ತ ಬತ್ತಿಸಿದ್ದು ಸುಳ್ಳಲ್ಲ. ಅಲ್ಲಿರುವ ಬಹುತೇಕರು ಬ್ಯಾಂಕಿನ ಸಾಲಕ್ಕೆ ಬಡ್ಡಿ ಕಟ್ಟುವವರೇ. ಮಂಗಳೂರಿನಲ್ಲಿ ಬ್ಯಾಂಕೊಂದರಲ್ಲಿ ಕ್ಲಾರ್ಕ್‌ ಆಗಿದ್ದ ಅಬ್ದುಲ್ಲಾ ಹಾಜಿಯ ಬಾಮೈದನೊಬ್ಬ ಅವತ್ತು ಸಭೆಯಲ್ಲಿದ್ದವನು ಮುಸ್ಲಿಯಾರರ ಮಾತಿಗೆ ಉರಿಯತೊಡಗಿದ್ದ. ಆದರೆ ಯಾರೂ ಎದುರು ಮಾತನಾಡುವಂತಿರಲಿಲ್ಲ.

ಕೊನೆಗೊಬ್ಬ ಕೇಳಿದ– ‘ಅದೇನೋ ಸರಿ ಮುಸ್ಲಿಯಾರರೇ, ಈಗ ಬಡ್ಡಿ ಹಣವನ್ನು ಏನು ಮಾಡಬೇಕು?’

‘ಷರೀಯತ್‌ನಲ್ಲಿ ಅದಕ್ಕೂ ದಾರಿಗಳಿವೆ. ಹಣವನ್ನು ಎಲ್ಲರೆದುರೇ ಬೆಂಕಿಯಲ್ಲಿ ಹಾಕಿ ಸುಡಬೇಕು. ಅಥವಾ ದೂರ ಸಮುದ್ರಕ್ಕೆ ತೆರಳಿ ಚೂರುಚೂರಾಗಿ ಕತ್ತರಿಸಿ ನೀರಿನಲ್ಲಿ ವಿಸರ್ಜಿಸಬೇಕು’ ಎಂದರು ಮುಸ್ಲಿಯಾರ್‌.

ಸಭೆಯಲ್ಲಿ ಗುಜುಗುಜು ಶುರುವಾಯಿತು.

‘ಸೈಲೆನ್ಸ್‌ ಪ್ಲೀಸ್‌..’ ಎಂದರು ಪ್ರೆಸಿಡೆಂಟ್‌ ಅಬ್ದುಲ್ಲಾ ಹಾಜಿ. ‘ನಮ್ಮ ಹಿಂದಿನವರು ಎಫ್‌ಡಿಯಲ್ಲಿ ಎಷ್ಟೋ ವರ್ಷಗಳ ಹಿಂದೆ ಹಣ ಇಟ್ಟಿದ್ದಾರೆ. ಅವರೇನೋ ಬಡ್ಡಿಯ ಆಸೆಗೆ ಇಟ್ಟದ್ದಲ್ಲ. ಯಾರೋ ದಾನಿಗಳು ಕೊಟ್ಟ ಡೊನೇಷನ್ನು ಅದು. ಬ್ಯಾಂಕಿನವರು ಅವರಾಗಿ ಬಡ್ಡಿ ಕೊಟ್ಟಿದ್ದಾರೆ. ನೋಟುಗಳನ್ನು ಸುಡುವುದಕ್ಕಿಂತ ಮಂಗಳೂರಿಗೆ ಹೋಗಿ ಬೋಟ್‌ನಲ್ಲಿ ಸಮುದ್ರದ ಮಧ್ಯೆ ನೀರಿಗೆಸೆಯೋಣ. ನಾನೇ ಕೊಂಡೊಯ್ಯುತ್ತೇನೆ. ನನ್ನ ಸ್ನೇಹಿತರೊಬ್ಬರ ಫಿಷಿಂಗ್‌ ಬೋಟಿದೆ. ಸಮಸ್ಯೆಯೇ ಇಲ್ಲ!’

‘ನಿಮಗೆ ಅಷ್ಟೆಲ್ಲ ಕಷ್ಟ ಯಾಕೆ? ಜಮಾತಿನ ಎಲ್ಲ ಸದಸ್ಯರ ಕಣ್ಣೆದುರೇ ಖರ್ಚಿಲ್ಲದೆ ಸುಟ್ಟು ಹಾಕಿದರೇನು ತೊಂದರೆ?’ ಮುಸ್ಲಿಯಾರರು ಪಟ್ಟು ಹಿಡಿದರು.

‘ಏನು.. ನನ್ನ ಮೇಲೆಯೇ ವಿಶ್ವಾಸವಿಲ್ಲವೇ? ನಾನೇನು ಕಳ್ಳನ ತರಹ ಕಾಣಿಸ್ತೀನಾ?’ ಪ್ರೆಸಿಡೆಂಟರು ಗರಂ ಆದರು.

‘ಹಾಗಂತ ನಾನೆಲ್ಲಿ ಹೇಳಿದೆ? ಇದು ಷರೀಯತ್ತಿಗೆ ಸಂಬಂಧಿಸಿದ ಪ್ರಶ್ನೆ. ಏನು ಮಾಡುವುದಿದ್ದರೂ ಎಲ್ಲರಿಗೂ ಗೊತ್ತಾಗಲಿ..’ ಮುಸ್ಲಿಯಾರರು ಪಟ್ಟು ಬಿಡಲಿಲ್ಲ.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ತೀರ್ಪುಗಾರರ ಟಿಪ್ಪಣಿ: ಸಾಮಾಜಿಕ ಪ್ರಸ್ತುತತೆಯೇ ಜೀವಾಳವಾಗಿರುವ ಕತೆಗಳು

‘ಮುಸ್ಲಿಯಾರರೇ.. ಬರೀ ಷರೀಯತ್ತಿನ ಪ್ರಶ್ನೆ ಅಲ್ಲವಿದು. ಕಾನೂನಿನ ಪ್ರಶ್ನೆಯೂ ಇದೆ. ಅದೆಲ್ಲ ನಿಮಗರ್ಥ ಆಗಲ್ಲ. ನೋಟುಗಳಿಗೆ ಬೆಂಕಿ ಹಾಕಿ ಪೊಲೀಸ್ ಕೇಸಾಗಿ, ನಮ್ಮನ್ನೆಲ್ಲ ಮತ್ತೆ ಸ್ಟೇಷನ್ನಿಗೆ ಓಡಾಡಿಸಬೇಕೆಂದು ಮಾಡಿದ್ದೀರಾ? ಕಳೆದ ವರ್ಷ ಹೀಗೇ ನಿಮ್ಮ ಮೂರ್ಖತನದಿಂದ ಜೈಲು ಪಾಲಾಗುತ್ತಿದ್ದಿರಿ. ಸ್ಟೇಷನ್ನಿಗೆ ಹೋಗಿ ಇನ್ಸ್‌ಪೆಕ್ಟರ್‌ ಕಾಲು ಹಿಡಿದು ನಿಮ್ಮನ್ನು ರಕ್ಷಿಸಿದವನು ನಾನು! ನನಗೇ ಉಲ್ಟಾ ಮಾತನಾಡ್ತೀರಾ?’ ಪ್ರೆಸಿಡೆಂಟರ ಧ್ವನಿ ತಾರಕಕ್ಕೆ ಏರಿತು.

ಇನ್ನೇನು ಮುಸ್ಲಿಯಾರರೂ ಸಿಟ್ಟಿಗೆದ್ದು ಕೂಗಾಡಿದರೆ ಏನೇನು ಅನಾಹುತವಾಗುತ್ತೋ ಅಂತ ಒಂದಿಬ್ಬರು ಸದಸ್ಯರು ಕುಳಿತಲ್ಲಿಂದ ಎದ್ದು ನಿಂತರು. ಎಲ್ಲರೂ ಮುಸ್ಲಿಯಾರರ ಬಿಗಿಯುತ್ತಿದ್ದ ಮುಷ್ಠಿಗಳತ್ತ ನೋಡುತ್ತಿದ್ದರು.

ಅಬ್ದುಲ್ಲಾ ಹಾಜಿ ಮತ್ತು ಮುಸ್ಲಿಯಾರರ ಸಂಘರ್ಷಕ್ಕೆ ಕಾರಣವಾದ ಆ ಹಳೆಯ ಪ್ರಕರಣಕ್ಕೆ ಹತ್ತು ತಿಂಗಳೂ ತುಂಬಿಲ್ಲ. ಮಸೀದಿಯ ಸುತ್ತಲೂ ಬೆಳೆದು ನಿಂತಿದ್ದ ತೇಗದ ತರಗೆಲೆಗಳು ನೆಲಕ್ಕುದುರುತ್ತಿದ್ದ ಚಳಿಗಾಲದ ದಿನಗಳವು.  ಮುಸ್ಲಿಯಾರರು ಬೆಳಿಗ್ಗೆದ್ದು ಮಸೀದಿಯಲ್ಲಿ ಸಾಮೂಹಿಕ ನಮಾಜ್‌ ಮುಗಿಸಿ, ಕುರಾನ್‌ ಪಠಿಸಿ, ಊರ ಹೊರಗಿನ ಹಳೇ ಕಾಲುಸಂಕದ ರಸ್ತೆಯಲ್ಲಿ ಎಂದಿನಂತೆ ವಾಕಿಂಗ್‌ ಹೊರಟಿದ್ದರು. ಚಳಿ ಸ್ವಲ್ಪ ಹೆಚ್ಚಿದ್ದುದರಿಂದಲೋ ಏನೋ ಅವತ್ತು ವಾಕಿಂಗಿಗೆ ಹೆಚ್ಚು ಜನರಿರಲಿಲ್ಲ. ನೀರಿಲ್ಲದ ಹಳ್ಳದ ಕಾಲುಸಂಕ ದಾಟಿದರೆ ಸ್ವಲ್ಪ ದೂರ ನಿರ್ಜನ ದಾರಿ. ಮುಳ್ಳುಕಂಟಿಗಳ ದಾರಿಯಲ್ಲಿ ಒಂದು ಪಾಳುಬಿದ್ದ ಮನೆಯಿತ್ತು. ಪಕ್ಕದಲ್ಲೊಂದು ಸಣ್ಣ ಬುಗುರಿ ಮರ. ಇನ್ನೂ ಸರಿಯಾಗಿ ಬೆಳಕು ಮೂಡಿರಲಿಲ್ಲ. ಮಸ್ಲಿಯಾರ್‌ ಬೀಸುಗಾಲಲ್ಲಿ ನಡೆಯುತ್ತಾ ಸಹಜವಾಗಿ ಬಲಕ್ಕೆ ನೋಡಿದರೆ ಮರದ ಕೊಂಬೆಗೆ ನೇತು ಬಿದ್ದಿದೆ ಒಂದು ಹೆಣ್ಣುಜೀವ!

ಮುಸ್ಲಿಯಾರಿಗೆ ಜೀವ ಧಿಗ್ಗೆಂದಿತು. ದೂರದಿಂದ ನೋಡಿದರೆ ಇನ್ನೂ ಜೀವ ಹೋಗಿಲ್ಲ ಎಂಬಂತಿತ್ತು. ನೇತಾಡುತ್ತಿದ್ದ ಎರಡೂ ಕೈಗಳು ಸ್ವಲ್ಪ ಚಲಿಸಿದಂತೆಯೂ, ಕಾಪಾಡಿ ಎಂಬಂತೆ ಬೆರಳುಗಳನ್ನು ಅಲ್ಲಾಡಿಸುತ್ತಿರುವಂತೆಯೂ ಕಾಣಿಸಿ ಮುಸ್ಲಿಯಾರರು ಮರದತ್ತ ಉಸಿರು ಬಿಗಿಹಿಡಿದು ಓಡಿದರು. ಆ ಹೆಣ್ಣುಜೀವದ ಎರಡೂ ತೊಡೆಗಳನ್ನು ಅಪ್ಪಿ ಹಿಡಿದು ಕುತ್ತಿಗೆಯ ಕುಣಿಕೆ ಸಡಿಲಾಗುವಂತೆ ದೇಹವನ್ನು ಸ್ವಲ್ಪ ಮೇಲಕ್ಕೆ ಎತ್ತಿ ಹಿಡಿದರು. ಒಬ್ಬರೇನು ಮಾಡಲಾಗುತ್ತದೆ? ಹೇಗೆ ಇಳಿಸುವುದೆಂದು ತಿಳಿಯದೆ ಗೊಂದಲದಿಂದ ಮುಸ್ಲಿಯಾರರು ಏದುಸಿರು ಬಿಡುತ್ತಾ ದೇಹವನ್ನು ಹಿಡಿದು ನಿಂತಿದ್ದಾಗ ಪಕ್ಕದ ಊರಿನಿಂದ ರಸ್ತೆಯಲ್ಲಿ ಈ ಕಡೆಗೆ ಬರುತ್ತಿದ್ದವನನೊಬ್ಬ ಕಿಟಾರನೆ ಕಿರುಚುತ್ತಾ ವಾಪಸ್‌ ಓಟಕಿತ್ತ! ಮುಸ್ಲಿಯಾರ್‌ ಗಾಬರಿಯಾದರೂ ಹೆಣ್ಣುಜೀವವನ್ನು ಬಿಡಲಿಲ್ಲ. ಮೇಲುಸಿರು ಬಿಡುತ್ತಾ ಎಷ್ಟೋ ಹೊತ್ತು ದಿಗ್ಮೂಢರಂತೆ ನಿಂತೇ ಇದ್ದರು. ಆಗಾಗ್ಗೆ ಕೊರಳೆತ್ತಿ ಆ ಹೆಣ್ಣು ಜೀವದ ಮುಖದ ಕಡೆಗೆ ನೋಡುತ್ತಿದ್ದರು.

