World alzheimers month | ಮರೆವಿನ ರೋಗ ಅಲ್ಜೈಮರ್ಸ್‌ ಬಗೆಗೆ ಇರಲಿ ಅರಿವು - Vistara News

ಆರೋಗ್ಯ

World alzheimers month | ಮರೆವಿನ ರೋಗ ಅಲ್ಜೈಮರ್ಸ್‌ ಬಗೆಗೆ ಇರಲಿ ಅರಿವು

ಜೀವನಶೈಲಿ ಕಾಯಿಲೆಗಳಿಗೆ ತುತ್ತಾಗುವವರಂತೆ ಡಿಮೆನ್ಷಿಯಾ, ಅಲ್ಜೈಮರ್ಸ್‌ನಂಥ ಮರೆವಿನ ಕಾಯಿಲೆಗೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. alzheimers ಮಾಸದಲ್ಲಿ ಈ ಕಾಯಿಲೆ ಬಗ್ಗೆ ನಮ್ಮ ಜಾಗೃತಿ ಹೆಚ್ಚಲಿ.

VISTARANEWS.COM


on

world alzheimers month
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅರವತ್ತಕ್ಕೆ ಅರಳುಮರುಳು ಎನ್ನುವ ಮಾತನ್ನು ನಾವು ಲಾಗಾಯ್ತಿನಿಂದಲೂ ಕೇಳುತ್ತಿದ್ದೇವಲ್ಲ. ಮತ್ತೆ ವಯಸ್ಸಾದವರಲ್ಲಿ ʻಮರೆವಿನ ರೋಗʼ ಎಂದೇ ಕುಖ್ಯಾತಿ ಪಡೆದಿರುವ ಅಲ್ಜೈಮರ್ಸ್‌ ಇತ್ತೀಚಿನ ದಿನಗಳಲ್ಲಿ ಯಾಕಾಗಿ ಇಷ್ಟೊಂದು ಸುದ್ದಿ ಮಾಡುತ್ತಿದೆ? ಪಶ್ಚಿಮ ದೇಶಗಳಿಗೆ ಹೋಲಿಸಿದಲ್ಲಿ ಭಾರತದಲ್ಲಿ ಬಹಳಷ್ಟು ಕಡಿಮೆ ಪ್ರಮಾಣದಲ್ಲಿದ್ದ ಅಲ್ಜೈಮರ್ಸ್‌ ರೋಗ ಇತ್ತೀಚೆಗೆ ಭಾರತದಲ್ಲೂ ಹೆಚ್ಚುತ್ತಿರುವುದೇಕೆ? ವಿಶ್ವ ಅಲ್ಜೈಮರ್ಸ್‌ ದಿನ ಮಾತ್ರವಲ್ಲ, ವಿಶ್ವ ಅಲ್ಜೈಮರ್ಸ್‌ ಮಾಸವನ್ನೂ ಆಚರಿಸುವ ಮಟ್ಟಕ್ಕೆ ಬಂದಿರುವುದು ಜಾಗತಿಕ ಮಟ್ಟದಲ್ಲಿ ಏನನ್ನು ಸೂಚಿಸುತ್ತಿದೆ? ಈ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ವಿಶ್ವ ಅಲ್ಜೈಮರ್ಸ್‌ ಮಾಸ ಸೆಪ್ಟೆಂಬರ್‌ನ ಘೋಷವಾಕ್ಯ ʻಡಿಮೆನ್ಶಿಯ ಅರಿಯಿರಿ, ಅಲ್ಜೈಮರ್ಸ್‌ ಅರಿಯಿರಿʼ (Know Dementia, know Alzheimer’s). ಕೋವಿಡ್‌-೧೯ಗೆ ತುತ್ತಾದವರಲ್ಲಿ ನರ ಸಂಬಂಧಿ ರೋಗಗಳು, ಅದರಲ್ಲೂ ಅಲ್ಜೈಮರ್ಸ್‌ ಲಕ್ಷಣಗಳು, ಹೆಚ್ಚಳವಾಗಿರುವ ಬಗ್ಗೆ ಈಗಾಗಲೇ ಅಧ್ಯಯನಗಳು ವಿಶ್ವದೆಲ್ಲೆಡೆ ಎಚ್ಚರಿಸುತ್ತಿವೆ. ೨೦೨೦ಕ್ಕಿಂತ ಮೊದಲು ವಿಶ್ವದೆಲ್ಲೆಡೆ ಅಂದಾಜು ೫.೫ ಕೋಟಿ ಜನ ಅಲ್ಜೈಮರ್ಸ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ೨೦೩೦ರ ಹೊತ್ತಿಗೆ ಇದು ೧೪ ಕೋಟಿಗೆ ತಲುಪುವ ಅಂದಾಜಿದೆ. ಮೊದಲಿಗೆ ಅಲ್ಪ ಪ್ರಮಾಣದ ಮರೆವಿನಿಂದ ಆರಂಭವಾಗುವ ಈ ರೋಗ, ಮುಂದಿನ ಕೆಲವು ವರ್ಷಗಳಲ್ಲಿ ಮೆದುಳಿನ ಆರೋಗ್ಯವನ್ನು ಕಸಿದು, ನಿತ್ಯದ ಕೆಲಸಕ್ಕೂ ನೆರವು ಬೇಕೆನ್ನುವ ಪರಾವಲಂಬಿತನವನ್ನು ಉಂಟುಮಾಡುತ್ತದೆ. ವಯಸ್ಸಾಗುತ್ತಿದ್ದಂತೆ ಅಲ್ಪ ಮರೆವು ಸಹಜ ಎನ್ನುವುದು ಹೌದಾದರೂ ʻಮರೆವಿನ ರೋಗʼ ಸಹಜವಲ್ಲ, ಇದಕ್ಕೆ ಚಿಕಿತ್ಸೆ ಅತ್ಯಗತ್ಯ ಎಂಬ ಅರಿವು ಹೆಚ್ಚಬೇಕಿದೆ.

