ರಾಜಾ ಹುಲಿ ಇರ್ಲಿ, ಯಾರೇ ಇರ್ಲಿ ಮೊದ್ಲು ರಾಜೀನಾಮೆ ಕೊಡ್ಲಿ: ಬಿಎಸ್‌ವೈ ವಿರುದ್ಧದ ಎಫ್‌ಐಆರ್‌ ಆದೇಶಕ್ಕೆ ಯತ್ನಾಳ್‌ ಪ್ರತಿಕ್ರಿಯೆ - Vistara News

ಕರ್ನಾಟಕ

ರಾಜಾ ಹುಲಿ ಇರ್ಲಿ, ಯಾರೇ ಇರ್ಲಿ ಮೊದ್ಲು ರಾಜೀನಾಮೆ ಕೊಡ್ಲಿ: ಬಿಎಸ್‌ವೈ ವಿರುದ್ಧದ ಎಫ್‌ಐಆರ್‌ ಆದೇಶಕ್ಕೆ ಯತ್ನಾಳ್‌ ಪ್ರತಿಕ್ರಿಯೆ

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಆಗಾಗ ಸಿಡಿದೇಳುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಎಫ್‌ಐಆರ್‌ ವಿಚಾರದಲ್ಲಿ ಖಡಕ್ಕಾಗಿ ಮಾತನಾಡಿದ್ದಾರೆ.

VISTARANEWS.COM


on

YATNAL BSY
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಡಿಎ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಕುಟುಂಬದ ಹಲವರ ಮೇಲೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿ ನ್ಯಾಯಾಲಯ ನೀಡಿದ ಆದೇಶಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸದಾ ಬೆಂಕಿ ಕಾರುವ, ಕುತೂಹಲಕಾರಿಯಾಗಿ ಮಾತನಾಡುವ, ಅದರಲ್ಲೂ ಬಿ.ಎಸ್‌. ಯಡಿಯೂರಪ್ಪ ಅವರ ವಿಷಯ ಬಂದಾಗ ಸ್ವಲ್ಪ ಜೋರಾಗಿಯೇ ಅಬ್ಬರಿಸುವ ಯತ್ನಾಳ್‌ ಅವರು ವಿಧಾನ ಸೌಧದಲ್ಲಿ ಗುರುವಾರ ಮಾತನಾಡಿದ್ದಾರೆ. ಅವರು ಪ್ರಕರಣಕ್ಕೆ ಸಂಬಂಧಿಸಿ ಆಡಿದ ಪ್ರಮುಖ ಮಾತುಗಳಿವು.

– ಎಷ್ಟೇ ದೊಡ್ಡ ಹುಲಿ ಇದ್ದರೂ ಕಾನೂನಿನ ಮುಂದೆ ಎಲ್ಲರೂ ಒಂದೇ.
– ಈ ಹಿಂದೆ ಎಲ್ ಕೆ ಅಡ್ವಾಣಿ ಮೇಲೆ ಆರೋಪವೊಂದು ಕೇಳಿ ಬಂದಿತ್ತು. ಆಗ ಅವರು ಎಲ್ಲ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.
– ಈಗಲೂ ಆರೋಪವೊಂದು ಬಂದಿದೆ. ರಾಜಾಹುಲಿ ಇರ್ಲಿ, ಯಾರೇ ಇರ್ಲಿ ರಾಜೀನಾಮೆ ಕೊಡಲಿ.
– ಎಲ್‌.ಕೆ. ಅಡ್ವಾಣಿ, ವಾಜಪೇಯಿ ಅವರಿಗಿಂತ ಡೊಡ್ಡವ್ರಾ ಇವರು, ಎಲ್‌.ಕೆ. ಅಡ್ವಾಣಿ ಆದರ್ಶ ಪಾಲಿಸಲಿ.
– ಯಡಿಯೂರಪ್ಪ ಅವರು ಕಾನೂನಿಗೆ ತಲೆಬಾಗಿ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ.

