Viral Video | ಮಳೆಯಲ್ಲಿ ನಾಯಿಯ ಭರ್ಜರಿ ಡಾನ್ಸ್​; ಶ್ವಾನದ ಖುಷಿ ನೋಡಿ ಮೆಚ್ಚಿಕೊಂಡ ನೆಟ್ಟಿಗರು - Vistara News

ವೈರಲ್ ನ್ಯೂಸ್

Viral Video | ಮಳೆಯಲ್ಲಿ ನಾಯಿಯ ಭರ್ಜರಿ ಡಾನ್ಸ್​; ಶ್ವಾನದ ಖುಷಿ ನೋಡಿ ಮೆಚ್ಚಿಕೊಂಡ ನೆಟ್ಟಿಗರು

ಈ ನಾಯಿಯ ನೃತ್ಯಕ್ಕೆ ಹಿನ್ನೆಲೆಯಾಗಿ ಲಗಾನ್​ ಸಿನಿಮಾದ ‘ಘನನ ಘನನ ಘಿರ್​ ಘಿರ್​ ಆಯೆ ಬದರಾ’ ಹಾಡನ್ನು ಹಾಕಿ ವೈರಲ್ ಮಾಡಲಾಗಿದೆ. ಆ ಹಾಡಿಗೂ..ಶ್ವಾನದ ಡಾನ್ಸ್​ಗೂ ಸಖತ್​ ಸೂಟ್ ಆಗುತ್ತಿದೆ.

VISTARANEWS.COM


on

Pet Dog Dance In Rain Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಳೆ ಎಷ್ಟೇ ಕಷ್ಟ ತರಲಿ, ಹಾನಿ ಮಾಡಲಿ..ಇದು ಅನೇಕರ ಪಾಲಿಗೆ ಉಲ್ಲಾಸದ ಮೂಲ. ಮಳೆಯನ್ನು ರೊಮ್ಯಾಂಟಿಕ್​​ ಎಂದೂ ಭಾವಿಸುವವರು ಹಲವರಿದ್ದಾರೆ. ನೀವು ಸಿನಿಮಾಗಳನ್ನು ನೋಡಿ, ಅದೆಷ್ಟೋ ಪ್ರೇಮಗೀತೆಗಳನ್ನೆಲ್ಲ ಮಳೆಯಲ್ಲಿ ಚಿತ್ರೀಕರಿಸಲಾಗಿದೆ. ಅದು ಬಿಡಿ, ಇವತ್ತಿಗೂ ನಮ್ಮಲ್ಲಿ ಅನೇಕರು ಮಳೆ ಬಂದರೆ ಅದರಲ್ಲಿ ಮನಸೋ ಇಚ್ಛೆ ನೆನೆಯುತ್ತಾರೆ. ಡಾನ್ಸ್​ ಮಾಡಿ ಖುಷಿಪಡುತ್ತಾರೆ. ಮಸ್ತ್ ಮಜಾ ಮಾಡುತ್ತಾರೆ.

ಆದರೆ ಹೀಗೆ ಮಳೆಯನ್ನು ಇಷ್ಟಪಟ್ಟು, ನೃತ್ಯ ಮಾಡುವವರು ಕೇವಲ ನಾವು ಮನುಷ್ಯರು ಮಾತ್ರವಲ್ಲ ! ನಾಯಿಗಳಿಗೂ ಕ್ರೇಜ್​ ಇರುತ್ತದೆ ಎಂಬುದಕ್ಕೆ ಇದೀಗ ವೈರಲ್ ಆದ ಈ ವಿಡಿಯೋ ಸಾಕ್ಷಿ. ‘ಇಲ್ಲೊಂದು ಶ್ವಾನ ಮಳೆಯಲ್ಲಿ ಅದ್ಭುತವಾಗಿ ಕುಣಿದು ಕುಪ್ಪಳಿಸಿದೆ. ಬಾಲಿವುಡ್​​ನ ‘ಘನನ ಘನನ ಘಿರ್​ ಘಿರ್​ ಆಯೆ ಬದರಾ’ ಎಂಬ ಹಾಡಿಗೆ ಚೆಂದನೆಯ ನೃತ್ಯ ಮಾಡಿದೆ. ‘ಘನನ ಘನನ ..’ ಎಂಬುದು ಮಳೆಯನ್ನು ಸಂಭ್ರಮಿಸುವ ಹಾಡೇ ಆಗಿದ್ದು, ಶ್ವಾನವೂ ಅದನ್ನು ಅಷ್ಟೇ ಸಂಭ್ರಮಿಸಿದೆ.

