ತಮ್ಮ ಅವಧಿಯ ಲೆಕ್ಕ ತೆಗೆದ ಕೂಡಲೆ, ʼಅದೆಲ್ಲ ಈಗೇಕೆ?ʼ ಎಂದು ಎದ್ದುನಿಂತ ಸಿದ್ದರಾಮಯ್ಯ: ಅಶೋಕ್‌-ಸಿದ್ದು ಜಟಾಪಟಿ - Vistara News

ಕರ್ನಾಟಕ

ತಮ್ಮ ಅವಧಿಯ ಲೆಕ್ಕ ತೆಗೆದ ಕೂಡಲೆ, ʼಅದೆಲ್ಲ ಈಗೇಕೆ?ʼ ಎಂದು ಎದ್ದುನಿಂತ ಸಿದ್ದರಾಮಯ್ಯ: ಅಶೋಕ್‌-ಸಿದ್ದು ಜಟಾಪಟಿ

ವಿಪತ್ತು ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಕಂದಾಯ ಸಚಿವ ಆರ್‌. ಅಶೋಕ್‌ ಉತ್ತರ ನೀಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರು.

VISTARANEWS.COM


on

Siddaramaiah assembly session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನಸಭೆ: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಅತಿವೃಷ್ಟಿಯಿಂದಾಗಿರುವ ಹಾನಿಯ ಕುರಿತು ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್‌. ಅಶೊಕ್‌ ಉತ್ತರ ನೀಡುವ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪದೇಪದೆ ಎದ್ದುನಿಂತು, ಅದೆಲ್ಲ ಯಾಕೆ, ಈ ಮಾಹಿತಿ ಏನು ಉಪಯೋಗ ಎಂದು ಪ್ರಶ್ನಿಸಿದ ಪ್ರಸಂಗ ನಡೆಯಿತು.

ಕಳೆದ ವಾರಪೂರ್ತಿ ವಿಧಾನಸಭೆಯಲ್ಲಿ ಅತಿವೃಷ್ಟಿ ಕುರಿತು ಚರ್ಚೆ ನಡೆದಿದೆ. ಬಿಜೆಪಿಯಿಂದ 6 ಸದಸ್ಯರು ಒಟ್ಟು 42 ನಿಮಿಷ , ಜೆಡಿಎಸ್‌ನಿಂದ 12 ಸದಸ್ಯರು ಒಟ್ಟು 4.49 ಗಂಟೆ, ಕಾಂಗ್ರೆಸ್‌ನಿಂದ 16 ಸದಸ್ಯರು ಒಟ್ಟು 6.37 ಗಂಟೆ, ಇಬ್ಬರು ಪಕ್ಷೇತರ ಶಾಸಕರು ಒಟ್ಟು 36 ನಿಮಿಷ ಸೇರಿ ಒಟ್ಟು 36 ಸದಸ್ಯರು 12.44 ಗಂಟೆ ಚರ್ಚೆ ಮಾಡಿದ್ದಾರೆ. ಈ ಕುರಿತು ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್‌. ಅಶೊಕ್‌ ಉತ್ತರ ನೀಡಲು ಆರಂಭಿಸಿದರು.

ಪ್ರಾರಂಭದಲ್ಲಿ, ರಾಜ್ಯದಲ್ಲಿ ಮಳೆಯಿಂದಾದ ಅನಾಹುತಗಳನ್ನು ವಿವರಿಸಿದ ಅಶೋಕ್‌, ನಂತರ ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಲು ಮುಂದಾದರು. ಮನೆ ಹಾನಿಗಳಿಗೆ ಪರಿಹಾರ ನೀಡಲಾಗಿದೆ. ಈ ಹಿಂದೆ ಗಂಜಿ ಕೇಂದ್ರ ಎಂದು ಹೆಸರಿತ್ತು, ಅದನ್ನು ಈಗ ಕಾಳಜಿ ಕೇಂದ್ರ ಎಂದು ಬದಲಾವಣೆ ಮಾಡಲಾಗಿದೆ. ಕಾಳಜಿ ಕೇಂದ್ರದಿಂದ ಮನೆಗೆ ಹೋಗುವಾಗ ಡ್ರೈ ಕಿಟ್‌ ನೀಡಲಾಗುತ್ತಿದೆ. ಕಾಳಜಿ ಕೇಂದ್ರಕ್ಕೆ ಬರುವವರ ಜತೆಗೆ ಕಾಳಜಿ ಕೇಂದ್ರಕ್ಕೆ ಬಾರದೆ ಅವರ ನೆಂಟರಿಷ್ಟರ ಮನೆಯಲ್ಲಿರುವವರಿಗೂ ನೀಡುತ್ತೇವೆ ಎಂದು ಅದರಲ್ಲಿ ನೀಡುತ್ತಿದ್ದ ಐಟಂ ಲಿಸ್ಟ್‌ ಓದಿದರು. ಈ ವೇಳೆ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ, ಈ ಹಿಂದೆಯೂ ಕೊಟ್ಟಿದೆ ಇದನ್ನೆಲ್ಲ ಎಂದರು.

