Modi Birthday | ಇಲ್ಲಿವೆ ನರೇಂದ್ರ ಮೋದಿ ಕುರಿತ 20 ಅತ್ಯಂತ ಕುತೂಹಲಕರ ಸಂಗತಿಗಳು - Vistara News

ದೇಶ

Modi Birthday | ಇಲ್ಲಿವೆ ನರೇಂದ್ರ ಮೋದಿ ಕುರಿತ 20 ಅತ್ಯಂತ ಕುತೂಹಲಕರ ಸಂಗತಿಗಳು

ದೇಶಪ್ರೇಮಿ, ಪರಿಶ್ರಮಿ, ದೇಶ ಕಂಡ ಧೀಮಂತ ನಾಯಕ, ಟೀಕೆಗಳ ಆಚೆಯೂ ಜನರ ಮೆಚ್ಚುಗೆ ಗಳಿಸಿದವರು, ದೇಶದ ಆಲೋಚನೆಗೆ ಹೊಸ ಹೊಳಹು ನೀಡಿದವರು ನರೇಂದ್ರ ಮೋದಿ (Narendra Modi). ಪ್ರಧಾನಿಯ ಜನ್ಮದಿನದಂದು ಅವರ ಕುರಿತು ಇರುವ ಆಸಕ್ತಿದಾಯಕ ವಿಚಾರಗಳ ಸಂಕ್ಷಿಪ್ತ ಮಾಹಿತಿ ಹೀಗಿದೆ…

VISTARANEWS.COM


on

ಮಾನ್ಯ ಪ್ರಧಾನ ಮಂತ್ರಿ ಮೋದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜವಾಹರ ಲಾಲ್‌ ನೆಹರು, ಇಂದಿರಾ ಗಾಂಧಿ, ಅಟಲ್‌ ಬಿಹಾರಿ ವಾಜಪೇಯಿ ಅವರಂತೆ ಒಂದಿಡೀ ದೇಶವನ್ನು ಯಾರಾದರೂ ಆವರಿಸಿಕೊಂಡಿದ್ದರೆ, ಮನೆ-ಮನಗಳನ್ನು ಪ್ರವೇಶಿಸಿದ ನಾಯಕನೆಂದರೆ ಅದು ಪ್ರಧಾನಿ ನರೇಂದ್ರ ಮೋದಿ (Narendra Modi). ಇಂತಹ ರಾಷ್ಟ್ರೀಯ ನಾಯಕನ ಕುರಿತು ಸಹಜವಾಗಿಯೇ ಜನರಲ್ಲಿ ಹಲವಾರು ಕುತೂಹಲಗಳು ಇರುತ್ತವೆ. ಮೋದಿ ಕುರಿತು ಇರುವ ಕುತೂಹಲ ತಣಿಸಲೆಂದೇ ಅವರ ಬಗೆಗೆ ಇರುವ ಆಸಕ್ತಿದಾಯಕ ಅಂಶಗಳನ್ನು ನೀಡಲಾಗಿದೆ. ಮೋದಿ ಜನ್ಮದಿನದಂದು ಅವರ ಜೀವನ, ಆಸಕ್ತಿದಾಯಕ ವಿಷಯಗಳ ಸುತ್ತ ಒಂದು ಸುತ್ತು ಹಾಕೋಣ ಬನ್ನಿ…

೧. ಆರೋಗ್ಯ ಕಾಳಜಿ ಹೆಚ್ಚಿನ ಮುತುವರ್ಜಿ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅವರು ಒಂದು ದಿನವೂ ಅನಾರೋಗ್ಯಕ್ಕೀಡಾಗಿದ್ದು, ಸುಸ್ತಾಗಿದ್ದು, ಕನಿಷ್ಠ ನೆಗಡಿ-ಜ್ವರ ಬಂದ ಸುದ್ದಿಯನ್ನು ಯಾರೂ ಕೇಳಿಲ್ಲ. ಇದಕ್ಕೆ ನರೇಂದ್ರ ಮೋದಿ ಅವರು ಆರೋಗ್ಯಕ್ಕೆ ನೀಡುವ ಮಹತ್ವವೇ ಕಾರಣ. ನಿತ್ಯ ನಾಲ್ಕೈದು ಗಂಟೆ ಮಲಗಿದರೂ, ೧೮ಕ್ಕೂ ಹೆಚ್ಚು ತಾಸು ಕೆಲಸ ಮಾಡಿದರೂ, ವಿದೇಶ ಸುತ್ತಿ ಬಂದರೂ ಯೋಗ, ವ್ಯಾಯಾಮ, ಆಹಾರ ಪದ್ಧತಿಯಿಂದಾಗಿ ಮೋದಿ ಈಗಲೂ ಫಿಟ್‌ ಇದ್ದಾರೆ. ಬೆಳಗ್ಗೆ ಎದ್ದು, ಯೋಗ, ವ್ಯಾಯಾಮ, ವಾಕಿಂಗ್‌ ಹಾಗೂ ಧ್ಯಾನ ಮಾಡುತ್ತಾರೆ. ಗುಜರಾತಿ ಆಹಾರ, ಸ್ವಲ್ಪ ಕಿಚಡಿ ಸೇವಿಸುವ ಮೂಲಕ ಅವರು ಡಯಟ್‌ ಮೇಂಟೇನ್‌ ಮಾಡುತ್ತಾರೆ. ಅಷ್ಟರಮಟ್ಟಿಗೆ ಮೋದಿ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ.

2. 42 ವರ್ಷದಿಂದ ನವರಾತ್ರಿ ವೇಳೆ ಉಪವಾಸ

ದೇಶಭಕ್ತಿಯ ಜತೆಗೆ ದೈವಭಕ್ತರೂ ಆಗಿರುವ ಮೋದಿ ಅವರು ನವರಾತ್ರಿ ವೇಳೆ ಪ್ರತಿ ವರ್ಷ ಉಪವಾಸ ಮಾಡುತ್ತಾರೆ. ಕಳೆದ ೪೨ ವರ್ಷಗಳಿಂದ ನವರಾತ್ರಿ ವೇಳೆ ಮೋದಿ ಅವರು ಒಂಬತ್ತು ದಿನ ಉಪವಾಸ ಆಚರಿಸುತ್ತಾರೆ. ಮೋದಿ ವಿದೇಶದಲ್ಲಿಯೇ ಇರಲಿ, ಬಿಡುವಿಲ್ಲದ ಕಾರ್ಯಕ್ರಮಗಳು, ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಲೇ ಉಪವಾಸ ಆಚರಿಸುತ್ತಾರೆ.

೩. ಮೋದಿ ಸಂವಹನದ ಹಿಂದಿದೆ ಕೋರ್ಸ್‌ ರಹಸ್ಯ

ನರೇಂದ್ರ ಮೋದಿ ಅವರು ಅರಳು ಹುರಿದಂತೆ ಮಾತನಾಡುತ್ತಾರೆ. ಅವರು ಜಾಗತಿಕ ಉದ್ಯಮಿಗಳೇ ಇರಲಿ, ರಾಜಕಾರಣಿಯೇ ಇರಲಿ, ಎಂತಹವರ ಜತೆಗೂ ಉತ್ತಮ ಸಂವಹನ ಸಾಧಿಸುತ್ತಾರೆ. ಅವರ ಜತೆ ಆತ್ಮೀಯವಾಗಿ ಬೆರೆಯುತ್ತಾರೆ. ಅಷ್ಟೇ ಏಕೆ, ವೇದಿಕೆ ಮೇಲೆ ನಿಂತು ವಾಗ್ಝರಿ ಹರಿಸಿದರೆ, ಗ್ರಾಮೀಣ ಭಾಗದ ಜನರೂ ತಲೆದೂಗುವಂತೆ ಮಾಡುತ್ತಾರೆ. ಇದರ ಹಿಂದೆ ಅವರು ಬಾಲ್ಯದಿಂದಲೂ ಜನರ ಜತೆ ಒಡನಾಡಿದ್ದು, ಆರೆಸ್ಸೆಸ್‌ನ ಬೈಠಕ್‌ಗಳಲ್ಲಿ ಭಾಗಿಯಾಗಿದ್ದರ ಜತೆಗೆ ಅವರು ಅಮೆರಿಕದಲ್ಲಿ ಇದಕ್ಕಾಗಿಯೇ ಕೋರ್ಸ್‌ ಸಹ ಮಾಡಿದ್ದಾರೆ. ಅಮೆರಿಕದಲ್ಲಿ “ಇಮೇಜ್‌ ಮ್ಯಾನೇಜ್‌ಮೆಂಟ್‌” ಹಾಗೂ ಸಾರ್ವಜನಿಕ ಸಂಪರ್ಕದಲ್ಲಿ ಮೋದಿ ಮೂರು ತಿಂಗಳ ಕೋರ್ಸ್‌ ಮುಗಿಸಿದ್ದಾರೆ.