whiskeyysyal ಎಂಬ ಇನ್​ಸ್ಟಾಗ್ರಾಂ ಅಕೌಂಟ್​​ನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ‘ಹೊರಗೆ ಮಳೆ ಸದ್ದು ಕೇಳುತ್ತಿದ್ದಂತೆ ಶ್ವಾನ ಅಲ್ಲಿಗೆ ಓಡಲು ಅವಸರ ಮಾಡುತ್ತದೆ. ಹೋಗಬೇಕು ಎಂಬ ಕಾತರವನ್ನು ನೋಡಬೇಕು ನೀವು…! ಟೆರೇಸ್ ಬಾಗಿಲನ್ನು ತೆಗೆಯುತ್ತಿದ್ದಂತೆ ಓಡಿ ಹೋಗಿ ಜಂಪ್​ ಮಾಡುತ್ತ, ಮಳೆ ನೀರನ್ನು ಬಾಯಿಗೆ ತೆಗೆದುಕೊಳ್ಳುತ್ತ ಸಖತ್​ ಆಗಿ ಡಾನ್ಸ್​ ಮಾಡುತ್ತದೆ’. ಈಗಾಗಲೇ ಮೂರು ಮಿಲಿಯನ್ಸ್​​ಗಳಷ್ಟು ವೀಕ್ಷಣೆ ಪಡೆದಿರುವ ವಿಡಿಯೋಕ್ಕೆ ನೆಟ್ಟಿಗರು ತುಂಬ ಖುಷಿಯಿಂದ ಕಮೆಂಟ್ ಮಾಡಿದ್ದಾರೆ. ನಾಯಿಯ ಉಲ್ಲಾಸವನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video | ಪರೀಕ್ಷೆ ಬರೆಯಲು ತುಂಬಿದ ನದಿಯಲ್ಲಿ ಈಜಿಕೊಂಡು ಹೋದ ಯುವತಿ; ಸೋದರರ ಕಾವಲು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Viral News: ನೀವು ಐಸ್‌ಕ್ರೀಂ ಪ್ರಿಯರೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇ ಬೇಕು. ಉತ್ತರ ಪ್ರದೇಶದ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಜರಿಹುಳ ಪತ್ತೆಯಾಗಿದೆ. ಸದ್ಯ ಈ ಫೋಟೊ, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕೆಲವು ದಿನಗಳ ಹಿಂದೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಆ ಘಟನೆ ಮರೆಯಾಗುವ ಮುನ್ನವೇ ಈ ಬೆಳವಣಿಗೆ ನಡೆದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚೆಗೆ ಮುಂಬೈಯ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್‌ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಪತ್ತೆಯಾಗಿತ್ತು. ಈ ಶಾಕ್‌ನಿಂದ ಜನರು ಇನ್ನೂ ಹೊರ ಬಂದಿಲ್ಲ. ಅದಕ್ಕಿಂತ ಮೊದಲೇ ಇನ್ನೊಂದು ಅಂತಹ ಅವಾಂತರ ಎದುರಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಮಹಿಳೆಯೊಬ್ಬರು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ತರಿಸಿದ ಪ್ರತಿಷ್ಠಿತ ಬ್ರ್ಯಾಂಡ್‌ನ ಐಸ್‌ಕ್ರೀಂನಲ್ಲಿ ಜರಿಹುಳ (Centipede) ಕಂಡು ಬಂದಿದೆ. ಸದ್ಯ ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ (Viral News).

ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್‌ 12ರಲ್ಲಿ ವಾಸವಾಗಿರುವ ದೀಪಾ ದೇವಿ ಎನ್ನುವ ಮಹಿಳೆ ತನ್ನ 5 ವರ್ಷದ ಮಗನಿಗೆ ಮಾವಿನ ಹಣ್ಣಿನ ಮಿಲ್ಕ್‌ ಶೇಕ್‌ ಮಾಡಿಕೊಡಲು ಆನ್‌ಲೈನ್‌ ಆ್ಯಪ್‌ ಮೂಲಕ ವೆನಿಲ್ಲಾ ಪ್ಲೇವರ್‌ನ ಐಸ್‌ಕ್ರೀಂ ಆರ್ಡರ್‌ ಮಾಡಿದ್ದರು. ಕೆಲಚೇ ಹೊತ್ತಲ್ಲಿ ಪಾರ್ಸಲ್‌ ಏನೋ ಆಕೆಯ ಕೈ ಸೇರಿತು. ಆದರೆ ಬಾಕ್ಸ್‌ ಓಪನ್‌ ಮಾಡಿದಾಗ ಅವರಿಗೆ ಆಘಾತ ಎದುರಾಗಿತ್ತು. ಬಾಕ್ಸ್‌ನ ಮುಚ್ಚಳ ತೆರೆಯುತ್ತಿದ್ದಂತೆ ಐಸ್‌ಕ್ರೀಂನಲ್ಲಿ ಹುದುಗಿದ್ದ ಜರಿಹುಳ ಕಂಡು ಅವರು ಬೆಚ್ಚಿ ಬಿದ್ದಿದ್ದಾರೆ. ಐಸ್‌ಕ್ರೀಂ ಬಂದ ಖುಷಿ ಜರ್ರನೆ ಕರಗಿ ಹೋಗಿತ್ತು.

ವಿಡಿಯೊ ವೈರಲ್‌

ಐಸ್‌ಕ್ರೀಂ ಬಾಕ್ಸ್‌ ಮತ್ತು ಅದರಲ್ಲಿನ ಹುಳವನ್ನು ತೋರಿಸುವ ವಿಡಿಯೊ ವೈರಲ್‌ ಆಗಿದೆ. ವಿಡಿಯೊದಲ್ಲಿ ದೀಪ ದೇವಿ ಅವರು ಬಾಕ್ಸ್‌ ಮುಚ್ಚಳ ತೆರೆಯುತ್ತಿದ್ದಂತೆ ಅದರಲ್ಲಿ ಹುಳ ಇರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಸದ್ಯ ಈ ಘಟನೆ ಆಹಾರ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಹುಳ ಪತ್ತೆಯಾಗಿರುವ ಕುರಿತು ದೀಪಾ ದೇವಿ ಅವರು ಡೆಲಿವರಿ ಮಾಡಿರುವ ಆ್ಯಪ್‌ಗೆ ದೂರು ನೀಡಿದ್ದು, ಕೂಡಲೇ ಅವರು ಹಣವನ್ನು ಹಿಂದಿರುಗಿಸಿದ್ದಾರೆ. ಜತೆಗೆ ಐಸ್‌ಕ್ರೀಂ ಕಂಪನಿಗೆ ಮಾಹಿತಿ ರವಾನಿಸಿದ್ದಾರೆ.

ಈ ವಿಷಯ ಹೊರ ಬೀಳುತ್ತಿದ್ದಂತೆ ಕ್ರಮಕ್ಕೆ ಮುಂದಾದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಸೆಕ್ಟರ್ -22 ರಲ್ಲಿರುವ ಆ್ಯಪ್‌ ಸ್ಟೋರ್‌ಗೆ ಭೇಟಿ ನೀಡಿ ಆ ಬ್ಯಾಚ್ ಐಸ್‌ಕ್ರೀಂ ಮಾರಾಟವನ್ನು ನಿಲ್ಲಿಸಿದೆ. ಜತೆಗೆ ಐಸ್‌ಕ್ರೀಂ ತಯಾರಿಕಾ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಭಾನುವಾರ ಪ್ರಕರಣ ದಾಖಲಾಗಿದೆ. ಇನ್ನು ಐಸ್‌ಕ್ರೀಂನಲ್ಲಿ ಏನೇನು ಪತ್ತೆಯಾಗುತ್ತವೋ ಎಂದು ನೆಟ್ಟಿಗರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

