NASA Artemis-1 | ನಾಸಾ ಚಂದ್ರಯಾನ ಸತತ 3ನೇ ಬಾರಿ ರದ್ದು, ಈ ಸಲ ಕಾರಣವೇನು? - Vistara News

ಪ್ರಮುಖ ಸುದ್ದಿ

NASA Artemis-1 | ನಾಸಾ ಚಂದ್ರಯಾನ ಸತತ 3ನೇ ಬಾರಿ ರದ್ದು, ಈ ಸಲ ಕಾರಣವೇನು?

ಇದುವರೆಗೆ ಎರಡು ಬಾರಿ ತಾಂತ್ರಿಕ ದೋಷದಿಂದ ರಾಕೆಟ್‌ (NASA Artemis-1) ಉಡಾವಣೆ ಮಾಡಲು ಆಗಿರಲಿಲ್ಲ. ಈಗ ಉಷ್ಣವಲಯದ ಚಂಡಮಾರುತದಿಂದಾಗಿ ಮತ್ತೆ ರದ್ದುಗೊಳಿಸಲಾಗಿದೆ.

VISTARANEWS.COM


on

Rocket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಚಂದಿರನ ಅಂಗಳಕ್ಕೆ ಮನುಷ್ಯನನ್ನು ಕಳುಹಿಸುವ ಮೂಲಕ ಮತ್ತೆ ಇತಿಹಾಸ ಸೃಷ್ಟಿಸುವ ಅಮೆರಿಕದ ಕನಸು ನನಸಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದುವರೆಗೆ ತಾಂತ್ರಿಕ ದೋಷಗಳಿಂದಾಗಿ ಎರಡು ಬಾರಿ ಉಡಾವಣೆಯನ್ನು ಮುಂದೂಡಿದ್ದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ನಾಸಾ)ಯು ಸೆ.೨೭ರಂದು ಮಾಡಬೇಕಿದ್ದ ಉಡಾವಣೆಯನ್ನು ಮತ್ತೆ ಮುಂದೂಡಿದೆ. ಆದರೆ, ಈ ಬಾರಿ ಉಷ್ಣವಲಯದ ಚಂಡಮಾರುತ ಬೀಸುವ ಸಾಧ್ಯತೆ ಇರುವುದರಿಂದ ಮುಂದೂಡಲಾಗಿದೆ. ಆರ್ಟೆಮಿಸ್‌ 1 (NASA Artemis-1) ಯೋಜನೆಯ ಭಾಗವಾಗಿ ರಾಕೆಟ್‌ ಉಡಾವಣೆ ಮಾಡಲು ಅಂತಿಮ ಸಿದ್ಧತೆ ನಡೆಸುತ್ತಿರುವಾಗಲೇ ರದ್ದುಗೊಳಿಸುವಂತಾಗಿದೆ.

ಆಗಸ್ಟ್‌ 29ರಂದು ತಾಂತ್ರಿಕ ದೋಷ ಹಾಗೂ ಇಂಧನ ಸೋರಿಕೆಯ ಕಾರಣದಿಂದಾಗಿ ಕೊನೆಯ ಕ್ಷಣದಲ್ಲಿ ರಾಕೆಟ್‌ ಉಡಾವಣೆಯನ್ನು ರದ್ದುಗೊಳಿಸಲಾಗಿತ್ತು. ಕೊನೆಗೆ ಸೆಪ್ಟೆಂಬರ್‌ 3ರಂದು ಉಡಾವಣೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಸತತ ಎರಡನೇ ಬಾರಿಗೂ ತಾಂತ್ರಿಕ ದೋಷ ಉಂಟಾಗಿತ್ತು. ಹಾಗಾಗಿ, ಸೆ.೨೭ರಂದು ಉಡಾವಣೆ ಮಾಡಲು ತೀರ್ಮಾನಿಸಲಾಗಿತ್ತು. ಈಗ ಉಷ್ಣವಲಯದ ಚಂಡಮಾರುತದ ಕಾರಣ ಮೂರನೇ ಬಾರಿಗೂ ಮುಂದೂಡಿದೆ.

