ಅನಾಮಿಕ ಹಿರಿಯರ ಸ್ವಗತಗಳು: ಹೆತ್ತವರಾಗಿ ನಾವಂದು ಹಾಗೆ ಮಾಡಬಾರದಿತ್ತು! - Vistara News

ಪ್ರಮುಖ ಸುದ್ದಿ

ಅನಾಮಿಕ ಹಿರಿಯರ ಸ್ವಗತಗಳು: ಹೆತ್ತವರಾಗಿ ನಾವಂದು ಹಾಗೆ ಮಾಡಬಾರದಿತ್ತು!

ಮಕ್ಕಳು ದೊಡ್ಡವರಾದ ಬಳಿಕ ಹೆತ್ತವರನ್ನು ಕೆಲವು ಪಶ್ಚಾತ್ತಾಪಗಳು ಕಾಡುತ್ತವೆ. ಅಂಥ ಪಶ್ಚಾತ್ತಾಪಗಳು ಜೀವನದಲ್ಲಿ ಮುಂದೆ ಕಾಡದಂತಿರಲು ಏನು ಮಾಡಬೇಕು? ಕೆಲ ಟಿಪ್ಸ್‌ ಇಲ್ಲಿವೆ.

VISTARANEWS.COM


on

parenting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಮ್ಮದೇ ಲೋಕದಲ್ಲಿ ಹಾಯಾಗಿರುವ ಜೋಡಿ ಇದ್ದಕ್ಕಿದ್ದಂತೆ ಅಪ್ಪ ಅಮ್ಮನಾಗಿ ಬಡ್ತಿ ಪಡೆಯುವುದು ಎಷ್ಟು ಖುಷಿಯ ಸಂಗತಿಯೋ ಅಷ್ಟೇ ಜವಾಬ್ದಾರಿಯುತ ಹಾಗೂ ಕಷ್ಟದ ಕೆಲಸವೂ ಹೌದು. ಪೋಷಕರಾಗಿ ತಪ್ಪುಗಳನ್ನು ಮಾಡುತ್ತಾ, ಎಡವುತ್ತಾ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ ಮಕ್ಕಳನ್ನು ಉತ್ತಮ ಪ್ರಜೆಗಳಾಗುವಂತೆ ಮಕ್ಕಳನ್ನು ಬೆಳೆಸುವುದೇ ಒಂದು ದೊಡ್ಡ ಟಾಸ್ಕ್‌. ಮಕ್ಕಳು ಬೆಳೆದು ದೊಡ್ಡವರಾದಾಗ, ಛೇ ನಾನಂದು ಹೀಗೆ ಮಾಡಬಹುದಿತ್ತು, ಹೀಗೆ ಮಾಡಬಹುದಿತ್ತು ಎಂದೆಲ್ಲ ಅನಿಸುವುದು ಎಲ್ಲ ಹೆತ್ತವರಿಗೂ ಸಹಜವೇ. ಇಂತಹ ಗಿಲ್ಟ್‌ಗಳಿಂದ ಹೊರಬರಲು ಇರುವ ಏಕೈಕ ದಾರಿಯೆಂದರೆ, ತಮ್ಮ ಮಕ್ಕಳು ಅವರ ಮಕ್ಕಳಿಗೆ ಹೀಗೆ ಮಾಡದಿರಲಿ, ಅವರಿಗಾದರೂ ತಮ್ಮ ಜ್ಞಾನೋದಯಗಳು ಸಹಾಯವಾಗಲಿ ಎಂದು ಅವರನ್ನು ಮೊದಲೇ ಎಚ್ಚರಿಸುವುದು. ತಾನು ಅಂದು ಹೀಗೆ ಮಾಡಬಾರದು ಎಂದು ಅನಿಸಿ ಹೇಳಿಕೊಂಡ ಅನಾಮಿಕ ಹಿರಿಯರ ಇಂತಹ ಕೆಲವು ಸ್ವಗತಗಳು ಇಲ್ಲಿವೆ. ಇದು ಹೊಸ ಹೆತ್ತವರಿಗೆ ಪಾಠ.