ಪದೇಪದೆ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡುತ್ತಿದ್ದದ್ದನ್ನು ಗಮನಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಹಿಂದೆ ಕಾಳಜಿ ಕೇಂದ್ರಕ್ಕೆ ಬರುವವರಿಗೆ ಮಾತ್ರ ನೀಡಲಾಗುತ್ತಿತ್ತು. ಈಗ ಕಾಳಜಿ ಕೇಂದ್ರಕ್ಕೆ ಬಾರದೇ ಇರುವವರಿಗೂ ನೀಡುತ್ತಿದ್ದೇವೆ, ಆಹಾರ ಉತ್ಪನ್ನಗಳನ್ನು ಇನ್ನಷ್ಟು ಹೆಚ್ಚಳ ಮಾಡಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ | ವಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಮೂವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಬೊಮ್ಮಾಯಿ

ನಂತರ, ವಿಪತ್ತು ನಿರ್ವಹಣಾ ಪರಿಹಾರದ (ಇನ್ಪುಟ್‌ ಸಬ್ಸಿಡಿ) ಕುರಿತು ಮಾಹಿತಿ ನೀಡಲು ಅಶೋಕ್‌ ಆರಂಭಿಸಿದರು. 2019ರಲ್ಲಿ 9,72, 517 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು, 6,71,341 ರೈತರ ಖಾತೆಗಳಿಗೆ ನೇರವಾಗಿ 1,232.22 ಕೋಟಿ ರೂ. ಪರಿಹಾರವನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗಿದೆ. 2020ರಲ್ಲಿ 19,68,247 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು, 12,00, 346 ರೈತರ ಖಾತೆಗಳಿಗೆ ನೇರವಾಗಿ 941.71 ಕೋಟಿ ರೂ. ಪರಿಹಾರವನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗಿದೆ. 2021ರಲ್ಲಿ 14,93,811 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು, 18, 56, 083 ರೈತರ ಖಾತೆಗಳಿಗೆ ನೇರವಾಗಿ 2,446.8 ಕೋಟಿ ರೂ. ಪರಿಹಾರವನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗಿದೆ. 2022ರಲ್ಲಿ ೧೧೬.೩೯ ಕೋಟಿ ರೂ. ಇನ್ಪುಟ್‌ ಸಬ್ಸಿಡಿ ನೀಡಲಾಗಿದೆ. ಒಟ್ಟು ನಾಲ್ಕು ವರ್ಷದಲ್ಲಿ 50,14,649 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು, 38,31,743 ರೈತರ ಖಾತೆಗಳಿಗೆ ನೇರವಾಗಿ 4,736.37 ಕೋಟಿ ರೂ. ಪರಿಹಾರವನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ವಿವರಣೆ ನೀಡಿದರು.

