ಭಾಷಾ ವೈವಿಧ್ಯತೆ ದೇಶದ ಹೆಮ್ಮೆ, ಅದರಲ್ಲಿ ವೈಷಮ್ಯ ಸೃಷ್ಟಿಸುವ ಪ್ರಯತ್ನ ಬೇಡ: ಪ್ರಧಾನಿ ಮೋದಿ

ದೇಶ

ಭಾಷಾ ವೈವಿಧ್ಯತೆ ದೇಶದ ಹೆಮ್ಮೆ, ಅದರಲ್ಲಿ ವೈಷಮ್ಯ ಸೃಷ್ಟಿಸುವ ಪ್ರಯತ್ನ ಬೇಡ: ಪ್ರಧಾನಿ ಮೋದಿ

Narendra Modi: ಇಂದು ಜೈಪುರದಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿ ಪ್ರಾದೇಶಿಕ ಭಾಷೆಯೂ ದೇಶದ ಸಂಸ್ಕೃತಿಯ ಪ್ರತಿಬಿಂಬ ಎಂದಿದ್ದಾರೆ.

VISTARANEWS.COM


on

PM Narendra Modi
ಪ್ರಧಾನಿ ನರೇಂದ್ರ ಮೋದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಪರಿಗಣಿಸಬೇಕೋ? ಬೇಡವೋ ಎಂಬುದೊಂದು ಚರ್ಚೆ ದೇಶದಲ್ಲಿ ಆಗಾಗ ಮುನ್ನೆಲೆಗೆ ಬರುತ್ತದೆ. ಇದು ಆರೋಗ್ಯಕರ ಚರ್ಚೆಯಾಗಿರುವ ಬದಲು ಟೀಕೆ, ವ್ಯಂಗ್ಯ, ವಾಗ್ದಾಳಿಯ ಸ್ವರೂಪ ಪಡೆಯುತ್ತದೆ. ಅನೇಕರು ಭಾಷೆ ವಿಚಾರವನ್ನಿಟ್ಟುಕೊಂಡು ವೈಷಮ್ಯ ಪ್ರಚೋದಿಸುವ ಹೇಳಿಕೆಗಳನ್ನು ನೀಡುವುದು ಸಾಮಾನ್ಯವಾಗಿಬಿಟ್ಟಿದೆ. ಈ ಬಗ್ಗೆ ಇಂದಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪ್ರಸ್ತಾಪ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ವರ್ಚ್ಯುವಲ್‌ ಆಗಿ ಮಾತನಾಡಿದ ಅವರು, ಭಾಷಾ ವೈವಿಧ್ಯತೆ ಎಂಬುದು ಈ ದೇಶದ ಹೆಮ್ಮೆ. ಆದರೆ ಭಾಷೆಯ ವಿಚಾರವನ್ನೇ ಮುಖ್ಯವಾಗಿಟ್ಟುಕೊಂಡು ವಿವಾದ ಸೃಷ್ಟಿಸುವ ಪ್ರಯತ್ನಗಳು ಇತ್ತೀಚೆಗೆ ಜಾಸ್ತಿಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಈ ದೇಶದಲ್ಲಿರುವ ಪ್ರತಿ ಪ್ರಾದೇಶಿಕ ಭಾಷೆಯೂ ಭಾರತೀಯ ಸಂಸ್ಕೃತಿಯ ಪ್ರತಿಬಿಂಬಕ ಮತ್ತು ಅವೆಲ್ಲವೂ ಗೌರವಾರ್ಹ ಎಂದು ಬಿಜೆಪಿ ಭಾವಿಸುತ್ತದೆ. ಭಾಷಾ ವೈವಿದ್ಯತೆ ದೇಶದ ಭವಿಷ್ಯದೊಂದಿಗೆ ಸಂಪರ್ಕ ಹೊಂದಿರುವ ವಿಚಾರ. ಇದರಲ್ಲೂ ದ್ವೇಷ ಬಿತ್ತುವುದು ಸರಿಯಲ್ಲ. ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯಲ್ಲಿ ಪ್ರತಿ ಭಾಷೆಗೂ ಮಹತ್ವ ನೀಡಲಾಗಿದೆ. ಇದು ಪ್ರಾದೇಶಿಕ ಭಾಷೆಯೆಡೆಗಿನ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಅವಧಿಗೂ ನಾನೇ ಪ್ರಧಾನಿಯೆಂದು ಪರೋಕ್ಷವಾಗಿ ಹೇಳಿದರಾ ನರೇಂದ್ರ ಮೋದಿ?

