Rane Bungalow | ಕೇಂದ್ರ ಸಚಿವ ರಾಣೆಗೆ ಸೇರಿದ ಬಂಗ್ಲೆ ನೆಲಸಮಕ್ಕೆ ಬಾಂಬೆ ಹೈಕೋರ್ಟ್ ಆದೇಶ - Vistara News

ದೇಶ

Rane Bungalow | ಕೇಂದ್ರ ಸಚಿವ ರಾಣೆಗೆ ಸೇರಿದ ಬಂಗ್ಲೆ ನೆಲಸಮಕ್ಕೆ ಬಾಂಬೆ ಹೈಕೋರ್ಟ್ ಆದೇಶ

ಮುಂಬೈನ ಜೂಹು ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಕೇಂದ್ರ ಸಚಿವ ರಾಣೆ (Narayan Rane) ಅವರಿಗೆ ಸೇರಿದ ಬಂಗ್ಲೆಯ ಒಂದು ಭಾಗ ನೆಲಸಮಕ್ಕೆ ಹೈಕೋರ್ಟ್ ಆದೇಶ.

VISTARANEWS.COM


on

Narayan Rane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಇಲ್ಲಿನ ಜೂಹು ಪ್ರದೇಶದಲ್ಲಿ ಕೇಂದ್ರ ಸಚಿವ ನಾರಾಯಣ ರಾಣೆ (Narayan Rane) ಅವರ ಬಂಗ್ಲೆಯಲ್ಲಿ ನಿಯಮ ಮೀರಿ ನಿರ್ಮಾಣ ಮಾಡಲಾಗಿರುವ ಅನಧಿಕೃತ ಭಾಗವನ್ನು ನೆಲಸಮ ಮಾಡುವಂತೆ ಬಾಂಬೆ ಹೈಕೋರ್ಟ್, ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಗೆ ನಿರ್ದೇಶನ ನೀಡಿದೆ. ಕೋಸ್ಟಲ್ ರೆಗ್ಯುಲೇಷನ್ ಝೋನ್(ಸಿಆರ್‌ಜೆಡ್) ಮತ್ತು ಫ್ಲೋರ್ ಸ್ಪೇಸ್ ಇಂಡೆಕ್ಸ್(ಎಫ್ಎಸ್ಐ) ನಿಯಮಗಳನ್ನು ಮೀರಿ ಅನಧಿಕೃತ ಬಂಗ್ಲೆಯ ಒಂದು ಭಾಗವನ್ನು ನಿರ್ಮಾಣ ಮಾಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ. ಜತೆಗೆ, 10 ಲಕ್ಷ ರೂ.ವೆಚ್ಚವನ್ನೂ ಭರಿಸವಂತೆಯೂ ಕೋರ್ಟ್ ತಿಳಿಸಿದೆ.

ಜಸ್ಟೀಸ್ ಆರ್ ಡಿ ಧನುಕಾ ಮತ್ತು ಕಮಲ್ ಖಾತಾ ಅವರಿದ್ದ ಪೀಠವು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಣೆ ಫ್ಯಾಮಿಲಿ ಒಡೆತನದ ಕಂಪನಿಯು ಸಲ್ಲಿಸಿರುವ ಎರಡನೇ ಮನವಿಗೆ ಅವಕಾಶ ನೀಡಬಾರದು ಎಂದು ತಿಳಿಸಿದೆ. ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಭಾಗವನ್ನು ಅಧಿಕೃತಗೊಳಿಸಲು ಅವಕಾಶ ಕಲ್ಪಿಸಬೇಕೆಂದು ರಾಣೆ ಒಡೆತನದ ಕಂಪನಿಯು ಎರಡನೇ ಬಾರಿಗೆ ಮನವಿ ಸಲ್ಲಿಸಿದೆ. ಈ ಮನವಿಯನ್ನು ಪರಿಗಣಿಸಿದರೆ, ಇಡೀ ಕಟ್ಟಡವನ್ನು ಅನಧಿಕೃತವಾಗಿ ನಿರ್ಮಾಣ ಮಾಡಲು ಉತ್ತೇಜನ ನೀಡಿದಂತಾಗುತ್ತದೆ ಎಂದು ಪೀಠ ಹೇಳಿದೆ.

