Mahalaya 2022 | ಮಹಾಲಯದ ವಿಶೇಷವೇನು? ಶ್ರಾದ್ಧಕ್ಕೆ ಪ್ರಶಸ್ತವಾದ ದಿನ ಯಾವುದು? - Vistara News

ಧಾರ್ಮಿಕ

Mahalaya 2022 | ಮಹಾಲಯದ ವಿಶೇಷವೇನು? ಶ್ರಾದ್ಧಕ್ಕೆ ಪ್ರಶಸ್ತವಾದ ದಿನ ಯಾವುದು?

ಈಗ ಪಿತೃಪಕ್ಷ (Pitru Paksha) ನಡೆಯುತ್ತಿದ್ದು, ಮಹಾಲಯ ಅಮಾವಾಸ್ಯೆಯೂ (Mahalaya 2022) ಬರುತ್ತಿದೆ. ಈ ಸಂದರ್ಭದಲ್ಲಿ ನಡೆಸಬೇಕಿರುವ ಪಿತೃಕಾರ್ಯಗಳ ಮಹತ್ವವನ್ನು ತಿಳಿಸುವ ಲೇಖನ ಮಾಲಿಕೆಯ ಮೊದಲ ಭಾಗ ಇಲ್ಲಿದೆ.

VISTARANEWS.COM


on

Mahalaya 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Mahalaya 2022

ಶ್ರೀ ಶ್ರೀ ರಂಗಪ್ರಿಯ ಶ್ರೀ ಶ್ರೀಃ
ಮಹಾಲಯ (Mahalaya 2022) ಎಂಬುದು ಭಾರತಾದ್ಯಂತ ಆಚರಿಸಲ್ಪಡುವ ಹಬ್ಬ. ಭಾರತೀಯರೆಲ್ಲರೂ ಕೂಡ ಆಚರಿಸುವ ಒಂದು ಪುಣ್ಯವಾದ ಪರ್ವ. ಎಲ್ಲ ಜನಾಂಗದವರೂ ಎಲ್ಲ ಗೃಹಸ್ಥರೂ ಕೂಡ ಪಿತೃಗಳನ್ನು ನೆನೆದು ಕೃತಜ್ಞತೆಯಿಂದ ಆಚರಿಸುವ ಹಬ್ಬದ ಕಾಲವಾಗಿರುವುದರಿಂದ ಮಹಾಲಯಪರ್ವ ಅತಿ ಶ್ರೇಷ್ಠವಾದದ್ದು. ಆಚರಣೆಯ ಕ್ರಮದಲ್ಲಿ ವ್ಯತ್ಯಾಸವಿರಬಹುದು. ಪಿತೃದೇವತೆಗಳ ಪೂಜೆಯನ್ನು ವಿಶೇಷವಾಗಿ ಈ ಸಮಯದಲ್ಲಿ ಮಾಡುತ್ತಾರೆ. ಮತ್ತು ಪಿತೃದೇವತೆಗಳಿಗೆ ಪ್ರಿಯವಾಗಿರುವ ಪದಾರ್ಥಗಳು, ಎಂದರೆ, ಜೇನುತುಪ್ಪ, ಎಳ್ಳು, ತಣ್ಣಗಿರುವ ನೀರು, ಇವುಗಳಿಂದ ತರ್ಪಣವನ್ನು ನೀಡುತ್ತಾರೆ.

ಈ ಹಬ್ಬದ ವಿಶೇಷತೆ, ಮಹತ್ವವನ್ನು ಇಲ್ಲಿ ಪ್ರಶ್ನೋತ್ತರ ಮಾದರಿಯಲ್ಲಿ ತಿಳಿಸಿಕೊಡಲಾಗಿದೆ.