ಸಂಸದೀಯ ಅಧಿಕೃತ ಭಾಷೆಗಳ ಸಮಿತಿ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್‌ ಷಾ ಕಳೆದ ತಿಂಗಳು ಸಮಿತಿಯ ಸದಸ್ಯರಿಗೆ ಹೇಳಿದ್ದ ಒಂದು ಮಾತು ವಿವಾದ ಸೃಷ್ಟಿಸಿತ್ತು. ಕೇಂದ್ರ ಸಂಪುಟದ ಶೇ. 70ರಷ್ಟು ಕಾರ್ಯಸೂಚಿಗಳನ್ನು ಹಿಂದಿಯಲ್ಲೇ ಸಿದ್ಧಪಡಿಸಲಾಗುತ್ತಿದೆ. ದೇಶದ ಏಕತೆ ದೃಷ್ಟಿಯಿಂದ, ಹಿಂದಿಯನ್ನು ಪ್ರಮುಖ ಭಾಷೆಯನ್ನಾಗಿ ಮಾಡುವ ಸಮಯ ಬಂದಿದೆ. ಅಂದರೆ ಎರಡು ಬೇರೆ ರಾಜ್ಯಗಳ, ಪ್ರದೇಶಗಳ ಜನರು ಸಂವಹನ ನಡೆಸುವ ಸಮಯ ಬಂದಾದ ಇಂಗ್ಲಿಷ್‌ನ್ನು ಪ್ರಯೋಗ ಮಾಡುತ್ತಿದ್ದಾರೆ. ದೇಶದಲ್ಲಿ ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿಯನ್ನು ಪರಿಗಣಿಸಬೇಕು ಎಂದು ಹೇಳಿದ್ದರು. ಇದಕ್ಕೆ ದೇಶಾದ್ಯಂತ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳೂ ಆರೋಪ ಮಾಡಿದ್ದವು. ಮತ್ತೆ ಸ್ಪಷ್ಟನೆ ಕೊಟ್ಟ ಕೇಂದ್ರ ಗೃಹ ಇಲಾಖೆ, ಹಿಂದಿಯನ್ನು ಇಂಗ್ಲಿಷ್‌ ಭಾಷೆಗೆ ಪರ್ಯಾಯ ಮಾಡಬೇಕು ಎಂದು ಅಮಿತ್‌ ಷಾ ಹೇಳಿದ್ದಾರೆಯೇ ಹೊರತು, ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಗೆ ಪರ್ಯಾಯ ಎಂದು ಹೇಳಿಲ್ಲ ಎಂಬ ಸ್ಪಷ್ಟನೆಯನ್ನು ಕೊಟ್ಟಿತ್ತು. ಅದರ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು ತಮ್ಮ ಭಾಷಣದಲ್ಲಿ ಭಾಷಾ ವಿಷಯವನ್ನೂ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನಾವ್ಯಾರೂ ವಿಶ್ರಮಿಸುವಂತಿಲ್ಲ; ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಮಾತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Shivraj Chouhan: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆಯ್ಕೆಯಾಗಿದ್ದಾರೆ. ದೆಹಲಿಯಿಂದ ಅವರು ಭೋಪಾಲ್‌ಗೆ ರೈಲಿನಲ್ಲಿ ತೆರಳಿದ್ದು, ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಜನ ಸಾಮಾನ್ಯರೊಂದಿಗೆ ಬೆರೆತು ಪ್ರಯಾಣ ಬೆಳೆಸಿದ ಅವರ ಸರಳತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

VISTARANEWS.COM


on

Shivraj Chouhan
Koo

ಭೋಪಾಲ್‌: ಕೇಂದ್ರ ಸಚಿವ, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Chouhan) ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಬೆಳೆಸಿರುವ ವಿಡಿಯೊ ಸದ್ಯ ವೈರಲ್‌ ಆಗಿದೆ. ಕೇಂದ್ರ ಸಚಿವರ ಸರಳತೆಗೆ ಮೆಚ್ಚುಗೆ ವ್ಯಕ್ತವಾಗಿದೆ (Viral News). ಲೋಕಸಭಾ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರ ವಿದಿಶಾದಿಂದ ಜಯಗಳಿಸಿರುವ ಅವರು ದೆಹಲಿಯಿಂದ ಭೋಪಾಲ್‌ಗೆ ರೈಲಿನಲ್ಲಿ ತೆರಳಿದರು.