ರೈತರ ಖಾತೆಗಳಿಗೆ ಪರಿಹಾರ ನೀಡುವಲ್ಲಿ ತಮ್ಮ ಸರ್ಕಾರ ಶೀಘ್ರ ಕ್ರಮ ಕೈಗೊಂಡಿದೆ ಎನ್ನುವುದನ್ನು ವಿವರಿಸಲು ಅಶೋಕ್‌ ಮುಂದಾದರು. 2019, 2020, 2021ರಲ್ಲಿ ಮುಂಗಾರು ಹಾಗೂ ಹಿಂಗಾರು ಅತಿವೃಷ್ಟಿ ಹಾನಿ ಸಂದರ್ಭದಲ್ಲಿ ಎರಡು ತಿಂಗಳಲ್ಲಿ ಪರಿಹಾರ ನೀಡಲಾಗಿತ್ತು. ಆದರೆ ಈಗ 2022ರಲ್ಲಿ ಕೇವಲ ಒಂದು ತಿಂಗಳಲ್ಲಿ ಪರಿಹಾರ ನೀಡಿದ್ದೇವೆ ಎಂದರು. ಇಷ್ಟಕ್ಕೇ ಸುಮ್ಮನಾಗದೆ, ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಪರಹಾರವನ್ನು ನೀಡುತ್ತಿದ್ದ ಅವಧಿಯನ್ನು ವಿವರಿಸಿದರು. 2015ರಲ್ಲಿ 7 ತಿಂಗಳು, 2016ರಲ್ಲಿ 6 ತಿಂಗಳು, 2017ರಲ್ಲಿ 6 ತಿಂಗಳು, 2018ರಲ್ಲಿ 11 ತಿಂಗಳಿಗೆ ಪರಿಹಾರ ನೀಡಲಾಗಿತ್ತು. ಆದರೆ ನಮ್ಮ ಸರ್ಕಾರ ಕೇಚಲ ಒಂದು ತಿಂಗಳಲ್ಲಿ ನೀಡುತ್ತಿದೆ ಎಂದರು. ಇದು ಸಿದ್ದರಾಮಯ್ಯ ಅವರನ್ನು ಕೆರಳಿಸಿತು.

ರಾಜ್ಯದಲ್ಲಿ ಎಷ್ಟು ಬೆಳೆ ಹಾನಿ ಆಗಿದೆ, ಎಷ್ಟು ಪರಿಹಾರ ನೀಡಿದ್ದೀರ, ಎಷ್ಟು ಸರ್ವೇ ಆಗಿದೆ, ಎಷ್ಟು ಸರ್ವೇ ಬಾಕಿಯಿದೆ ಎಂಬ ಮಾಹಿತಿ ನೀಡಿದರೆ ಸಾಕು. ಹಿಂದೆ ಏನೇನು ಆಗಿತ್ತು ಎನ್ನುವುದನ್ನೆಲ್ಲ ಹೇಳಿದರೆ ಜನರಿಗೆ ಏಕೆ ಬೇಕು? ಜನರಿಗೆ ಏನು ಬೇಕೊ ಅದನ್ನು ಹೇಳಿ ಸಾಕು ಎಂದರು. ಸಿದ್ದರಾಮಯ್ಯ ಅವರ ಮಾತಿಗೆ, ಸ್ಪೀಕರ್‌ ಕುರ್ಚಿಯಲ್ಲಿದ್ದ ಕುಡಚಿ ಶಾಸಕ ಪಿ. ರಾಜೀವ್‌ ಸೇರಿ ಸದನದಲ್ಲಿದ್ದವರು ಮುಗುಳ್ನಕ್ಕು ಸುಮ್ಮನಾದರು. ಅಶೋಕ್‌ ಮಾತು ಮುಂದುವರಿಸಿದರು.

ನಾನೇನು ಅವರು ಮಾಡಿದ್ದು ತಪ್ಪು ಎನ್ನಲಿಲ್ಲ, ಸ್ಥಿತಿ ಏನಿತ್ತು ಎಂದು ಹೇಳಿದೆ ಅಷ್ಟೆ ಎಂದರು. ಈ ವೇಳೆ ಕೆಲ ಸದಸ್ಯರು ಎದ್ದು ನಿಂತು ಪ್ರಶ್ನೆ ಕೇಳಲು ಮುಂದಾದರು. ನಾನು ಒಂದಷ್ಟು ವಿಚಾರಕ್ಕೆ ಸಿದ್ಧವಾಗಿ ಬಂದಿರುತ್ತೇನೆ. ನೀವು ಮಧ್ಯೆ ಎದ್ದುನಿಂತು ಪ್ರಶ್ನೆ ಕೇಳಿದರೆ ತಪ್ಪಿಹೋಗುತ್ತದೆ, ಕೊನೆಗೆ ಪ್ರಶ್ನೆ ಕೇಳಿ, ನಾನು ಇಲ್ಲೇ ಇರುತ್ತೇನೆ ಎಂದರು. ಅಲ್ಲಿವರೆಗೆ ಸಿದ್ದರಾಮಯ್ಯ ಮಧ್ಯಪ್ರವೇಶಿಸಿದಾಗ ಅವರಿಗೆ ಹೇಳಲು ಆಗದ ಮಾತನ್ನು ಇತರೆ ಸದಸ್ಯರಿಗೆ ಹೇಳುವ ಮೂಲಕ ತಮ್ಮ ಕಾರ್ಯವನ್ನು ಸಾಧಿಸಿಕೊಂಡರು.

