Shivamogga terror | ಎಂಥಾ ಅಪ್ಪನಿಗೆ ಎಂಥಾ ಮಗ: ಐಸಿಸ್‌ ಉಗ್ರ ಮತೀನ್‌ನ ತಂದೆ 26 ವರ್ಷ ಸೇನೆಯಲ್ಲಿದ್ದರು! - Vistara News

ಕರ್ನಾಟಕ

Shivamogga terror | ಎಂಥಾ ಅಪ್ಪನಿಗೆ ಎಂಥಾ ಮಗ: ಐಸಿಸ್‌ ಉಗ್ರ ಮತೀನ್‌ನ ತಂದೆ 26 ವರ್ಷ ಸೇನೆಯಲ್ಲಿದ್ದರು!

ಶಿವಮೊಗ್ಗದಲ್ಲಿ ಪತ್ತೆಯಾಗಿರುವ ಉಗ್ರ ಜಾಲದ ಹಿಂದೆ ಮತೀನ್‌ ಎಂಬ ಘೋಷಿತ ಉಗ್ರನ ಕೈವಾಡವಿದೆಯಾ ಎಂಬ ಪ್ರಶ್ನೆ ಹುಟ್ಟಿದೆ. ಈ ನಡುವೆ, ಆತನ ತಂದೆ ತನ್ನ ನೋವಿನ ಮಾತುಗಳನ್ನು ವಿಸ್ತಾರ ನ್ಯೂಸ್‌ ಜತೆ ಹಂಚಿಕೊಂಡಿದ್ದಾರೆ.

VISTARANEWS.COM


on

ಘೋಷಿತ ಉಗ್ರ ಅಬ್ದುಲ್‌ ಮತೀನ್‌ ಅಹಮದ್‌ ಮತ್ತು ಆತನ ತಂದೆ, ನಿವೃತ್ತ ಯೋಧ ಮನ್ಸೂರ್‌ ಅಹಮದ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ/ತೀರ್ಥಹಳ್ಳಿ: ಶಿವಮೊಗ್ಗವನ್ನು ಕೇಂದ್ರೀಕರಿಸಿಕೊಂಡು ಉಗ್ರ ಚಟುವಟಿಕೆಗೆ ಸಿದ್ಧತೆ ನಡೆಸುತ್ತಿದ್ದ ಉಗ್ರ ಜಾಲದ ಮೂವರನ್ನು ಮಟ್ಟ ಹಾಕುತ್ತಿದ್ದಂತೆಯೇ ಶಿವಮೊಗ್ಗದವನೇ ಆಗಿದ್ದು ಈಗ ಐಸಿಸ್‌ ಜತೆ ಕೈಜೋಡಿಸಿ ಹಲವು ದುಷ್ಕೃತ್ಯಗಳಲ್ಲಿ ಭಾಗವಹಿಸಿದ್ದ ಮತ್ತೊಬ್ಬ ಯುವಕನ ಹೆಸರು ಮುನ್ನೆಲೆಗೆ ಬಂದಿದೆ. ಅವನೇ ಅಬ್ದುಲ್‌ ಮತೀನ್ ಅಹಮದ್‌ ತಾಹಾ. ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿರುವ ಆತನ ಪತ್ತೆಗಾಗಿ ಹೈದರಾಬಾದ್‌ನ ಎನ್‌ಐಎ ಮೂರು ಲಕ್ಷ ರೂ. ಬಹುಮಾನ ಘೋಷಿಸಿದೆ.