೪. ಅವಿರತ ಪರಿಶ್ರಮಿ, ಅಪ್ರತಿಮ ದೇಶಪ್ರೇಮಿ

ನರೇಂದ್ರ ಮೋದಿ ಕುರಿತ ಟೀಕೆ ಟಿಪ್ಪಣಿಗಳು ಏನೇ ಇರಲಿ. ಆದರೆ, ಅವರೊಬ್ಬ ಅವಿರತ ಪರಿಶ್ರಮಿ ಹಾಗೂ ಅಪ್ರತಿಮ ದೇಶಪ್ರೇಮಿ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ ಇಳಿಕೆಯಾದ ಉಗ್ರರ ದಾಳಿಗಳೇ ಸಾಕ್ಷಿಯಾಗಿದೆ. ಇಂದಿಗೂ ಉಗ್ರರ ಉಪಟಳ ಗಡಿಗೆ ಸೀಮಿತವಾಗಿದ್ದರೆ ಅದಕ್ಕೆ ಮೋದಿ ಅವರು ದೇಶದ ಭದ್ರತೆಗೆ ನೀಡಿದ ಆದ್ಯತೆಯೇ ಕಾರಣ. ಉರಿ ಮೇಲಿನ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್‌ ಸ್ಟ್ರೈಕ್‌ ಮಾಡಿಸಿದ್ದು, ಸರ್ಜಿಕಲ್‌ ಸ್ಟ್ರೈಕ್‌ ಯಶಸ್ವಿಯಾಗಿದೆ ಎಂದು ಕರೆ ಬರುವತನಕ ರಾತ್ರಿ ಎದ್ದು ಕುಳಿತಿದ್ದು, ಅಮೆರಿಕದ ಬೆದರಿಕೆಗೆ ಬಗ್ಗದೆ ರಷ್ಯಾ ಜತೆ ಎಸ್‌-೪೦೦ ಕ್ಷಿಪಣಿ ವ್ಯವಸ್ಥೆ ಖರೀದಿ ಒಪ್ಪಂದ ಮಾಡಿಕೊಂಡಿದ್ದು, ಚೀನಾದ ಒಆರ್‌ಒಪಿ, ಸಿಪಿಐಸಿ ಬಲೆಗೆ ಬೀಳದ್ದು, ಪುಲ್ವಾಮ ದಾಳಿಗೆ ತಿರುಗೇಟಾಗಿ ಬಾಲಾಕೋಟ್‌ ವಾಯುದಾಳಿ ನಡೆಸಿದ್ದು, ಉಕ್ರೇನ್‌ ಮೇಲೆ ಆಕ್ರಮಣ ಮಾಡಿದ ಬಳಿಕ ವಿಶ್ವವೇ ರಷ್ಯಾ ವಿರುದ್ಧ ನಿಂತರೂ ಭಾರತವು ರಷ್ಯಾದಿಂದ ಕಚ್ಚಾತೈಲ ಖರೀದಿಸಿದ್ದು ಇದಕ್ಕೆ ಸಾಕ್ಷಿಯಾಗಿದೆ. ಮೋದಿ ಅವರು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ ೨೦೧೪ರಲ್ಲಿ ಎಂಟು ತಿಂಗಳಲ್ಲಿ ದೇಶಾದ್ಯಂತ ೩ ಲಕ್ಷ ಕಿ.ಮೀ ಸಂಚರಿಸಿ, ೨೫ ರಾಜ್ಯಗಳಲ್ಲಿ ಪ್ರಚಾರ ಮಾಡಿ ಜನರ ಮನಸ್ಸು ಗೆದ್ದಿದ್ದರು. ಈಗಲೂ ಮೋದಿ ನಾಲ್ಕಾರು ದೇಶಗಳನ್ನು ಸುತ್ತಿ, ಬೆಳಗ್ಗೆ ಎದ್ದೇಳುತ್ತಲೇ ಯಾವುದೋ ಯೋಜನೆಗೆ ಚಾಲನೆ ನೀಡುತ್ತಿರುತ್ತಾರೆ. ರಾಜಕೀಯ ವೈರಿಗಳೂ ಮೋದಿ ಅವರನ್ನು ಕಾಯಕಯೋಗಿ ಎಂಬುದನ್ನು ಒಪ್ಪುತ್ತಾರೆ.

೫. ರಾಜಕೀಯದ ಹೊರತಾಗಿ ಸಂಬಂಧಕ್ಕೆ ಆದ್ಯತೆ

ಕೆಲವೊಮ್ಮೆ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ, ಆರೋಪ, ಟೀಕೆ, ಖಂಡನೆ, ವಿಡಂಬನೆ, ವ್ಯಂಗ್ಯವು ಗಂಭೀರ ಸ್ವರೂಪದ್ದಾಗಿರುತ್ತದೆ. ಆಡಳಿತ ಪಕ್ಷದವರೇ ಹೀಗೆ ಪ್ರತಿಪಕ್ಷಗಳನ್ನು ಹೀಗಳಿಯಬಹುದೇ ಎನ್ನುವಷ್ಟರಮಟ್ಟಿಗೆ ದಾಳಿ ನಡೆಸುತ್ತಾರೆ. ಹೀಗಿದ್ದರೂ ಮೋದಿ ಅವರು ರಾಜಕೀಯದ ಹೊರತಾಗಿ ಉತ್ತಮ ಸಂಬಂಧ ಹೊಂದಿದ್ದಾರೆ. ರಾಜಕೀಯದಲ್ಲಿ ಬದ್ಧವೈರಿಯಾಗಿರುವ ಮಮತಾ ಬ್ಯಾನರ್ಜಿಯವರು ಪ್ರತಿ ವರ್ಷ ಮೋದಿ ಅವರಿಗೆ ಕುರ್ತಾ, ಸಿಹಿ ತಿಂಡಿಗಳನ್ನು ಕಳುಹಿಸುತ್ತಾರೆ. ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರೂ ಮೋದಿಗೆ ಸಿಹಿ ಕಳುಹಿಸುತ್ತಾರೆ. ದೆಹಲಿಗೆ ಹೋದಾಗ ಮಾಜಿ ಪ್ರಧಾನಿ ದೇವೇಗೌಡರನ್ನು ಮೋದಿ ಆದರಿಸಿದ ರೀತಿಗೆ ಗೌಡರೇ ವಿಸ್ಮಿತರಾಗಿದ್ದರು. ಇನ್ನು ರಾಜ್ಯಸಭೆಯಲ್ಲಿ ಗುಲಾಂ ನಬಿ ಆಜಾದ್‌ ಅವರಿಗೆ ಮೋದಿ ಗೌರವ ಸೂಚಿಸಿದ್ದು, ಅವರನ್ನು ಹೊಗಳಿದ್ದು, ಪಕ್ಷದ ಹಂಗಿಲ್ಲದೆ ಪ್ರಣಬ್‌ ಮುಖರ್ಜಿ ಅವರಿಗೆ ಭಾರತ ರತ್ನ ನೀಡಿದ್ದು ಮೋದಿ ಅವರು ರಾಜಕೀಯದ ಹೊರತಾಗಿ ಹೊಂದಿರುವ ವಿಶಾಲ ಮನೋಭಾವ, ಸಂಬಂಧಕ್ಕೆ ನೀಡುವ ಆದ್ಯತೆಗೆ ನಿದರ್ಶನವಾಗಿದೆ.