ಪಕ್ಕದೂರಿನಲ್ಲಿ ಸುದ್ದಿ ಹಬ್ಬಿ, ಅಲ್ಲಿಂದ ಹತ್ತಿಪ್ಪತ್ತು ಮಂದಿ ಓಡೋಡಿ ಬಂದು ಬುಗುರಿ ಮರದ ಬಳಿ ಸೇರಿದರು. ಮುಸ್ಲಿಯಾರರ ಬಿಗಿಮುಷ್ಟಿಯಿಂದ ಮೃತದೇಹವನ್ನು ಬಿಡಿಸಿ ಮರದಿಂದ ಕೆಳಗಿಳಿಸಿದರು. ಮೈಮೇಲೆ ಪರಿವೆಯೇ ಇಲ್ಲದಂತಿದ್ದ ಮುಸ್ಲಿಯಾರ್‌ ಜನರ ಗುಂಪನ್ನು ಸೀಳಿ ಮಸೀದಿಯತ್ತ ಸರಸರನೆ ನಡೆದರು. ಈ ಮಧ್ಯೆ ಮುಸ್ಲಿಯಾರನ್ನು ನೋಡಿ ಓಡಿ ಹೋಗಿದ್ದ ವ್ಯಕ್ತಿ, ‘ಅವರು ಆಕೆಯ ಕತ್ತಿಗೆ ಉರುಳು ಹಾಕಿ ಕೊಂಬೆಗೆ ನೇತಾಡಿಸಿ ಹಗ್ಗ ಎಳೆಯುತ್ತಿದ್ದುದನ್ನು ‘ಕಣ್ಣಾರೆ’ ಕಂಡೆ ಎಂದು ಊರವರ ಮುಂದೆ ಬಣ್ಣಿಸಿ ಹೇಳತೊಡಗಿದ. ಜನರೂ ಕ್ರುದ್ಧರಾಗಿದ್ದರು. ಕೇಸರಿ ಲುಂಗಿಯವನೊಬ್ಬ ‘ನೋಡಲು ಸಂಭಾವಿತರಂತೆ ಕಾಣುತ್ತಾರೆ.. ಈ ಗಡ್ಡದವರೆಲ್ಲ ಮಾಡುವುದು ಇಂತಹ ಹಲ್ಕಾ ಕೆಲಸವೇ..’ ಎಂದು ಕಿಡಿಕಾರಿದ. ಗುಂಪು ಸೇರಿದವರಲ್ಲಿ ಅಬ್ದುಲ್ಲಾ ಹಾಜಿಯ ಮೇಸ್ತ್ರಿಯೂ ಇದ್ದವನು ಧಣಿಗಳ ಮನೆಗೋಡಿ ಸುದ್ದಿ ಮುಟ್ಟಿಸಿದ. ಮಸೀದಿಯಲ್ಲೂ ಜನ ಸೇರತೊಡಗಿದರು. ಸಣ್ಣ ಧ್ವನಿಯಲ್ಲಿ ಶುರುವಾದ ಎರಡೂ ಕಡೆಯವರ ಮಾತುಕತೆ ಸೂರ್ಯ ಮೇಲೇಳುತ್ತಿದ್ದಂತೆಯೇ ಜೋರಾಗಿ ಇನ್ನೇನು ಹೊಯ್‌ಕೈ ಆಗಬೇಕೆನ್ನುವಾಗ ಯಾರೋ ಒಬ್ಬ ಸತ್ತು ಮಲಗಿದ್ದ ಆ ಹೆಣ್ಣುಜೀವದ ಗಂಡನೆಂಬ ತೆಳ್ಳನೆಯ ಪ್ರಾಣಿಯನ್ನು ಎಳೆದುಕೊಂಡು ಬಂದ.

ರಾತ್ರಿಯಿಡೀ ಗಡಂಗಿನ ಹೊರಗೆ ಬರಿಮೈಯಲ್ಲಿ ಮಲಗಿದ್ದ ಆ ಗಂಡ ಎಳೆದೊಯ್ದು ಬಂದ ರಭಸಕ್ಕೆ ಮತ್ತಿನಿಂದ ಪೂರ್ತಿ ಎಚ್ಚರವಾಗಿದ್ದ. ಹೆಗಲ ಮೇಲಿದ್ದ ಸಣ್ಣ ಬೈರಾಸಿನಿಂದ ಕಣ್ಣೀರು ಒರೆಸಿಕೊಳ್ಳುತ್ತಾ ಹೇಳಿದ. ‘ರಾತ್ರಿ ಕಂಠಪೂರ್ತಿ ಕುಡಿದು ಹೆಂಡತಿಯನ್ನು ಬಾಸುಂಡೆ ಬರುವಂತೆ ಬಡಿದೆ. ಎಷ್ಟು ಹೊಡೆದರೂ ಅವಳು ಹಣ ಕೊಡಲಿಲ್ಲ. ಸಿಟ್ಟಿನಿಂದ ಕೂಗಾಡಿ ಜೀವ ಕಳೆದುಕೊಳ್ಳುತ್ತೇನೆಂದು ಚೀರುತ್ತಾ ಮನೆಯಿಂದ ಓಡಿ ಹೋದಳು. ನಾನು ಮತ್ತೆ ಗಡಂಗಿನ ಕಡೆಗೆ ತೆರಳಿದೆ.. ಬೆಳಿಗ್ಗೆ ಯಾರೋ ಬಂದು ಎಬ್ಬಿಸಿದಾಗಲೇ ವಿಷಯ ಗೊತ್ತಾದದ್ದು.. ’ ಎಂದಾತ ಕೈಮುಗಿದು ನಿಂತಿದ್ದ. ಅವತ್ತು ಎರಡೂ ಊರಿನವರಿಗೆ ಮುಸ್ಲಿಯಾರರ ಮೇಲಿನ ನಂಬಿಕೆ ಇಮ್ಮಡಿಯಾಗಿತ್ತು. ಆದರೆ ಅಬ್ದುಲ್ಲಾ ಹಾಜಿ ಮಾತ್ರ ‘ಈ ಮುಸ್ಲಿಯಾರ್ ನಮ್ಮ ಮಸೀದಿಗೆ ಬೇಡ. ನಾಳೆ ಪೊಲೀಸರು ಮಸೀದಿಗೆ ಬಂದು ತನಿಖೆಯ ಹೆಸರಲ್ಲಿ ಕಿರುಕುಳ ಕೊಡುತ್ತಾರೆ. ಅವರ ಸಂಬಳದ ಲೆಕ್ಕಾ ಚುಕ್ತಾ ಮಾಡಿ ಕಳಿಸಿಬಿಡೋಣ..’ ಎಂದು ಹಠ ಹಿಡಿದು ಕೂತಿದ್ದು ಊರವರಿಗೆ ಸರಿಯೆನ್ನಿಸಲಿಲ್ಲ. ಜಮಾತಿನ ಸದಸ್ಯರು ಪ್ರೆಸಿಡೆಂಟರ ಒತ್ತಡಕ್ಕೆ ಮಣಿದಿರಲಿಲ್ಲ. ಕೊನೆಗೆ ಬೇರೆ ದಾರಿಯಿಲ್ಲದೆ ಅಬ್ಬುಲ್ಲಾ ಹಾಜಿ ಗೊಣಗುತ್ತಾ ತನ್ನ ಒತ್ತಾಯದಿಂದ ಹಿಂದೆ ಸರಿದು, ಪೊಲೀಸ್‌ ಠಾಣೆಗೆ ತಾನೇ ಹೋಗಿ ಅಧಿಕಾರಿಗಳ ಜೊತೆಗೆ ಮಾತನಾಡಿ ಕೇಸು ಗೀಸು ಆಗದಂತೆ ತಡೆದಾಗಿತ್ತು.

ಈಗ ಬಡ್ಡಿಯ ಹಣದ ಚರ್ಚೆ ತಾರಕಕ್ಕೇರಿದಂತೆಯೇ ಅಬ್ದುಲ್ಲಾ ಹಾಜಿ ಹಳೆಯ ಪ್ರಕರಣಕ್ಕೆ ಜೀವ ಕೊಡಲು ಹೊರಟಿದ್ದು ಹಲವರಲ್ಲಿ ಕಸಿವಿಸಿ ಉಂಟುಮಾಡಿತು. ಮುಸ್ಲಿಯಾರರನ್ನು ಮಸೀದಿಯಿಂದ ಹೊರಗೆ ಅಟ್ಟಲೇಬೇಕೆಂದು ಹಾಜಿ ನಿರ್ಧರಿಸಿದಂತಿತ್ತು. ‘ಮುಸ್ಲಿಯಾರರೇ ಇಲ್ಲಿ ಕೇಳಿ. ಷರೀಯತ್ತು ನಿಮಗೆ ಮಾತ್ರ ಗೊತ್ತಿರುವುದಲ್ಲ. ಬಡ್ಡಿಯ ಹಣವನ್ನು ಬೆಂಕಿಗೆ ಹಾಕುವುದೋ, ಸಮುದ್ರದಲ್ಲಿ ವಿಸರ್ಜಿಸುವುದೋ ಸಾಧ್ಯವಿಲ್ಲದಿದ್ದರೆ ಇನ್ನೊಂದು ದಾರಿಯಿದೆ. ಆ ಹಣದಿಂದ ಸಾರ್ವಜನಿಕ ಪಾಯಿಖಾನೆ ಕಟ್ಟಿಸಬಹುದು. ಕಳೆದ ವಾರ ಮಂಗಳೂರಿನ ದೊಡ್ಡ ಮಸೀದಿಯಲ್ಲಿ ಖಾಜಿಯವರ ಉಪನ್ಯಾಸದಲ್ಲಿ ಅದನ್ನೇ ಹೇಳಿದ್ದಾರೆ. ಹೇಗೂ ಉರ್ದು ಶಾಲೆಯಲ್ಲಿ ಪಾಯಿಖಾನೆ ಇಲ್ಲ. ಮಕ್ಕಳು ಅಕ್ಕಪಕ್ಕದ ಮನೆಗಳಿಗೆ ಹೋಗಿ ಬೇಡುತ್ತಾರೆ. ಅದಕ್ಕೊಂದು ಪರಿಹಾರವೂ ಆಯಿತು. ಈಗಲೇ ಖಾಜಿಗಳಿಗೊಂದು ಫೋನ್‌ ಮಾಡಿ, ಅವರೇನು ಹೇಳುತ್ತಾರೋ ಅದರಂತೆ ಮಾಡುವ..’– ಅಬ್ದುಲ್ಲಾ ಹಾಜಿಯ ಧ್ವನಿ ತಾರಕಕ್ಕೆ ಏರಿತ್ತು.

ಮುಸ್ಲಿಯಾರರು ಇಕ್ಕಟ್ಟಿಗೆ ಸಿಲುಕಿದರು. ಬಡ್ಡಿಯ ಕುರಿತ ಈ ಫಿಕ್ಹ್‌ ವಿಧಿಯನ್ನು ಅವರೂ ಓದಿಕೊಂಡಿದ್ದವರೇ. ಅಬ್ದುಲ್ಲಾ ಹಾಜಿಯ ಹಣ ಮಾಡುವ ದಂಧೆಯ ಕುರಿತೂ ಅವರಿಗೆ ಮಾಹಿತಿಗಳಿದ್ದವು. ಆದರೆ ಅದನ್ನು ಊರವರ ಎದುರು ಸಾಕ್ಷಿಯಿಲ್ಲದೆ ಹೇಳಿದರೆ ಜನ ನಂಬಬೇಕಲ್ಲ? ‘ಉರ್ದು ಶಾಲೆಗೆ ಶೌಚಾಲಯ ಬೇಕಿದ್ದರೆ ಶಿಕ್ಷಣ ಇಲಾಖೆಗೆ ನಾವೇ ಅರ್ಜಿ ಸಲ್ಲಿಸುವ. ಈಗ ಜಮಾತಿಗೆ ಬರುವ ಬಡ್ಡಿ ಹಣವನ್ನು ಖುದ್ದಾಗಿ ತರಿಸಿಕೊಂಡು ಬೆಂಕಿಗೆ ಹಾಕುವುದೊಂದೇ ದಾರಿ. ಅದರ ಹೊರತಾಗಿ ಬೇರೆ ಯಾವುದಕ್ಕೂ ನಾನು ಒಪ್ಪುವುದಿಲ್ಲ’ ಎಂದಂದು ಉದ್ವೇಗದಿಂದ ಎದ್ದು ನಿಂತ ಮುಸ್ಲಿಯಾರ್‌, ಪಂಚೆಯನ್ನು ಸೊಂಟಕ್ಕೆ ಬಲವಾಗಿ ಕಟ್ಟಿಕೊಂಡರು.

‘ಯಾವುದೋ ಊರಿಂದ ಹಿಂದುಮುಂದಿಲ್ಲದೆ ಓಡಿಬಂದು ಮಸೀದಿಯಲ್ಲಿ ನೌಕರಿಗೆ ಸೇರಿಕೊಂಡ ನಿಮಗೇ ಮುಂಡಾಸಿನ ಅಹಂಕಾರ ಇಷ್ಟಿದೆಯೆಂದರೆ…, ಅದ್ಯಾವ ಗಂಡಸು ಬ್ಯಾಂಕಿಗೆ ಹೋಗಿ ಹಣ ತಂದು ಇಲ್ಲಿ ಮಸೀದಿಯ ಮುಂದೆ ಸುಟ್ಟು ಬಿಡುತ್ತಾನೋ ನಾನೂ ನೋಡ್ತೀನಿ. ಪೊಲೀಸ್‌ ಕಂಪ್ಲೇಂಟ್‌ ಕೊಟ್ಟು ಒದ್ದು ಒಳಗೆ ಹಾಕಿಸ್ತೀನಿ. ಅವತ್ತು ಹುಣಸೇ ಮರಕ್ಕೆ ನೇಣು ಹಾಕಿಕೊಂಡ ಆ ಕಾಫಿರ ಹೆಣ್ಣಿಗೂ ಈ ಮುಸ್ಲಿಯಾರಿಗೂ ಏನು ಸಂಬಂಧವಿತ್ತು ಎನ್ನುವುದೂ ನನಗೆ ಗೊತ್ತಿದೆ. ಎಲ್ಲವನ್ನೂ ಬಯಲು ಮಾಡ್ತೀನಿ. ಸೂಸೈಡ್‌ ಕೇಸಿನ ಫೈಲು ರಿಓಪನ್‌ ಮಾಡಿಸ್ತೀನಿ. ಈ ಮುಸ್ಲಿಯಾರ್‌ ಮುಂಡಾಸು ಬಿಚ್ಚಿ ಮಸೀದಿಯಲ್ಲಿ ಇಟ್ಟು ಊರು ಬಿಡುವಂತೆ ಮಾಡದಿದ್ದರೆ ನಾನು ತಲ್ವಾರ್‌ ಖಾದರ್‌ ಹಾಜಿಯ ಮಗನೇ ಅಲ್ಲ…’ ಎನ್ನುತ್ತಾ ಅಬ್ದುಲ್ಲಾ ಹಾಜಿಯೂ ಎದ್ದು ಶರ್ಟಿನ ತೋಳನ್ನು ಮಡಚತೊಡಗಿದ.