ಈಗಾಗಲೇ ಅಪೋಲೊ ಯೋಜನೆ ಅಡಿ ಚಂದಿರನ ಅಂಗಳಕ್ಕೆ ಕಾಲಿಟ್ಟು ಇತಿಹಾಸ ಸೃಷ್ಟಿಸಿರುವ ನಾಸಾ, ಸುಮಾರು 50 ವರ್ಷಗಳ ಬಳಿಕ ಮತ್ತೆ ಚಂದಿರನ ಅಂಗಳಕ್ಕೆ ಕಾಲಿಡಲು ಸಜ್ಜಾಗಿದೆ. ಆದರೆ, ತಾಂತ್ರಿಕ ದೋಷ ಹಾಗೂ ಚಂಡಮಾರುತವು ಅಡ್ಡಿಯಾಗಿದೆ.

ಇದನ್ನೂ ಓದಿ | NASA Artemis-1 | ತಾಂತ್ರಿಕ ಅಡಚಣೆ, ರದ್ದಾದ ನಾಸಾ ಆರ್ಟೆಮಿಸ್ 1 ಮೂನ್ ಮಿಷನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿ; ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan: ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

Actor Darshan Will Attend The Court Hearing From Online

ದರ್ಶನ್‌ ಪತ್ನಿ ನಾನು ಎಂದ ವಿಜಯಲಕ್ಷ್ಮೀ

ನಟ ದರ್ಶನ್ (Actor Darshan) ಹಾಗೂ ಪವಿತ್ರ ಗೌಡ (Pavitra Gowda) ಸಂಬಂಧದ ಕುರಿತು ಕಮಿಷನರ್‌ ಬಿ. ದಯಾನಂದ್‌ (Police commissioner B Dayanand) ಅವರು ನೀಡಿರುವ ಉಲ್ಲೇಖದ ಬಗ್ಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi) ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ʼಪವಿತ್ರ ಗೌಡ ಅವರು ದರ್ಶನ್‌ ಪತ್ನಿ ಅಲ್ಲ, ದರ್ಶನ್‌ ಪತ್ನಿ ನಾನುʼ ಎಂದು ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ.‌ದಯಾನಂದ್ ಸುದ್ದಿಗೋಷ್ಠಿ ಮಾಡಿದ್ದರು. ಆ ವೇಳೆ,‌‌ ʼದರ್ಶನ್ ಪತ್ನಿ ಪವಿತ್ರ ಗೌಡಗೆ ರೇಣುಕಾ ಸ್ವಾಮಿ ‌ಅಶ್ಲೀಲ‌ ಸಂದೇಶ ಕಳಿಸಿದ್ದʼ ಎಂದು ಉಲ್ಲೇಖ ಮಾಡಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳಲ್ಲಿ, ‌ಪತ್ರಿಕೆಗಳಲ್ಲಿ‌ ಪ್ರಸಾರವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ‌ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

“ನೀವು ಸುದ್ದಿಗೋಷ್ಠಿಯಲ್ಲಿ ದರ್ಶನ್ ಪತ್ನಿ ಪವಿತ್ರ ಗೌಡ ಎಂದು ಹೇಳಿಕೆ‌ ನೀಡಿದ್ದೀರಿ. ದರ್ಶನ್‌ಗೆ ನಾನು ಕಾನೂನುಬದ್ಧವಾಗಿ ವಿವಾಹವಾದ ಏಕೈಕ ಪತ್ನಿ. ನಮ್ಮ ವಿವಾಹವು 19.05.2003ರಂದು ಧರ್ಮಸ್ಥಳದಲ್ಲಿ ಅದ್ಧೂರಿಯಾಗಿ ನೆರವೇರಿತು. ಪವಿತ್ರ ಗೌಡ ನನ್ನ ಪತಿ ದರ್ಶನ್ ಸ್ನೇಹಿತೆ ನಿಜ. ಆದರೆ ಅವರು ದರ್ಶನ್ ಅವರ ಹೆಂಡತಿಯಲ್ಲ ಎಂದು ದಯವಿಟ್ಟು ಗಮನಿಸಿ” ಎಂದು ವಿಜಯಲಕ್ಷ್ಮಿ ಬರೆದಿದ್ದಾರೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಮತ್ತು ದರ್ಶನ್‌ ಸಂಬಂಧ ಅದಲ್ಲ: ಕಮಿಷನರ್‌ಗೆ ಪತ್ರ ಬರೆದ ವಿಜಯಲಕ್ಷ್ಮಿ