ಮಾತು ಮುಂದುವರಿಸಿದ ಅಶೋಕ್‌, ಕೇಂದ್ರ ವಿಪತ್ತು ಪರಿಹಾರ ನಿಧಿಯ ಕುರಿತು ಮಾಹಿತಿ ನೀಡಿದ ಅಶೋಕ್‌, 2014-15ರಲ್ಲಿ 271 ಕೋಟಿ ರೂ., 2015-16ರಲ್ಲಿ 207 ಕೋಟಿ ರೂ., 2017-18ರಲ್ಲಿ 913 ಕೋಟಿ ರೂ., 2020-21ರಲ್ಲಿ 689 ಕೋಟಿ ರೂ. ಹಾಗೂ 2021-22ರಲ್ಲಿ 1,623 ಕೋಟಿ ರೂ. ಸೇರಿ ಒಟ್ಟಾರೆ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯಕ್ಕೆ ಒಟ್ಟು 11,630 ಕೋಟಿ ರೂ. ಪರಿಹಾರ ನೀಡಲಾಗಿದೆ. ಮನಮೋಹನ್‌ ಸಿಂಗ್‌ ಅವರ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ 3,233 ಕೋಟಿ ರೂ. ನೀಡಲಾಗಿತ್ತು, ಈಗ ಮೋದಿಯವರ ಸಮಯದಲ್ಲಿ 11,630 ಕೋಟಿ ರೂ. ನೀಡಲಾಗಿದೆ. ಇಷ್ಟೇ ವ್ಯತ್ಯಾಸ ಎಂದರು.

ಇದಕ್ಕೆ ಮತ್ತೆ ಕೋಪಗೊಂಡ ಸಿದ್ದರಾಮಯ್ಯ, ಆಗಿನ ಬಜೆಟ್‌ ಎಷ್ಟಿತ್ತು? ಆಗಿನ ತೆರಿಗೆ ಎಷ್ಟು ಸಂಗ್ರಹ ಆಗುತ್ತಿತ್ತು? ಆಗ ಹಣಕಾಸು ಆಯೋಗ ಯಾವುದಿತ್ತು? ಎಂಬುದನ್ನೆಲ್ಲ ಅವಲೋಕಿಸಬೇಕು ಎಂದರು. ಅಲ್ಲಿಗೆ ರಾಜ್ಯದ ಅತಿವೃಷ್ಟಿ ಕುರಿತು ಉತ್ತರವನ್ನು ಮುಕ್ತಾಯ ಮಾಡಿದರು.

ಇದನ್ನೂ ಓದಿ | Rain News | ಅತಿವೃಷ್ಟಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ; 10 ದಿನದಲ್ಲಿ ಕೇಂದ್ರಕ್ಕೆ ವರದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

CET/NEET: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ.