ಹೆಚ್ಚುತ್ತಿರುವುದೇಕೆ?: ಕೋವಿಡ್‌ಗಿಂತ ಮೊದಲು ಅಲ್ಜೈಮರ್ಸ್‌ ಇರಲಿಲ್ಲವೆಂದೇನಲ್ಲ. ಆದರೆ ಸಾಂಕ್ರಾಮಿಕದ ಸಂದರ್ಭದಲ್ಲಿ ಉಂಟಾದ ಸಾಮಾಜಿಕ, ದೈಹಿಕ ಮತ್ತು ಸಾಂಸ್ಕೃತಿಕ ಪಲ್ಲಟಗಳು ಈ ರೋಗದ ಉದ್ಭವ ಮತ್ತು ಹೆಚ್ಚಳವನ್ನು ತ್ವರಿತಗೊಳಿಸಿದೆ. ಸೋಂಕಿನಿಂದ ಮೆದುಳಿನಲ್ಲಿ ಉಂಟಾಗುವ ಮಹತ್ವದ ಬದಲಾವಣೆಗಳಿಂದ ಈ ರೋಗದ ಲಕ್ಷಣಗಳು ವೃದ್ಧರಲ್ಲಿ ಹೆಚ್ಚುತ್ತಿರುವುದನ್ನು ಸಂಶೋಧನೆಗಳು ಈಗಾಗಲೇ ಖಚಿತಪಡಿಸಿವೆ. ಆ ಸಂದರ್ಭದಲ್ಲಿ ಸೋಂಕಿತರಲ್ಲಿ ಉಂಟಾಗಿದ್ದ ಆಮ್ಲಜನಕದ ಕೊರತೆಯಿಂದಾಗಿಯೋ ಆಥವಾ ಇನ್ನಾವುದರಿಂದಾಗಿ ಮೆದುಳಿನ ಕೋಶಗಳು ಈ ರೋಗಕ್ಕೆ ತುತ್ತಾಗುತ್ತಿವೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ.

ಇದಲ್ಲದೆ, ಕೋವಿಡ್‌ ಸಂದರ್ಭದಲ್ಲಿ ದೀರ್ಘಕಾಲ ವೃದ್ಧರನ್ನು ಕಾಡಿದ್ದ ಏಕಾಂಗಿತನವನ್ನೂ ಕಾರಣವೆಂದು ಗುರುತಿಸಲಾಗಿದೆ. ಎಲ್ಲೆಲ್ಲೋ ಇದ್ದ ಕುಟುಂಬದವರು ಅಲ್ಲಲ್ಲೇ ಇರಬೇಕಾಗಿ ಬಂದಿತ್ತು. ರೋಗದಿಂದಾಗಿ ವ್ಯಷ್ಟಿಯೂ ಅನಿವಾರ್ಯವಾಗಿತ್ತು. ಸಾಮಾಜಿಕವಾಗಿ ಒಂಟಿಯಾಗಬೇಕಾಯಿತು. ರೋಗದ ಕಾರಣದಿಂದಾಗಿ ಸಾಂಸ್ಕೃತಿ ಬದುಕು ಸೊರಗಿತ್ತು. ಆವರೆಗೆ ತಮ್ಮದೇ ವೃದ್ಧರ/ನಿವೃತ್ತರ ಗುಂಪಿನೊಂದಿಗೆ ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಸಕ್ರಿಯವಾಗಿದ್ದರು ಎಲ್ಲದರಿಂದ ದೂರವಾಗಿ ಮನೆಯಲ್ಲೇ ಉಳಿಯುವಂತಾಗಿತ್ತು. ನೃತ್ಯ, ಸಂಗೀತ, ನಾಟಕ, ಸಿನೆಮಾ, ಹಬ್ಬ-ಹರಿದಿನ, ದೇವಸ್ಥಾನ, ಭಜನೆ ಎಂಬಂಥ ಎಲ್ಲಾ ಚಟುವಟಿಕೆಗಳು ನಿಂತು ಹೋಗಿದ್ದವು. ಇದರಿಂದ ಸಹಜವಾಗಿ ದೇಹದ ಮತ್ತು ಮನಸ್ಸಿನ ಚಟುವಟಿಕೆ ಕುಂದಿ ಜಡತ್ವ, ಮಬ್ಬು ಆವರಿಸುವಂತಾಗಿತ್ತು. ಡಿಮೆನ್ಶಿಯ ಆವರಿಸದೆ ತಡೆಯುವಂಥ ಬಹುದೊಡ್ಡ ಮಾರ್ಗವೆಂದರೆ ನಮ್ಮ ದೇಹ ಮತ್ತು ಮನಸ್ಸನ್ನು ಸದಾ ಜಾಗೃತವಾಗಿ ಚಟುವಟಿಕೆಯಿಂದ ಇರಿಸುವುದು. ಅಲ್ಜೈಮರ್ಸ್‌ ರೋಗಿಗಳಿಗೂ ದೈಹಿಕ ಮತ್ತು ಮಾನಸಿಕ ವ್ಯಾಯಾಮದ ಅಗತ್ಯವನ್ನು ವೈದ್ಯ ವಿಜ್ಞಾನ ಒತ್ತಿ ಹೇಳುತ್ತದೆ.

ಇದನ್ನೂ ಓದಿ | ಈಗೀಗ 30-40ನೇ ವಯಸ್ಸಿನಲ್ಲೇ ಸ್ತನ ಕ್ಯಾನ್ಸರ್‌ ಕಾಡುವುದೇಕೆ? ಎಲ್ಲಿ ಎಡವಿದ್ದೇವೆ ನಾವು?

ಕಳೆದೆರಡು ವರ್ಷಗಳಲ್ಲಿ ಮರೆವಿನ ರೋಗ ಆರಂಭಿಕ ಹಂತದಲ್ಲಿದ್ದ ಬಹುತೇಕರಿಗೆ ಚಿಕಿತ್ಸೆ ದೊರೆಯುವುದು ಕಷ್ಟವಾಗಿತ್ತು. ಸಾಂಕ್ರಾಮಿಕ ಉಲ್ಭಣಿಸಿದ್ದ ಹೊತ್ತಿನಲ್ಲಿ ಇಂಥ ʻಚಿಕ್ಕ-ಪುಟ್ಟʼ ಸಮಸ್ಯೆಗಳಿಗಾಗಿ ವೈದ್ಯರಲ್ಲಿ ಹೋಗುವುದೂ ಕೋವಿಡ್‌ ಅಂಟಿಕೊಳ್ಳುವುದಕ್ಕೆ ದಾರಿಯಾಗಬಹುದೆಂಬ ಭೀತಿ ಇದಕ್ಕೆ ಕಾರಣವಾಗಿತ್ತು. ಇದರಿಂದ ಪ್ರಾರಂಭಿಕ ಹಂತದ ಚಿಕಿತ್ಸೆ ಸರಿಯಾಗಿ ದೊರೆಯದೆ ಹಲವರಲ್ಲಿ ರೋಗ ಮುಂದುವರಿಯುವಂತಾಗಿದ್ದು ನಿಜ.

