Vistara Exclusive | ಏಳುಕೊಂಡಲವಾಡನಿಗೆ ಕರ್ನಾಟಕದಲ್ಲಿದೆ ಏಳು ಕಡೆ ಆಸ್ತಿ - Vistara News

ಧಾರ್ಮಿಕ

Vistara Exclusive | ಏಳುಕೊಂಡಲವಾಡನಿಗೆ ಕರ್ನಾಟಕದಲ್ಲಿದೆ ಏಳು ಕಡೆ ಆಸ್ತಿ

ತಿರುಪತಿ ದೇಗುಲವು ದೇಶಾದ್ಯಂತ 85,705 ಕೋಟಿ ರೂ. ಮೌಲ್ಯದ ಜಾಗ, ಜಮೀನು ಹೊಂದಿರುವುದಾಗಿ ತಿರುಮಲ ತಿರುಪತಿ ದೇವಸ್ಥಾನಮ್‌ (ಟಿಟಿಡಿ) ಹೇಳಿದೆ. ರಾಜ್ಯದಲ್ಲಿ ಈ ದೇಗುಲ ಹೊಂದಿರುವ ಆಸ್ತಿಯ ಕುರಿತ ವಿಶೇಷ ವರದಿ ಇಲ್ಲಿದೆ.

VISTARANEWS.COM


on

tirupati tirumala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುಪತಿ: ವಿಶ್ವದ ಅತ್ಯಂತ ಶ್ರೀಮಂತ ದೇಗುಲ ಎಂಬ ಖ್ಯಾತಿಗೆ ಪಾತ್ರವಾಗಿರುವ ತಿರುಪತಿ ತಿರುಮಲ (tirupati tirumala) ವೆಂಕಟೇಶ್ವರ ದೇಗುಲದ ಆಸ್ತಿ ಎಷ್ಟು ಎಂಬುದು ಕೊನೆಗೂ ಬಹಿರಂಗಗೊಂಡಿದೆ. ಏಳುಕೊಂಡಲವಾಡ ಕರ್ನಾಟಕದಲ್ಲಿ ಏಳು ಕಡೆ ಒಟ್ಟು ಹತ್ತು ಆಸ್ತಿಯನ್ನು ಹೊಂದಿದ್ದಾನೆ.

ಈ ದೇಗುಲದ ಆಡಳಿತದ ಮಂಡಳಿ ತಿರುಮಲ ತಿರುಪತಿ ದೇವಸ್ಥಾನಮ್‌ (ಟಿಟಿಡಿ) ದೇಶಾದ್ಯಂತ ಇರುವ ಈ ದೇಗುಲದ ಆಸ್ತಿಯ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದು, 85,705 ಕೋಟಿ ರೂ. ಮೌಲ್ಯದ ಜಾಗ, ಜಮೀನು ಹೊಂದಿರುವುದಾಗಿ ತಿಳಿಸಿದೆ. ಇದರಲ್ಲಿ ರಾಜ್ಯದಲ್ಲಿರುವ ಹತ್ತು ಆಸ್ತಿ ವಿವರಗಳು ಸೇರಿವೆ.

