Viral Video | ಅಪಘಾತದಿಂದ ಗಾಯಗೊಂಡು ನರಳುತ್ತಿದ್ದ ವ್ಯಕ್ತಿ; ಆ್ಯಂಬುಲೆನ್ಸ್​ ಕೆಲಸ ಮಾಡಿದ ಬುಲ್ಡೋಜರ್​ ! - Vistara News

ವೈರಲ್ ನ್ಯೂಸ್

Viral Video | ಅಪಘಾತದಿಂದ ಗಾಯಗೊಂಡು ನರಳುತ್ತಿದ್ದ ವ್ಯಕ್ತಿ; ಆ್ಯಂಬುಲೆನ್ಸ್​ ಕೆಲಸ ಮಾಡಿದ ಬುಲ್ಡೋಜರ್​ !

ಯುವಕ ಗಾಯಗೊಂಡು, ನರಳುತ್ತ ಬಿದ್ದಿದ್ದ. ಒಬ್ಬೇ ಒಬ್ಬ ವಾಹನ ಸವಾರನೂ ಅವನ ಸಹಾಯಕ್ಕೆ ಬರಲಿಲ್ಲ. ಆ್ಯಂಬುಲೆನ್ಸ್​ಗೆ ಕರೆ ಮಾಡಿ ಅರ್ಧಗಂಟೆಯೇ ಕಳೆದುಹೋಗಿತ್ತು.

VISTARANEWS.COM


on

Bulldozer Carries Accident Victim in Madhya Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್​: ಬುಲ್ಡೋಜರ್​ ಬಳಕೆಯಾಗುವುದೇ ಕಟ್ಟಡಗಳ ಕೆಡವಲು, ರಸ್ತೆ ಮಾಡಲು, ಗುಡ್ಡ ತೆರವುಗೊಳಿಸುವ ಕಾರ್ಯಕ್ಕೆ. ಆದರೆ ಮಧ್ಯಪ್ರದೇಶದಲ್ಲಿ ಬುಲ್ಡೋಜರ್​ವೊಂದು ಆ್ಯಂಬುಲೆನ್ಸ್​ ಕೆಲಸ ಮಾಡಿದೆ. ಮಧ್ಯಪ್ರದೇಶದ ಕಾಟ್ನಿ ಜಿಲ್ಲೆಯ ಖಿತೌಲಿ ರಸ್ತೆಯಲ್ಲಿ ಎರಡು ಬೈಕ್​​ಗಳ ನಡುವಿನ ಡಿಕ್ಕಿಯಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದ. ಸ್ಥಳೀಯರು ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದರು. ಆದರೆ ಅರ್ಧತಾಸು ಕಳೆದರೂ ಅದು ಬಂದಿರಲಿಲ್ಲ. ಇತ್ತ ಅಪಘಾತಕ್ಕೀಡಾದವನ ಆರೋಗ್ಯ ಸ್ಥಿತಿ ಹದಗೆಡುತ್ತಿತ್ತು. ಆಟೋದವರ ಬಳಿ ಸಹಾಯ ಕೇಳಿದರೆ ಅವರೂ ಬರಲಿಲ್ಲ. ಅದನ್ನೆಲ್ಲ ನೋಡುತ್ತಿದ್ದ ಅಲ್ಲಿಯೇ ಇದ್ದ ಅಂಗಡಿಯವನೊಬ್ಬ ತನ್ನ ಜೆಸಿಬಿಯನ್ನು ಹೊರತೆಗೆದ. ಬಳಿಕ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಜೆಸಿಬಿಯಲ್ಲಿಟ್ಟುಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಗಾಯಗೊಂಡ ಯುವಕನನ್ನು ಮಹೇಶ್​ ಬುರ್ಮಾನ್​ (25) ಎಂದು ಗುರುತಿಸಲಾಗಿದೆ. ಬೈಕ್​ ಆ್ಯಕ್ಸಿಡೆಂಟ್​​ನಿಂದ ಗಾಯಗೊಂಡು ನರಳಾಡುತ್ತಿದ್ದರೂ ಒಬ್ಬೇಒಬ್ಬ ವಾಹನ ಸವಾರನೂ ಆತನ ನೆರವಿಗೆ ಬಂದಿರಲಿಲ್ಲ. ಸ್ಥಳೀಯರೂ ಕಂಗಾಲಾಗಿದ್ದರು. ದಾರಿಯಲ್ಲಿ ಬರುತ್ತಿದ್ದ ವಾಹನಗಳಿಗೆಲ್ಲ ಕೈ ಅಡ್ಡ ಮಾಡುತ್ತಿದ್ದರು. ಆಗ ಸಹಾಯಕ್ಕೆ ಬಂದಿದ್ದು ಪುಷ್ಪೇಂದ್ರ ವಿಶ್ವಕರ್ಮ ಎಂಬುವರು. ಅವರು ಅಲ್ಲೇ ಅಟೋಮೊಬೈಲ್​ ಅಂಗಡಿ ಇಟ್ಟುಕೊಂಡಿದ್ದರು. ಅವರದ್ದೇ ಆದ ಒಂದು ಜೆಸಿಬಿಯೂ ಇತ್ತು. ಅದನ್ನು ತನ್ನ ಸ್ನೇಹಿತ ರಫೀಕ್​ಗೆ ಕೊಟ್ಟು, ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ರಫೀಕ್​ ಮತ್ತು ಇನ್ನಿಬ್ಬರು ಸೇರಿ ಜೆಸಿಬಿಯ ಎದುರಿನ ಬಕೆಟ್​​ನಲ್ಲಿ ಆ ಹುಡುಗನನ್ನು ಮಲಗಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಅವನಿಗೆ ಚಿಕಿತ್ಸೆ ನಡೆಯುತ್ತಿದೆ.