ಸಾಮಾನ್ಯವಾಗಿ ೬೫ರ ನಂತರವೇ ಆರಂಭವಾಗುವ ಈ ರೋಗ, ಉಲ್ಭಣಿಸಿ ಯಾವುದೂ ತಿಳಿಯದೆ ಪರಾವಲಂಬಿ ಎನ್ನುವ ಸ್ಥಿತಿಗೆ ಬರುವಷ್ಟರಲ್ಲಿ ವ್ಯಕ್ತಿ ಸಹಜವಾಗಿ ಸಾವನ್ನಪ್ಪುವ ಸಾಧ್ಯತೆಯೇ ಅಧಿಕವಾಗಿತ್ತು. ಆದರೆ ಹಿಂದೆಂದಿಗಿಂತಲೂ ಇಂದು ಎಲ್ಲರ ಆಯಸ್ಸು ಹೆಚ್ಚಿರುವುದು ಹೌದು. ದೀರ್ಘಾಯಸ್ಸಿನಿಂದ ರೋಗ ಬಾಧೆಗಳಿಗೂ ದೀರ್ಘವಾಗಿಯೇ ತುತ್ತಾಗಬೇಕಿರುವುದು ಸಹಜ. ಅದರಲ್ಲೂ ಮಧುಮೇಹ, ರಕ್ತದೊತ್ತಡದಂಥ ಹಲವಾರು ರೀತಿಯ ಜೀವನಶೈಲಿ ಖಾಯಿಲೆಗಳಿಗೆ ತುತ್ತಾಗುವವರ ಸಂಖ್ಯೆ ಏರುತ್ತಿರುವುದರಿಂದ ಡಿಮೆನ್ಶಿಯಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಡಿಮೆನ್ಶಿಯಕ್ಕೆ ತುತ್ತಾಗುವ ಶೇ. ೬೦ರಷ್ಟು ಜನರಲ್ಲಿ ಅಲ್ಜೈಮರ್ಸ್‌ ಕಾಣಿಸಿಕೊಳ್ಳುತ್ತಿದೆ.

ಇದನ್ನೂ ಓದಿ | Breastfeeding Week 2022 | ಅಮ್ಮನ ಹಾಲೇ ಅಮೃತ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Health Tips: ತೆಂಗಿನಂತೆ ಬಾಳೆಯೂ ಕಲ್ಪವೃಕ್ಷ ಎನಿಸಿಕೊಂಡಿದೆ. ಇದರ ಪ್ರತಿಯೊಂದು ಭಾಗವೂ ಉಪಯೋಗಕ್ಕೆ ಬರುತ್ತದೆ. ಅದರಲ್ಲಿಯೂ ಬಾಳೆದಿಂಡಿನಲ್ಲಿ ಅಪೂರ್ವ ಔಷಧೀಯ ಗುಣಗಳಿವೆ. ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ.

VISTARANEWS.COM


on

Health Tips
Koo

ಕುಮಾರ ಪೆರ್ನಾಜೆ, ಪುತ್ತೂರು
ಬೆಂಗಳೂರು: ಕಲ್ಪವೃಕ್ಷ ಎಂದಾಕ್ಷಣ ತೆಂಗಿನ ಚಿತ್ರ ನಮ್ಮ ಕಣ್ಣ ಮುಂದೆ ಬರುತ್ತದೆ. ಅದರ ಜತೆಗೆ ಬಾಳೆಯೂ ಕಲ್ಪವೃಕ್ಷವೇ. ತೆಂಗಿನಂತೆ ಇದರ ಎಲ್ಲ ಭಾಗಗಳು ಉಪಯುಕ್ತ. ಬಾಳೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು, ಇತ್ತೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಿಡ್ನಿಯ ಕಲ್ಲಿನ ಸಮಸ್ಯೆಯನ್ನು ಗುಣಪಡಿಸುವ ಶಕ್ತಿ ಇದಕ್ಕಿದೆ. ಈ ಬಗೆಗಿನ ವಿವರ ಇಲ್ಲಿದೆ (Health Tips).

ಬಾಳೆ ದಿಂಡಿನ ಪ್ರಾಮುಖ್ಯತೆ ಇದೀಗ ಪ್ರತಿಯೊಬ್ಬರ ಅರಿವಿಗೂ ಬಂದಿದೆ. ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಒಂದು ಅಡಿ ಉದ್ದದ ದಿಂಡಿಗೂ ಬಹಳ ಬೇಡಿಕೆ ಸೃಷ್ಟಿಯಾಗಿದೆ. ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯ, ಪಕೋಡ, ದೋಸೆ, ಇಡ್ಲಿ, ಸಲಾಡ್, ಮೊಸರು ಗೊಜ್ಜು ಹೀಗೆ ನಾನಾ ಭಕ್ಷ್ಯ ತಯಾರಿಸಬಹುದು. ಮಾತ್ರವಲ್ಲ ಬಾಳೆ ನಾರಿನಿಂದ ವಿವಿಧ ಪರಿಸರಸ್ನೇಹಿ ಉತ್ಪನ್ನಗಳನ್ನು ತಯಾರಿಸಬಹುದು. ಚೀಲಗಳು, ಬುಟ್ಟಿಗಳು, ಸಸಿ ಕುಂಡಗಳು, ಯೋಗಾಸನ ಚಾಪೆಗಳು, ಹಗ್ಗ, ಬಟ್ಟೆ ತಯಾರಿ ಹೀಗೆ…ಏನೆಲ್ಲ ಮಾಡಬಹುದು ಎಂಬ ಸಂಶೋಧನೆ ಮಾಡುವ ತನಕ ಬಾಳೆ ಇಷ್ಟೊಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ ಎನ್ನುವುದು ಯಾರಿಗೂ ತಿಳಿದಿರಲಿಲ್ಲ.

ಕಿಡ್ನಿ ಕಲ್ಲು ಕರಗಿಸುವ ಬಾಳೆ ದಿಂಡು

ಮೊದಲೇ ಹೇಳಿದಂತೆ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ. ಕಿಡ್ನಿ ಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡಿನ ನೀರನ್ನು ಕುಡಿಯುವುದು ಅತ್ಯುತ್ತಮ ಮಾರ್ಗ ಎನಿಸಿಕೊಂಡಿದೆ. ಈ ನೀರನ್ನು ಹೇಗೆ ಸಂಗ್ರಹಿಸಬಹುದು ಎನ್ನುವುದರ ವಿವರ ಇಲ್ಲಿದೆ. ಬಾಳೆಗಿಡ ಕಡಿದು ಮಧ್ಯದ ದಿಂಡನ್ನು ತೆಗೆದು ಕಾಂಡದಲ್ಲಿ ಗುಳಿಯ ಆಕಾರವನ್ನು ತೋಡಿ. ಬಳಿಕ ಕಸ, ಧೂಳು ಹಾರದಂತೆ ಅದಕ್ಕೆ ಪ್ಲಾಸ್ಟಿಕ್ ಅಥವಾ ಬಾಳೆ ಎಲೆ ಮುಚ್ಚಿ. ಮರುದಿನ ನೋಡಿದಾಗ ಗುಳಿಯಲ್ಲಿ ನೀರು ತುಂಬಿರುತ್ತದೆ.