****

ಮುಂಬೈಯ ಅಂಧೇರಿಯಿಂದ ಜುಹೂಗೆ ಹೋಗುವ ದಾರಿಯಲ್ಲಿ ತಲೆಯೆತ್ತಿ ನಿಂತಿದ್ದ 40 ಮಹಡಿಗಳ ಹಳೆಯ ಕಟ್ಟಡವದು. 30ನೇ ಮಹಡಿಯ ಬಲಪಾರ್ಶ್ವದ 610 ನಂಬರಿನ ಮನೆಯ ಬಾಲ್ಕನಿಯಲ್ಲಿ ಕುಳಿತು ಅಬ್ದುಲ್‌ ಖಾದರ್‌ ಮುಸ್ಲಿಯಾರ್‌ ಶುಭ್ರ ಆಕಾಶದಲ್ಲಿ ಮಿನುಗುತ್ತಿದ್ದ ನಕ್ಷತ್ರಗಳನ್ನು ತದೇಕಚಿತ್ತರಾಗಿ ನೋಡುತ್ತಿದ್ದರು. ಅಬೂಬಕರ್‌ ಸಿದ್ದೀಕ್‌ ಅಪ್ಪನ ಮುಖವನ್ನೇ ದಿಟ್ಟಿಸುತ್ತಾ ಕುಳಿತಿದ್ದ.

‘ಅಬ್ಬಾ.. ನೀವು ಸತ್ಯದ ಪರವಾಗಿ ಗಟ್ಟಿಯಾಗಿ ನಿಲ್ಲಲು ಯಾವತ್ತೂ ಹೆದರಿದವರಲ್ಲ. ಅವತ್ತು ಮಸೀದಿಯ ಮೀಟಿಂಗಿನಲ್ಲಿ ಅಬ್ದುಲ್ಲಾ ಹಾಜಿ ಅಷ್ಟೊಂದು ಸೊಕ್ಕಿನಿಂದ ಮಾತನಾಡಿದಾಗ ನೀವು ಏನನ್ನೂ ಹೇಳದೆ ಹಠಾತ್ತಾಗಿ ಎದ್ದುಬಂದು ಮನೆ ಸೇರಿದ್ದೇಕೆ? ನೀವು ಹಾಗೆ ಬಿಟ್ಟುಕೊಡುವವರಲ್ಲವಲ್ಲ…?’

‘ಯಾಕೋ ಯಾವುದೂ ಬೇಡವೆನ್ನಿಸಿತು ಮೋನೇ. ಯಾವ ಜಗಳಕ್ಕೂ ಇಲ್ಲಿ ಅರ್ಥವಿಲ್ಲ. ಅಮ್ಮನ ಗರ್ಭದೊಳಗಿಂದ ಈ ಬಾಡಿಗೆಯ ಭೂಮಿಗೆ ವಲಸೆ ಬರುವವರು ನಾವು. ಸತ್ತ ಬಳಿಕ ಇಲ್ಲಿಂದ ಭೂಗರ್ಭದೊಳಕ್ಕೆ ಮತ್ತೆ ವಲಸೆ. ಈ ಮಹಾವಲಸೆಯ ನಡುವೆ ಊರಿಂದ ಊರಿಗೆ ಎಷ್ಟೊಂದು ವಲಸೆಗಳು! ಅಲ್ಲಿ ದೂರದಲ್ಲಿ ಕಾಣಿಸುತ್ತಿರುವ ಜುಹೂ ಏರ್‌ಪೋರ್ಟ್‌ನಲ್ಲಿ ಇಡೀ ರಾತ್ರಿ ಎಷ್ಟೊಂದು ವಿಮಾನಗಳು ಯಾವಯಾವುದೋ ದೇಶಗಳಿಂದ ವಲಸಿಗರನ್ನು ತಂದು ಇಳಿಸುತ್ತಿವೆ ನೋಡು! ಇವರಲ್ಲಿ ಎಷ್ಟು ಮಂದಿ ಕೆಲಸಕ್ಕಿದ್ದ ದೇಶವನ್ನು ತೊರೆದು ಬಂದವರೋ? ಎಷ್ಟು ಮಂದಿ ಹುಟ್ಟಿದ ದೇಶವನ್ನೇ ಬಿಟ್ಟು ವಲಸೆ ಹೋಗುವವರೋ..!’

‘ಅಬ್ಬಾ… ಮಾತು ಮರೆಸಬೇಡಿ. ಸತ್ಯ ಹೇಳಿ. ನೀವ್ಯಾಕೆ ಉರ್ದು ಶಾಲೆಯಲ್ಲಿ ಪಾಯಿಖಾನೆ ಕಟ್ಟಲು ಆ ಬಡ್ಡಿಯ ಹಣ ಕೊಡಲು ಒಪ್ಪಲಿಲ್ಲ? ಫಿಕ್ಹ್‌ ನಿಮಗೂ ಗೊತ್ತಿತ್ತಲ್ವಾ?’

‘ಅಬ್ದುಲ್ಲಾ ಹಾಜಿ ಪರಮನೀಚ. ಕಳೆದ ವರ್ಷ ಉರ್ದು ಶಾಲೆಯಲ್ಲಿ ಪಾಯಿಖಾನೆ ಕಟ್ಟಿಸಲೆಂದು 50,000 ರೂಪಾಯಿ ಸರ್ಕಾರದ ಅನುದಾನ ಪಡೆದು ನುಂಗಿ ಹಾಕಿದ್ದ. ಅದು ಜಿಲ್ಲಾ ಪಂಚಾಯ್ತಿಯಿಂದ ಎನ್‌ಕ್ವೈರಿಗೆ ಬಂದಿತ್ತು. ಎರಡು ವಾರದ ಹಿಂದೆ ನನ್ನ ಬಳಿ ಬಂದು ಇದನ್ನೆಲ್ಲ ಹೇಳಿ ಕಣ್ಣೀರು ಸುರಿಸಿ ದುವಾ ಮಾಡಲು ಬೇಡಿಕೊಂಡಿದ್ದ. ಈಗ ಮಸೀದಿಯ ಬಡ್ಡಿಯ ಹಣ ಸಿಕ್ಕಿದರೆ ಅದರಲ್ಲೇ ಪಾಯಿಖಾನೆ ಕಟ್ಟಿ ಸರಕಾರಕ್ಕೆ ಲೆಕ್ಕ ತೋರಿಸುವುದು ಅವನ ದುರುದ್ದೇಶವಾಗಿತ್ತು.’

‘ಅದನ್ಯಾಕೆ ನೀವು ಎಲ್ಲರೆದುರು ಹೇಳಲಿಲ್ಲ? ಅವನ ಸೊಕ್ಕು ಇಳಿಸಬಹುದಾಗಿತ್ತಲ್ಲ?’

‘ನನ್ನಲ್ಲಿ ಸಾಕ್ಷಿ ಇರಲಿಲ್ಲ ಮೋನೇ..? ಹಾಗೆಯೇ ಹೇಳಿದರೆ ಜನ ನಂಬುತ್ತಿದ್ದರಾ? ಜಮಾತಿನಲ್ಲಿ ಬಹುತೇಕ ಎಲ್ಲರೂ ಬ್ಯಾಂಕ್‌ ಬಡ್ಡಿಯ ವ್ಯವಹಾರ ಮಾಡುವವರೇ. ನಾನು ಇದನ್ನೆಲ್ಲ ಹೆಚ್ಚು ಮಾತನಾಡಿದರೆ ಅವರಿಗೆ ರುಚಿಸುವುದೂ ಇಲ್ಲ..’

‘ಅದ್ಸರಿ. ಅವತ್ತು ನೇಣು ಹಾಕಿಕೊಂಡ ಮಹಿಳೆ ಯಾರು? ಅಬ್ದುಲ್ಲಾ ಹಾಜಿಗೆ ಆ ವಿಷಯದಲ್ಲಾದರೂ ಎದುರುತ್ತರ ಕೊಡಬೇಕಿತ್ತಲ್ವಾ?’

‘ಮೋನೇ… ಕೆಲವು ದಾರುಣ ದುಃಖಗಳನ್ನು ಎದೆಯೊಳಕ್ಕೆ ಎಷ್ಟು ಒತ್ತಿ ಹಿಡಿದರೂ ಒಂದಲ್ಲ ಒಂದು ದಿನ ಅವು ಆಕಾಶಕ್ಕೆ ಚಿಮ್ಮುವುದನ್ನು ತಡೆಯಲಾಗದು….’ ದೀರ್ಘ ನಿಟ್ಟುಸಿರು ಬಿಡುತ್ತಾ ಮುಸ್ಲಿಯಾರ್‌ ನೆನಪಿನ ಲೋಕವೊಂದಕ್ಕೆ ಜಾರಿದರು. ‘ನಾನು ಅವತ್ತು ಬೆಳಿಗ್ಗೆ ನಸುಬೆಳಕಿನಲ್ಲಿ ಬಿರುಸಾಗಿ ನಡೆಯುತ್ತಿದ್ದೆ. ಸಣ್ಣದಾಗಿ ಮಂಜು. ಹಠಾತ್ತಾಗಿ ಹುಣಸೆ ಮರದಲ್ಲಿ ನೇತಾಡುತ್ತಿದ್ದ ದೇಹ ಕಾಣಿಸಿತು. ಒಮ್ಮೆಲೆ ಅಲ್ಲಿ ನನಗೆ ನನ್ನ ಹೆತ್ತು ಹೊತ್ತು ಬೆಳೆಸಿದ ಉಮ್ಮಾ ಕಾಣಿಸಿದಳು. 30 ವರ್ಷಗಳ ಹಿಂದೆ ಅವತ್ತೊಂದು ದಿನ… ನನ್ನ ಉಮ್ಮಾ ಹೀಗೆಯೇ ನಡುರಾತ್ರಿ ಮನೆಯ ಜಂತಿಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡಿದ್ದಳು. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ನಫೀಸಾಗೆ ಎಚ್ಚರವಾಗದ ನಿದ್ರೆ. ನಾನು ಪರವೂರಿಗೆ ವ್ಯಾಪಾರಕ್ಕೆಂದು ಹೋದವನು ಬೆಳಿಗ್ಗೆಯ ಜಾವ ರೈಲು ಇಳಿದು ಮನೆಯ ಬಳಿ ಬಂದಾಗ ಎದುರಿನ ಬಾಗಿಲು ಸ್ವಲ್ಪ ತೆರೆದಿತ್ತು. ಅವತ್ತೂ ಹಾಗೆಯೇ ಕತ್ತಲು.. ಸಣ್ಣಗೆ ಮಂಜು ಆವರಿಸಿತ್ತು. ಬಾಗಿಲನ್ನು ತಳ್ಳಿ ಮನೆಯೊಳಕ್ಕೆ ಹೋದರೆ ನನ್ನ ಉಮ್ಮಾ ನೇತಾಡುತ್ತಿದ್ದಳು… ಗಂಡನ ಜೊತೆ ಸಂಸಾರ ನಡೆಸಿದ್ದು ಎರಡೇ ವರ್ಷ. ಇದ್ದ ಒಬ್ಬನೇ ಮಗನಿಗಾಗಿ ಜೀವ ಸವೆಸಿದಳು. ಗಂಡ ತೀರಿಕೊಂಡು ವರ್ಷಗಳಾದ ಬಳಿಕ ಶುರುವಾದದ್ದು ಅಸಾಧ್ಯ ಹೊಟ್ಟೆನೋವು. ಅವಳಿಗೆ ಯಾವ ಔಷಧಿಯೂ ನಾಟುತ್ತಿರಲಿಲ್ಲ. ಕೆಲವೊಮ್ಮೆ ರಾತ್ರಿಯಿಡೀ ನರಳುತ್ತಿದ್ದಳು. ಅವತ್ತು ಸಹಿಸಲಾಗದೆ ನಿರ್ಧಾರ ಮಾಡಿಬಿಟ್ಟಿದ್ದಳು. ಆ ಹುಣಸೇ ಮರದಲ್ಲಿ ನೇತಾಡುತ್ತಿದ್ದ ದೇಹವನ್ನು ನನ್ನ ಅಮ್ಮನದ್ದೆಂದೇ ಭಾವಿಸಿ ನಾನು ದಿಗ್ಭ್ರಾಂತನಾಗಿದ್ದೆ. ಬಹಳ ಹೊತ್ತು ನಾನು ಈ ಲೋಕದಲ್ಲೇ ಇರಲಿಲ್ಲ…’ ದೀರ್ಘ ನಿಟ್ಟುಸಿರು ಬಿಟ್ಟು ಆಕಾಶ ನೋಡಿದರು ಮುಸ್ಲಿಯಾರ್‌.

ಸಿದ್ದೀಕ್ ಎರಡೂ ಹಸ್ತಗಳಲ್ಲಿ ತನ್ನ ಕಣ್ಣುಗಳನ್ನು ಉಜ್ಜಿ ಕೆನ್ನೆಯ ಮೇಲೆ ಹಸ್ತಗಳನ್ನು ನೀವುತ್ತಾ ಕೆಳಗಿಳಿಸಿ ಅಪ್ಪನನ್ನು ನೋಡಿ ದೀರ್ಘ ಉಸಿರೆಳೆದ. ‘ಅಬ್ಬಾ… ಉಮ್ಮನ ಬಗ್ಗೆ ಅಜ್ಜಿಗೆ ಅಸಹನೆ ಇತ್ತಾ? ಅವರಿಬ್ಬರಿಗೂ ಜಗಳವಾಗುತ್ತಿತ್ತಾ?’

‘ಹೌದು ಮೋನೇ. ನಿನ್ನ ಉಮ್ಮ, ನನ್ನ ನಫೀಸಾ ಕೂಡಾ ವಲಸೆ ಬಂದವಳೇ.. ಆ ಧರ್ಮದಿಂದ..’

ದೂರದ ಏರ್‌ಪೋರ್ಟಿನ ಆಕಾಶದಲ್ಲಿ ಮತ್ತೊಂದು ವಿಮಾನ ಹೊಟ್ಟೆಯ ತಳಭಾಗದಲ್ಲಿ ಬೆಳಕು ಮಿನುಗಿಸುತ್ತಾ ನಿಧಾನಕ್ಕೆ ಕೆಳಗಿಳಿಯತೊಡಗಿತ್ತು.

******

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ರಾಜಮಾರ್ಗ ಅಂಕಣ: ಪುಸ್ತಕಗಳು ಜ್ಞಾನವನ್ನು ಉದ್ದೀಪನ ಮಾಡುವ ದೀಪಸ್ತಂಭಗಳು ಮಾತ್ರವಲ್ಲ, ಸ್ಫೂರ್ತಿ ನೀಡುವ ಮಾಧ್ಯಮಗಳು. ಗಾಂಧೀಜಿಯವರು ಬಾಲ್ಯದಲ್ಲಿ ಓದಿದ ಜಾನ್ ರಸ್ಕಿನ್ ಬರೆದ ‘ಆನ್ ಟು ದ ಲಾಸ್ಟ್ ‘ ಪುಸ್ತಕವು ತನ್ನ ಬದುಕಿನ ಗತಿಯನ್ನೇ ಬದಲಾವಣೆ ಮಾಡಿತು ಎಂದು ಹೇಳಿದ್ದಾರೆ.

