Viral news | ನೀಲಿ, ಪಿಂಕ್‌ ಬಣ್ಣದ ಬ್ಲೂಬೆರಿ, ಸ್ಟ್ರಾಬೆರಿ ಸಮೋಸಾಗಳನ್ನು ನೋಡಿದ್ದೀರಾ? - Vistara News

ವೈರಲ್ ನ್ಯೂಸ್

Viral news | ನೀಲಿ, ಪಿಂಕ್‌ ಬಣ್ಣದ ಬ್ಲೂಬೆರಿ, ಸ್ಟ್ರಾಬೆರಿ ಸಮೋಸಾಗಳನ್ನು ನೋಡಿದ್ದೀರಾ?

ವೆರೈಟಿ ಸಮೋಸಾಗಳ ಲಿಸ್ಟಿಗೆ ಇವು ಹೊಸ ಸೇರ್ಪಡೆಯಾಗಿ ಲಗ್ಗೆಯಿಟ್ಟಿದೆ. ನೀಲಿ ಬಣ್ಣದ ಬ್ಲೂಬೆರಿ ಸಮೋಸಾ, ಗುಲಾಬಿ ಬಣ್ಣದ ಸ್ಟ್ರಾಬೆರಿ ಸಮೋಸಾಗಳು ದೆಹಲಿಯ ಸಮೋಸಾ ಹಬ್‌ ಎಂಬಲ್ಲಿ ಸಿಗುತ್ತಿವೆ.

VISTARANEWS.COM


on

viral samosa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಿನ ಬೆಳಗಾದರೆ ಸಾಕು ಅಂತರ್ಜಾಲದ ಮೂಲಕ ಚಿತ್ರ ವಿಚಿತ್ರ ಖಾದ್ಯಗಳನ್ನು ನೋಡುತ್ತೇವೆ. ಕೆಲವನ್ನು ನೋಡಿ ಬಾಯಿ ಚಪ್ಪರಿಸಿದರೆ, ಇನ್ನೂ ಕೆಲವು ಹೀಗೂ ಉಂಟೇ ಅನಿಸುತ್ತವೆ. ಇದೂ ಅಂಥದ್ದೇ ಒಂದು ʻಹೀಗೂ ಉಂಟೇ?ʼಗಳಲ್ಲಿ ಒಂದು.

ಹಿತವಾದ ಮಳೆಯಲ್ಲಿ, ಬಿಸಿಬಿಸಿಯಾಗಿ ಎಣ್ಣೆಯಲ್ಲಿ ಆಗಷ್ಟೇ ಕರಿದು ಹೊರತೆಗೆದ ಸಮೋಸಾಕ್ಕೆ ಖಾರವಾದ ಹಸಿರು ಚಟ್ನಿ ಹಾಗೂ ಸಿಹಿ ಚಟ್ನಿಗಳನ್ನು ಸೇರಿಸಿ ತಿನ್ನುತ್ತಿದ್ದರೆ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ಎಂಬ ಭಾವ. ಉತ್ತರ ಭಾರತೀಯರಿಗಂತೂ ಸಮೋಸವಿಲ್ಲದೆ ಜೀವನವೇ ಖಾಲಿ ಎಂದರೂ ತಪ್ಪಿಲ್ಲ. ಅಂತಹ ಸಮೋಸಾಗಳಲ್ಲೂ ಈಗಾಗಲೇ ಸಾಕಷ್ಟು ವೆರೈಟಿಗಳನ್ನು ಟ್ರೈ ಮಾಡಲಾಗಿದೆ. ಕೇವಲ ಈರುಳ್ಳಿಯನ್ನೇ ಹಾಕಿದ ಈರುಳ್ಳಿ ಸಮೋಸಾ, ಪುಟಾಣಿ ಆಕಾರದಲ್ಲಿರುವ ಕ್ರಿಸ್ಪೀ ಮಿನಿ ಸಮೋಸಾಗಳು ಕೂಡಾ ಜನರನ್ನು ಮೋಡಿ ಮಾಡಿವೆ. ಕ್ಲಾಸಿಕ್‌ ಆಲೂಗಡ್ಡೆ ಸಮೋಸಾಗಳು ಇಂದಿಗೂ, ಮುಂಬೈ ಮಂದಿಗೆ ವಡಾಪಾವ್‌ನಂತೆಯೇ ಜೀವ ಎಂದರೂ ತಪ್ಪಿಲ್ಲ!