ಮುಂದಿನ ಎರಡು ವಾರಗಳಲ್ಲಿ ರಾಣೆ ಅವರ ಬಂಗ್ಲೆಯ ಅನಧಿಕೃತ ಭಾಗವನ್ನು ನೆಲಸಮಗೊಳಿಸಿ ಅದರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿದೆ. ಜತೆಗೆ, 10 ಲಕ್ಷ ರೂ. ವೆಚ್ಚವನ್ನು ಭರಿಸುವಂತೆಯೂ ಸೂಚಿಸಿದೆ. ಈ ಹಣವನ್ನು ಮಹಾರಾಷ್ಟ್ರ ಸ್ಟೇಟ್ ಲೀಗಲ್ ಸರ್ವೀಸ್ ಅಥಾರಿಟಿಗೆ ಎರಡು ವಾರಗಳಲ್ಲಿ ಕಟ್ಟುವಂತೆ ತಿಳಿಸಿದೆ.

ಏತನ್ಮಧ್ಯೆ, ಹೈಕೋರ್ಟ್ ತಾನು ನೀಡಿದ ಆದೇಶಕ್ಕೆ 6 ವಾರಗಳ ಕಾಲ ತಡೆಯಾಜ್ಞೆ ನೀಡಬೇಕು. ಹೀಗೆ ಮಾಡಿದರೆ, ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಸಾಧ್ಯವಾಗಲಿದೆ ಎಂದು ರಾಣೆ ಪರ ವಕೀಲ ತಿಳಿಸಿದರು. ಆದರೆ, ಹೈಕೋರ್ಟ್ ಈ ಮನವಿಯನ್ನು ತಳ್ಳಿ ಹಾಕಿತು.

ಇದನ್ನೂ ಓದಿ | ವರವರ ರಾವ್‌ ಶಾಶ್ವತ ಜಾಮೀನು ತಿರಸ್ಕಾರ: ಜೈಲು ಸ್ಥಿತಿ ಸುಧಾರಿಸಲು ಸೂಚಿಸಿದ ಬಾಂಬೆ ಹೈಕೋರ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ಸಂಸತ್‌ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮಕ್ಕೆ ರಾಹುಲ್‌ ಗಾಂಧಿ ಚಕ್ಕರ್?

Rahul Gandhi: ಸಂಸತ್‌ ಅಧಿವೇಶನ ಆರಂಭವಾಗುವ ಮೊದಲು ಎಲ್ಲರೂ ಎದ್ದು ನಿಂತು ರಾಷ್ಟ್ರಗೀತೆ ಹಾಡುವುದು ವಾಡಿಕೆ. ಆದರೆ, ನರೇಂದ್ರ ಮೋದಿ ಅವರಿಂದ ಹಿಡಿದು ಎಲ್ಲರೂ ರಾಷ್ಟ್ರಗೀತೆ ಹಾಡುವಾಗ ರಾಹುಲ್‌ ಗಾಂಧಿ ಅವರು ಗೈರಾಗಿದ್ದರು ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಕುರಿತ ವಿಡಿಯೊ ವೈರಲ್‌ ಆಗಿದೆ. ಇದಕ್ಕೆ ಕಾಂಗ್ರೆಸ್‌ ನಾಯಕರು ಸರಿಯಾಗಿಯೇ ತಿರುಗೇಟು ನೀಡಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಸೋಮವಾರದಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Session 2024) ಆರಂಭವಾಗಿದ್ದು, ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ 280 ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವಾಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಂವಿಧಾನದ ಪ್ರತಿಯನ್ನು ತೋರಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಸಂಸತ್‌ ಅಧಿವೇಶನದ ವೇಳೆ ರಾಷ್ಟ್ರಗೀತೆ ಹಾಡುವಾಗ ರಾಹುಲ್‌ ಗಾಂಧಿ ಗೈರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಹೌದು, ಸಂಸತ್‌ ಅಧಿವೇಶನ ಆರಂಭವಾಗುವ ಮೊದಲು ಎಲ್ಲರೂ ಎದ್ದು ನಿಂತು ರಾಷ್ಟ್ರಗೀತೆ ಹಾಡುವುದು ವಾಡಿಕೆ. ಆದರೆ, ನರೇಂದ್ರ ಮೋದಿ ಅವರಿಂದ ಹಿಡಿದು ಎಲ್ಲರೂ ರಾಷ್ಟ್ರಗೀತೆ ಹಾಡುವಾಗ ರಾಹುಲ್‌ ಗಾಂಧಿ ಅವರು ಗೈರಾಗಿದ್ದರು ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಆಂಧ್ರಪ್ರದೇಶ ಬಿಜೆಪಿ ಉಪಾಧ್ಯಕ್ಷ ವಿಷ್ಣು ಕುಮಾರ್‌ ರೆಡ್ಡಿ ಅವರು ವಿಡಿಯೊ ಒಂದನ್ನು ಪೋಸ್ಟ್‌ ಮಾಡಿದ್ದು, “ರಾಹುಲ್‌ ಗಾಂಧಿ ಅವರು ಭಾರತದ ರಾಷ್ಟ್ರಗೀತೆಗಿಂತ ದೊಡ್ಡವರು ಎಂಬುದಾಗಿ ಭಾವಿಸಿದ್ದಾರೆ. ರಾಷ್ಟ್ರಗೀತೆ ಮುಗಿದ ಬಳಿಕ ಅವರು ಸಂಸತ್‌ಗೆ ತಡವಾಗಿ ಬಂದಿದ್ದಾರೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದ್ದಾರೆ.