ಮೋದಿ ಜತೆ ದೀದಿ.

೬. ಯೋಜನೆಗಳಿಗೆ ವಿಶಿಷ್ಟ ಹೆಸರು ನೀಡುವ ಕಲೆ

ಮೋದಿ ಅವರ ಆಡಳಿತದಲ್ಲಿ ಯಾವುದೇ ಯೋಜನೆ ಜಾರಿಗೊಳಿಸಲಿ, ಅದಕ್ಕೊಂದು ವಿಶಿಷ್ಟ ಹೆಸರು ನೀಡಲಾಗುತ್ತದೆ. ಯೋಜನೆಗಳಿಗೆ ಕುಟುಂಬಸ್ಥರ ಹೆಸರಿಡುವುದಕ್ಕೆ ವಿದಾಯ ಹಾಕಿದ ಮೋದಿ ವಿಶಿಷ್ಟ ಹೆಸರುಗಳ ಮೂಲಕ ಗಮನ ಸೆಳೆಯುತ್ತಾರೆ. ಸಿಎಂ ಎಂದರೆ ಕಾಮನ್‌ ಮ್ಯಾನ್‌, ಐಟಿ ಎಂದರೆ ಇಂಡಿಯನ್‌ ಟೆಕ್ನಾಲಜಿ, ಬಿಟಿ ಎಂದರೆ ಭಾರತ್‌ ಟುಮಾರೊ ಎಂಬ ಪದಗಳನ್ನು ಪರಿಚಯಿಸಿದ್ದೇ ಮೋದಿ. ಅದೂ ಗುಜರಾತ್‌ ಸಿಎಂ ಆಗಿದ್ದಾಗಲೇ ಮೋದಿ ಯೋಜನೆಗಳಿಗೆ ಹೆಸರಿಡುವ ಕಲೆ ಹೊಂದಿದ್ದರು. ಗುಜರಾತ್‌ ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ನರ್ಮದಾ ನೀರಾವರಿ ಯೋಜನೆಗೆ “ಸುಜಲಾಂ ಸುಫಲಾಂ”, ಹೆಣ್ಣುಮಕ್ಕಳನ್ನು ಶಾಲೆಗೆ ಕರೆತರುವ ಯೋಜನೆಗೆ “ವಿದ್ಯಾಲಕ್ಷ್ಮೀ”, ಗುಜರಾತ್‌ ಅಭಿವೃದ್ಧಿಗೆ ರಚಿಸಿದ ಪರಿಣತರ ಸಮಿತಿಗೆ “ಬುದ್ಧಿಸಾಗರ್‌ ಪರಿಷದ್‌” ಎಂದು ಹೆಸರಿಟ್ಟಿದ್ದರು. ಇನ್ನು ಕಳೆದ ಎಂಟು ವರ್ಷಗಳಲ್ಲಿ ಮೋದಿ ಅವರು ಪ್ರಧಾನಿಯಾಗಿ, ಆತ್ಮನಿರ್ಭರ ಭಾರತ್‌, ಮೇಕ್‌ ಇನ್‌ ಇಂಡಿಯಾ, ಆಯುಷ್ಮಾನ್‌ ಭಾರತ್‌, ಜನಧನ್‌, ಕಿಸಾನ್‌ ಸಮ್ಮಾನ್‌, ಅಗ್ನಿಪಥ, ಉಜ್ವಲ ಸೇರಿ ಹಲವು ವಿಶಿಷ್ಟ ಹೆಸರುಗಳಲ್ಲಿ ಯೋಜನೆಗಳು ಜಾರಿಯಾಗಿವೆ.

೭. ಸುರಂಗ ಮಾರ್ಗ ಬಳಸಿದ ಮೊದಲ ಪ್ರಧಾನಿ

ನರೇಂದ್ರ ಮೋದಿ ಅವರ ನಿವಾಸವಿರುವ ಲೋಕಕಲ್ಯಾಣ ಮಾರ್ಗದಿಂದ ಸಫ್ದರ್‌ಜಂಗ್‌ ಏರ್‌ಪೋರ್ಟ್‌ಗೆ ಎರಡು ಕಿ.ಮೀ. ದೂರದ ಸುರಂಗ ಕೊರೆಯಲಾಗಿದೆ. ಗಾಲ್ಫ್‌ ಕೋ ಮಾರ್ಗವಾಗಿ ಸುರಂಗ ಕೊರೆಯಲಾಗಿದ್ದು, ಸಂಚಾರ ದಟ್ಟಣೆ ತಡೆಯಲು ೨೦೧೦ರಲ್ಲಿ ಆರಂಭಿಸಿ, ೨೦೧೪ರಲ್ಲಿ ಸುರಂಗ ಕಾಮಗಾರಿ ಮುಗಿದಿದೆ. ಈ ಸುರಂಗವನ್ನು ಬಳಸಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎನಿಸಿದ್ದಾರೆ. ಸುರಂಗದಲ್ಲಿ ಹೋದರೆ ವಿಮಾನ ನಿಲ್ದಾಣ, ವಿಐಪಿ ಹೆಲಿಕಾಪ್ಟರ್‌ಗಳು ಲ್ಯಾಂಡ್‌ ಆಗುವ ಹೆಲಿಪ್ಯಾಡ್‌ ತಲುಪಬಹುದಾಗಿದೆ.

೮. ಮೋದಿಗೆ ಸ್ಕೂಟರ್‌ ಓಡಿಸಲು ಬರುತ್ತಿರಲಿಲ್ಲ

ನರೇಂದ್ರ ಮೋದಿ ಅವರು ಚಿಕ್ಕ ವಯಸ್ಸಿನಲ್ಲಿಯೇ ಆರ್‌ಎಸ್‌ಎಸ್‌ ಸೇರಿ, ಸಂಘದ ಪ್ರಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಭೆ-ಸಮಾರಂಭಗಳನ್ನು ಆಚರಿಸುವುದು, ಕಚೇರಿಯ ಸ್ವಚ್ಛತೆ ಸೇರಿ ಎಲ್ಲ ಉಸ್ತುವಾರಿಯನ್ನು ಅವರೇ ನೋಡಿಕೊಳ್ಳುತ್ತಿದ್ದರು. ಸಂಘದಲ್ಲಿ ಅವರು ಪ್ರಚಾರಕರಾಗಿ ಆಯ್ಕೆಯಾಗುವರೆಗೂ ಸ್ಕೂಟರ್‌ ಓಡಿಸಲು ಬರುತ್ತಿರಲಿಲ್ಲ. ಶಂಕರಸಿಂಗ್‌ ವಘೇಲಾ (ಗುಜರಾತ್‌ ಮಾಜಿ ಮುಖ್ಯಮಂತ್ರಿ) ಅವರೇ ಮೋದಿ ಅವರನ್ನು ಸ್ಕೂಟರ್‌ನಲ್ಲಿ ಕರೆದುಕೊಂಡು ತಿರುಗಾಡುತ್ತಿದ್ದರು.