ಇದನ್ನೂ ಓದಿ: Accident In Bangalore | ಜೀವ ಉಳಿಸಬೇಕಾದ ಆ್ಯಂಬುಲೆನ್ಸ್‌ನಿಂದ ಅಪಘಾತ : ದ್ವಿಚಕ್ರ ವಾಹನ ಚೂರುಚೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Amarnath Tragedy: ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್‌ ಬ್ರೇಕ್ ಫೇಲ್ ಆದ ಕಾರಣ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ.

VISTARANEWS.COM


on

Amarnath Tragedy
Koo

ಶ್ರೀನಗರ : ಪ್ರತಿವರ್ಷ ಅಮರನಾಥ ಯಾತ್ರೆಗೆ (Amarnath Tragedy) ಹಲವಾರು ಮಂದಿ ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇತ್ತೀಚೆಗೆ ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ವಿಡಿಯೊ ನೋಡಿ ಶಾಕ್ ಆಗಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಂಜಾಬ್‌ನ ಹೋಶಿಯಾರ್ಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹದಿನೇಳು ಮಂದಿ ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆದರೆ ರಸ್ತೆ ಮಧ್ಯದಲ್ಲಿ ಬಸ್‌ನ ಬ್ರೇಕ್ ಫೇಲ್ ಆಗಿದೆ. ಇದರ ಪರಿಣಾಮ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಹಲವಾರು ಪ್ರಯಾಣಿಕರು ಬಸ್ಸಿನಿಂದ ಜಿಗಿದ ಗಾಯಗೊಂಡಿದ್ದಾರೆ.

ವಿಡಿಯೊದಲ್ಲೊ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಪ್ರಯಾಣಿಕರು ಒಬ್ಬರಾಗಿಯೇ ಜಿಗಿದು ಕೆಳಗೆ ಬೀಳುತ್ತಿದ್ದಾರೆ. ಹಾಗೇ ಬಿದ್ದ ಪ್ರಯಾಣಿಕರಲ್ಲಿ ಕೆಲವರು ತಮ್ಮವರನ್ನು ಕಾಪಾಡಲು ಬಸ್ಸಿನ ಹಿಂದೆ ಓಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸೇನೆಯ ಜೊತೆಗೆ ಬಸ್ ಇದ್ದ ಕಡೆ ಬಂದು ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ. ಸೈನಿಕರು ಬಸ್ ಅನ್ನು ನಿಲ್ಲಿಸಲು ಮತ್ತು ಹತ್ತಿರದ ಹೊಳೆಗೆ ಹೋಗದಂತೆ ತಡೆಯಲು ಕಲ್ಲುಗಳನ್ನು ಬಸ್‌ ನ ಚಕ್ರದ ಕೆಳಗೆ ಇಟ್ಟಿದ್ದಾರೆ. ಇದರಿಂದ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸೇನೆಯ ತಂಡಗಳು, ಆಂಬ್ಯುಲೆನ್ಸ್ ನೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ.