VISTARANEWS.COM


on

reading rajamarga column
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಏಪ್ರಿಲ್ 23 – ಇಂದು ವಿಶ್ವ ಪುಸ್ತಕ ದಿನ (World book day). ಓದುವ (Reading) ಸುಖಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಹಾಗೆಯೇ ಇಂದು ಖ್ಯಾತ ನಾಟಕಕಾರ ಶೇಕ್ಸ್‌ಪಿಯರ್ (Shakespeare) ಹುಟ್ಟಿದ ದಿನ ಕೂಡ. ಹಾಗೆಯೇ ಆತ ಮೃತಪಟ್ಟ ದಿನ ಕೂಡ ಇದೇ ಏಪ್ರಿಲ್ 23!

ಓದುವ ಸುಖಕ್ಕೆ ಬೆಲೆ ಕಟ್ಟಲು ಸಾಧ್ಯವೇ?

ಪುಸ್ತಕಗಳು ಜ್ಞಾನವನ್ನು ಉದ್ದೀಪನ ಮಾಡುವ ದೀಪಸ್ತಂಭಗಳು ಮಾತ್ರವಲ್ಲ, ಸ್ಫೂರ್ತಿ ನೀಡುವ ಮಾಧ್ಯಮಗಳು. ಗಾಂಧೀಜಿಯವರು ಬಾಲ್ಯದಲ್ಲಿ ಓದಿದ ಜಾನ್ ರಸ್ಕಿನ್ ಬರೆದ ‘ಆನ್ ಟು ದ ಲಾಸ್ಟ್ ‘ ಪುಸ್ತಕವು ತನ್ನ ಬದುಕಿನ ಗತಿಯನ್ನೇ ಬದಲಾವಣೆ ಮಾಡಿತು ಎಂದು ಹೇಳಿದ್ದಾರೆ. ಹಾಗೆಯೇ ಅವರು ರಷ್ಯನ್ ಲೇಖನ ಲಿಯೋ ಟಾಲ್ಸ್ಟಾಯ್ ಅವರ ಪುಸ್ತಕಗಳನ್ನು ಓದಿ ಪ್ರಭಾವಿತರಾದರು.

ಭಗತ್ ಸಿಂಗ್ ಅವರು ಲೆನಿನ್ ಬರೆದ ‘ಸ್ಟೇಟ್ ಆಂಡ್ ರಿವೊಲ್ಯುಶನ್’ ಪುಸ್ತಕವನ್ನು ಓದಿ ಸ್ಫೂರ್ತಿ ಪಡೆದೆ ಎಂದು ಹೇಳಿದ್ದಾರೆ. ಹೀಗೆ ಮಹಾಪುರುಷರು ಒಂದಲ್ಲ ಒಂದು ಪುಸ್ತಕಗಳಿಂದ ಪ್ರಭಾವಿತರಾದವರು .ಯಾವುದೇ ವ್ಯಕ್ತಿಯ ಬದುಕಿನ ಗತಿಯಲ್ಲಿ ಪ್ರಮುಖವಾದ ತಿರುವನ್ನು ತರುವ ಶಕ್ತಿಯು ಪುಸ್ತಕಗಳಿಗೆ ಇವೆ ಎಂದು ನೂರಾರು ಬಾರಿ ಸಾಬೀತು ಆಗಿದೆ.

ನನ್ನ ಬಾಲ್ಯದ ವಿಳಾಸ ಹೀಗೆ ಇತ್ತು – c/o ಲೈಬ್ರೆರಿ!

ನನಗೆ ಬಾಲ್ಯದಿಂದಲೂ ಓದುವ ಅನಿವಾರ್ಯ ವ್ಯಸನವನ್ನು ಅಂಟಿಸಿದವರು ನನ್ನ ಕನ್ನಡ ಶಾಲೆಯ ಅಧ್ಯಾಪಕರು. ಅವರು ತರಗತಿಯಲ್ಲಿ ಪಾಠವನ್ನು ಮಾಡುವಾಗ ಒಂದಲ್ಲ ಒಂದು ಪುಸ್ತಕದ ರೆಫರೆನ್ಸ್ ಕೊಡುತ್ತಿದ್ದರು. ಮತ್ತು ಸ್ಟಾಫ್ ರೂಮಿಗೆ ನಾವು ಹೋದಾಗ ಅದೇ ಪುಸ್ತಕವು ಅವರ ಟೇಬಲ್ ಮೇಲೆ ಸಿಂಗಾರಗೊಂಡು ಕೂತಿರುತಿತ್ತು. ನಾವು ಕೈಗೆ ಎತ್ತಿಕೊಂಡರೆ ‘ ಓದಿ ಹಿಂದೆ ಕೊಡು ಪುಟ್ಟ ‘ಎಂಬ ಮಾತು ತುಂಬ ಖುಷಿ ಕೊಡುತ್ತಿತ್ತು. ಹಾಗೆ ನಮ್ಮ ಕನ್ನಡ ಶಾಲೆಯ ಅಧ್ಯಾಪಕರಿಂದ ಆರಂಭವಾದ ನನ್ನ ಓದಿನ ವ್ಯಸನ ಇಂದಿನವರೆಗೂ ಮುಂದುವರೆದಿದೆ! ಈವರೆಗೆ ಸಾವಿರಾರು ಪುಸ್ತಕಗಳನ್ನು ಓದಿ ಮುಗಿಸಿದ್ದೇನೆ ಎನ್ನುವುದು ಅಭಿಮಾನದ ಮಾತು. ಈ ಓದು ನನ್ನ ಭಾಷೆ ಮತ್ತು ಚಿಂತನೆಯನ್ನು ಶ್ರೀಮಂತವಾಗಿ ಮಾಡಿತು.

ನನ್ನ ಬಾಲ್ಯ ಮತ್ತು ಯೌವ್ವನದ ಎಲ್ಲ ರಜೆಗಳು, ಸಂಜೆಗಳು ಕಳೆದದ್ದು ಕಾರ್ಕಳದ ವಿಸ್ತಾರವಾದ ಗ್ರಂಥಾಲಯದಲ್ಲಿ. ಹಾಗೆ ನನ್ನ ಗೆಳೆಯರು ನನ್ನನ್ನು C/O ಲೈಬ್ರೆರಿ ಎಂದು ತಮಾಷೆ ಮಾಡುತ್ತಿದ್ದರು.

ವಯಸ್ಸಿಗೆ ಸರಿಯಾದ ಪುಸ್ತಕಗಳ ಆಯ್ಕೆ

ನಮ್ಮ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಬಾಲ್ಯದಲ್ಲಿ ಮೂಡಿಸುವುದು ಹೆತ್ತವರ ಮತ್ತು ಶಿಕ್ಷಕರ ಹೊಣೆ. ನಮ್ಮ ಕೈಯ್ಯಲ್ಲಿ ಪುಸ್ತಕಗಳು ಇದ್ದರೆ ಮಕ್ಕಳಿಗೆ ಓದು ಓದು ಎಂದು ಹೇಳುವ ಅಗತ್ಯ ಬೀಳುವುದಿಲ್ಲ. ಆದರೆ ಮಕ್ಕಳ ವಯಸ್ಸಿಗೆ ಅನುಗುಣವಾದ ಪುಸ್ತಕಗಳನ್ನು ನೀಡಿ ಓದಿಸುವುದು ಅಗತ್ಯ. ಅದರ ಬಗ್ಗೆ ಒಂದಿಷ್ಟು ಸೂತ್ರಗಳು ಇಲ್ಲಿವೆ.

Book Reading Habit in Children

ಬಾಲ್ಯದ 5-8 ವರ್ಷ – ಕಲ್ಪನಾ ಲೋಕ

ಈ ವಯಸ್ಸು ಮಕ್ಕಳಲ್ಲಿ ರಚನಾತ್ಮಕ ಯೋಚನೆಗಳು ಮತ್ತು ಕಲ್ಪನೆಗಳು ಮೂಡುವ ಅವಧಿ. ಆ ವಯಸ್ಸಿನ ಮಕ್ಕಳಿಗೆ ಕಾಲ್ಪನಿಕವಾದ ಪ್ರಾಣಿ, ಪಕ್ಷಿಗಳ ಕಥೆ ಹೊಂದಿರುವ ಚಿತ್ರ ಪುಸ್ತಕಗಳು ( ಕಾಮಿಕ್ಸ್) ಹೆಚ್ಚು ಉಪಯುಕ್ತ. ಪಂಚತಂತ್ರದ ಕಥೆಗಳು, ಕಾಕೋಲುಕೀಯ, ಈಸೋಪನ ಕಥೆಗಳು ಈ ವಯಸ್ಸಿನ ಮಕ್ಕಳಿಗೆ ಸೂಕ್ತ. ರಾಷ್ಟ್ರೋತ್ಥಾನ ಪರಿಷತ್ ಹೊರತಂದಿರುವ ‘ಭಾರತ ಭಾರತೀ ‘ ಸರಣಿಯ ಸಾವಿರಾರು ಕಿರು ಪುಸ್ತಕಗಳು ಈ ವಯಸ್ಸಿನ ಮಕ್ಕಳಿಗೆ ಓದಲು ಚಂದ.

ಬಾಲ್ಯದ 9-12 ವರ್ಷ – ಕುತೂಹಲದ ಪರ್ವಕಾಲ

ಈ ವಯಸ್ಸಿನ ವಿದ್ಯಾರ್ಥಿಗಳು ಸೃಜನಶೀಲವಾಗಿ ಯೋಚನೆ ಮಾಡುತ್ತಾರೆ ಮತ್ತು ನೈತಿಕ ಮೌಲ್ಯಗಳನ್ನು ನಿಧಾನವಾಗಿ ಜೀರ್ಣ ಮಾಡಿಕೊಳ್ಳುತ್ತಾರೆ. ಅವರಿಗೆ ವಿಜ್ಞಾನಿಗಳ ಕಥೆಗಳು, ಸಿಂದಬಾದನ ಸಾಹಸದ ಕಥೆಗಳು, ರಾಮಾಯಣ, ಮಹಾಭಾರತದ ಕಿರು ಪುಸ್ತಕಗಳು ಹೆಚ್ಚು ಇಷ್ಟವಾಗುತ್ತವೆ. ಆ ಪುಸ್ತಕಗಳಲ್ಲಿ ಹೆಚ್ಚು ಚಿತ್ರಗಳು ಇದ್ದರೆ ಮಕ್ಕಳು ಖುಷಿಪಟ್ಟು ಓದುತ್ತಾರೆ.

ಹದಿಹರೆಯದ 12-15 ವರ್ಷ – ಸಣ್ಣ ಸಣ್ಣ ಕನಸು ಮೊಳೆಯುವ ವಯಸ್ಸು

ಸಣ್ಣ ಕತೆಗಳು ಹೆಚ್ಚು ಇಷ್ಟ ಆಗುವ ವಯಸ್ಸದು. ಸ್ಫೂರ್ತಿ ನೀಡುವ ವಿಕಸನದ ಲೇಖನಗಳು ಅವರಿಗೆ ಹೆಚ್ಚು ಇಷ್ಟವಾಗುತ್ತವೆ. ಎಡಿಸನ್ ತನ್ನ ಬಾಲ್ಯದ ಸಮಸ್ಯೆಗಳನ್ನು ಹೇಗೆ ಗೆದ್ದನು? ಅಬ್ರಹಾಂ ಲಿಂಕನ್ ಕಡುಬಡತನವನ್ನು ಮೆಟ್ಟಿ ಅಮೇರಿಕಾದ ಅಧ್ಯಕ್ಷ ಆದದ್ದು ಹೇಗೆ? ಮೊದಲಾದ ಸ್ಫೂರ್ತಿ ಆಧಾರಿತ ಕಥೆಗಳನ್ನು ಆ ವಯಸ್ಸಿನ ವಿದ್ಯಾರ್ಥಿಗಳು ಖುಶಿ ಪಟ್ಟು ಓದುತ್ತಾರೆ. ಹಾಗೆಯೇ ರಾಷ್ಟ್ರ ಪ್ರೇಮದ ಪುಸ್ತಕಗಳನ್ನು ಓದಲು ಆರಂಭ ಮಾಡಬೇಕಾದ ವಯಸ್ಸು ಇದು. ನಾನು ಒಂಬತ್ತನೇ ತರಗತಿಯಲ್ಲಿ ಓದಿದ ಬಾಬು ಕೃಷ್ಣಮೂರ್ತಿ ಅವರ ‘ ಅಜೇಯ ‘ ಪುಸ್ತಕವು ನನ್ನ ಬದುಕಿನಲ್ಲಿ ಭಾರೀ ಬದಲಾವಣೆ ತಂದಿತ್ತು. ಅದು ಖ್ಯಾತ ಕ್ರಾಂತಿಕಾರಿ ಚಂದ್ರಶೇಖರ್ ಆಝಾದ್ ಅವರ ಬದುಕಿನ ಪುಸ್ತಕ ಆಗಿದೆ.

15-18 ವಯಸ್ಸು – ಹುಚ್ಚು ಖೋಡಿ ಮನಸ್ಸು

ಈ ವಯಸ್ಸಿನ ವಿದ್ಯಾರ್ಥಿಗಳು ಸ್ವಲ್ಪ ಕುತೂಹಲ ಮತ್ತು ಹೆಚ್ಚು ಉಡಾಫೆ ಹೊಂದಿರುತ್ತಾರೆ. ಈ ವಯಸ್ಸಿನವರಿಗೆ ಹೆಚ್ಚು ಆಪ್ತವಾಗುವುದು ವಿಕಸನದ ಸ್ಫೂರ್ತಿ ನೀಡುವ ಲೇಖನಗಳೇ ಆಗಿವೆ. ಸಾಹಸ, ಪ್ರವಾಸ, ಸಂಶೋಧನೆ, ಸ್ವಲ್ಪ ರೋಮಾನ್ಸ್ ಇರುವ ಕತೆಗಳನ್ನು ಹೊಂದಿರುವ ಪುಸ್ತಕಗಳು ಅವರಿಗೆ ಹೆಚ್ಚು ಇಷ್ಟವಾಗುತ್ತವೆ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಣ್ಣ ಕತೆಗಳು, ಪೂರ್ಣಚಂದ್ರ ತೇಜಸ್ವಿ ಅವರ ರಂಜನೆ ಕಡಿಮೆ ಇರುವ ಕಥೆಗಳ ಪುಸ್ತಕಗಳನ್ನು ಅವರಿಗೆ ಕೊಟ್ಟು ನೋಡಿ. ಡುಂಡಿರಾಜರ ಹನಿಗವನಗಳು ಈ ವಯಸ್ಸಿನ ಓದುಗರಿಗೆ ತುಂಬ ಇಷ್ಟ ಆಗುತ್ತವೆ.