ಮಾನವನ ಬೆರಳು ಪತ್ತೆ

ಕೆಲವು ದಿನಗಳ ಹಿಂದೆ ಮುಂಬೈಯಲ್ಲಿ ಐಸ್‌ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಮುಂಬೈಯ ಮಲಾಡ್ ಪ್ರದೇಶದ ಮಹಿಳೆಯೊಬ್ಬಳು ದಿನಸಿ ವಸ್ತುಗಳ ಜತೆಗೆ ತನ್ನ ಸಹೋದರನಿಗಾಗಿ ಮೂರು ಬಟರ್ ಸ್ಕಾಚ್ ಕೋನ್ ಐಸ್‌ಕ್ರೀಂ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದರು. ಮನೆಗೆ ಬಂದ ಐಸ್‌ಕ್ರೀಂ ಅನ್ನು ಸಹೋದರ ಬಿಚ್ಚಿ ತಿನ್ನುವಾಗ ನಾಲಿಗೆಗೆ ಏನೋ ತಗುಲಿದ ಹಾಗೆ ಆಗಿತ್ತು. ಆಗ ಆತ ಸೂಕ್ಷ್ಮವಾಗಿ ನೋಡಿದಾಗ ಮನುಷ್ಯನ ಕೈ ಬೆರಳು ಕಂಡು ಬಂದಿತ್ತು. ಅದು ಸುಮಾರು 2 ಸೆಂಟಿಮೀಟರ್ ಉದ್ದವಿತ್ತು. ಮಹಿಳೆಯ ಸಹೋದರ ವೈದ್ಯನಾಗಿದ್ದ ಕಾರಣ ಆತ ಅದು ಮನುಷ್ಯನ ಕೈ ಬೆರಳು ಎಂದು ಕೂಡಲೇ ಪತ್ತೆ ಹಚ್ಚಿದ್ದ. ಈ ಸುದ್ದಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

Continue Reading

ವೈರಲ್ ನ್ಯೂಸ್

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Shivraj Chouhan: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆಯ್ಕೆಯಾಗಿದ್ದಾರೆ. ದೆಹಲಿಯಿಂದ ಅವರು ಭೋಪಾಲ್‌ಗೆ ರೈಲಿನಲ್ಲಿ ತೆರಳಿದ್ದು, ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಜನ ಸಾಮಾನ್ಯರೊಂದಿಗೆ ಬೆರೆತು ಪ್ರಯಾಣ ಬೆಳೆಸಿದ ಅವರ ಸರಳತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

VISTARANEWS.COM


on

Shivraj Chouhan
Koo

ಭೋಪಾಲ್‌: ಕೇಂದ್ರ ಸಚಿವ, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Chouhan) ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಬೆಳೆಸಿರುವ ವಿಡಿಯೊ ಸದ್ಯ ವೈರಲ್‌ ಆಗಿದೆ. ಕೇಂದ್ರ ಸಚಿವರ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ (Viral News). ಲೋಕಸಭಾ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರ ವಿದಿಶಾದಿಂದ ಜಯಗಳಿಸಿರುವ ಅವರು ದೆಹಲಿಯಿಂದ ಭೋಪಾಲ್‌ಗೆ ರೈಲಿನಲ್ಲಿ ತೆರಳಿದರು.

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಿಂದ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಸಂಚರಿಸಿದ್ದು, ಪ್ರಯಾಣದ ವೇಳೆ ರೈಲಿನಲ್ಲಿದ್ದ ಸಹಯಾತ್ರಿಕರೊಂದಿಗೆ ನಗು ನಗುತ್ತಾ ಮಾತನಾಡಿದರು. ಚಿಕ್ಕ ಮಕ್ಕಳನ್ನು ಎತ್ತಿ ಮುದ್ದಾಡಿ, ಫೋಟೊಗಳಿಗೆ ಪೋಸ್ ನೀಡಿದರು. ಕೆಲವರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಸಹ ಕಂಡುಬಂತು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಹಂಚಿಕೊಂಡಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಮುಂದಾಳತ್ವದಲ್ಲಿ ಭಾರತೀಯ ರೈಲ್ವೆ ನಿರ್ವಹಣೆ ಮತ್ತು ಕಾರ್ಯಾಚರಣೆಯ ಎಲ್ಲ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ನವ ಭಾರತದ ವೇಗದ ಅಗತ್ಯಗಳನ್ನು ಪೂರೈಸಲು ಮತ್ತು ಪ್ರಯಾಣವನ್ನು ಸುರಕ್ಷಿತ ಮತ್ತು ಆರಾಮದಾಯಕವಾಗಿಸಲು ಭಾರತೀಯ ರೈಲ್ವೆ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಡೆದ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ ಹಲವು ಜನಪರ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ ಖ್ಯಾತಿ ಅವರದ್ದು. ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಅವರು ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಬುಡಕಟ್ಟು ನಾಯಕ ಅರ್ಜುನ್ ಮುಂಡಾ ಅವರ ಬದಲಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಹೊಣೆ ಹೊತ್ತಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಇದನ್ನೂ ಓದಿ: MP Urinating Case: ಮೂತ್ರ ವಿಸರ್ಜನೆ ಕೇಸ್;‌ ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್;‌ ವಿಡಿಯೊ ವೈರಲ್