೧. ಸಣ್ಣ ವಯಸ್ಸಿನಲ್ಲಿ ಪೋಷಕರಾದಾಗ ಅರಿವಿಗೆ ಬಾರದ ಕೆಲವು ಸತ್ಯಗಳು ವಯಸ್ಸಾದಾಗ ಅರಿವಿಗೆ ಬರುತ್ತದೆ. ಛೇ, ನಾನು ಹಾಗೆ ಮಾಡಬಾರದಿತ್ತು. ನೀನು ಸಣ್ಣವನಿದ್ದಾಗಲೂ ನಿನ್ನ ಅಭಿಪ್ರಾಯಗಳನ್ನು ಕೇಳಬಹುದಾಗಿತ್ತು. ನಿನ್ನ ಮಾತುಗಳನ್ನು ಸುಮ್ಮನೆ ಕೂತು ಕೇಳಿಸಬಹುದಾಗಿತ್ತು. ಅಂದು ಹಾಗೆ ಮಾಡಿದ್ದರೆ ಇಂದಿನ ನಮ್ಮಿಬ್ಬರ ಸಂಬಂಧ, ಹೊಂದಾಣಿಕೆ ಇನ್ನೂ ಉತ್ತಮವಾಗಿರುತ್ತೇನೋ ಎಂದು ಹಿರಿಯ ಜೀವಗಳಿಗೆ ಅನಿಸುವುದುಂಟು.

೨. ʻಮೊದಲ ಮಗು ಎಂಬ ಕಾರಣ ಹೆಚ್ಚೇ ಕಾಳಜಿ ಮಾಡಿದ್ದೇ ತಪ್ಪಾಯಿತು. ಅದರಿಂದಲೇ ಅವಕಾಶಗಳು ನಿನ್ನ ಕೈತಪ್ಪಿದವು.  ನಿನ್ನ ಸಾಹಸೀ ಪ್ರವೃತ್ತಿಗೆ ಆಗ ನಾವು ಬೇಡ ಎಂದು ಹೇಳುವ ಬದಲು, ʻಮಾಡು, ಆದರೆ ಹುಷಾರುʼ ಎಂದಾದರೂ ಹೇಳಬಹುದಿತ್ತೇನೋ. ಅದು ನಿನ್ನ ಕುತೂಹಲಗಳನ್ನು, ಹೊಸತನ್ನು ಕಲಿಯುವ ಆಸಕ್ತಿಗಳನ್ನು ಹೊಸಕಿ ಹಾಕುತ್ತಿರಲಿಲ್ಲವೇನೋ. ಆಗ ಹಾಗೆ ಮಾಡಿದ್ದರೆ ನೀನು ಇನ್ನೂ ಹೆಚ್ಚು ಜವಾಬ್ದಾರಿಯುತ ಆತ್ಮವಿಶ್ವಾಸಿಯಾಗಿ ಬೆಳೆಯುತ್ತಿದ್ದೀಯೇನೋ!ʼ ಎಂಬುದು ಇನ್ನೊಬ್ಬ ಅನಾಮಿಕ ಹೆತ್ತವರೊಬ್ಬರ ಅಳಲು.

೩. ʻನಾನು ಹೆಚ್ಚು ಚಿಂತೆ ಮಾಡುತ್ತೇನೆ. ಹಾಗಾಗಿ ನನ್ನ ಹೆಂಡತಿಯೂ. ಜೀವನದಲ್ಲಿ ಹೆಚ್ಚು ಚಿಂತೆ ಮಾಡುತ್ತಲೇ ಕಾಲ ಕಳೆದೆವು. ಹೀಗಾದರೆ, ಹಾಗಾದರೆ ಎಂಬ ಊಹೆಗಳಲ್ಲೇ ಕಾಲ ಮುಂದೆ ಹೋಯಿತು. ಆದರೆ ನಮ್ಮ ಯಾವ ಚಿಂತೆಯೂ ನಿಜವಾಗಲಿಲ್ಲ. ನಮ್ಮ ಮಕ್ಕಳೂ ನಮ್ಮಂತೆ ಬೆಳೆದರು. ಅವರಿಗೂ ಚಿಂತೆ ಜಾಸ್ತಿ. ಈಗ ನಮ್ಮನ್ನೇ ನಾವು ಕನ್ನಡಿಯಲ್ಲಿ ನೋಡಿದಂತೆ ನಮ್ಮ ಮಕ್ಕಳಿದ್ದಾರೆ. ಬಹುಶಃ ನಾವು ನಮ್ಮ ಮಕ್ಕಳಿಗೆ ಅತಿರೇಕದ ಚಿಂತೆಗೂ ಹುಷಾರಾಗಿರುವುದಕ್ಕೂ ಆಗಲೇ ವ್ಯತ್ಯಾಸ ಹೇಳಿಕೊಟ್ಟರೆ ಒಳ್ಳೆಯದಿತ್ತು ಅನಿಸುತ್ತದೆ. ನಾವು ತಪ್ಪು ಮಾಡಿದೆವು!ʼ ಮತ್ತೊಬ್ಬರ ಸ್ವಗತವಿದು.