ಈ ನೀರನ್ನು ಶುಭ್ರ ಪಾತ್ರೆಯಲ್ಲಿ ತೆಗೆದುಕೊಂಡು ನಿಯಮಿತವಾಗಿ ಸೇವಿಸಿ. ಇದರಿಂದ ಕಿಡ್ನಿ ಕಲ್ಲಿ ಕರಗುತ್ತದೆ ಎನ್ನುತ್ತಾರೆ ತಜ್ಞರು. ಅಲ್ಲದೆ ಬಾಳೆ ದಿಂಡನ್ನು ಅರೆದು ಅದನ್ನು ಸೋಸಿಯೂ ಕುಡಿಯಬಹುದು. ಹೀಗೆ ಬಾಳೆದಿಂಡಿನ ರಸವನ್ನು ವರ್ಷಕ್ಕೆ ಎರಡು ಬಾರಿಯಾದರೂ ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಹೊರ ಹಾಕಬಹುದು.

ಇದನ್ನೂ ಓದಿ: Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

ಜ್ಯೂಸ್‌ ತಯಾರಿಸಿ

ಬಾಳೆ ದಿಂಡಿನ ರಸವನ್ನು ನೇರವಾಗಿ ಸೇವಿಸಲು ಸಾಧ್ಯವಾಗದಿದ್ದರೆ ಜ್ಯೂಸ್‌ ತಯಾರಿಸಿಯೂ ಕುಡಿಯಬಹುದು. ಬಾಳೆದಿಂಡಿನ ನೀರಿಗೆ ಜೀರಿಗೆ, ಶುಂಠಿ, ನಿಂಬೆರಸ, ಗಾಂಧಾರಿ ಮೆಣಸು, ಚಿಟಿಕೆ ಉಪ್ಪು, ಬೇಕಿದ್ದರೆ ಕಲ್ಲು ಸಕ್ಕರೆ ಸೇರಿಸಿ ಕುಡಿಯಬಹುದು. ಇದನ್ನು ಸಮಸ್ಯೆ ಇದ್ದವರೇ ಕುಡಿಯಬೇಕೆಂದಿಲ್ಲ. ಯಾರೂ ಬೇಕಾದರೂ ಸೇವಿಸಬಹುದು. ಇತ್ತೀಚೆಗಂತೂ ಬಿಸಿಲಿನ ತಾಪ ವಿಪರೀತವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ಆಹಾರದ ಜತೆಗೆ ಇಂತಹ ಪ್ರಾಕೃತಿಕ ಔಷಧಗಳ ಪ್ರಯೋಜನ ಪಡೆಯಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

Continue Reading

ಲೈಫ್‌ಸ್ಟೈಲ್

Mosquito control: ಸೊಳ್ಳೆ ಕಾಟಕ್ಕೆ ಬೇಸತ್ತಿದ್ದೀರಾ? ಹಾಗಿದ್ರೆ ಈ ಮನೆಮದ್ದನ್ನು ಟ್ರೈ ಮಾಡಿ ನೋಡಿ!

Mosquito control: ಸೊಳ್ಳೆಗಳ ಕಡಿತದಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ಮಾರಣಾಂತಿಕ ಕಾಯಿಲೆಗಳು ಕಾಡುತ್ತದೆ. ಹಾಗಾಗಿ ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಬೇಕು. ಅದಕ್ಕಾಗಿ ನೀವು ಎಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು.

VISTARANEWS.COM


on

Mosquito controle
Koo

ಬೆಂಗಳೂರು: ಸೊಳ್ಳೆ ಎಂದರೆ ಸಾಕು ಕೆಲವರು ಕುಳಿತಲ್ಲಿಯೇ ಹೌಹಾರುತ್ತಾರೆ. ಗಾತ್ರದಲ್ಲಿ ಚಿಕ್ಕದಾದರೂ ಇವು ಕೊಡುವ ಕಾಟ ಹೇಳತೀರದು. ಇನ್ನು ಬೇಸಿಗೆಯಲ್ಲಿ ಸೊಳ್ಳೆಗಳ ಕಾಟ (Mosquito control) ಹೆಚ್ಚಾಗಿರುತ್ತದೆ. ಸಂಜೆಯಾಗುತ್ತಿದ್ದಂತೆ ಮನೆಯ ಕಿಟಕಿ ಮತ್ತು ಬಾಗಿಲಿನ ಸಂದಿಯಲ್ಲಿ ನುಸುಳಿಕೊಂಡು ಮನೆಯೊಳಗೆ ಪ್ರವೇಶಿಸುತ್ತವೆ. ಮನೆಯೊಳಗೆ ಸಿಕ್ಕಿದವರಿಗೆ ಕಚ್ಚಿ ರಕ್ತ ಹೀರುತ್ತದೆ. ಇವುಗಳಿಂದ ರಾತ್ರಿ ನಿದ್ರೆ ಮಾಡಲು ಸಾದ್ಯವಾಗುವುದಿಲ್ಲ. ಹಾಗಾಗಿ ಜನರು ಸೊಳ್ಳೆ ನಿವಾರಕಗಳನ್ನು ಬಳಸುತ್ತಾರೆ.

ಆದರೆ ಈ ಸೊಳ್ಳೆಗಳ ಕಡಿತದಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ಮಾರಣಾಂತಿಕ ಕಾಯಿಲೆಗಳು ಕಾಡುತ್ತದೆ. ಹಾಗಾಗಿ ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಬೇಕು. ಅದಕ್ಕಾಗಿ ನೀವು ಎಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಹಾಗೇ ಸೊಳ್ಳೆಗಳ ಕಡಿತದಿಂದ ಉಂಟಾಗುವಂತಹ ಮಲೇರಿಯಾ ರೋಗವನ್ನು ತಡೆಗಟ್ಟಲು ಈ ಮನೆಮದ್ದುಗಳನ್ನು ತಪ್ಪದೇ ಬಳಸಿ.