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಿಂದ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಸಂಚರಿಸಿದ್ದು, ಪ್ರಯಾಣದ ವೇಳೆ ರೈಲಿನಲ್ಲಿದ್ದ ಸಹಯಾತ್ರಿಕರೊಂದಿಗೆ ನಗು ನಗುತ್ತಾ ಮಾತನಾಡಿದರು. ಚಿಕ್ಕ ಮಕ್ಕಳನ್ನು ಎತ್ತಿ ಮುದ್ದಾಡಿ, ಫೋಟೊಗಳಿಗೆ ಪೋಸ್ ನೀಡಿದರು. ಕೆಲವರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಸಹ ಕಂಡುಬಂತು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಹಂಚಿಕೊಂಡಿರುವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಮುಂದಾಳತ್ವದಲ್ಲಿ ಭಾರತೀಯ ರೈಲ್ವೆ ನಿರ್ವಹಣೆ ಮತ್ತು ಕಾರ್ಯಾಚರಣೆಯ ಎಲ್ಲ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ನವ ಭಾರತದ ವೇಗದ ಅಗತ್ಯಗಳನ್ನು ಪೂರೈಸಲು ಮತ್ತು ಪ್ರಯಾಣವನ್ನು ಸುರಕ್ಷಿತ ಮತ್ತು ಆರಾಮದಾಯಕವಾಗಿಸಲು ಭಾರತೀಯ ರೈಲ್ವೆ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಡೆದ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನ ಪಾತ್ರ ವಹಿಸಿದ್ದರು. ಮುಖ್ಯಮಂತ್ರಿಯಾಗಿ ಹಲವು ಜನಪರ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ ಖ್ಯಾತಿ ಅವರದ್ದು. ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಅವರು ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಬುಡಕಟ್ಟು ನಾಯಕ ಅರ್ಜುನ್ ಮುಂಡಾ ಅವರ ಬದಲಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಹೊಣೆ ಹೊತ್ತಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ಅವರ ವಿರುದ್ಧ ಬರೋಬ್ಬರಿ 8.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಇದನ್ನೂ ಓದಿ: MP Urinating Case: ಮೂತ್ರ ವಿಸರ್ಜನೆ ಕೇಸ್;‌ ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್;‌ ವಿಡಿಯೊ ವೈರಲ್

ಶಿವರಾಜ್ ಸಿಂಗ್ ಚೌಹಾಣ್‌ಗೆ ಸಿಗದ ಸಿಎಂ ಹುದ್ದೆ; ಬಿಕ್ಕಿ ಬಿಕ್ಕಿ ಅತ್ತ ಮಹಿಳೆಯರು!

ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಮರಳಿದ್ದರೂ ಮುಖ್ಯಮಂತ್ರಿಯಾಗಿ ಹೊಸ ಮುಖ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿತ್ತು. ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಪಾಲ ಮುಂಗುಭಾಯ್ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿ ಹೊರ ಬಂದಾಗ ಮಹಿಳಾ ಅಭಿಮಾನಿಗಳು ಅವರನ್ನು ಭೇಟಿ ಮಾಡಿ ತಮ್ಮ ದುಃಖ ವ್ಯಕ್ತಪಡಿಸಿದ್ದರು. ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಪ್ಪಿಕೊಂಡ ಮಹಿಳೆಯರು ಬಿಕ್ಕಿ ಬಿಕ್ಕಿ ಅತ್ತಿರುವ ವಿಡಿಯೊ ವೈರಲ್ ಆಗಿತ್ತು.

Continue Reading

ವಾಣಿಜ್ಯ

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

PMAY: ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರ ಸ್ವಂತ ಸೂರಿನ ಕನಸು ನನಸು ಮಾಡಲೆಂದೇ ಸರ್ಕಾರ ಜಾರಿಗೆ ತಂದ ಯೋಜನೆ ಪಿಎಂಎವೈ (ಪ್ರಧಾನ ಮಂತ್ರಿ ಆವಾಸ್ ಯೋಜನೆ). ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ.