Amarnath Tragedy

ಇದನ್ನೂ ಓದಿ: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

ಈ ಹಿಂದೆ ಈ ವರ್ಷದ ಜೂನ್ ತಿಂಗಳಿನಲ್ಲಿ ಭಯೋತ್ಪಾದಕರು ಶಿವಖೋರಿ ದೇವಸ್ಥಾನದಿಂದ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹಿಂದಿರುಗುತ್ತಿದ್ದ ಪ್ರಯಾಣಿಕರಿದ್ದ ಬಸ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದರು.

Continue Reading

ಕ್ರೀಡೆ

Hardik Pandya: ಬಹುಮಾನ ಮೊತ್ತವನ್ನು ತಾಯಿಯ ಖಾತೆಗೆ ಹಾಕುವಂತೆ ಬಿಸಿಸಿಐಗೆ ಮನವಿ ಮಾಡಿದ ಹಾರ್ದಿಕ್​ ಪಾಂಡ್ಯ; ಕಾರಣವೇನು?

Hardik Pandya: ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಹಾಗೂ ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಡಿವೋರ್ಸ್ ಸುದ್ದಿಗಳ ಬೆನ್ನಲ್ಲೇ ಇದೀಗ ಮತ್ತೆ ಹಾರ್ದಿಕ್ ಪಾಂಡ್ಯ ಮೀಮ್ಸ್ ಹರಿದಾಡುತ್ತಿದೆ. ಬಿಸಿಸಿಐ ಘೋಷಿಸಿರುವ ಬಹುಮಾನ ಮೊತ್ತವನ್ನೂ ತಾಯಿ ಖಾತೆಗೆ ಹಾಕಿಬಿಡಿ ಅನ್ನೋ ಮೀಮ್ಸ್ ಭಾರಿ ವೈರಲ್ ಆಗುತ್ತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಬಗ್ಗೆ ಮೀಮ್ಸ್​ಗಳು ವೈರಲ್​ ಆಗಲು ಕೂಡ ಒಂದು ಕಾರಣವಿದೆ. ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ಅವರು ಪತ್ನಿ ನತಾಶಾಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿತ್ತು. ಈ ವೇಳೆ ಪಾಂಡ್ಯ ತಾವು ತಮ್ಮ ಆಸ್ತಿಗಳನ್ನೆಲ್ಲ ತಾಯಿಯ ಹೆಸರಿನಲ್ಲಿ ಮಾಡಿಟ್ಟಿರುವುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದ ವಿಡಿಯೊ ವೈರಲ್​ ಆಗಿತ್ತು.

ಆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಇದೇ ಕಾರಣದಿಂದ ಇದೀಗ ನೆಟ್ಟಿಗರು ವಿಶ್ವಕಪ್​ ಗೆದ್ದ ಬಹುಮಾನ ಮೊತ್ತ ಮತ್ತು ಬಿಸಿಸಿಐ ನೀಡಿದ ಮೊತ್ತವನ್ನು ಪಾಂಡ್ಯ ಅವರು ದಯಮಾಡಿ ಇದನ್ನು ನನ್ನ ತಾಯಿಯ ಖಾತೆಗೆ ಹಾಲಿ ಎಂದು ಹೇಳುವ ರೀತಿಯಲ್ಲಿ ಮೀಮ್ಸ್​ಗಳನ್ನು ಮಾಡಿ ಹರಿಬಿಟ್ಟಿದ್ದಾರೆ.

ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲುವ ಭೀತಿಯಲ್ಲಿದ್ದ ಭಾರತ ತಂಡವನ್ನು ಕಾಪಾಡಿದ್ದೇ ಪಾಂಡ್ಯ. ಅಪಾಯಕಾರಿ ಹೆನ್ರಿಚ್​ ಕ್ಲಾಸೆನ್​ ವಿಕೆಟ್​ ಕೀಳದೇ ಹೋಗಿದ್ದರೆ ಭಾರತದ ಕಪ್​ ಆಸೆ ಮತ್ತೆ ನಿರಾಸೆಯಾಗುತ್ತಿತ್ತು.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading

ಕ್ರೀಡೆ

Virat- Anushka: ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ; ವಿಡಿಯೊ ವೈರಲ್​ 

Virat- Anushka: ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat- Anushka
Koo

ಬಾರ್ಬಡೋಸ್​: ದ್ವೀಪ ರಾಷ್ಟ್ರ ಬಾರ್ಬಡೋಸ್‌ನಲ್ಲಿ ಅಬ್ಬರಿಸುತ್ತಿರುವ ಅಪಾಯಕಾರಿ ಬೆರಿಲ್ ಚಂಡಮಾರುತದ(Hurricane Beryl) ಪ್ರಭಾವದಿಂದ ಬಾರ್ಬಡೋಸ್​ನಲ್ಲಿಯೇ ತಂಗಿರುವ ಟಿ20 ವಿಶ್ವ ಚಾಂಪಿಯನ್​ ಟೀಮ್​ ಇಂಡಿಯಾ ಆಟಗಾರರು ಗುರುವಾರ ಭಾರತಕ್ಕೆ ವಿಮಾನ ಏರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.

ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.

Continue Reading

Latest

Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Viral News: ಗಂಡ-ಹೆಂಡತಿಯ ಸಂಬಂಧ ಚೆನ್ನಾಗಿದ್ದರೆ ಮನೆಯಲ್ಲಿ ಸುಖ ಶಾಂತಿ ಇರುತ್ತದೆ ಎನ್ನುತ್ತಾರೆ.ಇದು ಗಂಡಸಿನ ವೃತ್ತಿ ಜೀವನದ ಮೇಲೂ ಪ್ರಭಾವ ಬೀರುತ್ತದೆ. ಕೆಲವರು ಹೆಂಡತಿಯನ್ನು ಕಾಲ ಕಸದ ರೀತಿ ನೋಡಿದರೆ ಇನ್ನು ಕೆಲವರು ಶಿವನ ಹಾಗೇ ಹೆಂಡತಿಯೇ ಸರ್ವಸ್ವ ಅನ್ನುತ್ತಾರೆ. ಹೌದು ಹೆಂಡತಿಯನ್ನು ಅತೀಯಾಗಿ ಪ್ರೀತಿಸುವ ಗಂಡಂದಿರ ಪಟ್ಟಿ ಇಲ್ಲಿದೆ.

VISTARANEWS.COM


on

Viral News
Koo

ಎಷ್ಟೋ ಸಿನಿಮಾಗಳಲ್ಲಿ ಹೀರೊ ತಮ್ಮ ಕುಟುಂಬದವರ ಜೊತೆ ಅನ್ಯೋನ್ಯವಾಗಿರುವುದನ್ನು ನಾವು ನೋಡಿರುತ್ತೇವೆ ಮತ್ತು ಹೀರೊ ತನ್ನ ಪತ್ನಿ ಮತ್ತು ಮಕ್ಕಳ ಬಗ್ಗೆ ತೋರುವ ಕಾಳಜಿ ಕಂಡು ನಾವು ಖುಷಿ ಪಡುತ್ತೇವೆ. ಆದರೆ ಅದೇ ಜೋಡಿ ನಿಜ ಜೀವನದಲ್ಲಿ ದಂಪತಿಯಾದರೆ ಅದರ ನಡುವೆ ಅಷ್ಟೊಂದು ಅನ್ಯೋನ್ಯತೆ ಇರುವುದಿಲ್ಲ. ಅದು ನಮಗೆಲ್ಲರಿಗೂ ಗೊತ್ತು. ಯಾಕೆಂದರೆ ಸಿನಿಮಾದಲ್ಲಿ ಜೊತೆಯಾಗಿ ನಟಿಸಿ ಜನರ ಮನಗೆದ್ದ ಜೋಡಿಗಳಲ್ಲಿ ಕೆಲವು ನಿಜ ಜೀವನದಲ್ಲಿ ಬೇರೆಯಾಗಿದ್ದಾರೆ. ಆದರೆ ಎಲ್ಲಾ ಜೋಡಿ ಹಾಗಿಲ್ಲ. ಕೆಲವು ಸೆಲೆಬ್ರಿಟಿಗಳು ತಮ್ಮ ಪತ್ನಿ ಮತ್ತು ಮಕ್ಕಳನ್ನು ತುಂಬಾ ಪ್ರೀತಿಸುತ್ತಾರೆ. ಅಂತಹ ಸೆಲೆಬ್ರಿಟಿಗಳ ಬಗ್ಗೆ ಮಾಹಿತಿ ವೈರಲ್‌ (Viral News) ಆಗಿದೆ.

ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

ಜೂನ್ 29ರಂದು ಭಾರತ ಕ್ರಿಕೆಟ್ ತಂಡವು 17 ವರ್ಷಗಳ ನಂತರ ಐಸಿಸಿಟಿ 20 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಈ ವೇಳೆ ಸಂಭ್ರಮಾಚರಣೆ ಬಹಳ ಅವಿಸ್ಮರಣೀಯವಾಗಿತ್ತು. ಆದರೆ ಆ ಕ್ಷಣ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಮತ್ತು ಹಾಗೂ ಮಗಳಿಗೆ ವಿಡಿಯೊ ಕರೆ ಮಾಡಿ ಗೆಲುವನ್ನು ಹಂಚಿಕೊಂಡರು. ಇದು ಲಕ್ಷಾಂತರ ಜನರ ಮನಸ್ಸನ್ನು ಸೆಳೆಯಿತು.

ಇನ್ನು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಟ್ರೋಫಿಯನ್ನು ಅನುಷ್ಕಾಗೆ ಅರ್ಪಿಸಿ ಈ ದಂಪತಿ ನಡುವೆ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದ್ದಾರೆ.

ರಣವೀರ್ ಸಿಂಗ್ – ದೀಪಿಕಾ ಪಡುಕೋಣೆ

ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಾಲಿವುಡ್ ಚಿತ್ರರಂಗದ ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ಅವರು ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗಲೆಲ್ಲಾ ಜೋಡಿ ಹಕ್ಕಿಗಳ ಹಾಗೇ ಇರುತ್ತಾರೆ.

ಕಾಫಿ ವಿತ್ ಕರಣ್ ಸೀಸನ್ 8ರಲ್ಲಿ ರಣವೀರ್ ಸಿಂಗ್ ದೀಪಿಕಾ ಬಗ್ಗೆ ತಮ್ಮ ಭಾವನೆಗಳು ಮತ್ತು ಪ್ರೀತಿಯನ್ನು ಬಹಿರಂಗಪಡಿಸಿದಾಗ ಅವರು ಒಬ್ಬ ಉತ್ತಮ ಪತಿ ಎಂಬುದು ತಿಳಿಯುತ್ತದೆ. ಅವರು ತಮ್ಮ ಪತ್ನಿ ದೀಪಿಕಾ ಬಗ್ಗೆ ಮಾತನಾಡುವಾಗ ತಮಗೆ ಅವಳೊಬ್ಬಳೆ ಸಾಕು ಎಂಬ ರೀತಿಯಲ್ಲಿ ಮಾತನಾಡಿ ಎಲ್ಲರ ಹೃದಯವನ್ನು ಗೆದ್ದಿದ್ದರು.

Viral News

ವಿಕ್ಕಿ ಕೌಶಲ್- ಕತ್ರಿನಾ ಕೈಫ್

ವಿಕ್ಕಿ ಕೌಶಲ್ ಅವರು ಸಂದರ್ಶನವೊಂದರಲ್ಲಿ ತಮ್ಮ ಫೋನ್‌ನಲ್ಲಿರುವ ವಾಲ್ಪೇಪರ್ ಮೇಲೆ ಕತ್ರಿನಾ ಕೈಫ್ ಅವರ ಬಾಲ್ಯದ ಪೋಟೊ ಹಾಕಿಕೊಂಡಿದ್ದರು. ಆದರೆ ಅದು ಯಾರು ಎಂದು ಯಾರಿಗೂ ಮೊದಲು ತಿಳಿದಿರಲಿಲ್ಲ.