VISTARANEWS.COM


on

UPSC
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ. 3000 ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಇಂಟರ್ ನೆಟ್ ಬ್ಯಾಂಕಿಂಗ್, ಡೆಬಿಟ್/ಕೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿದ್ದರಿಂದ ಇಡೀ ಪ್ರಕ್ರಿಯೆ ಸರಳವಾಯಿತು. ಇದರಿಂದ ಪೋಷಕರಿಗೂ ಸಂತಸವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಚಲನ್‌ ಡೌನ್‌ ಲೋಡ್ ಮಾಡಿಕೊಂಡು ಬ್ಯಾಂಕಿಗೆ ಹೋಗಿ ಶುಲ್ಕ ಪಾವತಿಸುವ ವ್ಯವಸ್ಥೆ ಕೂಡ‌ ಇದ್ದು, ಅದರ ಮೂಲಕವೂ‌ 2000 ಮಂದಿ (ರಾತ್ರಿ 8ಕ್ಕೆ) ಶುಲ್ಕ ಪಾವತಿಸಿದ್ದಾರೆ. ಆನ್ ಲೈನ್ ಮೂಲಕ ಒಂದು ಸಾವಿರ ಮಂದಿ ಪಾವತಿಸಿದ್ದಾರೆ ಎಂದು ವಿವರಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ಕೆಲವರು‌ ತಮ್ಮ ಗರಿಷ್ಠ ಮೊತ್ತದ ಶುಲ್ಕ‌ವನ್ನೂ (6.09 ಲಕ್ಷ) ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ‌ ಮಾಡಿದ್ದಾರೆ. ಅಭ್ಯರ್ಥಿಗಳು ಅಥವಾ ಅವರ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು‌ ಹೇಳಿದರು. ಎಚ್ ಡಿಎಫ್ ಸಿ ಬ್ಯಾಂಕ್ ತನ್ನ ಗ್ರಾಹರಿಗೆ ಒಮ್ಮೆಗೇ ಗರಿಷ್ಠ 50 ಲಕ್ಷ ರೂಪಾಯಿ ವರೆಗೆ ವರ್ಗಾಯಿಸಲು ಅವಕಾಶ ನೀಡಿದೆ. ಇದೇ ರೀತಿ ಇತರ ಬ್ಯಾಂಕ್ ಗಳೂ ಈ ನಿಟ್ಟಿನಲ್ಲಿ ಪ್ರಯತ್ನ‌ ನಡೆಸುತ್ತಿದ್ದು ಇದರಿಂದ ಎನ್ಆರ್ ಐ ಮತ್ತು ಮ್ಯಾನೇಜ್ಮೆಂಟ್ ಸೀಟುಗಳ ಶುಲ್ಕವನ್ನು ಒಮ್ನೆಗೆ ಪಾವತಿಸಲು ಅನುಕೂಲವಾಗಲಿದೆ ಎಂದಿದ್ದಾರೆ. ಹೊಸ ವ್ಯವಸ್ಥೆಯಿಂದಾಗಿ ಬ್ಯಾಂಕ್ ರಜೆ ಇತ್ಯಾದಿ ಕಾರಣಕ್ಕೆ ಶುಲ್ಕ ಪಾವತಿ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ದೂರುಗಳು ಕಡಿಮೆ ಆಗಬಹುದು. ನಾಳೆ ಭಾನುವಾರ ಇದ್ದರೂ ಶುಲ್ಕ ಪಾವತಿಗೆ ಯಾವ ಸಮಸ್ಯೆಯೂ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಯುಪಿಐ ಪಾವತಿ ವ್ಯವಸ್ಥೆ ಮೂಲಕವೂ ಶುಲ್ಕ ಪಾವತಿ ಮಾಡಬಹುದಾಗಿದೆ. ಒಟ್ಟಾರೆ ಪಾವತಿ ವ್ಯವಸ್ಥೆಯನ್ನು ಜನಸ್ನೇಹಿ‌ ಮಾಡಿರುವ ಕಾರಣಕ್ಕೆ ತಾಂತ್ರಿಕ ಸಮಸ್ಯೆಗಳು ಕಡಿಮೆ ಆಗುವ ವಿಶ್ವಾಸವಿದೆ‌ ಎಂದರು.

ಸರ್ವರ್ ಸಮಸ್ಯೆ

ಚಾಯ್ಸ್ ಆಯ್ಕೆ ನಂತರ ಶುಲ್ಕ ಪಾವತಿ ಮಾಡಲು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಮ್ಮೆಗೇ ಪ್ರಯತ್ನ ನಡೆಸಿದ್ದರಿಂದ ಕೆಲವೊಮ್ಮೆ ಸರ್ವರ್ ನಿಧಾನ/ ಇನ್ನು ಕೆಲವೊಮ್ಮೆ ಸ್ಥಗಿತಗೊಂಡ ಪ್ರಸಂಗ ಕೂಡ ನಡೆಯಿತು. ತಾಂತ್ರಿಕ ಸಿಬ್ಬಂದಿ ಸರಿ ಮಾಡಿ ನಂತರ ಸಹಜ ಸ್ಥಿತಿಗೆ ತಂದರು.