ಈಗ ಇಂತಹ ವೆರೈಟಿ ಸಮೋಸಾಗಳ ಲಿಸ್ಟಿಗೆ ಇವು ಹೊಸ ಸೇರ್ಪಡೆಯಾಗಿ ಲಗ್ಗೆಯಿಟ್ಟಿದೆ. ನೀಲಿ ಬಣ್ಣದ ಬ್ಲೂಬೆರಿ ಸಮೋಸಾ, ಗುಲಾಬಿ ಬಣ್ಣದ ಸ್ಟ್ರಾಬೆರಿ ಸಮೋಸಾಗಳು ಸದ್ಯ ಚಾಲ್ತಿಯಲ್ಲಿರುವಂತಹುಗಳು. ಅರೆ, ಇವೇನಿವು ಎಂದು ಕೇಳಬೇಡಿ. ಇವುಗಳೂ ಸಮೋಸಾಗಳೇ. ಆದರೆ ಇವುಗಳ ಬಣ್ಣ ಬೇರೆ. ಒಳಗಿರುವ ಹೂರಣವೂ ಬೇರೆಯೇ. ಸ್ಟ್ರಾಬೆರಿ ಸಮೋಸಾದ ಒಳಗೆ ಸ್ಟ್ರಾಬೆರಿ ಜ್ಯಾಮ್‌ ಇದ್ದರೆ, ಬ್ಲೂಬೆರಿ ಸಮೋಸಾದೊಳಗೆ ಬ್ಲೂಬೆರಿ ಜ್ಯಾಮ್! ಸಿಹಿಯಾದ ಸಮೋಸ. ಸಮೋಸ ಅನ್ನುವುದಕ್ಕಿಂತಲೂ ಸಿಹಿ ತಿನಿಸು ಅನ್ನಬಹುದೇನೋ. ಆದರೆ, ಮಾಡುವ ವಿಧಾನ ಆಕಾರ ಎಲ್ಲ ಸಮೋಸಾದ್ದೇ ಆದ್ದರಿಂದ ಸಮೋಸಾ ಹೆಸರಿನಲ್ಲಿ ಸದ್ದು ಮಾಡುತ್ತಿವೆ. ದೆಹಲಿಯ ಸಮೋಸಾ ಹಬ್‌ ಎಂಬಲ್ಲಿ ಈ ಬಗೆಯ ಸಮೋಸಾ ಸಿಗುತ್ತಿದ್ದು, ಇತ್ತೀಚೆಗೆ ಫುಡ್‌ ಬ್ಲಾಗರ್‌ ಒಬ್ಬರು ಈ ಬಗ್ಗೆ ಪೋಸ್ಟ್‌ ಮಾಡುವುದು ಆಹಾರಪ್ರಿಯರಲ್ಲಿ ಸಂಚಲನ ಮೂಡಿಸಿದೆ.‌

ಆದರೆ ಸಮೋಸಾ ಪ್ರಿಯರಲ್ಲಿ ಬಹುತೇಕ ಮಂದಿ, ಈ ಹೊಸ ಸಮೋಸಾವನ್ನು ನೋಡಿ ಖುಷಿ ಪಟ್ಟಿದ್ದಕ್ಕಿಂತ ಬೇಸರ ಪಟ್ಟಿದ್ದೇ ಹೆಚ್ಚು. ಸಮೋಸಾ ಎಂದರೆ ಅದೊಂದು ಭಾವನೆ. ಇಂತಹ ಸಮೋಸಾಗಳನ್ನೆಲ್ಲ ಮಾಡಿ ನಮ್ಮ ಭಾವನೆಗೆ ಧಕ್ಕೆ ತರಬೇಡಿ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ ಕೂಡಾ.