ರಾಜ್ಯದಲ್ಲಿ ಎಲ್ಲೆಲ್ಲಿದೆ ಆಸ್ತಿ?
೧. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ತಿರುಪತಿ ತಿರುಮಲ ದೇಗುಲ, ಮಾಹಿತಿ ಕೇಂದ್ರ, ಕಲ್ಯಾಣ ಮಂದಿರ ಇತ್ಯಾದಿ. ಒಟ್ಟು 1.92 ಎಕರೆ.
೨. ಬೆಂಗಳೂರಿನ ಜೀವನ್‌ಭೀಮಾ ನಗರದಲ್ಲಿ ಮನೆ. 0.02 ಎಕರೆ.
3. ಬೆಂಗಳೂರಿನ ಜೆಪಿ ನಗರದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್‌. 0.03 ಎಕರೆ.
4. ಬೆಂಗಳೂರಿನ ನೆಲಮಂಗಲ ಸಮೀಪದ ಬಸವನಹಳ್ಳಿಯಲ್ಲಿ ನಿವೇಶನ. 0.09 ಎಕರೆ.
5. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಛತ್ರ. 1.82 ಎಕರೆ.
6. ಧಾರವಾಡ ಜಿಲ್ಲೆಯ ಗಜೇಂದ್ರಗಢದಲ್ಲಿ ಕಲ್ಯಾಣ ಮಂಟಪ. 1.13 ಎಕರೆ.
7. ಕೋಲಾರ ಜಿಲ್ಲೆಯ ಬಂಗಾರು ತಿರುಪತಿ ಕಲ್ಯಾಣ ಮಂಟಪ. 1.15 ಎಕರೆ.
8. ಕೋಲಾರ ಜಿಲ್ಲೆಯ ಚಿಂತಾಮಣಿಯಲ್ಲಿ ಕಲ್ಯಾಣ ಮಂಟಪ 1.00 ಎಕರೆ.
9. ಕೋಲಾರ ಜಿಲ್ಲೆಯ ಶ್ರೀನಿವಾಸಪುರಂ ಕಲ್ಯಾಣ ಮಂಟಪ 0.74 ಎಕರೆ.
10. ಮೈಸೂರು ಜಿಲ್ಲೆಯ ರಾಮನುಜ ರಸ್ತೆಯಲ್ಲಿ ಮನೆ 0.01 ಎಕರೆ.

tirupati tirumala
ಕರ್ನಾಟಕದಲ್ಲಿರುವ ತಿಮ್ಮಪ್ಪನ ಆಸ್ತಿಯ ಚಿತ್ರಗಳು.

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಆಸ್ತಿಯೇ ರಾಜ್ಯದಲ್ಲಿನ ಅತ್ಯಂತ ದೊಡ್ಡ ಆಸ್ತಿಯಾಗಿದ್ದು, 1.92 ಎಕರೆ ಜಾಗದಲ್ಲಿದೆ. ಕೋಲಾರ ಜಿಲ್ಲೆಯ ಬಂಗಾರು ತಿರುಪತಿ, ಚಿಂತಾಮಣಿ, ಶ್ರೀನಿವಾಸಪುರಂನಲ್ಲಿ ಕೇವಲ ಕಲ್ಯಾಣ ಮಂದಿರವನ್ನು ಟಿಟಿಡಿ ಹೊಂದಿದೆ. ಟಿಟಿಡಿಯ ಆಸ್ತಿ ಪಟ್ಟಿಯಲ್ಲಿರುವ ನಿವೇಶನ ಮತ್ತು ಫ್ಲಾಟ್‌ ಅನ್ನು ಭಕ್ತರು ನೀಡಿದ್ದೆನ್ನಲಾಗಿದೆ. ಆಸ್ತಿಯ ಸಂಪೂರ್ಣ ವಿವರವನ್ನು ಟಿಟಿಡಿಯ ವೆಬ್‌ಸೈಟ್‌ನಲ್ಲಿ ( https://www.tirumala.org) ಅಪ್‌ಲೋಡ್‌ ಮಾಡಲಾಗಿದೆ.

ದೇಶದ ವಿವಿಧ ಕಡೆ 7,123 ಎಕರೆ ಜಾಗ
ದೇಶದ ವಿವಿಧ ಕಡೆ 7,123 ಎಕರೆ ಜಾಗವನ್ನು ಟಿಟಿಡಿ ಹೊಂದಿದ್ದು, ಒಟ್ಟಾರೆ 960 ಸ್ಥಿರಾಸ್ತಿಗಳಿವೆ. ತಿರುಮಲ ತಿರುಪತಿ ದೇವಸ್ಥಾನಮ್‌ (ಟಿಟಿಡಿ) ಅಧ್ಯಕ್ಷ ಸುಬ್ಬಾರೆಡ್ಡಿಯವರೇ ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಕುರಿತು ಅವರು ಶ್ವೇತ ಪತ್ರವನ್ನು ಹೊರಡಿಸಿದ್ದಾರೆ.

