Poster Politics | ಇಂಡಿಯನ್‌ ಮನಿ ಸಿಇಒ ಸುಧೀರ್ ವಿಡಿಯೊ ಎಡಿಟ್‌ ಮಾಡಿದ ಕಾಂಗ್ರೆಸ್‌, ದೂರು ದಾಖಲು - Vistara News

ಕರ್ನಾಟಕ

Poster Politics | ಇಂಡಿಯನ್‌ ಮನಿ ಸಿಇಒ ಸುಧೀರ್ ವಿಡಿಯೊ ಎಡಿಟ್‌ ಮಾಡಿದ ಕಾಂಗ್ರೆಸ್‌, ದೂರು ದಾಖಲು

ಪೋಸ್ಟರ್‌ಗಾಗಿ (Poster Politics) ನಟ ಅಖಿಲ್‌ ಅಯ್ಯರ್‌ ಅವರ ಫೋಟೊವನ್ನು ಕಾಂಗ್ರೆಸ್‌ ಬಳಸಿಕೊಂಡಿತ್ತು. ಅನುಮತಿ ಇಲ್ಲದೆ ಬಳಸಿಕೊಂಡ ಕಾರಣ ದೂರು ದಾಖಲಿಸುವುದಾಗಿ ಅಯ್ಯರ್‌ ತಿಳಿಸಿದ್ದಾರೆ. ಈಗ ಸುಧೀರ್‌ ಅವರೂ ತಮ್ಮ ವಿಡಿಯೊ ತಿರುಚಿದ ಕಾರಣ ಸೈಬರ್‌ ಪೊಲೀಸರಿಗೆ ದೂರು ನೀಡಿದ್ದಾರೆ.

VISTARANEWS.COM


on

Video
ತಿರುಚಿದ ವಿಡಿಯೊದ ಚಿತ್ರ ಹೀಗಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೇಸಿಎಂ ಪೋಸ್ಟರ್‌ಗಳ ಮೂಲಕ ರಾಜ್ಯದಲ್ಲಿ ಪೋಸ್ಟರ್‌ ರಾಜಕೀಯ (Poster Politics)ವನ್ನು ಹೆಚ್ಚಿಸುತ್ತಿರುವ ಕಾಂಗ್ರೆಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪೋಸ್ಟರ್‌ಗಾಗಿ ನಟರೊಬ್ಬರ ಚಿತ್ರವನ್ನು ಕಾಂಗ್ರೆಸ್‌ ಬಳಸಿದ ಬೆನ್ನಲ್ಲೇ ಇಂಡಿಯನ್‌ ಮನಿ.ಕಾಮ್‌ನ ಸಿಇಒ ಸುಧೀರ್‌ ಅವರ ವಿಡಿಯೊವನ್ನು ಕಾಂಗ್ರೆಸ್‌ ಎಡಿಟ್‌ ಮಾಡಿದೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಅಸ್ತ್ರ ಪ್ರಯೋಗಿಸಲು ಸುಧೀರ್‌ ವಿಡಿಯೊ ಬಳಸಿಕೊಂಡಿದ್ದು, ಈಗ ಸುಧೀರ್‌ ಅವರು ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗಾಗಿ, ಪೋಸ್ಟರ್‌ ರಾಜಕೀಯವು ಕಾಂಗ್ರೆಸ್‌ಗೆ ಕಾನೂನು ಬಿಕ್ಕಟ್ಟು ಎದುರಾಗುವ ಸಾಧ್ಯತೆ ತಂದೊಡ್ಡಿದೆ.