20-24 ವಯಸ್ಸು – ಯೌವ್ವನದ ಕಚಗುಳಿ

ಕಾಲೇಜು ಹಂತದ ವಿದ್ಯಾರ್ಥಿಗಳು ಭ್ರಮೆಯಿಂದ ಹೊರಬಂದು ವಾಸ್ತವದ ನೆಲೆಗಟ್ಟಿನ ಚಿಂತನೆಗಳನ್ನು ಹೊಂದಿರುತ್ತಾರೆ. ಕುವೆಂಪು, ಕಾರಂತ, ಭೈರಪ್ಪ, ರವೀ ಬೆಳಗೆರೆ…….ಮೊದಲಾದವರ ಗಂಭೀರ ಚಿಂತನೆ ಹೊಂದಿರುವ ಮತ್ತು ವಾಸ್ತವದ ನೆಲೆಗಟ್ಟಿನ ಕಾದಂಬರಿಗಳನ್ನು ಈ ವಯಸ್ಸಿನಲ್ಲಿ ಓದಲು ಆರಂಭ ಮಾಡಬೇಕು. ಹಾಗೆಯೇ ಆತ್ಮಚರಿತ್ರೆಯ ಪುಸ್ತಕಗಳನ್ನು ಓದಲು ಆರಂಭಿಸಬೇಕಾದ ವಯಸ್ಸು ಇದು. ಅಬ್ದುಲ್ ಕಲಾಂ ಅವರ ಅಗ್ನಿಯ ರೆಕ್ಕೆಗಳು ಮತ್ತು ಪ್ರಜ್ವಲಿಸುವ ಮನಸುಗಳು ಇವೆರಡು ಪುಸ್ತಕಗಳನ್ನು ಈ ವಯಸ್ಸಿನ ವಿದ್ಯಾರ್ಥಿಗಳಿಗೆ ಉಡುಗೊರೆಯಾಗಿ ಕೊಟ್ಟರೆ ಅವರು ತುಂಬಾ ಖುಷಿ ಪಡುತ್ತಾರೆ. ಷಡಕ್ಷರಿ ಅವರ ‘ ಕ್ಷಣ ಹೊತ್ತು ಆಣಿ ಮುತ್ತು ‘ ಅಂಕಣಗಳು ಮತ್ತು ಪ್ರತಾಪ ಸಿಂಹ ಅವರ ‘ಬೆತ್ತಲೆ ಜಗತ್ತು ‘ ಅಂಕಣಗಳು ಹೆಚ್ಚು ಖುಷಿ ಕೊಡುವ ವಯಸ್ಸು ಅದು.

25-28 ವಯಸ್ಸು – ಬದುಕಿನ ಸೌಂದರ್ಯದ ವಸಂತ ಕಾಲ

ಮನಸ್ಸು ಮಾಗಿ ಪ್ರಬುದ್ಧತೆಯು ಮೂಡುವ ಈ ವಯಸ್ಸಲ್ಲಿ ಬದುಕಿನ ಸೌಂದರ್ಯದ ಅನುಭೂತಿ ಮೂಡಿಸುವ ತ್ರಿವೇಣಿ, ಸಾಯಿಸುತೆ, ಅನಕೃ, ದೇವುಡು, ತರಾಸು, ನಾ ಡಿಸೋಜಾ ಅವರ ಕಾದಂಬರಿಗಳು ಹೆಚ್ಚು ಆಪ್ತವಾಗುತ್ತವೆ. ಭಾವಗೀತೆಗಳ ಓದು ಖುಷಿ ಕೊಡುತ್ತದೆ. ಸೋತವರ ಕಥೆಗಳು ಹೆಚ್ಚು ಆಪ್ತವಾಗುತ್ತವೆ. ಕಾದಂಬರಿಯ ಓದು ಹೆಚ್ಚು ತಾಳ್ಮೆಯನ್ನು ಬೇಡುತ್ತದೆ. ಆದರೂ ಒಮ್ಮೆ ಅವರು ಓದುವ ಅಭಿರುಚಿ ರೂಢಿಸಿಕೊಂಡರೆ ಅವರು ಅಂತಹ ಪುಸ್ತಕಗಳನ್ನು ಪ್ರೀತಿ ಮಾಡಲು ತೊಡಗುತ್ತಾರೆ.

ಭರತ ವಾಕ್ಯ

ನನ್ನಂತಹ ಭಾಷಣಕಾರ ಮತ್ತು ತರಬೇತಿದಾರನನ್ನು ಜೀವಂತ ಆಗಿಡುವುದೇ ಪುಸ್ತಕಗಳು ಮತ್ತು ಪುಸ್ತಕಗಳು! ಸಾಮಾಜಿಕ ಜಾಲತಾಣಗಳ ಕಾರಣಕ್ಕೆ ಓದುಗರ ಸಂಖ್ಯೆ ಕಡಿಮೆ ಆಗಿದೆ ಎಂದು ಮೇಲ್ನೋಟಕ್ಕೆ ಅನ್ನಿಸಿದರೂ ಅದು ಪೂರ್ತಿ ನಿಜವಲ್ಲ.

ವಿಶ್ವ ಪುಸ್ತಕ ದಿನವಾದ ಇಂದು ನೀವು ನಿಮ್ಮ ಮಕ್ಕಳಲ್ಲಿ ಓದುವ ಸಂಕಲ್ಪ ಹುಟ್ಟಿಸಿದಿರಿ ಅಂತಾದರೆ ಅದು ಸಾರ್ಥಕ ಹೆಜ್ಜೆ ಆಗುತ್ತದೆ. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

ರಾಜಮಾರ್ಗ ಅಂಕಣ: ತನ್ನ ಅದ್ಭುತವಾದ ಅಭಿನಯ ಹಾಗೂ ರೋಚಕವಾದ ಸಿನೆಮಾಗಳ ಮೂಲಕ ಇಡೀ ಜಗತ್ತನ್ನು ಚಾರ್ಲಿ ಚಾಪ್ಲಿನ್‌ಗೆ ಮೊನ್ನೆ ಮೊನ್ನೆ (ಏಪ್ರಿಲ್ 16) ಹುಟ್ಟುಹಬ್ಬ. A day without laughter is a day wasted ಎಂದು ಹೇಳಿದ್ದ ಚಾಪ್ಲಿನ್ ಅದರಂತೆ ಬದುಕಿದ್ದ! ತನ್ನ ನೂರಾರು ನೋವುಗಳನ್ನು ನುಂಗಿ ಜಗತ್ತನ್ನು ನಗಿಸಿದ ಚಾರ್ಲಿ ಚಾಪ್ಲಿನ್ ಬದುಕು ಅವನ ಸಿನೆಮಾಗಳಷ್ಟೆ ರೋಚಕ.

VISTARANEWS.COM


on

charlie chaplin rajamarga
Koo

ಜಗತ್ತಿಗೆ ನಗುವನ್ನು ಕಲಿಸಿದ ಚಾರ್ಲಿ ಬದುಕು ದುರಂತ ಆಗಿತ್ತು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಜಗತ್ತಿನ ಮಹೋನ್ನತವಾದ ಕಾಮಿಡಿ (comedy) ಸ್ಟಾರ್, ನಿರ್ಮಾಪಕ, ಎಡಿಟರ್, ನಿರ್ದೇಶಕ (Director), ಲೇಖಕ, ಮಹಾನ್ ನಟ (Actor), ಸಂಗೀತ ನಿರ್ದೇಶಕ…………..ಇನ್ನೂ ಏನೇನೋ ಅವತಾರಗಳು! ಚಾರ್ಲಿ ಚಾಪ್ಲಿನ್ (Charlie Chaplin) ಬದುಕಿದ ರೀತಿಯೇ ಹಾಗಿತ್ತು.

ಆತನ TRAMP ಜಗತ್ತಿನ ಅತ್ಯಂತ ಜನಪ್ರಿಯ ಪಾತ್ರ!

ಆ ವಿಚಿತ್ರವಾದ ಬುಟ್ಟಿಯಾಕಾರದ ಟೋಪಿ, ಬೂಟ್ ಪಾಲಿಶ್ ಮೀಸೆ, ಉದ್ದವಾದ ನಡೆಕೋಲು ಈ ಮೂರು ಸೇರಿದರೆ ಚಾಪ್ಲಿನ್ ಚಿತ್ರವು ಕಣ್ಮುಂದೆ ಬಂದಾಯಿತು! ಆ ಪಾತ್ರದ ಹೆಸರು TRAMP. ಜಗತ್ತಿನ ಅತ್ಯಂತ ಜನಪ್ರಿಯ ಪಾತ್ರವದು!

1889ರ ಏಪ್ರಿಲ್ 16ರಂದು ಲಂಡನ್ನಿನಲ್ಲಿ ಹುಟ್ಟಿದ ಅವನ ಬಾಲ್ಯವು ದೊಡ್ಡ ಸಮಸ್ಯೆಗಳಿಂದ ಕೂಡಿತ್ತು. ಹುಟ್ಟಿಸಿದ ತಂದೆಯು ಮಗನನ್ನು ಬಿಟ್ಟು ಹೋಗಿದ್ದರು. ತಾಯಿಗಂತೂ ಗುಣವಾಗದ ಮನೋವ್ಯಾಧಿ. ಮಗ ಚಾರ್ಲಿ ಒಂಬತ್ತನೆಯ ವಯಸ್ಸಿಗೆ ತಲುಪಿದಾಗ ಅಮ್ಮ ಹೆಚ್ಚು ಕಡಿಮೆ ಜೀವನದಲ್ಲಿ ಆಸಕ್ತಿಯನ್ನು ಕಳೆದುಕೊಂಡಿದ್ದರು.

ಆಕೆ ಹಲವು ಮನೆಗಳಲ್ಲಿ ಕೆಲಸ ಮಾಡಿದ್ದು, ಹಲವು ನಾಟಕ ಮಂಡಳಿಗಳಲ್ಲಿ ಕಾಮಿಡಿ ಪಾತ್ರ ಮಾಡಿ ನಗಿಸಿದ್ದು ಎಲ್ಲವೂ ಹೊಟ್ಟೆಪಾಡಿಗಾಗಿ! ಅಮ್ಮನ ಮೇಲೆ ಮಗನಿಗೆ ಅತಿಯಾದ ಪ್ರೀತಿ. ಬದುಕು ಜಟಕಾ ಬಂಡಿ ಅವನನ್ನು ಅತ್ಯಂತ ಕಿರಿಯ ಪ್ರಾಯದಲ್ಲಿ ಅಮೆರಿಕಕ್ಕೆ ಕರೆದುಕೊಂಡು ಹೋಯಿತು. ಆ TRAMP ಪಾತ್ರದ ಕಲ್ಪನೆಯು ಮೂಡಿದ್ದು, ಚಾರ್ಲಿಯು ಸಿನೆಮಾದ ಭಾಷೆಯನ್ನು ಕಲಿತದ್ದು ಅಮೆರಿಕಾದಲ್ಲಿ.

ಆತನ ವಿಚಿತ್ರ ಮ್ಯಾನರಿಸಂ ಜಗತ್ತಿಗೆ ಹುಚ್ಚು ಹಿಡಿಸಿದವು!

1921ರಲ್ಲಿ ಅವನ ಮೊದಲ ಸಿನೆಮಾವಾದ The Kid ತೆರೆಗೆ ಬಂದಿತು. ಅವನ ವಿಚಿತ್ರವಾದ ನಡಿಗೆ, ದೇಹ ಭಾಷೆ, ವಿಚಿತ್ರ ಮ್ಯಾನರಿಸಂಗಳು ಮತ್ತು ವ್ಯಂಗ್ಯವಾದ ನಗು ಜಗತ್ತಿನ ಸಿನಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟವು. ಆಗ ಟಾಕಿ ಸಿನೆಮಾಗಳು ಆರಂಭ ಆಗಿದ್ದರೂ ಚಾರ್ಲಿ ಆರಂಭದಲ್ಲಿ ಮಾಡಿದ್ದೆಲ್ಲವೂ ಮೂಕಿ ಸಿನಿಮಾಗಳೇ! SILENCE is the best mode of expressions ಎಂದು ಚಾರ್ಲಿ ನಂಬಿದ್ದ.

ಹಿಟ್ಲರನನ್ನು ನಗಿಸಿದ ಚಾಪ್ಲಿನ್!

ಅವನ ಸಿನೆಮಾಗಳ ಕಥೆಗಾರ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ, ಎಡಿಟರ್ ಎಲ್ಲವೂ ಅವನೇ! ನಂತರ ಬಂತು ನೋಡಿ ಸಾಲು ಸಾಲು ಚಿತ್ರಗಳು. The Circus, Gold Rush, City Lights, Modern Times…. ಎಲ್ಲವೂ ಸೂಪರ್ ಹಿಟ್! ತನ್ನ ಮೊದಲ ಟಾಕಿ ಸಿನೆಮಾ ಆಗಿ The Great Dictator(1940) ತೆರೆಗೆ ತಂದ ಚಾರ್ಲಿ. ಅದು ಆ ಕಾಲದ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರನನ್ನು ಅಣಕಿಸುವ ಸಿನೆಮಾ. ಆಗ ಹಿಟ್ಲರನು ಜೀವಂತ ಇದ್ದ. ಆ ಸಿನೆಮಾವನ್ನು ನೋಡಿ ಸಿಟ್ಟು ಮಾಡಿಕೊಂಡು ಆತನು ಚಾರ್ಲಿಯನ್ನು ಕೊಂದೇ ಬಿಡ್ತಾನೆ ಎಂಬ ಸುದ್ದಿಯು ಎಲ್ಲೆಡೆಯು ಹರಡಿತ್ತು! ಆದರೆ ಆ ಸಿನೆಮಾವನ್ನು ನೋಡಿದ ಹಿಟ್ಲರ್ ಬಿದ್ದು ಬಿದ್ದು ನಕ್ಕು ಬಿಟ್ಟನು ಮತ್ತು ಚಾರ್ಲಿಗೆ ಶಾಬಾಷ್ ಹೇಳಿದ್ದನು ಅನ್ನೋದೇ ಚಾರ್ಲಿಗೆ ದೊರೆತ ಬಹುದೊಡ್ಡ ಪ್ರಶಸ್ತಿ!

charlie chaplin rajamarga

ನನಗೆ ಸಿನೆಮಾ ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದ ಚಾರ್ಲಿ!

