Dead Body Found | ಮಗನನ್ನು ಕಾಪಾಡಲು ಸೌಪರ್ಣಿಕಾ ನದಿಗೆ ಜಿಗಿದು ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ - Vistara News

ಉಡುಪಿ

Dead Body Found | ಮಗನನ್ನು ಕಾಪಾಡಲು ಸೌಪರ್ಣಿಕಾ ನದಿಗೆ ಜಿಗಿದು ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ

ನೀರಿಗೆ ಬಿದ್ದ ಮಗನನ್ನು ರಕ್ಷಿಸಲೆಂದು ನದಿಗೆ ಹಾರಿ ಸೆಳವಿನಲ್ಲಿ ಸಿಕ್ಕಿ ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆಯಾಗಿದೆ.

VISTARANEWS.COM


on

Dead Body Found
ಮೃತ ಮಹಿಳೆ ಚಾಂದಿ ಶೇಖರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಸೌಪರ್ಣಿಕಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಮಹಿಳೆಯ ಶವ (Dead Body Found) ಸೋಮವಾರ (ಸೆ.12) ಪತ್ತೆಯಾಗಿದೆ. ಕೇರಳ ಮೂಲದ ಕುಟುಂಬದೊಂದಿಗೆ ಬಂದಿದ್ದ ಚಾಂದಿ ಶೇಖರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಈ ಹಿಂದೆ ನದಿಗೆ ಬಿದ್ದದ್ದ ಮಗನನ್ನು ಕಾಪಾಡುವ ಭರದಲ್ಲಿ ಮಹಿಳೆ ನೀರು ಪಾಲಾಗಿದ್ದರು. ಸೌಪರ್ಣಿಕಾ ನದಿಯ ಮೂರುವರೆ ಕಿ.ಮೀ ದೂರದಲ್ಲಿ ಶವ ಪತ್ತೆಯಾಗಿದೆ.

ಇದನ್ನೂ ಓದಿ | Women Murder | ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಸೌಪರ್ಣಿಕಾ ನದಿಯಲ್ಲಿ ನೀರಿನ ಒತ್ತಡದ ನಡುವೆಯೂ ಸಾಹಸಿಗ ಈಶ್ವರ್ ಮಲ್ಪೆ ಕಾರ್ಯಾಚರಣೆ ಮಾಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲುಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಮಳೆ ಪ್ರಮಾಣ ತಗ್ಗಿದ್ದರೂ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ. ಶುಕ್ರವಾರವೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವೆಡೆ ಚದುರಿದಂತೆ ಮಧ್ಯಮ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಹಲವೆಡೆ ಭಾರೀ ಮಳೆಯಾಗಲಿದೆ. ಬೆಂಗಳೂರಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿ ಸೇರಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿಯು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Rain News : ಮಳೆಯು ಅನಾಹುತವನ್ನೇ (Rain Effect) ಸೃಷ್ಟಿಸುತ್ತಿದೆ. ನಿರಂತರ ಮಳೆಗೆ ಮಣ್ಣಿನ ಮನೆ ಕುಸಿದು ಬಿದ್ದಿದೆ. ಪರಿಣಾಮ ಮನೆಯೊಳಗಿದ್ದ ವ್ಯಕ್ತಿಯೊಬ್ಬರು ಉಸಿರು ಚೆಲ್ಲಿದ್ದಾರೆ. ಇನ್ನೊಂದು ವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬಾಗಲಕೋಟೆ/ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಬಾಗಲಕೋಟೆಯ ಜಮಖಂಡಿ ನಗರದ ಮೋಮಿನ ಗಲ್ಲಿಯಲ್ಲಿ ನಿರಂತರ ಮಳೆಗೆ (Rain News) ಮಣ್ಣಿನ ಮನೆ ಕುಸಿದಿದ್ದು, ಮನೆಯೊಳಗಿದ್ದ ವ್ಯಕ್ತಿ ದಾರುಣವಾಗಿ ಮೃತಪಟ್ಟಿದ್ದಾರೆ. ಮುಸ್ತಾಕ ಮಕಬುಲ್ ಸಾಬ್ ಆವಟಿ (43)‌ ಮೃತ ದುರ್ದೈವಿ‌.

ಜೋರಾಗಿ ಸುರಿದ ಮಳೆಗೆ ಮಣ್ಣಿನ ಮನೆಯು ಏಕಾಏಕಿ ಕುಸಿದಿದೆ. ಈ ವೇಳೆ ಮುಸ್ತಾಕ ಮಕಬುಲ್‌ ಅವರು ಮನೆಯೊಳಗೆ ಮಲಗಿದ್ದು, ಇವರ ಮೈಮೇಲೆ ಮಣ್ಣು ಕುಸಿದ ಪರಿಣಾಮ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಮುಸ್ತಾಕ ಅವರ ಪತ್ನಿ- ಮಕ್ಕಳು ಪಕ್ಕದ ಇನ್ನೊಂದು ಮನೆಯಲ್ಲಿದ್ದಾಗ ಘಟನೆ ನಡೆದಿದೆ. ಇನ್ನೂ ಮಣ್ಣಿನ ಅವಶೇಷಗಳಡಿ ಸಿಲುಕಿದ‌ ಮೃತದೇಹವನ್ನು ಹೊರ ತೆಗೆಯಲಾಯಿತು.