ರಾಹುಲ್‌ ಗಾಂಧಿ ಅವರು ಸಂಸತ್‌ ಅಧಿವೇಶನದ ಆರಂಭದಲ್ಲಿ ರಾಷ್ಟ್ರಗೀತೆ ಹಾಡುವಾಗ ಇರಲಿಲ್ಲ ಎಂಬ ಆರೋಪ ಕೇಳಿಬಂದು, ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. “ರಾಹುಲ್‌ ಗಾಂಧಿ ಅವರು ರಾಷ್ಟ್ರಗೀತೆ ಹಾಡುವ ಉಪಸ್ಥಿತರಿದ್ದರು. ಅವರು ಕೂಡ ಎದ್ದು ನಿಂತು ರಾಷ್ಟ್ರಗೀತೆ ಹಾಡಿ, ಗೌರವ ನೀಡಿದ್ದಾರೆ. ಇದೆಲ್ಲ ಬಿಜೆಪಿ ನಾಯಕರು, ಐಟಿ ಸೆಲ್‌ ಹರಡಿಸುತ್ತಿರುವ ಸುಳ್ಳು ಸುದ್ದಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದಕ್ಕೆ ಹೀಗೆ ಸುಳ್ಳು ಅನುಭವಿಸುತ್ತಿದ್ದಾರೆ” ಎಂದು ಕಾಂಗ್ರೆಸ್‌ ನಾಯಕರು ತಿರುಗೇಟು ನೀಡಿದ್ದಾರೆ.

ರಾಹುಲ್‌ ಗಾಂಧಿ ಅವರು ಬಿಳಿ ಟಿ ಶರ್ಟ್‌ ಹಾಗೂ ಕಪ್ಪು ಪ್ಯಾಂಟ್‌ ಧರಿಸಿ ಸಂಸತ್‌ ಅಧಿವೇಶನಕ್ಕೆ ಹಾಜರಾಗಿದ್ದರು. ಅವರು ರಾಷ್ಟ್ರಗೀತೆ ಹಾಡುವಾಗ ಉಪಸ್ಥಿತರಿದ್ದರು. ಸಂಸತ್‌ ಟಿವಿ ಲೋಗೊ ರಾಹುಲ್‌ ಗಾಂಧಿ ಅವರ ಮುಖದ ಮೇಲೆ ಇರುವುದರಿಂದ ವೈರಲ್‌ ಆಗಿರುವ ವಿಡಿಯೊದಲ್ಲಿ ರಾಹುಲ್‌ ಗಾಂಧಿ ಕಾಣಿಸುತ್ತಿಲ್ಲ. ಬಿಜೆಪಿ ಐಟಿ ಸೆಲ್‌ ಹರಡಿಸುವ ಸುಳ್ಳು ಸುದ್ದಿಗಳನ್ನು ಜನ ನಂಬುವುದಿಲ್ಲ ಎಂಬುದಾಗಿ ಫೋಟೊ ಸಮೇತ ಕಾಂಗ್ರೆಸ್‌ ನಾಯಕರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Continue Reading

ದೇಶ

Divorce: ತೂಕ ಇಳಿಸಿಕೊಳ್ಳಲು ನೆರವಾಗದ ‘ಜಿಮ್‌ ಟ್ರೇನರ್‌’ ಗಂಡನಿಗೆ ಮಹಿಳೆ ಡಿವೋರ್ಸ್‌!

Divorce: ಮಹಿಳೆ ಹಾಗೂ ಜಿಮ್‌ ಟ್ರೇನರ್‌ 2023ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೆಂಡತಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಜಿಮ್‌ ಟ್ರೇನರ್‌ ಹರಸಾಹಸ ಪಟ್ಟಿದ್ದಾರೆ. ಪತ್ನಿಯನ್ನು ಜಿಮ್‌ಗೆ ಕರೆಸಿಕೊಂಡು ಟ್ರೇನಿಂಗ್‌ ಕೊಟ್ಟಿದ್ದಾರೆ. ಜಿಮ್‌ನಲ್ಲಿ ಕಸರತ್ತು ನಡೆಸಿದರೂ ಮಹಿಳೆಯ ತೂಕವು 75 ಕೆ.ಜಿಯೇ ಇದೆ. ಮಾತು ಉಳಿಸಿಕೊಳ್ಳಲು ಆಗದ ಪತಿಯ ಜತೆ ಸಂಸಾರ ಮಾಡಬಾರದು, ಆತನಿಂದ ದೂರವಾಗಬೇಕು ಎಂಬುದಾಗಿ ಮಹಿಳೆ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Divorce
ಸಾಂದರ್ಭಿಕ ಚಿತ್ರ.
Koo