೯. ಕಟ್ಟಾ ವಿರೋಧಿಯೊಬ್ಬ ಖಾಸಾ ಸ್ನೇಹಿತನಾದ ಕತೆ

ಗುಜರಾತ್‌ನಲ್ಲಿ ಗೋಧ್ರಾ ಹತ್ಯಾಕಾಂಡ ನಡೆದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ನರೇಂದ್ರ ಮೋದಿ ಅವರ ಕಟ್ಟಾ ವಿರೋಧಿಗಳಾದರು. ಇದೇ ರೀತಿ ಹತ್ಯಾಕಾಂಡದ ವೇಳೆ ಕೋಟ್ಯಂತರ ರೂ. ನಷ್ಟ ಅನುಭವಿಸಿದ ಜಾಫರ್‌ ಸರೇಶ್‌ವಾಲಾ ಎಂಬ ಉದ್ಯಮಿಯೂ ಮೋದಿ ವಿರೋಧಿಯಾಗಿದ್ದರು. ಮೋದಿ ವಿರುದ್ಧ ಲಂಡನ್‌ನಲ್ಲಿಯೂ ಸರೇಶ್‌ವಾಲಾ ಅಪಪ್ರಚಾರ ಮಾಡಿದ್ದರು. ಆದರೆ, ಸರೇಶ್‌ವಾಲಾ ೨೦೦೫ರಲ್ಲಿ ಲಂಡನ್‌ನಲ್ಲಿ ವಾಸಿಸಲು ತೀರ್ಮಾನಿಸಿದಾಗ ಕರೆ ಮಾಡಿದ ಮೋದಿ, “ಎಷ್ಟು ದಿನ ಬ್ರಿಟಿಷರ ಸೇವೆ ಮಾಡುತ್ತೀರಿ? ನಿಮ್ಮ ಅಗತ್ಯ ದೇಶಕ್ಕಿದೆ” ಎಂದರು. ಇದಾದ ಬಳಿಕ ಸರೇಶ್‌ವಾಲಾ ಮೋದಿ ಅವರಿಗೆ ಆಪ್ತರಾದರು. ಯಾರು ಮೋದಿ ವಿರುದ್ಧ ಮಾತನಾಡಿದರೋ, ಅದೇ ಸರೇಶ್‌ವಾಲಾ ಮೋದಿ ಪರ ಮಾತನಾಡಿದರು.

೧೦. ಮೋದಿ ಕುರಿತು ೨ ತಿಂಗಳಲ್ಲಿ ೪೦ ಪುಸ್ತಕ

ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿ ದೇಶಾದ್ಯಂತ ಖ್ಯಾತಿ ಗಳಿಸಿದರೂ ಅವರ ಜೀವನ ಚಿತ್ರಣ ಹರವುವ ಪುಸ್ತಕಗಳು ಬೆರಳೆಣಿಕೆಯಷ್ಟು ಮಾತ್ರ ಇದ್ದವು. ಆದರೆ, ೨೦೧೪ರಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ, ಪ್ರಧಾನಿಯಾದರೋ, ಆಗ ಸಾಲು ಸಾಲು ಪುಸ್ತಕಗಳು ಬಿಡುಗಡೆಯಾದವು. ಒಂದು ವರದಿ ಪ್ರಕಾರ, ಮೋದಿ ಪ್ರಧಾನಿಯಾಗಿ ಎರಡು ತಿಂಗಳು ಆಗುವಷ್ಟರಲ್ಲಿಯೇ ಅವರ ಜೀವನ ಚರಿತ್ರೆ ಕುರಿತು ೪೦ ಪುಸ್ತಕಗಳು ಪ್ರಕಟವಾದವು ಎಂದು ತಿಳಿದುಬಂದಿದೆ. ಎಂಟು ವರ್ಷದಲ್ಲಂತೂ ಮೋದಿ ಕುರಿತು ನೂರಾರು ಪುಸ್ತಕಗಳು ಪ್ರಕಟವಾಗಿವೆ.

೧೧. ಕುಗ್ಗದ ಚುಂಬಕಶಕ್ತಿ, ಹಿಗ್ಗಿದ ಜನಪ್ರಿಯತೆ

ಜನಾಕ್ರೋಶವನ್ನು ಎದುರಿಸದೆ ಯಾವ ಸರ್ಕಾರವೂ ಆಡಳಿತ ನಡೆಸುವುದಿಲ್ಲ. ಅದರಂತೆ, ಮೋದಿ ಅವಧಿಯಲ್ಲಿ ಬೆಲೆಯೇರಿಕೆ, ಕೊರೊನಾ ಬಿಕ್ಕಟ್ಟು, ಆರ್ಥಿಕ ಹಿಂಜರಿತ, ಆಪರೇಷನ್‌ ಕಮಲ, ಕೃಷಿ ಕಾಯಿದೆಗೆ ವಿರೋಧ, ಸಿಎಎ ವಿರುದ್ಧ ಪ್ರತಿಭಟನೆ ಸೇರಿ ಹಲವು ರೀತಿಯಲ್ಲಿ ಜನರಿಂದ ಆಕ್ರೋಶ ವ್ಯಕ್ತವಾಗಿದೆ. ಈಗಲೂ ಬೆಲೆಯೇರಿಕೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ. ಹೀಗಿದ್ದರೂ, ಮೋದಿ ಅವರ ಜನಪ್ರಿಯತೆ, ಚುಂಬಕ ಶಕ್ತಿ ಕುಗ್ಗಿಲ್ಲ. ಈಗ ಚುನಾವಣೆ ನಡೆದರೂ ಮೋದಿ ಮತ್ತೆ ಜನರ ಮನಸ್ಸು ಗೆಲ್ಲಬಹುದು ಎನ್ನುವಷ್ಟರಮಟ್ಟಿಗೆ ಅವರು ಜನರ ಮನಸ್ಸಿನಲ್ಲಿ ಅಚ್ಚೊತ್ತಿದ್ದಾರೆ. ಅಷ್ಟೇ ಏಕೆ, ಇತ್ತೀಚೆಗೆ ಮಾರ್ನಿಂಗ್‌ ಕನ್ಸಲ್ಟ್‌ ಎಂಬ ಜಾಗತಿಕ ಸಂಸ್ಥೆ ನಡೆಸಿದ ಸಮೀಕ್ಷೆಯು ಮೋದಿಯೇ ಜಗತ್ತಿನ ಜನಪ್ರಿಯ ನಾಯಕ ಎಂದು ತಿಳಿಸಿದೆ.

೧೨. ಬಾಲ್ಯದಲ್ಲಿ ಮೋದಿಗಿದ್ದ ಪೆಟ್‌ನೇಮ್‌ ಏನು?

ತುಂಬು ಕುಟುಂಬ, ಬಡತನದಲ್ಲಿ ಜನಿಸಿದ ಮೋದಿಗೆ ಬಾಲ್ಯದಲ್ಲಿ ಗೆಳೆಯರ ದೊಡ್ಡ ಬಳಗವೇ ಇತ್ತು. ಶಾಲೆಯಲ್ಲಂತೂ ಮೋದಿ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಹಾಗಾಗಿ, ಸಹಪಾಠಿಗಳು ಅವರನ್ನು “ಎನ್‌ಡಿ” (ನರೇಂದ್ರ ದಾಮೋದರ ದಾಸ್) ಎಂದು ಕರೆಯುತ್ತಿದ್ದರು. ಇನ್ನೂ ಕೆಲವರು ಪ್ರೀತಿಯಿಂದ “ನರಿಯಾ” ಎಂದೂ ಕರೆಯುತ್ತಿದ್ದರು.

೧೩. ಸನ್ಯಾಸಿ ನುಡಿದ ಭವಿಷ್ಯ ನಿಜವಾಯಿತು

ನರೇಂದ್ರ ಮೋದಿ ಅವರು ಚಿಕ್ಕವರಾಗಿದ್ದಾಗ ಅವರ ಮನೆಗೆ ಸನ್ಯಾಸಿಯೊಬ್ಬರು ಬಂದಿದ್ದರು. ಆಗ, ಮೋದಿ ಸಹೋದರ ಸೋಮ್‌ಭಾಯ್‌ ಅವರ ಜಾತಕ ನೋಡಿದ ಸಾಧು, “ಈತ ಎಲ್ಲರಂತೆ ಸಾಮಾನ್ಯ ಜೀವನ ಸಾಗಿಸುತ್ತಾನೆ” ಎಂದು ಹೇಳುತ್ತಾರೆ. ನಂತರ ಮೋದಿ ಜಾತಕ ನೋಡಿದ ಸನ್ಯಾಸಿ, “ಒಂದೋ ಈತ ಸನ್ಯಾಸಿಯಾಗುತ್ತಾನೆ, ಇಲ್ಲವೇ ದೊಡ್ಡ ರಾಜಕಾರಣಿಯಾಗುತ್ತಾನೆ” ಎಂದಿದ್ದರು. ಸನ್ಯಾಸಿಯಾಗುವ ದಿಸೆಯಲ್ಲಿ ಮೋದಿ ಬಂಗಾಳದ ಒಂದು ಆಶ್ರಮಕ್ಕೆ ಹೋಗಿದ್ದರು. ಹಿಮಾಲಯದಲ್ಲೂ ಒಂದಷ್ಟು ದಿನ ಕಳೆದರು. ಆದರೆ, ಕೊನೆಗೆ ಅವರು ರಾಜಕಾರಣಿಯಾದರು. ಜಗತ್ತೇ ಮೆಚ್ಚುವ ನಾಯಕನಾಗಿಯೂ ಹೊರಹೊಮ್ಮಿದರು.

