Kabza Movie | ಉಪ್ಪಿ ಹುಟ್ಟುಹಬ್ಬಕ್ಕೆ ಕಬ್ಜ ಟೀಸರ್‌ ಗಿಫ್ಟ್‌ - Vistara News

ಸಿನಿಮಾ

Kabza Movie | ಉಪ್ಪಿ ಹುಟ್ಟುಹಬ್ಬಕ್ಕೆ ಕಬ್ಜ ಟೀಸರ್‌ ಗಿಫ್ಟ್‌

ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಬಹು ನಿರೀಕ್ಷಿತ ಚಿತ್ರ ಕಬ್ಜ (Kabza Movie) ಟೀಸರ್‌ ಬಿಡುಗಡೆಯ ದಿನಾಂಕ ಪ್ರಕಟಗೊಂಡಿದೆ.

VISTARANEWS.COM


on

Kabza Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಇಬ್ಬರು ಪ್ಯಾನ್‌ ಇಂಡಿಯಾ ಸ್ಟಾರ್‌ ನಟರಾದ ಕಿಚ್ಚ ಸುದೀಪ್‌, ರಿಯಲ್‌ ಸ್ಟಾರ್‌ ಉಪೇಂದ್ರ ನಟನೆಯ ಬಹುನಿರೀಕ್ಷಿತ ಕಬ್ಜ ಚಿತ್ರದ ಟೀಸರ್‌ ಬಿಡುಗಡೆಯ ದಿನಾಂಕ ಫಿಕ್ಸ್‌ (Kabza Movie) ಆಗಿದೆ.

ಚಿತ್ರದ ಟೀಸರ್‌ ಇದೇ ಸೆ.17ಕ್ಕೆ ಬಿಡುಗಡೆಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಆರ್‌. ಚಂದ್ರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸೆ. 18ಕ್ಕೆ ಉಪೇಂದ್ರ ಜನುಮದಿನವಿದ್ದು, ಇದಕ್ಕೆ ಒಂದು ದಿನ ಮುಂಚಿತವಾಗಿಯೇ ಟೀಸರ್‌ ಬಿಡುಗಡೆಗೊಳ್ಳುತ್ತಿದೆ. ಈ ಚಿತ್ರದಲ್ಲಿ ಬಹುಭಾಷಾ ನಟಿ ಶ್ರೀಯಾ ಶರಣ್‌ ಸಹ ನಟಿಸಿದ್ದು, ಸಾಕಷ್ಟು ಕುತೂಹಲವನ್ನು ಈಗಾಗಲೇ ಹುಟ್ಟುಹಾಕಿದೆ.

ಈ ಚಿತ್ರದ ವಿಶೇಷವೆಂದರೆ ಮೊದಲ ಹಂತದಲ್ಲಿಯೇ ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದ ಟೆಕ್ನಿಕಲ್‌ ಹೆಡ್‌ ಸಿ.ವಿ.ರಾವ್‌ ಹಾಗೂ ನಿರ್ದೇಶಕ ರಾಜಮೌಳಿ ಅವರ ಗಮನ ಸೆಳೆದಿತ್ತು. ಚಿತ್ರದ ವಿಷ್ಯುವಲ್‌ ನೋಡಿ ಈ ಇಬ್ಬರು ಘಟಾನುಘಟಿಗಳು ಮೆಚ್ಚಿಕೊಂಡಿದ್ದರು. ಇದು ಈ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

Kabza Movie

ಇದನ್ನೂ ಓದಿ | Kannada Movies | ಒಗ್ಗಟ್ಟಿಗೆ ಸಾಕ್ಷಿಯಾದ ಸ್ಯಾಂಡಲ್‌ವುಡ್‌; ಇದು ತಾರೆಗಳ ಸಮಾಗಮ!

ಇಲ್ಲಿಯವರೆಗೆ ಸಿನಿಮಾದ ಪೋಸ್ಟರ್‌ ಅಷ್ಟೇ ಅನಾವರಣಗೊಂಡಿದ್ದು, ಕಬ್ಜ ಸಿನಿಮಾದ ಟೀಸರ್‌ ಆನಂದ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಸಂಜೆ 5.4ಕ್ಕೆ ಬಿಡುಗಡೆ ಆಗುತ್ತಿದೆ. ಭೂಗತ ಲೋಕದ ಗ್ಯಾಂಗ್‌ ಸ್ಟಾರ್‌ ಕಥೆಯನ್ನು ಹೇಳಲು ಹೊರಟಿದೆ ಚಿತ್ರತಂಡ.