ಲಖನೌ: ಭಾರತ ಸೇರಿ ಜಗತ್ತಿನಾದ್ಯಂತ ಗಂಡ-ಹೆಂಡತಿ ಮಧ್ಯೆ ಕ್ಷುಲ್ಲಕ ಕಾರಣಗಳಿಗೆ ಭಿನ್ನಾಭಿಪ್ರಾಯ ಉಂಟಾಗಿ, ವಿಚ್ಛೇದನ (Divorce) ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಿಳೆಯೊಬ್ಬರು ತೂಕ ಇಳಿಸಿಕೊಳ್ಳಲು ನೆರವಾಗಲಿಲ್ಲ, ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ ಎಂದು ಜಿಮ್‌ ಟ್ರೇನರ್‌ ಆಗಿರುವ ಪತಿಯಿಂದ ವಿಚ್ಛೇದನ ಬಯಸಿದ್ದಾರೆ. ವಿಚ್ಛೇದನ ಬಯಸಿ ಅವರು ಆಗ್ರಾದಲ್ಲಿರುವ ಕೌಟುಂಬಿಕ ಸಮಾಲೋಚನಾ ಕೇಂದ್ರಕ್ಕೆ (Family Counselling Centre) ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯು ಸ್ವಲ್ಪ ದಪ್ಪಗಿದ್ದು, ಅವರು ಜಿಮ್‌ ಟ್ರೇನರ್‌ನನ್ನೇ ಮದುವೆಯಾಗಿದ್ದರು. ಜಿಮ್‌ ಟ್ರೇನರ್‌ ಕಟ್ಟುಮಸ್ತಾದ ದೇಹಕ್ಕೆ ಮರುಳಾಗಿ ಅವರು ಮದುವೆಯಾಗಿದ್ದರು. ಮದುವೆಯಾಗುವ ವೇಳೆ ಜಿಮ್‌ ಟ್ರೇನರ್‌ಗೆ ಅವರು ಒಂದು ಕಂಡಿಷನ್‌ ಹಾಕಿದ್ದರು. ಮದುವೆಯಾದ ಬಳಿಕ ನಾನು ತೆಳ್ಳಗಾಗಲು ಸಹಕರಿಸಬೇಕು, ಜಿಮ್‌ನಲ್ಲಿ ತರಬೇತಿ ನೀಡಬೇಕು ಎಂಬುದಾಗಿ ಅವರು ಷರತ್ತು ಹಾಕಿದ್ದರು. ಮದುವೆಗೂ ಮುನ್ನ ಜಿಮ್‌ ಟ್ರೇನರ್‌ ಇದೇನ್‌ ಮಹಾ ಎಂದು ಒಪ್ಪಿಕೊಂಡಿದ್ದರು. ಆದರೆ, ಮದುವೆಯಾದ ಬಳಿಕ ತೂಕ ಇಳಿಸಿಕೊಳ್ಳಲು ಪತಿ ನೆರವು ನೀಡುತ್ತಿಲ್ಲ ಎಂಬುದು ಮಹಿಳೆಯ ಆರೋಪವಾಗಿದೆ.‌

Lawyer Got Divorce In Gujarat

ಮದುವೆ ಬಳಿಕ ನಡೆದಿದ್ದೇನು?

ಮಹಿಳೆ ಹಾಗೂ ಜಿಮ್‌ ಟ್ರೇನರ್‌ 2023ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೆಂಡತಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಜಿಮ್‌ ಟ್ರೇನರ್‌ ಹರಸಾಹಸ ಪಟ್ಟಿದ್ದಾರೆ. ಪತ್ನಿಯನ್ನು ಜಿಮ್‌ಗೆ ಕರೆಸಿಕೊಂಡು ಟ್ರೇನಿಂಗ್‌ ಕೊಟ್ಟಿದ್ದಾರೆ. ಜಿಮ್‌ನಲ್ಲಿ ಕಸರತ್ತು ನಡೆಸಿದರೂ ಮಹಿಳೆಯ ತೂಕವು 75 ಕೆ.ಜಿಯೇ ಇದೆ. ಮದುವೆಗೆ ಮುನ್ನ ಎಷ್ಟು ಕೆ.ಜಿ ಇದ್ದರೋ, ಈಗಲೂ ಅಷ್ಟೇ ಇದ್ದಾರೆ. ಇದರಿಂದ ಕುಪಿತಗೊಂಡ ಅವರು ಪತಿಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ನನ್ನ ಆಸೆಯನ್ನು ಈಡೇರಿಸುವಲ್ಲಿ, ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ಪತಿ ವಿಫಲನಾಗಿದ್ದಾನೆ. ಹಾಗಾಗಿ ನನಗೆ ವಿಚ್ಛೇದನ ಬೇಕಾಗಿದೆ ಎಂಬುದಾಗಿ ಅವರು ಕೌಟುಂಬಿಕ ಸಮಾಲೋಚನಾ ಕೇಂದ್ರದಲ್ಲಿ ಹೇಳಿಕೆ ನೀಡಿದ್ದಾರೆ.