ಅಂತರ್ಜಾಲದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಫುಡ್‌ ಬ್ಲಾಗಿಂಗ್‌ ಮಾಡುವ ಅನೇಕರು ಏನಾದರೊಂದು ಫ್ಯೂಶನ್‌ ತಿನಿಸುಗಳನ್ನು ಪೋಸ್ಟ್‌ ಮಾಡುತ್ತಲೇ ಇರುವುದು ಎಲ್ಲರಿಗೂ ತಿಳಿದಿದೆ. ಈಗೆಲ್ಲ ಅಂತರ್ಜಾಲ ನೋಡಿಕೊಂಡು ವಿಧವಿಧವಾಗಿ ಅಡುಗೆ ಮಾಡುವುದು, ವೆರೈಟಿಗಳನ್ನು ಟ್ರೈ ಮಾಡುವುದು ಸುಲಭ ಕೂಡಾ. ಅದಕ್ಕಾಗಿಯೇ ಅಂತರ್ಜಾಲವೂ ಇಂತಹ ಬಗೆಯ ವಿಡಿಯೋಗಳಿಂದ ಸದಾ ತುಂಬಿ ತುಳುಕುತ್ತಲೇ ಇರುತ್ತವೆ ಕೂಡಾ. ಕೆಲವು ನಿಜವಾಗಿಯೂ ಹೃದಯ ಗೆದ್ದರೆ ಕೆಲವು ಇಷ್ಟವಾಗುವುದಿಲ್ಲ. ಇತ್ತೀಚೆಗೆ ಗುಲಾಬ್‌ ಜಾಮೂನ್‌ ಬರ್ಗರ್‌ ಇದೇ ಮಾದರಿಯಲ್ಲಿ ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡಿತ್ತು. ಆಗಾಗ, ದೋಸೆಯನ್ನು ಪಿಜ್ಜಾ ಆಗಿ ಪರಿವರ್ತಿಸಿದಂತಹ ವಿಡಿಯೋಗಳೂ, ನಾನಾ ಅವತಾರಗಳಲ್ಲಿ ಸಾಂಪ್ರದಾಯಿಕ ತಿನಿಸುಗಳು ಕಾಣಿಸಿಕೊಂಡು ಹಲವರಿಗೆ ಶಾಕ್‌ ಕೊಡುತ್ತಲೇ ಇರುತ್ತವೆ. ಈ ನೀಲಿ, ಪಿಂಕ್‌ ಸಮೋಸಾಗಳೂ ಕೂಡಾ ಅಂತಹುಗಳಲ್ಲಿ ಒಂದು. ಇಂಥದ್ದನ್ನೆಲ್ಲ ಮಾಡುವ ಮೂಲಕ ಸಾಂಪ್ರದಾಯಿಕ ತಿನಿಸುಗಳಿಗೇ ಮೋಸ ಮಾಡಿದಿರಲ್ಲಾ ಎಂದೂ ಹಲವರಿಗೆ ಅನಿಸುವುದುಂಟು.

ಇಲ್ಲಿ ಈ ಬ್ಲಾಗರ್‌ ಹೇಳುವ ಪ್ರಕಾರ, ಹೆಸರಿಗೆ ಇದು ಸಮೋಸಾವಾದರೂ ರುಚಿಯಲ್ಲಿ ಸಿಹಿ ತಿನಿಸೇ ಆಗಿದೆ. ಹಾಗಾಗಿ ಇದನ್ನು ಡೆಸರ್ಟಿನ ರೂಪದಲ್ಲಿ ತಿನ್ನಲಡ್ಡಿಯಿಲ್ಲ. ಯಾರಾದರೂ ನೋಡಿದರೆ, ಖಂಡಿತ ಆಶ್ಚರ್ಯದಿಂದ ಇದೇನು ತಿನ್ನುತ್ತಿದ್ದೀರಿ ಎಂದು ಪ್ರಶ್ನಿಸಬಹುದು, ಯಾಕೆಂದರೆ ಇದರ ಬಣ್ಣಗಳೇ ಹಾಗಿವೆ ಎಂದು ಅವರು ವಿಡಿಯೋದ ಜೊತೆಗೆ ವಿವರಣೆ ನೀಡಿದ್ದಾರೆ. ಬಹುಶಃ ಮಕ್ಕಳಿಗೆ ಸಾಮಾನ್ಯ ಸಮೋಸಾಕ್ಕಿಂತ ಬಣ್ಣಬಣ್ಣದ ಸಮೋಸ ಹೆಚ್ಚು ಆಕರ್ಷಕವಾಗಿ ಕಾಣಬಹುದೇನೋ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ನಡೆದಿದೆ. ಇದರಲ್ಲಿ ಲೇಡಿ ಕಾನ್‌ಸ್ಟೆಬಲ್‌ ಕೂಡ ಭಾಗಿಯಾಗಿದ್ದರು. ಗಾಯಕ ಮನಮೋಹಕವಾಗಿ ಹಾಡಿದ್ದಕ್ಕೆ ಮಹಿಳಾ ಪೇದೆಯು ಮನದುಂಬಿ ಅವರಿಗೆ ಮುತ್ತು ಕೊಟ್ಟರು. ತಬ್ಬಿಕೊಂಡು ಅಭಿಮಾನ ವ್ಯಕ್ತಪಡಿಸಿದರು. ಈಗ ಇದೇ ಅವರಿಗೆ ಮುಳುವಾಗಿದೆ.