ಸಚಿವರಾದ ಡಾ.ಕೆ.ಸುಧಾಕರ್‌, ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯಸಭೆ ಸದಸ್ಯ ಜಗ್ಗೇಶ್‌ ಸೇರಿ ಹಲವರಿಗೆ ತಿರುಗೇಟು ನೀಡಲು ಇಂಡಿಯನ್‌ ಮನಿ.ಕಾಮ್‌ನ ಸುಧೀರ್‌ ಅವರ ವಿಡಿಯೊವನ್ನು ತಿರುಚಲಾಗಿದೆ. ಕಾಂಗ್ರೆಸ್‌ ಮುಖಂಡ ಬಿ.ಆರ್.ನಾಯ್ಡು ಅವರು ಅನುಮತಿ ಇಲ್ಲದೆಯೇ ವಿಡಿಯೊ ಬಳಸಿಕೊಂಡ ಹಿನ್ನೆಲೆಯಲ್ಲಿ ಸುಧೀರ್‌ ಅವರು ದೂರು ನೀಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಪೇಸಿಎಂ ಫೋಸ್ಟ್ ಹಚ್ಚಿದ ಪ್ರಕರಣದಲ್ಲಿ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಹೋಗಿದ್ದರು. ಸ್ಟೇಷನ್‌ ಬೇಲ್‌ ಪಡೆದು ನಾಯ್ಡು ಹೊರಬಂದಿದ್ದರು. ಈಗ ವಿಡಿಯೊ ತಿರುಚಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೂ ಮೊದಲು ಪೋಸ್ಟರ್‌ಗಾಗಿ ನಟ ಅಖಿಲ್‌ ಅಯ್ಯರ್‌ ಅವರ ಫೋಟೊವನ್ನು ಕಾಂಗ್ರೆಸ್‌ ಬಳಸಿಕೊಂಡಿತ್ತು. ಅನುಮತಿ ಇಲ್ಲದೆ ಬಳಸಿಕೊಂಡ ಕಾರಣ ದೂರು ದಾಖಲಿಸುವುದಾಗಿ ಅಯ್ಯರ್‌ ತಿಳಿಸಿದ್ದಾರೆ. ಹೂಡಿಕೆ, ಸಾಲ, ಹಣದ ನಿರ್ವಹಣೆ ಸೇರಿ ಹಲವು ವಿಷಯಗಳ ಕುರಿತು ಸುಧೀರ್‌ ಅವರು ಇಂಡಿಯನ್‌ ಮನಿ.ಕಾಮ್‌ ಯೂಟ್ಯೂಬ್‌ ಚಾನೆಲ್ ಹಾಗೂ ಆ್ಯಪ್ ಮೂಲಕ ಮಾಹಿತಿ ನೀಡುತ್ತಾರೆ.

ಇದನ್ನೂ ಓದಿ | ಕಾಂಗ್ರೆಸ್‌ಗೆ ಎರಡು ಸಂಕಷ್ಟ: 40% ಪೋಸ್ಟರ್‌ನಲ್ಲಿ ಸಿನಿಮಾ ನಟನ ಫೋಟೊ, ಸಿಎಂ ಕಡೆಯಿಂದ ಲಿಂಗಾಯತ ಕಾರ್ಡ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Kidnap Case: ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ.

VISTARANEWS.COM


on

Kidnap Case
Koo

ಬೆಂಗಳೂರು: ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ (Youth Congress President Nalapad) ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ (Student Kidnap Case) ಮಾಡಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು, ಆರೋಪಿಗಳಿಗೆ ಹುಡುಕಾಡಲಾಗುತ್ತಿದೆ.

ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ ಜೀವನ್ ನಂತರ ಕಾರಣಾಂತರದಿಂದ ಹಣ ಕೊಡಲು ಆಗದೆ ಒದ್ದಾಡುತ್ತಿದ್ದ.

ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ. ಪೊಲೀಸ್‌ ಕಮಿಷನರ್‌ಗೆ ಮೇಲ್ ಮಾಡಿ ದೂರು ನೀಡಿದ್ದಾನೆ.

ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಆಸ್ಪತ್ರೆಪಾಲು

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Continue Reading

ಬೆಂಗಳೂರು

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

Food Poison: ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು.

VISTARANEWS.COM


on

food poison bangalore
Koo

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

ಬೆಂಗಳೂರು: ತಾಯಿ-ಮಗನನ್ನು ಕಿಡ್ನ್ಯಾಪ್‌ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ 9 ಆರೋಪಿಗಳನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಿಡ್ನ್ಯಾಪ್‌ ಆಗಿದ್ದ ಯುವಕನ ಮೇಲೆ ಕಳ್ಳತನ ಪ್ರಕರಣಗಳಿದ್ದವು. ಹೀಗಾಗಿ ಹಣ ವಸೂಲಿ ಮಾಡಲು ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ (Physical Abuse) ನೀಡಿದ್ದರು. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವರುಣ್ ಮತ್ತು ಆತನ ತಾಯಿಯನ್ನು ಅಪಹರಣ ಮಾಡಲಾಗಿತ್ತು. ರೌಡಿ ಶೀಟರ್‌ಗಳಾದ ಜೋಸೆಫ್, ಶ್ರೀನಿವಾಸ್ @ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು.

ವರುಣ್ ಹಾಗೂ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹಾಗಾಗಿ ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ-ಮಗನನ್ನು ಆರೋಪಿಗಳು ಬೆದರಿಸಿದ್ದರು. ಆದರೆ, ಅವರು ಹಣ ನೀಡದ ಹಿನ್ನೆಲೆ ತಾಯಿ- ಮಗನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು.

ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್‌ ಮಾಡಿದ್ದರು. ನಂತರ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಲಾಗಿದೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು.

2 ಲಕ್ಷ ರೂ. ಕೊಡುವಂತೆ ಆರೋಪಿಗಳಿಂದ ಕಿರುಕುಳ ನೀಡಲಾಗಿದೆ. ಇಬ್ಬರ ಬಳಿಯೂ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಸಂಬಂದ 9 ಆರೋಪಿಗಳ ಬಂಧನವಾಗಿದೆ.

ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್‌ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ | Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

Karnataka Weather Forecast
Karnataka Weather Forecast

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಗುಡುಗು ಸಹಿತ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kundapura Kannada Habba 2024: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸದ್ಯದಲ್ಲೇ ಸಮಿತಿ ರಚನೆ: ಜಯಪ್ರಕಾಶ ಹೆಗ್ಡೆ

Kundapura Kannada Habba 2024: ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ 2 ದಿನಗಳ ‘ಕುಂದಾಪ್ರ ಕನ್ನಡ ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿದ್ದಾರೆ.

VISTARANEWS.COM


on

Kundapura Kannada Habba 2024
Koo

ಬೆಂಗಳೂರು: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಯಾಗಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸದ್ಯದಲ್ಲೇ ಸಮಿತಿ ರಚನೆಯಾಗಲಿದೆ. ಮುಂದಿನ ಕುಂದಾಪ್ರ ಕನ್ನಡ ಹಬ್ಬದ (Kundapura Kannada Habba) ಸಂದರ್ಭದಲ್ಲಿ ಕುಂದಾಪ್ರ ಕನ್ನಡ ಭಾಷೆಯ ಅಧ್ಯಯನ ಪೀಠ ತನ್ನ ಕೆಲಸ ಪ್ರಾರಂಭಿಸಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ತಿಳಿಸಿದರು.

‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ 2 ದಿನಗಳ ‘ಕುಂದಾಪ್ರ ಕನ್ನಡ ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಪಾಲ್ಗೊಂಡು ಮಾತನಾಡಿ, ಮಾತೃ ಭಾಷೆಯ ಮೇಲೆ ಅಭಿಮಾನ ಬೆಳೆಸಿಕೊಳ್ಳುವುದರ ಜತೆಗೆ ಇತರೆ ಭಾಷೆಗಳ ಮೇಲೂ ಗೌರವ ಇರಬೇಕು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಆಡಳಿತಾತ್ಮಕವಾಗಿ ಬೇರೆಯಾಗಿದ್ದರೂ, ಭಾವನಾತ್ಮಕವಾಗಿ ಇಂದಿಗೂ ತನ್ನ ನಂಟನ್ನು ಉಳಿಸಿಕೊಂಡಿದೆ. ಇಲ್ಲಿನ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಭಿನ್ನತೆ ಇರಬಹುದು. ಆದರೆ ನಾವೆಲ್ಲರೂ ಒಂದೇ ಎನ್ನುವುದನ್ನು ಯಾರೂ ಮರೆಯಬಾರದು. ಮಕ್ಕಳಿಗೆ ಮೊದಲು ಮಾತೃಭಾಷೆ ಕಲಿಸಿಕೊಡಬೇಕು. ಉಳಿದದ್ದನ್ನು ಅವರೇ ಕಲಿತುಕೊಳ್ಳುತ್ತಾರೆ ಎಂದರು.

ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ ಮಾತನಾಡಿ, ಕುಂದಾಪುರದ ಜನರು ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಎಷ್ಟೇ ಗಂಭೀರವಾಗಿ ತೆಗೆದುಕೊಂಡರೂ, ಅದನ್ನು ಅಷ್ಟೇ ಆರಾಮವಾಗಿ ನೋಡುತ್ತಾರೆ. ಅಜ್ಜನಿಂದ, ತಂದೆಯವರೆಗೂ ಎಲ್ಲರನ್ನೂ ತಮಾಷೆ ಮಾಡುವ ಭಾಷೆ ಇದ್ದರೆ ಅದು ಕುಂದಾಪುರ ಕನ್ನಡ ಭಾಷೆ. ಇದು ಭಾಷೆಯ ಗರಿಮೆ. ಈ ಒಂದು ಕಾರಣದಿಂದ ನಾವೆಲ್ಲರೂ ಸಮಾನರು ಎಂಬ ಭಾವನೆ ವ್ಯಕ್ತವಾಗುತ್ತದೆ. ಸಮಾನತೆ ಕುಂದಾಪುರ ಭಾಷೆಯಲ್ಲಿದೆ. ಬದುಕನ್ನು ಸುಂದರವಾಗಿ ಕಾಣುವ ದೃಷ್ಟಿಕೋನ ಕುಂದಾಪುರದ ಜನರಲ್ಲಿದೆ. ಹೀಗಾಗಿ ಜೀವನದಲ್ಲಿ ಎಷ್ಟೇ ದೊಡ್ಡ ಸೋಲಾದರೂ ಬೇಗನೆ ಪುಟಿದೇಳುತ್ತಾರೆ ಎಂದು ಹೇಳಿದರು.

ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಕುಂದಾಪುರದವರು ತಮ್ಮ ಭಾಷೆ ಉಳಿಸಿ ಬೆಳೆಸುತ್ತಿದ್ದಾರೆ. ಮಕ್ಕಳಿಗೆ ಇಂಗ್ಲಿಷ್​ ಭಾಷೆ ಕಲಿಸುವುದು ತಪ್ಪಲ್ಲ. ನಮ್ಮತನ ಉಳಿಯಬೇಕೆಂದಾದರೆ ಮನೆಯಲ್ಲಿ ಮಕ್ಕಳೊಂದಿಗೆ ಆಡುಭಾಷೆಯಲ್ಲೇ ಮಾತನಾಡಿ. ಕುಂದಾಪುರ ಭಾಷೆಯಲ್ಲಿ ವಿಶಿಷ್ಟ ಶಕ್ತಿ ಇದೆ. ಭಾಷೆಯನ್ನು ಉಳಿಸಿಕೊಂಡರೆ ನಾವು ಉಳಿಯುತ್ತೇವೆ. ನಾವು ಉಳಿಯಬೇಕಾದರೆ ಭಾಷೆ ಉಳಿಯಬೇಕು ಎಂದು ಹೇಳಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಎ.ಎಸ್.ಕೇಟರರ್ಸ್‌ನ ಸತೀಶ್ ಶೆಟ್ಟಿ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ, ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಉಪೇಂದ್ರ ಶೆಟ್ಟಿ, ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಮುಂತಾದವರು ಉಪಸ್ಥಿತರಿದ್ದರು.

‘ಹುಟ್ಟೂರ ಗೌರವ’ ಸನ್ಮಾನ

ದೇಶ ವಿದೇಶದಲ್ಲಿ ಎಷ್ಟೇ ಗೌರವ ಸನ್ಮಾನ ಬಂದಿದ್ದರೂ, ಹುಟ್ಟೂರ ಸನ್ಮಾನಕ್ಕೆ ಯಾವುದೂ ಸರಿಸಾಟಿ ಇಲ್ಲ. 14 ತಿಂಗಳ ಮಗುವಾಗಿದ್ದಾಗ ಪೋಲಿಯೂ ರೋಗಕ್ಕೆ ತುತ್ತಾದೆ. ಹೆತ್ತವರ ಪರಿಶ್ರಮ, ಆಶೀರ್ವಾದದ ಫಲವಾಗಿ ಸಾಧನೆ ಸಾಧ್ಯವಾಗಿದೆ. ನಾನಿಂದು ವ್ಹೀಲ್‌ಚೇರ್​ನಲ್ಲಿ ಕೂತಿಲ್ಲ, ಇದು ನನ್ನ ರಥ, ಇದರಲ್ಲಿ ರಾಣಿಯಂತೆ ಕೂತಿದ್ದೇನೆ ಎಂದು ಭಾವಿಸುತ್ತೇನೆ. ಕನಸು ಕಾಣಬೇಕು. ಆ ಕನಸು ಒಂದಲ್ಲ ಒಂದು ದಿನ ನನಸಾಗುತ್ತದೆ. ಕೆಲವು ಬಾರಿ ಸ್ವಲ್ಪ ತಡವಾಗುತ್ತದೆ. ಇದಕ್ಕೆ ನಾನೇ ಉದಾಹರಣೆ. ದೇವರು ನನಗೆ ಸಣ್ಣ ನೋವು ಕೊಟ್ಟರೂ, ನೂರರಷ್ಟು ಗೌರವ ಕೊಟ್ಟಿದ್ದಾನೆ. ಅಂಗವೈಕಲ್ಯ ಇದೆ ಅಂತ ಅಂಜಬೇಕಿಲ್ಲ. ಮನಸ್ಸಿದ್ದರೆ ಎಲ್ಲವನ್ನೂ ಗೆಲ್ಲಬಹುದು ಎಂದು ಪದ್ಮಶ್ರೀ, ಅರ್ಜುನ ಪ್ರಶಸ್ತಿ ಪುರಸ್ಕೃತೆ ಡಾ.ಕೆ.ಮಾಲತಿ ಹೊಳ್ಳ ‘ಊರ ಗೌರವ’ ಸ್ವೀಕರಿಸಿ ಮಾತನಾಡಿದರು.