ದಾಖಲೆಯ ಪ್ರಕಾರ ಆತ ಮಾಡಿದ ಒಟ್ಟು ಸಿನೆಮಾಗಳು 83. ‘ನನಗೆ ಸಿನೆಮಾ ಬಿಟ್ಟರೆ ಬೇರೇನೂ ಗೊತ್ತಿಲ್ಲ’ ಅಂತ ಹೇಳುತ್ತಿದ್ದ ಆತ ಸಾಯುವವರೆಗೂ(1977) ಸಿನೆಮಾಗಳಲ್ಲಿ ಮುಳುಗಿಬಿಟ್ಟಿದ್ದ. ಅವನ ಸಿನೆಮಾಗಳು ಕೇವಲ ಕಾಮಿಡಿ, ನಗುವುದಕ್ಕಾಗಿ ಮಾತ್ರ ಇರದೇ ವಿಡಂಬನೆ, ವ್ಯಂಗ್ಯ, ಪ್ರೀತಿ, ಕಣ್ಣೀರು ಮತ್ತು ಪ್ರೇಮಗಳಿಂದ ಶ್ರೀಮಂತವಾಗಿ ಇದ್ದವು. ಅದರಲ್ಲಿಯೂ ಗೋಲ್ಡ್ ರಶ್, ಸಿಟಿ ಲೈಟ್ಸ್, ಮಾಡರ್ನ್ ಟೈಮ್ಸ್ ಮತ್ತು ದಿ ಗ್ರೇಟ್ ಡಿಕ್ಟೇಟರ್ ಸಿನೆಮಾಗಳು ಜಗತ್ತಿನ ಅತೀ ಶ್ರೇಷ್ಟ ಸಿನೆಮಾಗಳ ಸಾಲಿನಲ್ಲಿ ಸ್ಥಾನವನ್ನು ಪಡೆದವು. ಚಾರ್ಲಿಯ ಸಿನೆಮಾಗಳು ಎಷ್ಟು ರೋಚಕವಾಗಿ ಇದ್ದವೋ ಅವನ ಬದುಕು ಅಷ್ಟೇ ದುರಂತ ಆಗಿತ್ತು!

ಚಾಪ್ಲಿನ್ ಬದುಕಲ್ಲಿ ವಿವಾದಗಳು ಬೆನ್ನು ಬಿಡಲಿಲ್ಲ!

ಬೆನ್ನು ಬಿಡದ ನೂರಾರು ವಿವಾದಗಳು ಅವನನ್ನು ಹಿಂಡಿ ಹಿಪ್ಪೆ ಮಾಡಿದವು. ತನ್ನ ಸಿನೆಮಾದಲ್ಲಿ ಅಭಿನಯಿಸಿದ ಹದಿಹರೆಯದ ಎಲ್ಲ ಚಂದದ ಹುಡುಗಿಯರನ್ನು ಚಾರ್ಲಿ ಮಿತಿಗಿಂತ ಹೆಚ್ಚು ಮೋಹಿಸಿದ್ದ. ಜೀವನದಲ್ಲಿ 3 ಬಾರಿ ಮದುವೆಯಾಗಿ 11 ಮಕ್ಕಳನ್ನು ಪಡೆದ! ಅದರ ನಂತರವೂ ಅವನ ದಾಹವು ನೀಗಲಿಲ್ಲ. ಕೊನೆಯ ಕೆಲವು ಸಿನೆಮಾಗಳು ಸೋತು ಹೋದಾಗ ಚಾರ್ಲಿಯು ಕುಸಿದು ಹೋದರೂ ಸಿನೆಮಾ ಮಾಡುವುದನ್ನು ಬಿಡಲಿಲ್ಲ. ಚಾಪ್ಲಿನ್ ಕೊನೆಯ ಸಿನೆಮಾಗಳು ಪೂರ್ಣವಾಗಿ ಸೋತವು.

ಇನ್ನು ಸಿನೆಮಾ ಮಾಡುವುದಿಲ್ಲ ಅಂದ ಚಾಪ್ಲಿನ್!

ಅವನ ಜೀವನದ ಒಂದು ಘಟನೆಯನ್ನು ನಾನು ಉಲ್ಲೇಖ ಮಾಡಲೇಬೇಕು. ಅವನು ಜೀವಂತವಾಗಿ ಇದ್ದಾಗ ಅಮೇರಿಕಾದಲ್ಲಿ ಒಂದು ದೊಡ್ಡ ಸ್ಪರ್ಧೆ ನಡೆಯಿತು. ಅದು ಚಾರ್ಲಿಯನ್ನು, ಅವನ ಡ್ರೆಸ್ಸನ್ನು, ಅವನ ನಡಿಗೆ, ಅವನ ಅಭಿನಯ.. ಇತ್ಯಾದಿಗಳನ್ನು ಅನುಕರಣೆ ಮಾಡುವ ಸ್ಪರ್ಧೆ! ಕುತೂಹಲದಿಂದ ಚಾರ್ಲಿ ಚಾಪ್ಲಿನ್ ಆ ಸ್ಪರ್ಧೆಯಲ್ಲಿ ಬೇರೆ ಹೆಸರು ಕೊಟ್ಟು ಭಾಗವಹಿಸಿದ್ದನು. ಆದರೆ ಫಲಿತಾಂಶ ಬಂದಾಗ ಚಾರ್ಲಿಗೆ ನಿಜವಾದ ಶಾಕ್ ಆಯಿತು. ಏಕೆಂದರೆ ಅವನಿಗೇ ಸೆಕೆಂಡ್ ಪ್ರೈಜ್ ಬಂದಿತ್ತು!

ಅಂದು ವೇದಿಕೆ ಹತ್ತಿದ ಚಾಪ್ಲಿನ್ ವಿಜೇತ ಕಲಾವಿದನನ್ನು ಅಪ್ಪಿಕೊಂಡು ಅಭಿನಂದಿಸಿದನು ಮತ್ತು ತಾನು ಇನ್ನು ಯಾವ ಸಿನೆಮಾವನ್ನು ಕೂಡ ಮಾಡುವುದಿಲ್ಲ ಎಂದು ಆ ವೇದಿಕೆಯಲ್ಲಿಯೇ ಘೋಷಿಸಿದನು! ಅವನ ಕೊನೆಯ ಸಿನೆಮಾ A Countess from Hong Kong (1967).

ತನ್ನ ಅದ್ಭುತವಾದ ಅಭಿನಯ ಹಾಗೂ ರೋಚಕವಾದ ಸಿನೆಮಾಗಳ ಮೂಲಕ ಇಡೀ ಜಗತ್ತನ್ನು ನಗಿಸಿದ ಅವನಿಗೆ ಮೊನ್ನೆ ಮೊನ್ನೆ (ಏಪ್ರಿಲ್ 16) ಹುಟ್ಟುಹಬ್ಬ.

A day without laughter is a day wasted ಎಂದು ಹೇಳಿದ್ದ ಚಾಪ್ಲಿನ್ ಅದರಂತೆ ಬದುಕಿದ್ದ! ತನ್ನ ನೂರಾರು ನೋವುಗಳನ್ನು ನುಂಗಿ ಜಗತ್ತನ್ನು ನಗಿಸಿದ ಚಾರ್ಲಿ ಚಾಪ್ಲಿನ್ ಬದುಕು ಅವನ ಸಿನೆಮಾಗಳಷ್ಟೆ ರೋಚಕ ಆಗಿದೆ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದ ಹೆಣ್ಣು ಮಕ್ಕಳಿಗೆ ಆಕಾಶದ ಎತ್ತರವೂ ಕಡಿಮೆ ಎಂದು ಸಾಬೀತು ಪಡಿಸಿದ ಕಲ್ಪನಾ ಚಾವ್ಲಾ!

Continue Reading

ಶಿವಮೊಗ್ಗ

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Book Release: ಶಿವಮೊಗ್ಗ ಜಿಲ್ಲೆಯ ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕ ಡಾ. ಕೆ. ಎಸ್. ಕಣ್ಣನ್ ಅವರ ʼರಾಮನೇನು ದೇವನೇ?ʼ ಪುಸ್ತಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಲೋಕಾರ್ಪಣೆಗೊಳಿಸಿದರು.

VISTARANEWS.COM


on

Koo

ಶಿವಮೊಗ್ಗ: ಶ್ರೀ ಭಾರತೀ ಪ್ರಕಾಶನ ಪ್ರಕಟಿಸಿರುವ, ಲೇಖಕ ಡಾ. ಕೆ. ಎಸ್. ಕಣ್ಣನ್ ಅವರ ʼರಾಮನೇನು ದೇವನೇ?ʼ ಪುಸ್ತಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಪುಸ್ತಕದ (Book Release) ಲೇಖಕರಾದ ಡಾ. ಕೆ. ಎಸ್. ಕಣ್ಣನ್, ಶ್ರೀ ಭಾರತೀ ಪ್ರಕಾಶನದ ಕವಿತಾ ಜೋಯ್ಸ್, ನಾಗೇಂದ್ರ ಕೊಪ್ಪಲು ಉಪಸ್ಥಿತರಿದ್ದರು.

ಆದಿಕಾವ್ಯವೆಂದೇ ಪ್ರಸಿದ್ಧವಾದ ಕಾವ್ಯ ವಾಲ್ಮೀಕಿ ರಾಮಾಯಣ. ಅದು ಚಿತ್ರಿಸುವುದು ರಾಮನ ಕಥೆಯನ್ನು, ಅರ್ಥಾತ್ ರಾಮನು ನಡೆದ ಹಾದಿಯನ್ನು. ರಾಮನು ಎಲ್ಲಿಂದ ಎಲ್ಲಿಗೆ ನಡೆದದ್ದು? ಅಯೋಧ್ಯೆಯಿಂದ ಹೊರಟು ಕೊನೆಗೆ ಅಯೋಧ್ಯೆಗೇ ಬಂದು ಸೇರಿದನಲ್ಲವೇ? ಅದುವೇ ರಾಮಾಯಣವಾಯಿತು. ಇನ್ನೂ ಮುಖ್ಯವಾದ ರಾಮಾಯನವೊಂದಿದೆ. ದಿವಿಯಿಂದ ಹೊರಟು ಭುವಿಯಲ್ಲಿ ಇದ್ದು ಮತ್ತೆ ದಿವಿಗೆ ಬಂದು ಸೇರಿದನಲ್ಲವೇ? ಅದುವೇ ನಿಜವಾದ ರಾಮಾಯಣ! ನಾವೂ ನಮ್ಮ ಮೂಲವನ್ನು ಸೇರಿಕೊಳ್ಳಲು ಹಿಡಿಯಬೇಕಾದ ಹಾದಿಯನ್ನು ಅರುಹುವ ಅಮರಕೃತಿ ʼರಾಮನೇನು ದೇವನೇ?ʼ ಪುಸ್ತಕವಾಗಿದೆ.

‘ರಾಮನೂ ನಮ್ಮ-ನಿಮ್ಮಂತೆ ಮನುಷ್ಯ, ನಮಗಿಂತ ಹೆಚ್ಚು ಸಾಧನೆ ಮಾಡಿ ಪುರುಷೋತ್ತಮನಾದವ’ ಎನ್ನುವ ವಾದವೊಂದು ಪ್ರಚಲಿತವಾಗಿದೆ. ಈ ವಾದ ಮಾಡುವವರು ‘ರಾಮಾಯಣದಲ್ಲಿ ವಾಲ್ಮೀಕಿಗಳು ರಾಮ ದೇವರು ಎಂದಿಲ್ಲ’ ಎಂದು ಹೇಳುತ್ತಾರೆ. ಆದರೆ ವಸ್ತುಸ್ಥಿತಿ ಹಾಗಿಲ್ಲ. ರಾಮಾಯಣ, ಹೆಜ್ಜೆ ಹೆಜ್ಜೆಗೆ ರಾಮನ ದಿವ್ಯತೆಯನ್ನು ಗುರುತಿಸುತ್ತದೆ. ಕೆಲವೊಮ್ಮೆ ಪ್ರತ್ಯಕ್ಷವಾಗಿ, ಇನ್ನು ಕೆಲವೊಮ್ಮೆ ಪರೋಕ್ಷವಾಗಿ ಅದು ಕಾಣಸಿಗುತ್ತದೆ. ಅದನ್ನು ಸಾಧಿಸುವ ಸತ್ಕಾರ್ಯವನ್ನು ಈ ಕೃತಿ ಮಾಡಿದೆ.

ರಾಮಾಯಣದ ಶ್ಲೋಕಗಳನ್ನು ಉಲ್ಲೇಖಿಸುತ್ತಾ, ಅದರ ಆಶಯವನ್ನು ವಿವರಿಸುತ್ತಾ, ತರ್ಕಬದ್ಧವಾಗಿ ಸಾಗುವ ಈ
ಕೃತಿ, ಶಾಸ್ತ್ರೀಯ ಕ್ರಮದ ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಇಲ್ಲಿ ಕಲ್ಪನೆಯಿಲ್ಲ, ಮನಸ್ಸಿಗೆ ಅನ್ನಿಸಿದ್ದನ್ನೆಲ್ಲ ರಾಮಾಯಣದಲ್ಲಿದೆ ಎನ್ನುವ ಅಪಭ್ರಂಶವಿಲ್ಲ, ತನಗನ್ನಿಸಿದ್ದೇ ಸತ್ಯ ಎಂದುಕೊಳ್ಳುವ ಅಹಂಕಾರವೂ ಇಲ್ಲ. ಋಷಿಹೃದಯದ ಒಳಹೊಕ್ಕು, ಆ ಆರ್ಷತನವನ್ನು ಆಸ್ವಾದಿಸುತ್ತಾ, ಸತ್ಯವನ್ನು ಮಾತ್ರ ಹೇಳುತ್ತೇನೆ ಎನ್ನುವ ವಿನಯಪೂರ್ವಕವಾದ ದಿಟ್ಟತನ ಕೃತಿಯಲ್ಲಿದೆ.

ಇದನ್ನೂ ಓದಿ | Sunday Read: ಹೊಸ ಪುಸ್ತಕ: ರಾಮನೇನು ದೇವನೇ?

ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ 39ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ, ಮದ್ರಾಸು ಐಐಟಿಯಲ್ಲಿ ಪೀಠಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ, ಬಹುಶ್ರುತ ವಿದ್ವಾಂಸರಾದ ಡಾ. ಕೆ. ಎಸ್. ಕಣ್ಣನ್ ಅವರು ರಚಿಸಿರುವ, ಶ್ರೀ ಭಾರತೀ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕದ ಪ್ರತಿಗಳಿಗಾಗಿ ಶ್ರೀಪುಸ್ತಕಮ್ (9591542454) ಸoಪರ್ಕಿಸಬಹುದಾಗಿದೆ.