ಮಹಾಲಯವನ್ನು ಎಂದು ಆಚರಿಸಬೇಕು?
ಉತ್ತರ: ಭಾದ್ರಪದ ಮಾಸದ ಕೃಷ್ಣ ಪಕ್ಷದ ೧೫ ದಿವಸಗಳನ್ನು ಮಹಾಲಯ (Mahalaya 2022) ಪಕ್ಷ ಎಂದು ಕರೆಯುವ ರೂಢಿ ಇದೆ. ಕೆಲವು ಕಲ್ಪಗಳಲ್ಲಿ ೧೬ ದಿವಸಗಳನ್ನೂ ಮಹಾಲಯ ಪಕ್ಷ ಎಂದು ಹೇಳುತ್ತಾರೆ. ಅದರ ಮುಂದಿನ ತಿಂಗಳು ಮೊದಲನೆಯ ದಿವಸದಲ್ಲಿ ಚಂದ್ರನಲ್ಲಿ ಎರಡು ಕಲೆಗಳು ಮಾತ್ರ ಇರುವುದರಿಂದ ಅದನ್ನೂ ಇದನ್ನೂ ಸೇರಿಸಿಕೊಂಡು ೧೬ ದಿವಸ ಮಹಾಲಯ ಪಕ್ಷ ಎನ್ನುತ್ತಾರೆ. ಎಂದರೆ, ೧೫ ದಿವಸ ಅಥವಾ ೧೬ ದಿವಸದ ಕೃಷ್ಣ ಪಕ್ಷದ ಕಾಲವನ್ನು ಮಹಾಲಯ ಪಕ್ಷ ಎಂಬುದಾಗಿ ಕರೆಯುತ್ತಾರೆ. ಇದು ಪ್ರಾಸಂಗಿಕವಾದ ವಿಷಯ ಮಾತ್ರವಲ್ಲದೆ ನಮ್ಮ ದೇಶದಲ್ಲಿ ಎಲ್ಲಾ ಭಾಗಗಳಲ್ಲಿಯೂ ಕೂಡ ಪುರಾತನವಾಗಿರುವ, ಸನಾತನ ಸಂಸ್ಕಾರಕ್ಕೆ ಒಳಪಟ್ಟಿರುವ ಎಲ್ಲರೂ ಕೂಡ ಭಕ್ತಿ ಶ್ರದ್ಧೆಯಿಂದ ಆಚರಿಸತಕ್ಕಂತಹ ಒಂದು ಕರ್ಮಕ್ಕೆ ಅತ್ಯಂತ ಪ್ರಶಸ್ತವಾದ ಕಾಲ ಮಹಾಲಯ ಪಕ್ಷಕಾಲ.

ಈ ಕಾಲವನ್ನು ಹಳ್ಳಿ ೧೮ ಜಾತಿಗಳೂ ಕೂಡ ಅತ್ಯಂತ ಕೃತಜ್ಞತೆಯಿಂದ ಪಿತೃಪೂಜೆಗೋಸ್ಕರವಾಗಿ ಉಪಯೋಗಿಸಿಕೊಳ್ಳುತ್ತಾರೆ. ಈ ಭಾದ್ರಪದಮಾಸದ ಜೊತೆಗೆ ಸೂರ್ಯನು ಕನ್ಯಾರಾಶಿಗೆ ಪ್ರವೇಶ ಮಾಡುತ್ತಾನೆ. ಆದ್ದರಿಂದ ಕನ್ಯಾ ಮಾಸವೆಂದು ಕರೆಯುತ್ತಾರೆ. ’ಕನ್ಯಾ ಗತೇ ಸವಿತರಿ’ ಸೂರ್ಯನು ಕನ್ಯಾರಾಶಿಗೆ ಪ್ರವೇಶ ಮಾಡಿದಾಗ ಕನ್ಯಾ ಮಾಸವೂ ಸೇರಿಕೊಂಡರೆ ಇನ್ನೂ ಪ್ರಶಸ್ತ ಇದು. ಕನ್ಯಾಮಾಸ ಬರದೇಹೋದರೂ ಭಾದ್ರಪದಮಾಸ ಕೃಷ್ಣಪಕ್ಷ (ಅಪರ ಪಕ್ಷ) ಮಹಾಲಯಕ್ಕೆ ಪ್ರಶಸ್ತವಾದದ್ದು. ಸೂರ್ಯನು ಕನ್ಯಾರಾಶಿಯಲ್ಲಿ ಸೇರಿಕೊಂಡಾಗ ಇನ್ನೂ ವಿಶೇಷ ಪ್ರಾಶಸ್ತ್ಯ ಉಂಟು ಅದಕ್ಕೆ. “ನಭಸ್ಯಸ್ಸ ಅಪರೇ ಪುಣ್ಯಃ ಪುಣ್ಯಃ ಕನ್ಯಾಗತೋ ರವಿಃʼʼ ನಭಸ್ಯ ಎಂದರೆ ಭಾದ್ರಪದ ಮಾಸ. ಅದರಲ್ಲಿ, ಅಪರಪಕ್ಷ ಪುಣ್ಯವಾದದ್ದು ಮತ್ತು ಸೂರ್ಯ ಕನ್ಯಾರಾಶಿ ಪ್ರವೇಶಮಾಡಿದ್ದೂ ಕೂಡಿಬಂದರೆ ಅದು ಪುಣ್ಯತಮವಾದದ್ದು ಎಂಬುದಾಗಿ ಶಾಸ್ತ್ರಗಳಲ್ಲೂ ಪ್ರಶಂಸೆ ಮಾಡಿದ್ದಾರೆ, ಈ ಪುಣ್ಯಕಾಲವನ್ನು.