ತಹಸೀಲ್ದಾರ್‌ ಸದಾಶಿವ ಮುಕ್ಕೋಜಿ ಹಾಗೂ ಶಹರ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರಿನಲ್ಲೂ ಮುಂದುವರಿದ ವರ್ಷಧಾರೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯು ಮುಂದುವರಿದಿದೆ. ಕೆಆರ್‌ ಸರ್ಕಲ್‌, ವಿಧಾನಸೌಧ, ಶಿವಾಜಿನಗರ, ವಸಂತ ನಗರ, ಮೆಜೆಸ್ಟಿಕ್‌, ಕೆಂಗೇರಿ, ಜ್ಞಾನಭಾರತಿ, ನಾಗರಭಾವಿ ಸುತ್ತಮುತ್ತ ಮಳೆಯಾಗಿದೆ. ಬಿಟ್ಟು ಬಿಟ್ಟು ಜೋರಾಗಿ ಮಳೆ ಸುರಿಯುತ್ತಿದ್ದು, ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಶಾಲೆ ಬಿಡುವ ಸಂದರ್ಭದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಲಘು ಮಳೆ ಸಾಧ್ಯತೆ

ಜೂನ್‌ 14ರಂದು ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Karnataka Rain : ಸತತ ಮಳೆಗೆ (Rain Effect) ಉತ್ತರ ಒಳನಾಡಿನ ಭಾಗ ತತ್ತರಿಸಿ ಹೋಗಿದೆ. ಗಂಟೆ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾಯಚೂರಿನಲ್ಲಿ ಮಳೆಗೆ ಶಾಲೆಯ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿದ್ದಾರೆ.

VISTARANEWS.COM


on

By

Karnataka Rain Effect
Koo

ರಾಯಚೂರು: ಮಳೆ ಅವಾಂತರಕ್ಕೆ (Rain Effect) ಶಾಲೆ ಚಾವಣಿ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪಾತಾಪುರ ಗ್ರಾಮದಲ್ಲಿ (Karnataka Rain)ಘಟನೆ ನಡೆದಿದೆ. ತರಗತಿ ನಡೆಯುತ್ತಿರುವಾಗಲೇ ಏಕಾಏಕಿ ಚಾವಣಿ ಕಳಚಿ ಮಕ್ಕಳ ಬಿದ್ದಿದ್ದು, ತಲೆ, ಕೈಗಳಿಗೆ ಗಾಯವಾಗಿದೆ.

ಪಾತಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾವಣಿ ಕುಸಿದು, ವಿದ್ಯಾರ್ಥಿ ಚಂದನಬಸವರಾಜ್‌ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಾಂತರ ಸೃಷ್ಟಿಯಾಗಿದೆ.

ಮಕ್ಕಳು ಜೀವ ಭಯದಲ್ಲಿ ಪಾಠ ಕಲಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿಇಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಠಡಿ ಸೋರುತ್ತಿರುವುದರಿಂದ ತಾತ್ಕಾಲಿಕವಾಗಿ ಬೇರೆ ತರಗತಿ ನಡೆಸಲು ಸೂಚಿಸಲಾಗಿದೆ. ತಾತ್ಕಾಲಿಕವಾಗಿ ಗ್ರಾಮದ ಕರಿಲಿಂಗೇಶ್ವರ ದೇವಸ್ಥಾನದಲ್ಲಿ ತರಗತಿ ನಡೆಸಲು ಬಿಇಓ ಸೂಚನೆ ನೀಡಿದ್ದಾರೆ.

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಜಲಸಮಾಧಿಯಾದ ಬೃಹತ್‌ ಬಾವಿ

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಮೀನಿನಲ್ಲಿದ್ದ ಬೃಹತ್ ಬಾವಿಯೊಂದು ಜಲಸಮಾಧಿಯಾಗಿದೆ. ಬಾವಿ ಸುತ್ತಲೂ ಕಲ್ಲಿನ ಗೋಡೆ ನಿರ್ಮಿಸಿದರೂ ಬಾವಿ ಕುಸಿದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಗ್ರಾಮದಲ್ಲಿ ಘಟನೆ ನಡೆದಿದೆ.

