Motivational story | ಅವನು ದೋಣಿಗೆ ಬಣ್ಣ ಹಚ್ಚಿದ್ದಷ್ಟೇ ಅಲ್ಲ ಎಷ್ಟೋ ಪ್ರಾಣಗಳನ್ನೂ ಉಳಿಸಿದ್ದ, ಹೇಗೆ? - Vistara News

ಪ್ರಮುಖ ಸುದ್ದಿ

Motivational story | ಅವನು ದೋಣಿಗೆ ಬಣ್ಣ ಹಚ್ಚಿದ್ದಷ್ಟೇ ಅಲ್ಲ ಎಷ್ಟೋ ಪ್ರಾಣಗಳನ್ನೂ ಉಳಿಸಿದ್ದ, ಹೇಗೆ?

Motivational story | ನಾವು ಹೇಳಿದ್ದನ್ನು ಮಾಡುವ ಪ್ರವೃತ್ತಿಗೆ ಬಿದ್ದಿದ್ದೇವೆ. ನಮ್ಮ ಕೆಲಸದಾಚೆಗೆ ಏನೋ ಬೇರೆ ಮಾಡಿದಾಗ ಆಗುವ ಪರಿಣಾಮಗಳೇ ಬೇರೆ ಅನ್ನುತ್ತದೆ ಈ ಕಥೆ..

VISTARANEWS.COM


on

kids boating
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- motivational story
ಒಬ್ಬ ಶ್ರೀಮಂತ ವ್ಯಕ್ತಿ ಒಂದು ಹೊಸಾ ಬೋಟ್ ಖರೀದಿ ಮಾಡಿದ್ದ. ಅದಕ್ಕೆ ಕೆಂಪು ಬಣ್ಣ ಬಳಿಯುವಂತೆ ಒಬ್ಬ ಪೇಂಟರನ್ನು ಗುರುತು ಮಾಡಿದ್ದ. ಆ ಪೇಂಟರ್ ಬಂದು ಬಣ್ಣ ಬಳಿದು ದುಡ್ಡು ಪಡೆದುಕೊಂಡು ಹೋದ.

ಮರುದಿನ ಆ ಶ್ರೀಮಂ‌ತ ವ್ಯಕ್ತಿ ಪೇಂಟ್ ಮಾಡಿದವನ ಬಳಿಗೆ ಕಾರಿನಲ್ಲಿ ಧಾವಿಸಿ ಬಂದ. ಪೇಂಟ್ ಮಾಡಿದವನು ಏನೋ ಎಡವಟ್ಟಾಗಿದೆ ಎಂದು ಭಯಗೊಂಡ.

ಶ್ರೀಮಂತ ಬಂದವನೇ ಪೇಂಟರ್ ನ ಕೈ ಹಿಡಿದು ಒಂದು ಲಕ್ಷ ರೂಪಾಯಿಯ ಕಟ್ಟು ಇಟ್ಟುಬಿಟ್ಟ. ಪೇಂಟರ್ ಗೆ ಆಶ್ಚರ್ಯ. ಯಾಕಿಷ್ಟು ಹಣ, ಪೇಂಟಿಂಗ್ ಮಾಡಿದ್ದಕ್ಕೆ ಆಗಲೇ ಹಣ ಕೊಟ್ಟಿದ್ದೀರಿ.. ಇದೆಲ್ಲ ಯಾಕೆ ಎಂದು ಕೇಳಿದ.

ಆಗ ಶ್ರೀಮಂತ ಹೇಳಿದ: ಪೇಂಟಿಂಗ್ ಮಾಡಿದ್ದಕ್ಕೆ ದುಡ್ಡು ಕೊಟ್ಟಾಗಿದೆ. ಬೋಟ್ ನಲ್ಲಿದ್ದ ಒಂದು ಸಣ್ಣ ರಂಧ್ರವನ್ನು ಮುಚ್ಚಿದ್ದಕ್ಕೆ ಇಷ್ಟು ಹಣ ಎಂದ.

ಪೇಂಟರ್ ಗೆ ಅರ್ಥವಾಗಲಿಲ್ಲ. ಅದೇನು ದೊಡ್ಡ ಸಂಗತಿಯಾ? ಅಷ್ಟು ಸಣ್ಣ ಕೆಲಸಕ್ಕೆ ಇಷ್ಟು ಹಣವಾ? ಪೇಂಟ್ ಮಾಡುವಾಗ ಕಂಡಿತು, ಮುಚ್ಚಿದೆ ಅಷ್ಟೆ.. ಅಂದ.