Continue Reading

ಕ್ರೀಡೆ

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Team India: ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Team India
Koo

ನವದೆಹಲಿ: ಐಸಿಸಿ ಟಿ20 ವಿಶ್ವಕಪ್(T20 World Cup 2024)​ ಟ್ರೋಫಿ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾ (Team India) ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇಂದು(ಗುರುವಾರ) ಬೆಳಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಬಳಿಕ ವಿಶ್ವ ಕಪ್​ ಟ್ರೋಫಿ ಜತೆ ಆಟಗಾರರೊಂದಿಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮದ ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ನಮೋ ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದರು. ಈ ಫೋಟೊವನ್ನು ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಶೇರ್​ ಮಾಡಿದೆ.

ಇದನ್ನೂ ಓದಿ Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

Continue Reading

ಪ್ರಮುಖ ಸುದ್ದಿ

CM Siddaramaiah: ʼಮುಡಾದ ತಪ್ಪು, ನಾನು ಸಿಎಂ ಅಂತ ಸೈಟ್‌ ಬಿಡೋಕೆ ಆಗುತ್ತಾ?ʼ ಸಿಎಂ ಸಿದ್ದರಾಮಯ್ಯ

CM Siddaramaiah: ʼಬಿಜೆಪಿಯವರಿಗೆ ಏನೂ ವಿಷಯ ಇಲ್ಲ. ಅವರು ಆರ್. ಎಸ್.ಎಸ್ ಹೇಳಿದಂತೆ ಕೇಳ್ತಾರೆ. ಮುಡಾದಲ್ಲಿ ಏನು ವಿಷಯ ಇದೆ? ಬಿಜೆಪಿ ಅವರೇ ಕೊಟ್ಟು ಅವರೇ ಆರೋಪ ಮಾಡಿದರೆ, ಕಾನೂನು ಬಾಹಿರ ಎಂದು ಹೇಳಿದರೆ ಹೇಗೆ? ನಾನೇಕೆ ರಾಜೀನಾಮೆ ನೀಡಲಿ?’ ಎಂದು ಸಿಎಂ ಪ್ರಶ್ನಿಸಿದರು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ (MUDA) ಸೈಟ್‌ ಪ್ರಕರಣದ ಬಗ್ಗೆ ಬಿಜೆಪಿ (BJP) ನಡೆಸುತ್ತಿರುವ ಆರೋಪಗಳ ಸುರಿಮಳೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಸಚಿವ ಸಂಪುಟ (Cabinet) ಸಭೆಯಲ್ಲಿ ಸ್ಪಷ್ಟನೆ ನೀಡಿದರು. ಮುಡಾ ಹಗರಣದ ಕುರಿತು ಕೇಳಿಬರುತ್ತಿರುವ ಆರೋಪಗಳೆಲ್ಲ ಊಹಾಪೋಹಗಳು ಎಂದು ಸ್ಪಷ್ಟನೆ ನೀಡಿದರಲ್ಲದೆ, ʼನಾನು ಸಿಎಂ ಅನ್ನುವ ಕಾರಣಕ್ಕೆ ನನ್ನ ಸೈಟ್‌ ಬಿಡೋಕೆ ಆಗುತ್ತಾ?ʼ ಎಂದು ಪ್ರಶ್ನಿಸಿದರು.

