Child marriage| 16ರ ಬಾಲಕಿಗೆ 52 ವರ್ಷದ ಗಂಡ! ಬಂಧಿಸಲು ಹೋದಾಗ ಆತ್ಮಹತ್ಯೆಗೆ ಯತ್ನಿಸಿದ ಸೆಕ್ಯುರಿಟಿ ಗಾರ್ಡ್‌! - Vistara News

ಉತ್ತರ ಕನ್ನಡ

Child marriage| 16ರ ಬಾಲಕಿಗೆ 52 ವರ್ಷದ ಗಂಡ! ಬಂಧಿಸಲು ಹೋದಾಗ ಆತ್ಮಹತ್ಯೆಗೆ ಯತ್ನಿಸಿದ ಸೆಕ್ಯುರಿಟಿ ಗಾರ್ಡ್‌!

Child marriage | ಎಳೆಯ ವಯಸ್ಸಿನಲ್ಲಿ ಹೆಣ್ಮಕ್ಕಳಿಗೆ ಮದುವೆ ಮಾಡಿಸುವುದೇ ದೊಡ್ಡ ತಪ್ಪು. ಅದರಲ್ಲೂ ವಯಸ್ಸಿನ ಅಂತ ತುಂಬಾ ಇರುವವರ ಜತೆ ಮದುವೆ ಮಾಡಿಸುವುದು ಇನ್ನೂ ದೊಡ್ಡ ತಪ್ಪು.

VISTARANEWS.COM


on

child marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಾರವಾರ: ಬೆಂಗಳೂರಿನಲ್ಲಿ ೪೫ ವರ್ಷದ ವ್ಯಕ್ತಿಯೊಬ್ಬ ೧೪ ವರ್ಷದ ಬಾಲಕಿಯನ್ನು ಬಲವಂತದಿಂದ ಮದುವೆಯಾಗಿ ಜೈಲು ಸೇರಿದ ಬೆನ್ನಿಗೇ ಕಾರವಾರದಲ್ಲಿ ಅಂಥಹುದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.
ಇಲ್ಲಿ ಬಾಲಕಿಯ ವಯಸ್ಸು ೧೬ ಮತ್ತು ಮದುವೆಯಾದ ವರನ ವಯಸ್ಸು ೫೨!

ಇಲ್ಲಿ ಕೇಸು ಸ್ವಲ್ಪ ಡಿಫರೆಂಟಾಗಿದೆ. 52 ವಯಸ್ಸಿನ ವ್ಯಕ್ತಿ 16ರ ಹರೆಯದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಮೂರು ತಿಂಗಳೇ ಕಳೆದಿದೆ. ಮೂರು ತಿಂಗಳ ಬಳಿಕ ವಧು ಅಪ್ರಾಪ್ತೆ ಎಂಬುದು ಅರಿವಾಗಿದೆ. ಇದೀಗ ಇಬ್ಬರ ಕುಟುಂಬಕ್ಕೂ ಬರಸಿಡಿಲು ಬಡಿದಂತಾಗಿದ್ದು ಎಲ್ಲವೂ ಅಲ್ಲೋಲ ಕಲ್ಲೋಲವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜುಲೈ 19ರಂದು ಕಾರವಾರದ ದೇವಾಲಯೊಂದರಲ್ಲಿ ಅದ್ಧೂರಿಯಾಗಿ ವಿವಾಹವೊಂದು ನಡೆದಿತ್ತು. ವಧು ದೈಹಿಕವಾಗಿ ದಷ್ಟಪುಷ್ಟವಾಗಿದ್ದಳು. ಹೀಗಾಗಿ 52ರ ವಯಸ್ಸಿನ, ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ವಧುವನ್ನು ವಿವಾಹ ಮಾಡಿಕೊಡಲಾಗಿತ್ತು. ಅದ್ಧೂರಿಯಾಗಿಯೇ ನಡೆದಿದ್ದ ವಿವಾಹದಲ್ಲಿ ಸುಮಾರು 60 ಮಂದಿ ಭಾಗವಹಿಸಿದ್ದರು.