Mahalaya 2022

“ಮಹಾಲಯ’ʼ ಪದದ ಅರ್ಥವೇನು?
ಉತ್ತರ: ಲಯ ಎಂದರೆ ಎಲ್ಲವೂ ಕೂಡ ತನ್ನ ಮೂಲದಲ್ಲಿ ಹೋಗಿ ಸೇರಿ ಕೊಂಡುಬಿಡತಕ್ಕದ್ದು. ತನ್ನ ಹಿಂದಿನ ರೂಪವನ್ನು ತೋರದೆ, ಮೂಲರೂಪದಲ್ಲಿ ಒಂದಾಗಿ ಸೇರಿಕೊಂಡುಬಿಡುವುದು. ಲಯವಾಗಿಬಿಡುವುದು. Absorb ಆಗಿಬಿಡುತ್ತದೆ ಮೂಲದಲ್ಲಿ. ಅಂತಹ ದೊಡ್ಡ absorption ಲಯ ಆಗಿಬಿಡುತ್ತದೆ ಮೂಲದಲ್ಲಿ. ಆ ಕಾರಣದಿಂದ ಮಹಾಲಯ ಎಂದು ಶಬ್ದಾರ್ಥ ಹೇಳುತ್ತದೆ. ಆದರೆ ಸಾಂಪ್ರದಾಯಿಕ ಗ್ರಂಥಗಳಲ್ಲಿ ಮಹಾಲಯಕ್ಕೆ ವಿವರಣೆ ಕೊಡುವಾಗ “ಮಹಾಂತಃ ಲೀಯಂತೇ ಅಸ್ಮಿನ್ ಇತಿ ಮಹಾಲಯಃ” ಮಹಾಂತರು ಎಂದರೆ ದೊಡ್ಡವರು, ಪಿತೃಗಳು. “ಅಸ್ಮಿನ್ ಲೀಯಂತೇ” ಎಂದರೆ ಇದರಲ್ಲಿ ಬಂದು ಸೇರಿಕೊಳ್ಳುತ್ತಾರೆ. ಇದನ್ನು ಮನೆಯಾಗಿ ಮಾಡಿಕೊಳ್ಳುತ್ತಾರೆ. ಇಲ್ಲಿ ಬಂದು ಸಂತೋಷವಾಗಿ ವಿಹರಿಸುತ್ತಾರೆ. ತಮ್ಮ ಮನೆಯಲ್ಲಿ ಹೇಗೆ ವಿಶ್ರಾಂತಿ ಪಡೆಯುತ್ತಾರೆಯೋ ಧಾರಾಳವಾಗಿ, ಹಾಗೆಯೇ ವಿಶಿಷ್ಟವಾದ ಈ ಅಪರಪಕ್ಷದಲ್ಲಿ ಇದ್ದು ಅವರು ಸುಖವನ್ನು ಅನುಭವಿಸುತ್ತಾರೆ. ಆ ಮಹಾಂತರೆಲ್ಲರೂ ಕೂಡ ಮನೆಯನ್ನಾಗಿ ಮಾಡಿಕೊಳ್ಳುವುದರಿಂದ ಇದಕ್ಕೆ ಮಹಾಲಯ. ಮಹಾತ್ಮರಾದ ಪಿತೃದೇವತೆಗಳೂ ಕೂಡ ಮನೆಯನ್ನು ಮಾಡಿಕೊಳ್ಳುವ ಜಾಗ, ಮನೆಯಲ್ಲಿ ರುವಂತೆಯೇ ಸುಖವಾಗಿರುವ ಕಾಲ ವಿಶೇಷ. ಲಯ ಎಂದರೆ ಸಂಸ್ಕೃತದಲ್ಲಿ ಮನೆ ಎಂಬ ಅರ್ಥವಾಗುತ್ತದೆ. “ವಿಷಂ ಪೀತ್ವಾ ಲಯಂ ಗತಃ’ ಈ ಮಹಾತ್ಮ ವಿಷ ಕುಡಿದು ಲಯಕ್ಕೆ ಹೋದ ಎಂದರೆ ವಿಷವನ್ನು ಕುಡಿದು ಸತ್ತು ಹೋಗಿಬಿಟ್ಟ ಎನ್ನುವ ಅರ್ಥವಲ್ಲ! ವಿಷಂ ಎಂದರೆ ಜಲ. “ಜಲಂ ಪೀತ್ವಾ ಗೃಹಂ ಗತಃʼʼ ಲಯ ಎಂದರೆ ಗೃಹ ಎನ್ನುವ ಅರ್ಥ ಇದೆ. ಆದ್ದರಿಂದ ಮಹಾಂತರು- ಪಿತೃಗಳು ಗೃಹವನ್ನಾಗಿ ಮಾಡಿಕೊಳ್ಳುವುದರಿಂದ ಮಹಾಲಯ ಎಂಬ ಹೆಸರು.