೪. ʻಹೆತ್ತವರಿಗೆ ಎಲ್ಲ ಗೊತ್ತಿರಬೇಕು ಎಂದೇನಿಲ್ಲ. ನನಗೆ ಗೊತ್ತಿಲ್ಲ ಎಂದೂ ಮಕ್ಕಳಲ್ಲಿ ಹೇಳಬಹುದು. ಹೆಚ್ಚು ಮಂದಿ ಗೊತ್ತಿಲ್ಲದಿದ್ದರೂ ಗೊತ್ತಿರುವವರಂತೆ ಹೊರಗಿನ ಮಂದಿಯೆದುರು ನಮ್ಮದೇ ಮಕ್ಕಳೆದುರು ಇರುತ್ತಾರೆ. ಎಷ್ಟೋ ಸಲ ಮಕ್ಕಳು, ನನ್ನ ಬಳಿ ಪ್ರಶ್ನೆಗಳೊಂದಿಗೆ ಬಂದಾಗ ಗೊತ್ತಿಲ್ಲ ಎಂದು ನೇರವಾಗಿ ಹೇಳಿಬಿಟ್ಟಿದ್ದೇನೆ. ಫೇಕ್‌ ಮಾಡುವುದು ಒಳ್ಳೆಯದಲ್ಲ. ನನ್ನ ಮಕ್ಕಳೂ ಅದನ್ನೇ ಕಲಿಯಲಿʼ ಹಿರಿಯರೊಬ್ಬರ ಕಿವಿಮಾತಿದು.

ಇದನ್ನೂ ಓದಿ | Motivational story | ಮಗನ ಮದುವೆಯ ದಿನ ಅಪ್ಪ ಹೇಳಿದ ಆ ಮಾತು ನೀವೂ ಕೇಳಿಸಿಕೊಳ್ಳಬೇಕು!

೫. ಎಷ್ಟೋ ಸಂದರ್ಭಗಳಲ್ಲಿ ಮಕ್ಕಳೆದುರು ನಾವು ಕ್ಷಮಿಸು ಎಂದು ಹೇಳುವುದಿಲ್ಲ. ಹೆತ್ತವರಿಂದಲೂ ತಪ್ಪಾಗುತ್ತದೆ. ಮಕ್ಕಳ ಬಳಿ ನಮ್ಮದು ತಪ್ಪಾಯಿತು ಎಂದು ಒಪ್ಪಿಕೊಂಡು ಮುಂದುವರಿದರೆ ಸಂಬಂಧ ಇನ್ನೂ ಚೆನ್ನಾಗಿರುತ್ತದೆ. ಆದರೆ, ಒಮ್ಮತಕ್ಕೆ ಬಂದು ಕ್ಷಮಿಸು ಎಂದು ಹೇಳದೆ ಮುಂದುವರಿಯುವುದರಿಂದಲೇ ಸಮಸ್ಯೆಗಳು ಉದ್ಭವಿಸುತ್ತದೆ.