“ಶ್ರೀರಾಮ, ಶ್ರೀಮನ್ನಾರಾಯಣನ ಅವತಾರ. ವಾಲ್ಮೀಕಿ ರಾಮಾಯಣ ಇದನ್ನು ಬಗೆಬಗೆಯಾಗಿ ತೋರಿಸಿಕೊಡುತ್ತದೆ. ವ್ಯಕ್ತವಾಗಿಯಲ್ಲದೇ ರಾಮಾಯಣದ ಅಂತಃಸೂತ್ರವೇ ಇದಾಗಿದೆ. ವೈಕುಂಠದಿಂದ ಆರಂಭವಾಗಿ ಮತ್ತೆ ವೈಕುಂಠವನ್ನು ಸೇರುವುದೇ ರಾಮನ ಅಯನ. ಈ ಅಯನ ಜೀವಿಗಳೆಲ್ಲರದ್ದೂ ಆಗಬೇಕೆನ್ನುವುದೇ ರಾಮಾಯಣದ ಸಂದೇಶ, ಶ್ರೀರಾಮನ ಅವತಾರವೂ, ಶ್ರೀಮದ್ರಾಮಾಯಣದ ಅವತಾರವೂ ಈ ಉದ್ದೇಶದ್ದೇ ಆಗಿದೆ. ಇದೀಗ ರಾಮನೇನು ದೇವನೇ? ಕೃತಿ ವಾಲ್ಮೀಕಿಗಳು ರಾಮಾಯಣದಲ್ಲಿ ಎಲ್ಲೆಲ್ಲಿ ಈ ಅಂಶವನ್ನು ಪ್ರಸ್ತುತಪಡಿಸಿದ್ದಾರೆ ಎನ್ನುವುದನ್ನು ಸಾಧಾರವಾಗಿ ನಿರೂಪಿಸಿದೆ.
| ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಶ್ರೀರಾಮಚಂದ್ರಾಪುರ ಮಠ

Continue Reading

ಅಂಕಣ

ರಾಜಮಾರ್ಗ ಅಂಕಣ: ಶ್ರೀರಾಮ ಆಗುವುದು ಕಷ್ಟ, ರಾವಣ ಆಗುವುದು ಕೂಡ ಕಷ್ಟವೇ!

ರಾಜಮಾರ್ಗ ಅಂಕಣ: ಇಂದು ಶ್ರೀರಾಮ ನವಮಿ. ಯಾವ ಕೋನದಲ್ಲಿ ನೋಡಿದರೂ ರಾಮನ ವ್ಯಕ್ತಿತ್ವದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಕಂಡು ಬರುವುದು ಸಾಧ್ಯ ಇಲ್ಲ. ಆದ್ದರಿಂದ ರಾಮ ಆಗುವುದು ಎಲ್ಲರಿಗೂ ಕಷ್ಟ!

VISTARANEWS.COM


on

sri rama rajamarga column
Koo

ಈ ಕತೆಯನ್ನು ಓದಿದ ನಂತರ ನೀವು ಯಾರನ್ನೂ ದ್ವೇಷ ಮಾಡುವುದಿಲ್ಲ!

Rajendra-Bhat-Raja-Marga-Main-logo

ಇಂದು ರಾಮನವಮಿ (Sri Ram Navami). ನನ್ನ ಜನ್ಮ ನಕ್ಷತ್ರ ಪುನರ್ವಸು. ಅದು ಶ್ರೀ ರಾಮಚಂದ್ರನ ಜನ್ಮ ನಕ್ಷತ್ರವೂ ಹೌದು! ನಾನು ಕೂಡ ರಾಮನ ಹಾಗೆ ನನ್ನ ಹೆತ್ತವರಿಗೆ ಹಿರಿಯ ಮಗ. ಆದರೆ ನಮ್ಮ ಹೋಲಿಕೆಯು ಅಷ್ಟಕ್ಕೇ ನಿಂತು ಬಿಡುತ್ತದೆ!

ಏಕೆಂದರೆ ಶ್ರೀರಾಮನ ಹಾಗೆ ಬದುಕುವುದು ತುಂಬಾನೆ ಕಷ್ಟ. ಶ್ರೀಕೃಷ್ಣನ ಹಾಗೆ ಯೋಚನೆ ಮಾಡುವುದು ಕೂಡ ಕಷ್ಟ. ನನಗೆ ಎರಡೂ ಈವರೆಗೆ ಸಾಧ್ಯವಾಗಲೇ ಇಲ್ಲ ಅನ್ನುವುದು ವಾಸ್ತವ. ಅದರಲ್ಲಿಯೂ ಮೊದಲನೆಯದ್ದು ಭಾರೀ ಕಷ್ಟ.

ವಾಲ್ಮೀಕಿಯು ಕೆತ್ತಿದ್ದು ಅದ್ಭುತವಾದ ವ್ಯಕ್ತಿತ್ವ ರಾಮ

ಶ್ರೀರಾಮನ ಬಗ್ಗೆ ಬೇರೆ ಬೇರೆ ವೇದಿಕೆಗಳಲ್ಲಿ ಗಂಟೆಗಳ ಕಾಲ ಮಾತಾಡಿದ್ದೇನೆ. ಅವನ ಜೀವನದ ಪ್ರತೀ ಒಂದು ಘಟನೆ ಕೂಡ ನನಗೆ ಬೆರಗನ್ನೇ ಮೂಡಿಸುತ್ತದೆ. ಆದಿ ಕವಿ ವಾಲ್ಮೀಕಿಯು ರಾಮಾಯಣದ ಮೂಲಕ ಕೆತ್ತಿದ ರಾಮನ ಪಾತ್ರವು ಅದು ವಿಶ್ವದ ಅದ್ಭುತ!

ನನಗೆ ಅಚ್ಚರಿ ಮೂಡಿಸಿದ ಒಂದೆರಡು ಘಟನೆಗಳು

ಶ್ರೀ ರಾಮನಿಗೆ ಪಟ್ಟಾಭಿಷೇಕಕ್ಕೆ ಸಂಕಲ್ಪವನ್ನು ದಶರಥನು ತೆಗೆದುಕೊಂಡಾಗಿತ್ತು. ಅದಕ್ಕಾಗಿ ತೀವ್ರ ಹಂಬಲ ಪಟ್ಟವರು ಅಯೋಧ್ಯೆಯ ಪ್ರತೀ ಒಬ್ಬ ನಾಗರಿಕರು. ರಾಮನು ಅರಸ ಆಗಬಾರದು ಅಂತ ಒಬ್ಬರೂ ಹೇಳಿರಲಿಲ್ಲ. ಪಟ್ಟಾಭಿಷೇಕಕ್ಕೆ ದಿನವನ್ನು ನಿಗದಿ ಮಾಡಿದ ದಶರಥ ಮಹಾರಾಜನು ಇಡೀ ಅಯೋಧ್ಯಾ ನಗರವನ್ನು ಸಿಂಗಾರ ಮಾಡಿ ಪಟ್ಟಕ್ಕೆ ಸಿದ್ಧತೆ ಮಾಡಿದ್ದನು.

ಆದರೆ ಮಂಥರೆ ಎಂಬ ಅತೃಪ್ತ ಆತ್ಮವು ಕೈಕೇಯಿ ರಾಣಿಯ ತಲೆಯನ್ನು ಕೆಡಿಸಿ ರಾಮನ ಪಟ್ಟಾಭಿಷೇಕಕ್ಕೆ ವಿಘ್ನವನ್ನು ಒಡ್ಡಿದ್ದು ನಮಗೆಲ್ಲ ಗೊತ್ತಿದೆ. ಹಿಂದೆ ಯಾವುದೋ ಒಂದು ಕಾಲದಲ್ಲಿ ಕೊಟ್ಟಿದ್ದ ಎರಡು ವರಗಳನ್ನು ಕೈಕೇಯಿಯು ಆ ಮಧ್ಯರಾತ್ರಿ ದಶರಥ ಮಹಾರಾಜನಿಗೆ ಕೇಳಿದಾಗ ರಾಜನು ಅದನ್ನು ನೆರವೇರಿಸಲು ಸಾಧ್ಯವೇ ಆಗದೇ ಕುಸಿದು ಬಿದ್ದ ಕಥೆಯು ಕೂಡ ನಮಗೆ ಗೊತ್ತಿದೆ.

ಪಿತೃ ವಾಕ್ಯಂ ಶಿರೋಧಾರ್ಯಂ!

ಆಗ ಶ್ರೀ ರಾಮನು ಕಟ್ಟು ಬಿದ್ದದ್ದು ಯಾವುದೋ ಒಂದು ಗಳಿಗೆಯಲ್ಲಿ ತನ್ನ ಅಪ್ಪ ತನ್ನ ಚಿಕ್ಕಮ್ಮನಿಗೆ ಕೊಟ್ಟಿದ್ದ ಒಂದು ಮಾತಿಗೆ! ಅದನ್ನು ತಂದೆಯು ನೇರವಾಗಿ ಹೇಳಲು ಸಾಧ್ಯ ಆಗದೆ ಕಣ್ಣೀರನ್ನು ಸುರಿಸುತ್ತ ನೆಲಕ್ಕೆ ಒರಗಿದಾಗಲೂ ರಾಮನಿಗೆ ಅದು ಖಂಡಿತವಾಗಿಯೂ ‘ಪಿತೃ ವಾಕ್ಯಮ್ ಶಿರೋಧಾರ್ಯಮ್’!

king dasharatha

ರಾಮನು ಅರಸ ಆಗಬಾರದು ಎಂದು ರಾಣಿ ಕೈಕೇಯಿಯ ಮನಸ್ಸಿನಲ್ಲಿ ಕೂಡ ಇರಲಿಲ್ಲ. ಆದರೆ ಆಕೆಯಲ್ಲಿ ಆ ಭ್ರಮೆ ಮತ್ತು ಪುತ್ರ ವಾತ್ಸಲ್ಯವನ್ನು ಹುಟ್ಟಿಸಿದವಳು ಆ ಗೂನಜ್ಜಿ ಮಂಥರೆ!

ಅವಳು ಹೇಗೂ ಅಯೋಧ್ಯೆಯ ಪ್ರಜೆ ಆಗಿರಲಿಲ್ಲ. ಅವಳು ಕೈಕೇಯಿಯ ತಾಯಿಯ ಮನೆಯಿಂದ ಕೈಕೇಯಿ ಜೊತೆಗೆ ಬಂದವಳು. ಒಂದು ರೀತಿಯಲ್ಲಿ ಶ್ರೀರಾಮನು ಪಟ್ಟವೇರಿ ಅರಸನಾಗಲು ಆ ಅಯೋಧ್ಯೆಯಲ್ಲಿ ನೂರು ಪ್ರತಿಶತದ ಬಹುಮತದ ಮುದ್ರೆ ಇತ್ತು! ಆದರೆ ರಾಮನು ತಂದೆ ಬಹಳ ಹಿಂದೆ ತನ್ನ ರಾಣಿಗೆ ಕೊಟ್ಟ ಒಂದು ಮಾತಿಗೆ ಕಟ್ಟು ಬಿದ್ದು ಅರಸೊತ್ತಿಗೆಯನ್ನು ಎಡಗಾಲಿನಿಂದ ಒದ್ದು ನಾರು ಮುಡಿ ತೊಟ್ಟು ಕಾಡಿಗೆ ಹೋದವನು. ತನ್ನದೇ ಹಕ್ಕಿನ ರಾಜ್ಯವನ್ನು ತ್ಯಾಗ ಮಾಡಲು ಆತ ಹಿಂದೆ ಮುಂದೆ ನೋಡಲಿಲ್ಲ!

‘ನೀನು ಕೊಟ್ಟ ಮಾತಿಗೆ ನಾನು ಹೇಗೆ ಹೊಣೆ ಆಗಬೇಕು?’ ಎಂದು ಅಪ್ಪನನ್ನು ಒಂದು ಮಾತು ಕೂಡ ಶ್ರೀ ರಾಮನು ಕೇಳಲಿಲ್ಲ! ಆ ರೀತಿಯ ಸಣ್ಣ ಯೋಚನೆ ಕೂಡ ಆತನ ಮನದಲ್ಲಿ ಬರಲಿಲ್ಲ ಅಂದರೆ ಅದು ಅದ್ಭುತವೇ ಹೌದು! ಸರ್ವಾಲಂಕಾರ ಆಗಿದ್ದ ಅಯೋಧ್ಯೆಯ ನಡುವೆ ಯಾವ ವಿಷಾದ ಕೂಡ ಇಲ್ಲದೆ ಎದ್ದು ಹೋಗುವುದು ಸುಲಭ ಅಲ್ಲ! ಅದು ರಾಮನಿಗೆ ಮಾತ್ರ ಸಾಧ್ಯವಾಗುವ ನಡೆ.

ರಾಮನಿಗೆ ನೂರು ಪ್ರತಿಶತ ಜನಮತದ ಬೆಂಬಲ ಇತ್ತು!

ಆಗ ಪೂರ್ಣ ಜನಮತ ತನ್ನ ಪರವಾಗಿ ಇದ್ದಾಗ ರಾಮನು ಪಿತೃ ವಾಕ್ಯವನ್ನು ಧಿಕ್ಕರಿಸಿ ಆಡಳಿತವನ್ನು ಮಾಡಬಹುದಿತ್ತು ಎಂದು ನನಗೆ ಹಲವರು ಕೇಳಿದ್ದಾರೆ. ಆದರೆ ಆಗ ರಾಮನು ಕೇವಲ ದಶರಥನ ಮಗ ಮಾತ್ರ ಆಗಿದ್ದ. ಅರಸ ಆಗಿರಲಿಲ್ಲ ಅನ್ನುವುದು ನನ್ನ ಉತ್ತರ!

ಮುಂದೆ ರಾಣಿ ಕೈಕೇಯಿ ಕಾಡಿಗೆ ಬಂದು ತಮ್ಮ ತಪ್ಪಿಗೆ ಕ್ಷಮೆ ಕೇಳಿ ಮತ್ತೆ ಅಯೋಧ್ಯೆಗೆ ಬರಬೇಕು ಎಂದು ಎಷ್ಟು ವಿನಂತಿ ಮಾಡಿದರೂ ರಾಮಚಂದ್ರನ ಮನಸ್ಸು ಒಂದಿಷ್ಟೂ ವಿಚಲಿತ ಆಗಲಿಲ್ಲ. ಕಣ್ಣೀರು ಸುರಿಸುತ್ತಾ ಬಂದ ಭರತನನ್ನು ಧೈರ್ಯ ತುಂಬಿಸಿ ಅರಸನಾಗಲು ಮಾನಸಿಕವಾಗಿ ಸಿದ್ಧತೆ ಮಾಡಿ ಕಳುಹಿಸಿದ್ದು ಅದೇ ರಾಮ. ಈ ರೀತಿಯ ನಿರ್ಧಾರಗಳು ರಾಮನ ವ್ಯಕ್ತಿತ್ವದ ಕೈಗನ್ನಡಿ.

Sri Ramachandra

ಮುಂದೆ ಅದೇ ರಾಮನು ರಾವಣನ ವಧೆಯಾದ ನಂತರ ಅತ್ಯಂತ ವಿಧಿವತ್ತಾಗಿ ಲಂಕೆಯಲ್ಲಿ ಆತನ ಕ್ರಿಯಾಕರ್ಮ ಮುಗಿಸುತ್ತಾನೆ. ಆಗ ರಾಮ ಹೇಳಿದ ಎರಡು ಮಾತುಗಳನ್ನು ಕೇಳಿ.