VISTARANEWS.COM


on

Lady Constable
Koo

ದಿಸ್ಪುರ: ನೆಚ್ಚಿನ ನಟ-ನಟಿ, ಗಾಯಕ-ಗಾಯಕಿ ಸೇರಿ ಯಾವುದೇ ಸೆಲೆಬ್ರಿಟಿ (Celebrity) ಸಿಕ್ಕರೆ ಹೇಗೆ ವರ್ತಿಸುತ್ತೇವೆ? ಅವರ ಜತೆ ಒಂದು ಸೆಲ್ಫಿ ತೆಗೆದುಕೊಳ್ಳುತ್ತೇವೆ. ತುಸು ಸಮಯ ಸಿಕ್ಕರೂ ಆಟೋಗ್ರಾಫ್‌ ಹಾಕಿಸಿಕೊಳ್ಳುತ್ತೇವೆ. ಆದರೆ, ಅಸ್ಸಾಂನಲ್ಲಿ (Assam) ಲೇಡಿ ಕಾನ್‌ಸ್ಟೆಬಲ್‌ ಒಬ್ಬರು (Lady Constable) ಮೆಚ್ಚಿದ ಗಾಯಕನನ್ನು ವೇದಿಕೆ ಮೇಲೆಯೇ ತಬ್ಬಿಕೊಂಡು, ಗಾಯಕನ ಕೆನ್ನೆಗೊಂದು ಮುತ್ತು ಕೊಟ್ಟು ಅಭಿಮಾನ ಮೆರೆದಿದ್ದಾರೆ. ಆದರೆ, ಗಾಯಕನಿಗೆ ವೇದಿಕೆ ಮೇಲೆಯೇ ಮುತ್ತುಕೊಟ್ಟ ಮಹಿಳಾ ಪೇದೆಯನ್ನು ಈಗ ಅಮಾನತು ಮಾಡಲಾಗಿದೆ.

ಹೌದು, ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ಆಯೋಜಿಸಲಾಗಿತ್ತು. ಗ್ಯಾಂಗ್‌ಸ್ಟರ್‌ ಬಾಲಿವುಡ್‌ ಸಿನಿಮಾದ ಯಾ ಅಲಿ ಎಂಬ ಹಾಡು ಹಾಡಿದ ಖ್ಯಾತ ಜುಬೀನ್‌ ಗರ್ಗ್‌ ಅವರು ಮ್ಯೂಸಿಕ್‌ ಕನ್ಸರ್ಟ್‌ ನಡೆಸಿಕೊಟ್ಟರು. ಅವರ ಮನಮೋಹಕ ಹಾಡಿಗೆ ಅಲ್ಲಿ ನೆರೆದಿದ್ದ ಎಲ್ಲರೂ ಚಪ್ಪಾಳೆ, ಕೇಕೆ ಮೂಲಕ ಪ್ರೋತ್ಸಾಹ ನೀಡಿದರು. ಆದರೆ, ಅಲ್ಲಿಯೇ ಇದ್ದ ಮಹಿಳಾ ಪೇದೆ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರಿಗೆ ಮುತ್ತು ಕೊಟ್ಟರು. ಈ ವಿಡಿಯೊ ಭಾರಿ ವೈರಲ್‌ ಕೂಡ ಆಯಿತು.