೬. ಇತ್ತೀಚೆಗೆ ತುಂಬ ಆಪ್ತರೊಬ್ಬರ ಸಾವು ನೊಂದ ಹಿರಿಯರೊಬ್ಬರ ಅನಿಸಿಕೆ ಹೀಗಿದೆ. ʻನನ್ನ ಗೆಳೆಯ ನನ್ನ ಬಿಟ್ಟು ಹೋದ ಮೇಲೆ ನಾನು ಯೋಚಿಸುತ್ತಾ ಕೂತಿದ್ದೆ. ಈ ವಯಸ್ಸಿನವರೆಗೆ ನಾನೇನು ಮಾಡುತ್ತಿದ್ದೆ, ಏನು ಸಾಧಿಸಿದೆ ಅರ್ಥವಾಗಲಿಲ್ಲ. ನನ್ನ ಮಕ್ಕಳು ಸಣ್ಣವರಾಗಿದ್ದಾಗ, ಎಷ್ಟೋ ದಿನಗಳನ್ನು ಹೀಗೆ ಸುಮ್ಮನೆ ಕೂತು ಕಳೆದಿದ್ದೇವೆ. ಆಗೆಲ್ಲ ಅದನ್ನು ಹೆಚ್ಚು ಅರ್ಥಯುತವಾಗಿ ಕಳೆದಿದ್ದರೆ ಒಳ್ಳೆಯದಿತ್ತು ಅನಿಸುತ್ತಿದೆ. ನನ್ನ ಮಕ್ಕಳ ಜೀವನ ಈಗ ಅತ್ಯಂತ ಬ್ಯುಸಿ. ಯಾವುದಕ್ಕೂ ಅವರಿಗೆ ಸಮಯವಿಲ್ಲ. ಆಗ ನಾನು ಅವರಿಗೆ ಬದುಕಿನಲ್ಲಿ ಸಣ್ಣ ಸಣ್ಣ ಖುಷಿಗಳನ್ನು ಅನುಭವಿಸುವ ಪಾಠ ಕಲಿಸಿದ್ದಿದ್ದರೆ ಅವರು ಈಗ ಹೀಗಿರುತ್ತಿರಲಿಲ್ಲವೇನೋ!

೭. ಮತ್ತೊಬ್ಬರ ಅಳಲು ಇದು. ʻನಾನು ಸಣ್ಣವನಿದ್ದಾಗ ನನ್ನ ಅಮ್ಮ ಯಾವಾಗಲೂ, ಅಪ್ಪ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದರೆ, ಹೋಗಿ ಸಹಾಯ ಮಾಡು ಎನ್ನುತ್ತಿದ್ದಳು. ನಾನು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಆಗ ನಾನೇನಾದರೂ ಹೋಗಿದ್ದಿದ್ದರೆ ಏನಾದರೂ ಕಲಿಯುತ್ತಿದ್ದೆನೇನೋ. ಈಗ ನನ್ನ ಮಕ್ಕಳನ್ನು ನಾನು ಸಹಾಯಕ್ಕೆ ಕರೆದಿದ್ದರೆ ಒಳ್ಳೆಯದಿತ್ತು ಅನಿಸುತ್ತದೆ.ʼ

೮. ನಾವು ಸರಿಪಡಿಸೋಣ: ಏನೇ ವಿಚಾರವಿರಲಿ, ಯಾರಿಗೆ ಏನೇ ತೊಂದರೆಗಳಾಗಲಿ ಎಲ್ಲರ ಮನೆಯಲ್ಲೂ ಅಮ್ಮ ಸರಿಪಡಿಸಲು ಇದ್ದೇ ಇರುತ್ತಾಳೆ. ಅಮ್ಮ ಬಂದರೆ ಆಕೆ ಸರಿಪಡಿಸುತ್ತಾಳೆ ಎಂಬ ಭಾವನೆ. ಆದರೆ, ನಾನು ಸರಿಪಡಿಸುತ್ತೇನೆ ಎಂದು ಸಮಸ್ಯೆಯನ್ನು ಪೂರ್ಣ ನನ್ನ ಹೆಗಲಿಗೆ ಹಾಕಿಕೊಳ್ಳುವ ಬದಲು ನಾವು ಸರಿಪಡಿಸೋಣ ಎಂದಿದ್ದರೆ ಎಷ್ಟು ಒಳ್ಳೆಯದಿತ್ತು! ಎಲ್ಲರೂ ಒಟ್ಟಾಗಿ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಆಸ್ಪದ ನೀಡಿದ್ದರೆ, ಮಕ್ಕಳೂ ಎಷ್ಟೊಂದು ವಿಚಾರ ಕಲಿಯುತ್ತಿದ್ದರು! ಇದೂ ಕೂಡಾ ಹಿರಿಯರೊಬ್ಬರ ಜ್ಞಾನೋದಯವೇ.