ಹಾಗಾಗಿ ಅವರು ಅದು ತಮ್ಮ ಪತ್ನಿ ಕತ್ರಿನಾ ಕೈಫ್ ಅವರ ಬಾಲ್ಯದ ಪೋಟೊ ಎಂದು ಹೇಳುವುದರ ಮೂಲಕ ಇವರು ಪತ್ನಿಯನ್ನು ಪ್ರೀತಿಸುವ ಪತಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಸೋನಾಕ್ಷಿ ಸಿನ್ಹಾ -ಜಹೀರ್ ಇಕ್ಬಾಲ್

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಇತ್ತೀಚೆಗೆ ವಿವಾಹವಾಗಿದ್ದು, ಆ ಮೂಲಕ ಬಾಲಿವುಡ್‌ನ ಹೊಸ ಜೋಡಿ ಎನಿಸಿಕೊಂಡಿದ್ದಾರೆ.

ಸೋನಾಕ್ಷಿ ಸಿನ್ಹಾ ಇತ್ತೀಚೆಗೆ ಜಹೀರ್ ತನ್ನ ಹಿಮ್ಮಡಿಗಳನ್ನು ಹಿಡಿದುಕೊಂಡು ಮಾಲ್‌ನಲ್ಲಿ ಕರೆದುಕೊಂಡು ಹೋಗುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಜಹೀರ್ ಇಕ್ಬಾಲ್, ಸೋನಾಕ್ಷಿ ಸಿನ್ಹಾ ಅವರಿಗೆ ಉತ್ತಮ ಪತಿ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ನಿಕ್ ಜೊನಾಸ್ ಮತ್ತು ಪ್ರಿಯಾಂಕಾ ಚೋಪ್ರಾ

ನಿಕ್ ಜೊನಾಸ್ ವಿದೇಶಿಗರಾದರೂ ಕೂಡ ತನ್ನ ಹೆಂಡತಿ ಮತ್ತು ಅವಳ ಸಂಸ್ಕೃತಿಯ ಬಗ್ಗೆ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾರೆ.

ನಿಕ್‌ ಕೂಡ ತಮ್ಮ ಪತ್ನಿಯ ಜೊತೆಗೆ ಭಾರತೀಯ ಸಂಸ್ಕೃತಿಯನ್ನು ಪ್ರೀತಿ, ಗೌರವ ಮತ್ತು ಭಕ್ತಿಯಿಂದ ಆಚರಿಸುತ್ತಾರೆ. ಆ ಮೂಲಕ ಅವರು ಕೂಡ ನಟಿ ಪ್ರಿಯಾಂಕ ಚೋಪ್ರಾ ಅವರಿಗೆ ಮುದ್ದಿನ ಗಂಡನಾಗಿದ್ದಾರೆ.

Continue Reading
Advertisement
Medal Biteing
ಕ್ರೀಡೆ3 mins ago

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Tharun Sudhir sonal monteiro marriage update
ಸ್ಯಾಂಡಲ್ ವುಡ್14 mins ago

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Stock Market
ವಾಣಿಜ್ಯ37 mins ago

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

bangalore murder case
ಕ್ರೈಂ49 mins ago

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Team India
ಕ್ರೀಡೆ51 mins ago

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Actor Darshan V Manohar About Darshan
ಸ್ಯಾಂಡಲ್ ವುಡ್57 mins ago

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Nitin Gadkari
ದೇಶ1 hour ago

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Amarnath Tragedy
Latest1 hour ago

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Kalki 2898 AD Box Office Collection Day Deepika Padukone's Film
ಟಾಲಿವುಡ್2 hours ago

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

dengue fever Dinesh Gundu Rao
ಪ್ರಮುಖ ಸುದ್ದಿ2 hours ago

Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