೧೪. ಕವಿ, ಛಾಯಾಗ್ರಾಹಕ, ಗಾಳಿಪಟ ಪ್ರೇಮಿ

ರಾಜಕೀಯ, ಭಾಷಣ, ಯೋಜನೆ, ವಿದೇಶ ಪ್ರವಾಸ ಎಂದು ಬ್ಯುಸಿಯಾಗಿರುವ ನರೇಂದ್ರ ಮೋದಿ ಅವರು ಕವಿ ಎಂಬುದು ತುಂಬ ಜನರಿಗೆ ಗೊತ್ತಿರಲಿಕ್ಕಿಲ್ಲ. ಗುಜರಾತಿ ಭಾಷೆಯಲ್ಲಿ ಮೋದಿ ಅವರು ಬರೆದ ಕವನ ಸಂಕಲನಗಳು, ಲೇಖನಗಳು ಪ್ರಕಟವಾಗಿವೆ. ಬಿಡುವಿದ್ದಾಗ ಅವರು ಫೋಟೊಗ್ರಫಿಯನ್ನೂ ಮಾಡುತ್ತಾರೆ. ಹಾಗೆಯೇ, ಬಾಲ್ಯದಲ್ಲಿ ಗಾಳಿಪಟ ಹಾರಿಸುವುದು ನರೇಂದ್ರ ಮೋದಿ ಅವರಿಗೆ ಅಚ್ಚುಮೆಚ್ಚಿನ ಹವ್ಯಾಸವಾಗಿತ್ತು. ಶಾಲಾ ಮಟ್ಟದ ನಾಟಕಗಳಲ್ಲೂ ಮೋದಿ ಅಭಿನಯಿಸಿದ್ದಾರೆ.

೧೫. ಮೋದಿ ಜಾಕೆಟ್‌ಗೂ ಜಾಗತಿಕ ಮನ್ನಣೆ

ನರೇಂದ್ರ ಮೋದಿ ಅವರು ಸೂಟು-ಬೂಟು ಹಾಕಿಕೊಂಡು ವಿದೇಶಕ್ಕೆ ತೆರಳಿದ್ದು ಟೀಕೆಗೊಳಗಾಯಿತು. ಪ್ರತಿಪಕ್ಷಗಳು ಇದು ಸೂಟು ಬೂಟಿನ ಸರ್ಕಾರ ಎಂದು ಟೀಕಿಸಿದವು. ಆದರೆ, ಮೋದಿ ಅವರು ಜಾಕೆಟ್‌ ಧರಿಸುವ ಮೂಲಕ, ಆ ಜಾಕೆಟ್‌ಗಳು “ಮೋದಿ ಜಾಕೆಟ್”‌ ಎಂದೇ ಖ್ಯಾತಿಯಾಗುವಂತೆ ಮಾಡಿದರು. ೧೯೬೦ರ ದಶಕದಲ್ಲಿ “ನೆಹರು ಜಾಕೆಟ್”‌ ಎಷ್ಟು ಖ್ಯಾತಿ ಗಳಿಸಿದ್ದವೋ, ಮೋದಿ ಅವಧಿಯಲ್ಲಿ ದೇಶಾದ್ಯಂತ “ಮೋದಿ ಜಾಕೆಟ್‌”ಗಳು ಖ್ಯಾತಿ ಗಳಿಸಿದವು. ಈ ಕ್ರೇಜ್‌ ಎಷ್ಟರಮಟ್ಟಿಗೆ ಹೆಚ್ಚಾಯಿತೆಂದರೆ, ದಕ್ಷಿಣ ಕೊರಿಯಾದ ಆಗಿನ ಅಧ್ಯಕ್ಷ ಮೂನ್‌ ಜೇ ಇನ್‌ ಅವರು ಭಾರತಕ್ಕೆ ಆಗಮಿಸಿದ್ದಾಗ ಮೋದಿ ಜಾಕೆಟ್‌ ಧರಿಸಿದ್ದರು.

ಮೋದಿ ಜಾಕೆಟ್‌ನಲ್ಲಿ ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷ ಮೂನ್‌ ಜೇ ಇನ್.

೧೬. ಯುದ್ಧದ ವೇಳೆ ಸೈನಿಕರಿಗೆ “ಚಹಾ” ನೆರವು

ನರೇಂದ್ರ ಮೋದಿ ಅವರ ತಂದೆ ದಾಮೋದಾರ ದಾಸ್‌ ಅವರು ರೈಲು ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದರು. ೧೯೬೫ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧ ನಡೆದಾಗ ಮೋದಿ ಅವರೂ ರೈಲು ನಿಲ್ದಾಣದಲ್ಲಿ ಯೋಧರಿಗೆ ಚಹಾ ನೀಡುತ್ತಿದ್ದರು. ರಣರಂಗದಿಂದ ಬರುವ ಹಾಗೂ ರಣರಂಗಕ್ಕೆ ಹೊರಡುವ ಯೋಧರಿಗೆ ಮಸಾಲ ಚಹಾ ನೀಡುವ ಮೂಲಕ ಮೋದಿ ದೇಶಪ್ರೇಮೆ ಮೆರೆದಿದ್ದರು.

೧೭. ವೀಸಾ ನಿರಾಕರಿಸಿದವರೇ ಆಮಂತ್ರಿಸಿದರು

ಹೀಗಳೆದವರು, ತುಚ್ಚವಾಗಿ ನೋಡಿದವರು, ಟೀಕಿಸಿದವರೇ ತಿರುಗಿ ನೋಡುವಂತೆ, ಬಂದು ಕೈಕುಲುಕುವಂತೆ ಮಾಡುವುದು ನರೇಂದ್ರ ಮೋದಿ ಅವರ ವ್ಯಕ್ತಿತ್ವದ ಭಾಗವೇ ಆಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಮೋದಿ ಗುಜರಾತ್‌ ಪ್ರಧಾನಿಯಾಗಿದ್ದಾಗ ಗೋಧ್ರಾ ಹತ್ಯಾಕಾಂಡದ ಹೆಸರಿನಲ್ಲಿ ಅವರಿಗೆ ವೀಸಾ ನೀಡದಿರುವುದು ಹಾಗೂ ಪ್ರಧಾನಿಯಾಗುತ್ತಲೇ ಅವರನ್ನು ಅಪ್ಪಿ ಸ್ವಾಗತಿಸಿರುವುದು. ಅಷ್ಟೇ ಅಲ್ಲ, ೨೦೧೫ರಲ್ಲಿ ಆಗ ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮ ಅವರು ಮೋದಿ ಕರೆಗೆ ಓಗೊಟ್ಟು ಭಾರತಕ್ಕೂ ಬರುತ್ತಾರೆ. ಆ ಮೂಲಕ ಅಧಿಕಾರದಲ್ಲಿದ್ದಾಗಲೇ ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ಮೊದಲ ಅಧ್ಯಕ್ಷ ಎಂಬ ಖ್ಯಾತಿಗೆ ಭಾಜನರಾಗುತ್ತಾರೆ.