ಇದನ್ನೂ ಓದಿ | No marriage movement | ಮದುವೆ, ಮಕ್ಕಳು ಯಾವುದೂ ಬೇಡ: ಯುವತಿಯರಲ್ಲೀಗ ಹೊಸ ಟ್ರೆಂಡ್‌!

೯. ʻನನ್ನ ಮಕ್ಕಳು ಯಾವಾಗಲೂ ಸಾಮಾಜಿಕ ಜಾಲತಾಣದಲ್ಲೇ ಬಿದ್ದಿರುತ್ತಾರೆ. ಯಾವುದೋ ಪಾರ್ಟಿ, ಯಾವುದೋ ಔಟಿಂಗ್‌ ಎಂದುಕೊಂಡು ನೂರಾರು ಫೋಟೋ, ಸಿಲ್ಲಿ ವಿಡಿಯೋಗಳನ್ನು ಪೋಸ್ಟ್‌ ಮಾಡುತ್ತಲೇ ಇರುತ್ತಾರೆ. ಇಂಟರ್ನೆಟ್‌ ಎಂಬುದು ಯಾವಾಗಲೂ ಇದ್ದೇ ಇರುತ್ತದೆ. ಅದಕ್ಕೆ ಒಂದಿಷ್ಟು ಸಮಯ ಮಾತ್ರ ಕೊಡಲು ನಾನು ಹೇಳಿಕೊಡಬೇಕಾಗಿತ್ತು. ಹಾಗೆ ಮಾಡಿದ್ದರೆ ಈಗ ಅವರು ಹೀಗೆ ಮಾಡುವುದನ್ನು ತಪ್ಪಿಸಬಹುದಿತ್ತೇನೋʼ ನೊಂದ ಹಿರಿಯ ನಾಗರಿಕರೊಬ್ಬರು ಹೇಳಿದ್ದು ಹೀಗೆ.

೧೦. ಕೇವಲ ಹಣ ಮಾತ್ರ ಹೂಡಿಕೆ ಮಾಡುವುದಲ್ಲ. ಪ್ರತಿಯೊಂದರಲ್ಲೂ. ನಮ್ಮ ವೈಯಕ್ತಿಕ ಅಭಿವೃದ್ಧಿಯಿಂದ ಹಿಡಿದು ಅರ್ಥಪೂರ್ಣ ಸಂಬಂಧದವರೆಗೆ ಎಲ್ಲವಕ್ಕೂ ಸಮಯದ, ಪರಿಶ್ರಮದ ಹೂಡಿಕೆ ಅತ್ಯಗತ್ಯ. ತಪ್ಪುಗಳಾದರೆ, ಸಂಬಂಧದಲ್ಲಿ ತೊಂದರೆಗಳಾದರೆ ಮತ್ತೆ ಸಮಯ ಹೊಂದಿಸಿ ಸರಿಪಡಿಸುವುದೂ ಅಗತ್ಯ. ಈಗಿನ ಕಾಲದ ಮಕ್ಕಳಲ್ಲಿ ಇದರಲ್ಲೇ ಕೊರತೆ ಕಾಣಿಸುತ್ತಿದೆ. ಮಕ್ಕಳಿಗೆ ಇದನ್ನು ಕಲಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Petrol Diesel Price: ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು (Petrol Diesel Price) ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ಕಡಿಮೆ ದರವಿದೆ. ಗುಜರಾತ್ ಮತ್ತು ಮಧ್ಯಪ್ರವೇಶಕ್ಕಿಂತಲ್ಲೂ ನಮ್ಮಲ್ಲೇ ಕಡಿಮೆ. ಅಗಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲಗಳನ್ನ ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ವ್ಯಾಟ್ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೇ ವ್ಯಾಟ್ ಹೆಚ್ಚಳ (Price Hike) ಮಾಡಿತ್ತು. ಇದರಿಂದ ಕರ್ನಾಟಕದ ಆದಾಯ ಕುಂಠಿತವಾಗಿತ್ತು. ಈ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರನ್ನು ವಂಚಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಿತ್ತು ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಕ್ಕೂ ಮುಂಚೆ ಪೆಟ್ರೋಲ್ ಮತ್ತು ಡೀಸೆಲ್‌ಗೆ ತಲಾ 9.48 ರೂಪಾಯಿ ಮತ್ತು 3.56 ರೂಪಾಯಿ ತೆರಿಗೆ ಇತ್ತು. ಬಿಜೆಪಿ ಅವಧಿಯಲ್ಲಿ ದಾಖಲೆಯ ತೆರಿಗೆ ಹೆಚ್ಚಳವಾಗಿ ಪೆಟ್ರೋಲ್‌ಗೆ 32.98 ರೂ., ಡೀಸೆಲ್‌ಗೆ 31.83 ರೂ. ಹೆಚ್ಚಳವಾಗಿತ್ತು. 2021-22 ರಲ್ಲಿ ಅಬಕಾರಿ ತೆರಿಗೆಯನ್ನು ಪೆಟ್ರೋಲ್ ಮೇಲೆ 13 ರೂಪಾಯಿ ಮತ್ತು ಡಿಸೇಲ್ ಮೇಲೆ 16 ಕಡಿಮೆ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲಿನ ಕೇಂದ್ರ ತೆರಿಗೆ 19.9 ರೂ., ಡೀಸೆಲ್ ಮೇಲೆ 18.8 ರೂಪಾಯಿ ಇದೆ. ಇದನ್ನು ಕೇಂದ್ರ ಸರ್ಕಾರ ಜನರ ಒಳಿತಿಗೊಸ್ಕರ ಕಡಿಮೆ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ | Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