ಆಗ ಶ್ರೀಮಂತ ಹೇಳಿದ: ಇದು ಇಷ್ಟು ಸರಳ‌ ಸಂಗತಿ ಅಲ್ಲ. ಏನಾಯ್ತು ಅಂತ ನಾನು ಹೇಳ್ತೇನೆ. ಪೇಂಟ್ ಮಾಡಲು ಹೇಳುವಾಗ ನನಗೆ ಅದರಲ್ಲಿ ಒಂದು ರಂಧ್ರ ಇರುವ ಬಗ್ಗೆ ಹೇಳಲು ಮರೆತು ಹೋಗಿತ್ತು. ನೀವು ಪೇಂಟ್ ಮಾಡಿ ಒಣಗಿದ್ದನ್ನು ಗಮನಿಸಿದ ‌ನನ್ನ ಮಕ್ಕಳೂ ಬೋಟನ್ನು ನೀರಿಗಿಳಿಸಿ ಬೋಟಿಂಗ್ ಶುರು ಮಾಡೇ ಬಿಟ್ಟಿದ್ದಾರೆ. ಅವರಿಗೂ ಅದರಲ್ಲಿ ರಂಧ್ರ ಇದ್ದದ್ದು ಗೊತ್ತಿಲ್ಲ.

ನಾನು ಹೊರಗೆ ಹೋಗಿ ಬರುವ ಹೊತ್ತಿಗೆ ದೋಣಿ ಕಾಣಲಿಲ್ಲ. ಯಾರು ತಗೊಂಡು ಹೋದ್ರು ಅಂತ ಕೇಳಿದ್ರೆ- ಮಕ್ಕಳು ಅಂದ್ರು. ನಂಗೆ ಜೀವ ಬಾಯಿಗೆ ಬಂತು. ನಾನು ಎಲ್ಲರನ್ನೂ ಕರೆದು ಹುಡುಕಿ ಅಂದೆ.

ಅಷ್ಟು ಹೊತ್ತಿಗೆ ಅವರು ನಗ್ತಾ ನಗ್ತಾ ಬೋಟ್ ನಡೆಸಿಕೊಂಡು ಬರ್ತಾ ಇರುವುದು ಕಾಣಿಸಿತು. ನಾನು ಬೋಟ್ ನಿಂತ ಕೂಡಲೇ ಓಡಿ ಹೋಗಿ ನೋಡಿದ್ರೆ ರಂಧ್ರವನ್ನು ಮುಚ್ಚಲಾಗಿದೆ..

ಹೌದು ನಾನೇ ಮುಚ್ಚಿದ್ದು- ಎಂದ ಪೇಂಟರ್.

ಈಗಿನ ಕಾಲದಲ್ಲಿ ಹೇಳಿದ ಕೆಲಸವನ್ನೇ ನೆಟ್ಟಗೆ ಮಾಡುವುದಿಲ್ಲ. ಅಂತದ್ರಲ್ಲಿ ನೀವು ನಿಮಗೆ ಸಂಬಂಧಿಸದ ಕೆಲಸವನ್ನು ಕೂಡಾ ನಿಯತ್ತಿನಿಂದ ಮಾಡಿದ್ರಿ…ನನ್ನ ಮಕ್ಕಳ ಪ್ರಾಣ ಉಳಿಸಿದ್ರಿ- ಎಂದರು ಶ್ರೀಮಂತ ವ್ಯಕ್ತಿ.

ಪೇಂಟರ್ ಗೆ ಖುಷಿ ಆಯಿತು.. ನಾವು ತುಂಬ ಸಲ ಇಂಥ ಸಣ್ಣ ಪುಟ್ಟ ಕೆಲಸ ಮಾಡ್ತೇವೆ. ಆದರೆ, ಈ ಥರ ಗುರುತಿಸಿ ಧನ್ಯವಾದ ಇದುವರೆಗೆ ಯಾರೂ ಹೇಳಿಲ್ಲ ಅಂದ.

ಇದನ್ನೂ ಓದಿ | Motivational story | 10 ವರ್ಷದ ಸೇವೆ ಮೇಲೋ, 10 ದಿನಗಳ ನಾಯಿ ಪ್ರೀತಿ ಮೇಲೋ? ಒಂದು Terror ಕಥೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

ತೆಲಂಗಾಣದಲ್ಲಿ ಕಳೆದ 24 ಗಂಟೆಯಲ್ಲಿಯೇ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಜಾಬ್‌ ಸಿಕ್ಕ ಖುಷಿಯಲ್ಲಿ ಪಾರ್ಟಿ ಕೊಟ್ಟ ಗೆಳತಿ ಮೇಲೆಯೇ ಇಬ್ಬರು ಗೆಳೆಯರು ಅತ್ಯಾಚಾರ ಎಸಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಖಾಸಗಿ ಬಸ್‌ನಲ್ಲಿ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಸ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Girl
Koo