ಇಂಥ ಉಗ್ರನ ತಂದೆ ಮನ್ಸೂರ್‌ ಮಹಮದ್‌ ಅವರು ೨೬ ವರ್ಷ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರು. ಒಂದು ಸಜ್ಜನ ಕುಟುಂಬವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಮಗನ ಹೆಸರು ಮತ್ತೆ ಮೇಲೆದ್ದು ಬಂದಿರುವುದು ಅವರ ನೋವನ್ನು ಇನ್ನಷ್ಟು ಹೆಚ್ಚಿಸಿದೆ. ಅದನ್ನು ಅವರು ವಿಸ್ತಾರ ನ್ಯೂಸ್‌ ಜತೆ ತೋಡಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯ ಮೀನು ಮಾರ್ಕೆಟ್‌ ರಸ್ತೆ ನಿವಾಸಿಯಾಗಿರುವ ಈತ ೨೦೨೦ರಿಂದ ಕಾಣೆಯಾಗಿದ್ದಾನೆ. ಈಗ ಬಯಲಾಗಿರುವ ಉಗ್ರ ಜಾಲದ ಕಿಂಗ್‌ ಪಿನ್‌ ಮಹಮ್ಮದ್‌ ಶಾರಿಕ್‌ ಕೂಡಾ ಇದೇ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯವನು. ಮತೀನ್‌ ಹಲವು ದುಷ್ಟ ಕೃತ್ಯಗಳಲ್ಲಿ ಭಾಗವಹಿಸಿರುವುದು ಈಗಾಗಲೇ ಬೆಳಕಿಗೆ ಬಂದಿದೆ. ಜತೆಗೆ ಅವನ ಕುಮ್ಮಕ್ಕಿನಿಂದಲೇ ಶಾರಿಕ್‌ ಉಗ್ರ ಜಾಲಕ್ಕೆ ಸೇರಿಕೊಂಡನೋ? ಅಥವಾ ಅವರಿಬ್ಬರೂ ಒಂದೇ ದೋಣಿಯ ಪಯಣಿಗರಾ ಎನ್ನುವ ಪ್ರಶ್ನೆಗಳು ಕಾಡುತ್ತಿವೆ.

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತೀನ್‌
೨೮ ವರ್ಷದ ಮತೀನ್‌ ತಮಿಳುನಾಡಿನಲ್ಲಿ ಹಿಂದೂ ಮುಖಂಡನ ಹತ್ಯೆ ಹಾಗೂ ರಾಜ್ಯದಲ್ಲಿ ಐಸಿಸ್ ಚಟುವಟಿಕೆ ನಡೆಸಿದ ʻಅಲ್ ಹಿಂದ್ ಐಸಿಸ್’ ಸಂಘಟನೆಯ ಸಕ್ರಿಯ ಸದಸ್ಯ.
ಐಸಿಸ್ ಪ್ರಚೋದಿತ ಗುಂಪಿನ ಮೆಹಬೂಬ್ ಪಾಷಾ, ಖಾಜಾ ಮೊಯಿದ್ದೀನ್ ಸೇರಿದಂತೆ ಇತರರನ್ನು ಎನ್ಐಎ ಬಂಧಿಸಿತ್ತು. ಈ ವೇಳೆ ಆರೋಪಿಗಳು ರಾಜ್ಯದ ಅಬ್ದುಲ್ ಮತೀನ್ ಜತೆ ನಂಟು ಹೊಂದಿರುವುದು ಬೆಳಕಿಗೆ ಬಂದಿತ್ತು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯದ ಮನೆಯಲ್ಲಿ 2019ರಲ್ಲಿ ಮೆಹಬೂಬ್ ಪಾಷಾ ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಲವು ಸಭೆಗಳನ್ನು ನಡೆಸಿದ್ದ. ಆ ಸಭೆಯಲ್ಲಿ ಅಬ್ದುಲ್ ಮತೀನ್ ಕೂಡ ಭಾಗಿಯಾಗಿದ್ದ. ಆರೋಪಿಗಳು ಇನ್ನೂ ಕೆಲ ಆರೋಪಿಗಳೊಂದಿಗೆ ಸೇರಿ ಸಭೆ ನಡೆಸಿದ್ದರು. ಆಫ್ಘಾನಿಸ್ತಾನ, ಸಿರಿಯಾದಲ್ಲಿ ಐಸಿಸ್ ಸೇರಿ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮುಸ್ಲಿಂ ಯುವಕರನ್ನು ಇವರು ಪ್ರಚೋದಿಸುತ್ತಿದ್ದರು.‌ ಈ ತಂಡದ ಹಲವರು ಈಗಾಗಲೇ ಜೈಲುಪಾಲಾಗಿದ್ದಾರೆ. ಆದರೆ ಮತೀನ್‌ ಮಾತ್ರ ತಪ್ಪಿಸಿಕೊಂಡಿದ್ದಾನೆ. ಅವನ ಪತ್ತೆಗಾಗಿ ಎನ್‌ಐಎ ತೀವ್ರ ಪ್ರಯತ್ನದಲ್ಲಿದೆ. ಮತೀನ್‌ ತನ್ನ ಊರಾದ ಶಿವಮೊಗ್ಗದಲ್ಲೇ ಬಾಂಬ್‌ ಸ್ಫೋಟಕ್ಕೆ ಸಂಚು ನಡೆಸಿದ್ದ ಎನ್ನುವುದು ಅತ್ಯಂತ ಭಯಾನಕವಾದ ಸಂಗತಿ.