ರಾಜ್ಯದ ವ್ಯಾಟ್ ಹೆಚ್ಚಳದಿಂದ ಜನರ ಸೇವೆಗಳು, ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಹಣ ನೀಡಲಿದ್ದೇವೆ. ನಾವು ಸಮತೋಲಿತ ಮತ್ತು ಜವಾಬ್ದಾರಿಯುತ ಆಡಳಿತ ನೀಡಲು ಬದ್ಧರಾಗಿದ್ದೇವೆ ಎಂದು ತೈಲ ಬೆಲೆ ಏರಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

Continue Reading

ದೇಶ

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

EVM Row: ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

EVM Row
Koo

ಮುಂಬೈ: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಕುರಿತು ಚರ್ಚೆ ಶುರುವಾಗಿದೆ. ಇವಿಎಂಗಳ ಬಳಕೆಯೇ ಬೇಡ ಎಂದು ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಇದರ ಬೆನ್ನಲ್ಲೇ, “ಭಾರತದಲ್ಲಿ ಇವಿಎಂಗಳನ್ನು ಪರಿಶೀಲನೆ ಮಾಡಲು ಯಾರಿಗೂ ಆಗುವುದಿಲ್ಲ” ಎಂಬುದಾಗಿ ರಾಹುಲ್‌ ಗಾಂಧಿ ಮಸ್ಕ್‌ ಅವರ ಮಾತನ್ನೇ ಅನುಮೋದಿಸಿದ್ದಾರೆ. ಇದರ ಬೆನ್ನಲ್ಲೇ, ಮೊಬೈಲ್‌ ಬಳಸಿ ಇವಿಎಂಅನ್ನು ಅನ್‌ಲಾಕ್‌ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶಿವಸೇನೆ ಸಂಸದ ರವೀಂದ್ರ ವೈಕರ್‌ (Ravindra Waikar) ಅವರ ಬಾವ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇದು ಇವಿಎಂ ತಿರುಚಲಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿಯನ್ನೂ ನೀಡಿದಂತಾಗಿದೆ.

ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ. ತಮ್ಮ ಮೊಬೈಲ್‌ಗೆ ಒಟಿಪಿ ಜನರೇಟ್‌ ಮಾಡಿಕೊಂಡು ಅನ್‌ಲಾಕ್‌ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

‌ಲೋಕಸಭೆ ಚುನಾವಣೆಯಲ್ಲಿ ರವೀಂದ್ರ ವೈಕರ್‌ ಅವರು ಶಿವಸೇನೆಯ (ಉದ್ಧವ್‌ ಠಾಕ್ರೆ ಬಣ) ಅಭ್ಯರ್ಥಿ ಅಮೋಲ್‌ ಗಜಾನನ ಕೀರ್ತಿಕಾರ್ ಅವರ ವಿರುದ್ಧ ಕೇವಲ 48 ಮತಗಳ ಅಂತರದಿದ್ದ ಗೆದ್ದಿದ್ದಾರೆ. ರವೀಂದ್ರ ವೈಕರ್‌ ಅವರ ಸಂಬಂಧಿಯು ಇವಿಎಂ ತಿರುಚಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಯು ಮರು ಎಣಿಕೆಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Continue Reading

ಕ್ರೀಡೆ

Rishabh Pant: ಯೂಟ್ಯೂಬ್ ಸಿಲ್ವರ್ ಪ್ಲೇ ಬಟನ್ ಪಡೆದ ರಿಷಭ್​ ಪಂತ್​; ಗಳಿಕೆಯ ಹಣ ದಾನಕ್ಕೆ ಮೀಸಲು

Rishabh Pant: ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.

VISTARANEWS.COM


on

Rishabh Pant
Koo

ಮುಂಬಯಿ: ಟೀಮ್​ ಇಂಡಿಯಾದ ಕ್ರಿಕೆಟಿಗ ರಿಷಭ್​ ಪಂತ್​(Rishabh Pant) ಅವರು ಕ್ರಿಕೆಟ್​ ಜತೆಗೆ ಯೂಟ್ಯೂಬ್​ ಚಾನೆಲ್(Rishabh Pant YouTube channel)​ ಒಂದನ್ನು ನಡೆಸುತ್ತಿದ್ದಾರೆ. 1 ಲಕ್ಷ ಸಬ್​ಸ್ಕ್ರೈಬ್ ಆದ ನಿಟ್ಟಿನಲ್ಲಿ ಯುಟ್ಯೂಬ್ ಕಡೆಯಿಂದ ಅವರಿಗೆ ಸಿಲ್ವರ್ ಪ್ಲೇ ಬಟನ್(Silver Play Button) ಸಿಕ್ಕಿದೆ. ಈ ಸಂತಸದ ವಿಚಾರವನ್ನು ಸ್ವತಃ ಪಂತ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ. ಈ ಚಾನೆಲ್​ನಿಂದ ಬರುವ ಹಣವನ್ನು ಅಸಹಾಯಕರಿಗೆ ದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.


ಪಂತ್​ ಅವರು ಸದ್ಯ ಸಾಗುತ್ತಿರುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಪಾಕ್​ ವಿರುದ್ಧದ ಪಂದ್ಯದಲ್ಲಿ ಏಕಾಂಗಿ ಬ್ಯಾಟಿಂಗ್​ ಹೋರಾಟ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರು ಆ ಪಂದ್ಯದಲ್ಲಿ ನಿಂತು ಆಡದೇ ಇದ್ದಿದ್ದರೆ ಭಾರತ 100 ಗಡಿ ಕೂಡ ದಾಟುವುದು ಕೂಡ ಕಷ್ಟವಾಗಿರುತ್ತಿತ್ತು.

2022ರ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್​ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್​ ಪಂತ್​ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ತಮ್ಮ ನಂಬಿಕೆ ಮತ್ತು ಕ್ರಿಕೆಟ್​ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್​ ಆಗಿ ಈ ಬಾರಿಯ ಐಪಿಎಲ್​ ಟೂರ್ನಿ ಆಡುವ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು.

ಇದನ್ನೂ ಓದಿ Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

ಸುಟ್ಟ ಗಾಯಗಳು ಹಾಗೂ ಮಂಡಿಗೆ ಗಾಯಗೊಂಡಿಗೆ ರಿಷಭ್​ ಪಂತ್​ಗೆ ಆರಂಭದಲ್ಲಿ ಡೆಹ್ರಾಡೂನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಪಂತ್​ ದುಬೈಯಲ್ಲಿ ಕ್ರಿಸ್​ಮಸ್​ ಪಾರ್ಟಿಯಲ್ಲಿ ಮುಗಿಸಿ ಮರಳಿ ಭಾರತಕ್ಕೆ ಬಂದು ತಾಯಿಗೆ ಹೊಸ ವರ್ಷದ ಸರ್​ಪ್ರೈಸ್​ ನೀಡಲೆಂದು ದೆಹಲಿಯಿಂದ ಡೆಹ್ರಾಡೂನ್​ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. 