ಏನಿದು ಎಫ್‌ಐಆರ್‌ ಹಾಕಲಾದ ಪ್ರಕರಣ?
ಬಿ.ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿಡಿಎ ಗುತ್ತಿಗೆ ಹಂಚಿಕೆ ವೇಳೆ ರಾಮಲಿಂಗಂ ಕನ್‌ಸ್ಟ್ರಕ್ಷನ್‌ ಕಂಪನಿಯಿಂದ ಕೋಟ್ಯಂತರ ರೂಪಾಯಿಗಳನ್ನು ನಗದು ಮತ್ತು ಶೆಲ್‌ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ವಿಶೇಷ ತನಿಖಾ ದಳದ ಮೂಲಕ ತನಿಖೆ ಮಾಡಿಸಬೇಕು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದರು. ಆದರೆ, ಈ ರೀತಿ ದೂರು ಸಲ್ಲಿಸಲು ರಾಜ್ಯಪಾಲರಿಂದ ಅಗತ್ಯ ಪೂರ್ವನುಮತಿ ಪಡೆದಿಲ್ಲ ಎಂದು ಯಡಿಯೂರಪ್ಪ ಮತ್ತು ಇತರರ ವಿರುದ್ದದ ಖಾಸಗಿ ದೂರನ್ನು ವಿಶೇಷ ನ್ಯಾಯಾಲಯ ವಜಾ ಮಾಡಿತ್ತು.

ಆಗ ಟಿ.ಜೆ. ಅಬ್ರಹಾಂ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್‌ ಜನಪ್ರತಿನಿಧಿ ನ್ಯಾಯಾಲಯದ ಆದೇಶವನ್ನು ಬದಿಗೆ ಸರಿಸಿತ್ತು. ಅಲ್ಲದೇ, ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ಮರುಪರಿಗಣಿಸಲು ಹೈಕೋರ್ಟ್‌ ಆದೇಶಿಸಿತ್ತು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಈ ಬಗ್ಗೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಆದೇಶಿಸಿತ್ತು. ನವೆಂಬರ್‌ ೨ರೊಳಗೆ ವರದಿ ನೀಡುವಂತೆ ಸೂಚಿಸಿದೆ.

ಯಾರಿಗೆಲ್ಲ ಸಂಕಷ್ಟ?
ಬಿ.ಎಸ್‌. ಯಡಿಯೂರಪ್ಪ, ಪುತ್ರ ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್‌ ಶ್ರೀ, ಚಂದ್ರಕಾಂತ್‌ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌, ಐಎಎಸ್‌ ಅಧಿಕಾರಿ ಡಾ. ಜಿ.ಸಿ ಪ್ರಕಾಶ್‌, ಕೆ. ರವಿ, ಯಡಿಯೂರಪ್ಪ ಅವರ ಅಳಿಯ ವಿರೂಪಾಕ್ಷಪ್ಪ‌ ಯಮಕನಮರಡಿ ಅವರು ಪ್ರಕರಣದಲ್ಲಿ ಪ್ರತಿವಾದಿಗಳಾಗಿದ್ದಾರೆ.

ಇದನ್ನೂ ಓದಿ | ಬಿಎಸ್‌ವೈ ಕುಟುಂಬಕ್ಕೆ ಸಂಕಷ್ಟ | ಲಂಚ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ನಡೆಸಲು ಜನಪ್ರತಿನಿಧಿ ಕೋರ್ಟ್‌ ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Koppala News: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ಮಹಾರಥೋತ್ಸವವು ಶುಕ್ರವಾರ ಅಪಾರ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Huligemma Devi Maharathotsava in Hulagi
Koo

ಕೊಪ್ಪಳ: ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಅಪಾರ ಭಕ್ತಸಾಗರದ ನಡುವೆ ಮಹಾರಥೋತ್ಸವವು ವಿಜೃಂಭಣೆಯಿಂದ (Koppala News) ಜರುಗಿತು.