ಸೈನಿಕನಾಗಿದ್ದ ಅಪ್ಪ ಹೇಳುವುದೇನು?
ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ವಾಸಿಸುತ್ತಿರುವ ಮನ್ಸೂರ್‌ ಅಹಮದ್‌ ಅವರು ವಿಸ್ತಾರ ನ್ಯೂಸ್‌ ಜತೆಗೆ ಮಾತನಾಡಿದ್ದಾರೆ. ತನ್ನ ಹಿರಿಯ ಮಗ ಈ ರೀತಿಯಾಗಿ ಉಗ್ರ ಸಂಘಟನೆಯ ಜತೆ ಸಂಬಂಧ ಹೊಂದಿರುವುದು ಅವರಿಗೆ ತುಂಬ ನೋವುಂಟು ಮಾಡಿದೆ. ಇಂಥ ಘಟನೆಗಳು ಮನೆಯವರಿಗೆ ನೀಡುವ ನೋವು, ಅವರು ಅನುಭವಿಸುವ ಯಾತನೆ ಈ ಮಕ್ಕಳಿಗೆ ಅರ್ಥವಾಗುವುದೇ ಇಲ್ಲ ಎಂದು ಹೇಳಿಕೊಂಡಿದ್ದಾರೆ.

ʻʻಅವನು ನನ್ನ ದೊಡ್ಡ ಮಗ. ಅವನಿಗೆ ೨೮ ವರ್ಷ. ನನ್ನ ಮತ್ತೊಬ್ಬ ಮಗ ಹೋಟೆಲ್‌ ಮ್ಯಾನೇಜ್ಮೆಂಟ್‌ ಮಾಡುತ್ತಿದ್ದಾನೆ. ಮಗಳು ಪಿಯುಸಿ. ಯತೀನ್‌ ಬಿಇ. ಮಾಡುತ್ತೇನೆ ಎಂದು ಬೆಂಗಳೂರಿಗೆ ಹೋಗಿದ್ದ. ಆದರೆ ವಿದ್ಯಾಭ್ಯಾಸ ಡಿಸ್‌ ಕಂಟಿನ್ಯೂ ಮಾಡಿದ್ದಾನೆ. ಎಂಜಿನಿಯರಿಂಗ್‌ ಅರ್ಧಕ್ಕೆ ಬಿಟ್ಟು ಖಾಸಗಿ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ. ೨೦೨೦ರಲ್ಲಿ ಅವನು ಇರುವ ಜಾಗದಲ್ಲಿ ಏನೋ ಸಮಸ್ಯೆ ಆಯಿತು ಅಂತ ಗೊತ್ತಾಯಿತು. ಮತೀನ್ 2020 ರಿಂದ ಇಲ್ಲಿಯವರೆಗೂ ಎಲ್ಲಿದ್ದಾನೆಂದು ಗೊತ್ತಿಲ್ಲ. ಆವತ್ತಿನಿಂದ ನಮಗೆ ಯಾವುದೇ ಸಂಪರ್ಕದಲ್ಲಿ ಇಲ್ಲʼʼ ಎಂದು ಹೇಳಿದರು ಮನ್ಸೂರ್‌ ಅಹಮದ್‌.