ಹರಿಯಾಣ ರಾಜ್ಯ ಸಾರಿಗೆ ನಿಗಮದ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ಜೀತ್ ಅಪಘಾತಕ್ಕೀಡಾಗಿ ನೋವಿನಿಂದ ನರಳುತ್ತಿದ್ದ ಕ್ರಿಕೆಟಿಗ ರಿಷಭ್​ ಪಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪಾಣ ಉಳಿಸುವಂತೆ ಮಾಡಿದ್ದರು. ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದದ್ದನ್ನು ನೋಡಿದ ಸುಶೀಲ್ ಕುಮಾರ್ ಕುಮಾರ್​ ಮತ್ತು ಪರಮ್‌ಜೀತ್ ತಕ್ಷಣ ಬಸ್​ ನಿಲ್ಲಿಸಿ ಪಂತ್​ ಅವರಿಗೆ ಆರೈಕೆ ಮಾಡಿದ್ದರು.

Continue Reading

ದೇಶ

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Rahul Gandhi: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ. ಎಲಾನ್‌ ಮಸ್ಕ್‌ ಅವರ ಆರೋಪಗಳಿಗೆ ರಾಹುಲ್‌ ಗಾಂಧಿ ಅವರೂ ಪ್ರತಿಕ್ರಿಯಿಸಿದ್ದು, ಭಾರತದ ಇವಿಎಂಗಳ ಕುರಿತು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈಗ 99 ಕ್ಷೇತ್ರಗಳಲ್ಲಿ ಗೆದ್ದಿದೆ. ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ (INDIA Bloc) 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿಯೊಂದಕ್ಕೇ ಬಹುಮತ ಬರುವುದನ್ನು ತಪ್ಪಿಸಿವೆ. ಇಷ್ಟೆಲ್ಲ ಆದರೂ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮತ್ತೆ ಚುನಾವಣೆ ಮತಯಂತ್ರಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಲಾನ್‌ ಮಸ್ಕ್‌ ಹೇಳಿದ್ದಿಷ್ಟು…

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀವ್‌ ಚಂದ್ರಶೇಖರ್‌ ತಿರುಗೇಟು

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading
Advertisement
Renuka swamy murder
ಚಿತ್ರದುರ್ಗ7 mins ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ16 mins ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ25 mins ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Patna Boat Accident
ದೇಶ26 mins ago

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Sachin Tendulkar
ಕ್ರೀಡೆ39 mins ago

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Petrol Diesel Price
ಪ್ರಮುಖ ಸುದ್ದಿ1 hour ago

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Child Marriage
ವಿದೇಶ1 hour ago

12ರ ಹರೆಯದ ಮಗಳನ್ನು 5 ಲಕ್ಷ ರೂ.ಗೆ ಮಾರಿ 72 ವರ್ಷದ ವೃದ್ಧನೊಂದಿಗೆ ಮದುವೆ ಮಾಡಿಸಲು ಮುಂದಾದ ಪಾಪಿ ತಂದೆ!

EVM Row
ದೇಶ1 hour ago

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

Vijayalakshmi Darshan Reactivated Instagram Account
ಸ್ಯಾಂಡಲ್ ವುಡ್2 hours ago

Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

Rishabh Pant
ಕ್ರೀಡೆ2 hours ago

Rishabh Pant: ಯೂಟ್ಯೂಬ್ ಸಿಲ್ವರ್ ಪ್ಲೇ ಬಟನ್ ಪಡೆದ ರಿಷಭ್​ ಪಂತ್​; ಗಳಿಕೆಯ ಹಣ ದಾನಕ್ಕೆ ಮೀಸಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renuka swamy murder
ಚಿತ್ರದುರ್ಗ7 mins ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

ಟ್ರೆಂಡಿಂಗ್‌