ಮದುವೆಯಾಗಿ ಮೂರು ತಿಂಗಳ ಬಳಿಕ ಅಂಗನವಾಡಿ ಕಾರ್ಯಕರ್ತೆಯರ ಖಚಿತ ಮಾಹಿತಿ ಮೇರೆಗೆ ವಧು ಅಪ್ರಾಪ್ತೆ ಎಂಬ ಮಾಹಿತಿ ಬಹಿರಂಗಗೊಂಡಿದ್ದು, ಕೂಡಲೇ ಎಚ್ಚೆತ್ತ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ವಧುವನ್ನ ಪತ್ತೆ ಹಚ್ಚಿದ್ದರು‌. ಅಲ್ಲದೇ 52ರ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಬಂಧನದ ಭೀತಿಯಿಂದ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೂ ಯತ್ನಿಸಿದ್ದಾನೆ.

ಅಪ್ರಾಪ್ತೆಯನ್ನು ಮದುವೆ ಮಾಡಲಾಗಿದ್ದು, ಫೋಕ್ಸೊ ಪ್ರಕರಣ ದಾಖಲಾಗಿದೆ ಎಂಬ ಬಗ್ಗೆ ಎರಡೂ ಕುಟುಂಬದವರಿಗೆ ಪೊಲೀಸರು ಹಾಗೂ ಇತರ ಅಧಿಕಾರಿಗಳು ವಿವರಿಸಿದ ಬಳಿಕ ಎರಡೂ ಕುಟುಂಬ ಕಕ್ಕಾಬಿಕ್ಕಿಯಾಗಿದೆ. ಅಲ್ಲದೇ ಮದುವೆಗೆ ಹೋಗಿದ್ದ ಸಂಬಂಧಿಕರು ಸೇರಿ ಒಟ್ಟು 60 ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೋಟಿಸ್ ನೀಡಿದ್ದು, ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮದುಮಗನನ್ನು ಪೊಲೀಸರು ಬಂಧಿಸಿ ಕಾರವಾರ ಜೈಲಿನಲ್ಲಿರಿಸಿದ್ದರೆ, ಅಪ್ರಾಪ್ತೆ ಸಾಂತ್ವನ ಕೇಂದ್ರದಲ್ಲಿದ್ದಾಳೆ.

ಇದನ್ನೂ ಓದಿ Child Marriage | 14 ವರ್ಷದ ಬಾಲಕಿಯನ್ನು ಮದುವೆಯಾದ 45 ವರ್ಷದ ವ್ಯಕ್ತಿ ಅರೆಸ್ಟ್‌, ಅಪ್ಪ-ಅಮ್ಮನೂ ಸೆರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಉತ್ತರ ಕನ್ನಡ

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜತೆಗೆ ಇದ್ದವರೆ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

VISTARANEWS.COM


on

Murder case

ಉತ್ತರ ಕನ್ನಡ : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ (Murder Case) ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಸರ್ಕಾರಿ ಆಸ್ಪತ್ರೆ ಕ್ವಾರ್ಟರ್ಸ್ ಬಳಿ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಇಮ್ತಿಯಾಝ್(25) ಕೊಲೆಯಾದವನು.

ಗಾರೆ ಕೆಲಸಕ್ಕಾಗಿ ಇಮ್ತಿಯಾಝ್‌ ಕಳೆದೊಂದು ತಿಂಗಳಿನಿಂದ ಕುಮಟಾ ಸರಕಾರಿ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ತಂಗಿದ್ದ. ಈತನ ಜತೆ ಹುಬ್ಬಳ್ಳಿ ಮೂಲದ ಮೊಯುದ್ದೀನ್, ಮೌನೇಶ್ ಹಾಗೂ ಸಾದಿಕ್ ಎಂಬುವವರು ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಗಾರೆ ಕೆಲಸಕ್ಕಾಗಿಯೇ ಕುಮಟಾಕ್ಕೆ ಬಂದು, ನಾಲ್ವರು ಒಂದೇ ರೂಮಿನಲ್ಲಿ ತಂಗಿದ್ದ. ಇಮ್ತಿಯಾಝ್ ಕೊಲೆಯ ಬಳಿಕ ಜತೆಗಿದ್ದ ಮೂವರು ಪರಾರಿ ಆಗಿದ್ದಾರೆ.