ಆರ್ಟೆಮಿಸಿಯಾ ಆನ್ಯುವಾ(ಸ್ವೀಟ್ ವರ್ಮ್ವುಡ್ ): ಇದು ಸಾಂಪ್ರಾದಾಯಿಕ ಚೀನೀ ಔಷಧದ ಮೂಲಾಧಾರವಾಗಿದೆ. ಇದು ಮಲೇರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದರಲ್ಲಿರುವ ಆರ್ಟೆಮಿಸಿನಿನ್ ಸಂಯುಕ್ತ ಮಲೇರಿಯಾದ ಚಿಕಿತ್ಸೆಗೆ ಪರಿಣಾಮಕಾರಿಯಾಗಿದೆ. ಈ ಸಸ್ಯದ ಎಲೆಗಳಿಂದ ತಯಾರಿಸಿದ ಚಹಾವನ್ನು ಕುಡಿಯುವುದರ ಮೂಲಕ ಚಿಕಿತ್ಸೆಯನ್ನು ಪಡೆಯಬಹುದು.

Mosquito controle

ಬೇವು: ಬೇವಿನ ಎಲೆಗಳು ಮಲೇರಿಯಾ ಚಿಕಿತ್ಸೆಗೆ ಪರಿಣಾಮಕಾರಿ ಮನೆಮದ್ದಾಗಿದೆ. ಇದು ಜ್ವರ ನಿವಾರಕ ಗುಣವನ್ನು ಹೊಂದಿದೆ. ಬೇವು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಮೂಲಕ ರಕ್ತ ಪರಿಚಲನೆಯ ಮೂಲಕ ಮಲೇರಿಯಾಕ್ಕೆ ಕಾರಣವಾಗುವಂತಹ ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ.

ಸಿಂಕೋನಾ ಟ್ರೀ ತೊಗಟೆ: ಇದು ದಕ್ಷಿಣಾ ಅಮೇರಿಕಾದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಈ ಮರದ ತೊಗಟೆಯು ಕ್ವಿನೈನ್ ಅನ್ನು ಹೊಂದಿರುತ್ತದೆ. ಇದನ್ನು ಶತಮಾನಗಳಿಂದ ಮಲೇರಿಯಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿತ್ತು. ಹಾಗಾಗಿ ಜನರು ಮಲೇರಿಯಾ ತಡೆಗಟ್ಟಲು ಕ್ವಿನೈನ್ ಅಂಶವನ್ನು ಹೊಂದಿರುವ ನೀರನ್ನು ಕುಡಿಯುತ್ತಿದ್ದರು.

Mosquito controle

ಬೆಳ್ಳುಳ್ಳಿ : ಇದು ಆ್ಯಂಟಿ ಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಸೇವಿಸುವುದರಿಂದ ಮಲೇರಿಯಾ ರೋಗ ಲಕ್ಷಣಗಳನ್ನು ಕಡಿಮೆ ಮಾಡಬಹುದು. ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Mosquito controle

ಶುಂಠಿ: ಶುಂಠಿಯು ಮಲೇರಿಯಾಕ್ಕೆ ಚಿಕಿತ್ಸೆ ನೀಡುವ ಮತ್ತು ತಡೆಗಟ್ಟುವ ಸಾಮರ್ಥ್ಯವನ್ನು ಹೊಂದಿದೆ. ಹಾಗೇ ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದರಲ್ಲಿರುವ ಜಿಂಜರಾಲ್ ಮತ್ತು ಜಿಂಜರೋನ್ ಉರಿಯೂತ ಮತ್ತು ಜ್ವರ ನಿವಾರಕ ಗುಣಗಳನ್ನು ಹೊಂದಿದೆ. ಇದು ಮಲೇರಿಯಾ ರೋಗಗಳಿಗೆ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಅರಿಶಿನ: ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದು ಕರ್ಕ್ಯುಮಿನ್ ಅಂಶವನ್ನು ಹೊಂದಿದ್ದು, ಮಲೇರಿಯಾವನ್ನು ತಡೆಗಟ್ಟಲು ಪರಿಣಾಮಕಾರಿಯಾಗಿದೆ. ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಮೂಲಕ ರೋಗಗಳನ್ನು ತಡೆಗಟ್ಟುತ್ತದೆ.

Mosquito controle

ಪಪ್ಪಾಯ ಎಲೆಗಳು: ಮಲೇರಿಯಾದ ಚಿಕಿತ್ಸೆಗೆ ಪಪ್ಪಾಯ ಎಲೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಇದರಲ್ಲಿರುವ ಅಂಶವು ಪ್ಲೇಟ್ಲೆಟ್ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಮಲೇರಿಯಾ ರೋಗವನ್ನು ಕಡಿಮೆಮಾಡುತ್ತದೆ.

Continue Reading

ಆರೋಗ್ಯ

Tobacco Use: ತಂಬಾಕು ಸೇವನೆ; ವಿಶ್ವದಲ್ಲೇ ಭಾರತಕ್ಕೆ ಎರಡನೇ ಸ್ಥಾನ

Tobacco Use: ಭಾರತವು ಶೇ. 27ರಷ್ಟು ವಯಸ್ಕ ತಂಬಾಕು ಸೇವನೆ ಮಾಡುವವರನ್ನು ಹೊಂದಿದೆಯಂತೆ. 2019ರ ಅಂಕಿ ಅಂಶದ ಪ್ರಕಾರ ವಿಶ್ವದಲ್ಲೇ 70 ಲಕ್ಷಕ್ಕೂ ಹೆಚ್ಚು ಮಂದಿ ತಂಬಾಕು ಸೇವಿಸಿ ಸಾವನ್ನಪ್ಪಿದ್ದು, ಭಾರತದಲ್ಲಿ 13.5 ಲಕ್ಷ ಮಂದಿ ಮೃತಪಟ್ಟಿದ್ದಾರೆ

VISTARANEWS.COM


on

By

Tobacco use
Koo

ತಂಬಾಕು ಬಳಸುವವರಲ್ಲಿ (Tobacco Use) ವಿಶ್ವದಲ್ಲೇ ಭಾರತ (india) ಎರಡನೇ ಸ್ಥಾನದಲ್ಲಿದ್ದು, ಶೇ. 27ರಷ್ಟು ವಯಸ್ಕ ಭಾರತೀಯರು ತಂಬಾಕು ಸೇವನೆ (Tobacco consumption) ಮಾಡುತ್ತಾರೆ ಎಂದು ಕೆಪಿಎಂಜಿ (KPMG) ಅಶ್ಯೂರೆನ್ಸ್ ಮತ್ತು ಕನ್ಸಲ್ಟಿಂಗ್ ಸರ್ವಿಸಸ್ ಎಲ್ಎಪಿಯ ವರದಿ ಹೇಳಿದೆ. 2019ರಲ್ಲಿ ವಿಶ್ವದಲ್ಲೇ 7 ಮಿಲಿಯನ್‌ಗೂ ಹೆಚ್ಚು ಮಂದಿ ತಂಬಾಕು ಸೇವಿಸಿ ಸಾವನ್ನಪ್ಪಿದ್ದು , ಭಾರತದಲ್ಲಿ 1.35 ಮಿಲಿಯನ್ ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಟಿ ಎಡ್ಜ್ ಸಹಯೋಗದೊಂದಿಗೆ ನಡೆದ ಸಮೀಕ್ಷೆಯಲ್ಲಿ ಭಾರತವು ಶೇ. 27ರಷ್ಟು ವಯಸ್ಕ ತಂಬಾಕು ಸೇವನೆ ಮಾಡುವವರನ್ನು ಹೊಂದಿದ್ದು, ವಿಶ್ವದ ಎರಡನೇ ಅತೀ ದೊಡ್ಡ ತಂಬಾಕು ಬಳಸುವ ಜನಸಂಖ್ಯೆಯನ್ನು ಹೊಂದಿದೆ ಎಂದು ಬಹಿರಂಗಪಡಿಸಿದೆ.