ʼಕಾನೂನಿನ ಅನ್ವಯ ಪರಿಹಾರ ರೂಪದ ನಿವೇಶನ ಪಡೆದಿರುವುದು ಸ್ಪಷ್ಟ. ಬಿಜೆಪಿ ಸರ್ಕಾರದ ಕಾಲದಲ್ಲೇ ಇದರ ನಡಾವಳಿ ಆಗಿದೆ, ಪರಿಹಾರಕ್ಕೆ ಒಪ್ಪಿಗೆ ಸಿಕ್ಕಿದೆ. ನಮ್ಮ ಸರ್ಕಾರ ಬಂದ ಮೇಲೆ ಅಂದರೆ 2023, ಅಕ್ಟೋಬರ್‌ನಲ್ಲೇ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದ್ದು, ಅದಕ್ಕೂ‌ ಮುನ್ನವೇ ಪರಿಹಾರ ರೂಪದ ನಿವೇಶನ ನೀಡಲಾಗಿದೆ. ಯಾವುದೇ ಕಾನೂನು ಮೀರಿಲ್ಲ. ನಮ್ಮ ಮೇಲೆ ಬರುತ್ತಿರುವ ಆರೋಪಗಳೆಲ್ಲವೂ ಸುಳ್ಳುʼ ಎಂದು ಕ್ಯಾಬಿನೆಟ್‌ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ನಂತರ ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ʼಬಿಜೆಪಿಯವರಿಗೆ ಏನೂ ವಿಷಯ ಇಲ್ಲ. ಅವರು ಆರ್. ಎಸ್.ಎಸ್ ಹೇಳಿದಂತೆ ಕೇಳ್ತಾರೆ. ಮುಡಾದಲ್ಲಿ ಏನು ವಿಷಯ ಇದೆ? ಬಿಜೆಪಿ ಅವರೇ ಕೊಟ್ಟು ಅವರೇ ಆರೋಪ ಮಾಡಿದರೆ, ಕಾನೂನು ಬಾಹಿರ ಎಂದು ಹೇಳಿದರೆ ಹೇಗೆ? ನಾನೇಕೆ ರಾಜೀನಾಮೆ ನೀಡಲಿ? ಎಂದು ಸಿಎಂ ಪ್ರಶ್ನಿಸಿದರು.

ನಾವೇನು ಇಂತಹ ಕಡೆ ಕೊಡಿ ಎಂದು ಕೇಳಿದ್ದೇವಾ? ನಾವು ಇಂತಹ ಕಡೆ ಎಂದು ಕೇಳಿಲ್ಲ. ಅದು ಕೊಟ್ಟಿರುವುವರ ತಪ್ಪು. ಹಾಗಾದರೆ ಪರಿಹಾರ ಕೊಟ್ಟು ಬಿಡಲಿ. 62 ಸಾವಿರ ಕೋಟಿ ಬೆಲೆ ಬಾಳುವ ಜಮೀನು ಹೋಗಿದೆ. ನಮ್ಮ ಕೇಸ್ ಪ್ರತ್ಯೇಕ. ನನಗೆ ಕಡಿಮೆ ಸಿಕ್ಕಿದೆ. ನಾನು ಸಿಎಂ ಅಂತ ಸುಮ್ಮನೆ ಬಿಡಲು ಆಗುತ್ತಾ?ʼ ಎಂದು ಪ್ರಶ್ನಿಸಿದರು.