Continue Reading

ಕರ್ನಾಟಕ

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆಯಾಗಿದ್ದಾರೆ. ಸರ್ಕಾರಿ ಭರವಸೆಗಳ ಸಮಿತಿಯು ಒಟ್ಟು 9 ಮಂದಿ ಸದಸ್ಯರನ್ನೊಳಗೊಂಡಿದೆ

VISTARANEWS.COM


on

By

TA Saravana elected as new chairman of government assurances committee
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಶಾಸಕ ಟಿ. ಎ. ಶರವಣ (TA Sharavana) ಅವರು ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4) ರ ಮೇರೆಗೆ ಸಭಾಪತಿ ನೇಮಕ ಮಾಡಿದ್ದಾರೆ. ವಿಧಾನ ಪರಿಷತ್ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ. ಎ. ಶರವಣ ಅವರನ್ನು ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಸರ್ಕಾರಿ ಭರವಸೆಗಳ ಸಮಿತಿಯು ಒಟ್ಟು 9 ಮಂದಿ ಸದಸ್ಯರನ್ನೊಳಗೊಂಡಿದೆ. ಪ್ರಕಾಶ್‌ ಕೆ ರಾಥೋಡ್‌, ಶರವಣ ಟಿ.ಎ, ನಿರಾಣಿ ಹಣಮಂತ್‌ ರುದ್ರಪ್ಪ, ಯು.ಬಿ. ವೆಂಕಟೇಶ್‌, ಪ್ರತಾಫ್‌ ಸಿಂಹ ನಾಯಕ್‌ ಕೆ, ಡಿ.ಎಸ್‌ ಅರುಣ್‌ ಹಾಗೂ ಕೆ.ಎಸ್‌ ನವೀನ್‌, ಮಂಜುನಾಥ್‌ ಭಂಡಾರಿ, ತಿಪ್ಪಣ್ಣಪ್ಪ ಕಮಕನೂರ ಅವರು ಸದಸ್ಯರಾಗಿದ್ದಾರೆ.

ಇದನ್ನೂ ಓದಿ: D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Continue Reading

ಬೆಂಗಳೂರು

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Bengaluru News: ಭಾರತದಾದ್ಯಂತ ಹರಡಿರುವ ಸಖಿ ಮಹಿಳಾ ಸಂಘಟನೆಯಿಂದ ರಕ್ಷಾ ಸೂತ್ರ ದಿನ ಆಚರಿಸಲಾಯಿತು.

VISTARANEWS.COM


on

By

Sakhi Mahila Sangathan celebrates Raksha Sutra Diwas
Koo

ಬೆಂಗಳೂರು: ಸಖಿ ಮಹಿಳಾ ಸಂಘಟನೆಯು ರಕ್ಷಾ ಸೂತ್ರ ದಿನವನ್ನು (Bengaluru News) ಆಚರಿಸಿದೆ. ಅಧ್ಯಕ್ಷರು ಪ್ರೀತ ಘೋಷ್ ಪ್ರಮಾಣಿಕ್, ಉಪಾಧ್ಯಕ್ಷೆ ಪಲ್ಲವಿ ರಾಘವೇಂದ್ರ ಮತ್ತು ತಬಸ್ಸುಮ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಕ್ಷಾ ಸೂತ್ರದಲ್ಲಿ ಸಹೋದರರು ಮಾತ್ರ ನಮ್ಮನ್ನು ರಕ್ಷಿಸಲಾರರು. ಇದರಲ್ಲಿ ಎಲ್ಲರೂ ನಮ್ಮನ್ನು ಆರ್ಥಿಕವಾಗಿ, ಭಾವನಾತ್ಮಕವಾಗಿ, ದೈಹಿಕವಾಗಿ ರಕ್ಷಿಸಬಲ್ಲರು. ಅದು ನಿಮ್ಮ ಸ್ನೇಹಿತರೇ ಆಗಿರಬಹುದು ಅಥವಾ ಸಹೋದರಿಯರು, ಪೋಷಕರೇ ಆಗಿರಬಹುದು ಎಂದು ಸಖಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಅಭಯಕ್ಕಾಗಿ ಪ್ರತಿಭಟಿಸುತ್ತಿರುವ ಹೊತ್ತಿನಲ್ಲಿ, ಅವಳಿಗಾಗಿ ಮೇಣದಬತ್ತಿಗಳನ್ನು ಬೆಳಗಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಸಖಿ ಮಹಿಳಾ ಗುಂಪು ಭಾರತದಾದ್ಯಂತ ಹರಡಿದೆ. ಇದು ಭಾರತ ಮಾತ್ರವಲ್ಲದೇ ಯುಎಸ್‌ಎ (USA), ಯುಕೆ( UK) ಯಲ್ಲೂ ಹರಡಿದೆ.