ಕಬ್ಜ ಸಿನಿಮಾ ಏಳು ಭಾಷೆಗಳಲ್ಲಿ ಬಿಡುಗಡೆಗೊಳ್ಳುತ್ತಿರುವುದು ವಿಶೇಷ. ಏಕಕಾಲದಲ್ಲಿ ಏಳು ಬಾಷೆಗಳಲ್ಲಿ ಡಬ್ಬಿಂಗ್‌ ಆಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಒಂದು ಹಾಡಿನ ಚಿತ್ರೀಕರಣ ಬಿಟ್ಟು ಉಳಿದೆಲ್ಲ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಹೇಳಲಾಗಿದೆ.

Kabza Movie

ಇದನ್ನೂ ಓದಿ | Ponniyin Selvan: I | ಅಮೆಜಾನ್‌ ಪ್ರೈಮ್‌ಗೆ 125 ಕೋಟಿ ರೂ.ಗೆ ಮಾರಾಟವಾದ ಪೊನ್ನಿಯನ್ ಸೆಲ್ವನ್ ಸಿನಿಮಾ: ಸೆ.30ಕ್ಕೆ ತೆರೆಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Martin Movie: ಬಹುನೀರಿಕ್ಷಿತ ʼಮಾರ್ಟಿನ್ʼ ರಿಲೀಸ್ ಡೇಟ್ ಫಿಕ್ಸ್‌; 3 ವರ್ಷಗಳ ನಂತರ ತೆರೆಗೆ ಆ್ಯಕ್ಷನ್ ಪ್ರಿನ್ಸ್ ಎಂಟ್ರಿ

Martin Movie: ʼಮಾರ್ಟಿನ್ʼ ಸಿನಿಮಾ, ಆ್ಯಕ್ಷನ್-ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 5ನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

VISTARANEWS.COM


on

Martin Movie
Koo

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನೀರಿಕ್ಷಿತ ʼಮಾರ್ಟಿನ್ʼ ಚಿತ್ರದ ರಿಲೀಸ್ ಡೇಟ್ ಫಿಕ್ಸ್‌ ಆಗಿದೆ. ಎ.ಪಿ. ಅರ್ಜುನ್ ನಿರ್ದೇಶನದ ʼಮಾರ್ಟಿನ್ʼ (Martin Movie) ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜುಗೊಂಡಿದ್ದು, ಅಕ್ಟೋಬರ್‌ 11ಕ್ಕೆ ತೆರೆಗೆ ಅಪ್ಪಲಿಸಲಿದೆ.

ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು ಬಂದ್‌ ಆಗಲಿವೆ ಎಂಬ ಸುದ್ದಿ ಹರಿದಾಡುತ್ತಿರುವ ನಡುವೆ ‘ಮಾರ್ಟಿನ್’ ಚಿತ್ರತಂಡ ಬಿಗ್ ಅನೌನ್ಸ್‌ಮೆಂಟ್ ಮಾಡಿದೆ. ಈ ಚಿತ್ರವು ಆ್ಯಕ್ಷನ್-ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 5ನೇ ಚಿತ್ರವಾಗಿದ್ದು, ಉದಯ್ ಕೆ.ಮೆಹ್ತಾ ಈ ಅದ್ಧೂರಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸುಮಾರು ದಿನಗಳಿಂದ ಸಿ.ಜಿ ಕೆಲಸಗಳಲ್ಲಿ ನಿರತವಾಗಿದ್ದ ಮಾರ್ಟಿನ್ ಚಿತ್ರತಂಡ, ಇದೀಗ ರಿಲೀಸ್‌ ದಿನಾಂಕ ಘೋಷಣೆ ಮಾಡಿದೆ. ಪೊಗರು ಚಿತ್ರದ ಬಳಿಕ 3 ವರ್ಷಗಳ ನಂತರ ಧ್ರುವ ಸರ್ಜಾ ತೆರೆಗೆ ಎಂಟ್ರಿ ನೀಡುತ್ತಿದ್ದು, ಚಿತ್ರವು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ನಿರ್ದೇಶಕ ಎ.ಪಿ.ಅರ್ಜುನ್ ಮಾತನಾಡಿ, ರಿಲೀಸ್ ಯಾವಾಗ? ಯಾವಾಗ? ಅಂತ ಅಭಿಮಾನಿಗಳು ಕೇಳುತ್ತಿದ್ದರು. ಇದೀಗ ಫೈನಲ್‌ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದೇವೆ. ಅಕ್ಟೋಬರ್ 11ಕ್ಕೆ‌ ನಿಮ್ಮ ಮುಂದೆ ಬರುತ್ತೇವೆ. ನಾನು ಮಾತನಾಡಲ್ಲ, ನಮ್ಮ ಸಿನಿಮಾ ಮಾತನಾಡುತ್ತೆ. ಏನೇ ಸಮಸ್ಯೆ ಬಂದರೂ‌ ಒದ್ದಾಡಿ, ಗುದ್ಡಾಡಿ ಕೊನಗೂ ಸಿನಿಮಾ ಮುಗಿಸಿದ್ದೇವೆ. ತಮಿಳುನಾಡು, ಹೈದರಾಬಾದ್, ಕೇರಳ, ಮುಂಬೈಗೆ ಹೋಗಿ ಪ್ರಮೋಷನ್ ಮಾಡಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ಇರಲಿ. ನನ್ನ ಎಲ್ಲಾ ಸಿನಿಮಾಗಳನ್ನು ಮಗು ಥರ ಟ್ರೀಟ್ ಮಾಡ್ತೀನಿ, ಮಾರ್ಟಿನ್ ಆರನೇ ಸಿನಿಮಾ. ನನ್ನ ಪಾಲಿಗೆ ಇದು ಆರನೇ ಮಗು ಎಂದು ಹೇಳಿದರು.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ | Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡಿರುವ ಸಿನಿಮಾ ‘ಮಾರ್ಟಿನ್ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸಾಲು ಸಾಲು ಸಿನಿಮಾಗಳಲ್ಲಿ ಧ್ರುವ ಬ್ಯುಸಿ