ಶಿವರಾಜ್ ಸಿಂಗ್ ಚೌಹಾಣ್‌ಗೆ ಸಿಗದ ಸಿಎಂ ಹುದ್ದೆ; ಬಿಕ್ಕಿ ಬಿಕ್ಕಿ ಅತ್ತ ಮಹಿಳೆಯರು!

ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಮರಳಿದ್ದರೂ ಮುಖ್ಯಮಂತ್ರಿಯಾಗಿ ಹೊಸ ಮುಖ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಪಾಲ ಮುಂಗುಭಾಯ್ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರ ಬಂದಾಗ ಮಹಿಳಾ ಅಭಿಮಾನಿಗಳು ಅವರನ್ನು ಭೇಟಿ ಮಾಡಿ ತಮ್ಮ ದುಃಖ ವ್ಯಕ್ತಪಡಿಸಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಪ್ಪಿಕೊಂಡ ಮಹಿಳೆಯರು ಬಿಕ್ಕಿ ಬಿಕ್ಕಿ ಅತ್ತಿರುವ ವಿಡಿಯೊ ವೈರಲ್ ಆಗಿತ್ತು.

Continue Reading

ದೇಶ

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

ರಾಹುಲ್‌ ಗಾಂಧಿ ಅವರು ಬ್ಯಾಂಕ್‌ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡುತ್ತಾರೆ ಎಂದು ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ನಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಗಿಬಿದ್ದಿದ್ದರು. ಉತ್ತರ ಪ್ರದೇಶದಲ್ಲಂತೂ ಮಹಿಳೆಯರು ಕಾಂಗ್ರೆಸ್‌ಗೆ ಕಚೇರಿಗೆ ನುಗ್ಗಿದ್ದರು. ಈಗ ಬಿಹಾರದಲ್ಲೂ ಒಂದು ಲಕ್ಷ ರೂ. ಟಕಾಟಕ್‌ ಹಣಕ್ಕಾಗಿ ನೂರಾರು ಮಹಿಳೆಯರು ಬ್ಯಾಂಕ್‌ಗೆ ತೆರಳಿ, ನಿರಾಸೆಯಿಂದ ಮನೆಗೆ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Bihar Women
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರು ಖಾತೆ ಹಂಚಿಕೆಯನ್ನೂ ಮಾಡಿ ಇಟಲಿಗೆ ತೆರಳಿದ್ದಾರೆ. ಇಷ್ಟಾದರೂ, ರಾಹುಲ್‌ ಗಾಂಧಿ ಅವರು ತಮ್ಮ ಖಾತೆಗೆ ಹಣ ಹಾಕುತ್ತಾರೆ ಎಂದೇ ಮಹಿಳೆಯರು ಭಾವಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ನೂರಾರು ಮಹಿಳೆಯರು ಪಾಸ್‌ಬುಕ್‌ ಹಿಡಿದುಕೊಂಡು, ನಮ್ಮ ಖಾತೆಗೆ ರಾಹುಲ್‌ ಗಾಂಧಿ (Rahul Gandhi) ಹೇಳಿದ ‘ಟಕಾಟಕ್’‌ 1 ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಬಂದ ದಾರಿಗೆ ಸುಂಕವಿಲ್ಲ ಎಂದು ಮನೆಗೆ ತೆರಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರ ಬ್ಯಾಂಕ್‌ ಖಾತೆಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ಜಮೆ ಮಾಡಲಾಗುವುದು ಎಂದು ಚುನಾವಣೆ ಪ್ರಚಾರದ ವೇಳೆ ಘೋಷಣೆ ಮಾಡಿದ್ದರು. ಬಿಹಾರದ ಕೈಮುರ್‌ನಲ್ಲಿ ರಾಹುಲ್‌ ಗಾಂಧಿ ಹೇಳಿದಂತೆ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲಾಗುತ್ತದೆ ಎಂಬ ವದಂತಿ ಹರಡಿದೆ. ಇದನ್ನು ನಂಬಿದ ನೂರಾರು ಮಹಿಳೆಯರು ಬ್ಯಾಂಕ್‌ ಎದುರು ಪಾಸ್‌ಬುಕ್‌ ಹಿಡಿದು, ನಮ್ಮ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಪೊಲೀಸರು ಬಂದು ವಾಸ್ತವ ತಿಳಿಸಿದಾಗ ಮಹಿಳೆಯರು ಹಿಡಿಶಾಪ ಹಾಕುತ್ತ ಮನೆಗೆ ತೆರಳಿದರು ಎನ್ನಲಾಗಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರು ಮಹಿಳೆಯರಿಗೆ 1 ಲಕ್ಷ ರೂ. ನೀಡುವ ಕುರಿತು ಹಲವು ಬಾರಿ ಘೋಷಣೆ ಮಾಡಿದ್ದರು. “ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೆಣ್ಣುಮಕ್ಕಳ ಬ್ಯಾಂಕ್‌ ಖಾತೆಗಳಿಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ನೀಡಲಾಗುತ್ತದೆ. ದೇಶದ ಬಡ ಮಹಿಳೆಯರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತದೆ. ಇದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ. ಟಕಾ ಟಕ್‌ ಅಂತ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ” ಎಂಬುದಾಗಿ ಹೇಳಿದ್ದರು. ಹಾಗಾಗಿ, ಚುನಾವಣೆ ಮುಗಿದ ಕೂಡಲೇ ಮುಸ್ಲಿಂ ಮಹಿಳೆಯರು ಉತ್ತರ ಪ್ರದೇಶದ ಲಖನೌನಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟಿದ್ದರು.

ಕರ್ನಾಟಕದಲ್ಲೂ ಖಾತೆ ತೆರೆಯಲು ಕ್ಯೂ

ಕಾಂಗ್ರೆಸ್‌ನಿಂದ ಮಹಿಳೆಯರ ಬ್ಯಾಂಕ್‌ ಖಾತೆಗೆ 1 ಲಕ್ಷ ರೂ. ಜಮೆಯಾಗುತ್ತದೆ ಎಂದು ಭಾವಿಸಿ ಬೆಂಗಳೂರಿನ ಹಲವೆಡೆ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ ಎದುರು ಸಾಲಾಗಿ ನಿಂತಿರುವುದು ಕಂಡು ಬಂದಿತ್ತು. ಬೆಂಗಳೂರಿನ ಶಿವಾಜಿ ನಗರ, ವಸಂತನಗರ ಸೇರಿ ಹಲವೆಡೆ ಮುಸ್ಲಿಂ ಮಹಿಳೆಯರು ಬ್ಯಾಂಕ್‌ ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಎದುರು ಸಾಲುಗಟ್ಟಿ ನಿಂತಿದ್ದರು. ಕಾಂಗ್ರೆಸ್‌ 1 ಲಕ್ಷ ರೂ. ಗ್ಯಾರಂಟಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಂದಾಗಿದ್ದರು.

ಇದನ್ನೂ ಓದಿ: Congress Guarantee: ಗ್ಯಾರಂಟಿಗಾಗಿ ದಾಖಲೆ ಅಪ್ಡೇಟ್‌; ಆಧಾರ್‌, ಬ್ಯಾಂಕ್‌, ಪೋಸ್ಟ್‌ ಆಫೀಸ್‌ಗೆ ಮುಗಿಬಿದ್ದ ಜನ