ಈ ಅಂಕಿ ಅಂಶವು ತಂಬಾಕು ಪ್ರೇರಿತ ಹಾನಿಯನ್ನು ಕಡಿಮೆ ಮಾಡಲು ತಂಬಾಕು ನಿಯಂತ್ರಣದ ಕಡೆಗೆ ಸಮಗ್ರ ಮಾರ್ಗಸೂಚಿಯನ್ನು ಹೊಂದಲು ಕಡ್ಡಾಯ ಮತ್ತು ನಿರ್ಣಾಯಕವಾಗಿದೆ. 2060ರ ವೇಳೆಗೆ ತಂಬಾಕು ಸಂಬಂಧಿತ ರೋಗಗಳಿಂದ ಜಾಗತಿಕವಾಗಿ ವಾರ್ಷಿಕ ಮರಣಗಳ ಅಂದಾಜು ಶೇ. 50ರಷ್ಟು ಕಡಿಮೆ ಮಾಡುವ ಉದ್ದೇಶವಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

ಭಾರತದ ತಂಬಾಕು ಬಳಕೆ

2019ರಲ್ಲಿ ಜಾಗತಿಕವಾಗಿ 7 ಮಿಲಿಯನ್ ತಂಬಾಕು ಸಂಬಂಧಿತ ಸಾವುಗಳಲ್ಲಿ ಭಾರತದಲ್ಲಿ 1.35 ಮಿಲಿಯನ್ ಸಾವು ಸಂಭವಿಸಿವೆ. ಶೇ. 66ರಷ್ಟು ಭಾರತೀಯರು 20- 25 ವರ್ಷ ವಯಸ್ಸಿನ ನಡುವೆ ತಂಬಾಕು ಸೇವಿಸಲು ಪ್ರಾರಂಭಿಸಿದರು. ಪರ್ಯಾಯ ಮಾರ್ಗಗಳ ಕೊರತೆಯಿಂದ ಶೇ.45ರಷ್ಟು ಮಂದಿಗೆ ಧೂಮಪಾನ ಅಥವಾ ತಂಬಾಕು ಜಗಿಯುವುದನ್ನು ಬಿಡಲು ಸಾಧ್ಯವಾಗಲಿಲ್ಲ.

ಜನರು ಬಳಸುವ ತಂಬಾಕಿನಲ್ಲಿ ಶೇ. 8ರಷ್ಟು ಮಾತ್ರ ಕಾನೂನುಬದ್ಧವಾಗಿ ಉತ್ಪಾದಿಸಲಾಗಿದೆ. ಆದರೆ ಉಳಿದ ಶೇ. 92 ರಷ್ಟು ಬಳಕೆ ಬೀಡಿಗಳು, ಜಗಿಯುವ ತಂಬಾಕು, ಖೈನಿ ಮುಂತಾದ ಅಗ್ಗದ ತಂಬಾಕು ಉತ್ಪನ್ನಗಳಾಗಿದೆ. ತಂಬಾಕು ಸೇವನೆಗೆ ಮುಖ್ಯ ಕಾರಣ ಒತ್ತಡ, ಆತಂಕ ಮತ್ತು ಭಾವನಾತ್ಮಕ ಯಾತನೆ ಎಂಬುದನ್ನು ಸಮೀಕ್ಷೆಯು ಬಹಿರಂಗಪಡಿಸಿದೆ.

ಭಾರತದಲ್ಲಿ ತಂಬಾಕು ಸೇವನೆಗೆ ನಿಯಂತ್ರಣ ಹೇರುವುದು ಅತೀ ಅವಶ್ಯಕವಾಗಿದೆ. ಜಾಗತಿಕವಾಗಿ ಸೂಚಿಸಲಾದ ತಂಬಾಕು ನಿಯಂತ್ರಣ ಕ್ರಮಗಳನ್ನು ಭಾರತದಲ್ಲಿ ಜಾರಿಗೊಳಿಸಲು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಹಾಯ ಮಾಡುವ ಉದ್ದೇಶ ಹೊಂದಿರುವುದು ಸವಾಲಾಗಿ ಪರಿಣಮಿಸುತ್ತಿದೆ.


ತಂಬಾಕು ಸೇವನೆ ಮಾಡುವ ಶೇ. 50ರಷ್ಟು ಪುರುಷರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದರಲ್ಲಿ ಶೇ. 29 ರಷ್ಟು ಗಂಭೀರ ಪ್ರಕರಣಗಳಾಗಿವೆ. ಅರಿವಿನ ಕೊರತೆ ಮತ್ತು ಪರ್ಯಾಯಗಳ ಅಲಭ್ಯತೆಯಿಂದಾಗಿ ಗಂಭೀರ ಆರೋಗ್ಯ ಸಮಸ್ಯೆಗಳಿರುವ ನಗರಗಳಲ್ಲಿ ಶೇ. 81ರಷ್ಟು ಮಂದಿ ಪುರುಷರು ತಂಬಾಕನ್ನು ತ್ಯಜಿಸಲು ಮುಂದಾಗುತ್ತಿಲ್ಲ.
2030ರ ವೇಳೆಗೆ ತಂಬಾಕು ಸಂಬಂಧಿತ ಸಾವುಗಳಲ್ಲಿ ಶೇ.80ಕ್ಕಿಂತ ಹೆಚ್ಚು ಸಾವುಗಳು ಕಡಿಮೆ ಮತ್ತು ಮಧ್ಯಮ-ಆದಾಯದ ದೇಶಗಳಲ್ಲಿ ಸಂಭವಿಸಬಹುದು ಎಂದು ವರದಿ ಹೇಳಿದೆ.