ಹೈದರಾಬಾದ್:‌ ಹೆಣ್ಣುಮಕ್ಕಳಿಗೆ ಮನೆಯ ಹೊರಗೆ ಬಿಡಿ ಮನೆಯ ಒಳಗೆ ಕೂಡ ರಕ್ಷಣೆ ಇಲ್ಲದಂತಾಗಿದೆ. ಅಪರಿಚಿತರು ಬಿಡಿ ಸಂಬಂಧಿಕರನ್ನೇ ನಂಬದಂತಹ ಸ್ಥಿತಿ ಎದುರಾಗಿದೆ. ಮಧ್ಯಪ್ರದೇಶದ ರೇವಾದಲ್ಲಿ 13 ವರ್ಷದ ಬಾಲಕನು 9 ವರ್ಷದ ತಂಗಿಯ ಮೇಲೆಯೇ ಅತ್ಯಾಚಾರ (Rape Case) ಎಸಗಿ, ಕೊಲೆ ಮಾಡಿದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಇಂತಹ ಪ್ರಕರಣಗಳು ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಭಯ ಹುಟ್ಟಿಸುತ್ತಿವೆ. ಇದರ ಬೆನ್ನಲ್ಲೇ, ಹೈದರಾಬಾದ್‌ನಲ್ಲಿ (Hyderabad) ಒಬ್ಬ ಬಾಲ್ಯ ಸ್ನೇಹಿತ ಸೇರಿ ಇಬ್ಬರು ಯುವಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಹೈದರಾಬಾದ್‌ ಯುವತಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಾಬ್‌ ಸಿಕ್ಕಿದ್ದು, ಬಾಲ್ಯದ ಸ್ನೇಹಿತನಾದ ಗೌತಮ್‌ ರೆಡ್ಡಿಗೆ ವಿಷಯ ತಿಳಿಸಿದ್ದಾಳೆ. ಆಗ ಗೆಳೆಯನು ಪಾರ್ಟಿ ಕೊಡಿಸು ಎಂದಿದ್ದಾನೆ. ಜಾಬ್‌ ಸಿಕ್ಕ ಖುಷಿಯಲ್ಲಿದ್ದ ಯುವತಿಯು ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಕೊಡಿಸುವುದಾಗಿ ಒಪ್ಪಿಕೊಂಡಿದ್ದಾಳೆ. ಸೋಮವಾರ (ಜುಲೈ 29) ಸಂಜೆ ಗೌತಮ್‌ ರೆಡ್ಡಿಯು ತನ್ನ ಮತ್ತೊಬ್ಬ ಸ್ನೇಹಿತನೊಂದಿಗೆ ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್‌ಗೆ ತೆರಳಿದ್ದಾನೆ. ಅಲ್ಲಿ, ಯುವತಿ, ಗೌತಮ್‌ ರೆಡ್ಡಿ ಹಾಗೂ ಆತನ ಗೆಳೆಯ ಸೇರಿ ಪಾರ್ಟಿ ಮಾಡಿದ್ದಾರೆ. ಅದಾದ ಬಳಿಕ ಇಬ್ಬರೂ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

Crime Scene
Crime Scene

“ಗೌತಮ್‌ ರೆಡ್ಡಿ ಹಾಗೂ ಯುವತಿಯು 2ನೇ ಕ್ಲಾಸ್‌ನಿಂದ 10ನೇ ತರಗತಿವರೆಗೆ ಒಂದೇ ಶಾಲೆಯಲ್ಲಿ ಓದಿದ್ದಾರೆ. ಜಾಬ್‌ ಸಿಕ್ಕ ಖುಷಿಯಲ್ಲಿ ಯುವತಿಯು ಪಾರ್ಟಿಗೆ ಕರೆದಿದ್ದಾಳೆ. ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ ಬಳಿಕ ಕುಡಿದ ಮತ್ತಿನಲ್ಲಿ ಯುವತಿಯನ್ನು ಇಬ್ಬರೂ ಕೋಣೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇಬ್ಬರೂ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ವನಸ್ಥಲಿಪುರಂ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿ ಜಲೇಂದರ್‌ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ತೆಲಂಗಾಣದಲ್ಲಿಯೇ ಮಂಗಳವಾರ (ಜುಲೈ 30) ಬಸ್‌ನಲ್ಲಿ ಮಹಿಳೆ ಮೇಲೆ ಬಸ್‌ ಚಾಲಕನು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿರ್ಮಲ್‌ದಿಂದ ಖಾಸಗಿ ಬಸ್‌ನಲ್ಲಿ ಪ್ರಕಾಶಂ ಜಿಲ್ಲೆಗೆ ಮಹಿಳೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Continue Reading