VISTARANEWS.COM


on

PMAY
Koo

ಬೆಂಗಳೂರು: ಸ್ವಂತ ಮನೆ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಆದರೆ ಈ ದುಬಾರಿ ದುನಿಯಾದಲ್ಲಿ ಸ್ವಂತದ್ದೊಂದು ಸೂರು ಕಟ್ಟಿಕೊಳ್ಳುವ ಆಸೆ ದುಬಾರಿಯೇ ಸರಿ. ಅದರಲ್ಲಿಯೂ ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರಂತೂ ಇದಕ್ಕಾಗಿ ಜೀವಮಾನವಿಡೀ ದುಡಿದಿದ್ದನ್ನು ಮೀಸಲಿಡಬೇಕಾದ ಸ್ಥಿತಿ ಇದೆ. ಆದರೆ ಗೊತ್ತಿರಲಿ ಇಂತಹವರಿಗೆಂದೇ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana-PMAY) ಜಾರಿಗೆ ತಂದಿದೆ. ಅಂದರೆ ಕೇಂದ್ರ ಸರ್ಕಾರ ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ (How To Apply For PMAY).

ಏನಿದು ಯೋಜನೆ?

ದೇಶದ ಎಲ್ಲರಿಗೂ ಸೂರು ಒದಗಿಸಬೇಕು ಎನ್ನುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2015-16ರಲ್ಲಿ ಈ ಯೋಜನೆಯನ್ನು ಪರಿಚಯಿಸಿದೆ. ಈ ಮೂಲಕ ನಗರ ಮತ್ತು ಗ್ರಾಮೀಣದ ಪ್ರದೇಶದ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಮನೆ ನಿರ್ಮಿಸಿ ಕೊಡಲಾಗುತ್ತದೆ. ಈ ಯೋಜನೆಯಡಿ ವಾರ್ಷಿಕ ಶೇ. 6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. 10 ವರ್ಷಗಳಲ್ಲಿ ಈ ಯೋಜನೆ ಮೂಲಕ ಸುಮಾರು 4.21 ಮನೆಗಳನ್ನು ನಿರ್ಮಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳನ್ನು ನಿರ್ಮಿಸಿ ಕೊಡುವ ತೀರ್ಮಾನವನ್ನು ಈಗಾಗಲೇ ಪ್ರಕಟಿಸಿದೆ. ಮೊದಲ ಸಂಪುಟ ಸಭೆಯಲ್ಲಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮನೆಯಲ್ಲಿ ಏನಿರಲಿದೆ?

ಸರ್ಕಾರ ನಿರ್ಮಿಸಿ ಕೊಡುವ ಈ ಮನೆ ಅಗತ್ಯ ಮೂಲ ಸೌಕರ್ಯಗಳನ್ನು ಒಳಗೊಂಡಿರುತ್ತದೆ. ಶೌಚಾಲಯ, ಎಲ್‌ಪಿಜಿ ಕನೆಕ್ಷನ್‌, ವಿದ್ಯುತ್‌ ಸಂಪರ್ಕ ಮತ್ತು ನೀರಿನ ಸೌಲಭ್ಯ ಹೊಂದಿರುತ್ತದೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ನಗರ ಮತ್ತು ಗ್ರಾಮೀಣ ಎನ್ನುವ ಎರಡು ವಿಧವಿದೆ.

ಈ ಯೋಜನೆಯನ್ನು ಫಲಾನುಭವಿಗಳ ವಾರ್ಷಿಕ ಆದಾಯದ ಆಧಾರದಲ್ಲಿ 4 ವರ್ಗಗಳನ್ನಾಗಿ ವಿಂಗಡಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗ (EWS)- 3 ಲಕ್ಷ ರೂ.ವರೆಗೆ ಆದಾಯ
ಕಡಿಮೆ ಆದಾಯದ ಗುಂಪು (LIG): 3 ಲಕ್ಷ ರೂ.- 6 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-1): 6 ಲಕ್ಷ ರೂ.- 12 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-2): 12 ಲಕ್ಷ ರೂ.- 18 ರೂ. ಆದಾಯ

ಯಾರೆಲ್ಲ ಅರ್ಹರು?