ನೆಚ್ಚಿನ ಗಾಯಕನ ಹಾಡಿಗೆ ಫಿದಾ ಆದ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರನ್ನು ಗಟ್ಟಿಯಾಗಿ ತಬ್ಬಿಕೊಂಡರು. ಅವರನ್ನು ಮನಸಾರೆ ಹೊಗಳಿದರು. ಗಾಯಕನ ಮೇಲೆ ಎಷ್ಟು ಅಭಿಮಾನ ಹೊಂದಿದ್ದೇನೆ ಎಂಬುದನ್ನು ಭಾವುಕರಾಗಿ ತಿಳಿಸಿದರು. ಇದೇ ವೇಳೆ ಅವರು ಜುಬೀನ್‌ ಗರ್ಗ್‌ ಅವರ ಕೆನ್ನೆಗೆ ಪದೇಪದೆ ಮುತ್ತು ಕೊಟ್ಟರು. ಅಷ್ಟೇ ಅಲ್ಲ, ಗಾಯಕನ ಪಾದ ಮುಟ್ಟಿ ನಮಸ್ಕಾರ ಮಾಡಿದರು. ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಯಿತು.

ವಿಡಿಯೊ ವೈರಲ್‌ ಆಗುತ್ತಲೇ ಮಿಲಿಪ್ರಭಾ ಚುಟಿಯಾ ಅವರನ್ನು ಅಸ್ಸಾಂ ಪೊಲೀಸ್‌ ಇಲಾಖೆಯು ಅಮಾನತುಗೊಳಿಸಿದೆ. ಪೊಲೀಸ್‌ ಇಲಾಖೆಯ ಶಿಸ್ತು ಹಾಗೂ ಸಾರ್ವಜನಿಕ ವರ್ತನೆಯ ನಿಯಮಗಳನ್ನು ಮೀರಿದ ಆರೋಪದಲ್ಲಿ ಅವರನ್ನು ಅಮಾನತುಗೊಳಿಸಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೇದೆ ವರ್ತನೆ ಬಗ್ಗೆ ಪರ-ವಿರೋಧ ಚರ್ಚೆಯಾಗಿದೆ. ನೆಚ್ಚಿನ ಗಾಯಕನನ್ನು ತಬ್ಬಿಕೊಂಡು, ಮುತ್ತು ಕೊಡುವುದರಲ್ಲಿ ಅಶ್ಲೀಲತೆ ಏನಿದೆ ಎಂದು ಒಂದಷ್ಟು ಜನ ಹೇಳಿದರೆ, ಪೊಲೀಸ್‌ ಅಧಿಕಾರಿಯಾದವರು ಸಾರ್ವಜನಿಕವಾಗಿ ಹೇಗಿರಬೇಕು ಎಂಬುದು ಗೊತ್ತಿರಬೇಕು ಎಂದು ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Continue Reading

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading

ದೇಶ

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

CAA: ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಈಗ ಸಿಎಎ ನಿಯಮಗಳ ಅಡಿಯಲ್ಲಿ 14 ಜನರಿಗೆ ಕೇಂದ್ರ ಸರ್ಕಾರ ಪ್ರಮಾಣಪತ್ರ ನೀಡಿದೆ. ಪೌರತ್ವ ಪಡೆದ ಹಿಂದುಗಳು ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

CAA
Koo

ನವದೆಹಲಿ: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ (Indian Citizenship) ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು (Central Government) 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು (Citizenship Papers) ಹಸ್ತಾಂತರಿಸಲಾಗಿದೆ. ಹೀಗೆ, ಪಾಕಿಸ್ತಾನದಲ್ಲಿ ಬಹುಸಂಖ್ಯಾತರಿಂದ ಸಂಕಷ್ಟ ಅನುಭವಿಸಿ, ಭಾರತಕ್ಕೆ ಬಂದು ನೆಲೆಸಿದ ಹಿಂದುಗಳಿಗೆ ಪೌರತ್ವ ದೊರೆತಿದ್ದು, ಅವರ ಇಡೀ ಕುಟುಂಬವು ಸಂತಸ ವ್ಯಕ್ತಪಡಿಸಿದೆ.