ಇದನ್ನೂ ಓದಿ: Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಆದೇಶ

ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಹುಲಗಿಯ ಶ್ರೀ ಹುಲಿಗೆಮ್ಮ ದೇವಿಯ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರದಿಂದ ಜೂನ್ 3 ರ ಸೋಮವಾರದವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಶುಕ್ರವಾರ ಸಂಜೆ ಮಹಾರಥೋತ್ಸವವು ಲಕ್ಷಾಂತರ ಭಕ್ತಾಧಿಗಳ ಸಮೂಹದ ನಡುವೆ ಅದ್ದೂರಿಯಾಗಿ ನಡೆಯಿತು.

ಸುಮಾರು 5 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ

ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದಲ್ಲಿ ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು. ಕರ್ನಾಟಕದ ವಿವಿಧ ಜಿಲ್ಲೆಗಳ ಮತ್ತು ಆಂಧ್ರಪ್ರದೇಶದ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಜಾತ್ರೆಗೆ ಆಗಮಿಸಿ, ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

ರಥೋತ್ಸವ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ್ ಸುತಗುಂಡಿ ಹಾಗೂ ಕೊಪ್ಪಳ ಮತ್ತು ಗಂಗಾವತಿ ಡಿವೈಎಸ್ಪಿಗಳು ಹಾಗೂ ಇತರರು ಉಪಸ್ಥಿತರಿದ್ದರು

Continue Reading

ಆರೋಗ್ಯ

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

Vijayanagara News: ದಡಾರಾ ಮತ್ತು ರುಬೆಲ್ಲಾ ಲಸಿಕಾ ಅಭಿಯಾನವು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು ಎಂದು ವಿಜಯನರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
Koo

ಹೊಸಪೇಟೆ: ದಡಾರಾ ಮತ್ತು ರುಬೆಲ್ಲಾ ಲಸಿಕಾ ಅಭಿಯಾನವು ಜಿಲ್ಲೆಯಲ್ಲಿ (Vijayanagara News) ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ದಡಾರಾ ಮತ್ತು ರುಬೆಲ್ಲಾ 2024 ಡಿಸೆಂಬರ್‌ದೊಳಗೆ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿ ನಡೆಯಬೇಕು. ಮಗುವಿಗೆ 9 ತಿಂಗಳ ತುಂಬಿದ ನಂತರ ಮೊದಲನೇ ಡೋಸ್ ನೀಡಬೇಕು. ಆ ಬಳಿಕ ಒಂದೂವರೆ ವರ್ಷಕ್ಕೆ ಎರಡನೇ ಡೋಸ್ ನೀಡುವ ಕಾರ್ಯವು ಜಿಲ್ಲೆಯಲ್ಲಿ ಶೇ. 100ರಷ್ಟು ಆಗಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದನ್ನೂ ಓದಿ: Forest Man Of India: ಇವರೇ ನೋಡಿ ಭಾರತದ ಫಾರೆಸ್ಟ್‌ ಮ್ಯಾನ್‌; ಏಕಾಂಗಿಯಾಗಿ 1,360 ಎಕ್ರೆಯಲ್ಲಿ ಕಾಡು ಬೆಳೆಸಿದ ಸಾಹಸಿ

ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಕೆಲವೊಮ್ಮೆ ಗ್ರಾಮೀಣ ಪ್ರದೇಶದ ಜನರು ಸಹಕರಿಸುವುದಿಲ್ಲ. ಆದ್ದರಿಂದ ದಡಾರ ಮತ್ತು ರುಬೆಲ್ಲಾ ಲಸಿಕೆಯ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರ, ಮಹಿಳಾ ಸಂಘ-ಸಂಸ್ಥೆಗಳ, ಆಶಾ ಕಾರ್ಯಕರ್ತೆಯರ ಸಹಕಾರ ಪಡೆದುಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಶಂಕರ್ ನಾಯ್ಕ್ ಎಲ್. ಮಾತನಾಡಿ, ಗ್ರಾಮೀಣ ಭಾಗದ ಕೆಲ ಜನರು ಮೂಢ ನಂಬಿಕೆಗಳಿಂದ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡುವುದಿಲ್ಲ. ಆರೋಗ್ಯ ಇಲಾಖೆಯ ಯಾವುದೇ ಲಸಿಕೆ ಮತ್ತು ಅದರ ಮಹತ್ವದ ಕುರಿತು ವ್ಯಾಪಕವಾಗಿ ಜನರಿಗೆ ತಿಳಿವಳಿಕೆ ಮೂಡಿಸುವ ಕಾರ್ಯವು ಲಸಿಕಾ ಅಭಿಯಾನದ ಜತೆಜತೆಗೆ ಸಾಗಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ಮಕ್ಕಳಲ್ಲಿ ಜ್ವರ ಮತ್ತು ತದ್ದು ಕಂಡು ಬರುತ್ತಿದ್ದಲ್ಲಿ ಪಾಲಕರು ನಿರ್ಲಕ್ಷ್ಯ ಮಾಡಬಾರದು. ಅಂತಹ ಮಕ್ಕಳಿದ್ದಲ್ಲಿ ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು. ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು. ಜ್ವರ ಮತ್ತು ತದ್ದು ಕಂಡು ಬರುವ ಮಕ್ಕಳೇನಾದರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ ಈ ಬಗ್ಗೆ ಖಾಸಗಿ ಆಸ್ಪತ್ರೆಗಳು ಸರ್ಕಾರಿ ಆಸ್ಪತ್ರೆಗಳಿಗೆ ವರದಿ ಮಾಡಬೇಕು ಎಂದು ತಿಳಿಸಿದರು.

ಎನ್‌ಪಿಎಸ್‌ಪಿ ಸರ್ವೆಲನ್ಸ್ ನೋಡಲ್ ಅಧಿಕಾರಿ ಡಾ.ಶ್ರೀಧರ ಆರ್.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಡಾ.ಷಣ್ಮುಖ ನಾಯ್ಕ ಬಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊಡ್ಡಮನಿ ಎಂ.ಪಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಕೆ.ಕಮಲಮ್ಮ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ. ರಾಧಿಕಾ, ಹೊಸಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಭಾಸ್ಕರ್, ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಜಗದೀಶ್ ಪಾಟ್ನೆ ಸೇರಿದಂತೆ ಇತರರು ಇದ್ದರು.

Continue Reading

ಬಳ್ಳಾರಿ

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Lok Sabha Election 2024: ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 08 ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಜೂನ್ 04 ರಂದು ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

VISTARANEWS.COM


on

District administration all preparations for vote counting says DC Prashanth Kumar Mishra
Koo

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ (Lok Sabha Election 2024) ಸಂಬಂಧ ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 08 ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಜೂನ್ 04 ರಂದು ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 02 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 08 ಹಾಲ್‍ಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Weather Report : ನಾಗ್ಪುರದಲ್ಲಿ 56 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ; ಇದು ಸಾರ್ವಕಾಲಿಕ ದಾಖಲೆ!

ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನಿಯೋಜಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಒಟ್ಟು 112 ಟೇಬಲ್‍ಗಳಂತೆ, 150 ಎಣಿಕಾ ಮೇಲ್ವಿಚಾರಕರು, 159 ಎಣಿಕಾ ಸಹಾಯಕರು ಮತ್ತು 146 ಎಣಿಕಾ ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದ್ದು, ಎರಡನೇ ಹಂತದ ತರಬೇತಿಯನ್ನೂ ನೀಡಲಾಗುವುದು. 121 ಜನರಿಗೆ ಈಗಾಗಲೆ ಕೌಂಟಿಂಗ್ ಏಜೆಂಟ್ ಆಗಿ ವೀಕ್ಷಣೆಗೆ ಪಾಸ್ ನೀಡಲಾಗಿದೆ ಎಂದರು.