  • ಫಲಾನುಭವಿ ಭಾರತದ ನಿವಾಸಿಯಾಗಿರಬೇಕು.
  • ಫಲಾನುಭವಿ ಶಾಶ್ವತ ಮನೆ ಹೊಂದಿರಬಾರದು.
  • ಫಲಾನುಭವಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
  • ಫಲಾನುಭವಿಯ ಹೆಸರು ಪಡಿತರ ಚೀಟಿ ಅಥವಾ ಪಿಬಿಎಲ್ ಪಟ್ಟಿಯಲ್ಲಿರಬೇಕು.
  • ಫಲಾನುಭವಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರಬೇಕು. ಅಲ್ಲದೆ ಯಾವುದೇ ಮಾನ್ಯ ಗುರುತಿನ ಚೀಟಿಯನ್ನು ಹೊಂದಿರಬೇಕು (ಅಧಾರ್‌ ಕಾರ್ಡ್‌, ಲೈಸನ್ಸ್‌ ಇತ್ಯಾದಿ).
  • ಫಲಾನುಭವಿಯ ಕುಟುಂಬದವರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.

ಯೋಜನೆ ವೈಶಿಷ್ಟ್ಯ

  • ಈ ಯೋಜನೆ ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯವಾಗುತ್ತದೆ
  • ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ಲಭ್ಯ.
  • ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೀಸಲು.
  • ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಕೆ.
  • ಮನೆ ಅಗತ್ಯ ಮೂಲ ಸೌಕರ್ಯ ಹೊಂದಿದ್ದು, ಹೆಚ್ಚುವರಿ ಕಾಮಗಾರಿ ಬೇಕಾದರೆ ಕೈಗೊಳ್ಳಬಹುದಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://pmaymis.gov.in/ಗೆ ಭೇಟಿ ನೀಡಿ
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಹೋಮ್‌ಪೇಜ್‌ನಲ್ಲಿ ಕಂಡು ಬರುವ PM Awas Yojana ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.

ಆಫ್‌ಲೈನ್‌ ಮೂಲಕವೂ ನೀವು ಅರ್ಜಿ ಸಲ್ಲಿಬಹುದು. ಇದಕ್ಕಾಗಿ ನೀವು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (Common Service Center) ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ 1800-11-3377, 1800-11-3388 ನಂಬರ್‌ಗೆ ಕರೆ ಮಾಡಿ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ.
  • ಅರ್ಜಿದಾರರ ಫೋಟೊ
  • ಫಲಾನುಭವಿಯ ಜಾಬ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಸಂಖ್ಯೆ.
  • ಬ್ಯಾಂಕ್ ಪಾಸ್‌ಬುಕ್.
  • ಸ್ವಚ್ಛ ಭಾರತ್ ಮಿಷನ್ (SBM) ನೋಂದಣಿ ಸಂಖ್ಯೆ.
  • ಮೊಬೈಲ್ ನಂಬರ್.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading

ದೇಶ

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Illegal beef trade: ಅಕ್ರಮವಾಗಿ ಬೀಫ್‌ ವ್ಯಾಪಾರ ಮಾಡುತ್ತಿದ್ದ 11 ಮಂದಿ ಮುಸ್ಲಿಮರು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಗಳನ್ನು ಕೆಡವಿ ಹಾಕುವ ಮೂಲಕ ಮಧ್ಯ ಪ್ರದೇಶದ ಪೊಲೀಸರು ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕಠಿಣ ಕ್ರಮ ಕೈಗೊಂಡಿದ್ದಾರೆ. ದಾಳಿ ವೇಳೆ ಪತ್ತೆಯಾದ 150 ಹಸುಗಳನ್ನು ಗೋಶಾಲೆಗೆ ರವಾನಿಸಲಾಗಿದೆ.

VISTARANEWS.COM


on

Illegal beef trade
Koo

ಭೋಪಾಲ್‌: ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮಧ್ಯ ಪ್ರದೇಶ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಅಪರಾಧಿಗಳ ಅನಧಿಕೃತ ಕಟ್ಟಡ ನಿರ್ನಾಮ ಮಾಡಿ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದೀಗ ಅಂತಹದ್ದೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡು ದೇಶದ ಗಮನ ಸೆಳೆದಿದೆ. ಅಕ್ರಮವಾಗಿ ಬೀಫ್‌ ವ್ಯಾಪಾರ ಮಾಡುತ್ತಿದ್ದ (Illegal beef trade), 11 ಮಂದಿ ಮುಸ್ಲಿಮರು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಗಳನ್ನು ಕೆಡವಿ ಹಾಕಿದೆ.