೧೮. ಸಣ್ಣ ವಿಷಯಗಳಿಗೂ ಆದ್ಯತೆ

ನರೇಂದ್ರ ಮೋದಿ ಧೀಮಂತ ನಾಯಕರಾದರೂ ಸಣ್ಣ ಸಣ್ಣ ವಿಷಯಗಳಿಗೂ ಆದ್ಯತೆ ನೀಡುವುದು, ಚಿಕ್ಕ ಚಿಕ್ಕ ಸಂಗತಿಗಳನ್ನು ಗಮನಿಸುವುದು, ಪ್ರತಿಯೊಬ್ಬರ ಹೆಸರನ್ನೂ ನೆನಪಿಟ್ಟುಕೊಳ್ಳುವುದು ಮೋದಿ ಅವರಿಗೆ ಕರಗತವಾಗಿದೆ. ಅವರು ಮಕ್ಕಳ ಜತೆ ಮಾತನಾಡುವಾಗ ಪಬ್ಜಿ ಉದಾಹರಣೆ ನೀಡುತ್ತಾರೆ, ವೇದಿಕೆಗಳ ಭಾಷಣದ ವೇಳೆ ಗಣ್ಯರ ಹೇಳಿಕೆ ಕೋಟ್‌ ಮಾಡುತ್ತಾರೆ, ವಿಶೇಷ ಸಂದರ್ಭಗಳನ್ನು ನೆನಪಿಸುತ್ತಾರೆ, ದೇವೇಗೌಡರ ಮಂಡಿನೋವು ಅವರಿಗೆ ನೆನಪಿರುತ್ತದೆ. ಇನ್ನು ಅವರು ಹೋಗುವ ಯಾವುದೇ ಕಾರ್ಯಕ್ರಮದ ಫೋಟೊ, ವಿಡಿಯೊ ಮಿಸ್‌ ಆಗುವುದಿಲ್ಲ. ವಿರೋಧಿಗಳು ಟೀಕಿಸಿದರೂ ಅವರು ಫೋಟೊಗೆ ಪೋಸ್‌ ನೀಡುವುದು ಬಿಡುವುದಿಲ್ಲ.

೧೯. ಸ್ವತಂತ್ರ ಭಾರತದಲ್ಲಿ ಜನಿಸಿದ ಮೊದಲ ಪ್ರಧಾನಿ

ಭಾರತ ಸ್ವಾತಂತ್ರ್ಯ ಗಳಿಸಿದ ಬಳಿಕ ಜನಿಸಿದವರಲ್ಲಿ ಪ್ರಧಾನಿಯಾದ ಮೊದಲ ವ್ಯಕ್ತಿ ಎಂಬ ಖ್ಯಾತಿಗೆ ಮೋದಿ ಭಾಜನರಾಗಿದ್ದಾರೆ. ಇದುವರೆಗೆ ದೇಶದ ಪ್ರಧಾನಿಯಾದವರೆಲ್ಲ ಸ್ವಾತಂತ್ರ್ಯ ಸಿಗುವುದಕ್ಕಿಂತ ಮೊದಲು ಜನಿಸಿದ್ದರು. ಆದರೆ, ಮೋದಿ ಅವರು ೧೯೫೦ ಸೆಪ್ಟೆಂಬರ್‌ ೧೭ರಂದು ಜನಿಸಿದರು. ಹೀಗೆ ಸ್ವಾತಂತ್ರ್ಯೋತ್ತರದಲ್ಲಿ ಜನಿಸಿ, ಪ್ರಧಾನಿ ಹುದ್ದೆಗೇರಿದ ಮೊದಲ ವ್ಯಕ್ತಿ ಎಂಬ ಖ್ಯಾತಿ ಮೋದಿ ಅವರದ್ದಾಗಿದೆ.

೨೦. ಊಟದ ವೆಚ್ಚ ಅವರೇ ಭರಿಸುತ್ತಾರೆ

ನರೇಂದ್ರ ಮೋದಿ ಅವರು ಅಣಬೆ (ಮಶ್ರೂಮ್)‌ ತಿನ್ನುತ್ತಾರೆ, ಅದಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತದೆ ಎಂಬ ಆರೋಪವಿದೆ. ಆದರೆ, ನರೇಂದ್ರ ಮೋದಿ ಅವರು ತಮ್ಮ ಊಟದ ವೆಚ್ಚವನ್ನು ತಾವೇ ಭರಿಸುತ್ತಾರೆ. ಇದಕ್ಕಾಗಿ ಸರ್ಕಾರದ ಒಂದು ರೂಪಾಯಿಯನ್ನೂ ಪಡೆಯುವುದಿಲ್ಲ ಎಂದು ಆರ್‌ಟಿಇ ಅಡಿಯಲ್ಲಿ ಇತ್ತೀಚೆಗೆ ಕೇಳಿದ ಪ್ರಶ್ನೆಗೆ ಪಿಎಂಒ ಉತ್ತರಿಸಿದೆ. “ನರೇಂದ್ರ ಮೋದಿ ಅವರು ತಮ್ಮ ಆಹಾರದ ವೆಚ್ಚವನ್ನು ತಾವೇ ಭರಿಸುತ್ತಾರೆ. ಇದಕ್ಕೆ ಸರ್ಕಾರದ ಬಜೆಟ್‌ನಿಂದ ಒಂದು ರೂಪಾಯಿಯೂ ಖರ್ಚಾಗುವುದಿಲ್ಲ” ಎಂದು ಪಿಎಂಒ ಪ್ರತಿಕ್ರಿಯಿಸಿದೆ.

ಇದನ್ನೂ ಓದಿ | National Logistics policy | ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ: ರಾಷ್ಟ್ರೀಯ ಲಾಜಿಸ್ಟಿಕ್ಸ್‌ ನೀತಿಗೆ ಚಾಲನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು.

VISTARANEWS.COM


on

Congress Manifesto
Koo

ಗೋವಾ: ಕೈ-ಕಮಲ ಪಾಳಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿರುವ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ವಿಚಾರಕ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಪ್ರಣಾಳಿಕೆಯನ್ನು ಟೀಕಿಸಿ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು(Congress Police) ಗೋವಾದಲ್ಲಿ ಅರೆಸ್ಟ್‌ ಮಾಡಿದ್ದು, ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ವಾಕ್ಸಮರಕ್ಕೆ ಕಾರಣವಾಗಿದೆ. ವಿನೀತ್‌ ನಾಯ್ಕ್‌ ಎಂಬಾತನನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ವಿನೀತ್‌ ವಿರುದ್ಧ ಸುಳ್ಳು ಮಾಹಿತಿ ಹರಡಿ ಕೋಮು ಘರ್ಷಣೆ (Communal disturbance)ಗೆ ಕುಮ್ಮಕ್ಕು ನೀಡಿಡ ಆರೋಪ ಕೇಳಿ ಬಂದಿದ್ದು, ಕರ್ನಾಟಕ ಶ್ರೀರಾಮಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏನಿದು ಪ್ರಕರಣ?

ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು. ಇದಾದ ಬಳಿಕ ಏ. 22 ಮತ್ತು ಏ. 29ರಂದು ವಿನೀತ್‌ ನಾಯ್ಕ್‌ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಅವರು ಏಪ್ರಿಲ್ 29 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸರು ಎಕ್ಸ್ ಬಳಕೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಿ ಪೋಸ್ಟ್​ ಮಾಡಲಾಗಿದೆ ಎಂದು ದೂರಲಾಗಿತ್ತು. ಇನ್ನು ವಿನೀತ್‌ ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್‌ ಮಾಡಿದ್ದ.

ಪ್ರಕರಣ ದಾಖಲಿಸಿಕೊಂಡು ವಿನೀತ್‌ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ನನ್ನ ತಂದೆಯನ್ನು ಬೆಂಗಳೂರು ಪೊಲೀಸರು ಇದ್ದಕ್ಕಿದ್ದಂತೆ ಬಂಧಿಸಿ ಕರೆದೊಯ್ದಿದ್ದಾರೆ, ಅವರನ್ನು ಬಿಡುಗಡೆ ಮಾಡಿ ಎಂದು ಮಗ ನಾಗೇಶ್​ ನಾಯ್ಕ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ, ಕರ್ನಾಟಕ ಪೊಲೀಸರು ಗೋವಾದಲ್ಲಿ ವಿನೀತ್‌ನನ್ನು ಬಂಧಿಸಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಅವರು ಎಲ್ಲಾ ಕಾನೂನು ಬೆಂಬಲವನ್ನು ನೀಡುತ್ತೇವೆ, ಕಾಂಗ್ರೆಸ್ ಅರಾಜಕತೆಯನ್ನು ಹೊರಹಾಕಿದೆ ಎಂದು ಬರೆದಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪೋಸ್ಟ್​ ಮಾಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಹೋರಾಡಲು ಸಿದ್ಧರಿದ್ದೇವೆ ಎಂದು ಬರೆದಿದ್ದಾರೆ. ಮತ್ತೊಂದೆಡೆ ಕೇಂದ್ರ ಸಚಿವ ಸ್ಮೃತಿ ಇರಾನಿ ಕೂಡ ವಿನೀತ್‌ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Continue Reading

ಆರೋಗ್ಯ

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ( FSSAI Warning) ನೀಡಲಾಗಿದೆ.