ಆದರೆ ಮೂಲತಃ ನೋಡುವ ಪಕ್ಷಕ್ಕೆ ದೊಡ್ಡ ಲಯ ಉಂಟಾಗುತ್ತದೆ ಈ ಸಮಯದಲ್ಲಿ. ಯಾವುದು ಯಾವುದರಲ್ಲಿ ಲಯ ಹೊಂದುತ್ತದೆ ಎಂದರೆ ಇಂದ್ರಿಯ, ಮನಸ್ಸು, ಬುದ್ಧಿ ಎಲ್ಲವೂ ಕೂಡ ತನ್ನ ಮೂಲದಲ್ಲಿ ಲಯ ಹೊಂದುತ್ತವೆ. ಯೋಗ ಮಾರ್ಗದಲ್ಲಿ, ಜ್ಞಾನಮಾರ್ಗದಲ್ಲಿ ಹೋಗುವಾಗ ಭೂತಶುದ್ಧಿಯು ಒದಗುವಾಗ ತತ್ತ್ವಗಳು ತಮ್ಮ ಹಿಂದಿನ ತತ್ತ್ವದಲ್ಲಿ ಹೋಗಿ ಲಯ ಹೊಂದುತ್ತವೆ. ಅದು ಯೋಗಿಗೆ ಯಾವಾಗ ಬೇಕಾದರೂ ಆಗಬಹುದು. ಕಾಲವೂ ಅದಕ್ಕೆ ಅನುಗುಣ ವಾಗಿರುವುದರಿಂದ, ಈ ಸಮಯದಲ್ಲಿ ಪ್ರಕೃತಿಯಲ್ಲಿ ಲಯವು ಸಹಜವಾಗಿ, ಸುಲಭವಾಗಿ ಆಗುವ ಕಾಲವಾದ್ದರಿಂದ ಇದನ್ನು ಬರೀ ಲಯವಲ್ಲ, ಮಹಾಲಯ ಎಂದು ಕರೆಯುತ್ತಾರೆ.

ಈ ಮನೋಲಯವಾದಾಗ ಆಗಬೇಕಾದ ಕೆಲಸವೆಂದರೆ ಪಿತೃಗಳ ಪೂಜೆ. ಈ ಪಿತೃದೇವತೆಗಳ ಪೂಜೆಯನ್ನು ವಿಶೇಷವಾಗಿ ಹೊಂದಿರುವ ಅದಕ್ಕನುಗುಣವಾಗಿ ತತ್ತ್ವಗಳು ಲಯವನ್ನು ಹೊಂದಿರತಕ್ಕಂತಹ, ಇನ್ನೂ ಒಳಗಡೆ ಪ್ರವೇಶಿಸಿದರೆ ಪಿತೃಗಳಿಗೂ ಮೂಲಭೂತವಾಗಿರುವ ಅಷ್ಟ ಪ್ರಕೃತಿಗಳು. ಅದಕ್ಕೂ ಮೂಲವಾಗಿರುವ ಹಿರಣ್ಯಗರ್ಭ. ಅದಕ್ಕೂ ಮೂಲವಾಗಿರುವ ಪರಂಜ್ಯೋತಿ. ಅಲ್ಲಿಯವರೆಗೂ ಮಹಾಲಯ ಮಾಡುವ ಸಾಧ್ಯತೆಗಳಿವೆ. ದಾರಿಯಲ್ಲಿ ಪಿತೃದೇವತೆಗಳಿಗೆ ನಮಸ್ಕರಿಸಿ, ನಮ್ಮನ್ನು ಪ್ರವೃತ್ತಿಮಾರ್ಗಕ್ಕೆ ತರಬೇಡಿ, ಇನ್ನೂ ಮೇಲಕ್ಕೆ ಕಳುಹಿಸಿಕೊಡಿ ಎಂದು ಪ್ರಾರ್ಥಿಸಿ ಪರಬ್ರಹ್ಮದವರೆಗೂ ತಲುಪುವುದಕ್ಕನುಗುಣವಾಗಿ ಲಯವಾಗುತ್ತದೆ. ಮನೋಲಯವಾಗುತ್ತದೆ. ತತ್ತ್ವದ ಲಯವಾಗುತ್ತದೆ. ಅದಕ್ಕೆ ಅನುಗುಣವಾಗಿರುವ, ಅನುಕೂಲಕರವಾಗಿರುವ ಒಂದು ಕಾಲ/ಪಕ್ಷ ಇದು ಆಗಿರುವುದರಿಂದ ಇದನ್ನು ಪಿತೃಪಕ್ಷ “ಮಹಾಲಯಪಕ್ಷ’ʼ ಎಂಬುದಾಗಿ ಕರೆಯುತ್ತಾರೆ.

ಮಹಾಲಯ ಶ್ರಾದ್ಧವು ನಿತ್ಯ ಕರ್ಮವೋ? ಕಾಮ್ಯ ಕರ್ಮವೋ?
ಉತ್ತರ: ಮಹಾಲಯ ನಿತ್ಯಕರ್ಮಗಳಿಗೆ ಸೇರಿದ್ದು. ನಿತ್ಯಕರ್ಮ ಎಂದು ಏಕೆ ಒತ್ತಿ ಹೇಳುತ್ತೇವೆ ಎಂದರೆ, ಕೆಲವರು ನಿತ್ಯಕರ್ಮ ಅಲ್ಲ ಇದು, ಕಾಮ್ಯಕರ್ಮ ಎಂದು ಹೇಳುತ್ತಾ ಕಾಮನೆ ಯಾರಿಗೆ ಇದೆಯೋ ಅವರು ಮಾಡಬೇಕು. ಇಲ್ಲದಿದ್ದರೆ ಮಾಡಬೇಕಾಗಿಲ್ಲ ಎಂದು ಹೇಳುತ್ತಾರೆ. ಅವರು ಕಾಮ್ಯಕರ್ಮ ಎಂದು ಹೇಳಲು ಕಾರಣವೇನೆಂದರೆ ಮಹಾಲಯ ತರ್ಪಣವನ್ನು ಪ್ರಥಮೆಯಲ್ಲಿ ಮಾಡಿದರೆ ಇಂತಹ ಫಲ, ದ್ವಿತೀಯೆಯಲ್ಲಿ ಮಾಡಿದರೆ ಇಂತಹ ಫಲ, ಅಮಾವಾಸ್ಯೆಯಲ್ಲಿ ಮಾಡಿದರೆ ಇಂತಹ ಫಲ ಎಂದು ಬೇರೆ ಬೇರೆ ಫಲಗಳನ್ನು ಹೇಳಿದೆ. ಆದ್ದರಿಂದ ಕಾಮ್ಯಕರ್ಮ ಎನ್ನುತ್ತಾರೆ. ಆದರೆ ಕಾಮ್ಯಕರ್ಮ ಎಂದು ಹೇಳುವ ಉದ್ದೇಶವೇನೆಂದರೆ, ಆ ಕಾಮನೆ ಇಟ್ಟುಕೊಂಡು ಮಾಡಿದರೆ ಆ ಫಲ ಸಿಗುತ್ತದೆ. ಕಾಮನೆ ಇಟ್ಟುಕೊಳ್ಳದೆ ಕೇವಲ ಭಗವತ್ಪ್ರೀತ್ಯರ್ಥವಾಗಿ ಮಾಡಿದರೆ ಪಿತೃಗಳಿಗೂ, ಪಿತೃಗಳಿಗೂ ಪಿತೃವಾಗಿರುವ ಬ್ರಹ್ಮದೇವರಿಗೂ, ಅವರಿಗೂ ಪಿತೃವಾಗಿರುವ ಪರಮಾತ್ಮನಿಗೂ ತೃಪ್ತಿಯನ್ನು ಉಂಟು ಮಾಡುತ್ತದೆ ಈ ಕರ್ಮ. ಇದು ನಿತ್ಯಕರ್ಮವೇ. ಕಾಮ್ಯಕರ್ಮವಲ್ಲ. ಕಾಮನೆಯಿಂದ ಮಾಡಿದರೆ ಮಾತ್ರ ಕಾಮ್ಯವಾಗುತ್ತದೆ.

