ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಮೆಚ್ಚುಗೆ ಬಹುಮಾನ ಪಡೆದ ಕಥೆ: ಪಿಂಕ್ ಟ್ರಂಪೆಟ್ - Vistara News

ಕಲೆ/ಸಾಹಿತ್ಯ

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಮೆಚ್ಚುಗೆ ಬಹುಮಾನ ಪಡೆದ ಕಥೆ: ಪಿಂಕ್ ಟ್ರಂಪೆಟ್

ಗಂಡನಿಲ್ಲದ ಅವಳ ಹೆಸರು ಶರಾವತಿ. ಹೆಂಡತಿ ತೊರೆದ ಅವನ ಹೆಸರು ರತ್ನಾಕರ. ವರ್ಷಕ್ಕೊಮ್ಮೆ ಹೂ ಬಿಟ್ಟು ದಾರಿಯಲ್ಲಿ ಚೆಲ್ಲುವ ಪಿಂಕ್‌ ಟ್ರಂಪೆಟ್‌ನಂತೆ ಅವರ ನಡುವಿನ ಮಧುರ ಭೇಟಿ. ಓದಿ, ವಿಸ್ತಾರ ಕಥಾಸ್ಪರ್ಧೆಯಲ್ಲಿ ಮೆಚ್ಚುಗೆ ಪಡೆದ ಕಥೆ.

VISTARANEWS.COM


on

kannada short story pink trumpet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

:: ಚೈತ್ರಿಕಾ ಹೆಗಡೆ

ಶರಾವತಿ ಸಂಜೆಯಾಗುವುದನ್ನೇ ಕಾಯುತ್ತಿದ್ದಳು. ಊರಿನಂತೆ ಬೆಂಗಳೂರಿನಲ್ಲಿ ನಿಧಾನಕ್ಕೆ ಸಂಜೆಯಾಗುವುದಿಲ್ಲ. ಊರಲ್ಲಿದ್ದರೆ ಮೂರು ಗಂಟೆಗೆ ಚಹಾ ಕುಡಿದು, ತಲೆ ಬಾಚಿ, ಒಂದೆರಡು ಗಿದ್ನ ಅಡಕೆ ಸುಲಿದು, ಕೊಟ್ಟಿಗೆಗೆ ಹೋಗಿ ಹಾಲು ಕರೆದು, ಓರಿ ಬಾಗಿಲಿನಿಂದ ಒಳಗೆ ಬರುವಾಗ ಬೆಳಕು ಫೇರಿ ಕೀಳುತ್ತಿರುತ್ತದೆ. ಆದರೆ ಬೆಂಗಳೂರಿನಲ್ಲಿ ಮಧ್ಯಾಹ್ನದ ಮೇಲೆ ಮಲಗಿ, ಎದ್ದು, ನೀರಿಗೆ ಬಿದ್ದ ಚಹಾಪುಡಿ ಬಣ್ಣ ಬಿಡುವಷ್ಟರಲ್ಲಿ ಆಕಾಶದಲ್ಲೂ ಕೆಂಬಣ್ಣ! ಮಜಾ ಎಂದರೆ ಇವತ್ತು ಮಾತ್ರ ಶರಾವತಿಗೆ ಸಂಜೆ ಬೇಗ ಆಗುತ್ತಲೇ ಇಲ್ಲ ಅನಿಸುತ್ತಿತ್ತು. ನಾಲ್ಕುವರೆಗೇ ಚಹಾ ಕುಡಿದು, ಲೆಗ್ಗಿನ್ನು ಕುರ್ತಾ ಹಾಕಿ, ಜಡೆ ಕಟ್ಟಿಕೊಂಡು, ಸೇವಂತಿಗೆ ಎಸಳುಗಳ ಚಿಕ್ಕ ಮಾಲೆಯನ್ನು ಸಿಕ್ಕಿಸಿಕೊಂಡು, ವಾಕಿಂಗ್ ಶೂಗಳನ್ನು ತೊಟ್ಟು ರಸ್ತೆಗಿಳಿಯುವಾಗ ಇನ್ನೂ ಐದಕ್ಕೆ ಐದು ನಿಮಿಷ ಇತ್ತು! ಎಷ್ಟೊತ್ತಿಗೆ ರತ್ನಾಕರನನ್ನು ನೋಡುತ್ತೇನೋ ಎಂದು ಹಪಹಪಿಸುತ್ತ ಪಕ್ಕದ ಬೀದಿ ಕಡೆ ಹೆಜ್ಜೆ ಹಾಕಿದರೆ ಅವಳ ಸ್ವಾಗತಕ್ಕೆ ರತ್ನಾಕರನೇ ಹೂಗಳನ್ನು ಹಾಸಿ ಕಾಯುತ್ತಿರುವನೇನೋ ಎಂಬಂತೆ ಅವನ ಮನೆಯ ಬೀದಿಯ ತುಂಬ ತಿಳಿ ಗುಲಾಬಿ ಬಣ್ಣದ ಟ್ರಂಪೆಟ್ ಹೂಗಳು ಉದುರಿಬಿದ್ದಿದ್ದವು. ಹೂಗಳ ಮೇಲೆ ಹೆಜ್ಜೆ ಇಡದಂತೆ ನಿಗಾ ವಹಿಸುತ್ತ ‘ಗಾಯತ್ರಿ’ ಎಂಬ ಮನೆಯ ಬಳಿ ಬರುವಾಗ ಹೊಟ್ಟೆಯೊಳಗೆಲ್ಲ ವಿಚಿತ್ರ ಸಂಕಟ! ರತ್ನಾಕರ ಇವತ್ತಾದರೂ ಕಾದಂಬರಿಯನ್ನು ತೆರೆದು ನೋಡಿರಬಹುದೇ? ಎಂಬ ಹುಚ್ಚು ಕಾತರ. ಆದರೆ ರತ್ನಾಕರ ಅವನ ಮನೆಯ ಬಳಿ ಕಾಣಿಸದೇ ಹೋಗಿದ್ದರಿಂದ ಒಂದೋ ಮುಂದೆ ಹೋಗಿರಬಹುದು ಇಲ್ಲ ತಡವಾಗಿ ಬರಬಹುದೆಂದು ದೇವಸ್ಥಾನದ ಕಡೆ ತುಸು ನಿರಾಸೆಯಲ್ಲೇ ಹೊರಟಳು ಶರವಾವತಿ.

ಹೋದ ವರ್ಷ ಪುಟ್ಟುವಿಗೆ ಕೆಲಸ ಸಿಕ್ಕು ಆತ ರಾಜರಾಜೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿದ್ದಾಗ ಒಂದಷ್ಟು ದಿನಕ್ಕೆಂದು ಬಂದ ಶರಾವತಿ ಪುಟ್ಟುವಿನ ಹಠಕ್ಕೆ ಜೂನ್ವರೆಗೂ ಉಳಿದಿದ್ದಳು. ಆಗ ಪರಿಚಯವಾದವನು ರತ್ನಾಕರ. ಸ್ವಲ್ಪ ದಪ್ಪಗೆ, ಎಣ್ಣಗಪ್ಪಿನ ಐವತ್ತರ ಹರೆಯದ ರತ್ನಾಕರ ಇಂಥದ್ದೇ ಸಂಜೆಯಲಿ ಶರವಾತಿ ಪಕ್ಕದ ಬೀದಿಯ ಮಾಲಾ ಮತ್ತು ಸುಜಾತಾ ಜೊತೆ ವಾಕಿಂಗು ಮಾಡುತ್ತಿದ್ದಾಗ ಸಿಕ್ಕವನು. ಅವಳ ಹೆಸರು, ಊರು ಕೇಳಿ ‘ನಿಮ್ ಊರಿನ ಹತ್ತಿರ ಇರೋದು ಅಘನಾಶಿನಿ ನದಿ ಅಲ್ವಾ ಮತ್ಯಾಕೆ ಶರಾವತಿ ಅಂತ ಹೆಸರು ನಿಮ್ಗೆ?’ ಎಂದು ಪಕಪಕನೇ ನಕ್ಕವನು. ‘ಹುಟ್ಟಿದ್ದು ಶರಾವತಿ ನದಿ ಅಂಚಿನ ಹೊನ್ನಾವರದಲ್ಲಿ, ಅಲ್ಲಿಂದ ಹರ್ದು ಬಂದಿದ್ದು ಅಘನಾಶಿನಿ ಅಂಚಿನ ಬಾಳೆಹಳ್ಳಿಗೆ’ ಎನ್ನುತ್ತ ಇವಳೂ ನಕ್ಕಿದ್ದಳು. ಒಮ್ಮೊಮ್ಮೆ ತೀರ ಅಪರಿಚಿತರೊಬ್ಬರು ಏಕ್ದಮ್ ಆಪ್ತರು ಅನಿಸುವುದಕ್ಕೆ ಯಾವ ಜಾದೂ ಆಗುವುದೂ ಬೇಕಾಗುವುದಿಲ್ಲ! ಏನೂ ಕಾರಣವೇ ಇಲ್ಲದೆ ಹತ್ತಿರವಾಗಿಬಿಡುತ್ತಾರೆ.

ಶರಾವತಿಗೂ ರತ್ನಾಕರ ಹತ್ತಿರವಾಗಿದ್ದು ಹೀಗೆಯೇ. ಅವತ್ತಿನಿಂದ ಅವರಿಬ್ಬರೂ ಜೊತೆಗೇ ವಾಕಿಂಗ್ ಹೋಗುವುದು ಖಾಯಮ್ ಆಯಿತು! ಮಾಲಾ, ಸುಜಾತ, ಫಸ್ಟ್ ಕ್ರಾಸಿನ ಬಾಬು ಇವರೆಲ್ಲ ಬರಲಿ ಬಿಡಲಿ ಶರವಾತಿ ಬರುವುದು ಕಾಣಿಸಿದರೆ ರತ್ನಾಕರ ಅವಳ ಜೊತೆಯೇ ನಡೆಯುತ್ತಿದ್ದ. ಅಲ್ಲಿಂದ ಪಕ್ಕದ ಬೀದಿಗೆ ಹೋಗಿ ಬಲಕ್ಕೆ ತಿರುಗಿದರೆ ದೇವಸ್ಥಾನವೊಂದಿತ್ತು, ಅಲ್ಲೊಂದಷ್ಟು ಹೊತ್ತು ಕೂತು ಮರಳುವುದು ರೂಢಿ. ಒಮ್ಮೊಮ್ಮೆ ಮೇಯ್ನ್ ರೋಡಿಗೆ ಹೋಗಿ ನರ್ಸರಿ ಹೊಕ್ಕು ಗಿಡಗಳನ್ನು ಚೌಕಾಶಿ ಮಾಡಿ ಮಾಡಿ ರತ್ನಾಕರ ಕೊಳ್ಳುತ್ತಿದ್ದ. ಆಗೆಲ್ಲ ಶರಾವತಿಗೆ ‘ನಮ್ಮನೆಗೆ ಬನ್ನಿ ಚಂದ್ ಚಂದದ ಹೂವಿನ್ ಗಿಡ ಕೊಡ್ತೇನೆ, ಒಂದ್ ರೂಪಾಯೂ ಬೇಡ ಮತ್ತೆ’ ಎಂದು ಹೇಳಬೇಕೆನಿಸುತ್ತಿತ್ತು. ಆದರೆ ಅವನು ಕೊಳ್ಳುತ್ತಿದ್ದ ಕಳ್ಳಿ ಗಿಡಗಳನ್ನೆಲ್ಲ ಅವಳು ಅದೇ ಮೊದಲು ನೋಡಿದ್ದಾಗಿತ್ತು. ‘ಇದಕ್ಕೆ ಅಷ್ಟು ದುಡ್ ಕೊಟ್ರ? ಹೂವೂ ಬಿಡೂದಿಲ್ಲ’ ಎಂದಾಗ, ‘ಕ್ಯಾಕ್ಟಸ್ ನಂಗಿಷ್ಟ’ ಎಂದಿದ್ದ . ‘ನಾನಂತೂ ಹೂವಿನ ಮಳ್ಳು’ ಎಂದಿದ್ದಳು ಇವಳು. ‘ಬೆಂಗಳೂರಿನ ಮನೇಲಿ ಹೊತ್ತೇ ಹೋಗಲ್ಲ’ ಅಂದವಳಿಗೆ ‘ನಂಗೆ ಚಪಾತಿ ಮಾಡಿಕೊಡಿ ನನ್ನ ಹೆಂಡತಿಗೂ ಕೆಲಸ ಕಡಿಮೆಯಾಗತ್ತೆ, ಫ್ರೀಯಾಗೆನೂ ಬೇಡ, ಮತ್ತೆ ನೀವು ಇಲ್ಲಿ ಇರೋಷ್ಟು ದಿನ ಸಾಕು’ ಎಂದಿದ್ದ. ಪುಟ್ಟುವಿಗಿದು ಇಷ್ಟವಿಲ್ಲ ಎಂದು ಗೊತ್ತಿದ್ದರೂ ಶರಾವತಿ ಒಪ್ಪಿದ್ದಳು. ಅವತ್ತಿನಿಂದ ದಿನ ಆರು ಚಪಾತಿ, ಒಂದು ಬಗೆಯ ಪಲ್ಯ, ಜೊತೆಗೆ ಮೊಳಕೆ ಕಾಳು ತಯಾರಿಸಿ ರತ್ನಾಕರನ ಮನೆಗೆ ಕೊಟ್ಟು ಬರುತ್ತಿದ್ದಳು. ಆಗಲೇ ಗಾಯತ್ರಿಯ ಪರಿಚಯವಾಗಿತ್ತು. ಮನೆಯ ಗೋಡೆಗೆ ಅಂಟಿಕೊಂಡಿದ್ದ ಗಾಯತ್ರಿಯ ಮಂಡಲ ಚಿತ್ರಗಳು ಆಕರ್ಷಕ ಎನಿಸಿದ್ದವು. ರತ್ನಾಕರ ಬಿಡಿಸಿದ್ದ ಡೂಡಲ್ ಆರ್ಟ್ ಶರಾವತಿಗೆ ಅರ್ಥವೇ ಆಗಿರಲಿಲ್ಲ, ಅವನ ಪುಸ್ತಕಗಳ ಶೆಲ್ಫ್ ನೋಡಿ ಕಣ್ಣರಳಿಸಿದ್ದಳು. ‘ನಿಮಗ್ಯಾವ ಪುಸ್ತಕ ಬೇಕಾದ್ರೂ ತಗೊಂಡೋಗಿ, ತುಂಬ ಜನ ತಗೊಂಡೋಗ್ತಾರೆ ನಮ್ಮನೆಯಿಂದ’ ಎಂದಿದ್ದಕ್ಕೆ ಒಂದು ಕಾದಂಬರಿಯನ್ನು ತಗೊಂಡಿದ್ದಳು. ದಿನವೂ ರತ್ನಾಕರನ ಮನೆಗೆ ಹೋಗುತ್ತ, ಗಾಯತ್ರಿಯ ಜೊತೆ ಹರಟುತ್ತ, ಪದಬಂಧ ತುಂಬುತ್ತ, ಮತ್ತೆ ಐದೂವರೆಗೆ ರತ್ನಾಕರನೊಟ್ಟಿಗೆ ವಾಕಿಂಗು ಮಾಡಲು ರಸ್ತೆಗಿಳಿಯುತ್ತ, ಬೆಂಗಳೂರೆಂಬ ದೊಡ್ಡ ಪ್ರಪಂಚದಲ್ಲಿ ಪುಟ್ಟ ಗೂಡೊಂದನ್ನು ಕಟ್ಟಿಕೊಂಡ ಶರಾವತಿಗೆ ಎರಡು ತಿಂಗಳುಗಳು ಹೇಗೇ ಕಳೆದವೆಂದೇ ಗೊತ್ತಾಗಿರಲಿಲ್ಲ.