14 ಎಕರೆ ಜಮೀನಿಗಾಗಿ 60 ಲಕ್ಷ ರೂ. ಖರ್ಚು ಮಾಡಿ ಜಮೀನಿನಲ್ಲಿ ರೈತ ಸಿದ್ದಪ್ಪ ಸರಬಡಗಿ ಬಾವಿಯನ್ನು ಕಟ್ಟಿಸಿದ್ದರು. ಇದೀಗ ಸಂಪೂರ್ಣವಾಗಿ ಬಾವಿ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ಚಿಂತೆಗೀಡಾಗಿದ್ದಾರೆ. 110 ಆಳದ ಬಾವಿಗೆ ಸುತ್ತಲೂ 45 ಅಡಿ ಕಲ್ಲಿನ ಗೋಡೆ ಕಟ್ಟಿಸಲಾಗಿತ್ತು. ಇದೀಗ ಬಾವಿಯೊಳಗೆ 7.5ಎಚ್‌ಪಿ 2 ಮೋಟಾರು ನೀರು ಪಾಲಾಗಿದೆ. ಬಾವಿ ಕುಸಿದಿರುವ ಹಿನ್ನೆಲೆ ಕೃಷಿಗೆ ನೀರು ಪೂರೈಸುವುದು ಹೇಗೆ ಎಂದು ಗೋಳಾಡುತ್ತಿದ್ದಾರೆ. ಕೂಡಲೇ ಸರ್ಕಾರ ಪರಿಹಾರ ಕೊಡಲಿಎಂದು ಆಗ್ರಹಿಸಿದ್ದಾರೆ.

ಒಂದೇ ಮಳೆಗೆ ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ ಭರ್ತಿ

ಒಂದೇ ಮಳೆಗೆ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಡ್ಯಾಂ ಭರ್ತಿಯಾಗಿದೆ. ತುಂಗಾ ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಮೀಟರ್‌ ಇದ್ದು, ಈಗಾಗಲೇ ನೀರಿನ ಮಟ್ಟ 588.11 ಮೀ ಬಂದಿದೆ. ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಗೆ ತುಂಗಾ ಜಲಾಶಯವೇ ಆಧಾರವಾಗಿತ್ತು. ಗಾಜನೂರಿನ ತುಂಗಾ ಜಲಾಶಯದ 3.24 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿವಮೊಗ್ಗದ ತೀರ್ಥಹಳ್ಳಿ ಹಾಗೂ ಚಿಕ್ಕಮಗಳೂರಿನ ಶೃಂಗೇರಿ ಭಾಗದಲ್ಲಿ ಧಾರಾಕಾರ ಸುರಿದ ಮಳೆಯಿಂದಾಗಿ ತುಂಗಾ ನದಿಯಲ್ಲಿ ಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಭರ್ತಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

Rain News : ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರೆ ಇತ್ತ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನಲ್ಲಿ ಹಲವೆಡೆ ಬುಧವಾರ (Karnataka Weather Forecast) ಅಬ್ಬರಿಸಲಿದೆ. ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಹಲವೆಡೆ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಬೆಂಗಳೂರಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಯೆಲ್ಲೋ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು

ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kuwait Fire
ವಿದೇಶ36 seconds ago

Kuwait Fire: ಕುವೈತ್‌ ಅಗ್ನಿ ದುರಂತ; 45 ಭಾರತೀಯರ ಮೃತದೇಹ ಇಂದು ಸ್ವದೇಶಕ್ಕೆ

Wild Elephant
ಪ್ರಮುಖ ಸುದ್ದಿ9 mins ago

Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

Araku Valley Tour
ಪ್ರವಾಸ29 mins ago

Araku Valley Tour: ಆಂಧ್ರಪ್ರದೇಶದ ಅರಕು ವ್ಯಾಲಿ; ಹಲವು ಅದ್ಭುತಗಳ ಸಂಗಮ

T20 World Cup
ಪ್ರಮುಖ ಸುದ್ದಿ37 mins ago

T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

Junk Food Side Effects
ಆರೋಗ್ಯ50 mins ago

Junk Food Side Effects: ಗೇಮಿಂಗ್‌ ದಾಸರಾದ ಮಕ್ಕಳು ಜಂಕ್‌ ಫುಡ್‌ ವ್ಯಸನಿಗಳಾಗುವ ಸಂಭವ ಹೆಚ್ಚು!

Narendra Modi
ಪ್ರಮುಖ ಸುದ್ದಿ1 hour ago

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

karnataka weather Forecast
ಮಳೆ1 hour ago

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Amith Shah
ಪ್ರಮುಖ ಸುದ್ದಿ1 hour ago

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Leg Cramps At Night
ಆರೋಗ್ಯ2 hours ago

Leg Cramps At Night: ರಾತ್ರಿ ಮಲಗಿದಾಗ ಕಾಡುವ ಕಾಲುನೋವಿಗೆ ಇದೆ ಪರಿಹಾರ!

Dina Bhavishya
ಭವಿಷ್ಯ3 hours ago

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