ಪ್ರಮುಖ ಸುದ್ದಿ

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

Sarabjot Singh: ಈ ಪದಕದ ಮೂಲಕ ಮನು ಇತಿಹಾಸ ಸೃಷ್ಟಿಸಿದರೆ, ಸರಬ್ಜೋತ್ ತನ್ನ ಶೂಟಿಂಗ್ ವೈಭವ ಶುರು ಮಾಡಿದರು. ಅವರಿಗೆ ಇದು ತಮ್ಮ ಚೊಚ್ಚಲ ಒಲಿಂಪಿಕ್ಸ್​ ಸ್ಪರ್ಧೆ. ಒಲಿಂಪಿಕ್ ಕ್ರೀಡಾಕೂಟದ ಆರಂಭಿಕ ದಿನವಾದ ಶನಿವಾರ, ಅವರು ಪುರುಷ ಸಪರ್ಧೆಯ ಫೈನಲ್​ಗೆ ಅರ್ಹತೆ ಪಡೆಯಲು ವಿಫಲರಾಗಿ ಒಂಬತ್ತನೇ ಸ್ಥಾನ ಪಡೆದರು. ಹೀಗಾಗಿ ಅವರಿಗೆ ಈ ಪದಕ ಸಮಾಧಾನ ತರಲಿದೆ.

VISTARANEWS.COM


on

Sarabjot Singh
Koo

ಪ್ಯಾರಿಸ್: ಭಾರತದ ಯುವ ಶೂಟಿಂಗ್ ಜೋಡಿ ಸರಬ್ಜೋತ್ ಸಿಂಗ್ (Sarabjot Singh) ಹಾಗೂ ಮನು ಭಾಕರ್​ (Manu Bhaker) ಮಂಗಳವಾರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಮನು ಮತ್ತು ಸರಬ್ಜೋತ್ ಜೋಡಿ ದಕ್ಷಿಣ ಕೊರಿಯಾದ ಶೂಟರ್​ಗಳನ್ನು 16-10 ಅಂಕಗಳಿಂದ ಮಣಿಸಿ ಒಲಿಂಪಿಕ್ಸ್​​ನಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟರು . ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ನಂತರ ಮನು ಒಲಿಂಪಿಕ್ಸ್​ನ ಒಂದೇ ಆವೃತ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಪದಕಗಳನ್ನು ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೇ ವೇಳೆ ಸರಬ್ಜೋತ್ ಅವರು ಗಗನ್ ನಾರಂಗ್ ಮತ್ತು ವಿಜಯ್ ಕುಮಾರ್ ನಂತರ ಶೂಟಿಂಗ್ ಪದಕ ಗೆದ್ದ ಭಾರತೀಯ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕುತೂಹಲಕಾರಿ ಕಾಕತಾಳಿಯವೆಂದರೆ ನಾರಂಗ್ ಕಂಚಿನ ಪದಕ ಸರಿಯಾಗಿ 12 ವರ್ಷಗಳ ಹಿಂದೆ ಅಂದರೆ ಜುಲೈ 30, 2012 ರಂದು ಭಾರತಕ್ಕೆ ಲಭಿಸಿತ್ತು.

ಭಾರತ 261.3 ಅಂಕಗಳನ್ನು ಗಳಿಸಿತು, ಅದರಲ್ಲಿ ಸರಬ್ಜೋತ್ 110.2 ಅಂಕಗಳನ್ನು ಗಳಿಸಿದರು, ಇದರಲ್ಲಿ ಎರಡು ಬಾರಿ 10.2 ಮತ್ತು ಮನು ಸ್ಪರ್ಧೆಯಲ್ಲಿ ಏಕೈಕ ಬಾರಿ 10.5 ಅಂಕಗಳನ್ನು ಗಳಿಸಿದರು. ಎಂಟನೇ ಪ್ರಯತ್ನದಲ್ಲಿ ಮನು 8.3 10ಕ್ಕಿಂತ ಕಡಿಮೆ ಅಂಕ ಗಳಿಸಿದಾಗ, ಸರಬ್ಜೋತ್ 10.2 ಅಂಕ ಗಳಿಸಿ ಭಾರತ ಮುನ್ನಡೆ ಕಾಯ್ದುಕೊಳ್ಳುವುದಕ್ಕೆ ನೆರವಾಗಿದ್ದರು.

ಈ ಪದಕದ ಮೂಲಕ ಮನು ಇತಿಹಾಸ ಸೃಷ್ಟಿಸಿದರೆ, ಸರಬ್ಜೋತ್ ತನ್ನ ಶೂಟಿಂಗ್ ವೈಭವ ಶುರು ಮಾಡಿದರು. ಅವರಿಗೆ ಇದು ತಮ್ಮ ಚೊಚ್ಚಲ ಒಲಿಂಪಿಕ್ಸ್​ ಸ್ಪರ್ಧೆ. ಒಲಿಂಪಿಕ್ ಕ್ರೀಡಾಕೂಟದ ಆರಂಭಿಕ ದಿನವಾದ ಶನಿವಾರ, ಅವರು ಪುರುಷ ಸಪರ್ಧೆಯ ಫೈನಲ್​ಗೆ ಅರ್ಹತೆ ಪಡೆಯಲು ವಿಫಲರಾಗಿ ಒಂಬತ್ತನೇ ಸ್ಥಾನ ಪಡೆದರು. ಹೀಗಾಗಿ ಅವರಿಗೆ ಈ ಪದಕ ಸಮಾಧಾನ ತರಲಿದೆ.