“ಇದೇನು ದೊಡ್ಡ ವಿಷಯವಲ್ಲ. ಮಾತನಾಡಿ ಬಗೆಹರಿಸಿಕೊಳ್ಳಿ” ಎಂಬುದಾಗಿ ಕೌಟುಂಬಿಕ ಸಮಾಲೋಚನಾ ಕೇಂದ್ರದಲ್ಲಿ ಸಮಾಲೋಚಕರು ಸಲಹೆ ನೀಡಿದರೂ ಮಹಿಳೆಯು ಅದಕ್ಕೆ ಒಪ್ಪಿಲ್ಲ. “ನನಗೆ ಕೊಟ್ಟ ಮಾತನ್ನು ಗಂಡ ಉಳಿಸಿಕೊಂಡಿಲ್ಲ. ಇಂತಹ ಮನಸ್ಥಿತಿ ಇರುವ ಪತಿಯ ಜತೆ ಸಂಸಾರ ಮಾಡಲು ನನಗೆ ಇಷ್ಟವಿಲ್ಲ” ಎಂಬುದಾಗಿ ಅವರು ಖಡಾಖಂಡಿತವಾಗಿ ಹೇಳಿದ್ದಾರೆ. ಇನ್ನು. ಆಕೆಯ ಪತಿಯು, “ನಾನು ಪತ್ನಿಯ ಜತೆ ಸಂಸಾರ ಮಾಡಲು ಯಾವುದೇ ತೊಂದರೆ ಇಲ್ಲ. ವಿಚ್ಛೇದನ ಕೊಡಲು ಮನಸ್ಸಿಲ್ಲ” ಎಂದಿದ್ದಾರೆ. ಇನ್ನೊಂದು ಸಲ ಸಮಾಲೋಚನೆ ನಡೆಸಲು ಸಮಾಲೋಚಕರು ಮತ್ತೊಂದು ದಿನ ಬರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆಗಲಾದರೂ ಪತ್ನಿಯು ಮನಸ್ಸು ಬದಲಿಸಬಹುದೇನೋ ಎಂಬ ನಿರೀಕ್ಷೆಯಲ್ಲಿ ಜಿಮ್‌ ಟ್ರೇನರ್‌ ಇದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

Continue Reading

ಕರ್ನಾಟಕ

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ಸೋಮವಾರ ನಡೆದ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾತೃಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ ಸಂಸತ್‌ನಲ್ಲಿ ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿದರು.

VISTARANEWS.COM


on

union Minister Pralhad Joshi took oath in the name of God in his mother tongue
Koo

ನವದೆಹಲಿ: ಸಂಸತ್‌ ಭವನದಲ್ಲಿ ಸೋಮವಾರ (ಜೂನ್‌ 24) ನಡೆದ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi), ಮಾತೃಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಸಂಸತ್‌ನಲ್ಲಿ ಕನ್ನಡತನ ಎತ್ತಿ ಹಿಡಿದರು.

2024ರ ಲೋಕಸಭೆ ಚುನಾವಣೆ ಬಳಿಕ ನೂತನ ಸಂಸತ್ ಭವನದಲ್ಲಿ ಸೋಮವಾರ ಮೊದಲ ಬಾರಿ ಆಯೋಜಿಸಿದ್ದ ಅಧಿವೇಶನದ ವೇಳೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹ್ತಾಬ್ ಪ್ರಮಾಣ ವಚನ ಬೋಧಿಸಿದರು.