ನಿರ್ದೇಶಕ ಪ್ರೇಮ್‌ ಹಾಗೂ ಧ್ರುವ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು.ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಧ್ರುವ ಸರ್ಜಾ ರೈನಾ ಎಂಬ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಮಾಸ್ ಲುಕ್‌ನಲ್ಲಿ ಧ್ರುವ ಸರ್ಜಾ ಕಂಡಿದ್ದಾರೆ. ಶಿವಾರ್ಜುನ್ ನಿರ್ದೇಶನ ಹಾಗೂ ಉದಯ ಮೆಹ್ತಾ ನಿರ್ಮಾಣ ಈ ಚಿತ್ರಕ್ಕಿದೆ.

Continue Reading

ಸಿನಿಮಾ

Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

Kannada New Movie: ಪ್ರಚಲಿತ ವಿದ್ಯಮಾನದಲ್ಲಿ ’ಪೆನ್‌ಡ್ರೈವ್’ ಸಾಕಷ್ಟು ಸದ್ದು ಮಾಡುತ್ತಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರುತ್ತಿದ್ದು, ’ದೊಡ್ಡವರಲ್ಲ ಜಾಣರಲ್ಲ’ ಎಂಬ ಅಡಿಬರಹವಿದ್ದು, ಈ ಹಿಂದೆ ’ಪಾತರಗಿತ್ತಿ’ಎನ್ನುವ ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದ ಕೆರ್ನಳ್ಳಿ ಈಶ್ವರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

VISTARANEWS.COM


on

Kannada New Movie The movie is becoming a pendrive
Koo

ಬೆಂಗಳೂರು: ’ಪೆನ್‌ಡ್ರೈವ್’ (Pendrive) ಪ್ರಚಲಿತ ವಿದ್ಯಮಾನದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ರಾಜಕೀಯದಲ್ಲಿ ಹೆಚ್ಚೇ ಎಂದು ಹೇಳಬಹುದು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು (Kannada New Movie) ಸೆಟ್ಟೇರುತ್ತಿದ್ದು, ’ದೊಡ್ಡವರೆಲ್ಲ ಜಾಣರಲ್ಲ’ ಎಂಬ ಅಡಿಬರಹವಿದೆ. ಈ ಹಿಂದೆ ’ಪಾತರಗಿತ್ತಿ’ ಎನ್ನುವ ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದ ಕೆರ್ನಳ್ಳಿ ಈಶ್ವರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್‌