ಆದರೆ ಅವತ್ತೊಂದಿನ ಗಾಯತ್ರಿ ರತ್ನಾಕರ ಜೋರು ಜಗಳ ಮಾಡಿಕೊಂಡ ಮೇಲೆ ಅವರ ಮನೆಯೊಳಗೆ ಹೋಗಲಿಕ್ಕೇ ಮನಸ್ಸಾಗಿರಲಿಲ್ಲ. ಗಾಯತ್ರಿಯದು ಯಾವುದೋ ಕಂಪನಿ ಕೆಲಸ, ಒಮ್ಮೊಮ್ಮೆ ಆಫೀಸಿಗೆ ಹೋಗುವುದಿರುತ್ತದೆ ಎಂದು ಅವಳೇ ಹೇಳಿದ್ದಳು. ಆದರೆ ರತ್ನಾಕರನದ್ದು ಒಂದು ಕೆಲಸ ಅಂತ ಇರಲಿಲ್ಲ. ಒಂದಷ್ಟು ದಿನ ಪೇಪರಿಗೆ ಅಂಕಣ ಬರೆಯುತ್ತಾನೆ, ಇನ್ನೊಂದಷ್ಟು ದಿನ ಬುಕ್ ಪಬ್ಲಿಶಿಂಗ್, ಆಮೇಲೇ ತಿಂಗಳಾನುಗಟ್ಟಲೇ ಏನೂ ಕೆಲಸ ಮಾಡದೆ ಇದ್ದುಬಿಡುತ್ತಾನೆ, ಮನಸ್ಸು ಬಂದರೆ ಚಿತ್ರ ಬಿಡಿಸುತ್ತಾನೆ. ತಲೆ ಕೆಟ್ಟರೆ ಕಾರ್ ಎತ್ತಿಕೊಂಡು ಏನೂ ಎತ್ತ ಹೇಳದೇ ಮೂರ್ನಾಲ್ಕು ದಿನ ನಾಪತ್ತೆ. ಇದಿಷ್ಟು ಶರಾವತಿಗೆ ಅವನ ಒಡನಾಟದಿಂದ ಅರ್ಥವಾಗಿತ್ತು. ಈ ವಿಷಯಕ್ಕೇ ಸುಮಾರು ಸಲ ಗಾಯತ್ರಿ ರತ್ನಾಕರ ವಾದ ಮಾಡಿಕೊಂಡು ಅದು ಜಗಳದವರೆಗೂ ಹೋಗುತ್ತಿತ್ತು, ಆಗೆಲ್ಲ ಶರಾವತಿ ಹೊರಟರೆ ಒಂದೋ ಗಾಯತ್ರಿ ‘ಅಯ್ಯೋ ನೀವ್ ಕೂತ್ಕೊಳಿ ನಮ್ದಿದ್ದಿದ್ದೇ’ ಎಂದು ತಡೆಯುತ್ತಿದ್ದಳು, ಇಲ್ಲವೇ ರತ್ನಾಕರ ತಡೆಯುತ್ತಿದ್ದ. ಏನು ಮಾಡುವುದೆಂದೇ ತೋಚದೇ ಯಾವುದೋ ಪುಸ್ತಕ ಓದಿದಂತೆ ಮಾಡುತ್ತ ಅಲ್ಲೇ ಕೂತಿರುತ್ತಿದ್ದಳು. ಆದರೆ ಆ ದಿನ ದೊಡ್ಡ ಜಗಳವಾಗುತ್ತಿರುವಾಗ ಅಲ್ಲಿರಲಾಗದೇ ಹೊರಡಬೇಕಾಯಿತು, ಇಬ್ಬರಲ್ಲಿ ಯಾರೊಬ್ಬರೂ ತಡೆಯಲೂ ಇಲ್ಲ. ಮರುದಿನ ಎಂದಿನಂತೆ ಚಪಾತಿ ಮಾಡಿ ಗಾಯತ್ರಿಗೆ ಫೋನ್ ಮಾಡಿದರೆ ಉತ್ತರವಿರಲಿಲ್ಲ. ಶರವಾತಿ ಬಳಿ ರತ್ನಾಕರನ ಫೋನ್ ನಂಬರೂ ಇರಲಿಲ್ಲ. ಅದಾಗಿ ಒಂದು ವಾರದ ನಂತರ ರತ್ನಾಕರ ಸಿಕ್ಕಾಗಲೇ ಗಾಯತ್ರಿ ಅಮ್ಮನ ಮನೆಗೆ ಹೋದಳೆಂಬ ವಿಚಾರ ತಿಳಿದಿತ್ತು, ಹಿಂದೆ ಹೀಗೆ ಎಷ್ಟೋ ಸಲ ಹೋಗಿ ತಿಂಗಳುಗಟ್ಟಲೇ ಬಂದಿಲ್ಲ, ಯಾವತ್ತೋ ಒಂದಿನ ‘ಸಾರಿ ಡುಮ್ಮ’ ಅಂತ ಬಂದ್ಬಿಡ್ತಾಳೆ ಎಂದು ನಕ್ಕಿದ್ದ. ಆದರೆ ಗಾಯತ್ರಿ ತಿಂಗಳು ಕಳೆದರೂ ಬಂದಿರಲಿಲ್ಲ. ಶರಾವತಿ ರತ್ನಾಕರ ಮಾತ್ರ ಯಾವತ್ತಿನಂತೆ ವಾಕಿಂಗಿಗೆ ಹೋಗುತ್ತಿದ್ದರು.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ತೃತೀಯ ಬಹುಮಾನ ಪಡೆದ ಕಥೆ: ಅದು ಅವರ ಪ್ರಾಬ್ಲಮ್

ಈ ಬೆಂಗಳೂರಿನಲ್ಲಿ ದಿನಗಳು ಪುಟಗಳಂತೆ ಸರಸರನೇ ಮಗಚುತ್ತಿವೆ ಅನಿಸಿದ್ದರೂ ಇಷ್ಟವಾದ ಪುಟದಲ್ಲೇ ಇದ್ದುಬಿಡಲಾಗುದಿಲ್ಲವಲ್ಲ! ಶರಾವತಿ ಊರಿಗೆ ಹೊರಡುವ ದಿನ ಬಂದಿತ್ತು. ಪುಟ್ಟು ‘ಇನ್ ಸ್ವಲ್ಪ ದಿನ ಉಳ್ಕಳೇ ಅಮ್ಮಾ’ ಎಂದಾಗ ‘ಶೀ.. ತ್ವಾಟಕ್ ಮದ್ ಹೊಡ್ಯಲ್ಲೆ ಬಪ್ಪರತಿಗೆ ಮನಿಗೋಗವು ಪುಟು, ಮತೇ ರಾಶಿ ಡೇರೆ ಗಿಡ ಮಾಡವು ಈಸಲ’ ಎಂದು ಹೊರಟಿದ್ದಳು, ಬ್ಯಾಗಿನ ಜೊತೆ ಅರ್ಥವೇ ಆಗದ ಸಣ್ಣದೊಂದು ನೋವನ್ನೂ ಎದೆಯೊಳಗೆ ತುಂಬಿಕೊಂಡು ಹೊರಟಿದ್ದು ಮಾತ್ರ ಊರಿಗೆ ಹೋದಮೇಲೇಯೇ ಅರಿವಾಗಿತ್ತು! ಪುಟ್ಟುವನ್ನು ಬಿಟ್ಟು ಹೊರಡುವುದು ಒಂದು ತ್ರಾಸಾದರೆ, ರತ್ನಾಕರ ನಾಳೆಯಿಂದ ಸಿಗುವುದಿಲ್ಲ ಎಂಬ ವಿಚಿತ್ರ ತಳವಳ ಶರವಾತಿಯನ್ನು ಆವರಿಸಿದ್ದು ಅವಳಿಗೇ ಅಚ್ಚರಿ ಎನಿಸಿತ್ತು. ಹಳೆ ಕೊಟ್ಟೆಯಲ್ಲಿದ್ದ ಡೇರೆ ಗಡ್ಡೆಗಳನ್ನು ಹೊಸ ಕೊಟ್ಟೆಗೆ ವರ್ಗಾಯಿಸಿ, ಮಣ್ಣು ಹಾಕಿ, ಸಾಲಾಗಿ ಅಂಗಳದಲ್ಲಿಟ್ಟು, ನೇತ್ರಳ ಬಳಿ ಮಾಡಿಸಿಕೊಂಡ ಒಂದೇ ನಮೂನಿಯ ಕೋಲುಗಳನ್ನು ಗಿಡದ ಆಸೆರೆಗೆಂದು ಊರುತ್ತಿದ್ದರೂ ಮನಸ್ಸು ಮಾತ್ರ ಬೆಂಗಳೂರಿನ ಬೀದಿಯಲ್ಲಿ ರತ್ನಾಕರನ ಜೊತೆಗೇ ಹೆಜ್ಜೆ ಹಾಕುತ್ತಿತ್ತು. ‘ವಾಕಿಂಗಿಗೆ ಚಪ್ಪಲಿ ಕಂಫರ್ಟ್ ಅಲ್ಲ ಶೂ ತಗೊಳಿ’ ಎಂದು ಪರಿಚಯವಾದ ಶುರುವಿನಲ್ಲೇ ಹೇಳಿದ್ದ. ಪುಟ್ಟು ಮರುದಿನವೇ ಶೂ ಕೊಡಿಸಿದ್ದ. ಬೆಂಗಳೂರಿನಲ್ಲಿ ಇರುವಷ್ಟು ದಿನವೂ ಅದನ್ನು ಹಾಕಿಯೇ ನಡೆದಿದ್ದಳು ಶರಾವತಿ. ವಾರಕ್ಕೊಂದು ಸಲವಾದರೂ ಅವುಗಳನ್ನು ತೊಳೆದುಕೊಳ್ಳುತ್ತಿದ್ದಳು, ಯುಟ್ಯೂಬ್ ನೋಡಿ ಲೇಸು ಪೋಣಿಸಿಕೊಳ್ಳುತ್ತಿದ್ದಳು. ಊರಿಗೆ ಬರುವಾಗ ಒಂದು ಪ್ಲಾಸ್ಟಿಕ್ ಕವರಿನಲ್ಲಿ ಭದ್ರವಾಗಿಟ್ಟು ಬಂದಿದ್ದಳು. ಮನೆಗೆ ಬರುತ್ತಿದ್ದಂತೆ ಸವೆದು ಹೋದ ಕೊಟ್ಟಿಗೆ ಚಪ್ಪಲಿಗಳನ್ನು ಮೆಟ್ಟಿಕೊಂಡು ತೋಟದ ನಿತ್ಗಟ್ಟೆಯ ಮೇಲೇ ನಡೆಯುತ್ತ ರತ್ನಾಕರನ ಜೊತೆ ವಾಕಿಂಗು ಮಾಡಿದ ದಿನಗಳನ್ನು ಮೆಲಕು ಹಾಕುತ್ತಿದ್ದರೆ ಬೆಂಗಳೂರಿನಲ್ಲಿದ್ದ ಶರಾವತಿ ತಾನೇ ಹೌದೆ ಅನಿಸಿತ್ತು ಶರಾವತಿಗೆ..!

ಮನೆಯಲ್ಯಾವತ್ತೂ ಪತ್ತಲ ಉಡುತ್ತಿದ್ದ ಶರಾವತಿ ಬೆಂಗಳೂರಿಗೆ ಬಂದ ಮೇಲೇಯೇ ಕುರ್ತಾ ಲೆಗ್ಗಿನ್ನು ಹಾಕಲು ಕಲಿತುಕೊಂಡಿದ್ದಾಗಿತ್ತು. ಪುಟ್ಟುವಿನೊಟ್ಟಿಗೆ ಬೈಕಿನಲ್ಲಿ ಓಡಾಡುವಾಗ ಸೀರೆ ಕಷ್ಟವೆಂದು ಕುರ್ತಾಗಳನ್ನು ತಗೊಂಡಿದ್ದಳು. ಆದರೆ ಶರವಾತಿಯ ಆಸೆ ಕುರ್ತಾ ತೊಡವುದಾಗಲಿ, ಶೂಗಳನ್ನು ಹಾಕಿಕೊಳ್ಳುವುದಾಗಲಿ, ಬೈಕಿನಲ್ಲಿ ಸುತ್ತುವುದಾಗಲೀ, ಮಾಲಿನ ಎಸ್ಕಲೇಟರಿನಲ್ಲಿ ಎಡವದೇ ಕಾಲಿಟ್ಟು ಹೋಗಬೇಕೆನ್ನುವುದಾಗಲಿ ಆಗಿರಲಿಲ್ಲ. ಈ ಬೆಂಗಳೂರಿನಲ್ಲಾದರೂ ನಿರ್ಭಿಡೆಯಿಂದ ಹೂವನ್ನು ಸೂಡಿಕೊಳ್ಳಬೇಕೆಂಬುದು ಅವಳ ಕೆಟ್ಟ ಬಯಕೆಯಾಗಿತ್ತು. ಅಷ್ಟೇ! ಸತ್ಯ ಹೋದ ಮೇಲೇ ಅರಿಷಿಣ ಕುಂಕುಮವನ್ನಂತೂ ಯಾರೂ ಅವಳಿಗೆ ಹಚ್ಚುತ್ತಿರಲಿಲ್ಲ ಆದರೆ ಒಂದು ಹೂವು ಸೂಡಿಕೊಂಡರೂ ‘ಗಂಡ ಸತ್ತವು ಹೂ ಸೂಡ್ಕ್ಯಳ್ಳಾಗ’ ಎಂಬ ಮಾತು ಬಾಣದಂತೆ ಬರುತ್ತಿತ್ತು. ಇನ್ನು ಪೂಜೆ ಮುಗಿದ ಮೇಲೆ ಪ್ರಸಾದ ಕೊಡವಾಗಲೂ ಅವಳಿಗೆ ಹುಡುಕಿ ಹುಡುಕಿ ತುಳಸಿ ದಳವನ್ನೇ ಕೊಡುತ್ತಿದ್ದರು. ಮುತ್ತುಮಲ್ಲಿಗೆ ಜೊತೆ ಅಲ್ಲಲ್ಲಿ ಅಬ್ಬಲಿಗೆ ಹೂ ಹಾಕಿ ಮಾಲೆ ಮಾಡಿ ಮನೆಯ ಹೆಂಗಸರಿಗೆಲ್ಲ ಹಂಚಿ ತಾನೂ ಮುಡಿಯುತ್ತಿದ್ದವಳಿಗೆ, ಮಳೆಗಾಲದಲ್ಲಿ ಕಡ್ಡಿ ಡೇರೆ ಹೂಗಳನ್ನು ಆಸೆಯಿಂದ ಸೂಡಿಕೊಳ್ಳುತ್ತಿದ್ದವಳಿಗೆ, ಗುಲಾಬಿ ಹೂವನ್ನು ಎರಡು ಮೂರು ದಿನ ನೀರಿನಲ್ಲಿಟ್ಟು ಬಾಡದಂತೆ ನೋಡಿಕೊಳ್ಳುತ್ತಿದ್ದವಳಿಗೆ ಬದುಕಿನ ಎಲ್ಲ ಕನಸುಗಳೂ ಒಮ್ಮೇಲೇ ಬಾಡಿ ಹೋಗಿದ್ದು ಸತ್ಯ ತೀರಿ ಹೋದ ಮೇಲೆ! ಮತ್ತವು ಯಾವತ್ತೂ ಚಿಗುರುವುದಿಲ್ಲವೆಂದು ಚಿವುಟಿ ಚಿವುಟಿ ಅರ್ಥ ಮಾಡಿಸಿದ್ದು ಅವಳ ಮನೆಯವರೇ. ಸುಮ್ಮನೆ ಹೇಳಿಸಿಕೊಳ್ಳುವುದ್ಯಾಕೆಂದು ಹಬ್ಬ ಗಿಬ್ಬಗಳಲ್ಲಿ ದೇವರ ಮನೇಗೇ ಬರುತ್ತಿರಲಿಲ್ಲ, ವಿಶೇಷದ ಮನೆಗೂ ಹೋಗುತ್ತಿರಲಿಲ್ಲ, ಬಾವಂದಿರ ಮಕ್ಕಳ ಮದುವೆಯಲ್ಲೂ ಮಂಟಪದ ಬಳಿ ಸುಳಿದಿರಲಿಲ್ಲ. ಇನ್ನು ಹೂವಿನ ಆಸೆಯನ್ನಂತೂ ಬಿಟ್ಟೇ ಬಿಟ್ಟಿದ್ದಳು. ಆದರೆ ಬೆಂಗಳೂರು ಊರಿನ ಏಕತಾನತೆಯಿಂದ, ಇಷ್ಟು ವರ್ಷಗಳಿಂದ ಸಿಂಬೆಯಾಗಿ ರಾಶಿ ಬಿದ್ದ ಮೌನದಿಂದ, ಎಲ್ಲ ಇದ್ದೂ ಯಾರೂ ಇಲ್ಲದಂತೆ ಕಂಗೆಡಿಸುವ ಒಂಟಿತನದಿಂದ ತಪ್ಪಿಸಿಕೊಳ್ಳುವ ದಾರಿಯಾಗುತ್ತದೆ ಎಂದಷ್ಟೇ ಅಂದುಕೊಂಡವಳಿಗೆ, ಮನೆಯಲ್ಲಿದ್ದಾಗ ತನ್ನ ಹತ್ತಿರವೂ ಸುಳಿಯದೇ ದೊಡ್ಡಪ್ಪ , ಚಿಕ್ಕಪ್ಪ, ಅಣ್ಣಂದಿರ ಜೊತೆಗೇ ಬೆಳೆದುಬಿಟ್ಟ ಪುಟ್ಟುವಿನ ಹತ್ತಿರ ಮತ್ತೆ ತಾನು ಹೋಗುವಂತೆ ಮಾಡಿದ್ದೇ ಈ ಮಾಯಾನಗರಿ ಎಂದು ಕೃತಜ್ಞತೆ ಇಟ್ಟುಕೊಂಡವಳಿಗೆ ಈ ಊರು, ಈ ಊರಿನ ಯಾವುದೋ ಬೀದಿ ತಾನು ಯಾವತ್ತೂ ಕಾಣದ ಕನಸಿನ ಬೇರೊಂದನ್ನು ಎದೆಗೆ ಇಳಿಸುತ್ತದೆಯೆಂಬ ಅಂದಾಜೂ ಇರಲಿಲ್ಲ.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾಸ್ಪರ್ಧೆ: ದ್ವಿತೀಯ ಬಹುಮಾನ ಪಡೆದ ಕಥೆ: ಅಂತಃಕರಣದ ಟಿಪ್ಪಣಿಗಳು