ಕಾಮ್ಯಕರ್ಮಗಳನ್ನು ಕೂಡ ಗೃಹಸ್ಥರಾದವರು ಆಚರಿಸಿದರೆ ಅದನ್ನು ತಪ್ಪು ಎಂದು ಹೇಳಬಾರದು. ಭಗವದ್ಗೀತೆಯಲ್ಲಿ ಭಗವಂತ, ’ಧರ್ಮಾವಿರುದ್ಧೋ ಭೂತೇಷು ಕಾಮೋಸ್ಮಿ ಭರತರ್ಷಭ’ ಪ್ರಾಣಿಗಳಲ್ಲಿ ಧರ್ಮಕ್ಕೆ ವಿರುದ್ಧವಲ್ಲದೇ ಇರತಕ್ಕಂತಹ ಕರ್ಮಗಳೆಲ್ಲಾ ನಾನೇ ಆಗಿದ್ದೇನೆ. ಅದು ಪವಿತ್ರವಾದದ್ದು’ ಎಂದು ಹೇಳುತ್ತಾನೆ. “ಅವರು ಯಾವ ಕಾಮ್ಯಕರ್ಮಗಳನ್ನೂ ಮಾಡುವುದಿಲ್ಲ. ಉದಕಶಾಂತಿ ಮಾಡಿದರೆ ಬೇರೆಬೇರೆ ಸ್ತೋತ್ರ ಬರುತ್ತದೆ. ಕಾಮ್ಯ ಕಾರಣದ ಶಾಂತಿ ಮಾಡುವುದಿಲ್ಲ. ಶಾಂತಿ ಬೇಡ ಅವರಿಗೆ” ಎಂದು ಹೇಳಬಾರದು. ಹಾಗೆ ಹೇಳಿದರೆ, ಔಷಧಿಯೇ ತೆಗೆದು ಕೊಳ್ಳಬಾರದು. ಔಷಧಿ ತೆಗೆದುಕೊಳ್ಳಬೇಕಾದರೆ, ಏನು ಸಂಕಲ್ಪ ಮಾಡುತ್ತೀರಿ? ಈ ಜ್ವರ ಹೋಗಲಿ ಎಂಬ ಕಾಮನೆಯಿಂದ. ಆ ಕಾಮನೆ ಇಟ್ಟುಕೊಂಡು ಔಷಧಿ ಸೇವಿಸ ಬಾರದು ಎಂದರೆ ಎಂತಹ ಮೂರ್ಖತನ ಇದು? ಔಷಧಿ ಸೇವಿಸಿದ ಪಕ್ಷದಲ್ಲಿ ಎಂತಹ ಒಳ್ಳೆಯ ಕೆಲಸವನ್ನು ಮಾಡುತ್ತದೆ ನೋಡಿ ಅದು. ಇಂತಹ ಕಾಮ್ಯಕರ್ಮಗಳು ಭಗವಂತನಿಗೆ ಪ್ರಿಯವಾದದ್ದು ಎಂದು ಆಚಾರ್ಯರು ತತ್ತ್ವಮುಕ್ತಾಕಲಾಪದಲ್ಲಿ “ತಸ್ಮಾತ್ ನಾನಾಮರೇಜ್ಯಾ ನ ಭವತಿ ಪರಭಕ್ತ್ಯಂಗಮಿತಿ ಅಯುಕ್ತಮ್” ಎಂದು ಹೇಳಿದ್ದಾರೆ. [ಈ ನಾನಾ ದೇವತೆಗಳ ಪೂಜೆಯೂ (ಭಗತ್‌ಪ್ರೀತ್ಯರ್ಥವಾಗಿ ಮಾಡಿದಾಗ) ಪರಭಕ್ತಿಯ ಅಂಗವಾಗುವುದು ಎನ್ನುವುದು ಯುಕ್ತವೇ]. ಮತ್ತೊಂದು, ಆ ಕಾಮನೆ ಗಳನ್ನು ಪೂರೈಸುವ ದೇವತೆಗಳು ಅಥವಾ ಆ ದೇವತೆಗಳಿಗೂ ಅಂತರ್ಯಾಮಿಯಾಗಿ ಸಾಕ್ಷಾತ್ ಪರಮಾತ್ಮನೇ ವರ ಕೊಡುವುದರಿಂದ ಭಗವತ್ ಪ್ರೀತ್ಯರ್ಥವಾಗಿ ಆಚರಿಸುವ ಪಕ್ಷಕ್ಕೆ ಅದು ಮೋಕ್ಷಕ್ಕೆ ಸಹಾಯ ಮಾಡುತ್ತದೆ. ಇದು ವಾಸ್ತವವಾಗಿ ನಿತ್ಯಕರ್ಮಕ್ಕೆ ಸೇರಿದೆ. ಕಾಮ್ಯವಲ್ಲ. ಶ್ರಾದ್ಧವನ್ನು ಮಾಡುವ ಅಧಿಕಾರ ಯಾರಿಗೆ ಇದೆಯೋ, ಅವರೆಲ್ಲರೂ ಆಚರಿಸಲೇಬೇಕು.