ಸರಬ್ಜೋತ್ ಸಿಂಗ್ ಅವರ ಅದ್ಭುತ ಪ್ರಯಾಣದ ಹಾದಿ ಇಲ್ಲಿದೆ

ಸರಬ್ಜೋತ್ ಹರಿಯಾಣದ ಅಂಬಾಲಾದ ಧೀನ್ ಗ್ರಾಮದವರು. ಅವರ ತಂದೆ ಜತೀಂದರ್ ಸಿಂಗ್ ರೈತ. ತಾಯಿ ಹರ್ದೀಪ್ ಕೌರ್ ಗೃಹಿಣಿ. ಅವರು ಚಂಡೀಗಢದ ಸೆಕ್ಟರ್ 10 ರ ಡಿಎವಿ ಕಾಲೇಜಿನಲ್ಲಿ ಅಧ್ಯಯನ ಮಾಡಿರುವ ಸರಬ್ಜೋತ್​ ಅಂಬಾಲಾ ಕಂಟೋನ್ಮೆಂಟ್​ನಲ್ಲಿರುವ ಎಆರ್ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತುದಾರ ಅಭಿಷೇಕ್ ರಾಣಾ ಅವರ ಅಡಿಯಲ್ಲಿ ತರಬೇತಿ ಪಡೆದಿದ್ದಾರೆ.

2019 ರ ಜೂನಿಯರ್ ವಿಶ್ವ ಚಾಂಪಿಯನ್ಶಿಪ್ ಚಿನ್ನದ ಪದಕ ಗೆಲ್ಲುವ ಮೂಲಕ ಹಿರಿಯ ಶ್ರೇಣಿಗಳನ್ನು ಪ್ರವೇಶಿಸಿದ ಸರಬ್ಜೋತ್, 2023 ರಲ್ಲಿ ಏಷ್ಯನ್ ಗೇಮ್ಸ್ ತಂಡದ ಚಿನ್ನ ಮತ್ತು ಮಿಶ್ರ ತಂಡ ಬೆಳ್ಳಿ ಗೆದ್ದಿದ್ದರು. ಅವರು 2023ರ ಏಷ್ಯನ್ ಚಾಂಪಿಯನ್​ಶಿಪ್​​ನ ವೈಯಕ್ತಿಕ ಕಂಚಿನ ಪದಕವನ್ನು ಗೆದ್ದಿದ್ದರು. ಇದು ಪ್ಯಾರಿಸ್ ಒಲಿಂಪಿಕ್ಸ್​​ಗೆ ಅವರಿಗೆ ಅರ್ಹತೆ ಕೊಟ್ಟಿತ್ತು.

ಸರಬ್ಜೋತ್ ಆರಂಭದಲ್ಲಿ ಫುಟ್ಬಾಲ್ ಆಟಗಾರನಾಗಲು ಬಯಸಿದ್ದರು. ಆದರೆ ಬೇಸಿಗೆ ಶಿಬಿರದಲ್ಲಿ ಮಕ್ಕಳು ಆಟಿಕೆ ಪಿಸ್ತೂಲ್ ಬಳಲಿ ಗುರಿ ಹೊಡೆಯುವುದನ್ನು ನೋಡಿದ ಬಳಿಕ ಮನಸ್ಸು ಬದಲಾಯಿಸಿದ್ದರು. ಈ ಅನುಭವವು ಅವರ ಮನಸ್ಸಿನ ಮೇಲೆ ಪ್ರಮುಖ ಪರಿಣಾಮ ಬೀರಿತು. ಹೀಗಾಗಿ ಶೂಟಿಂಗ್ ಮುಂದುವರಿಸಲು ನಿರ್ಧರಿಸಿದರು.

ಶೂಟಿಂದ್ ದುಬಾರಿ. ಹೀಗಾಗಿ ತನ್ನ ತಂದೆಯ ಆರಂಭಿಕ ಹಿಂಜರಿಕೆಯ ಹೊರತಾಗಿಯೂ ಅದನ್ನೇ ವೃತ್ತಿಯಾಗಿ ಮುಂದುವರಿಸುವ ನಿರ್ಧಾರವನ್ನು ಬೆಂಬಲಿಸುವಂತೆ ತನ್ನ ಹೆತ್ತವರ ಮನವೊಲಿಸುವಲ್ಲಿ ಸರಬ್ಜೋತ್​ ಯಶಸ್ವಿಯಾಗಿದ್ದರು.