ಜಿಡಿಪಿ ಮೇಲೆ ಪರಿಣಾಮ

ತಂಬಾಕು ಸೇವನೆಯಿಂದ ಉಂಟಾಗುವ ರೋಗಗಳು ಮತ್ತು ಸಾವುಗಳಿಂದಾಗಿ ಭಾರತವು ಪ್ರತಿ ವರ್ಷ ತನ್ನ ಜಿಡಿಪಿಯ ಶೇ.1ರಷ್ಟನ್ನು ಕಳೆದುಕೊಳ್ಳುತ್ತದೆ. ಇದರಿಂದ ರಕ್ಷಿಸಿಕೊಳ್ಳಲು ಪರಿಣಾಮಕಾರಿ ತಂಬಾಕು ನಿಯಂತ್ರಣ ನೀತಿಯನ್ನು ಅಳವಡಿಸಿಕೊಳ್ಳಲು ಭಾರತ ಮುಂದಾಗಬೇಕಿದೆ.

ತಂಬಾಕು ನಿಯಂತ್ರಣಕ್ಕೆ ಕ್ರಮ

ಭಾರತವು ಈಗಾಗಲೇ ತಂಬಾಕು ಸೇವನೆಯನ್ನು ನಿಯಂತ್ರಿಸುವ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಗುರಿಯನ್ನು ಹೊಂದಿರುವ ಕಠಿಣ ನಿಯಮಗಳನ್ನು ಸಕ್ರಿಯವಾಗಿ ಜಾರಿಗೊಳಿಸುತ್ತಿದೆ. ತಂಬಾಕು ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ಡಬ್ಲ್ಯೂ ಎಚ್‌ಒ ಸೂಚಿಸಿದ ಕಾನೂನುಗಳ ನಿಬಂಧನೆಗಳಿಗೆ ಹೊಂದಿಕೆಯಾಗಲು ದೇಶವು ತಂಬಾಕು ನಿಯಂತ್ರಣ ಕಾನೂನುಗಳನ್ನು ಜಾರಿಗೆ ತಂದಿದೆ. ಧೂಮಪಾನಿಗಳಲ್ಲದವರನ್ನು ಧೂಮಪಾನದಿಂದ ದೂರವಿಡಲು ಇದು ಸಹಾಯ ಮಾಡುತ್ತದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿಯಲ್ಲಿ (NLEM) ನಿಕೋಟಿನ್ ರಿಪ್ಲೇಸ್ಮೆಂಟ್ ಥೆರಪಿಯನ್ನು (NRT) ಪರಿಚಯಿಸಿದೆ. ಉದಾಹರಣೆಗೆ ಚೂಯಿಂಗ್ ನಿಕೋಟಿನ್ ಗಮ್ ಅಥವಾ ಇನ್ಹೇಲರ್‌ಗಳನ್ನು ಬಳಸುವುದು ಧೂಮಪಾನ ಅಭ್ಯಾಸವನ್ನು ಮುರಿಯಲು ಮತ್ತು ಸಿಗರೇಟಿನ ಮೇಲೆ ಮಾನಸಿಕ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಜಾಗತಿಕ ನೀತಿಗಳು

ತಂಬಾಕು ಬಳಕೆಯನ್ನು ನಿಯಂತ್ರಿಸಲು ಅನೇಕ ದೇಶಗಳು ಡಬ್ಲ್ಯೂ ಎಚ್ ಒ ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ತಂಬಾಕು ನಿಯಂತ್ರಣವನ್ನು (FCTC) ಅನುಸರಿಸಿದರೆ, ಕೆಲವು ಸೂಕ್ತವಾದ ವಿಧಾನವನ್ನು ಅಳವಡಿಸಿಕೊಂಡಿವೆ.

ಭಾರತ, ಆಸ್ಟ್ರೇಲಿಯಾ ಮತ್ತು ಸಿಂಗಾಪುರಕ್ಕೆ ಹೋಲಿಸಿದರೆ ಜಪಾನ್, ಯುಕೆ, ನ್ಯೂಜಿಲೆಂಡ್ ಮತ್ತು ಸ್ವೀಡನ್‌ನಂತಹ ದೇಶಗಳಲ್ಲಿ ಧೂಮಪಾನದ ಪ್ರಮಾಣವು ಹೆಚ್ಚು ಎಂದು ವರದಿ ಬಹಿರಂಗಪಡಿಸಿದೆ.

ಏನು ಮಾಡಬಹುದು?

ಧೂಮಪಾನವನ್ನು ತೊರೆಯಲು ಇಷ್ಟಪಡದ ವ್ಯಕ್ತಿಗಳು ಕಡಿಮೆ ಅಪಾಯಕಾರಿ ತಂಬಾಕುಗಳನ್ನು ಬಳಸಲು ಪ್ರೋತ್ಸಾಹಿಸಬೇಕು. ನಿಕೋಟಿನ್ ರಿಪ್ಲೇಸ್‌ಮೆಂಟ್ ಥೆರಪಿ (ಎನ್‌ಆರ್‌ಟಿ) ಅನ್ನು ಕೈಗೆಟುಕುವ ಮತ್ತು ಸುಲಭವಾಗಿ ಸಿಗುವಂತೆ ಮಾಡಬೇಕು. ತಂಬಾಕು ಉತ್ಪನ್ನಗಳ ಪಟ್ಟಿ ಮಾಡಲಾದ ಮತ್ತು ಪಟ್ಟಿ ಮಾಡದ ತಯಾರಕರು ಮತ್ತು ಚಿಲ್ಲರೆ ವ್ಯಾಪಾರಿಗಳ ಸಮಗ್ರ ಡೇಟಾಬೇಸ್ ಅನ್ನು ಅಧಿಕಾರಿಗಳು ಸಂಗ್ರಹಿಸಬೇಕು. ಧೂಮಪಾನಿಗಳಿಗೆ ಶಿಕ್ಷಣ ನೀಡಲು, ತಂಬಾಕು ಬಳಕೆಯ ಬಗ್ಗೆ ಇರುವ ಮಿಥ್ಯೆಗಳನ್ನು ಹೋಗಲಾಡಿಸಲು ರಾಷ್ಟ್ರವ್ಯಾಪಿ ಸಮೂಹ ಮಾಧ್ಯಮ ಪ್ರಚಾರಕ್ಕಾಗಿ ಹೂಡಿಕೆಯನ್ನು ಹೆಚ್ಚಳ ಮಾಡಬೇಕು.