ಶ್ರಾದ್ಧ ಮಾಡುವ ಅಧಿಕಾರವಿಲ್ಲದವರು (ಜೀವತ್ಪಿತೃಗಳು) ಈ ವಿಷಯವನ್ನು ಕೇಳಬಹುದೇ?
ಉತ್ತರ : ಈ ವಿಷಯವನ್ನು ಕೇಳಿ ಅಧಿಕಾರಿಗಳಲ್ಲದವರು ಯಾರೂ ಹೆದರಬೇಕಾಗಿಲ್ಲ. ಇದು ಅವರಿಗೆ ತಿಳುವಳಿಕೆಗೋಸ್ಕರ. ಈಗ ಮಾಡುವ ಸಂದರ್ಭ ಇಲ್ಲದಿದ್ದರೂ ಮುಂದೆಂದಾದರೂ ಸಂದರ್ಭ ಬಂದಾಗ ಆಚರಿಸಲೇಬೇಕಾಗುತ್ತದೆ. ಮಹಾಲಯ ಅಮಾವಾಸ್ಯೆಯನ್ನು ಮನೆಯಲ್ಲಿ ಅಧಿಕಾರಿಗಳು ಆಚರಿಸುತ್ತಿದ್ದರೆ ಅವರಿಗೆ ಉಪಯೋಗವಾಗುವ ಸಾಮಗ್ರಿಗಳನ್ನು ಒದಗಿಸಿ ಕೊಡುವ ಸಂಸ್ಕಾರ ಕೂಡಿ ಬರುತ್ತದೆ. ಆದ್ದರಿಂದ ಈ ವಿಷಯ ಎಲ್ಲರಿಗೂ ಅಗತ್ಯವಾಗಿದೆ.

ಮಹಾಲಯ ಪಕ್ಷದಲ್ಲಿ ಶ್ರಾದ್ಧಕ್ಕೆ ಪ್ರಶಸ್ತವಾದ ದಿನ ಯಾವುದು?
ಉತ್ತರ : ಈ ಮಹಾಲಯಪಕ್ಷದಲ್ಲಿ ಎಲ್ಲ ದಿವಸಗಳೂ ಪ್ರಸಿದ್ಧವಾದವು. ಇದನ್ನು ಆಷಾಢಾದಿ ಪಂಚಮಹಾಪಕ್ಷ ಎನ್ನುತ್ತಾರೆ. ಎಂದರೆ, ಆಷಾಡ ಮುಂತಾದ ಅಪರ ಪಕ್ಷಗಳಲ್ಲಿ ಎರಡನೆಯದು. ಆಷಾಡೇ ಎಂದರೆ ಆಷಾಡಮಾಸದ ಪೂರ್ಣಿಮೆ. ಆ ಪೂರ್ಣಿಮೆಯಿಂದ ಮುಂದಕ್ಕೆ ೫ನೇ ಅಪರ ಪಕ್ಷವಾಗುತ್ತದೆ. ಅಲ್ಲಿಂದ ಪ್ರತಿಯೊಂದು ಅಪರಪಕ್ಷವೂ ಪಿತೃಗಳ ಪೂಜೆಗೆ ಪ್ರಶಸ್ತವಾಗಿದೆ. ಅದರಲ್ಲೂ ಮಹಾಲಯ – ಈ ಪಂಚಮ ಅಪರಪಕ್ಷ ಪ್ರಶಸ್ತವಾದದ್ದು ಪಿತೃಪೂಜೆಗೆ. ಪಿತೃಗಳೂ ಈ ಪೂಜೆಯಿಂದ ಸಂತೋಷದಿಂದ ತಮ್ಮ ಮನೆ ಎಂದು ತಿಳಿದು ಸದಾ ಬರುತ್ತಾ ಇರಲಿ ಎಂದು ಆಲಂಕಾರಿಕ ಭಾಷೆಯಲ್ಲಿ ಪುರಾಣಗಳಲ್ಲಿ ಹೇಳಿದ್ದಾರೆ. ಈ ಪಂಚಮ ಅಪರಪಕ್ಷದಲ್ಲಿ ಧರ್ಮರಾಯ ತನ್ನ ಲೋಕದಲ್ಲಿ ಇರುವ ಎಲ್ಲ ಪಿತೃಗಳಿಗೂ ರಜಾ ಕೊಟ್ಟು ನಿಮ್ಮ ನಿಮ್ಮ ಮಕ್ಕಳು ನಿಮ್ಮನ್ನು ಕುರಿತು ಜೇನುತುಪ್ಪವನ್ನು ಕೊಟ್ಟು ಸಂತೋಷಪಡಿಸುತ್ತಿದ್ದಾರೆ. ಅದನ್ನು ಅನುಭವಿಸಿ ತತ್ ಕ್ಷಣದಲ್ಲೇ ಎಂದು ಒಡನೆಯೇ ಕಳುಹಿಸಿಕೊಡುತ್ತಾನೆ! ಎಂತಹ leave ಇದು. Leave without payನೇ ಎಂದು ಅಪಹಾಸ್ಯ ಮಾಡಬಾರದು. ಇದು ಒಂದು ಆಲಂಕಾರಿಕ ಭಾಷೆಯಷ್ಟೇ.