ʼಮುಡಾದವರು ನಮ್ಮ 3 ಎಕರೆ 16 ಗುಂಟೆ ಜಮೀನು ಒತ್ತುವರಿ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಒತ್ತುವರಿ ಮಾಡಿದ್ದಾರೆ ಅವರು. ನಮ್ಮ ಜಮೀನು ಸೈಟ್, ಪಾರ್ಕ್ ಮಾಡಿದ್ದಾರೆ. ಇದು ಮುಡಾದ ತಪ್ಪು. ಆ ತಪ್ಪನ್ನು ಮುಡಾದವರು ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ನಾನು ಸಿಎಂ ಅಂತ ಬಿಡಲು ಆಗುತ್ತಾ? ನಾವು 50:50 ನಿಯಮ ಒಪ್ಪಿಕೊಂಡಿದ್ದೇವೆ. ನಾವೇನು ಇಂತಹ ಕಡೆ ಕೊಡಿ ಎಂದು ಕೇಳಿಲ್ಲ. ನಾವೇನು ವಿಜಯನಗರದ 3-4ನೇ ಹಂತದಲ್ಲಿ ಕೊಡಿ ಎಂದು ಕೇಳಿಲ್ಲ. ಅಲ್ಲಿ ಜಾಗ ಇಲ್ಲ ಅಂತ ಇಲ್ಲಿ ಕೊಟ್ಟಿದ್ದಾರೆ. ಈಗ ಕೊಟ್ಟ ಸೈಟ್ ದರ ಎಷ್ಟಿದೆ ಎಂದು ಕೂಡ ನನಗೆ ಗೊತ್ತಿಲ್ಲ. ನಂತರ 50:50 ರದ್ದು ಮಾಡಿ ಎಂದು ಆದೇಶ ಮಾಡಿದ್ದಾರೆ. ಹಾಗಾದರೆ ಸೈಟ್ ವಾಪಸ್ ತೆಗೆದುಕೊಂಡು ಪರಿಹಾರ ನೀಡಲಿ. ನನಗೆ 62 ಕೋಟಿ ಪರಿಹಾರ ಕೊಟ್ಟು ಬಿಡಲಿ. ಒಂದು ಎಕರೆಗಿಂತ ಕಡಿಮೆ ಕೊಟ್ಟಿದ್ದಾರೆ. ಸಚಿವರು ಯಾವ ಫೈಲೂ ತಂದಿಲ್ಲ. ಇದೆಲ್ಲ ರಾಜಕೀಯ ಪ್ರೇರಿತ ಆರೋಪಗಳುʼ ಎಂದು ಸಿಎಂ ವಿವರಿಸಿದರು.

ಇದನ್ನೂ ಓದಿ: MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Continue Reading

ಪ್ರಮುಖ ಸುದ್ದಿ

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ʼಒನ್ ಸಿಟಿ ಒನ್‌ ರೇಟ್ʼ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಓಲಾ- ಉಬರ್‌ ಸೇರಿ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡ್ತಿಲ್ಲ. ಆರ್ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

VISTARANEWS.COM


on

drivers protest
Koo

ಬೆಂಗಳೂರು: ರಾಜಧಾನಿಯ ಶಾಂತಿನಗರದಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರು (Auto Drivers, Cab Drivers) ಓಲಾ- ಉಬರ್‌ (Ola, Uber) ಮುಂತಾದ ಆನ್‌ಲೈನ್‌ ಟ್ಯಾಕ್ಸಿ ವ್ಯವಸ್ಥೆಗಳ ವಿರುದ್ಧ ಸಾರಿಗೆ ಇಲಾಖೆ (Transport department) ಮುಖ್ಯ ಕಚೇರಿಗೆ ಮುತ್ತಿಗೆ (Drivers Protest) ಹಾಕಿದರು. ಬಿಟಿಎಸ್ ರೋಡ್ ಬ್ಲಾಕ್ (Road Block) ಮಾಡಿ ಪ್ರತಿಭಟನೆ (Protest) ನಡೆಸಿದರು. ಇದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಸಾವಿರಾರು ಆಟೋ, ಕ್ಯಾಬ್‌ಗಳನ್ನು ತಂದಿರುವ ಚಾಲಕರು ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಆಟೋ ಕ್ಯಾಬ್‌ಗಳನ್ನು ಎಲ್ಲೆಂದಲ್ಲಿ ನಿಲ್ಲಿಸಿದ್ದರಿಂದ ಬಿಟಿಎಸ್ ರೋಡ್‌ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ವಾಹನಗಳೆಲ್ಲ ರಸ್ತೆಯಲ್ಲೇ ನಿಂತವು.

ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ʼಒನ್ ಸಿಟಿ ಒನ್‌ ರೇಟ್ʼ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಓಲಾ- ಉಬರ್‌ ಸೇರಿ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡ್ತಿಲ್ಲ. ಆರ್ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಪ್ರಯಾಣಿಕರಿಗೆ ತೊಂದರೆ ಆಗಬಾರದು, ಪ್ರಯಾಣಿಕರಿಂದ ದುಪ್ಪಟ್ಟು ದರ ತೆಗೆದುಕೊಳ್ಳಬಾರದು ಎಂದು ಆದೇಶ ನೀಡಿದೆ. ಆದರೆ ಓಲಾ- ಉಬರ್ ಸೇರಿದಂತೆ ಅಗ್ರಿಗೇಟರ್ ಲೈಸೆನ್ಸ್ ಪಡೆದ ಕಂಪನಿಗಳು ದುಪ್ಪಟ್ಟು ದರವನ್ನು ಪಡೆದುಕೊಳ್ಳುತ್ತಿವೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಇದರ ಲಾಭವನ್ನು ಚಾಲಕರಿಗೂ ಕೊಡ್ತಿಲ್ಲ. ಇದರಿಂದ ಲಕ್ಷಾಂತರ ರುಪಾಯಿ ಬಂಡವಾಳ ಹಾಕಿ ವಾಹನಗಳನ್ನು ಖರೀದಿ ಮಾಡಿರುವ ಚಾಲಕರಿಗೆ ತೊಂದರೆ ಆಗುತ್ತಿದೆ. ಕೂಡಲೇ ಈ ಅಗ್ರಿಗೇಟರ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಂದು ಇನ್ನಷ್ಟು ದೊಡ್ಡ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಖಾಸಗಿ ಸಾರಿಗೆ (Private Transport) ಸಂಘಟನೆಗಳ ಅಧ್ಯಕ್ಷ ನಟರಾಜ್ ಶರ್ಮ ಹೇಳಿಕೆ ನೀಡಿದ್ದು, ಓಲಾ ಮತ್ತು ಉಬರ್ ಸಂಸ್ಥೆಗಳ ದರಗಳನ್ನು ನಿಯಂತ್ರಿಸಬೇಕು, ಅವುಗಳ ಲಾಭ ಚಾಲಕರಿಗೆ ನೀಡಬೇಕು, ಪೋರ್ಟರ್ ಕಂಪನಿಯನ್ನು ನಿರ್ಬಂಧಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಅವರ ಹೇಳಿಕೆ ಹೀಗಿದೆ: ಸೆ.11, 2023ರಂದು ಖಾಸಗಿ ಸಾರಿಗೆ ಸಂಘಟನೆಗಳು ಬಂದ್‌ಗೆ ಕರೆಕೊಟ್ಟಿದ್ದೆವು. ಬಸ್, ಆಟೋ, ಟ್ಯಾಕ್ಸಿ, ಗೂಡ್ಸ್, ಶಾಲಾ ವಾಹನಗಳು ಎಲ್ಲರೂ ಸೇರಿ ಸರ್ಕಾರದ ಮುಂದೆ 30 ಬೇಡಿಕೆಗಳನ್ನಿಟ್ಟು ಪ್ರತಿಭಟಿಸಿದೆವು. ಸಾರಿಗೆ ಸಚಿವರು 30 ಬೇಡಿಕೆಗಳಲ್ಲಿ‌ 28 ಬೇಡಿಕೆ ಈಡೇರಿಕೆ ಆಗುತ್ತದೆ ಎಂದಿದ್ದರು. ಅದರಲ್ಲಿ 26 ಬೇಡಿಕೆ ಈಡೇರಿಕೆ ಮಾಡಿದ್ದಾರೆ. ಪೋರ್ಟಲ್, ಬೈಕ್ ಟ್ಯಾಕ್ಸಿ ನಿಲ್ಲಿಸಿದ್ದಾರೆ. ʼಒಂದು ಸಿಟಿ ಒಂದು ದರʼ ಎಲ್ಲದಕ್ಕೂ ಸರ್ಕಾರದಿಂದ ನೋಟಿಫಿಕೇಶನ್ ಬಂದಿದೆ. ಆದರೆ ಸಾರಿಗೆ ಅಧಿಕಾರಿಗಳು ಅವುಗಳನ್ನು ಮಾರ್ಪಾಡು ಮಾಡದೇ ಕಸದ ಬುಟ್ಟಿಗೆ ಬಿಸಾಕಿದ್ದಾರೆ. ನಾವು ಕೇಳಿದರೆ ಕೋರ್ಟ್‌ನಲ್ಲಿ ಇದೆ ಅನ್ನುತ್ತಾರೆ.

ಅನಧಿಕೃತವಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಆಟೋ ಚಾಲಕರು ಕ್ರಮ ಕೈಗೊಳ್ಳಬಾರದು ಅಂತ ಹೇಳಿದ್ದಾರೆ. ನಾವು ಪ್ರಶ್ನೆ ಮಾಡಿದರೆ 10 ಸಾವಿರ, 20 ಸಾವಿರ ಫೈನ್ ಕಟ್ಟಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಪೋನ್ ಪೇ, ಗೂಗಲ್ ಪೇ ಮೂಲಕ ಹಣ ಪಡೆಯುತ್ತಿದ್ದಾರೆ. ಇವತ್ತು ಸರ್ಕಾರದಿಂದ ಕಾನೂನಿನ ಅಡಿಯಲ್ಲಿ ಎಲ್ಲ ರೂಲ್ಸ್‌ಗಳು ಬಂದಿವೆ. ಅದಕ್ಕೆ ಅಧಿಕಾರಿಗಳು ಸಹಿ ಹಾಕೋಕೆ ಹಿಂದೆ ಮುಂದೆ ನೋಡ್ತಿದ್ದಾರೆ. ಓಲಾ ಮತ್ತು ಉಬರ್ ಸಂಸ್ಥೆಗಳು ಚಾಲಕರಿಗೆ ಎಷ್ಟು ದುಡ್ಡು ಕೊಡ್ತಿದ್ದಾರೆ ಇದು ಹೊರಗಡೆ ಬರಬೇಕು. ಪೋರ್ಟರ್ ಅನ್ನುವ ವಾಹನದ ಜಾಹಿರಾತನ್ನು ಕಿತ್ತು ಎಸೆಯುವ ಕೆಲಸವನ್ನು ಪೊಲೀಸ್ ಮತ್ತು ಸಾರಿಗೆ ಇಲಾಖೆ ಮಾಡಬೇಕು. ಆನ್‌ಲೈನ್ ಸ್ಪೆಷಲ್ ಪರ್ಮೀಟ್ ಮಾಡಬೇಕು. ನಮ್ಮ ಬೇಡಿಕೆ ಈಡೇರದಿದ್ದರೆ ಸೆಪ್ಟೆಂಬರ್ 11ರಂದು ಮತ್ತೆ ಪ್ರತಿಭಟನೆ ಮಾಡುತ್ತೇವೆ. ಕಳೆದ ಬಾರಿ 90% ವಾಹನಗಳು ಮಾತ್ರ ರಸ್ತೆಗಿಳಿಸದೆ ಪ್ರತಿಭಟಿಸಿದ್ದೆವು. ಈ ಬಾರಿ ಒಂದು ವಾಹನವೂ ರಸ್ತೆಗಿಳಿಯುವುದಿಲ್ಲ. ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ನಟರಾಜ್‌ ಎಚ್ಚರಿಕೆ ನೀಡಿದ್ದಾರೆ.