ಮನುಷ್ಯನೊಬ್ಬ ಮುಖವಾಡ ಹಾಕಿಕೊಂಡು ಪೆನ್‌ಡ್ರೈವ್ ಹಿಡಿದುಕೊಂಡಿರುವುದು, ಮರದ ಬಳ್ಳಿಯಲ್ಲಿ ಎಲೆಗಳ ಬದಲು ಪೆನ್‌ಡ್ರೈವ್‌ಗಳು ಇರುವ ಪೋಸ್ಟರ್ ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿದೆ. ಸೂಪರ್ ಮೂವೀಸ್ ಮೇಕರ‍್ಸ್ ಅಡಿಯಲ್ಲಿ ಲೋಕೇಶ್ ಆರ್. ಬಂಡವಾಳ ಹೂಡುತ್ತಿದ್ದಾರೆ. ಮಂಜುನಾಥ ಎಂ.ಸಿ. ಮತ್ತು ಬದ್ರುದ್ದೀನ್ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: makemytrip : ರೈಲು ಪ್ರಯಾಣದ ವೇಳೆ ಹೊಸತನ ತರಲು ವೈಶಿಷ್ಟ್ಯಗಳನ್ನು ಪರಿಚಯಿಸಿದ ಮೇಕ್‌ಮೈಟ್ರಿಪ್‌

ಶೀರ್ಷಿಕೆಗೂ ಕಥೆಗೂ ಏನು ಸಂಬಂಧ. ಯಾರ‍್ಯಾರು ತಗಲಿಕೊಳ್ತಾರೆ. ಇದೇ ಟೈಟಲ್ ನೀಡಲು ಯಾರಿಂದ ಉತ್ತೇಜನ ಸಿಕ್ಕಿತು. ಏನೆಲ್ಲಾ ಅಂಶಗಳು ಇರಲಿದೆ. ಚಿತ್ರದಲ್ಲಿ ಪೊಲೀಸ್, ಕೋರ್ಟು, ವಕೀಲರು, ದಸ್ತಗಿರಿ ಹೀಗೆಲ್ಲ ಇರುತ್ತಾ ಎಂಬುದಕ್ಕೆ ನಿರ್ದೇಶಕರು ದಸ್ತಗಿರಿನೂ ಆಗುತ್ತೆ. ಜೈಲು ಊಟಾನೂ ಇರುತ್ತೆ. ಅದು ಸಿನಿಮಾದ ಮೂಲಕಥೆ. ಒಟ್ಟಿನಲ್ಲಿ ಎಲ್ಲರೂ ಊಹಿಸುವಂತಹ ಪಾತ್ರಗಳು ಬರುತ್ತದೆ ಎಂದಷ್ಟೇ ಹೇಳಿ ಉತ್ತರ ಕೊಡದೆ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ.

ಸದ್ಯ ರಾಜಕೀಯ ವಲಯ, ಹಲವರ ವೈಯಕ್ತಿಕ ಬದುಕಿನಲ್ಲಿ ಪೆನ್‌ಡ್ರೈವ್ ಸಂಚಲನವನ್ನು ಹುಟ್ಟಿಸುತ್ತಾ ಮಹತ್ವದ ಪಾತ್ರವನ್ನು ವಹಿಸುತ್ತಿದೆ. ಟೈಟಲ್ ಕೇಳಿದ ತಕ್ಷಣ ಕೇವಲ ಒಂದೇ ಕೋನದಿಂದ ಯಾಕೆ ಯೋಚನೆ ಮಾಡುತ್ತೀರಾ. ಅದರೊಳಗಡೆ ಏನನ್ನಾದರೂ ತುಂಬಿಸಬಹುದು. ಆದರೆ ಅದರ ಒಳಗಡೆ ಜನರು ನಿರೀಕ್ಷೆ ಮಾಡುವುದಕ್ಕಿಂತ ಹೆಚ್ಚಾಗಿ ವಿಷಯಗಳು ಇರುತ್ತವೆ. ಅದು ದೊಡ್ಡವರು ಅಥವಾ ಚಿಕ್ಕವರು ಇರಬಹುದು. ಸಮಾಜದ ಎಲ್ಲಾ ಮುಖಗಳು ಸಿಗುತ್ತದೆ. ಇದನ್ನು ಸಕರಾತ್ಮಕವಾಗಿ ನೋಡಿದರೆ ಆಗುವುದಾದರೂ ಏನು? ಒಟ್ಟಿನಲ್ಲಿ ಯಾರಿಗೂ ಅನ್ವಯವಾಗುವಂತ ಸನ್ನಿವೇಶಗಳು ಇರುವುದಿಲ್ಲ. ದೃಶ್ಯಗಳು ಸತ್ಯವೋ, ಮಿಥ್ಯವೋ ಎಂಬುದು ತೆರೆಕಂಡ ನಂತರ ತಿಳಿಯಲಿದೆ. ಅದ್ದೂರಿ ತಾರಾಗಣ ಇರುತ್ತದೆ. ಎಲ್ಲವನ್ನು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎನ್ನುತ್ತಾರೆ ಈಶ್ವರ್.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ಬೆಂಗಳೂರು, ಬಳ್ಳಾರಿ, ಹಾಸನ, ಸಕಲೇಶಪುರ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಸಂಗೀತ ಹಂಸರಾಗ, ಛಾಯಾಗ್ರಹಣ ವಿಜಯ್ ರಾಘವ್, ಸಂಭಾಷಣೆ ಶ್ರೀಹರ್ಷ ಚಿತ್ರದುರ್ಗ, ಜೀವನ್‌ರಾಂ ಸಂಕಲನ ಇರಲಿದೆ.