ಬೆಂಗಳೂರಿಗೆ ಬಂದಾಗ ಇಲ್ಲಿ ಎಲ್ಲರೂ ತನಗೆ ಅಪರಿಚಿತರೇ ತಾನೇ? ತಾನು ಹೂವು ಸೂಡಿಕೊಳ್ಳಲಿ ಬಿಡಲಿ ಯಾರ ತಕರಾರು ಇರುವುದಿಲ್ಲವಲ್ಲ ಎಂದು ಪುಟ್ಟುವಿನ ಬಳಿ ಹೂವು ತರಿಸಿಕೊಂಡು, ಫ್ರಿಜ್ಜಿನಲ್ಲಿಟ್ಟುಕೊಂಡು, ದಿನ ಅಷ್ಟಷ್ಟೇ ಹೂವುಗಳನ್ನೆತ್ತಿ ಒಂದೊಂದು ಥರದ ಮಾಲೆ ಮಾಡಿಕೊಂಡು, ಮಧ್ಯಾಹ್ನ ಪಟ್ಟಗೆ ಜಡೆ ಹಾಕಿ ಸೂಡಿಕೊಳ್ಳಲು ಶುರು ಮಾಡಿದ್ದಳು. ನಿಜ ಹೇಳಬೇಕೆಂದರೆ ಅವಳಿದ್ದ ಅಪಾರ್ಟ್ಮೆಂಟಿನ ಹಾಗೂ ಅಕ್ಕಪಕ್ಕದ ಮನೆಯ ಹೆಂಗಸರು ‘ನಿಮ್ಮ ಯಜಮಾನ್ರು?’ ಎಂದು ಕೇಳಿದಾಗ ‘ಅವರಿಲ್ಲ’ ಎನ್ನಲು ಬಾಯೇ ಬರದೇ ಅಥವಾ ಗಂಡ ಇಲ್ಲದವಳೆಂದು ಗೊತ್ತಾದರೆ ತಾನಿಷ್ಟಪಡುವ ಈ ಬೆಂಗಳೂರು ಬದಲೇ ಆಗಿಬಿಡಬಹುದೆಂಬ ಭಯಕ್ಕೋ ಏನೋ “ಯಜಮಾನ್ರು ಊರಲ್ಲಿದ್ದಾರೆ” ಎಂದುಬಿಟ್ಟಿದ್ದಳು. ಅಷ್ಟನ್ನು ಹೇಳುವುದು ಹೇಳಿ ಯಾಕಾದರೂ ಹಾಗೇ ಹೇಳಿದೆನೋ ಎಂದು ಒದ್ದಾಡಿದ್ದಳು. ಕೆಲವೊಂದನ್ನು ಹೇಳಿದ ಮೇಲೆ ಮತ್ತೆ ತಿದ್ದಲಾಗುವುದೇ ಇಲ್ಲ! ಆದರೆ ರತ್ನಾಕರ ಕೇಳಿದಾಗ ಮಾತ್ರ ನಿಜವನ್ನೇ ಹೇಳಿದ್ದಳು, ಆಗ ರತ್ನಾಕರ ಕೇಳಿದ್ದ ಪ್ರಶ್ನೆ ಶರವಾತಿಯ ಇಷ್ಟ ದಿನದ ಬದುಕನ್ನೇ ಅಲ್ಲಾಡಿಸಿಬಿಟ್ಟಿತ್ತು. ‘ನೀವ್ಯಾಕೆ ಮತ್ತೊಂದು ಮದ್ವೆ ಆಗ್ಲಿಲ್ಲ?’ ಎಂದು ಎಷ್ಟು ತಣ್ಣಗೆ, ಎಷ್ಟೊಂದು ಸಹಜವಾಗಿ, ಮತ್ತೆ ಒಂದಿಷ್ಟೂ ಕನಿಕರವಿಲ್ಲದೇ ಪೂರ್ತಿ ಕಾಳಜಿ ಮಾತ್ರದಿಂದ ಆ ಪ್ರಶ್ನೆಯೆತ್ತಿದ್ದನಲ್ಲ ಅವನು..? ಸತ್ಯ ತೀರಿ ಹೋದ ನಂತರದ ಈ ಹದಿನೆಂಟು ವರ್ಷಗಳಲ್ಲಿ ಯಾರೂ ಕೇಳದ, ಸ್ವತಃ ತನಗೇ ತಾನೂ ಕೇಳಿಕೊಳ್ಳದ ಪ್ರಶ್ನೆಯನ್ನು ರತ್ನಾಕರ ಕೇಳಿಬಿಟ್ಟಿದ್ದ. ಆದಿನ ರಾತ್ರಿ ಪೂರ ಶರಾವತಿಗೆ ರೆಪ್ಪೆಗೆ ರೆಪ್ಪೆ ಹಚ್ಚಲು ಆಗಿರಲೇ ಇಲ್ಲ. ‘ಹೌದು ತಾನ್ಯಾಕೆ ಮತ್ತೊಂದು ಮದುವೆ ಆಗಲಿಲ್ಲ?’ ಮತ್ತೆ ಮತ್ತೆ ಅದೇ ಪ್ರಶ್ನೆ ಕೇಳಿಕೊಂಡಿದ್ದಳು. ಮೊನ್ನೆ ಮೊನ್ನೆ ಪಕ್ಕದೂರಿನ ಸುಬ್ಬು ಮಾವಿನ ಮರದಿಂದ ಬಿದ್ದು ಹೋಗಿಬಿಟ್ಟಾಗ ಅವನ ಹೆಂಡತಿ ಮತ್ತೊಂದು ಮದುವೆ ಆದಳಲ್ಲ? ಅಷ್ಟೇ ಯಾಕೇ ತನ್ನ ಊರಿನ ಸುಮಾ ಕೂಡ ಮದುವೆ ಆಗಿ ಈಗ ಹುಬ್ಳಿಯಲ್ಲಿದ್ದಾಳೆ. ಗಂಡನ ಜೊತೆ ನಗುತ್ತಿರುವ ಫೊಟೋಗಳ ಸಾಲು ಸಾಲು ಸ್ಟೇಟಸನ್ನು ತಾನೇ ನೋಡುತ್ತಿರುತ್ತೇನಲ್ಲ..? ಮತ್ತೆ ತಾನ್ಯಾಕೆ? ಆಗಿನ ಕಾಲದಲ್ಲಿ ಈ ಎರಡನೆ ಮದುವೆ ಹೆಂಗಸರ ಪಾಲಿಗೆ ಚಾಲ್ತಿಯಲ್ಲಿರಲಿಲ್ಲ ಎಂದೇ..? ಯಾಕೇ? ಯಾಕೇ? ಎಂದು ಎಷ್ಟು ಕೇಳಿಕೊಂಡರೂ ಉತ್ತರವಿರಲಿಲ್ಲ., ಮತ್ತೆ ಮರುಕ್ಷಣವೇ ‘ಶೀ ಇದೆಂಥ ಮಳ್ಳು ಹಿಡತ್ತು ನಂಗೇ’ ಎಂದು ತಲೆ ಕೊಡವಿಕೊಂಡರೂ ಮನಸ್ಸಿಂದ ಆ ಪ್ರಶ್ನೆ ಹೋಗಿರಲಿಲ್ಲ.

ಬಾಳೆಹಳ್ಳಿ ಊರಿಗೆ ಶರಾವತಿ ಬಂದಿದ್ದು ಹೈಸ್ಕೂಲಿಗೆ ಹೋಗಲಿಕ್ಕಾಗಿತ್ತು. ಮನೆಯಲ್ಲಷ್ಟೇನೂ ಅನುಕೂಲವಿಲ್ಲದ ಕಾರಣ ಯಾರ್ಯಾರದ್ದೋ ಪರಿಚಯದಿಂದಾಗಿ ಇಷ್ಟು ದೂರದ ಊರಿಗೆ ಬಂದು ಮಾಬಲಣ್ಣನ ಮನೆಯಲ್ಲಿ ಉಳಿದು ಹೈಸ್ಕೂಲಿಗೆ ಹೋಗುತ್ತಿದ್ದಾಗ ಅದೇ ಊರಿನ ಸತ್ಯನ ಪರಿಚಯವಾಗಿ ಪ್ರೀತಿಯೂ ಆಗಿತ್ತು. ಊರಿನ ಹುಡುಗರ ಜೊತೆ ಲಗೋರಿ ಆಡುತ್ತ, ಹುಣಸೇಹಣ್ಣಿನ ಕಟ್ಟಮಿಟ್ಟ ಮಾಡಿ ಹೊಳೆಯಂಚಲ್ಲಿ ಕೂತು ತಿನ್ನುತ್ತ, ಶಾಲೆಗೆ ಹೋಗಿ ಬರುತ್ತಿದ್ದ ಶರಾವತಿಗೆ ಹೈಸ್ಕೂಲು ಮುಗಿಯುತ್ತಿದ್ದಂತೆಯೇ ಸತ್ಯನೊಟ್ಟಿಗೆ ಮದುವೆ ಮಾಡಿದ್ದರು. ನಾಲ್ಕು ಅಣ್ಣ ತಮ್ಮಂದಿರ ದೊಡ್ಡ ಕುಟುಂಬದಲ್ಲಿ ಶರಾವತಿ ಚಿಕ್ಕವಳೇ ಆದರೂ ಮನೆ ಕೆಲಸಗಳನ್ನೆಲ್ಲ ಕಲಿತು, ಹೊಂದುಕೊಂಡಿದ್ದಳು. ಅಡಕೆ ಸುಲಿಯುವುದನ್ನೂ ಕಲಿತಳು, ಸಂಜೆ ಹೊತ್ತಿಗೆ ಅಕ್ಕಪಕ್ಕದ ಮನೆಯವರೊಟ್ಟಿಗೆ ಚೌಕಾಬಾರ ಆಡುವಾಗ ಅವಳದ್ದೇ ಮೊದಲು ಪಟ್ಟ ಆಗುತ್ತಿತ್ತು, ಇನ್ನು ವೀಶೆಷಗಳಲ್ಲಿ ಇಸ್ಪೀಟು ಮಂಡಲವಿದ್ದಾಗ ದೊಡ್ಡ ಭಾವ ಕವಳ ತುಪ್ಪಿ ಬರಲು ಎದ್ದಾಗ ಅವನ ಕೈ ತಗೊಂಡು ಇಸ್ಪೀಟಿನ ಒಂದಾಟವನ್ನೂ ಆಡಿಬಿಡುತ್ತಿದ್ದಳು. ಅವಳದ್ದು ಚಿಕ್ಕ ವಯಸ್ಸಾಗಿದ್ದರಿಂದ ಅವಳು ಎಲ್ಲರಿಗೂ ಮಗಳಂತೆ ಇದ್ದಳು. ಸತ್ಯನೂ ಸಿಕ್ಕಾಪಟ್ಟೆ ಪ್ರೀತಿಸುತ್ತಿದ್ದ. ಶರು ಎಂದು ತೊಡೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಬಾಣಂತನವೂ ಗಂಡನ ಮನೆಯಲ್ಲೇ ಆಗಿತ್ತು. ಆದರೆ ಬೈಕಿನಿಂದ ಬಿದ್ದು ಸತ್ಯ ಸತ್ತು ಹೋದ ಮೇಲೇ ಎಲ್ಲ ಬದಲಾಗಿಹೋಯಿತು. ಅವಳ ಜೊತೆ ಮನೆಯ ಭಾವ ಮೈದುನರು, ಊರಿನ ಗಂಡಸರು ಗಂಡ ಸತ್ತವಳ ಜೊತೆ ಸಲುಗೆಯಿಂದ ಮಾತಾಡಿದರೆ ಬೇರೆ ನಮೂನೇಯ ಹೆಸರು ಬೀಳುತ್ತದೆಯೆಂದು ಮೊದಲಿನಂತೆ ಮಾತಾಡುವುದನ್ನೇ ಬಿಟ್ಟುಬಿಟ್ಟರು. ಆ ಬದಲಾವಣೆಗೆ ಹೊಂದಿಕೊಳ್ಳಲು ಸುಮಾರು ದಿನಗಳೇ ಬೇಕಾಯ್ತು ಅವಳಿಗೆ. ಯಾವ ಗಂಡಸರ ಜೊತೆಯೂ ಮುಖಕ್ಕೆ ಮುಖ ಕೊಟ್ಟು ಎರಡಕ್ಕಿಂತ ಹೆಚ್ಚು ಮಾತಾಡುವಾಗ ಯಾರು ಏನಂದುಕೊಳ್ಳುವರೋ ಎಂದು ಯೋಚಿಸಬೇಕಾದ ಸ್ಥಿತಿ ಅವಳಿಗೆ ಅರಿವಿಲ್ಲದೇ ಏರ್ಪಾಡಾಗಿತ್ತು. ಆದರೆ ರತ್ನಾಕರನ ಜೊತೆ ಹೇಗೇ ಮಾತಿಗಿಳಿದೆ..? ಯೋಚಿಸುತ್ತಿದ್ದಳು. ಗಾಯತ್ರಿ ಬಿಟ್ಟು ಹೋಗಿದಕ್ಕೇ ರತ್ನಾಕರನ ಮೇಲೇ ಮಮತೆಯೇ..? ಅಥವಾ ತಾನು ಇನ್ನೊಂದು ಮದುವೆ ಆಗಬಹುದಿತ್ತು ಎಂಬ ಹೊಸ ಹೊಳಹು ಹುಟ್ಟುಹಾಕಿದ್ದಕ್ಕೇ ಅವನು ವಿಶೇಷ ಎನಿಸಿದನೇ? ಅಥವಾ ಕಾರಣವೇ ಇಲ್ಲದ ಸೆಳೆತವೊಂದು ಅವನನ್ನು ನೋಡಿದಾಗಿನಿಂದ ಇದೆಯೇ? ಉತ್ತರ ಸಿಕ್ಕಿರಲಿಲ್ಲ.