ಆರೋಗ್ಯಕರ ಭವಿಷ್ಯಕ್ಕಾಗಿ ವಾಸ್ತವಿಕ ಮತ್ತು ವೈಜ್ಞಾನಿಕ ತಂಬಾಕು ನಿಯಂತ್ರಣ ನೀತಿಗಳನ್ನು ಸುಗಮಗೊಳಿಸಲು ಗ್ರಾಹಕರು, ಉದ್ಯಮಿಗಳು ಮತ್ತು ಸರ್ಕಾರ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

Continue Reading

ದೇಶ

CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

CoWIN Certificates: ಕೊರೋನಾ ಲಸಿಕೆ ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕಿದೆ. ಈ ಹಿಂದೆ ಈ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ಜೊತೆಗೆ ಭಾರತ ಒಟ್ಟಾಗಿ ಕೋವಿಡ್‌-19ನನ್ನು ಸೋಲಿಸಲಿದೆ ಎಂಬ ಘೋಷವಾಕ್ಯ ಕಾಣಬಹುದಾಗಿತ್ತು. ಇದೀಗ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆ ಮಾಡಿತ್ತು.

VISTARANEWS.COM


on

CoWin Certificates
Koo

ನವದೆಹಲಿ: ಕೋವಿಡ್‌-19(Covid-19) ಲಸಿಕೆಗೆ ನೀಡಲಾಗಿದ್ದ ಕೋವಿನ್‌ ಪ್ರಮಾಣಪತ್ರ(CoWIN Certificates)ಗಳಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ(Union Health Ministry) ಮಹತ್ವದ ಬದಲಾವಣೆಯೊಂದನ್ನು ಮಾಡಿದ್ದು, ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಭಾವಚಿತ್ರವನ್ನು ತೆಗೆದುಹಾಕಿದೆ. ಈ ಹಿಂದೆ ಈ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ಜೊತೆಗೆ ಭಾರತ ಒಟ್ಟಾಗಿ ಕೋವಿಡ್‌-19ನನ್ನು ಸೋಲಿಸಲಿದೆ ಎಂಬ ಘೋಷವಾಕ್ಯ ಕಾಣಬಹುದಾಗಿತ್ತು. ಇದೀಗ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆ ಮಾಡಿತ್ತು.

ಈ ಮಹತ್ವದ ಬದಲಾವಣೆ ಬಗ್ಗೆ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆ ಆಗುತ್ತಿದ್ದು, ಕೋವಿನ್‌ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ಮೋದಿಯ ಭಾವಚಿತ್ರ ಮಾಯವಾಗಿದೆ. ಬೇಕಿದ್ದರೆ ಡೌನ್‌ಲೋಡ್‌ ಮಾಡಿ ಚೆಕ್‌ ಮಾಡಿ ಎಂದು ಎಕ್ಸ್‌ ಬಳಕೆದಾರ ಸಂದೀಪ್‌ ಹೇಳಿದ್ದಾರೆ. ಇನ್ನೊಬ್ಬ ಬಳಕೆದಾದ ಇರ್ಫಾನ್‌ ಅಲಿ ಟ್ವೀಟ್‌ ಮಾಡಿದ್ದು, ಹೌದು ಪ್ರಧಾನಿ ಮೋದಿ ಫೋಟೋ ಪ್ರಮಾಣ ಪತ್ರದಲ್ಲಿ ಇಲ್ಲ. ಅದರ ಬದಲು ಅಲ್ಲಿ ಕ್ಯೂ ಆರ್‌ ಕೋಡನ್ನು ಕಾಣಬಹುದಾಗಿದೆ. ಇನ್ನು ಈ ಹಿಂದೆಯೇ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್‌, ಮಣಿಪುರ ಮತ್ತು ಗೋವಾದಲ್ಲಿ ಪ್ರಧಾನಿ ಮೋದಿಯ ಭಾವಚಿತ್ರವನ್ನು ಪ್ರಮಾಣಪತ್ರದಿಂದ ತೆಗೆದುಹಾಕಲಾಗಿತ್ತು. ಇನ್ನು ಈ ಬಗ್ಗೆ ಸ್ವತಃ ಆರೋಗ್ಯ ಇಲಾಖೆ ಪ್ರತಿಕ್ರಿಯಿಸಿದ್ದು, ಕೋವಿನ್‌ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ತೆಗೆದು ಹಾಕಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅವರ ಫೋಟೋ ತೆಗೆದುಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಮತ್ತೊಂದೆಡೆ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಳ್ಳುವ ಮೂಲಕ ಜನರನ್ನು ಆತಂಕಕ್ಕೆ ತಳ್ಳಿತ್ತು. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದಲ್ಲಿ ಹೇಳಿದ್ದರು.

ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತು ಮತ್ತು ದೇಶದಲ್ಲಿ ವ್ಯಾಪಕವಾಗಿ ನೀಡುತ್ತಿದೆ. AstraZeneca ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಯನ್ನು ಎದುರಿಸುತ್ತಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ನಷ್ಟ ಪರಿಹಾರ ಬಯಸಿದ್ದಾರೆ.

ಇದನ್ನೂ ಓದಿ:Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

ಇನ್ನು ಜನರನ್ನು ಆತಂಕಕ್ಕೀಡು ಮಾಡಿರುವ ಈ ವಿಚಾರದ ಬಗ್ಗೆ ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಕೊರೊನಾ ವೈರಸ್‌ಎದುರಿಸಲು ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ ಅಡ್ಡ ಪರಿಣಾಮದ ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಿದ್ದಾರೆ. ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ


Continue Reading
Advertisement
Murder case in Bengaluru
ಬೆಂಗಳೂರು3 mins ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ4 mins ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Andre Russell
ಕ್ರಿಕೆಟ್16 mins ago

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Jolly LLB 3
ಸಿನಿಮಾ17 mins ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Davanagere lok sabha constituency bjp candidate gayatri siddeshwar election campaign in harapanahalli
ರಾಜಕೀಯ19 mins ago

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

MLC Chalavadi Narayanaswamy latest Statement in Hubballi
ಹುಬ್ಬಳ್ಳಿ20 mins ago

Lok Sabha Election: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

Mega Shetty
ಫ್ಯಾಷನ್28 mins ago

Mega Shetty: ದಾವಣಿ-ಲಂಗದಲ್ಲಿ ನಟಿ ಮೇಘಾ ಶೆಟ್ಟಿಯಂತೆ ನೀವೂ ಕಾಣಬೇಕೆ? ಈ ಟಿಪ್ಸ್ ಪಾಲಿಸಿ!

six seats of Karnataka Legislative Council Elections to be held on June 3
ಕರ್ನಾಟಕ30 mins ago

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Deepika Padukone
ಬಾಲಿವುಡ್33 mins ago

Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

Sania Mirza
ಕ್ರೀಡೆ40 mins ago

Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