ವಾಹನಗಳ ಮೌಲ್ಯ ಮತ್ತು ಸರ್ಕಾರ ನಿಗದಿಪಡಿಸಿದ ದರ ಹೀಗಿದೆ:

ಹತ್ತು ಲಕ್ಷಕ್ಕಿಂತ ಕಡಿಮೆ- ನಿಗದಿತ ದರ- ಕನಿಷ್ಠ 4 ಕಿಮೀ, 100 ರುಪಾಯಿ) ಪ್ರತಿ ಕಿಮೀಗೆ- 24 ರುಪಾಯಿ
10ರಿಂದ 15 ಲಕ್ಷದ ವಾಹನ- 115 ರುಪಾಯಿ- 28 ರುಪಾಯಿ
15 ಲಕ್ಷಕ್ಕಿಂತ ಹೆಚ್ಚು – 130 ರುಪಾಯಿ- 32 ರುಪಾಯಿ

ಚಾಲಕರ ಬೇಡಿಕೆಗಳು:

1) ಓನ್ ಸಿಟಿ ಓನ್ ಫೇರ್ ಜಾರಿಯಾಗಬೇಕು
2) ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಲ್ಲಬೇಕು
3) ಆರ್ಟಿಓ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಕಾರ್ಯಾಚರಣೆ ಮಾಡಬೇಕು
4) ಪೋರ್ಟರ್ ಕಂಪನಿಯನ್ನು ಬ್ಯಾನ್ ಮಾಡಬೇಕು
5) ಸ್ಕೂಲ್ ವಾಹನಗಳಿಗೆ ಪರ್ಮಿಟ್ ನೀಡಬೇಕು

ಇದನ್ನೂ ಓದಿ: Bangalore Water Parks : ಬೆಂಗಳೂರಿನಲ್ಲಿರುವ ಪ್ರಸಿದ್ಧ ವಾಟರ್‌ ಪಾರ್ಕ್‌ಗಳಿವು…

Continue Reading
Advertisement
Sumalatha Ambareesh Reaction about darshan
ಸ್ಯಾಂಡಲ್ ವುಡ್2 mins ago

Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

Kalki 2898 AD
ಸಿನಿಮಾ5 mins ago

Kalki 2898 AD: ಕಲ್ಕಿ 2898 ಎಡಿ ಚಿತ್ರದ 10 ಕುತೂಹಲಕರ ಸಂಗತಿಗಳಿವು!

Costliest City
ದೇಶ9 mins ago

Costliest City: ಮುಂಬಯಿ ಈಗ ಭಾರತದ ಅತ್ಯಂತ ದುಬಾರಿ ನಗರ; ಬೆಂಗಳೂರಿಗೆ ಎಷ್ಟನೇ ಸ್ಥಾನ?

Actor Darshan
ಕರ್ನಾಟಕ15 mins ago

Actor Darshan: ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿ; ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Team India
ಕ್ರೀಡೆ16 mins ago

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Sumalatha Ambareesh First Reaction To Darshan Arrest And Renuka Swamy Murder Case
ಸ್ಯಾಂಡಲ್ ವುಡ್21 mins ago

Sumalatha Ambareesh: ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇರಲಿ ; ದರ್ಶನ್​ ಬಗ್ಗೆ ಸುಮಲತಾ ಅಂಬರೀಶ್‌​ ಮೊದಲ ಪ್ರತಿಕ್ರಿಯೆ

cm siddaramaiah MUDA scam
ಪ್ರಮುಖ ಸುದ್ದಿ22 mins ago

CM Siddaramaiah: ʼಮುಡಾದ ತಪ್ಪು, ನಾನು ಸಿಎಂ ಅಂತ ಸೈಟ್‌ ಬಿಡೋಕೆ ಆಗುತ್ತಾ?ʼ ಸಿಎಂ ಸಿದ್ದರಾಮಯ್ಯ

Satsang programme on 5th July in Bengaluru
ಬೆಂಗಳೂರು40 mins ago

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Hassan News Distribution of free notebook bag to government primary schools in Alur
ಹಾಸನ42 mins ago

Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

To complete pending railway projects in the state former MP DK Suresh appeals central government
ಬೆಂಗಳೂರು44 mins ago

DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ2 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ3 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ4 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