ರಾಮನು ದ್ವೇಷ ಮಾಡಿದ್ದು ರಾವಣನನ್ನು ಅಲ್ಲ!

‘ನಾನು ದ್ವೇಷ ಮಾಡಿದ್ದು ರಾವಣನನ್ನು ಅಲ್ಲ. ಅವನ ಒಳಗಿದ್ದ ರಾವಣತ್ವವನ್ನು! ಯಾರನ್ನೇ ಆದರೂ ಮರಣದ ನಂತರ ದ್ವೇಷ ಮಾಡಬಾರದು. ರಾವಣನು ಹೇಳಿ ಕೇಳಿ ಮಹಾ ಬ್ರಾಹ್ಮಣ. ಆತನು ದೈವಭಕ್ತ. ಆದ್ದರಿಂದ ಅವನನ್ನು ಗೌರವಿಸುವುದು ನಮ್ಮ ಕರ್ತವ್ಯ!’

ಸೀತೆಯನ್ನು ಅಗ್ನಿಪರೀಕ್ಷೆ ಮಾಡಿದ್ದು ಸರಿಯಾ?

ಮುಂದೆ ಅದೇ ರಾಮಚಂದ್ರನು ಅಯೋಧ್ಯೆಗೆ ಬಂದು ಪಟ್ಟಾಭಿಷೇಕ ಆಗುವ ಮೊದಲು ತನ್ನ ಪತ್ನಿ ಸೀತೆಯನ್ನು ಅಯೋಧ್ಯೆಯ ಜನರ ಮುಂದೆ ಅಗ್ನಿ ಪರೀಕ್ಷೆಗೆ ಒಡ್ಡಿದ ವಿಷಯದ ಬಗ್ಗೆ ತುಂಬಾ ಟೀಕೆಗಳು ಇವೆ. ಅದೇ ರೀತಿ ಒಬ್ಬ ಸಾಮಾನ್ಯ ಅಗಸನ ಮಾತನ್ನು ಕೇಳಿ ತನ್ನ ಕೈ ಹಿಡಿದ ಮಡದಿ ಸೀತೆಯನ್ನು ಮತ್ತೆ ಕಾಡಿಗೆ ಕಳುಹಿಸಿದ ನಿರ್ಧಾರದ ಬಗ್ಗೆ ಕೂಡ ಸಾಕಷ್ಟು ಟೀಕೆಗಳು ಬಂದಿವೆ.

ಆದರೆ ಅವೆರಡು ಕೂಡ ಶ್ರೀರಾಮನು ರಾಜಾರಾಮನಾಗಿ ತೆಗೆದುಕೊಂಡ ನಿರ್ಧಾರಗಳು. ಅವು ಸೀತಾರಾಮನಾಗಿ ತೆಗೆದುಕೊಂಡ ನಿರ್ಧಾರಗಳು ಅಲ್ಲ!

ರಾಜನ ನಡೆಗಳು ಸಂಶಯಾಸ್ಪದ ಆಗಿರಬಾರದು!

ರಾಜಾರಾಮನಾಗಿ ತನ್ನ ಪ್ರತಿಯೊಬ್ಬ ಪ್ರಜೆಯ ಮುಂದೆ ಸಂಶಯಾತೀತವಾಗಿ ಇರಬೇಕು ಮತ್ತು ಕಾಣಿಸಿಕೊಳ್ಳಬೇಕು ಎನ್ನುವುದು ರಾಜನ ಆದ್ಯ ಕರ್ತವ್ಯ. ತಾನು ನೆಟ್ಟಗಿರುವುದು ಮಾತ್ರವಲ್ಲ, ತನ್ನ ನೆರಳು ಕೂಡ ನೆಟ್ಟಗಿರಬೇಕು ಎಂದು ಭಾವಿಸುವುದು ಒಬ್ಬ ರಾಜನ ಆದ್ಯತೆಯೇ ಆಗಿದೆ. ಒಬ್ಬ ಬಹು ಸಾಮಾನ್ಯ ಅಗಸನೂ ಅರಸನಿಗೆ ಒಬ್ಬ ಗೌರವಾನ್ವಿತ ಪ್ರಜೆಯೇ ಆಗಿದ್ದಾನೆ. ಆತನ ಮನದ ಸಂಶಯವನ್ನು ಕೂಡ ನಿವಾರಣೆ ಮಾಡುವುದು ಒಬ್ಬ ಅರಸನ ಕರ್ತವ್ಯ. ಹೀಗೆ ಯಾವ ಕೋನದಲ್ಲಿ ನೋಡಿದರೂ ರಾಮನ ವ್ಯಕ್ತಿತ್ವದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಕಂಡು ಬರುವುದು ಸಾಧ್ಯ ಇಲ್ಲ. ಆದ್ದರಿಂದ ರಾಮ ಆಗುವುದು ಎಲ್ಲರಿಗೂ ಕಷ್ಟ!

ರಾವಣ ಆಗುವುದು ಕಷ್ಟವೇ!

ರಾಮ ಆಗುವುದು ಎಷ್ಟು ಕಷ್ಟವೋ ರಾವಣ ಆಗುವುದು ಅಷ್ಟೇ ಕಷ್ಟ! ಕವಿ ವಾಲ್ಮೀಕಿಯು ಕಥಾ ನಾಯಕ ರಾಮನ ಪಾತ್ರಕ್ಕೆ ಎಷ್ಟು ಶಕ್ತಿ ತುಂಬಿದ್ದಾನೋ ಖಳನಾದ ರಾವಣನ ಪಾತ್ರಕ್ಕೆ ಕೂಡ ಅಷ್ಟೇ ಶಕ್ತಿಯನ್ನು ತುಂಬಿದ್ದಾನೆ. ಆತನ ಪಾತ್ರವೂ ಅಮೋಘವೆ ಆಗಿದೆ!

ಸೀತಾ ಸ್ವಯಂವರದಲ್ಲಿ ತನಗಾದ ಅಪಮಾನದಿಂದ ಕುದ್ದು ಹೋಗಿದ್ದ ರಾವಣನ ಅಂತರ್ಯದಲ್ಲಿ ಸೀತೆಯನ್ನು ಒಮ್ಮೆ ಗೆಲ್ಲಬೇಕು ಎಂದು ಮಾತ್ರ ಇತ್ತು. ಅನುಭವಿಸುವುದು ಆಗಿರಲಿಲ್ಲ. ಅನುಭವಿಸುವ ಆಸೆ ಇದ್ದಿದ್ದರೆ ಅವನದ್ದೇ ಲಂಕೆಯಲ್ಲಿ ಏಕಾಂಗಿ ಆಗಿದ್ದ ಸೀತೆಯು ತನ್ನ ಮಾನವನ್ನು ಉಳಿಸಿಕೊಳ್ಳಲು ಸಾಧ್ಯವೇ ಇರಲಿಲ್ಲ!

ಹೀಗೊಂದು ಕಥೆಯನ್ನು ನಾನು ಓದಿದ್ದು!

ಈ ಕಥೆಯು ಮೂಲ ರಾಮಾಯಣದಲ್ಲಿ ಇಲ್ಲ. ಆದರೆ ಅದ್ಭುತವಾಗಿದೆ. ಕಾಲ್ಪನಿಕ ಎಂದು ಬೇಕಾದರೂ ಕರೆಯಿರಿ. ಸೀತೆಯನ್ನು ಹುಡುಕುತ್ತಾ ಲಂಕೆಗೆ ಬಂದಿದ್ದ ಶ್ರೀರಾಮನಿಗೆ ರಾವಣನ ಬಗ್ಗೆ ಸಾಕಷ್ಟು ಒಳ್ಳೆಯ ಮಾತುಗಳು ಆಲ್ಲಿ ಕೇಳಿಬರುತ್ತವೆ. ಆತನು ಮಹಾ ಯೋಧ. ಆತನನ್ನು ಸೋಲಿಸುವುದು ಖಂಡಿತ ಸುಲಭದ ಕೆಲಸ ಅಲ್ಲ ಎಂದು ಗೊತ್ತಾಗುತ್ತದೆ. ಅದಕ್ಕೆ ‘ಶತ್ರು ಸಂಹಾರ’ದ ಯಾಗವನ್ನು ಮಾಡಬೇಕು ಎಂದು ಅಲ್ಲಿದ್ದ ಹಿರಿಯರು ಹೇಳುತ್ತಾರೆ.

ಲಂಕೆ ಹೇಳಿ ಕೇಳಿ ರಾಕ್ಷಸರ ನಾಡು! ಅಲ್ಲಿ ಆ ಯಾಗವನ್ನು ಮಾಡಬೇಕು ಅಂತಾದರೆ ಪುರೋಹಿತರು ಯಾರು ಸಿಗುತ್ತಾರೆ? ಆಗ ಹಿರಿಯರು ಇನ್ನೊಂದು ಉಪಾಯವನ್ನು ಹೇಳುತ್ತಾರೆ. ಲಂಕೆಯಲ್ಲಿ ಒಬ್ಬನೇ ಬ್ರಾಹ್ಮಣ ಇರುವುದು ಅದು ರಾವಣ! ಆತನಿಗೆ ಎಲ್ಲಾ ವೇದ ವಿದ್ಯೆಗಳು ಗೊತ್ತಿವೆ. ಆತ ಪುರೋಹಿತನಾಗಿ ಬರಲು ಒಪ್ಪಿದರೆ ಆದೀತು ಎಂಬ ಅಭಿಪ್ರಾಯ ಬಂತು.

ತನ್ನದೇ ವಧೆಯನ್ನು ಮಾಡುವ ‘ಶತ್ರುಸಂಹಾರ ಯಾಗ’ಕ್ಕೆ ಪುರೋಹಿತನಾಗಿ ರಾವಣನು ಬರಬಹುದೇ? ಈ ಪ್ರಶ್ನೆಯು ಎದ್ದಾಗ ನೋಡೋಣ, ಒಮ್ಮೆ ಪ್ರಯತ್ನ ಮಾಡೋಣ ಎಂಬ ಮಾತು ಬಂತು. ಆಗ ರಾವಣನಿಗೆ ಶ್ರೀರಾಮನ ಕಡೆಯಿಂದ ಗೌರವಪೂರ್ವಕ ಆಮಂತ್ರಣವು ಹೋಯಿತು. ರಾವಣ ಬರಲು ಸಾಧ್ಯ ಇಲ್ಲವೇ ಇಲ್ಲ ಎಂದು ಎಲ್ಲರೂ ನಂಬಿದ್ದರು.

ಇದನ್ನೂ ಓದಿ: ರಾಜಮಾರ್ಗ ಅಂಕಣ: RCB- ʼಹೊಸ ಅಧ್ಯಾಯʼ ಆರಂಭ ಆಗೋದು ಯಾವಾಗ?

ಆದರೆ ಶ್ರೀರಾಮನ ಆಮಂತ್ರಣಕ್ಕೆ ತಲೆ ಬಾಗಿ ರಾವಣನು ಬಂದೇ ಬಿಟ್ಟ! ಪುರೋಹಿತನಾಗಿ ಕೂತು ‘ಶತ್ರು ಸಂಹಾರ’ ಯಾಗವನ್ನು ಪೂರ್ತಿ ಮಾಡಿದ. ಪೂರ್ಣಾಹುತಿ ಆದ ನಂತರ ಶ್ರೀರಾಮನು ಪುರೋಹಿತ ರಾವಣನ ಪಾದ ಮುಟ್ಟಿ ನಮಸ್ಕಾರ ಮಾಡಿದ!

ಆಗ ರಾವಣ ರಾಮನಿಗೆ ಕೈ ಮುಗಿದು ಹೇಳಿದ ಮಾತು ಕೇಳಿ.

“ಶ್ರೀರಾಮ, ಸೀತೆಯನ್ನು ಅಪಹರಣ ಮಾಡಿಕೊಂಡು ಬಂದ ನಂತರ ಪಾಪ ಪ್ರಜ್ಞೆಯಿಂದ ಸರಿಯಾಗಿ ನಿದ್ದೆಯು ಬರುತ್ತಿಲ್ಲ. ನಿದ್ದೆ, ವಿಶ್ರಾಂತಿ ಇಲ್ಲದೆ ದಣಿದು ಬಿಟ್ಟಿದ್ದೇನೆ. ನಿನ್ನ ಕಾಲ ಮೇಲೆ ಒಂದು ಗಳಿಗೆ ಮಲಗಬೇಕು ಅನ್ನಿಸ್ತಾ ಇದೆ! ನಿನ್ನ ಅನುಮತಿಯನ್ನು ಕೊಡುವೆಯಾ?’

ತನ್ನ ಗೆಲುವಿಗೆ ಬೇಕಾಗಿ ದೊಡ್ಡ ಯಾಗವನ್ನೇ ಮಾಡಿಕೊಟ್ಟ ರಾವಣನ ವಿನಂತಿಯನ್ನು ಶ್ರೀರಾಮನು ನಿರಾಕರಿಸಲು ಸಾಧ್ಯವೇ ಇರಲಿಲ್ಲ. ಶ್ರೀರಾಮ ಅಸ್ತು ಅಂದ. ರಾವಣನು ಪುಟ್ಟ ಮಗುವಿನ ಹಾಗೆ ರಾಮನ ಕಾಲಿನ ಮೇಲೆ ಸುದೀರ್ಘ ಕಾಲ ಮೈಮರೆತು ಮಲಗಿದ. ಎಲ್ಲವನ್ನೂ ಮರೆತು ಬಿಟ್ಟನು! ತನ್ನ ಪಾಪದ ಭೀತಿಯನ್ನು ರಾಮನ ಪಾದಮೂಲದಲ್ಲಿ ಇಟ್ಟು ಎದೆಯ ಭಾರವನ್ನು ಇಳಿಸಿ ಹೊರಟು ಹೋದನು ರಾವಣ!

ಈಗ ಹೇಳಿ ರಾವಣ ಆಗುವುದು ಅಷ್ಟು ಸುಲಭವಾ?

ಇದನ್ನೂ ಓದಿ: Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

Continue Reading
Advertisement
Karnataka Weather Forecast
ಮಳೆ23 mins ago

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Benefits of Bamboo Shoots
ಆರೋಗ್ಯ53 mins ago

Benefits of Bamboo Shoots: ಮೂಳೆಗಳ ನೋವು, ಮಲಬದ್ಧತೆ ನಿವಾರಣೆಗೆ ಎಳೆಯ ಬಿದಿರು ಸೇವನೆ ಮದ್ದು

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Bengaluru karaga
ಕರ್ನಾಟಕ5 hours ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ7 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ7 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು7 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20248 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ8 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ8 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