ʻʻನಾನು ೨೬ ವರ್ಷ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ಮಗ ಹೀಗೆ ಆಗಿದ್ದಾನೆ ಅಂತ ಯೋಚನೆ ಮಾಡುವುದಕ್ಕೂ ಸಾಧ್ಯವಾಗುತ್ತಿಲ್ಲ. ಅವನು ನಮ್ಮ ಮನೆಯ ಹಿರಿಮಗ. ನನ್ನ ಈ ವಯಸ್ಸಿನಲ್ಲಿ ಮನೆಗೆ ಆಧಾರವಾಗಿರಬೇಕಾಗಿದ್ದವನು. ಅವನಿಗೆ ಈ ಉಗ್ರರ ನಂಟು ಎಲ್ಲಿಂದ ಬಂತೋ ಗೊತ್ತಿಲ್ಲʼʼ ಎಂದು ಮನ್ಸೂರ್‌ ಅಹಮದ್‌ ಹೇಳಿದರು.

ʻʻಯಾರು ಬ್ರೇನ್‌ ವಾಷ್‌ ಮಾಡುತ್ತಾರೆ ಅಂತ ಗೊತ್ತಿಲ್ಲ. ಈಗ ಮೊಬೈಲ್‌ನಲ್ಲಿ ಯಾರ್ಯಾರು ಸಂಪರ್ಕಕ್ಕೆ ಸಿಗುತ್ತಾರೋ ಅವರೇನು ಹೇಳುತ್ತಾರೋ ಗೊತ್ತಿಲ್ಲ. ನಾವು ಅವನನ್ನು ಕಳೆದುಕೊಂಡಿದ್ದೇವೆ. ನೆಮ್ಮದಿಯನ್ನು ಕಳೆದುಕೊಂಡಿದ್ದೇವೆ. ನಮ್ಮ ನೋವು ನಮಗೆ ಮತ್ತು ದೇವರಿಗೆ ಮಾತ್ರ ಗೊತ್ತುʼʼ ಎಂದು ನೋವಿನಿಂದ ಹೇಳಿಕೊಂಡರು ಮನ್ಸೂರ್‌.

ವಿದ್ಯಾವಂತ ಯುವಕರೇ ಹೀಗೇಕಾಗುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರೆಲ್ಲ ವಿದ್ಯಾವಂತರಾಗಿ ಮನೆಗೆ ಆಧಾರವಾಗಬೇಕು. ಅದರೆ, ಅವರೇ ಭಾಗವಾಗುತ್ತಿರುವುದು ನಮಗೆ ದಿಕ್ಕು ತೋಚದಂತಾಗಿದೆ ಎಂದರು. ಈಗ ಉಗ್ರ ಜಾಲದಲ್ಲಿದ್ದಾರೆಂದು ಗುರುತಿಸಲಾಗಿರುವ ಶಾರಿಕ್‌, ಯಾಸಿನ್‌, ಮಾಝ್‌ ಎಲ್ಲ ಸ್ನೇಹಿತರಾ ಎಂಬ ಪ್ರಶ್ನೆಗೆ, ಒಂದೇ ಊರಿನ ಮಕ್ಕಳು, ಸ್ನೇಹಿತರು ಹೌದೋ ಅಲ್ವೋ ಗೊತ್ತಿಲ್ಲ ಎಂದರು ಮನ್ಸೂರು.
ಬೆಳೆದು ಆಸರೆಯಾಗಿರಬೇಕಾಗಿದ್ದ ಮಕ್ಕಳು ಈ ರೀತಿ ದಿಕ್ಕು ತಪ್ಪಿ ಉಗ್ರರಾಗುತ್ತಿರುವುದು ಈ ಮಾಜಿ ಸೈನಿಕನ ಮನಸ್ಸಲ್ಲಿ ಗಾಢವಾದ ನೋವು ಉಂಟು ಮಾಡಿದ್ದು ಮಾತಿನ ಮಧ್ಯೆ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ | Shivamogga terror | ಉಗ್ರ ಮತೀನ್ ಜತೆ ನಿಕಟ ಸಂಪರ್ಕ ಹೊಂದಿದ್ದ ಶಾರಿಕ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರ ಬೆನ್ನಲ್ಲೇ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