ಜಿಲ್ಲಾಮಟ್ಟದಿಂದ ಆರಂಭ

ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಗೆದ್ದ ನಂತರ, ಅವರು 2016ರಿಂದ ಅವರು ಅಭಿಷೇಕ್ ರಾಣಾ ಅವರ ಅಡಿಯಲ್ಲಿ ವೃತ್ತಿಪರ ತರಬೇತಿ ಪಡೆಯಲು ಪ್ರಾರಂಭಿಸಿದರು. ಡಿಸೆಂಬರ್ 2022 ರಲ್ಲಿ ಭೋಪಾಲ್​​ನ ಮಧ್ಯಪ್ರದೇಶ ರಾಜ್ಯ ಶೂಟಿಂಗ್ ಅಕಾಡೆಮಿ ಆಫ್ ಎಕ್ಸಲೆನ್ಸ್​ನಲ್ಲಿ ನಡೆದ ತಂಡ ಸ್ಪರ್ಧೆಯಲ್ಲಿ ಜಯಗಳಿಸಿದ ಸರಬ್ಜೋತ್ 2022 ರ ಡಿಸೆಂಬರ್​ನಲ್ಲಿ ನಡೆದ 65 ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್​ಶಿಪ್​ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದರು.

ಇದನ್ನೂ ಓದಿ: Dinesh Mongia : ಭಾರತ ತಂಡದ ಮಾಜಿ ಆಟಗಾರ ದಿನೇಶ್ ಮೋಂಗಿಯಾ ಗೋವಾ ಕ್ರಿಕೆಟ್​ ತಂಡದಲ್ಲಿ ಹೊಸ ಜವಾಬ್ದಾರಿ

2021 ರ ಜೂನಿಯರ್ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಸರಬ್ಜೋತ್ ತಂಡ ಮತ್ತು ಮಿಶ್ರ-ತಂಡ ಸ್ಪರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದರು. ಮಾರ್ಚ್ 2023 ರಲ್ಲಿ ವಿಶ್ವಕಪ್​ನ ಮೊದಲ ಫೈನಲ್ ಪಂದ್ಯದಲ್ಲಿ 16-0 ಪರಿಪೂರ್ಣ ಸ್ಕೋರ್​ನೊಂದಿಗೆ ಚಿನ್ನದ ಪದಕವನ್ನು ಗಳಿಸುವ ಮೂಲಕ ಅವರು ಮತ್ತಷ್ಟು ಉತ್ತಮ ಸಾಧನೆ ಮಾಡಿದ್ದರು. ಸ್ಪರ್ಧೆಯುದ್ದಕ್ಕೂ, ಅವರು 585 ಅಂಕಗಳೊಂದಿಗೆ ಅಗ್ರ ಸ್ಕೋರರ್ ಆಗಿ ಹೊರಹೊಮ್ಮಿದರು ಮತ್ತು ಒಟ್ಟು 253.2 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಪಡೆದಿದ್ದರು

Continue Reading

ಕ್ರಿಕೆಟ್

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

ಕ್ರಿಕೆಟ್ ಆಡುವುದರ ಹೊರತಾಗಿ ವಿಶ್ವದ ಶ್ರೀಮಂತ ಕ್ರಿಕೆಟಿಗರು ಕೆಲವು ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಮತ್ತು ಹೆಚ್ಚುವರಿ ಆದಾಯವನ್ನೂ ಗಳಿಸುತ್ತಾರೆ. ಅದು ಅವರ ನಿವ್ವಳ ಮೌಲ್ಯವನ್ನು ಹೆಚ್ಚಿಸುತ್ತದೆ. ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ (Richest Cricketers) ಭಾರತದ ಮೂವರು ಕ್ರಿಕೆಟಿಗರೂ ಸೇರಿದ್ದಾರೆ. ವಿಶ್ವದ ಐವರು ಶ್ರೀಮಂತ ಕ್ರಿಕೆಟಿಗರ ಸಂಪತ್ತಿನ ಮಾಹಿತಿ ಇಲ್ಲಿದೆ.

VISTARANEWS.COM


on

By

Richest Cricketers
Koo

ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ (most popular sports) ಒಂದಾಗಿರುವ ಕ್ರಿಕೆಟ್ (cricket) ತನ್ನ ಅಪಾರ ಅಭಿಮಾನಿಗಳ ಕಾರಣದಿಂದಾಗಿ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಆದಾಯ ಗಳಿಸುವ ಕ್ಷೇತ್ರವಾಗಿ ಬೆಳೆದಿದೆ. ಇದರಲ್ಲಿ ಕೆಲವು ಆಟಗಾರರು (Richest Cricketers) ಸಾಕಷ್ಟು ಹೆಸರು ಮಾತ್ರವಲ್ಲ ಸಂಪತ್ತನ್ನು ಗಳಿಸಿದ್ದಾರೆ. ಪ್ರಪಂಚದಾದ್ಯಂತದ ಅಭಿಮಾನಿಗಳಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿರುವ ಹಲವಾರು ಕ್ರಿಕೆಟಿಗರಲ್ಲಿ ಕೆಲವರು ಮಾತ್ರ ವಿಶ್ವದ ಶ್ರೀಮಂತ ಕ್ರಿಕೆಟಿಗರಿಗಾಗಿ (Cricketers) ಗುರುತಿಸಿಕೊಂಡಿದ್ದಾರೆ.