ಹೌದು, ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿದ್ದು, ಅವರೀಗ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಹಿಡಿದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. “ಪಾಕಿಸ್ತಾನದಲ್ಲಿ ಹಿಂದು ಹೆಣ್ಣುಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಹಿಂದು ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದು ಬಿಡಿ, ಮನೆಯಿಂದಲೂ ಹೊರಗೆ ಬರಲು ಆಗುವುದಿಲ್ಲ. ಮುಸ್ಲಿಮರು ಹಿಂದು ಹೆಣ್ಣುಮಕ್ಕಳನ್ನು ಅಪಹರಣ ಮಾಡುತ್ತಾರೆ. ಬಲವಂತವಾಗಿ ಮತಾಂತರ ಮಾಡುತ್ತಾರೆ, ಕಿರುಕುಳ ನೀಡುತ್ತಾರೆ. ಈಗ ಭಾರತದ ಪೌರತ್ವ ಸಿಕ್ಕಿರುವುದು ಖುಷಿಯಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಧನ್ಯವಾದಗಳು” ಎಂದು ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಭಾವನಾ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Continue Reading

ವೈರಲ್ ನ್ಯೂಸ್

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Viral News: ಸಾಕು ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಜತೆಗೆ ವ್ಯಕ್ತಿಯನ್ನು ರಕ್ಷಿಸಲು ಬಂದ ಮನೆಯವರಿಗೂ ಹೊಡೆತ ಬಿದ್ದಿದೆ. ಸದ್ಯ ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ. ಹೈದರಾಬಾದ್‌ನ ರಹಮತ್‌ನಗರದಲ್ಲಿ ಈ ಘಟನೆ ನಡೆದಿದೆ. ಸಾರ್ವಜನಿಕರ ಗುಂಪು ದೊಣ್ಣೆ ತೆಗೆದುಕೊಂಡು ಹಲ್ಲೆ ನಡೆಸುವ ದೃಶ್ಯ ನೋಡಿ ನೆಟ್ಟಿಗರು ಶಾಕ್‌ಗೆ ಒಳಗಾಗಿದ್ದಾರೆ.

VISTARANEWS.COM


on

Viral News
Koo

ಹೈದರಾಬಾದ್‌: ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ನಾಯಿ ದಾಳಿಯಿಂದ ಮಕ್ಕಳು ಬಲಿಯಾಗಿರುವ ಘಟನೆಯೂ ಅಲ್ಲಲ್ಲಿ ವರದಿಯಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಭೀತಿ ಹೆಚ್ಚಾಗುತ್ತಿದೆ. ಹೀಗಾಗಿ ರಸ್ತೆಯಲ್ಲಿ ಓಡಾಡುವಾಗ ನಾಯಿ ಕಂಡರೆ ಬೆಚ್ಚಿ ಬೀಳುವಂತಾಗಿದೆ. ಈ ಮಧ್ಯೆ ಸಾಕು ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಜತೆಗೆ ವ್ಯಕ್ತಿಯನ್ನು ರಕ್ಷಿಸಲು ಬಂದ ಮನೆಯವರಿಗೂ ಹೊಡೆತ ಬಿದ್ದಿದೆ. ಸದ್ಯ ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ (Viral News).

ಹೈದರಾಬಾದ್‌ನ ರಹಮತ್‌ನಗರದಲ್ಲಿ ಈ ಘಟನೆ ನಡೆದಿದೆ. ಸಾರ್ವಜನಿಕರ ಗುಂಪು ದೊಣ್ಣೆ ತೆಗೆದುಕೊಂಡು ಹಲ್ಲೆ ನಡೆಸುವ ದೃಶ್ಯ ನೋಡಿ ನೆಟ್ಟಿಗರು ಶಾಕ್‌ಗೆ ಒಳಗಾಗಿದ್ದಾರೆ. ಸದ್ಯ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ವಿವಿಧ ಸೆಕ್ಷನ್‌ ಅಡಿ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೇ 8ರಂದು ಮಧು, ಆತನ ಸಹೋದರ ಶ್ರೀನಾಥ್‌ ಮತ್ತು ಆತನ ಸ್ನೇಹಿತ ತಮ್ಮ ನೆಚ್ಚಿನ ಸಾಕು ನಾಯಿ ಸೈಬೇರಿಯನ್‌ ಹಸ್ಕಿ ಜತೆ ವಾಕಿಂಗ್‌ ಹೊರಟಿದ್ದರು. ಈ ವೇಳೆ ನಾಯಿ ತಮ್ಮ ಮೇಲೆ ದಾಳಿ ನಡೆಸಿದೆ ಎಂದು ನೆರೆಮನೆಯ ಧನಂಜಯ್‌ ಮತ್ತು ಆತನ ಮನೆಯವರು ಆರೋಪಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಎರಡೂ ಕಡೆಯವರು ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.