ದೇಗುಲದ ಆಡಳಿತದಲ್ಲಿ ಪಾರದರ್ಶಕತೆ ತರಲು 2020ರಲ್ಲೇ ದೇಗುಲದ ಆಸ್ತಿ ಕುರಿತು ಶ್ವೇತಪತ್ರ ಹೊರಡಿಸಲು ಟಿಟಿಡಿ ನಿರ್ಧರಿಸಿತ್ತು. ಆದರೆ ಕೋವಿಡ್‌ ಮತ್ತಿತರ ಕಾರಣಗಳಿಂದ ಆಸ್ತಿ ಸಮೀಕ್ಷೆ ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಸಮೀಕ್ಷೆ ಪೂರ್ಣಗೊಂಡಿರುವುದರಿಂದ ಅಸ್ತಿಯ ಕುರಿತು ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ.

ಒಟ್ಟಾರೆ ದೇಗುಲದ ಹೆಸರಿನಲ್ಲಿ 8088.89 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ 1128 ಸ್ಥರಾಸ್ತಿಗಳಿದ್ದವು. ಆದರೆ ಕೆಲ ಸಣ್ಣಪುಟ್ಟ ಆಸ್ತಿಗಳ ನಿರ್ವಹಣೆ ಕಾರ್ಯಸಾಧುವಲ್ಲ ಎಂಬ ಕಾರಣಕ್ಕೆ 1974 ರಿಂದ 2014ರ ಅವಧಿಯಲ್ಲಿ 293 ಎಕರೆ ಪ್ರದೇಶದಲ್ಲಿನ 61 ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಒಟ್ಟಾರೆ ಈ ಅವಧಿಯಲ್ಲಿ 113 ಆಸ್ತಿಗಳನ್ನು ಕೈ ಬಿಡಲಾಗಿದೆ. ಆದರೆ 2014ರ ನಂತರ ಯಾವುದೇ ಆಸ್ತಿಯನ್ನು ಟಿಟಿಡಿಯು ಕೈ ಬಿಟ್ಟಿಲ್ಲ ಎಂದು ಸುಬ್ಬಾರೆಡ್ಡಿ ವಿವರಿಸಿದ್ದಾರೆ.

ಟಿಟಿಯು ಸದ್ಯ ಸ್ಥಿರಾಸ್ತಿಯ ಬಗ್ಗೆ ಮಾತ್ರ ಮಾಹಿತಿ ನೀಡಿದೆ. ಚರಾಸ್ತಿಯ ಬಗ್ಗೆ ವಿವರ ನೀಡಿಲ್ಲ. ಆದರೆ ಬ್ಯಾಂಕ್‌ಗಳಲ್ಲಿ ಟಿಟಿಡಿ 14 ಸಾವಿರ ಕೋಟಿ ರೂ. ನಿಶ್ಚಿತ ಠೇವಣಿ ಹೊಂದಿದೆ. ತಿಮ್ಮಪ್ಪನ ಭಂಡಾರದಲ್ಲಿ 14ಟನ್‌ ಕೇಜಿ ಚಿನ್ನ ಇದೆ ಎಂದು ಹೇಳಲಾಗಿದೆ. ಇದರಿಂದಾಗಿಯೇ ಇದು ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ದೇಗುಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ | Tirupati Darshan | ತಿರುಪತಿಯಲ್ಲಿ ದೇವರ ದರ್ಶನಕ್ಕೆ ಇನ್ನು ಗಂಟೆಗಟ್ಟಲೆ ಕಾಯಬೇಕಿಲ್ಲ, ಟಿಟಿಡಿ ಹೊಸ ಯೋಜನೆ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Bengaluru News: ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌.ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

Sri Vedavyasa Jayanti programme at Bengaluru
Koo

ಬೆಂಗಳೂರು: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮವಾಗುತ್ತದೆ ಎಂದು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಗೌರವ ನಿರ್ದೇಶಕ ವಿದ್ವಾನ್ ಅಪ್ಪಣ್ಣಾಚಾರ್ಯ (Bengaluru News) ಹೇಳಿದರು‌.