ಕ್ರಿಕೆಟ್ ಆಡುವುದರ ಹೊರತಾಗಿ ವಿಶ್ವದ ಶ್ರೀಮಂತ ಕ್ರಿಕೆಟಿಗರು ಕೆಲವು ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಮತ್ತು ಹೆಚ್ಚುವರಿ ಆದಾಯವನ್ನೂ ಗಳಿಸುತ್ತಾರೆ. ಅದು ಅವರ ನಿವ್ವಳ ಮೌಲ್ಯವನ್ನು ಹೆಚ್ಚಿಸುತ್ತದೆ. ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಭಾರತದ ಮೂವರು ಕ್ರಿಕೆಟಿಗರೂ ಸೇರಿದ್ದಾರೆ.

ಕೆಲವು ಕ್ರಿಕೆಟ್ ಆಟಗಾರರು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರು, ಆದಾಯ ಗಳಿಸಿದ್ದರೆ ಇನ್ನು ಕೆಲವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್), ಬಿಗ್ ಬ್ಯಾಷ್ ಲೀಗ್ (ಬಿಬಿಎಲ್), ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಮತ್ತು ಮತ್ತೆ ಅನೇಕರು ಕ್ರಿಕೆಟ್ ಲೀಗ್‌ಗಳಲ್ಲಿ ದುಬಾರಿ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದರಲ್ಲಿ ವಿಶ್ವದ ಅಗ್ರ ಐದು ಶ್ರೀಮಂತ ಕ್ರಿಕೆಟಿಗರಾಗಿ ಗುರುತಿಸಿಕೊಂಡಿದ್ದಾರೆ. ಅವರು ಯಾರು, ಅವರ ಸಂಪತ್ತು ಎಷ್ಟಿದೆ ಗೊತ್ತೇ?

ವಿಶ್ವದ ಶ್ರೀಮಂತ ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತದ ಮೂವರು ಕ್ರಿಕೆಟಿಗರು ಮೊದಲನೇ ಸ್ಥಾನದಲ್ಲಿದ್ದಾರೆ. ಅದರಲ್ಲೂ ಕ್ರಿಕೆಟ್ ದೇವರು ಸಚ್ಚಿನ್ ತೆಂಡೂಲ್ಕರ್ ವಿಶ್ವದ ಅತಿ ಹೆಚ್ಚು ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ.

Richest Cricketers
Richest Cricketers


1. ಸಚಿನ್ ತೆಂಡೂಲ್ಕರ್

ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ವಿಶ್ವದ ಸಾರ್ವಕಾಲಿಕ ಶ್ರೀಮಂತ ಕ್ರಿಕೆಟಿಗ. ಭಾರತೀಯ ಶ್ರೇಷ್ಠ ಕ್ರಿಕೆಟಿಗರಾಗಿರುವ ಇವರು ಸುಮಾರು 172 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಇವರ ಸಂಪತ್ತಿನ ಮೌಲ್ಯ ಸುಮಾರು 1,440 ಕೋಟಿ ರೂ.

Richest Cricketers
Richest Cricketers


2. ಎಂ.ಎಸ್. ಧೋನಿ

ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ವಿಶ್ವದ ಎರಡನೇ ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ. ಹಲವು ದೊಡ್ಡ ಬ್ರ್ಯಾಂಡ್‌ಗಳಲ್ಲಿ ಪ್ರಮುಖ ಹೆಸರು ಗಳಿಸಿದ್ದಾರೆ. ವಿಕೆಟ್‌ಕೀಪರ್-ಬ್ಯಾಟರ್ ಆಗಿ ಸುಮಾರು 127 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದು, ಇವರ ಸಂಪತ್ತಿನ ಮೌಲ್ಯ 1,063 ಕೋಟಿ ರೂ.

Richest Cricketers
Richest Cricketers


3. ವಿರಾಟ್ ಕೊಹ್ಲಿ

ಸಕ್ರಿಯ ಆಟಗಾರರ ಪೈಕಿ ಶ್ರೀಮಂತ ಕ್ರಿಕೆಟಿಗ, ಸ್ಟಾರ್ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕ್ರಿಕೆಟ್ ಆಡುವುದರ ಹೊರತಾಗಿ ಕೊಹ್ಲಿ ಹಲವು ಬ್ರ್ಯಾಂಡ್‌ಗಳಲ್ಲಿ ಹೆಸರನ್ನು ಮಾಡಿದ್ದಾರೆ. ಸುಮಾರು 122 ಮಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿರುವ ಇವರ ಸಂಪತ್ತಿನ ಮೌಲ್ಯ 1,021 ಕೋಟಿ ರೂ.