VISTARANEWS.COM


on

Victoria Hospital
Koo

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ವಜಾ ಅಗಿದ್ದ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ. ಕೆಲಸ ಕೂಲಿ ಕೇಳಿದ್ದಕ್ಕೆ ವಜಾ ಮಾಡಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ಸಿಬ್ಬಂದಿ ಪ್ರತಿಭಟನೆ ನಡೆಸಿ ಅಕ್ರೋಶ ಹೊರಹಾಕಿದ್ದರು. ಇದೀಗ ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರಿಂದ ಎಚ್ಚೆತ್ತುಕೊಂಡ ವಿಕ್ಟೋರಿಯಾ ಆಸ್ಪತ್ರೆ ಆಡಳಿತ ಮಂಡಳಿ, ವಜಾಗೊಂಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದೆ.

ಹೊಸ ಏಜೆನ್ಸಿ ಬಂದ ಹಿನ್ನೆಲೆ ಸುಮಾರು 55 ಮಂದಿಯನ್ನು ಕೈಬಿಡಲಾಗಿತ್ತು. ಏಜೆನ್ಸಿ ಹಾಗೂ ಆಡಳಿತ ಮಂಡಳಿ ನಿರ್ಲಕ್ಷ್ಯದ ಹಿನ್ನೆಲೆ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆ ಬೆನ್ನಲ್ಲೇ ಸಭೆ ನಡೆಸಿದ್ದ ಹಿರಿಯ ಅಧಿಕಾರಿಗಳು, ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಿದ್ದಾರೆ.

ಇದನ್ನೂ ಓದಿ | Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ವಜಾ ಮಾಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದ್ದು, ಕಳೆದ ಎರಡು ತಿಂಗಳ ಸಂಬಳ ಸಹ ಶೀಘ್ರ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು & ಸಂಶೋಧನಾ ಸಂಸ್ಥೆ ನಿರ್ದೇಶಕ ರಮೇಶ್ ಕೃಷ್ಣ ಮಾಹಿತಿ ನೀಡಿದ್ದಾರೆ.

ಕಳೆದ 20 ವರ್ಷಗಳಿಂದ ಸಿಬ್ಬಂದಿ ಡಿ ಗ್ರೂಪ್ ನೌಕರರಾಗಿ ಹೊರಗುತ್ತಿಗೆ ಆಧಾರದಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳು ಹಿಂದೆ ಏಜೆನ್ಸಿ ಬದಲಾದ ಹಿನ್ನೆಲೆ ಈ ಎಲ್ಲರನ್ನೂ ಕೈ ಬಿಡುವ ಮಾತು ಕೇಳಿಬಂದಿತ್ತು. ಆದರೆ ಕೆಲಸದಿಂದ ಕೈ ಬಿಡಲ್ಲ ಅಂತ ಹೇಳಿದ್ದ ಹೊಸ ಏಜೆನ್ಸಿ ಇವರೆಲ್ಲರನ್ನೂ ಮುಂದುವರಿಸಿತ್ತು. ಆದರೆ ಕೆಲಸ ಮಾಡಿಸಿಕೊಂಡಿತೇ ಹೊರತು ಸಂಬಳ ಮಾತ್ರ ನೀಡಿರಲಿಲ್ಲ.

ಇದನ್ನೂ ಓದಿ | Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಯಾಕೆ ಸಂಬಳ ನೀಡಿಲ್ಲ ಅಂತ ಕಳೆದ 4 ದಿನಗಳ ಹಿಂದೆ ಕೇಳಿದಾಗ ನಿಮ್ಮನ್ನು ಕೆಲಸದಿಂದ ಕೈಬಿಡಲಾಗಿದೆ ಅಂತ ಏಜೆನ್ಸಿ ಹೇಳಿದೆ. ಈ ವಿಷಯ ಕೇಳಿ ದಿಗ್ಭ್ರಾಂತರಾದ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ಪಷ್ಟನೆ ಕೇಳಲು ಮುಂದಾಗಿದ್ದರು. ಬಳಿಕ ವಿವಿ ಪುರಂ ಪೊಲೀಸರು ಅಲ್ಲಿಂದ ಎಲ್ಲರನ್ನೂ ಬೇರೆಡೆಗೆ ಕರೆದೊಯ್ದು ಪರಿಸ್ಥಿತಿ ತಿಳಿಗೊಳಿಸಿದ್ದರು. ಮರು ನೇಮಕ ಮಾಡಿದ್ದರಿಂದ ಕೆಲಸ ಕಳೆದುಕೊಂಡು ಕಂಗಾಲಾಗಿದ್ದ ಸಿಬ್ಬಂದಿ ನಿರಾಳರಾಗಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಯಾವಾಗ ವಿದೇಶದಿಂದ ಭಾರತಕ್ಕೆ ಬರಲಿದ್ದಾರೆ ಎಂದು ತನಿಖಾಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಯಾವಾಗ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ನಾಳೆಯೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Continue Reading