ಈ ವೇಳೆ, ಧಾರವಾಡ ಲೋಕಸಭೆ ಕ್ಷೇತ್ರದಿಂದ ಸತತ 5ನೇ ಬಾರಿ ಬಿಜೆಪಿಯಿಂದ ಕಣಕ್ಕಿಳಿದು ಐತಿಹಾಸಿಕ ಗೆಲುವು ಸಾಧಿಸಿದ್ದ ಪ್ರಲ್ಹಾದ್‌ ಜೋಶಿ, ಸಂಸತ್‌ನಲ್ಲಿ ಪ್ರಧಾನಿ ಮೋದಿ ಸಂಗಡ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

ಪ್ರಸಕ್ತ ಅಧಿವೇಶನದಲ್ಲಿ “ಪ್ರಲ್ಹಾದ್‌ ವೆಂಕಟೇಶ ಜೋಶಿಯಾದ ನಾನು” ಎಂದು ಕನ್ನಡದಲ್ಲೇ ಮಾತನಾಡುತ್ತ, ಪ್ರತಿಜ್ಞಾ ಪತ್ರ ಓದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಅಖಂಡತೆ, ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಜತೆಗೆ ನನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಶ್ರದ್ಧೆ ಮತ್ತು ನಿಷ್ಠೆಯಿಂದ ನಿರ್ವಹಿಸುವುದಾಗಿ ಪ್ರಮಾಣಗೈದರು.

ಇದನ್ನೂ ಓದಿ: Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಪ್ರಧಾನಿ ಮೋದಿ ಸಂಪುಟದಲ್ಲಿ ಸತತ ಎರಡನೇ ಬಾರಿ ಸಚಿವರಾಗಿರುವ ಪ್ರಲ್ಹಾದ್‌ ಜೋಶಿ ಅವರು, ಬಿಜಿಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ದೇವರ ಪೂಜೆಗೈದು ವಿಶೇಷತೆ ಮೆರೆದರು. ಇನ್ನು, ಸಂಸತ್ ಭವನದಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಾಭಿಮಾನದ ಜತೆಗೆ ಮಾತೃಭಾಷಾ ವೈಶಿಷ್ಟ್ಯ ಪ್ರದರ್ಶಿಸಿದರು.

Continue Reading

ದೇಶ

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Hardeep Singh Nijjar: 2013ರಲ್ಲಿ ನಿಜ್ಜರ್ ಪಾಕಿಸ್ತಾನಕ್ಕೆ ತೆರಳಿ ತಾರಾ ಜತೆ ಕಾಲ ಕಳೆದಿದ್ದ. ಪಾಕಿಸ್ತಾನದ ಗುರುದ್ವಾರದ ಮೇಲ್ಭಾಗದಲ್ಲಿ ತಾರಾ ಜೊತೆ ನಿಜ್ಜರ್ ಕಾಣಿಸಿಕೊಂಡಿರುವ ಫೊಟೋಗಳು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿವೆ. ತಾರಾ, ತನ್ನ ನಂತರ KTF ಅನ್ನು ವಹಿಸಿಕೊಳ್ಳಲು ನಿಜ್ಜರ್‌ನನ್ನು ನೇಮಿಸಲು ಮುಂದಾಗಿದ್ದ. ಆದರೆ, ನಿಜ್ಜರ್ ಈ ಪ್ರಸ್ತಾಪವನ್ನು ನಿರಾಕರಿಸಿದ್ದ. ವರದಿ ಹೇಳಿದೆ. ನಂತರ, 2015 ರಲ್ಲಿ, ಅವರು ಕೆನಡಾದಲ್ಲಿ ಭಯೋತ್ಪಾದಕ ಸಂಘಟನೆಯ ಉಸ್ತುವಾರಿ ವಹಿಸುವಷ್ಟು ಬಲಿಷ್ಟವಾಗಿ ಬೆಳೆದಿದ್ದ.

VISTARANEWS.COM


on

Hardeep Singh Nijjar
Koo

ನವದೆಹಲಿ: ಖಲಿಸ್ತಾನಿ ಉಗ್ರ, ಖಲಿಸ್ತಾನಿ ಟೈಗರ್ ಫೋರ್ಸ್‌ನ (Khalistani Tiger Force) ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆಗೀಡಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸರ್ಕಾರವು ಸಂಸತ್‌ನಲ್ಲಿಯೇ ಆತನಿಗೆ ‘ಮೌನಾಚರಣೆ’ ಮೂಲಕ ಗೌರವ ಸಲ್ಲಿಸಿದ ವಿಚಾರ ಪ್ರಪಂಚಾದ್ಯಂತ ಸುದ್ದಿಯಾಗಿತ್ತು. ಇದೀಗ ನಿಜ್ಜರ್‌ ಕುರಿತ ಶಾಕಿಂಗ್‌ ವಿಚಾರವೊಂದು ಬಯಲಾಗಿದೆ. ವರದಿ ಪ್ರಕಾರ ನಿಜ್ಜರ್‌ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಮಾತ್ರವಲ್ಲದೇ ಪಾಕಿಸ್ತಾನಕ್ಕೆ ಆಗಾಗ ಭೇಟಿ ಕೊಡುತ್ತಿದ್ದ. ಅಲ್ಲದೇ ಅಲ್ಲಿನ ಖಲಿಸ್ತಾನಿ ಉಗ್ರರನ್ನು ಭೇಟಿಯಾಗಿ ಭಾರತದ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎಂಬ ವಿಚಾರ ಬಯಲಾಗಿದೆ.