Continue Reading

ಸಿನಿಮಾ

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

ಮಾರ್ಚ್ 29 ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಈಗ ಒಟಿಟಿಯಲ್ಲಿ (Crew on OTT) ಬಿಡುಗಡೆಯಾಗಿದೆ. ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರ ಪರಿಪೂರ್ಣ ಮನರಂಜನೆಯನ್ನು ಪ್ರೇಕ್ಷಕರಿಗೆ ಒದಗಿಸಲು ಸಫಲವಾಗಿದೆ.

VISTARANEWS.COM


on

By

Crew on OTT
Koo

ಟಬು (Tabu), ಕರೀನಾ ಕಪೂರ್ ಖಾನ್ (Kareena Kapoor Khan) ಮತ್ತು ಕೃತಿ ಸನೋನ್ (Kriti Sanon) ನಟಿಸಿರುವ ‘ಕ್ರ್ಯೂ’ ಚಿತ್ರ ಒಟಿಟಿಯಲ್ಲಿ (Crew on OTT) ಮೇ 24ರಂದು ಬಿಡುಗಡೆಯಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡ ಬಳಿಕ ಅತ್ಯುತ್ತಮ ಕಾಮಿಡಿ ಚಲನಚಿತ್ರವಾದ ಕ್ರ್ಯೂ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾಗಿದೆ. ರಾಜೇಶ್ ಎ. ಕೃಷ್ಣನ್ ನಿರ್ದೇಶನದ ‘ಕ್ರ್ಯೂ’ ಈಗ ವಿಶ್ವದ 190 ದೇಶಗಳಲ್ಲಿ ಪ್ರದರ್ಶನ ಕಾಣಲಿದೆ.

ನೆಟ್‌ಫ್ಲಿಕ್ಸ್‌ನಲ್ಲಿ ಚಿತ್ರದ ಪ್ರಥಮ ಪ್ರದರ್ಶನದ ಕುರಿತು ಮಾತನಾಡಿದ ನಿರ್ಮಾಪಕರಾದ ರಿಯಾ ಕಪೂರ್ ಮತ್ತು ಏಕ್ತಾ ಆರ್ ಕಪೂರ್ , ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಕ್ರ್ಯೂ ಅನ್ನು ನೆಟ್‌ಫ್ಲಿಕ್ಸ್‌ ಗೆ ತರಲು ನಾವು ರೋಮಾಂಚನಗೊಂಡಿದ್ದೇವೆ. ಈ ಚಿತ್ರವು ಸ್ನೇಹ, ವಂಚನೆ ಮತ್ತು ದೃಢತೆಯನ್ನು ಹಾಸ್ಯದ ಮೂಲಕ ಹೇಳಲು ಪ್ರಯತ್ನಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಪ್ರೇಕ್ಷಕರು ನೆಟ್‌ಫ್ಲಿಕ್ಸ್‌ನಲ್ಲಿ ಪ್ರತ್ಯೇಕವಾಗಿ ಸಸ್ಪೆನ್ಸ್, ಹಾಸ್ಯ ಮತ್ತು ನಾಟಕದ ಅನುಭವವನ್ನು ಪಡೆಯಲು ಕಾಯುವುದು ಸಾಧ್ಯವಿಲ್ಲ. ಇದು ಪ್ರೇಕ್ಷಕರನ್ನು ಆಸನದ ತುದಿಯಲ್ಲಿ ಕುರಿಸುವಂತೆ ಮಾಡುವ ಕಥೆಯಾಗಿದೆ ಎಂದು ಹೇಳಿದ್ದಾರೆ.