ಇದನ್ನೂ ಓದಿ: ವಿಸ್ತಾರ ಯುಗಾದಿ ಕಥಾ ಸ್ಪರ್ಧೆ: ಪ್ರಥಮ ಬಹುಮಾನ 55,000 ರೂ. ಪಡೆದ ಕಥೆ: ಸೋಮನ ಕುಣಿತ

ಒಮ್ಮೆ ರತ್ನಾಕರನ ಜೊತೆ ನಡೆಯುತ್ತಿದ್ದಾಗ ರಸ್ತೆಯಲ್ಲಿ ಬಿದ್ದ ತಿಳಿ ಗುಲಾಬಿಯ ಹೂವೊಂದನ್ನು ಶರವಾತಿಯ ಕೈಲಿಡುತ್ತಾ ‘ಈ ಹೂವು ರಾಶಿ ರಾಶಿ ಬಿದ್ದಿದೆ ನೋಡಿ, ಬೇಕಿದ್ರೆ ಮಾಲೆ ಮಾಡ್ಕೊಂಡು ಮುಡ್ಕೊಳಿ’ ಎಂದು ಅವಳ ಹೂವಿನ ಮಳ್ಳನ್ನು ಆಡಿಕೊಂಡು ನಕ್ಕಿದ್ದ. ಅವನು ಮಾಡಿದ್ದು ತಮಾಶೆಯೇ ಆದರೂ ಸತ್ಯ ಹೋದ ಮೇಲೇ ಅವಳ ಕೈಗೊಬ್ಬರು ಹೂವು ಕೊಟ್ಟು ಮುಡಿದುಕೋ ಎಂದಿದ್ದು ಅದೇ ಮೊದಲಾಗಿತ್ತು. ಬಣ್ಣ ಬಿಟ್ಟು ತುಸು ಹಳಸಿದಂತೆ ಕಾಣುವ, ಗಟ್ಟಿ ಮುಟ್ಟಿದರೆ ಹಿಸಿದು ಹೋಗುವಷ್ಟು ಮೆತ್ತಗಿದ್ದ ಆ ಹೂವನ್ನು ಪ್ರೀತಿಯಿಂದ ನೋಡುತ್ತಾ ‘ಇದೆಂತ ಹೂವು’ ಎಂದು ಕೇಳಿದ್ದಳು. ಬೆಂಗಳೂರಿನ ಎಲ್ಲ ಬೀದಿಯಲ್ಲೂ ಗೊಂಚಲು ಗೊಂಚಲಾಗಿ ಹುಚ್ಚಂಪರಿ ಅರಳಿದ್ದ ಆ ಹೂಗಳನ್ನು ದಿನವೂ ನೋಡುತ್ತಿದ್ದರೂ ಅದರ ಹೆಸರೇನೆಂದು ಗೊತ್ತಿರಲಿಲ್ಲ ಅವಳಿಗೆ. ‘ಪಿಂಕ್ ಟ್ರಂಪೆಟ್’ ಎಂದಿದ್ದ ರತ್ನಾಕರ. ‘ನಂಗೆ ಇಂಥ ಹೆಸರೆಲ್ಲ ನೆನಪಿರಲ್ಲ’ ಎಂದು ಅವಳಂದಾಗ, ‘ತಬೆಬುಯಾ ಅಂತ ಇನ್ನೊಂದು ಹೆಸರಿದೆ ಆದ್ರೆ ಪಿಂಕ್ ಟ್ರಂಪೆಟ್ ನೆನಪಿಟ್ಕೊಳೋದೇ ಈಸಿ’ ಎಂದಿದ್ದ. ಆದರೆ ಶರವಾತಿಗೆ ಆ ಹೆಸರನ್ನು ನೆನಪಿಟ್ಟುಕೊಳ್ಳಲು ಹೆಚ್ಚು ಕಷ್ಟಪಡಬೇಕಾಗೇ ಇರಲಿಲ್ಲ. ಎಷ್ಟೋ ವರ್ಷಗಳ ಮೇಲೆ ಅವಳಿಗೊಬ್ಬರು ಹೀಗೇ ಆಪ್ತವಾಗಿ ಹೂವು ಕೊಟ್ಟಿದ್ದು, ಅದರಲ್ಲೂ ರತ್ನಾಕರ, ಅದರಲ್ಲೂ ಮುಡಿದುಕೋ ಎಂದು ಹೇಳುತ್ತ ಕೊಟ್ಟಿದ್ದು ಒಂದು ಅಪರೂಪದ ನೆನಪೇ ಆಗಿತ್ತು. ಅವಳ ಉಸಿರಿರುವಷ್ಟು ದಿನವೂ ಆ ಕ್ಷಣ ನೆನಪಿನಲ್ಲಿರುವಲ್ಲಿ ಅನುಮಾನವೇ ಇರಲಿಲ್ಲ. ಆ ಹೂವನ್ನು ರತ್ನಾಕರನಿಂದ ತಂದುಕೊಂಡಿದ್ದ ಕಾದಂಬರಿಯ ಪುಟದ ನಡುವಲ್ಲೇ ಇಟ್ಟಿದ್ದಳು. ಕಾದಂಬರಿಯನ್ನು ಓದಿ ಮುಗಿಸಿದ್ದರೂ, ದಿನಕ್ಕೊಮ್ಮೆಯಾದರೂ ಆ ಹೂವನ್ನು ನೋಡಿ ಸವರಿ ಪುಳಕಗೊಳ್ಳುವುದು ಮುಗಿಯಲಿಲ್ಲ. ಅವಳ ಜೊತೆ ಆ ಕಾದಂಬರಿ ಆ ಹೂವಿನ ಸಮೇತವಾಗಿ ಊರಿಗೂ ಹೋಗಿತ್ತು. ಭರ್ತಿ ಎಂಟು ತಿಂಗಳುಗಳ ಕಾಲ ಊರಿನಲ್ಲೇ ಮೆತ್ತಿನ ಕೋಣೆಯ ಕಪಾಟಿನ ಮೇಲ್ಬದಿಗೆ ತಣ್ಣಗಿತ್ತು.

ಪುಟ್ಟುವಿಗೆ ಫೋನು ಮಡಿದಾಗಲೆಲ್ಲ ‘ಗಾಯತ್ರಿ ವಾಪಾಸ್ ಬಂದ್ರಾ?’ ಎಂದು ಕೇಳುತ್ತಿದ್ದಳು. ‘ನಂಗೆಂತ ಗೊತ್ತಿದ್ದೆ ಅಮಾ?’ ಎಂದು ಪುಟ್ಟು ಅಲವತ್ತುಕೊಳ್ಳುತ್ತಿದ್ದರೆ ರತ್ನಾಕರನ ನಂಬರೂ ತನ್ನ ಬಳಿ ಇಲ್ಲವಲ್ಲ ಎಂದು ಹಳಹಳಿಸಿದ್ದಳು. ರತ್ನಾಕರನಿಗೂ ತಾನು ನೆನಪಾಗುತ್ತಿದ್ದರೆ ಗಾಯತ್ರಿ ಬಳಿ ನಂಬರ್ ತಗೊಂಡು ಫೋನ್ ಮಾಡಬಹುದಿತ್ತಲ್ಲ ಎಂದೂ ಅನಿಸುತ್ತಿತ್ತು. ಆದರೆ ಇದೆಲ್ಲದರ ಮಧ್ಯೆ ಒಂದಂತೂ ಖಾತ್ರಿಯಾಗಿತ್ತು, ತಾನು ರತ್ನಾಕರನನ್ನು ಇಷ್ಟಪಡುತ್ತಿದ್ದೇನೆ ಎಂಬುದು. ಇಷ್ಟ ಎಂದರೆ.. ಮದುವೆಯಾಗುವುದೇ? ಅಥವಾ ಇಷ್ಟ ಎಂದು ಹೇಳಿಕೊಳ್ಳುವುದೆ? ಹೇಳಿಕೊಳ್ಳದೇ ಸುಮ್ಮನಿರುವುದೇ? ಏನೂ ಈ ಇಷ್ಟ ಎಂದರೆ? ಬೆಳಗಿನ ಹೂ ಬಿಸಿಲಲ್ಲಿ ಅಟ್ಟ ಹತ್ತಿ, ಕಾಟನ್ನು ಸೀರೆ ಹಾಸಿ, ಕಾಳು ಬೇಳೆಗಳನ್ನು ಹರವುತ್ತಿದ್ದಾಗ ಅವನು ಎದುರಿಗೆ ಬಂದು ಕೂತಂತೆ ಭಾಸವಾಗುವುದೇ? ಹೊಳೆಯ ಮುರ್ಕಿಯಲಿ ಪೇಟೆಗೆ ಹೋಗಲು ಬಸ್ಸು ಕಾಯುತ್ತ ನಿಂತಾಗ ಅವನ ದನಿ ಕೇಳಿದಂತೆ ಬೆಚ್ಚಿ ತಿರುಗುವುದೇ? ದೊಡ್ಡ ಬ್ಯಾಣದ ಕಡೆ ಹೋದಾಗೆಲ್ಲ ಸತ್ಯನನ್ನು ಸುಟ್ಟ ಜಾಗ ಕಾಣುತ್ತಿದ್ದಂತೆ ನಿನ್ನೆಗಳಲ್ಲಿ ಮನಸ್ಸನ್ನು ಅದ್ದಿ ಹಿಂಡಲು ರತ್ನಾಕರನ ನೆನಪು ಬಿಡದಿರುವದೇ? ಏನು ಈ ಇಷ್ಟ ಎಂದರೆ? ಗೊತ್ತಿರಲಿಲ್ಲ. ಆದರೂ ಇಷ್ಟ ಅಷ್ಟೇ! ಅವನಿಂದ ದೂರವಿದ್ದಾಗ ಮನಸ್ಸು ಭಾರ, ಹತ್ತಿರದಲ್ಲಿದ್ದರೆ ಏನೋ ಹಿತ, ಅವನು ಪಕ್ಕದಲ್ಲಿ ನಡೆಯುವಾಗ ಒಂದು ಧೈರ್ಯ. ಅವನ ಅಸ್ಥವ್ಯಸ್ಥದ ಬದುಕಿನಲ್ಲಿ ತಾನೂ ಒಂದು ವಸ್ತುವಿನಂತೆ ಕಳೆದು ಹೋಗದೇ, ಆತನ ಹರಗಾಣವನ್ನೆಲ್ಲ ಪಟ್ಟಗಿಡುತ್ತ, ಅವನ ಆಲಸ್ಯವನ್ನು ಬೈಯ್ಯುತ್ತ, ಅವನು ಸುತ್ತುವ ಊರುಗಳಿಗೆ ಸಾಥಿಯಾಗುತ್ತ ಉಳಿದ ಬದುಕನ್ನು ಪ್ರೀತಿಯಿಂದ ಅವನಿಗಾಗಿ ಬದುಕಿಬಿಡಬೇಕಂಬ ಆಸೆ. ಅವಳಲ್ಲಿ ಇಷ್ಟವೆಂಬುದುಕ್ಕೆ ಇರುವ ವ್ಯಾಖ್ಯಾನ ಇದೇ! ತಾನ್ಯಾಕೆ ರತ್ನಾಕರನನ್ನು ಮದುವೆ ಆಗಬಾರದು ಎಂಬ ತಿಳಿ ಯೋಚನೆಯೊಂದು ನಿಧಾನಕ್ಕೆ ಇದರೊಟ್ಟಿಗೆ ಸೇರಿಕೊಂಡಿತು. ಆದರದು ಗಟ್ಟಿಯಾದ ನಿರ್ಧಾರವಾಗಲು ಹೆಚ್ಚು ದಿನ ಹಿಡಿಯಲಿಲ್ಲ. ಮತ್ತೆ ಇದೆಲ್ಲ ಅವಳಂದುಕೊಂಡಷ್ಟೇನು ಸಸಾರವಲ್ಲ ಎಂಬುದರ ಅರಿವೂ ಇತ್ತು. ಗಂಡ ಇಲ್ಲದೇ ಹದಿನೆಂಟು ವರ್ಷ ಕಳೆದವಳಿಗೆ ಈಗೇನಾಯಿತ್ತಪ್ಪ ಎಂದು ಊರು ಮಾತಾಡಿಕೊಳ್ಳುತ್ತದೆ. ಬೆಂಗಳೂರೆಂದು ಕುಣಿಯುವುದೇ ಇದಕ್ಕಾಗಿ ಎಂಬವರೆಗೂ ಹೋಗಿ ಮುಟ್ಟುತ್ತದೆ. ರಸ್ತೆಯ ಒಂದು ತುದಿಯಲ್ಲಿ ತಾನು ಇನ್ನೊಂದು ತುದಿಯಲ್ಲಿ ಅವನು ನಡೆದ ನಿಶ್ಕಲ್ಮಶ ಹೆಜ್ಜೆಗಳನ್ನು ಯಾರಿಗೆ ತೋರಿಸಿ ಅರ್ಥ ಮಾಡಿಸುವುದು? ಮನೆಯವರಿಗಾದರೂ ಅರ್ಥವಾಗಬಹುದೆ? ಇನ್ನು ಅಪ್ಪನ ಮನೆಯವರ ಪ್ರತಿಕ್ರಿಯೆ ಏನಿರಬಹುದು? ಮುಖ್ಯವಾಗಿ ಪುಟ್ಟು ಇದನ್ನು ಹೇಗೇ ತೆಗೆದುಕೊಳ್ಳಬಹುದು? ಇನ್ನೊಂದೆರಡು ವರ್ಷಗಳುರುಳಿದರೆ ಅವನೇ ಮದುವೆಗೆ ಬರುತ್ತಾನೆ, ಈಗ ತಾನು ಮದುವೆ ಆಗುವುದೆ? ಹೀಗೇ ಸಾವಿರ ಪ್ರಶ್ನೆಗಳು. ರತ್ನಾಕರನ ಮಗ್ಗುಲಿಗೆ ಹೊರಳಿದರೆ ಅವನಿಗೆ ತಾನಿಷ್ಟವೋ ಇಲ್ಲವೋ ಎಂಬುದೇ ಖಾತ್ರಿಯಿಲ್ಲ. ಜೊತೆಗೆ ಗಾಯತ್ರಿ ಅವನು ಈಗ ಒಟ್ಟಾಗಿದ್ದರೆ ಎಂಬ ಭಯ ಬೇರೆ.. ಒಂದೊಂದು ಸಲ ತನ್ನ ಯೋಚನೆಯೇ ತಪ್ಪು ಎನಿಸಿ ಶರಾವತಿ ರತ್ನಾಕರನನ್ನು ಮರೆಯಲು ಯತ್ನಿಸಿದ್ದೂ ಇದೆ, ಆದರೆ ಮುರಿದು ಹೋದ ಪ್ರೀತಿಗಿಂತ, ಮರೆಯಬೇಕಾದ ಪ್ರೀತಿಗಿಂತ, ನಿವೇದಿಸಿಕೊಳ್ಳದ ಪ್ರೀತಿಯೇ ಹೆಚ್ಚು ನೋವು ಕೊಡುವುದು, ಭಾರ ಎನಿಸುವುದು, ಒಪ್ಪಲಿ ಬಿಡಲಿ ಹೇಳಿಕೊಂಡು ಬಿಡಬೇಕೆಂಬ ಹುಂಬು ಧೈರ್ಯ ಕೊಡುವುದು. ಏನಾದರಾಗಲಿ ಈ ಸಲ ಬೆಂಗಳೂರಿಗೆ ಹೋದಾಗ ರತ್ನಾಕರನ ಬಳಿ ಇದನ್ನು ಹೇಳಿಕೊಳ್ಳಲೇಬೇಕೆಂದು ನಿರ್ಧರಿಸಿದ್ದಳು.