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯ ಹೊಂದಿರುವ ಮಾಂಡ್ಲಾದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿನ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕ್ರಮದ ಭಾಗವಾಗಿ ಈ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ʼʼನೈನ್ಪುರದ ಭೈನ್ವಾಹಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ಮಾಂಸಕ್ಕಾಗಿ ಕೂಡಿಡಲಾಗಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಈ ಕ್ರಮ ಕೈಗೊಂಡಿದ್ದಾರೆʼʼ ಎಂದು ಮಾಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ಪಿಟಿಐಗೆ ತಿಳಿಸಿದ್ದಾರೆ. “ಪೊಲೀಸ್‌ ತಂಡ ದಾಳಿ ನಡೆಸಿದಾಗ ಆರೋಪಿಗಳ ಹಿತ್ತಿಲಿನಲ್ಲಿ ಮಾಂಸಕ್ಕಾಗಿ 150 ಹಸುಗಳನ್ನು ಕಟ್ಟಿ ಹಾಕಿರುವುದು ಕಂಡು ಬಂದಿತ್ತು. ಜತೆಗೆ ಎಲ್ಲ 11 ಆರೋಪಿಗಳ ಮನೆಗಳ ರೆಫ್ರಿಜರೇಟರ್ ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಣಿಗಳ ಕೊಬ್ಬು, ಜಾನುವಾರುಗಳ ಚರ್ಮ ಮತ್ತು ಮೂಳೆಗಳು ಸಹ ದಾಳಿ ವೇಳೆ ಕಂಡು ಬಂದಿದೆ. ಅವುಗಳನ್ನು ಕೋಣೆಯಲ್ಲಿ ತುಂಬಿಡಲಾಗಿತ್ತುʼʼ ಎಂದು ಅವರು ಹೇಳಿದ್ದಾರೆ.

ದೃಢಪಡಿಸಿದ ವೈದ್ಯರು

ʼʼದಾಳಿ ವೇಳೆ ಪತ್ತೆಯಾಗಿರುವುದು ಗೋಮಾಂಸ ಎನ್ನುವುದನ್ನು ಸ್ಥಳೀಯ ಸರ್ಕಾರಿ ಪಶುವೈದ್ಯರು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್ಎ ವಿಶ್ಲೇಷಣೆಗಾಗಿ ನಾವು ಮಾದರಿಗಳನ್ನು ಹೈದರಾಬಾದ್‌ಗೆ ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿದ್ದ ಕಾರಣ ಅವುಗಳನ್ನು ನೆಲಸಮಗೊಳಿಸಲಾಗಿದೆ” ಎಂದು ರಜತ್ ಸಕ್ಲೇಚಾ ವಿವರಿಸಿದ್ದಾರೆ.

10 ಆರೋಪಿಗಳಿಗಾಗಿ ಶೋಧ

ಹಸುಗಳು ಮತ್ತು ಗೋಮಾಂಸವನ್ನು ವಶಪಡಿಸಿಕೊಂಡ ನಂತರ ಶುಕ್ರವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡ ಉಳಿದ 10 ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಇದನ್ನೂ ಓದಿ: Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