ಇನ್ಸ್‌ಪೆಕ್ಟರ್ ಯೋಗೀಶ್ ನೇತೃತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಮೃತಪಟ್ಟರೆ, ಕೆರೆಗೆ ಕಾಲು ಜಾರಿ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ.

VISTARANEWS.COM


on

Medical negligence

ವಿಜಯನಗರ: ವೈದ್ಯರ ನಿರ್ಲಕ್ಷ್ಯಕ್ಕೆ ಐದು ವರ್ಷದ ಮಗು ಮೃತಪಟ್ಟಿರುವುದಾಗಿ (Medical Negligence) ಆರೋಪ ಕೇಳಿ ಬಂದಿದೆ. ಕುಶಾಲ್( 05) ಮೃತಪಟ್ಟವರು. ವಿಜಯನಗರದ ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ದಂಪತಿಯ ಮಗು ಕುಶಾಲ್‌ ಜ್ವರದಿಂದ ಬಳಲುತ್ತಿದ್ದ.

ಹೀಗಾಗಿ ಬೆಳಗ್ಗೆ 7 ಗಂಟೆಗೆ ಬಂದಾಗ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಇರಲಿಲ್ಲ. ಜ್ವರ ಹೆಚ್ಚಿದೆ ಅಂತ ಖಾಸಗಿ ಆಸ್ಪತ್ರೆಗೆ ರೇಫರ್ ಮಾಡಿದ್ದರು. ಆ ಖಾಸಗಿ ಆಸ್ಪತ್ರೆಯಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹೋಗಿದ್ದರು. ಮಗು ಚೆನ್ನಾಗಿದೆ ಅಂತ ಹೇಳಿ ವೈದ್ಯರು ಕಳಿಸಿದ್ದರು. ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬರಲು ಜ್ವರ ಹೆಚ್ಚಿತ್ತು, ಬಂದಾಗ ತುರ್ತು ಚಿಕಿತ್ಸೆಗೆ ವೈದ್ಯರಿರಲಿಲ್ಲಾ ಅಂತ ಪೊಷಕರು ಆರೋಪಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತ ಮಗುವಿನ ತಾಯಿ ಗೋಳಾಟ ಜೋರಾಗಿತ್ತು. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಹಂಸ (19) ಮೃತ ದುರ್ದೈವಿ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ ನಿನ್ನೆ ರಜೆ ಹಿನ್ನೆಲೆಯಲ್ಲಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಅಲ್ಲೆ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು ಈ ವೇಳೆ ಕೆರೆ ಕೋಡಿ ನೋಡುವ ವೇಳೆ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ 766EEಯ ಹಾರೂಗಾರ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರ ಅಮ್ಮಿನಳ್ಳಿಯ ಅಡಳ್ಳಿ ಮೂಲದವರು ಎನ್ನಲಾಗಿದೆ. ಬೆಳಗಿನ ಜಾವ ಶಿರಸಿಯತ್ತ ತೆರಳುತ್ತಿದ್ದ ಬೈಕ್ ಸವಾರ, ರಸ್ತೆಯಂಚಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ತಲುಪುವ ವೇಳೆಗಾಗಲೇ ಸವಾರ ಮೃತಪಟ್ಟಿದ್ದಾರೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್‌ಗೆ ಕೇರಳ ಬಸ್‌; ಚಾಲಕ ಸ್ಪಾಟ್‌ ಡೆತ್‌

ಚಾಲಕನ ನಿಯಂತ್ರಣ ತಪ್ಪಿ ಕೇರಳ ಬಸ್‌ವೊಂದು ರೋಡ್ ಡಿವೈಡರ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೇರಳ ಬಸ್‌ ಚಾಲಕ ಹಸೀಬ್ (48) ಸ್ಥಳದಲ್ಲೇ ಮೃತಪಟ್ಟವರು. ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest17 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest18 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest18 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest20 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest20 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest22 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest22 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest24 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest2 days ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