ಬಹುತೇಕ ದಿವಾಳಿಯಾದ ಏರ್‌ಲೈನ್‌ನ ಹಿನ್ನೆಲೆ ಕಥೆಯನ್ನು ಒಳಗೊಂಡಿರುವ ‘ಕ್ರ್ಯೂ’, ತಮ್ಮ ಜೀವನ ನಿರ್ವಹಣೆಗೆ ಪ್ರಯತ್ನಿಸುತ್ತಿರುವ ಮೂವರು ಮಹಿಳೆಯರು ಸುಳ್ಳಿನ ಜಾಲದಲ್ಲಿ ಸಿಕ್ಕಿಹಾಕಿಕೊಳ್ಳುವ ಕಥೆಯ ಸುತ್ತ ಸುತ್ತುತ್ತದೆ.

ಮಾರ್ಚ್ 29ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಬಿಡುಗಡೆಯಾದ ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿದೆ. ಇದರಲ್ಲಿ ದಿಲ್ಜಿತ್ ದೋಸಾಂಜ್, ಕಪಿಲ್ ಶರ್ಮಾ, ಶಾಶ್ವತ ಚಟರ್ಜಿ, ರಾಜೇಶ್ ಶರ್ಮಾ, ಕುಲಭೂಷಣ್ ಖರ್ಬಂದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಾಲಿವುಡ್ ನ ಹಾಸ್ಯ ಚಿತ್ರವಾದ ಕ್ರ್ಯೂ ಪರಿಪೂರ್ಣ ಮನರಂಜನೆಯನ್ನು ಒದಗಿಸುವುದರಲ್ಲಿ ಸಂದೇಹವಿಲ್ಲ ಎಂದು ಅವರು ವಿವರಿಸಿದ್ದಾರೆ.

ಈ ಐದು ಕಾರಣಕ್ಕಾಗಿ ಈ ಚಿತ್ರವನ್ನು ಪ್ರತಿಯೊಬ್ಬರೂ ವೀಕ್ಷಿಸಬಹುದು.

ಇದನ್ನೂ ಓದಿ: Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

1. ಎಲ್ಲರನ್ನೂ ಮೋಡಿ ಮಾಡಲಿದೆ

‘ಕ್ರ್ಯೂ’ ಚಿತ್ರ ವೀಕ್ಷಿಸುತ್ತಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಾಸ್ಯದ ಸಂಪೂರ್ಣ ಮನೋರಂಜನೆಯನ್ನು ಸವಿಯಬಹುದು. ಖಂಡಿತ ಈ ಚಿತ್ರ ಯಾರನ್ನೂ ನಿರಾಶೆಗೊಳಿಸುವುದಿಲ್ಲ. ಆರ್ಥಿಕ ಬಿಕ್ಕಟ್ಟಿನ ನಡುವೆ ತಮ್ಮ ಜೀವನವನ್ನು ಸುಗಮವಾಗಿ ಸಾಗುವಂತೆ ಮಾಡಲು ಪ್ರಯತ್ನಿಸುತ್ತಿರುವ ಮೂವರು ಗಗನಸಖಿಯರ ಮೇಲೆ ಚಲನಚಿತ್ರವು ಕೇಂದ್ರೀಕೃತವಾಗಿದೆ. ‘ಕ್ರ್ಯೂ’ ವಾಸ್ತವವಾಗಿ ಸಿನಿ ಪ್ರಿಯರನನ್ನು ನಗೆಗಡಲಿನಲ್ಲಿ ತೇಲಿಸಿ ಮೋಡಿ ಮಾಡುತ್ತದೆ.

2. ಸಸ್ಪೆನ್ಸ್‌

ಹಾಸ್ಯಮಯ ಚಿತ್ರವಾದರೂ ಸಸ್ಪೆನ್ಸ್‌ಗೆ ಬಂದಾಗ ಚಿತ್ರ ಸೂಪರ್ ಎನ್ನುವಂತೆ ಮಾಡುತ್ತದೆ. ಚಿತ್ರದಲ್ಲಿ ಯಾವುದೇ ಕ್ಷಣವೂ ಬೇಸರ ತರಿಸುವುದಿಲ್ಲ. ಕರೀನಾ ಮತ್ತು ಟಬು ತಮ್ಮ ಅಭಿನಯದಿಂದ ಎಲ್ಲರ ಮನಗೆದ್ದಿದ್ದಾರೆ.