VISTARANEWS.COM


on

By

FSSAI alert
Koo

ಮಾರುಕಟ್ಟೆಯಲ್ಲಿ (market) ಮಾವಿನ (mango) ಹಣ್ಣುಗಳ ರಾಶಿ ಕಂಡಾಗ ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ಆದರೆ ನಾವು ಹಣ ಕೊಟ್ಟು ಖರೀದಿ ಮಾಡಿ ತಂದ ಮಾವಿನ ಹಣ್ಣುಗಳು ಸುರಕ್ಷಿತವಾಗಿ ಇದೆಯೇ? ಯಾಕೆಂದರೆ ಮಾವಿನ ಹಣ್ಣುಗಳಲ್ಲಿರುವ ಕ್ಯಾಲ್ಸಿಯಂ ಕಾರ್ಬೈಡ್ (calcium carbide) ಅಪಾಯಗಳ ವಿರುದ್ಧ ಕೇಂದ್ರ ಆಹಾರ ನಿಯಂತ್ರಣ ಸಂಸ್ಥೆಯಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI Warning) ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವುದರ ಬಗ್ಗೆ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೈಪನಿಂಗ್ ಚೇಂಬರ್‌ಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಎಫ್‌ಎಸ್‌ಎಸ್‌ಎಐ ಎಚ್ಚರಿಕೆ ನೀಡಿದೆ.
ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ನೀಡಲಾಗಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸುವುದರ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಫ್‌ಎಸ್‌ಎಸ್‌ಎಐ ಹಣ್ಣಿನ ವ್ಯಾಪಾರಿಗಳು, ಹ್ಯಾಂಡ್ಲರ್‌ಗಳು ಮತ್ತು ಫುಡ್ ಬ್ಯುಸಿನೆಸ್ ಆಪರೇಟರ್‌ಗಳು (ಎಫ್‌ಬಿಒಗಳು) ಪಕ್ವಗೊಳಿಸುವ ಕೋಣೆಗಳನ್ನು ನಿರ್ವಹಿಸುವ ಎಚ್ಚರಿಕೆ ನೀಡಿದೆ.

ಕ್ಯಾಲ್ಸಿಯಂ ಕಾರ್ಬೈಡ್‌ನ ಪರಿಣಾಮ?

ಮಾವಿನಹಣ್ಣಿನಂತಹ ಹಣ್ಣುಗಳನ್ನು ಹಣ್ಣಾಗಲು ಬಳಸುವ ಕ್ಯಾಲ್ಸಿಯಂ ಕಾರ್ಬೈಡ್, ಆರ್ಸೆನಿಕ್ ಮತ್ತು ಫಾಸ್ಪರಸ್‌ನ ಹಾನಿಕಾರಕ ಕುರುಹುಗಳನ್ನು ಹೊಂದಿರುವ ಅಸಿಟಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತದೆ. ‘ಮಸಾಲಾ’ ಎಂದು ಕರೆಯಲ್ಪಡುವ ಈ ಪದಾರ್ಥಗಳು ತಲೆತಿರುಗುವಿಕೆ, ಆಗಾಗ್ಗೆ ಬಾಯಾರಿಕೆ, ಕಿರಿಕಿರಿ, ದೌರ್ಬಲ್ಯ, ನುಂಗಲು ತೊಂದರೆ, ವಾಂತಿ ಮತ್ತು ಚರ್ಮದ ಹುಣ್ಣುಗಳನ್ನು ಉಂಟುಮಾಡಬಹುದು. ಅಸಿಟಿಲೀನ್ ಅನಿಲವು ಹ್ಯಾಂಡ್ಲರ್‌ಗಳಿಗೆ ಅಪಾಯಕಾರಿಯಾಗಿದೆ ಮತ್ತು ಆರ್ಸೆನಿಕ್ ಮತ್ತು ರಂಜಕದ ಅವಶೇಷಗಳು ಹಣ್ಣುಗಳ ಮೇಲೆ ಉಳಿಯಬಹುದು.

ಸಾಮಾನ್ಯವಾಗಿ ಕಾರ್ಬೈಡ್ ಗ್ಯಾಸ್ ಎಂದು ಕರೆಯಲ್ಪಡುವ ಅಸಿಟಿಲೀನ್ ಅನಿಲದ ಬಳಕೆಯಿಂದ ಕೃತಕವಾಗಿ ಮಾಗಿದ ಹಣ್ಣುಗಳನ್ನು ಯಾವುದೇ ವ್ಯಕ್ತಿಯು ಮಾರಾಟ ಮಾಡಬಾರದು ಎಂದು ಆಹಾರ ಸುರಕ್ಷತೆ ಮತ್ತು ಮಾನದಂಡಗಳು ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧಗಳ ನಿಯಮಗಳು-2011 ಹೇಳುತ್ತವೆ.


ಯಾವುದಕ್ಕೆ ಅನುಮತಿ ಇದೆ?

ಎಫ್‌ಎಸ್‌ಎಸ್‌ಎಐ ಪ್ರಕಾರ ಹಣ್ಣು ಹಣ್ಣಾಗಿಸಲು ಸುರಕ್ಷಿತ ಪರ್ಯಾಯವಾಗಿ ಎಥಿಲೀನ್ ಅನಿಲವನ್ನು ಬಳಸಲು ಅನುಮತಿ ನೀಡುತ್ತದೆ. ಎಥಿಲೀನ್ ಅನಿಲ, 100ಪಿಪಿಎಂವರೆಗಿನ ಸಾಂದ್ರತೆಗಳಲ್ಲಿ ಹಣ್ಣಾಗುವುದನ್ನು ನಿಯಂತ್ರಿಸುವ ನೈಸರ್ಗಿಕ ಹಾರ್ಮೋನ್ ಆಗಿದೆ. ಹಣ್ಣು ಎಥಿಲೀನ್ ಅನ್ನು ಗಣನೀಯ ಪ್ರಮಾಣದಲ್ಲಿ ಉತ್ಪಾದಿಸುವವರೆಗೆ ಇದು ನೈಸರ್ಗಿಕ ಮಾಗಿದ ಪ್ರಕ್ರಿಯೆಯನ್ನು ಪ್ರಚೋದಿಸುತ್ತದೆ. ಹೆಚ್ಚುವರಿಯಾಗಿ ಕೇಂದ್ರೀಯ ಕೀಟನಾಶಕ ಮಂಡಳಿ ಮತ್ತು ನೋಂದಣಿ ಸಮಿತಿ (CIB & RC) ಮಾವು ಮತ್ತು ಇತರ ಹಣ್ಣುಗಳ ಏಕರೂಪದ ಪಕ್ವತೆಗಾಗಿ ಎಥೆಫೋನ್ 39 ಪ್ರತಿಶತ ಎಸ್ ಎಲ್ ಅನ್ನು ಅನುಮೋದಿಸಿದೆ.

ಗುರುತಿಸುವುದು ಹೇಗೆ?

ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಹಣ್ಣಾದ ಮಾವಿನ ಹಣ್ಣನ್ನು ಗುರುತಿಸುವುದು ಸುಲಭ.

ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿ

ಹಣ್ಣುಗಳು ಮತ್ತು ತರಕಾರಿಗಳನ್ನು ತಿಳಿದಿರುವ ಮಾರಾಟಗಾರರು, ಪ್ರತಿಷ್ಠಿತ ಅಂಗಡಿಗಳು ಅಥವಾ ವಿತರಕರು ತಮ್ಮ ಉತ್ಪನ್ನಗಳನ್ನು ಹಾನಿಕಾರಕ ಅಥವಾ ನಿಷೇಧಿತ ರಾಸಾಯನಿಕಗಳಿಂದ ಹಣ್ಣಾಗಿಲ್ಲ ಎಂದು ಹೇಳಿಕೊಳ್ಳುತ್ತಾರೆ.

ಸಂಪೂರ್ಣವಾಗಿ ತೊಳೆಯುವುದು

ಯಾವುದೇ ಸಂಭಾವ್ಯ ಮೇಲ್ಮೈ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ತಿನ್ನುವ ಮೊದಲು ಕುಡಿಯುವ ನೀರಿನಲ್ಲಿ ಹಣ್ಣುಗಳನ್ನು ಚೆನ್ನಾಗಿ ತೊಳೆಯಿರಿ.

ಕಪ್ಪು ಕಲೆಗಳನ್ನು ತಪ್ಪಿಸಿ

ಮಾವಿನ ಹಣ್ಣುಗಳ ಚರ್ಮದ ಮೇಲೆ ಕಪ್ಪು ಮಚ್ಚೆಗಳಿರುವ ಹಣ್ಣುಗಳಿಂದ ದೂರವಿರಿ. ಏಕೆಂದರೆ ಇವುಗಳು ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಅಸಿಟಿಲೀನ್ ಅನಿಲದಿಂದ ಹಣ್ಣಾಗುತ್ತವೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ವಿನ್ಯಾಸವನ್ನು ಪರಿಶೀಲಿಸಿ

ಏಕರೂಪದ ಬಣ್ಣದ ವಿನ್ಯಾಸದೊಂದಿಗೆ ಮಾವಿನಹಣ್ಣು ಮತ್ತು ಇತರ ಹಣ್ಣುಗಳ ಬಗ್ಗೆ ಜಾಗರೂಕರಾಗಿರಿ. ಏಕೆಂದರೆ ಇದು ಸಂಭವನೀಯ ರಾಸಾಯನಿಕ ಪಕ್ವತೆಯ ಸಂಕೇತವಾಗಿದೆ.

ವಾಸನೆ ಮತ್ತು ಶೆಲ್ಫ್ ಲೈಫ್

ಕಲಬೆರಕೆ ಹಣ್ಣುಗಳು ಸ್ವಲ್ಪ ಕಟುವಾದ ವಾಸನೆ ಮತ್ತು ಕಡಿಮೆ ಶೆಲ್ಫ್ ಜೀವಿತಾವಧಿಯನ್ನು ಹೊಂದಿರುತ್ತದೆ ಎಂಬುದು ತಿಳಿದಿರಲಿ. ಸಾಮಾನ್ಯವಾಗಿ ಮಾಗಿದ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಸೂಚಿಸುತ್ತದೆ.

Continue Reading

ದೇಶ

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

British Journalist:ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

VISTARANEWS.COM


on

British Journalist
Koo

ನವದೆಹಲಿ: ಹಾವು ಆಡಿಸುವವರ ದೇಶ ಎಂದು ಭಾರತವನ್ನು ಜರಿಯುತ್ತಿದ್ದ ಪ್ರಪಂಚದ ದೊಡ್ಡ ದೊಡ್ಡ ರಾಷ್ಟ್ರಗಳು ಇತ್ತೀಚಿನ ಕೆಲವು ವರ್ಷಗಳಿಂದ ಭಾರತದ ಎದುರು ಮಂಡಿಯೂರಿದೆ ಎಂದರೆ ತಪ್ಪಾಗಲಾರದು. ಶತ್ರು ರಾಷ್ಟ್ರ ಪಾಕಿಸ್ತಾನ(Pakistan)ವೂ ಸೇರಿದಂತೆ ವಿವಿಧ ರಾಷ್ಟ್ರಗಳು ನಿರಂತರವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಭಾರತವನ್ನು ಹಾಡಿ ಹೊಗಳುತ್ತಿವೆ. ಇದೀಗ ಇಂಗ್ಲೆಂಡ್‌ನ ಪತ್ರಕರ್ತ(British Journalist)ನೋರ್ವ ಭಾರತ(India)ದ ಬಗ್ಗೆ ಬಹಳ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

ಭಾರತದ ಬಗ್ಗೆ ಇಂಗ್ಲೆಂಡ್‌ನಲ್ಲಿ ಕೆಲವೊಂದು ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತಿದೆ. ಅದೂ ಅಲ್ಲದೇ ಇಡೀ ಯೂರೋಪ್‌ನಲ್ಲಿ ಭಾರತದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಹುಟ್ಟಿಸಿ ಹೇಳಲಾಗುತ್ತಿದೆ. ನಮಗೆ ಭಾರತದಲ್ಲಿ ಧಾರ್ಮಿಕ ಸಂಘರ್ಘ ಇರುವುದನ್ನೇ ಎತ್ತಿ ತೋರಿಸಲಾಗುತ್ತಿದೆ. ಆದರೆ ಭಾರತಕ್ಕೆ ಬಂದು ನೋಡದಾಗಲೇ ಕೇಳಿವ ವಿಚಾರಕ್ಕೂ ವಾಸ್ತವಕತೆಗೂ ಬಹಳಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ಸಂಪೂರ್ಣವಾಗಿ ಬುರ್ಖಾ ಧರಿಸಿ ಮುಸ್ಲಿಂ ಮಹಿಳೆಯರು ಭಾಗಿಯಾಗುವುದನ್ನು ನಾನು ನೋಡಿದ್ದೇನೆ. ವಿವಿಧತೆಯಲ್ಲಿ ಏಕತೆ ಎಂಬ ವಿಚಾರವನ್ನು ನಾವು ಇಲ್ಲಿ ಮಾತ್ರ ಕಾಣಬಹುದಾಗಿದೆ. ನಾವು ಇಲ್ಲಿ ಭಾರತದ ಬಗ್ಗೆ ಸುದ್ದಿ ಕವರೇಜ್‌ಗಾಗಿ ಬಂದಿದ್ದೇವೆ. ನಾವು ಇಲ್ಲಿ ಭಾರತದ ಬಗ್ಗೆ ಹಲವು ನಿಜಾಂಶವನ್ನು ಕಂಡುಕೊಂಡಿದ್ದು, ಅವುಗಳನ್ನು ಲಂಡನ್‌ಗೆ ಮರಳಿ ಕೊಂಡೊಯ್ಯವುದೇ ನಮ್ಮ ಗುರಿ. ವಿದೇಶಿ ಮಾಧ್ಯಮಗಳಲ್ಲಿ ಭಾರತ ಬಗೆಗಿನ ನಕಾರಾತ್ಮಕ ಸುದ್ದಿಗಳ ಬಿತ್ತರದಿಂದ ನಾವು ಬೇಸತ್ತಿದ್ದೇವೆ. ಇದು ನಿಜಕ್ಕೂ ನಾಚಿಗೇಡಿನ ವಿಚಾರ. ನಿಜಕ್ಕೂ ಜನ ಇಲ್ಲಿ ಬಂದು ಕಣ್ಣಾರೆ ನೋಡಬೇಕು, ಇಲ್ಲಿ ಕೆಲ ಕಾಲ ಜನರೊಡನೆ ಬೆರೆಯಬೇಕು. ಆಗ ಮಾತ್ರ ಭಾರತ ಏನು ಎಂಬ ವಿಚಾರ ಅರ್ಥವಾಗಲು ಸಾಧ್ಯ ಎಂದು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20). ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.
Continue Reading
Advertisement
RCB vs CSK
ಕ್ರೀಡೆ7 mins ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ21 mins ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ35 mins ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Rohit Sharma
ಕ್ರೀಡೆ49 mins ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ1 hour ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್2 hours ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್2 hours ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ2 hours ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್2 hours ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