ಘಟನೆ ವಿವರ

ಶ್ರೀನಾಥ್ ಅವರು ತಮ್ಮ ನಾಯಿಯನ್ನು ಕರೆದುಕೊಂಡು ವಾಕಿಂಗ್‌ ಹೋಗಿದ್ದರು. ಇದೇ ಸಮಯದಲ್ಲಿ ಧನಂಜಯ್ ಮತ್ತು ಆತನ ಇಬ್ಬರು ಸ್ನೇಹಿತರೂ ಆ ರಸ್ತೆಯಲ್ಲಿ ಓಡಾಡುತ್ತಿದ್ದರು. ಈ ವೇಳೆ ಶ್ರೀನಾಥ್ ನಾಯಿಯ ಹಗ್ಗವನ್ನು ಬಿಗಿಯಾಗಿ ಹಿಡಿದಿರುವುದು ಕಂಡು ಬಂದಿದೆ. ಜತೆಗೆ ನಾಯಿ ಧನಂಜಯ್‌ ಮೇಲೆ ದಾಳಿ ನಡೆಸಲು ಮುಂದಾಗಿರುವುದೂ ವಿಡಿಯೊದಲ್ಲಿ ಸೆರೆಯಾಗಿದೆ. ಬಳಿಕ ಆತ ಅಲ್ಲಿಂದ ಆಚೆ ಬರುತ್ತಾನೆ. ಸ್ವಲ್ಪ ಹೊತ್ತಿನಲ್ಲಿ ಧನಂಜಯ್‌ ಮತ್ತು ಇತರರು ದೊಣ್ಣೆ ಹಿಡಿದುಕೊಂಡು ಶ್ರೀನಾಥ್‌ ಬಳಿಗೆ ಬರುತ್ತಾರೆ. ನಂತರ ಹಲ್ಲೆ ನಡೆಸುತ್ತಾರೆ. ಶ್ರೀನಾಥ್‌ ನೆಲದ ಮೇಲೆ ಬಿದ್ದಾಗಲೂ ಸುಮ್ಮನಾಗದ ಧನಂಜಯ್‌ ಮತ್ತು ತಂಡ ಮತ್ತೂ ಹೊಡೆಯುತ್ತಾರೆ. ಇದೇ ವೇಳೆ ಶ್ರೀನಾಥ್‌ ಮನೆಯವರು ಆತನ ನೆರವಿಗೆ ಧಾವಿಸುತ್ತಾರೆ. ಧಾವಿಸಿ ಬಂದ ಶ್ರೀನಾಥ್‌ ಕುಟುಂಬದ ಮಹಿಳೆಗೂ ಹೊಡೆತ ಬೀಳುತ್ತದೆ.

ಸ್ವಲ್ಪ ಹೊತ್ತೆನಲ್ಲೇ ನೆರೆಹೊರೆಯವರೆಲ್ಲ ಗುಂಪುಗೂಡುತ್ತಾರೆ. ಬಳಿಕ ಹಲ್ಲೆ ನಡೆಸುತ್ತಿದ್ದವರು ಸ್ಥಳದಿಂದ ಪರಾರಿಯಾಗುತ್ತಾರೆ. ಗಾಯಗೊಂಡ ಶ್ರೀನಾಥ್‌ ಮತ್ತು ಆತನ ಮನೆಯವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಗೊಳಗಾದ ನಾಯಿಗೂ ಚಿಕಿತ್ಸೆ ನೀಡಲಾಗಿದೆ. ದೂರುಗಳ ಆಧಾರದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಘಟನೆ ನೆಟ್ಟಿಗರ ಗಮನ ಸೆಳೆದಿದ್ದು ತೀವ್ರ ಚರ್ಚೆ ಹುಟ್ಟು ಹಾಕಿದೆ.

ಇದನ್ನೂ ಓದಿ: Viral News: ಪಿಟ್‌ಬುಲ್‌ ದಾಳಿಯಿಂದ ಬಾಲಕನ್ನು ರಕ್ಷಿಸಿದ ಬೀದಿ ನಾಯಿಗಳು; ವಿಡಿಯೊ ಇಲ್ಲಿದೆ

Continue Reading
Advertisement
Pakistan
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ3 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ3 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ3 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ3 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು3 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ3 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ3 hours ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ3 hours ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ5 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ12 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು16 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