ಗೋಶಾಲೆಗೆ ರವಾನೆ

“ದಾಳಿ ವೇಳೆ ಪತ್ತೆಯಾದ 150 ಹಸುಗಳನ್ನು ಗೋಶಾಲೆಗೆ ಕಳುಹಿಸಲಾಗಿದೆ. ಭೈನ್ಸ್ವಾಹಿ ಪ್ರದೇಶವು ಕೆಲವು ಸಮಯದಿಂದ ಹಸು ಕಳ್ಳ ಸಾಗಾಣಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ. ಮಧ್ಯ ಪ್ರದೇಶದಲ್ಲಿ ಗೋ ಹತ್ಯೆಯನ್ನು ನಿಷೇಧಿಸಲಾಗಿದ್ದು, ಇಂತಹ ಕೃತ್ಯ ಎಸಗಿದರೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಕಾನೂನು ಇದೆʼʼ ಎಂದು ಎಸ್‌ಪಿ ರಜತ್ ಸಕ್ಲೇಚಾ ಹೇಳಿದ್ದಾರೆ. ಅಪರಾಧಿಗಳ ಪೈಕಿ ಇಬ್ಬರ ಅಪರಾಧ ಹಿನ್ನೆಲೆಯನ್ನು ಸಂಗ್ರಹಿಸಲಾಗಿದೆ ಮತ್ತು ಉಳಿದ ವ್ಯಕ್ತಿಗಳ ಪೂರ್ವಾಪರಗಳ ಬಗ್ಗೆ ಕಂಡುಹಿಡಿಯುವ ಪ್ರಕ್ರಿಯೆ ನಡೆಯುತ್ತಿದೆ ಎಂದೂ ಅವರು ವಿವರಿಸಿದ್ದಾರೆ. ಎಲ್ಲ ಆರೋಪಿಗಳು ಮುಸ್ಲಿಮರು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದೇಶ

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

ರಾಹುಲ್‌ ಗಾಂಧಿ ಅವರು ಬ್ಯಾಂಕ್‌ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡುತ್ತಾರೆ ಎಂದು ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ನಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಗಿಬಿದ್ದಿದ್ದರು. ಉತ್ತರ ಪ್ರದೇಶದಲ್ಲಂತೂ ಮಹಿಳೆಯರು ಕಾಂಗ್ರೆಸ್‌ಗೆ ಕಚೇರಿಗೆ ನುಗ್ಗಿದ್ದರು. ಈಗ ಬಿಹಾರದಲ್ಲೂ ಒಂದು ಲಕ್ಷ ರೂ. ಟಕಾಟಕ್‌ ಹಣಕ್ಕಾಗಿ ನೂರಾರು ಮಹಿಳೆಯರು ಬ್ಯಾಂಕ್‌ಗೆ ತೆರಳಿ, ನಿರಾಸೆಯಿಂದ ಮನೆಗೆ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Bihar Women
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರು ಖಾತೆ ಹಂಚಿಕೆಯನ್ನೂ ಮಾಡಿ ಇಟಲಿಗೆ ತೆರಳಿದ್ದಾರೆ. ಇಷ್ಟಾದರೂ, ರಾಹುಲ್‌ ಗಾಂಧಿ ಅವರು ತಮ್ಮ ಖಾತೆಗೆ ಹಣ ಹಾಕುತ್ತಾರೆ ಎಂದೇ ಮಹಿಳೆಯರು ಭಾವಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ನೂರಾರು ಮಹಿಳೆಯರು ಪಾಸ್‌ಬುಕ್‌ ಹಿಡಿದುಕೊಂಡು, ನಮ್ಮ ಖಾತೆಗೆ ರಾಹುಲ್‌ ಗಾಂಧಿ (Rahul Gandhi) ಹೇಳಿದ ‘ಟಕಾಟಕ್’‌ 1 ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಬಂದ ದಾರಿಗೆ ಸುಂಕವಿಲ್ಲ ಎಂದು ಮನೆಗೆ ತೆರಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರ ಬ್ಯಾಂಕ್‌ ಖಾತೆಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ಜಮೆ ಮಾಡಲಾಗುವುದು ಎಂದು ಚುನಾವಣೆ ಪ್ರಚಾರದ ವೇಳೆ ಘೋಷಣೆ ಮಾಡಿದ್ದರು. ಬಿಹಾರದ ಕೈಮುರ್‌ನಲ್ಲಿ ರಾಹುಲ್‌ ಗಾಂಧಿ ಹೇಳಿದಂತೆ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲಾಗುತ್ತದೆ ಎಂಬ ವದಂತಿ ಹರಡಿದೆ. ಇದನ್ನು ನಂಬಿದ ನೂರಾರು ಮಹಿಳೆಯರು ಬ್ಯಾಂಕ್‌ ಎದುರು ಪಾಸ್‌ಬುಕ್‌ ಹಿಡಿದು, ನಮ್ಮ ಖಾತೆಗೆ ಒಂದು ಲಕ್ಷ ರೂ. ಜಮೆ ಮಾಡಿ ಎಂದು ಆಗ್ರಹಿಸಿದ್ದಾರೆ. ಕೊನೆಗೆ ಪೊಲೀಸರು ಬಂದು ವಾಸ್ತವ ತಿಳಿಸಿದಾಗ ಮಹಿಳೆಯರು ಹಿಡಿಶಾಪ ಹಾಕುತ್ತ ಮನೆಗೆ ತೆರಳಿದರು ಎನ್ನಲಾಗಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರು ಮಹಿಳೆಯರಿಗೆ 1 ಲಕ್ಷ ರೂ. ನೀಡುವ ಕುರಿತು ಹಲವು ಬಾರಿ ಘೋಷಣೆ ಮಾಡಿದ್ದರು. “ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೆಣ್ಣುಮಕ್ಕಳ ಬ್ಯಾಂಕ್‌ ಖಾತೆಗಳಿಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ನೀಡಲಾಗುತ್ತದೆ. ದೇಶದ ಬಡ ಮಹಿಳೆಯರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತದೆ. ಇದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ. ಟಕಾ ಟಕ್‌ ಅಂತ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ” ಎಂಬುದಾಗಿ ಹೇಳಿದ್ದರು. ಹಾಗಾಗಿ, ಚುನಾವಣೆ ಮುಗಿದ ಕೂಡಲೇ ಮುಸ್ಲಿಂ ಮಹಿಳೆಯರು ಉತ್ತರ ಪ್ರದೇಶದ ಲಖನೌನಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟಿದ್ದರು.