ಆಲಂಕಾರಿಕವಾಗಿ ಎಂದರೆ ಈ ಸಮಯದಲ್ಲಿ ಪಿತೃಗಳು ತಮ್ಮ ಮಕ್ಕಳಿಂದ ವಿಶೇಷವಾಗಿರುವ ಸೇವೆಯನ್ನು, ಸಂತೋಷವನ್ನು ಅಪೇಕ್ಷೆಪಡುತ್ತಾರೆ. ನಮ್ಮ ಶರೀರದಲ್ಲಿ ಉತ್ತರಾಯಣ ದಕ್ಷಿಣಾಯನ ಮಾರ್ಗವನ್ನು ಸೂಚಿಸುವ ನಾಡಿಗಳಿವೆ. ಅದರಲ್ಲಿ ದಕ್ಷಿಣಾಯನ ಮಾರ್ಗದಲ್ಲಿರುವ ಶಕ್ತಿಗಳು ಪಿತೃ ಮಾರ್ಗದ ಶಕ್ತಿಗಳು. ಧೂಮಾದಿ ಮಾರ್ಗದ ಶಕ್ತಿಗಳು ಯಾರುಂಟೋ ಅವರು. ಈ ಭೂಮಿಯ ಸುಖವನ್ನು ಅನುಭವಿಸತಕ್ಕ ಪ್ರವೃತ್ತಿಗೆ ಅಭಿಮುಖವಾಗಿರುವ ಒಂದು ವಾತಾವರಣ ಇರುವ ಕಾಲ ಎಂದರೆ ದಕ್ಷಿಣಾಯನಕ್ಕೆ ಅನುಗುಣವಾದ ಶಕ್ತಿಗಳು. ಎಂದರೆ ಸೃಷ್ಟಿಯನ್ನು ಮುಂದುವರಿಸುವ ಶಕ್ತಿಗಳು ಯಾರುಂಟೋ ಅವರ ಪ್ರಸನ್ನತೆಯನ್ನು ಹೊಂದುವುದಕ್ಕೆ ಅನುಗುಣ ವಾಗಿರುವ ಕಾಲವಾಗಿರುವುದರಿಂದ ಅವರನ್ನು ಭೂಲೋಕಕ್ಕೆ ಕಳುಹಿಸಿ ಕೊಡುತ್ತಾನೆ.

(ಮುಂದಿನ ಭಾಗದಲ್ಲಿ ಶ್ರಾದ್ಧದ ಆಚರಣೆ ಹೇಗೆ?)

ಲೇಖಕರು: ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು,
 ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ | Pitru Paksha | ಪಿತೃ ಪಕ್ಷ ಎಂದರೇನು? ಏಕೆ ಮತ್ತು ಹೇಗೆ ಆಚರಣೆ ಮಾಡಬೇಕು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading
Advertisement
Actor Diganth role in Crazystar Ravichandran The Judgement movie Kannada
ಸ್ಯಾಂಡಲ್ ವುಡ್6 mins ago

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

US sanction
ದೇಶ6 mins ago

US sanction: ನಿರ್ಬಂಧ ಹೇರುವ ಎಚ್ಚರಿಕೆ ನೀಡಿದ್ದ ಅಮೆರಿಕಕ್ಕೆ ಭಾರತ ತಿರುಗೇಟು

Shehbaz Sharif
ವಿದೇಶ25 mins ago

Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

Rakhi Sawant Rushed to Hospital After Heart-Related Ailment
ಬಾಲಿವುಡ್39 mins ago

Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌

physical abuse gadag crime
ಕ್ರೈಂ52 mins ago

Physical Abuse: ಹಿಂದೂ ಯುವಕನ ಪ್ರೀತಿಸಿ ಮದುವೆಯಾದವಳಿಗೆ ಲೈಂಗಿಕ ಕಿರುಕುಳ, ಕಣ್ಣೀರಿಟ್ಟ ಮುಸ್ಲಿಂ ಮಹಿಳೆ

Narendra Modi
ದೇಶ54 mins ago

Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

Shamita Shetty Undergoes Surgery For Endometriosis
ಸಿನಿಮಾ1 hour ago

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Road Accident
ಕ್ರೈಂ1 hour ago

Road Accident: ಭೀಕರ ರಸ್ತೆ ಅಪಘಾತ; ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

Shrimad Ramayana udaya tv to telecasting kannada dubbing version
ಕಿರುತೆರೆ1 hour ago

Shrimad Ramayana: ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಶ್ರೀಮದ್ ರಾಮಾಯಣ’ ಮಹಾ ಕಾವ್ಯ: ಎಲ್ಲಿ? ಯಾವಾಗ?

Dolly Dhananjay Kotie Cinema Kannada
ಸ್ಯಾಂಡಲ್ ವುಡ್2 hours ago

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ6 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ16 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202418 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202422 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ22 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು24 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