ಉತ್ತರ ಕನ್ನಡ

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Uttara Kannada News: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ಭಾವ ರಾಮಾಯಣ- ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ ಆರಂಭವಾದವು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

VISTARANEWS.COM


on

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
Koo

ಗೋಕರ್ಣ: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಭಾವ ರಾಮಾಯಣ-ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ (Uttara Kannada News) ಆರಂಭವಾದವು.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ‌ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

ರಾಮಾಯಣದ ಅನುಸಂಧಾನ ಅನಿರ್ವಚನೀಯ ಆನಂದವನ್ನು ಕೊಡುವಂಥದ್ದು. ಬದುಕಿಗೆ ಯಾವುದು ಹಿತ ಯಾವುದು ಅಹಿತ ಎನ್ನುವುದನ್ನು ರಾಮಾಯಣ ತಿಳಿಸಿಕೊಡುತ್ತದೆ. ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ವಿಶ್ಲೇಷಿಸಿದರು.

ಇದನ್ನೂ ಓದಿ: Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ರಾಮಾಯಣವನ್ನು ವಾಲ್ಮೀಕಿ ಸೀತಾಚರಿತೆ ಎಂದೂ ಕರೆದಿದ್ದಾರೆ. ರಾಮಾವತರಣದ ಕೊನೆಯಲ್ಲಿ ಬ್ರಹ್ಮ ಹೇಳುವಂತೆ ರಾಮ ಸಾಕ್ಷಾತ್ ವಿಷ್ಣುವಿನ ಅವತಾರ, ಸೀತೆ ಲಕ್ಷ್ಮಿಯ ಅವತಾರ. ರಾವಣ ಸಂಹಾರಕ್ಕಾಗಿ ವಿಷ್ಣು ಮನುಷ್ಯ ರೂಪದಲ್ಲಿ ಭುವಿಗೆ ಅವತರಿಸುತ್ತಾನೆ ಎಂದು ಶ್ರೀಗಳು ತಿಳಿಸಿದರು. ಬದುಕಿನಲ್ಲಿ ನಮಗೆ ಬೇಕಾದ ಎಲ್ಲವನ್ನೂ ಕೊಡುವಂಥದ್ದು ರಾಮಾಯಣ. ಇದರ ಅನುಸಂಧಾನದ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದರು.

ಝೂಮ್ ಮಾಧ್ಯಮದ ಮೂಲಕ ಶ್ರೀಗಳು ತರಗತಿ ನಡೆಸಿಕೊಟ್ಟರು. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಕೂಡಾ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

ಕಾರ್ಯಕ್ರಮದಲ್ಲಿ ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಪ್ರೊ.ಕೆ.ಎಸ್.ಕಣ್ಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಕೃತ ವಿವಿ ಕುಲಸಚಿವ ಡಾ.ರಾಮಕೃಷ್ಣ ಭಟ್ ಕೂಟೇಲು ನಿರೂಪಿಸಿದರು.

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading
Advertisement
Victoria Hospital
ಕರ್ನಾಟಕ11 mins ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ27 mins ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ2 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ2 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ2 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ2 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ3 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ3 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Narendra Modi
ಪ್ರಮುಖ ಸುದ್ದಿ3 hours ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ4 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20246 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202410 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ10 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು11 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ18 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