Richest Cricketers
Richest Cricketers


4. ರಿಕಿ ಪಾಂಟಿಂಗ್

ರಿಕಿ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಇವರು ಆಸ್ಟ್ರೇಲಿಯಾ ತಂಡಕ್ಕೆ ಎರಡು ಒಡಿಐ ವಿಶ್ವಕಪ್ ಪ್ರಶಸ್ತಿಗಳು ಮತ್ತು ಎರಡು ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆಲ್ಲುವಲ್ಲಿ ಕಾರಣರಾದರು. ಸುಮಾರು 100 ಮಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ವಿಶ್ವದ ನಾಲ್ಕನೇ ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ. ಇವರ ಸಂಪತ್ತಿನ ಮೌಲ್ಯ ಸುಮಾರು 837 ಕೋಟಿ ರೂ.

ಇದನ್ನೂ ಓದಿ: Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

Richest Cricketers
Richest Cricketers


5. ಜಾಕ್ವೆಸ್ ಕಾಲಿಸ್

ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ, ವಿಶ್ವದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಜಾಕ್ವೆಸ್ ಕಾಲಿಸ್ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ಇವರು ಸುಮಾರು 586 ಕೋಟಿ ಮೊತ್ತದ ಸಂಪತ್ತನ್ನು ಹೊಂದಿದ್ದು, ಸುಮಾರು 70 ಮಿಲಿಯನ್ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.

Continue Reading

ಕರ್ನಾಟಕ

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

Puneeth Kerehalli: ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಈ ವೇಳೆ ಪೊಲೀಸರು ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.

VISTARANEWS.COM


on

Puneeth Kerehalli
Koo

ಬೆಂಗಳೂರು: ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣದಲ್ಲಿ ಬಂಧನವಾಗಿದ್ದ ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಗೆ (Puneeth Kerehalli) ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪರಿಶೀಲನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಅರೆಸ್ಟ್‌ ಅಗಿದ್ದ ಪುನೀತ್‌ ಕೆರೆಹಳ್ಳಿಗೆ ಜುಲೈ 27ರಂದು ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಇದರ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.

ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ದೇಶಬಿಟ್ಟು ಹೋಗಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಮತ್ತೆ ಇಂತಹದ್ದೆ ಅಪರಾಧ ಕೃತ್ಯದಲ್ಲಿ ಭಾಗಿ ಆಗಬಾರದು ಎಂದು ಕೋರ್ಟ್‌ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿ, ಮಾಂಸವನ್ನು ವಶಪಡಿಸಿಕೊಂಡಿದ್ದರು. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿದ್ದವು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ದಾಳಿ ಮಾಡಿತ್ತು. ಆದರೆ, ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಂಸದ ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ಆದರೆ, ಅದು ಮೇಕೆ ಮಾಂಸ ಎಂದು ವರದಿಯಲ್ಲಿ ಬಂದಿರುವುದಾಗಿ ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದರು.

ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

murder case
murder case

ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್‌ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.

ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.

ಮದುವೆಯಾದ್ಮೇಲೆ ಪ್ರಕಾಶ್‌ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.

ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.

ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್‌ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.

ಇದನ್ನೂ ಓದಿ: Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್‌ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
karnataka Rain
ಮಳೆ20 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ33 mins ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ39 mins ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ43 mins ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

8th Pay Commission
ದೇಶ49 mins ago

8th Pay Commission: 8ನೇ ವೇತನ ಆಯೋಗ ಜಾರಿಯಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

Richest Cricketers
ಕ್ರಿಕೆಟ್49 mins ago

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

Puneeth Kerehalli
ಕರ್ನಾಟಕ55 mins ago

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

IPL 2025
ಕ್ರಿಕೆಟ್56 mins ago

IPL 2025: ಬಿಸಿಸಿಐ ಈ ನಿಯಮ ಜಾರಿಗೆ ತಂದರೆ ಧೋನಿ ಮುಂದಿನ ಐಪಿಎಲ್​ ಆಡುವುದು ಅನುಮಾನ!

Dinesh Mongia
ಪ್ರಮುಖ ಸುದ್ದಿ1 hour ago

Dinesh Mongia : ಭಾರತ ತಂಡದ ಮಾಜಿ ಆಟಗಾರ ದಿನೇಶ್ ಮೋಂಗಿಯಾ ಗೋವಾ ಕ್ರಿಕೆಟ್​ ತಂಡದಲ್ಲಿ ಹೊಸ ಜವಾಬ್ದಾರಿ

yakshagana artist
ಉಡುಪಿ1 hour ago

Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ24 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