ಒಂದಿನ ಅಡಕೆ ಸುಲಿಯುತ್ತಿದ್ದಾಗ ನೇತ್ರಳಿಗೆ ಹೇಳಿದಳು “ನೇತ್ರಾ ಯಾವತ್ತೂ ಕನ್ಸಲ್ ಬರ್ದೇ ಹೋಗಿದ್ ಸತ್ಯ ಹೆಗಡ್ರು ಮೊನ್ನೆ ಕನಸಲ್ ಬಂದ್ರು ಮಾರಾಯ್ತಿ, ಒಂಥರ ಹೆದ್ರಕೆ ಆಗೋತು.’ ನೇತ್ರಳಿಗೆ ಏನು ಹೇಳಬೇಕೋ ತೋಚದೆ ‘ಅಮ್ಮ ಹಂಗಿದ್ ಕನಸೆಲ್ಲ ಬೀಳ್ತಾ ಇರ್ತೈತಿ ಬಿಡ್ರೀ’ ಎಂದು ಅದನ್ನು ಸಹಜವಾಗಿ ತೆಗೆದುಕೊಳ್ಳುವಂತೆ ಮಾಡಲು ನೋಡಿದ್ದಳು. ಆದರೆ ಕುರ್ಚಿ ಕಟ್ಟಿಲ ಮೇಲೇ ಸತ್ಯ ಕುಳಿತ ಹಾಗೇ, ತನ್ನನ್ನೇ ಎವೆಯಿಕ್ಕದೇ ನೋಡಿದ ಹಾಗೇ ಬಿದ್ದ ಆ ವಿಚಿತ್ರ ಕನಸನ್ನು ನೆನೆಸಿಕೊಂಡಾಗಲೆಲ್ಲ ಶರಾವತಿಗೆ ನಡುಕ ಬರುತ್ತಿತ್ತು. ರತ್ನಾಕರನ ಕುರಿತು ತಾನು ಯೋಚಿಸುತ್ತಿರುವುದಕ್ಕೇ ಸತ್ಯ ಕನಸಲ್ಲಿ ಬಂದಿದ್ದು ಎನಿಸುತ್ತಿತ್ತು. ಇಷ್ಟು ವರ್ಷಗಳಲ್ಲಿ ಎಷ್ಟೇ ಹಂಬಲು ಮಾಡಿಕೊಂಡರೂ ಸತ್ಯನ ಮುಖ ಸರಿಯಾಗಿ ಕಣ್ಮುಂದೆ ಬರುತ್ತಿರಲಿಲ್ಲ. ಹೆಬ್ಬಾಗಿಲಿನ ಗೋಡೆಗಿದ್ದ ಅವನ ಫೋಟೋ ನಿಧಾನಕ್ಕೆ ಜಗುಲಿಗೆ ಸರಿದು, ಅಲ್ಲಿಂದ ಮೆತ್ತಿಗೆ ಸೇರಿ ಅಲ್ಲಿಂದ ಶರಾವತಿಯ ಕೋಣೆಯ ನಾಗಂದಿಗೆಯ ಪಾಲಾದಲಾಗಾಯ್ತು ದಿನ ಅವನನ್ನು ನೋಡುವುದೇ ಇರುತ್ತಿರಲಿಲ್ಲ, ಎಲ್ಲಾದರೂ ಕೋಣೆ ಚೊಕ್ಕ ಮಾಡುವಾಗ ಧೂಳು ಕೊಡವಿ ಇಡುತ್ತಿದ್ದಳಷ್ಟೆ. ಕಡೆ ಕಡೆಗೆ ಅದಕ್ಕೆ ಸುರುಳಿ ಸುರಿಳಿಯಾಗಿ ಹುಳ ಹಿಡಿದು ಸತ್ಯನ ಮುಖವೇ ಕಾಣದಂತಾಗಿತ್ತು. ಆದರೆ ಕನಸ್ಸಿನಲ್ಲಿ ಮಾತ್ರ ಎಷ್ಟು ನಿಚ್ಚಳವಾಗಿ ಸತ್ಯ ಕಾಣಿಸಿದ್ದನಲ್ಲ..! ಮತ್ತೆ ನೇತ್ರಳನ್ನು ಕೇಳಿಯೇ ಬಿಟ್ಟಳು ‘ನೀನೆಂತಕ್ಕೆ ಶಂಕ್ರ ಸತ್ತೋದ್ಮೇಲೆ ಇನ್ನೊಂದ್ ಮದ್ವೆ ಆಗ್ಲಿಲ್ಲ’ ಎಂದು. ’ಮಳ್ಳನ್ರ ಅಮಾ?’ ಎನ್ನುತ್ತ ದೊಡ್ಡ ನಗೆಯಾಡಿ ನೇತ್ರ ಮತ್ತೆಲ್ಲೋ ನೋಡಿದ್ದಳು. ತಾನು ಹಾಗೆ ಕೇಳಬಾರದಿತ್ತು ಎಂದು ಆಮೇಲೆ ಅನ್ನಿಸಿತ್ತು ಶರವಾತಿಗೆ. ತನ್ನಂತೆ ನೇತ್ರಳ ಎದೆಯೊಳಗೂ ಒಂದು ಬಿರುಗಾಳಿ ಹುಟ್ಟಿದರೆ ಎಂಬ ಭಯವೂ ಆಯಿತು.

ಶರಾವತಿಗೆ ಕೊಂಚ ಬಿಡುವಾಗುವುದೇ ಕೊನೆಕೊಯ್ಲು ಮುಗಿದ ಮೇಲೇ. ಆದರೆ ಅಟ್ಟದ ಮೇಲೆ ಅಡಕೆ ಇರುವಷ್ಟು ದಿನ ಎಲ್ಲಿಗೂ ಹೋಗಲಾಗುತ್ತಿರಲಿಲ್ಲ. ಭಾವಂದಿರು ಮತ್ತವರ ಮಕ್ಕಳೆಲ್ಲ ಆಲೆಮನೆಯತ್ತ ನಡೆದರೆ ಅಟ್ಟದ ಮೇಲಿನ ಅಡಕೆ ಒಬ್ಬಳಿಸುವ ಪಾಳಿ ಶರಾವತಿಯದೇ. ಆದರೂ ಇದೆಲ್ಲ ಮುಗಿದು ಯಾವತ್ತು ಬೆಂಗಳೂರಿಗೆ ಹೋಗುತ್ತೆನೋ ಎಂದು ಅವಳಿಗೂ ಅನಿಸುತ್ತಿತ್ತು. ಪುಟ್ಟುವೂ ಕರೆಯುತ್ತಿದ್ದ. ಫೆಬ್ರುವರಿ ಮೊದಲ ವಾರದಲ್ಲಿದ್ದ ಮಾವನ ಶ್ರಾದ್ಧ ಮುಗಿಸಿ ಕಡೆಗೂ ಬೆಂಗಳೂರಿನ ಬಸ್ಸು ಹತ್ತಿದ್ದಳು. ಹೋಗುವಾಗ ದೊಡ್ಡಕ್ಕ ‘ಈ ಸಲ ಚಾಲಿ ನಾವೇ ಸುಲ್ಯದಡ ಶರು’ ಎಂದಿದ್ದರ ಅರ್ಥ ಈ ಸಲ ಅವಳು ಮೂರ್ನಾಲ್ಕು ತಿಂಗಳುಗಳೆಲ್ಲ ಅಲ್ಲೇ ಉಳಿಯಬಾರದು ಎಂಬುದಾಗಿತ್ತು, ಅದು ಶರಾವತಿಗೂ ಗೊತ್ತಿತ್ತು.

ಬೆಂಗಳೂರಿಗೆ ಬರುತ್ತಿದ್ದಂತೆ ಮತ್ತದೆ ಅವಳಿಷ್ಟದ ದಿನಚರಿ. ಪುಟ್ಟುವನ್ನು ಆಫೀಸಿಗೆ ಕಳುಹಿಸುವ ಗಡಿಬಿಡಿಯ ಬೆಳಗುಗಳು, ಹೂವಿನ ಪರಿಮಳದ ಮಧ್ಯಾಹ್ನಗಳು, ಪಿಂಕ್ ಟ್ರಂಪೆಟ್ ಮರಗಳ ನೆರಳಲ್ಲಿ ಏನೇನೋ ಕತೆ ಹೇಳುತ್ತ ರತ್ನಾಕರನ ಜೊತೆ ಕಳೆವ ವಾಕಿಂಗಿನ ಸಂಜೆಗಳು, ಅವನ ಬಳಿ ಹೇಳುವುದೋ ಬೇಡವೋ ಎಂಬ ಜಿಜ್ಞಾಸೆಯ ರಾತ್ರಿಗಳು ಒಂದಕ್ಕೊಂದು ಖೋ ಕೊಟ್ಟು ಓಡುತ್ತಿದ್ದವು. ಬೆಂಗಳೂರಿಗೆ ಬಂದ ದಿನವೇ ರತ್ನಾಕರನ ಬಳಿ ‘ಗಾಯತ್ರಿಯವ್ರು..?’ ಎಂದು ಕೇಳಿದ್ದಕ್ಕೆ ‘ಮತ್ತೆ ಬರೋ ಆಲೋಚನೇಲಿ ಇಲ್ಲ, ಮೂರ್ನಾಲ್ಕು ಸಲ ಹೋಗಿ ಕರ್ದಿದ್ದಾಯ್ತು’ ಎಂದಿದ್ದ. ಪಾಪ ಅನ್ನಿಸಿದರೂ ಒಳಗೊಳಗೆ ಶರಾವತಿಗೆ ಖುಷಿಯೂ ಆಗಿತ್ತು ಎನ್ನದಿದ್ದರೆ ತಪ್ಪಾಗುತ್ತದೆ. ಮತ್ತಿದರಿಂದ ಅವನ ಬಳಿ ಎರಡನೇ ಮದುವೆ ಬಗ್ಗೆ ಕೇಳುವ ಧೈರ್ಯವೂ ಹೆಚ್ಚಾಗಿತ್ತು. ಒಂದಿನ ಅವಳ ಬಳಿ ಉಳಿದು ಹೋಗಿದ್ದ ಅವನ ಕಾದಂಬರಿಯನ್ನು ಮನೆಗೇ ಹೋಗಿ ಕೊಟ್ಟು ಬಂದಿದ್ದಳು. ‘ಶರಾವತಿ ರತ್ನಾಕರನನ್ನು ಸೇರಬಹುದಾ? ತನ್ನದೆಲ್ಲವನ್ನೂ ಬಗಲಲ್ಲಿ ಅವುಚಿಕೊಂಡೇ ಹರಿಯುತ್ತಾ.. ಅವನದೆಲ್ಲವನ್ನೂ ಇದ್ದಂತೇ ಒಪ್ಪಿಕೊಳ್ಳುತ್ತಾ.. ಶರಾವತಿ ರತ್ನಾಕರನನ್ನು ಸೇರಬಹುದಾ?’ ಎಂದು ಹಾಳೆಯೊಂದರಲ್ಲಿ ಬರೆದು ಅದರಲ್ಲಿಟ್ಟುಬಿಟ್ಟಿದ್ದಳು. ಅದೇ ಕಾದಂಬರಿಯಲ್ಲಿ ಬೆಚ್ಚಗಿದ್ದ ರತ್ನಾಕರನೇ ಕೊಟ್ಟ ಒಣಗಿದ ಪಿಂಕ್ ಟ್ರಂಪೆಟ್ ಹೂವಿಗೆ ಆ ಸಾಲುಗಳನ್ನೋದಿ ಬಣ್ಣ ಬಂದಿತ್ತೇ? ಗೊತ್ತಿಲ್ಲ. ಶೆಲ್ಫಿನಲ್ಲಿಡಲು ಹೋದಾಗ ಪತ್ರ ಸಿಗುತ್ತದೆ, ಓದುತ್ತಾನೆ ಎಂದು ಅಂದಾಜಿಸಿದ್ದ ಶರಾವತಿ ಓದಿ ಏನೂ ಹೇಳುತ್ತಾನೋ ಎಂಬ ಪುಕಪುಕಿಯಲ್ಲಿದ್ದಳು. ಆದರೆ ಮರುದಿನ ಸಿಕ್ಕಾಗ ಒಮ್ಮೆಯೂ ಪತ್ರದ ಪ್ರಸ್ತಾಪವೇ ಬರಲಿಲ್ಲ. ಆದರೂ ಶರಾವತಿ ಮಾತ್ರ ಕಾಯುತ್ತಲೇ ಇದ್ದಳು. ಮಧ್ಯೆ ಮಧ್ಯೆ ಗಾಯತ್ರಿಯ ವಿಷಯ ಬಂದಾಗಲೆಲ್ಲ ಶರಾವತಿ ಮಾತೇ ಆಡುತ್ತಿರಲಿಲ್ಲ. ಒಂದಷ್ಟು ದಿನ ಕಳೆದ ಮೇಲೆ ಸ್ವಪ್ನ ಬುಕ್ ಹೌಸಿಗೆ ಕರೆದುಕೊಂಡು ಹೋಗಿ ಆತ ಪುಸ್ತಕಗಳನ್ನು ಕೊಳ್ಳುತ್ತಿದ್ದಾಗ ಹುಚ್ಚು ಧೈರ್ಯ ಮಾಡಿ ಕೇಳಿಬಿಟ್ಟಳು ‘ನೀವು ಇನ್ನೊಂದ್ ಮದ್ವೆ ಆಗುದಿಲ್ವಾ?’ ಎಂದು. ಅವನೇ ಹಾಗೆ ತಣ್ಣಗೆ ಪ್ರಶ್ನೆ ಕೇಳಲು ಕಲಿಸಿಕೊಟ್ಟಿದ್ದು, ಮತ್ತು ನೇತ್ರಳ ಬಳಿ ಇದೇ ರೀತಿ ಪ್ರಶ್ನಿಸಿ ತಾಲೀಮೂ ಆಗಿದ್ದರಿಂದ ಹಿಂಜರಿಕೆಯಿಲ್ಲದೆ ಕೇಳಿದ್ದಳು. ರತ್ನಾಕರ ಒಂದಷ್ಟು ಕ್ಷಣ ಮೌನವಾಗಿದ್ದು ಕಡೆಗೆ ‘ಅಯ್ಯೋ ಒಂದ್ ಮದ್ವೆ ಸಾಕಾಗಿದೆ’ ಎಂದು ನಕ್ಕಿದ್ದ. ಅವನು ಹೀಗೆಯೇ ಎಲ್ಲ ಮಾತಿಗೂ ನಗುವನ್ನು ಅಂಟಿಸುತ್ತಾನೆ. ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಲೇ ಮಾತಾಡುತ್ತಾನೆ. ಆದರೆ ಒಂದಷ್ಟು ಸೆಕೆಂಡು ಮೌನವಾಗಿದ್ದನಲ್ಲ? ಮುಖಕ್ಕೆ ಮುಖ ಕೊಡದೆ ಉತ್ತರಿಸಿದನಲ್ಲ? ಬೇರೆ ಕಾರಣವೇನಾದರೂ ಇರಬಹುದೆ? ಅದು ತಾನೇ? ಎಂದು ಹುಡುಕಾಡಿದ್ದಳು. ಆದರೆ ‘ಈ ಆಥರ್ ಬುಕ್ಕು ಗಾಯತ್ರಿಗಿಷ್ಟ, ಈ ಪೆನ್ನುಗಳು ಅವಳಿಗೆ ಮಂಡಲ ಬಿಡ್ಸೋಕೆ ಬೇಕಾಗತ್ತೆ’ ಎಂದು ಒಂದು ರಾಶಿ ಪೆನ್ನು ಪುಸ್ತಕಗಳನ್ನು ಕೊಂಡು ಕಾರಿಗೆ ಆತ ತುಂಬುತ್ತಿದ್ದರೆ ಈ ಇವುಗಳ ರಾಶಿಯಲ್ಲಿ ತನ್ನ ಪತ್ರವಿರುವ ಕಾದಂಬದರಿ ಕಳೆದು ಹೋಗುವ ಭಯವಾಯಿತು ಶರಾವತಿಗೆ. ತಾನೇ ದುಡುಕಿಬಿಟ್ಟೆ ಎನಿಸುತ್ತಿತ್ತು. ಅವರ ಮನೆಗೆ ಹೋಗಿ ಆ ಪುಸ್ತಕದಲ್ಲಿರುವ ಪತ್ರವನ್ನು ವಾಪಾಸು ತಂದುಬಿಡಲೇ? ಎನಿಸಿದರೂ ಇನ್ನೊಂದು ದಿನ ಕಾಯೋಣ ಕಾಯೋಣ ಎನ್ನುತ್ತಾ ಮುಂದೂಡಿ ದೂಡಿ ಊರಿಗೆ ಮರಳುವ ದಿನವೂ ಬಂದುಬಿಟ್ಟಿತ್ತು.