ಹರ್ದೀಪ್ ಸಿಂಗ್ ನಿಜ್ಜರ್ ಅವರು 1970ರಲ್ಲಿ ಪಂಜಾಬ್‌ನಲ್ಲಿ ಜನಿಸಿದ್ದ. ಆರಂಭದಲ್ಲಿ ಕಾನೂನಿನ ಕೈಯಿಂದ ತಪ್ಪಿಸಿಕೊಂಡು ಓಡುತ್ತಿದ್ದ ಖಲಿಸ್ತಾನಿಗಳಿಗೆ ನಿಜ್ಜರ್‌ ಕುಟುಂಬ ಆಶ್ರಯ ಮತ್ತು ಆಹಾರವನ್ನು ನೀಡುತ್ತಿತ್ತು. ಅವರ ಒಡನಾಟದಿಂದಾಗಿ ನಿಜ್ಜರ್ ಖಲಿಸ್ತಾನಿ ಸಿದ್ಧಾಂತದಿಂದ ಹೆಚ್ಚು ಪ್ರಭಾವಿತನಾಗಿದ್ದ ಮತ್ತು ಪ್ರತ್ಯೇಕ ಸಿಖ್ ರಾಷ್ಟ್ರವನ್ನು ಬೆಂಬಲಿಸಲು ಶುರು ಮಾಡುತ್ತಾನೆ.

1995ರಲ್ಲಿ ಪಂಜಾಬ್‌ನ ಆಗಿನ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದರು. ಖಲಿಸ್ತಾನಿ ಭಯೋತ್ಪಾದಕರು ಸಿಎಂ ಮತ್ತು ಇತರ 17 ಮಂದಿಯನ್ನು ಹತ್ಯೆ ಮಾಡಿದ ನಂತರ, ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಹಿಡಿಯಲು ಕೇಂದ್ರ ಸರ್ಕಾರ ಬೆನ್ಹತ್ತಿತ್ತು. ಈ ಪ್ರಕರಣದಲ್ಲಿ ನಿಜ್ಜರ್‌ ಕೂಡ ಭಾಗಿಯಾಗಿದ್ದ. ಇದಾದ ಬಳಿಕ ಹಿಂದೂ ವ್ಯಕ್ತಿಯ ನಕಲಿ ಗುರುತನ್ನು ಬಳಸಿಕೊಂಡು ನಿಜ್ಜರ್ ಭಾರತವನ್ನು ತಪ್ಪಿಸಿಕೊಂಡು ಕೆನಡಾಕ್ಕೆ ಓಡಿಹೋಗಿದ್ದ. ಅವರ ಪಾಸ್‌ಪೋರ್ಟ್‌ನಲ್ಲಿ ರವಿ ಶರ್ಮಾ ಹೆಸರಿತ್ತು. ಹಿಂದೂ ವ್ಯಕ್ತಿಯಂತೆ ಕಾಣಲು ಮತ್ತು ಸಿಖ್ ಗುರುತನ್ನು ಮರೆಮಾಚಲು ಅವರು ತಮ್ಮ ಕೂದಲು ಮತ್ತು ಗಡ್ಡವನ್ನು ಟ್ರಿಮ್ ಮಾಡಿಕೊಂಡಿದ್ದ ಎಂದು ವರದಿಗಳು ಬಹಿರಂಗಪಡಿಸಿವೆ.