88-ಹಡಗಲಿ ಕ್ಷೇತ್ರದಲ್ಲಿ ಒಟ್ಟು 218 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 16 ಸುತ್ತು ಮತ ಎಣಿಕೆ ನಡೆಯಲಿದೆ. 89-ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, 19 ಸುತ್ತು ಮತ ಎಣಿಕೆ ನಡೆಯಲಿದೆ. 90-ವಿಜಯನಗರ ಕ್ಷೇತ್ರದಲ್ಲಿ ಒಟ್ಟು 259 ಮತಗಟ್ಟೆಗಳಿದ್ದು, ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: T20 World Cup 2024: ಐನಾಕ್ಸ್‌ ದೈತ್ಯ ಪರದೆಯಲ್ಲೂ ಮೂಡಿಬರಲಿದೆ ಭಾರತದ ಪಂದ್ಯಗಳು

91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 242 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 18 ಸುತ್ತು ಮತ ಎಣಿಕೆ ನಡೆಯಲಿದೆ. 93-ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 235 ಮತಗಟ್ಟೆಗಳಿದ್ದು, 17 ಸುತ್ತು. 94-ಬಳ್ಳಾರಿ ನಗರ ಕ್ಷೇತ್ರದಲ್ಲಿ 261 ಮತಗಟ್ಟೆಗಳಿದ್ದು, 19 ಸುತ್ತು. 95-ಸಂಡೂರು ಕ್ಷೇತ್ರದಲ್ಲಿ ಒಟು 253 ಮತಗಟ್ಟೆಗಳಿದ್ದು, 19 ಸುತ್ತು ಹಾಗೂ 96-ಕೂಡ್ಲಿಗಿ ಕ್ಷೇತ್ರದಲ್ಲಿ 250 ಮತಗಟ್ಟೆಗಳಿದ್ದು, ಒಟ್ಟು 18 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.
ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜನೆ

ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕೇಂದ್ರವಾದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ 01-ಎಸ್‍ಪಿ, 02-ಎಎಸ್ಪಿ, 05-ಡಿವೈಎಸ್ಪಿ, 15-ಸಿಪಿಐ, 25-ಪಿಎಸ್‍ಐ, 40-ಎಎಸ್‍ಐ, 250-ಪಿಸಿ, 04-ಕೆಎಸ್‍ಆರ್‍ಪಿ, 04 ಡಿ.ಆರ್ ತಂಡ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್ ತಿಳಿಸಿದರು.

ಇದನ್ನೂ ಓದಿ: Forest Man Of India: ಇವರೇ ನೋಡಿ ಭಾರತದ ಫಾರೆಸ್ಟ್‌ ಮ್ಯಾನ್‌; ಏಕಾಂಗಿಯಾಗಿ 1,360 ಎಕ್ರೆಯಲ್ಲಿ ಕಾಡು ಬೆಳೆಸಿದ ಸಾಹಸಿ

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಚಿಕ್ಕಮಗಳೂರು

Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Prajwal Revanna Case: ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿ ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಭವಾನಿ ರೇವಣ್ಣ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Prajwal revanna Case
Koo

ಚಿಕ್ಕಮಗಳೂರು: ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆದಿದ್ದು, ಆತನಿಂದ ಅಗತ್ಯ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು 6 ದಿನಗಳ ಕಾಲ ಎಸ್‌ಐಡಿ ಕಸ್ಟಡಿಗೆ ನೀಡಿದ ಬೆನ್ನಲ್ಲೇ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಚಾಲಕನನ್ನು ವಶಕ್ಕೆ ಪಡೆದು ಭವಾನಿ ರೇವಣ್ಣ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಅಜಿತ್ ವಶಕ್ಕೆ ಪಡೆದಿರುವ ಚಾಲಕ. ನಾಲ್ಕೈದು ದಿನದ ಹಿಂದೆ ಅತ್ತೆ ಮನೆಗೆ ಬಂದಿದ್ದ ಅಜಿತ್‌ನನ್ನು ಇಲ್ಲಿನ ಕಲ್ಯಾಣ ನಗರದಲ್ಲಿ ವಶಕ್ಕೆ ಪಡೆಯಲಾಗಿದೆ. ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಅವರ ಬಂಧನಕ್ಕಾಗಿ ಎಸ್‌ಐಟಿ ಮುಂದಾಗಿದೆ. ಹೀಗಾಗಿ ಭವಾನಿ ರೇವಣ್ಣ ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಹೋದವರು ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಜ್ಞಾತದಲ್ಲಿರುವ ಅವರಿಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಯಾವುದೇ ಕ್ಷಣದಲ್ಲಿ ಬಂಧನ!