ಬೆಂಗಳೂರಿನ ಗಿರಿನಗರದ ಭಂಡಾರಕೇರಿ ಮಠದಲ್ಲಿ ಗುರುವಾರ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾವಿದ್ಯಾ ವಿಕಾಸ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವ, ಶ್ರೀ ಮಾಧ್ವ ರಾದ್ಧಾತ ಸಂವರ್ಧಕ ಸಭಾದ 81ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಸರಣಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಿದ ಅವರು, ಹರಿಕಥಾಮೃತಸಾರವನ್ನು ರಚನೆ ಮಾಡಿದಂತಹ ಶ್ರೀ ಜಗನ್ನಾಥದಾಸರ ಚಿಂತನೆ ಬಹಳ ವಿಶಾಲವಾದದ್ದು‌. ಅವರ ಕಾರುಣ್ಯ ಮಹತ್ವದ್ದು. ಅವರ ದೂರ ದೃಷ್ಟಿ ಸಮಾಜಮುಖಿಯಾಗಿತ್ತು. ಆದ ಕಾರಣವೇ ಹರಿಕಥಾಮೃತಸಾರ ಕೃತಿಯು ಇಂದಿಗೂ ನಿತ್ಯ ನೂತನವಾಗಿದೆ ಎಂದು ಹೇಳಿದರು.

ಹರಿಕಥಾಮೃತಸಾರವನ್ನು ಓದಿ ನಾವು ವಿಶಾಲರಾಗಬೇಕು. ಆ ಮೂಲಕ ದೊಡ್ಡವರಾಗಬೇಕು. ಬದುಕನ್ನು ಹಸನ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಬ್ಯಾಗವಟ್ಟಿಯ ನರಸಿಂಹ ದಾಸ ಕುಲಕರ್ಣಿ ಅವರು ನಡೆಸಿದ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿದರು.

ಮಾನವಿ ಜಗನ್ನಾಥದಾಸರ ಮನೆಯೇ ಮಂದಿರವಾದ ಕಥೆಯನ್ನು ಸುಂದರವಾಗಿ ನಿರೂಪಿಸಿದರು. ಹರಿಕಥಾಮೃತಸಾರ ರಚನೆ ಆದಂತಹ ಸಂದರ್ಭ, ಹಿರಿಯರು ಅವರ ಮೇಲೆ ಮಾಡಿದಂತಹ ಕೃಪೆ ಮತ್ತು ಜಗನ್ನಾಥದಾಸರ ಕಾರುಣ್ಯಗಳನ್ನು ಸಮರ್ಥವಾಗಿ ಅಪ್ಪಣ್ಣಾಚಾರ್ಯರು ವಿವರಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಸಂಜೆ ಮಹಾಭಾರತ ಕುರಿತು ವಿವಾದ-ಸಂವಾದ ಕಾರ್ಯಕ್ರಮ ನಡೆಯಿತು. ವಿದ್ವಾನ್ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಹತ್ತು ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು.

Continue Reading

ಕರ್ನಾಟಕ

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

Udupi News: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಹಾಗೂ ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Udupi
ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ದಾಮೋದರಾಚಾರ್ಯ, ವಿದ್ವಾನ್ ಮಧ್ವೇಶ ನಡಿಲ್ಲಾಯ, ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ.
Koo

ಉಡುಪಿ: ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ಆಯ್ಕೆಯಾಗಿದ್ದು, ಹಿರಿಯ ಅಗ್ನಿಹೋತ್ರಿ, ಪ್ರಾಚಾರ್ಯ ದಾಮೋದರಾಚಾರ್ಯರಿಗೆ 1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ (Udupi News) ತಿಳಿಸಿದ್ದಾರೆ.

ಯುವ ವಿದ್ವಾಂಸರಿಗೆ ಮಠ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ, ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಬೋಧಾಚಾರ್ಯ ಹೊನ್ನಾಳಿ ಆಯ್ಕೆ ಗೊಂಡಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಬೆಂಗಳೂರಿನ ಗಿರಿನಗರದ ಭಾಗವತಾಶ್ರಮದಲ್ಲಿ ಮೇ 20ರಂದು ಆಯೋಜಿಸಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಅಭಿನಂದನೆ, ಶ್ರೀ ವಿದ್ಯೇಶತೀರ್ಥರ 70ನೇ ವರ್ಧಂತಿ, ವಿದ್ವಾಂಸರಿಂದ ವಾಕ್ಯಾರ್ಥ ಗೋಷ್ಠಿ, ಶೋಭಾಯಾತ್ರೆ, ನರಸಿಂಹ ಮಂತ್ರಹೋಮವೂ ನೆರವೇರಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಪರಿಚಯ ಹೀಗಿದೆ:

ವಿದ್ವಾನ್ ದಾಮೋದರಾಚಾರ್ಯ

ಪ್ರತಿ ದಿನವೂ ಶಾಸ್ತ್ರ ವಿದ್ಯಾ ಅಧ್ಯಯನ, ಅಧ್ಯಾಪನ, ಅಗ್ನಿಹೋತ್ರ ನಡೆಸುತ್ತಾ, ಸನಾತನ ಭಾರತೀಯ ಪರಂಪರೆಯನ್ನು ಸಂರಕ್ಷಿಸುವ ಮಹತ್ತರ ಜವಾಬ್ದಾರಿಯನ್ನು ಸಂಭ್ರಮದಿಂದಲೇ ನಿರ್ವಹಿಸುತ್ತಿರುವವರು ಈರೋಡಿನ ವಿದ್ವಾನ್ ದಾಮೋದರಾಚಾರ್ಯ. ವಿದ್ವಾನ್ ಪದ್ಮನಾಭಾಚಾರ್ಯ-ಜಾನಕೀಬಾಯಿ ಅವರ ಪುತ್ರರಾದ ಇವರು ತಂದೆಯಿಂದಲೇ ವ್ಯಾಕರಣ, ವೇದ, ಶಾಸ್ತ್ರಗಳನ್ನು ಕಲಿತರು. ಪವಿತ್ರ ಕ್ಷೇತ್ರ ರಂಗದ ಬಳಿಯ ಸಿರುಗಮಣಿ ಎಂಬ ಗ್ರಾಮದಲ್ಲಿ ತಂದೆಯವರೇ ಪ್ರಾರಂಭಿಸಿದ ವೇದರಕ್ಷಣ ವೇದವ್ಯಾಸ ಗುರುಕುಲದಲ್ಲಿ 12 ವರ್ಷ ವೇದ ಅಧ್ಯಯನ ಮಾಡಿದವರು. ನಂತರ ಕಾಂಚೀಪುರದ ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯಲ್ಲಿ ವೇದಾಂತ, ಘನ, ಐತರೇಯ ಬ್ರಾಹ್ಮಣ, ಗೃಹ್ಯಸೂತ್ರಗಳ ಸಹಿತ ವೇದಾಧ್ಯಯನ ನಡೆಸಿದರು.

ನಂತರ ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ಹಿರಿಯ ವಿದ್ವಾಂಸ ಮಾಹುಲಿ ಗೋಪಾಲಾಚಾರ್ಯ ಮತ್ತು ವಿದ್ಯಾಸಿಂಹಾಚಾರ್ಯರ ಶಿಷ್ಯತ್ವ ಪಡೆದು 8 ವರ್ಷಗಳ ಕಾಲ ದ್ವೈತ ವೇದಾಂತ ಅಧ್ಯಯನ ನಡೆಸಿದರು. ಬಹು ವಿಶೇಷ ಎಂದರೆ ಇವರು ನಿತ್ಯ ಅಗ್ನಿಹೋತ್ರಿಗಳು, ಸೋಮಯಾಜಿಗಳು. ವಾಜಪೇಯ ಮಹಾಯಾಗ ಮಾಡಲು ಸಿದ್ಧರಾಗಿರುವ ಸಿದ್ಧಪುರುಷರು. ತಮ್ಮ ತಂದೆಯರು ಸ್ಥಾಪಿಸಿದ ಗುರುಕುಲವನ್ನು 2000ರಿಂದ ಈರೋಡಿನಲ್ಲಿ ಮುನ್ನಡೆಸುತ್ತಿರುವುದು ಬಹು ವಿಶೇಷ. ಚೆನ್ನೈನಲ್ಲಿರುವ ಶ್ರೀ ಕಾಂಚಿಪುರಂ ವೇದ ರಕ್ಷಣಾ ನಿಧಿ ಟ್ರಸ್ಟ್ ಸಹಾಯ ಪಡೆದು ಗುರುಕುಲವನ್ನು ಸುವ್ಯವಸ್ಥಿತ ವಿದ್ಯಾಕೇಂದ್ರ ಮಾಡಿರುವುದು ಹೆಮ್ಮೆಯ ವಿಚಾರ. ಪ್ರಸ್ತುತ ಎಂಟನೇ ತಂಡದ ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ದಾಮೋದರಾಚಾರ್ಯ ನಾಡಿನ ಹಿರಿಮೆ. ಅಪರೂಪದಲ್ಲಿ ಅನುರೂಪ ವ್ಯಕ್ತಿತ್ವ ಹೊಂದಿದವರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ವಿದ್ವಾನ್ ಮಧ್ವೇಶ ನಡಿಲ್ಲಾಯ

ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥರ ಶಿಷ್ಯರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಯನ ಮಾಡಿದ ಈ ಯುವ ಪ್ರತಿಭೆ, ವಿದ್ಯಾರ್ಥಿ ದಿಸೆಯಲ್ಲಿಯೇ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 7 ಚಿನ್ನದ ಪದಕ, ತಿರುಪತಿಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ 3 ಚಿನ್ನದ ಪದಕ, ರಾಜ್ಯ ಮಟ್ಟದ ಸಂಸ್ಕೃತ ಸ್ಪರ್ಧೆಗಳಲ್ಲಿ 11 ಚಿನ್ನದ ಪದಕ ಪಡೆದ ಜ್ಞಾನ ಚೇತನ. 2021 ರಲ್ಲಿ ವಿವಿಧ ಮಾಧ್ವ ಪೀಠಾಧಿಪತಿಗಳ ಸಮ್ಮುಖ ಸಮಗ್ರ ಶ್ರೀಮನ್ ನ್ಯಾಯಸುಧಾ ಪರೀಕ್ಷೆ ನೀಡಿ ‘ಸುಧಾ ಪಂಡಿತ’ ಕೀರ್ತಿಗೆ ಭಾಜನರಾದವರು. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಮಧ್ವೇಶ ಕಾರ್ಯನಿರ್ವಹಿಸುತ್ತಿರುವುದು ವಿಶೇಷ.

ವಿದ್ವಾನ್ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಸತ್ಯಬೋಧಾಚಾರ್ಯ ರಟ್ಟಿಹಳ್ಳಿ ಅವರು ಶ್ರೀಧರಾಚಾರ್ಯ ಮತ್ತು ಧನ್ಯಾ ಅವರ ಪುತ್ರ. ದ್ವಿತೀಯ ಮಂತ್ರಾಲಯ ಹೊನ್ನಾಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸೇವೆ ಮಾಡಿ ವಿಶೇಷ ಅನುಗ್ರಹಿತರಾದ ಇವರು ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಜಯತೀರ್ಥ ವಿದ್ಯಾಪೀಠದಲ್ಲಿ 14 ವರ್ಷ ಅಧ್ಯಯನ ಮಾಡಿದರು. 2012 ರಲ್ಲಿ ಧಾರವಾಡದಲ್ಲಿ ಸುಧಾ ಪರೀಕ್ಷೆ ನೀಡಿ ಸುಧಾ ಪಂಡಿತರೆಂಬ ಕೀರ್ತಿಗೆ ಭಾಜನರಾದವರು.