ಇವತ್ತು ರಾತ್ರಿಗೇ ಬಸ್ಸು ಬುಕ್ಕಾಗಿತ್ತು. ರತ್ನಾಕರನ ಬಳಿ ಊರಿಗೆ ಹೊರಟೆ ಎಂದದರೆ ಅವನಿಗೇನಾದರೂ ಇಷ್ಟೊತ್ತಿನ ಒಳಗೇ ಆ ಪತ್ರ ಸಿಕ್ಕಿ ತನ್ನ ಮನಸ್ಸು ಅರ್ಥವಾಗಿದ್ದರೆ ಅದಕ್ಕೆ ಉತ್ತರ ಕೊಟ್ಟೇ ಕೊಡುತ್ತಾನೆ ಎಂಬ ಆಸೆಯಲ್ಲಿ ದೇವಸ್ಥಾನದ ಬಳಿ ಕಪ್ಪಾಗುಗುವವರೆಗೂ ಕಾದಳು. ರತ್ನಾಕರ ಬರದಿದ್ದಕ್ಕೆ ವಾಪಾಸಾಗುವಾಗ ಅವನ ಮನೆ ಹೊಕ್ಕಳು. ಅವನೇನೋ ಬರೆಯುತ್ತಿದ್ದ. ಇವಳನ್ನು ನೋಡಿದ್ದೆ ‘ಕಾಫಿ ಕುಡಿಯೋಕೊಬ್ರು ಸಿಕ್ರು’ ಎಂದು ಎದ್ದ. ಶರಾವತಿ ಪದಬಂಧ ತುಂಬುತ್ತಾ ‘ಇವತ್ ನಾನು ಊರಿಗ್ ಹೊರ್ಟೆ’ ಎಂದಳು. ‘ಯಾಕೇ..? ಈಸಲ ಇಷ್ಟ್ ಬೇಗ’ ಎಂದು ಅಚ್ಚರಿಯಲ್ಲಿ ಕೇಳಿದ. ‘ಚಾಲಿ ಸುಲಿಯೋದುಂಟು, ಹೋದ್ವರ್ಷ ಮಿಷನ್ನಿಗೆ ಕಳ್ಸಿದ್ರಿಂದ ಗೋಟೇ ಹೆಚ್ಚಾಯ್ತು, ಮತ್ತೆ ಒಡಕು ಅಡಕೆನೇ ಜಾಸ್ತಿ , ಅದ್ಕೇ ಈ ಸಲ ನಾವೇ ಸುಲ್ದು ಮುಗಿಸ್ತೇವೆ’ ಎಂದಳು., ‘ಹಾಗಿದ್ರೆ ಮತ್ತೆ ಬರೋದು ಮುಂದಿನ ವರ್ಷನೇ ಅಲ್ವಾ?’ ಎಂದು ನಕ್ಕ. ಶರಾವತಿ ನಗಲಿಲ್ಲ. ‘ಯಾವುದಾದರೂ ಪುಸ್ತಕ ಬೇಕಿದ್ರೆ ತಗೊಂಡ್ಹೋಗಿ’ ಎಂದಾಗ ಶರಾವತಿಗೂ ಆ ಕಾದಂಬರಿಯಲ್ಲಿ ಪತ್ರ ಹಾಗೇ ಇದೆಯೇ ಎಂದು ನೋಡುವ ಕುತೂಹಲವಾಗಿ ಪುಸ್ತಕದ ಶೆಲ್ಫಿನಲ್ಲಿ ಆ ಕಾದಂಬರಿಯನ್ನು ಹುಡುಕೇ ಹುಡುಕಿದಳು, ಸಿಗಲಿಲ್ಲ. ರತ್ನಾಕರನನ್ನು ಕೇಳಿದರೆ ‘ನೀವ್ ತಂದ್ಕೊಟ್ಟ ಮರುದಿನನೇ ನನ್ ಫ್ರೆಂಡ್ ಒಬ್ರು ತಗೊಂಡೋದ್ರು’ ಎಂದುಬಿಟ್ಟ. ಇನ್ಯಾವತ್ತು ಆ ಪತ್ರ ಸಿಕ್ಕು ಏನು ಬಾನಗಡಿ ಆಗುವುದಿಯೋ ಎಂದು ಭಯವಾಯಿತು, ಒಂದುವೇಳೆ ಗಾಯತ್ರಿ ವಾಪಾಸು ಬಂದು ಅವಳ ಕೈಗೆ ಸಿಕ್ಕರೆ ಎಂದು ಢವ ಢವಗುಟ್ಟಿತು. ಪತ್ರ ಇಟ್ಟಿದ್ದೆ ಎಂದು ಹೇಳಿಬಿಡಲೇ? ಹೇಳುವುದಾರೂ ಹೇಗೇ? ಕೆಲವೊಂದನ್ನು ಬಾಯೊಡೆದು ಹೇಳಲು ಸಾದ್ಯವಿಲ್ಲ. ಅವನು ಮಾಡಿಕೊಟ್ಟಿದ್ದ ಕಾಫಿ ಕುಡಿಯುವಷ್ಟರಲ್ಲಿ ಮೈಯ್ಯೆಲ್ಲ ಬೆವೆತು ಅಲ್ಲಿರಲಾಗದೇ ಹೊರಟುಬಿಟ್ಟಳು. ಹಿಂದೆಯೇ ಬಂದ ರತ್ನಾಕರ ‘ಪರಿಚಯ ಆಗಿ ವರ್ಷ ಆದ್ರೂ ನಿಮ್ ನಂಬರೂ ಇಲ್ಲ, ಬೆಸ್ಟ್ ಫ್ರೆಂಡ್ಸ್ ಅನ್ನೋದು ದಂಡಕ್ಕೆ’ ಎಂದು ನಕ್ಕ. ಶರವಾತಿಯ ಕಣ್ಣಲ್ಲಿ ತೆಳ್ಳಗೆ ನೀರು ಆವರಿಸುತ್ತಿತ್ತು. ಅವಳ ನಂಬರನ್ನು ಸೇವ್ ಮಾಡಿಕೊಂಡು, ನಕ್ಕು, ‘ಪಿಂಕ್ ಟ್ರಂಪೆಟ್’ ಎಂದ. ಶರಾವತಿ ಅಪ್ರತಿಭಳಾಗಿ ನೋಡಲು ‘ಹಾಗೇ ಸೇವ್ ಮಾಡ್ಕೊಂಡಿದೀನಿ.. ನೀವೂ ಈ ಹೂವಿನ್ ಹಾಗೇ ಅಲ್ವಾ? ಫೆಬ್ರುವರಿ ಮಾರ್ಚ್ ಅಂದ್ರೆ ಬರ್ತೀರ, ಒಂದೆರಡ್ ತಿಂಗಳು ಅಬ್ಬರ ಮಾಡ್ತೀರ, ಹೊರಟೋಗ್ತೀರ.. ಮತ್ತೆ ನಿಮ್ಮನ್ನ ನೋಡಬೇಕಂದ್ರೆ ಇನ್ನೊಂದ್ ಪಿಂಕ್ ಟ್ರಂಪೆಟ್ ಸೀಸನ್ ಬರೋತನಕ ಕಾಯಬೇಕು’ ಎಂದು ಜೋರಾಗಿ ನಕ್ಕ. ಶರಾವತಿಯೂ ನೋವನ್ನೆಲ್ಲ ಒಳಗೆಳೆದುಕೊಂಡು ನೇತ್ರಳ ಹಾಗೇ ದೊಡ್ಡಕೆ ನಕ್ಕುಬಿಟ್ಟಳು..


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮೈಸೂರು

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

Mysore News: ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆ ಜರುಗಿತು. ಈ ವೇಳೆ ವಿದ್ವಾನ್ ಶೃಂಗೇರಿ ನಾಗರಾಜ್ ರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ.ನರಸಿಂಹಮೂರ್ತಿ ರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

VISTARANEWS.COM


on

Mysore Vasudevacharya Memorial Music utsav Vidwat Sabha and award ceremony
Koo

ಮೈಸೂರು: ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಮಹಾಮಹಿಮರಾದ ಮೈಸೂರು ವಾಸುದೇವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಶಿವಮೊಗ್ಗದ ಖ್ಯಾತ ಗಾಯಕ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ (Mysore News) ಹೇಳಿದರು.

ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆಯಲ್ಲಿ ಅವರು ಪ್ರತಿಷ್ಠಿತ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಮೈಸೂರು ವಾಸುದೇವಾಚಾರ್ಯ ಮನೆ ಮೈಸೂರಿನಲ್ಲಿ ಸಂಗೀತಕ್ಕೆ ಮಹೋನ್ನತ ವೇದಿಕೆಯಾಗಿ ರೂಪುಗೊಂಡಿದೆ. ಅಲ್ಲಿ ಹಾಡಿದವರ ಧನ್ಯತೆಯೇ ವಿಶೇಷವಾಗಿದ್ದು ಎಂದು ಅವರು ಸ್ಮರಿಸಿದರು.

ಪ್ರಶಸ್ತಿ ಪ್ರದಾನ

ವಿದ್ವಾನ್ ಶೃಂಗೇರಿ ನಾಗರಾಜ್ ಅವರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ. ನರಸಿಂಹಮೂರ್ತಿ ಅವರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ಅವರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ರಮಾ ಬೆಣ್ಣೂರು ಮಾತನಾಡಿ, ವಯೋಲಿನ್ ವಿದ್ವಾಂಸ ಎಚ್.ಕೆ. ನರಸಿಂಹ ಮೂರ್ತಿ ಅವರು ಕಲಾ ಲೋಕಕ್ಕೆ ಅಹರ್ನಿಷಿ ಸೇವೆ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಯುವಕರು ವಯಲಿನ್ ಹಿಡಿದು ಸಾಗುತ್ತಿದ್ದರೆ ಅವರು ಎಚ್.ಕೆ. ಎನ್. ಸ್ಟೂಡೆಂಟ್ ಎಂದು ಧೈರ್ಯವಾಗಿ ಹೇಳಬಹುದು. ಜೀವಮಾನದಲ್ಲಿ ಅವರು ಬಹುತೇಕ ಸಮಯವನ್ನು ಈ ವಾದ್ಯದ ನುಡಿಸಾಣಿಕೆ ಮತ್ತು ಪಾಠಕ್ಕಾಗಿ ಮೀಸಲಿಟ್ಟಿದ್ದಾರೆ. ಅವರಿಗೆ ಜೀವಮಾನದ ಪ್ರಶಸ್ತಿ ನೀಡಿ ಗೌರವಿಸಿರುವುದು ಮಹತ್ತರ ಕಾರ್ಯ ಎಂದು ಶ್ಲಾಘಿಸಿದರು.

ಇದನ್ನೂ ಓದಿ: Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ಖ್ಯಾತ ಸಂಗೀತ ವಿದ್ವಾಂಸ ಮತ್ತು ಟ್ರಸ್ಟಿ ಡಾ. ರಾ. ನಂದಕುಮಾರ್ ಮಾತನಾಡಿ, ಕನ್ನಡ ನಾಡಿನ ಖ್ಯಾತ, ವಿಖ್ಯಾತ ಸಂಗೀತ ವಿದ್ವಾಂಸರನ್ನು ಒಳಗೊಂಡ ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ (ಕೆಸಿಎಂಸಿ) ಕಳೆದ ಮೂರು ವರ್ಷಗಳಿಂದ ಕಲಾಕ್ಷೇತ್ರದ ಅಭ್ಯುದಯಕ್ಕೆ ಸೇವೆ ಸಲ್ಲಿಸುತ್ತಿದೆ. ಮುಂದೆ ನೂರಾರು ಕಾರ್ಯಾಗಾರ, ಪ್ರಾತ್ಯಕ್ಷಿಕೆ ಹಮ್ಮಿಕೊಂಡು ಯುವ ಸಂಗೀತಗಾರರ ಏಳಿಗೆಗೆ ಶ್ರಮಿಸಲು ಸಂಕಲ್ಪ ಮಾಡಿದೆ. ಸಂಗೀತ ಲೋಕದ ದಿಗ್ಗಜರನ್ನು ಗುರುತಿಸಿ, ಗೌರವಿಸುವ ಸೇವೆಯನ್ನೂ ಟ್ರಸ್ಟ್ ಮಾಡುತ್ತಿದೆ. ಒಟ್ಟಾರೆ ಕರ್ನಾಟಕ ಶಾಸ್ತ್ರೀಯ ಸಂಗೀತದ ಮಹತ್ವ ಕಾಪಾಡಲು ನಮ್ಮ ಕೆಸಿಎಂಸಿ ಟ್ರಸ್ಟ್ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.

ಹಿರಿಯ ವೀಣಾ ವಿದ್ವಾಂಸ ವಿದ್ವಾನ್ ಡಾ. ರಾ. ವಿಶ್ವೇಶ್ವರನ್ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಸಿದ್ಧಿ ಪಡೆದ ಅನೇಕರು ಪ್ರಸಿದ್ಧಿಗೆ ಬರಲೇ ಇಲ್ಲ. ಅವರ ಸಾಲಿನಲ್ಲಿ ಮೈಸೂರು ವಾಸುದೇವಾಚಾರ್ಯರೂ ಒಬ್ಬರು. ಮೈಸೂರಿನಲ್ಲಿ ಅವರಿಗೆ ರಾಜಾಶ್ರಯ ಮಾತ್ರ ಇತ್ತು. ಆದರೆ ರಾಷ್ಟ್ರಮಟ್ಟದ ಪ್ರಶಸ್ತಿ, ಪುರಸ್ಕಾರಗಳು ಇನ್ನಷ್ಟು ಮಾನ್ಯವಾಗಬೇಕಿತ್ತು. ಇಂದಿನ ಪೀಳಿಗೆ ಇಂಥ ಮಹಾನ್ ಕಲಾವಿದರ ರಚನೆಗಳನ್ನು ಶ್ರದ್ಧೆಯಿಂದ ಕಲಿತು ಹಾಡಬೇಕು. ಕೆಸಿಎಂಸಿ ಟ್ರಸ್ಟ್ ಈ ನಿಟ್ಟಿನಲ್ಲಿ ಸಾವಿರಾರು ಕೆಲಸಗಳನ್ನು ಮಾಡಲಿ ಎಂದು ಹಾರೈಸುವೆ ಎಂದು ತಿಳಿಸಿದರು.

ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ

ಇದೇ ವೇಳೆ ಖ್ಯಾತ ವೀಣಾ ವಿದುಷಿ ರೇವತಿ ಕಾಮತ್ ಅವರ ‘ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್’ ಅನ್ನು ವಿದ್ವಾನ್ ಆರ್. ವಿಶ್ವೇಶ್ವರನ್ ಅವರು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ, ಗ್ರಾಮೀಣ ಮಕ್ಕಳ ಶಿಕ್ಷಣ ಅಭಿವೃದ್ಧಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಪೋಷಣೆ ಮತ್ತು ಸಂವರ್ಧನೆಗೆ ಟ್ರಸ್ಟ್ ಸಂಕಲ್ಪ ಮಾಡಿದೆ ಎಂದು ರೇವತಿ ಕಾಮತ್ ತಿಳಿಸಿದರು.