ಹಿಂದೆ ಕುಂದಾಪುರ ಭಾಷೆ ಮಾತನಾಡಿದರೆ ‘ಸರಿಯಾಗಿ ಮಾತನಾಡು’ ಎನ್ನುತ್ತಿದ್ದರು. ಈ ಭಾಷೆ ಸರಿಯಾಗಿಲ್ಲ ಎಂದವರು ಯಾರು? ಇಂದಿಗೆ ಭಾಷೆಯ ಮೇಲಿನ ಕೀಳರಿಮೆ ಕಳೆದು ಹೋಗಿದೆ. ಬೆಂಗಳೂರಿನಲ್ಲಿರುವ ವಿವಿಧ ಜಿಲ್ಲೆಗಳ ಜನರು ಕುಂದಾಪುರ ಭಾಷೆ ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ಪ್ರಭಾವ ಬೀರಿದಂತೆ ಭಾಷೆ ಬೆಳೆಯುತ್ತ ಹೋಗುತ್ತದೆ.
| ಗುರುರಾಜ ಗಂಟಿಹೊಳೆ, ಶಾಸಕ, ಬೈಂದೂರು ಕ್ಷೇತ್ರ

ಕುಂದಾಪುರ ನನ್ನಿಷ್ಟದ ಊರು. ಕೊಟ್ಟೆ ಕಡುಬು ನೆಚ್ಚಿನ ತಿನಿಸು. ಅತ್ತೆ-ಮಾವನ ಮೂಲಕ ಕನ್ನಡ ಕಲಿತುಕೊಂಡಿದ್ದೇನೆ. ಮದುವೆ ನಂತರ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗಿದ್ದೆ. ‘ಕುಂದಾಪ್ರ ಕನ್ನಡ’ ಎಂದಾಗ ಮನೆಯಲ್ಲಿ ಮಾವ ‘ಹಾಯ್​ ಪದವನ್ನು ಹ್ವಾಯ್​ ಮಾಡು ಅಷ್ಟೇ..’ಎಂದಿದ್ದರು.
| ಪ್ರಿಯಾಂಕ ಉಪೇಂದ್ರ, ನಟಿ

Continue Reading
Advertisement
Kidnap Case
ಬೆಂಗಳೂರು19 mins ago

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Woman Using an Asthma Inhaler
ಆರೋಗ್ಯ40 mins ago

Myths About Asthma: ಇವು ಅಸ್ತಮಾ ಕುರಿತು ಇರುವ 9 ಸುಳ್ಳುಗಳು!

food poison bangalore
ಬೆಂಗಳೂರು56 mins ago

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

raksha bandhan 2024 ರಾಜಮಾರ್ಗ ಅಂಕಣ
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ – ರಕ್ಷಾ ಬಂಧನ

karnataka weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Raksha Bandhan 2024
Latest2 hours ago

Raksha Bandhan 2024: ಇಂದು ರಕ್ಷಾ ಬಂಧನ; ಈ ಹಬ್ಬದ ವಿಶೇಷವೇನು?

Dina Bhavishya
ಭವಿಷ್ಯ3 hours ago

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಡಬಲ್‌ ಲಾಭ

Viral Video
ವೈರಲ್ ನ್ಯೂಸ್8 hours ago

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್9 hours ago

Viral Video: ಅಬ್ಬಾ.. ಸಾವು ಹೀಗೂ ಬರುತ್ತಾ? ಸ್ನೇಹಿತನೊಂದಿಗೆ ಮಾತಾಡ್ತಾ ನಿಂತಿದ್ದವನ ಮೇಲೆ ದೊಪ್ಪೆಂದು ಬಿದ್ದ ಎಸಿ-ವಿಡಿಯೋ ಇದೆ

Rakesh pal
ಪ್ರಮುಖ ಸುದ್ದಿ9 hours ago

Rakesh Pal: ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ವಿಧಿವಶ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