ಇದನ್ನೂ ಓದಿ: Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

2015ರಲ್ಲಿ ಬೆಂಗಳೂರಿನಲ್ಲಿ ಸಮಗ್ರ ಶ್ರೀಮನ್ ನ್ಯಾಯ ಸುಧಾ ಎಂಬ ಕಠಿಣತಮ ಪರೀಕ್ಷೆ, 2017ರಲ್ಲಿ ಏಕಕಾಲದಲ್ಲಿ ವ್ಯಾಸತ್ರಯಗಳ ಪರೀಕ್ಷೆ ನೀಡಿದ ಪ್ರತಿಭಾ ಪುಂಜ. ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜನೆಗೊಂಡಿದ್ದ ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯಸುಧಾಚಾರ್ಯ ಹಾಗೂ ವ್ಯಾಸತ್ರಯಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸಿದ ಯುವ ಚೇತನ. ತಿರುಪತಿಯಲ್ಲಿ ಖ್ಯಾತ ವಿದ್ವಾಂಸ ದೇವನಾಥಾಚಾರ್ಯರ ಬಳಿ ತರ್ಕ ಮತ್ತು ಮೀಮಾಂಸಾ ಶಾಸ್ತ್ರಗಳ ಅಧ್ಯಯನ ಮಾಡಿ, 2009- 2010ರಲ್ಲಿ ತೆನಾಲಿ ಪರೀಕ್ಷೆಯಲ್ಲೂ ಜಯಭೇರಿ ಬಾರಿಸಿದ ಜ್ಞಾನವಂತ. ವಯಸ್ಸು ಚಿಕ್ಕದಿದ್ದರೂ ಅಧ್ಯಯನ ಮತ್ತು ಅಧ್ಯಾಪನದಲ್ಲಿ ವಿಶೇಷ ಶ್ರದ್ಧೆ ಮತ್ತು ಆಸಕ್ತಿ ಹೊಂದಿದ್ದು, ಗುರುಸೇವೆಯಲ್ಲೇ ಪರಮ ಸುಖ ಕಾಣುವ ಸಾಧಕರಾಗಿರುವುದು ಗಮನಾರ್ಹ. ಪ್ರಸ್ತುತ ಉತ್ತರಾದಿ ಮಠದ ಸುಧಾ ಗ್ರಂಥ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಅಂತಿಮ ಹಂತದ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ನೀಡುವ ಗುರುತರ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವುದು ವಿಶೇಷ.

Continue Reading

ಬೆಂಗಳೂರು

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು.

VISTARANEWS.COM


on

Sri Vedavyasa Jayanti Madhva Raddhanta Samvardhak Sabha 81st session at Bengaluru
Koo

ಬೆಂಗಳೂರು: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ನಗರದ (Bengaluru News) ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವಕ್ಕೆ ಬುಧವಾರ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ವಿಧ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ವ್ಯಾಸ ಮತ್ತು ದಾಸ ಸಾಹಿತ್ಯದಲ್ಲಿರುವ ವಿಶೇಷ ಜ್ಞಾನದ ಅರಿವು ಮೂಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು. ವ್ಯಾಸ ಸಾಹಿತ್ಯ ಪ್ರಖರ ಸೂರ್ಯನಂತೆ. ನಾವು ಅದರ ಪ್ರಭೆಯನ್ನು ನೇರವಾಗಿ ಪಡೆಯಲು ಅಸಾಧ್ಯ. ಆದರೆ ಅದೇ ಕಿರಣ ಚಂದ್ರಮಂಡಲದ ಮೇಲೆ ಬಿದ್ದು, (ದಾಸ ಸಾಹಿತ್ಯವಾಗಿ) ನಮಗೆ ಬಂದರೆ ಅದು ಸಂತೋಷ, ನೆಮ್ಮದಿ ಮತ್ತು ಸುಖವನ್ನು ನೀಡಬಲ್ಲದು. ಆದ ಕಾರಣ ಈ ಸಭಾದಲ್ಲಿ ದಾಸ ಸಾಹಿತ್ಯದ ಚಿಂತನ- ಮಂಥನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ, ಮಠದ ಹಿರಿಯ ಸ್ವಯಂಸೇವಕರಾದ ಗೋಪಾಲಕೃಷ್ಣ ಇತರರು ಇದ್ದರು. ಸಂಜೆ ವಾಲ್ಮೀಕಿ ರಾಮಾಯಣದ ವಿವಾದ-ಸಂವಾದದಲ್ಲಿ ವಿದ್ವಾಂಸರಾದ ಕೆ. ಕೃಷ್ಣರಾಜ ಭಟ್ ಮತ್ತು ಬಂಡಿ ಶ್ಯಾಮಾಚಾರ್ಯ ಪಾಲ್ಗೊಂಡಿದ್ದರು. ಮೇ 21ರವರೆಗೆ ನಿತ್ಯ ಶ್ರೀ ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮ ನೆರವೇರಲಿದೆ.

ಏನೇನು ಕಾರ್ಯಕ್ರಮ?