Continue Reading

Latest

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral News: ಕ್ರೀಂ, ಲೋಷನ್ ಹಚ್ಚಿ ಫೇಸ್ ಮಸಾಜ್ ಮಾಡುವುದರ ಬಗ್ಗೆ ಕೇಳಿರುತ್ತೀರಿ. ಆದರೆ ಉತ್ತರಪ್ರದೇಶದ ಈ ಮುಸ್ಲಿಂ ಕ್ಷೌರಿಕ ತನ್ನ ಬಳಿ ಫೇಸ್ ಮಸಾಜ್ ಮಾಡಿಸಿಕೊಳ್ಳಲು ಬಂದ ಯುವಕನ ಮುಖಕ್ಕೆ ಎಂಜಲು ಹಚ್ಚಿ ಮಸಾಜ್ ಮಾಡಿದ್ದಾನೆ, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

VISTARANEWS.COM


on

Viral News
Koo

ಹುಡುಗಿಯರ ಹಾಗೇ ಹುಡುಗರಿಗೂ ಸುಂದರವಾಗಿ ಕಾಣಬೇಕೆಂಬ ಆಸೆ ಇರುತ್ತದೆ. ಹಾಗಾಗಿ ಹುಡುಗಿಯರು ಬ್ಯೂಟಿ ಪಾರ್ಲರ್ ನಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಂಡ ಹಾಗೆ ಹುಡುಗರು ಕ್ಷೌರದ ಅಂಗಡಿಯಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ. ಆದರೆ ಇತ್ತೀಚೆಗೆ ವ್ಯಕ್ತಿಯೊಬ್ಬ ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿ ಅವಾಂತರ ಮಾಡಿಕೊಂಡ ವಿಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಫೇಸ್‌ ಮಸಾಜ್‌ ಮಾಡಿಕೊಂಡರೆ ಮುಖದಲ್ಲಿ ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ದಣಿದ ಮುಖಕ್ಕೆ ರಿಲೀಫ್‌ ಆಗುತ್ತೆ ಎಂದು ಕೆಲವರು ದುಡ್ಡು ಸುರಿದು ಮಸಾಜ್‌ ಮಾಡಿಕೊಳ್ಳುತ್ತಾರೆ. ಹೀಗೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿನ ಕ್ಷೌರದಂಗಡಿಗೆ ವ್ಯಕ್ತಿಯೊಬ್ಬ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿದ್ದಾನೆ. ಆದರೆ ಕ್ಷೌರದಂಗಡಿಯವನು ಕ್ರೀಂ, ಲೋಷನ್‌ಗಳನ್ನು ಹಚ್ಚಿ ಮುಖಕ್ಕೆ ಮಸಾಜ್‌ ಮಾಡುವುದರ ಬದಲು ಎಂಜಲು ಉಗಿದು ಮಸಾಜ್‌ ಮಾಡಿದ್ದಾನಂತೆ. . ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರೋಪಿ ಅಮ್ಜದ್ ಎಂಬುದಾಗಿ ತಿಳಿದುಬಂದಿದೆ. @TruestoryUP ಎಂಬ ಹೆಸರಿನ ಖಾತೆಯಲ್ಲಿ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಈತನ ಘೋರ ಕೃತ್ಯದ ದೃಶ್ಯ ವೈರಲ್ ಆಗಿದ್ದು, ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:James Wan: ಜೇಮ್ಸ್‌ ವಾನ್‌ ನಿರ್ದೇಶನದ ಈ 6 ಥ್ರಿಲ್ಲರ್‌ ಚಿತ್ರಗಳನ್ನು ತಪ್ಪದೇ ನೋಡಿ!

ಜೂನ್ 8ರಂದು ಈ ವಿಡಿಯೊ ಹಂಚಿಕೊಂಡಿದ್ದು, ಇದನ್ನು16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ ಮತ್ತು ಈತನ ಕೃತ್ಯದ ವಿರುದ್ಧ ವೀಕ್ಷಕರು ಪ್ರತಿಕ್ರಿಯೆ ನೀಡಿದ್ದಾರೆ.

Continue Reading
Advertisement
R Ashok
ಕರ್ನಾಟಕ4 mins ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್23 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್36 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ49 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್55 mins ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ1 hour ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ1 hour ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್1 hour ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Electric shock
ಚಿಕ್ಕಮಗಳೂರು2 hours ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Grand Prix 2024 Competition
ಕ್ರೀಡೆ2 hours ago

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ49 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