Bhavani Revanna

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್​ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೋಟಿಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮೇ 29ರಂದು ಈ ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ, ಮೇ 31 ತಾಯಿ-ಮಗನಿಗೆ ಪ್ರಮುಖ ದಿನವಾಗಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಹಿಂದಿನ ವಿಚಾರಣೆ ವೇಳೆ ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಎಸ್‌ಪಿಪಿ ವಾದವೇನಿತ್ತು?

ಮಗನ ರಕ್ಷಣೆಗಾಗಿ ಭವಾನಿ ರೇವಣ್ಣ ಒಳಸಂಚು ರೂಪಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣದ ಹಿಂದೆ ಇವರ ಕೈವಾಡವಿದೆ. ಸಂತ್ರಸ್ತ ಮಹಿಳೆಗೆ ಊಟ ನೀರು, ಸರಿಯಾಗಿ ಕೊಟ್ಟಿಲ್ಲ‌. ಆಕೆಗೆ ಬಟ್ಟೆ ಸೀರೆಯನ್ನು ಕೊಟ್ಟಿಲ್ಲ. ಆರೋಪಿ ಸತೀಶ್ ಬಾಬಣ್ಣ ಜತೆ ಭವಾನಿ ಮಾತನಾಡಿದ್ದಾರೆ. ಆರೋಪಿ ಸತೀಶ್ ಬಾಬಣ್ಣ ಕೇಳಿದಾಗ ಭವಾನಿಯವರು ಆಯ್ತು 150 ರೂಪಾಯಿ ಅಥವಾ 200 ರೂಪಾಯಿ ಸೀರೆ ಕೊಡ್ಸು ಎಂಬುದಾಗಿ ಸೂಚಿಸಿದ್ದಾರೆ” ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಕೊನೆಗೆ ನ್ಯಾಯಾಲಯವು ತೀರ್ಪನ್ನು ಮೇ 31ರವರೆಗೆ ಕಾಯ್ದಿರಿಸಿತ್ತು.

ಇದನ್ನೂ ಓದಿ: Prajwal Revanna : ನನ್ನ ತೇಜೋವಧೆಯಾಗಿದೆ; ಪ್ರತಿ ದೂರು ನೀಡಲು ಪ್ರಜ್ವಲ್ ರೇವಣ್ಣ ಸಿದ್ಧತೆ

ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್‌‘

ಪ್ರಜ್ವಲ್‌ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಆಗಮಿಸಲಿದ್ದು, ನಾಳೆ ಅಂದರೆ ಮೇ 30ರಂದೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲ ಅರುಣ್‌ ಮನವಿ ಮಾಡಿದ್ದರು. ಆದರೆ, 39ರಂದೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಮೂರೂ ಪ್ರಕರಣಗಳಲ್ಲಿ ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕು. ಹಾಗಾಗಿ, ಮೇ 31ರಂದು ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿತು.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ.

Continue Reading
Advertisement
Kanyakumari Tour
ಪ್ರವಾಸ36 mins ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ44 mins ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ45 mins ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ47 mins ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 202449 mins ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ55 mins ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Prajwal revanna Case
ಚಿಕ್ಕಮಗಳೂರು1 hour ago

Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Modi Meditation
ಪ್ರಮುಖ ಸುದ್ದಿ2 hours ago

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Virat Kohli
ಪ್ರಮುಖ ಸುದ್ದಿ2 hours ago

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹಂತಕ ಗಿರೀಶ್‌ಗೆ ಜೂನ್ 16ರವರೆಗೆ‌ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