ಇನ್ನು ಆಸ್ಟ್ರೇಲಿಯಾ ಎಲ್ಲಾ ರೀತಿಯ ಬಿಕ್ಕಟ್ಟಿನಲ್ಲಿ ಒಟ್ಟಿಗೆ ಇರುವುದಾಗಿ ಸಖಿ ಮಹಿಳಾ ಸಂಘಟನೆ ಪ್ರಮಾಣ ಮಾಡಿದೆ. ಚರ್ಚಿಸಿ ಪರಿಹಾರವನ್ನು ಹೊರತೆಗೆಯುವ ಗುರಿಯೂ ಸಂಘಟನೆಗೆ ಇದೆ. ಹುಡುಗಿಯರನ್ನು ಮಾನಸಿಕವಾಗಿ ಸದೃಢರನ್ನಾಗಿಸಲು, ವಿವಿಧ ರೀತಿಯ ಧ್ಯಾನವನ್ನು ಹೇಳಿಕೊಡುತ್ತಿದ್ದಾರೆ. ಆದ್ದರಿಂದ ಅವರು ಕಷ್ಟಗಳನ್ನು ಎದುರಿಸಬಹುದು ಮತ್ತು ಜಯಿಸಬಹುದು ಇದು ಸಖಿ ಟ್ರ‌ಸ್ಟ್‌ನ ಮುಖ್ಯ ಉದ್ದೇಶವಾಗಿದೆ.

Continue Reading

ಮಳೆ

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Karnataka Weather Forecast : ಕಲಬುರಗಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿದ್ದರೆ, ಇತ್ತ ರಾಯಚೂರಿನಲ್ಲಿ ಸುರಿದ ಮಳೆಗೆ ಸೇತುವೆ ಕೊಚ್ಚಿಹೋಗಿದೆ. ಬಾಗಲಕೋಟೆಯಲ್ಲಿ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ.

VISTARANEWS.COM


on

By

karnataka weather Forecast
Koo

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ವರುಣನ (Rain News) ಅಬ್ಬರ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿತ್ತು. ನಾಳೆ ಭಾನುವಾರ ಕಲಬುರಗಿಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಜಾಲಹಳ್ಳಿ ಮೊರಾರ್ಜಿ ಸ್ಕೂಲ್ ಪಕ್ಕದಲ್ಲಿ ಘಟನೆ ನಡೆದಿದೆ. ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಚಾರಕ್ಕೆ ಜನರು ಪರದಾಡಿದರು. ಶಾಲಾ ಮಕ್ಕಳು, ಶಿಕ್ಷಕರಿಗೆ ರಸ್ತೆ ಸಂಪರ್ಕ ಕಡಿತದಿಂದಾಗಿ ಅನಾನುಕೂಲ ಉಂಟಾಯಿತು.

ಮಕ್ಕಳಿಗೆ ಪಡಿತರ ಧಾನ್ಯ, ತರಕಾರಿ ಸಾಗಿಸಲು ಶಾಲಾ ಸಿಬ್ಬಂದಿ ಹೈರಾಣಾರಾದರು. ಸೇತುವೆ ಕುಸಿತದ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಅನ್ನುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ತಕ್ಷಣ ತಾತ್ಕಾಲಿಕ ಸೇತುವೆ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳಗಾವಿ, ಮಹಾರಾಷ್ಟ್ರದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ. ಬ್ರಿಡ್ಜ್ ಮೇಲೆ ಒಂದು ಅಡಿಯಷ್ಟು ನೀರು ಹರಿವು ಹೆಚ್ಚಿದೆ. ಘಟಪ್ರಭಾ ನದಿಗೆ ಢವಳೇಶ್ವರ ಸೇತುವೆ ನದಿ ನಿರ್ಮಿಸಲಾಗಿದೆ. ಇತ್ತ ನೀರಲ್ಲೇ ಮಹಾಲಿಂಗಪುರ ಪಟ್ಟಣಕ್ಕೆ ಜನರು ಸಂಚಾರಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಒಂದೊಂದೆ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಳ್ಳುತ್ತಿದೆ.

ಇದನ್ನೂ ಓದಿ: Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

ತಗ್ಗಿದ ಮಳೆ ಅಬ್ಬರ

ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳು ಭಾರೀ ಮಳೆಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗಾಳಿ ವೇಗ 40ಕಿ.ಮೀ

ಇನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಭವಿಷ್ಯ5 mins ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ8 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ9 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ9 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ9 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು10 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ10 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ10 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್11 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು11 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್15 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