3. ಅಪರೂಪದ ಕಥೆ

ಮೂವರು ನಟಿಯರನ್ನೇ ಮುಖ್ಯ ಭೂಮಿಕೆಯಲ್ಲಿ ಇರಿಸಿರುವ ಈ ಚಿತ್ರ ಬಾಲಿವುಡ್ ಚಲನಚಿತ್ರಗಳಲ್ಲಿ ಅಪರೂಪದ ಚಿತ್ರವಾಗಿದೆ. ಚಲನಚಿತ್ರವು ಸ್ತ್ರೀ ಸ್ನೇಹದ ವಿವಿಧ ಪದರಗಳನ್ನು ಪರಿಶೋಧಿಸುತ್ತದೆ.


4. ಹೃದಯ ಗೆಲ್ಲುವ ಅಭಿನಯ

ಚಿತ್ರದಲ್ಲಿ ಎದ್ದುಕಾಣುವ ಒಂದು ವಿಷಯವೆಂದರೆ ಮುಖ್ಯ ಪಾತ್ರ ಮತ್ತು ಪೋಷಕ ಪಾತ್ರಗಳ ಪ್ರಭಾವಶಾಲಿ ಅಭಿನಯ. ಟಬು, ಕೃತಿ ಸನೋನ್ ಮತ್ತು ಕರೀನಾ ಕಪೂರ್ ಖಾನ್ ಅವರು ತೆರೆಯ ಮೇಲೆ ಅದ್ಭುತವಾದ ಒಡನಾಟವನ್ನು ಹಂಚಿಕೊಂಡಿದ್ದಾರೆ. ಏತನ್ಮಧ್ಯೆ, ಕಪಿಲ್ ಶರ್ಮಾ ಮತ್ತು ದಿಲ್ಜಿತ್ ದೋಸಾಂಜ್ ಅವರು ಸಣ್ಣ ಅವಧಿಗೆ ಬಂದುಹೋದರೂ ಪ್ರೇಕ್ಷಕರ ಹೃದಯ ಗೆಲ್ಲುತ್ತಾರೆ.

5. ಹಾಸ್ಯ ಚಿತ್ರ

ಮಹಿಳೆಯರು ಹಾಸ್ಯ ಚಿತ್ರಗಳನ್ನು ಚೆನ್ನಾಗಿ ಮಾಡಬಲ್ಲರು ಎಂಬುದನ್ನು ಈ ಚಿತ್ರ ಪ್ರತಿಪಾದಿಸುತ್ತದೆ. ಹಾಸ್ಯ ಚಿತ್ರಗಳನ್ನು ಮಹಿಳಾ ನಟಿಯರು ಉತ್ತಮವಾಗಿ ಮಾಡಬಹುದು ಎಂಬುದನ್ನು ‘ಕ್ರ್ಯೂ’ ಸಾಬೀತುಪಡಿಸುತ್ತದೆ.

Continue Reading

ಬೆಂಗಳೂರು

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Soundarya Jagadish : ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ (Self Harming) ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದ್ದು, ಒಂದು ತಿಂಗಳ ನಂತರ ಅವರು ಬರೆದಿಟ್ಟ ಡೆತ್‌ನೋಟ್‌ (Death Note) ಸಿಕ್ಕಿದೆ. ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಂತೆ ಮೂವರು ಬ್ಯುಸಿನೆಸ್ ‌ಪಾರ್ಟ್ನರ್ಸ್ (Business Partners ) ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

By

Soundarya Jagadish Cheating by soundarya Constructions Business Partners
ಸೌಂದರ್ಯ ಜಗದೀಶ್‌ರೊಂದಿಗೆ ಇರುವ ವೈಟ್ ಶರ್ಟ್ ಧರಿಸುವವರು ಸುರೇಶ್ ಹಾಗೂ ಚೆಕ್ಸ್ ಶರ್ಟ್ ಹೊಂಬಣ್ಣ
Koo

ಬೆಂಗಳೂರು: ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಕಳೆದ ಏಪ್ರಿಲ್‌ 14ರಂದು ಮಹಾಲಕ್ಷ್ಮಿ ಲೇಔಟ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಆತ್ಮಹತ್ಯೆ ಕೇಸ್‌ಗೆ ಸ್ಫೋಟಕ ತಿರುವು ಸಿಕ್ಕಿದ್ದು, ಬ್ಯುಸಿನೆಸ್‌ ಪಾರ್ಟ್ನರ್ಸ್ ದೋಖಾ ಬಯಲಾಗಿದೆ.