ಕರ್ನಾಟಕದಲ್ಲೂ ಖಾತೆ ತೆರೆಯಲು ಕ್ಯೂ

ಕಾಂಗ್ರೆಸ್‌ನಿಂದ ಮಹಿಳೆಯರ ಬ್ಯಾಂಕ್‌ ಖಾತೆಗೆ 1 ಲಕ್ಷ ರೂ. ಜಮೆಯಾಗುತ್ತದೆ ಎಂದು ಭಾವಿಸಿ ಬೆಂಗಳೂರಿನ ಹಲವೆಡೆ ಮುಸ್ಲಿಂ ಮಹಿಳೆಯರು ಪೋಸ್ಟ್‌ ಆಫೀಸ್‌ ಎದುರು ಸಾಲಾಗಿ ನಿಂತಿರುವುದು ಕಂಡು ಬಂದಿತ್ತು. ಬೆಂಗಳೂರಿನ ಶಿವಾಜಿ ನಗರ, ವಸಂತನಗರ ಸೇರಿ ಹಲವೆಡೆ ಮುಸ್ಲಿಂ ಮಹಿಳೆಯರು ಬ್ಯಾಂಕ್‌ ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಎದುರು ಸಾಲುಗಟ್ಟಿ ನಿಂತಿದ್ದರು. ಕಾಂಗ್ರೆಸ್‌ 1 ಲಕ್ಷ ರೂ. ಗ್ಯಾರಂಟಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್‌ ಖಾತೆ ತೆರೆಯಲು ಮುಂದಾಗಿದ್ದರು.

ಇದನ್ನೂ ಓದಿ: Congress Guarantee: ಗ್ಯಾರಂಟಿಗಾಗಿ ದಾಖಲೆ ಅಪ್ಡೇಟ್‌; ಆಧಾರ್‌, ಬ್ಯಾಂಕ್‌, ಪೋಸ್ಟ್‌ ಆಫೀಸ್‌ಗೆ ಮುಗಿಬಿದ್ದ ಜನ

Continue Reading
Advertisement
Actor Darshan teacher Addanda Cariappa sad on arrested darshan
ಸಿನಿಮಾ1 min ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್15 mins ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Electric shock
ಚಿಕ್ಕಮಗಳೂರು28 mins ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Grand Prix 2024 Competition
ಕ್ರೀಡೆ31 mins ago

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Actor Darshan case pavithra Gowda manager Arrest
ಸ್ಯಾಂಡಲ್ ವುಡ್48 mins ago

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Gold Rate Today
ಚಿನ್ನದ ದರ54 mins ago

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Tata Motors SUV Tata Nexon 7th Anniversary Benefit up to Rs 1 lakh for customers
ವಾಣಿಜ್ಯ1 hour ago

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

murder case
ಚಿಕ್ಕಬಳ್ಳಾಪುರ1 hour ago

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

David Wiese Retirement
ಕ್ರೀಡೆ1 hour ago

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

Money Guide
ಮನಿ-ಗೈಡ್2 hours ago

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ22 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