ಈ ಸಂದರ್ಭದಲ್ಲಿ ಕಲಾಕ್ಷೇತ್ರದ ಹಿರಿಯ ಚೇತನ ವಿದ್ವಾನ್ ಡಾ.ರಾ. ವಿಶ್ವೇಶ್ವರನ್, ಲೇಖಕ ಮತ್ತು ಪತ್ರಕರ್ತ ಎ.ಆರ್. ರಘುರಾಮ, ಡಾ.ರಮಾ ಬೆಣ್ಣೂರು, ಭ್ರಮರಾ ಟ್ರಸ್ಟ್‌ನ ಸಂಸ್ಥಾಪಕಿ ಮಾಧುರಿ ತಾತಾಚಾರಿ, ವಿದ್ವಾನ್ ಡಾ.ರಾ.ಸ.ನಂದಕುಮಾರ್ ಮತ್ತು ವೀಣಾ ವಿದ್ವಾಂಸ ಪ್ರಶಾಂತ ಅಯ್ಯಂಗಾರ್, ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ (ಶಿವು) ಮತ್ತು ಪುಸ್ತಕಂ ರಮಾ ಉಪಸ್ಥಿತರಿದ್ದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

ಇದಕ್ಕೂ ಮುನ್ನ ವಾಸುದೇವಾಚಾರ್ಯರ ಕೃತಿಗಳ ಗೋಷ್ಠಿ ಗಾಯನ, ವಿದುಷಿ ಮೈಸೂರು ರಾಜಲಕ್ಷ್ಮೀ ಅವರ ವೀಣಾವಾದನ ನೂರಾರು ಪ್ರೇಕ್ಷಕರನ್ನು ರಂಜಿಸಿತು.

Continue Reading

ಪ್ರಮುಖ ಸುದ್ದಿ

ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ಅಧ್ಯಾತ್ಮದ ಹಾದಿಯಲ್ಲಿ ಪಯಣಿಸಬಹುದು. ತಂತ್ರಮಾರ್ಗದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ ಎಂದು ಗುರು ಸಕಲಮಾ ನುಡಿದರು. ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕೃತಿಯ ಮುಖಪುಟವನ್ನು ಸಾಹಿತಿ ಜೋಗಿ ಅನಾವರಣಗೊಳಿಸಿದರು.

VISTARANEWS.COM


on

ಹಿಮಾಲಯ book cover page launch 2
Koo

ಹಿಮಾಲಯದ ಗುರು ಪರಂಪರೆ ಅವಿನಾಶಿ: ಗುರು ಸಕಲಮಾ

ಬೆಂಗಳೂರು: ಅಧ್ಯಾತ್ಮದ (Spirituality) ಬಗ್ಗೆ ಸಮಾಜದಲ್ಲಿ ಇರುವ ತಪ್ಪು ತಿಳುವಳಿಕೆಗಳು, ಭಯಗಳಿಂದಾಗಿ ಮೊದಲಿನಷ್ಟು ಮೌಲ್ಯಯುತವಾಗಿ ಅದನ್ನು ನಮಗೆ ಉಳಿಸಿಕೊಳ್ಳಲಾಗಿಲ್ಲ. ಆದರೆ, ನಾವು ಅದನ್ನು ಕಳೆದುಕೊಂಡಿಲ್ಲ. ಯಾರು ಏನೇ ಪ್ರಯತ್ನ ಮಾಡಿದರೂ ಇದನ್ನು ನಾಶ ಮಾಡಲು ಸಾಧ್ಯವಿಲ್ಲ. ಈ ನಮ್ಮ ಸಂಸ್ಕೃತಿ ಅವಿನಾಶಿ ಎಂದು ಹಿಮಾಲಯ ಯೋಗಿ ಸ್ವಾಮಿ ರಾಮ (Swami Rama) ಹಾಗೂ ಬಹುಶ್ರುತ ವಿದ್ವಾಂಸ ಡಾ. ಆರ್‌ ಸತ್ಯನಾರಾಯಣ (Dr. R Satyanarayana) ಅವರ ನೇರ ಶಿಷ್ಯೆ, ಶ್ರೀವಿದ್ಯಾ ಗುರು ಸಕಲಮಾ (Guru Sakalamaa) ಅವರು ಹೇಳಿದ್ದಾರೆ.

ಅವರು ತಮ್ಮ, ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಪುಸ್ತಕದ ಇಂಗ್ಲೀಷ್‌ ಹಾಗೂ ಕನ್ನಡ ಆತ್ಮಚರಿತ್ರೆಯ ಮುಖಪುಟ ಅನಾವರಣ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಆದರೆ ಇದಕ್ಕೆ ಇನ್ನೊಂದು ಮುಖವಿದೆ ಅದು ತಂತ್ರಶಾಸ್ತ್ರ. ತಂತ್ರ ನಿಮ್ಮನ್ನು ನೀವು ಹೇಗಿದ್ದೇವೋ ಹಾಗೆಯ ಸ್ವೀಕರಿಸುತ್ತದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ನೀವು ಅಧ್ಯಾತ್ಮ ದ ಹಾದಿಯಲ್ಲಿ ಪಯಣಿಸಬಹುದು. ಈ ತಂತ್ರದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ. ಇದು ಇವತ್ತಿನ ಸಮಸ್ಯೆಯಲ್ಲ. ಶಂಕರಾಚಾರ್ಯರ ಕಾಲದಿಂದಲೂ ಇತ್ತು. ಅವರು ಇದಕ್ಕೆ ಅಂಟಿದ ಜಾಡ್ಯಗಳನ್ನು ಕಿತ್ತೆಸೆದು ಅದನ್ನು ಪ್ರವರ್ಧಮಾನಕ್ಕೆ ತರಲು ಶ್ರಮಿಸಿದರು ಎಂದರು.

ನನ್ನಮ್ಮ ನನಗೆ ಋಷಿಮುನಿಗಳ ಕತೆಗಳನ್ನೆಲ್ಲ ಹೇಳುವಾಗ ಈ ಕತೆಗಳ ಋಷಿಮುನಿಗಳಿಗೂ ನಮಗೂ ಸಂಬಂಧವಿಲ್ಲ, ಅವರು ಯಾವುದೋ ಲೋಕದಲ್ಲಿ ಕೂತಿರುವವರು. ನನಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದೇ ನಾನಂದುಕೊಂಡಿದ್ದೆ. ಆದರೆ, ಶ್ರದ್ಧೆಯಿಂದ ನೀವು ಈ ಲೋಕಕ್ಕೆ ಬಂದರೆ, ಇವು ಕತೆಗಳಲ್ಲ, ಅಧ್ಯಾತ್ಮಿಕ ಸತ್ಯಗಳು ಎಂಬುದು ನಿಮಗೆ ಗೋಚರವಾಗಬಹುದು. ನೀವು ಬಯಸಿದಲ್ಲಿ, ಈ ಪುಸ್ತಕದಲ್ಲಿ ಬಂದಿರುವ ಋಷಿಮುನಿಗಳನ್ನೆಲ್ಲ ನೀವು ಭೇಟಿ ಮಾಡಬಹುದು. ನಿಮ್ಮ ಕನಸಿನಲ್ಲೂ ಅವರು ಬಂದು ನಿಮ್ಮ ಜೊತೆ ಮಾತನಾಡಬಹುದು. ಪಕ್ಕದಲ್ಲೇ ಗೆಳೆಯನ ರೀತಿಯಲ್ಲಿ ಬಂದು ನಿಮಗೆ ಅರಿವು ಮೂಡಿಸಿ ಹೋಗಬಹುದು. ಅವರೆಲ್ಲ ಬೇರೊಂದು ಲೋಕದಲ್ಲಿ ಕುಳಿತು, ಈ ಲೋಕಕಲ್ಯಾಣಕ್ಕಾಗಿ ಕಂಕಣ ಬದ್ಧರಾಗಿ ನಿಂತಿದ್ದಾರೆ, ಸದಾ ನಮ್ಮನ್ನು ಪೊರೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಬದುಕಿನ ಪಯಣದಲ್ಲಿ ಗುರುವಿನ ಸ್ಥಾನ ದೊಡ್ಡದು. ನಾನು, ನನ್ನದು ಎಂಬುದನ್ನು ಬಿಟ್ಟಾಗ ಗುರು ಸಿಕ್ಕುತ್ತಾನೆ. ಗುರುವಿನ ಅನ್ವೇಷಣೆಯಲ್ಲಿ ನಾವಿದ್ದೇವೆ ಎಂಬುದು ಅನೇಕ ಸಾರಿ ನಮಗೆ ಅರಿವೇ ಇರುವುದಿಲ್ಲ. ಅದಕ್ಕಾಗಿಯೇ, ಅರಿವೇ ಗುರುವು ಗುರುವೇ ಅರಿವು. ಗುರು ಸಿಕ್ಕ ಮೇಲೆ ಕೆಲವರಿಗೆ ಅರಿವು ಸಿಕ್ಕರೆ, ಇನ್ನು ಕೆಲವರಿಗೆ ಅರಿವಾಗಿ ಗುರು ಬೇಕು ಅನಿಸುತ್ತದೆ ಎಂದು ಹೇಳಿದರು.

ಹಿಮಾಲಯ book cover page launch 2

ಕನ್ನಡಪ್ರಭದ ಪುರವಣಿ ಸಂಪಾದಕ, ಸಾಹಿತಿ ಜೋಗಿ (Writer Jogi) ಮಾತನಾಡಿ, ಒಂದು ಪುಸ್ತಕವನ್ನು ಗೆಲ್ಲಿಸುವ ಅಂಶಗಳೆಂದರೆ ಮುಗ್ದತೆ ಹಾಗೂ ಪ್ರಾಮಾಣಿಕತೆ. ಇಂದು ಎಷ್ಟೋ ಪುಸ್ತಕಗಳು ಅಪ್ರಾಮಾಣಿಕವಾಗಿ ಇರುತ್ತದೆ, ಪುಸ್ತಕದ ಕೆಲವು ಪುಟಗಳನ್ನು ತೆರೆದು ನೋಡಿದ ತಕ್ಷಣ ಇದು ಪ್ರಾಮಾಣಿಕವೋ, ಅಪ್ರಾಮಾಣಿಕವೋ ಎಂಬುದು ಅರ್ಥವಾಗುತ್ತದೆ. ಈ ಪುಸ್ತಕ ಕೆಲವು ಪುಟಗಳನ್ನು ಮುಂಚಿತವಾಗಿ ಓದಿದ್ದರಿಂದ ನನಗೆ ಇದರಲ್ಲಿ ಮುಗ್ಧತೆ ಹಾಗೂ ಪ್ರಾಮಾಣಿಕತೆ ಎದ್ದು ಕಾಣುತ್ತಿವೆ. ಹಾಗಾಗಿ ಇದು ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ ಎಂದರು.

ಇಂದು ಪಾರಲೌಕಿಕ ಅಂದ ತಕ್ಷಣ ನಮಗೊಂದು ತಪ್ಪು ಕಲ್ಪನೆಯಿದೆ. ನಮಗೆ ಆ ವೇಷವನ್ನು ತೊಟ್ಟುಕೊಳ್ಳುವ ಧೈರ್ಯ ಇದೆಯೇ? ನಾವು ಆ ಜಗತ್ತಿಗೆ ಹೋಗಬಲ್ಲೆವಾ? ಇತ್ಯಾದಿ ಪ್ರಶ್ನೆಗಳು ನಮ್ಮನ್ನು ಕಾಡಿ ನಾವು ಅದರ ಗೊಡವೆಗೇ ಹೋಗುವುದಿಲ್ಲ. ಪುರಂದರ ದಾಸರೇ ʻಇಷ್ಟು ದಿನ ಈ ವೈಕುಂಠ ಎಷ್ಟು ದೂರ ಎನ್ನುತಲಿದ್ದೆʼ ಎಂದು ಬರೆಯುವ ಮೂಲಕ ವೈಕುಂಠ ಇಲ್ಲೇ ಇದ್ದರೂ, ಅಲ್ಲಿದೆ ಎಂದು ತಿಳಿದಿದ್ದೆ ಎನ್ನುವ ಸತ್ಯವನ್ನು ಹೇಳಿದ್ದಾರೆ. ಈ ಪುಸ್ತಕ ಈ ರೀತಿಯಲ್ಲಿ ಅಂಜಿಕೆಗಳನ್ನು ದೂರ ಮಾಡಿ ಸಂಕೋಚದ ತೆರೆಯನ್ನು ಸರಿಸಲು ದಾರಿದೀಪವಾಗಬಹುದು ಎಂದರು.

ಜೀವನದಲ್ಲಿ ನಾವು ಕಳೆದುಕೊಳ್ಳುವುದು ಅಪನಂಬಿಕೆಯಿಂದ. ನಮ್ಮಲ್ಲಿ ಅಪನಂಬಿಕೆಯಿದೆ ಎಂದರೆ ಅದು ನಮ್ಮ ವ್ಯಕ್ತಿತ್ವದ ದೋಷವೇ ಹೊರತು ಗುರುವಿನ ದೋಷವಲ್ಲ. ಒಂದು ಕತೆಯ ಒಳಗೆ ನನಗೆ ಹೋಗಲಾಗದಿದ್ದರೆ, ಅದು ಆ ಕಥನದ ದೋಷವಲ್ಲ, ಆ ಕಥನವನ್ನು ಸ್ವೀಕರಿಸುವ ಅನುಭವದ ಕೊರತೆಯೇ ಕಾರಣ. ಮನುಷ್ಯ ಎಲ್ಲ ದುಃಖಗಳನ್ನೂ, ಸುಖವನ್ನು ಬದುಕಿನಲ್ಲಿ ಅನುಭವಿಸಿದ ಮೇಲೆ ಒಂದು ಹುಡುಕಾಟ ಹಾದಿಯತ್ತ ಹೊರಳುತ್ತಾನೆ. ಈ ಹಾದಿಯಲ್ಲಿ ಸಿಗುವ ಗುರು ಯಾವುದೇ ರೂಪದಲ್ಲಿರಬಹುದು. ಇಂಥ ಸಂದರ್ಭ ನಂಬಿಕೆ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಪುಸ್ತಕ ಜಗತ್ತಿಗೆ ಇಂಥದ್ದೊಂದು ಸಮಾರಂಭ ಬೇಕಿದೆ. ಮುಖಪುಟ ಅನಾವರಣವನ್ನೂ ಸಂಭ್ರಮಿಸುವ ಈ ನಡೆ ಪುಸ್ತಕ ಜಗತ್ತಿನಲ್ಲಿ ಸ್ವಾಗತಾರ್ಹ ಎಂದೂ ಅವರು ಹೇಳಿದರು.

ಸಕಲಮಾ ಅವರ ಯುಟ್ಯೂಬ್ ಅನಾವರಣಗೊಳಿಸಿದ ಕಾಂತಾರ (Kantara Movie) ಖ್ಯಾತಿಯ ನಟಿ ಸಪ್ತಮಿ ಗೌಡ (Saptami Gowda) ಮಾತನಾಡಿ, ಮುಖಪುಟವನ್ನು ನೋಡಿ ಪುಸ್ತಕವನ್ನು ಅಳೆಯಬೇಡಿ ಎಂಬ ಇಂಗ್ಲೀಷ್‌ ನುಡಿಗಟ್ಟಿದೆ. ಆದರೆ, ಸಾಮಾನ್ಯವಾಗಿ ನಾವು ಮುಖಪುಟವನ್ನು, ಟ್ರೈಲರ್‌ಗಳನ್ನು ನೋಡಿ ಅಳೆಯುವ ಪರಿಸ್ಥಿತಿ ಈಗ ಎಲ್ಲೆಡೆ ಇದೆ. ಒಳ ಹೂರಣ ಇದ್ದರೆ ಸಿನಿಮಾವಿರಲಿ, ಪುಸ್ತಕವಿರಲಿ ಗೆದ್ದೇ ಗೆಲ್ಲುತ್ತದೆ ಎಂಬುದು ನಾನು ಕಾಂತಾರದಿಂದ ಕಲಿತ ಪಾಠ ಎಂದರು.