ಮೇ 16ರಂದು ಬೆಳಗ್ಗೆ 9ಕ್ಕೆ ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಗೌರವ ನಿರ್ದೇಶಕ ಅಪ್ಪಣ್ಣಾಚಾರ್ಯ ಅವರು ‘ ಹರಿದಾಸ ಸಾಹಿತ್ಯದಲ್ಲಿ ಅನುಭವ ಉದ್ಗಾರಗಳ ಚಿಂತನೆ’ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 5ಕ್ಕೆ ಪಂಡಿತರಾದ ತಿರುಮಲ ಕುಲಕರ್ಣಿ ಮತ್ತು ವೆಂಕಟೇಶ ಕುಲಕರ್ಣಿ ಅವರು ಮಹಾಭಾರತ- ವಾದ- ಸಂವಾದ- ನಡೆಸಿಕೊಡಲಿದ್ದಾರೆ.

ಮೇ 17ರಂದು ಬೆಳಗ್ಗೆ 9ರಿಂದ 12-ಸಂಜೆ 4ರಿಂದ 6ರವರೆಗೆ ವಾಕ್ಯಾರ್ಥ ಗೋಷ್ಠಿ ಸಂಪನ್ನಗೊಳ್ಳಲಿದೆ. ವಿದ್ವಾನ್ ಪಿ.ಎಸ್. ಶೇಷಗಿರಿ ಆಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ವೀರನಾರಾಯಣ ಪಾಂಡುರಂಗಿ, ಸತ್ತಿಗೇರಿ ವಾಸುದೇವ, ಕಟ್ಟಿ ನರಸಿಂಹ ಆಚಾರ್ಯ, ಪ್ರಹ್ಲಾದಾಚಾರ್ಯ ಜೋಷಿ, ಸುಧೀಂದ್ರಾಚಾರ್ಯ, ರಂಗನಾಥ ಗಣಾಚಾರಿ, ನಾಗರಾಜಾಚಾರ್ಯ, ಗುರುರಾಜ ಕಲ್ಕೂರ, ಶ್ರೀನಿವಾಸಮೂರ್ತಿ ಮತ್ತು ಮಾತರಿಶ್ವಾಚಾರ್ಯ ಭಾಗವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

ಮೇ 18ರಂದು ವರ್ಧಂತಿ ಮಹೋತ್ಸವ

ಮೇ 18ರಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರ 70ನೇ ವರ್ಧಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ವಿವಿಧ ಹೋಮ, ಹರಿಕಥಾಮೃತ ಸಾರ ಪಾರಾಯಣ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಎಚ್.ವಿ. ಸತ್ಯನಾರಾಯಣರಿಂದ ಉಪನ್ಯಾಸ (ವಾದಿರಾಜ ವಿರಚಿತ ವೈಕುಂಠ ವರ್ಣನೆ), ಸಂಜೆ ವಿವಿಧ ರಂಗದ ಗಣ್ಯರಿಗೆ ಸನ್ಮಾನವಿದೆ.

ಮೇ 19ರಂದು ಶ್ರೀ ವಿದ್ಯಾಮಾನ್ಯರ ಪುಣ್ಯಸ್ಮರಣೆ

ಉಡುಪಿ ಪಲಿಮಾರು- ಭಂಡಾರಕೇರಿ ಉಭಯ ಮಠದ ಪೀಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯ ತೀರ್ಥರ ಪುಣ್ಯಸ್ಮರಣೆ ಮೇ 19ರಂದು ನೆರವೇರಲಿದೆ. ಬೆಳಗ್ಗೆ 9ಕ್ಕೆ ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಚಿಂತನ- ಮಂಥನ ನಡೆಯಲಿದ್ದು, ಹಲವು ವಿದ್ವಾಂಸರು ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

ಮೇ 20ರಂದು ಶೋಭಾಯಾತ್ರೆ- ಪೇಜಾವರ ಶ್ರೀ ಸಾನ್ನಿಧ್ಯ

ಮೇ 20 ರಂದು ವೇದವ್ಯಾಸ ಜಯಂತಿ ಮತ್ತು ವಿದ್ಯಾಮಾನ್ಯರ ಮಧ್ಯಾರಾಧನೆ ನಿಮಿತ್ತ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ. ಆನಂದತೀರ್ಥ ನಾಗಸಂಪಿಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading
Advertisement
Pakistan
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ3 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ3 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ3 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ3 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು3 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ3 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ3 hours ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ3 hours ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ5 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ12 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು16 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