ಬ್ಯುಸಿನೆಸ್ ಪಾರ್ಟನರ್ಸ್ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೌಂದರ್ಯ ಜಗದೀಶ್‌ ಮೃತಪಟ್ಟ ಒಂದು ತಿಂಗಳ ನಂತರ ಅವರ ರೂಮಿನಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ಸೌಂದರ್ಯ ಜಗದೀಶ್‌ ಬರೆದ ಡೆತ್‌ನೋಟ್‌ನಲ್ಲಿ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ನ ಸಹ ಪಾಲುದಾರರಿಂದ ಸುಮಾರು 60 ಕೋಟಿ ರೂ. ಹಣ ನಷ್ಟವಾಗಿದ್ದು, ಮೋಸ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಹೀಗಾಗಿ ಸೌಂದರ್ಯ ಜಗದೀಶ್‌ ಪತ್ನಿ ಶಶಿರೇಖಾ ಡೆತ್‌ನೋಟ್‌ ಪತ್ತೆ ಆಗುತ್ತಿದ್ದಂತೆ ಪಾಲುದಾರರ ವಿರುದ್ಧ ದೂರು ದಾಖಲಿಸಿದ್ದಾರೆ. ಸುರೇಶ್‌ ಹಾಗೂ ಹೊಂಬಣ್ಣ ಸೇರಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಳ್ಳಲು ನೇರವಾಗಿ ಕಾರಣಕರ್ತರಾಗಿದ್ದಾರೆ. ಇವರಿಬ್ಬರು ಜಗದೀಶ್‌ ಅವರೊಂದಿಗೆ ಸೇರಿಕೊಂಡು ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯನ್ನು ನಡೆಸಿಕೊಂಡು ಹೋಗುತ್ತಿದ್ದರು. ಈ ವೇಳೆ ಜಗದೀಶ್‌ ಅವರಿಂದ ಹಣವನ್ನು ಹೂಡಿಕೆ ಮಾಡಿಸಿ ಕಂಪನಿಯು ಲಾಭದಲ್ಲಿದ್ದರು ನಷ್ಟದಲ್ಲಿದೆ ಎಂದು ಸುಳ್ಳು ಹೇಳಿದ್ದರು. ಮಾತ್ರವಲ್ಲದೇ ಸುಳ್ಳು ಹೇಳಿ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ನಲ್ಲಿ ಅಡಮಾನ ಇರಿಸಿದ್ದಾರೆ. ಅದರ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

ನಂತರ ಇಲ್ಲ-ಸಲ್ಲದ ಸಬೂಬು ಹೇಳಿ ಖಾಲಿ ಚೆಕ್‌ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್‌ ಅವರ ಸಹಿಯನ್ನು ನಕಲು ಮಾಡಿಕೊಂಡು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದರೆ ಜಗದೀಶ್‌ ಅವರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಯಾವುದೋ ವಿಷಯಕ್ಕೆ ಜಗದೀಶ್‌ ಅವರನ್ನು ಬ್ಲಾಕ್‌ಮೇಲ್‌ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಕಂಪನಿಯು ನಷ್ಟದಲ್ಲಿದೆ ಎಂದು ಹೇಳಿ ಹಣವನ್ನು ಕೊಡದೆ ಮೋಸ ಮಾಡಿದ್ದಾರೆ ಎಂದು ಶಶಿರೇಖಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪತಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಒಂದು ವಾರದ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ನಿರಂತರವಾಗಿ ಫೋನ್‌ ಮಾಡಿದ್ದರು. ಇವರ ಕರೆ ಬಂದಾಗ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದು, ಇದರಿಂದ ಮನನೊಂದು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್‌ ಪತ್ನಿ ಶಶಿರೇಖಾ ಆರೋಪಿಸಿದ್ದಾರೆ.

ಬ್ಯುಸಿನೆಸ್‌ ಪಾರ್ಟ್ನಸ್‌ಗಳಿಂದ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಪತಿ ಸೌಂದರ್ಯ ಜಗದೀಶ್‌ ಸಾವಿಗೆ ಸುರೇಶ್‌, ಹೊಂಬಣ್ಣ ಹಾಗೂ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯ ಮ್ಯಾನೇಜರ್‌ ಸುದೀಂದ್ರ ಕಾರಣ ಎಂದು ಪತ್ನಿ ಶಶಿರೇಖಾ ದೂರು ನೀಡಿದ್ದಾರೆ. ಸದ್ಯ ಈ ಡೆತ್‌ನೋಟ್ ಆಧರಿಸಿ ಪತ್ನಿ ಶಶಿರೇಖಾ ಮಹಾಲಕ್ಷ್ಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ದೇಶ5 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ5 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು5 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ5 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ6 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ6 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ7 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ7 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ7 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್7 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