ಒಂದು ಸಿನಿಮಾ ಮಾಡುವಂತೆ, ಪುಸ್ತಕ ಬರೆಯುವುದೂ ಕೂಡಾ ಸಾಕಷ್ಟು ಶ್ರಮ ಬೇಡುವ ಕೆಲಸ. ಅದರ ಹಿಂದೆ ಅಪಾರ ಶ್ರದ್ಧೆಯಿದೆ. ಸಿನಿಮಾ ಮಂದಿ ತಮ್ಮ ಸಿನಿಮಾದ ಕುತೂಹಲ ಮೊದಲೇ ಹೆಚ್ಚಿಸಲು ಟ್ರೈಲರ್, ಟೀಸರ್‌ ಬಿಡುಗಡೆಯನ್ನು ಇಟ್ಟುಕೊಳ್ಳುತ್ತಾರೆ. ಹಾಗಾಗಿ, ಪುಸ್ತಕವನ್ನೂ ಹೆಚ್ಚು ಮಂದಿಗೆ ತಲುಪಿಸಲು, ಕುತೂಹಲ ಹುಟ್ಟು ಹಾಕಿಲು ಇಂಥ ಮುಖಪುಟ ಅನಾವರಣದಂತಹ ಕಾರ್ಯಕ್ರಮಗಳು ನಡೆಯಬೇಕು. ಜನರು ಸೇರಬೇಕು. ಓದುವ ಪರಂಪರೆ ಹೆಚ್ಚಬೇಕು ಎಂದರು.

ಗುರು ಯಾರೇ ಇರಲಿ, ಅವರ ಮೇಲೆ ನಮಗೆ ನಂಬಿಕೆ ಇರಬೇಕು. ಜೀವನದಲ್ಲಿ ಕಲಿಯುವ ಹಾದಿ ದೊಡ್ಡದಿದೆ. ಆ ಸಂದರ್ಭ ಗುರು ತಿದ್ದಿದ್ದನ್ನು ನಾವು ಕಲಿತುಕೊಳ್ಳುವ ಆಸಕ್ತಿ ಇರಬೇಕು. ಅದಕ್ಕಾಗಿ ಗುರು ತೋರಿದ ಹಾದಿಯಲ್ಲಿ ನಾವು ನಡೆಯಬೇಕು ಎಂದೂ ಹೇಳಿದರು.

ಜುಲೈ 21ರಂದು ಚಂಡೀಗಢದಲ್ಲಿ ಆಂಗ್ಲ ಭಾಷೆಯ `Messages from the Himalayan Sages- Timely and Timeless’ ಹಾಗೂ ಸೆಪ್ಟೆಂಬರ್22ರಂದು ಬೆಂಗಳೂರಿನ ಗಾಯನ ಸಮಾಜದಲ್ಲಿ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕನ್ನಡ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ಗುರು ಸಕಲಮಾ ಅವರ ಯುಟ್ಯೂಬ್‌ ಲಿಂಕ್- https://youtube.com/@gurusakalamaa?feature=shared

ಇದನ್ನೂ ಓದಿ: ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Continue Reading

ವಿದೇಶ

Youngest Artist: ಅಂಬೆಗಾಲಿಡುವ ಬಾಲಕ ಈಗ ವಿಶ್ವದ ಅತಿ ಕಿರಿಯ ಚಿತ್ರ ಕಲಾವಿದ!

ಸುಮಾರು ಆರು ತಿಂಗಳ ಮಗುವಿದ್ದಾಗಲೇ ಚಿತ್ರ ರಚಿಸಲು ಪ್ರಾರಂಭಿಸಿದ ವಿಶ್ವದ ಕಿರಿಯ ಚಿತ್ರಕಲಾವಿದ (Youngest Artist) ಘಾನಾದ ಆಂಕ್ರಾ ಹಲವಾರು ವರ್ಣಚಿತ್ರಗಳನ್ನು ರಚಿಸಿರುವುದು ಮಾತ್ರವಲ್ಲ ಅವುಗಳಲ್ಲಿ ಒಂಬತ್ತು ಚಿತ್ರಗಳನ್ನು ಪ್ರದರ್ಶನದಲ್ಲಿ ಮಾರಾಟ ಮಾಡಿದ್ದಾನೆ! ಈ ಅತಿ ಕಿರಿಯ ಕಲಾವಿದನ ಕುರಿತು ವ್ಯಾಪಕ ಕುತೂಹಲ ಉಂಟಾಗಿದೆ.

VISTARANEWS.COM


on

By

Youngest Artist
Koo

ಅಂಬೆಗಾಲಿಡುವ (Toddler) ಮಗು ವರ್ಣಚಿತ್ರಗಳನ್ನು (Youngest Artist) ರಚಿಸಿ ಗಿನ್ನೆಸ್ ವಿಶ್ವ ದಾಖಲೆ (Guinness World Records) ಬರೆದಿದೆ. ವಿಶ್ವದ ಅತ್ಯಂತ ಕಿರಿಯ ಚಿತ್ರ ಕಲಾವಿದ ಎನ್ನುವ ಖ್ಯಾತಿಗೆ ಈ ಮಗು ಪಾತ್ರವಾಗಿದೆ. ಘಾನಾದ (Ghana) 1 ವರ್ಷ 152 ದಿನಗಳ ಏಸ್-ಲಿಯಾಮ್ ನಾನಾ ಸ್ಯಾಮ್ ಆಂಕ್ರಾ (Ace-Liam Nana Sam Ankrah) ತಾನೇ ರಚಿಸಿದ 9 ವರ್ಣಚಿತ್ರಗಳನ್ನು ಮಾರಾಟ ಮಾಡಿ ಈ ದಾಖಲೆ ನಿರ್ಮಿಸಿದೆ.

ಏಸ್- ಲಿಯಾಮ್ ನಾನಾ ಸ್ಯಾಮ್ ಆಂಕ್ರಾ ವಿಶ್ವದ ಅತ್ಯಂತ ಕಿರಿಯ ಪುರುಷ ಚಿತ್ರ ಕಲಾವಿದನಾಗಿ ಪ್ರತಿಷ್ಠಿತ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ (GWR) ನಲ್ಲಿ ತನ್ನ ಹೆಸರನ್ನು ಬರೆದಿದ್ದಾನೆ.

ಸುಮಾರು ಆರು ತಿಂಗಳ ಮಗುವಿದ್ದಾಗಲೇ ಚಿತ್ರ ರಚಿಸಲು ಪ್ರಾರಂಭಿಸಿದ ಆಂಕ್ರಾ ಹಲವಾರು ವರ್ಣಚಿತ್ರಗಳನ್ನು ರಚಿಸಿರುವುದು ಮಾತ್ರವಲ್ಲ ಅವುಗಳಲ್ಲಿ ಒಂಬತ್ತು ವರ್ಣಚಿತ್ರಗಳನ್ನು ಪ್ರದರ್ಶನದಲ್ಲಿ ಮಾರಾಟ ಮಾಡಿದ. ಆಂಕ್ರಾನ ಈ ಸಾಧನೆ ಹಲವಾರು ಮಂದಿಯ ಗಮನ ಸೆಳೆದಿದ್ದ್ದು, ಜಾಗತಿಕ ಮೆಚ್ಚುಗೆಯನ್ನು ಗಳಿಸಿತ್ತು. ಇದೀಗ ವಿಶ್ವ ದಾಖಲೆ ಪಟ್ಟಿಯಲ್ಲಿ ಆಂಕ್ರಾ ಹೆಸರು ಸೇರ್ಪಡೆಗೆ ಸಾಕಷ್ಟು ಮಂದಿ ಅಚ್ಚರಿಯನ್ನೂ ವ್ಯಕ್ತಪಡಿಸಿದ್ದಾರೆ.


ಯಾವಾಗ ಚಿತ್ರಕಲೆ ಪ್ರಾರಂಭಿಸಿದ್ದು?

ಈಗಷ್ಟೇ ಅಂಬೆಗಾಲಿಡುತ್ತಿರುವ ಆಂಕ್ರಾ ಕೇವಲ ಆರು ತಿಂಗಳಲ್ಲೇ ಚಿತ್ರಕಲೆಯನ್ನು ಪ್ರಾರಂಭಿಸಿದನು ಎನ್ನುತ್ತಾರೆ ಆತನ ತಾಯಿ. ಚಿತ್ರಕಲೆಯ ಮೇಲಿನ ಆತನ ಉತ್ಸಾಹವು ಚಿಕ್ಕ ವಯಸ್ಸಿನಿಂದಲೂ ಸ್ಪಷ್ಟವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಆತ ಕಲಿಯಲು ಪ್ರಾರಂಭ ಮಾಡಿದಾಗಲೇ ಕ್ಯಾನ್ವಾಸ್‌ನ ತುಂಡನ್ನು ನೆಲದ ಮೇಲೆ ಹರಡಿ ಅದರ ಮೇಲೆ ಸ್ವಲ್ಪ ಬಣ್ಣವನ್ನು ಬೀಳಿಸಿದೆ. ಕ್ಯಾನ್ವಾಸ್‌ನಾದ್ಯಂತ ಆತ ಬಣ್ಣವನ್ನು ಹರಡಿ ಕೊನೆಗೊಳಿಸಿದ. ಇದು ಆತನ ಮೊದಲ ವರ್ಣಚಿತ್ರ ‘ದಿ ಕ್ರಾಲ್’ ಎಂದು ಅವರು ವಿವರಿಸಿದರು.


ಅಂಬೆಗಾಲಿಡುವ ಘಾನಾದ ಆಂಕ್ರಾ ಈಗ ಸೆಲೆಬ್ರಿಟಿಯಾಗಿದ್ದಾನೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಿಂದ ಮಾತ್ರವಲ್ಲದೆ ಘಾನಾ ಗಣರಾಜ್ಯದ ಪ್ರಥಮ ಮಹಿಳೆಯ ಗಮನವನ್ನೂ ಆತ ಸೆಳೆದಿದ್ದಾನೆ.

ಮೊದಲ ಪ್ರದರ್ಶನ

ಏಸ್- ಲಿಯಾಮ್ ಆಂಕ್ರಾ ಇತ್ತೀಚೆಗೆ ತನ್ನ ಚಿತ್ರಗಳನ್ನು ಮೊದಲ ಬಾರಿಗೆ ಸಾರ್ವಜನಿಕ ಪ್ರದರ್ಶನ ನಡೆಸಿದ. ಇದರಲ್ಲಿ ಆತನ ಹತ್ತು ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು. ಅವುಗಳಲ್ಲಿ ಒಂಬತ್ತು ಮಾರಾಟವಾಗಿವೆ. ಏಸ್- ಲಿಯಾಮ್‌ನ ಕಲೆಯು ನಿರ್ದಿಷ್ಟ ಸಂದೇಶಗಳನ್ನು ರವಾನಿಸುವುದಕ್ಕಿಂತ ಹೆಚ್ಚಾಗಿ ಅಭಿವ್ಯಕ್ತಿ ಮತ್ತು ಅನ್ವೇಷಣೆಯ ಬಗ್ಗೆ ಹೆಚ್ಚಾಗಿದೆ ಎಂದು ಆತನ ತಾಯಿ ಹೇಳಿದ್ದಾರೆ.

ಅವನ ಅಮೂರ್ತ ವರ್ಣಚಿತ್ರಗಳು ಸುತ್ತಲಿನ ಪ್ರಪಂಚದಿಂದ ಪ್ರೇರಿತವಾಗಿವೆ. ಬಣ್ಣ, ಆಕಾರ, ಟೆಕಶ್ಚರ್ ಮತ್ತು ಅವನ ಮನಸ್ಥಿತಿಯನ್ನು ಇದು ಅವಲಂಬಿಸಿದೆ. ಪ್ರತಿ ಚಿತ್ರಕಲೆಯು ಹೊಸ ವಿಷಯಗಳನ್ನು ಕಂಡುಹಿಡಿಯುವಲ್ಲಿ ಆತನ ಕುತೂಹಲ ಮತ್ತು ಸಂತೋಷದ ಅಭಿವ್ಯಕ್ತಿಯಾಗಿದೆ ಎಂದಿದ್ದಾರೆ ಅವರು.


ಭವಿಷ್ಯದ ಯೋಜನೆಗಳು

ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪ್ರಕಾರ, ವಿಶ್ವದ ಅತ್ಯಂತ ಕಿರಿಯ ಕಲಾವಿದ ಲಿಯಾಮ್ ಅವರ ದಾಖಲೆಯನ್ನು ಅನುಮೋದಿಸಿದ ಬಳಿಕ ಆತನ ಕುಟುಂಬವು ಆತನ ಕಲಾತ್ಮಕ ಪ್ರತಿಭೆಗೆ ಗುಣಮಟ್ಟದ ಶಿಕ್ಷಣದ ಮೂಲಕ ಪೋಷಿಸಲು ಅವಕಾಶಗಳನ್ನು ಹುಡುಕುತ್ತಿದೆ. ಅಂತಾರಾಷ್ಟ್ರೀಯ ವಿದ್ಯಾರ್ಥಿ ವೇತನದ ಅವಕಾಶಗಳು ಅವರಿಗೆ ದೊರೆಯುತ್ತದೆ ಮತ್ತು ಆತನ ಕಲಾಕೃತಿಗಳನ್ನು ಮಾರಾಟ ಮಾಡಲು ಬಯಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

ಏಸ್-ಲಿಯಾಮ್ ತಾಯಿಯ ಸಲಹೆ ಏನು?

ತಮ್ಮ ಆಸಕ್ತಿಗಳನ್ನು ಕಂಡುಕೊಳ್ಳಲು ಮಕ್ಕಳನ್ನು ಪ್ರೋತ್ಸಾಹಿಸಲು ಪೋಷಕರಿಗೆ ಸಲಹೆ ನೀಡಿದ ಅವರು, ಪ್ರತಿ ಮಗು ಅನನ್ಯವಾಗಿದೆ ಮತ್ತು ಅವರ ಭಾವೋದ್ರೇಕಗಳನ್ನು ಪೋಷಿಸುವುದು ಅದ್ಭುತ ಆವಿಷ್ಕಾರಗಳು ಮತ್ತು ಸಾಧನೆಗಳಿಗೆ ಕಾರಣವಾಗಬಹುದು. ಅದನ್ನು ಪ್ರಯತ್ನಿಸುವ ಮೊದಲು ಅದನ್ನು ಮತ್ತೆ ಮತ್ತೆ ಓದಿ ಮತ್ತು ನೆನಪಿಡಿ. ಪ್ರಯಾಣ ಮತ್ತು ಅದು ತರುವ ಸಂತೋಷವು ತುಂಬಾ ತೃಪ್ತಿಕರವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಮೇ 26ರಂದು ʼಭಾರತದ ಧೀರ ಚೇತನಗಳುʼ ಕೃತಿ ಲೋಕಾರ್ಪಣೆ

Bengaluru News: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ ನಲ್ಲಿ ನಡೆಯಲಿದೆ. ಸಾಹಿತಿ ಎಸ್‌.ಎಲ್‌.ಭೈರಪ್ಪ ಕೃತಿ ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

Bharathada dheera chethanagalu kruthi lokarpane in Bengaluru on May 26
Koo

ಬೆಂಗಳೂರು: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ (Bengaluru News) ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ಜರುಗಲಿದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ ಎಸ್‌.ಎಲ್‌. ಭೈರಪ್ಪನವರ ಇಂಗ್ಲೀಷ್‌ ಅನುವಾದಿತ 3 ಕಾದಂಬರಿಗಳನ್ನು ಡಾ. ವಿಕ್ರಮ್‌ ಸಂಪತ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

ಕಾರ್ಯಕ್ರಮದಲ್ಲಿ ಡಾ. ವಿಕ್ರಮ್‌ ಸಂಪತ್‌ ಅವರೊಂದಿಗೆ ಅರ್ಧಗಂಟೆಯ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅನುವಾದಕರಾದ ಎಲ್‌.ವಿ. ಶಾಂತಕುಮಾರಿ, ಪ್ರೊ. ಜಿ.ಎಲ್‌. ಶೇಖರ್‌ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಎಂ.ಎ. ಸುಬ್ರಮಣ್ಯ ಮತ್ತು ಎಂ.ಎಸ್‌. ಋತ್ವಿಕ್‌ ತಿಳಿಸಿದ್ದಾರೆ.

Continue Reading
Advertisement
prajwal revanna case mattress
ಪ್ರಮುಖ ಸುದ್ದಿ12 mins ago

Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

AC Side Effects
ಆರೋಗ್ಯ55 mins ago

AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

karnataka weather forecast
ಮಳೆ1 hour ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Rishab Pant
ಪ್ರಮುಖ ಸುದ್ದಿ2 hours ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ2 hours ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ2 hours ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ9 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ9 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು21 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