ಕೆನಡಾವನ್ನು ತಲುಪಿದ ನಂತರ, ಅವರು ಅಲ್ಲಿನ ಪೊಲೀಸರಿಂದ ಹಿಂಸಿಸಲ್ಪಟ್ಟಿದ್ದಾನೆ ಎಂದು ಹೇಳಿಕೊಂಡು ನಿರಾಶ್ರಿತರ ಸ್ಥಾನಮಾನವನ್ನು ಪಡೆಯಲು ಪ್ರಯತ್ನಿಸಿದ್ದ. ಬಳಿಕ ಆತ ಕೆನಡಾದಲ್ಲಿ ವಾಸಿಸುವುದನ್ನು ಮುಂದುವರೆಸಿದ್ದ. ಕೊನೆಗೆ ಅಲ್ಲಿನ ಪೌರತ್ವ ಪಡೆಯುವಲ್ಲಿ ಯಶಸ್ವಿ ಆಗಿದ್ದ. ಅಲ್ಲಿ ಕೆಲವು ಕಾಲ ಕಳೆದು ಅಲ್ಲಿ ಖಲಿಸ್ತಾನ್ ಕಮಾಂಡೋ ಫೋರ್ಸ್ ಎಂಬ ಭಯೋತ್ಪಾದನಾ ಗುಂಪನ್ನು ನಿರ್ವಹಿಸುತ್ತಿದ್ದ. 2013ರಲ್ಲಿ ನಿಜ್ಜರ್ ಪಾಕಿಸ್ತಾನಕ್ಕೆ ತೆರಳಿ ತಾರಾ ಜತೆ ಕಾಲ ಕಳೆದಿದ್ದ. ಪಾಕಿಸ್ತಾನದ ಗುರುದ್ವಾರದ ಮೇಲ್ಭಾಗದಲ್ಲಿ ತಾರಾ ಜೊತೆ ನಿಜ್ಜರ್ ಕಾಣಿಸಿಕೊಂಡಿರುವ ಫೊಟೋಗಳು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿವೆ.

ತಾರಾ, ತನ್ನ ನಂತರ KTF ಅನ್ನು ವಹಿಸಿಕೊಳ್ಳಲು ನಿಜ್ಜರ್‌ನನ್ನು ನೇಮಿಸಲು ಮುಂದಾಗಿದ್ದ. ಆದರೆ, ನಿಜ್ಜರ್ ಈ ಪ್ರಸ್ತಾಪವನ್ನು ನಿರಾಕರಿಸಿದ್ದ. ವರದಿ ಹೇಳಿದೆ. ನಂತರ, 2015 ರಲ್ಲಿ, ಅವರು ಕೆನಡಾದಲ್ಲಿ ಭಯೋತ್ಪಾದಕ ಸಂಘಟನೆಯ ಉಸ್ತುವಾರಿ ವಹಿಸುವಷ್ಟು ಬಲಿಷ್ಟವಾಗಿ ಬೆಳೆದಿದ್ದ.

ಪ್ರಕರಣದ ಹಿನ್ನೆಲೆ

ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು. ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿತ್ತು.

ಇದನ್ನೂ ಓದಿ: Manoj Kalyane: ಬಿಜೆಪಿ ಮುಖಂಡ, ಮಧ್ಯ ಪ್ರದೇಶ ಸಚಿವರ ಆಪ್ತನ ಹತ್ಯೆ; ಬೈಕ್‌ನಲ್ಲಿ ಬಂದು ಗುಂಡಿನ ಮಳೆಗೆರೆದ ದುಷ್ಕರ್ಮಿಗಳು

Continue Reading
Advertisement
Rahul Gandhi
ದೇಶ16 seconds ago

Rahul Gandhi: ಸಂಸತ್‌ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮಕ್ಕೆ ರಾಹುಲ್‌ ಗಾಂಧಿ ಚಕ್ಕರ್?

Viral Video
Latest26 mins ago

Viral Video: ಶಾಪಿಂಗ್‌ ಮಾಲ್‌ನ ಆಟಿಕೆ ರೈಲು ಪಲ್ಟಿಯಾಗಿ ಬಾಲಕ ಸಾವು

Team India
ಪ್ರಮುಖ ಸುದ್ದಿ28 mins ago

Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

karnataka Weather Forecast
ಮಳೆ30 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Artificial Colours Ban
ಪ್ರಮುಖ ಸುದ್ದಿ36 mins ago

Artificial Colours Ban: ರಾಜ್ಯದಲ್ಲಿ ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Divorce
ದೇಶ1 hour ago

Divorce: ತೂಕ ಇಳಿಸಿಕೊಳ್ಳಲು ನೆರವಾಗದ ‘ಜಿಮ್‌ ಟ್ರೇನರ್‌’ ಗಂಡನಿಗೆ ಮಹಿಳೆ ಡಿವೋರ್ಸ್‌!

Crush Saree Fashion
ಫ್ಯಾಷನ್1 hour ago

Crush Saree Fashion: ಸೆಲೆಬ್ರೆಟಿ ಲುಕ್‌ ನೀಡುವ ಡಿಸೈನರ್‌ ಕ್ರಶ್‌ ಸೀರೆಗಳು

ಕರ್ನಾಟಕ1 hour ago

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

union Minister Pralhad Joshi took oath in the name of God in his mother tongue
ಕರ್ನಾಟಕ1 hour ago

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Divisional Level Progress Review Meeting of Revenue Department by Minister Krishna Byregowda
ಕಲಬುರಗಿ1 hour ago

krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ30 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